ಜಾತಿ ರಾಜಕೀಯದ ನಡುವೆ ಜಾತಿ ಇಲ್ಲದವನ ಪಾಡು..!
-ಶ್ರೀಧರ್ ಜಿ ಬನವಾಸಿ
ಮೊನ್ನೆ ರಾಜ್ಯ ಒಕ್ಕಲಿಗರ ಸಮಾವೇಷ ಅದ್ದೂರಿಯಾಗಿ ನೇರವೇರಿತು. ಜಗದ್ಗುರು ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಗುರುವಂದನೆ ಸಲ್ಲಿಸಲಾಯಿತು. ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಒಕ್ಕಲಿಗರ ಘಟಾನಘಟಿ ನಾಯಕರುಗಳನ್ನೆಲ್ಲಾ ಒಂದೇ ವೇದಿಕೆಯಲ್ಲಿ ಕೂರಿಸಲಾಗಿತ್ತು. ಒಕ್ಕಲಿಗರ ಬೇರೆ ಬೇರೆ ಮಠದ ಸ್ವಾಮೀಜಿಗಳು ಕೂಡ ಒಂದೇ ವೇದಿಕೆಯಲ್ಲಿ ಸೇರಿಕೊಂಡಿದ್ದು ಆ ದಿನದ ವಿಶೇಷವಾಗಿತ್ತು. ಒಕ್ಕಲಿಗರಲ್ಲಿ ಮೂರ್ನಾಲ್ಕು ಪಂಗಡಗಳಿದ್ದರೂ ನಾವೆಲ್ಲಾ ಒಂದೇ ಅಂತ ತೋರಿಸುವ ಪ್ರಯತ್ನ ಹಾಗೂ ರಾಜಕೀಯ ಪಕ್ಷಗಳ ನಡುವೆಯೂ ಒಕ್ಕಲಿಗರು ಒಂದು ತೋರಿಸವ ಪ್ರಯತ್ನ ಕೂಡ ಮಾಡಲಾಯಿತು. ಮುಖ್ಯಮಂತ್ರಿ ಸದಾನಂದ ಗೌಡರು ತಮಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿದ್ದೇ ತಾವು ಒಕ್ಕಲಿಗ ಅನ್ನುವ ಕಾರಣ ಅಂತ ಸಭೆಯಲ್ಲಿ ಉದ್ಗೋಷಿಸಿದರು.
ಧರ್ಮವೆಂಬ ಅಫೀಮು ಮತ್ತು ಜಾತಿಯೆಂಬ ಮರಿಜುವಾನ….
– ಡಾ. ಅಶೋಕ್ ಕೆ.ಆರ್
ಮಾರ್ಕ್ಸ್ ವಾದ ಮತ್ತದರ ವಿವಿಧ ಸರಣಿವಾದಗಳು ಪದೇ ಪದೇ ವಿಫಲವಾದ ನಂತರೂ ಮತ್ತೆ ಮತ್ತೆ ಪ್ರಸ್ತುತವೆನ್ನಿಸುತ್ತಲೇ ಸಾಗುವುದಕ್ಕೆ ಕಾರಣಗಳೇನು? ಕರ್ನಾಟಕದ ರಾಜಕೀಯ ಪರಿಸ್ಥಿತಿಯನ್ನು ಗಮನಿಸಿದಾಗ “Religion is opium” ಎಂದು ದಶಕಗಳ ಹಿಂದೆ ಯಾವಗಲೋ ಮಾರ್ಕ್ಸ್ ಹೇಳಿದ್ದ ಮಾತುಗಳು ನೆನಪಾಗದೇ ಇರದು. ‘ಭಿನ್ನ’ ಪಕ್ಷವೆಂದು ತನ್ನ ಬೆನ್ನು ತಾನೇ ತಟ್ಟಿಕೊಳ್ಳುವ ಭಾ.ಜ.ಪದ ಭಿನ್ನತೆ ಇಷ್ಟೊಂದು ಅಸಹ್ಯಕರವಾಗಿರಬಲ್ಲದು ಎಂದು ಸ್ವತಃ ಅದರ ಕಾರ್ಯಕರ್ತರೇ ನಿರೀಕ್ಷಿಸಿರಲಿಲ್ಲವೇನೋ?!
ಯಾವ್ ಜಾತಿಯ ಮುಖ್ಯಮಂತ್ರಿ ಬೇಕು!?
– ರಾಕೇಶ್ ಶೆಟ್ಟಿ
ಯಡ್ಡಿ ಕೆಳಗಿಳಿದಾಗ ಬರೆದಿದ್ದು.. ಈಗ ಸದಾ ಇಳಿಯುವಾಗಲೂ ಅಪ್ಪ್ಲೈ ಆಗುತ್ತೆ…! ಅತಿ ಕೆಟ್ಟ ರಾಜಕಾರಣಕ್ಕೆ ನಮ್ಮ ರಾಜ್ಯ ಸಾಕ್ಷಿಯಾಗಿರುವುದು ದೌರ್ಭಾಗ್ಯ…!
