ಪ್ರೇತದ ಆತ್ಮ ಚರಿತೆ! (ಭಾಗ 3)
– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಶನಿವಾರವಾಡೆಗೆ ಶನಿ ಎಡಗಾಲಿಟ್ಟು ವಕ್ಕರಿಸಿದ್ದ. ರಘುನಾಥನನ್ನು ಗೃಹಬಂಧನದಲ್ಲಿ ಇಢಲಾಗಿದ್ದರೂ, ಆತನ ದುಷ್ಟಕೂಟ ಮಾತ್ರ ಸುಮ್ಮನೆ ಕೂತಿರಲಿಲ್ಲ. ಅದು ಒಂದಲ್ಲಾ ಒಂದು ಸಂಚನ್ನು ಹೆಣೆಯುತ್ತಲೇ ಇತ್ತು. ರಘುನಾಥನ ಬಂಧನವಾದ ಕೆಲವೇ ದಿನದಲ್ಲಿ ಪೇಶ್ವಾ ಮಾಧವ ರಾವ್ ಮೇಲೆ ಮಾರಣಾಂತಿಕ ದಾಳಿ ನಡೆಯಿತು. ಮಾಧವ ರಾವ್ ಬೆಂಗಾವಲಿಗನಾಗಿದ್ದ ರಾಮಸಿಂಗ್ ಎಂಬಾತ ಮಾಧವ್ ರಾವ್ ಮೇಲೆ ಅನಿರೀಕ್ಷಿತವಾಗಿ ತಲವಾರು ಝಳಪಿಸಿದ. ಕುತ್ತಿಗೆಗೆ ಬೀಳಬೇಕಿದ್ದ ಪೆಟ್ಟು ತೋಳಿಗೆ ಬಿತ್ತು ಬದುಕಿಕೊಂಡ, ಇದರ ಹಿಂದೆ ರಘುನಾಥ ರಾವ್ ಕೈವಾಡ ಇತ್ತು ಎಂದು ಬಳಿಕ ತಿಳಿದು ಬಂತು. ಹೈದರ್ ಆಲಿಯ ವಿರುದ್ಧ ಮೂರನೇ ಯುದ್ಧಕ್ಕೆ ಮಾಧವ್ ರಾವ್ ಪೇಶ್ವಾ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಪೇಶ್ವಾ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಭಯಾನಕ ಟಿಬಿ ಖಾಯಿಲೆ ಪೇಶ್ವಾನಿಗೆ ತಟ್ಟಿತ್ತು. ಅಂದಿನ ಕಾಲಕ್ಕೆ ಅದು ಬ್ರಿಟಿಷರು ತಂದು ಬಿಟ್ಟಿದ್ದ ಹೊಸ ಖಾಯಿಲೆಯಾದ ಕಾರಣ ಇಲ್ಲಿ ಟಿಬಿಗೆ ಸರಿಯಾದ ಚಿಕಿತ್ಸೆ ಇರಲಿಲ್ಲ. ಥೇವೂರು ಚಂತಾಮಣಿ ದೇವಾಲಯದಲ್ಲಿ ಪೇಶ್ವಾ ಮಾಧವ ರಾವ ಕೊನೆಯುಸಿರೆಳೆದ. ಅಲ್ಲೇ ಆತನ ಅಂತ್ಯಸಂಸ್ಕಾರ ನಡೆಸಲಾಯಿತು. ಆತನ ಪ್ರಿಯ ಪತ್ನಿ ರಾಮಾಬಾಯಿ ಗಂಡನ ಚಿತೆಗೆ ಹಾರಿ ಪ್ರಾಣ ಬಿಟ್ಟಳು. ಮಾಧವ ರಾವ್, ಶನಿವಾರವಾಡೆಯ ಪೇಶ್ವಾ ಗದ್ದುಗೆ ಅಲಂಕರಿಸಿದ ಕೊನೆಯ ಸಮರ್ಥ ಪೇಶ್ವಾ. ಈತ ಹಲವಾರು ಸಮರ್ಥ ಸೇನಾನಿಗಳನ್ನು ಗುರುತಿಸಿ ಅವರಿಗೆ ಬೇರೆ ಬೇರೆ ವಲಯಗಳ ಅಧಿಕಾರ ನೀಡಿದ. ಇಂದು ನಾವು ರಾಜಸ್ಥಾನದಲ್ಲಿ ಕಾಣುತ್ತಿರುವ ಸಿಂಧ್ಯಾ ಮನೆತನದ ಮೂಲ ಪುರುಷ ಮಹಾದ್ ಜಿ ಸಿಂಧ್ಯಾನನ್ನು