ನಿಲುಮೆ ಮಂಥನ
-ತ್ರಿವೇಣಿ, ಮ್ಯೆಸೂರು
ನಿಲುಮೆಯ ಆತ್ಮೀಯ ಬೆಂಬಲಿಗರೇ,
ನಿಲುಮೆಯು ಸತತ ಒಂದು ವರ್ಷಕ್ಕೂ ಹೆಚ್ಚಿನ ಸಮಯದಿಂದ ಕನ್ನಡ ಸಾರಸತ್ವ ಲೋಕದಲ್ಲಿ ಸತತವಾಗಿ ಲೇಖನ, ಕವನ, ಚರ್ಚೆ, ಪ್ರಚಲಿತ ವಿದ್ಯಮಾನ, ಸಂಸ್ಕೃತಿ, ಕನ್ನಡ, ಕರ್ನಾಟಕ, ಭಾರತ, ವಿಜ್ಣಾನ, ಕನ್ನಡಿಗರಿಗೆ ಉದ್ಯೋಗ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತನ್ನ ಛಾಪನ್ನು ಮೂಡಿಸುತ್ತ ಬರುತ್ತಲಿದೆ. ಇದಕ್ಕೆ ಬೆನ್ನುತಟ್ಟಲು ನಿಮ್ಮೆಲ್ಲರ ಬೆಂಬಲವಿಲ್ಲದೆ ಅದು ಸಾಧ್ಯವಾಗಿಯೂ ಇಲ್ಲ, ಅನ್ನೋದು ಮರೆತಿಲ್ಲ. ಅದೆಷ್ಟೊ ಲಕ್ಷ ಓದುಗರು ನಿಲುಮೆಯೊಂದಿಗೆ ಅವಿನಾನುಭಾವ ಸಂಬಂಧ ಬೆಸೆದುಕೊಂಡಿರುವರು. ಈ ಹಂತಕ್ಕೆ ನಿಲುಮೆ ಬೆಳೆದು ಬರಲು ಹಾದಿಯೇನು ಅಷ್ಟು ಸುಲಭವಾಗೇನು ಇರಲಿಲ್ಲ. ಮೊದಲಿಗೆ ಸ್ನೇಹಿತರ ಸಣ್ಣ ಗುಂಪೊಂದು ವರ್ಡ್ ಪ್ರೆಸ್ಸಿನಲ್ಲಿ ತನ್ನ ಖಾತೆಯನ್ನು ತೆರೆದಾಗ ಅರವಿಂದ್ ಎಂಬುವವರ ಮೊದಲ ಲೇಖನ ರಂಗೋಲಿ.. ಚಿತ್ತ ಚಿತ್ತಾರಗಳ ನಡುವೆ ಎಂಬ ಶೀರ್ಷಿಕೆಯೊಂದಿಗೆ ೫ನೇ ಅಕ್ಟೋಬರ್ ೨೦೧೦ ಪ್ರಕಟವಾಯ್ತು. ಅಸಲಿಗೆ ನಿಲುಮೆ ನಾನು ನೋಡಿದ್ದು, ರಂಗೋಲಿಗಳು ಎಂದು ಗೂಗಲಿನಲ್ಲಿ ಹುಡುಕಲು ಹೋದಾಗ ನಾನು ಹುಡುಕ ಹೊದದ್ದೇ ಒಂದು, ಸಿಕ್ಕಿದ್ದು ಮಾತ್ರ ಭರಪೂರ ರೋಮಾಂಚನ, ನಿಲುಮೆ ಹೆಸರು ಯಾಕೋ ಅಂದು ಬಹಳ ಇಷ್ಟವಾಗಿತ್ತು. ನಂತರ ದಿನಕ್ಕೊಂದರಂತೆ ಅತ್ಯುತ್ತಮ ಲೇಖನಗಳು ಬರತೊಡಗಿದಾಗ ಆ ಬ್ಲಾಗ್ ದಿನಕ್ಕೆ ಒಂದೆರಡು ಸಾರಿಯಾದರೂ ತೆರೆಯದೆ ಇರುವ ಮನಸ್ಸಾಗದೇ ಇರಲಿಲ್ಲ. ಆ ಲೇಖನಗಳ ಸ್ಪೂರ್ತಿಯಿಂದ ನನ್ನಲ್ಲು ಬರೆಯುವ ಅಮಿತ ಉತ್ಸಾಹವಿದ್ದರೂ ಬರೆದದ್ದೂ ಮಾತ್ರ ಈಗಲೇ, ನನ್ನಂತವಳಲ್ಲಿ ಲೇಖಕಿಯನ್ನು ಬೆಳೆಸಿದ ನಿಲುಮೆಗೆ ಅನಂತ ಧನ್ಯವಾದಗಳು. ನನ್ನ ನೆನಪಂತೆ ದಿನಕ್ಕೆ ಕೆಲವೇ ಕೆಲವು ಬೆಂಬಲಿಗರು ಬಂದು ನಿಲುಮೆಯ ಕದ ತಟ್ಟಿ ಹೋಗುತ್ತಿದ್ದರು. ಅಂದಿಗೆ ದಿನದ ಭೇಟಿಗಳು ಹೆಚ್ಚೆಂದರೆ ನೂರರ ಆಸುಪಾಸಿನಲ್ಲಿ ಓಡಾಡುತ್ತಿತ್ತು.
ಪ್ರೀತಿಯ ಮಟ್ಟು ಸರ್, ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.
