ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

11
ಜುಲೈ

ದಕ್ಷಿಣ ಸುಡಾನ್ ಈಗ ಸ್ವತಂತ್ರ

ಗೋವಿಂದ ಭಟ್

ಸೈಕಲು ಪ್ರವಾಸದಲ್ಲಿ ನಾನು ಕೆನ್ಯಾ ರಾಜದಾನಿ ನೈರೋಬಿಗೆ ಹಾರುವುದು. ಅನಂತರ ಉಗಂಡಾ, ಸುಡಾನ್ ದಾರಿಯಾಗಿ ಈಜಿಪ್ಟ್ ತಲಪುವುದು ನನ್ನ ಗುರಿಯಾಗಿತ್ತು. ಬಹು ಪಾಲು ರಸ್ತೆ ಇಲ್ಲದ ಕಾರಣ ಜುಬಾ ಪಟ್ಟಣದಿಂದ ನೈಲ್ ನದಿಯ ದೋಣಿಯಲ್ಲಿ ಉತ್ತರಕ್ಕೆ ಸಾಗುವುದು ನನ್ನ ಆಲೋಚನೆಯಾಗಿತ್ತು. ನನ್ನ ಉದ್ದೇಶಿತ ಹಾದಿಯಲ್ಲಿ ಬಹು ಕಾಲದಿಂದ ಅಂದರೆ ಅಂದಿಗೆ ಮೂವತ್ತು ವರ್ಷದಿಂದ ಜನಾಂಗಿಯ ಕಲಹ ನಡೆಯುತ್ತಿದ್ದರೂ ಹಲವು ಪ್ರವಾಸಿಗರು ದೋಣಿಯಲ್ಲಿ ದಾಟುವುದರಲ್ಲಿ ಸಫಲರಾಗಿದ್ದರು. ಅಲ್ಲಿನ ಒಂದು ದೋಣಿಯ ಚಿತ್ರ ಇಲ್ಲಿದೆ. ನನ್ನ ಜರ್ಮನಿಯ ಸೈಕಲು ಗೆಳೆಯ ಫ್ರೆಡ್ ಪೋಲ್ ೧೯೬೪ ರಲ್ಲಿ ಇಲ್ಲೆ ದಾಟಿದ್ದರು. ಅದಕ್ಕೆ ನಾನು ಸಾಕಷ್ಟು ತಯಾರಿ ನಡೆಸಿದ್ದೆ.

ಆದರೆ ಕೆನ್ಯಾ ತಲಪುವಾಗ ಪರೀಸ್ಥಿತಿ ಕಠೀಣವಾಗಿರುವುದು ಅರಿವಾಯಿತು. ನನ್ನ ದಾರಿಯಲ್ಲಿದ್ದ ಉಗಂಡಾ ಹಾಗೂ ಸುಡಾನ್ ಅಂತರ್ಯುದ್ದ ಬರ್ಜರಿಯಾಗಿ ನಡೆಯುತ್ತಿದ್ದರೆ ಉತ್ತರದ ಇತಿಯೋಪಿಯ ಸಹಾ ದಾರಿ ಬಿಡುತ್ತಿರಲಿಲ್ಲ. ಹಾಗಾಗಿ ನನ್ನ ಯೋಜನೆಗಳೆಲ್ಲ ತಲೆಕೆಳಗಾಗಿ ಯುರೋಪಿನಿಂದ ಹಿಂತಿರುಗುವ ಬದಲು ಅಮೇರಿಕವನ್ನು ಹಾದು ಜಗತ್ತು ಪೂರ್ತಿ ಸುತ್ತು ಬರಲು ತೀರ್ಮಾನಿಸಿದೆ.

ಸುಡಾನ್ ದೇಶದಲ್ಲಿ ಉತ್ತರದಲ್ಲಿ ಅರಬ್ ಮುಸ್ಲಿಮರ ಪ್ರಾಬಲ್ಯ. ಅದಿಕಾರವೆಲ್ಲ ಅವರ ಕೈಯಲ್ಲಿ ಕೇಂದ್ರಿತ. ದಕ್ಷಿಣದಲ್ಲಿ ವಾಸ್ತವ್ಯ ಇರುವುದು ಕರಿಯ ಕ್ರೈಸ್ತ ಅನುಯಾಯಿಗಳು. ಬ್ರೀಟಿಶರು ಸ್ವಾತಂತ್ರ ಕೊಡುವಾಗ ಈಜಿಪ್ಟ್ ಜತೆ ಒಪ್ಪಂದ ಮಾಡಿ ಒಂದು ಕಿತಾಪತಿ ಮಾಡಿದ್ದರು. ಈ ಕರಿ ಜನರೇ ಜೀವಿಸುವ ದಕ್ಷಿಣ ಸುಡಾನ್ ಪ್ರಾಂತ್ಯವನ್ನು ಪಕ್ಕದ ಕರಿಯ ಜನರಿರುವ ಕೆನ್ಯಾ ಉಗಂಡಾದಿಂದ ಬೇರ್ಪಡಿಸಿ ಬಹುಕಾಲ ಈಜಿಪ್ಟ್ ವಶವಾಗಿದ್ದ ಉತ್ತರ ಸುಡಾನ್ ಜತೆ ಸೇರಿಸಿಬಿಟ್ಟರು. ಚಿತ್ರದಲ್ಲಿ ಕಾಣುವಂತೆ ಉತ್ತರಬಾಗ ಮರುಭೂಮಿಯಾದರೆ ದಕ್ಷಿಣಬಾಗದಲ್ಲಿ ಹುಲ್ಲುಗಾವಲು ಹಾಗೂ ಕುರುಚಲು ಕಾಡು. ಉತ್ತರದವರಿಂದ ಸತತವಾಗಿ ದಬ್ಬಾಳಿಕೆ, ಅನ್ಯಾಯ. ಶ್ರೀಲಂಕದಲ್ಲಿ ಇದ್ದಂತಹ ಪರಿಸ್ಥಿತಿ.