———————————————————————————————————————————————-
ಅಂತು ಬಿಜೆಪಿ ಹೈಕಮಾಂಡ್ ಧೈರ್ಯ ಮಾಡಿದೆ…! ಯಡ್ಯೂರಪ್ಪನವ್ರಿಗೆ ಕುರ್ಚಿ ಬಿಡಿ ಅನ್ನುವ ಸಂದೇಶವನ್ನ ರವಾನಿಸಿದೆ.ಸಂದೇಶ ಮಾಧ್ಯಮದ ಮೂಲಕ ಬಂದಿದ್ದು ನಿನ್ನೆ ಬೆಳಿಗ್ಗೆಯೇ.ಆದ್ರೆ ಇನ್ನ ಯಡ್ಯೂರಪ್ಪ ಮಾತ್ರ ಜಪ್ಪಯ್ಯ ಅನ್ನುತ್ತಿಲ್ಲ..!
ಕಳೆದ ೧೦-೧೫ ದಿನಗಳಿಂದ ಕರ್ನಾಟಕ ಸರ್ಕಾರ ಜನರ ಸಮಸ್ಯೆಯನ್ನ ನೋಡೋದು ಬಿಟ್ಟು ತನ್ನ ಬುಡ ಭದ್ರ ಮಾಡಿಕೊಳ್ಳುವ ಬಗ್ಗೆಯೇ ತಲೆಕೆಡಿಸಿಕೊಂಡು ಕೂತಿದೆ.ಕಳೆದ ಹತ್ತು ದಿನ ಬಿಡಿ, ಉತ್ತರ ಕರ್ನಾಟಕದಲ್ಲಿ ನೆರೆ ಬಂದು ಜನ ತುತ್ತು ಅನ್ನಕ್ಕೆ ಸೂರಿಗೆ ಪರದಾಡುತ್ತಿರುವಾಗಲೇ ರೆಡ್ಡಿಗಳು ಬಂಡಾಯದ ಬಾವುಟ ಹಾರಿಸಿದಾಗಲೂ ಜನ ಸತ್ತರೆ ಸಾಯಲಿ ಕುರ್ಚಿ ಉಳಿದರೆ ಸಾಕು ಅಂತ ಬಿಜೆಪಿ ಸರ್ಕಾರವೇ ದೆಹಲಿಗೆ ಓಡಿ ಹೋಗಿತ್ತು…! ಹಾಗೇನಾದರೂ ಯಡ್ಯೂರಪ್ಪ ಬಂಡಾಯಕ್ಕೆ ಬಗ್ಗದೇ ರಾಜೀನಾಮೆ ಕೊಟ್ಟಿದ್ದರೆ ಜನ ಮತ್ತೆ ಗೆಲ್ಲಿಸಿ ಕಳಿಸುತಿದ್ದರೇನೋ.ಆದರೆ ಯಡ್ಯೂರಪ್ಪ ಶರಣಾಗಿ ಕುರ್ಚಿಯ ಮುಂದೆ ಬೋರಲು ಬಿದ್ದಿದ್ದರು..!
ಹಾಗೇ ನೋಡಿದರೆ ಈ ಸರ್ಕಾರ ರೆಡ್ಡಿಗಳ ಬಂಡಾಯದ ಸಮಯದಲ್ಲಿ ಉತ್ತರ ಕರ್ನಾಟಕ ಪ್ರವಾಹಕ್ಕೆ ಸಿಕ್ಕಿ ತತ್ತರಿಸುತ್ತಿದ್ದರೂ ಹಾಳು ಬಿದ್ದು ಹೋಗಿ ಅನ್ನುವಂತೆ ಸುಮ್ಮನಿದ್ದಿದ್ದೇ ಕಡೆ ಬಾರಿಯೇನಲ್ಲ,ಅದಾದ ಮೇಲೆ ರೆಸಾರ್ಟ್ನಲ್ಲಿ ಕತ್ತೆ ವ್ಯಾಪರಕ್ಕಿಳಿದಾಗಲೂ ತಿಂಗಳುಗಟ್ಟಲೇ ರಾಜ್ಯ ಅನಾಥವಾಗಿತ್ತು.ಸರ್ಕಾರಿ ಯಂತ್ರಕ್ಕೆ ತುಕ್ಕು ಹಿಡಿದಿತ್ತು.
ಮತ್ತೆ ಮುಖ್ಯಮಂತ್ರಿಯ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲರು ಅನುಮತಿ ನೀಡಿದಾಗ ಖುದ್ದು ಆಡಳಿತ ಪಕ್ಷವೇ ಬಂದ್ ಕರೆ ಕೊಟ್ಟೂ ವೋಟ್ ಹಾಕಿ ಕಳುಹಿಸಿದ ಜನಸಾಮಾನ್ಯರಿಗೆ ತೊಂದರೆ ಕೊಟ್ಟಿದ್ದು ಮಹಾನ್ ಸಾಧನೆಯೇ (?) ಸರಿ.ಅದೆಲ್ಲಾ ಆಗಿ ಮತ್ತೆ ಸುಪ್ರಿಂ ಕೋರ್ಟ್ ತೀರ್ಪು ಬಂದ ಮೇಲೂ ಮತ್ತೆ ದೆಹಲಿಯಲ್ಲಿ ಕುರ್ಚಿ ಸವಾರಿ ಮಾಡಿ ಬಂದಾಗಲೂ ಕರ್ನಾಟಕ ಅನಾಥವಾಗಿತ್ತು.
