ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

6
ಆಗಸ್ಟ್

ಸಂಸತ್ತಿನಲ್ಲಿ ಕನ್ನಡದ ಕಂಪು ಸದಾ ಮೊಳಗಲಿ

– ಅರುಣ್ ಜಾವಗಲ್

ನೆನ್ನೆ ನಡೆದ ಸಂಸತ್ ಕಲಾಪದಲ್ಲಿ ನಮ್ಮ ರಾಜ್ಯದಿಂದ ಆಯ್ಕೆಯಾದ ಲೋಕಸಬಾ ಸದಸ್ಯರಾದ ಚಲುವರಾಯಸ್ವಾಮಿಯವರು ಕನ್ನಡದಲ್ಲಿ ಬಾಶಣ ಮಾಡಿ ಗಮನ ಸೆಳೆದಿದ್ದಾರೆ. ಬಹಳ ದಿನಗಳ ಮೇಲೆ ಸಂಸತ್ತಿನಲ್ಲಿ ಕನ್ನಡದ ಕಂಪು ಮೊಳಗಿದೆ.

೧೯೬೭ ರಲ್ಲಿ ಲೋಕಸಬೆಯ ಕಲಾಪಗಳಲ್ಲಿ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ಜೆ ಹೆಚ್ ಪಟೇಲ್ ರವರು ಬಾಶಣ ಮಾಡಿದ್ದರು. ಮೊಟ್ಟ ಮೊದಲ ಬಾರಿಗೆ ಸಂಸತ್ತಿನಲ್ಲಿ ಕನ್ನಡದ ಡಿಂಡಿಮ ಮೊಳಗಿಸಿದ ಕೀರ್ತಿ ಪಟೇಲ್ ರವರಿಗೆ ಸಲ್ಲಬೇಕು.

ಲೋಕಸಬೆ ಕಲಾಪಗಳಿಗೆ ಹಿಂದಿ/ಇಂಗ್ಲೀಶ್ ಬರಲ್ಲ ಅಂತ ಹಲವಾರು ಜನ ಹಿಂದಿಯೇತರ ಲೋಕಸಬಾ ಸದಸ್ಯರು ಕಲಾಪಗಳಿಗೆ ಹೋಗದೆ ಅತವಾ ಹೋದರು ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳದ ಬಗ್ಗೆ ಕೇಳಿದ್ದಿವಿ. ಆದರೆ ತಮ್ಮ ಬಾಶೆಯಲ್ಲು ಬಾಶಣ ಮಾಡಲು ಪ್ರಜಾಪ್ರಬುತ್ವದಲ್ಲಿ ಅವಕಾಶವಿದ್ದರು ಹಲವಾರು ಜನ ಸದಸ್ಯರು ತಮ್ಮ ಬಾಶೆಯನ್ನ ಬಳಸದಿರುವುದು ದುರಂತವೇ! ನಿಜಕ್ಕು ಅವರು ತಮ್ಮ ಬಾಶೆಯನ್ನ ಬಳಸಿದ್ದೇ ಆದಲ್ಲಿ ವಿಶಯವನ್ನ ಅತ್ಯಂತ ನೇರ ಮತ್ತು ನಿಕರವಾಗಿ ಹೇಳಬಹುದಲ್ಲದೇ ಲೋಕಸಬಾ ಟಿವಿ ಅತವಾ ಇನ್ಯಾವುದೋ ಟಿವಿಯಲ್ಲಿ ಅವರವರ ಕ್ಷೇತ್ರದ ಜನರಿಗೂ ತಾವು ಆಯ್ಕೆ ಮಾಡಿ ಕಳಿಸಿದ ಸದಸ್ಯ ಏನ್ ಮಾತಾಡ್ತಿದ್ದಾರೆ, ಯಾವ ವಿಶಯ ಪ್ರಸ್ತಾಪಿಸುತ್ತಿದ್ದಾರೆ ಅನ್ನೊದು ತಿಳಿಯೋ ಹಾಗೆ ಆಗುತ್ತೆ.
ಮತ್ತಷ್ಟು ಓದು »

5
ಆಗಸ್ಟ್

ಭಗವದ್ಗೀತೆಯ ಆಧುನಿಕ ನಿರೂಪಣೆಗಳು ಹಾಗೂ ಸಮಸ್ಯೆಗಳು

ಡಾ. ರಾಜಾರಾಮ ಹೆಗಡೆ

ಇತ್ತೀಚೆಗೆ ಭಗವದ್ಗೀತೆಯ ಕುರಿತು ಅನೇಕ ಚರ್ಚೆಗಳೆದ್ದಿವೆ. ಶಾಲೆಗಳಲ್ಲಿ ಅದನ್ನು ಪ್ರಚಾರ ಮಾಡುವ  ಕೆಲಸವನ್ನು ಸಮರ್ಥಿಸಿ ಹಾಗೂ ವಿರೋಧಿಸಿ ಹೇಳಿಕೆಗಳು ಬರುತ್ತಿವೆ. ಈ ಎರಡೂ ಪಕ್ಷಗಳ ವಕ್ತಾರರೂ ಕೂಡ ಭಗವದ್ಗೀತೆಯು ಹಿಂದೂಗಳ ಧರ್ಮಗ್ರಂಥವೆಂಬ ಗ್ರಹಿಕೆಯನ್ನು  ಆಧರಿಸಿ ವಾದ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ವಿರೋಧಿಸುವವರ ವಾದವೆಂದರೆ ಸೆಕ್ಯುಲರ್ ರಾಷ್ಟ್ರವಾದ ಭಾರತದಲ್ಲಿ ಎಲ್ಲಾ ಧರ್ಮದವರೂ ಇರುವ ಸಾರ್ವಜನಿಕ ಸಂಸ್ಥೆಗಳಲ್ಲಿ ಹಿಂದೂಗಳಲ್ಲದವರೂ ಭಗವದ್ಗೀತೆಯನ್ನು ಕಲಿಯಬೇಕೆನ್ನುವುದು ಸಂವಿಧಾನ ವಿರೋಧೀ ಕೃತ್ಯವಾಗುತ್ತದೆ. ಹಾಗಾಗಿ ಸೆಕ್ಯುಲರ್ ತತ್ವದ ಪ್ರಕಾರ ಅದು ತಪ್ಪೊಂದೇ ಅಲ್ಲ, ಅದು ಕಾನೂನಿನ ದೃಷ್ಟಿಯಲ್ಲಿ ಅಪರಾಧ ಕೂಡಾ. ಈ ವಿರೋಧವನ್ನು ಖಂಡಿಸಿರುವ ಪರ ಪಕ್ಷದವರು ಭಗವದ್ಗೀತೆಯ ಶಿಕ್ಷಣವನ್ನು ವಿರೋಧಿಸುವವರು ದೇಶ ಬಿಟ್ಟು ತೊಲಗಲಿ ಎನ್ನುತ್ತಿದ್ದಾರೆ. ಅಂದರೆ ಅಂಥ ವಿರೋಧಿಗಳ ರಾಷ್ಟ್ರೀಯತೆಯನ್ನೇ ಪ್ರಶ್ನಿಸುತ್ತಿದ್ದಾರೆ.

