ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

23
ಫೆಬ್ರ

ವೋಟ್ ಬ್ಯಾಂಕ್ ಜಪ – ಕಾನೂನು ಸುವ್ಯವಸ್ಥೆ ನೆಪ !

– ರಾಕೇಶ್ ಶೆಟ್ಟಿ
ಈ ಲೇಖನವನ್ನ ಬರೆದಿದ್ದು ಕಳೆದ ವರ್ಷ ರಾಜೀವ್ ಗಾಂಧೀಯವ್ರ ಹುತಾತ್ಮರಾದ ದಿನದಂದು,ಆದರೆ ಇಂದಿಗೂ ಇದು ಪ್ರಸ್ತುತವೇ,ಬಹುಶಃ ಈ ಕಾಂಗ್ರೆಸ್ಸ್ ಸರ್ಕಾರ ಈ ಅವಧಿ ಮುಗಿದ ಮೇಲೂ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ್ರೆ ಇನ್ನ ೬-೭ ವರ್ಷ ಈ ಲೇಖನ ಪ್ರಸ್ತುತವೇ! ಯಾವ್ದಪ್ಪ ಇದು ಅಂತ ವಿಷ್ಯಾ ಅಂತೀರಾ,ಅದೇ ಸ್ವಾಮಿ ಅಫ಼್ಜಲ್ ಗುರು ಅನ್ನೋ ಉಗ್ರಗಾಮಿಯನ್ನ ಗಲ್ಲಿಗೇರಿಸೊದು.ಮೊನ್ನೆ ಕಸಬ್ಗೆ ಹೈ-ಕೊರ್ಟ್ ಗಲ್ಲು ಶಿಕ್ಷೆ ನೀಡಿದೆ ಅಂದಾಗ ನನಗೆ ಮತ್ತೆ ಮತ್ತೆ ನೆನಪಾಗಿದ್ದು ಅಫ಼್ಜಲ್! (ಹಳೇ ಲೇಖನದಲ್ಲಿ ಕಸಬ್ ಇರಲಿಲ್ಲ ಈಗ ಅವನು ಸೇರಿಕೊಂಡಿದ್ದಾನೆ.ಮತ್ತೆ ಇದೇ ಲೇಖನವನ್ನ ಪ್ರಕಟಿಸುವ ದಿನ ಬಾರದಿರಲಿ 😦 )

ಇಂದು ರಾಜೀವ್ ಗಾಂಧೀ ಹುತಾತ್ಮರಾದ ದಿನ.ಆದರೆ ನನಗೆ ಈಗ ನೆನಪಾಗುತ್ತಿರುವವರು ಅವರಮ್ಮ ಇಂದಿರಾ.’ಇಂದಿರಾ ಗಾಂಧಿ!’ ಬಹುಷಃ ಸ್ವತಂತ್ರ ಭಾರತದ ಇತಿಹಾಸದಲ್ಲಿ ದೇಶದ ರಕ್ಷಣೆಯ ವಿಷಯದಲ್ಲಿ ಯಾವ ರಾಜಿ ಮಾಡಿಕೊಳ್ಳದೆ ಮುನ್ನುಗ್ಗುತಿದ್ದ ಅವರಂತ ಇನ್ನೊಬ್ಬ ಪ್ರಧಾನಿ ಈ ದೇಶಕ್ಕೆ ಮತ್ತಿನ್ಯಾರು ಸಿಕ್ಕಿಲ್ಲ ಅಂದರೆ ಅದು ಉತ್ಪ್ರೇಕ್ಷೆಯಾಗಲಾರದು!

ಮತ್ತಷ್ಟು ಓದು »

23
ಫೆಬ್ರ

ವಂಚನೆಗೆ ಮತ್ತೊಂದು ಹೆಸರು “ಅವಳು”

ಪಿಸಿಬಿ ಪುತ್ತೂರು

ಅವಳ ಹೆಸರು ನಯನ(ಹೆಸರು ಬದಲಾಯಿಸಲಾಗಿಲ್ಲ). ನನ್ನ ಸ್ನೇಹಿತನೊಬ್ಬ ಆಕೆಯನ್ನು ಹುಚ್ಚನಂತೆ ಪ್ರೀತಿಸುತ್ತಿದ್ದ. ಅವಳು ಇರೋದು ಬೆಂಗಳೂರಿನಲ್ಲಿ. ಆತ ದಕ್ಷಿಣ ಕನ್ನಡ ಜಿಲ್ಲೆಯಲ್ಲೊಂದು ಊರಿನಲ್ಲಿ. ತಕ್ಕಮಟ್ಟಿಗೆ ಸ್ಥಿತಿವಂತ. ಅದಕ್ಕೆ ಇರಬೇಕು. ಅವಳು ಅವನನ್ನು ಆಯ್ಕೆ ಮಾಡಿಕೊಂಡದ್ದು. ಸಿಕ್ಕಾಪಟ್ಟೆ ಪ್ರೀತಿಸುತ್ತಿದ್ದ. ನಾನು ಕಾಲ್ ಮಾಡಿದಾಗ ಏನು ಮಾಡ್ತಾ ಇದ್ದಿ ಅಂತ ಕೇಳಿದಾಗ “ಅವಳ ಫೋಟೊ ನೋಡ್ತಾ ಇದ್ದಿನಿ” ಅಂತ ನಗುತ್ತಿದ್ದ. ಅವನದ್ದು ಮಗುವಿನ ಮನಸ್ಸು. ಅವಳು ಸೆಟ್ ಆದಾಗಲೇ ಮದುವೆ, ಭವಿಷ್ಯ ಎಲ್ಲ ಯೋಚಿಸಿದ್ದ. ಮುಂದಿನ ವರ್ಷವೇ ಮದುವೆಯಾಗ್ತಿನಿ ಅಂತ ಮಾತುಕೊಟ್ಟಿದ್ದ.

