ಅಲ್ಲಿ ಆಲ್ಫಾ ಅಂತಿದೆ ನೋಡಿ, ಮೊದಲ ಪ್ರಯತ್ನಕ್ಕೆ ಸಹಕಾರ ನೀಡಿ
– ಕಾಲಂ 9
ಗೂಗಲ್ ಸಂಸ್ಥೆಯು ಇತ್ತೀಚಿಗೆ ತನ್ನ ಭಾಶಾಂತರ ಸೇವೆಯ ಕನ್ನಡ ಅವತರಣಿಕೆಯ ಆಲ್ಫಾ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇಂಗ್ಲಿಷ್ ಭಾಷೆಯಿಂದ ಕನ್ನಡಕ್ಕೆ ಯಾಂತ್ರೀಕೃತ ಭಾಶಾಂತರಕ್ಕೆ ಇದು ಮೊದಲ ಪ್ರಯತ್ನ. ಆದರೆ ಇದು ಕನ್ನಡದ ಕೊಲೆ ಎಂದು ಉದಯವಾಣಿಯು ‘ವಾಷಿಂಗ್ಟನ್ನಿಂದ’ ವರದಿ ಮಾಡಿದ್ದಾರೆ.
ಉದಯವಾಣಿಯ ವಾಷಿಂಗ್ಟನ್ ವರದಿಗಾರರಲ್ಲಿ ನನ್ನ ಮನವಿ: ನೀವು ಪುಕ್ಕಟೆ ಪ್ರಯತ್ನಕ್ಕೆ ಸಿಟ್ಟಾಗುವ ಮೊದಲು ಸಾಧ್ಯವಾದರೆ ಮೌಂಟೆನ್ ವ್ಯೂ ನಲ್ಲಿರುವ ಗೂಗಲ್ ಕಛೇರಿಗೆ ಒಮ್ಮೆ ಹೋಗಿ ಭಾಷಾಂತರ ಪ್ರಾಜೆಕ್ಟ್ ಬಗ್ಗೆ ಸ್ವಲ್ಪ ಕೇಳಿ. ಅಥವಾ translate.google.com ಪುಟದ ಕೊನೆಗಿರುವ About Google Transate ಕೊಂಡಿಯನ್ನೊಮ್ಮೆ ಬಳಸಿ ಅದರ ಬಗ್ಗೆ ಸ್ವಲ್ಪ ಓದಿ. ಮೊದಲನೆಯದಾಗಿ ಇದೂ ಇನ್ನೂ ಆಲ್ಫಾ ಆವೃತ್ತಿ. ಇನ್ನೂ ಬೀಟ ಆವೃತ್ತಿಯ ನಂತರ ಸೇವೆಯು ಸಾಧಾರಣ ಬಳಕೆಗೆ ಲಭ್ಯವಾಗುತ್ತದೆ. ಆಲ್ಫಾ ಆವೃತ್ತಿಯ ಬಗ್ಗೆ ಗೂಗಲಿಸಿದರೆ ನಿಮಗೆ ಹಾಗೆಂದರೇನೆಂಬುದು ತಿಳಿಯುತ್ತದೆ. ಮತ್ತಷ್ಟು ಓದು 
ಆಧುನಿಕ ಬೇತಾಳನೂ ವಿಕ್ರಮಾದಿತ್ಯನೂ ಮತ್ತು ಕಾಲೇಜು ಹುಡುಗರು…
ಸಾತ್ವಿಕ್ ಎನ್ ವಿ
ಯಥಾ ಪ್ರಕಾರ ಹಠಬಿಡದೇ ಸೆಪ್ಟೆಂಬರ್ ಮಾರ್ಚ್ ಸೆಪ್ಟೆಂಬರ್ ಎಕ್ಸಮ್ ಬರೆಯೋ ರಿಪಿಟರ್ ವಿದ್ಯಾರ್ಥಿ ಥರಾ ವಿಕ್ರಮ ರಾಜನು ಮರದಲ್ಲಿದ್ದ ಬೇತಾಳವನ್ನು ಪ್ರೈಮರಿ ಶಾಲೆಯ ಮಕ್ಕಳ ಮಣ ಭಾರದ ಪುಸ್ತಕದ ಚೀಲದಂತೆ ಹೆಗಲಿಗೇರಿಸಿ ನಡೆಯುತ್ತಿದ್ದನು. ವಶೀಲಿ ಗೊತ್ತಿಲ್ಲದ ಸರ್ಕಾರಿ ನೌಕರನಂತೆ ದುಡಿಯುವುದನ್ನು ನೋಡಿ ಬೇತಾಳನಿಗೆ ಅಯ್ಯೋ ಪಾಪ ಎನಿಸಿ ‘ ವಿಕ್ರಮ ಮಹಾರಾಜ ನಿನ್ನ ಕರ್ತವ್ಯ ಪ್ರಜ್ಞೆ ಮೆಚ್ಚಿದ್ದೇನೆ. ದಾರಿಸಾಗಲು ಕಥೆಯೊಂದನ್ನು ಹೇಳುತ್ತೇನೆ. ಮೊಬೈಲ್ ಅಲ್ಲಿ ಮಾತಾಡುತ್ತಾ ಸಾಗೋ ಪ್ರೇಮಿಯ ಹಾಗೆ ನಿನಗೆ ದಾರಿ ಸಾಗಿದ್ದೇ ಗೊತ್ತಾಗುವುದಿಲ್ಲ’ ಎಂದಿತು. ವ್ರತ ನಿಷ್ಠನಾದ ವಿಕ್ರಮ ಮಾತಾಡದೇ ಇದ್ದರೂ ಹುಡುಗಿಯರ ಮೌನವನ್ನೇ ಒಪ್ಪಿಗೆ ಎಂದು ಭಾವಿಸುವ ಪ್ರಿಯಕರನಂತೆ ತನ್ನ ಪಾಡಿಗೆ ತಾನು ಕಥೆ ಹೇಳಲು ಪ್ರಾರಂಭಿಸಿತು.
