ಸಂಸ್ಕೃತಿ ಸಂಕಥನ – ೯
– ರಮಾನಂದ ಐನಕೈ
ವರ್ಶಿಪ್ ಅಂದರೆ ನಮ್ಮ ಪೂಜೆ ಅಲ್ಲ
ಜನಸಾಮಾನ್ಯರ ಮಾತು ಹಾಗಿರಲಿ, ಯಾವುದೇ ಭಾರತೀಯ ತಿಳುವಳಿಕಸ್ತನ ಹತ್ತಿರ ‘ಪೂಜೆ’ ಅಂದರೆ ಏನೆಂದು ಕೇಳಿದರೆ ‘ವರ್ಶಿಪ್’ ಎಂದು ಉತ್ತರ ಕೊಡುತ್ತಾನೆ. ‘ವರ್ಶಿಪ್’ ಅಂದರೆ ಏನೆಂದು ಕೇಳಿದರೆ ‘ಪೂಜೆ’ ಅನ್ನುತ್ತಾನೆ. ಅದು ಸ್ವಾಭಾವಿಕ. ಏಕೆಂದರೆ ನೂರಾರು ವರ್ಷಗಳಿಂದ ನಮ್ಮ ಜ್ಞಾನ ಇಷ್ಟು ಹದಕ್ಕೆ ಬಂದಿದೆ. ಹೆಚ್ಚು ವಾದ ಮಾಡಿದರೆ ನಿಘಂಟು ತೆರೆದು ತೊರಿಸುತ್ತಾರೆ. ಅಲ್ಲಿ ವರ್ಶಿಪ್ ಅಂದರೆ ಅರ್ಚನೆ, ಪೂಜೆ, ಆರಾಧನೆ ಎಂಬಿತ್ಯಾದಿ ಅರ್ಥಗಳಿವೆ. ನಾವಿಲ್ಲಿ ಚರ್ಚಿಸುತ್ತಿರುವುದು ತರ್ಜುಮೆಯ ಕುರಿತಾಗಲ್ಲ ಅಥವಾ ಪದಗಳ ಅರ್ಥ ವ್ಯತ್ಯಾಸಗಳ ಬಗ್ಗೆಯೂ ಅಲ್ಲ. ಇಂಥ ತಪ್ಪು ಗೃಹಿಕೆಗಳು ಒಂದು ಸಂಸ್ಕೃತಿಯ ಮೇಲೆ ಮಾಡುವ ತಪ್ಪು ಪರಿಣಾಮಗಳ ಕುರಿತು.
ಪಾಶ್ಚಾತ್ಯರು ಭಾರತಕ್ಕೆ ಬಂದು ಇಲ್ಲಿನ ಆಚರಣೆಗಳನ್ನು ನೋಡಿ ‘ಭಾರತೀಯರು ವರ್ಶಿಪ್ ಮಾಡುತ್ತಿಲ್ಲ, ಬದಲಾಗಿ ನೂರಾರು ದೇವರುಗಳನ್ನು ಪೂಜೆ ಮಾಡುತ್ತಾರೆ’ ಎಂದು ಗ್ರಹಿಸಿದರೆ ತೊಂದರೆ ಇಲ್ಲವಾಗಿತ್ತು. ಆದರೆ ಅವರು ಭಾರತೀಯರು ತಪ್ಪುತಪ್ಪಾಗಿ ವರ್ಶಿಪ್ ಮಾಡುತ್ತಿದ್ದಾರೆ ಎಂದು ಗ್ರಹಿಸಿದ್ದೇ ಯಡವಟ್ಟಾಗಲು ಕಾರಣ. ಏಕೆಂದರೆ ಮುಂದೆ ಅವರು ಈ ತಪ್ಪು ವರ್ಶಿಪ್ ಸರಿಪಡಿಸಲು ಪ್ರಯತ್ನಿಸಬೇಕಾಯಿತು. ಈ ಪ್ರಯತ್ನವೇ ಭಾರತೀಯ ಸಂಸ್ಕೃತಿಗೆ ಬಡಿದ ಬಾಲಗ್ರಹ ಎಂಬುದು ಬಾಲಗಂಗಾಧರರ ಬರಹಗಳನ್ನು ಓದಿದಾಗ ಅರಿವಾಗುತ್ತದೆ.
ನಿಲುಮೆಯ ಓದುಗರಲ್ಲಿ ಭಿನ್ನಹ….
– ಅರೆಹೊಳೆ ಸದಾಶಿವ ರಾವ್
‘ನಿಲುಮೆಯ’ ಓದುಗರೆಲ್ಲರಿಗೂ ನಮಸ್ಕಾರಗಳು
ಮು೦ದಿರುವ ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆಗಳು.
ಇ೦ದಿನ ಪತ್ರಿಕಾ ರ೦ಗದಲ್ಲಿ ಅ೦ತರಜಾಲ ಮತ್ತು ಬ್ಲಾಗ್ ಗಳ ಕೊಡುಗೆ ನಿಜಕ್ಕೂ ಅಪಾರ ಮತ್ತು ವಿಸ್ಮಯ ಹುಟ್ಟಿಸುವಷ್ಟು ಬೆಳೆದು ನಿ೦ತಿದೆ. ಎಲ್ಲೋ ನನ್ನ ಪಾಡಿಗೆ ಪತ್ರಿಕೆಯೊ೦ದಕ್ಕೆ ಅ೦ಕಣ ಬರೆದು ಕುಳಿತಿದ್ದ ನನ್ನನ್ನು ನಿಲುಮೆಯ ನೀವೆಲ್ಲರೂ ಪ್ರೇತಿಯಿ೦ದ ಓದಿದ್ದೀರಿ….ಹರಸಿದ್ದೀರಿ…ಹಾರೈಸಿದ್ದೀರಿ. ನಿಮಗೆ ನಾನು ಋಣಿಯಾಗಿದ್ದೇನೆ.
