ಮೆಸೆಜ್ನ ಸ್ವಗತ
ಅಶ್ವಥ್ ಸಂಪಾಜೆ
ಅಯ್ಯೇ ಇಲ್ಲೊಬ್ಬಳು ಹುಡುಗಿ ಮುಸಿ ಮುಸಿ ಅಳುತ್ತಿದ್ದಾಳೆ, ಯಾಕಿರಬಹುದು? ಅದೂ ಜ೦ಘಮವಾಣಿ ಕೈಯಲ್ಲಿ ಹಿಡಿದುಕೊ೦ಡು, ಅದರಲ್ಲೂ ನನ್ನನ್ನು ನೋಡಿ. ನಾನು ಇಷ್ಟೊ೦ದು ಪ್ರಭಾವಿತನೇ. . . !
ಹೌದು, ಈ ಪ್ರಪ೦ಚದಲ್ಲಿ ನಾನು ಅಭಿಮಾನಿಗಳ ಜೊತೆ ಹರಿದಾಡದಿದ್ದರೆ ಅವರು ದಿನದಲ್ಲಿ ಏನೋ ಕಳಕೊ೦ಡ ಹಾಗೆ! ಬೆಳಗ್ಗಿನಿ೦ದ ಮಧ್ಯರಾತ್ರಿಯವರೆಗೂ ನನ್ನ ಸ೦ಚಾರ. ದಿವಸದ ೨೪ ಗ೦ಟೆ, ೩೬೫ದಿನ ನನಗೆ ವಿಶ್ರಾ೦ತಿ ಎನ್ನುವುದು ಇಲ್ಲ. ನಿರ೦ತರ ಚಲನಶೀಲವ್ಯಕ್ತಿ ಅ೦ತಾ ಬಿರುದು ಕೊಡುವುದು ಏನೂ ಬೇಡ. ಅಭಿಮಾನಿಗಳು ಬಾಯಿಯಿ೦ದಲೇ ಬ೦ದ ಮೇಲೆ ಮತ್ತೆ ನಾನು ನಿವೇದನೆ ಮಾಡುವುದು ಸರಿಯಲ್ಲ.
ನನಗೆ ಎಷ್ಟು ಹೆಸರುಗಳಿವೆ ಎನ್ನುವುದು ನನಗೆ ಗೊತ್ತಿಲ್ಲ. ` ಸ೦ದೇಶ’ ಅ೦ತಾ ಎಲ್ಲರೂ ಸಾಮಾನ್ಯವಾಗಿ ಕರೆಯುತ್ತಾರೆ. ಸಮಯ, ಸ೦ದರ್ಭ, ಸನ್ನಿವೇಶಕ್ಕೆ ತಕ್ಕ೦ತೆ ನಾನು ಹೊಸ ಹೊಸ ಹೆಸರುಗಳಿ೦ದ ಪ್ರಸಿದ್ಧಿಗೆ ಬರುತ್ತಾನೆ. ಎಲ್ಲರ ಶುಭಾಶಯ ವಿನಿಮಯ ಮಾಡುವ, ಶುಭಕರನಾಗಿ ಸ್ನೇಹಿತರ ಸಮಸ್ಯೆಗಳನ್ನು ನಿವಾರಿಸುವ ` ನಿವಾರಕ’ನಾಗಿ, ಯುವ ಜೋಡಿಗಳ ಭಾವನೆಗಳನ್ನು ಹರಿಬಿಡುವ ಮೇಘಸ೦ದೇಶದ ` ಧೂತ’ನಾಗಿ. ಕಿರುಕುಳ ನೀಡಿ ಮಜ ತೆಗೆದುಕೊಳ್ಳುವ ದಾಳದ `ಆಟಗಾರ’ನಾಗಿ, ಅದನ್ನು ಓದಿ ಕಿರಿಕಿರಿ ಅ೦ತಾ ಅನಿಸುವವರಿಗೆ `ಕಿರಿಕ್ ವ್ಯಕ್ತಿಯಾಗಿ. . . . ಹೀಗೆ ನಾನು, ನಾನಾ ಹೆಸರು, ವೇಷ ಧರಿಸಿ ನಿಮ್ಮ ಸ೦ಚಾರಿ ದೂರವಾಣಿಯ ಜೊತೆ ಅ೦ದು ಸೇರಿ ಕುಳಿತುಬಿಡುತ್ತೇನೆ. ಮತ್ತಷ್ಟು ಓದು 
ಕೃಷ್ಣಾ ತೀರ್ಪು:100 ಟಿ.ಎಂ.ಸಿ ನೀರು ಸುಮ್ಮನೆ ಬಿಟ್ಟು ಬಿಡುವುದಕ್ಕೆ ಅದೇನು 100 ಬಕೆಟ್ ನೀರಲ್ಲ..!
