ಸಮಾಜ ಮತ್ತು ದೇಶಕ್ಕಾಗಿ ಸತ್ಯದೆಡೆಗಿನ ನಡೆ ಅನಿವಾರ್ಯ…
-ಮಹೇಂದ್ರ ಕುಮಾರ್
ನಾನು ಅದೆಷ್ಟು ವರ್ಷ ಸಂಘ ಸಂಘ(ಆರ್ ಎಸ್ ಎಸ್) ಎಂದು ಕೆಲಸ ಮಾಡಿದ್ದೇನೆ. ನನ್ನ ತುಂಬು ಯೌವನವನ್ನು ಸಂಘ ಹೇಳುವ ಕಾರ್ಯಗಳಿಗೆ ವಿನಿಯೋಗಿಸಿದ್ದೇನೆ. ಇಂದಿಗೂ ಅದೆಷ್ಟೋ ಯುವಕರು ಸಂಘ ಸಂಘ ಎಂದು ತಮ್ಮ ಸರ್ವಸ್ವವನ್ನೂ ಸಂಘಕ್ಕಾಗಿ ತ್ಯಾಗ ಮಾಡುತಿದ್ದಾರೆ. ಸಂಘದ ಮಾರ್ಗದರ್ಶನದಂತೆ ಬೀದಿಯಲ್ಲಿ ನಿಂತು ಹಿಂದುತ್ವ ಹಿಂದುತ್ವ ಎಂದು ಬಡಿದಾಡಿ ಜೈಲುಸೇರಿ ಸಮಾಜದಲ್ಲಿ ರೌಡಿ ಪಟ್ಟ ಕಟ್ಟಿಕೊಂಡ ಅದೆಷ್ಟೋ ಯುವಕರು ತಮ್ಮ ಜೀವನದ ಹುಡುಕಾಟದಲ್ಲಿ ತೊಳಲುತಿದ್ದಾರೆ. ಇನ್ನು ಸಂಘ ಹೇಳುವ ದೇಶಭಕ್ತಿ ಹಿಂದುತ್ವದಿಂದ ಪ್ರೇರಣೆಗೊಂಡು ಪ್ರತಿವರ್ಷ ತಮ್ಮ ದುಡಿಮೆಯ ದೊಡ್ಡ ಭಾಗವನ್ನೇ ಧಾರೆ ಎರೆಯುವ ಅದೆಷ್ಟು ದಾನಿಗಳಿದ್ದಾರೆ. ದೊಡ್ಡ ದೊಡ್ಡ ಪದವಿಯನ್ನು ಪಡೆದುಕೊಂಡು ಮದುವೆಯೂ ಆಗದೆ ಸಂಘವೇ ಜೀವನ, ಸಂಘವೇ ಸರ್ವಸ್ವ ಎಂದು ನಂಬಿಕೊಂಡು ಮುಪ್ಪಿನಕಾಲದಲ್ಲಿ ಯಾರೂ ಇಲ್ಲದ ಅನಾಥರಂತೆ ಜೀವಿಸುವ ಅದೆಷ್ಟು ಮಹಾನ್ ಚೇತನಗಳಿವೆ.
ಇನ್ನು ತಮ್ಮ ಸ್ವಂತದ ಜೀವನ ನಡೆಸುತ್ತಲೇ ಸಂಘ ಎಂದರೆ ದೇಶ, ಸಂಘ ಎಂದರೆ ಹಿಂದುತ್ವ ಎಂದು ಸಂಘವನ್ನು ಸಾಮೂಹಿಕವಾಗಿ ಬೆಂಬಲಿಸುವ ಅಷ್ಟು ಲಕ್ಷ ಮುಗ್ದ ದೇಶವಾಸಿಗಳು… ಬೇಷ್, ಸುಮಾರು ಎಂಬತ್ತೇಳು ವರ್ಷಗಳ ಅಂತರದಲ್ಲಿ ಸಂಘದ ಸಾಧನೆ ಮೆಚ್ಚುವಂತದ್ದೇ.
ಸಂಘ ವ್ಯಾಪಿಸದ ಜಾಗವಿಲ್ಲ, ಈ ದೇಶದ ಪ್ರಭಲ ಸಂಘಟನೆಯಾಗಿ ಹೊರಹೊಮ್ಮಿರುವ ಸಂಘ ಇಷ್ಟು ದೊಡ್ಡಮಟ್ಟಕ್ಕೆ ಬೆಳೆದು ನಿಲ್ಲಲು ಬಳಸಿಕೊಡಿದ್ದು ಎರಡೇ ಎರಡು ವಿಚಾರಗಳನ್ನು, ದೇಶಭಕ್ತಿ ಮತ್ತು ಹಿಂದುತ್ವ. ಅದ್ಭುತ… ಇಂದು ಈ ದೇಶದಲ್ಲಿ ಯಾವುದೇ ಕಂಪೆನಿಗಳೂ, ರಾಜಕೀಯ ಪಕ್ಷಗಳೂ ಸೇರಿದಂತೆ ಯಾರೆಂದರೆ ಯಾರೂ ಸಾಧಿಸಲಾಗದ್ದನ್ನು ಸಂಘ ಸಾಧಿಸಿದೆ. ಟಾಟಾ, ರಿಲಯನ್ಸ್ ನಂತಹಾ ಕಂಪನಿಗಳನ್ನೆಲ್ಲಾ ಒಟ್ಟುಗೂಡಿಸಿ ಅವರ ಒಟ್ಟು ಆಸ್ಥಿಯ ಮೌಲ್ಯಮಾಪನ ಮಾಡಿದರೂ ಈ ದೇಶದಲ್ಲಿ ಸಂಘ ಹೊದಿರುವ ಆಸ್ಥಿಗಿಂತ ಕಡಿಮೆಯೇ…
ಮತ್ತಷ್ಟು ಓದು 
ಒಂದು ತಪ್ಪನ್ನು ಮತ್ತೊಂದು ತಪ್ಪಿನಿಂದ ಸಮರ್ಥಿಸಿಕೊಳ್ಳುತ್ತ….