ಮ೦ಗಳೂರಿನಲ್ಲಿ ವಿಶಿಷ್ಟವಾದ ಲಯನ್ಸ್ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಾವು ಆಯೋಜಿಸಿದ್ದು ತಮಗೂ ತಿಳಿದಿರಬಹುದು. ಅದು ಸಾಹಿತ್ಯಿಕ ವಲಯದಲ್ಲಿ ಒ೦ದು ವಿಶಿಷ್ಟ ದಾಖಲೆಯಾಗಿ ಉಳಿದಿದೆ. ಅದು ನನ್ನ ಒ೦ದು ಕನಸಾಗಿತ್ತು. ಅದಾದ ನ೦ತರ, ಶಿಕ್ಷಣ, ಕಲೆ, ಸಾಹಿತ್ಯ ಮತ್ತು ಸ೦ಸ್ಕ್ರತಿಗನ್ನು ಧ್ಯೇಯವಾಗಿಟ್ಟುಕೊ೦ಡು ಆರ೦ಭಿಸಿದ ಸ೦ಸ್ಥೆ ‘ಅರೆಹೊಳೆ ಪ್ರತಿಷ್ಠಾನ’. ಇದರ ಮೂಲಕ ನನ್ನ ಕೈಲಾದ ನೆಅರವನ್ನು ನಾಲ್ಕು ಕ್ಷೇತ್ರಗಳಲ್ಲಿ ಮಾಡುತ್ತಿದ್ದು, ಸಹ್ರದಯಿಗಳ ಪ್ರೋತ್ಸಾಹವೇ ಈ ಎಲ್ಲದಕ್ಕೂ ಕಾರಣವೆ೦ದು ನಾನು ಭಾವಿಸಿದ್ದೇನೆ.
ನನ್ನ ಮತ್ತೊ೦ದು ಹೊಸ ಕನಸಿನ ಮೂಟೆ ಹೊತ್ತು ಇ೦ದು ನಿಮ್ಮೆದುರು ಬ೦ದಿದ್ದೇನೆ. ಕೆಲವು ದಿನಗಳ ಕಾಲ ನನ್ನ ಬರಹ ಕ್ರಷಿ ನಿ೦ತು ಹೋಗಿತ್ತು. ಅದಕ್ಕೆ ಮುಖ್ಯ ಕಾರಣವೆ೦ದರೆ ನಾನು ಮತ್ತು ಒ೦ದು ಕೆಲಸವನ್ನು ಮೈ ಮೇಲೆ ಹಾಕಿಕೊ೦ಡಿದ್ದೆ. ನನ್ನ ಬಹುದಿನಗಳ ಕನ್ಸೊ೦ದಕ್ಕೆ ಜೀವ ಕೊಡುವ ಹುನ್ನಾರಿನಲ್ಲಿ ನಾನು ಅದರಲ್ಲಿ ತಲ್ಲೀನನಾಗಿದ್ದೆ. ಅದೆ೦ದರೆ ಕನ್ನಡದಲ್ಲಿ ವಿಶಿಷ್ಟವಾದ ಒ೦ದು ಅ೦ತರ್ಜಾಲ ಪತ್ರಿಕೆಯನ್ನು ಪ್ರಕಟಿಸುವ ಕನಸು. ಅದೀಗ ನನಸಾಗುವ ಹ೦ತದಲ್ಲಿದೆ…..ಅದನ್ನು ಹೇಲಲೆ೦ದೇ ನನ್ನ ಈ ಬರಹ
ಹಾಲೋವಿನ್
– ಅಮಿತಾ ರವಿಕಿರಣ
ಪ್ರತಿ ಸೋಮವಾರ..ಮಗನ ಶಾಲೆಯಲ್ಲಿ..ವಾರಪೂರ್ತಿ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮ,ನಾವು ಕಲಿಸಬೇಕದ್ದು..ಅವರಿಂದ ಹೇಳಿಸುವುದು…ಮತ್ತಿತರ ವಿಷಯಗಳ ಬಗ್ಗೆ ಒಂದು ನ್ಯೂಸ್ ಲೆಟರ್ ಕೊಡಲಾಗುತ್ತೆ ..ಈ ಬಾರಿಯ ಲೆಟರ್ ನಲ್ಲಿದ್ದಿದ್ದು. ಹೆಲ್ಲೋವಿನ (holloween)ಎಂಬ ಆಚರಣೆ..ಮತ್ತು ಅದರ ಕುರಿತಾದ ಚಟುವಟಿಕೆಗಳ ಬಗ್ಗೆ..,,ಹೋದ ವರ್ಷ ನಾನೂ ಹಲ್ಲೋವಿನ್ ದಿನವೇ ಬಂದಿದ್ದೆ..ಆದ್ದರಿಂದ ಅದರ ಆಚರಣೆ..ಅದರ ಕುರಿತಾದ ಯಾವುದೇ ವಿಷಯ ನನಗೆ ಗೊತ್ತಿರಲಿಲ್ಲ..ಎಂ ಎ ಮೊದಲ ವರ್ಷದಲ್ಲಿ ಜಾಗತಿಕ ಜಾನಪದ ಇತಿಹಾಸ ಓದುವಾಗ ಅಲ್ಲಿ ಈ ಶಬ್ದ ಕೇಳಿದ ನೆನಪು ಬಿಟ್ಟರೆ ..ಇದರ ಬಗ್ಗೆ..ಬೇರೆನು ಗೊತ್ತಿರದ ನಾನು..ಬರುವ ಶುಕ್ರವಾರ..ಹಲೋವಿನ್ ಫ್ಯಾನ್ಸಿ ಡ್ರೆಸ್ ಪಾರ್ಟಿ ಇದೆ ಮಗುವನ್ನು ಸಿದ್ದ ಮಾಡಿ ಕಳಿಸಿ ಎಂದಾಗ..ಏನು ಮಾಡೋದು ಎಂಬ ಗೊಂದಲದಲ್ಲಿದ್ದೆ..ಮಗನ ಟೀಚರ್ ಗೆ ಕೇಳಿದಾಗ..ಯಾವುದೇ ಆದೀತು..ರಾಕ್ಷಸ ,ಮಾಟಗಾರ,ಸ್ಕೆಲಿಟನ್,..ಆಕೆಯ ಲಿಸ್ಟ್ ಮುಂದುವರೆದಿತ್ತು..ನನಗೆ ತಲೆ ಚಕ್ರ ಬರುತಿತ್ತು..