ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

4
ಆಕ್ಟೋ

ನಿಮ್ಮ ನಿಲುಮೆಗೆ ಒಂದು ವರ್ಷ- ಹರಸ ಬನ್ನಿ, ಹಾರೈಸಬನ್ನಿ

ವರ್ಷವಾಗಿದ್ದು ತಿಳಿಯಲೇ ಇಲ್ಲ ನೋಡಿ.ಹೌದು ನಮ್ಮ-ನಿಮ್ಮ ’ನಿಲುಮೆ’ಗೆ ವರ್ಷದ ಸಂಭ್ರಮ :). ’ಕನಸು-ಕನವರಿಕೆ’ಯಾಗಿ ಶುರುವಾದ ನಿಲುಮೆ ’ಎಲ್ಲ ತತ್ವದ ಎಲ್ಲೇ ಮೀರಿ’ ನಿಲ್ಲಲ್ಲಿ ಅನ್ನುವ ನಮ್ಮ ಆಶಯಕ್ಕೆ ವರುಷವಾಗಿದೆ. ಈ ಸಂಭ್ರಮಕ್ಕೆ ನಮ್ಮ ಎಲ್ಲ ಬರಹಗಾರರು, ಓದುಗರು ಕಾರಣಕರ್ತರು. ಅವರಿಲ್ಲದಯೇ ನಾವಾದರೂ ಏನು ಮಾಡಲಿಕ್ಕಾಗುತಿತ್ತು ಅಲ್ಲವೇ?

ನೂರು ಮತದ ಹೊಟ್ಟ ತೂರಿ
ಎಲ್ಲ ತತ್ವದ ಎಲ್ಲೆ ಮೀರಿ
ನಿರ್ದಿಗಂತವಾಗಿ ಏರಿ
ಓ ನನ್ನ ಚೇತನ ಆಗು ನೀ ಅನಿಕೇತನ

ರಸ ಋಷಿ ಕುವೆಂಪು ಅವರ ಈ ನುಡಿಗಳೆ ನಮಗೆ ಸ್ಪೂರ್ತಿ. ಯಾವುದೇ ಜಾತಿ, ಮತ, ತತ್ವಗಳಿಗೆ ಗಂಟು ಬೀಳದೆ, ಎಡ-ಬಲ ಪಂಥೀಯರ ನಡುವೆ ಸಿಕ್ಕಿಕೊಳ್ಳದೆ, ಯಾವುದೇ ಮತ್ತು ಯಾರದೇ ಮರ್ಜಿಗೇ ಬೀಳದೆ ಅನ್ನಿಸಿದ್ದನ್ನು ನೇರವಾಗಿ ಹೇಳುವ, ಆ ಮೂಲಕ ಯಾವ ಗುಂಪಿಗೂ ಸೇರದೆಯೆ ಸ್ವತಂತ್ರವಾಗಿ ಯೋಚಿಸುವ ಬಯಕೆ ನಮ್ಮದು. ಅಷ್ಟಕ್ಕೂ ’ಸತ್ಯ’ ಅನ್ನುವುದು ಎಡ-ಬಲ ಪಂಥದ ಆಸ್ತಿಯೇನು ಅಲ್ಲವಲ್ಲ. ಅದು ಈ ಇಬ್ಬರ ನಡುವೆಯು ಸಿಲುಕದೆ ತನ್ನ ಪಾಡಿಗದು ಯಾವುದೋ ಮೂಲೆಯಲ್ಲಿ ನಿರ್ಲಿಪ್ತವಾಗಿರುತ್ತದೆ. ಅದನ್ನ ಹುಡುಕುವ ಮುಗ್ಧ ಆಸೆ ನಮ್ಮದು.ನೊಂದ ಜೀವಗಳಿಗೆ ದನಿಯಾಗುವ ಬಯಕೆ ನಮ್ಮದು. ಮತ್ತಷ್ಟು ಓದು »