ಒಂದೊಮ್ಮೆ ಎರಡೂ ಪಕ್ಷದವರೂ ಒಮ್ಮತಕ್ಕೆ ಬಂದು ಭಗವದ್ಗೀತೆಯನ್ನು ಕೇವಲ ಹಿಂದೂ ಮಕ್ಕಳಿಗೆ ಕಡ್ಡಾಯ ಮಾಡಬಹುದು ಎಂದರೆ ಸಮಸ್ಯೆ ಬಗೆಹರಿಯುತ್ತದೆಯೆ? ಭಗವದ್ಗೀತೆಯು ಹಿಂದೂ ಧರ್ಮಗ್ರಂಥವೆಂದು ನಂಬಿರುವ ವಿರೋಧ ಪಕ್ಷದವರ ಪ್ರಕಾರ ದಲಿತರಿಗೆ ಹಾಗೂ ಶೂದ್ರರಿಗೆ  ಅದೊಂದು ಅಪಾಯಕಾರಿ ಗ್ರಂಥವಾಗಿದೆ.  ಅದನ್ನು ಶಾಲೆಗಳಲ್ಲಿ ಕಡ್ಡಾಯಮಾಡುವ ಪ್ರಯತ್ನದ ಹಿಂದೆ ಬ್ರಾಹ್ಮಣ ಪುರೋಹಿತಶಾಹಿಯ ಹುನ್ನಾರವಿದೆ. ಈ ಕಾರ್ಯದಿಂದ ಅಲ್ಪಸಂಖ್ಯಾತರಿಗೊಂದೇ ಅಲ್ಲ, ದಲಿತ-ಶೂದ್ರರ ಹಿತಾಸಕ್ತಿಗೂ ಧಕ್ಕೆಯಿದೆ. ಈ ವಾದಕ್ಕೆ ಪರಪಕ್ಷದವರು ನೀಡುವ ಉತ್ತರವೆಂದರೆ ಇಂಥ ಹೇಳಿಕೆಗಳು ಬರುತ್ತಿರುವುದೇ ಹಿಂದೂ ಧರ್ಮದ ಅವನತಿಯ ದ್ಯೋತಕ. ಹಾಗಾಗಿ ಇಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಹಾಗೂ ಹಿಂದೂ ಧರ್ಮದ ಐಕ್ಯತೆಯನ್ನು ಸಾಧಿಸಲು ಹಿಂದೂ ಧರ್ಮಗ್ರಂಥಗಳನ್ನು ಕಡ್ಡಾಯವಾಗಿಯಾದರೂ ಹಿಂದೂಗಳಿಗೆ ತಿಳಿಸುವುದು ಅತ್ಯಗತ್ಯ. ಮತ್ತಷ್ಟು ಓದು »

5
ಆಗಸ್ಟ್

ಸಂಸ್ಕೃತಿ ಸಂಕಥನ – ೪

– ರಮಾನಂದ ಐನಕೈ

ಧರ್ಮದ ಮೈಮೇಲೆ – ರಿಲಿಜನ್ನಿನ ಅಂಗಿ 

 ವಿಪರ್ಯಾಸ ನೋಡಿ. ಒಂದು ಕಡೆ ‘ಹಿಂದೂ ಧರ್ಮ’ ಅನ್ನುತ್ತೇವೆ. ಇನ್ನೊಂದು ಕಡೆ ಅದನ್ನೇ ‘ಹಿಂದೂ ರಿಲಿಜನ್’ ಅನ್ನುತ್ತೇವೆ. ಯಾವುದೇ ಭಾರತೀಯರನ್ನು ಕೇಳಿದರೆ ಇವೆರಡರ ನಡುವೆ ವ್ಯತ್ಯಾಸವೇ ಇಲ್ಲ ಎಂದು ಆತ್ಮವಿಶ್ವಾಸದಿಂದ ಪ್ರತಿಪಾದಿಸುತ್ತಾರೆ. ಇವೆರಡರ ವ್ಯತ್ಯಾಸ ತಿಳಿಯದಿದ್ದದ್ದೇ ಭಾರತೀಯರ ಮುಖ್ಯ ಮಾನಸಿಕ ತೊಂದರೆ. ಹಾಗಾಗೇ ನಿತ್ಯ ಗೊಂದಲದಲ್ಲಿ ಒದ್ದಾಡುತ್ತೇವೆ.

