ಗುಂಡು ಬಿಡದ ಬಂದೂಕುಗಳ ನಡುವೆ!
– ಸಂತೋಷ್ ಆಚಾರ್ಯ
೧೯೫೯ರಲ್ಲಿ ಜನರಲ್ ತಿಮ್ಮಯ್ಯ ಭಾರತ ಚೀನಾ ಯುದ್ಧದ ಸಾಧ್ಯತೆ ಮತ್ತು ಅದಕ್ಕೆ ಬೇಕಾದ ತಯಾರಿಯನ್ನು ಮಾಡಲು ಒಪ್ಪಿಗೆ ಕೇಳಿದಾಗ ಆಗಿನ ರಕ್ಷಣಾ ಮಂತ್ರಿಯಾಗಿದ್ದ ಕೃಷ್ಣ ಮೆನನ್ ಅದನ್ನು ನಿರಾಕರಿಸಿದ್ದರು. ಇದರಿಂದ ಕುಪಿತಗೊಂಡ ಜನರಲ್ ರಾಜೀನಾಮೆಯನ್ನು ಎಸೆದಿದ್ದರು. ಜನರಿಂದ ಸರ್ಕಾರ ಎನ್ನುವ ಅರ್ಥದ ಪ್ರಜಾಪ್ರಭುತ್ವ ಶುರುವಾದ ಹೊತ್ತಲ್ಲೇ ಜನರು ಬದಲಿಸಬಯಸುವ ಸರ್ಕಾರದ ನೀತಿಗಳನ್ನು ಬದಲಿಸುವ ಅನುಮತಿ ಆಗಲೇ ಇರಲಿಲ್ಲ. ನೆಹರೂ ರಾಜೀನಾಮೆಗೆ ಒಪ್ಪದೇ ಅವರನ್ನು ಅವರ ಅವಧಿ ಮುಗಿಯುವ ತನಕ(೧೯೬೧) ಇಟ್ಟುಕೊಂಡಿದ್ದು ಮತ್ತು ಭಾರತ ಯುದ್ಧದಲ್ಲಿ(೧೯೬೨) ಹೀನಾಯವಾಗಿ ಸೋತದ್ದು ಈಗ ಕೇವಲ ಇತಿಹಾಸ! ನೆಹರೂ ಚಾಣಾಕ್ಷತನದಿಂದ ವರ್ತಿಸಿದ್ದರೆ ಯುದ್ಧವನ್ನು ತಪ್ಪಿಸಬಹುದಿತ್ತು ಎಂದು ಈಗಲೂ ಎಷ್ಟೋ ಜನ ಹೇಳುತ್ತಾರೆ. ತನ್ನ ತಂತ್ರವನ್ನು ಒಪ್ಪಲಿಲ್ಲವೆಂದು ರಾಜೀನಾಮೆ ಎಸೆದು ಸರ್ಕಾರದಿಂದ ದೂರ ಸರಿಯುವುದಕ್ಕೂ ತಾನು ಮಾಡಿದ್ದು ಸರಿ ಎಂದು ಅದಕ್ಕಾಗಿ ಸರ್ಕಾರಕ್ಕೆ ಕೇರೇ ಎನ್ನದೆ ಅದನ್ನು ಕೋರ್ಟಿಗೆಳೆಯುವುದಕ್ಕೂ ಎಷ್ಟು ವ್ಯತ್ಯಾಸಗಳನ್ನು ನಾವು ಗುರುತಿಸಬಹುದು?
