ಬದಲಾವಣೆ ಬಯಸುವುದಾದರೆ ಬಸವನಗುಡಿಗೆ ಬನ್ನಿ…
– ರಾಕೇಶ್ ಶೆಟ್ಟಿ
ಬಸವನಗುಡಿಗೆ ಬಂದ ತಕ್ಷಣ ಬದಲಾವಣೆಯಾಗುತ್ತಾ? ಅನ್ನುವ ಪ್ರಶ್ನೆ ನಿಮ್ಮದಾದರೆ ನನ್ನ ಉತ್ತರ ’ಇಲ್ಲ’! ಅಂತಲೇ. ಭ್ರಷ್ಟಚಾರ ಅನ್ನುವ ಬ್ರಹ್ಮ ರಾಕ್ಷಸನ ವಿರುದ್ಧ ಅಣ್ಣ ಹಜ಼ಾರೆ ನೇತೃತ್ವದಲ್ಲಿ ಶುರುವಾಗಿರುವ ಈ ಹೋರಾಟವೇ ಅಂತಿಮವಲ್ಲ.ಇದು ಆರಂಭವಷ್ಟೆ ಅನ್ನುವುದು ನನ್ನ ಅಭಿಪ್ರಾಯ.
ಅಂತಿಮವಾಗುವುದಾದರೂ ಹೇಗೆ ಹೇಳಿ, ಭ್ರಷ್ಟಚಾರ ಅಂದಾಕ್ಷಣ ಎಲ್ಲರ ಕಣ್ಣು ಮೊದಲು ಬೀಳುವುದೂ ಕಳ್ಳ(ಎಲ್ಲ ಅಲ್ಲ) ರಾಜಕಾರಣಿಗಳ ಮೇಲೆ,ಆಮೇಲೆ ಸರ್ಕಾರಿ ಕಛೇರಿ ಮತ್ತು ಅಧಿಕಾರಿಗಳ ಮೇಲೆ.ತಪ್ಪೇನಿಲ್ಲ ಬಿಡಿ…! ಭ್ರಷ್ಟಚಾರ ಅನ್ನೋ ಪಿರಮಿಡ್ನ ತುತ್ತ ತುದಿಯಲ್ಲಿರೋ ಅವರ ಮೇಲೆ ಎಲ್ಲರ ಕಣ್ಣು ಬೀಳುವುದು ಸಹಜ.ಆದರೆ, ’ನಾವುಗಳೆಷ್ಟು ಸಾಚಾ?’ ಅಂತ ನಮ್ಮನ್ನೇ ನಾವ್ಯಾವತ್ತಾದರೂ ಕೇಳಿಕೊಂಡಿದ್ದೇವೆಯೇ?
ನರೇ೦ದ್ರ ಮೋದಿ ಎ೦ಬ ಭಾರತದ ಚಲಾವಣೆಯ ನಾಣ್ಯ !!
ರಾಘವೇಂದ್ರ ನಾವಡ ಕೆ ಎಸ್
ಎಲ್ಲರೂ ಮಹಾನ್ ವ್ಯಕ್ತಿಗಳಾಗಲು ಸಾಧ್ಯವಿಲ್ಲ.. ಎಲ್ಲರೂ ಮಹಾತ್ಮರಾದರೆ ಅತ೦ತ್ರರಾಗೋರ್ಯಾರು? ಎ೦ಬ ಉಡಾಪೆಯ ಮಾತೊ೦ದಿದೆ! ಸೂಕ್ತ ಸಮಯದಲ್ಲಿ ಸುಪ್ತವಾಗಿ ನಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಿ, ಜನ ಕಲ್ಯಾಣಕ್ಕಾಗಿ ಚಿ೦ತಿಸುವವರೆಲ್ಲಾ ಮಹಾತ್ಮರೇ ಆಗುತ್ತಾರೆ!
ಈ ಪ್ರಸ್ತುತ ಲೇಖನಕ್ಕೆ ಮತ್ತೊಮ್ಮೆ ನರೇ೦ದ್ರ ಮೋದಿಯೇ ಕಥಾವಸ್ತು! ನಿನ್ನೆ ನನ್ನ ಆತ್ಮೀಯ ಪ್ರಸ್ಕಾ ಕಳುಹಿಸಿದ ಮೊಬೈಲ್ ಸ೦ದೇಶವೇ ಮತ್ತೊಮ್ಮೆ ನನ್ನ ಲೇಖನಕ್ಕೆ ಆಧಾರವಾಗಿದೆ. ಮೋದಿ ಸರ್ಕಾರದ ಮತ್ತೊ೦ದು ಸಾಧನೆಯನ್ನೇ ಈ ಲೇಖನದಲ್ಲಿ ಬಿ೦ಬಿಸುತ್ತಿದ್ದೇನೆ. ಈ ಹಿ೦ದೆ ನರೇ೦ದ್ರ ಮೋದಿಯವರ ಬಗ್ಗೆ ಇಷ್ಟಕ್ಕೂನರೇ೦ದ್ರ ಮೋದಿ ಮಾಡಿರುವ ತಪ್ಪಾದರೂ ಏನು? ಎ೦ಬ ಲೇಖನದಲ್ಲಿ ಗುಜರಾತ್ ಯಶೋಗಾಥೆಯನ್ನು ಸಾದ್ಯ೦ತವಾಗಿ ವಿವರಿಸುವ ಪ್ರಯತ್ನ ಮಾಡಿದೆ.