ಚೇತನ್ ಜೀರಾಳ್
ನಾಲ್ಕು ದಶಕಗಳ ಸುಧೀರ್ಘ ಹೋರಾಟದ ನಂತರ ಕೃಷ್ಣ ನದಿ ನೀರು ಹಂಚಿಕೆಯ ತೀರ್ಪು ಹೊರಬಿದ್ದಿದೆ. ಮೇಲ್ನೋಟಕ್ಕೆ ನಮಗೆ ಸಂಪೂರ್ಣ ನ್ಯಾಯ ದಕ್ಕಿದೆ ಅಂತ ಅನ್ನಿಸಿದರೂ ಸಹ ಕೆಲವು ಪ್ರಮುಖ ವಿಷಯಗಳಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲವೇನೋ ಅನ್ನಿಸುತ್ತದೆ. ಇದುವರೆಗೂ ಮಾಧ್ಯಮಗಳು ಹಾಗೂ ಅಂತರ್ಜಾಲದಲ್ಲಿ ದೊರಕಿರುವ ಮಾಹಿತಿಯ ಪ್ರಕಾರ,ಸ್ಕೀಮ್ ಬಿಯಲ್ಲಿ ಒಟ್ಟು ಲಭ್ಯವಿರುವ 448 ಟಿ.ಎಂ.ಸಿ ನೀರಿನ ಹಂಚಿಕೆಯ ವಿವರಗಳು ಇಂತಿದೆ: ಮಹಾರಾಷ್ಟ್ರಕ್ಕೆ 81 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ, ಕರ್ನಾಟಕಕ್ಕೆ 177 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ ಹಾಗೂ ಆಂಧ್ರ ಪ್ರದೇಶಕ್ಕೆ 190 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ.
ಇದರ ಜೊತೆಗೆ ರಾಜ್ಯದ ದಶಕಗಳ ಬೇಡಿಕೆಯಾಗಿದ್ದ ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು 519 ಮೀಟರ್ ನಿಂದ 524.26 ಮೀಟರ್ ವರೆಗೆ ಏರಿಸಲು ಇದ್ದ ಅಡಚಣೆಯನ್ನು ನಿವಾರಿಸಿ ನ್ಯಾಯಾಧಿಕರಣ ಅವಕಾಶ ನೀಡಿದೆ. ಕೃಷ್ಣ ನದಿಯ ಒಟ್ಟು ನೀರು ಹಂಚಿಕೆಯಲ್ಲಿ ಕರ್ನಾಟಕದ ಪಾಲಿಗೆ 911 ಟಿ.ಎಂ.ಸಿ ನೀರು ಸಿಕ್ಕಿದೆ, ಮಹಾರಾಷ್ಟ್ರದ ಪಾಲಿಗೆ 666 ಟಿ.ಎಂ.ಸಿ ಹಾಗೂ ಆಂಧ್ರ ಪ್ರದೇಶಕ್ಕೆ 1001 ಟಿ.ಎಂ.ಸಿ ನೀರು ಸಿಕ್ಕಿದೆ. ಇದರ ಜೊತೆಗೆ ಕರ್ನಾಟಕ ಪ್ರತಿ ವರ್ಷ ಜೂನ್-ಜುಲೈ ತಿಂಗಳಿನಲ್ಲಿ 8-10 ಟಿ.ಎಂ.ಸಿ ನೀರು ಆಂಧ್ರಕ್ಕೆ ಬಿಡಬೇಕು ಎಂದು ತೀರ್ಪು ನೀಡಿದೆ. ಹಾಗದರೆ ರಾಜ್ಯಕ್ಕೆ ಅನ್ಯಾಯವಾಗಿರುವುದೆಲ್ಲಿ???
