ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

13
ಜುಲೈ

ಅರಬ್ ರಾಷ್ಟ್ರವಾದ ಎಂಬ ಟ್ಯಾಂಕು; ಷರಿಯಾ ಎಂಬ ಪೈಪು!

– ಸಂತೋಷ್ ತಮ್ಮಯ್ಯ

ಬಹುತೇಕರಿಗೆ ರಾಮಾಯಣದ ಈ ಚಿರಪರಿಚಿತವಾದ ಪ್ರಸಂಗ ವಿಚಿತ್ರವಾಗಿ ಕಾಣಿಸಬಹುದು.
ಸುಬಾಹು ಮತ್ತು ಮಾರೀಚರು ಪದೇ ಪದೇ ಅಡ್ಡಿ ಪಡಿಸುತ್ತಿದ್ದರೂ ವಿಶ್ವಾಮಿತ್ರನೇಕೆ ಪದೇ ಪದೇ ಅಲ್ಲೇ ಯಾಗ ಮಾಡುತ್ತಿದ್ದ ಎನಿಸಬಹುದು. ಜನ್ಮತಃ ಕ್ಷತ್ರಿಯನಾಗಿದ್ದ ವಿಶ್ವಾಮಿತ್ರನೇ ಏಕೆ ಸುಬಾಹು ಮಾರೀಚರನ್ನು ಕೊಲ್ಲಲಿಲ್ಲ ಎಂಬ ಪ್ರಶ್ನೆಯೂ ಮೂಡಬಹುದು. ಹಾಗಾದರೆ ಸುಬಾವು-ಮಾರೀಚರು ವಿಶ್ವಾಮಿತ್ರನಿಗಿಂತಲೂ ಪರಾಕ್ರಮಿಗಳಾಗಿದ್ದರೇ ಎಂದು ಸಂಶಯವನ್ನೂ ಹುಟ್ಟಿಸಬಹುದು. ಅಂಥ ಪ್ರಶ್ನೆ, ಸಂಶಯ, ಗೊಂದಲಗಳು ಹುಟ್ಟುವುದಕ್ಕೆ ಕಾರಣಗಳೂ ಇವೆ. ಏಕೆಂದರೆ ಪ್ರತೀ ಭಾರಿ ಉಪಟಳ ಕೊಟ್ಟಾಗಲೂ ವಿಶ್ವಾಮಿತ್ರ ಅಷ್ಟೇ ಶ್ರದ್ಧೆಯಿಂದ ಯಾಗಕ್ಕೆ ಅಣಿಯಾಗುತ್ತಿದ್ದ. ಪ್ರತೀ ಬಾರಿಯೂ ರಾಕ್ಷಸರು ಹೊಸ ಹೊಸ ವಿಧಾನಗಳ ಮೂಲಕ ಯಾಗಕ್ಕೆ ಅಡ್ಡಿಪಡಿಸುತ್ತಲೇ ಇದ್ದರು. ರಾಕ್ಷಸರು ವಿಶ್ವಾಮಿತ್ರನಿಗಿಂತ ಒಂದು ಹೆಜ್ಜೆ ಮುಂದಿದ್ದರು. ಪ್ರತೀ ಬಾರಿಯೂ ದಾಳಿಯಾಗುವುದೆಂದು ತಿಳಿದಿದ್ದ ಮಿಶ್ವಾಮಿತ್ರ ತಕ್ಕ ಕ್ರಮವನ್ನೂ ಕೈಗೊಳ್ಳುತ್ತಿದ್ದ, ಪ್ರತಿ ಬಾರಿಯೂ ಸೋಲುತ್ತಿದ್ದ. ಕೊನೆಗೆ ವಿಶ್ವಾಮಿತ್ರ ರಾಮ ಲಕ್ಷ್ಮಣರನ್ನು ಕರೆತರುವ ಹೊತ್ತಿಗೆ ಹಣ್ಣುಗಾಯಿ ನೀರುಗಾಯಿ ಅಗಿಹೋಗಿದ್ದ.
ಏಕೆಂದರೆ ವಿಶ್ವಾಮಿತ್ರನಿಗೆ ರಾಕ್ಷಸರ ಆಚರಣೆಗಳು ತಿಳಿದಿತ್ತೇ ಹೊರತು, ಅವರ ಸಿದ್ಧಾಂತ ಮತ್ತು ಪ್ರವೃತ್ತಿಗಳು ತಿಳಿದಿರಲಿಲ್ಲ ಅಥವಾ ಅವನ್ನು ತಿಳಿಯಲು ಅತ ಬಹುಕಾಲ ತೆಗೆದುಕೊಂಡಿದ್ದ!

ಭಾರತದಲ್ಲಿ ಷರಿಯಾ ಅಥವಾ ಷರಿಯತ್ ಎಂದರೂ ಹಾಗೆಯೇ. ಇಂದಿಗೂ ಮುಸಲ್ಮಾನೇತರರಿಗೆ ಷರಿಯತ್ ಸರಿಯಾ, ತಪ್ಪಾಎಂಬ ಚರ್ಚೆಯೇ ದೊಡ್ಡದಾಗುತ್ತದೆಯೇ ಹೊರತು ಅದರಾಚೆಗೆ ಇಣುಕಿದವರು ಕಡಿಮೆ. ಆದರೆ ಮುಸಲ್ಮಾನರಲ್ಲಿ ಹಾಗಿಲ್ಲ. ಅವರಲ್ಲಿ ಷರಿಯಾ ಏಕಾಗಿ ಇದೆ? ಯಾಕಾಗಿರಬೇಕು? ಅದರ ಮೂಲ ಉದ್ದೇಶವೇನಿದೆ ಎಂಬುದರ ಬಗ್ಗೆ ಸ್ಪಷ್ಟತೆಯಿದೆ. ಆಲ್ ಇಂಡಿಯಾ ಪರ್ಸನಲ್ ಲಾ ಬೋರ್ಡ್ ಪ್ರತೀ ಜಿಲ್ಲೆಯಲ್ಲೂ ಷರಿಯಾ ನ್ಯಾಯಾಲಗಳಿರಬೇಕೆಂದು ಹೇಳುತ್ತಿರುವುದಕ್ಕೂ ಗಹನವಾದ ಕಾರಣವಿದೆ.

ಮತ್ತಷ್ಟು ಓದು »

10
ಜುಲೈ

ನಾಯಕರುಗಳಿಗೇ ಇಲ್ಲದ ‘ಮುಲಾಜು’ ಇಂಥ ಬಯೋಪಿಕ್ ಗಳನ್ನು ಮಾಡಹೋಗುವ ನಿಮಗ್ಯಾಕೆ ಹಿರಾನಿ?