ತನ್ನ ಕಾರ್ಯಾವಧಿಯ ಕೊನೆಯ ವರ್ಷದಲ್ಲಿ ಇಂತಹಾ ಅಗ್ನಿಪರೀಕ್ಷೆ ಜನರಲ್ ವಿ.ಕೆ ಸಿಂಗ್ಗೆ ಬೇಕಿತ್ತೇ ಎಂದು ಸಾಮಾನ್ಯವಾಗಿ ಅನಿಸುವುದು ಸಹಜ. ಆದರೆ ಸ್ವಲ್ಪವೂ ಕ್ರಮಬದ್ಧತೆಯಿಂದ ನಿರ್ವಹಿಸದ ಸರ್ಕಾರಿ ಕಚೇರಿಗಳಿಗೆ ಇದು ಮುಖದ ಮೇಲೆ ಹೊಡೆದ ಕಪಾಳಮೋಕ್ಷ. ರಕ್ಷಣಾ ಮಂತ್ರಾಲಯದ ಮುಂದೆ ಭೂ ಸೇನೆಯ ಸಮಸ್ಯೆಗಳು ಗುಡ್ಡಗಟ್ಟುತ್ತಿವೆ. ಜನರಲ್ ವಯಸ್ಸಿನ ಸಮಸ್ಯೆಯಿಂದ ಶುರುವಾಗಿ ಲಂಚದ ಕೇಸು, ಟ್ರಕ್ಕುಗಳಲ್ಲಿ ನಡೆದ ಭ್ರಷ್ಟಾಚಾರ, ಲೀಕಾದ ಪತ್ರ ಹೀಗೆ ವಿ.ಕೆ ಸಿಂಗ್ ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸುತ್ತಿದ್ದಾರೆ. ಈ ನಡುವೆ ತಮ್ಮ ಸ್ವಾರ್ಥಕ್ಕಾಗಿ ತಾವೇ ಪತ್ರವನ್ನು ಲೀಕ್ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಇಳಿ ವಯಸ್ಸಿನ ಮಾನಸಿಕ ಸ್ಥಿತಿಗಳನ್ನು ನೋಡುವುದಾದರೆ ಅಲ್ಲಗಳೆಯಬಹುದಾದ ವಿಚಾರವೇನೂ ಅಲ್ಲ. ಆದರೂ ಮೊದಲು ಕಮಾಂಡೋ ಆಗಿದ್ದ ಜನರಲ್ ಹೀಗೆ ಮಾಡಬಹುದೇ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ವಿ.ಕೆ ಸಿಂಗ್ ಒಬ್ಬ ಹೋರಾಟಗಾರ. ನೇರವಾಗಿ ವಿಷಯಗಳನ್ನು ನಿಭಾಯಿಸುವ ನಿಷ್ಠುರ ವ್ಯಕ್ತಿ. ಅವರ ಮೇಲೆ ಆಪಾದನೆ ಹೊರಿಸುವ ಮೊದಲು ಮನಸ್ಸು ಕೂಡ ಎಲ್ಲೋ ಒಪ್ಪಲು ನಿರಾಕರಿಸುತ್ತದೆ.
ಮತ್ತಷ್ಟು ಓದು 
ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ
– ರಾಕೇಶ್ ಶೆಟ್ಟಿ
ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…
ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!
‘ಕೋಮುವಾದ ಮತ್ತು ಮಹಿಳೆ’ ಎಂಬ ಲೇಖನಕ್ಕೊಂದು ಪ್ರತಿಕ್ರಿಯೆ
– ಡಾ.ಜಿ. ಭಾಸ್ಕರ ಮಯ್ಯ
ಸಬಿಹಾರವರ ಮಹಿಳೆ ಮತ್ತು ಕೋಮುವಾದ ಇಂದು ವಿವಾದಕ್ಕೆ ಒಳಗಾಗಿರುವುದು ಜನರ ಕೋಮುವಾದೀಕರಣದ ಪ್ರಕ್ರಿಯೆ ಎಷ್ಟೊಂದು ಉಲ್ಬಣಿಸಿದೆ ಎನ್ನುವುದಕ್ಕೆ ಸಾಕ್ಷಿ. ಸಬಿಹಾರವರ ಲೇಖನದ