ಮತ್ತಷ್ಟು ಓದು »

8
ಜುಲೈ

ಸಂಸ್ಕೃತಿ ಸಂಕಥನ – ೧

– ರಮಾನಂದ ಐನಕೈ

ಭಾರತೀಯ ಸಂಸ್ಕೃತಿಯ ವಿಷಯದಲ್ಲಿ ಇಂದಿಗೂ ಕೂಡಾ ಗೊಂದಲವಿದೆ. ನಮ್ಮ ಆಚರಣೆಗಳು ಅರ್ಥವಿಲ್ಲದ್ದು. ಮೌಢ್ಯದಿಂದ ಕೂಡಿದ್ದು…. ಇತ್ಯಾದಿ. ನಮ್ಮ ಸುಶೀಕ್ಷಿತ ಜನರೂ ಕೂಡ ಇದನ್ನೇ ಪುನರುಚ್ಚರಿಸುತ್ತಿದ್ದಾರೆ. ಆದರೆ ಇದು ನಿಜ ಅಲ್ಲ. ಇವು ಕೇವಲ ಪಾಶ್ಚಾತ್ಯರಿಗೆ ನಮ್ಮ ಸಂಸ್ಕೃತಿಯ ಕುರಿತಾದ ಅನುಭವಗಳು. ಅವರ ಅನುಭವಗಳೇ ನಮಗೆ ಆದರ್ಶವಾಗಿದೆ.ಬೆಲ್ಜಿಯಂನ ಗೆರಿಟ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಾಲಗಂಗಾಧರ ಅವರು ಈ ಕುರಿತು ದೀರ್ಘ ಸಂಶೋಧನೆ ಮಾಡಿದ್ದಾರೆ. ಇವರ ಸಂಶೋಧನೆ ಭಾರತೀಯ ಸಂಸ್ಕೃತಿಯ ಮೇಲೆ ಹೊಸ ಬೆಳಕು ಚೆಲ್ಲಲಿದೆ.

ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ತಪ್ಪು ತಿಳುವಳಿಕೆ ಹೇಗೆ ಜೀವನದ ಬೇರೆ ಬೇರೆ ರಂಗದ ಮೇಲೆ ಅಡ್ಡ ಪರಿಣಾಮ ಮಾಡಿದೆ ಎಂಬ ಬಾಲಗಂಗಾಧರರ ವಾದವನ್ನು ಸರಳವಾಗಿ ಅನುಭವಕ್ಕೆ ದಕ್ಕುವಂತೆ ನಿರೂಪಿಸಲಿದ್ದಾರೆ ರಮಾನಂದ ಐನಕೈ. ಹೊಸ ಅಂಕಣ ‘ಸಂಸ್ಕೃತಿ ಸಂಕಥನ’ ಆರಂಭವಾಗಲಿದೆ.

ಇದು ಹೇಳುವಷ್ಟು ಸುಲಭವಲ್ಲ. ಆದರೂ ಒಂದು ಕ್ಷಣ ವರ್ತಮಾನದ ನಮ್ಮ ಸಿದ್ಧ ನಂಬಿಕೆಗಳನ್ನು ಪೂರ್ವಾಗ್ರಹಗಳನ್ನು ಬದಿಗಿಟ್ಟು ಮುಂದುವರಿಯೋಣ.

ಕಳೆದ ೬೦ ವರ್ಷಗಳ ನಮ್ಮ ಸ್ವತಂತ್ರ ಭಾರತದಲ್ಲಿ ನೂರಾರು ರೀತಿಯ ಮನಸ್ಸುಗಳು ಬೆಳೆಯುತ್ತ ಬಂದಿವೆ. ಪ್ರತಿಯೊಂದು ಮನಸ್ಸೂ ತನ್ನದೇ ರೀತಿಯ ವೈಚಾರಿಕ ಹಾಗೂ ಮಾನಸಿಕ ಸಾಮ್ರಾಜ್ಯವನ್ನು ಕಟ್ಟಿಕೊಂಡಿದೆ ಹಾಗೂ ಅದೇ ಅಂತಿಮ ಸತ್ಯ ಎಂದು ಪ್ರತಿಪಾದಿಸುತ್ತಲಿದೆ.ಈ ಕಾರಣಕ್ಕಾಗೇ ದೇಶದಲ್ಲಿ ಅಸಂಖ್ಯಾತ ವೈವಿಧ್ಯಮಯ ಸಮಸ್ಯೆಗಳು ಇನ್ನೂ ಜೀವಂತವಾಗಿವೆ. ಇವುಗಳನ್ನೆಲ್ಲ ಸೇರಿಸಿ ನಾವು ಮುಖ್ಯವಾಗಿ ಎರಡು ರೀತಿಯ ಮನಸ್ಸುಗಳನ್ನು ಗುರುತಿಸೋಣ.

ಮತ್ತಷ್ಟು ಓದು »

8
ಜುಲೈ

ಅಮಾಯಕರ ಜೀವಕ್ಕೆ ಬೆಲೆಯಿದೆಯೇ?