ಮಾತೃಭಾಷೆಯಲ್ಲಿಯೇ ಶಿಕ್ಷಣ-ಮಕ್ಕಳ ಹಕ್ಕನ್ನು ರಕ್ಷಿಸಿ
– ಪಂಡಿತಾರಾಧ್ಯ,ಮೈಸೂರು
ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡಬೇಕೆಂಬ ಜಗತ್ತಿನ ಎಲ್ಲ ಶ್ರೇಷ್ಠ ಶಿಕ್ಷಣ ತಜ್ಞರ ವಿಚಾರಗಳು ಮತ್ತು ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಿ ಕರ್ನಾಟಕ ಸರಕಾರವು ತನ್ನ ಭಾಷಾನೀತಿಯನ್ನು ಅಂತಿಮವಾಗಿ ರೂಪಿಸಿತು(೧೯೯೪). ಅದರ ಪ್ರಕಾರ ಒಂದರಿಂದ ಐದನೇ ತರಗತಿಯವರೆಗೆ ಮಾತೃಭಾಷೆ/ರಾಜ್ಯಭಾಷೆ ಮಾತ್ರ ಕಡ್ಡಾಯ. ಕನ್ನಡ ಮಾತೃಭಾಷೆಯಲ್ಲದವರಿಗೆ ಒಂದನೆಯ ತರಗತಿಯಲ್ಲಿ ಪರಿಸರಭಾಷೆ/ರಾಜ್ಯಭಾಷೆಯಾದ ಕನ್ನಡವೂ ಕಡ್ಡಾಯ ಕಲಿಕೆಯ ವಿಷಯವಲ್ಲ. ಎರಡನೆಯ ಭಾಷೆಯನ್ನು ಕಲಿಯುವ ಹಂತದಿಂದ ಅಂದರೆ ಮೂರನೆಯ ತರಗತಿಯಿಂದ ಅವರಿಗೆ ರಾಜ್ಯಭಾಷೆ ಕನ್ನಡ ಐಚ್ಛಿಕ ಕಲಿಕೆಯ ವಿಷಯ ಮಾತ್ರ; ಪರೀಕ್ಷೆ ಕಡ್ಡಾಯವಲ್ಲ. ಐದನೆಯ ತರಗತಿಯಿಂದ ಕನ್ನಡ ಕಲಿಕೆ ಮತ್ತು ಪರೀಕ್ಷೆ ಕಡ್ಡಾಯ. ಎರಡನೆಯ ಭಾಷೆಯನ್ನು ಕಲಿಯುವ ಹಂತದಿಂದ ಅಂದರೆ ಮೂರನೆಯ ತರಗತಿಯಿಂದ ಮಾತ್ರ ಇಂಗ್ಲಿಷ್ ಮಾತೃಭಾಷೆಯಲ್ಲದ ಮಕ್ಕಳಿಗೆ ಇಂಗ್ಲಿಷ್ ಐಚ್ಛಿಕ ಕಲಿಕೆಯ ವಿಷಯ, ಪರೀಕ್ಷೆ ಕಡ್ಡಾಯವಲ್ಲ. ಐದನೆಯ ತರಗತಿಯಿಂದ ಇಂಗ್ಲಿಷ್ ಕಲಿಕೆ ಮತ್ತು ಪರೀಕ್ಷೆ ಕಡ್ಡಾಯ. ಕರ್ನಾಟಕ ಸರಕಾರದ ಈ ಭಾಷಾನೀತಿಯನ್ನು ಸರ್ವೋನ್ನತ ನ್ಯಾಯಾಲಯವೂ ಪ್ರಶಂಸಿಸಿ ಅನುಮೋದಿಸಿತ್ತು(೧೯೯೩).
ಈ ಭಾಷಾನೀತಿಗೆ ಇದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವ ಸಂದರ್ಭದಲ್ಲಿ ಅದನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸೀಮಿತಗೊಳಿಸಿತು. ಪೂರ್ವ ಪ್ರಾಥಮಿಕವೂ ಸೇರಿದಂತೆ ಒಂದನೆಯ ತರಗತಿಯಿಂದಲೇ ಇಂಗ್ಲಿಷ್ ಮಾತೃಭಾಷೆಯಲ್ಲದವರಿಗೂ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ನಡೆಸಲು ಅನುದಾನರಹಿತ ಖಾಸಗಿ ಶಾಲೆಗಳಿಗೆ ಮುಕ್ತ ಅವಕಾಶ ನೀಡಿತು(೨೦೦೮). ಇದು ಮಾತೃಭಾಷೆಯಲ್ಲಿ ಶಿಕ್ಷಣ ನೀಡಬೇಕೆಂಬ ಮಕ್ಕಳ ಶೈಕ್ಷಣಿಕ ಹಕ್ಕಿನ ನೀತಿಗೆ ವಿರುದ್ಧವಾಗಿದೆ. ಇದರಿಂದ ಮಕ್ಕಳು ಆರಂಭದ ಹಂತದಲ್ಲಿಯೇ ‘ಸಮಾನ ಅವಕಾಶ-ಸಮಾನ ಸ್ಪರ್ಧೆ’ ಎಂಬ ಸಮಾನತೆಯ ನ್ಯಾಯದಿಂದ ವಂಚಿತರಾಗಿದ್ದಾರೆ.
