ಮಾಧ್ಯಮದವರು ನಡೆದುಕೊಂಡ ರೀತಿ ಸರಿಯೇ…?
-ಸತೀಶ್ ಡಿ. ಆರ್. ರಾಮನಗರ
ಟೀವಿ ವಾಹಿನಿಯವರು ನಡೆದುಕೊಂಡ ರೀತಿಯ ಬಗ್ಗೆ ಇಷ್ಟೊಂದು ಬಹು ಪರಾಕ್ ಹೇಳುತಿದ್ದೀರಲ್ಲ. ನಿನ್ನೆ ನಡೆದ ಘಟನೆಗಳ ಬಗ್ಗೆ ಅದರ ಹಿನ್ನೆಲೆಯನ್ನು ಸ್ವಲ್ಪವಾದರೂ ಮನುಷ್ಯತ್ವದಿಂದ ಯೋಚಿಸಿದ್ದೀರ. ವಸ್ತು ನಿಷ್ಠೆ ಮೆರೆವ ಮಾಧ್ಯಮದವರು ನಿನ್ನೆ ಮಾಡಿದ್ದು ಏನು. ಪೋಲೀಸಿನವರು ಕೋರ್ಟ್ ಹಾಲ್ ಗಳಿಗೆ ನುಗ್ಗಿ ವಕೀಲರನ್ನು ಮನ ಬಂದಂತೆ ತಳಿಸುತಿದ್ದರೆ ಮಾಧ್ಯಮದವರು ಅದನ್ನು ಏಕೆ ಪ್ರಸಾರ ಮಾಡಲಿಲ್ಲ. ವಕೀಲ ಸಿಂಬಲ್ ಇರುವ ಕಾರು ಬೈಕ್ಗಳನ್ನು ಎಲ್ಲರ ಮುಂದೆಯೇ ಸುಡುತಿದ್ದ ಪೋಲೀಸಿನವರ ಕೃತ್ಯವನ್ನು ಏಕೆ ಮಾಧ್ಯಮದವರು ಪ್ರಸಾರ ಮಾಡಲಿಲ್ಲ. ಮಾರಣಾಂತಿಕ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿರುವ ವಕೀಲರನ್ನು ಯಾವೊಬ್ಬ ಮಾಧ್ಯಮದವರು ಏಕೆ ತೋರಿಸಲಿಲ್ಲ. ಮೊದಲು ಮಾಧ್ಯಮದವರೇ ಪೋಲೀಸೀವರಿಗೆ ಧಿಕ್ಕಾರ ಕೂಗುತಿದ್ದವರು, ರೆಡ್ಡಿ ಬೆಂಬಲಿಗರೆಂದು ಬಂದಿದ್ದ ಕರಿ ಕೋಟು ದರಿಸಿದ್ದ ಕೆಲವು ವಕೀಲರು ತೆಗೆದ ಜಗಳಕ್ಕೆ ಇಡೀ ವಕೀಲ ಸಮುದಾಯವನ್ನು ಭಯೋತ್ಪಾದಕರ ರೀತಿ ಚಿತ್ರಿಸುತಿದ್ದೀರಲ್ಲ ಏಕೆ. ಬಾರ್ ಅಸೋಸಿಯೇಶನ್, ಕ್ಯಾಂಟೀನ್, ನ್ಯಾಯಾಲಯದ ಒಳ ಹೊಕ್ಕು, ಕುಳಿತಿದ್ದ ವಕೀಲರನ್ನು ನಾಯಿಗೆ ಬದಿದಂತೆ ಬಡಿದು ರಕ್ತ ಹರಿಸಿದ್ದಾರಲ್ಲ ಪೋಲೀಸಿನವರು ಅವರ ಬಗ್ಗೆ ಏಕೆ ಮೌನವಾಗಿದ್ದೀರಿ.
” ಅನ್ಯಾಯವಾದಿಗಳ ಹುಟ್ಟಡಗಿ ಪ್ರಜಾ ಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲಿ”
-ಬನವಾಸಿ ಸೋಮಶೇಖರ್
ಕೆಲವು ಗೂಂಡಾ ವಕೀಲರುಗಳು ಪೂರ್ವಾಗ್ರಹ ಪೀಡಿತರಾಗಿ ಮಾಧ್ಯಮದವರು ಹಾಗೂ ಪೋಲೀಸರ ಮೇಲೆ ಅಮಾನವೀಯ ದೌರ್ಜನ್ಯ,ಹಲ್ಲೆ ನಡೆಸುವ ಮೂಲಕ ನಮ್ಮ ಪವಿತ್ರ ನ್ಯಾಯಾಂಗ ವ್ಯವಸ್ಥೆಗೆ ಅಕ್ಷರಶಃ ಚ್ಯುತಿ ತಂದರು.ಇವರು ತಮ್ಮನ್ನು ಏನೆಂದುಕೊಂಡಿರುವರೋ?