– ಪೂರ್ಣಚಂದ್ರ
(ಇತ್ತೀಚಿಗೆ ದಿನೇಶ್ ಅಮಿನ್ ಮಟ್ಟು ಅವರು ಬರೆದ ಬಹುಚರ್ಚಿತ ಲೇಖನಕ್ಕೆ ಪೂರ್ಣಚಂದ್ರ ಅವರು ಪ್ರತಿಕ್ರಿಯಯನ್ನು ಕಳುಹಿಸಿದ್ದಾರೆ. ಓದಿ..)
ಪ್ರೀತಿಯ ಮಟ್ಟು ಸರ್,
ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.
ನಮಸ್ಕಾರಗಳು. ನನ್ನ ಪರಿಚಯ ನಿಮಗೆ ಇಲ್ಲ ಎಂದು ಕಾಣುತ್ತೆ. ಆದರೆ, ನಿಮ್ಮ ಪರಿಚಯ ನನಗೆ ೧೦ ವರ್ಷದ್ದು. ನಿಮ್ಮ ಅಂಕಣಗಳನ್ನು ಓದುತ್ತಾ ಬೆಳೆದವನು ನಾನು.
ವಿವೇಕಾನಂದರ ಬಗ್ಗೆ ನೀವು ಬರೆದ ಲೇಖನ ಓದಿದ ಬಳಿಕ, ನನಗನಿಸಿದ್ದನ್ನು ನಿಮ್ಮೊಂದಿಗೆ ಹಂಚಿಕೊಳ್ಳಬೇಕು ಅನಿಸಿತು. ಅಷ್ಟರಲ್ಲಿಯೇ ವಿವೇಕಾನಂದರ ಪರ ಎಂದು ಭ್ರಮಿಸಿರುವ, ಭಾವಿಸಿಕೊಂಡಿರುವ ಬಲಪಂಥೀಯ ಮೂಲಭೂತವಾದಿಗಳು ನಿಮ್ಮ ವಿರುದ್ಧ ಕತ್ತಿ ಬೀಸಲಾರಂಭಿಸಿದರು.
ಇದಕ್ಕೆ ಪ್ರತಿಯಾಗಿ, ತಾವು ಮಟ್ಟು ಪರ(ವಿವೇಕನಂದ ಪರ ಅಲ್ಲ) ಎಂದು ಭ್ರಮಿಸಿರುವ ಎಡಪಂಥೀಯ ಹಾಗೂ ಪ್ರಗತಿಪರ ಮೂಲಭೂತವಾದಿಗಳು ಕೂಡ ತಮ್ಮ ಕತ್ತಿಗೆ ಸಾಣೆ ಹಿಡಿಯಲಾರಂಭಿಸಿದರು.
ಈ ಎರಡೂ ವರ್ಗದ ಮೂಲಭೂತವಾದಿಗಳು ಶಿವಮೊಗ್ಗ ಮತ್ತು ಬೆಂಗಳೂರಿನ ಬೀದಿಗಳಲ್ಲಿ, ನಿಮ್ಮ ಕಚೇರಿ ಎದುರು, ಬ್ಲಾಗ್ಗಳಲ್ಲಿ ಕತ್ತಿ ಬೀಸಾಡುವಾಗ ಮಧ್ಯೆ ಪ್ರವೇಶಿಸಲು ಭಯವಾಯಿತು. ಯಾರದ್ದಾದರೂ ಕತ್ತಿ ನನ್ನನ್ನೇ ತಿವಿದುಬಿಡಬಹುದು ಎಂದು ಸುಮ್ಮನಾದೆ. ಈಟಿ, ಭರ್ಜಿ, ಕತ್ತಿ ಗುರಾಣಿಗಳ ಅಬ್ಬರ ಕಡಿಮೆಯಾಗಿದೆ. ಹಾಗಾಗಿ ಇದು ಸೂಕ್ತ ಸಮಯ ಎಂದು ನನಗನಿಸಿದ್ದ ಕೆಲ ಸಂಗತಿಗಳನ್ನು ಹೇಳಲು ಪ್ರಯತ್ನಿಸುವೆ. ಮತ್ತಷ್ಟು ಓದು 
ಸಂಸ್ಕೃತಿ ಸಂಕಥನ – 20 – ಬುದ್ಧನನ್ನು ಹೈಜಾಕ್ ಮಾಡಿದ ಪ್ರೊಟೆಸ್ಟಾಂಟರು
-ರಮಾನಂದ ಐನಕೈ
ಎಲ್ಲರಿಗೂ ಅಚ್ಚರಿಯಾಗಬಹುದು. ಪ್ರೊಟೆಸ್ಟಾಂಟರು ಹೇಗೆ ಮತ್ತು ಏಕೆ ಬುದ್ಧಿಸಂನ್ನು ಹೈಜಾಕ್ ಮಾಡಿದರು ಎಂಬುದು. ಇಲ್ಲಿ ಹೈಜಾಕ್ ಅಂದರೆ ಅಪಹರಣ ಎಂಬ ಅರ್ಥವಲ್ಲ. ಪ್ರೊಟೆ ಸ್ಟಾಂಟರು ಬುದ್ಧಿಸಂನ್ನು ಹೇಗೆ ತಮ್ಮ ಸಮರ್ಥನೆ ಗಾಗಿ ಬಳಸಿಕೊಂಡರು ಎಂಬುದು. ಇದರ ಹಿಂದೆ ಸ್ವತಃ ಭಾರತೀಯರಿಗೆ ಅರ್ಥವಾಗದ ಹಲವು ರಹಸ್ಯಗಳಿವೆ. ಈ ರಹಸ್ಯಗಳನ್ನು ಬಾಲಗಂಗಾಧರರು ಸ್ವಾರಸ್ಯವಾಗಿ ಭೇದಿಸುತ್ತಾರೆ.