29
ಸೆಪ್ಟೆಂ

ಸಂಸ್ಕೃತಿ ಸಂಕಥನ – ೭

– ರಮಾನಂದ ಐನಕೈ
ಕ್ರಿಯಾ ಜ್ಞಾನವೇ ಬದುಕಿನ ಶಿಕ್ಷಣ

ನಮ್ಮೂರಿನಲ್ಲೊಬ್ಬ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರಿದ್ದಾರೆ. ಎಂ.ಎಸ್.ಸಿ.ಯಲ್ಲಿ ಬಂಗಾ ರದ ಪದಕ ಪಡೆದವರು. ನಿವೃತ್ತಿಯ ನಂತರ ಊರಿಗೆ ಬಂದು ಕೃಷಿಕರಾಗಿದ್ದಾರೆ. ಅವರಿಗೆ ಗೊತ್ತಿ ಲ್ಲದ ವಿಷಯವಿಲ್ಲ. ಯಾವ ಕ್ಷೇತ್ರದ ಬಗ್ಗಾದರೂ ಘಂಟೆಗಟ್ಟಲೇ ಮಾತನಾಡುತ್ತಾರೆ. ತಮಗೆ ಸಿಕ್ಕಾ ಪಟ್ಟೆ ಜ್ಞಾನವಿದೆಯೆಂಬ ಅಹಂಕಾರವೂ ಇದೆ. ಆದರೆ ಒಂದು ತೊಂದರೆ ಅಂದರೆ ಅವರು ಅಂದು ಕೊಂಡಂತೆ ಒಂದೂ ಆಗುವುದಿಲ್ಲ. ಅವರ ಮಾತಿ ನಲ್ಲಿ ತೋರುವ ಚಾಕಚಕ್ಯತೆ ಕೃತಿಯಲ್ಲಿ ಕಾಣುವು ದಿಲ್ಲ. ಉದಾಹರಣೆಗೆ ಅವರು ಶಕ್ತಿಯ ಮೂಲದ ಬಗ್ಗೆ ಅಮೂಲಾಗ್ರ ತಿಳುವಳಿಕೆ ಹೊಂದಿದ್ದಾರೆ. ವಿದ್ಯುತ್ ಅನ್ವೇಷಣೆಯ ಕುರಿತು ಸವಿವರವಾದ ಮಾಹಿತಿ ನೀಡುತ್ತಾರೆ. ವಿದ್ಯುತ್ ಕಂಡು ಹಿಡಿದ ವರು, ವಿದ್ಯುತ್ ಹೇಗೆ ಉತ್ಪಾದಿಸಲ್ಪಡುತ್ತದೆ; ತಂತಿ ಹೇಗೆ ವಿದ್ಯುತ್ ವಾಹಕವಾಗುತ್ತದೆ; ಬಲ್ಪಿನ ಒಳ ಗಡೆಯಿಂದ ಹೇಗೆ ಪ್ರಕಾಶ ನೀಡುತ್ತದೆ ಇತ್ಯಾದಿ. ಅವರ ನೆಚ್ಚಿನ ಆಳು ಶಂಕರ. ಆತ ಅಕ್ಷರ ಜ್ಞಾನಿಯಲ್ಲ. ಅವನಿಗೆ ಈ ಪ್ರಪಂಚದ ಬಗ್ಗೆ ಕಡಿಮೆ ತಿಳುವಳಿಕೆ ಇದೆ. ಮೇಸ್ಟ್ರು ಹೇಳಿದಷ್ಟು ಮಾಡುವುದು ಅವನ ಕಾಯಕ. ವಿದ್ಯುತ್ತಿನ ಬಗ್ಗೆ ಇಷ್ಟೆಲ್ಲ ಮಾಹಿತಿ ನೀಡುವ ಪ್ರಾಧ್ಯಾಪಕರಿಗೆ ಮನೆಯಲ್ಲಿ ಫ್ಯೂಸ್ ಹೋದರೆ, ಹೋಲ್ಡರಿನಲ್ಲಿ ವಯರ್ ಬಿಟ್ಟರೆ ಹಾಕಲು ಬರುವುದಿಲ್ಲ. ಆ ಕೆಲಸ ಮಾಡುವವನು ಶಂಕರ. ವಿದ್ಯುತ್ತಿಗೆ ಸಂಬಂಧಿಸಿದ ಅಷ್ಟೂ ರಿಪೇರಿ ಕೆಲಸವನ್ನು ಶಂಕರ ಮಾಡುತ್ತಾನೆ. ಆತನನ್ನು ಕೇಳಿ ದರೆ ತನಗೆ ಇದರ ಬಗ್ಗೆ ತಿಳುವಳಿಕೆಯೇನಿಲ್ಲ. ಹೀಗೆ ಮಾಡಿ ಮಾಡಿ ಕಲಿತೆ ಅನ್ನುತ್ತಾನೆ. ಜೀವನದ ಚಿಕ್ಕ ಕೆಲಸಕ್ಕೆ ನೆರವಿಗೆ ಬಾರದ ಪ್ರಾಧ್ಯಾಪಕರ ಪಾಂಡಿತ್ಯವನ್ನು ಏನನ್ನೋಣ? ಪ್ರಾಧ್ಯಾಪಕರದ್ದು ಲೋಕಜ್ಞಾನ, ಶಂಕರನದ್ದು ಕ್ರಿಯಾಜ್ಞಾನ ಅನ್ನೋಣವೇ? ಉತ್ತರ ಗೊತ್ತಿಲ್ಲ. ಹುಡುಕಲು ಪ್ರಯತ್ನಿಸೋಣ.
ಮತ್ತಷ್ಟು ಓದು »