– ಸುಜಿತ್ ಕುಮಾರ್

ಈ ವರ್ಷದ ದಿ ಮೋಸ್ಟ್ ಎಕ್ಸ್ಪೆಕ್ಟೆಡ್ ಚಿತ್ರಗಳಲ್ಲಿ ಒಂದಾದ ‘ಸಂಜು’ ಕೊನೆಗೂ ತೆರೆಯ ಮೇಲೆ ಬಂದಿದೆ. ಚಿತ್ರ ಜನಮಾನಸದಲ್ಲಿ ಕುತೂಹಲವನ್ನು ಮೂಡಿಸಲು ಹಲವಾರು ಕಾರಣಗಳಿದ್ದಿರಬಹುದು. ಮೊತ್ತ ಮೊದಲನೆಯದಾಗಿ ನಿರ್ದೇಶಕ ರಾಜ್ಕುಮಾರ್ ಹಿರಾನಿ. ಹಿರಾನಿ ಸದ್ಯಕ್ಕಂತೂ ಬಾಲಿವುಡ್ ನಲ್ಲಿ ಪಕ್ಕ ‘ಹೀರಾ’ ರೆಂದೇ ಹೇಳಬಹುದು. ತಾನು ನಿರ್ದೇಶನ ಮಾಡಿರುವ ಅಷ್ಟೂ ಚಿತ್ರಗಳು ಸೂಪರ್ ಡೂಪರ್ ಹಿಟ್ ಗಳಾಗಿ ಪ್ರತಿ ಬಾರಿಯೂ ಸೆಂಚೂರಿಯನ್ನು ಬಾರಿಸುತ್ತಿದರೆ ಆತ ಅದ್ಯಾವ ಹೀರೊ ಅಥವಾ ಹೀರೋಯಿನ್ ಗಳಿಗೂ ಕಮ್ಮಿ ಇರುವುದಿಲ್ಲ. ಮೇಲಾಗಿ ಹಿರಾನಿ ಕೇವಲ ನಿರ್ದೇಶನವಲ್ಲದೆ ಕಥೆ, ಚಿತ್ರಕತೆ, ಎಡಿಟಿಂಗ್ ಹಾಗು ಪ್ರೊಡಕ್ಷನ್ ಗಳಲ್ಲೂ ತಮ್ಮ ಕೈಯಾಡಿಸಿದವರು. ಇಂತಹ ಒಬ್ಬ ಕಲಾಸಾಮ್ರಾಟ್ ಬರೆದು, ನಿರ್ದೇಶಿಸಿ ನಿರ್ಮಿಸಿರುವ ಚಿತ್ರವೊಂದು ಬರುತ್ತಿದೆ ಎಂದರೆ ಸಿನಿಪ್ರಿಯರ ಹಪಾಹಪಿ ಹೆಚ್ಚಾಗದೇ ಇರದು. ಇದು ಅತಿ ಸಹಜವಾದ ವಿಷಯ. ಆದರೆ ಈ ಬಾರಿ ಸಂಜು ಚಿತ್ರ ಇನ್ನೂ ಹೆಚ್ಚಿನ ಗುಲ್ಲೆಬ್ಬಿಸಲು ಇರುವ ಕಾರಣ ಬೇರೆಯೇ ಇದೆ. ಅದು ಸರಿಸುಮಾರು ಇಪ್ಪತ್ತೈದು ವರ್ಷಗಳ ಕಾಲ ಪ್ರತಿ ದಿನ ಒಂದಿಲ್ಲೊಂದು ಬಗೆಯಲ್ಲಿ ಸುದ್ದಿಯಾಗುತ್ತಿದ್ದ ಸುದ್ದಿಯೊಂದರಿಂದ ಹಾಗು ಆ ಸುದ್ದಿಯ ಕೇಂದ್ರಬಿಂದುವಾದ ವ್ಯಕ್ತಿಯೊಬ್ಬನಿಂದ. ಸಂಜಯ್ ದತ್ತ್. ದೇಶದಲ್ಲಿ ಇಂದು ಸಿನಿಮಾಗಳನ್ನು ನೋಡದಿರದ ಮಂದಿ ಕೇವಲ ಬೆರಳಣಿಕೆಯಷ್ಟಿರಬಹುದು. ಅಂತಹ ಬೆರಳೆಣಿಕೆಯ ಮಂದಿಗೂ ಈ ಒಂದು ಹೆಸರು ಚಿರಪರಿಚಿತ! ನಟನಾಗಿ, ನಾಯಕನಾಗಿ ಅನ್ನುವುದಕ್ಕಿಂತ ಹೆಚ್ಚಾಗಿ 1993 ರ ಮುಂಬೈ ಸರಣಿ ಬಾಂಬಿನ ವಿಚಾರಣೆಯ ಸಲುವಾಗಿ. 50% ನಷ್ಟು ಚಿತ್ರ ಆತನ ಆತ್ಮಕತೆಯಾದರೆ ಉಳಿದರ್ದ ಭಾಗ ಚಿತ್ರದ ಕಲ್ಪಿತ ಚಿತ್ರಕತೆಯೆಂದೇ ಹೇಳಬಹುದು! ಚಿತ್ರವನ್ನು ಚಿತ್ರಗಳಾಗಿಯೇ ನೋಡಬಯಸುವವರಿಗೆ ಸಿಗುವ ಮತ್ತೊಂದು ರೋಮಾಂಚನಕಾರಿ ವ್ಯಕ್ತಿ ರಣಬೀರ್ ಕಪೂರ್. ನಟನೆಯಲ್ಲೇನಾದರೂ ಭಾರತಕ್ಕೆ ಆಸ್ಕರ್ ತಂದುಕೊಡಬಲ್ಲ ನಟರಿದ್ದಾರೆಂದರೆ ಆದರಲ್ಲಿ ರಣಬೀರ್ ಕಪೂರ್ನ ಹೆಸರು ಇರದಿರಲು ಸಾಧ್ಯವೇ ಇಲ್ಲ.. ಸಂಜಯ್ ದತ್ತ್ ನ ಪಾತ್ರವನ್ನು ಕಣ್ಣಿಗೆ ಕಟ್ಟುವಂತೆ ನಿಭಾಯಿಸಿ ಈ ಮಾತಿಗೆ ಮತ್ತಷ್ಟು ಪುಷ್ಟಿಕೊಟ್ಟಿದ್ದಾನೆ ಚಿತ್ರದಲ್ಲಿ. ಈ ಎಲ್ಲ ಕಾರಣಗಳಿಂದ ಚಿತ್ರ ತೆರೆಯ ಮೇಲೆ ದೂಳೆಬ್ಬಿಸುತ್ತಿದೆ. ನೋಡುಗರನ್ನು ಎರಡೂವರೆ ಘಂಟೆಗಳ ಕಾಲ ರಂಜಿಸುತ್ತಿದೆ. ಆದರೆ ಚಿತ್ರಕತೆಯ ಸತ್ಯಾಸತ್ಯತೆಯನ್ನು ಅರಿಯಬಯಸುವವರಿಗೆ, ಹಿಂದಿನ ಇತಿಹಾಸವನ್ನು ಅರೆಬರೆ ಮರೆತಿರುವವರಿಗೆ ಎರಡೂವರೆ ದಶಕಗಳ ವಿದ್ಯಮಾನಗಳನ್ನು ಕೇವಲ ಎರಡೂವರೆ ಘಂಟೆಯಷ್ಟೇ ನೋಡಿ ಇದು ಸರಿ ಅದು ತಪ್ಪೆಂದು ಖಡಾಖಂಡಿತವಾಗಿ ನಿರ್ಧರಿಸುವುದು ದುಡುಕುತನವಾದೀತು. ಚಿತ್ರ ಮಾಡಿದ್ದು ನಿಜವನ್ನು ಬಿಚ್ಚಿಡಲೋ ಅಥವಾ ಮುಖ್ಯವಾದ ಸಂಗತಿಯನ್ನು ಮುಚ್ಚಿಡಲೋ ಎಂಬೊಂದು ಪ್ರಶ್ನೆ ಮಾತ್ರ ಚಿತ್ರಮಂದಿರದಿಂದ ಹೊರಬರುವ ಒಂದಿಷ್ಟು ಮಂದಿಗಂತೂ ಕಾಡದಿರದು! ಮತ್ತಷ್ಟು ಓದು »