ಅದು ಆತನ ಮೊದಲ ಪ್ರೀತಿ. ದಿನಕ್ಕೆ ಕಮ್ಮಿ ಎಂದರೂ 5-6 ಬಾರಿ ಫೋನ್ ಮಾಡಿ ಮಾತನಾಡುತ್ತಿದ್ದರು. ಇತ್ತೀಚೆಗೊಮ್ಮೆ ಭೇಟಿಯೂ ಆಗಿದ್ದರು. ಇವರಿಬ್ಬರ ಪರಿಚಯವಾದದ್ದು ಅವನ ಊರಿನವಳೊಬ್ಬಳ ಸಹಾಯದಿಂದ. ಆಕೆಯ ನೆರೆಮನೆಯ ಹುಡುಗನಾದ್ದರಿಂದ ಒಂದಿಷ್ಟು ಸಲುಗೆ ಜಾಸ್ತಿಯಿತ್ತು. ನನಗೆ ಲವ್ ಸ್ಟೋರಿ ಕೇಳುವುದಕ್ಕೆ ತುಂಬಾ ಇಷ್ಟ. ಅವನು ದಿನಾ ನಂಗೆ ರಿಪೋರ್ಟ್ ಮಾಡುತ್ತಿದ್ದ. ಆದರೆ ಮೊನ್ನೆ “ಅವಳನ್ನು ಬಿಟ್ಟು ಬಿಡು” ಅಂದೆ. ಅವನು ಓಕೆ ಅಂದ.

ಮತ್ತಷ್ಟು ಓದು »

22
ಫೆಬ್ರ

ಮಂಗಳಮುಖಿಯರಿಗೂ ದಕ್ಕಿದ ಹಕ್ಕುಗಳು

ನಾಗರಾಜ್ ಜಿ

ಭಾರತದಲ್ಲಿ ಫೆಬ್ರವರಿ 9ರಿಂದ ಪ್ರಾರಂಭವಾಗಿರುವ ಜನಗಣತಿಯಲ್ಲಿ ಸ್ತ್ರೀ ಪುರುಷರ ಜೊತೆಗೆ ಪ್ರಥಮ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತರನ್ನೂ ಸೇರಿಸಲು ನಿರ್ಧರಿಸಿರುವುದನ್ನು ಸ್ವಾಗತಿಸಿರುವುದಾಗಿ ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಹೇಳಿದೆ.

ಗುರುವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಜನಗಣತಿ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಕಾರ್ಯಕರ್ತರು ಸರಕಾರಕ್ಕೆ ತಾವು ಸಲ್ಲಿಸುತ್ತಿರುವ ಬೇಡಿಕೆಗಳ ಬಗ್ಗೆ ವಿವರ ನೀಡಿದರು.

ಭಾರತದಲ್ಲಿ 1872ರಿಂದ ಜನಗಣತಿ ಪ್ರಾರಂಭವಾಗಿ ಪ್ರತಿ 10 ವರ್ಷಗಳಿಗೊಮ್ಮೆ ನಡೆಯುತ್ತಿದೆ. ಸರಣಿಯಲ್ಲಿ 15ನೆಯ ಹಾಗೂ ಸ್ವಾತಂತ್ರ್ಯ ಬಳಿಕದ 7ನೇ ಜನಗಣತಿ ಇದಾಗಿದೆ. ಈಗಾಗಲೇ ಜನಗಣತಿಗೆ ಸಕಲ ಸಿದ್ದತೆಗಳಾಗಿದ್ದು ಸ್ತ್ರೀ ಪುರುಷರ ಜೊತೆಗೆ ಭಾರತ ಇತಿಹಾಸದಲ್ಲೇ ಪ್ರಥಮ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತರನ್ನು ದಾಖಲಿಸಲು ಮುಂದಾಗಿದೆ. ಇದನ್ನು ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಸ್ವಾಗತಿಸುತ್ತದೆ ಎಂದು ವೇದಿಕೆ ಹರ್ಷ ವ್ಯಕ್ತಪಡಿಸಿತು.

ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ : ಈ ವೇದಿಕೆಯು ಕರ್ನಾಟದ ಲೈಂಗಿಕ ಅಲ್ಪಸಂಖ್ಯಾತರ ಸಮುದಾಯದವರ ರಾಜ್ಯಮಟ್ಟದ ಪ್ರಜಾಸತ್ತಾತ್ಮಕ ಸಂಸ್ಥೆಯಾಗಿದ್ದು, 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಾರ್ಯನಿರತವಾಗಿದೆ. ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಲೈಂಗಿಕ ಅಲ್ಪಸಂಖ್ಯಾತರ ಮಾನವ ಹಕ್ಕುಗಳನ್ನು ಸಂರಕ್ಷಿಸುವುದು ಮತ್ತು ಅವರ ಪರವಾಗಿ ಸರ್ಕಾರ, ಮಾದ್ಯಮ, ಸರ್ಕಾರೇತರ ಸಂಸ್ಥೆಗಳು ಮತ್ತು ಸಮುದಾಯ ಆಧಾರಿತ ಸಂಸ್ಥೆಗಳೊಂದಿಗೆ ವಕಾಲತ್ತು ನಡೆಸುತ್ತಿದೆ. ವೇದಿಕೆಯು ಲೈಂಗಿಕ ಅಲ್ಪಸಂಖ್ಯಾತರ ವಿಷಯದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವುದು, ಸಾಮಾಜಿಕ ಚಳವಳಿಗಳೊಂದಿಗೆ ಕೈ ಜೋಡಿಸಿ ಸಾರ್ವಜನಿಕ ಕಾರ್ಯಕ್ರಮಗಳ ಮುಖಾಂತರ ಲೈಂಗಿಕ ಅಲ್ಪಸಂಖ್ಯಾತರ ಪರವಾಗಿ ಸಮಾಜ ಬದಲಾವಣೆ ಕೆಲಸ ಮಾಡುತ್ತಿದೆ. ಮತ್ತಷ್ಟು ಓದು »

21
ಫೆಬ್ರ

ಕಾಂಗ್ರೆಸ್ ಸಂಸದ ಭಾರತಕ್ಕೆ ಸೇರಿದವನಲ್ಲವೇ?