ಸಮಕಾಲೀನ ಭಾರತೀಯ ಚಿಂತಕರಿಗೆ ಬುದ್ಧಿಸಂ ಕುರಿತಾಗಿ ಒಂದು ಪೂರ್ವಗ್ರಹಿತ ಅಭಿ ಪ್ರಾಯಗಳಿವೆ. ಬುದ್ಧಿಸಂ ಮಾನವೀಯತೆಗಾಗಿ ಹೋರಾಡುತ್ತಿದೆ. ಇದು ಸಮಾಜದಲ್ಲಿನ ಅನಿಷ್ಟ ವನ್ನು ವಿರೋಧಿಸಿದೆ. ಯಜ್ಞಯಾಗಾದಿಗಳನ್ನು ಧಿಕ್ಕರಿಸಿದೆ. ಪ್ರಾಣಿ ಬಲಿ ವಿರೋಧಿಸಿ ಅಹಿಂಸಾ ತತ್ವ ಮೆರೆದಿದೆ. ಈ ಮೂಲಕ ಹಿಂದೂ ಯಿಸಂನ್ನು ವಿರೋಧಿಸಿದೆ. ಭಾರತದ ಜಾತಿ ವ್ಯವಸ್ಥೆಯನ್ನು ವಿಮರ್ಶಿಸಿದೆ. ಇಲ್ಲಿನ ವರ್ಣಾ ಶ್ರಮವನ್ನು ವಿರೋಧಿಸಿದೆ. ಇಲ್ಲಿನ ಪುರೋಹಿತ ಶಾಹಿಯನ್ನು ಹಾಗೂ ಬ್ರಾಹ್ಮಣರನ್ನು ವಿರೋಧಿಸಿದೆ. ಹಾಗಾಗಿ ಇದೊಂದು ವಿಶ್ವಮಾನ್ಯವಾದ ರಿಲಿಜನ್. ಬುದ್ಧಿಸಂ ಸಮಾಜದಲ್ಲಿನ ತರತಮ ವನ್ನು ಸಹಿಸುವುದಿಲ್ಲ. ಮನುಷ್ಯರ ಏಳ್ಗೆಗಾಗಿ ಹಂಬಲಿಸುತ್ತದೆ ಇತ್ಯಾದಿ. ಈ ಕಾರಣಕ್ಕಾಗೆ ನಮ್ಮ ದೇಶದ ದಲಿತ ಚಿಂತಕರೆಲ್ಲ ಬುದ್ಧಿಸಂ ಕಡೆಗೆ ಆಕರ್ಷಿತರಾದರು. ಅಂಬೇಡ್ಕರರು ಕೂಡ ಬುದ್ಧಿಸಂಗೆ ಮತಾಂತರ ಹೊಂದಿದ್ದು ಈ ಆಕರ್ಷಣೆಯಿಂದ. ನಿಜವಾಗಿಯೂ ಇದು ನಿಜವೆ? ಭಾರತೀಯ ಸಂಸ್ಕೃತಿಯೊಂದಿಗೆ ಬುದ್ಧಿಸಂ ವಿರೋಧವಾಗಿಯೇ ನಡೆದುಕೊಂಡು ಬಂದಿ ದೆಯೇ? ನಿಜವಾಗಿಯೂ ಬುದ್ಧ ವರ್ಣಾಶ್ರಮ ದಿಂದ ಹೊರಗುಳಿದು ವರ್ಣಾಶ್ರಮ ಪದ್ಧತಿಯನ್ನು ವಿರೋಧಿಸಿದನೇ? ಈಗ ನಾವು ವಿಸ್ಮೃತಿಯಿಂದ ಸ್ಮೃತಿಗೆ ಬರಬೇಕಾಗಿದೆ.
ಈ ಪ್ರೀತಿ…!!
– ಸುಷ್ಮಾ ಮೂಡಬಿದ್ರಿ
ಇಬ್ಬರ ಮದ್ಯದಲ್ಲೂ ನೀರವ ಮೌನ…ಆಗತಾನೆ ಹೊರಗೆ ಮಳೆ ತಣ್ಣಗೆ ಆರಂಭವಾಗಿ, ಭೋರ್ಗರೆಯುತ್ತಾ ಸುರಿಯಲಾರಂಭಿಸಿತು. ಬೀಸಿ ಬಂದ ಗಾಳಿಗೆ ಕಿಟಕಿ ಪರದೆಗಳೆಲ್ಲಾ ನೃತ್ಯವಾಡುತ್ತಿತ್ತು…ಕಿಟಕಿಯಿಂದ ಹೊರಗೆ ದೂರದ ಅದ್ಯಾವ ಬಿಂದುಗೋ ದೃಷ್ಟಿ ಹಾಯಿಸುತ್ತಾ ನಿಂತಿದ್ದ..ಮೆಲ್ಲಗೆ “ಸುಂಜೂ….”ಎಂದೆ..ರಭಸದ ಮಳೆ ಸದ್ದಿಗೋ ಏನೋ ಕೇಳಿಸಿಲ್ಲವೆಂಬಂತೆ ನಿಂತೇ ಇದ್ದ ಅಂವ..ಮೌನ ಮುರಿಯಲಾಗಲಿಲ್ಲ ನನ್ನಿಂದ..ಶೂನ್ಯದೆಡೆಗಿನ ಅವನ ನೋಟ ಕದಲಿಸಲಾಗಲಿಲ್ಲ..ಹತ್ತಿರ ಬಂದು ನಿಂತೆ..ಈಗ ನೋಡಿದ..ಕಂಗಳು ಕಾಂತಿಹೀನ ಅನಿಸಿತು.
“ಮಾತಡೋಲ್ಲವಾ….”ಎಂದೆ..
