ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?

ಯಡ್ಯೂರಪ್ಪಂಗೆ ನೊಬೇಲ್ ಅವಾರ್ಡು…!
– ವಿಜಯ್ ಹೆರಗು
ಎಂದಿನಂತೆ ನಮ್-ವಿಜಯ್ ಹೆರಗುಮ ಕೆಂಚ, ಸೀನ, ಸಿದ್ದ, ನಾಣಿ ಎಲ್ಲಾರೂ ಬಂದು ಅವರ ಮಾಮೂಲಿ ‘ಅಡ್ಡಾ’ ರಾಮಣ್ಣನ ಟೀ ಅಂಗಡಿ ಮುಂದೆ ಕೂತ್ಕೊಂಡು ಹರಟೆ ಹೊಡೀತಾ ಇದ್ರು. ನಮ್ ಸಿದ್ದ ಅಲ್ಲಿ ಇದ್ದ ಅಂದ್ಮೇಲೆ ರಾಜಕೀಯದ ಮಾತು ಬರ್ಲೇಬೇಕು.
ಸಿದ್ದ : ಲೇ ಕೆಂಚ ಇವತ್ತು ಪೇಪರ್ ನೋಡ್ದೆನ್ಲಾ ?
ಕೆಂಚ : ಹೂ ಕನ್ಲಾ ನೋಡ್ದೆ, ಪಾಪ ನಮ್ ಯಡ್ಯೂರಪ್ನೋರಿಗೆ ಶ್ಯಾನೆ ಕಾಟ ಕೊಡ್ತಾವ್ರೆ. ಈ ಸಂತೋಷ್ ಹೆಗ್ಡೆ ಲೋಕಾಯುಕ್ತ ಆದಾಗಿಂದ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಸಂತೋಷಾನೇ ಕಾಣಾಕಿಲ್ಲ………ಸದ್ಯ ಇನ್ನೊಂದು ವಾರಕ್ಕೆ ಆವಯ್ಯ ರಿಟೈರ್ ಆಯ್ತಾರೆ ಇನ್ನಾರಾ ನಮ್ ಸಿಎಮ್ಮು ಸುಖವಾಗಿ ಇರ್ಬೌದು ಅಂದ್ಕೊಂಡ್ರೆ ಅದೇನೋ “ಗಣಿ ಬಾಂಬ್” ಹಾಕ್ಬಿಟ್ರಲ್ಲ ಅವ್ರು.
ಸೀನ : ಅಲ್ಲಲೇ ಕೆಂಚ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಯಾವಾಗ್ಲಾ ಸಂತೋಷ ನೋಡಿದ್ದೇ ನೀನು!? ಆವಯ್ಯ ಯಾವಾಗಲೂ ಮುಖ ಗಂಟ್ ಹಾಕ್ಕಂಡೆ ಇರ್ತಾರೆ…….
ಸಿದ್ದ : ನಿಜ ಕಣ್ಲಾ ಸೀನ……ಆವಯ್ಯ ನಗೋದೇ ಕಷ್ಟ ಕಣ್ಲಾ ಅದ್ಕೆ ಅವ್ರು ಸದಾನಂದ ಗೌಡ್ರುನ್ನ ಪಕ್ಕಕ್ಕೆ ಇಟ್ಕಂಡಿದ್ರು…..ಸದಾನಂದ ಗೌಡ್ರು ಯಾವಾಗ್ಲೂ ನಗ್ತಾ ಇರ್ತಾರೆ, ಆದ್ರೆ ಈಶ್ವರಪ್ಪ ಬಂದು ಸದಾನಂದ ಗೌಡ್ರುನ್ನ ಎಬ್ಬಿಸಿ ಅವ್ರ ಸೀಟ್ನಾಗೆ ಇವ್ರು ಕುಂತ್ಕಂಬುಟ್ರು.
ರಾಶಿ ಮತ್ತು ನಕ್ಷತ್ರ…
– ಗೋವಿಂದ ರಾವ್ ವಿ ಅಡಮನೆ
ಜನ್ಮರಾಶಿ ಮತ್ತು ನಕ್ಷತ್ರಗಳಿಗೆ ಜ್ಯೋತಿಷಿಗಳು ಬಲು ಪ್ರಾಧಾನ್ಯ ನೀಡುತ್ತಾರೆ. ಅವರು ನೀಡುತ್ತಿರುವ ಪ್ರಾಧಾನ್ಯ ಯುಕ್ತವಾದದ್ದೇ ಎಂಬುದನ್ನು ನೀವೇ ತೀರ್ಮಾನಿಸಲು ಅಗತ್ಯವಾದ ಕೆಲವು ಮೂಲಭೂತ ಮಾಹಿತಿ ಒದಗಿಸುವ ಉದ್ದೇಶದಿಂದ ಈ ಲೇಖನ ಬರೆಯುತ್ತಿದ್ದೇನೆ.
