ಸುಮ್ಮನೆ ಬರಲಿಲ್ಲ ಸ್ವಾತಂತ್ರ್ಯ…!
– ರಾಕೇಶ್ ಶೆಟ್ಟಿ
ಇವತ್ತು ೬೫ನೇ ಸ್ವಾತಂತ್ರ್ಯ ಸಂಭ್ರಮ,ದೆಹಲಿಯ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿ ಭಾಷಣ ಮಾಡಲಿದ್ದಾರೆ ನಮ್ಮ ಪ್ರಾಮಾಣಿಕ ಪ್ರಧಾನಿ.ಮತ್ತೆ ನಾಳೆ ಇದೇ ಪ್ರಾಮಾಣಿಕ ಪ್ರಧಾನಿಯ
ಸರ್ಕಾರದ ಅನೈತಿಕತೆಯ ವಿರುದ್ಧ ಅಣ್ಣಾ ಹಜ಼ಾರೆ ಮತ್ತೆ ಉಪವಾಸ ಕೂರುತಿದ್ದಾರೆ.ಅಣ್ಣಾ ಇದನ್ನ ಎರಡನೇ ಸ್ವಾತಂತ್ರ್ಯ ಹೋರಾಟ ಅನ್ನುತಿದ್ದಾರೆ.ಆದರೆ ಮೊದಲ ಸ್ವಾತಂತ್ರ್ಯ ಹೋರಾಟದ ಆಳ-ಅಗಲಗಳನ್ನ ಸರಿಯಾಗಿ ತಿಳಿಯಲಾಗದೇಯೆ ಶಾಲೆ-ಕಾಲೇಜು ಪಾಸಾಗಿ ಬಂದ ನಮ್ಮಲ್ಲಿ ಅದಿನ್ನೆಷ್ಟು ಜನಕ್ಕೆ ಈ ಎರಡನೇ ಹೋರಾಟ ಕಿಚ್ಚು ಹಚ್ಚಬಹುದು,ಅದನ್ನ ಕಾಲವೇ ಉತ್ತರಿಸಲಿದೆ.
ಅಣ್ಣಾ ಉಪವಾಸ ಹೋರಾಟಕ್ಕೆ ಜಯವಾಗಲಿ ಅಂತ ಹಾರೈಸುತ್ತ,ಅಣ್ಣಾ ಉಪವಾಸ ಸತ್ಯಾಗ್ರಹಕ್ಕೆ ಆರಂಭದಲ್ಲೆ ಕಲ್ಲು ಹಾಕಿ ತಲೆಕೆಟ್ಟವರಂತೆ ಮಾತನಾಡುತ್ತಿರುವ ಕಾಂಗ್ರೆಸ್ಸಿನ ಮಂದಿಗೂ ಮತ್ತು ಕೇಂದ್ರ ಗೃಹ ಸಚಿವರಿಗೂ ಮತ್ತು ಕನಿಷ್ಠ ದೆಹಲಿ ಪೋಲಿಸ್ ಪರ್ಮಿಷನ್ ಸಹ ಕೊಡಿಸಲಾಗದ ಅಸಾಹಯಕ ಆದರೆ At the same time ಪ್ರಾಮಾಣಿಕ ಪ್ರಧಾನಿಯ ಶೋಚನೀಯ ಸ್ಥಿತಿಗೆ ಕಂಬನಿ ಮಿಡಿಯುತ್ತ, ಉಪವಾಸ ಸತ್ಯಾಗ್ರಹದಂತ ಹೋರಾಟದ ಅಸ್ತ್ರ ಹಿಡಿದು ನಿಲ್ಲುವವರ ಮನಸ್ಥಿತಿಯ ಕುರಿತಾಗಿ ಮಹಮ್ಮದ್ ಅಲಿ ಜಿನ್ನಾ ಹೇಳಿರುವ ಮಾತುಗಳು ನೆನಪಿಸಿಕೊಳ್ಳುತಿದ್ದೇನೆ.
“ಯಾವ ಮನುಷ್ಯ ಉಪವಾಸ ಸತ್ಯಾಗ್ರಹಕ್ಕೆ ಇಳಿಯುತ್ತಾನೋ ಅಂತವನು ಅವನ ಮನಸಿನ ಮಾತಿನಂತೆ ನಡೆಯುತ್ತಾನೆ ಮತ್ತು ಅವನಿಗೆ ಅವನೇನು ಮಾಡುತ್ತಿದ್ದಾನೆ ಎಂಬುದರ ಸಂಪೂರ್ಣ ಅರಿವಿರುತ್ತದೆ.ಅವರನ್ನು ಹಾದಿ ತಪ್ಪಿದವರು ಅನ್ನುವ ಮೊದಲು ಅವರನ್ನು ಹಾದಿ ತಪ್ಪಿಸಿರುವುದು ಈ ವ್ಯವಸ್ತೆ ಅನ್ನುವುದನ್ನ ಮರೆಯಬಾರದು,ಮತ್ತು ಈ ವ್ಯವಸ್ತೆಯ ವಿರುದ್ಧ ಯುವಕರು ಸಿಡಿದಿದ್ದಾರೆ” . ಅವರು ಹಾಗೇ ಹೇಳಿದ್ದು ಕ್ರಾಂತಿಕಾರಿ ಭಗತ್ ಸಿಂಗ್ ಮತ್ತು ಸಂಗಡಿಗರು ಬ್ರಿಟಿಶ್ ಕೈದಿಗಳಂತೆ ಭಾರತೀಯ ಕೈದಿಗಳಿಗೂ ಜೈಲಿನಲ್ಲಿ ಸಮಾನ ಹಕ್ಕು ನೀಡುವಂತೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟವನ್ನ ಬಹಿರಂಗವಾಗಿ ಬೆಂಬಲಿಸಿ.ಆಗಲೂ ಸಹ ಕಾಂಗ್ರೆಸ್ಸ್ ಭಗತ್ ಸಿಂಗ್ ಅವರ ಉಪವಾಸದ ಹೋರಾಟದ ಬಗ್ಗೆ ಈಗ ಅಣ್ಣಾ ಅವರ ಹೋರಾಟದ ವಿರುದ್ಧ ಇರುವಂತೆಯೆ ಇತ್ತು. ಅದಿರಲಿ, ಈ ಹೋರಾಟ ನಡೆದಿದ್ದು ಬರೋಬ್ಬರಿ ೬೩ ದಿನಗಳ ಕಾಲ! ಕಡೆಗೂ ಭಗತ್ ಸಿಂಗ್ ಮತ್ತವರ ಗೆಳೆಯರ ಎದುರು ಬ್ರಿಟಿಷ್ ಸರ್ಕಾರ ಮಂಡಿಯೂರಲೇ ಬೇಕಾಯಿತು,ಆದರೆ ಅಷ್ಟರೊಳಗಾಗಲೇ ನಾವು ’ಜತೀನ್ ದಾ’ ಅವರನ್ನ ಕಳೆದುಕೊಂಡಾಗಿತ್ತು 😦