ಯಾವ ಒಂದು ವಾಕ್ಯವೂ ಅಸತ್ಯದಿಂದ ಕೂಡಿಲ್ಲ. ಪೂರ್ವಾಗ್ರಹಪೀಡಿತವಾಗಿಲ್ಲ. ಅದು ವಾಸ್ತವಕ್ಕೆ ಹಿಡಿದ ಕನ್ನಡಿಯಂತಿದೆ. ಹಾಗೆ ನೋಡಿದರೆ, ಗುಜರಾತಿನ ಬಗ್ಗೆ ಲೇಖಕಿ ಹೇಳಿರುವುದು ಕಡಿಮೆಯೆ. ಅಲ್ಲಿಯ ನರಮೇಧ ಮತ್ತು ಮಹಿಳೆಯರ ಮೇಲಿನ ಭಯಾನಕ ಅತ್ಯಾಚಾರ ಮಧ್ಯಯುಗದ ಯಾವುದೇ ಧರ್ಮಯುದ್ಧ, ಕ್ರುಸೇಡ್ ಮತ್ತು ಜಿಹಾದ್ಗೆ ಕಡಿಮೆಯಿಲ್ಲ. ಮನುಷ್ಯತ್ವದಲ್ಲಿ ನಂಬಿಕೆ ಇರುವವರಿಗೆ ಆಕ್ರೋಶ ಉಂಟಾಗುವಂತಹ ಸನ್ನಿವೇಶದ ಚಿತ್ರಣವನ್ನು ಲೇಖಕಿ ಅತ್ಯಂತ ಸಹನೆಯಿಂದ ಉಲ್ಲೇಖಿಸುತ್ತಾರೆ. ಕೋಮುವಾದದ ವಿವಿಧ ಮುಖಗಳನ್ನು ಮತ್ತು ಆಯಾಮಗಳನ್ನು ಚರ್ಚಿಸುತ್ತಾರೆ. ಆದರೆ, ಲೇಖನದ ಆರಂಭದಲ್ಲಿ ಫಣಿರಾಜರವರು ಕೋಮುವಾದದ ಕುರಿತು ಹೇಳಿದ ಮಾತಿನ ಒಂದು ಉಲ್ಲೇಖವಿದೆ. ಅದು …ಬಹುಸಂಖ್ಯಾತರ ಸಂಸ್ಕೃತಿಗೆ ಅಲ್ಪಸಂಖ್ಯಾತರು ಹೊರಗಿನವರು ಎಂದು ವಾದಿಸಿ ದ್ವೇಷ ತಿರಸ್ಕಾರಗಳನ್ನು ಬೆಳೆಸುವುದೇ ಕೋಮುವಾದ – ಕೋಮೂವಾದಕ್ಕೆ ಇಂತಹ ಸರಳ ವ್ಯಾಖ್ಯೆ ಸರಿಯಲ್ಲ. ಫಣಿರಾಜ್ ಮತ್ತು ಜಿ. ರಾಜಶೇಖರ್ ಕೋಮುವಾದವನ್ನು ವಿರೋಧಿಸುವಲ್ಲಿ ನಿಷ್ಪಕ್ಷಪಾತಿಗಳಾಗಿರದೆ, ಒಂದು ಕೋಮಿನ ಕೋಮುವಾದದ ಕುರಿತು ಮೌನವಹಿಸುವುದು ಅಥವಾ ಅಂತಹ ಸಂಸ್ಥೆಗಳೊಂದಿಗೆ ಸಂಬಂಧವನ್ನಿರಿಸಿಕೊಳ್ಳುವುದು ನಿಜಕ್ಕೂ ಆಕ್ಷೇಪಾರ್ಹ. ಆದರೆ ಸಬಿಹಾರವರ ಬರವಣಿಗೆ ಈ ನಿಟ್ಟಿನಲ್ಲಿ ದೋಷಮುಕ್ತವಾಗಿದೆ. ಅವರು ಪಾಕಿಸ್ತಾನ, ಬಾಂಗ್ಲಾ ಮತ್ತು ತಸ್ಲೀಮಾ ನಜರೀನ್ ಅವರನ್ನು ಉಲ್ಲೇಖಿಸುತ್ತಾ ನೆರೆಯ ದೇಶಗಳಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲಿನ ದೌರ್ಜನ್ಯದ ಕುರಿತೂ ಹೇಳುತ್ತಾರೆ. ಸಬಿಹಾರವರ ಲೇಖನ ಈ ನಿಟ್ಟಿನಲ್ಲಿ ವಾಸ್ತವವಾದೀ, ಮಾನವತಾವಾದೀ ಬರವಣಿಗೆಯೆಂಬುದು ನಿಸ್ಸಂಶಯ.
ಬೆಳೆ ಬೆಳೆಸಿದರಷ್ಟೆ ನೆಲದ ಒಡೆತನ
– ಟಿ.ಎಂ.ಕೃಷ್ಣ
ಆಹಾರ ಧಾನ್ಯಗಳ ಬೆಲೆ ಒಂದೇ ಸಮನೆ ಗಗನಕ್ಕೇರುತ್ತಲೇ ಇದೆ. ಜನಸಾಮಾನ್ಯರೇನು- ಅಷ್ಟೋ ಇಷ್ಟೋ ಸ್ಥಿತಿವಂತರೇ ಜೀವನ ನಿರ್ವಹಿಸಲು ಸಾಧ್ಯವಾಗದಂತಾಗಿದೆ. ಕೆಳ, ಮದ್ಯಮ ವರ್ಗದವರು ತರಗೆಲೆಗಳಂತೆ ತತ್ತರಿಸತೊಡಗಿದ್ದಾರೆ. ಮುಂದುವರಿದ(?) ಮನುಷ್ಯನ ಅಗತ್ಯಗಳು ಅಗಣಿತವಾಗಿರಬಹುದಾದರೂ, ಮೂಲಭೂತ ಅಗತ್ಯವಾದ ಅನ್ನಾಹಾರಗಳ ಲಭ್ಯತೆ ಕಠಿಣವಾದರೆ ಏನಿದ್ದರೂ, ಯಾವುದೇ ತಂತ್ರಜ್ಞಾನವಿದ್ದರೂ ಅವೆಲ್ಲಾ ಅಪ್ರಸ್ತುತವಾಗಿಬಿಡುತ್ತವೆ. (ಚಿನ್ನದ ಕತ್ತಿ ಇದೆಯೆಂದು ಕುತ್ತಿಗೆ ಕೊಯ್ದುಕೊಳ್ಳಲಾದೀತೆ?)