ಪ್ರಜಾಪ್ರಭುತ್ವದ ಸಾರ್ವಭೌಮ ಪರಮಾಧಿಕಾರದ ಉತ್ತುಂಗ ವ್ಯವಸ್ಥೆಯನ್ನು ಹೊಂದಿರುವ ಭಾರತೀಯ ಸಂವಿಧಾನದ ಆಶಯ,ಮೂಲೋದ್ಧೇಶ ಹಾಗೂ ನಿಯಮಗಳ ಮೇಲೆ ದಬ್ಬಾಳಿಕೆ ನಡೆಸಿರುವ ಈ ಅನ್ಯಾಯವಾದಿಗಳ ಹುಟ್ಟಡಗಲೇಬೇಕು.ಸಂವಿಧಾನದ 19 (1) ನೇ ವಿಧಿಗೆ ಕಳಂಕ ತಂದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡಿರುವ ಈ ವಿಕೃತ ಮನಸುಗಳ ಮರ್ಧನ ಆಗಲೇಬೇಕು.ನಮ್ಮ ಪರಂಪರೆಗೆ,ನ್ಯಾಯ ದೇವತೆಯ ಕಣ್ಣಿಗೆ ಮಣ್ಣೆರಚಿರುವ ಈ ಕೂಳರ ಅಟ್ಟಹಾಸದ ಹಿಂದಿನ ಪಟ್ಟಭದ್ರರ ಬಣ್ಣ ಬಯಲಾಗಿ ಪ್ರಜಾಪ್ರಭುವಿಗೆ ಸತ್ಯದರಿವು ಆಗಲೇಬೇಕು.ಮೌಲ್ಯಾಧಾರಿತ ನ್ಯಾಯವಾದಿಗಳ ಮನಸ್ಸನ್ನು ಘಾಸಿಗೊಳಿಸಿರುವ ಈ ಘಟನೆ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡುವ ಹುನ್ನಾರುವುಳ್ಳದ್ದು.ಇಂಥ ವಿಚಾರ ಹೀನ,ಬುದ್ಧಿ ಹೀನ,ಅವಿವೇಕಿ ಲಂಪಟರಿಗೆ ಕೈಕೊಳತೊಡಿಸಿ ಜೈಲಿಗಟ್ಟಲೇಬೇಕು.ಬುಡಮೇಲು ಕೃತ್ಯವೆಸಗುವ ಯಾರನ್ನೇ ಆಗಲಿ ರಕ್ಷಿಸುವ,ಹಿನ್ನೆಲೆಯಲ್ಲಿ ಆಶ್ರಯ ನೀಡುವ ಕಾರ್ಯ ಸರ್ವಥಾ ಸಲ್ಲದು.ನಮ್ಮ ಶ್ರೀಮಂತ ಸಂಸ್ಕ್ರತಿ,ಪರಂಪರೆ,ಜನ ಜೀವನ,ನ್ಯಾಯ-ಅನ್ಯಾಯ ಇತ್ಯಾದಿ ಅಂಶಗಳ ಮೇಲೆ ಬೆಳಕು ಚೆಲ್ಲಿ ಸತ್ಯ ದರ್ಶನ ಮಾಡಿಸುವ ಮಾಧ್ಯಮ ಹಾಗೂ ಅದರ ಪ್ರತಿನಿಧಿಗಳ ಬದುಕಿಗೆ ಭದ್ರತೆ ಮತ್ತು ರಕ್ಷಣೆಯೇ ಇಲ್ಲವಾಗಿದೆ.ಜೀವದ ಹಂಗು ತೊರೆದು ಕಾವಲು ನಾಯಿಯಂತೆ ಕಾರ್ಯವೆಸಗುವ ಪತ್ರಕರ್ತರಿಗೆ,ಕಾನೂನು ಮತ್ತು ಸುವ್ಯವಸ್ಥೆಯ ಸೇವೆಗೈಯುವ ಪೊಲೀಸರಿಗೆ ಸೂಕ್ತ ರಕ್ಷಣೆ ನೀಡುವ ಹೊಣೆಗಾರಿಕೆ ಹಿಂದಿಗಿಂತಲೂ ಈಗ ಅತ್ಯಂತಯ ಅಗತ್ಯವಾಗಿದೆ ಎಂಬುದನ್ನು ದಿನಾಂಕ:02-03-2012 ರಂದು ಬೆಂಗಳೂರಿನ ನ್ಯಾಯ ದೇವತೆಯ ಅಂಗಳದಲ್ಲಿ ನಡೆದ ಅನ್ಯಾಯವಾದಿಗಳ ಕ್ರೌರ್ಯ,ಅನಾಗರಿಕ ಕೃತ್ಯ ಜೀವಂತ ಸಾಕ್ಷಿಯಾಗಿ ಕರ್ನಾಟಕ ಇತಿಹಾಸದ ಪುಟಗಳಲ್ಲಿ ದಾಖಲಾಯಿತು.