ಮಹೇಶ ಪ್ರಸಾದ ನೀರ್ಕಜೆ

ಅರುಣಾಚಲ ಪ್ರದೇಶ ಪ್ರವಾಸದಲ್ಲಿರುವ ಬಾಬಾ ರಾಮ್ ದೇವ್ ಸಮಾವೇಶಕ್ಕೆ ಬಂದಿದ್ದ ಅಲ್ಲಿನ ಕಾಂಗ್ರೆಸ್ ಸಂಸದ ನಿನಾಂಗ್ ಎರಿಂಗ್ ಬಾಬಾ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂಬುದು ಇತ್ತೀಚಿನ ಸುದ್ದಿ. “ಯು ಬ್ಲಡಿ ಇಂಡಿಯನ್”, “ಸಾಲೆ ಕುತ್ತೇ, ಮೈಕ್ ತೋಡ್ ದೂಂಗಾ, ಸ್ಟೇಜ್ ಫೋಡ್ ದೂಂಗಾ, ಯೋಗಾ ಕರ್ನೇ ಆಯೀ ಹೇ, ಯೋಗಾ‌ ಕರ್. ಕರಪ್ಷನ್ ಕೆ ಬಾರೇ ಮೇ ಬೋಲೇಗಾ ತೋ ಮಾರ್ ಡಾಲೂಗಾ!” ಇತ್ಯಾದಿ. ಈ ಬಗ್ಗೆ ಸಾಕಷ್ಟು ವಿವರಗಳು ಸಿಗುತ್ತಿವೆ ಅಂತರ್ಜಾಲದಲ್ಲಿ. ನಮ್ಮ ಟಿವಿ ಮಾಧ್ಯಮಗಳು ಭಾರತ ಬಾಂಗ್ಲಾದೇಶ ಕ್ರಿಕೆಟ್ ಪಂದ್ಯದಲ್ಲಿ ಹೇಗೆ ಭಾರತ ಬಾಂಗ್ಲಾದೇಶದ ಮೇಲೆ ಸೇಡು ತೀರಿಸಿಕೊಂಡಿತು ಎಂದು ವಿಮರ್ಷಿಸುವುದರಲ್ಲಿ ಬ್ಯುಸಿಯಾಗಿದ್ದವು. ಅವುಗಳಿಗೆ ಹೇಗೆ ಈಶಾನ್ಯ ಭಾರತದ ಮಂದಿ ಹೇಗೆ ಭಾರತದ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಬೇಕಿಲ್ಲ. ಇರಲಿ. ಈಗ ಪ್ರಶ್ನೆಯೇನೆಂದರೆ ಕಾಂಗ್ರೆಸ್ ಸಂಸದ ಬಾಬಾರನ್ನು “ಯೂ ಬ್ಲಡಿ ಇಂಡಿಯನ್”ಅನ್ನಬೇಕಿದ್ದರೆ ಆತ ಇಂಡಿಯನ್ ಅಲ್ಲವೇ? ಎಲ್ಲಿಯವನು ಆತ? ಚೈನಾದವನೇ? ಅಥವಾ ಬೋಡೋ ದೇಶದವನೇ? ಅಥವಾ ಬೇರೆ ಪಾಶ್ಚಿಮಾತ್ಯ ದೇಶದವನೇ?
ಮತ್ತಷ್ಟು ಓದು »

19
ಫೆಬ್ರ

ನಮ್ಮ ರಾಜ್ಯವನ್ನು ಪ್ರತಿನಿಧಿಸಲು ಜನರಿಲ್ವಾ???

– ಚೇತನ್ ಜೀರಾಳ್

ಇದು ಖಂಡಿತಾ ಕರ್ನಾಟಕದ ದೌರ್ಭಾಗ್ಯದ ಪರಮಾವಧಿ. ಹೈಕಮಾಂಡ್ ದಾಸ್ಯಕ್ಕೆ ಸಿಲುಕಿರುವ ಬಿಜೆಪಿ ಪಕ್ಷ ಮತ್ತೊಂದು ಎಡವಟ್ಟು ತೀರ್ಮಾನ ಕೈಗೊಂಡಿದೆ. ಹಿರಿಯ ರಾಜಕಾರಣಿ ಶ್ರೀ ರಾಜಶೇಖರ ರ್ಮೂರ್ತಿಯವರ ನಿಧನದಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಹಿಂದಿ ಚಲನಚಿತ್ರ ನಟಿ ಶ್ರೀಮತಿ ಹೇಮಾ ಮಾಲಿನಿ ಅವರನ್ನ ರಾಜ್ಯದಿಂದ ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ.

ರಾಜ್ಯಸಭಾ ಸದಸ್ಯತ್ವ ಅಂದರೇನು?
ಒಬ್ಬ ರಾಜ್ಯಸಭಾ ಸದಸ್ಯ ಮುಖ್ಯವಾಗಿ ಆಯಾ ರಾಜ್ಯದ ಪ್ರತಿನಿಧಿಯಾಗಿ ಸಂಸತ್ತಿನ ಮೇಲ್ಮನೆಯಲ್ಲಿ ಕೆಲಸಮಾಡುತ್ತಾರೆ. ರಾಜ್ಯಸಭೆ ಅನ್ನುವುದು ಒಕ್ಕೂಟ ವ್ಯವಸ್ಥೆಯ ಒಂದು ಮುಖ್ಯ ಭಾಗ. ಕೇಂದ್ರದಲ್ಲಿ ಲೋಕಸಭೆಗಿರುವಷ್ಟೇ ಪ್ರಾಮುಖ್ಯತೆ ರಾಜ್ಯಸಭೆಗೂ ಇದೆ. ರಾಜ್ಯಸಭಾ ಸದಸ್ಯರನ್ನು ಆಯಾ ರಾಜ್ಯದ ಶಾಸಕರು ಆಯ್ಕೆ ಮಾಡುತ್ತಾರೆ.