ಕನ್ನಡ/ಇಂಗ್ಲೀಷ್ ಮಾಧ್ಯಮದ ಜೊತೆಗೆ ಏಕರೂಪ ಶಿಕ್ಷಣದ ಬಗ್ಗೆಯೂ ಚರ್ಚೆ ಆಗಬೇಕಲ್ಲವೇ?
– ರಾಕೇಶ್ ಶೆಟ್ಟಿ
ಕಡೆಗೂ ‘ಸರ್ಕಾರ ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತಿಸಬೇಕು’ ಅನ್ನುವ ಮಾತುಗಳನ್ನು ಕಸಪಾ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ.ಕಳೆದ ಹಲವು ದಿನಗಳಿಂದ ಇಂಗ್ಲೀಷ್ ಮಾಧ್ಯಮದ ಸುತ್ತ ನಡೆಯುತ್ತಲಿರುವ ಚರ್ಚೆಯಲ್ಲಿ ನಾನು ನಿರೀಕ್ಷಿಸುತಿದ್ದ ಮಾತು “ಏಕರೂಪ ಶಿಕ್ಷಣ”ದ ಬಗ್ಗೆ.ಪೇಟೆಯ/ಉಳ್ಳವರ ಮಕ್ಕಳಿಗೊಂದು ಶಿಕ್ಷಣ,ಹಳ್ಳಿಯ/ಬಡವರ ಮಕ್ಕಳಿಗೊಂದು ಶಿಕ್ಷಣ ಕೊಟ್ಟು ಕಡೆಗೆ ಸಮಾನತೆ,ಸಾಮಾಜಿಕ ನ್ಯಾಯ,ಭಾಷೆ,ನಾಡು-ನುಡಿಯ ಅಳಿವು ಉಳಿವು ಅಂತ ಮಾತನಾಡುವುದೆಷ್ಟು ಸರಿ?
೧೦ನೆ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಓದಿದ ನನಗೆ ಮಾತೃ ಭಾಷೆಯಲ್ಲಿ ಕಲಿಯುವುದೆಷ್ಟು ಸುಲಭ,ಆನಂದದ ವಿಷಯ ಅನ್ನುವುದರ ಅರಿವಿದೆ ಹಾಗೆಯೇ ೧೦ರ ನಂತರ ಇಂಗ್ಲೀಷ್ ಮಾದ್ಯಮಕ್ಕೆ (ಪಿಯುಸಿಯಲ್ಲಿ ಆಯ್ದುಕೊಂಡಿದ್ದು ವಿಜ್ಞಾನ ವಿಷಯ) ಕಾಲಿಟ್ಟಾಗ ಅನುಭವಿಸಿದ ಕಷ್ಟ,ಕೀಳರಿಮೆಯ ಅನುಭವಗಳು ಇವೆ.ಹಾಗಾಗಿ ಈ ಚರ್ಚೆಯಲ್ಲಿ ಮತ್ತು ಈಗಿನ ನಮ್ಮ ಶೈಕ್ಷಣಿಕ ಪರಿಸ್ಥಿತಿಯಲ್ಲಿ ನಾನು ಇಂಗ್ಲೀಷ್ ಮೀಡಿಯಂ ಬೇಕು ಅನ್ನುವುದರ ಪರವೇ ನಿಲ್ಲುತ್ತೇನೆ.
ಒಂದು ವೇಳೆ ಸಾಹಿತಿಗಳು ಒತ್ತಾಯಿಸುತ್ತಿರುವಂತೆ ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯಲ್ಲೇ ಆಗಬೇಕು ಅನ್ನುವುದಾದರೆ ಅದು ಈ ರಾಜ್ಯದಲ್ಲಿರುವ ಸರ್ಕಾರಿ/ಅನುದಾನಿತ/ಕೇಂದ್ರೀಯ/ಖಾಸಗಿ ಶಾಲೆಗಳಿಗೂ ಏಕರೂಪವಾಗಿ ಅನ್ವಯವಾಗಲಿ. ಅದನ್ನು ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಕಡ್ಡಾಯವಾಗಲಿ ಆ ಮೂಲಕ ಬಡವರ ಮಕ್ಕಳು ಮಾತ್ರ ಕನ್ನಡದಲ್ಲಿ ಕಲಿತು ಮುಂದೆ ಇಂಗ್ಲೀಷ್ ಲೋಕಕ್ಕೆ ಕಾಲಿಟ್ಟು ಅರ್ಧಕರ್ಧ ಜನ ಕೀಳರಿಮೆ,ಹೆದರಿಕೆಯಿಂದಾಗಿ ಹಿಂದೆ ಬೀಳಲಿ ಅನ್ನುವುದು ಇಬ್ಬಗೆಯ ನೀತಿಯಾಗುತ್ತದೆ.