ರಾಶಿಗೆ ಸಂಬಂಧಿಸಿದಂತೆ ನೀವು ತಿಳಿದಿರಲೇ ಬೇಕಾದ ಅಂಶಗಳು ಇಂತಿವೆ
ರಾಶಿಯನ್ನು, ಅರ್ಥಾತ್ ತಾರಾರಾಶಿಯನ್ನು ಎರಡು ರೀತಿಯಲ್ಲಿ ವ್ಯಾಖ್ಯಾನಿಸಬಹುದು. ಅಧ್ಯಯಿಸಲು ಅನುಕೂಲ ಆಗಲಿ ಎಂದು ಖಗೋಲದ ಒಟ್ಟು ಕ್ಷೇತ್ರವನ್ನು ೮೮ ಭಾಗಗಳಾಗಿ ಇಂಟರ್ ನ್ಯಾಶನಲ್ ಅಸ್ಟ್ರನಾಮಿಕಲ್ ಯೂನಿಯನ್ ವಿಭಜಿಸಿದೆ. ಆಧುನಿಕ ಖಗೋಲವಿಜ್ಞಾನದ ಪ್ರಕಾರ ಈ ವಿಭಾಗಗಳಿಗೆ ತಾರಾರಾಶಿಗಳು (ಕಾನ್ಸ್ಟಲೇಷನ್ಸ್) ಎಂದು ಹೆಸರು. ಎಂದೇ, ಖಗೋಲದ ಒಂದು ಸೀಮಿತ ಕ್ಷೇತ್ರದಲ್ಲಿ ಇರುವ ತಾರೆಗಳ ಸಮೂಹವೇ ರಾಶಿ, ಪ್ರತೀ ಭಾಗದಲ್ಲಿಯೂ ಅನೇಕ ತಾರೆಗಳು ಇರುವುದರಿಂದ. ತಾರಾನಿಬಿಡ ಆಕಾಶವನ್ನು ತದೇಕಚಿತ್ತದಿಂದ ಅವಲೋಕಿಸುತ್ತಿದ್ದರೆ ಕೆಲವು ಒಂಟಿ ತಾರೆಗಳು ತಮ್ಮ ಉಜ್ವಲತೆಯಿಂದಾಗಿ ನಮ್ಮ ಗಮನ ಮೊದಲು ಸೆಳೆಯುತ್ತವೆ. ತದನಂತರ ಸಾಪೇಕ್ಷವಾಗಿ ಆಸುಪಾಸಿನಲ್ಲಿ ಇರುವ ಕೆಲವು ತಾರೆಗಳು ನಮ್ಮ ಮನಃಪಟಲದಲ್ಲಿ ವಿಶಷ್ಟ ಆಕೃತಿಗಳನ್ನು ಮೂಡಿಸುವುದರ ಮುಖೇನ ನಮ್ಮ ಗಮನ ಸೆಳೆಯುತ್ತವೆ.
ಆಹಾ ಎಷ್ಟು ಮಜವಾಗಿತ್ತು ಆ ಕಾಲ…….!!!!
– ಪವನ್ ಪರುಪತ್ತೇದಾರ್
ನಮ್ಮ ತಾತಂದಿರು ಹಳೆ ಕಾಲದ ಕಥೆಗಳನ್ನು ಹೇಳುವಾಗ ಮೊದಲು ಸ್ವಲ್ಪ ಸಮಾಧಾನದಿಂದ ಕೇಳ್ತೇವೆ ಬರು ಬರುತ್ತಾ ಅವರು ಅದೇ ಕಥೆಗಳನ್ನು ಮತ್ತೆ ಮತ್ತೆ ಹೇಳುತ್ತಾರೆ ನಮಗೂ ಬೋರ್ ಅನಿಸಿ
ತಾತಾ ಎಷ್ಟು ಸಲಿ ಅದೇ ಕಥೆಗಳನ್ನ ಹೇಳ್ತಿರ ಅಂತ ಗೊಣಗಿಕೊಂಡು ಎದ್ದು ಹೋಗ್ತಿವಿ. ಇಂಥ ಅನುಭವಗಳು ಸಾಮಾನ್ಯವಾಗಿ ಎಲ್ಲರಿಗು ಆಗ್ತವೆ. ನನಗು ಹಾಗೇ ನಮ್ಮ ತಾತ ಕಥೆಗಳನ್ನ ಹೇಳ್ತಾ ಇದ್ರೂ ಅವರು ತಮ್ಮ ಬ್ರಿಟಿಶ್ ಮೇಷ್ಟ್ರಿಗೆ ಚಳ್ಳೆ ಹಣ್ಣು ತಿನ್ನಿಸಿ ಚಕ್ಕರ್ ಹಾಕಿದ್ದು, ಆಗಿನ ಕಾಲಕ್ಕೆ ಲೋಯರ್ ಸೆಕೆಂಡರಿ ಮುಗಿಸಿ ಕುಟುಂಬದಲ್ಲಿ ಹೆಸರು ಮಾಡಿದ್ದೂ, ಊರಿಗೆ ಮೊದಲನೇ ಎಲೆಕ್ಟ್ರಿಕ್ contractor ಆಗಿದ್ದು, ಊರಿನ ಪ್ರೆಸಿಡೆಂಟ್ ಆಗಿದ್ದು, ಆಗಿನ ಜನ, ಹಾಗೆ ಹೀಗೆ ಹುಹ್! ಇನ್ನು ಬಹಳಾ.
ಆದರೆ ನಾವು ಅವರು ಕಥೆ ಹೇಳುವಾಗ ಮುಗು ಮುರಿದು ಹೋಗುತಿದ್ದೆವಲ್ಲ, ನಮಗೆಲ್ಲಿ ಅರಿವಿತ್ತು ಆಗಿನ ಅ ಕಾಲದ ಬಗ್ಗೆ ಎಷ್ಟು ಹೇಳಿದರು ಮತ್ತೆ ಮತ್ತೆ ನಮ್ಮ ತಾತನವರಿಗೆ ಹೇಳಬೇಕು ಎನಿಸಿತ್ತು ಎಂದು. ಯಾಕಂದರೆ ಅ ಕಾಲವೇ ಹಾಗಿತ್ತು ಎಷ್ಟು ಅದರ ಬಗ್ಗೆ ಕೊಂಡಾಡಿದರು ಸಾಲದಂಥ ಕಾಲ. ನನಗೆ ಯಾಕೆ ಹೀಗನಿಸಿತ್ತು ಅಂದರೆ ನನಗೂ ಸಹ ಕಳೆದ ಹತ್ತು ವರ್ಷಕ್ಕೂ ಇಗ್ಗು ಬಹಳ ವ್ಯತ್ಯಾಸ ಕಾಣುತ್ತಿದೆ. ನನಗೆ ಇತ್ತೀಚಿಗಷ್ಟೇ ಇದರ ಅರಿವಾಯಿತು.