6
ಜುಲೈ

ಅಂಬೇಡ್ಕರ್ ಅವರಿಗೂ ಬೇಡವಾಗಿತ್ತು ಆರ್ಟಿಕಲ್ 370

– ರಾಕೇಶ್ ಶೆಟ್ಟಿ

“ಮಿ.ಅಬ್ದುಲ್ಲಾ, ಭಾರತ ಕಾಶ್ಮೀರವನ್ನು ರಕ್ಷಿಸಬೇಕು, ಅಭಿವೃದ್ಧಿಗೊಳಿಸಬೇಕು ಮತ್ತು ಕಶ್ಮೀರಿಗಳಿಗೆ ಭಾರತದ ಇತರ ಪ್ರಜೆಗಳಂತೆಯೇ ಸಮಾನ ಹಕ್ಕುಗಳಿರಬೇಕೆಂದು ನೀವು ಬಯಸುತ್ತೀರ. ಆದರೆ, ಭಾರತ ಮತ್ತು ಭಾರತೀಯರಿಗೆ ಕಾಶ್ಮೀರ ರಾಜ್ಯದಲ್ಲಿ ಯಾವುದೇ ಹಕ್ಕುಗಳು ಇರಬಾರದು ಎನ್ನುತ್ತೀರ. ನಾನು ಭಾರತದ ಕಾನೂನು ಮಂತ್ರಿ, ನನ್ನ ದೇಶದ ಹಿತಾಸಕ್ತಿಯನ್ನು ನಾನು ಕಡೆಗಣಿಸಲಾರೆ… “, ಆರ್ಟಿಕಲ್ 370ರನ್ನು ಸಂವಿಧಾನದಲ್ಲಿ ಸೇರಿಸಿ ಜಮ್ಮು ಕಾಶ್ಮೀರದಲ್ಲಿ ಜಾರಿಗೊಳಿಸುವ ವಿಷಯದಲ್ಲಿ ಅಂಬೇಡ್ಕರ್ ಅವರನ್ನು ಒಪ್ಪಿಸಲು ನೆಹರೂ ಸಲಹೆ ಮೇರೆಗೆ ಬಂದಿದ್ದ ಶೇಖ್ ಅಬ್ದುಲ್ಲಾನ ಮುಖಕ್ಕೆ ಹೊಡೆದಂತೆ ಡಾ.ಅಂಬೇಡ್ಕರ್ ಅವರು ಹೇಳಿ ಕಳುಹಿಸಿದ್ದು ಹೀಗೆ. ಖುದ್ಧು  ಸಂವಿಧಾನ  ಶಿಲ್ಪಿಯೇ ವಿರೋಧಿಸಿದ್ದ ಈ ಆರ್ಟಿಕಲ್ 370ಯನ್ನು ಅಂದು ಅವರ ಬಾಯಿ  ಮುಚ್ಚಿಸಲು  “ತಾತ್ಕಾಲಿಕ” ಎಂಬ ಪದ ಬಳಸಲಾಯಿತು. ಹೆಂಡ ಕುಡಿದ ಮರ್ಕಟದಂತಾಡುತ್ತಿದ್ದ  ನೆಹರೂ  ಸಾಹೇಬರು, ತಮ್ಮ ಬಾಲವನ್ನು ಶೇಖ್ ಅಬ್ದುಲ್ಲಾನ ಕೈಗೆ ಇಟ್ಟಾಗಿತ್ತು. ಆರ್ಟಿಕಲ್  370  ಜಾರಿಯಾಗುತ್ತಿದಂತೆ ಹಿಂಬಾಗಿಲ ಮೂಲಕ ಅದಕ್ಕಿಂತಲೂ ಘೋರವಾದ ವಿಧಿ 35A ಅನ್ನು  ಜಮ್ಮು ಕಾಶ್ಮೀರಕ್ಕೆ ಅನ್ವಯಿಸಲಾಯಿತು. ಅಂದು ಅಂಬೇಡ್ಕರ್ ಅವರು ವಿರೋಧಿಸಿದ್ದ ಆರ್ಟಿಕಲ್ 370 ರದ್ಧತಿ ಬಗ್ಗೆ ಮಾತನಾಡುತ್ತಿರುವುದು ಕೇವಲ ಬಿಜೆಪಿ ಮಾತ್ರವೇ. ಹಾಗೂ ಇದನ್ನು ವಿರೋಧಿಸುವವರು ಕಾಂಗ್ರೆಸ್ ಇತ್ಯಾದಿ ಸೆಕ್ಯುಲರ್ ಪಕ್ಷಗಳು ಹಾಗೂ ಸೋ-ಕಾಲ್ಡ್ ಸಂವಿಧಾನ ರಕ್ಷಕರು…! ಮತ್ತಷ್ಟು ಓದು »

3
ಜುಲೈ

ಜನ್ಮಾಷ್ಟಮಿಗೂ ಇಮಾಮ್ ಸಾಹೇಬ್ರಿಗೂ ಏನು ಸಂಬಂಧ ಎಂದು ಕೇಳುತ್ತಿರಾ?? ಖಂಡಿತಾ ಸಂಬಂಧ ಇದೆ..!!

– ಅಜಿತ್ ಶೆಟ್ಟಿ ಹೆರಾಂಜೆ

ಹೌದು ಉಡುಪಿಯ ಮಟ್ಟಿಗೆ ಜನ್ಮಾಷ್ಟಮಿಗೂ ಇಮಾಮ್ ಸಾಹೇಬ್ರಿಗೂ ಖಂಡಿತಾ ಸಂಬಂಧ ಇದೆ. ದುರಂತ ಅಂದ್ರೆ ಈ ಸಂಬಂಧದ ಬಗ್ಗೆ ನಮಗೆ ಯಾರೂ ಎಂದೂ ಹೆಳಿದವರೇ ಇಲ್ಲ. ಶಾಲಾ ಕಾಲೇಜುಗಳಲ್ಲಿ ನಮ್ಮ ಯಾವುದೇ ಶಿಕ್ಷಕರು ಈ ಸಂಬಂಧದ ಬಗ್ಗೆ ಪಾಠ ಮಾಡಲಿಲ್ಲ. ನಮಗೆ ಗಾಂಧಿ ಗೊತ್ತಿತ್ತು, ನಮಗೆ ಬುದ್ದ ಗೊತ್ತಿತ್ತು, ನಮಗೆ ಅಕ್ಬರ್ ಗೊತ್ತಿತ್ತು, ನಮಗೆ ಮುಸೊಲಿನಿ, ಹಿಟ್ಲರ್ ಚಗುವೇರ ಗೊತ್ತಿತ್ತು. ಆದ್ರೆ ನಮ್ಮೂರಿನ ಮಹಾತ್ಮರ ಬಗ್ಗೆ ಗೊತ್ತೇ ಇಲ್ಲ. ಅವರು ನಮ್ಮ ಸಮಾಜವನ್ನು ಕಟ್ಟಲು ತಮ್ಮ ಇಡಿ ಜೀವಮಾನದ ಗಳಿಕೆಯನ್ನೆಲ್ಲವೂ ಸಮಾಜದ ಉದ್ದಾರಕ್ಕಾಗಿ ನೀರಿನಂತೆ ಹರಿಸಿ, ತಮ್ಮ ಇಡಿ ಜೀವನವನ್ನು ಸಮಾಜಕ್ಕಾಗಿ ತೇದಿ ಸವೆದು ಸದ್ದಿಲ್ಲದೆ ಮರೆಯಾದವರು. ಅವರಿಗೆ ಯಾವುದೇ ಪ್ರಚಾರದ ಹಂಗಿರಲಿಲ್ಲ, ಅವರಿಗೆ ತಮ್ಮ ಸಮಾಜದ ಬಗೆಗಿನ ತಾವು ನಿಭಾಯಿಸಬೇಕಿದ್ದ ಕರ್ತವ್ಯಗಳ ಅರಿವಿತ್ತು, ಸಮಸ್ಯೆಗಳು ಬಂದಾಗ ಅದನ್ನ ಸರ್ಕಾರ ಅಥವಾ ಇನ್ಯಾರೋ ಪರಿಹರಿಸಲಿ ಎಂದು ಯಾವತ್ತೂ ಕಾದವರಲ್ಲ. ಅವರು ಸ್ವತಃ ತಾವೇ ಅಂತಹಾ ಸಮಸ್ಯೆಗಳಿಗೆ ಎದೆಯೊಡ್ಡಿ ನಿಂತು ಪರಿಹರಿಸಿದವರು. ಆಗ ಅವರ ಕಣ್ಣಲ್ಲಿ ಜಾತಿ, ಮತ ,ಪಂತ, ಪಂಗಡ, ಇವ ನಮ್ಮವ ಇವ ಬೇರೆಯವನು ಎಂಬುವ ಯಾವುದೆ ಬೇಧ ಭಾವ ಇರಲಿಲ್ಲ. ಅವ್ರಲ್ಲಿ ಇದ್ದದ್ದು ಸಮಾಜದಲ್ಲಿ ತಾನು ಮಾಡಬೇಕಾಗಿದ್ದ ಕೆಲಸಗಳ ಬಗ್ಗೆ ಇದ್ದ ತುಡಿತ ಮಾತ್ರ. ಅಂತಹ ಅದೆಷ್ಟೋ ಗಣ್ಯರು ಕಾಲದ ಪುಟಗಳಲ್ಲಿ ಮರೆಯಾಗಿ ಹೋದರು. ಅವರನ್ನ ಅವರ ಸಾಧನೆಗಳನ್ನ ಮುಂದಿನ ತಲೆಮಾರಿಗೆ ಪರಿಚಯಿಸುವ ಹೊಣೆ ಹೊತ್ತ ಸರ್ಕಾರಗಳು ಇಂತವರ ಪರಿಚಯನ್ನು ಯಾವತ್ತೂ ಮುಂದಿನ ಪೀಳಿಗೆಗೆ ಮಾಡಲೇ ಇಲ್ಲ. ಅದಿರಲಿ ಸಮಾಜವೂ ಅಂತವರನ್ನ ಮರೆತಿತು. ಇಂತಹಾ ಅನೇಕ ಮರೆತುಹೋದ ಮಹಾನುಭಾವರಲ್ಲಿ ಉಡುಪಿಯ ಖಾನ ಬಹದ್ದೂರ್ ಹಾಜಿ ಅಬ್ದುಲ್ಲಾ ಹಾಜಿ ಕಾಸಿಮ್ ಸಾಹೇಬ್ ಬಹದ್ದೂರ್ ಕೂಡ ಒಬ್ಬರು. ಚಿಕ್ಕದಾಗಿ‌ ಹೇಳೋದಾದರೆ ಹಾಜಿ ಅಬ್ದುಲ್ಲಾ ಸಾಹೇಬರು . ಹಾಜಿ ಅಬ್ದುಲ್ಲಾ ಸಾಹೆಬರು !! ? ಯಾರೀತ?? ಮತ್ತಷ್ಟು ಓದು »

19
ಜೂನ್

ಮತಾಂಧರ ಮುಂದೆ ಸಧ್ಭಾವನೆಯ ಕನಸೇ?

-ರಾಕೇಶ್ ಶೆಟ್ಟಿ

images (1)ದಿನಾ ಸಾಯೋರಿಗೆ ಅಳೋರು ಯಾರು ಅನ್ನೋ ಗಾದೆ ಜಮ್ಮುಕಾಶ್ಮೀರ ರಾಜ್ಯದ ದಿನನಿತ್ಯದ ಹಿಂಸಾಚಾರಕ್ಕೆ ಹೇಳಿ ಮಾಡಿಸಿದಂತಿದೆ. ಆದರೆ ಈ ಗಾದೆಗೆ ಅಪವಾದವೆಂಬಂತೆ ಉಗ್ರರು, ಉಗ್ರರ ಸಿಂಪಥೈಸರ್ ಗಳು ಸತ್ತಾಗ ಅಳಲಿಕ್ಕೆ ದೇಶದಾದ್ಯಂತ ಗಂಜಿಗಿರಾಕಿಗಳು, ಸೆಕ್ಯುಲರ್ ಮಾಧ್ಯಮಗಳು ತಯಾರಾಗುತ್ತವೆ. ಆದರೆ ಕಣಿವೆಯಲ್ಲಿ ಪಾಕಿಗಳು ಗಡಿಯಾಚೆಯಿಂದ ನಡೆಸುವ ಅಪ್ರಚೋದಿತ ಗುಂಡಿನ ದಾಳಿಗೆ, ಉಗ್ರರ ದಾಳಿಗೆ ಬಲಿಯಾಗುವ ಭಾರತೀಯ ಯೋಧರಿಗೆ ಮಾತ್ರ ಈ ಭಾಗ್ಯವಿಲ್ಲ. ಇವರ ಸಾವಿನ ಸುದ್ದಿಗಳು ದಿನಪತ್ರಿಕೆಗಳಲ್ಲಿ ಕಾರ್ನರ್ ಸುದ್ದಿಯಾಗಿರುತ್ತದೆ. ಓದುವ ಜನರಿಗೂ ಇದೆಲ್ಲಾ ಅಲ್ಲಿ ಮಾಮೂಲು ಎನಿಸಿಬಿಡುತ್ತದೆ. ಆದರೆ, ಭುಜದೆತ್ತರಕ್ಕೆ ಬೆಳೆದು ನಿಂತ ಮಗನನ್ನು ಕಳೆದುಕೊಂಡ ಹೆತ್ತವರಿಗಷ್ಟೇ ಆ ನೋವಿನ ತೀವ್ರತೆ ತಟ್ಟುವುದು. ಅದೇ ನೋವಿನಲ್ಲಿ ಮಾತನಾಡಿದವರು ಹುತಾತ್ಮ ಯೋಧ ಔರಂಗಜೇಬ್ ತಂದೆ. ದೇಶಕ್ಕಾಗಿ ಪ್ರಾಣ ಕೊಡುತ್ತೇನೆಂದಿದ್ದ ನನ್ನ ಮಗ ತನ್ನ ಮಾತನ್ನು ಉಳಿಸಿಕೊಂಡಿದ್ದಾನೆ, ಅವನ ಸಾವಿಗೆ ತಕ್ಕ ಉತ್ತರವನ್ನು 72 ಗಂಟೆಗಳೊಳಗೇ ನೀಡಿ ಎಂದು ಪ್ರಧಾನಿ ಮೋದಿಯವರನ್ನು ಅವರು ಆಗ್ರಹಿಸಿದ್ದಾರೆ. ಮೊನ್ನೆ ರಂಜಾನ್ ಹಬ್ಬಕ್ಕೆಂದು ರಜೆಯಲ್ಲಿ ಮನೆಗೆ ತೆರಳುತ್ತಿದ್ದ ಯೋಧ ಔರಂಗಜೇಬ್ ರನ್ನು ಅಪಹರಿಸಿದ ಉಗ್ರಗ್ರಾಮಿಗಳು ತಲೆ, ಕತ್ತಿನ ಭಾಗಕ್ಕೆ ಗುಂಡಿಟ್ಟು ಕೊಂದಿದ್ದಾರೆ. ಅದೇ ದಿನ ರೈಸಿಂಗ್ ಕಾಶ್ಮೀರ್ ಎಂಬ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಮತ್ತವರ ಖಾಸಗಿ ಅಂಗರಕ್ಷಕರನ್ನು ಉಗ್ರರು ಕೊಂದಿದ್ದಾರೆ. ಇವೆಲ್ಲಾ ಕೇಂದ್ರ ಸರ್ಕಾರದ ತಲೆಕೆಟ್ಟ ನಿರ್ಧಾರವಾಗಿದ್ದ ಪವಿತ್ರ ತಿಂಗಳಲ್ಲಿ ಭದ್ರತಾಪಡೆಗಳ ಮೇಲೆ ಏಕಪಕ್ಷೀಯ ಕದನವಿರಾಮ ಹೇರಿಕೆಯ ಫಲ. ಮತ್ತಷ್ಟು ಓದು »