ಅಮರನಾಥ ಯಾತ್ರೆಯ ಪ್ರಾರಂಭ
ಶ್ರೀಹರ್ಷ ಸಾಲಿಮಠ
ಅಮರನಾಥ ಯಾತ್ರೆ ಮತ್ತೆ ಶುರುವಾಗಿದೆ. ಅಲ್ಲಿ ಇಲ್ಲಿ ರಿಸರ್ಚು ಮಾಡುವವರಿಗಿಂತ ಹೋಗಿಬಂದವನ ಬಾಯಲ್ಲೇ ಕೇಳಿದರೆ ವಿವರವಾದ ಐಡಿಯಾ ಸಿಗುತ್ತದೆ! ವಾಟ್ ಎನ್ ಐಡಿಯಾ ಸರ್ ಜಿ!
ಅಮರನಾಥಕ್ಕೆ ಹೋಗುವವರು ಮೊದಲು ಪರವಾನಗಿ ಪಡೆಯಬೇಕು. ಪರವಾನಗಿ ಜೆ&ಕೆ (ಜಮ್ಮು ಕಾಶ್ಮೀರ) ಬ್ಯಾಂಕ್ ನಲ್ಲಿ ದೊರೆಯುತ್ತದೆ. ಕರುನಾಡಲ್ಲಿ ಮೈಸೂರು ಮತ್ತು ಬೆಂಗಳೂರಿನಲ್ಲಿ ಈ ಬ್ಯಾಂಕಿದೆ. ಬೆಂಗಳೂರಲ್ಲಿ ಅವೆನ್ಯೂ ರಸ್ತೆಯ ಕೊನೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಬಳಿ ಜಮ್ಮು ಕಾಶ್ಮೀರ ಬ್ಯಾಂಕಿದೆ. ದಿನಕ್ಕೆ ಪರಿಮಿತ ಜನರಿಗೆ ಮಾತ್ರ ಪರವಾನಗಿ ಕೊಡುತ್ತಾರೆ. ಇವತ್ತು ಪರವಾನಗಿ ಪಡೆದರೆ ಜುಲೈಗೆ ಸಿಗಬಹುದು. ಪರವಾನಗಿ ಸಿಕ್ಕ ದಿನವೇ ಗುಹೆಯ ಬಳಿ ಹೋಗಬೇಕೆಂದು ಹೇಳುತ್ತಾರಾದರೂ ಅಮರನಾಥದಲ್ಲಿ ಅಷ್ಟು ಕಟ್ಟುನಿಟ್ಟಿನ ನಿಯಮವಿರಲಿಲ್ಲ.
ಯಾತ್ರೆಗೆ ಹೊರಡಲು ಮದ್ಯಮವರ್ಗದವರಿಗೆ ರೈಲು ಒಳ್ಳೆಯ ಮಾರ್ಗ. ಪುಣೆಯಿಂದ ಜಮ್ಮುವಿಗೆ ನೇರ ರೈಲು ಇದೆ. ಇಲ್ಲವೇ ಹುಬ್ಬಳ್ಳಿ ಅಥವಾ ಬೆಂಗಳೂರಿನಿಂದ ಹೊಸದೆಹಲಿ ತಲುಪಿ ಹಳೆ ದೆಹಲಿ ರೇಲ್ವೇ ನಿಲ್ದಾಣದಿಂದ ಜಮ್ಮು ತಲುಪಬಹುದು (ಹೊಸ ದೆಹಲಿ ಯಿಂದ ಹಳೆದೆಹಲಿ ರೇಲ್ವೇ ನಿಲ್ದಾಣಕ್ಕೆ ಹೋಗಬೇಕು). ದೆಹಲಿಯಿಂದ ಜಮ್ಮು ಸುಮಾರು ಹದಿನೈದು ತಾಸುಗಳ ರೈಲು ಪಯಣ. ಸರ್ಕುಲಾರ್ ಟಿಕೆಟ್ ಕಾಯ್ದಿರಿಸಿದರೆ ಟಿಕೆಟ್ ದರದಲ್ಲಿ ರಿಯಾಯಿತಿ ಸಿಗುತ್ತದೆ.
ಜಮ್ಮು ಕಾಶ್ಮೀರದಲ್ಲಿ ಆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳನ್ನು ಹೊರತುಪಡಿಸಿ ಬೇರೆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳು ಕೆಲಸ ಮಾಡುವುದಿಲ್ಲ. ಎಲ್ಲ ರಾಜ್ಯದ ಎಲ್ಲ ಪೋಸ್ಟ್ ಪೇಡ್ ನೆಟ್ವರ್ಕ್ಗಳು ಕೆಲಸ ಮಾಡುತ್ತವಾದರೂ ಬಿ ಎಸ್ ಎನ್ ಎಲ್ ಪೋಸ್ಟ್ ಪೇಡ್ ಉತ್ತಮವಾದದ್ದು. ಮತ್ತಷ್ಟು ಓದು 
ಪಾಕಿಸ್ತಾನದ ಭೂಪಟ 17.05.2011ರ ಕನ್ನಡಪ್ರಭದಲ್ಲಿ…
– ಪಿ.ಎಸ್.ರಂಗನಾಥ
ಒಂದು ದೇಶದ ಭೂಪಟ ಅಂದರೆ ಅದರ ಭೌಗೋಳಿಕ ವಿನ್ಯಾಸ ಹಾಗು ಅದರ ಸರಿಹದ್ದು ಗಳನ್ನು ತೋರಿಸುವ ಚಿತ್ರ ಅಂತ ನಮ್ಮೆಲ್ಲರಿಗು ಗೊತ್ತಿರುವ ವಿಷಯ. ಪ್ರತಿಯೊಂದು ದೇಶವೂ ತನ್ನದೇ ಆದ ಒಂದು ನಕ್ಷೆಯನ್ನು ಸಿದ್ದಪಡಿಸಿಕೊಂಡು ಅಂತರಾಷ್ಟ್ರೀಯವಾಗಿ ತನ್ನನ್ನು ಗುರುತಿಸಿಕೊಳ್ಳುತ್ತದೆ. ಸದ್ಯಕ್ಕೆ ನಮ್ಮ ದೇಶಕ್ಕೆ ಬಂದರೆ ನಮ್ಮ ಕೆಲವು ಪ್ರಾಂತ್ಯಗಳು ಪಾಕಿಸ್ತಾನ ಹಾಗು ಚೀನಾದ ವಶದಲ್ಲಿದ್ದರು ನಾವುಗಳು ನಮ್ಮ ದೇಶದ ಗಡಿಯನ್ನು ಹಾಕಿ ನಾವು ಗುರುತಿಸಿಕೊಂಡಿದ್ದೇವೆ ಹಾಗು ಸರಕಾರ ಅದನ್ನು ಒಪ್ಪಿ ಅಧಿಕೃತವಾಗಿ ಮುದ್ರೆ ಹಾಕಿದೆ ಜತೆ ರಾಷ್ಟ್ರದ ಪ್ರಜೆಗಳಿಗೆ ಸಹ ಒಪ್ಪಿಗೆ ಯಾಗಿದೆ. ಯಾವುದೇ ಪುಸ್ತಕಗಳಲ್ಲಿ, ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಹಾಗು ರಾಷ್ಟ್ರದ ಮೂಲೆ ಮೂಲೆ ಗಳಲ್ಲಿ ಮುದ್ರಿತವಾಗಿ ಪ್ರಸಾರ ವಾಗುತ್ತಿರುವುದು POK (Pak Occupied Kashmir) ಹಾಗು ಚೈನಾ ಆಕ್ರಮಿತ ಕೆಲ ಭಾಗವನ್ನು ಒಳಗೊಂಡ ಭೂಪಟ ಮಾತ್ರ. ಆದರೆ ಪಾಕಿಸ್ತಾನ POK ಪ್ರಾಂತ್ಯವನ್ನು ತನ್ನ ಅಧಿಕೃತ ನಕ್ಷೆ ಯಾಗಿ ಉಪಯೋಗಿಸುತ್ತಿದೆ. ಅದನ್ನು ನಮ್ಮ ರಾಷ್ಟ್ರದವರು ಒಪ್ಪುವುದಿಲ್ಲ ಹಾಗು ಆ ಪ್ರಾಂತ್ಯ ಪಾಕಿಸ್ತಾನದ ವಶದಲ್ಲಿದ್ದರು ಸಹ ಅದಕ್ಕೆ ಅಂತರಾಷ್ಟ್ರೀಯ ಮನ್ನಣೆ ಇನ್ನು ದೊರಕಿಲ್ಲ. ಅದು disputed area ಅಂತ ಬೇರೆ ದೇಶದವರು dotted / dashed line ನಲ್ಲಿ ತೋರಿಸುತ್ತಾರೆ.
ನಾನು ಕಳೆದ ೪ ವರ್ಷಗಳಿಂದ ಕೊಲ್ಲಿ ರಾಷ್ಟ್ರಗಳಲ್ಲಿ ದುಡಿಯುತಿದ್ದೀನಿ, ಸಾಮನ್ಯವಾಗಿ ಭಾರತದ ಭೂಪಟ, ರಾಷ್ಟ್ರದ ಲಾಂಛನ, ಭಾವುಟ ಗಳನ್ನು ನೋಡಿ ನನಗೆ ಬಹಳ ಖುಶಿ ಯಾಗುತ್ತೆ. ಯಾವುದಾದರು ಕಛೇರಿ ಗಳಲ್ಲಿ ಹಾಕಿರುವ ಪ್ರಪಂಚದ ಭೂಪಟ ದಲ್ಲಿ ನಮ್ಮ ಭಾರತ ದೇಶವನ್ನು ಗಮನಿಸುವುದು ನನ್ನ ಅಭ್ಯಾಸ, ಒಂದು ವೇಳೆ ಭಾರತದ ಭೂಪಟದಲ್ಲಿ ಏನಾದರು ವ್ಯತ್ಯಾಸ ಗಳಿದ್ದರೆ, ಅಲ್ಲಿರುವ ಭಾರತೀಯ ಸಿಬ್ಬಂದಿ ಯವರ ಗಮನಕ್ಕೆ ತರುವ ಪ್ರಯತ್ನ ಮಾಡಿ ಬದಲಾಯಿಸಲು ಯತ್ನಿಸುವೆ. ಕೆಲವರು ನನ್ನ ವಿಚಾರಕ್ಕೆ ಸಹಮತ ವ್ಯಕ್ತ ಪಡಿಸಿ ವಿಷಾದ ವ್ಯಕ್ತ ಪಡಿಸುದ್ದುಂಟು. ಇನ್ನು ಕೆಲವರು, ಇಲ್ಲಿ ಸಿಗೋದೆ ಇದೇ ಮ್ಯಾಪ್ ಇದು ಬಿಟ್ರೆ ಬೇರೆ ವಿಧಿಯಿಲ್ಲ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸುತಿದ್ದರು, .
ಕನ್ನಡಪ್ರಭ ೧೭.೦೫.೨೦೧೧ ಪುಟ ೯ರಲ್ಲಿ ಪ್ರಕಟವಾಗಿರುವ ಲೇಖನ “ದಾವುದ್ ನ ಮುಗಿಸುವ ಗುಂಡು ಸಿದ್ಧವಾಗಿಲ್ಲವೇ? ರಲ್ಲಿ ಮುದ್ರಿತವಾಗಿರುವ ಪಾಕಿಸ್ತಾನದ ಭೂಪಟ, ನಮ್ಮ ದೇಶದ ಕಾಶ್ಮಿರದ ಒಂದು ಭಾಗವನ್ನು ಅದರಲ್ಲಿ ಒಳಗೊಂಡಿದೆ.
ನವರಸಪುರ ಉತ್ಸವ ಹಾಗೂ ಕನ್ನಡ ಮತ್ತು ಸಂಸ್ಕೃತಿ.!
ಮಹೇಶ.ಎಮ್.ಆರ್
ಕಳೆದ ಕೆಲವು ವರುಶಗಳಿಂದ ಸ್ಥಗಿತಗೊಂಡಿದ್ದ ನವರಸಪುರ ಉತ್ಸವ ಮತ್ತೆ ಈ ವರುಶ ಹಮ್ಮಿಕೊಳ್ಳಲಾಗಿದ್ದು ಸಂತೋಶದ ವಿಶಯ ಮತ್ತು ಅದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು. ವಿಜಾಪುರದ ಇತಿಹಾಸ, ಸಂಸ್ಕೃತಿ, ಕಲೆ, ಸಾಹಿತ್ಯ, ಪರಂಪರೆಯನ್ನು ಹೊರಜಗತ್ತಿಗೆ ತೋರಿಸುವಲ್ಲಿ, ಆ ಮೂಲಕ ನಾಡಿನ ಜನರಲ್ಲಿ ತಮ್ಮೂರಿನ ಬಗ್ಗೆ ಹೆಮ್ಮೆ ಮೂಡಿ, ನಾಡು-ನುಡಿಯ ಚೌಕಟ್ಟಿನಲ್ಲಿ ಅವರನ್ನು ಒಗ್ಗೂಡಿಸಲು ಇಂತಹ ಉತ್ಸವಗಳು ಸಹಕಾರಿಯಾಗುತ್ತವೆ. ಈ ಬಾಗದ ಸ್ಥಳೀಯ ಕಲಾವಿದರಿಗೂ ತಮ್ಮ ಪ್ರತಿಬೆಯನ್ನು ಪರಿಚಯಿಸಲು ಇದೊಂದು ಒಳ್ಳೆಯ ವೇದಿಕೆ.

ನೈತಿಕತೆಯ ದ್ರಷ್ಟಾರರ ನೈತಿಕತೆಯ ಸಿಧ್ಧಾ೦ತ!!
– ರಾಘವೇಂದ್ರ ನಾವಡ
ಮೂರು ವರ್ಷಗಳ ಹಿ೦ದೆ ಕನ್ನಡಿಗರು ಭಾ.ಜ.ಪಾವನ್ನು ಕಾ೦ಗ್ರೆಸ್ ಹಾಗೂ ಜೆ.ಡಿ,.ಎಸ್. ಗಳಿಗೆ ಪರ್ಯಾಯವೆ೦ದೋ, ಕುಮಾರಸ್ವಾಮಿ ಹೇಳಿದ ಮಾತಿನ೦ತೆ ಅಧಿಕಾರ ಕೊಡದೆ ಯಡಿಯೂರಪ್ಪ ಆಗ ಹರಕೆಯ ಕುರಿಯಾಗಿದ್ದಕ್ಕೋ… ಕೇವಲ ೮ ದಿನಗಳ ಅಧಿಕಾರವನ್ನು ಮಾತ್ರವೇ ಅನುಭವಿಸಿದರು ಪಾಪ! ಎ೦ಬ ಜನತೆಗೆ ಯಡಿಯೂರಪ್ಪನವರ ಮೇಲಿದ್ದ ಸಹಾನುಭೂತಿಯಿ೦ದಲೋ ಮರು ವಿಧಾನಸಭಾ ಚುನಾವಣೆಯಲ್ಲಿ ಬಾ.ಜ.ಪಾ. ೧೧೦ ಸ್ಥಾನಗಳನ್ನು ಗೆದ್ದು ಪಕ್ಷೇತರರ ಸಹಾಯದಿ೦ದ ಅಧಿಕಾರದ ಗದ್ದುಗೆ ಏರಿತು. ಯಡಿಯೂರಪ್ಪನವರ ಸ೦ಪೂರ್ಣ ಜೀವನವೇ ಸ೦ಘರ್ಷಮಯವೆ೦ದು ಜಾತಕದಲ್ಲಿ ಬರೆದಿದೆಯೇನೋ!! ಅಲ್ಲಿ೦ದ ಇಲ್ಲಿಯವರೆವಿಗೂ ನಮ್ಮ ಮುಖ್ಯಮ೦ತ್ರಿಗಳು ಸರಿಯಾಗಿ ನಿದ್ರೆಯನ್ನೇ ಮಾಡಿರಲಿಕ್ಕೆ ಸಾಧ್ಯವಿಲ್ಲ! ಒ೦ದಲ್ಲಾ, ಒ೦ದು ವಿವಾದಗಳು ಯಡಿಯೂರಪ್ಪನವರ ಬೆನ್ನು ಹತ್ತಿದ ಬೇತಾಳಗಳ೦ತೆ ಹೆಗಲಿಗೇರಿದವು. ಆದರೂ ಅದೃಷ್ಟ ಗಟ್ಟಿಯಿದ್ದುದ್ದಕ್ಕೋ ಏನೋ.. ಅಥವಾ ನಾಡಿನ ಸಮಸ್ತ ಅಧ್ಯಾತ್ಮಿಕ ಸ೦ತರುಗಳ ಆಶಿರ್ವಾದದ ಬಲದಿ೦ದಲೋ ಏನೋ ಇಲ್ಲಿಯವರೆವಿಗೂ ಕುರ್ಚಿಯನ್ನುಳಿಸಿಕೊ೦ಡಿದ್ದಾರೆ.. ಇನ್ನು ಮು೦ದೆ ಅದ್ಯಾವ ದಿವ್ಯ ಹಸ್ತವೂ ಯಡಿಯೂರಪ್ಪನವರ ನೆತ್ತಿಯನ್ನು ನೇವರಿಸಲಾರದು ಎ೦ಬ ಸತ್ಯ ಅರಿವಾಗಿದೆ!
ಈ ಯಡಿಯೂರಪ್ಪನವರು ಹುಟ್ಟಾ “ಮು೦ಗೋಪಿ“ ಎ೦ಬುದು ಸರ್ವವೇದ್ಯ! ಆದರೆ ಅದರ ಜೊತೆಗೆ ಈಗ ಇನ್ನೊ೦ದನ್ನೂ ಸೇರಿಸಿಕೊಳ್ಳೋಣ.. ನಮ್ಮ ಯಡಿಯೂರಪ್ಪನವರಷ್ಟು “ಮಹಾ ಗಡಿಬಿಡಿ ಪುರುಷ “ ಮತ್ತೊಬ್ಬನಿರಲಿಕ್ಕಿಲ್ಲ!! ಎಲ್ಲರನ್ನೂ ಸಮಾನವಾಗಿ ಕರೆದುಕೊ೦ಡು ಹೋಗುವ ಸ್ವಭಾವ ಇವರಿಗಿಲ್ಲವೇ ಇಲ್ಲ. ಎಲ್ಲ್ಲಾ ಹದಿನಾರು ಶಾಸಕರನ್ನು ಅರ್ಹರೆ೦ದು ಸುಪ್ರೀ೦ ಕೋರ್ಟ್ ಅನರ್ಹತೆಯಿ೦ದ ಮುಕ್ತರನ್ನಾಗಿಸಿದ ಕೂಡಲೇ, ಪಕ್ಷದ ಶಾಸಕಾ೦ಗ ಸಭೆಯನ್ನು ಕರೆದು, ಹದಿನಾರು ಶಾಸಕರನ್ನು ಪಕ್ಕದಲ್ಲಿ ಕೂರಿಸಿಕೊ೦ಡು “ಏನ್ರಪ್ಪಾ.. ಏನು ನಿಮ್ಮ ನಿರ್ಧಾರ?“ ಎ೦ದು ಸಮಾಧಾನವಾಗಿ, ವರಿಷ್ಟರ ಸಮ್ಮುಖದಲ್ಲಿ ಅವರನ್ನು ಒಲಿಸಿಕೊ೦ಡಿದ್ದರೆ ಏನಾಗುತ್ತಿತ್ತು? ಅದನ್ನು ಬಿಟ್ಟು, ಹಿ೦ದೆ ಕೊಟ್ಟಿದ್ದ ಅವಿಶ್ವಾಸ ಪತ್ರಗಳನ್ನು ವಾಪಾಸು ತರಲು ರಾಜಭವನಕ್ಕೆ ಕಳುಹಿಸಿಕೊಡುವ ಏರ್ಪಾಟು!ಇವರೆಲ್ಲಾ ಸ೦ವಿಧಾನಾತ್ಮಕವಾಗಿ ಆರಿಸಿ ಹೋದ ಜನಪ್ರತಿನಿಧಿಗಳು ಎ೦ಬುದನ್ನೇ ಮರೆತರೆ ಹೇಗೆ?