ಅಗತ್ಯವಸ್ತುಗಳು ಕೈಗೆಟುಕದಂತಾಗಿರುವ ಈ ಸಂದರ್ಭದಲ್ಲಿ ಸರ್ಕಾರದ ಕಡೆ ಕೈ ತೋರಿಸುವುದು ಅನಿವಾರ್ಯವಾದರೂ, ಆಯಕಟ್ಟಿನ ಜಾಗಕ್ಕೆ ಕೈತೋರಿಸದಿರುವುದು ನಮ್ಮಲ್ಲಿನ ಪ್ರಜ್ಞಾವಂತರ ಪ್ರಜ್ಞೆಯ ಅವನತಿಯನ್ನು ಸೂಚಿಸುತ್ತದೆ. ಕುರಿಗಳು ಹಳ್ಳಕ್ಕೆ ಬಿದ್ದಂತೆ ಪ್ರತಿಯೊಬ್ಬರೂ ಪ್ರಸ್ತಾಪಿಸುತ್ತಿರುವುದು ಮಳೆ ಅಭಾವ, ಬೆಳೆನಷ್ಟ, ವ್ಯಾಪಾರಿಗಳು ಸೃಷ್ಟಿಸುತ್ತಿರುವ ಕೃತಕ ಅಭಾವ, ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ, ಜನಸಂಖ್ಯೆಯ ಹೆಚ್ಚಳ ಇತ್ಯಾದಿ…ಈ ಎಲ್ಲ ಕಾರಣಗಳಿಗೆ ನಿದರ್ಶನಗಳಿದ್ದರೂ, ಅವೆಲ್ಲಾ ತಾತ್ಕಾಲಿಕ ಅವ್ಯವಸ್ಥೆಗಳೇ ಹೊರತು ಮೂಲಭೂತ ಸತ್ಯಗಳಲ್ಲವೇ ಅಲ್ಲ.
ಕಾಲದ ಕನ್ನಡಿ: ನೈತಿಕತೆಗೆ ಇ೦ಬು ನೀಡದ,ಬುಧ್ಧಿ ಬಲಿತಿರದ ರಾಜಕಾರಣವೆ೦ದರೆ ಇದೇ!
– ಕೆ.ಎಸ್ ರಾಘವೇಂದ್ರ ನಾವಡ
ಸುಮಾರು ೩ ತಿ೦ಗಳಾಯಿತು.. ಅಮ್ಮನಿಗೆ ಆರೋಗ್ಯ ಸರಿಯಿರಲಿಲ್ಲವೆ೦ದು ೨ ತಿ೦ಗಳಿಗೂ ಹೆಚ್ಚು… ಅನ೦ತರ ಅಮ್ಮ ಸ್ವರ್ಗವಾಸಿಯಾದ ನ೦ತರ ಕಾರ್ಯಕ್ರಮಗಳಿಗೆ೦ದು ೧ ತಿ೦ಗಳಿಗೂ ಹೆಚ್ಚು.. ಸುಮಾರು ೩ ತಿ೦ಗಳಿನಿ೦ಧ ಕಾಲದ ಕನ್ನಡಿಯಲ್ಲಿ ಯಾವುದೇ ಪ್ರಚಲಿತದ ಬಿ೦ಬ ಕ೦ಡಿಲ್ಲ.. ಏನು ಬರೆಯೋದಪ್ಪಾ? ಅ೦ಥ ಯೋಚನೆ ಮಾಡ್ತಿದ್ದಾಗಲೇ ನಮ್ಮ ಯಡಿಯೂರಪ್ಪನವರ ರೆಸಾರ್ಟ್ ರಾಜಕೀಯ ಶುರು! ಒಳ್ಳೆಯ ವಿಷಯಕ್ಕಾಗಿ ಒದ್ದಾಡ್ತಿದ್ದ ನನಗೆ … ಈಗ ಈ ಲೇಖನ..