13
ಜೂನ್

ಭಾರತದ ನಾಯಕರ ಹತ್ಯೆಯ ಹಿಂದಿನ ಕಾಣದ ಕೈಗಳು

– ರಾಕೇಶ್ ಶೆಟ್ಟಿ

ಆ ಮನುಷ್ಯ ಮನಸ್ಸು ಮಾಡಿದ್ದರೆ, ಬ್ರಿಟಿಷ್ ಸರ್ಕಾರದಲ್ಲಿ ‘ಐ.ಸಿ.ಎಸ್’ ಅಧಿಕಾರಿಯಾಗಿ ನೆಮ್ಮದಿಯ ಬದುಕು ಬದುಕಬಹುದಿತ್ತು, ಆದರೆ ಚಿನ್ನದ ಮೊಟ್ಟೆಯಿಡುವ ಐ.ಸಿ.ಎಸ್ ಅನ್ನು ಎಡಗಾಲಲ್ಲಿ ಒದ್ದು, ಸರ್ಕಾರಿ ಪದವಿ ನಿರಾಕರಿಸಿ ಇಂಗ್ಲೆಂಡ್ನಿಂದ ಸೀದಾ ಭಾರತಕ್ಕೆ ಬಂದ ಸುಭಾಷ್ ರವರು ಮೊದಲಿಗೆ ಕಾಂಗ್ರೆಸ್ ಪಕ್ಷ ಸೇರಿಕೊಂಡರು. ತಮ್ಮ ಸಾಮರ್ಥ್ಯದಿಂದಲೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೂ ಏರಿದ್ದರು. ಆಗಲಾದರೂ ಅವರು ಸುಮ್ಮನೇ ಇದ್ದಿದ್ದರೂ ಸ್ವತಂತ್ರ ಭಾರತದಲ್ಲಿ ಯಾವುದಾದರೊಂದು ಸಚಿವ ಸ್ಥಾನ ಪಡೆದು ಇರುತ್ತಿದ್ದರೋ ಏನೋ. ಆದರೆ ಹುಟ್ಟಾ ಸ್ವಾಭಿಮಾನಿ ಮತ್ತು ಹೋರಾಟಗಾರರಾಗಿದ್ದ ನೇತಾಜಿಯವರು ಕಾಂಗ್ರೆಸ್ಸನ್ನೇ ಬದಲಿಸ ಹೊರಟರು. ಈಗ ಕಾಂಗ್ರೆಸ್ ಎಂಬ ಪುರಾತನ ಪಕ್ಷ ಹೇಗೆ ನೆಹರೂ ಮನೆತನದ ಅಡಿಯಾಳಾಗಿದೆಯೋ, ಆಗ ಗಾಂಧೀಜಿಯವರ ಕೈಯಲ್ಲೇ ಇತ್ತು. ಅದನ್ನು ಧಿಕ್ಕರಿಸಿ ನಿಂತ ಸುಭಾಷರನ್ನು ಗಾಂಧೀ ಬೆಂಬಲಿಗರು ಬಿಟ್ಟಾರೇನು? ಬೆಂಬಲಿಗರು ಬಿಟ್ಟರೂ, ಗಾಂಧೀಜಿ ಪಕ್ಷದ ಮೇಲಿನ ತನ್ನ ಪಾರುಪತ್ತೇದಾರಿಕೆಯನ್ನು ಬಿಡಲು ಸಿದ್ಧರಿದ್ದರಿರಲಿಲ್ಲ. ಹಾಗೆಯೇ, ಭಾರತದ ಸ್ವಾತಂತ್ರ್ಯವೊಂದೇ ಅಂತಿಮ ಗಮ್ಯವಾಗಿದ್ದ ಸುಭಾಷರಿಗೆ ಗಾಂಧೀಜಿಯವರ ಚಿಲ್ಲರೆ ರಾಜಕೀಯದ ಜಂಜಾಟಗಳು ಬೇಕಿರಲಿಲ್ಲ. ಕಾಂಗ್ರೆಸ್ಸಿನಿಂದ ಹೊರ ಬಂದ ಅವರು ಫಾರ್ವರ್ಡ್ ಬ್ಲಾಕ್ ಸ್ಥಾಪಿಸಿದರು. ಬ್ರಿಟಿಷರಿಗೆ ಸುಭಾಷ್ Potential Threat ಎನ್ನುವುದು ಅರಿವಾಗಿತ್ತು. ಅವರನ್ನು ಗೃಹಬಂಧನದಲ್ಲಿರಿಸಿದ್ದರು, ಈ ಪುಣ್ಯಾತ್ಮ ಅಲ್ಲಿಂದ ತಪ್ಪಿಸಿಕೊಂಡರು. ನಂತರದ್ದು ಭಾರತ ಸ್ವಾತಂತ್ರ್ಯ ಇತಿಹಾಸದ ರೋಚಕ ಅಧ್ಯಾಯ, ಬರಿಗೈಯಲ್ಲಿ ದೇಶಬಿಟ್ಟ ಸುಭಾಷ್, ೪೫ ಸಾವಿರ ಜನರ ಆಜಾದ್ ಹಿಂದ್ ಫೌಜ್ ಸ್ಥಾಪಿಸಿ ಬ್ರಿಟಿಷರ ನಿದ್ದೆಗೆಡಿಸಿದ್ದರು. ಎರಡನೇ ವಿಶ್ವ ಯುದ್ಧದಲ್ಲಿ ಜಪಾನ್ ಜೊತೆ ಸೇರಿಕೊಂಡು ೪೪ರಲ್ಲೇ ಅಂಡಮಾನ್-ನಿಕೋಬಾರ್ ದ್ವೀಪಗಳನ್ನು ಬ್ರಿಟಿಷರಿಂದ ಮುಕ್ತಿಗೊಳಿಸಿದರು, ಅಂತಿಮವಾಗಿ ಜಪಾನ್ ಹಾಗೂ ಆಜಾದ್ ಹಿಂದ್ ಫೌಜಿಗೆ ಈಶಾನ್ಯ ಭಾರತದಲ್ಲಿ ಹಿನ್ನಡೆಯಾಯಿತಾದರೂ, ಸುಭಾಷರು ಹೊತ್ತಿಸಿದ್ದ ಕ್ರಾಂತಿಯ ಕಿಡಿ ಸರ್ವವ್ಯಾಪಿಯಾಗಿತ್ತು. ಆಜಾದ್ ಹಿಂದ್ ಫೌಜಿನ ರುದ್ರನರ್ತನ ಬ್ರಿಟಿಷ್ ಭಾರತೀಯ ಆರ್ಮಿಯನ್ನು ಆವರಿಸಿಕೊಂಡಿತ್ತು. ಅದೇ ಸಮಯಕ್ಕೆ ಸರಿಯಾಗಿ ಅತ್ತ ಜಪಾನ್ ಶರಣಾಗಾತಿಯಾಗುವುದರಲ್ಲಿತ್ತು, ಇತ್ತ ಬ್ರಿಟಿಷರಿಗೆ ಭಾರತದಲ್ಲಿ ಉಳಿಗಾಲವಿರಲಿಲ್ಲವಾಗಿತ್ತು, ಆಗಲೇ ಶುರುವಾಗಿದ್ದು ಸುಭಾಷರ ನಿಗೂಢ ವಿಮಾನಾಪಘಾತದ ಕತೆ. ಅಪಘಾತದಲ್ಲಿ ಸುಭಾಷರು ಅಸುನೀಗಿದರು ಎನ್ನುವುದನ್ನು ಯಾರೆಂದರೇ ಯಾರೂ ನಂಬುವ ಸ್ಥಿತಿಯಲ್ಲಿರಲಿಲ್ಲ. ಅಮೇರಿಕನ್/ಬ್ರಿಟಿಷ್ ಗುಪ್ತಚರರು ವರ್ಷಗಟ್ಟಲೆ ಸುಭಾಷರ ಇರುವಿಕೆಯ ಪತ್ತೆ ಹಚ್ಚಲೆಂದೇ ಹಿಂದೆ ಬಿದ್ದಿದ್ದರು. ಇತ್ತ ಭಾರತದಲ್ಲಿ ಬ್ರಿಟಿಷರ ಹೈಫೈ ಆತಿಥ್ಯದ ಜೈಲಿನಲ್ಲಿದ್ದುಕೊಂಡೇ ಆಜಾದ್ ಹಿಂದ್ ಫೌಜಿನವರು ಭಾರತಕ್ಕೆ ಬಂದರೆ ಕತ್ತಿ ಹಿಡಿದು ಹೋರಾಡುತ್ತೇನೆಂದಿದ್ದ ಕಠಾರಿ ವೀರ ನೆಹರೂ ಸಾಹೇಬರಿಗೆ, ಸುಭಾಷ್ ವಾಪಸ್ ಬಂದರೆ ತನ್ನ ಖುರ್ಚಿಯ ಗತಿಯೇನು ಎಂದು ಚಿಂತೆ ಹತ್ತಿತ್ತು. ಅದೇ ಕಾರಣಕ್ಕೆ, ಬ್ರಿಟನ್ ಪ್ರಧಾನಿ ಆಟ್ಲಿಯವರಿಗೆ ಬರೆದ ಪತ್ರದಲ್ಲಿ, ನಿಮ್ಮ ಯುದ್ಧ ಖೈದಿ ಸುಭಾಷ್ ಗೆ ರಷ್ಯಾ ಆಶ್ರಯ ಕೊಟ್ಟಿದೆ ಎಂದು ಚಿಲ್ಲರೆ ದೂರು ನೀಡಿದ್ದರು. ಅಂದು ತೈಪೆಯಲ್ಲಿ ಯಾವುದೇ ವಿಮಾನ ಹಾರಾಟ ನಡೆದಿಲ್ಲವೆನ್ನುವುದು ಈಗ ಅಧಿಕೃತವಾಗಿದೆ. ವಿಮಾನವೇ ಹಾರದೇ, ಅಪಘಾತವಾಗಿದ್ದು ಎಲ್ಲಿಂದ? ಅಪಘಾತವೇ ನಡೆಯದಿದ್ದ ಮೇಲೆ ಸುಭಾಷರು ಹೋದರೆಲ್ಲಿ? ಹಾಗೆ ನಾಪತ್ತೆಯಾದವರನ್ನು ಹುಡುಕಿ ಕೊಲ್ಲಲಾಯಿತೇ? ಈ ನಿಗೂಢತೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಸ್ವತಂತ್ರ ಭಾರತದ ಮೊದಲ ನಿಗೂಢ ರಾಜಕೀಯ ಕಣ್ಮರೆ/ಹತ್ಯೆಯ ಸಾಲಿಗೆ ಸೇರುವುದು ಸುಭಾಷರ ಹೆಸರು. ಸುಭಾಷರು ಮಾಡಿದ ತಪ್ಪೆಂದರೆ ಸ್ವತಂತ್ರ-ಸ್ವಾಭಿಮಾನಿ-ಸಶಕ್ತ ಭಾರತದ ಕನಸು ಕಂಡಿದ್ದು. ಸುಭಾಷರಿಂದ ಶುರುವಾದ ಈ ನಿಗೂಢ ರಾಜಕೀಯ ಹತ್ಯೆ/ಕಣ್ಮರೆಯ ಸರಣಿ ಸ್ವತಂತ್ರ ಭಾರತದಲ್ಲೂ ಮುಂದುವರೆಯುತ್ತಲೇ ಹೋಯಿತು. ಮತ್ತಷ್ಟು ಓದು »