ರಾಗಿ ಬೆಳೆ ಬಲೆ ಚೆನ್ನಾಗೈತೆ ಸ್ವಾಮಿ, ಈ ಸಲ ಒಳ್ಳೆ ಬಂಪರ್ ಕಾಸ್ ಮಾಡ್ತ್ಯ ಅಂತ ಚಿಕ್ಕಣ್ಣ ಹೇಳಿದಾಗ ನಮ್ಮಪ್ಪನಿಗೆ ಒಂಥರಾ ಸಂತೋಷ. ಅಂತು ಟೈಮ್ ಗೆ ಸರ್ಯಾಗಿ ಉಳಿಸಿ, ಬಿತ್ತನೆ ಮಾಡಿಸಿ, ಗೊಬ್ಬರ ಚೆಲ್ಲಿ, ಕಳೆ ಒರೆದು, ಗುಂಟುವೆ ಹಾಕಿಸಿ, ಇರೋ ಮುಕ್ಕಾಲು ಎಕರೆಗೆ 10 ಸಾವಿರ ಖರ್ಚ ಮಾಡಿದ್ದಕ್ಕೆ ಇಷ್ಟ ಮಾತ್ರ ಬೆಳೆ ಆಗಿರೋದು ಚಿಕ್ಕಣ್ಣ ಅಂತ ಸ್ವಲ್ಪ ಬಿಂಕದಿಂದನೆ ಅಂದ್ರು. ಅಂಗಲ್ಲ ಸ್ವಾಮಿ ರೇಟ್ ಚೆನ್ನಾಗೈತೆ ಈಗ ಕೆಂಪು ರಾಗಿ 13 ರೂಪಾಯಿಗೆ ತೊಕೊತಾರೆ ಅಂತ ಚಿಕ್ಕಣ್ಣ ಹೇಳೋವಾಗ ಮಧ್ಯಕ್ಕೆ ಬಾಯಿ ಹಾಕಿ ನಮ್ಮಪ್ಪ ನಂದೊಂದು ೧೫ ಮೂಟೆ ಆಗ್ತದಲ್ಲ ಚಿಕ್ಕಣ್ಣ ಅಂದ್ರು ಸ್ವಲ್ಪ ಹೊತ್ತು ಯೋಚನೆ ಮಾಡಿ ಇನ್ನ ಒಂದು ಹೆಚ್ಚೇ ಆಗ್ತದೆ ಸ್ವಾಮಿ ಅಂದ ಚಿಕ್ಕಣ್ಣ. ನಮ್ಮಪ್ಪ ಸರಿ ಹಾಗಾದ್ರೆ ನಾಳೇನೇ ಕೂಲಿಯವರನ್ನ ಕರೆಸಿಬಿಡು ಕುಯ್ಯಿಸಿಬಿಡನ ಅಂದ್ರು.
ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!?
– ಕುಮಾರ ರೈತ
ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..?
ಅಸಂವಿಧಾನಿಕ ಡಬ್ಬಿಂಗ್ ನಿಷೇಧದಿಂದ ಕನ್ನಡಕ್ಕಿಲ್ಲದ ಹ್ಯಾರಿ ಪಾಟರ್..!

ಇತ್ತೀಚಿಗೆ ಬಂದ ಸುದ್ದಿಯಂತೆ, ಹ್ಯಾರಿ ಪಾಟರಿನ ಹೊಸ ಚಿತ್ರ ತೆರೆಗೆ ಬಂದಿದೆ. ಅಶ್ಟೆ ಅಲ್ಲ ಇದು ಬಾರತದ ಪ್ರಾದೇಶಿಕ ಬಾಶೆಗಳತ್ತ ತನ್ನ ಗಮನವನ್ನು ಹರಿಸುತ್ತ, ಚಿತ್ರವನ್ನು ಇಂಗ್ಲೀಶಿನ ಜೊತೆಗೆ ತೆಲುಗು, ತಮಿಳು, ಹಿಂದಿಯಲ್ಲೂ ಬಿಡುಗಡೆ ಮಾಡುತ್ತಿದೆ. ಇದರರ್ಥ ಆಂದ್ರಪ್ರದೇಶ, ತಮಿಳುನಾಡಿನ ಮತ್ತು ಉತ್ತರ ಬಾರತದ ಅನೇಕ ರಾಜ್ಯಗಳ ಜನರು ಹ್ಯಾರಿ ಪಾಟರನ್ನು ತಮ್ಮ ತಾಯ್ನುಡಿಯಲ್ಲೇ ನೋಡಿ ಸವಿಯಬಹುದಾಗಿದೆ. ಆದರೆ ಈ ಸೌಬಾಗ್ಯ ಕನ್ನಡ ಬಾಶೆಯನ್ನಾಡುವ, ಕನ್ನಡದಲ್ಲೇ ಮನರಂಜನೆಯನ್ನು ಬಯಸುವ ನಮಗೆ ಇಲ್ಲ.