ಕಾಲದ ಕನ್ನಡಿಗೆ ಅನಿಸುವುದಿಷ್ಟೇ.. ಮು೦ದೆ೦ದೂ ಭಾ.ಜ.ಪಾ. ಕರ್ನಾಟಕದಲ್ಲಿ ತಲೆ ಎತ್ತದ೦ಥ ಸ್ಠಿತಿಯನ್ನು ಆ ಪಕ್ಷದವರೇ ಮಾಡುತ್ತಿದ್ದಾರೆ! ಬುಧ್ಧಿವ೦ತರ ಪಕ್ಷ.. ಎಲ್ಲರೂ ಆದರು.. ಇವರನ್ನೊಮ್ಮೆ ನೋಡೋಣ.. ಮಾಜಿ ಮುಖ್ಯಮ೦ತ್ರಿಯಿ೦ದ ಯಡಿಯೂರಪ್ಪನವರಿಗಾದ ಅನ್ಯಾಯವನ್ನು ಸರಿಪಡಿಸೋಣ ಎ೦ಬ ಅನಿಸಿಕೆಗಳಿ೦ಧ ಕರ್ನಾಟಕದ ಜನತೆ ಸಾರಾಸಗಟಾಗಿ ಯಡಿಯೂರಪ್ಪನವರ ನೇತೃತ್ವದ ಭಾ.ಜ.ಪಾ.ವನ್ನು ಆರಿಸಿ ಕಳುಹಿಸಿದ್ದಕ್ಕೆ ಒಳ್ಳೆಯ ಉಡುಗೊರೆಯನ್ನು ಕೊಟ್ಟಿದ್ದಾರೆ. ಹತ್ತಾರು ಉಪಚುನಾವಣೆಗಳು.. ಒ೦ದರ ಮೇಲೊ೦ದರ೦ತಿನ ಸಚಿವರ ಭಾನಗಡಿಗಳು.. ಯಡಿಯೂರಪ್ಪನವರ ಜೈಲು ವಾಸ.. ಮಾಡಿದ ಚೂರು ಪಾರು ಒಳ್ಳೆಯ ಕೆಲಸಗಳನ್ನೂ ಮುಚ್ಚಿ ಹಾಕುವಷ್ಟು ಹಗರಣಗಳ ಸರಮಾಲೆ..!
ಇನ್ನೇನೂ ಬಾಕಿ ಉಳಿದಿಲ್ಲ.. ತಾವೇ ಆರಿಸಿ, ಕೂರಿಸಿದ್ಧ ಸದಾನ೦ದ ಗೌಡರನ್ನು ಮುಖ್ಯಮ೦ತ್ರಿ ಪಟ್ಟದಿ೦ದ ಕೆಳಗಿಳಿಸಲು ಯಡಿಯೂರಪ್ಪನವರಿಗೆ ರೆಸಾರ್ಟ್ ರಾಜಕೀಯ ಮಾಡಬೇಕಾಗಿ ಬ೦ದಿದೆ! “ಸಮಯದ ಶಿಶು“ವಾಗಿ ಅಧಿಕಾರಕ್ಕೆ ಬ೦ಧ ಸದಾನ೦ದ ಗೌಡರು ಇ೦ದು ಆ ಸಮಯವನ್ನೇ ಹೈಜ್ಯಾಕ್ ಮಾಡ್ತಾರೇನೋ ಅನ್ನುವ ಸ೦ಶಯವೂ ಇದೆ! ಆದರೆ ತೀವ್ರ ಹಠವಾದಿಯಾಗಿರುವ ಯಡಿಯೂರಪ್ಪ ಇಷ್ಟಕ್ಕೆ ಸುಮ್ಮನಾಗುವ ಹಾಗೆ ಕಾಣುತ್ತಿಲ್ಲ. ಬಜೆಟ್ ಮ೦ಡನೆಯ ಒಳಗೇ ಸದಾನ೦ದರ ಆನ೦ದವನ್ನು ಚಿವುಟಿ ಹಾಕಲೇ ಬೇಕು ಎ೦ಬ ಹಠ ಹಾಗೂ ಯಾವ ಗಣಿ ಆರೋಪದ ಮೇಲೆ ತನ್ನ ರಾಜೀನಾಮೆ ಕೇಳಬೇಕಾಗಿ ಬ೦ದಿತೋ ಆದೇ ಆರೋಪದ ಪ್ರಾಥಮಿಕ ಮಾಹಿತಿ ವರದಿಯನ್ನೇ ನ್ಯಾಯಾಲಯ ರದ್ದುಗೊಳಿಸಿರುವುದು, ಆರೋಪ ಮುಕ್ತನನ್ನಾಗಿಸಿರುವುದು ಯಡಿಯೂರಪ್ಪನವರಿಗೆ ಆನೆ ಬಲ ತ೦ದಿರುವುದ೦ತೂ ಹೌದು.
