ಹೊಣೆಗಾರಿಕೆ ಮರೆತಿರುವ ಮಾಧ್ಯಮಗಳು…!
– ಸಂತೋಷಕುಮಾರ ಮೆಹೆಂದಳೆ.
(ಇವತ್ತು ಮನೆಯಲ್ಲೊಂದು ಮದುವೆ ನಡೆಯುತ್ತಿದೆ ಎಂದಾದರೆ ಅನಾಮತ್ತು ತಿಂಗಳಗಟ್ಟಲೆಯಿಂದ ತಯಾರಿ ಮಾಡಿಕೊಳ್ಳುವ ಯಜಮಾನ ಮತ್ತವನ ಕುಟುಂಬ ಕೊನೆಯ ಕ್ಷಣದಲ್ಲಿ ಎನೋ ಮರೆತು ಬಿಟ್ಟಿರುತ್ತದೆ. ಮಂಟಪದಲ್ಯಾರೊ ಅದಕ್ಕಾಗಿ ಓಡಾಡುತ್ತಾರೆ. ಕೊನೆಗೆಲ್ಲಾ ಸಾಂಗವಾಗುತ್ತದೆ. ಒಂದು ಟೂರ್ ಅಂತಾ ಹೊರಟವರು ಅಯ್ಯೋ ಅದನ್ನು ಮರೆತು ಬಂದೆನೆನ್ನುವುದೇ ಸಾಮಾನ್ಯ ಆಗಿರುವಾಗ ನೂರೂ ಚಿಲ್ರೆ ಕೋಟಿ ಜನರನ್ನು ಸಂಭಾಳಿಸುವ ನಾಯಕ ಭವಿಷ್ಯಕ್ಕಾಗಿ ಅನಿವಾರ್ಯವಾಗಿ ಧೃಢ ನಿರ್ಧಾರ ಕೈಗೊಂಡು ಅಲ್ಲಲ್ಲಿ ಕೊಂಚ ಕ್ಯೂ ನಿಲ್ಲಿಸಿದಾಗಲೂ ಅದು ಕಾಮನ್ ಮ್ಯಾನ್ಗೆ ಹಬ್ಬದಂತೆ ಅನ್ನಿಸುತ್ತಿದ್ದಾಗಲೂ, ಏನು ಪ್ರಕಟಿಸಬೇಕು ಪ್ರಕಟಿಸಬಾರದು ಎನ್ನುವ ಪರಿಜ್ಞಾನ ಮಾಧ್ಯಮಗಳಿಗಿರಲೇ ಬೇಕಿತ್ತು.. ) ಮತ್ತಷ್ಟು ಓದು 
ಪ್ರಧಾನಿಗಳ ನಡೆಯ ಹಿಂದೆ ಎಷ್ಟೆಲ್ಲ ಚಿಂತನೆ ಇದೆಯೆಂದರೆ…
– ರೋಹಿತ್ ಚಕ್ರತೀರ್ಥ
ಪ್ರಧಾನಿ ನರೇಂದ್ರ ಮೋದಿ ನವೆಂಬರ್ 8ರಂದು ಸಂಜೆ ಮಾಡಿದ ಭಾಷಣದಲ್ಲಿ ಐನೂರು ಮತ್ತು ಸಾವಿರ ರುಪಾಯಿ ಮುಖಬೆಲೆಯ ನೋಟುಗಳನ್ನು ಸರಕಾರ ವಾಪಸು ಪಡೆಯಲಿದೆ ಎಂಬ ಘೋಷಣೆ ಮಾಡಿದರು. ಈ ಕಾರ್ಯಾಚರಣೆ 4 ವಿಷಯಗಳನ್ನು ಗುರಿಯಾಗಿಟ್ಟುಕೊಂಡಿದೆ: ಭ್ರಷ್ಟಾಚಾರ, ಕಪ್ಪುಹಣ, ಭಯೋತ್ಪಾದನೆ ಮತ್ತು ಖೋಟಾನೋಟು. ಈ ನಾಲ್ಕೂ ವಿಷಯಗಳು ಒಂದಕ್ಕೊಂದು ತಳುಕು ಹಾಕಿಕೊಂಡಿರುವುದರಿಂದ ಅವನ್ನು ಒಟ್ಟಾಗಿ ಪರಿಹರಿಸುವ ಇಲ್ಲವೇ ನಿಶ್ಶಕ್ತಗೊಳಿಸುವ ಅತ್ಯಂತ ಪ್ರಬಲ, ಪರಿಣಾಮಕಾರಿ ಪರಿಹಾರದ ಅಗತ್ಯ ಹಲವು ವರ್ಷಗಳಿಂದ ಇತ್ತು. ಹತ್ತು ವರ್ಷ ದೇಶವನ್ನು ಆಳಿದ ನಾಮಕಾವಾಸ್ತೆ ಆರ್ಥಿಕತಜ್ಞರಿಗಾಗದ ಗಟ್ಟಿ-ದಿಟ್ಟ ನಡೆಯನ್ನು ಮೋದಿ ತೋರಿಸಿ ನಾಯಕತ್ವದಲ್ಲಿ ಜ್ಞಾನದ ಜೊತೆ ಧೈರ್ಯವೂ ಬೇಕೆಂಬ ಸಂದೇಶ ರವಾನಿಸಿದ್ದಾರೆ. ಮತ್ತಷ್ಟು ಓದು 
ಬ್ರಹ್ಮಚರ್ಯವೇ ಅಸಹಜವೆಂದ ದಾರ್ಶನಿಕ, ಸನ್ಯಾಸಿನಿಯನ್ನು ವಂಚಕಿ ಎಂದ….!!
