ಕಸದಿಂದ ರಸ ತೆಗೆದ ವಿಲಿಯಂನ ಕತೆ !
– ವಸಂತ್ ಶೆಟ್ಟಿ
ಜಗತ್ತಿನೆಲ್ಲೆಡೆ ಎಲ್ಲೇ ಒಂದೊಳ್ಳೆ ಐಡಿಯಾ ಜನರ ಜೀವನದ ದಿಕ್ಕು ಬದಲಿಸುವಂತದ್ದಾಗಿದ್ದಲ್ಲಿ, ಎಷ್ಟೋ ಕಶ್ಟದ ಸಮಸ್ಯೆಗಳಿಗೆ ತಟ್ ಅಂತ ಪರಿಹಾರ ಕೊಡಿಸುವಂತದ್ದಾಗಿದಲ್ಲಿ ಅಂತಹ ಐಡಿಯಾ TED.com (Technology, Entertainment and Design) ನಲ್ಲಿ ಕಾಣಿಸಿಕೊಳ್ಳದೇ ಇರುವುದು ವಿರಳ ಅನ್ನಬಹುದು. ಎಲ್ಲೆಡೆ, ಎಲ್ಲರೊಡನೆ ಹಂಚಿಕೊಳ್ಳ ಬಹುದಾದಂತಹ ಐಡಿಯಾಗಳಿಗೆಂದೇ ಟೆಡ್ ಕಾನ್ಫರೆನ್ಸ್ ಗಳನ್ನು 1984ರಿಂದಲೇ ಸ್ಯಾಪಲಿಂಗ್ ಫೌಂಡೇಶನ್ ಅನ್ನುವ ಸಂಸ್ಥೆ ನಡೆಸಿಕೊಂಡು ಬಂದಿದೆ. 2006ರಿಂದಿಚೆಗೆ ಟೆಡ್.ಕಾಂ ತಾಣದಲ್ಲಿ 700ಕ್ಕೂ ಹೆಚ್ಚು ಇಂತಹ ಚರ್ಚೆಗಳ ವಿಡಿಯೋಗಳನ್ನು ಪುಕ್ಕಟ್ಟೆ ನೋಡಲು ಅನುಕೂಲ ಮಾಡಿ ಕೊಟ್ಟಿದ್ದಾರೆ. ಇಲ್ಲಿಯವರೆಗೆ 290ಮಿಲಿಯನ್ ಬಾರಿ ಈ ತಾಣದಲ್ಲಿನ ವಿಡಿಯೋಗಳನ್ನು ನೋಡಲಾಗಿದೆ ಅನ್ನುವುದು ಇಲ್ಲಿ ನಡೆಯುವ ಚರ್ಚೆಗಳ ಗುಣಮಟ್ಟ ಮತ್ತು ವಿಷಯದಲ್ಲಿನ ವ್ಯಾಪ್ತಿಯನ್ನು ತೋರಿಸುತ್ತೆ ಅನ್ನಬಹುದು. ಇರಲಿ, ಇವತ್ತು ಟೆಡ್ ಬಗ್ಗೆ ಇಷ್ಟೆಲ್ಲ ಮಾತನಾಡಲು ಕಾರಣ, ಆಕಸ್ಮಿಕವಾಗಿ ಟೆಡ್ ನಲ್ಲಿ ಎಡತಾಕಿದ ಒಂದೊಳ್ಳೆ ವಿಡಿಯೋ !
ಗಾಳಿ ಗೋಪುರ ಕಟ್ಟಿದ ವಿಲಿಯಂನ ಕತೆ !
ಇಡೀ ಜಗತ್ತನ್ನೇ ಸಾಕಿ ಸಲುಹಬಲ್ಲ ಪ್ರಕೃತಿ ಸಂಪತ್ತುಳ್ಳ ಆಫ್ರಿಕಾದ ಹೆಚ್ಚಿನ ದೇಶಗಳು ತಮ್ಮ ಒಳಜಗಳ, ಜನಾಂಗೀಯ ಕಲಹಗಳಲ್ಲಿ ಮುಳುಗಿ, ಒಪ್ಪೊತ್ತಿನ ಕೂಳಿಗೂ ಗತಿಯಿಲ್ಲದ, ನಡೆದಾಡುವ ಅಸ್ತಿಪಂಜರವುಳ್ಳ ಜನರೇ ತುಂಬಿರುವ ದೇಶಗಳಿಂದ ತುಂಬಿದೆ. ಮಲಾವಿ ಅನ್ನುವ ಕಡು ಬಡ ದೇಶವೂ ಇದೇ ಆಫ್ರಿಕಾದಲ್ಲಿದೆ. ಭೂಮಿಯನ್ನೇ ನೆಚ್ಚಿಕೊಂಡು ಬದುಕುವ ಬಹು ಪಾಲು ಜನರಲ್ಲಿ ವಿಲಿಯಂ ಕಂಕವಾಂಬಾ ಎಂಬ 14ರ ಪೋರನು ಕೂಡಾ ಒಬ್ಬ. 2001ರಲ್ಲಿ ಬಂದ ಭೀಕರ ಬರಗಾಲ 6 ಜನ ಅಕ್ಕ-ತಂಗಿಯರಿದ್ದ ಅವನ ಕುಟುಂಬವನ್ನು ಹಸಿವಿನಿಂದ ನರಳುವಂತೆ ಮಾಡಿತ್ತು, ಆತನನ್ನು ಶಾಲೆಯಿಂದಲೂ ಬಿಡಿಸಿತ್ತು. Necessity is mother of all invention ಅನ್ನುವ ಎಂಬಂತೆ ತನಗೆರಗಿದ ಬರಕ್ಕೆ ಪರಿಹಾರ ಕಂಡುಕೊಳ್ಳಲು ಹೊರಟ ವಿಲಿಯಂನಿಗೆ ಕಂಡಿದ್ದು ತನ್ನೂರಿನಲ್ಲಿ ಬಿರುಸಿನಿಂದ ಬೀಸುತ್ತಿದ್ದ ಗಾಳಿ !. ಹತ್ತಿರದ ಹೊತ್ತಿಗೆಮನೆಯಿಂದ ತಂದ ಫಿಸಿಕ್ಸ್, ವಿಂಡ್ ಎನರ್ಜಿಯ ಹೊತ್ತಿಗೆಗಳನ್ನು ಓದಿ (ಚಿತ್ರ ನೋಡಿ ಅನ್ನುವುದು ಹೆಚ್ಚು ಸೂಕ್ತ), ಮುರಿದೋದ ಸೈಕಲ್ಲು, ಟ್ರಾಕ್ಟರ್ ಫ್ಯಾನ್, ಪಿವಿಸಿ ಪೈಪ್ ಹೀಗೆ ಗುಜರಿಯಲ್ಲಿ ಸಿಕ್ಕ ಹಲವು ವಸ್ತು ಬಳಸಿ ಗಾಳಿ ಯಂತ್ರ ತಯಾರಿಸಿದ ವಿಲಿಯಂ ಅದರಿಂದ ದೊರೆತ ವಿದ್ಯುತ್ ಶಕ್ತಿ ಬಳಸಿ ತನ್ನ ಜಮೀನಿಗೆ ನೀರಾವರಿ, ಮನೆಗೆ ಬಳಸುವಷ್ಟು ವಿದ್ಯುತ್ ಹುಟ್ಟಿಸಿದ ಕತೆಯನ್ನು ಆತನ ಬಾಯಲ್ಲೇ ಈ ವಿಡಿಯೋದಲ್ಲಿ ಕೇಳಬಹುದು.