ಕರ್ನಾಟಕದಲ್ಲಿ ಇಂಗ್ಲೀಶ ಚಿತ್ರಗಳು ಇಂಗ್ಲೀಶಿನಲ್ಲೇ ಬಿಡುಗಡೆಯಾಗಬೇಕು ಎಂಬ ನಿಯಮವೇನು ಇಲ್ಲ. ಅದರರ್ಥ ಈ ಚಿತ್ರ ಕರ್ನಾಟಕದಲ್ಲಿ ಇಂಗ್ಲೀಶ ಜೊತೆಗೆ ತೆಲುಗು, ತಮಿಳು, ಹಿಂದಿಯಲ್ಲೂ ಬಿಡುಗಡೆ ಆಗಬಹುದು. ಹೀಗೆ ಕರ್ನಾಟಕದಲ್ಲಿ ಇಂಗ್ಲೀಶ ಚಿತ್ರ ಇಂಗ್ಲೀಶೇತರ ಇತರ ಬಾಶೆಗಳಲ್ಲಿ ಬಿಡುಗಡೆಯಾದರೆ ಅಲ್ಲಿಗೆ ಡಬ್ಬಿಂಗ್ ನಿಶೇದವಿದೆ ಎಂಬ ಮಾತು ಶುದ್ದ ಸುಳ್ಳಾಗುತ್ತದೆ. ಅದರರ್ಥ ಕರ್ನಾಟಕದಲ್ಲಿ ಡಬ್ಬಿಂಗ್ ಚಿತ್ರಗಳಿಗೆ ಅನುಮತಿಯಿದೆ, ಆದರೆ ಕನ್ನಡಕ್ಕೆ ಡಬ್ ಆದ ಚಿತ್ರಗಳಿಗೆ ಅನುಮತಿಯಿಲ್ಲ. ಹ್ಯಾರಿ ಪಾಟರ್ ತೆಲುಗು, ತಮಿಳು, ಹಿಂದಿಗಳಿಗೆ ಡಬ್ ಆಗಿ ಕರ್ನಾಟಕದಲ್ಲಿ ಬಿಡುಗಡೆಯಾದರೆ ಓಕೆ,, ಆದರೆ ಅದೇ ಚಿತ್ರ ಕನ್ನಡಕ್ಕೆ ಡಬ್ ಆಗಿ ಬಿಡುಗಡೆಯಾಗಲಿ ಅಂದ್ರೆ ಯಾಕೆ.? ಅಂತ ಕೇಳ್ತಾರೆ ನಮ್ಮ ಚಲನಚಿತ್ರ ಮಂಡಳಿ. ಈ ಪ್ರಶ್ನೆಯಲ್ಲಿ ಸ್ವಲ್ಪನಾದ್ರೂ ನ್ಯಾಯ ಇದೆಯಾ.!
ಅಸಂವಿಧಾನಿಕ ನಿಯಮ:
ಆಂಗ್ಲ ಬಾಶೆಯ ಬಹುಕೋಟಿ ವೆಚ್ಚದ, ಉನ್ನತ ತಂತ್ರಜ್ನಾನ, ಗ್ರಾಫಿಕ್ಸ್ ಇರುವ ಚಿತ್ರಗಳನ್ನು ಬರೀ ಇಂಗ್ಲೀಶ ಬಲ್ಲವರಶ್ಟೇ ನೋಡಬೇಕು ಎಂಬಂತಿದೆ ನಮ್ಮ ಚಿತ್ರರಂಗದ ಈಗಿನ ನಿಯಮ. ಕರ್ನಾಟಕದಲ್ಲಿ ಇಂಗ್ಲೀಶ್ ಬಾರದವರು ಈ ಚಿತ್ರ ನೋಡಬೇಕೆಂದರೆ ಅವರು ತಮಿಳು, ತೆಲುಗು, ಹಿಂದಿಗೆ ಮೊರೆ ಹೋಗಬೇಕಾದ ಪರಿಸ್ಥಿತಿಯನ್ನು ಈ ಡಬ್ಬಿಂಗ್ ನಿಶೇದದ ನಿಯಮ ತಂದೊಡ್ಡಿದೆ. ಚಿತ್ರರಂಗದ ಈ ಅಸಂವಿದಾನಿಕ ಡಬ್ಬಿಂಗ್ ನಿಶೇದದ ನಿಯಮದಿಂದ ಕೆಲವು ಒಳ್ಳೆಯ ಮನರಂಜನೆಯಿಂದ ಕರ್ನಾಟಕದ ಜನರು ವಂಚಿತರಾಗುತ್ತಿದ್ದಾರೆ. ಈ ಹ್ಯಾರಿ ಪಾಟರ್ ಚಿತ್ರ ಹೆಚ್ಚು ಮಕ್ಕಳ ಮನರಂಜನೆ ಉದ್ದೇಶಿಸಿ ಮಾಡಿರೋದ್ರಿಂದ ಡಬ್ಬಿಂಗ್ ನಿಶೇದದಿಂದಾಗಿ ಕನ್ನಡದ ಮಕ್ಕಳಿಗೆ ಮೋಸವಾಗ್ತಿದೆ ಎಂಬುದನ್ನು ಕೂಡ ಇಲ್ಲಿ ಗಮನಿಸಬೇಕು. ಪ್ರೇಕ್ಷಕನಿಗೆ ನೀನು ಇದನ್ನೇ ನೋಡು ಅಥವಾ ಇದೇ ಬಾಶೆಯಲ್ಲಿ ನೋಡು ಎಂದು ಡಬ್ಬಿಂಗ್ ನಿಶೇದ ಎಂಬ ಅಸ್ತ್ರದ ಮೂಲಕ ಒತ್ತಾಯಿಸುವುದು ಸಂವಿದಾನ ವಿರೋದಿಯಾದ ನಡೆ. ಜಗತ್ತಿನ ಎಲ್ಲ ಒಳ್ಳೆಯ ಮನರಂಜನೆಯನ್ನು ತನ್ನ ನುಡಿಯಲ್ಲಿ ನೋಡುವ ಹಕ್ಕು ಅವನಿಗಿದೆ. ಡಬ್ಬಿಂಗ್ ನಿಶೇದದಿಂದ ಈ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಡಬ್ಬಿಂಗ್ ಬರಲಿ. ಒಳ್ಳೆಯ ಮನರಂಜನೆ ಅನ್ನೋದು ನಗರ ಪ್ರದೇಶಗಳ ಅಥವಾ ಇಂಗ್ಲೀಶ್ ಬಲ್ಲ ಕೆಲವ್ರಿಗೆ ಮಾತ್ರ ಸೀಮಿತ ಆಗದೇ ರಾಜ್ಯದ ಎಲ್ಲರಿಗೂ ಅವರು ಆಡುವ ನುಡಿಯಲ್ಲೇ ಅದುಸಿಗುವಂತಾಗಲಿ. ಕರ್ನಾಟಕದಲ್ಲಿ ಎಲ್ಲರಿಗೂ ಕನ್ನಡದಲ್ಲಿ ಮನರಂಜನೆ ಸಿಗುತ್ತದೆ ಎಂಬ ಉದ್ದೇಶವನ್ನು ಡಬ್ಬಿಂಗ್ ಹೊಂದಿದೆ ಎಂಬ ಸಾಮಾನ್ಯ ತಿಳುವಳಿಕೆಯನ್ನು ಡಬ್ಬಿಂಗ್ ವಿರೋದಿಗಳು ಅರಿಯಬೇಕಿದೆ.!