ನಮ್ಮ ರಾಜ್ಯವನ್ನೂ ಪ್ರತಿನಿಧಿಸಲು ಅರ್ಹ ಜನಪ್ರತಿನಿಧಿಗಳು ಇಲ್ಲವೇ?
ಇಷ್ಟಕ್ಕೂ ರಾಜ್ಯಸಭೆ ಸ್ಥಾನಕ್ಕೆ ಹೇಮಾ ಮಾಲಿನಿಯವರನ್ನು ಕಣಕ್ಕಿಳಿಸಲು ಇರುವ ಅರ್ಹತೆಯಾದರೂ ಏನು? ಮೊದಲನೆಯದಾಗಿ ಹೇಮಾ ಮಾಲಿನಿ ನಮ್ಮ ನಾಡಿನವರಲ್ಲ, ಹೋಗಲಿ ಆ ಕಾರಣವನ್ನು ಬದಿಗಿಟ್ಟು ನೋಡೋಣವೆಂದರೆ ಅವರಿಂದ ನಮ್ಮ ರಾಜ್ಯಕ್ಕೆ ಆಗಿರುವ ಉಪಯೋಗವಾದರೂ ಏನು? ನಮ್ಮ ನಾಡಿನ ಯಾವ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವ ಪ್ರಯತ್ನ ರಾಜ್ಯ ಮಟ್ಟದಲ್ಲಾಗಲಿ ಅಥವಾ ಕೇಂದ್ರ ಮಟ್ಟದಲ್ಲಾಗಲಿ ಪ್ರಯತ್ನಿಸಿದ್ದಾರೆ? ನಮ್ಮ ನೆಲ, ಜಲ, ಭಾಷೆ, ಉದ್ಯೋಗ, ಉದ್ದಿಮೆ ಹೀಗೆ ಯಾವ ಕಾರಣಕ್ಕಾಗಿ ನಮ್ಮ ನಾಡಿಗಾಗಿ ಕೆಲಸ ಮಾಡಿದ್ದಾರೆ? ಯಾವುದೇ ದೃಷ್ಠಿಯಿಂದ ನೋಡಿದರೂ ಸಹ ಹೇಮಾ ಮಾಲಿನಿ ನಮ್ಮ ರಾಜ್ಯದ ಪ್ರತಿನಿಧಿಯಾಗಿ ರಾಜ್ಯಸಭೆ ಪ್ರವೇಶಿಸಲು ಅರ್ಹರಲ್ಲ. ಇಂತಹುದೇ ತಪ್ಪನ್ನು ಹಿಂದೆ ಬಿಜೆಪಿ ಹೈಕಮಾಂಡ್ ವೆಂಕಯ್ಯ ನಾಯ್ಡು ಅವರನ್ನ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಿವಾಗ ಮಾಡಿತ್ತು. ಕಾಂಗ್ರೆಸ್ ಹಾಗೂ ಜನತಾದಳ ಪಕ್ಷಗಳು ಸಹಿತ ಇಂತಹುದೇ ತಪ್ಪನ್ನು ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ.
ಮತ್ತಷ್ಟು ಓದು »

15
ಫೆಬ್ರ

‘ಭಾರತದ ಬಳಿಯಿದೆ ನಿಂಬೆಯ ಶಕ್ತಿ’ !

ಪಾಕಿಸ್ತಾನದ ಬಳಿ ಭಾರತಕ್ಕಿಂತ ೧೦೦ಕ್ಕೊ ಹೆಚ್ಚು  ಅಣ್ವಸ್ತ್ರಗಳಿವೆ ಅನ್ನೋ ಸುದ್ದಿ ಮೊನ್ನೆ ಪತ್ರಿಕೆಗಳಲ್ಲಿ ಬಂದಿದೆ.ಆದರೆ ಭಾರತೀಯರು ಈ ಸುದ್ದಿಗೆ ಗಲಿಬಿಲಿಯಾಗಬೇಕಿಲ್ರಿ! ಯಾಕೆ ಅಂತಿರಾ? ಯಾಕಂದ್ರೆ ‘ಭಾರತದ ಬಳಿಯಿದೆ ನಿಂಬೆಯ ಶಕ್ತಿ’ !

ಇದೇನಿದು ಯಾವ್ದೋ ಬಟ್ಟೆ ತೊಳ್ಯೋ ಸೋಪ್ ಜಾಹಿರಾತಿನ ಡೈಲಾಗ್ ತರ ಇದ್ಯಲ್ಲಪ್ಪ ಅಂತಿರಾ?ರೀ,ಇದು ಆ ತರ ನಿಂಬೆ ಅಲ್ಲ.ನಾನ್ ಹೇಳೋಕ್ ಹೊರಟಿದ್ದು,ಕಳೆದ ಬಾರಿ ಒಂದಿಷ್ಟು ಜನ ಎಂ.ಎಲ್.ಎಗಳು ಹೋಗಿ ಗೋವಾದಲ್ಲಿ ಕೂತು,ಅಲ್ಲಿಗೆ ಕುಮ್ಮಿನು ಹೋದ್ಮೇಲೆ,ಈ ಕಡೆ ಯಡ್ಡಿ ಕುರ್ಚಿ ಗಡ-ಗಡ ನಡುಗಲು ಶುರು ಮಾಡಿದಾಗ.ವಿಧಾನ ಸೌಧದ ಎದುರು ಕಾಣಿಸಿತ್ತಿಲ್ಲ ಹರಿಶಿನ ಕುಂಕುಮ ಹಚ್ಚಿದ ನಿಂಬೆಹಣ್ಣು ಅದರ ಬಗ್ಗೆ. ಮತ್ತೀಗ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಕಾಣಿಸಿಕೊಂಡ ಪವರ್ಫುಲ್ ನಿಂಬೆಯ ಬಗ್ಗೆ! (ಆ ಪರಿ ಕಾಡ್ತಾ ಇರೋ ರಾಜಭವನದ ಬಳಿ ಯಾಕೆ ಇನ್ನ ನಿಂಬೆ ಬಿದ್ದಿಲ್ಲ ಅಂತ ನಾನ್ ಕೇಳೋಲಪ್ಪ 😉 ).ಇದೇ,ಈ ಮಂತ್ರಿಸಿದ ನಿಂಬೆಹಣ್ಣು ಕಣ್ರೀ ಭಾರತದ ಶಕ್ತಿಯಾಗಬೇಕು.ಅದ್ಹೆಂಗೆ ಸಿವಾ ಅಂತಿರ? ಹೇಳ್ತೀನಿ ಕೇಳಿ…