ಪುಣ್ಯ ಭರತ ಭೂಮಿಯಲ್ಲಿ ಕನ್ನಡನಾಡು ಎಂಬ ರಾಜ್ಯ. ಅಂತಿಪ್ಪ ರಾಜ್ಯದಲ್ಲಿ ತಂಗಳೂರು ವಿಶ್ವವಿದ್ಯಾನಿಲಯವೆಂಬ ವಿದ್ಯಾದೇಗುಲವಿತ್ತು. ಅಲ್ಲಿ ಉತ್ತಮ ದರ್ಜೆಯ ವಿದ್ಯಾಭ್ಯಾಸ ಸಿಗುತ್ತಿದ್ದ ಕಾರ್ಅಣ ಇಡೀ ದೇಶದಲ್ಲಿಯೇ ಪ್ರಸಿದ್ಧವಾಗಿತ್ತು. ಅಂಥ ವಿ ವಿ ಗೆ ಸುಭಗನೆಂಬ ವಿದ್ಯಾರ್ಥಿ ಕಲಿಯಲು ಸೇರಿದನು. ಕ್ರೀಡೆ, ಸಾಹಿತ್ಯ, ವಿಷಯಗಳಲ್ಲಿ ಒಳ್ಳೆಯ ಆಸಕ್ತಿ ಇತ್ತು. ಉತ್ತಮ ವಿದ್ಯಾರ್ಥಿಯಾದ ಈತನು ಬೇರೆ ವಿದ್ಯಾರ್ಥಿಗಳಿಗೆ ಅಸೂಯೆ ಮೂಡಿಸುವಷ್ಟು ಮಟ್ಟಿಗೆ ಬೆಳೆದನು. ವಿಭಾಗದಲ್ಲಿಯೂ ತೀವ್ರ ಚಟುವಟಿಕೆಯಿಂದ ಕೂಡಿದ್ದ ಇತನಿಗೆ ತನ್ನ ಸಮಾಜದ ಕೊಳಕುತನಗಳನ್ನು ಕಿತ್ತುಹಾಕಬೇಕೆಂಬ ತುಡಿತ. ಎಳೆ ವಯಸ್ಸು ಹುರಿಗಟ್ಟಿದ ದೇಹ, ಕನಸು ಬಿತ್ತುವ ಉಪನ್ಯಾಸಕರು ಇನ್ನೇನೂ ಬೇಕು ಸ್ವರ್ಗಕ್ಕೆ ಕಿಚ್ಚು ಹಚ್ಚಲು. ಮತ್ತಷ್ಟು ಓದು 
ರಾಜಕಾರಣದಲ್ಲಿ ಆಣೆ ಮತ್ತು ಆಣೆಯ ರಾಜಕಾರಣ
ಸಂತೋಷ್ ಕುಮಾರ್ ಪಿ.ಕೆ
ಇತ್ತೀಚಿನ ರಾಜಕಾರಣದ ಬೆಳವಣಿಗೆಯಲ್ಲಿ ಹೆಚ್.ಡಿ.ಕುಮಾರ ಸ್ವಾಮಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡ್ಯೂರಪ್ಪ ಇವರ ನಡುವೆ ಸಂಧಾನವೇರ್ಪಟ್ಟಿಲ್ಲ ಎಂಬುದನ್ನು ಸಾಬೀತುಪಡಿಸಲು ಧರ್ಮಸ್ಥಳದ ಮಂಜುನಾಥ ಕ್ಷೇತ್ರದಲ್ಲಿ ಆಣೆ ಮಾಡಲು ಸನ್ನದ್ದರಾಗಿರುವುದು ಬಹುಟೀಕೆಗೆ ಒಳಗಾಗಿದೆ. ಇದು ಮೇಲ್ನೋಟಕ್ಕೆ ಕೇವಲ ಆಣೆ ಪ್ರಮಾಣದ ಸಮಸ್ಯೆಯಂತೆ ಕಂಡರೂ ಸಹ ಆ ಸಮಸ್ಯೆಯ ಆಳ ಅಗಲ ನಾವು ಊಹಿಸಲು ಸಾಧ್ಯವಿರದ ಮಟ್ಟಿಗೆ ಇದೆ. ಬಹುತೇಕ ಚಿಂತಕರು, ಲೇಖಕರು ಹಾಗೂ ವಿದ್ವಾಂಸರನ್ನೊಳಗೊಂಡು ಆ ಆಣೆ ಮಾಡುವ ಪ್ರವೃತ್ತಿಯನ್ನು ಕಟುವಾಗಿ ಟೀಕಿಸುತ್ತಿದ್ದಾರೆ, ಇಲ್ಲಿ ಕೇವಲ ಆಣೆ ಪ್ರಮಾಣದ ವಿಚಾರವನ್ನುವಿವಮರ್ಶಿಸಿದರೆ ಒಂದೊ, ರಾಜಕಾರಣಿಗಳ ಮೇಲೆ ಕೋಪ ಮಾಡಿಕೊಳ್ಳಬೇಕಾಗುತ್ತದೆ, ಇಲ್ಲವೆ ಅಂತಹ ಪ್ರೃತ್ತಿಯೇ ಕೆಟ್ಟದೆಒಳ್ಳೆಯದೋ ಎಂಬ ನಿರಪಯುಕ್ತ ಚರ್ಚೆಯನ್ನು ಮಾಡಬೇಕಾಗುತ್ತದೆ. ಆದ್ದರಿಂದ ಆಣೆ ಮಾಡುವ ಪ್ರವೃತ್ತಿಯನ್ನು ಪ್ರಶ್ನೆಮಾಡುವ ನೆಪದಲ್ಲಿ ನಮ್ಮ ರಾಜ್ಯಾಂಗದ ಅಥವಾ ಸೆಕ್ಯುಲರಿಸಂ ಸಮಸ್ಯೆಯನ್ನು ಇಲ್ಲಿ ಚರ್ಚಿಸಲು ಪ್ರಯತ್ನಿಸುತ್ತೇನೆ. ಹಾಗಾಗಿ ಆಣೆ ಮಾಡುವುದರಲ್ಲಿ ತಪ್ಪೇನಿದೆ ಎಂಬುದನ್ನು ನೋಡುವಾ ಅಥವಾ ಆಣೆ ಮಾಡುವುದು ನಮಗೇಕೆ ತಪ್ಪಾಗಿ ಗೋಚರಿಸುತ್ತಿದೆ ಎಂಬುದನ್ನು ಅವಲೋಕಿಸುವ. ಮತ್ತಷ್ಟು ಓದು 
ಮಂಜುನಾಥನ ದಯೆ ಇರಲಿ!!!
ಅರೆಹೊಳೆ ಸದಾಶಿವ ರಾವ್
ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ,
ನಿನಗೊಂದು ಪತ್ರ ಬರೆಯಬೇಕಾದ ಅನಿವಾರ್ಯತೆ ಬಂದೀತು ಎಂದು ನಾವು ಅಂದುಕೊಂಡಿರಲಿಲ್ಲ. ಒಂದು ನಂಬುಗೆ ಇದೆ. ಅದೆಂದರೆ, ನಿನ್ನ ಬಳಿ ಯಾವುದೇ ಭಕ್ತ ಬಂದು, ತನ್ಮಯತೆಂದ ಏನಾದರೂ ಕೇಳಿಕೊಂಡರೆ, ಕಷ್ಟ ಪರಿಹಾರವಾಗಿ, ಕೋರಿಕೆ ನೆರವೇರುತ್ತದೆ ಎಂದು. ಆದರೆ ತಪ್ಪು ಮಾಡಿದವರನ್ನು ನೀನೇ ನೋಡಿಕೊಳ್ಳುತ್ತಿ ಎಂದು ಒಮ್ಮೆ ಬಾಮಾತಿನಲ್ಲಿ ಹೇಳಿದರೂ, ಮತ್ತೆ ಅದನ್ನು ಹಿಂಪಡೆಯಲು ನಿನ್ನ ಬಳಿಯೇ ಬರಬೇಕಾಗುತ್ತದೆ. ವಿಷಯವನ್ನು ನಿನ್ನ ಮಡಿಲಿಗೆ ಹಾಕಿ ಬಿಟ್ಟರೆ, ಫಲಾಫಲ ನಿನ್ನ ಇಚ್ಛೆಯಂತೆ ನಡೆಯುತ್ತದೆ ಮತ್ತು ಇದು ಇಡೀ ಕುಟುಂಬಕ್ಕೇ ಅನ್ವುಸುತ್ತದೆ.
ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ. ಇಡೀ ರಾಜ್ಯ ಅಥವಾ ದೇಶದ ಕುಟುಂಬವೇ ಒಂದಾಗಿ ಒಬ್ಬ ಯಜಮಾನನನ್ನಾಗಿ ಆಯ್ಕೆ ಮಾಡಿ ಕಳುಹಿಸುತ್ತೇವೆ. ನಮ್ಮ ದುರಾದ್ರಷ್ಟವೆಂದರೆ ಅದಾದ ಮೇಲೆ ನಮಗೆ ಅಂತಹ ಯಜಮಾನನ ಮೇಲೆ ಯಾವುದೇ ನಿಯಂತ್ರಣ ಇರುವುದಿಲ್ಲ. ಆಗೆಲ್ಲಾ ನಾವು ನಮ್ಮನ್ನು ದೇವರೇ ಕಾಪಾಡಬೇಕು ಎಂದುಕೊಂಡು ನಿನ್ನ ತಲೆಯ ಮೇಲೆ ಭಾರ ಹಾಕಿ ಸುಮ್ಮನುಳಿಯುತ್ತೇವೆ.