ಎಂಥ ಫೋಟೊ ತೆಗೆಯೋಕೆ ನನಗಿಷ್ಟ-ಪೋಟೊಗ್ರಫಿ ಲೇಖನ-4
-ಶಿವು.ಕೆ
ನಾವು ಕ್ಯಾಮೆರವನ್ನು ಕೊಂಡು ಯಾವ ವಿಧದ ಫೋಟೊಗ್ರಫಿ ಮಾಡಬೇಕು ಎಂದು ನಂತರ ತೀರ್ಮಾನಿಸಬೇಕಾ? ಅಥವ ಫೋಟೊಗ್ರಫಿ ಆಯ್ಕೆ ಮಾಡಿಕೊಂಡು ನಂತರ ಅದಕ್ಕೆ ತಕ್ಕಂತ ಕ್ಯಾಮೆರ ಕೊಳ್ಳಬೇಕಾ? ಇದೊಂತರ ಮದುವೆಯಾಗುವವರೆಗೂ ಹುಚ್ಚು ಬಿಡೋಲ್ಲ, ಹುಚ್ಚು ಬಿಡುವವರೆಗೂ ಮದುವೆಯಾಗೋಲ್ಲ ಅನ್ನುವ ಗಾದೆಯನ್ನು ಉದಾಹರಿಸಿ,. ಮುಂದೇನು ಮಾಡಬೇಕೆನ್ನುವುದನ್ನು ಒಬ್ಬ ಛಾಯಾಗ್ರಾಹಕನ ಪುಟ್ಟಕತೆಯ ಮೂಲಕ ಮುಂದಿನ ಭಾಗದಲ್ಲಿ ಹೇಳುತ್ತೇನೆ ಅಂದಿದ್ದೆನಲ್ಲ., ಆ ಕತೆಗೆ ಮೊದಲು ಒಂದು ಪುಟ್ಟವಿಚಾರವನ್ನು ಚರ್ಚಿಸೋಣ.
ಇಂಥ ಸಮಯದಲ್ಲಿ ಫೋಟೊಗ್ರಫಿ ಸಾಧನೆ ಮಾಡಿದ ಗೆಳೆಯರನ್ನು ಹುಡುಕಿಕೊಂಡು ಹೋಗುತ್ತೀರಿ. ಅವರ ಬಳಿ ಈ ವಿಚಾರವನ್ನು ಚರ್ಚಿಸುತ್ತೀರಿ. ಆಗ ನಿಮಗೆ ಸಿಗುವ ಉತ್ತರ ಎಂತದ್ದು ಗೊತ್ತ? ಅವರ ಕ್ಯಾಮೆರ ಮತ್ತು ಅದರಿಂದ ತೆಗೆದ ಫೋಟೊಗ್ರಫಿ ಅನುಭವದ ಅಧಾರದ ಮೇಲೆ ಅವರಿಂದ ನಿಮಗೆ ಉತ್ತರ ಸಿಗುತ್ತದೆ. ಅದು ಆ ಕ್ಷಣಕ್ಕೆ ಸಮಾಧಾನವೆನಿಸಿದರೂ ನೀವು ಏಕಾಂತದಲ್ಲಿ ಯೋಚಿಸಿದಾಗ ಇಷ್ಟವಾಗದಿರಬಹುದು. ಇಂಥ ಸಮಯದಲ್ಲಿ ನೀವೊಬ್ಬ ಫೋಟೊಗ್ರಫಿ ಗುರುವನ್ನು ಹುಡುಕಿಕೊಳ್ಳಬೇಕು. ಇಲ್ಲೂ ಕೂಡ ಎಂಥ ಗುರುವನ್ನು ಆಯ್ಕೆ ಮಾಡಿಕೊಳ್ಳುತ್ತೀರಿ ಎನ್ನುವುದು ಮುಖ್ಯ. ಏಕೆಂದರೆ ಗುರುಗಳಲ್ಲಿ ಎರಡು ವಿಧ. ನಿಮ್ಮನ್ನು ಓಲೈಸಲು, ಮೆಚ್ಚಿಸಲು, ಅಥವ ಸಮಾಧಾನಿಸಲು, ಅಥವ ಸಾಗಹಾಕಲು ಇಂಥ ಕಾರಣಗಳಿಗಾಗಿ ಸಿಗುವ ಗುರುಗಳು ಒಂದು ರೀತಿ. ಇವರು ಏನು ಮಾಡುತ್ತಾರೆಂದರೆ ತಮಗೆ ಗೊತ್ತಿಲ್ಲದನ್ನು ಗೊತ್ತು ಎನ್ನುವ ರೀತಿ ಭಾಷಣ ಮಾಡಿ ನಿಮ್ಮನ್ನು ಚಕಿತಗೊಳಿಸುತ್ತಾರೆ. ಆ ಪ್ರೇರಣೆಯಿಂದಾಗಿ ನೀವು ಮೈಮರೆತು ಅವರ ಮಾತಿನಿಂದಾಗಿ ನಿಮ್ಮ ದಾರಿ ತಪ್ಪಿರುತ್ತೀರಿ. ಇನ್ನೂ ಕೆಲವೊಮ್ಮೆ ಅವರು ಪುಸ್ತಕದ ಬದನೆಕಾಯಿ ಎನ್ನುವಂತೆ ಎಲ್ಲವನ್ನು ಓದಿ ತಿಳಿದಿರುತ್ತಾರೆ. ಅದರ ಬಗ್ಗೆ ಅದ್ಬುತವಾಗಿ ಮಾತಾಡುತ್ತಾರೆ. ಅವರ ಮಾತುಗಳನ್ನು ಕೇಳಿದಾಗಲೂ ನೀವು ಪುಳಕಗೊಳ್ಳುವುದು ಖಚಿತ. ಎಷ್ಟೋವರ್ಷಗಳಿಂದ ಫೋಟೊಗ್ರಫಿ ಸಾಧನೆ ಮಾಡದೆ ಪ್ರಸ್ತುತ ಪರಿಸ್ಥಿತಿಯಲ್ಲಿನ ಹೊಸ ತಂತ್ರಜ್ಜತೆಯನ್ನು ತಿಳಿದುಕೊಳ್ಳದೇ ಮತ್ತು ಅದನ್ನು ನಿತ್ಯ ಫೋಟೊಗ್ರಫಿ ಮಾಡುತ್ತ ಕಲಿಯದೇ ಹಳೇ ಓಬಿರಾಯನ ಕಾಲದ ದಂತಕತೆಯನ್ನು ನಿಮ್ಮ ಮುಂದೆ ಮಂಡಿಸುತ್ತಾ ನಿಮ್ಮನ್ನು ಅಚ್ಚರಿಗೊಳಿಸುವುದರಿಂದ ನೀವು ಖಂಡಿತ ದಾರಿ ತಪ್ಪಿದಂತಾಗುತ್ತದೆ. ಅಂತ ಗುರುಗಳಿಂದ ದೂರವಾಗುವುದು ಒಳ್ಳೆಯದು.