ವಿಶ್ವಕ್ಕೆ ಸೆಡ್ಡು ಹೊಡೆದು ನಿಂತಿರುವ ಇರಾನ್ ಎಂಬ ಪರಾಕ್ರಮಿ
ಒಂದು ಕಾಲದಲ್ಲಿ ಇರಾಕ್ ಅನ್ನೋ ರಾಷ್ಟ್ರ ಅಮೆರಿಕ ಸೇರಿದಂತೆ ಇಡೀ ವಿಶ್ವಕ್ಕೆ ಸವಾಲೆಸೆದಿತ್ತು. ಆದರೆ ಆ ದೇಶದ ಬತ್ತಳಿಕೆಯಲ್ಲಿ ಅಷ್ಟೊಂದು ಅಸ್ತ್ರಗಳಿರಲಿಲ್ಲ. ಆದರೆ ಇರಾನ್ ಅನ್ನೋ ದೇಶ ಇದೀಗ ಪೂರ್ಣ ಸಿದ್ದತೆಯ ಜೊತೆ ವಿಶ್ವದ ಮುಂದೆ ನಾನೆಷ್ಟು ಪರಾಕ್ರಮಿ ಅನ್ನೋದನ್ನ ತೋರಿಸಿದೆ.ನಿನ್ನೆ ಅಂದರೆ ಬುಧವಾರ ಇರಾನ್ ಪ್ರಥಮ ಬಾರಿಗೆ ದೇಶೀಯವಾಗಿ ನಿರ್ಮಿಸಿರುವ ಪರಮಾಣು ಇಂಧನದ ಸರಳುಗಳನ್ನು ಸಂಶೋಧನಾ ಸ್ಥಾವರಗಳಿಗೆ ಭರ್ತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ತನ್ನ ತಾಕತ್ತನ್ನ ಹಾಗು “ತನ್ನನ್ನ ಮುಟ್ಟಿದರೆ ತಟ್ಟದೆ ಬಿಡೆನು” ಅನ್ನೋ ಎಚ್ಚರಿಕೆಯನ್ನ ಅಮೆರಿಕ ಸೇರಿದಂತೆ ಎಲ್ಲಾ ಪಾಶ್ಚಾತ್ಯ ದೇಶಗಳಿಗೆ ರವಾನೆ ಮಾಡಿದೆ. ಟೆಹರಾನ್ ಉತ್ತರ ಭಾಗದಲ್ಲಿರುವ ಸ್ಥಾವರಕ್ಕೆ ಸಲಾಕೆಗಳನ್ನ ಅಳವಡಿಸುವ ಮೂಲಕ ಇರಾನ್ ಅಧ್ಯಕ್ಷ ಮಹಮೂದ್ ಅಹ್ಮದಿ ನೆಜಾದ್ ಚಾಲನೆ ನೀಡಿದರು. ಇದರ ಜೊತೆ ಮತ್ತೊಂದು ಆಘಾತ ನೀಡಿದ ಇರಾನ್ ಅದ್ಯಕ್ಷ ನೆದರ್ಲ್ಯಾಂಡ್ಸ್, ಸ್ಪೇನ್, ಇಟಲಿ, ಫ್ರಾನ್ಸ್, ಗ್ರೀಸ್, ಪೋರ್ಚುಗಲ್ಗಳಿಗೆ ಇಂಧನ ರಫ್ತು ನಿಲ್ಲಿಸಲಾಗಿದೆ ಎಂದು ಘೋಷಣೆ ಮಾಡುವ ಮೂಲಕ ತಾನು ಯುದ್ದಕ್ಕೆ ಸಿದ್ದ ಅನ್ನೋದನ್ನ ಪರೋಕ್ಷವಾಗಿ ಜಗತ್ತಿಗೆ ಎಚ್ಚರಿಕೆಯ ಗಂಟೆಯನ್ನ ಹೊಡೆದರು. ತದ ನಂತರ ಮಾತನಾಡಿದ ಈ ಪರಾಕ್ರಮಿ “ನಮ್ಮವಿರೋಧಿಗಳೇನು ಬಲಾಢ್ಯರಲ್ಲ. ಅವರ ದುರಹಂಕಾರಕ್ಕೆ ತಕ್ಕ ಪಾಠ ಕಲಿಸದೇ ಬಿಡುವುದಿಲ್ಲ” ಎಂದು ಅಮೆರಿಕಕ್ಕೆ ನೇರವಾಗಿ ಎಚ್ಚರಿಕೆ ನೀಡಿದರು.
ಆವೇಶಕ್ಕೆ ಬಲಿಯಾದ ಕಂದ
-ಸತೀಶ್ ರಾಮನಗರ
ಆಕೆ ತನ್ನ ಮಗನನ್ನೇ ಕೊಂದಿದ್ದಾಳೆ ಎಂಬುದನ್ನು ಕೇಳಿ ಒಂದು ಕ್ಷಣ ಆಶ್ಚರ್ಯಚಕಿತನಾದೆ. ಆಕೆ ತನ್ನ ಮಗನನ್ನು ಕೊಂದಿದ್ದಾಳೆ ಎಂದು ಆರೋಪಿಸಿ ಪೊಲೀಸ ಠಾಣೆಯಲ್ಲಿ ದೂರು ನೀಡಿರುವುದು ಆಕೆಯ ಪತಿಯೇ. ಈಗ ಆರೋಪಿತಳನ್ನು ಬೇರೆಯವರ ಮೂಲಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲು ಪ್ರಯತ್ನಿಸುತ್ತಿರುವುದು ಕೂಡ ಆಕೆಯ ಪತಿಯೇ.