ಏಕರೂಪ ಶಿಕ್ಷಣ ಅನ್ನುವಾಗ ಇನ್ನೊಂದು ಅಂಶವನ್ನ ನಾವು ಗಮನಕ್ಕೆ ತೆಗೆದುಕೊಳ್ಳಬೇಕು.ಮಕ್ಕಳನ್ನು ಶಾಲೆಗೇ ಸೇರಿಸುವಾಗ ಅದು ಇಂಗ್ಲೀಷ್ ಮೀಡಿಯಂ ಶಾಲೆಯೇ ಅಂತ ಮಾತ್ರ ಈಗಿನ ಪೋಷಕರು ನೋಡುತ್ತಿಲ್ಲ,ಅದರ ಜೊತೆಗೆ ಅವರು ಅಲ್ಲಿರುವುದು ಸೆಂಟ್ರಲ್ ಸಿಲ್ಲಬಸ್ಸೋ,ಐ.ಸಿ.ಎಸ್.ಈ ಸಿಲ್ಲಬಸ್ಸೋ (ಅಥವಾ ಇನ್ಯಾವುದೋ) ಅನ್ನುವುದನ್ನು ನೋಡುತಿದ್ದಾರೆ.ನಮ್ಮ ಮಕ್ಕಳು ಇಂತ ಸಿಲಬಸ್ಸ್ ಇರೋ ಶಾಲೆಯಲ್ಲಿ ಓದುತಿದ್ದಾರೆ ಅಂತ ಹೇಳಿಕೊಳ್ಳುವುದು ಈಗಿನ ಪೋಷಕರಿಗೆ ಗರ್ವದ ವಿಷಯವಾಗಿದೆ. ಅಸಲಿಗೆ ಈ ರೀತಿ ಬೇರೆ,ಬೇರೆ ಸಿಲ್ಲಬಸ್ಸಿನ ಅಗತ್ಯ ಶಾಲಾ ಮಟ್ಟದಲ್ಲಿ ಏನು ಅನ್ನುವುದು ಸಹ ಚರ್ಚೆಯಾಗಬೇಕಲ್ಲವೇ?
ಮುಖ್ಯವಾಹಿನಿಯ ಜಾಣಗುರುಡು
– ಡಾ.ಅಶೋಕ್ ಕೆ.ಆರ್
ಹೆಂಡತಿ ಗಂಡನಿಗೆ ಹೊಡೆದರೆ ‘ಬ್ರೇಕಿಂಗ್ ನ್ಯೂಸ್’, ಗಂಡ ಹೆಂಡತಿಗೆ ಹೊಡೆದರೆ ‘ಬ್ರೇಕಿಂಗ್ ನ್ಯೂಸ್’, ಪೂನಂ ಪಾಂಡೆ ಬೆತ್ತಲಾದದ್ದು, ಐಶ್ವರ್ಯ ರೈ ದಪ್ಪಗಾಗಿದ್ದು ಮುಖಪುಟ ಸುದ್ದಿ! ಅಧಿಕಾರಿ, ರಾಜಕಾರಣಿ, ಸನ್ಯಾಸಿ ಮಾಡಿದ ತಪ್ಪುಗಳು ‘ಬ್ರೇಕಿಂಗ್ ನ್ಯೂಸ್’ [ofcourse ಯಾವ ವಾಹಿನಿ ವೀಕ್ಷಿಸುತ್ತಿದ್ದೀರೆಂಬುದರ ಮೇಲೆ ಈ ಕೊನೆಯ ಬ್ರೇಕಿಂಗ್ ನ್ಯೂಸ್ ಬದಲಾಗುತ್ತಿರುತ್ತದೆ!]. ಪತ್ರಕರ್ತನೊಬ್ಬ ನೆಲದ ಕಾನೂನಿಗೆ ಗೌರವ ಕೊಡದೆ ನಡೆದುಕೊಂಡಾಗ? ಅದು ಸುದ್ದಿಯೂ ಅಲ್ಲ, ರದ್ದಿಗೆ ಹಾಕುವಂಥ ವಿಷಯ ಎಂಬುದು ನಮ್ಮ ಮುಖ್ಯವಾಹಿನಿ ಮಾಧ್ಯಮಗಳ ನಿಲುವು!
ಮೀಸಲಾತಿ ಕೇವಲ ಉಳ್ಳವರಿಗೆ ಮಾತ್ರನಾ?