ಅಯೊಡಿನ್ ಹೆಸರಿನ ಮಹಾದ್ರೋಹ.!!!
-ಶ್ರೀ ಹರ್ಷ ಸಾಲೀಮಠ
ಅಯೊಡಿನ್ಯುಕ್ತ ಉಪ್ಪಿನ ಬಗ್ಗೆ ಸಾಕಷ್ಟು ಪ್ರಚಾರ ನಡೆದಿದೆ. ಇದಕ್ಕೆ ಸರ್ಕಾರದ ಕುಮ್ಮಕ್ಕೂ ಸಾಕಷ್ಟಿದೆ. ಸರ್ಕಾರದ ಈ ಕುಮ್ಮಕ್ಕಿನ ಹಿಂದೆ ಅನೇಕ ದುಷ್ಟ ಕೈಗಳ ಕೈವಾಡವಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.ಅಯೊಡಿನ್ ನಮ್ಮ ದೇಹಕ್ಕೆ ಮೈಕ್ರೊ ಪ್ರಮಾಣದಲ್ಲಿ ಬೇಕಾದ ಅಂಶ. ಅಯೋಡಿನ್ ಅಂಶ ನಮ್ಮ ದೇಹದಲ್ಲಿ ಕಡಿಮೆಯಾದಾಗ ಥೈರಾಯಿಡ್ ಗ್ರಂಥಿ ಅಯೋಡಿನ್ ಅನ್ನು ಹೆಚ್ಚಾಗಿ ಹೀರಿಕೊಳ್ಳಲು ಊದಿಕೊಳ್ಳತೊಡಗುತ್ತದೆ. ಇದೇ ಗಾಯ್ಟರ್ ರೋಗ.
ಗಾಯ್ಟರ್ ಅಥವಾ ಗಳಗಂಡ ರೋಗ ನಮ್ಮ ದೇಶದಲ್ಲಿ ಕಂಡುಬರುವುದೇ ವಿರಳ. ಅಯೋಡಿನ್ ಕೊರತೆಯನ್ನು ದೊಡ್ಡ ಗಂಡಾಂತರವೆಂಬಂತೆ ಬಿಂಬಿಸಿ ಅಯೋಡೀಕರಿಸಿದ ಉಪ್ಪನ್ನು ಬಲವಂತವಾಗಿ ಎಲ್ಲರಿಗೂ ತಿನ್ನಿಸಲಾಗುತ್ತಿದೆ. ಗಳಗಂಡ ರೋಗ ನಮ್ಮ ದೇಶದಲ್ಲಿ ಕಂಡು ಬರುವುದು ಲಡಾಕ್, ಶಿಮ್ಲಾ ರೀತಿಯ ಅತಿ ಹೆಚ್ಚಿನ ಮಣ್ಣಿನ ಸವೆತ ಇರುವ ಗುಡ್ಡಗಾಡು ಪ್ರದೇಶಗಳಲ್ಲಿ ಮಾತ್ರ. ಎಲ್ಲಾ ಸೇರಿದರೇ ಅಯೋಡಿನ್ ಕೊರತೆಯನ್ನು ಎದುರಿಸುತ್ತಿರುವುದು ಶೇ.೨ ರಷ್ಟು ಜನರು ಮಾತ್ರ. ಶೇ.೨ರ ಕೊರತೆಯನ್ನು ನೀಗಿಸುವುದಕ್ಕಾಗಿ ಉಳಿದ ಶೇ.೯೮ ರಷ್ಟು ಜನರಿಗೆ ಅಯೋಡಿನ್ ತಿನ್ನಿ ಎಂದು ಪ್ರಚಾರ ಮಾಡಲಾಗುತ್ತಿದೆ.