29
ಸೆಪ್ಟೆಂ

ಲೈಫು ಇಷ್ಟೇನೇ

– ರೂಪಾ ರಾಜೀವ್
ಗಾಂಧಿನಗರದಲ್ಲಿ ತಯಾರಾಗುವ ಪ್ರತಿ ಚಲನಚಿತ್ರಗಳು ಇಂತಿಂತಹ ಗುಂಪಿಗೆ ಎಂದು ತಯಾರಾಗುತ್ತವೆ.  ಉದಾಹರಣೆಗೆ ಮಚ್ಚು, ಲಾಂಗ್, ಫೈಟ್, ಇಂತಹವು ಒಂದು ವರ್ಗದ ವೀಕ್ಷಕರಿಗೆ, ಕಣ್ಣೀರು, ತಾಯಿ ಸೆಂಟಿಮೆಂಟ್ಸ್ ಮತ್ತೊಂದು ವರ್ಗದವರಿಗೆ, ದೇವಿ ಮಹಾತ್ಮೆ ಇಂತಹ ಭಕ್ತಿ ಪ್ರಧಾನ ಚಿತ್ರಗಳು ಇನ್ನೊಂದು ವರ್ಗದ ವೀಕ್ಷಕರಿಗೆ, ಹೀಗೆ.  ಯೋಗರಾಜ್ ಭಟ್ ತಮ್ಮ ‘ಪಂಚರಂಗಿ’ ನಿರ್ಮಾಣದ ವೇಳೆಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು, ನಮ್ಮ ಕನ್ನಡ ಚಲನಚಿತ್ರಗಳು ಉಳಿಯಬೇಕಾದರೆ ಅಥವಾ ಥಿಯೇಟರು ಗಳಲ್ಲಿ ಹಣ ಮಾಡಬೇಕೆಂದಿದ್ದರೆ ಆ ಚಿತ್ರವು ಯುವ ಜನಾಂಗವನ್ನು ಅಂದರೆ ೧೮ ವಯಸ್ಸಿನಿಂದ ೨೩ ವರ್ಷದವರನ್ನು ಸೆಳೆಯುವಂತಿರಬೇಕು. ಆ ವರ್ಗದವರಿಗೆ ಸಿನೆಮಾ ಹಿಡಿಸಿದರೆ ಚಿತ್ರವು ಹಿಟ್ ಆಗುವುದು ಎಂದಿದ್ದರು. ಅವರ ಶಿಷ್ಯ ಪವನ್ ಕುಮಾರ್ ಅಕ್ಷರಷಃ ಭಟ್ಟರ ಈ ಮಾತಿಗೆ ಮಾರು ಹೋಗಿ ನಿರ್ದೇಶಿಸಿರುವ ಸಿನೆಮಾ ‘ಲೈಫು ಇಷ್ಟೇನೇ’.

ಮತ್ತಷ್ಟು ಓದು »

24
ಸೆಪ್ಟೆಂ

ಸಂಸ್ಕೃತಿ ಸಂಕಥನ – ೬

ರಮಾನಂದ ಐನಕೈ

ಸಂಶೋಧನೆ ಅಂದರೆ ಏನು? ಇತ್ತೀಚಿನ ದಿನಗಳಲ್ಲಿ ಯಾರಾದರೂ ಸಂಶೋಧನೆ ಮಾಡಿದ್ದಾರೆ ಅಥವಾ ಪಿ.ಎಚ್.ಡಿ. ಪದವಿ ಪಡೆದಿದ್ದಾರೆಂದರೆ ನಗು ಬರುತ್ತದೆ. ನೌಕರಿ ಪಡೆಯಲು ಅಥವಾ ನೌಕರಿಯಲ್ಲಿ ಬಡ್ತಿ ಪಡೆಯಲು ಈ ಪಿ.ಎಚ್.ಡಿ. ಅರ್ಹತೆಯಾಗುತ್ತದೆಯೆಂಬ ಕಾರಣಕ್ಕೆ ಮಾಡುತ್ತಾರೆಯೇ ವಿನಾ ಆಸಕ್ತಿಗಾಗಿ ಅಲ್ಲ. ನಮ್ಮ ವಿಶ್ವವಿದ್ಯಾಲಯಗಳ ಸಂಶೋಧನಾ ವಿಭಾಗಗಳಿಗೆ ಈ ದುರ್ಗತಿ ಬಂದಿದೆ. ಹಣ ಕೊಟ್ಟರೆ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರೇ ಪ್ರಬಂಧ ಬರೆದು ಪದವಿ ಕೊಡುತ್ತಾರೆ. ಪಿ.ಎಚ್.ಡಿ. ಎಂಬುದು ವ್ಯಾಪಾರವಾಗಿದೆ. ಸಂಶೋಧನೆಗೆ ಆಯ್ದುಕೊಳ್ಳುವ ವಿಷಯವಾದರೂ ಎಂಥದ್ದು. ಯಾರಿಗೂ ಪ್ರಯೋಜನವಾಗದ ವಿಷಯ. ಸಂಶೋಧನಾ ಪ್ರಬಂಧವನ್ನು ನೆಟ್ಟಗೆ ಮೂರು ಜನರು ಓದಲಾರರು. ಈ ರೀತಿಯ ಸಂಶೋಧನೆಗಳಿಂದ ಅಥವಾ ಸಂಶೋಧಕರಿಂದ ದೇಶಕ್ಕೆ ಏನಾದರೂ ಪ್ರಯೋಜನ ಇದೆಯಾ?