ಗೌಡರ ವಂಶ ಇರಬಹುದು, ಯಡ್ಯೂರಪ್ಪನವರ ವಂಶವಿರಬಹುದು, ಎಲ್ಲರ ಮೇಲೂ ನಾವು ವಿಶ್ವಾಸ ಇಟ್ಟು, ದೇಶದ ಪರಮಾಧಿಕಾರಗಳ ವಿವಿಧ ಹಂತಗಳನ್ನು ನೀಡಿದವರು. ಆದರೆ ಅವರೆಲ್ಲಾ ಅಧಿಕಾರ ಸಿಕ್ಕ ನಂತರ, ಈ ಎಲ್ಲದೂ ತಮಗೆ ಕಟ್ಟಿಟ್ಟದ್ದು ಎಂಬಂತೆ ವರ್ತಿಸಿದ್ದು ಮಾತ್ರ ನಿಜ. ಎಲ್ಲರೂ ಅವರವರ ಮಟ್ಟಿಗೆ ರಾಜ್ಯದ ಬೊಕ್ಕಸದಿಂದ ಸಾಧ್ಯವಾದಷ್ಟೂ ಎತ್ತಿದವರೇ ಎಂದು ಇಬ್ಬರೂ ಆರೋಪಿಸಿಕೊಳ್ಳುತ್ತಿದ್ದಾರೆ. ಸತ್ಯ ಏನು ಎನ್ನುವುದು ರಾಜ್ಯದ ಎಲ್ಲರಿಗೂ ಗೊತ್ತಿದೆ. ಯಡ್ಯೂರಪ್ಪ ಮತ್ತು ಕುಮಾರ ಸ್ವಾಮಿ-ಇಬ್ಬರೂ ಎಲ್ಲೆಲ್ಲಾ ಸಾಧ್ಯವೋ ಅಲ್ಲೆಲ್ಲಾ ಮೆಂದವರೇ ಎಂಬುದೇ ಈ ಸತ್ಯ!(ನಿನಗೆ ಗೊತ್ತಿಲ್ಲದ್ದೇನಲ್ಲ ಬಿಡು) ಮತ್ತಷ್ಟು ಓದು 
ನಮ್ಮ ಹಾಗೂ ನಮ್ಮಪ್ಪನ ನಡುವಿನ ಭಿನ್ನಾಭಿಪ್ರಾಯಗಳು…
ಸತ್ಯಚರಣ್ ಎಸ್.ಎಂ
ಸ್ನೇಹಿತರೇ. ಮೊನ್ನೆ ಮೊನ್ನೆ ಆಂಗ್ಲರಿಂದ ಆಮದು ಮಾಡಿಕೊಂಡ “Father’s Day” ನಡೆಯಿತಲ್ವೇ.. ಆ ಸಂದರ್ಭಕ್ಕೆ ನನಗೆ ನನ್ನ ಈ ಕೆಳಗಿನ ಬರಹ ಹಿಂದೆ ಬರೆದದ್ದು ನೆನಪಾಗಿ, ಮತ್ತೆ ನಿಮ್ಮ ಮುಂದೆ ಇಡೋಣ ಅಂತನಿಸಿ, ಇಲ್ಲಿ ಇಡುವಂತಾಯ್ತು.. ಹೆಚ್ಚಿಗೆ ಬದಲಾಯಿಸದೇ, ಅಂದು ಬರೆದದನ್ನ ಹಾಗೇ ಇಡುತ್ತಿದ್ದೇನೆ.. 🙂
ಇದೊಂತರ ವಿಚಿತ್ರ “ವಿಷಯ” ಚರ್ಚೆಗೋಸ್ಕರ ಆದ್ರೆ.. ಅಂತ ಅನಿಸುತ್ತದೆ ನನ್ನ ಮನಸ್ಸಿಗೆ..
ಪ್ರಪಂಚದ ಬುಧ್ಧಿವಂತರೆಲ್ಲಾ ಒಂದು ತರಹದ ಉತ್ತರ ನೀಡಿದರೆ ಹೃದಯವಂತರೆಲ್ಲಾ ಇನ್ನೊಂದು ತರಹ ಮಾತಾಡುತ್ತಾರೆ ಈ ವಿಷಯದಲ್ಲಿ.