-ಡಾ. ಅಶೋಕ್ ಕೆ.ಆರ್
ಮಂಗಳೂರಿನ ಪಡೀಲಿನಲ್ಲಿ ನಡೆದ ಘಟನೆಯ ಬಗ್ಗೆ ನೀವೀಗಾಗಲೇ ಬಹಳಷ್ಟು ಓದಿ ನೋಡಿರುತ್ತೀರಿ. ಹಿಂದೂ ಜಾಗರಣ ವೇದಿಕೆ ಸಂಸ್ಕೃತಿಯ ಹೆಸರಿನಲ್ಲಿ ನಡೆಸಿದ್ದು ಕ್ಷಮಿಸಲಾಗದ ತಪ್ಪು. ಇದ್ದ ಹುಡುಗರಲ್ಲಿ ಅತಿ ಹೆಚ್ಚು ಹೊಡೆಸಿಕೊಂಡವನು ಮುಸ್ಲಿಮನಂತೆ ಕಾಣುತ್ತಿದ್ದನೆನ್ನುವುದೇ ಇವರ ಪುಂಡಾಟಕ್ಕೆ ಕಾರಣವಾಯಿತಾ? ಆ ಹುಡುಗ ಕೂಡ ದಕ್ಷಿಣ ಕನ್ನಡದಲ್ಲಿ ಬಿಜೆಪಿಯನ್ನು ಹಿಂದಿನಿಂದಲೂ ಬಹಳವಾಗಿ ಬೆಂಬಲಿಸುತ್ತಿರುವ ಹಿಂದು ಧರ್ಮದ ಒಂದು ಜಾತಿಗೆ ಸೇರಿದವನು! ಯಾವುದೇ ಧರ್ಮದ ಮತೀಯವಾದ ಅಪಾಯಕಾರಿ. ದುರದೃಷ್ಟವಶಾತ್ ದಕ್ಷಿಣ ಕನ್ನಡದಲ್ಲಿ ಹಿಂದು ಮುಸ್ಲಿಂ ಸಂಘಟನೆಗಳು ಮತೀಯವಾದದಲ್ಲಿ ತೊಡಗುತ್ತ ದಕ್ಷಿಣ ಕನ್ನಡದ ನೈಜ ಸಮಸ್ಯೆಗಳನ್ನೇ ಮರೆಸುತ್ತಿವೆ. ಈಗ ನಡೆದಿರುವ ಪುಂಡಾಟಿಕೆಗಳಿಗಿಂತಲೂ ಹೆಚ್ಚಿನ ಅಪಾಯಕಾರಿ ಪ್ರವೃತ್ತಿ ಈ ಮತೀಯವಾದಿಗಳನ್ನು ಸಮರ್ಥಿಸಿಕೊಳ್ಳುತ್ತಿರುವ ವಿದ್ಯಾವಂತರೆನ್ನಿಸಿಕೊಂಡವರಲ್ಲಿ ಕಾಣಿಸುತ್ತಿರುವುದು ಬರಲಿರುವ ಕೆಟ್ಟ ದಿನಗಳ ಮುನ್ಸೂಚನೆಯಾ?
ಅಂತರ್ಜಾಲದ ಪರಿಣಾಮವಾಗಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದು ಸುಲಭವಾಗಿದೆ. ಫೇಸ್ ಬುಕ್ಕಿನಲ್ಲಿ, ವಿವಿಧ ಬ್ಲಾಗುಗಳಲ್ಲಿ, ಹೊಸ ದಿಗಂತದಂತಹ ಪತ್ರಿಕೆಗಳಲ್ಲಿ ಪಡೀಲಿನ ಘಟನೆಯ ಬಗ್ಗೆ ಬಹುತೇಕ ವಿದ್ಯಾವಂತರೇ ಬರೆಯುತ್ತಿರುವ ಲೇಖನ, ಕಮೆಂಟುಗಳನ್ನು ಗಮನಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿಯೇ ದೋಷವಿದೆಯೇನೋ ಎಂಬ ಅನುಮಾನ ಕಾಡುತ್ತದೆ. “ಮಂಡ್ಯದಲ್ಲಿ ‘ಹಿಂದೂ’ ಹೆಣ್ಣುಮಗಳನ್ನು ನಾಲ್ವರು ‘ಮುಸ್ಲಿಮರು’ ಚಲಿಸುವ ರೈಲಿನಿಂದ ಹೊರತಳ್ಳಿದುದನ್ನು ಯಾಕೆ ದೊಡ್ಡ ಸುದ್ದಿ ಮಾಡಲಿಲ್ಲ? ಅಸ್ಸಾಮಿನಲ್ಲಿ ಬೋಡೋ ಹಿಂದೂಗಳನ್ನು ಬಾಂಗ್ಲಾ ಮುಸ್ಲಿಮರು ಶೋಷಿಸುತ್ತಿರುವುದ್ಯಾಕೆ?” ಎಂಬಂಥಹ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ!
ಸಹಿಸಿಕೊಳ್ಳುವುದಕ್ಕಿಂತ ತಿರುಗೇಟು ನೀಡುವುದೇ ಒಳ್ಳೇದು ಎಂದು ಅನಿಸಲ್ವಾ?