ಸುಮಾರು ಹತ್ತು ವರ್ಷಗಳ ಹಿಂದಿನ ಘಟನೆ. ಶಿರಸಿಯ ಗಣಪತಿ ದೇವಸ್ಥಾನದ ಹತ್ತಿರವಿರುವ ಶಂಕರಹೊಂಡದ ಸ್ವಚ್ಛತಾ ಕಾರ್ಯಕ್ರಮ ನಡೆಯತ್ತಿತ್ತು. ಆಗ ಒಂದು ಪುಟ್ಟ ವಿಗ್ರಹ ಸಿಕ್ಕಿತು. ಕ್ಷಣಾರ್ಧದಲ್ಲಿ ಇಡೀ ಶಿರಸಿ ನಗರ ವ್ಯಾಪಿಸಿತು ಈ ಸುದ್ದಿ. ಅಷ್ಟರಲ್ಲಿ ಇತಿಹಾಸ ಸಂಶೋಧಕನೊಬ್ಬ ಅಲ್ಲಿಗೆ ಬಂದ ಆತ ಆಗಷ್ಟೇ ಅರೆಕಾಲಿಕ ಇತಿಹಾಸ ಉಪನ್ಯಾಸಕನಾಗಿ ಸೇರಿದವ. ಆಗಲೇ ಹೆಸರಿನ ಹಿಂದೆ ಪ್ರೊಫೆಸರ್ ಎಂದು ಬಳಸುತ್ತಿದ್ದ. ಆತ ಈ ವಿಗ್ರಹವನ್ನು ಕೂಲಂಕಶವಾಗಿ ಪರಿಶೀಲಿಸಿ ಅದರ ಕುರಿತು ಪತ್ರಿಕಾ ಪ್ರಕಟಣೆ ನೀಡಿದ.

ಮತ್ತಷ್ಟು ಓದು »

24
ಸೆಪ್ಟೆಂ

ನಿನ್ನೆ ಈಕ್ವಿನಾಕ್ಸ್…!

– ಹಂಸಾನಂದಿ

ನೆನ್ನೆ ಗೆಳೆಯರೊಡನೆ ಮಾತಾಡ್ತಾ ಹೇಳ್ದೆ – “ಇವತ್ತು ಈಕ್ವಿನಾಕ್ಸ್” ಅಂತ.

“ಹಂಗಂದ್ರೇನು” ಅಂದರು ಅವರು.

ಮತ್ತೆ ಶುದ್ಧ ಸಂಸ್ಕೃತದಲ್ಲಿ “ಇವತ್ತು ಶರದ್ ವಿಷುವ” ಅಂತ ಹೇಳ್ಬಹುದಿತ್ತು – ಅದರ ಬದಲು ಕೇಳಿದರೆ, ತಾನಾಗೇ ಅರ್ಥ ಆಗೋ ಅಂತಹ ಪದ ಯಾಕೆ ಹೇಳ್ಬಾದ್ರು ಅನ್ನಿಸಿ “ಸಮಹಗಲಿರುಳು” ಅಂದೆ.

ಪದದಲ್ಲೇ ಅರ್ಥ ಬಂತಲ್ಲ? ಅಂದ್ರೆ ಇವತ್ತು ರಾತ್ರಿ ಮತ್ತೆ ಹಗಲು ಒಂದೇ ಸಮ ಇರುತ್ತವೆ. ಬೆಂಗಳೂರು (ಅಥವಾ ಕರ್ನಾಟಕದಲ್ಲಿ ಯಾವ ಜಾಗ ಆದರೂ) ಭೂಮಧ್ಯರೇಖೆಗೆ ಬಹಳ ದೂರ ಇಲ್ಲದೇ ಇರೋದ್ರಿಂದ ಚಳಿಗಾಲಕ್ಕೂ ಬೇಸಿಗೇಗೂ ದಿನ ರಾತ್ರಿಗಳ ಅವಧಿ ತುಂಬಾ ಬದಲಾಗೋದಿಲ್ಲ. ಆದ್ರೆ, ಭೂಮಧ್ಯ ರೇಖೆಯಿಂದ ಹೆಚ್ಚು ಹೆಚ್ಚು ಉತ್ತರಕ್ಕೆ (ಅಥವಾ ದಕ್ಷಿಣಕ್ಕೆ) ಹೋದಹಾಗೆ ಕಾಲ ಬದಲಾದ ಹಾಗೆ ಹಗಲು ಹೆಚ್ಚಾಗೋದೂ, ಅಥವಾ ರಾತ್ರಿ ಹೆಚ್ಚಾಗೋದೋ ಸುಲಭವಾಗಿ ಗೊತ್ತಾಗುತ್ತೆ.

ಮತ್ತಷ್ಟು ಓದು »

23
ಸೆಪ್ಟೆಂ

ಕುರುಡಾಗದಿರು ಭಾರತೀಯ ನಿನ್ನ ಕಣ್ಣುಗಳಿರುವ ತನಕ..

ಅಶ್ವಿನ್ ಎಸ್ ಅಮೀನ್

ಕೋಮುವಾದ, ಜಾತಿವಾದ,  ಇವುಗಳ ನಡುವಿನ ಸಂಘರ್ಷಗಳು ಯಾವ ದೇಶದಲ್ಲಿ ಎಷ್ಟರವರೆಗೆ ಇರುತ್ತವೆಯೋ ಅಲ್ಲಿಯ ತನಕ ಆ ದೇಶದ ಬೆಳವಣಿಗೆ ಕುಂಠಿತವಾಗಿ ಸಾಗುತ್ತದೆ. ಅದರಲ್ಲೂ ಆಳುವ ಸರಕಾರಗಳು ನಡೆಸುವ ಒಂದು ಸಮುದಾಯದವರ ಓಲೈಕೆ ಅದು ಅಲ್ಪಸಂಖ್ಯಾತರನ್ನಾಗಲೀ, ಬಹುಸಂಖ್ಯಾತರನ್ನಾಗಲೀ ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ.

ನಮ್ಮೀ ಭಾರತ ಇದೆಲ್ಲ ಸಮಸ್ಯೆಗಳಿಂದ ಹೊರತಾಗಿಲ್ಲ.. ಬಹುಶಃ ಈ ತರಹದ ಕೋಮು ವಿಂಗಡಣೆ, ಜಾತಿ ವಿಂಗಡಣೆ ರಾಜಕೀಯ ಭಾರತದಲ್ಲಿ ಬಿಟ್ಟರೆ ಬೇರೆಲ್ಲೂ ಕಾಣಸಿಗದು..! ತಾಜಾ ಉದಾಹರಣೆಯಾಗಿ ಕೇಂದ್ರದ NAC ಸಿದ್ದಪಡಿಸಿದ ಕೋಮು ಸಂಘರ್ಷ ನಿಯಂತ್ರಣಾ ಕಾಯಿದೆಯ ಕರಡು ರೂಪದಲ್ಲೊಮ್ಮೆ ಕಣ್ಣಾಡಿಸಿ. ಇಲ್ಲಿ ಕಾಣಸಿಗುವುದು ಅಲ್ಪ ಸಂಖ್ಯಾತ, ಬಹು ಸಂಖ್ಯಾತ, ಪರಿಶಿಷ್ಟ ವರ್ಗ – ಪಂಗಡಗಳೆಂಬ ವಿಂಗಡಣಾ ರಾಜಕೀಯ.
ಕೋಮು ಸಂಘರ್ಷಗಳಲ್ಲಿ ತಪ್ಪಿತಸ್ಥರಾದವರಿಗೆ ಎಲ್ಲರಿಗೂ ಶಿಕ್ಷೆಯಾಗುವುದಾದರೆ ಈ ಕೋಮು ಸಂಘರ್ಷ ನಿಯಂತ್ರಣ ಕಾಯಿದೆ ಸ್ವಾಗತಾರ್ಹವಾಗುತಿತ್ತು. ಇಡೀ ಭಾರತಕ್ಕೆ ಭಾರತವೇ NAC ಯ ಮುಖ್ಯಸ್ಥೆ ಸೋನಿಯಾ ಗಾಂದಿಯವರನ್ನು ಅಭಿನಂದನೆಗಳಿಂದ ಮುಳುಗೇಳಿಸುತ್ತಿತ್ತು. ಆದರೆ ಹಾಗಾಗಲಿಲ್ಲ..! ಕಾರಣ ಇಲ್ಲಿ ಕೇವಲ ಬಹುಸಂಖ್ಯಾತರಿಗಷ್ಟೇ ಶಿಕ್ಷೆ.. ಅಲ್ಪಸಂಖ್ಯಾತರು ಯಾವುದೇ ಗಲಬೆಗಳಲ್ಲಿ ಪಾಲ್ಗೊಂಡರೂ ಈ ಕಾಯಿದೆಯಡಿ ಶಿಕ್ಷೆಯಿಲ್ಲ. ಅದರಲ್ಲೂ ಬೆಂಕಿಗೆ ತುಪ್ಪ ಸುರಿದಂತೆ ಬಹುಸಂಖ್ಯಾತ ಹಿಂದೂ ಧರ್ಮದಿಂದ ಪರಿಶಿಷ್ಟ ವರ್ಗ-ಪಂಗಡಗಳನ್ನು ಬೇರ್ಪಡಿಸಿರುವುದು..! ಪರಿಶಿಷ್ಟ ವರ್ಗ-ಪಂಗಡಗಳಿಗೆ ಸೌಲಭ್ಯ ಕಲ್ಪಿಸಿರುವುದು ಒಳ್ಳೆಯದೇ ಆಗಿದೆ. ಆದರೆ ಇಲ್ಲಿ ಭಾರತದ ಮೂಲ ಧರ್ಮವಾದ ಸನಾತನ ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರ ಅಡಗಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮತ್ತಷ್ಟು ಓದು »
12
ಸೆಪ್ಟೆಂ

ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦!?

– ಕೆ.ಎಸ್ ರಾಘವೇಂದ್ರ ನಾವಡ

  “ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦ “ ಎ೦ಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆಯಲ್ಲ!!

ಪ್ರಕರಣ: ಏಳು ತೃಣಮೂಲ ಕಾ೦ಗ್ರೆಸ್  ಕಾರ್ಯಕರ್ತರ ಹಠಾತ್ ಕಣ್ಮರೆ..

ಸ್ಠಳ: ಪಶ್ಚಿಮ ಮಿಡ್ನಾಪುರದ “ಪಿಸಾಯಲ“ ಹೆಸರಿನ ಪ್ರದೇಶ

ಕಾಲ : ೨೦೦೨

ಆ ನರಮೇಧದ ಹಿ೦ದಿನ ರೂವಾರಿಯ  ಹೆಸರು ಸುಶಾ೦ತ್ ಘೋಷ್!!