ಮತ್ತಷ್ಟು ಓದು 
ಮೀಡಿಯಾದ ಅಜ್ಜಿ ಕಥೆಯೂ,ಬುಷ್-ಬಿನ್ ಲಾಡೆನ್ ಎ೦ಬ ಟೆರೆರಿಸ್ಟ್ ಗಳೂ…
(ಒಸಾಮ ಸತ್ತ ಮೇಲೆ,ಎಲ್ಲ ಅಮೇರಿಕಾವನ್ನು ಬಯ್ಯುತ್ತಲೋ,ಒಸಾಮನನ್ನು ಹೊಗಳುತ್ತಲೋ ಬರೆಯುವಾಗ, ಶಿಹಾ ಅವ್ರ ವಿಭಿನ್ನ ಯೋಚನಾ ದಾಟಿಯ ಈ ಬರಹ ನಿಲುಮೆಯ ಓದುಗರಿಗಾಗಿ)
– ಶಿಹಾ ಉಳ್ಳಾಲ್
ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಹತ್ಯೆಯ ಸುದ್ಧಿಯನ್ನು ಜಗತ್ತಿನ ವಿವಿಧ ಚಾನೆಲುಗಳು ವಿವಿಧ ರೀತಿಯಲ್ಲಿ ಪ್ರಸಾರಮಾಡುತ್ತಿದ್ದಾಗ ನಮ್ಮ ಕರ್ನಾಟಕದ ನ೦.1 ಬ೦ಡಲ್ ಬಡಾಯಿ ಸುದ್ದಿ ಚಾನೆಲ್ ಸಹ ಈ ಸುದ್ದಿಯನ್ನು ಯಾಕೋ ಅಜ್ಜಿ ಕಥೆ ಹೇಳುವ೦ತೆ ತೋರಿಸಿತು.
ಇ೦ದಿನ ಮಾಧ್ಯಮ ಕೆಲವೊಮ್ಮೆ ಹೇಗೆ ತಪ್ಪು ಮಾಹಿತಿ ಕೊಟ್ಟು ಜನರನ್ನು ದಾರಿತಪ್ಪಿಸುತ್ತದೆ , ಅಲ್ಲಾರೀ ಮಾಹಿತಿ ಪ್ರಸರಿಸುವಾಗ ಸ್ವಲ್ಪವಾದರೂ ,ಕನಿಷ್ಟ 5ನೇ ತರಗತಿ ಓದುವ ಮಕ್ಕಳಲ್ಲಿರುವರ ಬುದ್ದಿ ಬೇಡವೇ.. ಅದನ್ನು ಇಡೀ ವಿಶ್ವ ನೋಡುತ್ತದೆ ಎ೦ಬ ಅರಿವು ಬೇಡವೇ? ಅಲ್ಲ ಅವರ೦ತೆ ,ನೋಡುವವರು ದಡ್ಡರು ಎ೦ದುಕೊ೦ಡಿದ್ದಾರೆಯೇ ?
ಈ ಚಾನಲ್ ಪ್ರಕಾರ 6 ತಿ೦ಗಳ ಮು೦ಚೆಯೇ ಲಾಡೆನ್ ಇರುವ ಮನೆಯನ್ನು ಅಮೇರಿಕ ನೇವಿ ಸೀಲ್ ಟೀಮ್ ಸಿಕ್ಸ್ (ಸ್ಪೆಶನ್ ಇನ್ವೆಸ್ಟಿ ಕೇಶನ್ ಸೋಲ್ಜರ್) ನೋಡಿದ್ದರಂತೆ . ಅದರ೦ತೆ ಅಮೇರಿಕಾದಲ್ಲಿ ಅದರ ತದ್ರೂಪಿ ಕಟ್ಟಡ ತಯಾರಿಸಿ ಅದರಲ್ಲಿ 6 ತಿ೦ಗಳಿನಿ೦ದ ಲಾಡೆನ್ ಹಿಡಿಯುವ ಬಗ್ಗೆ ರಿಹರ್ಸಲ್ ನಡೆಸಲಾಗಿದೆಯಂತೆ ! ಅಬ್ಬಾ ಎ೦ತಹ ಜೋಕ್ ಅಲ್ವೇ ?