ಹ..ಹಾ.. ನಾನು ಯಾವ ಗುಂಪಿಗೆ ಸೇರುತ್ತೇನೋ ಗೊತ್ತಿಲ್ಲ… ಆದರೆ, ನನ್ನ ಮನಸ್ಸಿನಲ್ಲಿರೋ, ಮನಸ್ಸಿಗೆ ಹಿಂದೆ ಬಂದಿದ್ದ ಯೋಚನೆಗಳೆಲ್ಲ ಒಂದೆಡೆ ಹಾಕಿ, ಅದರ ಸಾರ ತೆಗೆಯೋ ಪ್ರಯತ್ನ ಇದು ಅನ್ಕೋತೀನಿ.. ಮುಂದಿನ ದಿನಗಳಲ್ಲಿ ನನ್ನ ವಿಚಾರಧಾರೆ ಯಾವ ದಿಕ್ಕಿನಲ್ಲಿ ಹರಿಯುತ್ತೋ ಗೊತ್ತಿಲ್ಲ.. ಸದ್ಯದ್ದು ಏನಿದೆಯೋ ಅದನ್ನು ನಿಮ್ಮ ಮುಂದೆ ಇಡ್ತಾ ಇದ್ದೇನೆ.. ಮತ್ತಷ್ಟು ಓದು 
“ಪ.ಗೋ. ಕಾಲಂ” ಜಗತ್ತಿನಲ್ಲಿ ಪತ್ರಕರ್ತನಿಗೊಂದು “ಸರ್ಟಿಫಿಕೇಟ್”
-ರವಿ ಮುರ್ನಾಡು
ಪ.ಗೋ. ಜಗತ್ತಿನ ಪದಗಳ ಹಂದರದಲ್ಲಿ ಒಬ್ಬ ” ವಿಲನ್” ಸೃಷ್ಠಿಯಾಗುತ್ತಾನೆ . ಅವನನ್ನು ಬುದ್ಧಿವಂತ ಹುಚ್ಚ ಅನ್ನುತ್ತೇವೆ. ಅದು ಕೊಡಿಯಾಲ್ ಬೈಲ್ ನವಭಾರತ ಪತ್ರಿಕೆಯಿದ್ದಾಗ ಪತ್ರಿಕಾ ಪ್ರಸರಣಾ ವಿಭಾಗದ ಮುಖ್ಯಸ್ಥ ಕಾಮತ್. ಅದಕ್ಕೆ ದಿವಂಗತ ಪ.ಗೋ.ರವರು “ಹಿತ್ತಾಳೆ ದೂರುಗಂಟೆ” ಅಂತ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ತಮ್ಮ ” ವಿಚಿತ್ರ ಸೃಷ್ಠಿಯ ಲೋಕದಲ್ಲಿ ಮತ್ತು ಅಂಕಣ ಬರಹಗಳು” ಸಂಕಲನದಲ್ಲಿ ಹಿತ್ತಾಳೆ ದೂರುಗಂಟೆಯ ಪಾತ್ರಧಾರಿ ವಿಲಕ್ಷಣವಾಗಿ ಎದ್ದು ನಿಲ್ಲುವಂತದ್ದು. ಹೀಗೂ ಉಂಟೆ…?! ಅನ್ನುವ ಒಂದು ಪ್ರಶ್ನೆ. ಪತ್ರಿಕಾ ಕಾರ್ಯಾಲಯದಲ್ಲಿ ಅಚಾನಕ್ಕಾಗಿ ಸೃಷ್ಠಿಯಾಗುತ್ತವೆ, ಇಲ್ಲದಿದ್ದರೆ ಸೃಷ್ಠಿಸುತ್ತಾರೆ . ಎಲ್ಲಾ ಖಾಸಾಗಿ ಸಂಸ್ಥೆಯಲ್ಲಿ ಇಂತಹ “ಶಕುನಿ”ಗೊಂದು ಹುದ್ದೆ ಉಂಟೇ ಉಂಟು. ಪ.ಗೋ.ರವರು ಮೌನವಾಗಿ ನವಭಾರತ ಕಚೇರಿ ಬಿಟ್ಟು ಹೋದಾಗ, ಕಚೇರಿಯ ಬಾಗಿಲಿಗೆ ತುಕ್ಕು ಹಿಡಿಯಬಾರದಿತ್ತೋ ಆನ್ನಿಸಿತು. ಬದುಕಿನ ಗೋಡೆ ಬಿರುಕಿಟ್ಟ ಸನ್ನಿವೇಶಕ್ಕೆ, ಪತ್ರಿಕಾ ಬದುಕಿಗೆ ಛೀಮಾರಿ ಹಾಕುವಷ್ಟು ವ್ಯಥೆಯಾಗುವಂತದ್ದು.
ಇವತ್ತಿಗೂ ಮಾತಾಡುತ್ತಿದೆ…. ಮನುಷ್ಯ ಬದುಕಿಗೆ ಸವಾಲು ಹಾಕಿದ ಮಾತು. “ನಾನು ಪತ್ರಿಕೆ ಹುಟ್ಟು ಹಾಕುವ ಕನಸು ಕಂಡಿದ್ದು ತಪ್ಪಾಯಿತು..!” ಅಂತ. ಬದುಕಿನ ಸ್ಥಿತ್ಯಂತರದಲ್ಲಿ ಒಮ್ಮೊಮ್ಮೆ ಕನಸುಗಳು ಈಟಿ ಇರಿದಂತೆ ಅಣಕಿಸುತ್ತವೆ. ಮಂಗಳೂರಿನ ಕಡಲ ಮರಳ ಕಣಗಳಿಗೆ ಇದರ ಪರಿಚಯ ಉಂಟು. ಅಲೆಗಳು ದಡಕ್ಕೆ ಬಡಿದು ಎಚ್ಚರಿಸಿ ಹೋಗುತ್ತಿವೆ… ಆ ಒಂದು ಜಗತ್ತಿನ ವಿಸ್ತಾರದಲ್ಲಿ ಜೀವನದ ಸಾರ್ಥಕ್ಯಕ್ಕೆ ಮನಸ್ಸುಗಳು ತೆರೆದುಕೊಳ್ಳಲಿಲ್ಲ . ಪಡ್ಯಾನ ಗೋಪಾಲಕೃಷ್ಣರ ರೆಕ್ಕೆ ಮುರಿದ ಮಾತುಗಳ ಹಕ್ಕಿಯ ಕಲರವ ಕೇಳಿಸುತ್ತಲೇ ಇದೆ…. ಕನಸುಗಳ ಮೂಟೆ ಹೊತ್ತ ದೋಣಿ ಕಡಲ ಮಧ್ಯದಲ್ಲಿ ಈಜುತ್ತಿದೆ….! ಮತ್ತಷ್ಟು ಓದು 
ಇದರ ಕತೆ ಇಷ್ಟೇ ಕಣಪ್ಪೋ….