ಗುರಿ ಬೆನ್ನತ್ತಿದ್ದ ಹಟಮಾರಿಗೆ ಗೆಲುವು ಕಟ್ಟಿಟ್ಟ ಬುತ್ತಿ !
ಕೊನೆಯಲ್ಲಿ ವಿಲಿಯಂ ತನಗೆ ತಿಳಿದಷ್ಟು ಇಂಗ್ಲಿಷಿನಲ್ಲಿ ಒಂದು ಮಾತು ಹೇಳುತ್ತಾನೆ.
I would like to say something to all the people out there like me, to the Africans and the poor who are struggling with your dreams, god bless. May be one day, you watch this on the Internet, I said to you ” trust yourself and believe”, whatever happen, don’t give it up”
ಗೆಲ್ಲಲೇಬೇಕು ಅನ್ನುವ ಹಟ ತೊಟ್ಟ ಕನಸುಗಾರನಿಗೆ ಬಡತನ, ಹಸಿವು ಯಾವುದು ಅಡ್ಡಿ ಮಾಡದು ಅನ್ನುವುದಕ್ಕೆ ವಿಲಿಯಂನಿಗಿಂತ ಒಳ್ಳೆಯ ಎತ್ತುಗೆ ಬೇಕಿಲ್ಲ. ಖ್ಯಾತ ಇಂಗ್ಲಿಷ್ ಲೇಖಕ ಪಾಲೊ ಕೊಯಿಲೊ ತನ್ನ “ದಿ ಅಲ್ಕೆಮಿಸ್ಟ್” ನಲ್ಲಿ ಹೇಳುವಂತೆ “When you want something, all the universe conspires in helping you to achieve it.” ಗುರಿ ಬೆನ್ನತ್ತಿದ್ದ ಹಟಮಾರಿ ತನ್ನ ಗುರಿ ತಲುಪುವಂತಾಗಲು ಇಡೀ ಜಗತ್ತೇ ಸಂಚು ರೂಪಿಸುತ್ತೆ. ಬಡತನ, ಹಸಿವು, ಅನಕ್ಷರತೆ, ದಾರಿದ್ರ್ಯ ನಮ್ಮ ಕರ್ನಾಟಕದಲ್ಲೂ ಇದೆ. ಇಲ್ಲಿರುವ ಪ್ರತಿ ಮಗುವೂ ಚಿನ್ನ. ಪ್ರತಿ ಮಕ್ಕಳಲ್ಲೂ ಅಡಗಿರುವ ಪ್ರತಿಭೆ ಹೊರ ತರುವಂತಹ ಕಲಿಕೆಯ ಏರ್ಪಾಡುಗಳು ಇಲ್ಲಿ ಹುಟ್ಟಬೇಕಿದೆ. ಸುಮ್ನೆ ಯೋಚ್ನೆ ಮಾಡಿ, ಒಂದು ದಿನ ಟೆಡ್ ಕಾನ್ಫರೆನ್ಸ್ ಅಲ್ಲಿ ನಿಂತು ರಾಯಚೂರಿನ ಬಸವರಾಜನೋ, ಇಲ್ಲ ಮೈಸೂರಿನ ಹನುಮೇಗೌಡನೋ ತನ್ನ ಯಶಸ್ಸಿನ ಕತೆ ಹೇಳಿಕೊಳ್ಳುತ್ತ ಕನ್ನಡಿಗರೆಲ್ಲರಲ್ಲಿ ಹೆಮ್ಮೆ ಹುಟ್ಟುಹಾಕುವಂತ ದಿನಗಳು ಬಂದಲ್ಲಿ ಎಷ್ಟು ಖುಶಿಯಾಗಬಹುದು ಅಲ್ವಾ? ಕನಸು ಕಾಣಬೇಕು, ಬೇತಾಳದಂತೆ ಅದರ ಬೆನ್ನತ್ತಬೇಕು, ಇಂತಹದೊಂದು ಹಟ ಕನ್ನಡಿಗರಲ್ಲಿ ಹುಟ್ಟಿದ ದಿನ ನಮ್ಮನ್ನು ತಡೆಯಲು ಯಾರಿಂದಲೂ ಆಗದು.