ಮತ್ತೇ ದೃಷ್ಟಿ ಬದಲಿಸಿದ…ಈ ಬಗೆಯ ಮೌನ ಸಹಿಸಲಾಗಲಿಲ್ಲ…
“ಪ್ಲೀಸ್..”ಎಂದ ನನ್ನ ಕಣ್ಣಲ್ಲಿ ನೀರಾಡಿತ್ತು…
ಅದೇನನಿಸಿತೋ..”ಸುಶೀ..”ಕರೆದ…ಹ್ಞು0 ಗುಟ್ಟಿದೆ…
ಅವನು ಕುತ್ತಿಗೆಗೆ ಚಾಕು ಇಟ್ಟ, ದೇಹ ಹೆಣವಾಗಿತ್ತು :ಆಫ್ರೀಕಾದ ಕ್ಯಾಮರೂನ್ ಲೂಟಿ ಪ್ರಸಂಗ !
-ರವಿ ಮೂರ್ನಾಡು
ಅಲ್ಲೆಲ್ಲೋ ಕೊಲೆಯಾದ ವ್ಯಕ್ತಿಯ ಬಂಧುಗಳು ನ್ಯಾಯಕ್ಕಾಗಿ ಗೋಗರೆಯುತ್ತಿದ್ದರು. ಪತ್ರಿಕಾ ಕಚೇರಿಯಲ್ಲಿ ಕುಳಿತು ಅದು ಅರಿವಿಗೆ ಬಂದಿರಲಿಲ್ಲ. ಪುಸ್ತಕವೊಂದಕ್ಕೆ ಆಸ್ಪತ್ರೆಯ ಶವಾಗಾರದಲ್ಲಿ ಮಲಗಿದ ಹೆಣದ ಟಿಪ್ಪಣಿ ಮಾಡುವಾಗಲೂ ಅದು ಗೊತ್ತಿರಲಿಲ್ಲ. ನನ್ನ ಕುತ್ತಿಗೆಗೆ ಚಾಕು ಇಟ್ಟಾಗ ನಾನೇ ಹೆಣವಾಗಿದ್ದೆ. ಆಫ್ರೀಕಾದ ಕ್ಯಾಮರೂನಿನಲ್ಲಿ ಲೂಟಿಗಾರರು ಸುತ್ತುವರಿದು ವಾಚು-ಮೊಬೈಲು-ಹಣಕ್ಕಾಗಿ ತಡಕಾಡಿ ಮುಗಿಸುವವರೆಗೂ ಜೀವ ಅವರ ಕೈಯಲ್ಲೇ ಇತ್ತು. ಸತ್ತ ದೇಹ ನನ್ನಲ್ಲಿತ್ತು. ಕತ್ತಿನಿಂದ ಚಾಕು ತೆಗೆದದ್ದೇ ತಡ, ಸತ್ತವನು ಎದ್ದು ಕುಳಿತಿದ್ದೆ. ..!
ಇಲ್ಲಿನ ಡ್ವಾಲಾ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2007 ರಲ್ಲಿ ಕಾಲಿಟ್ಟು ಪಾಸ್ಪೋರ್ಟಿಗೆ ಮುದ್ರೆಯೊತ್ತಿ ಲಗ್ಗೇಜು ವಿಲೇವಾರಿಗೆ ಬರುವಾಗಲೇ ಈರ್ವರು ಹಿಂದೆಯೇ ಬಂದರು. “ ನಾನು ಕಸ್ಟಂ ಅಧಿಕಾರಿ, ನಿಮ್ಮ ಬ್ಯಾಗ್ ಚೆಕ್ ಮಾಡಬೇಕು, ಸ್ವಲ್ಪ ಈ ಕಡೆ ಬನ್ನಿ” ಅಂದರು. ಅರೆ..! ಅಧಿಕಾರಿಯಾಗಿದ್ದರೆ ಮರೆಗೆ ಕರೆಯುವ ಆಲೋಚನೆ ಏನು ಅಂತ ಯೋಚಿಸಿದ್ದೆ. ಇಲ್ಲಿನ ಐದು ಸಾವಿರ ಕ್ಯಾಮರೂನ್ ಫ್ರಾಂಕ್ ಕೊಟ್ಟರೆ ತಕರಾರಿಲ್ಲ ಅಂದರು. ಅಲ್ಲಿಯೇ ನಮ್ಮ ಕಂಪೆನಿಯ ವಾರೀಸುದಾರರು ಮಧ್ಯೆ ಬಂದಿದ್ದರಿಂದ ಆ ಪೀಡನೆಯಿಂದ ಪಾರಾದೆ. ಅಮಾನುಷ ಕೃತ್ಯಗಳ ಹೆಣಗಳ ವಾಸನೆ ನನ್ನ ಮೂಗಿಗೆ ಆಗಲೇ ಬಡಿದಿದೆ. ಹಣ ಕೊಟ್ಟರೆ ಕಾನೂನುಗಳು ಇಲ್ಲಿ ನಮ್ಮ ಕೈಗೆ ಬರುತ್ತವೆ. ಹಾಗಂತ ಹಣಕ್ಕೆ ಬಾಯ್ಬಿಟ್ಟ ನಡೆದಾಡುವ ಹೆಣಗಳೇ ಇಲ್ಲಿನ ಮನುಷ್ಯರು. ಭಾರತದಲ್ಲಿ ಇಂತಹದ್ದು ಬೇಕಾದಷ್ಟು ನಡೆಯುತ್ತವೆ. ಅದನ್ನು ಪ್ರಶ್ನಿಸುವ ಜನರಿದ್ದಾರೆ ಅನ್ನುವ ಸಮಾಧಾನ. ಇಲ್ಲಿ ಕೇಳುವವರು, ಕೊಡುವವರು ಎಲ್ಲರೂ ಕಳ್ಳರೇ ಅಂದಾಗ ಸತ್ಯಕ್ಕೂ ಹಲ್ಲು ಕಿರಿಯಲು ನಾಚಿಕೆ…!