– ಮುರುಳಿಧರ್ ದೇವ್
ಮೊನ್ನೆ ಬೆಂಗಳೂರಿನಿಂದ ಮೈಸೂರಿಗೆ ರೈಲಿನಲ್ಲಿ ಹೋಗುವಾಗ ಒಬ್ಬ ದಲಿತ ಹೆಂಗಸು ತನ್ನ ಮಗ ಕರ್ನಾಟಕ ಸರಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ೧೨೦೦೦ ರ್ಯಾಂಕ್ ಬಂದಿರೋದನ್ನ ತುಂಬಾ ಖುಷಿಯಿಂದ ಹೇಳ್ಕೋತ ಇದ್ಲು. ಇದೇನು ೧೨೦೦೦ ರ್ಯಾಂಕ್ ಬಂದಿರೋದು ಅಂತ ದೊಡ್ಡ ವಿಷಯ ಅಂತ ಅನ್ಕೋಬೇಡಿ. ಅವಳು ಮನೆ ಮನೆಗಳಲ್ಲಿ ಪಾತ್ರೆ ತೊಳೆದು ತನ್ನ ಮಗನನ್ನು ಓದುಸ್ತ ಇರೋದು. ಅವರ ಕುಟುಂಬದಲ್ಲಿರೋದು ನಾಲ್ಕು ಜನ, ಗಂಡ ದಿನ ಕುಡಿದು ಬಂದು ಇವಳನ್ನು ಹೊಡೆಯೋದು, ಮಗಳು ಈಗ ೯ನೆ ತರಗತಿ ಓದ್ತಾ ಇರೋದು. ಸಂಪೂರ್ಣ ಮನೆಯ ಜವಾಬ್ದಾರಿ ಇವಳ ಹೆಗಲಿಗೆ. ಆದರೆ ಆ ಹುಡುಗನ ಮುಖದಲ್ಲಿ ಸಂತಸಕ್ಕಿಂತ ಮುಂದೇನು ಅನ್ನೋ ಚಿಂತೆಯೇ ಬಹುವಾಗಿ ಕಾಡ್ತಾ ಇತ್ತು. ಮಾತಿನ ಮಧ್ಯೆ ಯಾಕಿಷ್ಟು ಚಿಂತೆ ಪಡ್ತಿಯ, ಹೇಗಿದ್ರು ಸರಕಾರದವರು ದಲಿತರಿಗಾಗಿ ಶೈಕ್ಷಣಿಕ ಸೌಲಭ್ಯ ಕೊಡುತ್ತೆ, ನಿನ್ನ ಫೀಸ್ ಬಗ್ಗೆನು ಯೋಚಿಸಬೇಡ ಅಂತ ಹೇಳ್ತಾ ಇದ್ದೆ. ಆದ್ರೆ ಇದ್ಯಾವುದರಿನ್ದಾನು ಆತನ ಮುಖದಲ್ಲಿನ ಚಿಂತೆ ಕಡಮೆ ಆಗ್ಲಿಲ್ಲ.
ಕೊನೆಗೆ ಆತನೇ, ಸರಕಾರದವರೆನೋ ಶುಲ್ಕ ತುಂಬುತ್ತಾರೆ, ಆದರೆ ಮಿಸಲಾತಿ ಇದ್ದರು ಒಳ್ಳೆಯ ಕಾಲೇಜ್ ನಲ್ಲಿ ಸೀಟು ದೊರಕೋದು ಕಷ್ಟ ಅಂದ. ನಾನೋ ಅದ್ಯಾಕೆ ಮಿಸಲಾತಿ ಇರೋದು ಹಿಂದುಳಿದ ಜನಾಂಗ ಮುಂದೆ ಬರಲಿ ಅಂತ ಹೇಳಿದ್ರೆ ಎಲ್ಲಿತ್ತೋ ಕೋಪ ಎಲ್ಲ ಸೇರ್ಸಿ ಹೇಳ್ದ, ನಂಗೆ ಮನೇಲಿ ಕಷ್ಟ ಇದೆ ಅದ್ಕೆ ೧೨೦೦೦ ರ್ಯಾಂಕ್ ಬಂದಿದೆ ಸ್ವಲ್ಪ ಮಟ್ಟಿಗೆ ತೀರ ಒಳ್ಳೇದು ಅಲ್ಲದೆ ಇದ್ರುನು ಉತ್ತಮ ಕಾಲೇಜ್ ನಲ್ಲಿ ಸೀಟು ಸಿಗಬಹುದು, ಆದರೆ ನಮ್ಮ ಅಮ್ಮ ಕೆಲಸಕ್ಕೆ ಹೋಗೋ ಮನೆಯ ಯಜಮಾನ ಸರಕಾರದಲ್ಲಿ ಉನ್ನತ ಹುದ್ದೆಲಿ ಇದ್ದಾರೆ, ಅವರ ಮಗನಿಗೆ ಖಾಸಗಿಯಾಗಿ ಕೋಚಿಂಗ್ ಕೊಡ್ಸಿದಾರೆ, ಇಷ್ಟಾಗಿಯೂ ಅವನಿಗೂ ನನಗು ಇರೋ ರ್ಯಾಂಕ್ ವ್ಯತ್ಯಾಸ ಕೇವಲ ೫೦೦.