– ಗುರುರಾಜ ಕೋಡ್ಕಣಿ. ಯಲ್ಲಾಪುರ
“ನಾನು ಯಾರನ್ನೂ ಸಹ ಆದರ್ಶವ್ಯಕ್ತಿಯಾಗಿ ಸ್ವೀಕರಿಸಲಾರೆ. ನನ್ನನ್ನೂ ಸಹ ಯಾರೂ ಆದರ್ಶವಾಗಿ ಸ್ವೀಕರಿಸಬಾರದು. ಆದರ್ಶ ವ್ಯಕ್ತಿತ್ವಗಳಲ್ಲಿ ಮೇಲು ಕೀಳು ಎಂಬ ಭೇದವಿರಬಾರದು. ಮೊದಲು ಜನಿಸಿದ್ದ ಆದರ್ಶ ವ್ಯಕ್ತಿ, ನಂತರ ಜನಿಸಿದ ಮಹಾನ್ ವ್ಯಕ್ತಿಗಿಂತ ಶ್ರೇಷ್ಟವೆನ್ನುವುದು ಅರ್ಥಹೀನ. ವ್ಯಕ್ತಿತ್ವಗಳಲ್ಲಿನ ಮಹಾನತೆ ಸಮಾನಾಂತರ ರೇಖೆಯಂಥದ್ದು. ಮಹಾತ್ಮಾ ಗಾಂಧಿ, ಮದರ್ ತೆರೆಸಾರಂಥಹ ವ್ಯಕ್ತಿತ್ವಗಳ ಮೇಲೆ ನನಗೆ ತೀರ ಕಡಿಮೆ ಗೌರವವಿದೆ ಎಂಬುದು ಅನೇಕರ ಅಂಬೋಣ. ಅಂಥಹ ಅಭಿಪ್ರಾಯಗಳು ಸಂಪೂರ್ಣ ತಪ್ಪು. ಅಸಲಿಗೆ ನನಗೆ ಇಂಥವರ ಮೇಲೆ ಗೌರವವೇ ಇಲ್ಲ. ಅಂದ ಮೇಲೆ ಹೆಚ್ಚು ಗೌರವ, ಕಡಿಮೆ ಆದರ ಎನ್ನುವ ಪ್ರಶ್ನೆಯೇ ನಿರರ್ಥಕ. ಇವರೆಲ್ಲರೂ ಆದರ್ಶವಾದಿ ಅಪರಾಧಿಗಳು ಎನ್ನುವುದು ನನ್ನ ಅಭಿಪ್ರಾಯ. ನಮ್ಮ ಕಾನೂನು ಮರಣದಂಡನೆ ವಿಧಿಸುವ ದುಷ್ಕರ್ಮಿಗಳ ಅಪರಾಧಕ್ಕಿಂತಲೂ ಇಂಥಹ ಆದರ್ಶವಾದಿ ಅಪರಾಧಿಗಳ ಅಪರಾಧ ಘೋರವೆನ್ನುವುದು ನನ್ನ ವಾದ. ಒಂದರ್ಥದಲ್ಲಿ ನಿಜವಾದ ಅಪರಾಧಿಗಳೆಂದರೆ ಇಂಥವರೇ. ಮದರ್ ತೆರೆಸಾರ ಉದಾಹರಣೆಯನ್ನೇ ತೆಗೆದುಕೊಳ್ಳಿ. ಆಕೆಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಯಿತು. ವಿಶ್ವದ ಹತ್ತಾರು ರಾಷ್ಟ್ರಗಳು ಆಕೆಯ ಸಾಧನೆಯನ್ನು ಮೆಚ್ಚಿ ಪ್ರಶಸ್ತಿಗಳ ಸುರಿಮಳೆಗೈದವು. ಇಂದಿಗೂ ವಿಶ್ವವಿದ್ಯಾಲಯಗಳು