-ರಶ್ಮಿ ಕಾಸರಗೋಡು
ದಿನಪತ್ರಿಕೆ ತೆರೆದು ನೋಡಿದರೆ ಪ್ರತಿದಿನವೂ ಮಹಿಳೆಯ ಮೇಲೆ ದೌರ್ಜನ್ಯ ಎಂಬ ಒಂದು ಸುದ್ದಿ ಇದ್ದೇ ಇರುತ್ತದೆ. ಅತ್ತೆಯ ದೌರ್ಜನ್ಯ, ಪತಿಯ ದೌರ್ಜನ್ಯ, ಕಚೇರಿಯಲ್ಲಿ ದೌರ್ಜನ್ಯ ಅಬ್ಬಾ ಎಷ್ಟೊಂದು ವಿಧದ ದೌರ್ಜನ್ಯಗಳು!. ನಾವು ಮುಂದುವರಿದಿದ್ದೇವೆ, ಅಬಲೆಯಲ್ಲ ಸಬಲೆ ಎಂದು ನಾನೂ ಸೇರಿದಂತೆ ಮಹಿಳೆಯರೆಲ್ಲಾ ಗಟ್ಟಿಯಾಗಿ ಕೂಗಿ ಹೇಳುತ್ತಿದ್ದೇವೆ. ಹೆಣ್ಣು ಅಬಲೆಯಿಂದ ಸಬಲೆಯಾಗಿ ಬಡ್ತಿ ಪಡೆದಿದ್ದರೂ ದೌರ್ಜನ್ಯ , ಕಿರುಕುಳಗಳು ಮಾತ್ರ ಅವಳ ನೆರಳಂತೆ ಹಿಂಬಾಲಿಸುತ್ತಿವೆ. ಹಳ್ಳಿಯಲ್ಲಿದ್ದರೂ, ನಗರದಲ್ಲಿದ್ದರೂ ಮಹಿಳೆ ದೌರ್ಜನ್ಯಕ್ಕೊಳಗಾಗುವುದು ತಪ್ಪಿಲ್ಲ. ಅಲ್ಲಿ ಹಾಗಾಯ್ತು, ಇಲ್ಲಿ ಹೀಗಾಯ್ತು ಎಂದು ಎಂಬ ವರದಿಗಳನ್ನೋದಿದಾಗ ಅಯ್ಯೋ ಪಾಪ ಎಂದು ಎನಿಸುತ್ತದೆ. ಆದರೆ ಇದಕ್ಕೆ ಪರಿಹಾರ ಏನು? ಎಂಬುದರ ಬಗ್ಗೆ ಚಿಂತಿಸತೊಡಗಿದಾಗಲೇ ಸಮಸ್ಯೆಯ ಗಂಭೀರತೆ ಅರಿವಿಗೆ ಬರುವುದು. ಇತ್ತೀಚೆಗೆ ನಮ್ಮ ದೇಶದಲ್ಲಿ ಇಂಥಾ ದೌರ್ಜನ್ಯಗಳ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಅದರಲ್ಲೂ ಬೆಂಗಳೂರು ಸುರಕ್ಷಿತವಲ್ಲ ಎಂದು ಹೇಳಲಾಗುತ್ತದೆ. ಎನ್ ಸಿಆರ್ ಬಿ (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ) ವರದಿ ಪ್ರಕಾರ 2011ರಲ್ಲಿ ಬೆಂಗಳೂರಲ್ಲಿ ಮಹಿಳೆಯ ಮೇಲೆ ನಡೆದ ದೌರ್ಜನ್ಯಗಳ ಬಗ್ಗೆ ದಾಖಲಾದ ಪ್ರಕರಣಗಳ ಸಂಖ್ಯೆ 1,890, ಇನ್ನು ದಾಖಲಾಗದೇ ಇರುವ ದೌರ್ಜನ್ಯಗಳ ಸಂಖ್ಯೆ ಎಷ್ಟಿರಬಹುದೇನೋ. ನವದೆಹಲಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ 4,489. ಅಂದರೆ ದೆಹಲಿಯ ನಂತರ ಬೆಂಗಳೂರು ನಗರವೇ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬುದಕ್ಕೆ ಈ ಪ್ರಕರಣಗಳ ಸಂಖ್ಯೆಯೇ ಸಾಕ್ಷಿ.
ಎನ್ ಸಿಆರ್ ಬಿ ನೀಡಿರುವ ಅಂಕಿ ಅಂಶಗಳ ಪ್ರಕಾರ 2011ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ಲೆಕ್ಕಾಚಾರ ಹೀಗಿದೆ.
ಮುಸ್ಲಿಮರ ವಿರುದ್ಧ ಕೆಂಡಕಾರುವುದಕ್ಕಷ್ಟೇ ಹಿಂದೂ ಜಾಗೃತಿ ಸೀಮಿತವಾಗಬೇಕಾ?
– ಡಾ. ಅಶೋಕ್ ಕೆ.ಆರ್
ಅನಾಗರೀಕ, ಹಿಂದುಳಿದ ರಾಜ್ಯಗಳೆಂಬ ಹಣೆಪಟ್ಟಿ ಹೊತ್ತ ದೂರದ ಬಿಹಾರ, ಉತ್ತರಪ್ರದೇಶದಲ್ಲಿ ನಡೆಯುತ್ತದೆಂದು ಕೇಳುತ್ತಿದ್ದ ಅಮಾನವೀಯ ಘಟನೆಯೊಂದು ನಮ್ಮ ಕರ್ನಾಟಕದ ಮಂಡ್ಯಜಿಲ್ಲೆಯಲ್ಲಿ ನಡೆದುಹೋಗಿದೆ. ನಾಲ್ವರು ಯುವಕರು ಯಶವಂತಪುರ – ಮೈಸೂರು ರೈಲಿನಲ್ಲಿ ಮಹಿಳೆಯೊಬ್ಬಳನ್ನು ಚುಡಾಯಿಸಿದ್ದಾರೆ. ಬೇಸತ್ತ ಯುವತಿ ಬಾಗಿಲಿನ ಬಳಿ ಬಂದು ನಿಂತಿದ್ದಾಳೆ. ಅಲ್ಲಿಗೂ ಬಂದು ರೇಗಿಸಲಾರಂಭಿಸಿದವರಿಗೆ ಪೋಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾಳೆ. ಕೋಪಗೊಂಡ ಆ ನಾಲ್ಕು ಮನುಷ್ಯರೂಪಿ ರಾಕ್ಷಸರು ಚಲಿಸುವ ರೈಲಿನಿಂದ ಆಕೆಯನ್ನು ಹೊರತಳ್ಳಿಬಿಟ್ಟಿದ್ದಾರೆ. ರೈಲಾಗ ಮದ್ದೂರಿನ ಶಿಂಷಾ ನದಿಯ ಸೇತುವೆಯ ಮೇಲೆ ಚಲಿಸುತ್ತಿತ್ತು. ಅದೃಷ್ಟವಶಾತ್ ಬದುಕುಳಿದಿದ್ದಾಳೆ. ಬೆನ್ನುಹುರಿಗೆ ಬಿದ್ದ ಏಟು, ಮೂಳೆಮುರಿತದಿಂದ ಎಷ್ಟರ ಮಟ್ಟಿಗೆ ಆ ಯುವತಿ ಚೇತರಿಸಿಕೊಳ್ಳುತ್ತಾಳೆ ಎಂಬುದನ್ನು ಕಾದುನೋಡಬೇಕಷ್ಟೇ.