ಕೊನೆ ಹನಿ
ಟೆಡ್.ಕಾಂ ನಲ್ಲಿನ ವಿಡಿಯೋಗಳಿಗೆ ಜಗತ್ತಿನ 38 ಭಾಷೆಗಳಲ್ಲಿ ಸಬ್ ಟೈಟಲ್ ವ್ಯವಸ್ಥೆಯಿದೆ. ಮರಾಠಿ, ತಮಿಳಿನಂತಹ ನಮ್ಮ ದೇಶದ ನುಡಿಗಳಲ್ಲೂ ಈ ವ್ಯವಸ್ಥೆಯಿದೆ, ಆದರೆ ನಮ್ಮ ನುಡಿ ಕನ್ನಡದಲ್ಲಿ ಇದಾವುದು ಇಲ್ಲ. ಕನ್ನಡಕ್ಕೂ ಜಗತ್ತಿನ ಹಲವು ದೊಡ್ಡ ಭಾಷೆಗಳಿಗೆ ಸಿಗುವ ಎಲ್ಲ ಮರ್ಯಾದೆ ಕೊಡಿಸುವುದು ಕನ್ನಡದ ಹುಡುಗರ ಕೈಯಲ್ಲೇ ಇದೆ. ಇಲ್ಲಿನ ವಿಡಿಯೋಗಳಿಗೆ ಕನ್ನಡ ಸಬ್ ಟೈಟಲ್ ಸೇರಿಸಲು ಈ ಕೊಂಡಿಯನ್ನು ನೋಡಿ.
ಬ್ಯಾಂಕಿನ ಹೆಸರಲ್ಲಿ ಬರೋ ಸಂದೇಶಗಳ ಬಗ್ಗೆ ಎಚ್ಚರ..!!
– ಸತ್ಯ ಚರಣ
ಸಂದೇಶ ನನಗೆ ಬಂದು ಬಿದ್ದಿದ್ದ ಜಾಗವೇ.. ಸ್ಪ್ಯಾಮ್..! ಇದರ ಒಟ್ಟು ಕತೆ ಏನು ಗೊತ್ತಿದ್ದರೂ.. ಒಮ್ಮೆ ನೋಡಿ ಬಿಡೋಣ ಅಂತ ಅನ್ನಿಸಿತ್ತು.. ಹೆಚ್ಚಿನ ವಿಚಾರ, ಇದರ ಬಗ್ಗೆ ತಿಳಿಯುವುದು ಒಳ್ಳೆಯದೇ ಅನ್ನೋ ಉದ್ದೇಶದಿಂದ.. ಈ ಸಂದೇಶವನ್ನ ತೆರೆದು ನೋಡಿದೆ.. ಇದು ಒಂದು ಬ್ಯಾಂಕಿನ ಹೆಸರಿನಲ್ಲಿ ಬಂದ ಸ್ಪ್ಯಾಮ್..!
ಯಾವುದೇ ಸಂದೇಶ, “Netbanking Status”, “Need to update your netbanking account/password” ಅಥವಾ ಇದಕ್ಕೆ ಸಮೀಪದ/ಹೋಲಿಕೆಯ ವಿಷಯಗಳೊಂದಿಗೆ ಬಂದಾಗ, ಅದು ಖಂಡಿತ ಒಂದು “FAKE MAIL” “ಮೋಸದ ಸಂದೇಶ” ಅನ್ನೋದು ಖಚಿತ.. ಇದರ ಬಗ್ಗೆ ನನ್ನಲ್ಲಿದ್ದ ವಿಚಾರಗಳನ್ನ ನಿಮ್ಮೊಂದಿಗೆ ಹಂಚಿಕೊಳ್ಳುವ ಅನ್ನೋ ಯೊಚನೆ ಈ ಬರಹಕ್ಕೆ ಕಾರಣ..
HDFC ಹೆಸರಲ್ಲಿ ಬಂದಿದ್ದ ಮೇಲ್ ಗೂಗಲ್ನ ಕೃಪೆಯಿಂದ ಬಂದು ಬಿದ್ದದ್ದು “ಸ್ಪ್ಯಾಮ್ ತೊಟ್ಟಿ”ಯಲ್ಲಿ ಅಂದಾಗಲೇ, ಇದು ಎಡವಟ್ಟಿನ ಸಂದೇಶ ಅಂತ ತಿಳಿದರೂ.. ತೆರೆದು ನೋಡಿದಾಗ ಅದರ ವಿವರ ಇಂತಿತ್ತು..
ಅಬ್ಬಾ..! ಎಷ್ಟು ಹುಷಾರಾಗಿದಾರಪ್ಪ ಈ ಜನ, ಈಗ..! ಅಂತನ್ನಿಸಿತು.. ಯಾಕೆಂದರೆ, ಹಿಂದೊಮ್ಮೆ ಇದೇ ರೀತಿಯಲ್ಲಿ ಸಂದೇಶವೊಂದು ಬಂದಾಗ, ನಾನು ಮೊದಲು ಮಾಡಿದ ಕೆಲಸ.. “Show Details” ಅನ್ನೋ ಆಯ್ಕೆಯನ್ನ ಒತ್ತಿದ್ದು.. ಅಲ್ಲೇ ನನಗೆ ತಿಳಿದಿತ್ತು ಇದು, ಬ್ಯಾಂಕಿನವರ ಸಂದೇಶವಲ್ಲ ಅಂತ..! ಆದರೆ, ಇಲ್ಲಿ ತಿಳಿಯಲು ಸಾಧ್ಯವೇ ಇಲ್ಲ.. ಎಲ್ಲಾ ರೀತಿಯಲ್ಲೂ ಅವರು ಬ್ಯಾಂಕನ್ನ ಹೋಲುವ ರೀತಿಯಲ್ಲಿ ತಯಾರಿ ನಡೆಸಿದ್ದಾರೆ.. (ಕೆಂಪು ರೇಖೆಯೊಂದಿಗಿನ ವೃತ್ತವನ್ನ ಗಮನಿಸಿ)
ಹಾಗಾದರೆ, ಈ ಸಂದೇಶಗಳನ್ನ ಹೇಗಪ್ಪಾ ಪತ್ತೆ ಹಚ್ಚೋದು…?
ನಾನು ಫೋಟೋ ಕ್ಲಿಕ್ಕಿಸುವ ಆಸೆ!