ಉಮೇಶ್ ದೇಸಾಯಿ
ಹೌದು ಆ ಕತೆಬರೆದವ ಸಹ ಈ ತಿರುವು ಊಹಿಸಿರಲಿಕ್ಕಿಲ್ಲ. ನಾವು ಆರಿಸಿ ಕಳಿಸಿದ ಪಕ್ಷ ಅದರ ಮುಖಂಡ ಇಂದು ಆಣೆ ಪ್ರಮಾಣ ಮಾಡುತ್ತಾರಂತೆ ಅವರ ಹಿಂದಿನ ಸಿಎಮ್ಮು..

‘ಅನ್ಯಾಯ’ದ ಮನೆಯೊಳಗಿನ ಆಶಾಕಿರಣ.
– ಚಿತ್ರಾ ಸಂತೋಷ್
ದೆಹಲಿಯ ಜಿ.ಬಿ. ರಸ್ತೆಯಲ್ಲಿ ನನ್ನ ಪುಟ್ಟ ವಯಸ್ಸು, ಬದುಕು ಮೂರಾಬಟ್ಟೆಯಾಯಿತು ಅನಿಸಿತ್ತು. ನನ್ನ ವಿರುದ್ಧ ನಡೆಯುತ್ತಿರುವ ಅನ್ಯಾಯಗಳಿಗೆ ನನಗೆ ದನಿಯೆತ್ತಲೂ ನನ್ನ ಜೊತೆ ಯಾರಿರಲಿಲ್ಲ. ಆ ‘ಅನ್ಯಾಯ’ದ ಮನೆಯೊಳಗೆ ಪ್ರತಿ ನಿಮಿಷವೂ ನನ್ನ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಯುತ್ತಿತ್ತು. ಐದು ವರ್ಷ ಆ ‘ಸೆರೆಮನೆ’ ಅನುಭವಿಸಿದೆ.
ನನ್ನ ಬೆಲೆ ೩೦೦ ರೂ!
ಅಮ್ಮ ಜಗುಲಿ ಮೇಲೆ ಕುಳಿತಿದ್ದಳು. ನನಗೆ ಅಮ್ಮನ ಕಾಣುವ ಹಂಬಲ, ಅವಳಿಗೆ ಮಗಳನ್ನು ಕಾಣುವ ವಾತ್ಸಲ್ಯ. ನನ್ನನ್ನೇ ಎದುರು ನೋಡುತ್ತಿದ್ದ ಆಕೆಯ ಮುಖದಲ್ಲಿ ನಾನು ಗೇಟು ದಾಟಿ ಹೋಗುತ್ತಿದ್ದಂತೆ ನಗು ಅರಳಿತು. ‘ಬಾ ಮಗಳೇ’ ಎಂದು ತೆಕ್ಕೆಗೆಳೆದುಕೊಂಡಳು. ಸೂರ್ಯ ಮುಳುಗಲು ಕ್ಷಣಗಳನ್ನು ಎಣಿಸುತ್ತಿದ್ದ. ಅಮ್ಮನೆದುರು ಕುಳಿತ ವ್ಯಕ್ತಿಯ ಹೆಸರು ಪ್ರವೀಣ್ ಪಂಡಿತ್. ಹೆಸರಷ್ಟೇ ಗೊತ್ತಿತ್ತು. ಅಮ್ಮ ಅವನ ಜೊತೆ ಅಷ್ಟು ಕೊಡು, ಇಷ್ಟು ಕೊಡು ಎಂದು ಚೌಕಾಸಿ ಮಾಡುತ್ತಿದ್ದಳು. ನನಗೊಂದೂ ಅರ್ಥವಾಗಲಿಲ್ಲ. ಅಮ್ಮ ಹೇಳಿದ ದುಡ್ಡಿಗೆ ಆತ ಒಪ್ಪಲೇ ಇಲ್ಲ. ಕೊನೆಗೆ ೩೦೦ ರೂ. ಕೊಡುತ್ತೇನೆ ಅಂದ. ಅಮ್ಮ ಒಪ್ಪಿಕೊಂಡು, “ಮಗಳೇ ನೀನು ಅಂಕಲ್ ಜೊತೆ ದೆಹಲಿಗೆ ಹೋಗಬೇಕು” ಎಂದು ಹೇಳಿದಳು.