ಯಾರಿಗೆ ಬಂತು ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ
– ಪವನ್ ಪರುಪತ್ತೆದಾರ್
ಮೊದಲಿಗೆ ನಿಲುಮೆಯ ಎಲ್ಲ ಓದುಗರಿಗೆ ಸ್ವಾತಂತ್ರ್ಯದಿನದ ಶುಭಾಶಯಗಳು. ೬೫ ನೆ ಸ್ವತಂತ್ರ ದಿನದ ಆಚರಣೆ ಎಲ್ಲ ಕಡೆ ಭರ್ಜರಿಯಿಂದ ಸಾಗಲಿ ಎಂದು ಆಶಿಸೋಣ. ೧೯೪೭ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ಸಿಕ್ಕಿದ ವಿಷಯ ನಮಗೆಲ್ಲ ತಿಳಿದಿದ್ದೆ. ಇಂದು ನಮಗೆ ಅ ಸ್ವಾತಂತ್ರ್ಯ ಎಷ್ಟರ ಮಟ್ಟಿಗೆ ಸಿಕ್ಕಿದೆಯೆಂದರೆ ನಮ್ಮ ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸುವ ಮಟ್ಟಿಗೆ ಸಿಕ್ಕಿದೆ. ನಾ ಬೇಕಾದರೆ ಬಾಜಿ ಕಟ್ಟುತ್ತೇನೆ ನಾಳಿನ ಪೇಪರ್ ನೋಡಿ ನಮ್ಮ ರಾಜ್ಯದಲ್ಲೇ ಒಂದೆರಡು ಕಡೆಯಾದರು ಧ್ವಜವನ್ನು ಉಲ್ಟಾ ಹಾರಿಸಿರುತ್ತಾರೆ. ಬ್ರಿಟಿಷರ ದಬ್ಬಾಳಿಕೆ ಹದ್ದು ಮೀರಿದಾಗ ಹಿಂಸೆಯ ನಾನಾ ಮಾರ್ಗಗಳು ಪ್ರಯೋಗಿಸಿ ಹುತಾತ್ಮರಾದವರು, ನಂತರ ದೇಶವನ್ನೆಲ್ಲ ಒಟ್ಟಿಗೆ ಸಂಘಟಿಸಿ ಅಹಿಂಸೆಯಿಂದ ಮಾತ್ರ ನಮಗೆ ಸ್ವಾತಂತ್ರ್ಯ ಸಾಧ್ಯ ಎಂದು ತೋರಿಸಿಕೊಟ್ಟು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಮಹಾತ್ಮರು, ನಮ್ಮ ಈಗಿನ ಸ್ವಾತಂತ್ರ್ಯವನ್ನೇನಾದರು ನೋಡಿದ್ದರೆ, ಇವರಿಗೆ ಯಾಕಾದ್ರು ಸ್ವಾತಂತ್ರ್ಯ ಕೊಡಿಸಿದೆವೋ ಎಂದು ಮರುಗುತಿದ್ದರೆನೋ…..
ನನ್ನ ಮಾತುಗಳು ಅತಿಶಯೋಕ್ತಿ ಎನಿಸಬಹುದು. ಆದರೆ ನಮ್ಮ ದೇಶದಲ್ಲಿ ಎಲ್ಲರಿಗು ಎಷ್ಟು ಸ್ವಾತಂತ್ರ್ಯವಿದೆ ಅಂತ ನಿಮಗೆ ಗೊತ್ತು. ಟ್ರಾಫಿಕ್ ಪೋಲಿಸ್ ಡಾಕುಮೆಂಟ್ ಸರಿ ಇದ್ದರು ಲಂಚ ಪಡೆಯುವ ಸ್ವಾತಂತ್ರ್ಯ, ಖಾತೆ ಬದಲಾವಣೆ ಮಾಡಿಸಬೇಕಾದರೆ ಪತ್ರ ಸ್ಕಾನ್ನಿಂಗ್ ಮಾಡುವನಿಂದ ಹಿಡಿದು, ಮೊಹರು ಹಾಕುವ ಗುಮಸ್ತನಿಂದ ಹಿಡಿದು, revinue inspector ತನಕ ಲಂಚ ಪಡೆಯುವ ಸ್ವಾತಂತ್ರ್ಯ. ಗೆದ್ದೊಡನೆ ತಮ್ಮ ಕ್ಷೇತ್ರದ ಜನತೆಯನ್ನು ಮರೆತು ರೆಸಾರ್ಟ್ ಗಳಲ್ಲಿ ವಾಸ್ತವ್ಯ ಹೂಡುವ ಸ್ವಾತಂತ್ರ್ಯ, ಪಕ್ಷದ ತತ್ವ ಸಿದ್ಧಾಂತಗಳನ್ನು ಮರೆತು ಪಕ್ಷಾಂತರ ಮಾಡುವ ಸ್ವಾತಂತ್ರ್ಯ, ರೈತನ ಜಮೀನನ್ನು ಕಸಿದು ಅಧುನಿಕರಣದ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುವ ಸ್ವಾತಂತ್ರ್ಯ, ನಮ್ಮ ಭೂಮಿಯ ಸಂಪತ್ತಲ್ಲದೆ ಅಂತರಂಗದಲ್ಲಿರುವ ತರಂಗಾಂತರಗಳನ್ನು ಮೋಸದಿಂದ ಮಾರುವ ಸ್ವಾತಂತ್ರ್ಯ, ಇನ್ನು ತಮಾಷೆಯೆಂದರೆ ತಪ್ಪು ಮಾಡಿ ದುಷ್ಕ್ರುತ್ಯಗಳನ್ನೆಸಗಿ ವಾರ್ಷಿಕ ೧೧ ಕೋಟಿ ಹಣವನ್ನು ಸರ್ಕಾರದಿಂದ ಖರ್ಚು ಮಾಡಿಸಿಕೊಳ್ಳೋ ಸ್ವಾತಂತ್ರ್ಯ ಮತ್ತು ತಪ್ಪಿತಸ್ತ ಎಂದು ಖಾತರಿಯಾದ ಮೇಲು ಶಿಕ್ಷೆ ಇಲ್ಲದೆ ಐಶಾರಾಮಿ ಜೀವನ ನಡೆಸುವ ಸ್ವಾತಂತ್ರ್ಯ, ಇಂತಹದ್ದೆನ್ನಲ್ಲ ವಿರೋಧಿಸಿದರೆ ವಿರೋಧಿಸಿದವರ ವಿರುದ್ದವೇ ಕೇಸು ಜಡಿಯುವ ಸ್ವಾತಂತ್ರ್ಯ.