-ಶಿವು.ಕೆ
ಫೋಟೊಗ್ರಫಿ ಎಂದರೇನು? ಅದು ಎಲ್ಲಿ ಹುಟ್ಟಿತು? ಮುಂದೆ ಹೇಗೆ ಅದು ಹೊಸ ಅವತಾರಗಳನ್ನು ಪಡೆಯಿತು? ಈಗ ಏನು ನಡೆಯುತ್ತಿದೆ ಎನ್ನುವುದನ್ನು ಮೊದಲು ಬರೆಯಬೇಕೆನಿಸಿದರೂ ಅವೆಲ್ಲಾ ಈಗ ಅಂತರಜಾಲದಲ್ಲಿ ಜಾಲಾಡಿದರೆ ಅನೇಕಭಾಷೆಗಳಲ್ಲಿ ಸಿಕ್ಕಿಬಿಡುವುದರಿಂದ ಅದರ ಬಗ್ಗೆ ಬರೆಯುವ ಅವಶ್ಯಕತೆಯಿಲ್ಲ. ವಿಶ್ವದಾದ್ಯಂತ ಪುಸ್ತಕಗಳಲ್ಲಿ ಮತ್ತು ಅಂತರಜಾಲದಲ್ಲಿ ಸಿಗುವ ಫೋಟೊಗ್ರಫಿಗಿಂತ ನಿಮ್ಮ ಮತ್ತು ನನ್ನ ಫೋಟೊಗ್ರಫಿ ಆಸೆಯ ಬಗ್ಗೆ ಅದರೆಡೆಗೆ ಮೂಡಿದ ಕುತೂಹಲದ ಬಗ್ಗೆ ಇತ್ಯಾದಿ ವಿಚಾರಗಳ ಬಗ್ಗೆ ಬರೆಯಲು ಪ್ರಯತ್ನಿಸುತ್ತೇನೆ. ಏಕೆಂದರೆ ಫೋಟೊಗ್ರಫಿ ಎನ್ನುವ ವಿಚಾರ ಎಷ್ಟು ದೊಡ್ಡದಾಗಿದ್ದರೂ ನಮ್ಮ ವೈಯಕ್ತಿಕ ವಿಚಾರಕ್ಕೆ ಬಂದಾಗ ಅದೊಂದು ಹವ್ಯಾಸ. ನಿಮಗೂ ಕೂಡ ಫೋಟೊಗ್ರಫಿ ಕಲಿಯಬೇಕೆನ್ನುವ ಮತ್ತು ಹವ್ಯಾಸವನ್ನಾಗಿ ಮಾಡಿಕೊಳ್ಳುವ ಆಸೆಯಿರುತ್ತದೆಯಲ್ಲವೇ…? ನಿಮ್ಮಲ್ಲಿ ಈಗ ಹುಟ್ಟಿದ ಆಸೆ ನನಗೆ ಯಾವಾಗ ಹುಟ್ಟಿತ್ತು? ಅದರ ಮುಂದಿನ ಹಂತಗಳೇನು ಎನ್ನುವುದನ್ನು ಸ್ವಲ್ಪ ವಿವರಿಸಿಬಿಡುತ್ತೇನೆ.
‘ಕಾಪ’ ಪಂಚಾಯಿತಿ!
– ಪ್ರಶಾಂತ್ ಯಾಳವಾರಮಠ
ಸುನೀತಾ(21) ಮತ್ತು ‘ಜಸ್ಸಾ’ ಉರ್ಫ್ ಜಸ್ಬೀರ್ ಸಿಂಗ(22) ಒಬ್ಬರನ್ನೊಬ್ಬರು ಪ್ರೀತಿಸಿ.. ’ಪ್ರೀತಿ ಮಾಡಬಾರದು ಮಾಡಿದರೆ ಜಗಕೆ ಹೆದರಬಾರದು’ ಅಂದು ಕೊಂಡು ಮನೆಯವರ ಮತ್ತು ಊರಿನವರ ವಿರೋಧದ ನಡುವೆ ಮದುವೆಯಾಗಿದ್ದರು! ತಮ್ಮ ಪುಟ್ಟ ಸಂಸಾರ, ಪುಟ್ಟ ಮನೆ ಮತ್ತೆ ತಮಗೆ ಒಂದು ಪುಟ್ಟ ಮಗುವಿನ ಬರುವಿಗೆ ಕಾಯ್ತಾ ಹಾಯಾಗಿದ್ದರು ಅಂದರೆ ಸುನೀತಾ ೫ ತಿಂಗಳ ಗರ್ಭಿಣಿ!.
ಹೀಗೆ ಎಲ್ಲವೂ ಚೆನ್ನಾಗಿರುವಾಗ ಒಂದು ದಿನ ಮುಂಜಾನೆ ಸುನಿತಾಳ ತಂದೆಯ ಮನೆ ಮುಂದೆ ಅತೀ ಕ್ರೂರತನಕ್ಕೆ ಸಾಕ್ಷಿಯಾಗಿ ಎರಡು ದೇಹಗಳು ಬಿದ್ದಿದ್ದವು! ಅಬ್ಬಾ ಎಂತಹ ರಾಕ್ಷಸರು ಅಂತೀರಾ ಗರ್ಭಿಣಿಯ ಹೊಟ್ಟೆಗೆ ಒದ್ದಿದ್ದರು, ಮುಖಕ್ಕೆ ಗುದ್ದಿದ್ದರು ಮತ್ತು ಎರಡು ದೇಹಗಳಿಗೆ ಇರಿದಿದ್ದರು!
ಅಂಕಿತಾರಾಣೆ – ಪಾನಿಪುರಿ ಪುರಾಣ…!
– ಉಮೇಶ ದೇಸಾಯಿ
ನೀವು ಪಾನಿಪೂರಿ ಪ್ರಿಯರೇ? ಹಾಗಿದ್ದರೆ ಇದನ್ನು ತಪ್ಪದೇ ಓದಿ…!
ಹೌದು ಇದೊಂಥರಾ ವಿಚಿತ್ರ ಟೈಟಲ್ಲು.ಹತ್ತು ನಿಮಿಷದ ತನ್ನ ಬೊಗಳೆಯಲ್ಲಿ ರಾಜಪುರೋಹಿತ್ ಎಂಬ ವ್ಯಕ್ತಿ ಸ್ವತಃ ಕೆಡುವುದಲ್ಲದೇ ತನ್ನ ಪಾರ್ಟಿ ಬಿಜೆಪಿಯ ವರ್ಚಸ್ಸನ್ನೂ ಹಾಳುಗೆಡವಿದ.ಅಂಕಿತಾಳ ವ್ಯಕ್ತಿತ್ವ ಮತ್ತು ಚಾರಿತ್ರ್ಯ ವಧೆ ಮಾಡುವ ಮಾತು ಆಡಿದ ರಾಜಪುರೋಹಿತ್ ಈಗ ಅವಳ ಕ್ಷಮೆ ಕೇಳಿದ್ದಾನೆ.