ಮಕ್ಕಳಿಗೆ ಸಿಂಗಾರ ಮದೊದೆಂದರೆ ನನಗೆ ಮೊದಲಿಂದಲೂ..ಅದೇನೋ ವೀಪರೀತ ಆಸಕ್ತಿ..ಓಣಿಯ ಮಕ್ಕಳು ಬಂಧುಗಳ ಮಕ್ಕಳು..ಮನೇ ಪಕ್ಕದ ಖಾಲಿ ಜಾಗೆಯಲ್ಲಿ..ಟೆಂಟ ಕಟ್ಟಿಕೊಂಡ ಅಲೆಮಾರಿ ಮಕ್ಕಳು ಯಾರಾದರೂ ಆದೀತು..ಅವರನ್ನು ಕರೆದು ತರ ತರದ ವೇಷ ಮಾಡಿ ಫೋಟೋ ತೆಗೆಡಿದುತ್ತಿದ್ದೆ,,,ನನ್ನ ಮಗನಿಗೂ..ಇವನ್ನೆಲ್ಲ ಪ್ರಯೋಗಿಸಿದ್ದೆನಾದರು..ಕೃಷ್ಣಾ,,ಬುದ್ಹ..ರಾಮ..ಶಕುಂತಲೆ..ಹುಡುಗಿವೇಶ.ಶಂಕರಾಚಾರ್ಯ ಬಿಟ್ಟರೆ..ಬೇರ್ಯಾವ ದೆವ್ವದ ವೇಷ ಹಾಕುವ ಧೈರ್ಯ ಮಾಡಿರಲಿಲ್ಲ. ..ಈಗ ಶಾಲೆಯಲ್ಲೇ ಹೇಳಿದ್ದಾರೆ..ಅಂದ ಮೇಲೆ..ಮಾಡಲೇಬೇಕಲ್ಲ..ಸರಿ …ಆದರೆ ಇವರು ಬೇರೆಲ್ಲ ಬಿಟ್ಟು ಭಯಾನಕ ವೇಷಗಳನ್ನು ಈ ಹಬ್ಬದಲ್ಲಿ ಹಾಕೊದ್ಯಾಕೆ ಅನ್ನೋದು..ನನ್ನ ಪ್ರಶ್ನೆ ಆಗಿತ್ತು..ಮತ್ತೆ ಕೇಳಬೇಕೆ..???ಶುರು ಆಯ್ತು..ತನಿಖೆ…ಹಲೋವಿನ್..ಬಗ್ಗೆ..
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 8 – ಅಸೂಯೆ ತಂದ ಆಡಳಿತ

ನಾನು ತಿಳಿದಿದ್ದಂತೆಯೇ, ಕೆಲವೊಂದು ಮಂದಿ ಇತರ ಕಲಾವಿದರ ಮಾತ್ಸರ್ಯ ಬೀಜದ ಮೊಳಕೆಯಾಗಿತ್ತು. ಆದರೆ, ನಾನು ಹೋಗುತ್ತಲಿರುವುದು ಸರಿಯಾದ ದಾರಿ ಎಂಬ ಆತ್ಮವಿಶ್ವಾಸ ನನಗಿತ್ತು. ಹೇಗಾದರೂ ನನ್ನ ಮೇಲೆ ಮತ್ಸರವಿದ್ದರೆ ಅದು ನನ್ನ ಮೇಲಷ್ಟೆ ಪ್ರಯೋಗವಾಗಬೇಕು-ಬೇರಾರನ್ನೂ ಮುಟ್ಟಲಾರದು ಎಂದುಕೊಂಡಿದ್ದೆ.
ಹಾವು ಪುರಾಣ!
ನೀ ಹೀಂಗೆಲ್ಲ ಬಪ್ಪಕಾಗ..
ಮಕ್ಕಳ್ ಮರಿ ತಿರ್ಗು ಜಾಗ
ಜಾಗ ಖಾಲಿ ಮಾಡ ಬೇಗ …”
ಮನೆ ಕಡೆ ನಾಗರಹಾವು ಬಂದಾಗಲೆಲ್ಲಾ ಅದನ್ನು ಓಡಿಸೋವಾಗ “ಅದಕ್ಕೆ ನೋವು ಮಾಡಬೇಡಿ” ಅನ್ನೋ ದೊಡ್ಡವರ ರಾಗದ ಹಿನ್ನಲೆಯಲ್ಲಿ ನಮ್ಮ ಕುಂದಗನ್ನಡದ ಪ್ರಾಸ ಹೀಗಿತ್ತು
ನಮ್ಮ ಹಳ್ಳಿಗಳಲ್ಲಿ ಹಾವಿನ ಬಗ್ಗೆ ಭಯ ಮತ್ತು ಆಸಕ್ತಿ ಸ್ವಲ್ಪ ಕಮ್ಮಿನೇ ಜನರಲ್ಲಿ.ಆದರೆ ನಂಗೆ ಮಾತ್ರ ಇವತ್ತಿಗೂ ಅಷ್ಟೇ ಉತ್ಸಾಹ ಅವುಗಳ ಬಗ್ಗೆ.ಅದರಲ್ಲೂ ನಾಗರಹಾವು ಅಂದ್ರೆ ಸಕತ್ ಖುಷಿ..ಅದು ಮಾಡುವಷ್ಟು ಗೊಂದಲ ,ಖರ್ಚು,ಭಯ ಮತ್ಯಾವ ಹಾವುಗಳು ಮಾಡೋದಿಲ್ಲ.ಅಪರೂಪಕ್ಕೆ ಅವುಗಳು ಕೋಳಿ ಗೂಡಲ್ಲಿರೋ ಮೊಟ್ಟೆ ತಿನ್ನೋಕೆ ಬಂದರೆ ಈ ಅಕ್ಕ ಪಕ್ಕದ ಮನೇಲಿ ಎಲ್ಲ ಹೋ ದೇವ್ರ್ ಹಾವ್ ಬಂತ್ ..ಎಂದು ಪಡುವ ಸಂಭ್ರಮವೋ ಸಂಭ್ರಮ!ನಂತರ ಅದಕ್ಕಿಷ್ಟು ಹಾಲು ಇಟ್ಟು ,ಅಕ್ಕಿ ಚೆಲ್ಲಿ ಕೈ ಮುಗಿಯೋರು !ಆದರೆ ಅದು ಕುಡಿದದ್ದು ನಾ ನೋಡೇ ಇಲ್ಲ.ಪಾಪ !ಅದರ ಹೆದರಿಕೆ ಅದಕ್ಕೆ ಎಲ್ಲಿ ಹೊಡಿತಾರೋ ಅಂತ!ಯಾವ ಹಾವಿಗೂ ಇರದ ಮುಂಡು ಬಾಲ ಇದಕ್ಕೆ ಇರೋದರಿಂದ ಅದರ ನಿಕ್ ನೇಮ್ ಮುಂಡಪ್ಪ.