ರಾಜ್ಯಕ್ಕೆ ಅನ್ಯಾಯವಾಗಿರುವುದೆಲ್ಲಿ?
ಮೊದಲನೆಯದಾಗಿ ಬಚಾವತ್ ಆಯೋಗ ತನ್ನ ತೀರ್ಪಿನಲ್ಲಿ ಕೃಷ್ಣಾ ನದಿಯ ಕೊಳ್ಳದಲ್ಲಿ ಲಭ್ಯವಿರುವ ಹೆಚ್ಚುವರಿ ನೀರನ್ನು ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶಕ್ಕೆ ಕ್ರಮವಾಗಿ 50%, 25% ಹಾಗೂ 25% ಹಂಚಬೇಕು ಎಂದು ತೀರ್ಪು ನೀಡಿತ್ತು. ಆದರೆ ಬಂದಿರುವ ತೀರ್ಪಿನಲ್ಲಿ ಕರ್ನಾಟಕಕ್ಕೆ ಬರಬೇಕಾಗಿದ್ದ 50% ನೀರಿನ ಬದಲು ಸಿಕ್ಕಿರುವುದು ಕೇವಲ 39.5% ನಷ್ಟು ಮಾತ್ರ. ಆಂಧ್ರಕ್ಕೆ ಸಿಗಬೇಕಾಗಿದ್ದ 25% ಬದಲು ಇಂದು ಸಿಕ್ಕಿರುವುದು 42.41% ಹಾಗೂ ಮಹಾರಾಷ್ಟ್ರಕ್ಕೆ ಸಿಗಬೇಕಾಗಿದ್ದ 25% ನಲ್ಲಿ ಸಿಕ್ಕಿರುವುದು ಕೇವಲ 18.08% ಮಾತ್ರ. ಕರ್ನಾಟಕ ತನ್ನ ಪಾಲಿಗೆ ಬರಬೇಕಾಗಿದ್ದ ಸುಮಾರು 100 ಟಿ.ಎಂ.ಸಿ ಯಷ್ಟು ನೀರನ್ನು ಕಳೆದುಕೊಂಡಿದೆ. ಮತ್ತಷ್ಟು ಓದು 
ABVP ಸಮಾವೇಶಕ್ಕೆ ಹಿಂದಿ ಬ್ಯಾನರ್ ಯಾಕೆ?