‘ರಾಜಕೀಯದಲ್ಲಿ ಧರ್ಮ ಇರಬಾರದು’, ‘ಸಾಹಿತ್ಯದಲ್ಲಿ ಧರ್ಮ ಬರಬಾರದು’, ‘ಕೋಮು ಗಲಭೆಗೆ ಧರ್ಮ ಕಾರಣ’ – ಇತ್ಯಾದಿ ಹೇಳಿಕೆ ಕೇಳಿದಾಗ ನಮಗೆ ಪುನಃ ಗೊಂದಲ. ಏಕೆಂದರೆ ಈ ಹೇಳಿಕೆಯನ್ನು ತೇಲಿ ಬಿಡುವವರು ಬುದ್ಧಿಜೀವಿಗಳು. ಅವರು ರಿಲಿಜನ್ ಎಂಬ ಪರಿಕಲ್ಪನೆಯ ಮೇಲೆ ಪ್ರಜ್ಞಾಪೂರ್ವಕವಾಗಿ ವಾದಿಸುತ್ತಾರೆ. ಆದರೆ ನಾವು ಸಾಮಾನ್ಯ ನಾಗರಿಕರು ಧರ್ಮ ಎಂಬ ಅರ್ಥದ ನೆಲೆಯಲ್ಲಿ ಅದನ್ನು ಗ್ರಹಿಸುತ್ತೇವೆ. ಹಾಗಾಗಿ ಎಲ್ಲವೂ ನಮ್ಮ ಮನಸ್ಸಿಗೆ ಅರ್ಧಸತ್ಯ ಅನಿಸುತ್ತದೆ. ಧರ್ಮ ಬೇಡ ಅಂದರೆ ಪ್ರತಿಯೊಂದಕ್ಕೂ ಅದರದ್ದೇ ಆದ ಕರ್ತವ್ಯ ಬೇಡವೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಂದರೆ ಧರ್ಮ ಹಾಗೂ ರಿಲಿಜನ್ ಮಧ್ಯೆ ವ್ಯತ್ಯಾಸ ಇರಲೇಬೇಕೆಂಬುದು ನಮ್ಮ ಗೃಹಿಕೆಗೆ ಸೂಚಿಸುತ್ತದೆ. ಎರಡೂ ಒಂದೇ ಆಗಿದ್ದರೆ ಈ ರೀತಿ ಗೊಂದಲ ಏಕೆ ಸೃಷ್ಟಿಯಾಗುತ್ತದೆ? ಇದೇ ಅರ್ಥವಾಗದ ಒಗಟು.

ಮತ್ತಷ್ಟು ಓದು »

3
ಆಗಸ್ಟ್

ನಮಗೆ ದುಡ್ಡಿನ ಬೆಲೆ ಗೊತ್ತಿದ್ಯಾ?

-ಪ್ರಶಸ್ತಿ. ಪಿ,ಶಿವಮೊಗ್ಗ

ಇಸ್ತ್ರಿಯಂಗಡಿಗೆ ಹೋಗಿದ್ದೆ.. ಅಲ್ಲಿ ಅವ ಹೇಳ್ತಾ ಇದ್ದ. ೧ ಚೀಲ ಇದ್ದಿಲಿಗೆ ೧೫೦೦ ರೂಪಯಿ. ಒಂದು ವರ್ಷನೂ ಬರಲ್ಲ ಈ ಇಸ್ತ್ರಿ ಪೆಟ್ಟಿಗೆ, ಅದ್ಕೆ ೪೦೦೦ ರೂಪಾಯಿ. ಬಟ್ಟೆಗೆ ೩ ರೂ ಕೇಳಿದ್ರೆ ನೀವು ಹಿಂದೆ ಮುಂದೆ ನೋಡ್ತೀರ. ಜೀವನ ಕಷ್ಟಾಪ್ಪ. ಅವನು ಹೇಳೋದು ಕೇಳ್ದಾಗ ಅನುಸ್ತು.. ” ನಮಗೆ ದುಡ್ಡಿನ ಬೆಲೆ ಗೊತ್ತಿದ್ಯಾ” ಅಂತ.

ಅಪ್ಪನೋ ಅಮ್ಮನೋ ಬೇಕಾದಗ ದುಡ್ಡು ಕೊಟ್ಟಿರ್ತಾರೆ. ಬ್ಯಾಂಕ್ ಸಾಲ ಮಾಡಿ ಓದೋ ಹಲ ಗೆಳೆಯರಿಗೂ A.T.M ಇಂದ ದುಡ್ಡು ಬೇಕಂದಾಗ ಸಿಗುತ್ತೆ ಅನ್ನೋ ಭರವಸೆ ಇರುತ್ತೆ. ಅದ್ರ ಹಿಂದೆ ನಮ್ಮ ತಂದೆ/ತಾಯಿ ಶ್ರಮ ಎಷ್ಟಿರುತ್ತೆ ಅಂತ ಎಂದಾದ್ರು ಯೋಚ್ನೆ ಮಾಡಿರ್ತೀವಾ? ಪ್ರತೀ ಪೈಸೆ ಹಿಂದೆನೂ ಎಷ್ಟು ಶ್ರಮ ಅಡಗಿರುತ್ತೆ ಅಂತ ಯೋಚ್ನೆ ಮಾಡ್ತೀವಾ?