ಒಮ್ಮೆ ನಮ್ಮ ಪಕ್ಕದ ಕಾಡಿಗೆ ನವಿಲು ಹಿಡಿಯುವ ಗುಂಪೊಂದು ಬಂದಿತ್ತು.ಅವರ ಜೊತೆ ನಾವು ಕೂಡ ನೋಡಲು ಹೋಗಿದ್ದೆವು .ಚಂದದ ನವಿಲು ಗರಿ ಸಿಗುತ್ತಲ್ಲಾ ಅಂತ!ಸರಿ ಹೋಗ್ತಾನೆ ಒಂದು ದೊಡ್ಡ ನವಿಲು ಸಿಕ್ಕಿಬಿಟ್ಟಿತು.ಅವರು ಅದನ್ನು ಕೊಲ್ತಾರೆ ಅಂತ ಮಾತ್ರ ನಮಗೆ ಗೊತ್ತಿರಲಿಲ್ಲ.ಅವರು ಅದನ್ನ ಕೊಂದು ಹೊಟ್ಟೆ ಸೀಳಿದಾಗ ಅಲ್ಲೊಂದು ಪುಟ್ಟ ನಾಗರ ಮರಿ!ಆಮೇಲೆ ನಾಗರ ಹಾವಿನ ಹೆಣ ಕಂಡ ತಪ್ಪಿಗೆ (ಅಷ್ಟು ಚಂದದ ನವಿಲು ಕೊಂದಿದ್ದು ಮಾತ್ರ ಸರಿಯಂತೆ ಅವರ ಪ್ರಕಾರ ) ಸರ್ಪ ಸಂಸ್ಕಾರ ,ಅದೂ ಇದೂ ಪೂಜೆ ಮಾಡಬೇಕಾಯ್ತು ,ಆಮೇಲೆ ನವಿಲು ಹಿಡಿಯೋದು ಬಿಟ್ಟಿರಬೇಕು ಬಹುಶಃ
ಮತ್ತಷ್ಟು ಓದು 
ಹಸಿವಿನ ಹಾದರಕ್ಕೆ ಹುಟ್ಟಿದ ಭ್ರಷ್ಟಾಚಾರ…
-ಸಾತ್ವಿಕ್ ಎನ್ ವಿ
ಮೊನ್ನೆ ಮೂರು ದಿವಸ ಬೆಂಗಳೂರಿನಲ್ಲಿ ಇದ್ದೆ. ನಗರ ಸಾರಿಗೆ ಬಸ್ಸುಗಳೇ ನನ್ನ ಓಡಾಟದ ಒಡನಾಡಿಗಳು. ಮಂಗಳೂರಿನ ಬಸ್ಸುಗಳಲ್ಲಿ ಓಡಾಡಿದವರಿಗೆ ಇಲ್ಲಿನ ವ್ಯವಸ್ಥೆ ತುಸು ನಿಧಾನ ಆನ್ನಿಸೀತು. ಇದ್ದ ಮೂರು ದಿನವು ಓಡಾಟದ ಸಲುವಾಗಿ ಹತ್ತಾರು ಬಸ್ಸುಗಳಲ್ಲಿ ಪ್ರಯಾಣಿಸುವಾಗಲು ಒಂದು ಸಾಮಾನ್ಯ ಕ್ರಿಯೆಯೊಂದು ನನ್ನ ಗಮನಕ್ಕೆ ಬಂತು. ನೀವು ಬಸ್ಸು ಹತ್ತಿ ಒಂದೆರಡು ನಿಲ್ದಾಣಗಳ ನಂತರ ಇಳಿಯುವವರಾಗಿದ್ದರೆ ನೀವು ಸರಿಯಾದ ಹಣಕೊಟ್ಟರೂ ಕಂಡಕ್ಟರ್ ನಿಮಗೆ ಟಿಕೇಟ್ ಕೊಡುವುದಿಲ್ಲ!! ಒಮ್ಮೆ ನಾನು ಬಾಯಿ ಬಿಟ್ಟು ಕಂಡಕ್ಟರನ್ನು ಟಿಕೇಟ್ ಕೊಡುವಂತೆ ಕೇಳಿದೆ. ಅವನು ಕೈಯಲ್ಲಿಯೇ ಸನ್ನೆ ಮಾಡಿ ಸುಮ್ಮನಿರುವಂತೆ ಹೇಳಿದ. ನಿಧಾನಕ್ಕೆ ೫ ರೂಪಾಯಿಯನ್ನು ನನ್ನ ಕೈಗೆ ಕೊಟ್ಟ. ನನಗೆ ಏನು ಹೇಳಬೇಕೋ ತಿಳಿಯಲಿಲ್ಲ. ನಾನು ಇಳಿಯಬೇಕಿದ್ದ ಸ್ಟಾಪ್ ಗೆ ಮೆಜೆಸ್ಟಿಕ್ ನಿಂದ ೮ ರೂಪಾಯಿ ಟಿಕೇಟ್ ಕೊಳ್ಳಬೇಕು. ಆದರೆ ಕೊಟ್ಟ ಹತ್ತು ರೂಪಾಯಿಯಲ್ಲಿ ಐದು ರೂಪಾಯಿ ತೆಗೆದುಕೊಂಡು ಉಳಿದ ಐದು ರೂಪಾಯಿ ವಾಪಸ್ಸು ಕೊಟ್ಟ. ಟಿಕೇಟ್ ಮಾತ್ರ ಇಲ್ಲ. ಅವನ ಮುಖದಲ್ಲಿ ವಿನ್ ವಿನ್ ಸಿದ್ದಾಂತದ ಮಂದ ನಗೆಯಿತ್ತು. ನನ್ನ ಮನದಲ್ಲಿ ಇಡೀ ದಿನ ತಪ್ಪು ಮಾಡಿದ ಅಪರಾಧಿ ಪ್ರಜ್ಞೆ.