ವಸಂತ ಶೆಟ್ಟಿ
ಮೊನ್ನೆ ಬಸವನಗುಡಿಯ ಟಾಗೋರ್ ಸರ್ಕಲ್ ಬಳಿ ಹೋಗುವಾಗ ಈ ಬ್ಯಾನರ್ ಕಂಡಿತು. ಇದೇನಪ್ಪ ಇದು ಅಂತ ನೋಡಿದ್ರೆ, ಬೆಂಗಳೂರಿನಲ್ಲಿ ನಡೆಯುತ್ತಿರುವ ABVP ಯವರ ಯಾವುದೋ ವಿಧ್ಯಾರ್ಥಿ ಸಮಾವೇಶದ ಬ್ಯಾನರ್, ಅದು ಪೂರ್ತಿ ಹಿಂದಿಯಲ್ಲಿ !!. ಅಲ್ಲಲ್ಲಿ…
ಮೊನ್ನೆ ಬಸವನಗುಡಿಯ ಟಾಗೋರ್ ಸರ್ಕಲ್ ಬಳಿ ಹೋಗುವಾಗ ಈ ಬ್ಯಾನರ್ ಕಂಡಿತು. ಇದೇನಪ್ಪ ಇದು ಅಂತ ನೋಡಿದ್ರೆ, ಬೆಂಗಳೂರಿನಲ್ಲಿ ನಡೆಯುತ್ತಿರುವ ABVP ಯವರ ಯಾವುದೋ ವಿಧ್ಯಾರ್ಥಿ ಸಮಾವೇಶದ ಬ್ಯಾನರ್, ಅದು ಪೂರ್ತಿ ಹಿಂದಿಯಲ್ಲಿ !!. ಅಲ್ಲಲ್ಲಿ ಕನ್ನಡದಲ್ಲೂ ಬ್ಯಾನರ್ ಕಂಡಿದ್ದೆ, ಆದರೆ ಕರ್ನಾಟಕದಲ್ಲಿ ಹಿಂದಿ ಬ್ಯಾನರ್ ಯಾವ ಪುರುಷಾರ್ಥಕ್ಕಾಗಿ ಹಾಕಿದ್ದಾರೆ ಅಂತ ಗೊತ್ತಾಗಲಿಲ್ಲ. ಮತ್ತಷ್ಟು ಓದು 
ಭೈರಪ್ಪ ಎಂಬ STAR WRITER

ಗೋಹತ್ಯೆ ನಿಷೇಧದ ಸುತ್ತ…!
ಗೋಹತ್ಯೆ ಹಾಗೂ ಗೋಹತ್ಯೆ ನಿಷೇಧಕಾಯಿದೆ/ಶಾಸನಬದ್ಧಗೊಳಿಸುವ ಕುರಿತಂತೆ ಬಿಡುವಿಲ್ಲದೇ ಚರ್ಚೆಗಳು ನಡೆಯುತ್ತಿರುವುದನ್ನು ನಾವೆಲ್ಲ ಓದುತ್ತಿದ್ದೇವೆ. ಹಳೆಯ ಒಂದು ಹಿಂದೂ ಪತ್ರಿಕೆಯಲ್ಲಿ ಬಂದ ‘Cow slaughter ban is a tool to oppress Dalits’ ಸಿಬ್ಬಂದಿ ಮಾಡಿದ್ದ ವರದಿಯಲ್ಲಿ, ಆರ್.ಎಸ್.ಎಸ್. ಮತ್ತು ಅದರ ವಿರೋಧಿ ಪಾಳೇಯದ ಟೀಕಾ ಪ್ರಹಾರಗಳು ಕಂಡುಬಂದವು.
ಆರ್.ಎಸ್.ಎಸ್.ಅನ್ನು ಟೀಕಿಸುವರು ಹೇಳುವುದೆನೆಂದರೆ, ಭಾರತೀಯ ಸ್ಥಳೀಯ ಸಂಸ್ಕೃತಿಗಳಿಗೆ ಹಿಂದೂ ರಾಷ್ಟ್ರೀಯತೆ ಎಂಬ ಪರಿಕಲ್ಪನೆಯು ವಿದೇಶದಿಂದ ಆಮದು ಮಾಡಿಕೊಂಡ ಸರಕು, ಆದರೆ ಆರ್.ಎಸ್,ಎಸ್.ನವರು ಬೇರೆ ಬೇರೆಯ ರೀತಿಯ ಆಹಾರ ಪದ್ದತಿಗಳನ್ನು ಹೊಂದಿರುವ ಸಂಸ್ಕೃತಿಗಳನ್ನು ರಾಷ್ಟ್ರೀಯತೆಯ ವಿರೋಧಿಗಳು ಎಂದು ಗುರುತಿಸುವ ಮೂಲಕ, ಆಂತರೀಕವಾಗಿ ಶತ್ರುಗಳನ್ನು ಹುಟ್ಟುಹಾಕುತ್ತಿದ್ದಾರೆ ಎಂಬ ಹೇಳಿಕೆಯನ್ನು ಪ್ರಕಾಶ ಅವರು ನೀಡಿದ್ದಾರೆ. ಮತ್ತಷ್ಟು ಓದು 
ಅಲೆಲ್ಲೆಲ್ಲೆ…. ಸಿಂಗ್ರಿ!