ನಮ್ಮಲ್ಲಿ ಒಂದು ಗಾದೆ ಇದೆ “ಗೋಡೆಯಲ್ಲಿರುವ ಮೊಳೆ ತಗೊಂಡು…ದಲ್ಲಿ ಚುಚ್ಚಿಕೊಂಡ” ಅಂತ.ಈ ಗಾದೆ ರಾಜಪುರೋಹಿತ ಸಾಹೇಬಗೆ ಅಕ್ಷರಶಃ ಅನ್ವಯವಾಗುತ್ತದೆ.
ಅಂಕಿತಾ ಮಾಡಿದ್ದು ಏನು.ತಾ ವಾಸಿಸುತ್ತಿರುವ ಬಿಲ್ಡಿಂಗಿನ ಹೊರಗೆ ಇರುವ ಪಾನಿಪುರಿ ಅಂಗಡಿಯವ ಹಾಡುಹಗಲಲ್ಲಿ ತನ್ನ ಗಾಡಿಯ ಕೆಳಗೆ ಶೆಲ್ಫನಲ್ಲಿಟ್ಟ ಜಗ್ನಲ್ಲಿ ಮೂತ್ರ ಉಯ್ಯುವುದನ್ನು ಅವಳ ಮೊಬೈಲಿನಲ್ಲಿ ಸೆರೆಹಿಡಿದಳು.ಪಾನಿಪುರಿ ಅದನ್ನು ತಿಂದು ಆಗಬಹುದಾದ ಅಪಾಯಗಳನ್ನು ಪುಷ್ಟಿಕರಿಸಲು ತಾ ತೆಗೆದ ವಿಡಿಯೋ ಸಹಾಯ ಆಗಬಹುದು ಇದು ಅವಳ ಹವಣಿಕೆ.ಅದೇ ಹಂಬಲದಲ್ಲಿ ಅವಳು ವಿಡಿಯೋ ನೆಟ್ನಲ್ಲಿ ಹರಿಯಬಿಟ್ಟಳು.
ಮತ್ತಷ್ಟು ಓದು 
ಹೊಳೆಯಲ್ಲಿ ಇಳಿದ ಮೇಲೆ ಮಳೆಯಾದರೇನು? ಚಳಿಯಾದರೇನು?!!
– ರಾಘವೇಂದ್ರ ನಾವಡ ಕೆ ಎಸ್
ಊಹೆ ನಿಜವಾಗುವ ಎಲ್ಲಾ ಲಕ್ಷಣಗಳೂ ಕ೦ಡುಬರುತ್ತಿವೆ! ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧೀ ಆ೦ದೋಲನ ಠುಸ್ಸಾಗುವ ಎಲ್ಲಾ ಸಾಧ್ಯತೆಗಳೂ ಇವೆ! ಇಲ್ಲಿ ನಾನೀಗ ಹೇಳ ಹೊರಟಿರುವುದು ಅಣ್ಣಾ ಹಜಾರೆಯವರ ಶಕ್ತಿ ಕು೦ದಿತೆ೦ದಲ್ಲ… ಅಥವಾ ಉತ್ತರ ಕುಮಾರನ ಪೌರುಷವನ್ನು ಅಣ್ಣಾ ಹಜಾರೆ ತೋರಿಸಿದರೆ೦ದಲ್ಲ! ಬದಲಾಗಿ ಹೇಗೆ ನಾವೇ ಆರಿಸಿ ಕಳುಹಿಸಿದ ನಮ್ಮ ಕಲ್ಯಾಣದ ಬಗ್ಗೆ ಯೋಚಿಸಬೇಕಾದ ನಾಯಕರು ತಮ್ಮನ್ನು ಹಾಗೂ ತಮ್ಮ ಗಳಿಕೆಯನ್ನು ರಕ್ಷಿಸಿಕೊಳ್ಳಲು ಮು೦ದಾಗಿರುವ ಬಗ್ಗೆ.. ಅದಕ್ಕಾಗಿ ತುಳಿದಿರುವ ಹಾದಿಗಳ ಬಗ್ಗೆ..!
ಮೊದಲನೆಯದಾಗಿ ಭಾರತದ ಯಾವ ರಾಜಕೀಯ ನಾಯಕನಿಗೂ ಲೋಕಪಾಲ ಮಸೂದೆಯ ಮ೦ಡನೆಯಾಗುವುದು ಬೇಕಿಲ್ಲ! ಆ ಮೂಲಕ ತಾವು ಬಟಾ ಬಯಲಿಗೆ ಬೀಳುವುದು ಇಷ್ಟವಿಲ್ಲ.. ತನ್ನ ಮಕ್ಕಳು ಮರಿ ಮೊಕ್ಕಳು ಅವರ… ಹೀಗೆ ಹತ್ತಾರು ತಲೆಮಾರುಗಳು ಆರಾಮಾಗಿ ಕುಳಿತು ತಿನ್ನಲೆ೦ದು ಮಾಡಿಕೊ೦ಡ ಆಸ್ತಿಯನ್ನು ಯಾರು ತಾನೇ ತನ್ನ ಜಮಾನಾದಲ್ಲೇ ಅದನ್ನು ಕಳೆದುಕೊಳ್ಳಲು ಇಷ್ಟ ಪಡುತ್ತಾನೆ? ಮು೦ದೆ ನಮ್ಮ ಅಪ್ಪ ನಮಗಾಗಿ ಏನನ್ನೂ ಮಾಡಿಟ್ಟಿಲ್ಲ! ಎ೦ಬ ಮಾತನ್ನು ಕೇಳಲು ಅವರು ಸಿಧ್ಧರಿಲ್ಲ! ನಾಯಕರ ಈ ಹಪಾಹಪಿಯೇ ಆದಷ್ಟೂ ಹಜಾರೆ ಹಾಗೂ ಅವರ ಟೀಮ್ ನ ದಿಕ್ಕು ತಪ್ಪಿಸುವತ್ತ ತನ್ನೆಲ್ಲಾ ಪಟ್ಟುಗಳನ್ನೂ ಬಳಸಿಕೊ೦ಡು ಆಖಾಡಕ್ಕೆ ಇಳಿದಿದೆ! ಮು೦ದೇನು? ಕಾದು ನೋಡಬೇಕು!!