– ಮುರುಳಿಧರ್ ದೇವ್

ಭಯಾನಕ ಭಾನುವಾರ, ನಿನ್ನೆಯ ಭಾನುವಾರ ನಿಜಕ್ಕೂ ತುಂಬಾ ಭಯಾನಕವಾಗಿತ್ತು. ಮನೆ ಮನೆಗೆ ಕೇಬಲ್ ಹಾಕುವ , ಕೆಟ್ಟರೆ ಅದನ್ನು ದುರಸ್ತಿ ಮಾಡುವ, ತಿಂಗಳಿಗೆ ಕೇಬಲ್ ಹಣವನ್ನು ಮಾಲೀಕನಿಗೆ ಒಪ್ಪಿಸುವ ಅಮಾಯಕ ಹುಡುಗನೊಬ್ಬ ಹೈ ಟೆನ್ಶನ್ (ವೋಲ್ಟೇಜ್)  ವಾಯರ್ ಗೆ ತಗುಲಿ ಚಿಂತಾ ಜನಕ  ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾನೆ. ಆತ ಮಾಡಿದ ತಪ್ಪೆಂದರೇ  ಹೈ ಟೆನ್ಶನ್ ವಾಯರ್ ಕೆಳೆಗೆ ಕಟ್ಟಿಕೊಂಡ ಎರಡು ಅಂತಸ್ತಿನ  ಮನೆಯ ಕೇಬಲ್ ದುರಸ್ತಿ ಮಾಡಲು  ಪ್ರಯತ್ನಿಸಿದ್ದು. ಈ ಮುಂಚೆ ಅದೇ ಮನೆಗೆ ಪೈಂಟ್ ಮಾಡುವಾಗ, ಪೇಂಟರ್ ಹುಡುಗನೊಬ್ಬ ಕೂದಲೇಳೆ ಅಂತರದಲ್ಲಿ ಇಂತಹ ಅನಾಹುತದಿಂದ ತಪ್ಪಿಸಿಕೊಂಡಿದ್ದ. ಅಂದು ಪೇಂಟರ್ ಹುಡುಗನ ಜೊತೆಗಿದ್ದ ಅದೃಷ್ಟ ಈ ಕೇಬಲ್ ಹುಡುಗನ ಜೊತೆಗಿರಲಿಲ್ಲ. ಈತನ ದೇಹ ಸಂಪೂರ್ಣ ಸುಟ್ಟು ಹೋಗಿದ್ದು ಬದುಕಿದ್ದಾನೆ ಅಂತ ಗುರುತಿಸಲು ಇರುವ ಅಂಶ ಎಂದರೆ ಆತನ ಕಣ್ಣುಗಳು. ಆತನನ್ನು ಎತ್ತಿ ಆಟೋದಲ್ಲಿ ಮಲಗಿಸಬೇಕಾದರೆ ಆತನ ಚರ್ಮ ಕಿತ್ತು ಕೈಗೆ ಬರ್ತಾ ಇತ್ತು. ಇಂತಹ ಸಮಯದಲ್ಲಿ ೧೦೮ ಆಂಬ್ಯುಲೆನ್ಸ್ ಗೆ ಕರೆ ಮಾಡಿದರೆ ಅವರು ಬರುವಷ್ಟರಲ್ಲಿ ಆತನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಶುರುವಾಗಿತ್ತು. ಇನ್ನೂ ಆಂಬ್ಯುಲೆನ್ಸ್ ಬರುವ ವರೆಗೂ ಕಾದರೆ ಆತನ ಪ್ರಾಣಾಪಾಕ್ಷಿ ಆತನಲ್ಲಿ ಇರುತ್ತಿರಲಿಲ್ಲ.

ಇಷ್ಟಕ್ಕೆಲ್ಲ ಕಾರಣ ಆತ ಎರಡಂಟಸ್ತಿನ ಮನೆಯ ಕೇಬಲ್ ದೂರಸ್ತಿ ಮಾಡಲು ಹೋದದ್ದು, ಆದರೆ ಅಂತಹ ಅಸುರಕ್ಷಿತ ಸ್ಥಳದ ಕೆಳಗೆ ಮನೆ ಕಟ್ಟಲು, ವಿದ್ಯುತ್ ಸಂಪರ್ಕ ಪಡೆಯಲು ಅನುಮತಿ ನೀಡಿದವರಾರು? 440 volts ವೋಲ್ಟೇಜ್ ಇರುವ ಟ್ರ್ಯಾನ್ಸ್‌ಫಾರ್ಮರ್ ಸುತ್ತ ಬೇಲಿ ಹಾಕಿ ಅಪಾಯ ಅಂತ ಬರೆಸುವ ಅಧಿಕಾರಿಗಳಿಗೆ, ಇಂತಹ ಅಪಾಯದ ಸ್ಥಳದಲ್ಲಿ ಮನೆ ಕಟ್ಟೋಕೆ ಅನುಮತಿ ಕೊಡಬಾರದು ಅನ್ನೋ ಸಣ್ಣ ಪ್ರಜ್ಞೆ ಇಲ್ಲದೇ ಹೋಯ್ತೆ? ಮನೆ ಕಟ್ಟೋದು ಹೋಗಲಿ ವಿದ್ಯುತ ಸಂಪರ್ಕ ಕೊಡಬೇಕಾದರೆ BESCOM ನವರಿಗಾದರೂ ಬುದ್ದಿ ಬೇಡವೇ?
7
ಜುಲೈ

“ತಾವು ಕುಳಿತ ಮರದ ಕೊಂಬೆಯನ್ನು ತಾವೇ ಕಡಿದು ಕೊಳ್ಳುವ ನಮ್ಮ ಸ್ಯಾಂಡಲ್ ವುಡ್ ಮಂದಿ”