ಸಂಸ್ಕೃತಿ ಸಂಕಥನ – 17 ಜಾತಿ, ರಿಲಿಜನ್ ಹಾಗೂ ಸೆಕ್ಯುಲರಿಸಂ ಭಗವದ್ಗೀತೆ ವಿವಾದ
-ರಮಾನಂದ ಐನಕೈ
ಕೇವಲ ಭಗವದ್ಗೀತೆ ಮಾತ್ರವಲ್ಲ, ಇತ್ತೀಚಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಸಂಪ್ರ ದಾಯಗಳಿಗೆ ಸಂಬಂಧಪಟ್ಟಂತೆ ಅನೇಕ ಸಂಗತಿ ಗಳು ವಿವಾದಕ್ಕೆ ಕಾರಣವಾಗುತ್ತಿವೆ. ಹಾಗೂ ಇವೆಲ್ಲ ರಾಜಕೀಯ ಸ್ವರೂಪ ಪಡೆದು ಸೆಕ್ಯುಲರ್ ಪ್ರಭುತ್ವ ಸಂದಿಗ್ಧದಲ್ಲಿ ಸಿಲುಕುವಂತಾಗುತ್ತಿದೆ. ಹಾಗಾದರೆ ಈ ದೇಶದಲ್ಲಿ ಏನು ನಡೆಯುತ್ತಿದೆ?
ಭಗವದ್ಗೀತೆ ವಿವಾದಕ್ಕೆ ಸಂಬಂಧಪಟ್ಟಂತೆ ಪತ್ರಿಕೆಗಳಲ್ಲಿ ದಿನನಿತ್ಯ ಹೇಳಿಕೆಗಳು ಬರುತ್ತಲಿವೆ. ಈ ಕುರಿತು ಒಂದು ಅಭಿಪ್ರಾಯ ರೂಪಿಸುವ ಪ್ರಯತ್ನ ನಡೆಯುತ್ತಿದೆ. ಅಂದರೆ ಭಾರತೀಯ ಸಂಸ್ಕೃತಿಯ ಕುರಿತಾದ ಪರಸ್ಪರ ತಪ್ಪು ತಿಳುವಳಿಕೆ ಗಾಗಿ ಭಗವದ್ಗೀತೆಯನ್ನು ಬಹಿರಂಗವಾಗಿ ಹರಾಜಿಗೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಗೀತೆಯಿಂದ ಶೂದ್ರರಿಗೆ ಹಾಗೂ ದಲಿತರಿಗೆ ಭಾರೀ ಅಪಾಯವಿದೆ ಎಂದು ಭಯ ಹುಟ್ಟಿಸಲು ಪ್ರಯತ್ನಿ ಸುತ್ತಿದ್ದಾರೆ. ಇಲ್ಲಿ ಒಂದನ್ನು ಗಮನಿಸಬೇಕು. ಇವೆಲ್ಲ ಸಾಮಾನ್ಯ ಜನರ ಅಥವಾ ಸಮೂಹದ ಅಭಿಪ್ರಾಯಗಳಲ್ಲ. ಆಯಾ ಸಮುದಾಯದ ವಕ್ತಾರರು ಅಥವಾ ಚಿಂತಕರೆನಿಸಿಕೊಂಡವರು ಮಾಧ್ಯಮಗಳ ಮೂಲಕ ಈ ರೀತಿ ಧರ್ಮಯುದ್ಧ ಮಾಡುತ್ತಿದ್ದಾರೆ. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತಾಗಿದೆ ಪರಿಸ್ಥಿತಿ. ಈ ಪರಿ ಅರೆಬರೆ ಚಿಂತಕರನ್ನು ನೋಡಿದರೆ ಒಂದು ದಿನ ದೇವರ ವಿಗ್ರಹಗಳನ್ನು ಕಿತ್ತು ಕೈಯಲ್ಲಿ ಆಯುಧ ವಾಗಿ ಹಿಡಿದು ಹೊಡೆದುಕೊಂಡರೆ ಅಚ್ಚರಿಯೇ ನಿಲ್ಲ.
ಈ ಪರಿಸ್ಥಿತಿಗೆ ಮುಖ್ಯ ಕಾರಣವೆಂದರೆ ಭಾರತೀಯ ಸಂಸ್ಕೃತಿಯನ್ನು ರಿಲಿಜನ್ ಎಂದು ವ್ಯಾಖ್ಯಾನಿಸಿಕೊಳ್ಳುತ್ತಿರುವುದು. ಯುರೋಪಿ ಯನ್ನರು ಇಡೀ ಭಾರತೀಯ ಸಂಸ್ಕೃತಿಯನ್ನು ಸೇರಿಸಿ ಹಿಂದೂಯಿಸಂ ಎಂದು ಕರೆದು ಅದಕ್ಕೆ ರಿಲಿ ಜನ್ನಿನ ಲಕ್ಷಣ ಸೇರಿಸಲು ಪ್ರಯತ್ನಿಸಿದರು. ಆದ್ದರಿಂದಲೇ ನಾವಿಂದು ಹಿಂದೂಯಿಸಂ ಅಂದರೆ ಇಸ್ಲಾಂ ಹಾಗೂ ಕ್ರಿಶ್ಚಿಯಾನಿಟಿ ಇದ್ದಹಾಗೆ ಒಂದು ಅಖಂಡವಾದ ರಿಲಿಜನ್ ಎಂದು ತಿಳಿದುಕೊಂಡಿ ದ್ದೇವೆ. ಹಾಗಾಗಿ ಹಿಂದೂ ಸಂಪ್ರದಾಯಗಳನ್ನೆಲ್ಲ ರಿಲೀಜಿಯಸ್ ಚಟುವಟಿಕೆಯೆಂಬಂತೆ ಅತ್ಯಂತ ಗುಮಾನಿಯಿಂದ ನೋಡಲಾಗುತ್ತದೆ. ರಿಲಿಜೀ ಯಸ್ ಚಟುವಟಿಕೆಗಳ ಸಾರ್ವಜನೀಕರಣವನ್ನು ಸೆಕ್ಯುಲರ್ ನೀತಿ ಒಪ್ಪುವುದಿಲ್ಲ. ಅದಕ್ಕಾಗಿ ಎಡ ಪಂಥೀಯ ಚಿಂತಕರಿಗೆ ಇಂಥ ಸಾಂಪ್ರದಾಯಿಕ ಆಚರಣೆಗಳೆಲ್ಲ ನಿಷಿದ್ಧ ಹಾಗೂ ಮೌಢ್ಯ.