ಖರ್ಚು ಮಾಡೋದು ತಪ್ಪು ಅಂತ ನಾ ಹೇಳ್ತಿಲ್ಲ. ಆದ್ರೆ ನಾವು ಖರ್ಚು ಮಾಡ್ತಿರೋ ಪ್ರತೀ ರೂಪಾಯಿ ಬೆಲೆ ನಮಗೆ ಗೊತ್ತಾ ಅನ್ನೋ ಸಂದೇಹ ಸುಮಾರು ಸಲ ಕಾಡುತ್ತೆ. ದುಡ್ಡು ಕೊಟ್ಟು ತಂಗಡಿರ್ತೀವಿ. ಸ್ವಲ್ಪ ಉಪ್ಪೋ , ಖಾರಾನೋ ಜಾಸ್ತಿ ಆಯ್ತು ಅಂದ್ರೆ ಹಾಗೆ ದಂಡ ಮಾಡ್ತೀವಿ.. ಮನೇನಲ್ಲೂ ಎಷ್ಟೋ ಸಲ ತಿಂಡಿ ತಿನ್ನದೇ ಜಗಳ ಮಾಡ್ಕೊಂಡು ಹೊರಟು ಬಂದಿರ್ತೀವಿ.. ದುಡ್ಡಿರುತ್ತಲ್ಲಾ.. ಕೊಟ್ರೆ ಬೇರೆದು, ಒಳ್ಳೇದು ಸಿಗುತ್ತೆ ಅನ್ನೋ ಭಾವನೆ ಅಲ್ವಾ?. . ಆದ್ರೆ ನಮಗೆ ಬೇಜಾರು ಮಾಡ್ಬಾರ್ದು ಅಂತ ಸುಮ್ಮನಿರೋ ಅಪ್ಪ-ಅಮ್ಮ, ದುಡ್ಡು ಕೊಟ್ಟಿದೀವಿ ಅಂತ ಸುಮ್ಮನಿರೋ ಹೋಟಲಿನವರು.. ಹೀಗೆ ಏನು ಕಾಣ್ತಿದೆಯೋ ಆದರ ಹಿಂದಿನ ವಾಸ್ತವ ಅರಿಯೋಕೆ ಪ್ರಯತ್ನನೇ ಮಾಡಲ್ಲ ಅಲ್ವಾ? ನೀರು ತರ ಖರ್ಚು ಮಾಡ್ತಿರೋ ದುಡ್ಡಿನ ಬೆಲೆ ಬಗ್ಗೆ ಒಂದಿನನಾದ್ರೂ ತಲೆ ಕೆಡ್ಸ್ಕಂಡಿರ್ತೀವಾ?

ಮತ್ತಷ್ಟು ಓದು »

2
ಆಗಸ್ಟ್

ಸಂತಾನಹೀನತೆಯ ಕಾರಣ ಶೋಧಿಸುತ್ತ….

– ವಿಷ್ಣುಪ್ರಿಯ
(ಯೋನಿಯ ಮೂಲಕ ಪ್ರವೇಶಿಸುವಂಥ ವೀರ್ಯವು ಗರ್ಭನಾಳವನ್ನು ಹಾದು, ಗರ್ಭಕೋಶವನ್ನು ಸೇರಿ ಅಲ್ಲಿರುವ ಅಂಡಾಣುವಿನೊಂದಿಗೆ ಮಿಲನವಾಗಬೇಕು. ಅಂದರೆ ಗರ್ಭವತಿಯಾಗಬೇಕೆಂದರೆ ಎರಡು ಮಿಲನಗಳಾಗಬೇಕು- ಒಂದು ಸ್ತ್ರೀ-ಪುರುಷ ಮಿಲನ, ಇನ್ನೊಂದು ಈ ಮಿಲನದ ಬಳಿಕದ ಅಂಡಾಣು-ವೀರ್ಯಾಣು ಮಿಲನ. ದೇಹದಲ್ಲಿರುವಂಥ ಪ್ರತಿರಕ್ಷಣಾ ವ್ಯವಸ್ಥೆ (ಇಮ್ಯೂನ್ ಸಿಸ್ಟಮ್) ವೀರ್ಯದ ಚಲನೆಯನ್ನು ತಡೆಯುವುದಕ್ಕೆ ಪ್ರಯತ್ನಿಸುತ್ತದೆ. ಆದರೆ ವೀರ್ಯಕ್ಕೆ ಹೊದಿಕೆಯಂತೆ (ಕೋಟ್ನಂತೆ) ಇರುವ ಪ್ರೋಟೀನ್ ಡಿಇಎಫ್ ಬಿ 126 ಈ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸೀಳಿಕೊಂಡು ಮುಂದಕ್ಕೆ ಚಲಿಸಿ ಅಂಡಾಣುವಿನೊಂದಿಗೆ ಮಿಲನವಾಗುತ್ತದೆ. ಒಂದು ವೇಳೆ ವೀಯಾಣುವಿನಲ್ಲಿ ಈ ಪ್ರೋಟೀನ್ ಹೊದಿಕೆ ಇಲ್ಲದೇ ಹೋದರೆ?  )
`ಮಕ್ಕಳಿರಲವ್ವ ಮನೆತುಂಬ’ ಎಂದರು ಹಿರಿಯರು. ಸುಮ್ಮನೇ ಹೇಳಿರುತ್ತಾರೆಯೇ? ಈ ಬಯಕೆಯ ಹಿಂದೊಂದು ವಾಸ್ತವವಿದೆ. ಮಕ್ಕಳು ಮನೆಯಲ್ಲಿದ್ದರೆ ಅದೆಷ್ಟೋ ನೋವುಗಳು ತಮ್ಮಷ್ಟಕ್ಕೇ ಶಮನಗೊಳ್ಳುತ್ತವೆ.ಮಗುವಿನ ಕಿಲಕಲ ನಗು, ಅದರ ಅಳು, ರಂಪಾಟ, ಅದರ ಚೇಷ್ಟೆಗಳು, ಆಟಗಳು… ಮಗುವಿನ ಒಂದೊಂದು ಕ್ಷಣದಲ್ಲೂ ಬೆರೆತುಕೊಂದಡರೆ ದೊಡ್ಡವರೂ ಕೂಡಾ ಮಕ್ಕಳೇ ಆಗುತ್ತಾರೆ! ಆ ಕಂದಮ್ಮಗಳೊಂದಿಗೆ ತಾವೂ ತೊದಲುನುಡಿಯಲ್ಲಿ ಮಾತನಾಡುತ್ತಾರೆ. ಮಕ್ಕಳೊಂದಿಗೆ ಕಳೆಯುವ ಆ ಕ್ಷಣಗಳನ್ನು ಪದಗಳಲ್ಲಿ ವರ್ಣಿಸುವುದು ಕಷ್ಟವೇನೋ? ಮುದ್ದಾದ ಮಕ್ಕಳನ್ನು ಕಂಡಾಗ ಭಾವುಕರಾಗದವರು ಯಾರಿದ್ದಾರೆ? ಇಂಥದ್ದೇ ಒಂದು ಮುದ್ದು ಕಂದ ನನಗೂ ಇರಬೇಕು… ಹಾಗಂತ ಹೆಂಗಸರೂ ಬಯಸುತ್ತಾರೆ, ಪುರುಷರೂ ಕೂಡಾ! ಬಯಕೆಗಳು ಎಲ್ಲಾ ಕಾಲದಲ್ಲೂ ಈಡೇರುವುದಿಲ್ಲ. ಸಂತಾನ ಪಡೆಯುವುದು ಸುಲಭದ ವಿಚಾರವೂ ಅಲ್ಲ. ಸ್ತ್ರೀ-ಪುರುಷ ಮಿಲನಗೊಂಡರೆ ಸಾಕು ಸಂತಾನವಾಗದೇ ಏನು ಎಂಬ ಪ್ರಶ್ನೆಗಳು ಸಹಜ. ಮಿಲನವೊಂದಷ್ಟೇ ಸಂತಾನದ ವಿಚಾರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುವುದಲ್ಲ.