-ರತೀಶ

ನಮ್ಮ ಕನ್ನಡ ಚಿತ್ರರಂಗಕ್ಕೆ ನೇರ ಅಥವಾ ದೂರ ಸಂಪರ್ಕ ಹೊಂದಿರುವ  ಯಾರದರನ್ನು ಒಬ್ಬರನ್ನು ‘ನಮ್ಮ ಸ್ಯಾಂಡಲ್ ವುಡ್ ಸಮಸ್ಯೆ ಏನು?’ ಎಂದು ಕೇಳಿ, ‘ಪರಭಾಷೆ ಚಿತ್ರಗಳ ಧಾಳಿ, ಕನ್ನಡಿಗರು ಚಿತ್ರಮಂದಿರಕ್ಕೆ ಬರವುದಿಲ್ಲ, ಕನ್ನಡ ಚಿತ್ರಗಳನ್ನು ನೋಡುವುದಿಲ್ಲ….’ ಎಂದೆಲ್ಲ ಉದ್ದುದ್ದ ಭಾಷಣ ಬಿಗಿಯುತ್ತಾರೆ. ಅವರು ಹೇಳುವ ಮಾತು ಸರಿಯಾಗಿಯೇ ಇರಬಹುದು ಹಾಗೆಯೇ ಅದಕ್ಕೆ ಕಾರಣಗಳು ಹಲವಿರಬಹುದು ಆದರೆ ಒಬ್ಬ ಸಾಮಾನ್ಯ ಪ್ರೇಕ್ಷಕನಾಗಿ ನನಗೆ ತೋಚುವುದು ಏನೆಂದರೆ ಈ ಎಲ್ಲ ಸಮಸ್ಯೆಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಚಿತ್ರರಂಗದವರೇ ಹೊಣೆ! ಅದು ಪ್ರತ್ಯಕ್ಷವಾಗಿರಬಹುದು ಅಥವಾ ಪರೋಕ್ಷವಾಗಿರಬಹುದು.

ನಿನ್ನೆ ನಾನು ಸುವರ್ಣ ಟಿವಿಯಲ್ಲಿ, ಸುವರ್ಣ ಫಿಲಂ ಅವಾರ್ಡ್ಸ್ ಕಾರ್ಯಕ್ರಮ ವೀಕ್ಷಿಸುತ್ತಿದ್ದೆ, ಬಹಳ ಅಪರೂಪಕ್ಕೆ ಅನ್ನುವಂತೆ ಕನ್ನಡಿಗರಿಗೆ ಇಂಥಹ ಕಾರ್ಯಕ್ರಮಗಳನ್ನು ನೋಡಲು ಅವಕಾಶ ಸಿಗುವುದು. ಜೊತೆಗೆ ಕನ್ನಡ ಚಿತ್ರರಂಗದವರಿಗೆ ಇದು ಅತಿ ಮುಖ್ಯ ಹಾಗು ಅತಿ ವಿರಳವಾಗಿ ದೊರಕುವಂತಹ ಅವಕಾಶ, ಇಲ್ಲಿ ಕನ್ನಡ ಚಿತ್ರರಂಗದ ವಿಶೇಷಗಳನ್ನು, ಸಾಧನೆಗಳನ್ನು, ಮುಂದಿನ ಗುರಿಗಳನ್ನು ಹಾಗು ಚಿತ್ರರಂಗದ ಹಿರಿಮೆಯನ್ನು ಜನರಿಗೆ ಹತ್ತಿರವಾಗುವಂತೆ ತಿಳಿಸುವ ಬಹುದಾದಂಥಹ ಬಹು ದೊಡ್ಡ  ವೇದಿಕೆ ನಿರ್ಮಾಣವಾಗಿತ್ತು, ಆದರೆ ನಮ್ಮವರು ಅದನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲವಾಗಿದ್ದು ಬೇಸರದ ಸಂಗತಿ. ಮತ್ತಷ್ಟು ಓದು »

5
ಜುಲೈ

ಚಿನ್ನದ ಹುಡುಗಿಯ ಜೊತೆ ನಿಲ್ಲೋಣ…

5
ಜುಲೈ

ಅಷ್ಟಕ್ಕೂ,ಈ ಪ್ರಜಾಪ್ರಭುತ್ವ ಅಂದರೇನು!?

– ರಾಕೇಶ್ ಶೆಟ್ಟಿ

ಮನಮೋಹನರಿಗಿಂತ ಅಡಾಲ್ಫ್ ಹಿಟ್ಲರ್ ಮೇಲು…!

ದೇಶಕ್ಕಾದ ಅವಮಾನಕ್ಕೆ ಪ್ರತಿಯಾಗಿ ನಂಜು ಕಾರುತಿದ್ದ ಅಡಾಲ್ಫ್ ಹಿಟ್ಲರ್ ಅನ್ನುವ ರಕ್ತ ಪಿಪಾಸು ಸರ್ವಾಧಿಕಾರಿಯನ್ನ, ದೇಶ ಭ್ರಷ್ಟಚಾರದಲ್ಲಿ ಮುಳುಗೇಳುತಿದ್ದರೂ ಸಂಬಂಧವೇ ಇಲ್ಲದಂತಿರುವ,ಕಣ್ಣೆದುರೇ ಅನಾಚಾರ ನಡೆಯುತಿದ್ದರು ಕಣ್ಮುಚ್ಚಿ ಕುಳಿತಿರುವ ಪ್ರಾಮಾಣಿಕ ಪ್ರಧಾನಿ ಮನಮೋಹನರಿಗೆ ಹೋಲಿಸಿದ್ದು ಅತಿಯಾಯ್ತು ಅನ್ನಿಸುತ್ತೆ ಅಲ್ವಾ?

ಹಾಗಿದ್ರೆ, ಅಣ್ಣಾ ಸತ್ಯಾಗ್ರಹ ಮಾಡಿ ಮೊಂಡ ಸರ್ಕಾರವನ್ನ ಮಂಡಿಯೂರಿಸಿದಾಗ ’ಓ! ಸರ್ಕಾರ ಈ ತರ ಬಗ್ಗಿದರೆ, ಎಲ್ಲರೂ ಸತ್ಯಾಗ್ರಹ ಮಾಡಿ ಸರ್ಕಾರವನ್ನ ಬ್ಲಾಕ್ ಮೇಲ್ ಮಾಡಲು ಶುರು ಮಾಡುತ್ತಾರೆ!’ ಅಂತ ಆತಂಕ ಪಡುವವರನ್ನ ಕಂಡಾಗ; ’ಪ್ರಜಾಪ್ರಭುತ್ವವಲ್ಲದ ಭ್ರಷ್ಟಚಾರ ಮುಕ್ತ ಸರ್ಕಾರಕ್ಕಿಂತ, ಭ್ರಷ್ಟಚಾರವಿರುವ ಪ್ರಜಾಪ್ರಭುತ್ವ ಸರ್ಕಾರವೇ ಮೇಲು’ ಅನ್ನುವಂತ ಲೇಖನವನ್ನ ಓದಿದಾಗ; ಪ್ರಬಲ ಜನಲೋಕಪಾಲ ಮಸೂದೆಗಾಗಿ ನಡೆಯುತ್ತಿರುವ ಹೋರಾಟ ’ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸುತ್ತಿದೆ’ ಅಂತ ಕೆಲ ಮಂದಿ ಗುಲ್ಲೆಬ್ಬಿಸುತ್ತಿರುವುದನ್ನ ನೋಡಿದಾಗ ಇದೂ ಅತಿಯಾಯ್ತು ಅನ್ನಿಸುವುದಿಲ್ವಾ?