“ಯೂನಿವರ್ಸಲ್ ಬ್ರದರ್ಹುಡ್” ಬರೀ ಬೂಟಾಟಿಕೆಯೇ ?
-ಸಾಗರ್ ಮೈಸೂರು
ಸ್ವಾಮೀ,
ಯಾಕೆ ಮುಗ್ಧ ಜನರ ತಲೆಯಲ್ಲಿ ವಿಷದ ಬೀಜ ಬಿತ್ತುತ್ತಿದ್ದೀರಿ? ನೀಮಗೂ ಭಯೋತ್ಪಾದಕರನ್ನು ಹುಟ್ಟು ಹಾಕುವ ಮುಲ್ಲಾ ಗಳಿಗೂ ಅಥವಾ ಭಾಷಾ ದುರಭಿಮಾನಿಗಳಿಗೂ ಏನು ವ್ಯತ್ಯಾಸ? ಸಾಮರಸ್ಯದಿಂದ ಬದುಕುವ ಬಗೆ ಹೇಗೆಂದು ತಿಳಿದಿದ್ದರೆ ಬರೆಯಿರಿ. ಇಲ್ಲಾಂದ್ರೆ ಸುಮ್ಮನಿರಿ. ನಿಮ್ಮನ್ತವರನ್ತು ಬರೆದು , ಬೆಂಕಿ ಹಚ್ಚಿ ತಣ್ಣಗೆ ಕುಳಿತು ಚಂದ ನೋಡುತ್ತಿರಿ. ಅಮಾಯಕರು ನಿಮ್ಮಿಂದ ಪ್ರೇರಿತರಾಗಿ ಯಾರದೋ ಮೈಮೇಲೆ ಬಿದ್ದು ಸಮಾಜದ ಶಾಂತಿ ಕದದುತ್ತಾರೆ ಅಥವಾ ಜೀವ ಬಿಡುತ್ತಾರೆ. ದುರಭಿಮಾನ, ಭಯೋತ್ಪಾದನೆ ಹುಟ್ಟುವುದು ಮೊದಲು ಮನಸ್ಸಿನಲ್ಲಿ. ಪ್ರೇರಿತರದವರು ಕೆಲವರು ಚಾಕು ಬಳಸುತ್ತಾರೆ, ಕೆಲವರು ಬಾಂಬು ಹಾಕುತ್ತಾರೆ, ಅವರವರ ಯೋಗ್ಯತೆಗೆ ತಕ್ಕಂತೆ. ನಿಮ್ಮಂಥವರು ಚಂದ ನೋಡುತ್ತೀರಿ.
“ಬೆಂಗಳೂರಿನ ಜುಟ್ಟು ಈಗಾಗಲೇ ರೆಡ್ಡಿಗಳ ಕೈಯ್ಯಿಗೆ ಕೊಟ್ಟಾಗಿದೆ” ಎಂದು ಮಹಾನ್ ಮೇಧಾವಿಯೊಬ್ಬರು (ಹಾಗೆಂದು ತಿಳಿದ) ಹೇಳಿದಾಗ ಅದ್ಯಾವನೋ ‘ವಿಷ್ಣು’ ಎಂಬುವವ ನೀಡಿದ್ದ ‘ಪ್ರತಿಕ್ರಿಯೆ’ ಅದು! ಹೌದಾ?! ಅದು ನಿಜಾನಾ? ನಮ್ಮ ಬೆಂಗಳೂರನ್ನ ನಿಜವಾಗಿಯೂ ‘ಅನ್ಯರು’, ‘ಕನ್ನಡೇತರರು’ ಆಳುತ್ತಿದ್ದಾರಾ ಎಂಬ ಪ್ರಶ್ನೆಯನ್ನ ನಮಗೆ ನಾವೇ ಹಾಕಿಕೊಂಡು serious ಆಗಿ ‘ಪರೀಕ್ಷಿಸಲು’ ಹೊರಟರೆ ಆ ‘ವಿಷ್ಣು’ ಎಂಬುವವನ ‘ಅಡ್ರಸ್ಸ್ ಹುಡುಕು’ವ ಮನಸ್ಸಾಗುತ್ತದೆ! ಅವನಿಗೊಂದು ವಿಶೇಷವಾದ ‘ದೊಣ್ಣೆ’ ರೆಡಿಮಾಡಿಸುವ ಕನಸು ಮೂಡುತ್ತದೆ!! ಆ ಮೇಧಾವಿ ಎಂಬ ಪತ್ರಕರ್ತ ಯಾವಾಗ ನೋಡಿದರೂ ‘ಭಾರತ’, ‘ಭಾರತೀಯತೆ’ ಎಂದು ಕಿರುಚಾಡುವವ. ಅಂಥವನೇ “ಪರಭಾಷಿಕರನ್ನ ಮಟ್ಟ ಹಾಕದಿದ್ದರೆ ಅಪಾಯ ತಪ್ಪಿದ್ದಲ್ಲ” ಎಂಬ ಸತ್ಯವನ್ನ ಕಂಡುಕೊಂಡಿದ್ದಾನೆ ಎಂದರೆ, ಅದರ ಮಹತ್ವವನ್ನ ನೀವೇ ಅರ್ಥಮಾಡಿಕೊಳ್ಳಿ.