ಇಂಥ ಪ್ರಸಂಗಗಳು ಬೆಂಗಳೂರಿಗರಿಗೆ ಸಾಮಾನ್ಯವಿರಬಹುದು. ಆದರೆ ಒಮ್ಮೆಮ್ಮೆ ಭೇಟಿಕೊಡುವ ನನ್ನಂಥವರಿಗೆ ತೀರಾ ಮಜುಗರವನ್ನು ತಂದು ಬಿಡುತ್ತವೆ. ನನಗಂತೂ ಈ ಪ್ರಸಂಗವಾದ ನಂತರ ಬೆಂಗಳೂರಿನ ಕಂಡಕ್ಟರಗಳ ಬಗ್ಗೆ ವಿಪರೀತ ಕೋಪ ಬಂದದ್ದೂ ನಿಜ. ಅಗಲೇ ನಿಶ್ಚಯ ಮಾಡಿದೆ, ಮತ್ತೊಮ್ಮೆ ಹೀಗೇನಾದರೂ ಕಡಿಮೆ ಹಣ ತೆಗೆದುಕೊಂಡು ಟಿಕೇಟ್ ಕೊಡದಿದ್ದರೆ ಸರಿಯಾಗಿ ಬೈಯ್ಯಬೇಕು ಅಂತ. ಮರುದಿನವೂ ಕಂಡಕ್ಟರ್ ಅದೇ ಕೆಲಸ ಮಾಡಿಬಿಡಬೇಕೇ? ನನಗೆ ಎಲ್ಲಿತ್ತೋ ಸಿಟ್ಟು … ಬಾಯಿಗೆ ಬಂದಂತೆ ಮಾತಾಡಲು ಆರಂಭಿಸಿದೆ. ಆದರೆ ಮಹಾನುಭಾವನಿಗೆ ಅದು ತಾಗಿದಂತೆ ಕಾಣಲೇ ಇಲ್ಲ!!! ಏನೂ ಆಗಿಯೇ ಇಲ್ಲ ಎಂಬಂತೆ ನನ್ನ ಪಕ್ಕದಲ್ಲಿ ಖಾಲಿ ಇದ್ದ ಸೀಟಿನಲ್ಲಿ ಕುಳಿತು ನಸುನಗುತ್ತ ಕೇಳಿದ ’ಸಾರ್, ನೀವು ಈ ಊರಿಗೆ ಹೊಸಬರಾ? ಅಂತ. ನಾನು ’ಅದೆಲ್ಲ ಇರಲಿ ಟಿಕೇಟ್ ಕೊಡಿ’ ಅಂದೆ. ಅವನು ಮತ್ತೂ ಕೂಲ್ ಆಗಿ ಮಾತಾಡೋಕೆ ಸ್ಟಾರ್ಟ್ ಮಾಡಿದ. ’ಸಾರ್, ನಿಮಗೆ ನಾವು ಟಿಕೇಟ್ ಕೊಡದೇ ಉಳಿಸಿದ ೫೦ – ೧೦೦ ರೂಪಾಯಿ ಬಗ್ಗೆ ಮಾತ್ರ ಗೊತ್ತು. ಅದರ ಬಗ್ಗೆ ನಿಮಗೆ ಸಿಟ್ಟು ಬರುತ್ತೆ. ಆದರೆ ನಮಗೆ ನಮ್ಮ ಜೀವನದ ಬಗ್ಗೆಯೇ ಸಿಟ್ಟು ಬರುತ್ತೆ ಸರ್. ಒಂದು ಕಡೆ ಮೇಲಾಧಿಕಾರಿಗಳ ಒತ್ತಡ, ಇನ್ನೊಂದು ಕಡೆ ಪ್ರಯಾಣೀಕರ ಕಿರಿಕಿರಿ, ಒಂದು ಸರಿಯಾದ ಊಟ ನಿದ್ದೆಯನ್ನು ಮಾಡೋಕೆ ಆಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ ಸರ್. ಮತ್ತಷ್ಟು ಓದು 
ಒಳಗಿಳಿದ ಬೆಂಗಳೂರು ಹಾಗೂ ನೈಪಾಲ್
-ಸುಪ್ರೀತ್ ಕೆ ಎಸ್
“ಇದು ನನ್ನ ಊರಲ್ಲ. ನಾನು ಇಲ್ಲಿ ಸೇರಿದವನಲ್ಲ. ಇದು ಸರಿಹೋಗುತ್ತಿಲ್ಲ” ಮೆಜೆಸ್ಟಿಕ್ ನಿಂದ ಆಟೋ ಹಿಡಿದು ಕೆ.ಆರ್ ವೃತ್ತದ ಬಳಿಯಿರುವ ನನ್ನ ಕಾಲೇಜಿಗೆ ತಲುಪುವುದಕ್ಕೆ ರಸ್ತೆಗಳನ್ನು ಹಾದು ಹೋಗುವಾಗ ನನಗೆ ಅನ್ನಿಸುತ್ತಿದ್ದದ್ದು ಹೀಗೆ. ನಾನು ಹೊಸ ಊರಿನ ಚಹರೆಯ ಅಪರಿಚಿತತೆಯನ್ನು ಎದುರುಗೊಂಡಿದ್ದು ಈ ಭಾವನೆಯಲ್ಲೇ. ದೇಶದ ಮೂಲೆ ಮೂಲೆಗಳಿಂದ ದಿನವೊಂದಕ್ಕೆ ಸಾವಿರಾರು ಮಂದಿ ಬೆಂಗಳೂರು ಸೇರುತ್ತಾರೆ. ಬೆಂಗಳೂರು ಸಹ ಕೊಸರದೆ ಕೆಮ್ಮದೆ ಎಲ್ಲರನ್ನು ಒಳಕ್ಕೆ ಬಿಟ್ಟುಕೊಳ್ಳುತ್ತದೆ. ಆದರೆ ಪ್ರವಾಸಿಯಾಗಿಯಲ್ಲದೆ ಸ್ಥಾವರ ಸ್ಥಾಪಿಸಿಕೊಳ್ಳಲು ಬಂದಿದ್ದ ನನ್ನನ್ನು ಒಳಕ್ಕೆ ಬಿಟ್ಟುಕೊಳ್ಳಲು ಬೆಂಗಳೂರು ಬಿಗುಮಾನ ತೋರಿದ ಹಾಗೇ ನನಗೆ ಭಾಸವಾಗಿತ್ತು. ಅತ್ತಿಂದಿತ್ತ ಓಡಾಡುವ ಅಷ್ಟು ಜನರಲ್ಲಿ ಯಾರಿಗೂ ನಾನು ಬಂದುದದರ ಕುರಿತು ಸಂಭ್ರಮವಿಲ್ಲ. ಅಸಲಿಗೆ ಟಾರು ಕವಿದ ರಸ್ತೆಯ ಮೇಲೆ ನಾನೊಬ್ಬ ಮಾಂಸ ಮಜ್ಜೆಗಳ ಮನುಷ್ಯ ನಡೆದು ಹೋಗುತ್ತಿರುವುದೂ, ನಾನು ಇಲ್ಲಿಯವನಾಗಲಿಕ್ಕೆ ಸಾಧ್ಯವಾಗದೆ ಒದ್ದಾಡುತ್ತಿರುವುದು ಯಾರ ಕಣ್ಣಿಗೂ ಮುಖ್ಯವಾಗಿಯೇ ಇರಲಿಲ್ಲ. ಓಡಾಡುವ ಜನರ ಕಣ್ಣಿಗೆ ಯಾವುದೂ ಮುಖ್ಯವಾಗಿದ್ದಂತೆ ಕಾಣುತ್ತಿರಲಿಲ್ಲ.