ಆಕೆಗೆ ಒಂದರ ಹಿಂದೊಂದರಂತೆ ಗೌರವ ಡಾಕ್ಟರೇಟ್ ನೀಡುತ್ತಲೇ ಇವೆ. ಇಷ್ಟಾಗಿಯೂ ಆಕೆಯ ಸಾಧನೆಯೇನು ಎಂಬುದು ನನಗರ್ಥವಾಗದ ವಿಷಯ. ಕೈಗೆ ಸಿಕ್ಕ ಅನಾಥರನ್ನೆಲ್ಲ ಎಳೆದುಕೊಂಡು ಹೋಗಿ ಅವರೆಲ್ಲರನ್ನು ಕ್ಯಾಥೋಲಿಕ್ಕರನ್ನಾಗಿ ಪರಿವರ್ತಿಸಿದ್ದೇ ಆಕೆಯ ಸಾಧನೆ. ಮತ್ತಷ್ಟು ಓದು 
ಸ್ತ್ರೀ ಸ್ವಾತಂತ್ರ್ಯ ಮತ್ತು ವರ್ತಮಾನದ ತಲ್ಲಣಗಳು
– ಶ್ರೀಶೈಲ್ ಮಗದುಮ್ಮ
ಬಹುಷಃ ಹಲವಾರು ಶತಮಾನಗಳಿಂದ ಚರ್ಚಿವಾಗುತ್ತಿರುವ ವಿಷಯಗಳಲ್ಲಿ ಸ್ತ್ರೀ ಸ್ವಾತಂತ್ರ್ಯವೂ ಕೂಡ ಒಂದು. ಈಗ ಹಲವಾರೂ ವರ್ಷಗಳಿಂದ ಆಂತರಿಕ ಸ್ವಾತಂತ್ರ್ಯದಿಂದ ಬಾಹ್ಯ ಸ್ವಾತಂತ್ರ್ಯದ ಬಗ್ಗೆ ಹಲವಾರು ಚರ್ಚೆಗಳು ಶುರುವಾಗಿವೆ. ಅದರಲ್ಲಿ ನನ್ನ ಬಟ್ಟೆ ನನ್ನ ಆಯ್ಕೆ, ನಾವು ಯಾವಾಗ ಬೇಕಾದರೂ ಎಲ್ಲಿಗೆ ಬೇಕಾದರೂ ಹೋಗುತ್ತೇವೆ ಅದನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ ಅನ್ನುವ ಚರ್ಚೆಗಳು. ಇರಲಿ ಯಾರು ಯಾವ ಬಟ್ಟೆಯನ್ನಾದರೂ ಹಾಕಲಿ, ಯಾರು ಎಲ್ಲಿಗಾದರೂ ಹೋಗಲಿ ಅದು ಅವರ ಇಷ್ಟ, ಇದನ್ನು ಪ್ರಶ್ನಿಸುವುದು ಕೂಡ ಆಕ್ಷೇಪಾರ್ಹವಾದದ್ದು. ಆದರೆ ಈ ವಾದವನ್ನು ಇಟ್ಟುಕೊಂಡು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಮಾಜವನ್ನು ಯಾವ ಕಡೆಗೆ ತಗೆದುಕೊಂಡು ಹೋಗುತ್ತಿದ್ದಾರೆ ಎನ್ನುವ ಕಡೆ ಗಮನಹರಿಸಬೇಕಾಗಿದೆ. ಮತ್ತಷ್ಟು ಓದು 
ಲೈಫ್ ಹಿಂಗೂ ‘ಚೇಂಜ್’ ಆಗುತ್ತೆ ಕಣಾ..!
– ತುರುವೇಕೆರೆ ಪ್ರಸಾದ್
ನಾನು ಪ್ರೈಮರಿ ಶಾಲೆಯಲ್ಲಿ ಓದುತ್ತಿದ್ದಾಗ ಐದು ಪೈಸೆ ತಗೊಂಡು ಹೋದರೆ ಅಂಗಡಿ ನಾಗಣ್ಣ ಮೂರು ಪೈಸೆಗೆ ಒಂದು ಹಿಡಿ ಕಡಲೆ, ಎರಡು ಪೈಸೆಗೆ ಒಂದು ಉಂಡೆ ಬೆಲ್ಲ ಕೊಡುತ್ತಿದ್ದರು. ಮೊನ್ನೆ ಬುಧವಾರ ಪ್ರಧಾನಿ ಮೋದಿ ರೂ 1000, 500ರ ನೋಟುಗಳನ್ನು ರಾತ್ರೋ ರಾತ್ರಿ ರದ್ದು ಮಾಡಿದ ಮರುದಿನ 500 ರೂಪಾಯಿ ನೋಟು ಹಿಡಿದು ಹೋದರೂ ಒಂದು ಹಿಡಿ ಕಡ್ಲೆ ಒಂದು ಉಂಡೆ ಬೆಲ್ಲ ಸಿಗದ ಪರಿಸ್ಥಿತಿ ಉಂಟಾಗಿತ್ತು. ಹಿಂದಿನ ದಿನ ರಾತ್ರಿ ಊರಿನಲ್ಲಿ ನೆಟ್ಟಗೆ ಕೆಲಸ ಮಾಡುತ್ತಿದ್ದ 2-3 ಎಟಿಎಂಗಳಲ್ಲಿದ್ದ ಅಳಿದುಳಿದ ನೂರರ ನೋಟುಗಳೆಲ್ಲಾ ಖಾಲಿಯಾಗಿದ್ದವು. ಎಲ್ಲ ಕಡೆಯೂ ರೂ.500ರ ನೋಟುಗಳೇ ರಾರಾಜಿಸುತ್ತಿದ್ದವು, ಜನ ಅವುಗಳನ್ನು ಚಿಲ್ಲರೆ ಮಾಡಿಸಲು ಪರದಾಡುತ್ತಿದ್ದರು.. ದಿನನಿತ್ಯದ ಖರ್ಚಿಗೆ ಚಿಲ್ಲರೆ ನೋಟುಗಳನ್ನು ಹೊಂದಿಸಲು ಹರಸಾಹಸ ಮಾಡುತ್ತಿದ್ದರು. ಹಾಲಿಗೆ, ದಿನಸಿಗೆ, ಬಸ್ಸಿಗೆ, ಆಟೋಗೆ ಹೀಗೆ ಯಾವ ಬಾಬತ್ತಿಗೂ 1000, 500ರ ನೋಟು ಕೆಲಸಕ್ಕೆ ಬಾರದಂತಾಗಿತ್ತು. ಎಲ್ಲಾ ಚಿಲ್ಲರೆ ಕೇಳುವವರೇ! 2-3 ಪೆಟ್ರೋಲ್ ಬಂಕ್ಗಳು ಬೆಳಿಗ್ಗೆ ಬಾಗಿಲೇ ತೆರೆಯಲಿಲ್ಲ. ಒಂದು ಪೆಟ್ರೋಲ್ ಬಂಕ್ನಲ್ಲಿ ರೂ.500ಕ್ಕೆ ಪೂರಾ ಪೆಟ್ರೋಲ್ ಹಾಕಿಸಿಕೊಂಡರೆ ಉಂಟು.. ಇಲ್ಲವೆಂದರೆ ಒಂದೆರಡು ಲೀಟರ್ ಹಾಕಿ ಚಿಲ್ಲರೆ ಕೊಡುವ ಉಸಾಬರಿಯೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿಬಿಟ್ಟರು. ಅವರು ತಾನೆ ಎಷ್ಟು ಜನಕ್ಕೆ ಚಿಲ್ಲರೆ ಕೊಟ್ಟಾರು? ಎಲ್ಲಿಂದ ಚಿಲ್ಲರೆಯನ್ನು ತಂದಾರು?
ಮತ್ತಷ್ಟು ಓದು 
ಮೋದಿಜಿ ಮಾಡುವುದೆಲ್ಲ ವೋಟಿಗಲ್ಲಾ…!
– ವಿಕ್ರಮ್ ಎಂ.ಆರ್
ನಲವತ್ತು ವರ್ಷಗಳಿಂದ ಹಾಗೆಯೇ ಮೂಲೆ ಗುಂಪಾಗಿ ಬಿದ್ದಿತ್ತು. 1973ರಲ್ಲಿ ಇಂದಿರಾಗಾಂಧಿ OROP ಪ್ರಸ್ತಾಪವನ್ನೇ ಕಿತ್ತು ಎಸೆದಿದ್ದರು. ಇಂದು ಮೋದಿ ಸರ್ಕಾರ ದೇಶಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟ ಸೈನಿಕರ ಕನಸನ್ನು ನನಸು ಮಾಡಿದೆ. GST ಎಷ್ಟು ವರ್ಷದಿಂದ ಚರ್ಚೆಯಲ್ಲಿತ್ತು, ನೀವೇ ವಿಚಾರ ಮಾಡಿ! ಗಾಂಧಿ ಮನೆತನದ ತಂದಿಟ್ಟ ನೂರೆಂಟು ವಿಘ್ನಗಳ ನಡುವೆಯೂ ಮೋದಿಜಿ GST ಬಿಲ್ಲನ್ನು ಸಂಸತ್ತಿನಲ್ಲಿ ತಂದು ಎರಡೂ ಸದನದಲ್ಲಿ ಮಂಡನೆ ಮಾಡಿ ಎಲ್ಲರ ಒಪ್ಪಂದ ಪಡೆದು ಪಾಸು ಮಾಡಲಾಗಿದೆ. ಪ್ರಧಾನಮಂತ್ರಿ ಧನ ಜನ ಯೋಜನೆ ಅಸ್ತಿತ್ವಕ್ಕೆ ಬಂದಾಗಿನಿಂದ ಎಷ್ಟೋ ಕೋಟಿ ಬಡ ಜನರು ಬ್ಯಾಂಕಿನಲ್ಲಿ ತಮ್ಮ ಖಾತೆ ಹೊಂದಿದ್ದಾರೆ. ಮೊದಲು ಅವರಿಗೆ ಸಿಗಬೇಕಾದ ಹಣ ಕೈಗೆ ಬರುತ್ತಿರಲಿಲ್ಲ ಆದರೆ ಈಗ ನೇರವಾಗಿ ಅವರ ಖಾತೆಗೆ ಜಮಾ ಆಗುತ್ತದೆ. ನಮ್ಮ ಕಂಪನಿಯಲ್ಲಿರುವ ಕಾಂಟ್ರಾಕ್ಟ್ ಕೆಲಸಗಾರನೊಬ್ಬ ಹೀಗೆ ಹೇಳುತ್ತಾನೆ “ಸರ್, ಮೊದಲು ನೂರು ರೂಪಾಯಿ ವೇತನ ಇದ್ದರೆ ಅದರಲ್ಲಿ ಇಪ್ಪತ್ತು ರೂಪಾಯಿಯನ್ನು ಮೇಲ್ವಿಚಾರಕ ಇಟ್ಟುಕೊಂಡು ಉಳಿದಿದ್ದನ್ನು ನನಗೆ ಕೊಡುತ್ತಿದ್ದ ಆದರೆ ಈಗ ನೇರವಾಗಿ ನೂರು ರುಪಾಯಿ ನನ್ನ ಬ್ಯಾಂಕಿಗೆ ಬರುತ್ತದೆ”. ಇದು ಒಂದು ಉದಾಹರಣೆ ಅಷ್ಟೇ, ಇಂತಹ ಸಾವಿರ ನಿದರ್ಶನಗಳನ್ನು ಹಂಚಿಕೊಳ್ಳಬಹುದು. ಇವೆಲ್ಲ ಒಂದಲ್ಲಾ ಒಂದುಕಡೆ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಆದರೆ ಮೋದಿ ಸರ್ಕಾರ ಏನೇ ಮಾಡಿದರೂ ಕೆಲವರಿಗೆ ಉರಿ. ವಿರೋಧ ಪಕ್ಷ ಅಥವಾ ಕೆಲವು ಬುದ್ಧಿಜೀವಿಗಳು ಮೋದಿಜಿಯವರ ಪ್ರತಿ ಪ್ರಯತ್ನವನ್ನೂ ವಿರೋಧಿಸುವುದು ಯಾತಕ್ಕೆ? ಮಾಡಬೇಕು ಇಲ್ಲವೇ ಮಾಡಲು ಬಿಡಬೇಕು. ಅರವತ್ತು ವರ್ಷವಾಯಿತು, ಇನ್ನೂ ದೇಶ ಎಷ್ಟು ಮುಂದುವರಿಯಬೇಕೋ ಅಷ್ಟು ಮುಂದುವರಿದಿಲ್ಲ. ಮೋದಿಜಿ ಬಂದಾಗಿನಿಂದ ಒಂದು ರಿದಮ್ ಸಿಕ್ಕಿದೆ ಅದನ್ನು ಹಾಳು ಮಾಡಲು ಕಾರಣಗಳೇನು? ಏನೇ ಮಾಡಿದರೂ ಅದು ಚುನಾವಣೆಯಲ್ಲಿ ಮತ ಗಳಿಸಲೇ ಮಾಡಿದ್ದು ಎಂದು ಡಂಗುರ ಬಾರಿಸುತ್ತ ಸಾರುವ ಈ ಎಡಬಿಡಂಗಿಗಳ ಉದ್ದೇಶವಾದರೂ ಏನು? ಮತ್ತಷ್ಟು ಓದು 
ಯಾರಿಗೂ ಬೇಡವಾದ ಪಾತಕಿ.. ದಾವೂದ್..!
– ಸಂತೋಷಕುಮಾರ ಮೆಹೆಂದಳೆ.
( ಮೈಗಿಷ್ಟು ಪುಕ್ಕಟ್ಟೆ ಅನ್ನ, ತಂತಮ್ಮ ಮೋಜು ಮಸ್ತಿಯ ಚಟಕ್ಕಿಷ್ಟು ಯಾರದ್ದೋ ತಲೆ ಒಡೆದ ದುಡ್ಡು.. ಅದಕ್ಕೆ ಸರಿಯಾಗಿ ಮೆರೆಯೋದಕ್ಕೆ ಪಾಪಿಲೋಕದ ಕಡುಗತ್ತಲೆಯ ಸಾಮ್ರಾಜ್ಯ. ಕೊನೆಗೆ ಇದೆಲ್ಲದರಿಂದ ತಲೆ ತಪ್ಪಿಸಿಕೊಂಡು ಬದುಕಿಕೊಳ್ಳಲು ತೀರ ಪರಮ ನಿರ್ಲಜ್ಯ ಪಾಕಿಸ್ತಾನ. ಇಷ್ಟನ್ನಿಟ್ಟುಕೊಂಡು ಕತ್ತಲ ಲೋಕವನ್ನು ಆಳುತ್ತೇನೆಂದು ಹೊರಟು ಬಿಡುವವರು ತಮ್ಮ ಕೊನೆಯ ಕಾಲಾವಧಿಯುದ್ದಕ್ಕೂ ಇದೆಲ್ಲಾ ಶಾಶ್ವತ ಎಂದೇ ತಿಳಿದಿರುತ್ತಾರೆ. ದುರಾದೃಷ್ಟ ಮತ್ತು ನೂರಾರು ಹೆಣ್ಣುಮಕ್ಕಳ ಶಾಪ ಅವರನ್ನು ಜೀವಂತ ನರಕಕ್ಕೆ ನೂಕುತ್ತದೆ ಎನ್ನುವುದಕ್ಕೆ ಅಷ್ಟೆ ಉದಾಃ ಗಳು ನಮ್ಮ ಮುಂದಿವೆ. ಆದರೂ ಪಾತಕ ಲೋಕದ ಪಾತಕಿಗಳು ಬುದ್ಧಿ ಕಲಿತದ್ದೇ ಇಲ್ಲ. ಅದರಲ್ಲೂ ಪಾಕಿಸ್ತಾನದ ಕೊಚ್ಚೆಯಲ್ಲಿ ಹೊರಳುವ ಕ್ರಿಮಿಗಳಿಗೆ ಬುದ್ಧಿ ಮತ್ತು ವಿವೇಚನಾ ಶಕ್ತಿ ಬಿಟ್ಟು ಬೇರೆಲ್ಲ ಬೆಳೆಯುತ್ತದೆ. ಅದೇ ವಿನಾಶಕ್ಕೂ ಕಾರಣವಾಗುತ್ತದೆ. ಇಂಥ ಕೊಚ್ಚೆಯಂತಿರುವ ಕಥಾನಕದ ಕೊನೆಯ ತುಂಡು, ಅರೆಜೀವವಾಗಿರುವ ಪಾತಕಿ ತನಗೇ ತಾನೇ ಡಾನ್ ಎಂದು ಕರೆದುಕೊಂಡ ದಾವೂದ್ ಇಬ್ರಾಹಿಂ ಯಾವ ನೆಲಕ್ಕೆ ದ್ರೋಹ ಬಗೆದಿದ್ದನೋ ಅಲ್ಲಿವತ್ತು ಕಾಲೂರುವ ಬಗ್ಗೆ ಚಡಪಡಿಸುತ್ತಿದ್ದಾನೆ. ಆದರೆ ಊರಲು ಒಂದು ಕಾಲೇ ಉಳಿದಿಲ್ಲ. ಬದುಕಿನ ವಿಪರ್ಯಾಸ ಅಂದರೆ ಇದೇ ಅಲ್ಲವೇ..?) ಮತ್ತಷ್ಟು ಓದು 
ಭಾರತದಲ್ಲೊಂದು ಸುಂಕದ ಬೇಲಿ
– ನವೀನ್ ನಾಯಕ್ ಕೊಪ್ಪ
ಸಾಮಾನ್ಯವಾಗಿ ಉಪ್ಪಿನ ಕುರಿತು ನಡೆದಿರುವ ಹೋರಾಟ ಎಂದರೆ ನಮಗೆ ನೆನಪಾಗುವುದು ಗಾಂಧಿಯವರ ನೇತೃತ್ವದಲ್ಲಿ ನಡೆದ ದಂಡಿ ಸತ್ಯಾಗ್ರಹ ಮಾತ್ರ. ಈ ಸತ್ಯಾಗ್ರಹವು ಸಬರಮತಿ ಆಶ್ರಮದಿಂದ ದಂಡಿಯವರೆಗೆ ಅಂದರೆ ಸರಿಸುಮಾರು ೨೪೦ ಮೈಲಿಗಳನ್ನು ಇಪ್ಪತೈದು ದಿನಗಳಲ್ಲಿ ಕಾಲ್ನಡಿಗೆ ಮುಖಾಂತರ ನಡೆಸಲಾಗಿತ್ತು. ‘ಉಪ್ಪಿನ ಮೇಲಿನ ಕರ’ ಎಂದು ಕೇಳಿದೊಡನೆ ನಮಗೆ ನೆನಪಾಗುವುದು ಇಷ್ಟೇ.