ಆಹಾ ಹೇಳುತ್ತಾ ಹೋದರೆ ಪುಟಗಟ್ಟಲೆ ಇಂತಹ ಸ್ವಾತಂತ್ರ್ಯಗಳು ಸಿಗುತ್ತವೆ.
ಕಾಂಗ್ರೆಸ್ಸಿನ ದೇವರು ಮತ್ತು ಪೂಜಾರಿಗಳು..!
– ಸಚಿನ್.ಕೆ
ಯುಪಿಎ ಒಕ್ಕೂಟದ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಆದ ಶ್ರೀಮತಿ ಸೋನಿಯ ಗಾಂಧಿ ಸರ್ವೈಕಲ್ ಕ್ಯಾನ್ಸರ್ ನಿಂದ ಬಳಲುತಿದ್ದು ಅಮೆರಿಕದ ಪ್ರಖ್ಯಾತ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಷಯ ಎಲ್ಲರಿಗೂ ಗೊತ್ತಿರುವಂತಹದ್ದು. ಅವರು ಬೇಗ ಗುಣಮುಖರಾಗಲಿ ಎಂದು ದೇಶದ ಬಹುತೇಕ ಜನರು ದೇವರಲ್ಲಿ ಪ್ರಾರ್ಥಿಸುತಿದ್ದಾರೆ. ನಾವು ಸಹ ಅವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇವೆ.
ಇಂದು ಮತ್ತು ಮೊನ್ನೆಯ ಕೆಲ ಮುಖ್ಯ ಘಟನೆಗಳನ್ನು ನಾನು ಇಲ್ಲಿ ಪ್ರಸ್ತಾಪಿಸಬೇಕೆಂದಿದ್ದೇನೆ.
ಬಳ್ಳಾರಿಯಲ್ಲಿ ಪ್ರತಿಪಕ್ಷದ ಮುಖಂಡರಾದ ಶ್ರೀ ಸಿದ್ದರಾಮಯ್ಯ ನವರು ಶ್ರೀ ದುರ್ಗಮ್ಮ ದೇವಸ್ಥಾನದಲ್ಲಿ ೧೦೧ ತೆಂಗಿನಕಾಯಿ ಹೊಡೆದು ಮೇಡಂ ಬೇಗ ಗುಣಮುಖರಾಗಲಿಎಂದು ಪೂಜೆ ಸಲ್ಲಿಸಿದರು
ಮದನಾರಿ ಬೇಕಾ?
– ಸಚಿನ್
ಸುವರ್ಣ ನ್ಯೂಸ್ ಚಾನೆಲ್ ನಲ್ಲಿ ಪ್ರಸಾರವಾಗುವ ಕಾರ್ಯಕ್ರಮ “ಮದನಾರಿ”, ಚಿತ್ರರಂಗದ ಭಾಷೆಯಲ್ಲಿ ಹೇಳಬೇಕಾದರೆ ಇದೊಂದು ಮಸಾಲ ಕಾರ್ಯಕ್ರಮ, ಇದರ ಮುಖ್ಯ ಆಕರ್ಷಣೆ ಎಂದರೆ ಐಟಮ್ ಗರ್ಲ್ ಗಳ ಬಗ್ಗೆ ಸಂಪೂರ್ಣ ವಾದ ವಿವರ ಅವರ ಜೀವನದ ಏಳು ಬೀಳುಗಳ ಬಗ್ಗೆ ವಿವರ, ಅವರಿಗಿರುವ ಬಾಯ್ ಫ್ರೆಂಡ್ ಗಳು ಜತೆಯಲ್ಲಿ ಇರುವವರ ಹಾಗು ಕೈ ಕೊಟ್ಟವರ ಬಗ್ಗೆ ಮಾತು. ಹಾಗು ಚಿತ್ರ ರಂಗಕ್ಕೆ ಪ್ರವೇಶ ಅದರ ಹಿನ್ನೆಲೆ, ಇನ್ನು ಮುಂತಾದ ಚಿತ್ರ ವಿಚಿತ್ರ ಸಂಗತಿ ಗಳಿಂದ ಕಾರ್ಯಕ್ರಮ ವನ್ನು ನಿರೂಪಕಿ ದಿವ್ಯಶ್ರಿ ಅವರಿಂದ ನಿರೂಪಿತ ವಾಗಿತ್ತದೆ. ಪ್ರತಿ ಭಾನುವಾರ ರಾತ್ರಿ ಹಾಗೂ ವಾರದ ದಿನಗಳಲ್ಲಿ ಮತ್ತೆ ಮರುಪ್ರಸಾರ ಮಾಡಲಾಗುತ್ತದೆ.ಆದರೆ ಇಷ್ಟೇ ಆಗಿದ್ದರೆ ಈ ಕಾರ್ಯಕ್ರಮದ ಬಗ್ಗೆ ನಾವು ಇಲ್ಲಿ ಟೀಕೆ ಮಾಡುವ ಪ್ರಮೇಯ ವೇ ಬರುತ್ತಿರಲಿಲ್ಲ. ಈ ಎಲ್ಲ ವಿವರ ಗಳ ಜತೆಗೆ ಅಶ್ಲೀಲ ದೃಶ್ಯ ಗಳನ್ನು ಪ್ರಸಾರ ಮಾಡುತ್ತಾರಲ್ಲ ಅದು ಹೇಸಿಗೆ ಹುಟ್ಟಿಸುತ್ತೆ.