ಕನ್ನಡ ಪರ ದನಿಯೆತ್ತಿದರೆ ತಾಲಿಬಾನಿಗಳಾ!?
(ಮಾತೃ ಭಾಷೆಗೆ ಅಪಮಾನಕಾರಿ ಹೇಳಿಕೆ ನೀಡಿದ ವಲಸಿಗರ ಬೆನ್ನು ಬಿದ್ದಿದ್ದಕ್ಕೆ ಕನ್ನಡ ಅಭಿಮಾನಿಗಳಿಗೆ ಸಿಕ್ಕ ಬಿರುದು ’ಇಂಟರ್ನೆಟ್ ತಾಲಿಬಾನಿಗಳು’ ,ಮತ್ತು ಅದನ್ನ ದಯಪಾಲಿಸಿದ್ದು ಕ್ಷ-ಕಿರಣ ಅನ್ನುವ ಬ್ಲಾಗು.ಮಾತೃ ಭಾಷೆಯ ಮಹತ್ವದ ಮತ್ತು ಆ ವಿಷಯದ ಅರಿವಿಲ್ಲದೆ ಬರೆಯುವವರ ಮೇಲೆ ನಿಲುಮೆಗೆ ಅನುಕಂಪವಿದೆ.ಆ ಬರಹಕ್ಕೆ ಹೊಳೆನರಸೀಪುರ ಮಂಜುನಾಥ್ ಅವರ ಉತ್ತರ ಇಲ್ಲಿದೆ – ನಿಲುಮೆ)
– ಹೊಳೆನರಸೀಪುರ ಮ೦ಜುನಾಥ. ಬೆ೦ಗಳೂರು.
ಸನ್ಮಾನ್ಯ ರಾಕೇಶ ಮಥಾಯಿಸ್, ತಮ್ಮ ಬ್ಲಾಗಿನಲ್ಲಿ ತಾವು ಬರೆದಿರುವ ಅಪ್ಪಟ ಕನ್ನಡಾಭಿಮಾನಿ ಬರಹಕ್ಕೆ ನನ್ನ ಪ್ರತ್ಯುತ್ತರ ಹೀಗಿದೆ ನೋಡಿರಿ.
“ನಾನೊಬ್ಬ ಮಾಧ್ಯಮದ ವಿಧ್ಯಾರ್ಥಿ. ನನ್ನ ಸುತ್ತಮುತ್ತ ಮಾಧ್ಯಮ ಪ್ರಪಂಚದಲ್ಲಿ ನಡೆಯುತ್ತಿರುವ ಜಾತೀಯತೆ, ಲಾಬಿ, ಭ್ರಷ್ಠಾಚಾರ ನೋಡಿ ಕರ್ನಾಟಕ ಮಾಧ್ಯಮ ಲೋಕದ ಮೇಲೆ ಕ್ಷಕಿರಣ ಬೀರುವ ಅಗತ್ಯವಿದೆಯೆಂದೆನಿಸಿ ಪುಟ್ಟ ಪ್ರಯತ್ನ. ಈ ಹಾದಿ ಸುಗಮವಲ್ಲವೆಂಬ ಅರಿವು ನನಗಿದೆ, ಆದರೆ ಹಿಂದಿನ ಕಟ್ಟಳೆ ಪದ್ಧತಿಗೊಳಗಾಗದೆ ಆಗಸವನ್ನೇ ತೆರೆದಿಟ್ಟಿರುವ ಇಂಟರ್ನೆಟ್ ಮಾಧ್ಯಮಕ್ಕೆ ನಾನು ಋಣಿಯಾಗಿದ್ದೇನೆ.” ಎ೦ದು ನಿಮ್ಮ ಪರಿಚಯದಲ್ಲಿ ಹೇಳಿಕೊ೦ಡಿರುವ ತಮ್ಮ ಕಣ್ಣಿಗೆ ಹೊರ ರಾಜ್ಯದವರು ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ತಳೆದಿರುವ ನಿಲುವು, ತೋರಿಸುತ್ತಿರುವ ಅಸಡ್ಡೆ, ಇವರಿ೦ದಾಗಿ ಅವಕಾಶವ೦ಚಿತರಾಗುತ್ತಿರುವ ಅಸಹಾಯಕ ವಿದ್ಯಾವ೦ತ ಕನ್ನಡಿಗರು ಕಾಣಿಸಲಿಲ್ಲವೇ? ಹೊರರಾಜ್ಯದವರು ಕರ್ನಾಟಕದಲ್ಲಿರಬೇಕಾದರೆ ಕನ್ನಡ ಕಲಿಯಲೇಬೇಕು ಎ೦ದಿದ್ದನ್ನು ಧೈರ್ಯವಾಗಿ ಫೇಸ್ ಬುಕ್ಕಿನ೦ತಹ ಸಾಮಾಜಿಕ ತಾಣದಲ್ಲಿ “ಫಕ್ ಆಫ್” ಎ೦ದಿದ್ದನ್ನು ವಿರೋದಿಸಿದವರು ತಮ್ಮ ಕಣ್ಣಿಗೆ “ಅ೦ತರ್ಜಾಲದ ತಾಲಿಬಾನಿಗಳು” ಎನ್ನುವ ರೀತಿಯಲ್ಲಿ ಕ೦ಡಿರುವುದು ತು೦ಬಾ ಆಶ್ಚರ್ಯಕರವಾಗಿದೆ. ಹಾಗೆಯೇ ತಮ್ಮ ಬೌದ್ಧಿಕ ದಿವಾಳಿತನವನ್ನು ಎತ್ತಿ ತೋರಿಸುತ್ತಿದೆ ಎ೦ದು ಹೇಳಲು ವಿಷಾದವಾಗುತ್ತಿದೆ.