ಈಗಾಗ್ಲೇ ಚೀನಾ ಅನ್ನೋ ನಂಬಿಕೆಗೆ ಅರ್ಹವಲ್ಲದ ದೇಶ ಭಾರತವನ್ನ ಇರೋ ಬರೋ ದಿಕ್ಕುಗಳಿಂದ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಕಡೆಯಿಂದ ಸುತ್ತಿ ಕುಳಿತಿದೆ.ಹೀಗೆ ಪಾಕಿಸ್ತಾನ,ಶ್ರೀಲಂಕ,ಬಾಂಗ್ಲ,ನೇಪಾಳ,ಬರ್ಮಾ ಕಡೆ ಹರಡಿಕೊಂಡಿರೋ ಚೀನಿಗಳು ವಾಪಸ್ ಚೈನಗೆ ಹೋಗೋ ಹಾಗೆ ಮಾಡ್ಬೇಕು.ಹೇಗ್ ಮಾಡೋದು?

ಹೆಗಂದ್ರೆ,ಹೇಗಿದ್ರು ಅಲ್ಲಿ ಪ್ರಜಾಪ್ರಭುತ್ವಕ್ಕಾಗಿ ಚಿಕ್ಕದಾಗಿ ಕೂಗೆದ್ದಿದೆ.ಅಲ್ಲಿನ ಜನರಿಗೆ ದೈತ್ಯ ಶಕ್ತಿ ಆವಹನೆಯಾಗುವಂತೆ ಭಾರತ ನಿಂಬೆ ಶಕ್ತಿಯನ್ನ ಪ್ರಯೋಗಿಸ್ಬೇಕು ರೀ,ಆಗ ಅಲ್ಲಿ ರೊಚ್ಚಿಗೆಳೋ ಚೀನೀ ಜನರನ್ನ ಕಂಟ್ರೋಲ್ ಮಾಡೋಕೆ ಅಂತ ಚೀನಿಗಳೆಲ್ಲ ವಾಪಸ್ ಅವ್ರ ದೇಶಕ್ಕೆ ಹೋಗ್ತಾರೆ.ಅವರೆಲ್ಲ ಕಾಲ್ಕಿತ್ತ ಮೇಲೆ ಭಾರತ ಸೋಯ್ಯಿ-ಟಪಕ್ ಅಂತ ಮತ್ತಿನ್ನೊಂದು ಕೆಲ್ಸ ಮಾಡ್ಬೇಕಪ್ಪ.ಗಡಿಯುದ್ದಕ್ಕೂ ನಿಂಬೆ ಬೆಳೆಯೋದು ಕಡ್ಡಾಯ ಮಾಡಿ, ಗಡಿ ಬೇಲಿ ತರ ಮಂತ್ರಿಸಿದ ನಿಂಬೆ ಬೇಲಿ ಮಾಡಿಬಿಡ್ಬೇಕು.ಅಲ್ಲಿಗೆ ದೇಶ ಫುಲ್ ಸೆಕ್ಯೂರ್ ಆಗಿಬಿಡುತ್ತೆ! (ಹಿಂಗ್ ಮಾಡೋಕೆ ನಮ್ ದೇಸದ ಸಿಕ್ಯುಲರ್ಗಳು ಬಿಡೋಲ್ಲ ಅಂತಿರ, ಅವ್ರು ಯಾವ್ ಒಳ್ಳೆ ಕೆಲ್ಸ ತಾನೇ ಮಾಡೋಕ್ ಬಿಡ್ತಾರೆ ನೀವೇ ಹೇಳಿಪ್ಪ ;))

ಇಷ್ಟು ಮಾಡಿದ್ರೆ ಪಾಕಿಸ್ತಾನದ ಸದ್ದು ಸಹ ಅಡಗಿಬಿಡುತ್ತೆ,ಇಲ್ಲ ಅಂದ್ರೆ ಭಾರತದಲ್ಲಿಡಿ ಕಡ್ಡಾಯ ನಿಂಬೆ ಬೆಳೆಯುವಂತೆ ಮಾಡಿ ಅದೇ ನಿಂಬೆ ಹಣ್ಣು ಪಾಕಿಸ್ತಾನಕ್ಕೆ ಎಸೆಯುವಂತೆ ಮಾಡಿದ್ರೂ ಆ ದೇಶ ನಿಂಬೆಯಲ್ಲಿ ಮುಚ್ಚಿ ಹೋಗುತ್ತೆ! ಹೇಗಿದೆ ‘ನಿಂಬೆಯ ಶಕ್ತಿ’, ಸಕ್ಕತ್ತ್ ಅಲ್ವಾ?  ಮತ್ತಷ್ಟು ಓದು »

15
ಫೆಬ್ರ

ಹಾರೋ ಬೂದಿಯ ನೋಡಿದಿರಾ?

ಪವನ್ ಎಂ ಟಿ

ಒಂದು ದಿನ ಮನೆಯಲ್ಲಿ ಬಿದ್ದಿರುವ ಧೂಳನ್ನು ಗುಡಿಸದೇ ಇದ್ದರೇನೆ ಕಿರಿಕಿರಿ ಆಗ್ತಾ ಇರುತ್ತೆ. ಹಾಗಿರುವಾಗ ಹೇಗೆ ಇದ್ರೂ ಧೂಳಿನ ಒಳಗೆ ಇರಬೇಕಂದ್ರೆ ಹೇಗಾಗಬಹುದು?

ದಿನನಿತ್ಯದ ಸಣ್ಣ ಸಂಗತಿಯೇ ಹೀಗಾದರೆ  ಉಡುಪಿ ಜಿಲ್ಲೆಯ ಪಡುಬಿದ್ರೆಯ ನಂದಿಕೂರು ಗ್ರಾಮದ ಸುತ್ತಮುತ್ತಲಿನ ಜನರ ಸ್ಥಿತಿ ನೆನಪಿಸಿಕೊಂಡರೇ ಮೈ ಜುಮ್ ಎನ್ನುತ್ತದೆ. ಕಾರಣವಿಷ್ಟೆ. ಪಡುಬಿದ್ರಿ ಸಮೀಪದಲ್ಲಿ ಇತ್ತೀಚೆಗೆ ಬೃಹತ್ ಕಂಪೆನಿಯೊಂದು ತನ್ನ ಕಾರ್ಯಾರಂಭ ಮಾಡಿದೆ. ಅದರ ಆರಂಭದ ಸಂದರ್ಭದಲ್ಲೇ ತೀವ್ರ ಪ್ರತಿರೋಧ ಇತ್ತಾದರೂ ಹಣವಂತರ ಮುಂದೆ ಈ ಚಳುವಳಿ ಸೋತು ಸುಣ್ಣವಾಯಿತು. ಸಮಾಜ ಸೇವೆ ಮಾಡುತ್ತೇವೆಂದು ಹೇಳಿ ಮತ ಪಡೆದ ಜನಪ್ರತಿನಿಧಿಗಳು ಈ ಕಂಪೆನಿಯ ರಕ್ಷಣೆಗೆ ನಿಂತರು. ಇದೀಗ ಕಂಪೆನಿಯು ತನ್ನ ಹತ್ತು ಶೇಕಡಾ ಕೆಲಸ ಆರಂಭ ಮಾಡಿದೆ ಅಷ್ಟೇ. ಆದರೆ ಅದು ಕೊಟ್ಟ ಹೊಡತಕ್ಕೆ ಇಲ್ಲಿನ ಸ್ಥಳೀಯ ಜನತೆ ತತ್ತರಿಸುತ್ತಿದೆ. ಇಲ್ಲಿನ ಕಾರ್ಖಾನೆಯು ಉಗುಳುತ್ತಿರುವ  ತ್ಯಾಜ್ಯದ ಧೂಳಿನಿಂದ ಅನೇಕ ರೀತಿಯ ಶಾರೀರಿಕ ತೊಂದರೆಗಳನ್ನು ಇಲ್ಲಿನ ಪ್ರಜೆಗಳು ಅನುಭವಿಸುತ್ತಿದ್ದಾರೆ. ತನ್ನದಲ್ಲದ ತಪ್ಪಿಗೆ ಮಕ್ಕಳು ಮಹಿಳೆಯರು ಸೇರಿದಂತೆ ಚರ್ಮ, ಶ್ವಾಸಕೋಶ ಸಂಬಂಧಿ ರೋಗಗಳಿಂದ ಬಳಲುತ್ತಿದ್ದಾರೆ. ಮತ್ತಷ್ಟು ಓದು »

14
ಫೆಬ್ರ

ಒಲವೆಂಬ ವಿಸ್ಮಯ!

ಸುಪ್ರೀತ್.ಕೆ.ಎಸ್

ಈ ಪ್ರೀತಿ ಅಂದರೆ ಏನು?
ಹಾಗಂತ ಕೇಳಿ ನೋಡಿ ಪ್ರೀತಿಯಲ್ಲಿ ಬಿದ್ದವರಿಗೆ ಮಾತನಾಡಲು ಪದಗಳೇ ಸಿಕ್ಕುವುದಿಲ್ಲ. ಎಂದೂ ಪ್ರೀತಿಸಿರದವರಿಗೆ ಮಾತನಾಡಲಿಕ್ಕೆ, ವಾದಿಸುವುದಕ್ಕೆ ಸಾವಿರ ಸಾವಿರ ಸಂಗತಿಗಳು ಸಿಕ್ಕುತ್ತವೆ. ನೂರಾರು ಥಿಯರಿಗಳು ಕೈಗೆ ಎಟುಕುತ್ತವೆ. ಹತ್ತಾರು ಶ್ರೇಷ್ಠ ಚಿಂತಕರು ಹೇಳಿದ ಸಿದ್ಧಾಂತಗಳು ನೆರವಿಗೆ ಬರುತ್ತವೆ. ಆದರೆ ಪ್ರೀತಿಯಲ್ಲಿ ಮುಳುಗಿದವರನ್ನು ಕೇಳಿ, ಅವರಿಗೆ ಮಾತೇ ಬರದು, ಅವರು ಪ್ರೀತಿ ಕೊಡಮಾಡುವ ಮಧುರ ಅನುಭೂತಿಯನ್ನು ಸವಿಯುವುದರಲ್ಲಿ ಮಗ್ನರಾಗಿರುತ್ತಾರೆ, ಮಾತು ಮರೆತಿರುತ್ತಾರೆ.

ಧರ್ಮವೆಂದರೆ ಏನು, ದೇವರು ಇದ್ದಾನಾ? ಅಂತೆಲ್ಲಾ ಕೇಳಿದಾಗ ದೈವತ್ವದ ಅನುಭವವನ್ನು, ತನ್ನನ್ನೇ ತಾನು ಕಳೆದುಕೊಳ್ಳುವ ಮಗ್ನತೆಯನ್ನು ಎಂದೂ ಕಂಡಿರದವ ಮಾತ್ರ ಉಗ್ರವಾಗಿ ವಾದ ಮಾಡಬಲ್ಲ. ದೇವರಿದ್ದಾನೆ, ಅವನನ್ನು ನಂಬದವರು ದುರುಳರು ಎಂದು ಅಬ್ಬರಿಸಬಲ್ಲ. ದೇವರು ಎಂಬುದು ನಮ್ಮ ದೌರ್ಬಲ್ಯ, ನಮಗೆ ನಾವು ಮಾಡಿಕೊಳ್ಳುವ ವಂಚನೆ ಎಂದು ಉಪದೇಶಿಸಬಲ್ಲ. ಆದರೆ ದೇವರನ್ನು ಅನುಭವಿಸಿದವ ಮಾತ್ರ ಯಾವ ಮಾತನ್ನೂ ಆಡದೆ ಮೌನವಾಗಿ ಹಿಮಾಲಯದ ನಿಶ್ಯಬ್ಧ, ನಿರ್ಮಾನುಶ ಗುಹೆಗಳಲ್ಲಿ ಧ್ಯಾನಿಸುತ್ತಿರುತ್ತಾನೆ. ಖಾಲಿಯಾದ ಡಬ್ಬಗಳು ಜೋರಾಗಿ ಸದ್ದು ಮಾಡುತ್ತಾ ಬಡಿದುಕೊಳ್ಳುತ್ತಿರುತ್ತವೆ! ಎಂದಿನಂತೆ!

ಎರಡು ವಿಪರೀತಗಳು

ಪ್ರೀತಿಯ ಅನುಭವವನ್ನು ಹಂಚಿಕೊಳ್ಳುವಾಗ, ಪ್ರೀತಿಯನ್ನು ವ್ಯಾಖ್ಯಾನಿಸಲು ಕೂರುವಾಗ ನಾವು ಎರಡು ವಿಪರೀತಗಳಿಗೆ ಹೋಗುವ ಅಪಾಯವಿರುತ್ತದೆ. ಪ್ರೀತಿಯನ್ನು ತೀರಾ ಭಾವುಕವಾಗಿ ವರ್ಣಿಸುತ್ತಾ, ಪ್ರೀತಿ ಈ ಜಗತ್ತಿನದ್ದೇ ಅಲ್ಲ. ಅದು ಇಂದ್ರಿಯಗಳಿಗೆ ನಿಲುಕದ್ದು, ಅದು ಎಂಥಾ ವಿರೋಧವನ್ನಾದರೂ ಎದುರಿಸಬಲ್ಲದು. ಇಡೀ ಪ್ರಪಂಚವನ್ನೇ ಬೇಕಾದರೂ ಎದುರು ಹಾಕಿಕೊಂಡು ಪ್ರೀತಿ ಬದುಕಬಲ್ಲದು. ಪ್ರೀತಿಗೆ ಹಣ, ಅಂತಸ್ತಿನ ಹಂಗು ಇಲ್ಲ. ಅದು ಮುಖ ನೋಡಿ, ಭವಿಷ್ಯವನ್ನು ಆಲೋಚಿಸಿ ಪ್ರೀತಿಗೆ ಬೀಳಿಸುವುದಿಲ್ಲ. ಪ್ರೀತಿಯೆಂಬುದು ಒಂದು ಪವಾಡ. ನಮ್ಮ ನಿಯಂತ್ರಣವೇ ಇಲ್ಲದ ಆದರೆ ನಮ್ಮೆಲ್ಲರನ್ನೂ ನಿಯಂತ್ರಿಸುವ ಅಗೋಚರವಾದ ಶಕ್ತಿ ಪ್ರೀತಿ. ಪ್ರೀತಿಸಿದವರಿಗೆ ಪ್ರೀತಿಯೇ ದೇವರು. ಪ್ರೀತಿಗಿಂತ ದೊಡ್ಡದು ಅವರಿಗೆ ಬೇರೇನೂ ಕಾಣುವುದಿಲ್ಲ. ನಮ್ಮ ಜೀವನದ ಏಕೈಕ ಗುರಿಯೇ ಪ್ರೀತಿ. ಅಂತೆಲ್ಲಾ ಭಾವುಕವಾಗಿ ಪ್ರೀತಿಯ ಅಗಾಧತೆಯನ್ನು ಮೆರೆಸುವ ಭರದಲ್ಲಿ ವಾಸ್ತವದಿಂದ ದೂರಾಗುವ, ತೀರಾ ಎಮೋಶನಲ್ ಆಗುವ ಅಪಾಯವಿದೆ. ಮತ್ತಷ್ಟು ಓದು »

10
ಫೆಬ್ರ

ನಾಸ್ತಿಕನಾಗೋದು ಅಂದ್ರೆ….

ಸಾತ್ವಿಕ್ ಎನ್ ವಿ 

ಅಂದು ಕೊಂಡ ತಕ್ಷಣ ಆಯಿತೆ? ನಾವು ನಮ್ಮೆಲ್ಲ ಕಷ್ಟಗಳನ್ನು ಪರಿಪಾಟಲುಗಳನ್ನು ದೇವರ ತಲೆಗೆ ಹಾಕಿ ಒಂದು ಕ್ಷಣ ನೆಮ್ಮದಿಯ ನಿಟ್ಟುರಸಿರು ಬಿಟ್ಟುಬಿಡುತ್ತೇವೆ. ಆದರೆ ಆ ಅಧಾರದ ಬಗ್ಗೆಯೇ ಅಪನಂಬಿಕೆ ಇರುವ ನಾಸ್ತಿಕರ ಕಥೆಯೇನು? ಒಂದೆಡೆ  ತಲೆಯಲ್ಲಿನ ಒತ್ತಡಗಳನ್ನು ನಿವಾರಿಸಿಕೊಳ್ಳಲು ಇರುವ ಆಧಾರ ತಪ್ಪಿತು. ಮತ್ತೊಂದೆಡೆ  ದೇವರನ್ನು ನಂಬದೇ ಇರುವುದರಿಂದ ಆಗುವ ಭಯಂಕರ ಸಮಸ್ಯೆಗಳ ಬಗ್ಗೆ ಜನರು ಹೇಳುವ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಪುಕ್ಕಲನಾಗಿದ್ದರೆ  ದೇವರೆ ಗತಿ!! ಒಟ್ಟಾರೆ ಸಾಕಷ್ಟು ಮನೋದಾರ್ಢ್ಯವಿಲ್ಲದೆ ನಾಸ್ತಿಕನಾಗಲು ಸಾಧ್ಯವಿಲ್ಲ. ನಾನು ದೇವರನ್ನು ನಂಬುವುದಿಲ್ಲ ಎಂದು ಹೇಳುವುದು ಸುಲಭ. ಆದರೆ ಇಡೀ ಜೀವನವೆಲ್ಲ ಹಾಗೆಯೇ ಬದುಕುವುದು ಇದೆಯಲ್ಲ ಅದು ನಿಜಕ್ಕೂ ಚಾಲೆಂಜಿಂಗ್.
ನಮ್ಮ ‘ಅವಸ್ಥೆಯ’ ಹಿಂದೆ, ನಮ್ಮ ಮನಸ್ಸು ಕೆಲಸ ಮಾಡುತ್ತಿರುತ್ತದೆ. ಈ ಮನಸ್ಸು ತನ್ನ ಒಳಬೇಗುದಿಗಳನ್ನು ಕಡಿಮೆ ಮಾಡಿಕೊಳ್ಳಲು ಹಲವಾರು ಉಪಾಯಗಳನ್ನು ಹುಡುಕಿಕೊಂಡಿರುತ್ತದೆ. ಒಂದರ್ಥದಲ್ಲಿ ಸೇಫ್ಟಿ ವಾಲ್ವ್ ನ ಹಾಗೆ. ಮನುಷ್ಯನಿಗೆ ಆಗಾಗ ಕಾಡುವ ಒಂಟಿತನ, ಬೇಸರ, ಅಭದ್ರತೆ ಇತ್ಯಾದಿಗಳನ್ನು ಪರಿಹಾರ ಮಾಡಿಕೊಳ್ಳಲು ಇರುವ ಏಕೈಕ ಉಪಾಯ ಅದನ್ನು ವರ್ಗಾಯಿಸುವುದು. ಆಗ ಆ ಕ್ಷಣಕ್ಕಾದರೂ ಆ ವಿಷಯದಿಂದ ಮುಕ್ತಿ ಸಿಗುತ್ತದೆ. ಈ ವಿಷಯದಲ್ಲಿ ದೇವರು ದಯಾಮಯಿ. ನಮಗೆ ಯಾವಾಗಲೂ ಇಂಥ ಸಂದರ್ಭದಲ್ಲಿ ಸಹಾಯಕ್ಕೆ ಒದಗಿ ಬರುತ್ತಾನೆ.    ಮತ್ತಷ್ಟು ಓದು »