ನೇತ್ರಾವತಿಯ ಶ್ರೀಮುಡಿಗೆ ಕೈಯಿಕ್ಕಿರುವ ಎಂ ಎಸ್ ಇ ಜಡ್:ರಕ್ಷಿಸುವ ಪ್ರವೀಣರೆಲ್ಲಿದ್ದಾರೆ?
-ಸುಂದರ ರಾವ್
ಇತ್ತೀಚಿಗೆ ಕೆಲವು ಪತ್ರಿಕೆಗಳಲ್ಲಿ “ಸರಪಾಡಿ ಸಮೀಪದ ಬೊಳ್ಳಾಜೆಯಲ್ಲಿ ಎಮ್ ಎಸ್ ಇ ಜಡ್ ಪೈಪ್ ಲೈನ್ ಕಾಮಗಾರಿ ಪ್ರಾರಂಭ” ಎಂಬ ಸುದ್ದಿಗಳು ಪ್ರಕಟವಾದವು. “ವಂಶ” ಪತ್ರಿಕೆಯ ಮಿತ್ರರನ್ನು “ನಮ ಒರ ಪೋದು ತೂದು ಬರ್ಕನ?” (ನಾವು ಹೋಗಿ ನೋಡಿ ಬರೋಣವೆ?) ಎಂದು ಕೇಳಿದೆ.
ಮಳೆಗಾಲವಾದರೂ ನಾವು ಹೋದಾಗ ಬಿಸಿಲಿತ್ತು. ಸರಪಾಡಿಯಲ್ಲಿ ಎಂ ಆರ್ ಪಿ ಎಲ್ ನ ಪಂಪ್ ಹೌಸೋ ಏನೋ ಒಂದಿದೆ. ಅದಕ್ಕಿಂತ ಮೊದಲೇ ಬಲಕ್ಕೆ ಹೊಸರಸ್ತೆ ಕಡಿದಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು.ಹಸಿ ಹಸಿ ಮಣ್ಣಿನ ರಸ್ತೆ. ಜೆಸಿಬಿ ಉಪಯೋಗಿಸಿ ರಸ್ತೆ ಮಾಡಿದ್ದರೆಂಬುದು ಯಾರಿಗೂ ಗೊತ್ತಾಗುವಂತಿತ್ತು. ಅದರಲ್ಲಿ ಸ್ವಲ್ಪ ದೂರ ನಡೆದ ಮೇಲೆ ತೆರೆದುಕೊಂಡಿದ್ದು ವಿಶಾಲವಾದ ಪ್ರದೇಶದಲ್ಲಿ ಶೇಖರಗೊಂಡಿದ್ದ ನೀರಿನ ದೃಶ್ಯ.
ಮುಂದೆ ಎ ಎಂ ಆರ್ ಕಂಪೆನಿಯ ಅಣೆಕಟ್ಟು ಕಾಣುತ್ತಿತ್ತು. ನಮ್ಮೆದುರಿಗೆ ಕಾಣುತ್ತಿದ್ದುದು ಅದೇ ಅಣೆಕಟ್ಟಿನಲ್ಲಿ ಸಂಗ್ರಹಿಸಿದ್ದ ನೀರಿನ ರಾಶಿ. ನಾವು ಮುಟ್ಟಿದ್ದು ಒಂದು ಜೆಸಿಬಿ ನಿಂತಿದ್ದ ಸ್ಥಳವನ್ನು. ಸುತ್ತ ಅನೇಕ ಮರಗಳು ಬೇರು ಮೇಲಾಗಿ ಸೊಪ್ಪು ಒಣಗಿ ಉದುರಿ ಕಳಚಿಕೊಂಡು ಬೆತ್ತಲೆ ಅಸ್ತಿಪಂಜರಗಳಂತೆ ವಿಕಾರವಾಗಿ ಆಚೀಚೆ ಉರುಳಿಕೊಂಡಿದ್ದವು. ಕಪ್ಪು ಕಲ್ಲುಗಳನ್ನು ಒಡೆದು ತೆಗೆದಿರುವುದು (ಬಹುಶಃ ಡೈನಮೈಟ್ ಬಳಸಿ) ಸ್ಪಷ್ಟವಾಗಿಯೇ ಕಾಣುತ್ತಿತ್ತು. ಸ್ವಲ್ಪ ದೂರಕ್ಕೆ ಆಳವಾದ ಹೊಂಡದಲ್ಲಿ ಭೂಮಿಯ ಹೊಟ್ಟೆ ಬಗೆದು ಏನೋ ಕಾಮಗಾರಿ ನಡೆಸಿರುವುದೂ ಕಾಣುತ್ತಿತ್ತು. ಒಟ್ಟಿನಲ್ಲಿ ನಡೆಯುತ್ತಿದ್ದ ಚಟುವಟಿಕೆಗಳು ಯಾವುದೋ ದೊಡ್ಡ ಕಾಮಗಾರಿಯ ಮುನ್ಸೂಚನೆಯಾಗಿ ಕಂಡವು. ಸಾಧ್ಯವಿದ್ದಷ್ಟು ಫೋಟೋಗಳನ್ನು ತೆಗೆದುಕೊಂಡು ನಾವು ಹಿಂದೆ ಬಂದೆವು.