ಅಷ್ಟಕ್ಕೂ,ಜನರಿಂದ ಆರಿಸಿ ಬಂದ ಸರ್ಕಾರ ತನ್ನ ಪಾಲಿನ ಕೆಲಸವನ್ನ ತಾನು ಸರಿಯಾಗಿ ಮಾಡುತಿದ್ದರೆ ಅಣ್ಣಾ ಹಜ಼ಾರೆ ಯಾಕೆ ಬರಬೇಕಿತ್ತು? ಕಫ್ಫು ಹಣದ ಕಳ್ಳರ ಹೆಸರನ್ನ ಬಾಯ್ಬಿಡಿ ಅಂದಾಗ ’ಅವೆಲ್ಲ ಆಗಲಿಕ್ಕಿಲ್ಲ’ ಅಂತ ವಿತ್ತ ಸಚಿವ ಅಂದ ಮೇಲೆ ತಾನೇ ಜನರ ಪಿತ್ತ ನೆತ್ತಿಗೇರಿದ್ದು? ಸುಪ್ರೀಂ ಕೋರ್ಟ್ ತಪರಾಕಿ ಹಾಕಿದ ಮೇಲೆಯೆ ತೆರಿಗೆ ಕಳ್ಳ ಹಸನ್ ಅಲಿಯನ್ನ ಬಂಧಿಸಿದ್ದೇಕೆ? ಕಳೆದ ಚುನಾವಣೆಗಿಂತಲೂ ಮೊದಲೇ 2G ಹಗರಣ ಬಾಯ್ತೆರೆದು ನಂತರವೂ ಅದೇ ರಾಜನನ್ನ ಮತ್ತೆ ಕರೆದು ಮತ್ತದೇ ಖಾತೆಯನ್ನ ವಹಿಸಿದ ಸರ್ಕಾರಕ್ಕೆ ನೈತಿಕತೆಯಿದಯೇ? ಈಗ ಆತಂಕ ಪಡುತ್ತಿರುವ ಪ್ರಜಾಪ್ರಭುತ್ವದ ಕಾವಲು ಭಟರೆಲ್ಲ ಆಗ ಏನು ಮಾಡುತಿದ್ದರು?ಎಲ್ಲಿದ್ದರು?

ಮತ್ತಷ್ಟು ಓದು »

5
ಜುಲೈ

ಪರಭಾಷೆಯ ಚಿತ್ರಗಳಿಗೆ ಮಾರುಕಟ್ಟೆ ನಿರ್ಮಿಸಿ ಕೊಡುತ್ತಿರುವವರ್ಯಾರು?