ಅಮೇರಿಕಾ ಕಲಿಸಿದ ಪಾಠ…?
ಅರೆಹೊಳೆ ಸದಾಶಿವ ರಾವ್

ಅಂತ:ಶಕ್ತಿ ಮತ್ತು ಅಂತರಿಕ ದೌರ್ಬಲ್ಯದ ಬಗ್ಗೆ ಒಂದು ಮಾತಿದೆ. ಅಂತ:ಶಕ್ತಿ ಲಾಭದಾಯಕವಾದರೆ, ಅಂತರಿಕ ದೌರ್ಬಲ್ಯ ಅಪಾಯಕಾರಿ. ವಿಶ್ವದ ಉಗ್ರರ ಪಟ್ಟಿಯಲ್ಲಿ ನಂ.೧ ನೆಯ ಸ್ಥಾನದಲ್ಲಿದ್ದವನು ಒಸಾಮಾ ಬಿನ್ ಲ್ಯಾಡೆನ್. ಅಮೇರಿಕಾ ಅವನನ್ನು ಹತ್ತುವರ್ಷಗಳ ಭೇಟೆಯ ನಂತರ ಕೊಂದು ಮುಗಿಸಿದೆ. ಗುಣಕ್ಕೆ ಮತ್ಸರವಿಲ್ಲದಂತೆ ಭಾವಿಸಿದರೆ, ಅಮೆರಿಕಾಕ್ಕೆ ಈ ವಿಷಯದಲ್ಲಿ ಹ್ಯಾಟ್ಸ್ ಆಫ್ ಹೇಳಲೇ ಬೇಕು.
ಹಾಗೇ ಸುಮ್ಮನೇ ಒಮ್ಮೆ ನಮ್ಮ ಪರಿಸ್ಥಿತಿಗೆ ಈ ಘಟನೆಯನ್ನು ಸಮೀಕರಿಸಿಕೊಳ್ಳೋಣ. ಭಾರತದ ಪವಿತ್ರ ಸಂಸತ್ತಿನ ಮೇಲೆ ಉಗ್ರ ಅಫ್ಜಲ್ ದಾಳಿ ಮಾಡಿದ ಮತ್ತು ಸಿಕ್ಕಿ ಬಿದ್ದ. ಮುಂಬೈ ತಾಜ್ ಹೋಟೆಲ್ ಮೇಲಿನ ದಾಳಿಯಲ್ಲಿ ಕಸಬ್ ಸಿಕ್ಕಿ ಬಿದ್ದ. ನಾವು, ಇಬ್ಬರನ್ನೂ ಕಟ Pಟೆಯಲ್ಲಿ ನಿಲ್ಲಿಸಿದೆವು. ಇಬ್ಬರಿಗೂ ಅವರ ಪರವಾಗಿ ವಾದ ಮಾಡಲೆಂದು, ಒಲ್ಲೆ ಒಲ್ಲೆನೆಂದರೂ ವಕೀಲರನ್ನು ಸರಕಾರಿ ಖರ್ಚಿನಲ್ಲಿ ಒದಗಿಸಿಕೊಟ್ಟೆವು. ವಾದ ವಿವಾದಗಳು ನಡೆದುವು. ಎಲ್ಲರೂ ನಿರೀಕ್ಷಿಸಿದ್ದಂತೆ, ನ್ಯಾಯಾಲಯ ನ್ಯಾಯ ನೀಡಿತು. ಜೊತೆಗಿದ್ದ ಕೆಲವರು ಆರೋಪ ಮುಕ್ತರಾದರೆ, ಈ ದಾಳಿಗಳ ರೂವಾರಿಗಳಾದ ಅಫ್ಜಲ್, ಕಸಬ್ರಿಗೆ ಮರಣದಂಡನೆಯನ್ನು ನ್ಯಾಯಾಲಯ ಘೋಷಿಸಿತು. ಈಗ ಕಸಬ್ ಕಾನೂನು ಸಮರ ಮುಂದುವರಿಸಿದ್ದರೆ, ಅಫ್ಜಲ್ ದಯಾ ಭಿಕ್ಷೆಯನ್ನುಕೇಳಿಕೊಂಡು, ಕೆಲವು ವರ್ಷಗಳಿಂದ ಜೈಲಿನಲ್ಲಿಯೇ ಇದ್ದಾನೆ. ಅಫ್ಜಲ್ನ ಕಥೆ ಏನು ಎಂಬುದಕ್ಕೆ ಯಾವ ಸರಕಾರವೂ ಸ್ಪಷ್ಟ ಉತ್ತರ ನೀಡುತ್ತಿಲ್ಲ. ಎಲ್ಲರೂ ತಮ್ಮ ತಮ್ಮ ‘ರಾಜಕೀಯ’ ಲೆಕ್ಕಾಚಾರದಲ್ಲಿ ಸಿಗಬಹುದಾದ ಲಾಭಕ್ಕಾಗಿ ಕಾದು ಕುಳಿತಿದ್ದಾರೆ.
ಹಲವು ಸಾವಿಗೆ ಕಾರಣರಾದ ಉಗ್ರರಾದ ಅಫ್ಜಲ್ ಮತ್ತು ಕಸಬ್ರ ‘ರಕ್ಷಣೆ’ಗಾಗಿ ನಮ್ಮ ಸರಕಾರಗಳು ಕೋಟಿ ಕೋಟಿ ವ್ಯಯಿಸುತ್ತಿವೆ. ಮತ್ತೊಂದರ್ಥದಲ್ಲಿ ನಮ್ಮ ಮೇಲೆ, ನಮ್ಮ ಸ್ವಾಭಿಮಾನದ ಮೇಲೆ ಮತ್ತು ತೀರಾ ನಮ್ಮ ಮಾತ್ರಭೂಮಿಯ ಮೇಲೆ, ದಾಳಿಯ ಮೂಲಕ ಅಕ್ಷಮ್ಯ ಅಪರಾಧವನ್ನು ಮಾಡಿದ ಈ ಉಗ್ರರನ್ನು ನಾವು ‘ರಕ್ಷಿ’ಸುತ್ತಿದ್ದೇವೆ. ಮತ್ತಷ್ಟು ಓದು 
ಬ್ಲಾಗು ಕದಿಯುವ ಪತ್ರಿಕೆಗಳಿವೆ ಎಚ್ಚರ…!
– ನಿಲುಮೆ
ಇಂತದ್ದೊಂದು ತಲೆಬರಹ ಕೊಡುವುದೇ ಅಷ್ಟು ಚಂದ ಕಾಣುತ್ತಿಲ್ಲ,ಆದರೇನು ಮಾಡುವುದು ನಡೆದ ವಿಷಯವನ್ನ ಹೇಳ ಹೊರಟಾಗ ಹೀಗೆ ಆಗುತ್ತದೆ. ಕಳೆದ ತಿಂಗಳ ೨೭ರಂದು ಅರೆಹೊಳೆ ಸದಾಶಿವ ರಾವ್ ಅವರ ’‘ಸತ್ಯ ಸಾಯಿ’ ಮತ್ತು ‘ಸತ್ಯ ಸಾಯಿಸುವ’ ಮಾಧ್ಯಮಗಳು’ ಲೇಖನ ಹಾಗೆ ೨೫ರಂದು ರಶ್ಮಿ ಕಾಸರಗೋಡು ಅವರ ’‘ಎಂಡೋ ನಿಷೇಧಿಸಿ’ – ಶರದ್ ಪವಾರ್ ಗೊಂದು ಬಹಿರಂಗ ಪತ್ರ’ ಅನ್ನುವ ಲೇಖನವನ್ನ ನಿಲುಮೆಯ ಓದುಗರೆಲ್ಲ ನೋಡಿಯೆ ಇರುತ್ತೀರಿ. ಕಳೆದ ೨೮ರಂದು ’ಕರಾವಳಿ’ಯ ಪತ್ರಿಕೆಯೊಂದು ಏಕಾಏಕಿ ಲೇಖಕ/ನಿಲುಮೆಯ ಅನುಮತಿಯಿಲ್ಲದೆ ಈ ಲೇಖನಗಳನ್ನ ಕದ್ದಿದ್ದು ಅಲ್ಲದೇ ಕಡೆ ಪಕ್ಷ ಕೃಪೆ ಅಂತಲೂ ಹಾಕದೇ ತನ್ನ ಪತ್ರಿಕೆಯಲ್ಲಿ ಪ್ರಕಟಿಸಿ ’ಕರಾವಳಿ’ಯ ಜನರಿಗೆ ಹಂಚಿದೆ.(ಆ ಪತ್ರಿಕೆಯ ಹೆಸರಿಗೆ ನಮ್ಮಿಂದ ಸ್ವಲ್ಪವು ಧಕ್ಕೆ ಬಾರದಿರಲಿ ಅನ್ನುವ ಏಕೈಕ ಉದ್ದೇಶದಿಂದ ಆ ಪತ್ರಿಕೆಯ ಹೆಸರನ್ನ ನೇರವಾಗಿ ಬರೆಯುತ್ತಿಲ್ಲ).
ಒಸಾಮಾ – ಒಬಾಮಾ…!
– ಡಾ.ಅಜಕ್ಕಳ ಗಿರೀಶ್ ಭಟ್
ಅಂತೂ ಅಮೆರಿಕ ಒಸಾಮಾನನ್ನು ಕೊಂದಿದೆ ಅನ್ನುವುದನ್ನು ಅದು ಅಧಿಕೃತವಾಗಿ ಘೋಷಿಸಿದೆ. ಹೀಗೆ ಕೊಲ್ಲುವುದು ಅಮೆರಿಕಕ್ಕೆ ಏನೂ ಕಷ್ಟದ ಸಂಗತಿಯಲ್ಲ. ಅದು ಅದನ್ನು ದಕ್ಕಿಸಿಕೊಳ್ಳಬಲ್ಲುದು. ಆದರೆ ಹಲವು ಪ್ರಶ್ನೆಗಳು ಎಲ್ಲರ ಮನಸ್ಸಲ್ಲೂ ಏಳುವುದು ಸಹಜ. ಕೆಲದಿನಗಳಾದ ನಂತರ ಆ ಪ್ರಶ್ನೆಗಳನ್ನು ಎಲ್ಲರೂ ಮರೆಯುತ್ತಾರೆ ಅನ್ನೋದು ಕೂಡ ನಮಗೆಲ್ಲ ಗೊತ್ತು.ನಾವು ಕೂಡ ಮರೀತೇವೆ.ಹಾಗೆ ಮರೆಯುವುದು ನಮ್ಮ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಮುಖ್ಯ.ಆದರೂ ಈಗ ಮನಸಲ್ಲಿ ಬಂದ ಆಲೋಚನೆಗಳಲ್ಲಿ ಕೆಲವನ್ನು ಮರುನೆನೆದುಕೊಳ್ಳುತ್ತೇನೆ.ಇವು ನನ್ನ ಮನಸಲ್ಲಿ ಮಾತ್ರ ಬಂದ ಪ್ರಶ್ನೆಗಳಲ್ಲವಾದ್ದರಿಂದ ಈ ಪ್ರಶ್ನೆಗಳ ಬಗ್ಗೆ ನಾನು ಯಾವುದೇ ಕಾಪಿರೈಟ್ ಕ್ಲೈಮ್ ಮಾಡುವುದಿಲ್ಲ!!!
ನೋಡಿ,ಇದು ಅನ್ಯಾಯವಲ್ಲವೇ? ವ್ಯಕ್ತಿಯನ್ನು ವಿಚಾರಣೆಯಿಲ್ಲದೆ ಕೊಲ್ಲುವುದು ನ್ಯಾಯವೇ?