ಪಶ್ಚಿಮ ಭಾಗದ ಅಭಿವೃಧ್ಧಿ ಸಚಿವ, ಪಶ್ಚಿಮ ಬ೦ಗಾಳ ಸರ್ಕಾರ..

 

ಅ೦ತೂ ಕಮ್ಯೂನಿಸ್ಟರ ಬಣ್ಣ ಬಯಲಾಗತೊಡಗಿದೆ. ೩೫ ವರ್ಷಗಳಷ್ಟು ದೀರ್ಘ ಕಾಲ ಪಶ್ಚಿಮ ಬ೦ಗಾಳದಲ್ಲಿ ಸಾಧಿಸಿದ್ದೇನು? ಎ೦ಬುದಕ್ಕೆ ಈಗ ಉತ್ತರಗಳು ಸಿಗತೊಡಗಿವೆ! ಆದರೆ ಈ ರೀತಿಯ ಉತ್ತರ ಮಾತ್ರ ಯಾರೂ ನಿರೀಕ್ಷಿಸಿರಲಾರರು!   ಒಮ್ಮೆ ಮಮತಾ ದೀದಿ   ಥರಗುಟ್ಟಿ ಹೋಗಿದ್ದಾರೆ! ದೇಶದ ಅತ್ಯ೦ತ ಸುದೀರ್ಘ ಕಾಲದವರೆಗಿನ ಮುಖ್ಯಮ೦ತ್ರಿ ಜ್ಯೋತಿ ಬಸು ಹಾಗೂ ಆನ೦ತರದ ಕಾಮ್ರೇಡ್ ಬುಧ್ಧದೇವ ಭಟ್ಟಾಚಾರ್ಯ ಹೀಗೆ ಒಟ್ಟಾರೆ ಸತತ ೩೫ ವರ್ಷಗಳ ಕಾಲ ಬ೦ಗಾಳವನ್ನು  ಅಭಿವೃಧ್ಧಿ (?)ಗೊಳಿಸಿದ ಕಮ್ಯೂನಿಷ್ಟರ ಆಡಳಿತ ಹೇಗಿತ್ತು ಎನ್ನುವುದಕ್ಕೆ ಪುರಾವೆಗಳು ಸಿಗುತ್ತಿವೆ!

ಮತ್ತಷ್ಟು ಓದು »

9
ಸೆಪ್ಟೆಂ

ಯಾರು ಅಪಾಯಕಾರಿ!?

– ಸಚಿನ್

ನಮ್ಮ ನಿಮ್ಮ ಮಧ್ಯೆಯಿರುವ ಕೆಲ ಎಡಬಿಡಂಗಿ ಗಳು ನಿನ್ನೆ ದೆಹಲಿ ಹೈಕೋರ್ಟ್ ನಲ್ಲಿ ನಡೆದ ಬಾಂಬ್ ಸ್ಪೋಟದ ಕುರಿತು ಒಂದು ಹೇಳಿಕೆ ಕೊಟ್ಟರು. ” ಬಿಜೆಪಿಗೆ ಅವಮಾನ ಆಗುವ ಸಂಧರ್ಭ ಗಳಲ್ಲಿ ಬಾಂಬ್ ಸ್ಪೋಟ ನಡೆಯುತ್ತಿದೆ ಹಾಗಾಗಿ ರೆಡ್ಡಿಯ ಬಂಧನದ ಸಂಧರ್ಭ ದಲ್ಲಿ ಈ ಸ್ಪೋಟ ನಡೆದಿರುವುದು ಹಲವಾರು ಉಹಾಪೋಹಗಳಿಗೆ ಎಡೆ ಮಾಡಿಕೊಡುತ್ತಿದೆ. ಕರ್ನಲ್ ಪುರೋಹಿತ್ ಮತ್ತು ಸಾಧ್ವಿ ಪ್ರಜ್ಯಾ ಸಿಂಗ್ ನಡೆಸಿದ ಬಾಂಬ್ ಸ್ಪೋಟಗಳೇ ಇದಕ್ಕೆ ಸಾಕ್ಷಿ. ಅಣ್ಣಾ ಹಜಾರೆ ಮತ್ತು ರೆಡ್ಡಿ ಬಂಧನದ ಅಬ್ಬರ ಗಳಿಗಿಂತ ಹೆಚ್ಚಿನರೀತಿಯಲ್ಲಿ ಬಿಜೆಪಿ ದೇಶ ಭಕ್ತರು ಕಿರುಚಾಟಗಳನ್ನು ಶುರುಮಾಡ್ತಾರೆ ನೋಡ್ತಾಯಿರಿ” ಎಂದು ಎರಡು ಲೈನ್ ಬರೆದು ತಮ್ಮ ಮನಸ್ಸಿನಲ್ಲಿರುವ ಅಸಹ್ಯವನ್ನು ಹೊರಹಾಕಿದರು.

ಸ್ನೇಹಿತರೇ ನಾವು ಗಮನಿಸ ಬೇಕಾದ ಮುಖ್ಯವಾದ ಅಂಶವೆಂದರೆ ಈಗ ನಡೆಯುತ್ತಿರುವುದು ಭಯೋತ್ಪಾದಕರು ಮತ್ತು ಭಾರತ ದೇಶದ ಮಧ್ಯೆ ಯುದ್ದ, ಈ ಯುದ್ದ ದಲ್ಲಿ  ಭಯೋತ್ಪಾದಕರು ವಿಜಯಿಯಾಗುತಿದ್ದಾರೆ. ಈ ಭಯೋತ್ಪಾದನೆ ಕೃತ್ಯಗಳನ್ನ ಯಾವುದೇ ದೇಶ ಸುಮ್ಮನೆ ಸಹಿಸಿ ಕೊಳ್ಳುವುದಿಲ್ಲ. ಹಾಗು ಕೃತ್ಯ ನಡೆಸಿದವರಿಗೆ ಸರಿಯಾದ ಶಿಕ್ಷೆ ಕೊಡುವ ವ್ಯವಸ್ಥೆ ಬೇರೆ ದೇಶಗಳಲ್ಲಿದೆ. ಒಂದು ಸಣ್ಣ ಪ್ರಮಾದ ದಿಂದ ಬೆಂಗಳೂರಿನ ವೈದ್ಯ ಹನೀಫ್ ಆಸ್ಟ್ರೇಲಿಯಾದಲ್ಲಿ ಹೇಗೆ ನರಳಿದ ಎಂದು ನಮಗೆ ಗೊತ್ತಿಲ್ಲವೆ.

ಪಕ್ಷಗಳನ್ನು ಸಮರ್ಥಿಸಿಕೊಂಡು ಜಗಳವಾಡುವ ಸಮಯ ಇದಲ್ಲ. ಸುಮ್ಮನೆ ವಿತಂಡವಾದ ಮಾಡಿ ಎಲ್ಲದಕ್ಕು ಒಂದೊಂದು ಸಂಭಂದ ಕಲ್ಪಿಸಿ ನಿಮ್ಮ ಹೊಲಸನ್ನು ಕಾರಬೇಡಿ. ನಿಮ್ಮ ಭಂಡತನದ ನಿಲುವುಗಳು ಏನೆಂದು ಅಣ್ಣಾ ಹಜಾರೆ ಹೋರಾಟದ ಸಂಧರ್ಭದಲ್ಲಿ ನಮ್ಮ ಭಾರತದ ಎಲ್ಲ ಸತ್ಪ್ರಜೆಗಳಿಗೆ ಗೊತ್ತಾಗಿವೆ.

 

ಮತ್ತಷ್ಟು ಓದು »

7
ಸೆಪ್ಟೆಂ

ಅಣ್ಣಾ ಹಜಾರೆ – ಶ್ರೀ ಸಾಮಾನ್ಯನ ಮನೆ – ಮನಗಳ ದೀಪ.

– ಹೊಳೆನರಸೀಪುರ ಮಂಜುನಾಥ್

ಅಣ್ಣಾ ಹಜಾರೆಯವರ ಬೇಡಿಕೆಗಳನ್ನು ಕೇ೦ದ್ರ ಸರ್ಕಾರ ಒಪ್ಪಿಕೊಳ್ಳುವುದರ ಮೂಲಕ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ೧೨ ದಿನಗಳ ಉಪವಾಸ ಸತ್ಯಾಗ್ರಹ, ದೇಶದ ಮೂಲೆಮೂಲೆಯಿ೦ದ ಎ೦ದೂ ಕ೦ಡರಿಯದ೦ಥ ಅಭೂತಪೂರ್ವ ಜನಬೆ೦ಬಲ, ಕೇ೦ದ್ರಸರ್ಕಾರವನ್ನು ಮಣಿಸಿ, ಜನಲೋಕಪಾಲ್ ಮಸೂದೆ ಜಾರಿಗೆ ತರುವಲ್ಲಿ ಸ೦ಸತ್ತಿನಲ್ಲಿ ಎಲ್ಲ ಪಕ್ಷಗಳೂ ಒಗ್ಗಟ್ಟಾಗಿ ಅನುಮೋದಿಸುವ೦ತೆ ಮಾಡಿದೆ. ಬಹುಶಃ ಸ್ವಾತ೦ತ್ರ್ಯಾನ೦ತರ ಭಾರತ ಕ೦ಡ ಅತ್ಯ೦ತ ಪರಿಣಾಮಕಾರಿ ಅಹಿ೦ಸಾತ್ಮಕ ಆ೦ದೋಲನವಿದು ಎ೦ದರೆ ತಪ್ಪಾಗಲಾರದು. ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಸಿಕ್ಕಿರುವ ಜಯ, ಯಾವುದೇ ಒ೦ದು ಪಕ್ಷಕ್ಕೆ, ಸ೦ಘಟನೆಗೆ ಅಥವಾ ವ್ಯಕ್ತಿಗೆ ಸಿಕ್ಕಿರುವ ಜಯವಲ್ಲ. ಇದು ದೇಶದ ಶ್ರೀಸಾಮಾನ್ಯನಿಗೆ ಸಿಕ್ಕಿರುವ ಅಪ್ರತಿಮ ವಿಜಯ. ತನ್ನ ದಿನನಿತ್ಯದ ಬದುಕಿನಲ್ಲಿ ಪ್ರತಿಯೊ೦ದು ಹೆಜ್ಜೆಯಲ್ಲಿಯೂ ಕ೦ಡು, ಅನುಭವಿಸಿ, ತನ್ನನ್ನು ಹೈರಾಣು ಮಾಡಿದ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದ ಈ ದೇಶದ ಸಾಮಾನ್ಯ ನಾಗರಿಕನ ಸಾತ್ವಿಕ ಕೋಪಕ್ಕೆ ಸಿಕ್ಕ ವಿಜಯ ಇದಾಗಿದೆ.
ಮತ್ತಷ್ಟು ಓದು »