– ಅರುಣ್ ಜಾವಗಲ್

ಸುವರ್ಣ ಕನ್ನಡ ಪಿಲಂ ಅವಾರ್ಡ್ ಕಾರ್ಯಕ್ರಮ ಕಳೆದ ವಾರ ಟಿವಿಯಲ್ಲಿ ನೋಡಿದೆ. ನಿಜಕ್ಕು ಅದ್ಬುತವಾದ ಕಾರ್ಯಕ್ರಮ, ಪರಬಾಶೆಗಳಲ್ಲಿ ಮಾತ್ರ ನಡೆಯುತ್ತಿದ್ದ ಅದ್ದೂರಿ ಕಾರ್ಯಕ್ರಮಗಳು, ಇತ್ತೀಚಿನ ದಿನಗಳಲ್ಲಿ ಕನ್ನಡದಲ್ಲು ನಡೆಯಲು ಪ್ರಾರಂಬವಾಗಿರೋದು ನಿಜಕ್ಕೂ ಸಂತೋಶಕರ. ಈ ರೀತಿಯ ಕಾರ್ಯಕ್ರಮಗಳು, ಕನ್ನಡ ಚಿತ್ರರಂಗ, ತಾವೇನು ಯಾರಿಗೂ ಕಡಿಮೆಯಿಲ್ಲ ಅನ್ನೊದನ್ನ ಎತ್ತಿಹಿಡಿದಿದೆ….
ಈ ರೀತಿಯ ಕಾರ್ಯಕ್ರಮಗಳನ್ನ ಬಳಸಿಕೊಂಡು ಚಿತ್ರರಂಗದ ಮಾರುಕಟ್ಟೆಯನ್ನು ವಿಸ್ತಾರ ಮಾಡಿಕೊಳ್ಳಬಹುದು. ಈ ಕೆಲಸವನ್ನು ಬೇರೆ ಬಾಶೆಯ ಚಿತ್ರರಂಗದರು ತುಂಬ ಚೆನ್ನಾಗಿಯೇ ಮಾಡಿಕೊಂಡು ಬಂದಿದ್ದಾರೆ, ಆದರೆ ದುರದ್ರುಶ್ಟ ಅಂದ್ರೆ ಕನ್ನಡ ಚಿತ್ರರಂಗದ ಕಾರ್ಯಕ್ರಮಗಳಲ್ಲಿ ಪರಬಾಶೆಯ ಹಾಡು/ಕುಣಿತದೊಂದಿಗೆ ಪರಬಾಶೆಯ ಚಿತ್ರಗಳಿಗೆ ನಮ್ಮ ರಾಜ್ಯದಲ್ಲಿ ಮಾರುಕಟ್ಟೆ ನಿರ್ಮಿಸೋಕ್ಕೆ ಹೊರಟಿರೋದು ಯಾಕೆ ಅನ್ನೊದು ಗೊತ್ತಾಗುತ್ತಿಲ್ಲ.
ಕಾರ್ಯಕ್ರಮಗಳಲ್ಲಿ- ಕನ್ನಡಿಗರು ಕನ್ನಡ ಸಿನೆಮಾಗಳನ್ನ ನೋಡಿ ಉತ್ತೇಜನ ಕೊಡಬೇಕು….., ಸಿನೆಮಾ ನೋಡೊ ಹವ್ಯಾಸ ಹೊರ ರಾಜ್ಯದಲ್ಲಿರುವಶ್ಟು ನಮ್ಮಲ್ಲಿಲ್ಲ….., ಕನ್ನಡ ಸಿನೆಮಾ ನೋಡೊಕ್ಕೆ ಜನರೇ ಇಲ್ಲ…ಸಿನೆಮಾವನ್ನ ತಿಯೇಟರಿನಲ್ಲೇ ನೋಡಿ….ಹೀಗೆ ಬಾಶಣಗಳನ್ನ ಮಾಡಿ.. ಅದೇ ಕಾರ್ಯಕ್ರಮದಲ್ಲಿ ಪರಬಾಶೆಯ ಹಾಡು/ಕುಣಿತ ನಡೆಸಿದರೆ ಕನ್ನಡಿಗರ ಪಾಡು ಏನಾಗಬಾರದು. ಗಂಟೆಗಟ್ಟಳೆ ಬಾಶಣ ಮಾಡಿ ಚಿತ್ರರಂಗದ ಎಲ್ಲಾ ತೊಡುಕು/ತೊಂದರೆಗಳಿಗೆ ಕನ್ನಡ ಚಿತ್ರ ನೋಡುಗರನ್ನೇ ಹೆಚ್ಚು ಗುರಿಯನ್ನಾಗಿಸಿ, ಪರಬಾಶೆಯ ಚಿತ್ರಗಳಿಗೆ ಕೈಮುಗಿಯುವ ಜನರಿಗೆ ನೈತಿಕತೆಯ ಬಗ್ಗೆ ಅರಿವಿದೆಯೇ?

4
ಜುಲೈ

ದಿಲ್ಲಿಯ ’ಹುಳಿ ದ್ರಾಕ್ಷೆ’ ಹಿಡಿಯಲು ಹೋಗಿ

-ಕಾಲಂ ೯

ದಿಲ್ಲಿ ಕನ್ನಡದ ಪತ್ರಕರ್ತರಿಗೆ ದೂರ. 3000 ಕಿ.ಮೀ. ಅಷ್ಟೇ ಅಲ್ಲ. ಅದರಾಚೆಗೂ ದೂರ. ಕನ್ನಡದ ಪತ್ರಕರ್ತರು ದಿಲ್ಲಿಯಲ್ಲಿ ಹೆಜ್ಜೆ ಗುರುತು ಮೂಡಿಸುವುದು ಸುಲಭದ ಮಾತಲ್ಲ. ಏರು ಬಿಸಿಲು ಅಥವಾ ತೀವ್ರ ಚಳಿಯಲ್ಲಿ ನಿರಂತರ ಆಲೂ ಪಲ್ಯವನ್ನೂ ಅರಗಿಸಿಕೊಳ್ಳುತ್ತಲೇ ಇರಬೇಕು.

ದಿಲ್ಲಿಯ ಆಡುಭಾಷೆ ಹಿಂದಿ – ಉರ್ದು ಮಾತ್ರ. ಇಂಗ್ಲೀಷು ಅಷ್ಟಕ್ಕಷ್ಟೆ. ಇನ್ನು ಕನ್ನಡದ ಕಥೆ? ಪತ್ರಿಕಾರಂಗವೇನು? ಸುಪ್ರೀಂ ಕೋರ್ಟು, ಪಾರ್ಲಿಮೆಂಟು, ಐಎ ಎಸ್ ಲಾಬಿಯಲ್ಲಿಯೂ ಕನ್ನಡದ ಧ್ವನಿ ಕ್ಷೀಣವೇ.

ಕನ್ನಡದ ಪತ್ರಿಕೋದ್ಯಮಕ್ಕೆ ‘ಕೊಂಬು-ಕಹಳೆ’ ಎಲ್ಲ ಆದವರೂ ದಿಲ್ಲಿಯಲ್ಲಿ ಏನೂ ಅಲ್ಲ.

ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ಅಂದರೆ ಅದು ಅಡ್ವಾಣಿಯದ್ದೋ – ಪ್ರಕಾಶ್ ಕಾರಟರದ್ದೋ – ಚಿದಂಬರರದ್ದೋ – ಯಾವುದೇ ರಾಷ್ಟ್ರೀಯ ನಾಯಕರದ್ದಾಗಲಿ. ಅಂದೊಂದು ಮದುವೆ ಮನೆಯ ಬಾಬತ್ತು. ಬರೋಬ್ಬರಿ 600 ಜನ. ಇಂಗ್ಲೀಷ್ ಚಾನೆಲ್ ಗಳು, ಹಿಂದಿ ಚಾನೆಲ್ ಗಳು, ರಾಷ್ಟ್ರೀಯ ಪತ್ರಿಕೆಗಳು, ಅವರವರ ಕ್ಯಾಮರಾಮೆನ್ ಗಳು, ಮೈಕ್‍ಮೆನ್ ಗಳು, ಅದರಾಚೆಗೆ ಎಲ್ಲೋ ಕಳೆದು ಹೋಗುವ ಕನ್ನಡದ ಪತ್ರಕರ್ತ. ಪ್ರಶ್ನೆ ಕೇಳುವುದು, ಉತ್ತರ ಬರೆಯುವುದು ದೂರದ ಮಾತು. ಎಷ್ಟು ದೂರವೆಂದರೆ ದೆಲ್ಲಿಯ ನಮ್ಮ ಧ್ವನಿಗಳು ಆ ಬಾಬತ್ತಿನ ತನಕ ಹೋಗುವುದೇ ಇಲ್ಲ. ದಿಲ್ಲಿಯ ತಮ್ಮ ಮನೆಯಲ್ಲಿಯೇ ಕೂತು NDTVಯದೋ ಆಜ್ ತಕ್ ನದೋ Direct Rellay ನೋಡ್ತಾ ನೋಡ್ತಾನೇ ಇವರು ಸುದ್ದಿ ಕೊಟ್ಟು ಕೈತೊಳೆದುಕೊಳ್ಳುತ್ತಾರೆ. ಮತ್ತಷ್ಟು ಓದು »

4
ಜುಲೈ

ಜನರೆಂದರೆ ಯಾರ್ ಯಾರು ಕಾಗೇರಿಯವರೇ?

– ಬನವಾಸಿ ಬಳಗ

ಇವತ್ತಿನ (೦೩.೦೭.೨೦೧೧ರ) ಕನ್ನಡಪ್ರಭ ದಿನಪತ್ರಿಕೆಯ ಒಂಬತ್ತನೇ ಪುಟದಲ್ಲಿ ಮಾನ್ಯ ಶಿಕ್ಷಣಮಂತ್ರಿಗಳಾದ ಶ್ರೀ ವಿಶ್ವೇಶ್ವರಹೆಗ್ಡೆ ಕಾಗೇರಿಯವರ “ಬುಲೆಟ್ ಸಂದರ್ಶನ“ವೊಂದು ಪ್ರಕಟವಾಗಿದೆ. ಸರ್ಕಾರ ಇಂಗ್ಲೀಶ್ ಮಾಧ್ಯಮ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚೆ ಆರಂಭಿಸಿರುವ ಹಿನ್ನೆಲೆಯಲ್ಲಿ ಇದು ಕುತೂಹಲಕರವಾಗಿದ್ದು, ಒಂದು ಥರ ಸರ್ಕಾರದ ಮುಂದಿನ ನಡೆಯ ದಿಕ್ಸೂಚಿಯೂ ಆಗಿದೆ. ಇಡೀ ಸಂದರ್ಶನದ ಪ್ರಮುಖ ಮಾತುಗಳು ಇಂತಿವೆ.

ಸಾಹಿತಿಗಳಷ್ಟೇ… ಜನತೆಯಲ್ಲ!

ತಮ್ಮ ಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯಲು ತಾವು ಸಿದ್ಧ ಎಂಬುದನ್ನು ಮಂತ್ರಿಗಳು ಸಾಬೀತು ಮಾಡುತ್ತಿರುವಂತೆ ಇವರ ಮಾತುಗಳಿವೆ. ಇಂಗ್ಲೀಶ್ ಮಾಧ್ಯಮ ಶಾಲೆಗಳಿಗೆ ಸಾಹಿತಿಗಳು ಮಾತ್ರಾ ವಿರೋಧ ತೋರಿಸಿದ್ದಾರೆ, ಇವರಷ್ಟೇ ನಾಡಿನ ಜನತೆಯಲ್ಲ… ಹಳ್ಳಿಗಾಡಿನ ಜನರೂ ಕೂಡಾ ಅವರ ಅಭಿಪ್ರಾಯ ಹೇಳಲಿ… ಇತ್ಯಾದಿಯಾಗಿ ಮಂತ್ರಿಗಳು ಮಾತಾಡಿದ್ದಾರೆ. ಇದಲ್ಲದೆ ಮಾಧ್ಯಮಗಳಿಗೆ ಜನರ ಅಭಿಪ್ರಾಯ ನಿರೂಪಿಸುವ ಹೊಣೆಗಾರಿಕೆಯನ್ನೂ ವಹಿಸಿದ್ದಾರೆ. ಈ ಪ್ರಯತ್ನವು ಸಾಹಿತಿಗಳ ಬಾಯಿ ಮುಚ್ಚಿಸುವ “ನಿಮ್ಮ ಮಕ್ಕಳು ಇಂಗ್ಲೀಶ್ ಮಾಧ್ಯಮದಲ್ಲಿ ಓದಬಹುದು, ಬಡವರ ಮಕ್ಕಳು ಓದಬಾರದಾ?” ಎಂಬಂತಹ ಮತ್ತೊಂದು ಅಸ್ತ್ರವಾಗಿದೆ. ಇರಲಿ… ಕಾಗೇರಿಯವರು ಆಡಿರುವ ಮಾತುಗಳತ್ತ ನೋಡೋಣ.

ಮತ್ತಷ್ಟು ಓದು »

2
ಜುಲೈ

ದೆವ್ವದ ಹರಕೆ!!

– ನಾಗರಾಜ್ ಮೌಳಿ

ನಿಮಗೆ ಗೊತ್ತಿದೆ ಎಷ್ಟೊಂದು ದೆವ್ವ ಭೂತ, ಪಿಚಾಚಿಗಳು, ಹಾಗೆ ಅದು ಇದು ಅಂತ ಮೂವೀಸ್ ಬಂದಿದಾವೆ, ಕಥೆಗಳು , ಕಾದಂಬರಿಗಳು, ಹಾಗೆ ಅಲ್ಲಿ ಇಲ್ಲಿ ಕೇಳಿದ್ದು ಎಲ್ಲ ನಮ್ಮ ಕಿವಿಗೂ ಬೀಳ್ತಾ ಇರ್ತವೆ. ಅದರಲ್ಲಿ ಕೆಲವೊಂದು ನಿಮಗಾಗಿ ಇಲ್ಲಿ ಬರೀತಿನಿ…..ಅದಕ್ಕೂ ಮುಂಚೆ ನಮ್ಮೂರಲ್ಲಿ ದೆವ್ವ, ದೈವ, ದಯ್ಯ ಹೀಗೆಲ್ಲಾ ಕರಿತಾರೆ ನಿಮಗೆ ಯಾವತರ ಅನ್ಸುತ್ತೋ ಹಾಗೆ ಓದಿ..