ಮಾದಣ್ಣ ಹಾಗು ಗೌರಮ್ಮನವರದು ಇಬ್ಬರು ಮಕ್ಕಳೊಂದಿಗಿನ ಮಧ್ಯಮ ವರ್ಗದ ಸಂತೃಪ್ತಿ ಸಂಸಾರ. ಮಗ ರಮೇಶನಿಗೆ 5 ವರ್ಷ. ಮಗಳು ಲಕ್ಷ್ಮಿಗೆ 7 ವರ್ಷ. ಇಬ್ಬರ ಮುಖ್ಯ ಕಸುಬು ವ್ಯವಸಾಯ.
ನಾಳೆಯ ಲಕ್ಷ್ಮಿ ಪೂಜೆಗೆ ಮನೆಯಲ್ಲವನ್ನು ಶುಚಿಗೊಳಿಸಿ, ಗೌರಮ್ಮ ಗಂಡನ ದಾರಿ ಕಾಯುತಿದ್ದಳು. ಮಾದಣ್ಣ ಮನೆಗೆ ಬಂದ ತಕ್ಷಣವೇ, ನಾಳೆ ಹಬ್ಬಕ್ಕೆ ನನಗೆ ಸೀರೆ, ಮಕ್ಕಳಿಗೆ ಹೊಸ ಬಟ್ಟೆ ಜೊತೆಗೆ ಗಿರವಿ ಅಂಗಡಿಯಲ್ಲಿಟ್ಟಿರುವ, ನನ್ನ ಓಲೆ ಜುಮುಕಿ, ಮಾಂಗಲ್ಯ ಸರವನ್ನು ನಾಳೆ ಬೆಳಿಗ್ಗೆ ಬಿಡಿಸಿಕೊಂಡು ತರಲೇ ಬೇಕು ಎಂದು ತಾಕೀತು ಮಾಡಿದಳು. ಮಾದಣ್ಣ ಸರಿ ಎಂದು ತಲೆಯಲ್ಲಾಡಿಸಿ ಊಟ ಮಾಡಿ ಮಲಗಿದ.
ಮಾದಣ್ಣ, ಬೆಳಿಗ್ಗೆ ತನ್ನ ಬಳಿಯಲ್ಲಿದ್ದ ಚೂರು ಪಾರು ಹಣವನ್ನೆಲ್ಲ ಒಟ್ಟುಗೂಡಿಸಿ, ಆ ಹಣದಲ್ಲಿ ಮಕ್ಕಳಿಗೆ ಬಟ್ಟೆ ಹಾಗು ಹೆಂಡತಿಗೆ ಸೀರೆಯನ್ನು ತರಲಷ್ಟೇ ಸಾಧ್ಯವಾಯಿತು. ತನ್ನ ಗಂಡ ವಡವೆಗಳನ್ನು ಬಿಡಿಸಿಕೊಂಡು ತರುತ್ತಾನೆ ಎಂಬ ನಿರೀಕ್ಷೆಯಲ್ಲಿದ್ದ ಗೌರಮ್ಮ ನಿಗೆ ಬಟ್ಟೆಗಳನ್ನಷ್ಟೇ ನೋಡಿ ನಿರಾಶೆಯಾಯಿತು. ವಡವೆಗಳಿಲ್ಲದೆ ಲಕ್ಷ್ಮಿ ಪೂಜೆ ಹೇಗೆ ಮಾಡುವುದೆಂಬ ಚಿಂತಯಿಂದ ಮೌನವಾದಳು. ಅಕ್ಕ ಪಕ್ಕದ ಮನೆಯ ಹೆಂಗಸರನ್ನು ಸಂಜೆ ಮನೆಗೆ ಲಕ್ಷ್ಮಿ ಪೂಜೆಗೆ ಬರಲೇಬೇಕೆಂದು ಅದಾಗಲೇ ಹೇಳಿ ಬಂದಿದ್ದಳು. ಸಂಜೆ ಅವರುಗಳು ಮನೆಗೆ ಬಂದರೆ, ಯಾವ ಮುಖವನ್ನು ಹೊತ್ತುಕೊಂಡು ಪೂಜೆ ಮಾಡುತ್ತಿಲ್ಲ ಎಂದು ಹೇಳುವುದು ಎಂಬ ಪ್ರಶ್ನೆ ಅವಳನ್ನು ಕಾಡತೊಡಗಿತು. ಮತ್ತಷ್ಟು ಓದು 
ಐದು ತಿಂಗಳ ಹಸುಗೂಸಿಗೆ ಹೃದ್ರೋಗ, ಸಹಾಯ ಮಾಡಿ
– ದಟ್ಸ್ ಕನ್ನಡ.ಕಾಂ