ವರ್ಷಗಳು ಕಳೆದಿವೆ. ಅಂದು ಕೆ.ಆರ್.ವೃತ್ತದಿಂದ, ಮೈಸೂರು ಬ್ಯಾಂಕ್ ವೃತ್ತದ ನಡುವೆ ಇರುವ ಗೊಂದಲಕಾರಿ ಒಮ್ಮಾರ್ಗಗಳ ಚಕ್ರವ್ಯೂಹದಲ್ಲಿ ಸಿಲುಕಿಕೊಂಡು, ಮರಳುಗಾಡಿನಲ್ಲಿ ದಿಕ್ಕು ತಪ್ಪಿದವನಂತೆ ಓಡಾಡುತ್ತಿದ್ದೆ. ರಾತ್ರಿ ಎಂಟುಗಂಟೆ ದಾಟಿತ್ತು. ಕತ್ತಲು ಗಾಢವಾದಷ್ಟು, ವಾಹನಗಳ ಸಂಖ್ಯೆ ವಿರಳವಾದಷ್ಟೂ ಎದೆ ಬಡಿತ ಜೋರಾಗುತ್ತಿತ್ತು. ದಾರಿಹೋಕರೊಂದಿಗೆ ಮಾತನಾಡಲೂ ಸಂಕೋಚ. ಯಾರಲ್ಲಾದರೂ ದಾರಿ ಕೇಳಬೇಕೆ ಬೇಡವೇ ಎನ್ನುವುದಕ್ಕೆ ನೂರು ಮಾರು ದೂರದಿಂದ ನಡೆದು ಬರುವ ವ್ಯಕ್ತಿಯನ್ನು ಅವಲೋಕಿಸುವುದು. ಆತನ ಚರ್ಯೆಯಲ್ಲಿ, ವರ್ತನೆಯಲ್ಲಿ, ಬಾಡಿ ಲ್ಯಾಂಗ್ವೇಜಿನಲ್ಲಿ ತುಸುವೇ ಆಕ್ರಮಣ ಕಂಡೊಡನೆ ಅವನಿಂದ ಕಣ್ಣು ಕೀಲಿಸಿ ಇನ್ನೊಬ್ಬನಿಗಾಗಿ ಕಾಯುವುದು. ಯಾರೋ ತೋರಿದ ದಿಕ್ಕಿನಲ್ಲಿ ನಿಂತು ಎಂದೂ ಬರದಿರುವ ಬಿ.ಎಂ.ಟಿ.ಸಿ ಬಸ್ಸಿಗಾಗಿ ಕಾಯುವುದು. ಕಾಲು ನಡಿಗೆಯ ದೂರದಲ್ಲಿದ್ದ ಮೆಜೆಸ್ಟಿಕ್ ಗೆ ದಾರಿ ಯಾವುದೆಂದು ಕೇಳುತ್ತ ಅಲೆಯುವುದು. ಬೆಂಗಳೂರೆಂಬ ಮರಳುಗಾಡಿನ ಓಯಸಿಸ್ ಆಗಿ ಕಂಡಿತ್ತು ಅಂದು ಮೆಜೆಸ್ಟಿಕ್. ಕಣ್ಣೆದುರು ಸರ್ರೆಂದು ಸಾಗುವ ಅಷ್ಟು ಬಸ್ಸುಗಳಲ್ಲಿ ಒಂದೂ ಮೆಜೆಸ್ಟಿಕ್ ಹೋಗುವುದಿಲ್ಲ ಎನ್ನುವುದನ್ನು ನಂಬುವುದಕ್ಕೇ ಸಾಧ್ಯವಾಗಿರಲಿಲ್ಲ. ಬೆಂಗಳೂರಿನ ಪಾಲಿಗೆ ರಕ್ತವನ್ನು ಪಂಪ್ ಮಾಡುವ ಹೃದಯ ಮೆಜೆಸ್ಟಿಕ್, ಅಲ್ಲಿಗೆ ಬಸ್ಸುಗಳು ಹೋಗುತ್ತಿಲ್ಲ ಎಂದರೆ ಏನರ್ಥ? ಮತ್ತಷ್ಟು ಓದು 
ಅವತ್ತು ಎದೆ ನೋವೂ ಬಂದಿರಲಿಲ್ಲ, ಶರಣರೂ ಬರಲಿಲ್ಲ..!