ಮತ್ತಷ್ಟು ಓದು »

1
ಆಗಸ್ಟ್

ದೆಹಲಿಯೇ ಬೆಂಗಳೂರಿಗೆ ಬಂತು ಮತ್ತು ಅದೇ ಸರಿಯಾದದ್ದು !

-ವಸಂತ್ ಶೆಟ್ಟಿ
ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ ನಡೆದಿರೋ ರಾಜಕೀಯ ಬಿಕ್ಕಟ್ಟು ಇನ್ನೇನು ಮುಗಿಬಹುದು ಅನ್ನೋ ಹಂತಕ್ಕೆ ಬಂದಿದೆ. ಕಳೆದ ಒಂದು ವಾರದಿಂದ ನಡೆದಿರೋ ವಿದ್ಯಮಾನವನ್ನು ಗಮನಿಸಿದರೆ ಕರ್ನಾಟಕದ ರಾಜಕೀಯ ಒಂದು ದೊಡ್ಡ ಬದಲಾವಣೆಯ ಘಟ್ಟದಲ್ಲಿದೆ ಅನ್ನಬಹುದು. ಯಾಕೆ ಹಾಗಂದೆ ಅಂತ ಕೇಳಿದ್ರೆ ನನ್ನ ಅನಿಸಿಕೆ ಇಂತಿದೆ:

ಕಳೆದ 60 ವರ್ಷದಿಂದಲೂ ನಾವು ನೋಡಿರುವುದು ಏನೆಂದರೆ ಕರ್ನಾಟಕದ ರಾಜಕೀಯ ನಾಯಕರು ಒಂದು ಸಣ್ಣ ವಿಷಯಕ್ಕೂ ದೆಹಲಿಗೆ ಹೋಗಿ ಅಲ್ಲಿನ ದೊರೆಗಳ ಮುಂದೆ ಕೈ ಕಟ್ಟಿಕೊಂಡು ನಿಂತು, “ಅಪ್ಪಣೆ ಮಹಾಪ್ರಭು” ಅಂತ ನಿಂತುಕೊಳ್ಳೊರು. ಅವರು ಕೊಟ್ಟ ಆಜ್ಞೆನಾ ಪ್ರಸಾದ ಅಂಬಂತೆ ಕಣ್ಣಿಗೊತ್ತಿಕೊಂಡು ವಾಪಸ್ ಬರೋರು. “ನಮ್ದು ನ್ಯಾಶನಲ್ ಪಾರ್ಟಿ ರೀ, ನಾವು ಶಿಸ್ತಿನ ಸಿಪಾಯಿಗಳು ರೀ,,ಹೈಕಮಾಂಡ್ ಮಾಡಿದ ಆಜ್ಞೆ ನಾವ್ ಮೀರುವುದುಂಟೇನು” ಎಂದು ತಮ್ಮ ಗುಲಾಮಗಿರಿಯನ್ನೇ ಖುಷಿಯಾಗಿ ಸಮರ್ಥಿಸಿಕೊಳ್ಳೊರು. ಆದರೆ ಮೊಟ್ಟ ಮೊದಲ ಬಾರಿಗೆ ದೆಹಲಿಯ ಮೂರು ಮತ್ತೊಂದು ನಿವೃತ್ತ ನಾಯಕರಿಗೆ ಸೆಡ್ಡು ಹೊಡೆದು ದೆಹಲಿಯೇ ಬೆಂಗಳೂರಿಗೆ ಬರುವಂತೆ ಮಾಡಿದ್ದು, ಎರಡು ದಿನವಾದರೂ ಅವರಿಗೆ toughest ಫೈಟ್ ಕೊಟ್ಟಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದಿಂದ ಕೇಂದ್ರವಿರಬೇಕು, ಬಾಟಮ್ ಅಪ್ ಆಪ್ರೋಚ್ ಇರಬೇಕು ಅನ್ನುವ ಸಂದೇಶವನ್ನು ಕೊಟ್ಟ ಕಾರಣಕ್ಕೆ ಯಡಿಯೂರಪ್ಪನವರನ್ನು ಮೆಚ್ಚದಿರಲು ಆಗದು. ಮತ್ತಷ್ಟು ಓದು »
1
ಆಗಸ್ಟ್

ಕಥೆಯಾದಳು ಹುಡುಗಿ!