ಬಡತನಕ್ಕೆ ನೂರಾರು ಕಷ್ಟಗಳು, ಆದರೆ ಎದುರಿಸುವ ತಾಕತ್ತು ಬೇಕು ಅಂತಾರೆ. ಈ ದಂಪತಿಗಳನ್ನು ನೋಡಿದರೆ ತಮ್ಮ ಮಗುವಿಗೆ ಇರುವ ಹೃದಯ ಸಂಬಂದಿ ಕಾಯಿಲೆಯನ್ನು ಎದುರಿಸುವ ತಾಕತ್ತು ಯಾವ ರೀತಿಯಲ್ಲೂ ಇಲ್ಲದಾಗಿ ಕಂಗಾಲಾಗಿದ್ದಾರೆ. ಕೇವಲ 5 ತಿಂಗಳ ಹಸುಗೂಸಿಗೆ ಚಿಕಿತ್ಸೆ ಕೊಡಿಸಲಾಗದೆ ಅಸಹಾಯಕರಾಗಿ ಕುಳಿತಿರುವ ಮನಮಿಡಿಯುವ ಕಥೆಯಿದು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಗರ ಗ್ರಾಮದ ಮುದ್ದಪ್ಪ ಹಾಗೂ ನಿರ್ಮಲಾ ದಂಪತಿಗಳ ಏಕೈಕ ಮಗ ಶ್ರೀನಿವಾಸ (5 ತಿಂಗಳು) ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದಾನೆ. ಜೀವನ ನಿರ್ವಹಣೆಗೆ ಕೂಲಿನಾಲಿ ಮಾಡಿಕೊಂಡಿರುವ ಈ ದಂಪತಿಗಳಿಗೆ ತಮ್ಮ ಮಗ ಜೀವ ಹಿಂಡುವ ರೋಗಕ್ಕೆ ತುತ್ತಾಗಿರುವುದು ಆಕಾಶ ಕಳಚಿ ಬಿದ್ದಂತಾಗಿದೆ.
ಹೊಟ್ಟೆಪಾಡಿಗಾಗಿ ಮುಂಬೈ, ಬೆಂಗಳೂರು, ಪೂನಾ, ಅಂತ ಊರೂರು ತಿರುಗುವ ಈ ದಂಪತಿಗಳಿಗೆ ವಾಸಕ್ಕೆ ಒಂದು ಯೋಗ್ಯ ಮನೆ ಹಾಗೂ ಉದ್ಯೋಗವಿಲ್ಲದೆ ಅಲೆಮಾರಿ ಜೀವನ ನಡೆಸುತ್ತಿದ್ದು, ಈಗ ಮಗುವಿನ ಕಾಯಿಲೆ ಅವರನ್ನು ಇನ್ನಷ್ಟು ಕುಸಿಯುವಂತೆ ಮಾಡಿದೆ. ಅಲೆಮಾರಿಗಳಾದ್ದರಿಂದ ರೇಶನ್ ಕಾರ್ಡ ಸೇರಿದಂತೆ ಸರ್ಕಾರದ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಹಾಗಾಗಿ ಉಚಿತ ವೈದ್ಯಕೀಯ ಸೌಕರ್ಯ ದೊರೆಯದೆ, ಹಣ ಹೊಂದಿಸಲು ಸಾಧ್ಯಾವಾಗದೆ ಕೈ ಸೋತು ಹೋಗಿವೆ ಅಂತಾರೆ ಮಗುವಿನ ತಂದೆ ಮುದ್ದಪ್ಪ.
ರುದ್ರಾಕ್ಷಿ
-ಸುಗುಣ ಮಹೇಶ್
“ರುದ್ರಾಕ್ಷಿ” ಶಿವನ ಸಂಕೇತವೆಂದೇ ನಾವುಗಳು ನಂಬುತ್ತೇವೆ. “ರುದ್ರ್ಚ ಮತ್ತು ಅಕ್ಷ” ಎಂಬ ಎರಡು ಶಬ್ಧಗಳಿಂದಾದ ರೂಪವೇ ರುದ್ರಾಕ್ಷಿ. “ರುದ್ರ” ಎಂದರೆ ಶಿವನ ಮತ್ತೊಂದು ಹೆಸರು. “ಅಕ್ಷ” ಎಂದರೆ ಶಿವನ ಕಣ್ಣೀರು. ಇಂತಹ ರುದ್ರಾಕ್ಷಿಯನ್ನು ಶಿವನೇ ಮೊಟ್ಟ ಮೊದಲು ಧರಿಸಿದನೆಂಬ ನಂಬಿಕೆ ಇದೆ ಆನಂತರ ಶಿವನ ಭಕ್ತರು, ಮುನಿಗಳು ರುದ್ರಾಕ್ಷಿಯನ್ನು ಧರಿಸಲು ಪ್ರಾರಂಭಿಸಿದರು. ಇದು ಆ ಶಿವನಿಂದಲೇ ಪ್ರಸಾದವಾಗಿ ಬಂದಿಹುದು ಇದನ್ನು ಧರಿಸುವುದರಿಂದ ನಮ್ಮಲ್ಲಿನ ಕಷ್ಟಗಳೆಲ್ಲವನ್ನು ನಿವಾರಣೆ ಮಾಡುವಂತಹ ಶಕ್ತಿ ಹೊಂದಿದೆ ಎಂದು ನಂಬಿಕೆಯನ್ನಿಟ್ಟಿದ್ದಾರೆ.ಪ್ರೀತಿ, ಸಿನಿಮಾ ಮತ್ತು ಫೇಸ್ ಬುಕ್