ನನ್ನ ಬದುಕು ಪರಿವರ್ತಿಸಿದ ಬಂಗಾರಪ್ಪ
“1992 ನೇ ಇಸ್ವಿ.ನಾನು ಆಗಷ್ಟೇ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ಮುಗಿಸಿದ್ದೆ.ಫಲಿತಾಂಶ ಇನ್ನೂ ಬಂದಿರಲಿಲ್ಲ.ಅತ್ಯಂತ ಕಡು ಬಡತನದ ಕುಟುಂಬ ನಮ್ಮದು.ಒಂದು ಹೊತ್ತಿನ ತುತ್ತಿಗೂ ತತ್ವಾರ ಪಡುವಂತ ದಯನೀಯ ಮತ್ತು ಶೋಚನೀಯ ಸ್ಥಿತಿ.ತಂದೆ ನಾ ಮಗುವಾಗಿರುವಾಗಲೇ ಗತಿಸಿದ್ದರು.ಮೂರು ಜನ ಅಣ್ಣಂದಿರು, ಒಬ್ಬಳು ಸಹೋದರಿ.ದೊಡ್ಡಣ್ಣ 10-11ರ ಪ್ರಾಯದಲ್ಲಿಯೇ ಮನೆ ಬಿಟ್ಟು ಹೋದವನು ನಾಪತ್ತೆಯಾಗಿದ್ದ.ಅಮ್ಮ ಅವನಿಗಾಗಿ ಹುಡುಕಾಡಿ ಹುಡುಕಾಡಿ ಹೈರಾಣಾಗಿದ್ದರು.ಉಳಿದ ಇಬ್ಬರು ಅಣ್ಣಂದಿರಲ್ಲಿ ಒಬ್ಬ ಮಾತ್ರ ಅತ್ಯಂತ ಶ್ರಮಜೀವಿ.ಇಬ್ಬರೂ ಕೂಲಿ ಕೆಲಸ ಮಾಡಿ ತುತ್ತಿನ ಚೀಲ ತುಂಬಿಸುತ್ತಿದ್ದರು. ಅನ್ನಕ್ಕಾಗಿ ಹಾತೊರೆಯುವ ಪರಿಸ್ಥಿತಿ ಅದಾಗಿತ್ತು. ಅದಕ್ಕಾಗಿ ಒಮ್ಮೊಮ್ಮೆ ಅಕ್ಕ,ಅಣ್ಣಂದಿರೊಂದಿಗೆ ಜಗಳವಾಡಿದ್ದು ಇಂದಿಗೂ ನೆನಪಿದೆ. ಕೊನೆಯ ಮಗನಾದ ನನ್ನನ್ನು ಓದಿಸಬೇಕೆಂಬುದು ಅಮ್ಮನ ಮಹದಾಸೆ ಅಣ್ಣಂದಿರ ಹಿರಿಯಾಸೆಯಾಗಿತ್ತು.
ಸಂಸ್ಕೃತಿ ಸಂಕಥನ 15 -ಭಾರತೀಯ ಪ್ರಭುತ್ವದ ಸೆಕ್ಯುಲರ್ ಗೊಂದಲಗಳು
ರಮಾನಂದ ಐನಕೈ
ಬಹುಸಂಸ್ಕೃತಿ ಹಾಗೂ ರಿಲಿಜನ್ ಎರಡೂ ಒಟ್ಟಿಗೇ ಬಾಳಬೇಕಾದ ಭಾರತದಂತಹ ದೇಶದಲ್ಲಿ ಪ್ರಭುತ್ವ ತಟಸ್ಥವಾಗಿರಲು ಸಾಧ್ಯವೇ? ಏಕೆಂದರೆ ಇಲ್ಲಿ ನಂಬಿಕೆಯಲ್ಲಿ ಭಿನ್ನತೆ ಇದೆ. ಇಂಥಲ್ಲಿ ಸೆಕ್ಯುಲರ್ ಪ್ರಭುತ್ವ ಯಾರಿಗೆ ನ್ಯಾಯ ನೀಡುತ್ತದೆ? ಒಂದಕ್ಕೆ ನೀಡಿದ ನ್ಯಾಯ ಇನ್ನೊಂದಕ್ಕೆ ಅನ್ಯಾಯವಾಗಲು ಸಾಧ್ಯ. ಏಕೆಂದರೆ ರಿಲಿಜನ್ನವರು ಲೋಕಜ್ಞಾನದಲ್ಲಿ ಬದುಕುತ್ತಾರೆ. ಸಂಸ್ಕೃತಿಯಲ್ಲಿ ಕ್ರಿಯಾಜ್ಞಾನ ಇರುತ್ತದೆ. ಸೆಕ್ಯುಲರ್ ನೀತಿ ಲೋಕಜ್ಞಾನದಲ್ಲಿ ಉದಯಿಸಿದ್ದು. ಹಾಗಾಗಿ ಕ್ರಿಯಾಜ್ಞಾನದ ಸೂಕ್ಷ್ಮತೆಗೆ ಸ್ಪಂದಿಸುವಲ್ಲಿ ಸೋಲುವ ಸಾಧ್ಯತೆ ಇದೆ. ಹಾಗಾಗಿ ಸೆಕ್ಯುಲರ್ ನೀತಿಯನ್ನು ಭಾರತೀಯ ಸಂದರ್ಭದಲ್ಲಿ ಪುನರ್ಪರಿಶೀಲನೆ ಮಾಡುವ ಅಗತ್ಯ ಇದೆ.