29
ಮೇ

ಪುಕಾರೋ ದಿಲೇ ಸೇ , ನಮೋ ಫಿರ್ ಸೇ

– ರಾಕೇಶ್ ಶೆಟ್ಟಿ

ರಾಜ್ಯ ವಿಧಾನಸಭೆಯ ಚುನಾವಣೆಯ ನಂತರ ಕಚೇರಿಯಲ್ಲಿ, ನನ್ನ ತಂಡದವರು ಹೀಗೆ ಹರಟೆ ಹೊಡೆಯುತ್ತ ಕುಳಿತಿದ್ದರು. ಮಾತಿನ ಮಧ್ಯೆ, ನೀನು ಯಾವ ಪಕ್ಷಕ್ಕೆ ವೋಟ್ ಹಾಕಿದ್ದು? ಒಬ್ಬಳನ್ನು ಕೇಳಿದರು. ಆಕೆ ಕಾಂಗ್ರೆಸ್ಸಿಗೆ ಎಂದಳಷ್ಟೇ! ಸುತ್ತ ಮುತ್ತಲಿದ್ದವರೆಲ್ಲಾ, OMG!, What? ಅಂತೆಲ್ಲಾ ಉದ್ಗಾರ ತೆಗೆದರು. ಈ ಕಾಲದಲ್ಲೂ ಕಾಂಗ್ರೆಸ್ಸಿಗೆ ಮತ ನೀಡುವ ವಿದ್ಯಾವಂತರಿದ್ದಾರಲ್ಲಪ್ಪ ಎನ್ನುವುದು ಅವರ ಆಶ್ಚರ್ಯಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ಸಿಗೆ ಯಾಕೆ ಮತ ನೀಡಿದೆ ಎಂದು ಕೇಳಿದರೆ,ಮೊದಲಿಗೆ ಅವಳದು ಶುದ್ಧ ಕಾರ್ಪೊರೇಟ್ ಜಗತ್ತಿನವರ ಡಿಪ್ಲೋಮಾಟಿಕ್ ಉತ್ತರದಂತೆ,ಅವೆಲ್ಲಾ ಟೂ ಪರ್ಸನಲ್ ಯು ನೋ ಎಂದಳು,ನಂತರ ಮುಂದುವರೆದು ನನಗೆ ಮೋದಿಯವರ ವಿರುದ್ಧ ಕಂಪ್ಲೇಂಟುಗಳಿವೆ ಅದಕ್ಕೆ ಎಂದಳು. ಅದೇನು ಕಂಪ್ಲೇಂಟು? ಅಂತ ಕೇಳಿದರೆ ಉತ್ತರವಿಲ್ಲ.

ಮತ್ತೊಬ್ಬರು ಆಂಧ್ರದವರು.ಫಲಿತಾಂಶದ ದಿನ, ಬಿಜೆಪಿ ಗೆಲ್ಲಬಾರದು ಎನ್ನುತ್ತಿದ್ದರು. ಬಿಜೆಪಿ ಯಾಕೆ ಗೆಲ್ಲಬಾರದು? ಅಂತ ಕೇಳಿದೆ.ನನಗೆ ಮೋದಿ ಕಂಡರೆ ಆಗುವುದಿಲ್ಲ ಎಂದರು.ಯಾಕೆ ಎಂದರೇ ಅವರು ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡದೇ ಮೋಸ ಮಾಡಿದ್ದಾರೆ ಆ ಕಾರಣಕ್ಕೆ ಅವರು ಇಲ್ಲೂ ಗೆಲ್ಲಬಾರದು ಎನ್ನುವ ಉತ್ತರ. ಆಂಧ್ರಕ್ಕೆ ಅವರು ಮೋಸ ಮಾಡಿದ್ದಾರೆ ಅಂತ ನಿನಗೆ ಹೇಗೆ ಗೊತ್ತು? ಎಂದರೆ,ಎಲ್ಲರೂ ಹೇಳುತ್ತಿದ್ದಾರಲ್ಲ ಎನ್ನುವ ಉತ್ತರ.ತಕ್ಷಣವೇ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಕುರಿತು ಅರುಣ್ ಜೈಟ್ಲಿ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಗಮನಕ್ಕೆ ತಂದು ತೋರಿಸಿದೆ. ಯುಪಿಎ ಎಡವಟ್ಟಿನಿಂದ ವಿಭಜನೆಯಾಗಿ ಆರ್ಥಿಕವಾಗಿ ದುರ್ಬಲವಾಗಿರುವ ಆಂಧ್ರಪ್ರದೇಶಕ್ಕೆ ಸಂಪೂರ್ಣ ಹಣಕಾಸಿನ ನೆರವು ನೀಡಲು ಕೇಂದ್ರ ಬದ್ಧವಾಗಿದೆ. ಆದರೆ,ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡುವುದನ್ನು ೧೪ನೇ ಹಣಕಾಸು ಸಮಿತಿ ಕೇವಲ ಈಶಾನ್ಯ ರಾಜ್ಯಗಳಿಗೆ ಮಾತ್ರ ಸೀಮಿತಗೊಳಿಸಿದೆ.ಹಾಗಾಗಿ ಆ ಸ್ಥಾನಮಾನ ನೀಡಲು ಸಾಧ್ಯವಿಲ್ಲ. ವಿಶೇಷ ಸ್ಥಾನಮಾನ ಪಡೆದ ರಾಜ್ಯಕ್ಕೆ ಕೇಂದ್ರದಿಂದ ಶೇ.೯೦ರಷ್ಟು ಅನುದಾನ ಸಿಗುತ್ತದೆ,ಉಳಿದ ರಾಜ್ಯಗಳಿಗೆ ಶೇ. ೬೦ರಷ್ಟು ಸಿಗುತ್ತದೆ.ಆಂಧ್ರಪ್ರದೇಶಕ್ಕೂ ಕೇಂದ್ರದಿಂದ ಶೇ.೯೦ ರಷ್ಟು ಅನುದಾನ ಕೊಡಲು ನಾವು ಬದ್ಧರಿದ್ದೇವೆ ಎಂದಿದ್ದರು. ಒಟ್ಟಾರೆಯಾಗಿ ವಿಶೇಷ ರಾಜ್ಯದ ಸ್ಥಾನಮಾನ ನೀಡಲು ೧೪ನೇ ಹಣಕಾಸು ಆಯೋಗದ ಅಡ್ಡಿಯಿದ್ದರೂ,ಅದಕ್ಕೆ ಸರಿಸಮಾನವಾದ ವಿಶೇಷ ಪ್ಯಾಕೇಜ್ ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿತ್ತು. ನಿಮ್ಮ ಚಂದ್ರಬಾಬು ನಾಯ್ಡು ಅವರೇ ರಾಜಕೀಯ ಲಾಭಕ್ಕಾಗಿ,ಎನ್ಡಿಎ ತೊರೆದು ಈಗ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದೇ.ಎಂತ ಲಾಭ ಎಂದರು? ನಿಮ್ಮ ವೈಎಸಾರ್ ಪಕ್ಷದ ಜಗನ್, ಈ ವಿಶೇಷ ಸ್ಥಾನಮಾನದ ನಿರಾಕರಣೆಯ ಕತೆ ಹೇಳಿಕೊಂಡೇ ಆಡಳಿತ ವಿರೋಧಿ ಅಲೆ ಎಬ್ಬಿಸಿ ಬಿಡುತ್ತಾನೋ ಎಂಬ ಭಯದಿಂದಲೂ ಇದ್ದಿರಬಹುದು ಎಂದೇ. ನಾಯ್ಡು ಅಭಿಮಾನಿಯಾದ ಅವರು ಒಪ್ಪಲು ಸಿದ್ಧರಿರಲಿಲ್ಲ,ಆದರೆ ಕೇಂದ್ರ ಸರ್ಕಾರ ಕೊಡಲು ಸಿದ್ಧವಿತ್ತು,ಆಂಧ್ರವೇ ಪಡೆಯಲಿಲ್ಲ ಎನ್ನುವುದು ಅವರಿಗೆ ಅರ್ಥವಾಗಿತ್ತು. ಮತ್ತಷ್ಟು ಓದು »

29
ಮೇ

ಮಾನಹೀನ ಮಾತುಗಳಿಂದ ಬದುಕಬೇಕಿದೆಯೇ ನಮ್ಮ ಡೆಮಾಕ್ರಸಿ…?