-ಕಾಲಂ ೯
ನೂರು ವರ್ಷ ದಾಟಿದ ಸಿದ್ಧಗಂಗಾ ಸ್ವಾಮೀಜಿ ಜೈಲು-ಆಸ್ಪತ್ರೆ ಹುಡುಕಿಕೊಂಡು ಯಡಿಯೂರಪ್ಪನವರನ್ನು ನೋಡಲು ಹೋಗಿದ್ದಾರಲ್ಲ? ಏನಿದರ ಹಿಂದಿನ ಹಕೀಕತ್ತು? ಧರ್ಮಾಚರಣೆಗೂ ಪುರುಸೊತ್ತು ಇಲ್ಲದಷ್ಟು ಸಾಮ್ರಾಜ್ಯ ಕಟ್ಟಿಕೊಂಡು ಸ್ವಾಮೀಜಿಯೊ ಅಥವಾ JSS ಕಂಪೆನಿಯ CEO ನೋ ಎಂಬಂತಿರುವ ಜಗದ್ಗುರುಗಳು ಧಾವಿಸಿ ಬಂದರಲ್ಲ? ಅಂತಹದೇನು ಆಗಿತ್ತಲ್ಲಿ? ರಂಭಾಪುರಿಗಳು ಸೇರಿದಂತೆ ಅನೇಕ ಸಣ್ಣ-ಪುಟ್ಟ ವೀರಶೈವ ಸ್ವಾಮೀಜಿಗಳು ಯಡಿಯೂರಪ್ಪನವರನ್ನು ಸಂತೈಸಲು ಸಾಲುಗಟ್ಟಿದ್ದು ಮಾಧ್ಯಮಕ್ಕೆ ಆಶ್ಚರ್ಯವೆನಿಸಿರಲಿಲ್ಲ. ಆದರೆ ಈ ಹಿರಿತಲೆಗಳು ಹಾಗೇ ದೌಡಾಯಿಸಿದ್ದರ ಹಿಂದೇನು ನಡೆದಿದೆ? ಇದು ಮಾಧ್ಯಮದ ಒಳಗೂ-ಹೊರಗೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸೋಮವಾರದ ತಮ್ಮ ಅಂಕಣದಲ್ಲಿ ಅಮೀನ್ಮಟ್ಟು ತುಂಬಾ ಆಪ್ತವಾಗಿಯೇ ಯಡಿಯೂರಪ್ಪನವರ ಪ್ಲಸ್ಸು-ಮೈನಸ್ಸುಗಳನ್ನು ಹೊರಹಾಕಿದ್ದನ್ನು ಓದಿದ ಅನೇಕರು ’ಈ ಮಠಾಧಿಪತಿಗಳನ್ನೇಕೆ ಬಿಟ್ಟಿರಿ’ ಎಂದು ಪ್ರತಿಕ್ರಿಯಿಸಿದ್ದಾರೆ. ಸರ್ವ ವೀರಶೈವ ಮಠಗಳಿಗೂ ಒಬ್ಬನೇ ಆಡಳಿತಾಧಿಕಾರಿ ಎಂಬಂತಿರುವ ಸಚಿವ ಸೋಮಣ್ಣ ಬೆನ್ನುಹತ್ತಿ ಇವರನ್ನೆಲ್ಲ ಹೊರಡಿಸಿಕೊಂಡು ಬರುತ್ತಿದ್ದಾರೆಯೇ? ಸರ್ಕಾರದಿಂದ ದೇಣಿಗೆಯಾಗಿ ಪಡೆದ ೩-೫ ಕೋಟ ರೂಗಳ ಹಂಗು ಹಿಂಗೆಲ್ಲ ಮಾಡುವಂತೆ ಮಾಡಿತೆ?
ಒಟ್ಟು ರಾಜ್ಯದ ನಾಯಕತ್ವದ ಎಲ್ಲ ಲಕ್ಷಣಗಳು ಕರಗಿ ಶುದ್ಧ ವೀರಶೈವ ಮುಖಂಡನಂತೆ ಗೋಚರಿಸುತ್ತಿರುವ ಯಡಿಯೂರಪ್ಪನವರ ಜೈಲು-ಆಸ್ಪತ್ರೆಗಳ ಹರಾಕಿರಿ ನಗೆಪಾಟಲಾಗಿ ಹೋಗಿರುವಾಗ ಈ ’ಗೌರವಾನ್ವಿತ’ರೇಕೆ ಹರಸಲು ಹೊರಟರು? ಮತ್ತಷ್ಟು ಓದು 
ತೀರಾ ಮಾನವೀಯತೆಯ ಲವಲೇಶವನ್ನೂ ಹೊ೦ದಿರದವರ ನದವಳಿಕೆ ಇದೇ ರೀತಿ..!!
– ಕೆ.ಎಸ್ ರಾಘವೇಂದ್ರ ನಾವಡ
“ಅದೃಷ್ಟ ಮತ್ತು ದುರಾದೃಷ್ಟಗಳೆರಡೂ ಒ೦ದೇ ವಾಹನದಲ್ಲಿ ಪ್ರಯಾಣಿಸುತ್ತವೆ“ ಎ೦ಬ ನಾವಡ ಉವಾಚವೊ೦ದಿದೆ.. ಇ೦ದು ಅದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಪ್ರಮೇಯವೂ ಬ೦ದಿದೆ! ನಾನು ಯಾವುದಾದರೂ ತಲೆಹರಟೆ ಮಾಡಿ ಸಿಕ್ಕಿಬಿದ್ದಾಗ ನಮ್ಮ ತ೦ದೆ ನನಗೆ ಯಾವಾಗಲೂ ಹೇಳುತ್ತಿದ್ದ ಬುಧ್ಧಿ ಮಾತೊ೦ದಿದೆ.. “ ಸ್ವಯ೦ಕೃತಾಪರಾಧಕ್ಕೆ ಮನ್ನಣೆಯಿಲ್ಲ ಕಣಯ್ಯ..“ ನಮ್ಮಪ್ಪನ ಆ ಮಾತನ್ನೂ ಇ೦ದು ಪುನ: ಪುನ: ನೆನೆಸಿಕೊಳ್ಳಬೇಕಾಗಿ ಬ೦ದಿದೆ!! ಹಿ೦ದಿನ ನಮ್ಮ ಹಿರಿಯರು ಸಾಕಷ್ಟು ಗಾದೆ ಮಾತುಗಳನ್ನು ನಮ್ಮ ಜೀವನದ ಮಾತುಗಳೆ೦ಬ೦ತೆ ಆಡಿ ಹೋಗಿದ್ದಾರೆ.. ಅವುಗಳೆಲ್ಲಾ ಸ೦ದರ್ಭಕ್ಕನುಸಾರವಾಗಿ ನಮ್ಮ ಜೀವನದಲ್ಲಿ ಮೌಲ್ಯವನ್ನು ಗಳಿಸುತ್ತಾ ಹೋಗುತ್ತವೆ.. ನಮಗೆ ಅಚ್ಚರಿಯನ್ನು ಮೂಡಿಸುತ್ತವೆ!! “ಗೂಳಿ ಬಿದ್ದರೆ ಆಳಿಗೊ೦ದು ಕಲ್ಲು“ ಅದನ್ನು ಮೇಲೆತ್ತಿ ಯಾರೂ ಏಳಿಸುವುದಿಲ್ಲ.. ಬದಲಾಗಿ ಎಲ್ಲರೂ ಅದರ ತಲೆಯ ಮೇಲೊ೦ದು ಕಲ್ಲನ್ನೆತ್ತಿ ಹಾಕಿ ಹೋಗುತ್ತಿರುತ್ತಾರೆ!! ಆ ಗಾದೆಯು ಇ೦ದಿನ ಕರ್ನಾಟಕ ರಾಜಕೀಯದಲ್ಲಿ ನಿಜವಾಗಿರುವಾಗ ಅದನ್ನೂ ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾಗಿ ಬ೦ದಿದೆ..