29-ಎಪ್ರಿಲ್-2011 ರ೦ದು “ಕಿಲ್ ಲಾಡೆನ್” ಎಂಬ ಕಡತಕ್ಕೆ ಅಂದರೆ ಲಾಡೆನ್ ನನ್ನು ಎನ್-ಕೌ೦ಟರ್ ಮಾಡಲಿಕ್ಕೆ ಒಬಾಮಾ ಆದೇಶಿಸಿದರ೦ತೆ.ವಿಶ್ವದ ಮೋಸ್ಟ್ ವಾ೦ಟೆಡ್ ಒಬ್ಬ ಟೆರೆರಿಸ್ಟ್ ನನ್ನು 6 ತಿ೦ಗಳ ಮು೦ಚೆ ಆತನ ಇರುವಿಕೆಯ ಸ್ಥಳ ನೋಡಿ ಅಲ್ಲಿಯೇ ಆಗಲೇ ಎನ್ ಕೌ೦ಟರ್ ಮಾಡೂವುದು ಬಿಟ್ಟು ಆತ ಇರುವ ಬಿಲ್ಡಿಂಗ್ ಚಿತ್ರವನ್ನು ಅಮೇರಿಕಾದಲ್ಲಿ ತಯಾರಿಸಿ ಅಲ್ಲಿ ತಾಲಿಮು ನಡೆಸಿ.. ಹೋ……..
ಒಸಾಮ ಸತ್ತ… ಭಾರತ ಬದುಕಿದೆಯಾ!?
– ರಾಕೇಶ್ ಶೆಟ್ಟಿ
ತನ್ನ ಮಕ್ಕಳಿಗೆ ಮಾತ್ರ ’ಜಿಹಾದ್’ನೆಡೆಗೆ ಬರಬೇಡಿ ನನ್ನಾಣೆ ಅಂತೇಳಿ, ಕಂಡೋರ ಮಕ್ಕಳ ಬೆನ್ನ ಹಿಂದೆ ಅವಿತು ಕುಳಿತು ಮನುಶ್ಯರನ್ನ ಹುಳಗಳಿಗಿಂತ ಕಡೆಯದಾಗಿ ಸಾಯಿಸಿದ ಒಸಾಮ ಅನ್ನುವ ಸೈತಾನನೊಬ್ಬ ಸತ್ತರೆ ನಾವ್ಯಾಕೆ ಕುಣಿಯಬಾರದು!? ಕುಣಿದರೇನು ತಪ್ಪು?ಇನ್ನೇನು ಅಳಬೇಕಿತ್ತಾ?
ಒಸಾಮ ಸತ್ತರೆ ನಾವ್ಯಕೆ ಕುಣಿಯಬೇಕು? ಅನ್ನುವ ಬರಹವನ್ನೋದಿದೆ.ಅದರಲ್ಲಿ ’ದೇಶ ಪ್ರೇಮ’ ಅನ್ನುವ ಪದದ ಬಗ್ಗೆಯೂ ಉಡಾಫ಼ೆಯಿದೆ.ದೇಶಪ್ರೇಮ ಅನ್ನುವುದನ್ನ ತಾವು ವಿರೋಧಿಸುವ ಪಕ್ಷ/ಸಂಘಟನೆಯ ಗುತ್ತಿಗೆ ಕೊಡಲಾಗಿದೆಯೆಂಬಂತೆ,ಅವರು ಮಾತ್ರವೇ ದೇಶ ಪ್ರೇಮಿಗಳು ಅಂದುಕೊಂಡು,ಅವರ ಮೇಲಿನ ಅಸಹನೆಯನ್ನ ’ದೇಶ ಪ್ರೇಮಿ’ಗಳು ಅನ್ನುವ ಪದಕ್ಕೆ ಜೋಡಿಸಿ ಮಾತನಾಡಿದ್ದಾರೆ ಲೇಖಕರು.
ಎಂಥಾ ಮರುಳಯ್ಯಾ ಇದು…
– ಚಾಮರಾಜ ಸವಡಿ
ತುಂಬ ದಿನಗಳ ಹಿಂದೆ ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಸಂದರ್ಶನವೊಂದರಲ್ಲಿ ಹೇಳಿದ ಮಾತೊಂದು ನೆನಪಾಗುತ್ತಿದೆ. ಓದುಗರನ್ನು ಈ ಪರಿ ಸೆಳೆಯುವಲ್ಲಿ ನೀವು ಯಶಸ್ವಿಯಾಗಿದ್ದು ಹೇಗೆ? ಎಂಬಂರ್ಥದ ಪ್ರಶ್ನೆಗೆ ಯಂಡಮೂರಿ ಉತ್ತರ: ಅವರ ದೌರ್ಬಲ್ಯವನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ.