ಆ ನಾಲ್ಕೂ ಯುವಕರನ್ನು ಪೋಲೀಸರು ಬಂಧಿಸಿದ್ದಾರೆ. ಮಾರನೇ ದಿನ ನ್ಯಾಯಾಲಯಕ್ಕೆ ಅವರನ್ನು ಕರೆದೊಯ್ಯುವಾಗ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮುತ್ತಿಗೆ ಹಾಕಿ ಅಪರಾಧಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಊರಿನ ಹೆಣ್ಣುಮಗಳ ಜೀವಕ್ಕೆ ಅಪಾಯತಂದ ಯುವಕರ ಮೇಲಿನ ಕೋಪ ಸಹಜವಾದುದು. ಆದರೆ? ಹಿಂದೂ ಜಾಗರಣ ವೇದಿಕೆ ಜಾಗೃತಗೊಂಡು ಆ ನಾಲ್ವರನ್ನು ಥಳಿಸಿದ್ದು ಯುವತಿಯ ಮೇಲೆ ಹಲ್ಲೆಯಾದ ಕಾರಣಕ್ಕೆ ಮಾತ್ರವಲ್ಲ! ಹಲ್ಲೆ ಮಾಡಿದ ನಾಲ್ವರು ಮುಸ್ಲಿಮರೆಂಬುದೇ ಇವರು ಜಾಗೃತಿಯಾಗಲು ಕಾರಣ! ಹಲ್ಲೆ ಮಾಡಿದವರು ಮುಸ್ಲಿಮರಾಗದೇ ಹಿಂದೂಗಳಾಗಿದ್ದಲ್ಲಿ ಅದರಲ್ಲೂ ಯಾವುದೋ ‘ಮೇಲುಜಾತಿಗೆ’[?] ಸೇರಿದವರಾಗಿದ್ದಲ್ಲಿ ಖಂಡಿತವಾಗ್ಯೂ ಹಿಂದೂ ಜಾಗರಣ ವೇದಿಕೆ ಜಾಗೃತವಾಗುತ್ತಿರಲಿಲ್ಲ ಎಂಬುದೇ ಇಂಥ ಸಂಘಟನೆಗಳ – ಹಿಂದೂ ಧರ್ಮದ ವೈಫಲ್ಯ.
ನಮ್ಮ ಬರಹ ಇನ್ನೊಬ್ಬರ ಬದುಕಿಗೆ ಬೆಂಕಿ ಇಡಬಾರದು
– ರಾಕೇಶ್ ಶೆಟ್ಟಿ
ಛೆ..! ದೆಹಲಿ,ಉತ್ತರ ಭಾರತದ ಕಡೆಯಿಂದ ಸಾಮಾನ್ಯವಾಗಿ ಸುದ್ದಿಯಾಗುತಿದ್ದ ಅತ್ಯಾಚಾರದಂತ ರಾಕ್ಷಸಿ ವರ್ತನೆ ಕರ್ನಾಟಕದಲ್ಲೂ ದಾಖಲಾಯಿತಲ್ಲ ಅಂತ ಮೊನ್ನೆಯ ‘ಮದ್ದೂರಿನ ರೈಲಿನಲ್ಲಿ ನಡೆದ ದುರ್ಘಟನೆ’ ಸುದ್ದಿಯಾದಾಗ ನಾಡಿನ ಬಹಳಷ್ಟು ಜನರಿಗೆ ಅನ್ನಿಸಿರಲಿಕ್ಕೂ ಸಾಕು.ಅದೃಷ್ಟವೆಂದರೆ ಆ ಹುಡುಗಿ ಪ್ರಾಣಾಪಾಯದಿಂದ ಪಾರಾಗಿದ್ದು.ಕಡೆಗೂ ರೈಲಿನಲ್ಲಿದ್ದ ಜನ ಧೈರ್ಯ ತಂದುಕೊಂಡು ಆ ರಾಕ್ಷಸರಿಗೆ ಬಡಿದು ಪೋಲಿಸರಿಗೆ ಒಪ್ಪಿಸಿದ್ದು ಮತ್ತೆ ಮರು ದಿನ ಹಿಂದೂ ಜಾಗರಣ ವೇದಿಕೆಯವರು ನೀಡಿದ ತಪರಾಕಿ ಎಲ್ಲವೂ ಸುದ್ದಿಯಾದವು.