9
ಫೆಬ್ರ

ಮದರ್ ತೆರೇಸಾ ಸೋಗುಗಾತಿ ಎಂದವನು ಓಶೋ!!!

ಹೇಮಾ ಪವಾರ್, ಬೆಂಗಳೂರು

ದೂರದ ಅಲ್ಬೇನಿಯಾದಲ್ಲಿ ಹುಟ್ಟಿದ ಅಗ್ನೆಜ್ ಗಾಂಡ್ಜೆ ಬೊಜಾಕ್ಜಿಯು ಎಂಬ ಬಾಲಕಿ ಭಾರತದ ಕೊಳಚೆ ಪ್ರದೇಶಗಳ ರಾಜಧಾನಿ ಎಂದು ಹೆಸರುವಾಸಿಯಾಗಿದ್ದ ಕೊಲ್ಕತ್ತಾಗೆ ಕ್ರೈಸ್ತ ನನ್ ಆಗಿ ಆಗಮಿಸಿ ಕುಷ್ಠರೋಗಿಗಳ, ಅನಾಥ ಮಕ್ಕಳ ಪಾಲಿಗಷ್ಟೇ ಅಲ್ಲದೆ ಇಡೀ ಜಗತ್ತಿಗೆ ಮದರ್ ತೆರೆಸಾ ಎಂದು ಪರಿಚಿತಳಾದಳು. ಭಾರತದ ಕೊಳಚೆ ಪ್ರದೇಶಗಳ ವಾಸಿಗಳ ಏಳ್ಗೆಗಾಗಿ ಶ್ರಮಿಸಿದ್ದಕ್ಕಾಗಿ ನೊಬೆಲ್ ಬಹುಮಾನವನ್ನೂ ಪಡೆದಳು – ಇದಿಷ್ಟು ನಾವು ಆಕೆಯ ಬಗ್ಗೆ ತಿಳಿದ ವಿಚಾರಗಳು. ಆದರೆ ಗಾಂಧಿ ಇಂದ ಬುದ್ದನವರೆಗೂ, ಆಧ್ಯಾತ್ಮದಿಂದ ಲೈಂಗಿಕತೆಯವರೆವಿಗೂ ಎಲ್ಲವನ್ನೂ, ಎಲ್ಲವನ್ನೂ ತನ್ನ ಮಾತುಗಳಲ್ಲಿ ಹಿಡಿದು ಹೊಸ ಅರ್ಥ ಕೊಡುವ ಓಶೋ ರಜನೀಶ್ ಮದರ್ ತೆರೆಸಾ ಬಗ್ಗೆ ಬೇರೆಯದೇ ರೀತಿಯಾದ ಅಭಿಪ್ರಾಯ ವ್ಯಕ್ತಪಡಿಸುತ್ತಾನೆ. ನೊಬೆಲ್ ಪ್ರಶಸ್ತಿಯಿಂದ ಪ್ರಖ್ಯಾತಿಯನ್ನು ಪಡೆದ ತೆರೆಸಾರನ್ನು, ಸೋಗುಗಾರ್ತಿ, ಕಪಟಿ ಹಾಗೂ ಹಿಪೋಕ್ರಿಟ್ ಎಂದು ಕರೆಯುತ್ತಾನೆ. ತನ್ನ ಅಭಿಪ್ರಾಯಗಳು ವಿಪರೀತವಾಗಿರುವಂತೆ ನೋಡಿಕೊಳ್ಳುತ್ತಿದ್ದ ರಜನೀಶನ ಅಭಿಪ್ರಾಯವನ್ನು ಅಕ್ಷರಶಃ ಒಪ್ಪುವುದು ಯಾರಿಗೂ ಸಾಧ್ಯವಿಲ್ಲವಾದರೂ ಆತನ ದೃಷ್ಟಿಕೋನದ ಬೆಳಕಿನಲ್ಲಿ ನಮ್ಮ ತಿಳುವಳಿಕೆಯನ್ನು, ಅಭಿಪ್ರಾಯಗಳನ್ನು ಪುನರ್ವಿಮರ್ಶಿಸಿಕೊಳ್ಳುವುದು ನಮಗೆ ಉಪಯುಕ್ತವಾಗಬಹುದು. ತನ್ನ ಪ್ರವಚನವೊಂದರಲ್ಲಿ ರಜನೀಶ್ ತೆರೆಸಾರನ್ನು ಅವಲೋಕಿಸಿದ ಪರಿ ಇಂತಿದೆ:
ಮತ್ತಷ್ಟು ಓದು »