ಕಾರ್ಯಕರ್ತ
– ಪವನ್ ಪರುಪತ್ತೆದಾರ
ಊರಲೆಲ್ಲ ತಲೆಯ ಮೇಲೆ ಹಾರ್ನ್ ಹೊತ್ತ ಆಟೋ ಒಂದೇ ಡೈಲಾಗ್ ಅನ್ನು ಹೇಳುತ್ತಾ ತಿರುಗಾಡುತಿತ್ತು,ಮರಯದಿರಿ ಮತ ಬಾಂಧವರೆ ಮರೆತು ನಿರಾಶರಾಗದಿರಿ, ಈಗ ಮರೆತು ಮುಂದೆ ಯಾಕಾದರೂ ಇಂತಹ ತಪ್ಪು ಮಾಡಿದೆನೋ ಎಂದು ಮರುಗದಿರಿ, ನಿಮ್ಮ ಮತವನ್ನು ನಮ್ಮ ಕಮಲಣ್ಣನ ಪಾರ್ಟಿಯ ಅಭ್ಯರ್ಥಿಯಾದಂಥ ಬಡವರ ಬಂಧು ಧಿಮಂತ ನಾಯಕ ಶ್ರೀಮಾನ್ ಸಿದ್ದಣ್ಣ ನವರಿಗೆ ನೀಡಿ, ಸಿದ್ದಣ್ಣ ನವರಿಗೆ ಮತ ನಮ್ಮೂರಿನ ಜನತೆಗೆ ಹಿತ ಇದನ್ನೇ ಮತ್ತೆ ಮತ್ತೆ ಅರಚುತ್ತ ಸಾಗುತಿದ್ದ ಆಟೋ ಒಳಗಿಂದ ಸುರೇಶ ಸಿದ್ದಣ್ಣನ ಹೆಸರಿನಲ್ಲಿರುವಂತಹ ಒಂದು pamplet ಅನ್ನು ಹಂಚುತಿದ್ದ, ಅದಕ್ಕಾಗಿ ಮಕ್ಕಳು ಆ ಆಟೋ ಹಿಂದೆಯೇ ಓಡುತ್ತಾ ಇದ್ದರು………
ಅಂಗಡಿ ಬೀದಿಯಲ್ಲಿ ಅಬ್ಧುಲ್ಲ ತನ್ನ ಒಂದು ಸಣ್ಣ ಗುಂಪನ್ನು ಕಟ್ಟಿಕೊಂಡು ಅಲ್ಲಿರುವ ಕರೆಂಟ್ ಕಂಬಗಳನೆಲ್ಲ ನೋಡುತ್ತಾ, ಅರೆ ಇಸ್ಕಿ ಕ್ಯಾ ರೆ ಕಮಲಣ್ಣನ ಪಾರ್ಟಿ ಅವ್ರು ಆಗಲೇ banner ಗೆ ಕಟ್ಬಿಟ್ಟಿ ಅವ್ರೆ. ನಮ್ದುಕೆ ಇನ್ನು ಎಲ್ಡು ಅಡಿ ಮೇಲಕ್ಕೆ ಕಟ್ಟೋಣ ಅಂತ ತನ್ನ ಶಿಷ್ಯನ್ನ ಕರೆದ, ಹೇ ಪಟ್ಟೆ ಅರೆ ಇದರ್ ಅಂತ ಕಂಬ ಹತ್ತಿಸಿ ಹಸ್ತಣ್ಣನ ಪಾರ್ಟಿ ಕಡೆ ಇಂದ ನಿಂತಿದ್ದ ಸನಾಉಲ್ಲ ನ ಫೋಟೋ ಸಮೇತ ಇರೋ ಹಸ್ತಣ್ಣನ ಪಾರ್ಟಿಗೆ ಮತ ನಮ್ಮೂರಿನ ಜನಕ್ಕೆ ಹಿತ. ಅಂತ ಇರೋ banner ಗಳನ್ನ ಕಟ್ಟಿಸ್ತ ಇದ್ದ. ಅಷ್ಟರಲ್ಲೇ ಅಲ್ಲಿದ್ದ ಕೆಲವರು ಗುಂಪು ಸೇರಿ ಇವರು ಮಾಡುತ್ತಾ ಇದ್ದ ಕೆಲಸವನ್ನು ಗಮನಿಸ್ತ ಇದ್ರು, ಅವರನ್ನ ನೋಡಿದ ಅಬ್ದುಲ್ಲ ಹೇ ಅಣ್ಣ ನಮಸ್ಕಾರ ನಮ್ಮ ನೆಚ್ಚಿನ ನಾಯಕ, ಬಡವರ್ಗೆ ಸಹಾಯ ಮಾಡೋದ್ರಾಗ ಎತ್ತಿದ ಕೈ ನಮ್ ಸನಾಉಲ್ಲಾದು. ನಿಮ್ಮದು ಎಲ್ಲರ್ದುಗೆ ಓಟು ನಮ್ದು ಹಸ್ತಣ್ಣ ಪಾರ್ಟಿ ಗೆ ಹಾಕಿ ಅಂತ ಭಾಷಣ ಮಾಡಿದ. ಅದೇ ಬೀದಿಲಿ ಹಾದು ಹೋಗುತ್ತಿದ್ದ ಕಮಲಣ್ಣನ ಪಾರ್ಟಿಯ ಒಬ್ಬ ವ್ಯಕ್ತಿ ಇದನ್ನ ನೋಡಿ ಮಖ ಕೆಂಪಗ ಮಾಡಿಕೊಂಡು ಹೋದ……. ಮತ್ತಷ್ಟು ಓದು 
ಸ್ಥಿರತೆಯತ್ತ… ಸರ್ಕಾರವೋ? ಮಾಧ್ಯಮವೋ?