ಆದರೆ, ಆ ನಂತರ ಆ ಹುಡುಗಿಯ ಪೂರ್ವಾಪರ ಮತ್ತು ಘಟನೆಯ ಬಗ್ಗೆ ಮಾಹಿತಿ ತಿಳಿದುಕೊಂಡು ಮಾಧ್ಯಮಗಳು ಬರೆಯಲು ಶುರು ಮಾಡಿದವಲ್ಲ.ಒಂದು ವರದಿಯಲ್ಲಿ ಹುಡುಗಿಯ ನಿಜ ಹೆಸರನ್ನೇ ಬರೆದುಬಿಟ್ಟಿದ್ದರು.ಕಡೆಗೆ ಓದುಗರು ಗಮನಕ್ಕೆ ತಂದ ಮೇಲೆ ತಿದ್ದಿದರು.ಮತ್ತದೇ ಆನ್-ಲೈನ್ ಪತ್ರಿಕೆಯಲ್ಲಿ ಹಾಗೂ ರಾಜ್ಯಮಟ್ಟದ ದಿನಪತ್ರಿಕೆ ಪ್ರಜಾವಾಣಿಯಲ್ಲಿ (ನಾಡಿನ ವಿಚಾರಾವಂತರ ನೆಚ್ಚಿನ ಪತ್ರಿಕೆಯಿದು..!) ಹುಡುಗಿಯ ಪೊಟೋವನ್ನೇ ಹಾಕಿಬಿಡುವುದಾ? ಕನಿಷ್ಠ ಮುಖವನ್ನು ಬ್ಲರ್ ಮಾಡಬೇಕು ಅನ್ನುವ ಕಾಮನ್ ಸೆನ್ಸ್ ಕಾಣೆಯಾಯಿತಾ?ಇದೆಂತ Irresponsibility ? ವರದಿಗಾರಿಕೆ ಅನ್ನುವುದು ಇಷ್ಟೊಂದು ಕಾಟಾಚಾರವಾಗಿದೆಯಾ? ಈ ಮಧ್ಯೆ ಆ ಹುಡುಗಿಯ ಕೆಲಸ ಮಾಡುವ ಜಾಗ ಎಲ್ಲವನ್ನೂ ಹೇಳಿಯೂಬಿಟ್ಟವು.ಮುಂದೆ ಆ ಹುಡುಗಿಯ ಭವಿಷ್ಯವೇನು? ಅವಳನ್ನು ನೋಡಿದಾಗೆಲ್ಲ ಜನ ಅವಳನ್ನ ಏನೆಂದು ಗುರುತಿಸುತ್ತಾರೆ?
ಈ ಹಿಂದೆ ಸುವರ್ಣವಾಹಿನಿ ಶಿವಮೊಗ್ಗದ ಹುಡುಗಿಯೊಬ್ಬಳ ವಿಷಯದಲ್ಲೂ ಹೀಗೆ ಬೇಜವಬ್ದಾರಿತನ ತೋರಿತ್ತು.ಈ ವಿಷಯದ ಬಗ್ಗೆ ದಯಾನಂದ ಟಿ.ಕೆ ಸರಿಯಾಗಿ ಜಾಡಿಸಿ ಆ ವಾಹಿನಿಯ ಸಂಪಾದಕರಿಗೆ ಬಹಿರಂಗ ಪತ್ರ ಬರೆದಿದ್ದರು.ಉತ್ತರ ಬಂದ ಬಗ್ಗೆ ಸುದ್ದಿಯಿಲ್ಲ.ಇದೆ ನ್ಯೂಸ್ ಚಾನೆಲ್ಗಳೇ ತಾನೇ ಬ್ಲೂ ಬಾಯ್ಸ್ ಗಳನ್ನ ತೋರಿಸುವ ನೆಪದಲ್ಲಿ ಬ್ಲೂ-ಫಿಲಂ ತೋರಿಸಿದ್ದು,ಮುನ್ನಿ-ಶೀಲ,ಮದನಾರಿ ಅಂತೆಲ್ಲ ತಲೆ ಕೆಟ್ಟ ಕಾರ್ಯಕ್ರಮ ಮಾಡುತ್ತಿರುವುದು.ಮಕ್ಕಳಿರೋ ಮನೆಯಲ್ಲಿ ನ್ಯೂಸ್ ಚಾನೆಲಗಳನ್ನು ನೋಡಬೇಡಿ ಮಕ್ಕಳು ಹಾದಿ ತಪ್ಪುತ್ತಾರೆ ಅನ್ನುವ ಕಾಲ ಬಂದು ಬಿಟ್ಟಿತಲ್ಲ…!
ಮೂರುವರೆ ರೂಪಾಯಿ ಓದುಗ ಆರೂವರೆ ರೂಪಾಯಿಯ ಜಾಹೀರಾತುದಾರ…
– ಡಾ.ಅಶೋಕ್ ಕೆ.ಆರ್
ಪ್ರಜಾವಾಣಿಯಿಂದ ನಿವೃತ್ತರಾದ ವ್ಯಂಗ್ಯಚಿತ್ರಕಾರ ಪಿ.ಮಹಮ್ಮದ್ ರವರು ವ್ಯಂಗ್ಯಚಿತ್ರಕಾರರ ಬವಣೆ, ಹಣ ನೀಡದ ಪತ್ರಿಕಾ ಸಂಸ್ಥೆಗಳಬಗ್ಗೆ ತಮ್ಮ ಅಭಿಪ್ರಾಯವನ್ನು ಫೇಸ್ ಬುಕ್ಕಿನಲ್ಲಿ ಪತ್ರದ ರೂಪದಲ್ಲಿ ಬರೆದುಕೊಂಡಿದ್ದರು.ಅದಕ್ಕೆ ಪ್ರತಿಕ್ರಿಯೆಯಾಗಿ ಪ್ರಜಾವಾಣಿಯ ದಿನೇಶ್ ಅಮೀನ್ ಮಟ್ಟುರವರು ಫೇಸ್ ಬುಕ್ಕಿನಲ್ಲಿ ಕೆಳಗಿನಂತೆ ಬರೆದಿದ್ದಾರೆ.

ಲಿಮಿಟ್ಟೆ ಇಲ್ಲವ?