ಆಧುನಿಕ ನ್ಯಾಯಶಾಸ್ತ್ರದಲ್ಲಿ ಎಲ್ಲಾದರೂ ವಿಚಾರಣೆಯಿಲ್ಲದೆ ಹೀಗೆ ಶಿಕ್ಷೆ ನೀಡುವುದನ್ನು ಸಮರ್ಥಿಸಲಾಗಿದೆಯೇ? ಲಾಡೆನ್ ಗೆ ಫೇರ್ ಟ್ರಯಲ್ ನೀಡಲಾಗಿಲ್ಲ. ಅವನನ್ನು ಯಾವ ಕೋರ್ಟಿನಲ್ಲಿ ವಿಚಾರಣೆ ಮಾಡಲಾಗಿದೆ? ತಾನು ಕೊಲೆ ಮಾಡಿದ್ದೇನೆ ಅಂತ ಒಬ್ಬ ವ್ಯಕ್ತಿ ಹೇಳಿದ ಕೂಡಲೇ ಯಾವ ಕೋರ್ಟು ಕೂಡ ವಿಚಾರಣೆಯಿಲ್ಲದೆ ಆ ವ್ಯಕ್ತಿಯನ್ನು ಗಲ್ಲಿಗೆ ಹಾಕುವುದಿಲ್ಲ. ಹಾಗಿರುವಾಗ ,ಅಮೆರಿಕವಿರಬಹುದು ಅಥವಾ ಅದರಪ್ಪನಿರಬಹುದು, ಕಾನೂನನ್ನು ಕೈಗೆ ತೆಗೆದುಕೊಳ್ಳುವುದೆಂದರೇನು? ಓಯ್!! ಅಮ್ನೆಸ್ಟಿ ಇಂಟರ್ ನ್ಯಾಷನಲ್ ಅನ್ನುವ ಸಂಸ್ಥೆಯವರೇ!!!ಎಲ್ಲಿದ್ದೀರಿ? ಒಸಾಮಾನ ಮಾನವ ಹಕ್ಕಿಗೆ ಬೆಲೆ ಇಲ್ಲವೇ???
ಕುರುಕ್ಷೇತ್ರದ ಯುದ್ಧಕ್ಕೆ ಕೃಷ್ಣನೇ ಸರಿ ಅಣ್ಣಾ !
– ರಾಕೇಶ್ ಶೆಟ್ಟಿ
ಕುಂಭಕರ್ಣ ನಿದ್ದೆಯಿಂದ ಎದ್ದ ಭಾರತವನ್ನ ಮತ್ತೆ ನಿದ್ದೆಗೆ ದೂಡಲಾಗುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಕಾಡಲಾರಂಭಿಸಿದೆ.ಕೆಲವೆ ದಿನದ ಹಿಂದೆ ಅಣ್ಣಾ ಹಜ಼ಾರೆಯವರ ಉಪವಾಸ ಸತ್ಯಾಗ್ರಹದಿಂದ ನಿದ್ದೆಯಲ್ಲಿದ್ದ ಜನ (ಎಲ್ಲ ಜನ ಅಂತೇಳಲು ಸಾಧ್ಯವಿಲ್ಲ) ಎದ್ದು ಬಂದು, ಕಡೆಗೆ ಸೋನಿಯಾ ಮೇಡಂ ಅವರ ಯುಪಿಎ ಸರ್ಕಾರ ಅಣ್ಣನ ಮುಂದೆ ಮಂಡಿಯೂರಿ ಕುಳಿತಾಗಲೇ, ‘ಪಿಕ್ಚರ್ ಅಭಿ ಬಾಕಿ ಹೈ ಮೇರಿ ದೋಸ್ತ್’ ಅಂತ ಬಹುಷಃ ಬಹುತೇಕರಿಗೆ ಅನ್ನಿಸಿತ್ತು.ಅದನ್ನ ನಿಜ ಮಾಡಲೆಂಬಂತೆ ಜನಲೋಕಪಾಲ ಸಮಿತಿ ರಚನೆಯಾದ ಮರುದಿನವೇ ಕೇಂದ್ರ ಮಂತ್ರಿ ಕಪಿಲ್ ಸಿಬಲ್, ಖುದ್ದು ಸಮಿತಿಯ ಸದಸ್ಯರಾಗಿದ್ದೂ, ಸಮಿತಿಯ ಬಗ್ಗೆ ಕೊಂಕು ನುಡಿದು,ಕಡೆಗೆ ನಂಬಿಕೆಯಿಲ್ಲದಿದ್ದರೆ ತೊಲಗಿ ಅಂತ ಅಣ್ಣಾ ಗದರಿದ್ಮೇಲೆ ಯಥಾಪ್ರಕಾರ ರಾಜಕಾರಣಿಗಳ ಹೇಳಿಕೆಯಂತೆ ’ತಪ್ಪಾಗಿ ಅರ್ಥೈಸಲಾಗಿದೆ; ಅಂತೇಳಿ ತೇಪೆ ಹಾಕಿದ್ರು.ಮೊಯ್ಲಿ,ಮನೀಶ್ ತಿವಾರಿಯವ್ರು ಕೊಂಕಿಸಿದ್ದಾಯ್ತು.
ಬಹುಷಃ ಗಾಂಧೀಜಿ,ಜೆಪಿ ನಂತರ ಈ ಮಟ್ಟಕ್ಕೆ ಜನರನ್ನ ಸೆಳೆದಿದ್ದು ಅಣ್ಣಾ ಹಜ಼ಾರೆಯವರೇ ಇರಬೇಕು.ಅವರ ಈ ಪರಿಯ ಜನಪ್ರಿಯತೆ ಪುಡಿವೋಟಿಗಾಗಿ ದೇಶವನ್ನೆ ಬೇಕಾದರು ಮಾರಬಲ್ಲ (ಪುರುಲಿಯಾ ಶಸ್ತ್ರಾಸ್ತ್ರ ಕರ್ಮಕಾಂಡಕ್ಕಿಂತ ದೇಶವನ್ನ ಅಡ ಇಡುವ ಉದಾಹರಣೆ ಬೇಕಾ?) ಹಗಲು ವೇಷದ ರಾಜಕಾರಣಿಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು ಸುಳ್ಳಲ್ಲ.ಸಾಲಾಗಿ ಎಲ್ಲ ಅಣ್ಣನ ವಿರುದ್ಧ ಸದ್ದಿಲ್ಲದೆ ಕೆಲಸ ಶುರು ಹಚ್ಚಿಕೊಂಡರು…!