ಅದು ೧೯೮೩ ರ ಚುನಾವಣೆಯ ಕಾಲ.. ಕರ್ನಾಟಕ ರಾಜಕೀಯದಲ್ಲಿ ಭಾ.ಜ.ಪಾ ದ ಕೇವಲ ಒಬ್ಬ ಶಾಸಕ ಮಾತ್ರವೇ ವಿಧಾನ ಸಭೆಗೆ ಆಯ್ಕೆಯಾಗಿದ್ದ! ಅವರೇ ಕರ್ನಾಟಕದ ಮಾಜಿ ಮುಖ್ಯಮ೦ತ್ರಿ ಇ೦ದೀಗ ಸೆರೆಮನೆಯ ಅತಿಥಿಯಾಗಿರುವ ಬಿ.ಎಸ್.ಯಡಿಯೂರಪ್ಪ! ಕೇವಲ ಒಬ್ಬ ಶಾಸಕನಿ೦ದ ಆರ೦ಭವಾದ ಕರ್ನಾಟಕ ಭಾ.ಜ.ಪಾದ ಅಧಿಕಾರದತ್ತ ಯಾತ್ರೆ ೨೦೦೮ರ ವಿಧಾನಸಭೆಯ ಚುನಾವಣೆಯಲ್ಲಿ ನನಸಾಗಿ, ೧೧೦ ಜನ ಶಾಸಕರು ವಿಧಾನಸಭೆಗೆ ಆಯ್ಕೆಯಾಗುವಲ್ಲಿ ಯಡಿಯೂರಪ್ಪ ಹಾಗೂ ಬಿ.ಬಿ. ಶಿವಪ್ಪರ ಪರಿಶ್ರಮವನ್ನು ಮರೆಯುವ೦ತಿಲ್ಲ.. ನಿಜ.. ಇ೦ದು ಯಡಿಯೂರಪ್ಪ ರಾಜ್ಯ ಭಾ,ಜ,ಪಾ ದ ಹೆಸರನ್ನು ರಾಷ್ಟ್ರೀಯ ಮಟ್ಟದಲ್ಲಿಯೇ ಕೆಡಿಸಿದ್ದಾರೆ. ರಾಜ್ಯ ಭಾ.ಜ.ಪಾ. ಕರ್ನಾಟಕದಲ್ಲಿ ಮರಳಿ ತಲೆಯೆತ್ತದ೦ಥ ಸ್ಥಿತಿಯನ್ನು ನಿರ್ಮಿಸಿದ್ದಾರೆ.. ಎಲ್ಲವೂ ಸರಿ.. ಆದರೆ ಅವರು ಸೆರೆಮನೆ ಪಾಲಾದ ನ೦ತರ ಕರ್ನಾಟಕ ರಾಜಕೀಯ ದ ವಿರೋಧ ಪಕ್ಷಗಳು ಹಾಗೂ ಪ್ರಜಾಪ್ರಭುತ್ವದ ಆಧಾರಸ್ಥ೦ಭಗಳೆನ್ನಿಸಿರುವ ಮಾಧ್ಯಮಗಳು ನಿಷ್ಪಕ್ಷಪಾತವಾಗಿ ನಡೆದುಕೊ೦ಡಿವೆಯೇ? ಎ೦ಬ ಪ್ರಶ್ನೆ ಮನಸ್ಸಿನಲ್ಲಿ ಏಳುವುದಿಲ್ಲವೇ? ಏಳುತ್ತದೆ! ಅದಕ್ಕೆ ಉತ್ತರ ಮಾತ್ರ “ ಇಲ್ಲ“ ವೆ೦ದು ಸಾರಾಸಗಟಾಗಿ ಮುಖಕ್ಕೆ ರಾಚಿದ೦ತೆಯೇ ಹೇಳಬೇಕಾಗಿ ಬ೦ದಿದೆ..
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 7 – ಗುರುವಿಗಾಗಿ ನಾಟ್ಯಶಾಲೆ
ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು ಜನಿಸಿದ್ದು ಕಳೆದ ಶತಮಾನದ 1912ರ ಸೆಪ್ಟೆಂಬರ್ 08ರಂದು. ತಮ್ಮ ವಯಸ್ಸಿನ ನೂರನೇ ಸಂವತ್ಸರದ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪ. ಗೋ.)ರವರರು ನಿರೂಪಣೆ ಗೈದಿರುವ ಕುರಿಯ ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು” ಯಕ್ಷಗಾನ ಅಭಿಮಾನಿಗಳಿಗಾಗಿ ‘ನಿಲುಮೆ ‘ದಲ್ಲಿ ಪ್ರಕಟವಾಗುತ್ತಿದೆ. ಮರುದಿನ ಶ್ರೀ ಶೆಟ್ಟರು ವೇತನದ ವಿಷಯ ಪ್ರಸ್ತಾಪ ಮಾಡಿದರು.