ಭಾರತ ಸರಕಾರದ ಸೆಕ್ಯುಲರ್ ನೀತಿಯ ಸುತ್ತ ಹಲವು ಸಂದಿಗ್ಧಗಳಿವೆ. ನಮ್ಮ ಪ್ರಭುತ್ವಕ್ಕೆ ಈ ಪರಿಸ್ಥಿತಿ ಎದುರಾಗಲು ಕಾರಣವೇನು? ಸೆಕ್ಯುಲರ್ ಎಂಬ ಸಮಾನತೆಯ ಮಂತ್ರ ನಮ್ಮಲ್ಲಿ ಯಾವ ಫಲಿತಾಂಶ ನೀಡುತ್ತಿದೆ?
ಫೇಸ್ ಬುಕ್ಕಿನ ಫಂಡಾಸ್
-ಮಾಲತಿ ಎಸ್
ಜುಲೈ 2010, ಶ್ರೀಕಾಂತ ಗೆ ಡೆಂಗೆ ಹಾಗೂ ನಿಹಾರಿಕಂಗೆ air borne ವೈರಲ್ ಜ್ವರದಿಂದಾಗಿ 5-6 ದಿನಗಳ ಆಸ್ಪತ್ರೆವಾಸ. ಮನೆಗೆ ಬಂದ ಎರಡು ದಿನ, ನನಗೂ ರೆಸ್ಟ್ ಬೇಕಾಯಿತು..ಆಸ್ಪತ್ರೆ- ಮನೆ ಅಂತ ಓಡಾಡಿ ಬೆನ್ನುಹುರಿಯಲ್ಲಿ ನೋವು. ಮತ್ತೆ ಮನೆಯ ಉಳಿದ ಕ್ಲೀನಿಂಗ್-ಅದೂ-ಇದೂ etc.gಮೈಲ್ ತೆರೆದರೆ ಅದರಲ್ಲಿ ರಾಶಿ ರಾಶಿ ಮೈಲ್ ಗಳು. ಅದರಲ್ಲಿ ಮೊದಲಿಗೆ ಇದ್ದದ್ದು ಸಹನಾ ಜೋಶಿಯವರ facebook ಆಮಂತ್ರಣ. ಸಾಕಷ್ಟು ಫೇಸ್ ಬುಕ್ ಆಮಂತ್ರಣಗಳಿದ್ದರೂ ನಾನದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಶ್ರೀಕಾಂತ ನನ್ನ ಹಿಂದೆ ನಿಂತು ನನ್ನ ಮೈಲ್ ಗಳನ್ನು ನೋಡುತ್ತ ಇದ್ದರು. ’ನೀನು face book ನಲ್ಲಿ ಇಲ್ಲವಾ’ ಅಂತ ಕೇಳಿದ್ರು. ನಾನು ’ಇಲ್ಲ’ ಅಂದೆ. ಹೇ ಜಾಯಿನ್ ಆಗಿ ನೋಡು ಅದರಲ್ಲೇನಿದೆ ಅಂತ. ಇತ್ತೀಚಿಗೆ ಆಫಿಸ್ ನಲ್ಲಿ ಹೊರ ದೇಶದವರು ಬಂದಾಗಲೆಲ್ಲ r u on facebook ಅಂತ ವಿಚಾರಿಸುತ್ತಾರೆ. ಬುಸಿನೆಸ್ interactions ಗೆ ಅದು ಸೂಕ್ತ ತಾಣ ಅಂತೆಲ್ಲ ಹೇಳುತ್ತಾರೆ ಅಂದ್ರು. ಅದಕ್ಕೆ ನಾನು , ಹುಷಾರಾದ ಕೂಡಲೇ ನೀವೆ ಸೇರಿಕೊಂಡು ಬಿಡಿ, ನನಗೆ ಅದರಲ್ಲಿ ಆಸಕ್ತಿ ಇಲ್ಲ ಅಂದೆ. ಅಷ್ಟರಲ್ಲಿ ಶ್ರೀಕಾಂತ ಆರೋಗ್ಯ ವಿಚಾರಿಸಲು ತಮ್ಮ ಫೋನ್ ಮಾಡಿದಾಗ, ಅವನು ’ಯೇ ನೀನು facebook ಜಾಯಿನ್ ಆಗು, ನಾನು ಆಗ್ತಾ ಇದ್ದೇನೆ ಅಂದ. ಹೂಂ ಅಂತ ಸಹನಾ ಜೋಶಿಯವರ invite ಆಗಲೇ accept ಮಾಡಿ, ಸುಮ್ಮನಿದ್ದು ಬಿಟ್ಟೆ. ಆಮೇಲೆ ಶುರು ಆಯ್ತು invite ಗಳ ಸರಮಾಲೆ. ಗೊತ್ತಿದ್ದವರು, ಇಲ್ಲದವರು ಅಂತ ಒಂದು ರಾಶಿ.ಸ್ವಲ್ಪ ದಿನ ನಾನು ಆ ಕಡೆ ಹೋಗಲೇ ಇಲ್ಲ.