– ಚಿತ್ರ ಸಂತೋಷ್

ವೇಶ್ಯಾವಾಟಿಕೆ ಎನ್ನುವುದು ಗಂಡಸು ಸೃಷ್ಟಿಸುವ ಸಮಸ್ಯೆ ಎಂದವನು ಚಾಣಕ್ಯ. ಆದರೆ, ನನಗನಿಸಿದ ಮಟ್ಟಿಗೆ ಇದು ಸಮಾಜವೇ ಸೃಷ್ಟಿಸುವ ಸಮಸ್ಯೆ. ಉತ್ತರ ಕರ್ನಾಟಕದ ಕೆಲಭಾಗಳಲ್ಲಿ ಈಗಲೂ ಹೆಣ್ಣನ್ನು ವೇಶ್ಯಾವಾಟಿಕೆಗೆ ತಳ್ಳುವ ಕೆಟ್ಟಪದ್ಧತಿ ಚಾಲ್ತಿಯಲ್ಲಿದೆ. ಇಲ್ಲಿ ಯಾವ ಕಾನೂನುಗಳೂ ಕೆಲಸಮಾಡುತ್ತಿಲ್ಲ.

ನನಗೆ ೨೨ ವರ್ಷ. ನಾವು ಐವರು ಹೆಣ್ಣುಮಕ್ಳು. ಮನೆಯಲ್ಲಿ ಬಡತನ. ನಮ್ಮ ಮದುವೆ ಕುರಿತು ಯೋಚನೆ ಮಾಡಿ ಮಾಡಿ ಅಪ್ಪಹಾಸಿಗೆ ಡಿದಿದ್ದ. ನಾನೇ ದೊಡ್ಡವಳು. ನನ್ನ ಕೊನೆಯ ತಂಗಿಯ ಹುಟ್ಟುವಾಗಲೇ ಹೆರಿಗೆಯಲ್ಲಿ ತೊಂದರೆಯಾಗಿ ಅಮ್ಮ ಸಾವನ್ನಪ್ಪಿದ್ದಳು.  ನಾನು ದೊಡ್ಡವಳಾಗಿದ್ದರಿಂದ ನನಗೆ ಸಣ್ಣ ವಯಸ್ಸಿನಲ್ಲೇ ಒಬ್ಬ ಮುದುಕನ ಜೊತೆ ಅಪ್ಪ ಮದುವೆ ಮಾಡಿದ್ದ. ಆದರೆ, ಅವನಿಗೆ ಆಗಲೇ ಮೂರು ಮಂದಿ ಪತ್ನಿಯರಿದ್ದರು. ಮರಳಿ ಮನೆಗೆ ಬಂದೆ. ಕೆಲಸ ಹುಡುಕುವುದು ಅನಿವಾರ್ಯವಾಯಿತು. ನಮ್ಮೂರಿನ ಅಂಕಲ್ ಒಬ್ರು ಕೆಲಸ ಕೊಡಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಅಪ್ಪನಿಗೂ ಹೇಳದೆ ಅವನನ್ನು ನಂಬಿ ಮುಂಬೈಗೆ ತೆರಳಿದೆ.

ಮತ್ತಷ್ಟು ಓದು »

30
ಜುಲೈ

ಮದಿರೆ ಬಿಟ್ಟು ಬದುಕ ಕಟ್ಟಿಕೊಂಡವರ ಕಥೆ

– ಪವನ್ ಯಂ.ಟಿ

ಕೊಟ್ಟಾರೆ ಕೊಡು ಶಿವನೆ ಕುಡುಕನಲ್ಲದ ಗಂಡನ …!

ಎಂದು ಎಷ್ಟೋ ಹೆಣ್ಣು ಮಕ್ಕಳು ದೇವರಲ್ಲಿ ಮೊರೆಯಿಡುತ್ತಿದ್ದ ಬಗ್ಗೆ  ಜನಪದ ಹಾಡನ್ನು ಕೇಳಿದ ನೆನಪಾಗುತ್ತಿದೆ. ಒಂದು ಹೆಣ್ನು ಮಗಳು ತನ್ನ ಗಂಡ ಕುಡುಕನಾಗುವುದನ್ನು ಕನಸಲ್ಲಿಯೂ ನೆನೆಯುದಿಲ್ಲ. ಅದೇ ರೀತಿ ತಮ್ಮ ಮಗ ಮಕ್ಕಳು ಕುಡುಕರಾಗಬೇಕೆಂದು ಯಾವ ತಂದೆ ತಾಯಿಯು ಇಷ್ಟ ಪಡುವುದಿಲ್ಲ. ಆದರೆ ಏನು ಮಾಡುವುದು ಕೆಲವು ಹೆಣ್ಣು ಮಕ್ಕಳ ಮತ್ತು ತಂದೆ ತಾಯಿಯಂದಿಯರ ಆಸೆ ಕೈಗೂಡಬೇಕಲ್ಲ. ನಮ್ಮಲ್ಲಿ ಹೆಚ್ಚು ಜನರು ಕುಡಿತದ ಬಲೆಗೆ ಬಿದ್ದಾಗಿದೆ. ನಮ್ಮ ದೇಶದಲ್ಲಿ ಶೇಕಡ ೭೦ ರಷ್ಟು ಜನರು ಈಗಾಗಲೇ ಕುಡಿತಕ್ಕೆ ಬಲಿ ಬಿದ್ದಿರ ಬಹುದು.