-ರಶ್ಮಿ ಕಾಸರಗೋಡು
ಶೀರ್ಷಿಕೆ ನೋಡಿದ ಕೂಡಲೇ ವಿಷಯ ಏನೂಂತಾ ನಿಮಗೆ ಗೊತ್ತಾಗಿರಬೇಕು ಅಲ್ವಾ? ಹೌದು ಇವತ್ತು ವ್ಯಾಲೆಂಟೈನ್ಸ್ ಡೇ(ಪ್ರೇಮಿಗಳ ದಿನ). ಪಾಶ್ಚಾತ್ಯರಿಂದ ಬಳುವಳಿಯಾಗಿ ಸಿಕ್ಕ ಈ ಆಚರಣೆ ಭಾರತದಲ್ಲಿ ಇಂದು ಗಣರಾಜ್ಯೋತ್ಸವ, ಶಿವರಾತ್ರಿಯಷ್ಟೇ ಪ್ರಾಮುಖ್ಯತೆಯನ್ನು ಪಡೆದಿದೆ ಎಂದರೆ ತಪ್ಪಾಗಲಾರದು. ಪ್ರೇಮಿಗಳ ದಿನ ಎಂದ ಕೂಡಲೇ ಪ್ರೀತಿಸಲು ಪ್ರತ್ಯೇಕ ದಿನ ಬೇಕಾ? ಅದೊಂದಿನ ಪ್ರೀತಿ ಮಾಡಿದರೆ ಸಾಕಾ? ಕೆಂಪು ಗುಲಾಬಿ ಕೊಟ್ಟು ಐ ಲವ್ ಯೂ ಅಂತಾ ಹೇಳಿ ಇಲ್ಲವೇ ದುಬಾರಿ ಗಿಫ್ಟ್, ಕಾರ್ಡ್ ಕೊಟ್ಟು ಪಾರ್ಕ್ ಸಿನಿಮಾ ಸುತ್ತಾಡಿ ವ್ಯಾಲೆಂಟೈನ್ಸ್ ಡೇ ಆಚರಿಸುವ ಪಾಶ್ಚಾತ್ಯರ ಪ್ರೇಮದ ಹುಚ್ಚು ಭಾರತೀಯರಾದ ನಮಗ್ಯಾಕೆ ಬೇಕು? ಎಂಬ ಪ್ರಶ್ನೆ ಪ್ರತೀ ವ್ಯಾಲೆಂಟೈನ್ಸ್ ಡೇ ದಿನದಂದು ಕೇಳಿ ಬರುತ್ತದೆ. ಈ ಬಗ್ಗೆ ಮಾಧ್ಯಮಗಳು ಸಾಕಷ್ಟು ಚರ್ಚೆಗಳನ್ನು ನಡೆಸಿದರೆ, ಕೆಲವೊಂದು ಸಂಘಟನೆಗಳು ವ್ಯಾಲೆಂಟೈನ್ಸ್ ಡೇ ವಿರೋಧಿಸಿ ಎಂಬ ಘೋಷಣೆಗಳನ್ನು ಕೂಗುತ್ತವೆ. ಆದರೂ ಭಾರತದಲ್ಲಿ ವ್ಯಾಲೆಂಟೈನ್ಸ್ ಆಚರಣೆ ಮುಂದುವರಿಯುತ್ತಲೇ ಇದೆ. ಯಾಕೆಂದರೆ ಇಂತಹ ಚರ್ಚೆ, ಪ್ರತಿಭಟನೆಗಳಿಂದಲೇ ವ್ಯಾಲೆಂಟೈನ್ಸ್ ಡೇ ಇನ್ನಷ್ಟು ಪ್ರಚಾರ ಗಿಟ್ಟಿಸಿಕೊಂಡಿವೆ ಎಂದರೆ ತಪ್ಪಾಗಲಾರದು.
ಪ್ರತೀವರ್ಷ ಫೆ.14 ಬಂತೆಂದರೆ ಸಾಕು…ಪಾರ್ಕ್, ಸಿನಿಮಾ ಹಾಲ್ ಎಲ್ಲೆಡೆಯೂ ಪ್ರೇಮಿಗಳ ಕಲರವ. ಪ್ರೀತಿಯ ಮೆಸೇಜ್್ಗಳಿಂದ ತುಂಬಿ ತುಳುಕುವ ಐನ್್ಬಾಕ್ಸ್, ಈ ಮೇಲ್, ಗಿಫ್ಟ್… ಬೆಳಗ್ಗಿನಿಂದ ರಾತ್ರಿ ವರೆಗಿನ ಸಮಯ ಪ್ರೇಮಮಯ!