– ಮಧು ಚಂದ್ರ
ಒಂದು ಕಾಲ ಇತ್ತು , ದಿನ ಪತ್ರಿಕೆಯ ಮುಖ ಪುಟ ಕೇವಲ ಸಾಧಕರು ಮತ್ತು ರಾಜಕೀಯ ಬೆಳವಣಿಗೆಗಳ ಲೇಖನಗಳಿಂದ ರಾರಜಿಸುತಿತ್ತು. ದಿನ ಕಳೆದಂತೆ ನಮ್ಮ ಸುತ್ತಲಿನ ಪರಿಸರದಲ್ಲಿ ಬೆಳವಣಿಗೆಯು ಸಹ ವೇಗವನ್ನು ಪಡೆದುಕೊಂಡಿತು. ಕೇವಲ ಸಾಧಕರಿಗೆ ಮೀಸಲಾದ ಮುಖ ಪುಟದಲ್ಲಿ ಇಂದು ಬ್ರಷ್ಟ ಭ್ರಷ್ಟಚರ ಅಧಿಕಾರಿಗಳು, ಸಮಾಜ ಘಾತುಕರು , ಹಿಂಸೆ ಮತ್ತು ಆತ್ಮ ಹತ್ಯೆಗಳ ಸುದ್ದಿ ಅಲಂಕರಿಸಿವೆ. ಅದರಲ್ಲೋ ಬ್ರಷ್ಟ ಅಧಿಕಾರಿಗಳು ಬಗ್ಗೆ ಲೇಖನವಿಲ್ಲದೆ ಇದ್ದರೆ ದಿನಪತ್ರಿಕೆಯ ಮುಖಪುಟಕ್ಕೆ ಕಳೆಗುಂದುತ್ತದೆ .
ಜವಾನ , ಜಲಗಾರ, ಬಸ್ ನಿರ್ವಾಹಕನಿಂದು ಹಿಡಿದು ಅಧಿಕಾರಿಗಳು, ರಾಜಕಾರಣಿಗಳು ಬ್ರಷ್ಟಚಾರವು ಸೃಷ್ಟಿಸಿದ ಹಲವು ಮುಖಗಳು ನಮ್ಮ ರಾಜ್ಯದ ಶಾಸಕನೊಬ್ಬ ಲಂಚ ಪಡೆಯುವಾಗ ಸಿಕ್ಕಿ ಹಾಕಿಕೊಂಡದ್ದು. ನಂತರ ಅದರಿಂದ ಜಾಗೃತರಾದ ಇತರ ರಾಜಕಾರಣಿಗಳು ಲಂಚ ಪಡೆಯುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿ. ಮುಂದೆ ಲಂಚ ಪಡೆಯುವಾಗ ಬಳಸುವ ವಾಮ ಮಾರ್ಗಗಳನ್ನು ಹುಡುಕಲು ಆರಂಬಿಸಿದರು ಎನ್ನುವ ವಿಚಾರ ನಿಮಗೆಲ್ಲ ಗೊತ್ತೇ ಇದೆ.
ತಮ್ಮ ಮೇಲೆ ಎಷ್ಟೇ ಆಕ್ರಮಣವಾದರೂ ಏನೇ ಅಗಲಿ ದಿನಕೊಂದು ಭರ್ಜರಿ ಬೇಟೆಯಾಡುವುದನ್ನು ನಮ್ಮ ಲೋಕಾಯುಕ್ತ ಹುಲಿಗಳು ಎಲ್ಲಿಯೂ ನಿಲ್ಲದೆ ಮುಂದುವರೆಸಿದ್ದಾರೆ. ಒಂದು ಕಡೆ ಅಣ್ಣ ಹಜಾರೆ ಗರ್ಜಿಸುತ್ತಿದ್ದರೆ , ಇನ್ನೊದು ಕಡೆ ಅದೇ ಸರ್ಕಾರ ಅಣ್ಣ ಹಜಾರೆಯ ತಂಡದ ಮೇಲೆ ಇದ್ದ ಬದ್ದ ಆರೋಪಗಳನ್ನು ಮಾಡುತ ಅಣ್ಣನ ಹುಟ್ಟಡಗಿಸುವ ಶತಾಯಗತಾಯ ಪ್ರಯತ್ನದಲ್ಲಿ ತೊಡಗಿದೆ… .
ಒಮ್ಮೆ ಒಬ್ಬ ಬ್ರಷ್ಟ ಅಧಿಕಾರಿಯ ಮನೆಗೆ ಲೋಕಾಯುಕ್ತರು ದಾಳಿ ಮಾಡಿದರೆಂದರೆ ಮಿನಿಮಮ್ ಒಂದು ನಾಲ್ಕು ಸೈಟಿನ ದಾಖಲೆಗಳು , ಒಂದೆರಡು ಕಾರು, ಒಂದು ಹತ್ತಿಪ್ಪತು ಎಕರೆ ತೋಟದ ದಾಖಲೆಗಳು , ಒಂದು ಕೆಜಿ ಚಿನ್ನ ..ಇತ್ಯಾದಿ ಹೀಗೆ ದಾಳಿ ಸಂಧರ್ಭದಲ್ಲಿ ವಶಪಡಿಸಿಕೊಂಡ ವಸ್ತುಗಳ ಪಟ್ಟಿ ನೀಡುತ್ತಾರೆ… ಸದ್ಯಕ್ಕೆ ಇಷ್ಟು ಸಾಕು ..
ಹಿಂದುತ್ವವೇ ನಮ್ಮ ತತ್ವ ಎಂದು ಸಾರುತ್ತ ಮಾಡಿದ್ದೇನು?