ಆದರೆ ‘ಭಾರತದಲ್ಲೊಂದು ಸುಂಕದ ಬೇಲಿ’ ಕೃತಿ ಓದುತ್ತಾ ಹೋದಂತೆ ಈ ಉಪ್ಪಿನ ಮೇಲೆ ಹೇರಿದ್ದ ತೆರಿಗೆಯ ಕಾರಣದಿಂದ ಬ್ರಿಟಿಷರು ನಡೆಸುತಿದ್ದ ಬರ್ಬರತೆ ಪ್ರಕಟವಾಗುತ್ತಾ ಹೋಗುತ್ತದೆ. ಉಪ್ಪಿನ ತೆರಿಗೆಗಾಗಿ ನಡೆಯುತಿದ್ದ ಸುಲಿಗೆಯನ್ನು ತಿಳಿಸುವಂತಹ ಪುಸ್ತಕ ಇದೊಂದೇ ಏನೋ . ರಾಯ್ ಮ್ಯಾಕ್ಸ್ ಹ್ಯಾಮ್ (ಮೂಲ ಲೇಖಕರು) 1992 ರಲ್ಲಿ ಮೊದಲ ಬಾರಿಗೆ ಪ್ರವಾಸಕ್ಕೆಂದು ಬಂದವರು ಇಲ್ಲಿಯ ಸಂಸ್ಕೃತಿಯನ್ನು ಕಂಡು ಮಾರುಹೋದರು. ಭಾರತದ ಬಗ್ಗೆ ಕುತೂಹಲ ಹೆಚ್ಚಿ ಇನ್ನಷ್ಟು ತಿಳಿಯಲು ಇಲ್ಲಿನ ಇತಿಹಾಸವನ್ನು ಅರಿಯುವ ಪ್ರಯತ್ನದೊಂದಿಗೆ, ಹಲವು ಗ್ರಂಥಾಲಯಗಳಿಗೆ ಭೇಟಿ ನೀಡಿ ಭಾರತದ ಕುರಿತಿದ್ದ ಪುಸ್ತಕಗಳನ್ನೆಲ್ಲಾ ರಾಶಿ ಹಾಕಿ ಅವನ್ನು ಓದತೊಡಗಿದಾಗ ಅವರ ಗಮನ ಸೆಳೆದದ್ದು ೧೮೯೩ ರಲ್ಲಿ ಪ್ರಕಟಗೊಂಡಿದ್ದ, ಭಾರತದಲ್ಲಿ ಮೇಜರ್ ಜನರಲ್ ಆಗಿ ಕಾರ್ಯ ನಿರ್ವಹಿಸುತಿದ್ದ ಸರ್ ಡಬ್ಲ್ಯು ಯು ಹೆಚ್ ಸ್ಲೀಮನ್ ರವರ Rambles and recollections of an Indian official ಎಂಬ ಕೃತಿಯಲ್ಲಿನ ಒಂದು ಸಣ್ಣ ಟಿಪ್ಪಣಿ. ಆ ಟಿಪ್ಪಣಿ ಹೀಗಿತ್ತು.. ” ಉಪ್ಪಿನ ಮೇಲಿನ ಸುಂಕದ ಸಂಗ್ರಹಣೆಗಾಗಿ ಎರಡು ಸಾವಿರದ ಮುನ್ನೂರು ಮೈಲು, ಅಂದರೆ ಸಿಂಧು ನದಿಯಿಂದ ಮದ್ರಾಸಿನ ಮಹಾನದಿಯವರೆಗೆ ಬೇಲಿ ನಿರ್ಮಿಸಲಾಗಿತ್ತಲ್ಲದೇ ಕಾವಲಿಗಾಗಿ ಹನ್ನೆರಡು ಸಾವಿರ ಜನ ನಿಯುಕ್ತರಾಗಿದ್ದರು!! ಈ ಬೇಲಿ ಬೃಹತ್ ಮರಗಳಿಂದ, ಮುಳ್ಳು ಪೊದೆ, ಬಳ್ಳಿ ಗಳಿಂದ ಈ ಬೃಹತ್ ಬೇಲಿ ನಿರ್ಮಾಣವಾಗಿತ್ತು!!” ಈ ಟಿಪ್ಪಣಿಯ ಬೆನ್ನು ಹಿಡಿದು ಹೊರಟ ಹ್ಯಾಮ್ ಗೆ ಕಂಡದ್ದು ಬ್ರಿಟಿಶರ ಅಮಾನವೀಯತೆ. ಮತ್ತಷ್ಟು ಓದು 
ದಲಿತರ ಹೆಗಲ ಮೇಲೆ ಬಂದೂಕಿಟ್ಟಿರುವ ಕೈಗಳು ಯಾರದ್ದು?