ಇವತ್ತು ನಮ್ಮ ಸುತ್ತಮುತ್ತ ನಡೆಯುತ್ತಿರುವ ಹಲವಾರು ವಿಷಯಗಳನ್ನು ನೋಡಿದಾಗ ನನಗೆ ಈ ಮಾತು ಪದೆ ಪದೆ ನೆನಪಿಗೆ ಬರತೊಡಗಿದೆ.
ಸ್ವಾಮಿಗಳು, ಕಪಟ ಜ್ಯೋತಿಷಿಗಳು, ಬಹುತೇಕ ರಾಜಕಾರಣಿಗಳು, ಟಿವಿಗಳು, ಪತ್ರಿಕೆಯವರು, ಸರ್ಕಾರಿ ನೌಕರರು, ವಕೀಲರು, ವೈದ್ಯರು- ಹೀಗೆ ನೀವು ಯಾವುದೇ ರಂಗ ನೋಡಿದರೂ ಸಾಕು, ಯಂಡಮೂರಿ ಹೇಳಿದ ಮಾತು ಸತ್ಯ ಎಂಬುದು ಸ್ಪಷ್ಟವಾಗುತ್ತ ಹೋಗುತ್ತದೆ. ಪ್ರತಿಯೊಬ್ಬರೂ ಜನರ ದೌರ್ಬಲ್ಯ ಹಾಗೂ ಅನಿವಾರ್ಯತೆಗಳನ್ನೇ ಬಳಸಿಕೊಳ್ಳುವವರು. ಎಲ್ಲೋ ಒಬ್ಬಿಬ್ಬರು ಪುಣ್ಯಾತ್ಮರು ಇರಬಹುದು. ಆದರೆ, ಬಹುತೇಕರ ಜೀವನ ನಡೆಯುತ್ತಿರುವುದೇ ಜನರನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುವುದರಿಂದ.
ಸಾಮಾನ್ಯ ವ್ಯಕ್ತಿಯಂತೆ ಓಡಾಡಿಕೊಂಡವ ಕಾವಿ ಬಟ್ಟೆ ಧರಿಸಿದ ಕೂಡಲೇ ಆತ ಸ್ವಾಮೀಜಿಯಾಗಿಬಿಡುತ್ತಾನೆ. ಕಿಂಚಿತ್ತೂ ವಿಚಾರ ಮಾಡದೇ ಆತನ ಕಾಲಿಗೆ ಬೀಳಲು ಜನ ಹಾತೊರೆಯತೊಡಗುತ್ತಾರೆ. ಖಾಲಿ ಓಡಾಡಿಕೊಂಡವ, ಒಂದಕ್ಕೆರಡು ಪಟ್ಟು ಹಣ ಕೊಡುತ್ತೇನೆ ಎಂದ ಕೂಡಲೇ ಸಾಲ ಮಾಡಿ ಹಣ ಕೊಡಲು ಜನ ಮುಂದಾಗುತ್ತಾರೆ. ಜ್ಯೋತಿಷಿಗಳು ಹೇಳಿದಂತೆ ನಡೆದುಕೊಳ್ಳುವವರು, ಜಾಹೀರಾತು ನೋಡಿ ಔಷಧಿ ಕೊಳ್ಳುವವರು, ಕೆಲಸಕ್ಕೆ ಹಣ ಕಟ್ಟುವವರು, ಅರ್ಧ ರೇಟಿಗೆ ಚಿನ್ನ ಕೊಳ್ಳಲು ಹಾತೊರೆಯುವವರು, ಕೆಲಸ ಕೊಡುತ್ತೇನೆ ಎಂದರೆ ಕರೆದಲ್ಲಿಗೆ ಹೋಗುವವರು ನಮ್ಮ ಸುತ್ತಮುತ್ತಲೇ ಇದ್ದಾರೆ. ಮಾತಿಗೆ ಬಂದರೆ, ಅವರೂ ರಾಜಕಾರಣಿಗಳನ್ನು, ಜ್ಯೋತಿಷಿಗಳನ್ನು, ಸ್ವಾಮೀಜಿಗಳನ್ನು, ನಕಲಿ ವೈದ್ಯರನ್ನು, ವಂಚಕರನ್ನು ಬೈಯುವವರೇ. ಆದರೆ, ತಮಗೆ ಲಾಭವಾಗುತ್ತದೆ ಎಂದು ಅನಿಸಿದ ತಕ್ಷಣ ವಿವೇಚನೆ ಮರೆತುಬಿಡುತ್ತಾರೆ. ಕಣ್ಣು ಮುಚ್ಚಿಕೊಂಡು ಹಳ್ಳಕ್ಕೆ ಬೀಳುತ್ತಾರೆ.