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದಾಗ ಸಂಭ್ರಮ…ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಬಿಡಿಸಿಕೊಂಡು ಸಂತೋಷದಿಂದ ಬದುಕು ಸಾಗಿಸಬಹುದು ಎನ್ನುವ ಅಸೆಯ ಅಂಬಾರಿಯನ್ನು ಹೊಡೆದು ಉರುಳಿಸಿದರಲ್ಲಾ ಎನ್ನುವ ಭಾವನೆ ಮೂಡಿದರೆ ತಪ್ಪಲ್ಲ. ಕಾರಣ ರಾಜ್ಯದ ರಾಜಕೀಯದಲ್ಲಿನ ಪ್ರಸ್ತುತ ಬೆಳವಣಿಗೆ. 1950ರಲ್ಲಿ ಸಂವಿಧಾನ ರಚನೆಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದು ಶಾಸಕಾಂಗ,ನ್ಯಾಯಾಂಗ,ಕಾರ್ಯಾಂಗ ಹಾಗೂ ಮಾಧ್ಯಮರಂಗಗಳು ಸಮಾಜದ ಸ್ವಾಸ್ಥ್ಯ ಕಾಪಾಡುವ ಪ್ರಮುಖ ಪಾತ್ರಧಾರಿಗಳು ಎಂದು ಎದೆ ತಟ್ಟಿಕೊಂಡು ಹೇಳುತ್ತಿದ್ದ ಕಾಲ ಮರೆಯಾಗಿದೆ. ಆದರೆ ಯಾವುದೇ ರಂಗದಲ್ಲಿ ಲೋಪದೋಷಗಳಾದರೂ ಕಷ್ಟ ಅನುಭವಿಸುವವರು ಸಾಮಾನ್ಯ ಜನತೆ ಎನ್ನುವುದು ಸ್ಪಷ್ಟ.
ಯತ್ಖಲು ಖಲಮುಖಹುತವಹವಿನಿಹಿತಮಪಿ ಶುದ್ದಿಮೇವ ಪರಮೇತಿ
ತದನಲ ಶೌಚಮಿವಾಂಶುಕಮಿಹ ಲೋಕೇ ದುರ್ಲಭಂ ಪ್ರೇಮ||
ನೀಚರ ಬಾಯೆಂಬ ಬೆಂಕಿಯಲ್ಲಿ ಬಿದ್ದದ್ದೆಲ್ಲ ಶುದ್ದವಾಗುವುದೆಂಬ ಮಾತು ಸರ್ವಥಾ ಸರಿಯಲ್ಲ. ಏಕೆಂದರೆ ಬೆಂಕಿಯಲ್ಲಿ ಬಿದ್ದು ಶುದ್ದವಾಗಿ ಉಳಿದು ಬಂದ ಬಟ್ಟೆಯೆಷ್ಟು ದುರ್ಲಭವೋ ದುಷ್ಟರ ಬಾಯಿಗೆ ಸಿಲುಕಿ ಶುದ್ದವಾಗಿ ಹೊರಬಂದ ಸದ್ಗುಣಗಳು ಅಷ್ಟೇ ದುರ್ಲಭ.
ಬಡವರ “ಕೊಳಚೆ” ಉಳಿದವರ “ಶುದ್ಧತೆ”
ಡಾ!! ಅಶೋಕ್ ಕೆ.ಆರ್
ಸನ್ಮಾನ್ಯ ಶ್ರೀ ಶ್ರೀ ಶ್ರೀ ಪೇಜಾವರ ಸ್ವಾಮಿಗಳಿಗೆ ಸೆಡ್ಡು ಹೊಡೆಯಲು ಮತ್ತೊಬ್ಬ ಹುಟ್ಟಿದ್ದಾನೆ. ಶ್ರೀಗಳು ಮಾಂಸಾಹಾರಿಗಳ ಪಕ್ಕ ಕುಳಿತು ಊಟ ಮಾಡಿದರೆ ಸಸ್ಯಾಹಾರಿ ಬ್ರಾಹ್ಮಣರೂ ಮಾಂಸಾಹಾರಿಗಳಾಗಿಬಿಡುತ್ತಾರೆಂದು ಗಾಬರಿಗೊಂಡಿದ್ದರು. ನಂತರ ತಮ್ಮ ಹೇಳಿಕೆಯ ಬಗ್ಗೆ ಸಮಜಾಯಿಷಿಗಳನ್ನೂ ಕೊಟ್ಟಿದ್ದರು. ಇಂದು ಕರ್ನಾಟಕ ಅನುದಾನರಹಿತ ಶಾಲೆಗಳ ಸಂಘ ಕುಸ್ಮಾದ ಅಧ್ಯಕ್ಷ ಜಿ.ಎಸ್. ಶರ್ಮರವರು ಶಿಕ್ಷಣ ಹಕ್ಕು ಕಾಯ್ದೆಯನ್ನು ವಿರೋಧಿಸುತ್ತ “ಸಮುದ್ರಕ್ಕೆ ಕೊಳಚೆ ನೀರು ಬಂದು ಸೇರಿದರೆ ಇಡೀ ಸಮುದ್ರವೇ ಕೊಳಚೆಯಾಗುತ್ತದೆ. ನೀರು ಯಾವಾಗಲೂ ಶುದ್ಧ ಆಗಿರಬೇಕು. ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಸಂಸ್ಕೃತಿ ವಿಭಿನ್ನ. ಬಡ ಮಕ್ಕಳನ್ನು ಶಾಲೆಗೆ ಸೇರಿಸಿಕೊಂಡ ಮರುದಿನವೇ ಉಳಿದ ಪೋಷಕರು ಬಂದು ಮಕ್ಕಳ ವರ್ಗಾವಣೆಗೆ ಪತ್ರ ಕೇಳುವ ಅಪಾಯವಿದೆ. ಆದ್ದರಿಂದ ಕುಸ್ಮಾ ಶಾಲೆಗಳಲ್ಲಿ ಆರ್.ಟಿ.ಐ ಕಾಯ್ದೆ ಅನುಷ್ಠಾನ ಸಾಧ್ಯವಿಲ್ಲ” ಎಂದು ‘ಅಮೋಘ ವಿವೇಕಭರಿತವಾದ’ ಹೇಳಿಕೆಯನ್ನಿತ್ತಿದ್ದಾರೆ. ಈ ಹಾಳು ವಿಚಾರವಂತರು, ಪ್ರಗತಿಪರರು ಈ ಹೇಳಿಕೆಗೂ ವಿರೋಧ ವ್ಯಕ್ತಪಡಿಸುತ್ತಾರಲ್ಲ! ಎಂಥ ಕೆಟ್ಟ ಮನಸ್ಥಿತಿಯವರಿರಬೇಕು ಇವರೆಲ್ಲ?!