ಬೆಳೆಸಿದ್ದು ಮಾಧವರಾವ್ ಪೇಶ್ವಾ. ಕೊಲ್ಹಾಪುರದ ಭೋಸ್ಲೆಗಳು, ಬರೋಡಾದ ಗಾಯಕ್ವಾಡರು, ಉತ್ತರಭಾರತದಲ್ಲಿ ಹೋಳ್ಕರ್ಗಳು ಇವರೆಲ್ಲಾ ಮಾಧವರಾವ್ ಪೇಶ್ವಾನ ಗರಡಿಯಲ್ಲೇ ಪಳಗಿ ಪುಣೆಗೆ ನಿಷ್ಟರಾಗಿ ಆಡಳಿತ ನಡೆಸಿದರು. ಮಾಧವರಾವ್ ಪೇಶ್ವೆ ತೀರಿಕೊಳ್ಳುತ್ತಿದ್ದಂತೆ ಈ ರಾಜ್ಯಗಳ ಹಿಡಿತ ಪುಣೆಯಿಂದ ಕೈ ತಪ್ಪಿತು. ಎಲ್ಲರೂ ಸ್ವತಂತ್ರರಾಗಿ ಆಳ್ವಿಕೆ ಮಾಡಲು ಆರಂಭಿಸಿದರು. ಮಾಧವ ರಾವ್ ಬಳಿಕ ಪುಣೆಯಲ್ಲಿ ನಾಲಾಯಕ್ಕುಗಳ ಸರದಿ ಆರಂಭ ವಾಯಿತು. ಪೇಶ್ವಾಯಿಯ ರಕ್ತ ಎಲ್ಲಿ ಕಳಪೆಯಾಯಿತೋ ಗೊತ್ತಿಲ್ಲ, ಒಬ್ಬರಿಗಿಂತ ಒಬ್ಬರು ಅಯೋಗ್ಯರೇ ಬರಲಾರಂಭಿಸಿದರು. ಶನಿವಾರ ವಾಡೆಯನ್ನು ಇಂದಿಗೂ ಕಾಡುತ್ತಿರುವ ಪ್ರೇತದ ಕತೆ ಇಲ್ಲಿ ಆರಂಭವಾಗುತ್ತದೆ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 30:
ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ:
– ರಾಮಚಂದ್ರ ಹೆಗಡೆ
ರಾಷ್ಟ್ರಧ್ವಜದ ಗೌರವ ರಕ್ಷಣೆಗಾಗಿ ಬ್ರಿಟಿಷರ ಗುಂಡಿಗೆ ಎದೆಯೊಡ್ಡಿ ಬಲಿದಾನಗೈದ ಅಸ್ಸಾಮಿನ ವೀರವನಿತೆಯರು ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ. ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರದ ಭೂಪಟ, ವಂದೇಮಾತರಂ ಎಲ್ಲವೂ ದೇಶಾಭಿಮಾನದ ಅಭಿವ್ಯಕ್ತಿಯ ಸಂಕೇತಗಳಾದರೂ ಅವು ನಮ್ಮಲ್ಲಿ ಸೃಷ್ಟಿಸುವ ಭಾವ ವರ್ಣನಾತೀತ. ಸೈನಿಕನೊಬ್ಬ ಯುದ್ಧ ಗೆದ್ದಾಗ, ಕ್ರೀಡಾಳುವೊಬ್ಬ ಆಟದಲ್ಲಿ ಗೆದ್ದಾಗ ತ್ರಿವರ್ಣ ಧ್ವಜ ಹಿಡಿದು ಕುಣಿದು ಕುಪ್ಪಳಿಸುವುದು ಕಾಣುತ್ತೇವೆ. ಯುದ್ಧಕ್ಕೆ ಹೋರಾಟ ಯೋಧನೊಬ್ಬ ಗೆದ್ದರೆ ಧ್ವಜ ಹಿಡಿದು ಬರುವೆ, ಸತ್ತರೆ ತ್ರಿವರ್ಣಧ್ವಜವನ್ನು ಸುತ್ತಿಕೊಂಡು ಬರುವೆ ಎಂದು ಹೇಳಿದ್ದು ಈ ಎಲ್ಲ ಸಂಕೇತಗಳ ಕುರಿತು ನಮಗಿರುವ ಹೆಮ್ಮೆ ಅಭಿಮಾನದ ಪ್ರತೀಕ. ರಾಷ್ಟ್ರಧ್ವಜವೆಂದರೆ ಕೇವಲ ಅದು ಬಟ್ಟೆಯಲ್ಲ. ಅದು ನಮ್ಮ ಹೆಮ್ಮೆ, ದೇಶದ ಕುರಿತ ಪ್ರೀತಿಯ ಸಂಕೇತ, ಅದು ನಮ್ಮ ಆತ್ಮಾಭಿಮಾನದ ಸಂಕೇತ. ರಾಷ್ಟ್ರಧ್ವಜದ ಪೂಜ್ಯತೆ ಹಾಗೂ ಗೌರವದ ರಕ್ಷಣೆಗಾಗಿ ೧೭ ರ ತರುಣಿ ಕನಕಲತಾರಿಂದ ಹಿಡಿದು ೭೩ ರ ವೃದ್ಧೆ ಮಾತಂಗಿನಿ ಹಜ್ರಾರವರೆಗೆ ಸ್ವಾತಂತ್ರ್ಯ ಸಮರದ ಉದ್ದಕ್ಕೂ ಸಾವಿರಾರು ಮಂದಿ ಬಲಿದಾನ ಮಾಡಿದ್ದಾರೆ. ಮತ್ತಷ್ಟು ಓದು 
ಪ್ರೇತದ ಆತ್ಮ ಚರಿತೆ! (ಭಾಗ ೨)
– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಅದು ಮನುಕುಲ ಕಂಡ ಪರಮ ಪಾಪಿಗಳಲ್ಲೊಬ್ಬ ಔರಂಗಜೇಬ ದಿಲ್ಲಿಯ ಗದ್ದುಗೆಯಲ್ಲಿದ್ದ ಸಮಯ. ಪ್ರಜೆಗಳನ್ನು ಪರಿಪಾಲನೆ ಮಾಡಬೇಕಾದ ದೊರೆಯೇ ಜಿಸಿಯಾ ತಲೆಗಂದಾಯ ಹೇರಿ ಒಂದು ನಿರ್ದಿಷ್ಟ ಸಮಾಜದ ಸರ್ವನಾಶಕ್ಕೆ ಪಣತೊಟ್ಟು ಸಾವಿರಾರು ದೇವಾಲಯಗಳನ್ನು ದ್ವಂಸ ಮಾಡುತ್ತಿದ್ದ ಕಂಟಕಕಾಲ.. ಆ ಹೊತ್ತಿನಲ್ಲಿ ಸ್ವಾಭಿಮಾನಿ ಹಿಂದೂಗಳ ಪಾಲಿಗೆ ಆಪತ್ಭಾಂದವರಾಗಿ ಶಿವಾಜಿ ಮಹಾರಾಜರು ಉದಿಸಿದರು. ಸಹ್ಯಾದ್ರಿಯ ಸಿಂಹದ ಗುಡುಗಿಗೆ ದಿಲ್ಲಿಯ ಮೊಘಲರ ಮಯೂರ ಸಿಂಹಾಸನ ತಣ್ಣಗೆ ಕಂಪಿಸಿದ್ದಂತೂ ಸತ್ಯ. ಪ್ರವಾಹಕ್ಕೆ ವಿರುದ್ಧವಾಗಿ ಈಜಿ ತನ್ನ ಸದ್ಗುಣಗಳಿಂದ ಪ್ರಜೆಗಳ ಹೃದಯವನ್ನೂ… ಖಡ್ಗಪರಾಕ್ರಮದಿಂದ ಯವನರ ಸೈನ್ಯವನ್ನೂ ಗೆದ್ದ ಶಿವಾಜಿ, ಹಿಂದವೀ ಸ್ವಾರಾಜ್ಯವನ್ನು ಕಟ್ಟಿದರು. ಅಖಂಡ ಹಿಂದೂ ಸಾಮ್ರಾಜ್ಯಕ್ಕೆ ಬೀಜಾರೋಹಣ ಮಾಡಿದವರು ಶಿವಾಜಿ ಮಹಾರಾಜರಾದರೂ, ಅವರ ಕನಸನ್ನು ನನಸು ಮಾಡಿದವರು ಮಾತ್ರ ಪುಣೆಯ ಪೇಶ್ವಾಗಳು. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 29:
ವಾಂಚಿನಾಥನ್ ಅಯ್ಯರ್
– ರಾಮಚಂದ್ರ ಹೆಗಡೆ