-ಕಾಲಂ ೯
ಕರ್ನಾಟಕದ ಬಿಜೆಪಿ ಸರ್ಕಾರ ತನ್ನ ಮಾನವನ್ನು ತಾನೇ ಹರಾಜು ಹಾಕಿಕೊಂಡ ಕಳೆದ ೧೫ ದಿನಗಳ ಘಟನಾವಳಿ ಈಗ ಒಂದು ಮಜಲಿಗೆ ಬಂದು ನಿಂತಂತೆ ಗೋಚರಿಸುತ್ತದೆ.
2008ರ ಚುನಾವಣೆ ನಡೆದಿದ್ದೇ ‘ನನಗಾದ ಅನ್ಯಾಯ’ಕ್ಕೆ. ಜನತೆ ಓಟು ಹಾಕಿದ್ದೇ ನನಗಾದ ಅನ್ಯಾಯ ಸರಿಪಡಿಸಲು. ನನಗೆ ಸಿಕ್ಕ ಜನತಾ ನ್ಯಾಯವನ್ನು ಯಾವ ಹೈಕಮಾಂಡು ಕಿತ್ತುಕೊಳ್ಳುವ ಹಾಗಿಲ್ಲ ಎಂಬಂತೆ ಸೆಟೆದು ನಿಂತಿದ್ದ ಯಡಿಯೂರಪ್ಪ 15 ದಿನ ಕನ್ನಡದ ಮಾಧ್ಯಮಗಳಿಗೆ ಭವಿಷ್ಯದ ಕೆಲಸ ಕೊಟ್ಟಿದ್ದರು.
ಕನ್ನಡ ಸುದ್ದಿವಾಹಿನಿಗಳ ಎಳಸುತನ, ಗಂಭೀರ ವರದಿಗಾರಿಕೆಯ ಕೊರತೆ, ಮತ್ತೆ ಮತ್ತೆ ಪ್ರದರ್ಶನಕ್ಕೆ ಬಂದಿತೆನ್ನಬೇಕು.
ರೇಸ್ ಕೋರ್ಸ್ ರಸ್ತೆಯತ್ತ ಎರಡು ಬಸ್ಗಳು ಕಾಣಿಸಿಕೊಂಡಿದ್ದೇ ತಡ, ವಾಹಿನಿಯೊಂದು ‘ಶಾಸಕರು ರೆಸಾರ್ಟ್ನತ್ತ’ ಎಂದು ‘ಬ್ರೇಕಿಂಗ್ ನ್ಯೂಸ್’ ಬಿತ್ತರಿಸಿತು. ಕೆಲವೇ ಕ್ಷಣಗಳಲ್ಲಿ ಉಳಿದ ವಾಹಿನಿಗಳೂ ಅದನ್ನೇ ಹೇಳತೊಡಗಿದವು. ಯಾರೊಬ್ಬರೂ ಇಂತಹ ಸುದ್ದಿಗಳ ನೈಜತೆ ಪರಿಶೀಲಿಸುವ ಗೋಜಿಗೆ ಹೋಗುವುದಿಲ್ಲ. ಯಾವುದೋ ನಾಯಕರ ವಾಹನ ಚಾಲಕರು, ಅಲ್ಲೆಲ್ಲೋ ನಿಂತ ಪೋಲಿಸ್ ಕಾನ್ಸ್ಟೇಬಲ್ಗಳೇ ಸುದ್ದಿಯ ಸೋರ್ಸ್ಗಳಾಗಿರೋದು ಮಾಧ್ಯಮದ ದುರಂತವಾಗಿದೆ. ಮೂರೋ, ಆರೋ ತಿಂಗಳ ಅನುಭವದ ಪತ್ರಕರ್ತರ ದಂಡನ್ನೂ ಕಟ್ಟಿಕೊಂಡು ಮುಖ್ಯಮಂತ್ರಿ ನಿವಾಸ, ಅಶೋಕ ಹೋಟೆಲ್, ಬಿಜೆಪಿ ಕಛೇರಿ, ಕೇಶವಕೃಪಾ… ಇಲ್ಲೆಲ್ಲ ಒಬ್ಬೊಬ್ಬರನ್ನು ನಿಲ್ಲಿಸಿಕೊಂಡು ಕ್ಷಣ, ಕ್ಷಣದ ಸುದ್ದಿ ಬಿತ್ತರಿಸುವ ಕನ್ನಡ ಸುದ್ದಿ ವಾಹಿನಿಗಳ ಪಾಡು ಹೇಳತೀರದು. ಸುದ್ದಿ ಯಾವುದು? ಅಂದಾಜು ಯಾವುದು? ಸುಳ್ಳು ಯಾವುದು? ಆ ಕ್ಷಣದಲ್ಲೇ ಬೆತ್ತಲಾಗಿ ಸುದ್ದಿ ವಾಹಿನಿಗಳ ವಿಶ್ವಾಸಾರ್ಹತೆ ಮೂರಾಬಟ್ಟೆ ಯಾಗಿದೆ. ಮತ್ತಷ್ಟು ಓದು 
ಈ ಕಥೆ ಮುಂದಿನ ರಾಜಕಾರಣಿಗಳಿಗೆ ಒಂದು ಪಾಠವಾಗಲಿ
– ರಾಕೇಶ್ ಎನ್ ಎಸ್
ಅದು ೧೯೬೦ನೇ ದಶಕದ ಕೊನೆಯ ಭಾಗ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರವೆಂಬ ಪುಟ್ಟ ಪಟ್ಟಣದಲ್ಲಿ ಬೂಕನೆಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಎಂಬ ವ್ಯಕ್ತಿ ಒಂದು ಅಕ್ಕಿ ಮಿಲ್ನಲ್ಲಿ ಸಾಮಾನ್ಯ ಗುಮಾಸ್ತನಾಗಿ ತಿಂಗಳಿಗೆ ಕೇವಲ ೧೩೦ ರೂ ಸಂಬಳ ಪಡೆದುಕೊಂಡು ದಿನ ಸಾಗಿಸುತ್ತಿದ್ದ. ಅಷ್ಟರಲ್ಲೇ ಆ ವ್ಯಕ್ತಿ ಒಂಚೂರು ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ಆಸಕ್ತನಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕನಾಗಿ, ಜನಸಂಘದ ಮುಖಂಡನಾಗಿ, ಆ ಬಳಿಕ ಶಿಕಾರಿಪುರ ಪುರ ಸಭೆಯ ಸದಸ್ಯನಾಗಿ, ತುರ್ತು ಪರಿಸ್ಥಿತಿ ಘೋಷಿಸಿದ ಅದಕ್ಕೆ ಸಡ್ಡು ಹೊಡೆದ ಹೋರಾಟಗಾರನಾಗಿ, ರಾಜ್ಯದಲ್ಲಿ ಬಿಜೆಪಿಯ ಮುಖವಾಣಿಯಾಗಿ, ರೈತಾಪಿ ಜನರ ದನಿಯಾಗಿ, ರಾಜ್ಯದ ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತ ಕತೆ ಈ ದೇಶದ ಪ್ರಜಾಪ್ರಭುತ್ವದ ಸೌಂದರ್ಯಕ್ಕೆ ಮುಕುಟ ಪ್ರಾಯವಾದದ್ದಾಗಿರಬೇಕಾಗಿತ್ತು. ಆದರೆ ಈ ನಾಡಿನ ದುರದೃಷ್ಟವೆಂದರೆ ಆ ವ್ಯಕ್ತಿ ಇಂದು ಈ ನಾಡು ಕಂಡು ಕೇಳರಿಯದ ರಾಕ್ಷಸ ರಾಜಕಾರಣದ ವಾರಸುದಾರನಾಗಿ ಬಿಟ್ಟಿದ್ದಾರೆ. ಪ್ರಜಾಪ್ರಭುತ್ವದ ಚೆಲುವನ್ನು ಹೀರಿದ ಬಂದಣಿಕೆಯಾಗಿ ಇತಿಹಾಸದ ಪುಟ ಸೇರಿದ್ದಾರೆ.

ಪೌರ ಕಾರ್ಮಿಕರ ಬದುಕು ಹಸನಾಗುವುದು ಯಾವಾಗ?
– ಪವನ್ ಯಂ.ಟಿ
ನಾಳೆ ಬೆಳಗ್ಗೆ ೫ ಗಂಟೆಗೆ ಅಲಾರಾಮ್ ಇಡು ಮಗಳೆ ೫:೩೦ ರ ಬಸ್ಸು ಮಿಸ್ ಆಗೋದ್ರೆ ಕಸವೆಲ್ಲ ಅಲ್ಲೇ ಉಳಿದು ಬಿಡುತ್ತೆ, ನಿನ್ನೆ ದಿನ ಸಂತೆ ಬೇರೆ ಇತ್ತು. ಕಸದ ರಾಶಿಯೇ ಬಿದ್ದಿರ ಬಹುದು. ಬೇಗ ಹೋಗಿ ಕ್ಲೀನ್ ಮಾಡಬೇಕು…! ಎಂದು ಪೌರಕಾರ್ಮಿಕೆ ಮಲ್ಲಮ್ಮ ತನ್ನ ಮಗಳಿಗೆ ಹೇಳಿ ಮಲಗಿಕೊಂಡಳು. ಮಲ್ಲಮ್ಮನಿಗಿರುವ ಒಂದೇ ಆಲೋಚನೆ ತನಗೆ ವಹಿಸಿದ ವಾರ್ಡನಂಬರ್ ೭ರಲ್ಲಿ ಬಿದ್ದಿರುವ ಕಸವನ್ನು ತೆಗೆದು ಶುಚಿಗೊಳಿಸುವುದು. ಎಲ್ಲಿ ಬೆಳಗ್ಗೆ ಬಸ್ಸು ಮಿಸ್ಸಾದರೆ ಕಸದ ರಾಶಿ ಅಲ್ಲಿಯೇ ಉಳಿದು ಮೇಲಾಧಿಕಾರಿಗಳು, ಗುತ್ತಿಗೆದಾರರು ನನ್ನನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಯೋ ಅನ್ನುವ ಭಯ ಮಲ್ಲಮ್ಮನಿಗೆ. ಇದು ಕೇವಲ ಒಬ್ಬ ಪೌರಕಾರ್ಮಿಳ/ನ ಚಡಪಡಿಕೆಯಲ್ಲ. ನಮ್ಮ ದೇಶದಲ್ಲಿ ಅಥವಾ ರಾಜ್ಯದಲ್ಲಿ ದುಡಿಯುತ್ತಿರುವ ಎಲ್ಲಾ ಪೌರ ಕಾರ್ಮಿಕರ ಚಡಪಡಿಕೆಯಾಗಿದೆ. ಪೌರ ಕಾರ್ಮಿಕರಿಗೆ ದಿನಬೆಳಗಾದರೆ ಸ್ವಚ್ಚತೆಯದ್ದೇ ಚಿಂತೆ. ಅವರು ಈ ಕೆಲಸವನ್ನು ತಮ್ಮ ಒಟ್ಟೆ ಪಾಡಿಗಾಗಿ ಮಾಡಿದರೂ ಸಹ ಅದರ ಹಿಂದೆ ಪ್ರತಿಯೊಬ್ಬ ನಾಗರೀಕನ ಆರೋಗ್ಯದ ಕುರಿತ ಕಾಳಜಿ ಅವರಲ್ಲಿ ಮನೆ ಮಾಡಿರುತ್ತದೆ.