ಕಪಟ ನಾಟಕ ಸೂತ್ರಧಾರಿ ನೀನೇ…
– ಅಶ್ವಿನ್ ಅಮಿನ್
ದೇಶದ ಯಾವುದೇ ಮೂಲೆಯಲ್ಲಿ ಆಡ್ವಾಣಿ, ವಾಜಪೇಯಿಯಂತಹ ಹಿರಿಯ ಬಿಜೆಪಿ ಮುತ್ಸದ್ದಿಗಳು ‘ಜೈ ಶ್ರೀ ರಾಮ್ ಎಂದರೆ ಸಾಕು ಅದು ಮಂಗಳೂರಿನವರ ಬಾಯಲ್ಲಿ ಮಾರ್ದನಿಸುತ್ತದೆ. ಹಿಂದುತ್ವ ಎಂದರೆ ಉಸಿರು, ಹಿಂದುತ್ವ ಎಂದರೆ ಜೀವನ, ಹಿಂದುತ್ವ ಎಂದರೆ ಸರ್ವಸ್ವ ಎಂದು ಹಿಂದುತ್ವವನ್ನೇ ಮೈಗೂಡಿಸಿಕೊಂಡ ನಾಡು ಈ ಕರಾವಳಿಯ ಮಂಗಳೂರು ಹಾಗು ಉಡುಪಿ ಜಿಲ್ಲೆಗಳು… ಬರೀ ವೋಟ್ ಬ್ಯಾಂಕ್ ಗಷ್ಟೇ ಹಿಂದುತ್ವದ ಸೋಗು ಹಾಕಿಕೊಳ್ಳುವ ಈ ಕಾಲದಲ್ಲಿ ಹೃದಯದಿಂದ ಹಿಂದುತ್ವವನ್ನು ಅಪ್ಪಿಕೊಂಡವರಿವರು.ಇಲ್ಲಿ ಬಿಜೆಪಿಯಿಂದ ಹಿಂದುತ್ವ ಬಂದಿಲ್ಲ ಬದಲಾಗಿ ಹಿಂದುತ್ವದಿಂದ ಬಿಜೆಪಿ ಬಂದಿದೆ ಆದರೆ ಈಗ ನಾವೆಷ್ಟು ಮೂರ್ಖರಾಗಿದ್ದೆವು ಎಂಬುದರ ಅರಿವಾಗುತ್ತಿದೆ. ವೋಟ್ ಬ್ಯಾಂಕ್ ಗಾಗಿ ನಮ್ಮ ಹಿಂದುತ್ವವನ್ನು ಬಳಸಿಕೊಂಡರಲ್ಲ ಎಂಬ ಬಗ್ಗೆ ಖೇದವಾಗುತ್ತಿದೆ. ಇದಕ್ಕೆ ಕಾರಣರಾದವರ ಮೇಲೆ ಕೋಪ, ಸಿಟ್ಟು, ಅಸಹನ, ಜೊತೆ ಜೊತೆಗೆ ನಮ್ಮ ಮೇಲೆಯೇ ಅಸಹನೆ ಹುಟ್ಟುತ್ತಿದೆ…!
ಈಗಿನ ಕಾಲಘಟ್ಟದಲ್ಲಿ ಕರ್ನಾಟಕದಲ್ಲಿ ಬಿಜೆಪಿ ನಿಜವಾಗಲೂ ಅದರ ಸಿದ್ಧಾಂತಗಳನ್ನು ಉಳಿಸಿಕೊಂಡಿದ್ದರೆ ಅದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ಮಾತ್ರವೇನೋ… ಪ್ರತಿ ಸಲದ ಚುನಾವಣೆಯಲ್ಲೂ ಬಿಜೆಪಿಗೆ ಅತ್ಯಧಿಕ ಶಾಸಕರನ್ನು ಕೊಟ್ಟ, ಪಕ್ಷದ ಯಾವ ಕ್ಲಿಷ್ಟ ಸಂದರ್ಭಗಳಲ್ಲೂ ಕೈ ಹಿಡಿಯುವಂತಹ ಜಿಲ್ಲೆಯಿದು. ಆದರೆ ಗೆದ್ದು ಅಧಿಕಾರಕ್ಕೆ ಬಂದ ಮೇಲೆ ಮಾತ್ರ ಎಲ್ಲರಿಂದಲೂ ಕಡೆಗಣಿಸಲ್ಪಟ್ಟಿತು. ಚುನಾವಣಾ ಗೆಲ್ಲುವವರೆಗೆ ಹಿಂದುತ್ವ ಎಂದು ಮಾತನಾಡುತ್ತಿದ್ದ ರಾಜ್ಯದ ಹಿರಿಯ ನಾಯಕರುಗಳು ಲಿಂಗಾಯಿತ, ಒಕ್ಕಲಿಗ ಎಂದು ಶುರುವಿಟ್ಟುಕೊಂಡರು. ‘ನಾವೆಲ್ಲಾ ಹಿಂದೂ, ನಾವೆಲ್ಲಾ ಒಂದು’ ಎಂದು ಭಾಷಣ ಮಾಡುವ ಮಂದಿ ಜಾತಿ ಲೆಕ್ಕ ಆರಂಭಿಸಿದರು.