ತಮಿಳುನಾಡಿನ ರಾಷ್ಟ್ರಭಕ್ತ ಕ್ರಾಂತಿಕಾರಿ, ಬ್ರಿಟಿಷ್ ಸಾಮ್ರಾಜ್ಯಕ್ಕೆ ಸೆಡ್ಡು ಹೊಡೆದು ಪ್ರಾಣಾರ್ಪಣೆ ಮಾಡಿದ ಹುತಾತ್ಮ ವಾಂಚಿನಾಥನ್ ಅಯ್ಯರ್. ಜನರಿಂದ ‘ವಂಚಿ’ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಈ ೨೫ ರ ದೇಶಭಕ್ತ ತರುಣ ತಿರುನಲ್ವೇಲಿಯ ಕಲೆಕ್ಟರ್ ರಾಬರ್ಟ್ ಆಶ್ ನನ್ನು ಹಾಡಹಗಲೇ ಗುಂಡಿಕ್ಕಿ ತಾನೂ ಆತ್ಮಾರ್ಪಣೆ ಮಾಡಿದ. ತಿರುನಲ್ವೇಲಿ ಜಿಲ್ಲೆಯ ಸೆಂಗೊತ್ತೈ ಎಂಬ ಊರಿನಲ್ಲಿ ಜನಿಸಿದ ವಾಂಚಿನಾಥನ್ ಪ್ರಾಥಮಿಕ ಶಿಕ್ಷಣವನ್ನು ತನ್ನೂರಿನಲ್ಲೇ ಮುಗಿಸಿ, ಎಂ.ಎ ಪದವಿಯನ್ನು ತಿರುವನಂತಪುರದ ಕಾಲೇಜಿನಲ್ಲಿ ಪಡೆದಿದ್ದ. ಕಾಲೇಜಿನಲ್ಲಿ ಓದುವಾಗಲೇ ಮದುವೆಯೂ ಆಗಿತ್ತು. ಸರ್ಕಾರಿ ಹುದ್ದೆಯಲ್ಲಿ ನೌಕರಿ ಮಾಡುತ್ತಿದ್ದ. ಅದೇ ಹೊತ್ತಿಗೆ ತಮಿಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ಜೋರಾಗಿತ್ತು. ಸ್ವದೇಶೀ ನೇವಿಗೇಷನ್ ಕಂಪನಿ ಹುಟ್ಟುಹಾಕಿ ಬ್ರಿಟಿಷರಿಗೆ ಸೆಡ್ಡು ಹೊಡೆದ ರಾಷ್ಟ್ರಭಕ್ತ ಚಿದಂಬರಂ ಪಿಳ್ಳೈ ಹಾಗೂ ‘ಭಾರತಮಾತಾ ಅಸೋಸಿಯೇಷನ್’ ಕಟ್ಟಿ ಕ್ರಾಂತಿಕಾರಿಗಳನ್ನು ತಯಾರು ಮಾಡುತ್ತಿದ್ದ ನೀಲಕಂಠ ಬ್ರಹ್ಮಚಾರಿ ಅವರ ಹೋರಾಟಗಳಿಂದ ವಾಂಚಿ ಸ್ವಾತಂತ್ರ್ಯ ಸಮರದೆಡೆಗೆ ಆಕರ್ಷಿತನಾದ. ದಕ್ಷಿಣ ಭಾರತದ ಕೆಲವೇ ಕೆಲವು ಕ್ರಾಂತಿಕಾರಿ ಸಂಘಟನೆಗಳಲ್ಲಿ ಒಂದಾದ, ನೀಲಕಂಠನಿಂದ ಬ್ರಹ್ಮಚಾರಿಯವರ ‘ಭಾರತಮಾತಾ ಅಸೋಸಿಯೇಷನ್’ ಸಶಸ್ತ್ರ ಕ್ರಾಂತಿಗಾಗಿ ಯುವಕರನ್ನು ತರಬೇತಿಗೊಳಿಸುತ್ತಿತ್ತು. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 28:
ಮೆಣಸಿನಹಾಳ ತಿಮ್ಮನಗೌಡ
– ರಾಮಚಂದ್ರ ಹೆಗಡೆ
ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ಬ್ರಿಟಿಷರ ವಿರುದ್ಧ ಕ್ರಾಂತಿ ಕಹಳೆ ಮೊಳಗಿಸಿ ಹುತಾತ್ಮನಾದ ವೀರ ಕನ್ನಡಿಗ ಮೆಣಸಿನಹಾಳ ತಿಮ್ಮನಗೌಡರು. ಇಂದಿನ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮೆಣಸಿನಹಾಳದಲ್ಲಿ ಶ್ರೀಮಂತ ಪಾಟೀಲ ಕುಟುಂಬದಲ್ಲಿ ಜನಿಸಿದ ತಿಮ್ಮನಗೌಡ ಬ್ಯಾಡಗಿಗೆ ಸುಭಾಷಚಂದ್ರ ಬೋಸರು ಬಂದಾಗ ಸ್ವಾತಂತ್ರ್ಯ ಹೋರಾಟದ ಕುರಿತ ಅವರ ಭಾಷಣ ಕೇಳಿ ರೋಮಾಂಚಿತರಾಗಿ ತ್ಯಾಗ ಮತ್ತು ಬಲಿದಾನದ ದೀಕ್ಷೆ ತೊಟ್ಟು ತನ್ನ 21ರ ವಯಸ್ಸಿನಲ್ಲೇ ಕಾನೂನು ಭಂಗ ಚಳುವಳಿಗೆ ಧುಮುಕಿದರು. ಆ ಹೊತ್ತಿಗೆ ಬ್ರಿಟಿಷರ ದರ್ಪ ದೌರ್ಜನ್ಯಗಳು ಮಿತಿಮೀರಿದ್ದವು. ಸಾಮಾನ್ಯ ಬಡ ರೈತರನ್ನು ದುಪ್ಪಟ್ಟು ಕಂದಾಯ ಹಾಕಿ ಶೋಷಿಸಲಾಗುತ್ತಿತ್ತು. ಅದನ್ನು ಪ್ರತಿಭಟಿಸಿ ಶೋಷಣೆಯ ವಿರುದ್ಧ ದನಿಯೆತ್ತಿದ ತಿಮ್ಮನಗೌಡರನ್ನು ಬ್ರಿಟಿಷರು ಇನ್ನೂ ಅನೇಕ ಹೋರಾಟಗಾರರೊಂದಿಗೆ ಬಂಧಿಸಿ ಎರಡು ವರ್ಷಕಾಲ ಯರವಾಡ ಜೈಲಿನಲ್ಲಿ ಸೆರೆಯಲ್ಲಿಟ್ಟರು. ಅಲ್ಲಿ ತಿಮ್ಮನಗೌಡರು ಚರಖಾದಿಂದ ನೂಲು ತೆಗೆಯುವುದನ್ನು ಕಲಿತರು. ಜೈಲಿನಿಂದ ಬಿಡುಗಡೆಗೊಂಡ ತಿಮ್ಮನಗೌಡರಿಗೆ ಅವರ ಊರಿನಲ್ಲಿ ಭವ್ಯ ಸ್ವಾಗತ ದೊರೆಯಿತು. ಜೈಲಿನಿಂದ ಬಂದ ಮೇಲೆ ಮತ್ತೆ ತಿಮ್ಮನಗೌಡರು ತಮ್ಮ ಕ್ರಾಂತಿ ಚಟುವಟಿಕೆಗಳನ್ನು ಮುಂದುವರೆಸಿದರು. ಬ್ರಿಟಿಷ್ ದೌರ್ಜನ್ಯದ ವಿರುದ್ಧ ತರುಣರ ಗುಂಪು ಕಟ್ಟಿಕೊಂಡು ಊರೂರು ತಿರುಗಿ ಭಾಷಣ ಮಾಡುತ್ತಾ ಜನರಲ್ಲಿ ಜಾಗೃತಿ ಮೂಡಿಸುತ್ತಾ ಜನರನ್ನು ಬಡಿದೆಬ್ಬಿಸತೊಡಗಿದರು. ಮತ್ತಷ್ಟು ಓದು 
ಸಾಧಕರ ಹೆಸರಲ್ಲಿ ಅಸ್ಮಿತೆಯ ಹುಡುಕಾಟ
– ಡಾ.ಬಿ.ವಿ.ವಸಂತ ಕುಮಾರ್
ಭಾರತ ದೇಶ ಪ್ರಪಂಚದ ಒಂದು ವಿಶಿಷ್ಟ ದೇಶ. ಭಾರತದ ಬದುಕಿನ ದಾರಿಗಳನ್ನು ಇಲ್ಲಿನ ಮಹಾತ್ಮರು ನಿರ್ಮಿಸಿದ್ದಾರೆ. ಕಾಡಿನಿಂದ ಒಡಮೂಡಿದ ಈ ದಾರಿಗಳೆಡೆಗೆ ನಗರ ಮಹಾನಗರಗಳ ಜನರು ಮುಖಮಾಡಿದ್ದನ್ನೂ, ಮಾಡುತ್ತಾ ಇರುವುದನ್ನೂ, ಮುಂದೆ ಮಾಡುವುದನ್ನೂ ನೋಡಬಹುದು. ಇವರೇ ನಿಜವಾದ ರಾಷ್ಟ್ರ ನಿರ್ಮಾಪಕರು, ಸಂಸ್ಕೃತಿ ಸೃಷ್ಟಿಕರ್ತರು, ಕಲ್ಯಾಣದ ಮಹಾಕನಸುಗಾರರು. ಇಂಥವರನ್ನು ಸಂತರು, ಮಹಂತರು, ಶರಣರು, ಋಷಿಮುನಿಗಳು, ದಾರ್ಶನಿಕರು