ನಾವು ಬೆಳಗ್ಗೆ ಎದ್ದು ಸುಮಾರು ೭ ಗಂಟೆಯ ಸಮಯಕ್ಕೆ ಪಟ್ಟಣಕ್ಕೆ ಒಂದು ಸುತ್ತು ಬಂದರೆ ಸಾಕು ಪೌರ ಕಾರ್ಮಿಕರು ಪಡುವ ಕಷ್ಟ, ಅವರು ಮಾಡುವ ಕೆಲಸ, ನಮ್ಮ ಕಣ್ಣಿಗೆ ಕಾಣುತ್ತದೆ. ನಮಗೆ ಅಸಯ್ಯ ಎನ್ನಿಸುವ ಕೆಲಸವನ್ನು ಅವರು ಮಾಡಿದಂತೆ ಕಂಡರೂ ಅವರೆಲ್ಲ ನಮ್ಮ ಪಾಲಿನ ದೇವರಿದ್ದಂತೆ, ಇಂದು ನಾವೆಲ್ಲ ಒಳ್ಳೆಯ, ಕೈತುಂಬಾ, ಹಣ ಬರುವ ಕೆಲಸವನ್ನು ಮಾತ್ರ ಹುಡುಕುತ್ತೇವೆ. ಒಂದು ವೇಳೆ ಪೌರ ಕಾರ್ಮಿಕರೇ ಇಲ್ಲವೆಂದಿದ್ದರೇ ಇಂದು ನಮ್ಮ ಆರೋಗ್ಯದ ಪರಿಸ್ಥಿತಿ ಏನಾಗುತ್ತಿತ್ತು ಎನ್ನುವುದನ್ನು ನೀವೇ ಯೋಚಿಸಿ.
ಕಾಸರಗೋಡಿನ ಕನ್ನಡಿಗರ ತ್ಯಾಗ ಮತ್ತು ಬಲಿದಾನಗಳನ್ನು ಕರ್ನಾಟಕ ಮರೆತಿದೆಯೇ..!?
– ಕುಮಾರ ರೈತ
“ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು”
ಭಾಷಾವಾರು ಪ್ರಾಂತ್ಯ ರಚನೆಯಾಗುವುದಕ್ಕೂ ಒಂಭತ್ತು ವರ್ಷಗಳಿಗೂ ಮೊದಲೇ ಶ್ರೀಧರ ಕಕ್ಕಿಲಾಯರು ಹೇಳಿದ್ದ ಖಚಿತ ಅಭಿಪ್ರಾಯವಿದು. ಇವರು ಕಾಸರಗೋಡಿನ ಸುಪ್ರಸಿದ್ಧ ವಕೀಲರಾಗಿದ್ದರು. ಕಾಸರಗೋಡನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಲು ಸತತ ೨೫ ವರ್ಷ ಹೋರಾಟ ಮಾಡಿದರು. ಅವರ ಜೀವಿತಾವಧಿಯವರೆಗೂ ಈ ಹೋರಾಟದಲ್ಲಿ ಸಕ್ರಿಯರಾಗಿದ್ದರು. ೧೯೪೭ರ ಡಿಸೆಂಬರ್ನಲ್ಲಿ ಕಾಸರಗೋಡಿನ ಬೋರ್ಡ್ ಹೈಸ್ಲೂಲ್ ಆವರಣದಲ್ಲಿ ೩೧ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆತು. ಈ ಸಂದರ್ಭದಲ್ಲಿ ಹೊರಬಂದ ಸ್ಮರಣ ಸಂಚಿಕೆ ‘ತೆಂಕುನಾಡು’ ಸ್ಮರಣ ಸಂಚಿಕೆಯಲ್ಲಿ ಶ್ರೀಧರ ಕಕ್ಕಿಲಾಯರ ಈ ಲೇಖನ ಪ್ರಕಟವಾಯಿತು. ಅದರ ಶೀರ್ಷಿಕೆ ‘ಕನ್ನಡ-ಮಲೆಯಾಳ ಸಮಸ್ಯೆ’
ಇದನ್ನೆಲ್ಲ ಪ್ರಸ್ತಾಪಿಸಲು ಕಾರಣವಿದೆ. ಕಾಸರಗೋಡಿಗೆ ಹೋದಾಗಲೆಲ್ಲ ನಾನು ಭೇಟಿ ಕೊಡುವ ಖಾಯಂ ಸ್ಥಳಗಳ ಸಾಲಿನಲಿಬೇಕಲ್ ಕೋಟೆ ಸೇರಿದೆ. ಇಲ್ಲಿ ಪ್ರಾಣದೇವರ ಗುಡಿಯಿದೆ. ಹೊರಭಾಗದಲ್ಲಿ ಗುಡಿ ಹೆಸರನ್ನು ಕನ್ನಡದಲ್ಲಿ ಬರೆಯಲಾಗಿದೆ. ಬೇಕಲ್ ಕೋಟೆ ನಿರ್ಮಾಣ ಮಾಡಿದ್ದು ಕನ್ನಡಿಗ ರಾಮನಾಯಕ. (ಟಿಪ್ಪು ಸುಲ್ತಾನ್ ಸೈನ್ಯದ ದಂಡನಾಯಕ ( ಮೂಲತಃ ಬೇಕಲ್ ಕೋಟೆ ಕನ್ನಡ ಪ್ರದೇಶ. ಇದಕ್ಕೆ ಅನೇಕ ಕುರುಹುಗಳಿವೆ. ಕೋಟೆ ಇರುವ ಊರಿನ ಹೆಸರು ‘ಅಗಸರ ಹೊಳೆ. ಈ ಎರಡೂ ಪದಗಳು ಅಚ್ಚಗನ್ನಡ.