26
ಆಗಸ್ಟ್

ಹಳ್ಳೀಗ್ಬಂದ ಗುಂಡಣ್ಣ ಮತ್ತು ಆನ್ಲೈನ್ ಕೋರ್ಸು

ಪ್ರಶಸ್ತಿ. ಪಿ, ಸಾಗರ

ಪಟ್ಣದಿಂದ ಜಗ್ಗಣ್ಣನ ಮಗ ಗುಂಡಣ್ಣ ಬತ್ತವ್ನಂತೆ. ಅದೆಂತದೋ ಕಾಂಪೂಟ್ರಂತ ಡಬ್ಬ ತತ್ತವ್ನಂತೆ ಅನ್ನೋ ಸುದ್ದೀನ ಊರೆಲ್ಲಾ ಟಾಂ ಟಾಂ ಮಾಡ್ತಿದ್ದ ಜಮೀನ್ದಾರ ಜಗ್ಗಣ್ಣನ ಮನೆ ಕೆಲ್ಸದ ಕಿಟ್ಟಪ್ಪ. ಊರಿಗೆ ಬರೋ ಮಗೀನ ತತ್ತಾರಲಾ ಅಂತ ಧಣೀರೆ ಕಿಟ್ಟಪ್ಪಂಗೆ ಗಾಡಿ ಕಟ್ಕಂಡು ಹೋಗಕ್ಕೆ ಹೇಳಿದ್ರು. ಕಿಟ್ಟಪ್ಪ ರಾಜ್ಕುಮಾರ್ನ ಅಣ್ಣತಂಗಿ ಸಿನೀಮಾದಾಗೆ ನೋಡಿದ್ನಂತೆ. ಅದ್ರಲ್ಲಿ ಪಟ್ಣದ ಹೀರೋ ತನ್ನಳ್ಳಿಗೆ ಬಂದಾಗ ಅವನ ಕೋಟು ಬೂಟೇನು ,ಅವಂಗೆ ಹಾರ ತುರಾಹಿ ಹಾಕೋದೇನೂ.. ಅಬ್ಬಬ್ಬಾ ಅಂದ್ಕಂಡಿದ್ದ. ಅದೇ ತರ ಚಿಕ್ಕೆಜಮಾನ್ರೂ ಬತ್ತಾರೆ ಅಂತ ಕನ್ಸು ಕಾಣ್ತಾ ಇದ್ದ. ಮುಖ, ಮೈಮೇಲೆಲ್ಲಾ ಯಾರೋ ನೀರು ಹುಯ್ದಂಗಾಗಿ ಕಣ್ಬಿಟ್ಟ. ಯಾವನ್ಲೇ ಅವ ಕೆಸ್ರು ಹಾರಿಸಿದವ.. ಅಂತ ಬಾಯ್ತುದೀವರ್ಗೂ ಬಂದಿತ್ತು.ನೋಡಿದ್ರೆ ಪಟ್ಣದ ಬಸ್ಸು ಹಾರ್ನು ಹೊಡಿತಾ ಐತೆ. ಯಾವುದೋ ಪಟ್ಣದ ಹುಡ್ಗಿ ಇಳಿತಾ ಐತೆ. ಅದೆಂತದೋ ಪ್ಯಾಂಟು, ಶರ್ಟು, ಕನ್ನಡಕ ಹಾಕ್ಕೊಂಡು. ಒಂದ್ಕಿವಿಗೆ ರಿಂಗು ಬೇರೆ. ಈಗಿನ ಹುಡ್ಗೀರು ಹಿಂಗೆ ಇರ್ಬೇಕು, ಆದ್ರೂ ಕೂದಲು ಬಿಟ್ಕಂಡು , ಕಿವಿಗೆ ರಿಂಗೆಲ್ಲಾ ಹಾಕ್ಕಂವ್ಳಲ್ಲಾ ಅಂತ ಸಮಾಧಾನ ಮಾಡ್ಕಂಡ. ಅಷ್ಟರಲ್ಲೇ ಆ ಹುಡ್ಗಿ ಇವ್ನ ಹತ್ರವೇ ಬಂದು ಜಮೀನ್ದಾರ ಜಗ್ಗಣ್ಣ ಅವ್ರ ಮನೇ ಇಂದ ನನ್ನ ಕರ್ಕೊಂಡೋಗಕ್ಕೆ ಯಾರೋ ಬರ್ತಾರೆ ಅಂದಿದ್ರು. ನೀವ್ಯಾರ್ನೂ ನೋಡಿದ್ರಾ ಅಂದ್ಳು. ಮತ್ತಷ್ಟು ಓದು »