ಕಾನೂನಿನಂಗಳ ೬ : ಕಾನೂನಿನ ಕಣ್ಣಲ್ಲಿ ವಿವಾಹ
ಉಷಾ ಐನಕೈ ಶಿರಸಿ
ಹಿಂದೂ ಸಂಪ್ರದಾಯದ ಪ್ರಕಾರ ವಿವಾಹ ಅಂದರೆ ಒಂದು ಪವಿತ್ರ ಬಂಧನ. ಈ ಮೂಲಕ ಮಾತ್ರ ಮನುಷ್ಯ ಪರಿಪೂರ್ಣತೆಯತ್ತ ಹೋಗಲು ಸಾಧ್ಯ ಎಂಬ ನಂಬಿಕೆಯಿದೆ. ಈ ವೈವಾಹಿಕ ಜೀವನ ಸುಸಂಬದ್ಧವಾಗಿ ಸಾಗಲು ಅನುಕೂಲವಾಗುವಂತೆ ಕಾನೂನುಗಳನ್ನು ರಚಿಸಲಾಗಿದೆ. ಈ ಕಾನೂನುಗಳು ವಿವಾಹ ಅಂದರೇನು? ವಿವಾಹವನ್ನು ಯಾವಾಗ ಅನೂರ್ಜಿತಗೊಳಿಸಬಹುದು? ಗಂಡ-ಹೆಂಡತಿಯ ಹಕ್ಕು-ಬಾಧ್ಯತೆಗಳು ಹಾಗೂ ಅದನ್ನು ಚ್ಯುತಿಗೊಳಿಸಿದಲ್ಲಿ ಪಡೆಯಬಹುದಾದ ಶಿಕ್ಷೆಗಳು ಮುಂತಾದವುಗಳನ್ನೆಲ್ಲ ವಿವರಿಸುತ್ತದೆ.
ಹಿಂದೂ ಸಂಪ್ರದಾಯದಲ್ಲಿ ವಿವಾಹಕ್ಕೆ ಒಂದು ವಿಶೇಷ ಅರ್ಥವಿದೆ. ಇಲ್ಲಿ ವಿವಾಹ ಒಂದು ಪವಿತ್ರ ಬಂಧನ. ಹೆಣ್ಣು-ಗಂಡು ಪರಸ್ಪರ ಅಗ್ನಿಸಾಕ್ಷಿಯಾಗಿ ಕೈಹಿಡಿದು ನೆಮ್ಮದಿಯ ಬದುಕಿಗೆ ಸಂಕಲ್ಪ ಕಟ್ಟಿಕೊಳ್ಳುವ ಸಂದರ್ಭ ಇದು. ವಿವಾಹವಿಲ್ಲದ ಜೀವನ ಅಪೂರ್ಣ ಎಂಬ ಭಾವನೆ ನಮ್ಮಲ್ಲಿದೆ. ‘ಧರ್ಮೇ ಚ ಅರ್ಥೇ ಚ ಕಾಮೇ ಚ ನಾತಿ ಚರಿತವ್ಯಾ ತ್ವಯೀಯಮ್ ನಾತಿ ಚರಾಮಿ’ ಎನ್ನುತ್ತ ಧರ್ಮ, ಅರ್ಥ, ಕಾಮ ಈ ಮೂರರಲ್ಲೂ ಇಬ್ಬರೂ ಒಂದಾಗಿ ಬಾಳೋಣ ಎನ್ನುವ ಪ್ರತಿಜ್ಞೆಯೊಂದಿಗೆ ವಿವಾಹ ಸಂಸ್ಕಾರ ನಡೆಯುತ್ತದೆ. ಹಾಗಾಗಿ ಹಿಂದೂ ಪದ್ಧತಿಯಲ್ಲಿ ವಿವಾಹ ಒಂದು ಧಾರ್ಮಿಕ ಸಂಸ್ಕಾರ.
ವಿವಾಹ ಎಂದರೆ ಹೆಣ್ಣು-ಗಂಡು ಒಂದಾಗಿ ಬಾಳುವುದಕ್ಕೋ, ಸಂತಾನೋತ್ಪತ್ತಿಗೋ ಸೀಮಿತವಾಗಿಲ್ಲ. ಇದರ ಅರ್ಥ ಬಹು ವಿಶಾಲವಾಗಿದೆ. ಹೆಣ್ಣು-ಗಂಡು ಸೇರಿ ಒಂದು ಪೂರ್ಣತೆಯನ್ನು ಕಾಣುವುದು. ಈ ರೀತಿಯಾಗಿ ಇಡೀ ಬದುಕನ್ನೇ ಪೂರ್ಣತೆಯತ್ತ ಒಯ್ಯುವುದು. ಈ ಬದುಕಿನಲ್ಲಿ ಸಾವಿರಾರು ಕನಸುಗಳಿವೆ. ನೂರಾರು ಸವಾಲುಗಳಿವೆ. ಎರಡು ವಿಭಿನ್ನ ಮನಸ್ಸುಗಳು ಒಂದೇ ಬಿಂದುವಿನೊಂದಿಗೆ ಮುಂದುವರಿಯುವ ವಿಸ್ಮಯವಿದೆ. ಹೀಗೆ ವಿವಾಹದ ಅರ್ಥ ಮಾಡುತ್ತಹೋದರೆ ಅನಂತದೆಡೆಗೆ ಸಾಗುತ್ತದೆ. ಇದೇ ಭಾರತೀಯ ಸಂಸ್ಕೃತಿ. ಭಾರತೀಯ ಸಂಸ್ಕೃತಿಯಲ್ಲಿ ವಿವಾಹ ಬಂಧನ ಎನ್ನುವುದು ಅದ್ಭುತವಾದ ಲಕ್ಷಣ.