ಕರ್ನಾಟಕ ರಕ್ಷಣಾ ವೇದಿಕೆಯವರು ನಡೆಸಿದ ಕನ್ನಡಪರ ಹೋರಾಟಗಳನ್ನು “ಪು೦ಡಾಟಗಳು” ಅನ್ನುವಷ್ಟು ಪ್ರಬುದ್ಧರಾಗಿದ್ದೀರಲ್ಲ? ತಾವು ಯಾವ ಮಾನದ೦ಡಗಳನ್ನು ಅನುಸರಿಸಿ ಈ ನಿರ್ಧಾರಕ್ಕೆ ಬ೦ದಿರುವಿರಿ ಎ೦ಬುದನ್ನೂ ವಿವರವಾಗಿ ಕನ್ನಡನಾಡಿನ ಜನತೆಗೆ ತಿಳಿಸುವ೦ಥವರಾಗಿ. ಇದೇ ಪ್ರಕರಣ ಪಕ್ಕದ ತಮಿಳುನಾಡಿನಲ್ಲಿಯೋ, ಮಹಾರಾಷ್ಟ್ರದಲ್ಲಿಯೋ ನಡೆದಿದ್ದರೆ ಇಷ್ಟು ಹೊತ್ತಿಗೆ ಹಾಗೆ ಮಾತನಾಡಿದವರನ್ನು ಹೊಡೆದು ಓಡಿಸಿರುತ್ತಿದ್ದರು.
ಮತ್ತಷ್ಟು ಓದು 
ಕನ್ನಡ ಕಲಿಕೆಯ ಆಸಕ್ತರಿಗೆ
– ಬನವಾಸಿ ಬಳಗ
ನಾಡಿನ ಹಿರಿಯ ನುಡಿಯರಿಗರಾದ ಡಾ|| ಡಿ. ಎನ್. ಶಂಕರಬಟ್ಟರು ಕನ್ನಡದ ನುಡಿಯರಿಮೆ (ಬಾಶಾವಿಗ್ನಾನ) ಸೊಲ್ಲರಿಮೆ (ವ್ಯಾಕರಣ) ಮತ್ತು ಪದಕಟ್ಟಣೆ (ಪದರಚನೆ) ಕುರಿತಂತೆ ಆಳವಾಗಿ ಅದ್ಯಯನ ನಡೆಸಿ ಈ ವಲಯಗಳಲ್ಲಿ ಸಂಶೋದನೆಗೆ ಹೊಸದೊಂದು ದಾರಿಯನ್ನು ಕಟ್ಟಿದ್ದಾರೆ.
ಈಗ ಅವರ ಕೈಕೆಳಗೆ ಅವರಿಂದಲೇ ಈ ವಿಶಯಗಳ ಬಗ್ಗೆ ಕಲಿಯುವ ಮತ್ತು ಅವರ ಸಂಶೋದನೆಯಲ್ಲಿ ನೇರವಾಗಿ ಪಾಲ್ಗೊಳ್ಳುವ ಒಂದು ಚಿನ್ನದಂತಹ ಅವಕಾಶವನ್ನು ಬನವಾಸಿ ಬಳಗ ನಿಮ್ಮ ಮುಂದೆ ತಂದಿದೆ. ಈ ಕಾರ್ಯಕ್ರಮದ ವಿವರಗಳನ್ನು ಕೆಳಗೆ ಕೊಡಲಾಗಿದೆ.
ಕಾರ್ಯಕ್ರಮದ ಇಟ್ಟಳ
ಈ ಕಾರ್ಯಕ್ರಮದ ಅಂಗವಾಗಿ ತಲಾ ಒಂದು ವರ್ಶದ ಅವದಿಯ ನಾಲ್ಕು ಹಮ್ಮುಗೆ (ಯೋಜನೆ) ಗಳನ್ನು ಏರ್ಪಡಿಸಲಾಗಿದೆ. ಮೂವರು ಶಿಬಿರಾರ್ತಿಗಳು ಸೇರಿ ಒಂದು ಹಮ್ಮುಗೆಯನ್ನು ಮಾಡಬೇಕಾಗುತ್ತದೆ. ಹಮ್ಮುಗರಿಗೆ ಡಾ||. ಡಿ. ಎನ್. ಶಂಕರಬಟ್ಟರು ತಾವೇ ಮಾರ್ಗದರ್ಶನ ನೀಡುತ್ತಾರೆ. ಹಮ್ಮುಗೆಗಳ ವಿಶಯಗಳು ಹೀಗಿವೆ:





