ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

20
ಜುಲೈ

ಅನಂತದಿಂದ ಸೊನ್ನೆಯವರೆಗೆ: ಸಂಖ್ಯೆಗಳ ಸಂಕ್ಷಿಪ್ತ ಚರಿತ್ರೆ

– ರೋಹಿತ್ ಚಕ್ರತೀರ್ಥ

zeroಒಂದಾನೊಂದು ಕಾಲ ಇತ್ತು. ಮನುಷ್ಯ ಪ್ರಾಣಿಜಗತ್ತಿನ ಉಳಿದ ಜೀವರಾಶಿಗಿಂತ ಕೊಂಚ ಭಿನ್ನನಾಗಿ, ಚತುಷ್ಪಾದಗಳ ಅವಲಂಬನೆಯಿಂದ ಹೊರಬಂದು, ಎರಡು ಕಾಲಿನಲ್ಲಿ ನಿಂತು ಬ್ಯಾಲೆನ್ಸ್ ಮಾಡುತ್ತ ನಡೆಯಲು ತೊಡಗಿದ್ದ ಕಾಲ. ಹಾಗೆ ಓಲಾಡುತ್ತ ಡ್ಯಾನ್ಸ್ ಮಾಡುತ್ತ ಕೊನೆಗೊಂದು ದಿನ ದೃಢವಾಗಿ ನಿಲ್ಲಬಲ್ಲ ತಾಕತ್ತು ಗಳಿಸಿಕೊಂಡವನಿಗೆ ದೃಷ್ಟಿ ಹೋದದ್ದು ಆಕಾಶದತ್ತ. ರಾತ್ರಿ ಹೊತ್ತಲ್ಲಿ ಅಲ್ಲಿ ಮಿನುಗುವ ಚುಕ್ಕಿಗಳೆಷ್ಟು! ಸಂಜೆಯಾದರೆ ಹಾರುವ ಹಕ್ಕಿಗಳೆಷ್ಟು! ಬೇಸಗೆಯಲ್ಲಿ ತೇಲುವ ಬಿಳಿ ಮೋಡಗಳೆಷ್ಟು! ಮಳೆಗಾಲದಲ್ಲಿ ಫಳಾರನೆ ಹೊಳೆದು ಮರೆಯಾಗುವ ಮಿಂಚುಗಳೆಷ್ಟು! ಇವುಗಳನ್ನೆಲ್ಲ ನೋಡುತ್ತಿದ್ದವನಿಗೆ ಅವುಗಳೆಲ್ಲ ಎಷ್ಟು ಎಷ್ಟು ಎಷ್ಟು ಎನ್ನಿಸುತ್ತ ಆಶ್ಚರ್ಯವಾಗುತ್ತಿತ್ತೇ ಹೊರತು ನಿಜವಾಗಿಯೂ ಎಷ್ಟಿವೆ ಎಂಬ ಅಂದಾಜು ಮಾತ್ರ ಸಿಕ್ಕಿರಲಿಲ್ಲ. ಯಾಕೆಂದರೆ ಆ ಕಾಲದ ಮನುಷ್ಯನಿಗೆ “ಲೆಕ್ಕ ಮಾಡುವುದು” ಎಂಬ ಪರಿಕಲ್ಪನೆಯೇ ಹುಟ್ಟಿರಲಿಲ್ಲ! ಹೀಗೆಯೇ ದಿನಗಳು ಸರಿಯುತ್ತಿದ್ದಾಗ ಆ ಆದಿಮಾನವ ಒಂದು ವಿಚಿತ್ರ ಕಂಡ. ಆಕಾಶದಲ್ಲಿ ಚಂದ್ರ ರೊಟ್ಟಿಯಂತೆ ದುಂಡಗಿದ್ದವನು ದಿನ ಹೋದಂತೆ ಕರಗುತ್ತಾ ಕರಗುತ್ತಾ ಹೋಗಿ ಒಂದು ದಿನ ಮಾಯವಾಗಿಬಿಡುತ್ತಾನೆ. ಅಂದು ಕಾಡೆಲ್ಲ ಗಾಢಾಂಧಕಾರ! ಕಾರ್ಗತ್ತಲೆ! ಅದರ ಮರುದಿನದ ರಾತ್ರಿ ಸಣ್ಣಗೆ ಬೆಳ್ಳಿಯ ಸರಿಗೆಯಂತೆ ಮತ್ತೆ ಮೂಡಿದವನು ಚಾಪೆ ಬಿಡಿಸಿದಂತೆ ದೊಡ್ಡವನಾಗುತ್ತಾ ಬಂದು ಕೊನೆಗೊಂದು ದಿನ ಪೂರ್ಣಾವತಾರಿಯಾಗುತ್ತಾನೆ. ಅಂದು ಕಾಡೆಲ್ಲ ಬೆಳ್ಳಂಬೆಳಕು! ತರುಲತೆಗಳ ನಡುವಲ್ಲಿ ತೂರಿಕೊಂಡಾದರೂ ಬಂದು ನೆಲಮುಟ್ಟುವ ಹಾಲು ಬೆಳುದಿಂಗಳು! ಹೀಗೆ ಚಂದ್ರ ಉರುಟಾಗುವುದಕ್ಕೂ ಪೂರ್ತಿಯಾಗಿ ಕಾಣೆಯಾಗುವುದಕ್ಕೂ ನಡುವಿನ ಅವಧಿ ಕರಾರುವಾಕ್ಕಾಗಿ ಒಂದೇ ರೀತಿ ಇದೆ ಎನ್ನುವುದು ಮನುಷ್ಯನಿಗೆ ನಿಧಾನವಾಗಿ ತಿಳಿಯುತ್ತ ಹೋಯಿತು. ಬದುಕೆಲ್ಲ ಕಾಡಲ್ಲೇ ಕಳೆದುಹೋಗುತ್ತಿದ್ದುದರಿಂದ, ಚಂದ್ರನ ಇಂಥ ಬದಲಾವಣೆಗಳನ್ನು ಗುರುತು ಮಾಡಿಟ್ಟುಕೊಳ್ಳುವುದು ಅವನಿಗೆ ಮುಖ್ಯವೂ ಆಗಿತ್ತು. ಚಂದ್ರ ಮಾಯವಾಗುವ ದಿನವನ್ನು ಅವನು ಅಮವಾಸ್ಯೆ ಎಂದು ಕರೆದ. ಪೂರ್ತಿಯಾಗಿ ಬೆಳಗುವ ದಿನವನ್ನು ಹುಣ್ಣಿಮೆ ಎಂದ. ಅಮವಾಸ್ಯೆಗಳಂದು ಕಾಡಿನಲ್ಲಿ ಅಲೆದಾಡುವುದನ್ನು ತಪ್ಪಿಸಿಕೊಂಡ. ಹುಣ್ಣಿಮೆಯ ಬೆಳಕಲ್ಲಿ ಗುಂಪು ಸೇರಿ ಕುಣಿಯುತ್ತ ಹಾಡು ಹಾಡುವ, ಊಟ ಬೇಯಿಸುವ ಕಾರ್ಯಕ್ರಮಗಳನ್ನು ಇಟ್ಟುಕೊಂಡ. ನಾವಿಂದು ಸಂಸ್ಕೃತಿ ಎಂದು ಕರೆಯುವ ಎಲ್ಲವೂ ಹೀಗೆ ನಿಧಾನವಾಗಿ ಕಣ್ಣುಬಿಟ್ಟವು. ಮತ್ತಷ್ಟು ಓದು »

19
ಜುಲೈ

ಸಿಟಿಯೊಂದು ಸ್ಮಾರ್ಟ್ ಆಗುವುದು ಯಾವಾಗ?

– ರಾಘವೇಂದ್ರ ಸುಬ್ರಹ್ಮಣ್ಯ

smart-city-india

ಮೊನ್ನೆ ಈ ವೆಂಕಯ್ಯನವರ ಗಲಾಟೆ ನಡೆಯುತ್ತಿರುವಾಗ ಯಾರೋ ಸ್ನೇಹಿತರು ವೆಂಕಯ್ಯ ಮಾಡಿದ ಅನ್ಯಾಯ ನೋಡಿ ಅಂತಾ ಪಕ್ಕದಲ್ಲಿರುವ ನ್ಯೂಸ್ ಕ್ಲಿಪ್ಪಿಂಗಿನ ಚಿತ್ರವೊಂದನ್ನು ಹಾಕಿದರು. ಆ ವಾದ ವಿವಾದ ಎಲ್ಲಾ ಮುಗಿದ ಮೇಲೂ, ಅದೊಂದು ಚಿತ್ರ ನನ್ನ ತಲೆಯಲ್ಲುಳಿದು ಬಿಡ್ತು. ವೆಂಕಯ್ಯ ಬದಿಗೆ ಹೋಗಯ್ಯ ಅಂತಾ ತಳ್ಳಿದ್ರೂ ಆ ಚಿತ್ರ ಹೋಗ್ಲಿಲ್ಲ.

ಆ ಚಿತ್ರದಲ್ಲಿದ್ದ ವಿಷಯ “ರಾಜ್ಯದ ಯಾವ ನಗರವೂ ಸ್ಮಾರ್ಟ್ ಸಿಟಿಯಾಗೋದಿಲ್ವಂತೆ” ಅನ್ನೋದು. ಆ ಸುದ್ಧಿಗೆ ನನಗೆ ಬೇಸರವಾಗ್ಲಿಲ್ಲ. ಆದರೆ ಅಲ್ಲಿ ಕೆಳಗಿರೋ ಚಿತ್ರ ನೋಡಿ ಬೇಸರವಾಯ್ತು. Infact, ಕರ್ನಾಟಕದ ನಗರ ಸ್ಮಾರ್ಟ್ ಸಿಟಿಯಾಗುವುದು ಅಂದ್ರೆ ಈ ಚಿತ್ರದಲ್ಲಿರೋವಂತೆ ಆಗೋದು ಅಂತಾದ್ರೆ, ಆ ಅವಕಾಶ ಕರ್ನಾಟಕದ ನಗರವೊಂದಕ್ಕೆ ತಪ್ಪಿದ್ದಕ್ಕೆ ಸಂತೋಷವೇ ಆಯ್ತು. ಯಾಕಂದ್ರೆ ಆ ಚಿತ್ರದಲ್ಲಿದ್ದದ್ದು ಬರೀ ದೊಡ್ಡ, ಎತ್ತರದ ಕಟ್ಟಡಗಳು. ಬಿಟ್ರೆ, ಫೈ ಓವರ್ ಮೇಲೆ ಇನ್ನೊಂದು ಫೈ ಓವರ್ರಿನ ಮೇಲೆ ಮತ್ತೊಂದು ಫ್ಲೈ ಓವರ್. ನಮಗೆ ನಮ್ಮ ಸರ್ಕಾರಗಳು, ಮಾಧ್ಯದವರು ಹಿಡಿಸಿರೋ ಈ ಸ್ಮಾರ್ಟ್ ಸಿಟಿಯ ಹುಚ್ಚು ನೋಡಿ ತಲೆಕೆಟ್ಟು ಹೋಯ್ತು. ಆಮೇಲೆ ಸ್ವಲ್ಪ ಹೊತ್ತಿನ ಮೇಲೆ ಅನ್ನಿಸ್ತು, ಇದು ಹುಚ್ಚಲ್ಲ. ಬರೀ ತಪ್ಪು ಮಾಹಿತಿ, ತಪ್ಪು ಗ್ರಹಿಕೆಯಷ್ಟೇ ಅಂತಾ. ಹೆಚ್ಚು ಯೋಚಿಸಿದಷ್ಟು ಆ ಅನಿಸಿಕೆ ಸರಿ ಅನ್ನಿಸ್ತಾ ಹೋಯ್ತು. ಹಾಗೆಯೇ ನಮ್ಮಲ್ಲೇ ಕೆಲ ಜನ ಮನಗೆ ಹಿಡಿಸಿರುವ ಈ ಸನ್ನಿ ಎಂತದ್ದು ಅಂತಾ ಕಣ್ಣಮುಂದೆ ಹರಿದಾಡಲು ಶುರುವಾಯ್ತು. ಮತ್ತಷ್ಟು ಓದು »

6
ಜುಲೈ

ಜನರಲ್ ತಿಮ್ಮಯ್ಯ

– ಸಿ. ರವಿ ಕುಮಾರ್

gen_k_s_thimayyaಒಂದು ದಿನ ನನ್ನ ತಂದೆಯವರು ತಮ್ಮ ಬಳಿ ಇದ್ದ ಮಿಲಿಟರಿ ಇತಿಹಾಸ ಈ ಒಂದು ಘಟನೆಯನ್ನು ತಿಳಿಸಿದರು. ಅದನ್ನು ಕೇಳಿದ ಮೇಲೆ ಬಹುಶಃ ನಮ್ಮ ಅಂದಿನ ಪ್ರಧಾನಿ ನೆಹರುರವರು ಈ ವ್ಯಕ್ತಿಯ ಅನುಭವವನ್ನು ಬಳಸಿಕೊಂಡಿದ್ದರೆ 1962ರ ಚೇನದೊಡನೆ ನಡೆದ ಯುದ್ಧದ ಗತಿ ಬದಲಾಗುತ್ತಿತ್ತೊ ಏನೊ? `ಅಪ್ಪಣೆ ಮೀರಿ ತಿಮ್ಮಯ್ಯ ಗೆದ್ದಾಗ’ ಎರಡನೇ ಮಹಾಯುದ್ಧದ ಮಧ್ಯಕಾಲ. ಜಪಾನಿ ಪಡೆಗಳು ಬರ್ಮಾ ದೇಶದಲ್ಲಿ ಹೊಕ್ಕು ಎತ್ತೆತ್ತಲೂ ಹಬ್ಬಿದ್ದವು. ಇರಾವತೀ ನದಿಯ ಕಣಿವೆ ಜಪಾನೀಯರ ವಶವಾಗಿ ಬ್ರಹ್ಮಪುತ್ರಾ ಕಣಿವೆಯೀಗ ಅವರ ತೋಪುಗಳ ಗರ್ಜನೆಯಿಂದ ಪ್ರತಿಧ್ವನಿಸುತ್ತಿತ್ತು. ಬ್ರಿಟಿಶ್ ಸಾಮ್ರಾಜ್ಯವಾದದ ಪರಕ್ರಮ ಸೂರ್ಯ ಅಕಾಲದಲ್ಲೇ ಅಸ್ತಂಗತನಾಗಿದ್ದ. ಬೆಟ್ಟದ ಒಂದು ಕೋಡಿನಲ್ಲಿ ಇನ್ನೂರೈವತ್ತು ಜಪಾನೀ ಸೈನಿಕರು ಕಂದಕ ತೋಡಿ ಬಲವಾಗಿ ತಳವೂರಿದ್ದರು. ಆ ಶೃಂಗದ ಕೆಳಗೆ ಕಡಿದಾದ ಬೆಟ್ಟದ ಗೋಡೆಗೆ ಅಂಟಿಕೊಂಡು ಭಾರತ ಸೈನ್ಯದ ಕುಮಾಂವ್ ರೆಜಿಮೆಂಟಿನ ಜವಾನರು ಟೆಂಟ್ ಹಾಕಿದ್ದರು. ಎರಡು ಸೈನ್ಯದ ಸೈನಿಕರು ತಮ್ಮ ತಮ್ಮ ನೆಲೆಗಳನ್ನು ಭದ್ರಪಡಿಸಿಕೊಂಡು ಮುನ್ನುಗುವ ದಾರಿಯನ್ನು ಯೋಚಿಸುತ್ತಿದ್ದವು. ಮತ್ತಷ್ಟು ಓದು »

30
ಜೂನ್

ಪ್ರತಿಭಾ ಪಲಾಯನ

-ಮಯೂರ ಲಕ್ಷ್ಮೀ

artಅದೊಂದು ಕಾಲದಲ್ಲಿ ನಳಂದಾ, ತಕ್ಷಶಿಲಾ ಮುಂತಾದ ವಿಶ್ವವಿಖ್ಯಾತ ವಿದ್ಯಾಲಯಗಳಿಂದ ಪ್ರಸಿದ್ಧಿಹೊಂದಿ ಎಲ್ಲೆಡೆಯಿಂದ ಎಲ್ಲರನ್ನೂ ಆಕರ್ಷಿಸಿ ಜ್ಞಾನದೇಗುಲವೆನಿಸಿದ್ದ ಭಾರತ ದೇಶವು ತನ್ನ ಹಿಂದಿನ ವೈಭವಗಳನ್ನು ಮರೆತುಹೋಗುವ ಸ್ಥಿತಿ ತಲುಪಿದ್ದಾದರೂ ಏಕೆ? ಯಾವುದೇ ಒಂದು ದೇಶವು ಆರ್ಥಿಕವಾಗಿ ಸಧೃಢವೆನಿಸಿಕೊಳ್ಳುವುದು ದೇಶದ ಬೆನ್ನೆಲುಬಾದ ಯುವಶಕ್ತಿಯಿಂದಾ ಮಾತ್ರ! ಜಗತ್ತಿಗೆ ಅರಿವು ನೀಡುವ ಜ್ಞಾನದೇಗುಲವೆನಿಸಿದ್ದ ಭಾರತ ಮೆಕಾಲೆಯ ಆಗಮನದಿಂದ ತನ್ನ ಮೌಲ್ಯಾಧರಿತ ಶಿಕ್ಷಣ ವ್ಯವಸ್ಥೆಯನ್ನೇ ಕಳೆದುಕೊಂಡಿತು. ಭಾರತವು ವಿಶ್ವಮಾನ್ಯವೆನಿಸಿದ್ದು ತನ್ನ ಜ್ಞಾನ-ವಿಜ್ಞಾನ, ತಂತ್ರಜ್ಞಾನಗಳಿಂದ ಪ್ರಪಂಚಕ್ಕೆ ನೀಡಿದ ಕೊಡುಗೆಯಿಂದ. ಮತ್ತಷ್ಟು ಓದು »

28
ಜೂನ್

ಗಾಂಧಿ ತಾತಾ ಯಾಕಾಗಿ ಹೀಗೆಲ್ಲಾ ಮಾಡಿದಿರಿ?

– ಶ್ರೀಕಾಂತ್ ಆಚಾರ್ಯ

mahatma_gandhiನೇರಾ ನೇರಾ ವಿಷಯಕ್ಕೆ ಬರುತ್ತೀನಿ. ಕೆಲವಷ್ಟು ವಿಷಯಗಳಲ್ಲಿ ಗಾಂಧೀ ತಾತಾ ತುಂಬಾ ಇಷ್ಟವಾಗಿ ಬಿಡುತ್ತಾರೆ. ಆದರೆ ಉಳಿದ ಕೆಲವು ವಿಷಯಗಳಲ್ಲಿ ನನಗೆ ಗಾಂಧೀಜಿಯ ಬಗ್ಗೆ ಒಳ್ಳೆಯ ಅಭಿಪ್ರಾಯಗಳಿಲ್ಲ. ಅಷ್ಟಕ್ಕೂ ನನ್ನ ಅಭಿಪ್ರಾಯ ಇಲ್ಲಾರಿಗೂ ಅನಿವಾರ್ಯವಲ್ಲ ಬಿಡಿ. ಹೇಳಿದ್ದೆಲ್ಲವನ್ನ ಸುಖಾಸುಮ್ಮನೆ ನಂಬಿ ಬಿಡಿ ಅಂತ ನಿಮ್ಮಲ್ಲಿ ಅಂಗಾಲಾಚುವುದೂ ಇಲ್ಲ. ಸಮಾನ ಮನಸ್ಕರಿದ್ದರೆ ಓದಿಕೊಳ್ಳಬಹುದು. ಹೌದು ಅಂತನ್ನಿಸಿದರೆ ಮಾತ್ರ ತಾಕಲಾಟಕ್ಕೆ ಎಡತಾಕುತ್ತೀರಿ. ಯೋಚನೆಗೆ ಬೀಳುತ್ತೀರಿ. ಅಖಂಡ ಭಾರತದ ಕೋಟ್ಯಾಂತರ ಜನರ ಹೃದಯ ಹೊಕ್ಕಿ ಕುಳಿತ ಗಾಂಧೀಜಿಯನ್ನ ಕೆಲವೊಂದು ಕಾರಣಕ್ಕೆ ದ್ವೇಷಿಸುತ್ತಿದ್ದೀನಿ ಅಂದರೆ ಬಹುಷಃ ನೀವೂ ತಕರಾರು ಮಾಡಲಿಕ್ಕಿಲ್ಲ(ವಿಷಯ ಬಲ್ಲವರಿಗೆ ಮಾತ್ರ) ಅಲ್ಲವಾ? ಮತ್ತಷ್ಟು ಓದು »

27
ಜೂನ್

ದೇಹದಲ್ಲಿ ಏಳು ಗುಂಡುಗಳನ್ನು ಹೊತ್ತಿದ್ದರೂ ‘ಕತ್ತೆ ಒದೀತು’ ಎಂದು ನಕ್ಕ ಮಿಲಿಟರಿ ಕ್ರಾಸ್ ವೀರ ಸ್ಯಾಮ್ ಮಾಣಿಕ್ ಷಾ

– ಸಂತೋಷ್ ತಮ್ಮಯ್ಯ

Field_Marshal_SAM_Manekshaw

೧೯೭೧ರ ಎಪ್ರಿಲ್ ನ ಒಂದು ತಿಂಗಳು. ಪ್ರಧಾನಮಂತ್ರಿಗಳು ಅಂದು ಕಂಡಾಪಟ್ಟೆ ತಲೆಬಿಸಿಯಲ್ಲಿದ್ದರು. ಸಿಟ್ಟಾಗಿದ್ದರು. ಏಕೆಂದರೆ ಪ.ಬಂಗಾಳ, ತ್ರಿಪುರಾ ಮತ್ತು ಅಸ್ಸಾಂಗಳಲ್ಲಿ ಪೂರ್ವ ಪಾಕಿಸ್ಥಾನದಿಂದ ನಿರಾಶ್ರಿತರ ಪ್ರವಾಹವೇ ಹರಿಯಲಾರಂಭಿಸಿತ್ತು. ಪೂರ್ವ ಪಾಕಿಸ್ಥಾನವೆಂಬ ಕುರದ ವ್ರಣ ಭಾರತಕ್ಕೂ ವ್ಯಾಪಿಸುತ್ತಾ ಬರುತ್ತಿತ್ತು. ಪ್ರಧಾನಮಂತ್ರಿಗಳು ಮಾಡಬಹುದಾದವುಗಳನ್ನೆಲ್ಲಾ ಮಾಡಿಯಾಗಿತ್ತು. ನಿರಾಶ್ರಿತರ ಸಮಸ್ಯೆಯನ್ನು ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಕೂಡಾ ಎತ್ತಿಕೊಂಡುಹೋದರು. ಎಲ್ಲರೂ ಇದು “ಭಾರತ ಮತ್ತು ಪಾಕಿಸ್ಥಾನಗಳ ಆಂತರಿಕ ಸಂಗತಿ” ಎಂದು ತಮಾಷೆ ನೋಡಲು ಕೂತಿತು. ಸಮಸ್ಯೆಯನ್ನುನಿಭಾಯಿಸುವ ಕೊನೆಯ ಪ್ರಯತ್ನ ಎಂಬಂತೆ ಪ್ರಧಾನಮಂತ್ರಿಗಳು ಕ್ಯಾಬಿನೆಟ್ ಮತ್ತು ಹಿರಿಯ ಮಿಲಿಟರಿ ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ಸಭೆಯನ್ನು ಅಂದು ಕರೆದಿದ್ದರು. ಮತ್ತಷ್ಟು ಓದು »

14
ಜೂನ್

ಖಾಸಗಿ ಕಾಲೇಜಿನ ಕಲಿಕೆ- ಬರೀ ಗಿಲೀಟಿನ ಬುಡುಬುಡಿಕೆ

Untitled56

ಶ್ರದ್ಧಾಹಿ ಪರಮಾಗತಿಃ-
● ನನ್ನ ಆಟೋ ಮಾರಿದರು ಮಗಳಿಗೆ ಪ್ರವೇಶ ದೊರೆಯಲಿಲ್ಲ
● ೯೫% ಅಂಕ ಪಡೆದರೂ ಕಾಲೇಜಿನಲ್ಲಿ ಸೀಟಿಲ್ಲ
● ಹಿಂದೂ ಧರ್ಮದ ಮಕ್ಕಳಿಗೆ ಪ್ರವೇಶವಿಲ್ಲ; ನಮ್ಮ ಕೋಮಿನ ಮಕ್ಕಳಿಗೆ ಆದ್ಯತೆ
● ಪೋಷಕರು ಭರಿಸಲಾಗದಷ್ಟು ಕಾಲೇಜುಗಳು ದುಬಾರಿ
● ದುಬಾರಿ ಕಾಲೇಜಿಗೆ ಸೇರಿಸಿದರೂ ಟ್ಯೂಷನ್ ಹೇಳಿಸಲೇಬೇಕು – ಸಾವಿರಾರು ರೂಪಾಯಿಗಳ ಧಂಧೆ
● ದುಬಾರಿ ಕಾಲೇಜಿಗೆ ಸೇರಿಸುವ ಕುಟುಂಬಗಳಲ್ಲಿ ಆದಾಯದ ಬಹು ಭಾಗ ಶುಲ್ಕಕ್ಕೆ ಹೋಗುವ ಕಾರಣ ಜೀವನದ ಹಲವು ಅಗತ್ಯತೆಗಳನ್ನು ಕಡಿತಗೊಳಿಸಿಕೊಂಡು ಮನೆಯ/ಮನಸ್ಸಿನ/ದೇಹದ ಆರೋಗ್ಯಕ್ಕೆ ಸಂಚಾಕಾರ ತಂದುಕೊಳ್ಳುವ ಸಾಧ್ಯತೆ ಹೆಚ್ಚು.
● ಇಷ್ಟೆಲ್ಲಾ ಕಷ್ಟ ಪಡುವ ತಾಯಿತಂದೆಯರಿಂದ ಅಥವಾ ಮಗುವೇ ಸಂವೇದನಾಶೀಲನಾಗಿದ್ದರೆ ಅದಕ್ಕೆ ಕಷ್ಟಗಳು ತಿಳಿದು ನೇರ ಅಥವಾ ಪರೋಕ್ಷ ಒತ್ತಡಕ್ಕೆ ಒಳಗಾಗಿ ವಿದ್ಯಾಭ್ಯಾಸಕ್ಕೆ ಆಡ್ದಿಯಾಗಬಹುದು.
● ಇದು ಒಂದು ಆರೋಗ್ಯಕರ ಬೆಳವಣಿಗೆ ಅಲ್ಲ.
● ಕ್ರಿಶ್ಚಿಯನ್ ಅಥವಾ ಮುಸಲ್ಮಾನರ ವಿದ್ಯಾ ಸಂಸ್ಥೆಗಳಿಗೆ ಸೇರಿ ಅಲ್ಲಿ ಹೂವು ಮುಡಿಯುವಂತಿಲ್ಲ, ಹಣೇ ಕುಂಕುಮ ಇಡುವಂತಿಲ್ಲ, ಸೀರೆ ಉಡುವಂತಿಲ್ಲ, ಬಳೆ ತೊಡುವಂತಿಲ್ಲ ಎಂಬ ತಲೆಹರಟೆ ಅಸಹಿಷ್ಣತೆಯ ಪರಮಾವಧಿಯ ನಿಷೇಧಗಳನ್ನು ಅನುಭವಿಸಬೇಕು. ಇನ್ನು ಲವ್ ಜಿಹಾದು/ಪ್ರೇಮಕ್ಕೆ ಒತ್ತಡ ಹಾಕುವುದು ಇತ್ಯಾದಿ ಸಮಸ್ಯೆಗಳು ಸೇರಿ ‘ಕಾಸು ಹಾಳು ತಲೆಯು ಬೋಳು’ ಎಂಬ ಗಾದೆಯಂತೆ ಆಗುವುದೊಂದು ಅಭಾಸ.
ಈ ಸಮಸ್ಯೆಗಳು ಎಂದಿಗೂ ಇದ್ದಂತಹವೇ.ಆದರೆ ಇತ್ತೀಚೆಗೆ ಅದರ ವ್ಯಾಪ್ತಿ, ಗಹನತೆ ಹೆಚ್ಚಾಗಿದೆ. ಮತ್ತಷ್ಟು ಓದು »

8
ಜೂನ್

ಸಾಮಾಜಿಕ ಪ್ರಜ್ಞೆ ಮತ್ತು ನಾವು

-ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ

logo_world_conferenceಒಮ್ಮೆ ಹೀಗಾಯ್ತು, ಮನೆಗೆ ಬರುತ್ತಿರುವಾಗ ದಾರಿಯಲ್ಲಿ ನನ್ನ ಸ್ನೇಹಿತ ಜಗಳವಾಡಿದ. ಅವನ ಜಗಳಕ್ಕೂ ಕಾರಣವಿತ್ತು. ಮನೆಕಟ್ಟಿಸುತ್ತಿದ್ದ ಯಜಮಾನರೊಬ್ಬರು ರಸ್ತೆ ಬದಿಯ ಚರಂಡಿಗೆ ಮರಳು, ಜಲ್ಲಿಕಲ್ಲುಗಳನ್ನು ತುಂಬಿಬಿಟ್ಟಿದ್ದರು. ಕೊಳಚೆ ನೀರು ಹರಿದು ಹೋಗದೆ ಚರಂಡಿ ತುಂಬಿ ನಿಂತಿತ್ತು. ಅಂಥದ್ದೊಂದು ಘಟನೆ ಅವನ ಆಕ್ರೋಶಕ್ಕೆ ಕಾರಣವಾಗಿತ್ತು. ಚರಂಡಿಯಲ್ಲಿ ತುಂಬಿರುವ ಮರಳು ಮತ್ತು ಜಲ್ಲಿಕಲ್ಲುಗಳನ್ನು ಕೂಡಲೇ ತೆಗೆದುಹಾಕುವಂತೆ ಅಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರಿಗೆ ಹೇಳಿದ. ಅಲ್ಲೇ ಸಮೀಪದಲ್ಲಿ ನಿಂತಿದ್ದ ಯಜಮಾನರು ಮನೆ ಕೆಲಸ ಪೂರ್ಣಗೊಳ್ಳುವವರೆಗೆ ಅದು ಸಾಧ್ಯವಿಲ್ಲವೆಂದು ಬಿರುಸಾಗಿಯೇ ನುಡಿದರು. ಮಾತಿಗೆ ಮಾತು ಬೆಳೆಯಿತು. ಗಲಾಟೆ ಕೇಳಿ ಸುತ್ತಮುತ್ತಲಿನ ಮನೆಯವರು ಹೊರಗೆ ಬಂದರು. ಆಶ್ಚರ್ಯವೆಂದರೆ ಯಾರೊಬ್ಬರೂ ನನ್ನ ಗೆಳೆಯನ ಬೆಂಬಲಕ್ಕೆ ನಿಲ್ಲಲಿಲ್ಲ. ಅವನನ್ನೆ ವಿಚಿತ್ರ ಎನ್ನುವಂತೆ ನೋಡಿದರು. ಆದ ತಪ್ಪನ್ನು ತಪ್ಪು ಎಂದು ಹೇಳುವ ಧೈರ್ಯ ಅಲ್ಲಿದ್ದ ಯಾರೊಬ್ಬರಲ್ಲೂ ಇರಲಿಲ್ಲ. ಅಷ್ಟಕ್ಕೂ ಅದು ತಪ್ಪೆಂದು ಜಗಳಕ್ಕೆ ನಿಂತವನು ಅಸಲಿಗೆ ಆ ಕಾಲೋನಿಯವನೂ ಆಗಿರಲಿಲ್ಲ. ಆ ನಿಂತ ನೀರಿನ ಪಕ್ಕದ ಮನೆಯೂ ಅವನದಾಗಿರಲಿಲ್ಲ. ಆದರೂ ಆ ಸಂದರ್ಭ ಅವನಲ್ಲಿನ ಸಾಮಾಜಿಕ ಪ್ರಜ್ಞೆ ಜಾಗೃತಗೊಂಡಿತ್ತು. ತಪ್ಪನ್ನು ಸರಿಪಡಿಸಲು ಪ್ರಯತ್ನಿಸಿದ. ಯಾರು ಸಮಸ್ಯೆಯ ಸಮೀಪದಲ್ಲಿದ್ದರೋ ಅವರಲ್ಲಿ ಮಾತ್ರ ಸಾಮಾಜಿಕ ಸಮಸ್ಯೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿತ್ತು. ಆದರೆ ಅದೇ ಜನ ಅಣ್ಣಾ ಹಜಾರೆ ಹೆಸರಿನ ಟೊಪ್ಪಿಗೆ ಧರಿಸಿ ಭೃಷ್ಟಾಚಾರ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ್ದು ವ್ಯವಸ್ಥೆಯೊಂದರ ವ್ಯಂಗ್ಯಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಮತ್ತಷ್ಟು ಓದು »

6
ಜೂನ್

ಶಂಕರಾಚಾರ್ಯರ ಕುರಿತು ವಿವೇಕಾನಂದರ ಧೋರಣೆಗಳು.

-ಚೈತನ್ಯ ಮಜಲುಕೋಡಿ

shankaracharya_new

ಶಂಕರರ ಕುರಿತು ಹಲವು ಬುದ್ಧಿಜೀವಿಗಳು ಅನುಸರಿಸಿರುವ ಏಕಮುಖ ಮತ್ತು ಛಿದ್ರಾನ್ವೇಷಣ ಮನಸ್ಥಿತಿಯ ಧೋರಣೆಯಲ್ಲಿ ಶಂಕರರೆಂದರೆ ವಿವೇಕಾನಂದರಿಗೆ ಅಲರ್ಜಿ ಎಂಬಂತೆ ಬಿಂಬಿಸಿಬಿಟ್ಟಿದ್ದಾರೆ. ಅಂತಹವರಿಂದಾಗಿ ನಮ್ಮಲ್ಲಿ ಯಾರು ಏನು ಬರೆದಿದ್ದಾರೆಂದು ಪೂರ್ತಿಯಾಗಿ ಅವಲೋಕಿಸುವ ಜಿಜ್ಞಾಸೆಯ ಆಸಕ್ತಿ ಮತ್ತೂ ಕಡಿಮೆಯಾಗಿಬಿಟ್ಟಿದೆ. ಪ್ರಸ್ತುತ ನಮಗೆ ವಿವೇಕಾನಂದರು ತಮ್ಮ ವಿಚಾರಗಳಲ್ಲಿ ಶಂಕರರ ಬಗ್ಗೆ ಯಾವ ರೀತಿಯ ಮನೋಭಾವ ಹೊಂದಿದ್ದರೆಂದು ಸಮಗ್ರವಾಗಿ ಅರಿಯಬೇಕಾದ್ದು ಮುಖ್ಯವಾದ ಕೆಲಸ. ತಮ್ಮ ಪ್ರಖರ ವಿದ್ವತ್ತಿನ ಸ್ವರೂಪದಿಂದ ಇಂದಿಗೂ ಈ ಆಚಾರ್ಯದ್ವಯರು ದೇದೀಪ್ಯಮಾನರಾಗಿ ಬೆಳಗುತ್ತಿದ್ದಾರೆ. ಸಾವಿರವಿವೇಕಾನಂದರು ಸೇರಿದರೆ ಒಬ್ಬರು ಶಂಕರಾಚಾರ್ಯರಾಗಬಹುದು ಎಂದು ಅವರ ಪಟ್ಟಶಿಷ್ಯೆ ಸಿಸ್ಟರ್ ನಿವೇದಿತಾ ಅವರೇ ಒಂದೆಡೆ ಹೇಳಿದ್ದಾರೆ. ಹಾಗಾಗಿ ಸ್ವಾಮಿ ವಿವೇಕಾನಂದರು ಯಾವ ಸಂದರ್ಭಗಳಲ್ಲಿ ಏನೆಲ್ಲ ನುಡಿದಿದ್ದಾರೆ/ಬರೆದಿದ್ದಾರೆ ಎಂಬ ಹಿನ್ನೆಲೆ, ಶಂಕರರ ಬಗ್ಗೆ ಅವರಿಗೆ ದೊರಕಿರಬಹುದಾದ ಅಂಶಗಳು, ಅವರ ವೈಚಾರಿಕ ತುಲನೆ ಮತ್ತು ಧೋರಣೆ, ಶಂಕರಾಚಾರ್ಯರ ಬರವಣಿಗೆ ಮತ್ತು ಜೀವನ ಇವುಗಳ ಬಗ್ಗೆ ವಿವೇಕಾನಂದರ ವಿಚಾರಗಳೇನಿದ್ದವು ಎಂಬುದನ್ನ ನೋಡೋಣ. ಮತ್ತಷ್ಟು ಓದು »

4
ಜೂನ್

“ಚಪ್ಪಟೆ ಪಾದದ ಕನ್ನಡಿಗರು”

-ದೀಕ್ಷಿತ್ ಪೊಯ್ಯೆಕಂಡ
indian-airport“100 ಮೀಟರ್ ಓಟವನ್ನು 15 ಸೆಕೆಂಡುಗಳಲ್ಲಿ ಮುಗಿಸಬಹುದು ಬಿಡು ಮತ್ತೆ ಹಗ್ಗ ಹತ್ತೋದು ಕಂಬ ಹತ್ತೋದು ಕಷ್ಟ ಬಿಡು” ಎಂದು ಮಂಜು ವೈದ್ಯಕೀಯ ಪರೀಕ್ಷೆಯ ಬಳಿಕ ಕೊಚ್ಚಿಕೊಳ್ಳತೊಡಗಿದ. ನನ್ನದೇನೂ ಹೊರತಾಗಿರಲಿಲ್ಲ, “ಅಯ್ಯೋ ಮೆಡಿಕಲ್ ಹೆಂಗೂ ಆಯ್ತು ಇನ್ನು ಫಿಸಿಕಲ್ ಟೆಸ್ಟ್ ಹೇಗೆ ಪಾಸ್ ಮಾಡೊದಪ್ಪಾ” ಅನ್ನುತ್ತಾ ಜೊತೆಗಿದ್ದವರೊಂದಿಗೆ ಮಾತಿಗಿಳಿದೆ. ಮತ್ತೊಬ್ಬನದೂ ಅದೇ ರಾಗ. ನಮಗಿದ್ದ ಸಂತೋಷದ ವಿಷಯವೆಂದರೆ ಆ ದಿನ 8 ಮಂದಿ ಕನ್ನಡಿಗರು ಅಲ್ಲಿದ್ದೆವು. ಸರಿಸುಮಾರು ಮೂರು ಗಂಟೆ ಕಾದ ಬಳಿಕ ಮೆಡಿಕಲ್ ರಿಸಲ್ಟ್ ಬಂತು. ಅದನ್ನು ಹಿಡಿದುಕೊಂಡು ಬಂದ ಏರ್ಪೋರ್ಟ್ ಮುಖ್ಯಸ್ಥ “ನಾನು ರಿಜೆಕ್ಟ್ ಆದ ಅಭ್ಯರ್ಥಿಗಳ ಹೆಸರು ಮಾತ್ರ ಕರೆಯುತ್ತಿದ್ದೇನೆ’ ಎಂದು ಮಲಯಾಳಿ ಮಿಶ್ರಿತ ಆಂಗ್ಲ ಭಾಷೆಯಲ್ಲಿ ಓದತೊಡಗಿದ. ರಮೇಶ್.. ಸುರೇಶ್.. ಹೀಗೆ ಹೆಸರು ಕೇಳಿದಾಗ, ನನಗೇನೋ ಫೈವ್ ಸ್ಟಾರ್ ಜಾಹೀರಾತು ಕೇಳಿದಂತಾಗುತಿತ್ತು. ಉಫ್ ಅದೇನೋ ಎದೆಯಲಿ ಡವ ಡವ! ವರುಷಗಳ ಕನಸು. ಲಿಖಿತ ಪರೀಕ್ಷೆಯ ಬಳಿಕದ ತಯಾರಿ, ಬಯಲಲ್ಲಿ ಪಟ್ಟ ಕಷ್ಟ ಎಲ್ಲವೂ ನೆನಪಾಗುತಿದ್ದವು. ಒಂದೊಂದೇ ಹೆಸರನ್ನು ಕೇಳಿಸಿಕೊಳ್ಳುತ್ತಾ ಹೋದಂತೆ ಸಿಡಿಲು ಬಡಿದಂತೆ ದೀಕ್ಷಿತ್ ಕುಮಾರ್ ಅಂತ ಹೆಸರನ್ನೂ ಕೇಳಿಬಿಟ್ಟೆ. ಆಯ್ತು ನನ್ನ ಕನ್ನಂಬಾಡಿ ಕಟ್ಟೆ ಒಡೆದೋಯ್ತು. ಕಣ್ಣು ಮಂಜಾಗತೊಡಗಿತು. ನನ್ನ ಹೆಸರನ್ನೂ ಹೇಳಿಯೇಬಿಟ್ಟರು. ಈ ಕೆಲಸಕ್ಕಾಗಿ ಇನ್ನಿಲ್ಲದಂತೆ ಪಟ್ಟ ಶ್ರಮವೆಲ್ಲಾ ವ್ಯರ್ಥವಾಗಿ ಹೋಯಿತು. ಮತ್ತೆ ಮಂಜು, ತ್ರಿಭುವನ್ ಹೀಗೇ ಮುಂದುವರಿದಿತ್ತು. ಅಷ್ಟೂ ಕನ್ನಡಿಗರ ಯಾತ್ರೆ ಮುಗಿದಿತ್ತು. ಕಾರಣ ಕೇಳಿದ್ರೆ, ನಮ್ಮದು ಚಪ್ಪಟೆ ಪಾದ ಅಂತೆ ! ಮತ್ತಷ್ಟು ಓದು »