ಅನೇಕ ವ್ಯಕ್ತಿಗಳಲ್ಲಿ ಅಯೋಡಿನ್ ಅಲರ್ಜಿ ಇರುತ್ತದೆ. ಗಳಗಂಡ ಚಿಕಿತ್ಸೆಗಾಗಿ ಅಯೋಡಿನ್ ನೀಡಬೇಕಾದರೂ ಈ ಅಲರ್ಜಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅಲರ್ಜಿ ಇರುವ ವ್ಯಕ್ತಿಗಳಲ್ಲಿ ಚಿಕ್ಕ ಪ್ರಮಾಣದ ಅಯೋಡಿನ್ ಸಹ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡಬಲ್ಲುದು. ಇದಲ್ಲದೇ ದೇಹದಲ್ಲಿ ಅಯೋಡಿನ್ನ ಅನವಶ್ಯಕ ಹೆಚ್ಚಳದಿಂದಾಗಿ ಖಿನ್ನತೆ, ಉಸಿರಾಟದ ತೊಂದರೆಗಳು ನಪುಂಸಕತ್ವ, ಕೂದಲುದುರುವಿಕೆ,ಚರ್ಮದ ರೋಗಗಳು , ಗಳಗಂಡ ನಿಶ್ಯಕ್ತಿ ಇತ್ಯಾದಿ ಆರೋಗ್ಯಕ್ಕೆ ಹಾನಿಕಾರಕ ತೊಂದರೆಗಳು ಉಂಟಾಗುವ ಸಾಧ್ಯತೆಗಳಿವೆ. ಅಯೋಡಿನ್ ತಿನ್ನುವುದನ್ನು ಕಡಿಮೆ ಮಾಡುವುದರಿಂದ ಗಂಟಲಿನ ಕ್ಯಾನ್ಸರ್ ಕಡಿಮೆಯಾಗುವ ಸಾಧ್ಯತೆಯ ಬಗ್ಗೆ ಜಪಾನ್ನಲ್ಲಿ ಸಂಶೋಧನೆಗಳು ತಿಳಿಸುತ್ತವೆ. ಅಯೋಡಿನ್ ಕೊರತೆ ಇರುವ ಜರ್ಮನಿ ದೇಶದಲ್ಲಿ ಗಂಟಲು ಕ್ಯಾನ್ಸರ್ ಕೂಡ ಕಡಿಮೆಯೆ. ಅಲ್ಲದೇ ಗರ್ಭಿಣಿ ಸ್ತ್ರೀಯರಿಗೂ ಅಯೋಡಿನ್ ಅಪಾಯ ಉಂಟುಮಾಡುತ್ತದೆ. ಮತ್ತಷ್ಟು ಓದು 
ಫೀವರ್ ಗೆ ಹಿಂದಿ ಜ್ವರ – ಎಚ್ಚೆತ್ತುಕೊಳ್ಳಲು ಸಕಾಲ !
-ವಸಂತ್ ಶೆಟ್ಟಿ
ಎಂದಿನಂತೆ ಕಚೇರಿಗೆ ಹೋಗ್ತಾ ಎಫ್.ಎಮ್ ಹಾಕಿದ್ರೆ ಅವಕ್ಕಾದೆ. 104% ಬೊಂಬಾಟ್ ಕನ್ನಡ ಹಾಡುಗಳು ಅಂತೆಲ್ಲ ನಮ್ಮ ಮೆಚ್ಚುಗೆ ಗಳಿಸಿದ್ದ ಫೀವರ್ ಎಫ್.ಎಮ್ ಕನ್ನಡ ಹಾಡಿಗೆ ಸೋಡಾ ಚೀಟಿ ಕೊಟ್ಟು ಕೇವಲ ಹಿಂದಿ ಹಾಡುಗಳನ್ನು ಹಾಕೋಕೆ ಶುರು ಮಾಡಿದ್ರು. ಒಂದ್ ಸಲಿ ಹಾಕಿರೋ ಸ್ಟೇಶನ್ ಸರಿಗಿದೆಯಾ ಅಂತ ನೋಡ್ಕೊಂಡೆ. ಸರಿಯಾಗೇ ಇದೆ, ಆದರೆ ಬೊಂಬಾಟ್ ಕನ್ನಡ ವಾಹಿನಿಯಲ್ಲಿ ಹಿಂದಿ ದೇವತೆಯನ್ನು ಪ್ರತಿಷ್ಟಾಪಿಸಿಯಾಗಿತ್ತು. ಸರಿ ಯಾವುದಕ್ಕೂ ಒಂದ್ ಸಲಿ ಫೀವರ್ ಎಫ್.ಎಮ್ ಅನ್ನೇ ಸಂಪರ್ಕಿಸಿ ಯಾಕ್ರಪ್ಪ ಹೀಗೆ ಅಂತ ಕೇಳೊಣ ಅಂತ ಅವರ ಫೇಸ್ ಬುಕ್ ಪುಟದಲ್ಲಿ ಒಬ್ಬ ಕೇಳುಗನಾಗಿ ವಿಚಾರಿಸಿದ್ರೆ ಸಿಕ್ಕ ಉತ್ತರ: “We have changed the sound of the station”, “Music has no language” “Hindi is our national language” ಅನ್ನೋ ಹಸಿ ಸುಳ್ಳಿನ ಕಾಗಕ್ಕ-ಗುಬ್ಬಕ್ಕನ ಕತೆಗಳು. ಇದನ್ನು ಪ್ರತಿಭಟಿಸಿ ಗ್ರಾಹಕರಾಗಿ ನಮ್ಮ ಆಯ್ಕೆ ಕನ್ನಡ, ಅದನ್ನು ಕೊಡದ ವಾಹಿನಿಗೆ ಬೆಂಗಳೂರಿನ ಮಾರುಕಟ್ಟೆಯೇ ಬುದ್ದಿ ಕಲಿಸುತ್ತೆ ಅಂತ ಹೇಳಿದೆ. ಅದಿರಲಿ, ಫೀವರ್ ಎಫ್.ಎಮ್ ನದ್ದು ಒಂದು ಉದಾಹರಣೆಯಷ್ಟೇ. ಇವತ್ತು ನಮ್ಮ ನಾಡಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಈ ನೆಲದ ನುಡಿಯನ್ನು ಬದಿಗೊತ್ತಿ ಪ್ರತಿ ಹಂತದಲ್ಲೂ ವಲಸೆ ಬಂದ ಯಾರೋ ನಾಲ್ಕು ಜನರಿಗಾಗಿ ವ್ಯವಸ್ಥೆಯೆಲ್ಲ ಕಟ್ಟಬೇಕು, ವ್ಯವಸ್ಥಯೆಲ್ಲ ಇರಬೇಕು ಅನ್ನುವಂತೆ ವರ್ತಿಸುವ ವಲಸಿಗರಿಗೆ, ಅವರ ತಾಳಕ್ಕೆ ತಕ್ಕಂತೆ ಕುಣಿಯುವ ಈ ವ್ಯವಸ್ಥೆಗೆ ಏನೆನ್ನಬೇಕು. ಯಾಕೆ ಹಾಗ್ ಹೇಳಿದೆ ಅನ್ನೋದನ್ನ ಒಂದ್ ನಾಲ್ಕು ಉದಾಹರಣೆ ಜೊತೆ ಹೇಳ್ತಿನಿ.