– ರಾಕೇಶ್ ಶೆಟ್ಟಿ
‘ಅಧಿಕಾರದಲ್ಲಿರುವ ಕಾಂಗ್ರೆಸ್ಸಿಗಿಂತಲೂ, ಅಧಿಕಾರದಲ್ಲಿರದ ಕಾಂಗ್ರೆಸ್ಸ್ ದೇಶಕ್ಕೆ ಅಪಾಯಕಾರಿ’ ಅಂತ ಗೆಳೆಯನೊಬ್ಬ ಆಗಾಗ್ಗೆ ಹೇಳ್ತಾ ಇರ್ತಾನೆ. 2014ರ ಮೇ 16 ರಂದು ಬಿಜೆಪಿ ಅಧಿಕಾರ ಹಿಡಿದ ದಿನದಿಂದ ಇವತ್ತಿನವರೆಗೂ ಕಾಂಗ್ರೆಸ್ಸ್ ಪಕ್ಷದವರ ಆರ್ಭಟಗಳನ್ನು ನೋಡಿದರೇ, ಗೆಳೆಯನ ಮಾತು ನಿಜವೆನಿಸುತ್ತದೆ. 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಹಿಂದಿನ ಯಾವುದೇ ಚುನಾವಣೆಗಳಂತಿರಲಿಲ್ಲ. ಕಾಂಗ್ರೆಸ್ ಎಂಬ ಪುರಾತನ ಪಕ್ಷ ಮಕಾಡೆ ಮಲಗಿದರೇ, ಉಳಿದ ಅವಕಾಶವಾದಿ ಪ್ರಾದೇಶಿಕ, ಕೌಟುಂಬಿಕ, ಸೆಕ್ಯುಲರ್, ಕಮ್ಯುನಿಸ್ಟ್ ಪಕ್ಷಗಳು ಹೇಳ ಹೆಸರಿಲ್ಲದಂತಾದವು. ಮತ್ತಷ್ಟು ಓದು 
ಜಗಳಕ್ಕೆ ಬುಡ ಯಾವುದು?
– ರೋಹಿತ್ ಚಕ್ರತೀರ್ಥ
“ಜಗಳಕ್ಕೆ ಬುಡ ಯಾವುದೋ ಬೋಳೀಮಗನೆ” ಅಂತ ನಮ್ಮ ಕಡೆ ಒಂದು ಗಾದೆ. ಚಿಕ್ಕವನಿರುವಾಗ ಕೇಳಿದ್ದು (ಪಾವೆಂ ಆಚಾರ್ಯರು ಇದನ್ನು ಒಮ್ಮೆ ಬರೆದೂ ಇದ್ದರು ಎನ್ನುವುದನ್ನು ಕೇಳಿದ್ದೇನೆ). ಒಗೆದ ಕಲ್ಲನ್ನು ಕಚ್ಚಿ ಹಿಡಿವ ಹಸಿಮಣ್ಣಿನ ಹಾಗೆ ಮನಸ್ಸು ಇಂಥ ಮಾತುಗಳನ್ನು ಬೇಗನೆ ಗ್ರಹಿಸಿ ಹಿಡಿದಿಟ್ಟುಕೊಂಡು ಬಿಡುತ್ತದೆ! ಈಗ ಕೂತು ಯೋಚನೆ ಮಾಡಿದರೆ ಇದಕ್ಕೆ ಎರಡು ಅರ್ಥ ಪದರಗಳಿರುವುದು ಹೊಳೆಯುತ್ತಿದೆ. ಒಂದು, ಜಗಳಕ್ಕೆ ಕಾರಣವೇ ಬೇಕಾಗಿಲ್ಲ; ಯಾವ ಕ್ಷುಲ್ಲಕ ವಿಚಾರವನ್ನು ಹಿಡಿದುಕೊಂಡೂ ಜಗಳವಾಡಬಹುದು ಎನ್ನುವುದು. ಇನ್ನೊಂದು, ನಮ್ಮಲ್ಲಿ ‘ಬೋಳೀಮಗ’ ಎಂಬ ಶಬ್ದಪ್ರಯೋಗ ಆದೊಡನೆ ಅದುವರೆಗೆ ನಡೆಯುತ್ತಿದ್ದ ಮಾತಿನ ಚಕಮಕಿಗೆ ಹೊಸ ರೂಪ, ಬಣ್ಣ, ವೇಗ ಸಿಗುತ್ತದೆ. ಉರಿಯಲೋ ಆರಲೋ ಎನ್ನುತ್ತ ಓಲಾಡುವ ಬಡಕಲು ಬೆಂಕಿಗೆ ಸೀಮೆಎಣ್ಣೆ ಸುರಿವಂತಹ ಪರಿಣಾಮವನ್ನು ಈ ಶಬ್ದ ಮಾಡುತ್ತದೆ – ಎನ್ನುವುದು. ಮತ್ತಷ್ಟು ಓದು 