ಚುಟುಕು ಕ್ರಿಕೆಟ್ ನೈತಿಕತೆಯ ಕೊನೆಗುಟುಕು

ಒಮ್ಮೆ ಜನಮತಸಾಂದ್ರತೆ (Demography) ಬದಲಾದರೆ…
– ಎಂ.ಡಿ ಸುಬ್ರಮಣ್ಯ ಮಾಚಿಕೊಪ್ಪ
ಪ್ರದೇಶವೊಂದನ್ನು (ಅದು ರಾಜ್ಯವಾಗಿರಲಿ ಅಥವಾ ರಾಜ್ಯವೊಂದರ ಭಾಗವಾಗಿರಲಿ) ದೇಶದಲ್ಲಿ ಇರುವಂತೆ ಮಾಡುವ ಅನೇಕ ಸಮಾನ ಅಂಶಗಳಿರುತ್ತವೆ. ಅವುಗಳಲ್ಲಿ ಅತ್ಯಂತ ಮುಖ್ಯವಾಗಿದ್ದು ಆ ಪ್ರದೇಶದ ಜನಮತಸಾಂದ್ರತೆ (demography) ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ. ಒಮ್ಮೆ ಆ ಪ್ರದೇಶದ ಜನಮತಸಾಂದ್ರತೆ ಬದಲಾದರೆ ಎಲ್ಲವೂ ಬದಲಾಗುತ್ತದೆ. ಇಲ್ಲಿ ಎಲ್ಲವೂ ಅಂದರೆ ಆ ಪ್ರದೇಶದ ಭಾಷೆ, ಆಚಾರ-ವಿಚಾರ, ರಾಷ್ಟ್ರನಿಷ್ಠೆ, ನಾಯಕರುಗಳು-ಎಲ್ಲವೂ ಬದಲಾಗುತ್ತದೆ!!! ಇದಕ್ಕೆ ಕಶ್ಮೀರಕಣಿವೆಯ ಉದಾಹರಣೆಯೇ ನಮ್ಮ ಕಣ್ಣುಮುಂದೆ (ಕಣ್ಣಿದ್ದವರಿಗೆ) ಕಾಣುತ್ತಿದೆ. ಕಲ್ಹಣ ಸಾಹಿತ್ಯ ರಚಿಸಿದ ಆ ಕಾಶ್ಮೀರಿ ಭಾಷೆ ಕಣಿವೆಯಲ್ಲಿ ಎಲ್ಲಿದೆ? ಬೋರ್ಡ್ ಗಳಲ್ಲೆಲ್ಲಾ ಅರಬಿ ಲಿಪಿ. ‘India’ ಎಂದು ಕಾಣುವ ಬೋರ್ಡ್ ಗಳ ಮೇಲೆ ಕಲ್ಲು, ಆಗಸ್ಟ್ ೧೫ ಬಂದ್!! ವಿಜೃಂಭಣೆಯ ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ!!! ನಾಗಲ್ಯಾಂಡ್, ಮಿಜೊರಾಂ ಪರಿಸ್ಥಿತಿಯೂ (ಸದ್ಯಕ್ಕೆ ತಣ್ಣಕ್ಕಿದ್ದಂತೆ ಕಂಡರೂ) ತುಂಬವೇನು ಭಿನ್ನವಾಗಿಲ್ಲ. ಒಟ್ಟು ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿದ್ದು ಕಶ್ಮೀರ, ನಾಗಲ್ಯಾಂಡ್ ಮತ್ತು ಮಿಜೋರಾಂಗಳಲ್ಲಿ ಅವರು ತುಂಬಾ ಅಲ್ಪಸಂಖ್ಯಾತರಾಗಿದ್ದು ಮುಸ್ಲಿಂ ಹಾಗೂ ಕ್ರೈಸ್ತರು ಅಲ್ಲಿ ಬಹುಸಂಖ್ಯಾತರಾಗಿರುವುದೇ ಇದಕ್ಕೆ ಕಾರಣ. (ಹಿಂದೂಗಳು ಅಲ್ಪಸಂಖ್ಯಾತರಾಗಿರುವ ಆದರೆ ಬೌದ್ದರೇ ಸಾಕಷ್ಟು ಸಂಖ್ಯೆಯಲ್ಲಿರುವ ಲಡಕ್ ಪ್ರದೇಶದಲ್ಲಿ ಈ ಸಮಸ್ಯೆ ಅಷ್ಟಿಲ್ಲ!!) ಒಮ್ಮೆ ಜನಮತಸಾಂದ್ರತೆ ಬದಲಾದರೆ ರಾಷ್ಟ್ರನಿಷ್ಟೆಯೂ ಬದಲಾಗುತ್ತದೆಂಬುದು (ಪ್ರಪಂಚ ಮಟ್ಟದಲ್ಲಿ) ಅಪ್ರಿಯ ಸತ್ಯ.