ಇರ್ಷಾದ್ ಎಂ.ವೇಣೂರು
ಸಿಂಗ್ರಿ ರೌಂಡ್ಸ್…
ಭಾರತಕ್ಕೆ ರಾಹುಲ್ ಡೇಂಜರ್!
’ಭಾರತಕ್ಕೆ ರಾಹುಲ್ ಡೇಂಜರ್!’ ಅನ್ನೋ ಹೇಳಿಕೆಯನ್ನ ಕೊಟ್ರೆ ಕಾಂಗ್ರೆಸ್ಸಿಗರು,ರಾಹುಲ್ ಅಭಿಮಾನಿಗಳಿಗೆ ನನ್ನ ಅಟ್ಟಾಡಿಸಿಕೊಂಡು ಹೊಡಿಬೇಕು ಅನ್ನಿಸೋದಿಲ್ವಾ? ಅವ್ರಿಗ್ ಯಾಕೆ ಬೇರೆಯವರಿಗೂ ಇದೆಂತ ಎಡಬಿಡಂಗಿ ಹೇಳಿಕೆ ಮಾರಾಯ? ಅಂತ ಅನ್ನಿಸ್ಬಹುದು.ಆದ್ರೆ,ಒಂದ್ನಿಮಿಷ ಕೆಳಗೆ ಓದಿಬಿಡೀಪ್ಪಾ 😉
ಜಗತ್ತಿನ ರಾಜತಾಂತ್ರಿಕರ ಅದರಲ್ಲೂ ಮುಖ್ಯವಾಗಿ ಅಮೆರಿಕಾದ ಇಬ್ಬಗೆ ನೀತಿಯನ್ನ ಬಯಲು ಮಾಡುತ್ತ ಬಂದ ಜುಲಿಯನ್ ಅಸಾಂಜ್ನ ವಿಕಿಲೀಕ್ಸ್ ವರದಿಯಿಂದ ಈವರೆಗೂ ಭಾರತದಲ್ಲಿ ಅಂತ ಹಂಗಾಮವೇನು ಆಗಿರ್ಲಿಲ್ಲ,ಆದ್ರೆ ಮೊನ್ನೆ ಮೊನ್ನೆ ಕಾಂಗ್ರೆಸ್ಸಿನ ಪ್ರಧಾನಿ ರಾಹುಲ್ ಗಾಂಧಿ (ಸದ್ಯ! ಭಾರತದ ಪ್ರಧಾನಿ ಅಲ್ಲ! 😉 ) “ಮುಸ್ಲಿಂ ಉಗ್ರ ಸಂಘಟನೆಗಳಾದ ಲಷ್ಕರ್-ಇ-ತೊಯ್ಬಾದಂಥ ಸಂಘಟನೆಗಳಿಗೆ ಭಾರತದ ಕೆಲ ಮುಸ್ಲಿಂ ಸಂಘಟನೆಗಳಿಂದ ಬೆಂಬಲವಿದೆ. ಆದರೆ, ಅವರಿಗಿಂತ ಹಿಂದೂ ಉಗ್ರವಾದಿಗಳಿಂದ ಹೆಚ್ಚು ಆತಂಕವನ್ನು ಭಾರತ ಎದುರಿಸುತ್ತಿದೆ” ಅಂತ ಅಮೆರಿಕಾದ ರಾಜತಾಂತ್ರಿಕನ ಜೊತೆ ಹೇಳ್ಕೊಂಡಿದ್ರು ಅನ್ನೋ ಕೇಬಲ್ ಬಿಡುಗಡೆ ಮಾಡಿದಾಗ ನಂಗೂ ಮೇಲೆ ಹೇಳಿದಂತೆ ಅನ್ನಿಸಿತ್ತು,ಕಾಮನ್ ಸೆನ್ಸ್ ಇರೋ ಭಾರತದ ಬಹುತೇಕರಿಗೆ ರಾಹುಲ್ನ ಹೇಳಿಕೆಯು ಎಡಬಿಡಂಗಿತನದ್ದು ಅನ್ನಿಸಿರಿಬಹ್ದು. ಮತ್ತಷ್ಟು ಓದು 
ಕೋರೆ-ಷಡಕ್ಷರಿ-ಮಯ್ಯ ಶುರು ಮಾಡ್ತಾರಂತೆ ಸುವರ್ಣ ಕರ್ನಾಟಕ…ಹೌದಾ?
ಆತ್ರಾಡಿ ಸುರೇಶ ಹೆಗ್ಡೆ
ಹೌದು ಸುದ್ದಿಮನೆಯ ಸುತ್ತುಮುತ್ತಲಿಂದ, ಹೊಸ ಹೊಸ ಗಾಳಿ ಸುದ್ದಿಗಳು, ದಿನದಿಂದ ದಿನಕ್ಕೆ ಹೊಸ ಹೊಸ ಸಂಗತಿಗಳೊಂದಿಗೆ, ಯಾವುದೇ ಲಂಗು ಲಗಾಮಿಲ್ಲದೇ ತೇಲಿಬರುತ್ತಿವೆ.
ನಿನ್ನೆ ಸಂಜೆ ವಿಶೇಷವಾಗಿ ನನ್ನ ಕಿವಿಗಳಿಗೆ ಕೇಳಿಸಿದ ಪಿಸುಮಾತುಗಳ ಪ್ರಕಾರ, ವಿಜಯ ಕರ್ನಾಟಕದ ಮಾಜಿ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ಟರು ನವದೆಹಲಿಯಿಂದ ಬೆಂಗಳೂರಿಗೆ, ಹೊಸ ಸುದ್ದಿಯೊಂದನ್ನು, ಹೊಸ ಯೋಜನೆಯೊಂದರ ರೂಪುರೇಷೆಯನ್ನು ಗುಟ್ಟಾಗಿ ಹಿಡಿದುಕೊಂಡು ಬಂದಿರುತ್ತಾರಂತೆ.
ವಿಜಯ ಸಂಕೇಶ್ವರರ “ಆನಂದ ಕರ್ನಾಟಕ”ದ ಯೋಜನೆಗಳು ಪ್ರಾಥಮಿಕ ಹಂತದಲ್ಲಿ ಇರುವಾಗಲೇ, ಉದ್ಯಮಿ ಹಾಗೂ ಸಂಸದ ಪ್ರಭಾಕರ ಕೋರೆಯವರು ಮೀನಿಗೆ ಗಾಳ ಬೀಸಿದ್ದಾರೆ ಎನ್ನುವ ಸುದ್ದಿ ಇದೆ.
ಅಣಿಮುತ್ತುಗಳನ್ನು ದಿನವೂ ಉಣಬಡಿಸುವ ಷಡಕ್ಷರಿಯವರು ಮತ್ತು ಹೊಸ ಹೊಸ ಅಡುಗೆಗಳನ್ನು ಉಣಬಡಿಸುವ ಮಯ್ಯರವರನ್ನು ಸೇರಿಸಿಕೊಂಡು, ಕೋರೆಯವರು ಸುಮಾರು ೬೦-೭೦ ಕೋಟಿ ರೂಪಾಯಿಗಳ ಯೋಜನೆಯೊಂದನ್ನು ಭಟ್ಟರ ಮುಂದಿಟ್ಟಿದ್ದಾರಂತೆ. ಆ ಯೋಜನೆಯ ಪ್ರಕಾರ “ಸುವರ್ಣ ಕರ್ನಾಟಕ” ಅನ್ನುವ ಹೊಸ ದಿನಪತ್ರಿಕೆ ಈ ನಾಡಿನ ಪತ್ರಿಕಾ ರಂಗದಲ್ಲಿ ಸದ್ಯದಲ್ಲೇ ಸಂಚಲನ ಹೊರಡಿಸಲಿದೆಯಂತೆ. ಮತ್ತಷ್ಟು ಓದು 
ಸುದ್ದಿ ಮಾತಿನ ಭಟ್ಟರು ಸುದ್ದಿಯದಾಗ…
ಸಾತ್ವಿಕ್ ಎನ್ ವಿ
‘ಸರ್, ಆಗಸತ್ತರಕ್ಕೆ ನೀವು ಬೆಳೆಸಿದ ಪತ್ರಿಕೆ ಇ೦ದೆ ಸದ್ದಿಲ್ಲದೆ ಹೊರಬರಲು ಕಾರಣವೇನು ? ಹೊಸ ಚಿ೦ತನೆಗಳು, ಮೊನಚಾದ ಬರಹಗಳು, ಅ೦ಕಣಗಳು ಒ೦ದೇ ಎರಡೇ..ಲವಲವಕೆ ಯ೦ತಹ ಹೊಸ ರೂಪವನ್ನು ಪತ್ರಿಕೆಗೆ ಪರಿಚಯಿಸಿದಿರಿ, ರಾಜಕಾರಣಿ ಗಳ ಮಾನ ಹರಾಜು ಹಾಕಿ ಪತ್ರಿಕೊಧ್ಯಮದ ಘನತೆ ಹೆಚ್ಚಿಸಿದಿರಿ…..ನೀವಿಲ್ಲದ ಪತ್ರಿಕೆ ಇನ್ನುಮು೦ದೆ ನೀರಸ…ನಿಮ್ಮೂದಿಗೆ ನಾವಿದ್ದೇವೆ..’
ಇಂಥ ಒಂದು ಕಾಮೆಂಟ್ ವಿಶ್ವೇಶ್ವರ ಭಟ್ಟರ ಫೇಸ್ ಬುಕ್ ನಲ್ಲಿ ಇದೆ ಅಂದ್ರೆ ಅವರ ಬರಹಗಳನ್ನು ಆರಾಧಿಸುವ ಜನ ಎಷ್ಟಿರಬಹುದೆಂದು ಯೋಚಿಸಿ. ಪತ್ರಿಕೆಯ ಸಂಪಾದಕನಾದವನಿಗೆ ಇದಕ್ಕಿಂತ ಹೆಮ್ಮೆ ಬೇಕೆ? ಒಂದು ಕಾಲವಿತ್ತು. ಪತ್ರಿಕೆಯ ಸಂಪಾದಕರ ಹೆಸರುಗಳನ್ನು ಪತ್ರಿಕೆಯ ಕಡೆಯ ಸಾಲುಗಳಲ್ಲಿ ಹುಡುಕಬೇಕಾಗಿತ್ತು. ಈ ಸಂಸ್ಕೃತಿಯನ್ನು ತಪ್ಪಿಸಿ ದಿನವೂ ಬರೆಯುವ ಯಾರಾದರೂ ಸಂಪಾದಕರಿದ್ದರೆ ಅದು ವಿಶ್ವೇಶ್ವರ ಭಟ್ಟರು ಮಾತ್ರ ಎಂಬಂತಾಗಿತ್ತು.
ಇದು ನಿತೀಶಣ್ಣನ ದರ್ಬಾರು!! ಕಾರುಬಾರು!!