ತುಂಬೆ ನಿನ್ನ ಮಹಿಮೆ ಏನೆಂಬೆ …
-ಅನಿತಾ ನರೇಶ್ ಮಂಚಿ
ವಾಮನನಲ್ಲಿ ಬಲಿ ಚಕ್ರವರ್ತಿ ‘ ನಾನಿನ್ನು ಭೂಮಿಗೆ ಬರುವ ದಿನ ಯಾವುದು ‘ಎಂದು ಕೇಳಿದಾಗ ವಾಮನನ ಉತ್ತರದಲ್ಲಿ’ ತುಂಬೆಯ ಮರದಡಿ ಮಕ್ಕಳು
ಕನ್ನಡ ವಿಕಿಪೀಡಿಯ: ಅನುವಾದಗೊಂಡ ಲೇಖನಗಳ ಸಂವರ್ಧನಾ ಯೋಜನೆ
– ಓಂ ಶಿವಪ್ರಕಾಶ್
ಆತ್ಮೀಯ ಕನ್ನಡ ವಿಕಿಪೀಡಿಯ ಗೆಳೆಯರೆ,ಏಕೆ ಹೀಗೆ ನಮ್ಮ ನಡುವೆ ಹಮ್ಮು ಬೆಳೆದಿದೆ ?
ಸ್ವಲ್ಪ ಯೋಚಿಸಬೇಕಾಸದ ಸಾಮಾನ್ಯ ಹಾಗೂ ಉತ್ತಮ ಪ್ರಶ್ನೆ! ನಾವು ಬಡಮರ್ಜಿಯಲ್ಲಿದ್ದಾಗ, ನಮ್ಮ ಕುದುರೆ ಸೋತಾಗ, ನಾವು ಪರೀಕ್ಷೆಗಳಲ್ಲಿ ಉತ್ತೀರ್ಣರಾಗದಾಗ, ನಾವು ಚುನಾವಣೆಗಳಲ್ಲಿ ಸೋತಾಗ, ನಮಗೆ ಉದ್ಯೋಗ ಸಿಗದಾಗ, ಸಿಕ್ಕ ಉದ್ಯೋಗ ಕಳೆದುಕೊಂಡಾಗ, ಯಾವುದೋ ರೀತಿಯಲ್ಲಿ ಶಾರೀರಿಕ ಅಸೌಖ್ಯವುಂಟಾದಾಗ, ಅಸಹಾಯ ಸ್ಥಿತಿ ಬಂದೊದಗಿದಾಗ, ಹೊರಲಾರದ ಸಂಸಾರದ ಭಾರ ಜಾಸ್ತಿಯಾದಾಗ, ಶಾರೀರಿಕ/ಮಾನಸಿಕ ವಿಕಲ ಮಕ್ಕಳು ಅಕಸ್ಮಾತ್ ಜನಿಸಿಬಿಟ್ಟಾಗ….ಹೀಗೇ ಹಲವಾರು ಸಮಯಗಳಲ್ಲಿ ನಾವು ಎಲ್ಲರೊಳಗೊಂದು ಎಂಬ ರೀತಿ ಇದ್ದುಬಿಡುತ್ತೇವೆ.