- ಬೆಂಗಳೂರಿನ ಟ್ರಾಫಿಕ್ ಪೋಲಿಸರಿಗೆ (ಬಿಟಿಪಿ) ಹಿಂದಿ/ಇಂಗ್ಲಿಷ್ ಬರಲ್ಲ. ಅದರಿಂದ ಎಷ್ಟು ತೊಂದರೆಯಾಯ್ತು ಗೊತ್ತಾ ಅಂತ ಒಂದಿಷ್ಟು ಜನ ಬಿಟಿಪಿಯ ಫೇಸ್ ಬುಕ್ ತಾಣದಲ್ಲಿ ಹೋಗಿ ಗೋಳು ತೋಡಿಕೊಳ್ಳುತ್ತಾರೆ. ಯಾರಪ್ಪ ಈ ನಾಲ್ಕು ಜನರು ಅಂದ್ರೆ ಅದೇ ಅನ್ನ ಅರಸಿ ಬೆಂಗಳೂರಿಗೆ ವಲಸೆ ಬಂದ ಮಹನೀಯರು. ವಲಸೆ ಬಂದ ನಾಡಿನ ವ್ಯವಸ್ಥೆ ತನಗೆ ಅನುಕೂಲವಾಗುವಂತಿರಬೇಕು, ತನಗೆ ಚೂರೇ ಚೂರು ಕಷ್ಟವಾದರೂ ಅದನ್ನು ಸಹಿಸಲು ಆಗದು ಅನ್ನುವ ಈ ಜನರ ಮನಸ್ಥಿತಿ ಎಂತದ್ದು? ವಲಸಿಗರಿಗಾಗಿಯೇ ನಾಡಿನ ಎಲ್ಲ ವ್ಯವಸ್ಥೆಗಳನ್ನು ಜಗತ್ತಿನಲ್ಲಿ ಎಲ್ಲಿಯಾದರೂ ಕಟ್ಟಿದ್ದಾರಾ?
ಅವರ ಹಿಂಸೆಗೆ ನನ್ನಲ್ಲಿ ಉತ್ತರವಿರಲಿಲ್ಲ
– ಚಿತ್ರಾ ಸಂತೋಷ್
ನನ್ನ ಕಳೆದೆರಡು ಅಂಕಣದಲ್ಲಿ ಅನ್ಯಾಯದ ಕುಲುಮೆಯಲ್ಲಿ ಬೆಂದ ಹೆಣ್ಣು ಮಕ್ಕಳಿಬ್ಬರ ಕಥೆ ಹೇಳಿದ್ದೆ. ಈಗ ಮತ್ತೊಂದು ಕಥೆ ಹೇಳುತ್ತಿದ್ದೇನೆ. ಹೆಣ್ಣು ಮುಂದುವರಿದರೂ ಆಕೆಯ ಮೇಲಿನ ಅನ್ಯಾಯಗಳಿನ್ನೂ ಕೊನೆಯಾಗಲಿಲ್ಲ. ಈಕೆಯ ಹೆಸರು ಸುಲೇಖಾ ಮಹಿಪಾಲ್ . ಊರು ಡೆಹ್ರಾಡೂನ್. ಹುಟ್ಟಿದ್ದು ಜಾಡಮಾಲಿ ಕುಟುಂಬದಲ್ಲಿ. ಅಪ್ಪ ಅಮ್ಮನನ್ನು ವಿಷ ನೀಡಿ ಕೊಂದಾಗ ಸುಲೇಖಾಳಿಗೆ ಇನ್ನೂ ೧೩ ವರ್ಷ. ಅಪ್ಪನಿಂದ ದೂರಾದ ಸುಲೇಖಾಳ ಬದುಕು ಪ್ರತಿಕ್ಷಣವೂ ಶೋಷಣೆಗೊಳಗಾಯಿತು. ಭರವಸೆ ಕಳೆದುಕೊಂಡ ಅವಳ ಬದುಕಿನಲ್ಲಿ ಮತ್ತೆ ಭರವಸೆ ತುಂಬಿದ್ದು ಸಮಾಧಾನ್ ಎಂಬ ಸರ್ಕಾರೇತರ ಸಂಸ್ಥೆ ಮತ್ತು ತನ್ನ ಭಾ ಪತಿ. ಈಗ ಅನ್ಯಾಯದ ವಿರುದ್ಧ ಸುಲೇಖಾ ಹೋರಾಟಕ್ಕೆ ಭಾ ಪತಿಯೂ ಕೈ ಜೋಡಿಸಿದ್ದಾರೆ.
ಅಮ್ಮನನ್ನು ಉಳಿಸಿಕೊಳ್ಳಲು ಆಕೆಯಿಂದ ಸಾಧ್ಯವಾಗಲಿಲ್ಲ. ಅಪ್ಪನ ರೌದ್ರವತಾರೆದುರು ಮಗಳು ಅಸಹಾಯಕಳಾಗಿ ಮೌನವಾಗಿದ್ದಳು. ಆಕೆಗಿನ್ನೂ ೧೩ ವರ್ಷ. ಆ ಪುಟ್ಟ ಹೆಣ್ಣು ಮಗಳ ಎದುರು ಅಮ್ಮ ಹತಳಾದಳು.