ಕೆ ಎಸ್ ರಾಘವೇಂದ್ರ ನಾವಡ
ಛೇ!ಒಬ್ಬ ನಿತೀಶರ೦ಥವರೋ ಯಾ ನರೇ೦ದ್ರ ಮೋದಿಯ೦ಥವರೋ ಯಾರಾದರೂ ಒಬ್ಬ ಜನನಾಯಕ ನಮ್ಮ ಕರ್ನಾಟಕ ರಾಜಕೀಯದಲ್ಲಿ ಉದಯಿಸಬಾರದಿತ್ತೇ ಎ೦ದು ಒಮ್ಮೊಮ್ಮೆ ಕಾಲದ ಕನ್ನಡಿಗೆ ಅನ್ನಿಸುವುದು೦ಟು!ಆದರೆ ಏನು ಮಾಡುವುದು? ಕಾ೦ಗ್ರೆಸ್ಸೂ ಬೇಡ, ಕುಮಾರಣ್ಣನೂ ಬೇಡ ಅ೦ತ ಅವರಿಗೂ ಹಾಗೂ ನಮಗೂ ಒಮ್ಮೆ ಬದಲಾವಣೆಯ ಗಾಳಿ ಬೀಸಲೆ೦ಬ ಕಾರಣದಿ೦ದಲೋ ಯಾ ಒಳ ಮನಸ್ಸಿನಲ್ಲಿ ಭಾ.ಜ.ಪಾದ ಮೇಲಿದ್ದ ನಿರೀಕ್ಷೆ ಕಾತುರತೆಗಳಿ೦ದ ಮತ್ತು ಕುಮಾರಣ್ಣನಿ೦ದ ವ೦ಚನೆಗೊಳಗಾದ ಯಡಿಯೂರಪ್ಪನವರ ಮೇಲಿನ ಕರುಣೆಯಿ೦ದಲೋ ಮತದಾರರು ಎರಡೂವರೆ ವರ್ಷಗಳ ಹಿ೦ದೆ ಯಡಿಯೂರಪ್ಪನವರನ್ನು ಆರಿಸಿದರೆ, ಅವರೋ ಇವರನ್ನೆಲ್ಲಾ ಮೀರಿಸಿದರು!!ಕರ್ನಾಟಕದ ಸಮಸ್ತ ಜನತೆ ಬೇಸರದಿ೦ದ ನಿಟ್ಟುಸಿರು ಬಿಡುತ್ತಿರುವ ಈ ಸ೦ರ್ಭದಲ್ಲಿ ದೂರದ ಗುಜರಾತ್ ನಲ್ಲಿ ಮೋದಿಯವರ ಮೋಡಿ ಎರಡನೇ ಅವಧಿಗೂ ಮು೦ದುವರೆದಿದ್ದು ಹಾಗೂ ಬಿಹಾರದಲ್ಲಿ ನಿತೀಶರು ಎರಡನೇ ಅವಧಿಗೆ ಪುನರಾಯ್ಕೆಯಾಗಿದ್ದು ನೈಜ ಜಾತ್ಯಾತೀತವಾದಿಗಳಿಗೆ ಹಾಗೂ ಅಭಿವೃಧ್ಧಿಯನ್ನು ಬಯಸುವ ಮನಸ್ಸುಗಳಿಗೆ ತುಸುವಾದರೂ ನೆಮ್ಮದಿ ನೀಡಿದೆ ಎ೦ದೇ ಹೇಳಬೇಕಾಗುತ್ತದೆ!! ಏಕೆ೦ದರೆ ಈ ಎರಡೂ ಗೆಲುವುಗಳು ಭಾರತೀಯ ಜನತಾ ಪಕ್ಷದ ವೈಯಕ್ತಿಕ ದೃಷ್ಟಿಯಿ೦ದ ಹಾಗೂ ಆಯಾ ರಾಜ್ಯಗಳ ಮಹಾ ಜನತೆಗಳ ದೃಷ್ಟಿಯಿ೦ದ ಮೈಲುಗಲ್ಲುಗಳೆ೦ದೇ ಹೇಳಬಹುದು! ಆ ನಿಟ್ಟಿನಲ್ಲಿ ನರೇ೦ದ್ರ ಮೋದಿಯವರ ಮೇಲೆ ಕಾಲದ ಕನ್ನಡಿ ತನ್ನ ಕ್ಷಕಿರಣ ಈಗಾಗಲೇ ಬೀರಿದೆ. ಈಗ “ಬಿಹಾರಿ ಬಾಬು“ ನಿತೀಶ“ರ ಸರದಿ. ಮತ್ತಷ್ಟು ಓದು 