ನಾನು ನೋಡುತ್ತಲೇ ಬಂದಿದ್ದೇನೆ. ಊರಲ್ಲಿ ಕನ್ನಡ ಶಾಲೆಯ ಒಬ್ಬ ಬಡ ಮಾಸ್ತರರಿದ್ದರು. ಒಬ್ಬರ ದುಡಿಮೆ, ಅಂದಿನಕಾಲಕ್ಕೆ ಸಂಬಳವೂ ಅಷ್ಟೆಲ್ಲಾ ಇರಲಿಲ್ಲ. ನಾಲ್ಕು ಮಕ್ಕಳು ಇರುವ ಆರುಮಂದಿಯ ಕುಟುಂಬ. ಮಾಸ್ತರರ ಅಮ್ಮನ ಮುದುಕಿಯೊಬ್ಬಳೂ ಸೇರಿದಂತೇ ಲೆಕ್ಕಹಾಕಿದರೆ ಏಳುಮಂದಿ. ಎಲ್ಲಾ ನಡೆಯಬೇಕಲ್ಲ? ಅಗೆಲ್ಲಾ ಊರ ಜನರೊಟ್ಟಿಗೆ ಸಾದಾ ಸೀದಾ ಇದ್ದ ಮಾಸ್ತರರು ಎಲ್ಲರೊಂದಿಗೂ ಬೆರೆತು ಜನಪ್ರಿಯರಾಗಿದ್ದರು. ಮಾಸ್ತರಿಗೆ ವರ್ಗವಾಯ್ತು, ಬೇರೇ ಊರಿಗೆ ತೆರಳಿದರು, ಮಕ್ಕಳು ಬೆಳೆದವು. ಈಗ ಮಾಸ್ತರರ ಮಕ್ಕಳು ಎಮ್.ಎನ್.ಸಿ ಕಂಪನಿಯಲ್ಲಿ ಕೆಲಸಮಾಡುತ್ತಾರೆ, ಮಾಸ್ತರರಿಗೆ ನಿವೃತ್ತಿಯಾದರೂ ಆಗ ಸಿಕ್ಕ ಹಣದಲ್ಲಿ ಮನೆ ಕಟ್ಟಿದ್ದಾರೆ, ಮಕ್ಕಳು ಅಪ್ಪನಿಗೆ ಕಾರು ಕೊಡಿಸಿದ್ದಾರೆ! ಅಂತೂ ಮಾಸ್ತರರು ಈಗ ಬಡತನ ಎಂಬ ಮಟ್ಟದಲ್ಲಿಲ್ಲ. ಅದಕ್ಕೆ ತಕ್ಕಹಾಗೇ ಮಾಸ್ತರರು ಯಾರೊಡನೆಯೂ ಬೆರೆಯುವುದೂ ಇಲ್ಲ; ತಮ್ಮ ಸರ್ಕಲ್ಲೇ ಬೇರೆ ಎನ್ನುವ ತಂತ್ರಾಂಶ ತಂತ್ರಂಜ್ಞರಂತೇ ಮಾಸ್ತರರಿಗೆ! ’ಅಲ್ಪನಿಗೆ ಐಶ್ವರ್ಯ ಬಂದರೆ ತಿಂಗಳಬೆಳಕಲ್ಲೂ ಕೊಡೆ ಹಿಡಿದನಂತೆ’ ಎಂಬ ಗಾದೆ ಇದೆಯಲ್ಲಾ ಅದೇ ರೀತಿ ಮಾಸ್ತರು ೨ ಫರ್ಲಾಂಗು ದೂರ ಹೋಗುವುದಾದರೂ ಕಾರು ಬೇಕೇ ಬೇಕು. ಬೆಳೆದುನಿಂತ ಮಗಳನ್ನು ಸಾಮಾನ್ಯದ ಯಾರಿಗೂ ಮದುವೆಮಾಡಲು ಸಿದ್ಧರಿಲ್ಲ. ಅಮೇರಿಕಾದಲ್ಲಿರುವ ವ್ಯಕ್ತಿಗಾಗಿ ಹುಡುಕುತ್ತಿದ್ದಾರೆ.
ಯಹ್ ದಿಲ್ಲಿ ಹೇ ದಿಲ್ವಾಲೊಂಕಿ” ಎಂಬುದನ್ನು ಆತ ನನಗೆ ತೋರಿಸಿಕೊಟ್ಟಿದ್ದ