– ಸುಜಿತ್ ಕುಮಾರ್

ಸಣ್ಣವರಿದ್ದಾಗ ಶಿಕ್ಷಕರು ನಮಗೆ ಕಲಿಸಿದ್ದ ಅಮೋಘ ಶಿಕ್ಷಣಗಳಲ್ಲಿ ಸರಿಯೆನಿಸದ್ದಿದ್ದನ್ನು ಪ್ರಶ್ನಿಸುವುದೂ ಒಂದು. ಅದು ‘ಏನಲೇ..!?’ ಎಂದು ಕೊಳಪ್ಪಟ್ಟಿಯನ್ನು ಹಿಡಿದು ಜಾಡಿಸಿ ಕೇಳುವುದಕ್ಕಿಂತ ಮಿಗಿಲಾಗಿ, ಹರಿತವಾದ ಮಾತಿನಿಂದ ಸತ್ಯವೆಂಬ ಹಿಡಿತದೊಂದಿಗೆ ಮುಂದಿರುವವನ ಕಪಟ ವಂಚಕ ಮನಸ್ಥಿತಿಯನ್ನು ಬೆದರುಗೊಳಿಸುವ ಬಗೆಯಾಗಿದ್ದಿತು. ಅರ್ಥಾತ್ ಅವು ವೈಚಾರಿಕ ಬಗೆಯ ನೇರ ಪ್ರಶ್ನೆಗಳಾಗಿದ್ದವು. ಆದರೆ ಅಂದಿನ ಆ ಪಾಠವನ್ನು ಮರೆತ ಬಹುಮಂದಿ ಜನರು ಇಂದು ಕೇಳುವ ಪ್ರಶ್ನೆಗಳು ಏಕವಚನ ಪದಗುಚ್ಛಗಳ ಚಪ್ಪಲಿ ಏಟಿನಂತೆ ಮುಂದಿರುವ ವ್ಯಕ್ತಿಯ ಮಾನಹರಣ ಮಾಡುವ ಅಸ್ತ್ರಗಳಾಗಿವೆ. ಪುಕ್ಕಟೆಯಾಗಿ ಸಿಗುವ ಹೊಲಸು ಪದಗಳ ವಿಶೇಷಣಗಳನ್ನು ಬಳಸಿ ಮುಂದಿರುವವರ ಸ್ಥಾನ ಜೊತೆಗೆ ಮಾನವನ್ನೂ ತಿವಿದು ಹಾಕುವ ಇಂದಿನ ದಿನಗಳಲ್ಲಿ ವಿಷಯಕ್ಕೆ ತಕ್ಕನಾದಂತಹ ನೇರವಾದ ಪ್ರಶ್ನೆಗಳನ್ನೂ ಕೇಳುವವರ ಸಂಖ್ಯೆ ಕ್ಷೀಣಿಸುತ್ತಿದೆ! ಒಂದೋ ಆತ/ಅವಳು ಸಮಾಜದ ಅತಿ ಪ್ರಭಾವಿ ಗುಂಪಿನ ಇಂಪಾರ್ಟೆಂಟ್ ವ್ಯಕ್ತಿಗಳೆನಿಸಿಕೊಂಡಿರಬೇಕು ಅಥವಾ ಯಾರಿಗೂ ಕ್ಯಾರೇ ಎನ್ನದ ಖಡಕ್ ಅಧಿಕಾರಿಗಳಾಗಿರಬೇಕು. ಅಂತವರಿಗಷ್ಟೇ ಇಂದು ಪ್ರಶ್ನೆಗಳನ್ನು ಕೇಳುವ ‘ಅಧಿಕಾರ’  ಹಾಗು ‘ಧೈರ್ಯ’ ಸೀಮಿತವಾಗುತ್ತಿದೆ ಎಂದರೆ ಸುಳ್ಳಾಗದು. ಸಾಮಾನ್ಯನೊಬ್ಬನಿಗೆ ಇಂದು ಪ್ರಶ್ನಿಸುವ ಧೈರ್ಯವನ್ನು ತುಂಬುವ ಸಮಾಜವೇ ಇಲ್ಲವಾದರೆ ವಿಧ್ಯಾವಂತರಾಗಿಯೂ ಕುರಿಗಳು ಸಾರ್ ಕುರಿಗಳು ಎಂಬಂತೆ ಪ್ರಶ್ನಿಸುವ ನರಗಳನ್ನೇ ಕಳೆದುಕೊಂಡು ಒಬ್ಬರ ಬಾಲವನ್ನು ಇನ್ನೊಬ್ಬರು ಮೂಸುತ್ತಾ ಸಾಗುವ ಪಯಣ ಇದಾದಿತು. ಪೀಠಿಕೆ ಇಷ್ಟಿರಲಿ. ಈಗ ವಿಷಯಕ್ಕೆ ಬರೋಣ. ಅದಕ್ಕೂ ಮೊದಲು ಒಂದೆರೆಡು ನೇರ ನುಡಿ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ಪಕ್ಷ, ಜಾತಿ, ಪಂಥ ಎಂಬ ಯಾವುದೇ ಬಗೆಯ ತುರಿಕೆಗಳಾಗಲಿ, ಖಾಯಿಲೆಯಗಳಾಗಲೀ ಅಂಟಿಕೊಂಡಿಲ್ಲ. ಭಾರತೀಯರಾಗಿ ಅದಕ್ಕಿಂತಲೂ ಹೆಚ್ಚಾಗಿ ಸ್ವಸ್ಥ ಮಾನವರಾಗಿ ಕೇಳಲೇ ಬೇಕಾದ ಪ್ರಶ್ನೆಗಳಿವು. ಮುಂದಿರುವ ಇನ್ನೊಬ್ಬರಿಗಲ್ಲದಿದ್ದರೂ ತಮಗೆ ತಾವೇ ಚುಚ್ಚಿಕೊಳ್ಳಬೇಕಾದದ ಸೂಜಿಗಳಿವು! ಮತ್ತಷ್ಟು ಓದು »

14
ಮೇ

ದಲಿತರನ್ನು ಇತರರಿಂದ ದೂರವಿಡಲು ನಡೆಸುತ್ತಿರುವ ಹುನ್ನಾರ ಇನ್ನೆಷ್ಟು ದಿನ ಮುಂದುವರೆಯುವುದು?

– ಶಿವಾನಂದ ಸೈದಾಪೂರ
ಪಿ.ಜಿ ಡಿಪ್ಲೊಮಾ ಇನ್ ಅಂಬೇಡ್ಕರ್ ಸ್ಟಡಿಸ್
ಆರ್. ಸಿ. ಯು ಬೆಳಗಾವಿ.

ಈಗಲೇ ಎರಡು ದಿನಗಳಲ್ಲಿ ನಡೆದ ಘಟನೆಗಳು; ನೂರಕ್ಕೆ ನೂರರಷ್ಟು ಮತದಾನದ ಜಾಗೃತಿಗಾಗಿ ಊರೂರುಗಳಿಗೆ ಸಂಪರ್ಕ ಮಾಡುತ್ತಿರುವ ಹೊತ್ತಲ್ಲಿ ಆದ ಸ್ವಂತ ಅನುಭವ. ದಲಿತರ ಓಣಿಗಳನ್ನು ಪ್ರವೇಶಿಸುವಾಗ ನಡೆದಂತದ್ದವುಗಳು.

ಘಟನೆ ೧ : ಓಣಿಯ ಪ್ರವೇಶಕ್ಕೂ ಮೊದಲು ಗಮನಿಸಿದಾಗ ಕಣ್ಣಿಗೆ ರಾಚುವಂಥದ್ದು; ಈ ಕೇರಿಯಲ್ಲಿ ಕಾಂಗ್ರೆಸ್ ಒಂದನ್ನು ಬಿಟ್ಟು ಬಿಜೆಪಿಯವರಿಗೆ ಪ್ರವೇಶವಿಲ್ಲ! ಈ ರೀತಿ ಫಲಕ ನೇತಾಡುತಿತ್ತು. ಇಂತಹ ವಾತಾವರಣ ಇನ್ನೂ ಯಾಕೆ ಹೀಗಿದೆ? ಚುನಾವಣೆ ಸಂದರ್ಭದಲ್ಲಿಯೇ ಯಾಕೆ ಹೀಗೆ? ಇದನ್ನು ಏನು ಅಂತ ತರ್ಕಿಸಬಹುದು? ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಯಾಕೆ ಈ ವಾತಾವರಣ? ಅಸ್ಪೃಶ್ಯತೆ ನಿವಾರಣೆಗಾಗಿ ಒಂದು ಕಡೆ ಹೋರಾಟಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಅವರನ್ನು ಸ್ವೃಶ್ಯ ಸಮಾಜ ವಾಸಿಯಾಗಲು ಬಿಡದೆ ನಡೆಸುತ್ತಿರುವ ರಾಜಕೀಯ ಷಡ್ಯಂತ್ರವೇ ಬಹಳಷ್ಟಿವೆ. ಮತ್ತಷ್ಟು ಓದು »