ಯಾವತ್ತೋ ಒಂದು ದಿನ ಜಾಲಿಗೆಂದು ಬಿಯರ್ ಕುಡಿದ ಒಬ್ಬ ವ್ಯಕ್ತಿ ನಂತರ ಕ್ವಾಟರ್, ಆಫ್, ಪುಲ್, ಬಾಟಲ್ ಕುಡಿಯುವವನಾಗಿ ಪರಿವರ್ತನೆಯಾಗುತ್ತಾನೆ, ನಂತರ ಅವನು ಸಂಪ್ರಾಯಿಕ ಕುಡುಕ. ನಮ್ಮಲ್ಲಿ ೫೦ ವರ್ಷಕ್ಕೆ ಮೇಲ್ ಪಟ್ಟ ಮಧ್ಯ ವಯಸ್ಕರು ಹೆಚ್ಚಾಗಿ ಕುಡಿತಕ್ಕೆ ಒಳಗಾಗಿರುವುದನ್ನು ಗಮನಿಸ ಬಹುದು. ಆದರೆ ಈಗಿನ ಸ್ಥಿತಿ ಯಾವ ರೀತಿಯಾಗಿದೆ ಯೆಂದರೆ ಹೆಚ್ಚಾಗಿ ಯುವಕರೇ ಜಾಲಿ, ಗಮ್ಮತಿನ ಹೆಸರಿನಲ್ಲಿ ಕುಡಿತಕ್ಕೆ ಬಲಿ ಬೀಳುತ್ತಿದ್ದಾರೆ. ಮತ್ತಷ್ಟು ಓದು »

30
ಜುಲೈ

ಸಂಸ್ಕೃತಿ ಸಂಕಥನ – ೩

– ರಮಾನಂದ ಐನಕೈ

ವಿದ್ಯಾವಂತರೆನಿಸಿಕೊಂಡ ನಮಗೆಲ್ಲ ಒಂದು ತೊಂದರೆ ಇದೆ. ಅದೇನೆಂದರೆ ನಮ್ಮ ಜೀವನಶೈಲಿಯೊಂದಿಗೆ ಅನಿವಾರ್ಯವಾಗಿ ಪಾಲಿಸಲೇಬೇಕಾದ ಸಂಪ್ರದಾಯಗಳು. ಇದನ್ನು ಪಾಲಿಸದಿದ್ದರೆ ನಾವು ಸಮುದಾಯದಿಂದ ಹೊರಗುಳಿಯತ್ತೇವೆ. ಕೆಲವೊಮ್ಮೆ ಮಾನಸಿಕವಾಗಿ ನಮ್ಮೊಳಗೇ ಅಭದ್ರತೆಗೊಳಗಾಗುತ್ತೇವೆ. ಹಾಗಂತ ಸಂಪ್ರದಾಯವನ್ನು ಪಾಲಿಸಲು ನಮ್ಮ ವೈಚಾರಿಕತೆ ಅನುವು ಮಾಡಿಕೊಡುವುದಿಲ್ಲ. ನಾವು ಭೌತಿಕವಾಗಿ ಬದುಕುತ್ತಿರುವುದು ಸಂಪ್ರದಾಯದ ಸಮಾಜದಲ್ಲಿ. ಮಾನಸಿಕವಾಗಿ ಬದುಕುತ್ತಿರುಉವದು ವೈಚಾರಿಕತೆಯೆಂಬ ಭ್ರಮೆಯಲ್ಲಿ. ಯಾಕೆ ಹೀಗಾಗುತ್ತಿದೆ? ನಮ್ಮ ಸಂಪ್ರದಾಯಗಳಲ್ಲಿ ನಮಗೇಕೆ ಅರ್ಥ ಕಾಣುತ್ತಿಲ್ಲ? ಅಥವಾ ಅರ್ಥ ಹುಡುಕುವ ಹಠವಾದರೂ ಏಕೆ? ಇವುಗಳಿಗೆಲ್ಲ ಅರ್ಥ ಇರಲೇಬೇಕೆಂದಿದೆಯೇ? ಸ್ವತಂತ್ರ ಭಾರತದ 60 ವರ್ಷ ಕಳೆದರೂ ಇಂಥ ಗೊಂದಲಗಳಿಂದ ಮುಕ್ತರಾಗದೇ ಇದ್ದದ್ದು ನಿಜಕ್ಕೂ ಗಂಭೀರವಾಸ್ತವ.

ಸಂಪ್ರದಾಯ ಅಂದರೆ ತಲೆತಲಾಂತರದಿಂದ ನಡೆಸಿಕೊಂಡು ಬಂದ ಆಚರಣೆಗಳು. ನಮ್ಮ ಹಿರಿಯರು ಅವರ ಹಿರಿಯರನ್ನು ಅನುಕರಿಸಿದರು. ಅವರ ಹಿರಿಯರು ಅವರ ಹಿರಿಯರನ್ನು… ಹೀಗೆ ಯಾಕೆ ಆಚರಿಸಬೇಕೆಂದು ಯಾರೂ ಯಾರನ್ನೂ ಪ್ರಸ್ನಿಸಲಿಲ್ಲ. ಪ್ರಶ್ನಿಸುವ ಜಿಜ್ಞಾಸ ಹುಟ್ಟಲೇ ಇಲ್ಲ. ಏಕೆಂದರೆ ಎಲ್ಲರೂ ಅದು ತಮ್ಮದು ಎಂದು ನಂಬಿದ್ದರು. ಪ್ರೀತಿಸುತ್ತಿದ್ದರು. ಸ್ವಾತಂತ್ರ್ಯಾನಂತರ ನಮಗೆ ಸಂಪ್ರದಾಯಗಳ ಕುರಿತು ಹೆಚ್ಚು ಪ್ರಶ್ನೆಗಳು ಏಳಲು ಶುರುವಾಗಿವೆ. ಅದಕ್ಕೆ ಕಾರಣ ನಾವು ಪ್ರಭಾವಿಸಿಕೊಂಡ ಎರವಲು ವೈಚಾರಿಕತೆ ಅಥವಾ ವಿಚಾರವಾದ. ಅದು ನಮ್ಮ ಶಿಕ್ಷಣ ಹಾಗೂ ಓದುತ್ತಿರುವ ಸಮಾಜವಿಜ್ಞಾನಗಳಿಂದ ಸೃಷ್ಟಿಯಾದದ್ದು. ಪರೋಕ್ಷವಾಗಿ ಹೇಳಬಹುದಾದರೆ ಪಾಶ್ಚಾತ್ಯರು ಹೇಳಿಕೊಟ್ಟ ಕಂಠಪಾಠ. ಅವರ ಪ್ರಕಾರ ವೈಚಾರಿಕತೆಯತ್ತ ಸಾಗುವುದೇ ಪ್ರಗತಿ ಅಥವಾ ನಾಗರಿಕತೆಯ ಲಕ್ಷಣ. ಭಾರತೀಯ ಸಂಪ್ರದಾಯಗಳು (ಹಿಂದೂ ರಿಲಿಜನ್) ಅವೈಚಾರಿಕವಾದ್ದರಿಂದ ಭಾರತ ಹಿಂದುಳಿದ ದೇಶ. ಇಲ್ಲಿಯ ಜನ ಮೂಢರು ಮತ್ತು ದಡ್ಡರು. ಅರ್ಥವಿಲ್ಲದ ಆಚರಣೆಗಳನ್ನು ಮಾಡುವವರು ಎಂಬಿತ್ಯಾದಿ. ಇದೇ ನಿಜ ಎಂದು ನಾವೆಲ್ಲ ನಂಬಿಕೊಂಡಿದ್ದರಿಂದ ನಮ್ಮ ಸಂಪ್ರದಾಯಗಳು ನಮಗೆ ಅರ್ಥಹೀನ ಅನಿಸುತ್ತದೆ.