ಮತ್ತಷ್ಟು ಓದು 
ಪ್ರೇಮಿಗಳ ದಿನಕ್ಕೆ ಎರಡು ಪತ್ರಗಳು
-ಮೋಹನ್ ಕೊಳ್ಳೇಗಾಲ
ಯಾಕೋ ಮನಸ್ಸಿಗೆ ಕಿಂಚಿತ್ತೂ ಸಮಧಾನವಿಲ್ಲ. ನಿನ್ನೆಯಿಂದಲೂ ತುಂಬಾ ಜ್ವರ ಇದೆ. ದೇಹ ಒಂದೇ ಸಮನೆ ಕಂಪಿಸುತ್ತಿದೆ. ನಿನ್ನದೇ ನೆನಪು. ಈ ಮನೆಯ ಪ್ರತಿ ಆಟಿಕೆ ಸಾಮಾನುಗಳು ನಿನ್ನ ಮುಖ ತೋರುತ್ತಿವೆ. ಪ್ರತೀ ವಸ್ತುವಿನಲ್ಲೂ ನಿನ್ನ ಆಸೆ, ಕಾತುರ, ಜಿಪುಣತನವೆದ್ದು ಕಾಣುತ್ತಿದೆ. ‘ನಿನ್ನ ಭಾವಚಿತ್ರ ನೋಡಿದಾಗ ದುಖ ಉಮ್ಮಳಿಸಿ ಉಮ್ಮಳಿಸಿ ಬಂದು ಸಾಂತ್ವನದ ಶಕ್ತಿ ಇಲ್ಲದೇ, ಕಣ್ಣೀರ ಕಟ್ಟೆ ಒಡೆದು ಸುಮ್ಮನೇ ಅಳುತ್ತೇನೆ. ನಿನ್ನೆ ಅಪ್ಪ ನಿನ್ನ ಬಾಲ್ಯದ ತುಂಟು ಹಾವಭಾವಗಳ ಫೋಟೋಗಳನ್ನು ನೋಡಿಕೊಂಡು ಅಳುತ್ತಿದ್ದರು. ನೀನು ಕಿಸಕ್ಕೆಂದು ನಕ್ಕಿದ್ದ ಒಂದು ಫೋಟೋ ನೋಡಿಕೊಂಡು ನಕ್ಕು ನಕ್ಕು ಕಣ್ಣೀರು ಸುರಿಸುತ್ತಿದ್ದರು. ನನ್ನ ಮಗಳಷ್ಟು ಚಂದ ಯಾರೂ ಇಲ್ಲ, ಅವಳ ನಗುವಿಗೆ ಸಾಟಿಯೇ ಇಲ್ಲ, ಅವಳ ಮಧುರ ಒಡನಾಡದಲ್ಲಿಯೇ ನಾನು ಇಷ್ಟು ದಿನ ಬದುಕಿದ್ದೆ ಎಂದು ಪೇಚುತ್ತಿದ್ದರು. ಇತ್ತೀಚೆಗಂತೂ ಕುಡಿತ, ಸಿಗರೇಟ್ ಸೇವನೆ ಜಾಸ್ತಿಯಾಗಿದೆ. ಪ್ರಶ್ನೆ ಮಾಡಲು ನೀನೇನು ನನ್ನ ಮಗಳೇ ಎಂದು ನನ್ನ ಮೇಲೆಯೇ ರೇಗುತ್ತಾರೆ. ಒಮ್ಮೊಮ್ಮೆ ನನ್ನ ತೊಡೆಯ ಮೇಲೆ ಮಲಗಿಕೊಂಡು, ನಿನ್ನನ್ನು ಓದಿಸಲು ಅವರು ಪಟ್ಟ ಶ್ರಮ, ಬ್ಯಾಂಕ್ ಲೋನ್, ನಿನ್ನನ್ನು ದೂರದ ಕಾಲೇಜಿಗೆ ಸೇರಿಸುವಾಗ ಅನುಭವಿಸಿದ ಒಳನೋವು, ಜೊತೆಗೆ ಆ ಕಾಲೇಜಿನಲ್ಲಿ ನಿನಗಾಗಿದ್ದ ತೊಂದರೆಗೆ ಪ್ರಾಚಾರ್ಯರೊಡನೆ ರೇಗಿದ್ದು, ಕಾರ್ ಮಾಡಿಕೊಂಡು ಬಂಧುಬಳಗವನ್ನೆಲ್ಲ ಕೂಡಿಸಿಕೊಂಡು ನಿನ್ನನ್ನು ನೋಡಲು ಪರಿಸೆ ಕಟ್ಟಿಕೊಂಡು ಬಂದಿದ್ದು, ಎಲ್ಲವನ್ನೂ ಸಾವಧಾನವಾಗಿ ಹೇಳಿ ನಿರಾಳರಾಗಿ, ಒಮ್ಮೆ ಬದುಕಿನ ಬೇಜವಾಬ್ದಾರಿಯೆಡೆಗೆ ನಗುತ್ತಾರೆ.