ಸುಪ್ರೀಂ ಕೋರ್ಟ್ನ ಮುಂದೆ ಇಂದು ನಮ್ಮ ರಾಜ್ಯಕ್ಕೆ ಸಂಬಂಧಪಟ್ಟ ಯಾವುದೇ ಪ್ರಕರಣಗಳು ಇಲ್ಲ ಮತ್ತು ಎಂದು ಖಾತ್ರಿ ಮಾಡಿಕೊಂಡ ಬಳಿಕ ಕಚೇರಿಗೆ ಆರಾಮವಾಗಿಯೇ ಹೊರಟಿದ್ದೆ. ಅಪಾರ್ಟ್ಮೆಂಟ್ನಿಂದ ಹೊರ ಬರುತ್ತಲೆ ರಿಕ್ಷಾವೊಂದು ಬಂತು. ಅದನ್ನು ಏರಿ ಆತ್ಮೀಯರಿಗೆ ಮೆಸೇಜ್ ಕಳಿಸುವ ನನ್ನ ನಿತ್ಯ ಪೂಜೆಯನ್ನು ಶುರು ಮಾಡಿಕೊಂಡೆ. ನಮ್ಮಲ್ಲಿಂದ ಕೌಶಂಬಿ ಮೆಟ್ರೋ ಸ್ಟೇಶನ್ಗೆ ೧೫ ನಿಮಿಷಗಳ ಪ್ರಯಾಣ (ಟ್ರಾಫಿಕ್ ಇಲ್ಲದೇ ಹೋದರೆ). ಮೆಟ್ರೋ ಸ್ಟೇಶನ್ನ ಬಳಿ ರಿಕ್ಷಾ ಇಳಿದು ಹಣ ಕೊಡೋಣ ಎಂದು ಕಿಸೆಗೆ ಕೈ ಹಾಕಿದರೆ ಪರ್ಸ್ ಇಲ್ಲ. ತಕ್ಷಣವೇ ಶಾಕ್ ಹೊಡೆದಂತೆ ಆಯಿತು. ಇದೀಗ ಕೆಲಸ ಕೆಟ್ಟಿತ್ತು ಅಂತ ಅಂದು ಕೊಂಡರು ವಿಚಲಿತನಾಗಲಿಲ್ಲ. ಪರ್ಸ್ ಮನೆಯಲ್ಲೆ ಬಿಟ್ಟಿದ್ದೇನಾ ಅಥವಾ ಪಿಕ್ ಪಾಕೆಟ್ ಅಯಿತಾ ಅಥವಾ ಎಲ್ಲದರೂ ಬಿತ್ತಾ ಎಂಬ ಗೊಂದಲ ತಲೆಯಲ್ಲಿ ಫ್ಯಾನ್ನಂತೆ ತಿರುಗುತ್ತಿತ್ತು. ಹಾಗಂತ ಮೊದಲ ಕಾರಣವನ್ನು ಈ ರಿಕ್ಷಾ ಡ್ರೈವರ್ ಜೊತೆ ಹೇಳುವ ಹಾಗಿಲ್ಲ. ಹೇಳಿದ್ದೆ ಆದರೆ ಅವನು ಯಾವ ಭಾಷೆ ಪ್ರಯೋಗ ಮಾಡುತ್ತಾನೆ ಅನ್ನುವುದು ತಕ್ಷಣವೆ ಫ್ಲಾಶ್ ಆಗಿ ಹೋಗಿತ್ತು. ಇನ್ನು ಯಾರಾದರೂ ಪಿಕ್ ಪಾಕೆಟ್ ಮಾಡಿದ್ದಾರೆ ಎಂದು ಸುಮ್ಮನೆ ಹೇಳುವುದು ಸರಿಯಲ್ಲ. ಏನು ಮಾಡುವುದು ಅಂದು ಕೊಂಡು ತಕ್ಷಣವೇ ಪರ್ಸ್ ಹುಡುಕುವ ರೀತಿ ಮಾಡಿದೆ. ಪರ್ಸ್ ಸಿಗಲೇ ಇಲ್ಲ. ನಾನು ಸಾಮಾನ್ಯವಾಗಿ ನನ್ನ ಪ್ಯಾಂಟ್ನ ಮುಂದಿನ ಕಿಸೆಯಲ್ಲಿ ನೂರಿನ್ನೂರು ರೂಪಾಯಿ ಇಟ್ಟುಕೊಂಡಿರುತ್ತೇನೆ. ಆದರೆ ಇಂದು ಆ ರೀತಿಯೂ ಮಾಡಿಲ್ಲ ಎಂಬುದನ್ನು ಕಿಸೆಗೆ ಕೈ ಹಾಕಿ ಖಾತ್ರಿ ಪಡಿಸಿಕೊಂಡೆ. ಸರಿ, ರಿಕ್ಷಾದವನಿಗೆ ನನ್ನ ಸ್ಥಿತಿ ಅರ್ಥವಾಯಿತು. ಅವನು ಏನೂ ಹೇಳಲಿಲ್ಲ. ನನ್ನ ಪುಣ್ಯ. ನನ್ನನ್ನು ಅಲ್ಲೇ ಬಿಟ್ಟು ಮುಂದೆ ಹೋದ. ನನ್ನ ಪ್ರಕಾರ ಅವನು ಮಾಡಿದ ದೊಡ್ಡ ಪುಣ್ಯದ ಕೆಲಸ ಅದೇ. ಮತ್ತಷ್ಟು ಓದು 
ಇದು ಭರತವರ್ಷ : ಆ ಹೆಣ್ಣು ಮಗಳ ಹೋರಾಟಕ್ಕೆ ಅಂತ್ಯ ಇದೆಯಾ???
– ರಾಕೇಶ್ ಶೆಟ್ಟಿ