ಮತ್ತಷ್ಟು ಓದು »

29
ಜುಲೈ

ಹೈಕಮಾಂಡ್!!! ಹೈಕಮಾಂಡ್!!!

– ಚೇತನ್ ಜೀರಾಳ್

ಕರ್ನಾಟದಲ್ಲಿ ಕಳೆದೆರೆಡು ವಾರಗಳಿಂದ ನಡೆಯುತ್ತಿರುವ ಈ ರಾಜಕೀಯ ದೊಂಬರಾಟ ದೇಶದ ಗಮನವನ್ನ ತನ್ನತ ಸೆಳೆದಿದೆ. ಅಕ್ರಮ ಗಣಿಗಾರಿಕೆಯ ಬಗ್ಗೆ ಲೋಕಾಯುಕ್ತರು ನೀಡಿರುವ ವರದಿ ರಾಜಕೀಯ ಪಕ್ಷಗಳು ಹಾಗೂ ಅವರ ನಾಯಕರುಗಳಲ್ಲಿ ಆತಂಕ ಹುಟ್ಟಿಸಿದೆ. ಮುಂದೆ ಈ ರಾಜಕೀಯ ದೊಂಬರಾಟ ಹೇಗೆ ತಿರುವುಗಳನ್ನು ಪಡೆಯುತ್ತದೋ ಕಾದು ನೋಡೋಣ.

ಆದರೆ ಈ ಪ್ರಕರಣ ಹೊರಬಿದ್ದಾಗಿನಿಂದ ಹೈಕಮಾಂಡಿನ ಹೆಸರು ಎಂದಿಗಿಂತ ಹೆಚ್ಚು ಪದೇ ಪದೇ ಕಿವಿಯ ಮೇಲೆ ಬೀಳುತ್ತಲೇ ಇದೆ. ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳ ನಾಯಕರು ಎದ್ದರೂ ಹೈಕಮಾಂಡ್, ಬಿದ್ದರೂ ಹೈಕಮಾಂಡ್, ಕನಸಿನಲ್ಲೂ ಹೈಕಮಾಂಡ್ ಎಂದು ಕನವರಿಸುತ್ತಾ ಇರುತ್ತಾರೆ. ಕಾಂಗ್ರೆಸ್, ಬಿಜೆಪಿ ಎಂದು ಪಕ್ಷ ಭೇದ ಮರೆತು ನಮ್ಮ ರಾಜ್ಯದ ನಾಯಕರುಗಳು ಹೈಕಮಾಂಡಿನ ದಾಸ್ಯಕ್ಕೆ ಒಗ್ಗಿಹೋಗಿದ್ದಾರೆ ಎಂದೆನಿಸುತ್ತದೆ. ಹೈಕಮಾಂಡಿನ ಕರೆ ಬಂದ ಕೂಡಲೇ ಉಟ್ಟ ಬಟ್ಟೆಯಲ್ಲಿ ದೆಹಲಿಗೆ ಓಡಿ ಹೋಗುವ ಚಾಳಿ ನಮ್ಮ ರಾಜ್ಯದ ನಾಯಕರುಗಳಿಗೆ ಅಭ್ಯಾಸ ಆಗಿ ಹೋಗಿದೆ. ನಮ್ಮ ರಾಜ್ಯದ ಯಾವುದೇ ಪ್ರಮುಖ ವಿಷಯಗಳಲ್ಲಿ ತೀರ್ಮಾನವಾಗಬೇಕಾದರೂ ದೆಹಲಿಯಲ್ಲಿ ಗಂಟೆಗಟ್ಟಲೆ ಕೈಕಟ್ಟಿಕೊಂಡು ನಿಲ್ಲಬೇಕಾದ ಪರಿಸ್ಥಿತಿ ನಮ್ಮ ಜನಪ್ರತಿನಿಧಿಗಳದು. ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರನ್ನು ಭೇಟಿ ಮಾಡಲು ಹಲವಾರೂ ದಿನಗಳು ಕಳೆದರೂ ಭೇಟಿ ಮಾಡಲು ಸಾಧ್ಯವಾಗದೆ ವಾಪಸ್ ಬಂದಿರುವ ಅನೇಕ ಸುದ್ದಿಗಳನ್ನು ಪತ್ರಿಕೆಗಳಲ್ಲಿ ನೋಡಿರುತ್ತೇವೆ…

ಮತ್ತಷ್ಟು ಓದು »