ಮೊನ್ನೆ ಟಿ‌ವಿ 9 ಲಿ ತೋರಿಸ್ತಾ ಇದ್ರು ಬೆಂಗಳೂರಲ್ಲಿ ಒಂದು 8 ಮಹಡಿ ಬಿಲ್ಡಿಂಗ್ ಇದ್ಯಂತೆ ಅಲ್ಲಿ ಯಾರು ಹೋಗೋಕೆ ಅಗಲ್ವಂತೆ, ಅದು ಏನು ಅಂತ ನೋಡೋಕೆ ಟಿ‌ವಿ 9 ತಂಡ ಹೋದಾಗ ಭಯಾನಕ ಅನುಭವ ಆಯಿತಂತೆ, ಅದನ್ನು ತೋರಿಸ್ತಿದ್ರು ಅದು ರಾತ್ರಿ ಕಣ್ರೀ ಸ್ವಲ್ಪ ಭಯನೆ ಆಯಿತು ನನಗೂ.. ಏನ್ ಕೇಳ್ತೀರಾ ಆಟೋಮೇಟಿಕ್ ಆಗಿ ಮಾಮೂಲಿ ಬಾಗಿಲು ತೆಗೆದುಕೊಳ್ಳುತ್ತೆ, ನಿಮ್ಮ ಹತ್ತಿರದಲ್ಲೇ ನೆರಳುಗಳು ಒಡಿಯಾಡ್ತವೆ, 1ನೇ ಮಹಡಿಗೆ ಹೋದ್ರೆ 4ನೇ ಮಹಡಿಲಿ, ಹಾಗೆ 4ನೇ ದಕ್ಕೆ ಹೋದರೆ 1ನೆದರಲ್ಲಿ ಯಾರೋ ಭಯಾನಕವಾಗಿ ಅಳುತ್ತಿರುವ ಶಭ್ದ, ಮೆಟ್ಟಿಲುಗಳಿಂದ ಯಾರೋ ಇಳಿದುಕೊಂಡು ಹೋಗ್ತಾ ಇರೋ ಸದ್ದು ಕೇಳಿಸುತ್ತೆ ಅಬ್ಬಾ ನೋಡಿ ಸ್ವಲ್ಪ ನೀರಾದೆ….

ಮತ್ತೆ ಒಂದು ಮನೆ ಇದೆ ನಮ್ಮ ಊರಲ್ಲಿ ಆ ಮನೆಯ ಯಜಮಾನ್ರು ನಮ್ಮ ಅಪ್ಪನ ಹತ್ರ ನಾವು ಚಿಕ್ಕವರಿದ್ದಾಗ ಬಂದು ಹೇಳ್ತಿದ್ರು, ಅವ್ರ ಮನೇಲಿ ಮರದ ತೊಲೆಗಳ ಮೇಲೆ ಯಾರೋ ಕಂಟಿನಿಯಸ್ ಆಗಿ ಗುದ್ದಿದ ಶಭ್ದ ಕೇಳುತ್ತಿತಂತೆ, ಹಾಗೆ ರಾತ್ರಿ ಒಬ್ಬ ಎತ್ತರದ ಮನುಷ್ಯ ದೀಪ ಹಿಡಿದುಕೊಂಡು ಹಾರಿ ಹೋಗ್ತಾ ಇದ್ದಹಾಗೆ, ಗೇಟಿನಬಳಿ ಯಾವುದೋ ಬಿಳಿ ಸೀರೆಯ ಹೆಂಗಸು ನಿಂತು ಅಳುತ್ತಿರುವ ಹಾಗೆ ಕಾಣಿಸ್ತಿತ್ತಂತೆ,

ಮನೇಲಿ ಮಲಗಿದ್ರೆ ಮೈತುಂಬಾ ಯಾವುದೋ ಒಂದು ಹಾವು ಹರಿದಾಡಿದ ಅನುಭವ ಆಗಿ ಶಾಂತಿ ಮಾಡಿಸಿದ್ದನ್ನ ನೋಡಿದೀನಿ, ಮನೇಲಿ ನೀರು ಅದಾಗಿ ಅದೇ 5 ನಿಮಿಷದಲ್ಲಿ  ಕೆಂಪು ಬಣ್ಣಕ್ಕೆ ತಿರುಗೋದು, ಏನು ಅಡಿಗೆ ಮಾಡಿದ್ರೂ, ಉಪ್ಪು ಹಾಕದೇ ಇದ್ರು, ತಿಂದಾಗ ಅತಿಯಾಗಿ ಉಪ್ಪಾಗಿ ಊಟಾನೇ ಬಿಟ್ಟು ಏಳಬೇಕು ಹಾಗೆ ಆಗ್ತಿತ್ತು ಅಂತ ಹೇಳ್ತೀದ್ರು,  ಅದನ್ನ ನೋಡೋಕೆ ನಮ್ಮ ಕೆಲವು ಗುರುತು ಪರಿಚಯ ಇರೋರು ಹೋಗಿದ್ರೂ ನಾವು ಬಿಡಿ ತುಂಬಾ ದೈರ್ಯವಂತರು ಹಾಗಾಗಿ ಅಂತ ಸಾಹಸ ಮಾಡಲಿಲ್ಲ. ಮತ್ತಷ್ಟು ಓದು »