ಎಂದೆಲ್ಲ ಕರೆಯುತ್ತಾರೆ. ಅವರನ್ನು ಸಮಾಜದ ಜನ ಸದಾ ತಮ್ಮ ಬಾಳಿಗೆ ಆದರ್ಶದ ನಂದಾದೀವಿಗೆಯನ್ನಾಗಿಸಿಕೊಂಡಿದ್ದಾರೆ. ಅವರನ್ನು ಗುರುವೆಂದು ಸ್ವೀಕರಿಸಿ ತಾವು ಭಕ್ತರಾಗಿ ಗುರು-ಶಿಷ್ಯ ಪರಂಪರೆಯ ಆಧ್ಯಾತ್ಮಕ್ಕೂ ಅನುಭವಕ್ಕೂ ಕಾರಣರಾಗಿದ್ದಾರೆ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 27:
‘ಮಾಸ್ಟರ್ ದಾ’ ಸೂರ್ಯ ಸೇನ್
– ರಾಮಚಂದ್ರ ಹೆಗಡೆ
ಬಂಗಾಳದ ಮತ್ತೊಬ್ಬ ಕ್ರಾಂತಿಕಿಡಿ, ಬ್ರಿಟಿಷರ ಎದೆ ನಡುಗಿಸಿದ ‘ಚಿತ್ತಗಾಂಗ್ ಶಸ್ತ್ರಾಗಾರ ದಾಳಿ’ ಯ ರೂವಾರಿ ಸೂರ್ಯ ಸೇನ್. ಜನರು, ಕ್ರಾಂತಿಕಾರಿ ಸಹವರ್ತಿಗಳು ಪ್ರೀತಿಯಿಂದ ಕರೆಯುತ್ತಿದ್ದ ಹೆಸರು ಮಾಸ್ಟರ್ ದಾ. ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಚಿತ್ತಗಾಂಗ್ ನ ಸುತ್ತಮುತ್ತಲಿನ ಪ್ರದೇಶದಲ್ಲಿ ಬ್ರಿಟಿಷರ ವಿರುದ್ಧ ದೊಡ್ಡಮಟ್ಟದ ಹೋರಾಟವನ್ನು ರೂಪಿಸುವಲ್ಲಿ ಸೂರ್ಯ ಸೇನ್ ರ ಪಾತ್ರ ಪ್ರಮುಖವಾದದ್ದು. ಬಿಎ ವಿದ್ಯಾರ್ಥಿಯಾಗಿದ್ದಾಗ ಭಾರತ ಸ್ವಾತಂತ್ರ್ಯ ಸಮರದ ಕುರಿತು ಅರಿತ ಸೇನ್, ಕ್ರಾಂತಿಕಾರಿ ಸಂಘಟನೆ ಅನುಶೀಲನ ಸಮಿತಿಯೆಡೆಗೆ ಆಕರ್ಷಿತರಾದರು. ೧೯೧೮ ರಲ್ಲಿ ಚಿತ್ತಗಾಂಗ್ ನಲ್ಲಿ ಶಿಕ್ಷಕನಾಗಿ ವೃತ್ತಿ ಆರಂಭಿಸಿದ ಸೇನ್ ಆರಂಭದಲ್ಲಿ ಗಾಂಧೀಜಿಯವರ ಅಸಹಕಾರ ಚಳುವಳಿಯ ಭಾಗವಾಗಿದ್ದರು. ಆದರೆ ಅದು ಮಧ್ಯದಲ್ಲೇ ಸ್ಥಗಿತವಾದಾಗ ಬೇಸರಗೊಂಡ ಸೇನ್ ಭಾರತದ ಸ್ವಾತಂತ್ರ್ಯಕ್ಕೆ ಕ್ರಾಂತಿಮಾರ್ಗವೇ ಸರಿ ಎಂದು ನಿಶ್ಚಯಿಸಿದರು. ಕ್ರಾಂತಿಕಾರಿ ಸಂಘಟನೆ ಯುಗಾಂತರದ ಕಾರ್ಯಕರ್ತನಾಗಿ ಕ್ರಾಂತಿಕಾರ್ಯದಲ್ಲಿ ತೊಡಗಿಸಿಕೊಂಡ ಅವರು ಚಿತ್ತಗಾಂಗ್ ಜಿಲ್ಲೆಯಾದ್ಯಂತ ಕ್ರಾಂತಿ ಚಟುವಟಿಕೆ ಪಸರಿಸುವಲ್ಲಿ ಹಾಗೂ ಕ್ರಾಂತಿಕಾರಿಗಳ ಬಹುದೊಡ್ಡ ಯುವಪಡೆಯನ್ನು ಕಟ್ಟುವಲ್ಲಿ ಅವಿರತವಾಗಿ ದುಡಿದರು. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 26:
ಸರ್ದಾರ್ ಅಜಿತ್ ಸಿಂಗ್
– ರಾಮಚಂದ್ರ ಹೆಗಡೆ
ಪಂಜಾಬ್ ಪ್ರಾಂತ್ಯದಲ್ಲಿ ಬ್ರಿಟಿಷ್ ಸರ್ಕಾರದ ದೌರ್ಜನ್ಯದ ವಿರುದ್ಧ ದನಿಯೆತ್ತಿದ, ಜನರನ್ನು ಸಂಘಟಿಸಿದ ಅಗ್ರಶ್ರೇಣಿಯ ಕ್ರಾಂತಿಕಾರಿ ಸರ್ದಾರ್ ಅಜಿತ್ ಸಿಂಗ್. ಇವರು ಕ್ರಾಂತಿಸಿಂಹ ಸರ್ದಾರ್ ಭಗತ್ ಸಿಂಗ್ ರ ಚಿಕ್ಕಪ್ಪ. 1947 ರ ಆಗಸ್ಟ್ 15 ರಂದು ಭಾರತ ಸ್ವತಂತ್ರವಾದಾಗ ‘ಥ್ಯಾಂಕ್ ಗಾಡ್, ನಮ್ಮ ಕೆಲಸ, ಹೋರಾಟ ಯಶಸ್ವಿಯಾಯಿತು’ ಎಂದು ಖುಷಿಯಿಂದ, ಸಂಭ್ರಮದಿಂದ ಆ ಕ್ಷಣಗಳನ್ನು ಕಂಡು ಅಂದೇ ‘ಧನ್ಯತೆಯ ಸಾವು’ ಕಂಡವರು ಅಜಿತ್ ಸಿಂಗರು. ಸ್ವತಂತ್ರ ಭಾರತದ ಕನಸು ಕಂಡು ಅದಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿ ಆ ಕನಸು ನನಸಾಗುವ ಮುನ್ನವೇ ಮರೆಯಾದವರು ಕೋಟ್ಯಾಂತರ ಮಂದಿ. ಹಾಗೆ ಕನಸು ನನಸಾದ ಕ್ಷಣವನ್ನು ಕಣ್ತುಂಬಿಕೊಳ್ಳುವ ಭಾಗ್ಯ ಅನೇಕರಿಗೆ ಸಿಗಲೇ ಇಲ್ಲ. ಸರ್ದಾರ್ ಅಜಿತ್ ಸಿಂಗರು ಆ ವಿಷಯದಲ್ಲಿ ಅದೃಷ್ಟವಂತರು. ಹಾಗಾಗಿ ಅವರದು ಧನ್ಯತೆಯ ಸಾವು. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 25:
ಪ್ರೀತಿಲತಾ ವಡ್ಡೆದಾರ್
– ರಾಮಚಂದ್ರ ಹೆಗಡೆ
ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಸಿಡಿದೆದ್ದು ಕ್ರಾಂತಿ ಚಟುವಟಿಕೆ ನಡೆಸಿ ಆತ್ಮಾರ್ಪಣೆಗೈದ ಬಂಗಾಳದ ಮೊದಲ ಮಹಿಳಾ ಬಲಿದಾನಿ ಪ್ರೀತಿಲತಾ ವಡ್ಡೆದಾರ್. ಚಿತ್ತಗಾಂಗ್ ನ ಪಹರ್ತಳಿಯ ಯೂರೋಪಿಯನ್ ಕ್ಲಬ್ ನಲ್ಲಿ ಹಾಕಲಾಗಿದ್ದ ‘ನಾಯಿಗಳಿಗೆ ಮತ್ತು ಭಾರತೀಯರಿಗೆ ಇಲ್ಲಿ ಪ್ರವೇಶವಿಲ್ಲ’ ಎಂಬ ಅವಮಾನಕರ ಬೋರ್ಡ್ ಕಂಡು ಸಿಡಿದುಬಿದ್ದ ಈ ಬೆಂಕಿಚೆಂಡಿನಂತ ಹೆಣ್ಣುಮಗಳು ಕ್ರಾಂತಿಕಾರಿಗಳ ದಂಡಿನೊಂದಿಗೆ ಕ್ಲಬ್ ಗೆ ನುಗ್ಗಿ ಬ್ರಿಟಿಷರ ಎದೆನಡುಗಿಸಿ ಪ್ರತ್ಯುತ್ತರ ನೀಡಿದವಳು. ಪ್ರಸ್ತುತ ಬಾಂಗ್ಲಾದೇಶ ದಲ್ಲಿರುವ ಚಿತ್ತಗಾಂಗ್ ನಲ್ಲಿ ಹುಟ್ಟಿದ ಪ್ರೀತಿಲತಾ ಎಳವೆಯಿಂದಲೇ ದೇಶಭಕ್ತರ ಕುರಿತು ಕೇಳುತ್ತಾ ಬೆಳೆದವಳು. ಝಾನ್ಸಿ ರಾಣಿ ಲಕ್ಷ್ಮಿಬಾಯಿಯ ಕುರಿತು ಓದುತ್ತಾ ಅವಳ ಜೀವನ ಮತ್ತು ಹೋರಾಟದಿಂದ ಪ್ರಭಾವಿತಳಾದ ಪ್ರೀತಿಲತಾ ತಾನೂ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡು ಬ್ರಿಟಿಷರನ್ನು ಭಾರತದಿಂದ ಓಡಿಸುವ ಕನಸು ಕಂಡಿದ್ದಳು. ಪ್ರೀತಿಲತಾ ತತ್ತ್ವಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿ ಪಡೆದರೂ ಕಲ್ಕತ್ತಾ ವಿಶ್ವವಿದ್ಯಾಲಯದ ಬ್ರಿಟಿಷ್ ಆಡಳಿತ ಅವಳ ಪದವಿಯನ್ನು ತಡೆಹಿಡಿಯಿತು. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 24:
ವಿದುರಾಶ್ವತ್ಥದ ಬಲಿದಾನಿಗಳು
– ರಾಮಚಂದ್ರ ಹೆಗಡೆ
ಸ್ವಾತಂತ್ರ್ಯ ಸಮರದಲ್ಲಿ ಕರ್ನಾಟಕದಲ್ಲಿ ನಡೆದ ಅತೀ ಭೀಕರ ಹತ್ಯಾಕಾಂಡಗಳಲ್ಲಿ ಒಂದಾದ ‘ವಿದುರಾಶ್ವತ್ಥದ ಬಲಿದಾನ’ ಕರ್ನಾಟಕದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೂ ಹೆಸರಾಗಿದೆ. ಒಬ್ಬ ಗರ್ಭಿಣಿಯೂ ಸೇರಿದಂತೆ 32 ಜನ ದೇಶಭಕ್ತರು ಬ್ರಿಟಿಷರ ಗುಂಡಿಗೆ ಬಲಿಯಾಗಿ ಪ್ರಾಣಾರ್ಪಣೆ ಮಾಡಿದ್ದು, ಈ ನೆಲದ ಜನರ ಅಪ್ರತಿಮ ದೇಶಭಕ್ತಿಗೆ ಹಾಗೂ ಬ್ರಿಟಿಷ್ ಆಡಳಿತದ ಬರ್ಬರತೆಗೆ ಸಾಕ್ಷಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕ್ಷೇತ್ರ ‘ವಿದುರಾಶ್ವತ್ಥ’ ದೇಶದ ಸ್ವಾತಂತ್ರ್ಯ ಹೋರಾಟಗಾರರ ಚಳುವಳಿಯ ಕೇಂದ್ರವಾಗಿತ್ತೆಂಬುದು ಗಮನಾರ್ಹ ಸಂಗತಿ. ಮಹಾಭಾರತ ಕಾಲದಲ್ಲಿ ವಿದುರ ನೆಟ್ಟಿದ್ದನೆಂದು ನಂಬಲಾಗುವ ಅಶ್ವತ್ಥ ವೃಕ್ಷ ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಬ್ರಿಟಿಷರ ಪೈಶಾಚಿಕ ದೌರ್ಜನ್ಯಕ್ಕೂ ಸಾಕ್ಷಿಯಾಗಿದ್ದು ದುರಂತದ ಸಂಗತಿ. ಮತ್ತಷ್ಟು ಓದು 