11
ಮೇ

ಹಿಟ್ಲರನ ಗೊಬೆಲ್ಸ್ ಮತ್ತು ನೆಹರೂವಿನ ಗಂಜಿಗಿರಾಕಿಗಳು

 – ರಾಕೇಶ್ ಶೆಟ್ಟಿ

‘ಸುಳ್ಳನ್ನೇ ಪದೇ ಪದೇ ಜನರ ಕಿವಿಗೆ ಬೀಳುವಂತೆ ಬೊಬ್ಬೆ ಹೊಡೆಯುತ್ತಾ ಹೋದರೆ ಅದೇ ಸತ್ಯವಾಗುತ್ತ ಹೋಗುತ್ತದೆ’ ಹೀಗೊಂದು ಮಾತನ್ನು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಸರ್ಕಾರದಲ್ಲಿ Public Enlightenment & Propaganda ಸಚಿವನಾಗಿದ್ದ ಗೊಬೆಲ್ಸ್ ಹೇಳಿದ್ದನೆಂಬ ಮಾತಿದೆ.ಈ ಮಾತನ್ನು ಗೊಬೆಲ್ಸ್ ಹೇಳಿದ್ದನೋ ಇಲ್ಲವೋ,ಆದರೆ ಈ ಮಾತು ಪ್ರಾಕ್ಟಿಕಲಿ ಸತ್ಯವಂತೂ ಹೌದು.ಬೇಕಿದ್ದರೆ ಗೊಬೆಲ್ಸ್ ಹೇಳಿಕೊಟ್ಟ ಈ ಸೂತ್ರವನ್ನು ಬಳಸುತ್ತಿರುವ ಭಾರತದ ಗಂಜಿಗಿರಾಕಿಗಳನ್ನು ಈ ಬಗ್ಗೆ ಕೇಳಿ ನೋಡಿ. ಉದಾಹರಣೆಗೆ, ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ಸಮಾವೇಶವೊಂದರಲ್ಲಿ ನರೇಂದ್ರ ಮೋದಿಯವರು ಮಾತನಾಡುತ್ತ ‘ ಲೂಟಿಕೋರ-ಕಳ್ಳರು ವಿದೇಶದ ಬ್ಯಾಂಕುಗಳಲ್ಲಿ ಎಷ್ಟು ಪ್ರಮಾಣದ ಕಪ್ಪು ಹಣವಿಟ್ಟಿದ್ದಾರೆಂದರೆ,ಅದನ್ನು ವಾಪಸ್ ತಂದರೆ ಭಾರತದ ಪ್ರತಿ ಬಡವನಿಗೆ ೧೫ ಲಕ್ಷದಷ್ಟು ಹಣವನ್ನು ಉಚಿತವಾಗಿ ಕೊಡುವಷ್ಟಿದೆ’ ಎಂದಿದ್ದರು(ಈ ವಿಡಿಯೋ ಈಗಲೂ ಅಂತರ್ಜಾಲದಲ್ಲಿ ಲಭ್ಯವಿದೆ).ಇದೇ ಮಾತನ್ನು ಈಗ ಗಂಜಿಗಿರಾಕಿಗಳೆಂಬ ಗೊಬೆಲ್ಸ್ ಗಳು ‘ಮೋದಿ ಅಧಿಕಾರಕ್ಕೆ ಬಂದ ಮೇಲೆ ನಮ್ಮ ಅಕೌಂಟಿಗೆ ೧೫ ಲಕ್ಷ ಹಣ ಹಾಕ್ತಿನಿ ಅಂದಿದ್ರು.ಹಾಕಿಯೇ ಇಲ್ಲ’ ಎಂದು ಊರಿಡಿ ಬೊಬ್ಬೆ ಹೊಡೆಯಲು ಶುರುವಿಟ್ಟುಕೊಂಡರು. ಈಗ ಈ ಸುಳ್ಳು ಯಾವ ಪರಿ ಹರಡಿದೆಯೆಂದರೆ,ಮೋದಿಯನ್ನು ವಿರೋಧಿಸಲು ಕಾರಣವೇ ಸಿಗದವರು ಎಲ್ರಿ ನಮ್ಮ ೧೫ ಲಕ್ಷ ಎಂದು ಕೇಳುವಷ್ಟು. ವಿಚಿತ್ರವೆಂದರೆ,ಇದು ಗಂಜಿಗಿರಾಕಿಗಳ ಅಪಪ್ರಚಾರದ ಕ್ಯಾಮ್ಪೇನು ಎಂದು ಹೇಳಬೇಕಾದವರೇ ತಡಬಡಾಯಿಸುವಂತಾಗಿದೆ.ಇದೇ ನೋಡಿ GGG Lying Formula (ಗಂಜಿ ಗಿರಾಕಿ ಗೊಬೆಲ್ಸ್ ಸುಳ್ಳಿನ ಸೂತ್ರ)ದ ತಾಕತ್ತು.

ಭಾರತದ ಗಂಜಿಗಿರಾಕಿಗಳ ಗೊಬೆಲ್ಸ್ ಕಾರ್ಯಾಚರಣೆಯ ಬಗ್ಗೆ ಮಾತನಾಡುವ ಮುನ್ನ, ಜರ್ಮನಿಯ ಗೊಬೆಲ್ಸ್ ಪರಿಚಯ ಮಾಡಿಕೊಳ್ಳಬೇಕು,ಆಗ ಅವರಿಬ್ಬರ ಸಾಮ್ಯತೆ ಅರ್ಥವಾದೀತು. ಜರ್ಮನಿಯಲ್ಲಿ National Socialist German Workers’ (Nazi) Party ಹಿಟ್ಲರನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಾಗ, ಪ್ರಪೋಗ್ಯಾಂಡ ಸಚಿವನಾಗಿ ಬಂದವನು ಗೊಬೆಲ್ಸ್. ಹೈಡಲ್ ಬರ್ಗ್ ವಿವಿಯಿಂದ ಸಾಹಿತ್ಯದಲ್ಲಿ ಪಿಹೆಚ್ಡಿ ಪದವಿ ಪಡೆದಿದ್ದ ಚಾಣಾಕ್ಷ ಈತ. ಈತನಿಗೆ ಯಾವುದೇ ಸುಳ್ಳನ್ನು ಸತ್ಯವೆಂದು ಓದುಗರನ್ನು ಮರುಳು ಮಾಡುವ ಬರವಣಿಗೆ ಒಲಿದಿತ್ತು. ಇದರ ಜೊತೆಗೆ ಸಾಹಿತ್ಯ,ಸಿನಿಮಾ,ಕಲೆ ಇವನ ಆಸಕ್ತಿಕರ ಕ್ಷೇತ್ರಗಳು. ಇಷ್ಟೆಲ್ಲಾ ಆಸಕ್ತಿ ಮತ್ತು ಸಾಮರ್ಥ್ಯವಿದ್ದ  ವ್ಯಕ್ತಿ ದೇಶದ ಸಾಂಸ್ಕೃತಿಕ ರಾಜಕಾರಣವನ್ನು ತನ್ನ ಕಪಿಮುಷ್ಟಿಯಲ್ಲಿಟ್ಟುಕೊಳ್ಳಲು ಸಮರ್ಥ ವ್ಯಕ್ತಿಯಾಗಿ ಹಿಟ್ಲರನಿಗೆ ಅನ್ನಿಸಿದ್ದು ಸಹಜವೇ. ಅಧಿಕಾರಕ್ಕೆ ಬಂದ ಗೊಬೆಲ್ಸ್ ಕೂಡ ಹಿಟ್ಲರ್ ಸುತ್ತ ನಕಲಿ ಪ್ರಭಾವಳಿಯನ್ನು ಸೃಷ್ಟಿಸುವಲ್ಲಿ ಸಫಲನಾಗಿದ್ದ,  ಇವನಿಲ್ಲದಿದ್ದರೆ ಜರ್ಮನಿ ಮತ್ತೊಮ್ಮೆ ಗೌರವಯುತವಾಗಿ ತಲೆ ಎತ್ತಲಾರದು ಎಂದ, ಜನರು ನಂಬಿದರು.

ಮತ್ತಷ್ಟು ಓದು »