ಪ್ರೇಮಿಗಳ ದಿನ ಪೆಸೆಲ್
-ಕೋಮಲ್ ಕುಮಾರ್
ನಮ್ಮ ಸುಬ್ಬ, ಗೌಡಪ್ಪನ ಮಗಳು ರಂಗಮ್ಮಂಗೆ ಕಾಳು ಹಾಕ್ತಾ ಇದ್ದ. ಅದೂ ಒಂದು ಸ್ವಲ್ಪ ದಿನ ಆದ ಮೇಲೆ ತಿಂದಿತ್ತು. ಬಡ್ಡೆಐದ ಇದರ ಬಗ್ಗೆ ನಮಗೆ ಹೇಳೇ ಇರಲಿಲ್ಲ. ಬೆಳಗ್ಗೆನೇ ದೊಗಲೆ ಚೆಡ್ಡಿ, ಬನೀನು ಹಾಕ್ಕಂಡು ಗೌಡಪ್ಪನ ಮನೆಗೆ ಹೋಗೋನು. ಯಾಕ್ಲಾ ಅಂದ್ರೆ, ಪೇಪರ್ ಓದಿ, ಬುದ್ದಿ ಹೆಚ್ಚಿಸಿಕೊಳ್ಳೋಕೆ ಹೋಯ್ತೀನಿ ಅನ್ನೋನು. ಬಡ್ಡೆಐದ ಸಿಸುವಿಹಾರಕ್ಕೆ ಸಾಲೆಗೆ ಹೋಗೋದು ಬಿಟ್ಟಿದ್ದ. ಆಮ್ಯಾಕೆ ಗೊತ್ತಾತು ರಂಗಿ ಸಗಣಿ ಸಾರಿಸಿ ರಂಗೋಲಿ ಹಾಕೋ ಟೇಮಿಗೆ ಹೋಯ್ತಾನೆ ಅಂತ. ಏನು ಇವತ್ತು ಸಗಣಿ ಫ್ರೆಸ್ಸಾ ಅನ್ನೋನು. ಅದಕ್ಕೆ ಅದು, ಇಲ್ಲಾ ಓಲ್ಡ್ ಸ್ಟಾಕ್, ಯಾಕೆ ಪ್ರೆಷ್ ವಾಸನೆ ಬಂತಾ ಅನ್ನೋದು. ಏಥೂ. ಯಾಕೆ ಸಗಣಿ ನೀರಾಗೈತೆ, ಇಲ್ಲಾ ನಮ್ಮ ಹಸಾಕ್ಕೆ ಮೂರು ದಿನದಿಂದ ಬೇಧಿ ಅನ್ನೋದು ರಂಗಿ. ರಂಗೋಲಿ ಸಾನೇ ಸಂದಾಗಿ ಬಿಡ್ತಿಯಾ, ನಿಂಗೆ ಇಸ್ಣು ಚಕ್ರ ಬರೆಯಕ್ಕೆ ಬತ್ತದಾ, ಹೂಂ ಭೂ ಚಕ್ರ ಇಟ್ಟು ಅದರ ಮ್ಯಾಕೆ ರಂಗೋಲಿ ಹಾಕಿ ಬೆಂಕಿ ಇಟ್ಟರೆ ಇಸ್ಣು ಚಕ್ರ ಆಯ್ತದೆ ಅನ್ನೋದು. ಇದು ಇವುಗಳ ಸಂಭಾಷಣೆ. ಬಡ್ಡೆಐದ ಗೌಡಪ್ಪ, ಬತ್ತಿದಾಗೆನೇ ಪೇಪರ್ ಓದೋ ತರಾ ನಾಟಕ ಮಾಡೋನು. ಏನ್ಲಾ ಇವತ್ತಿನ ಇಸ್ಯಾ ಸುಬ್ಬ ಅಂದ್ರೆ, ಯಡೂರಪ್ಪ ರಾಜೀನಾಮೆ ಕೊಟ್ಟವ್ರೆ ಅನ್ನೋನು. ಲೇ ಆ ವಯ್ಯನ ಕಿತಾ ಎಷ್ಟು ಸಲ ರಾಜೀನಾಮೆ ತಗೊಂತಾರೆ, ಒಂದು ಕಿತಾ ಕೊಟ್ಟರೆ ಸಾಲಕ್ಕಿಲ್ವಾ, ಇಲ್ಲಾ ಒಂದು ನೂರು ಜೆರಾಕ್ಸ್ ಮಾಡಿ ಕೊಡಕ್ಕೆ ಹೇಳಬೇಕು ಕಲಾ ಅಂತಿದ್ದ ಗೌಡಪ್ಪ. ನನ್ನ ರಾಸಿ ಫಲ ಏನು ಐತೆ ಅಂತಾ ಗೌಡಪ್ಪ ಅಂದ್ರೆ, ನಿಮಗೆ ಹೊರಿಕ್ಕೆ ಹೋದ್ರೆ ಧರ್ಮದೇಟು ಗ್ಯಾರಂಟಿಯಾ ಅಂತಿದ್ದಾಗೆನೇ, ಗೌಡಪ್ಪ ಪಂಚೆ ಎತ್ಕಂಡು ಒಳಿಕ್ಕೆ ಓಡೋನು.
ಪ್ರೀತ್ಸೋರ ದಿನ ಪ್ರೀತಿಗಾಗೆ ಇರ್ಲಿ……!!





