ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

30
ಏಪ್ರಿಲ್

ತಮ್ಮನ ಪುನರ್ಮಿಲನ

image (1)

– ರಂಜನ್ ಕೇಶವ

ಪ್ರತಾಪನು ಚೇತಕ್ ನೊಡನೆ ರಣಭೂಮಿಯಿಂದ ತೆರಳಿದಾಗ ಹಲ್ದೀಘಾಟಿಯ ಯುದ್ಧ ಭಾಗಶಃ ಮುಗಿದಿತ್ತು. ಪ್ರತಾಪನಿಗೆ ಒಂದುಕಡೆ ಯುದ್ಧದಲ್ಲುಂಟಾದ ಸೋಲಿನ ನಿರಾಶೆ ಮತ್ತೊಂದೆಡೆ ಮೊಘಲ್ ಸೇನೆಯನ್ನು ಮುಂದೆ ತಡೆಯುವುದು ಹೇಗೆಂಬ ಚಿಂತೆ. ತರಾತುರಿಯಲ್ಲಿ ತೆರಳಿದ್ದಕ್ಕಾಗಿ ಪ್ರತಾಪನು ಏಕಾಂಗಿಯಾಗಿದ್ದ, ಜೊತೆಗೆ ಯಾವೊಬ್ಬ ಸಹಚರನೋ ಸರದಾರರೋ ಇರಲಿಲ್ಲ. ವ್ಯಾಕುಲಗೊಂಡ ಮನಸ್ಸಿನ ಕಾರಣ ಏಕಾಂಗಿತನದ ಅರಿವೂ ಇಲ್ಲ.
ಹೀಗೆ ಸಾಗುತ್ತಿದ್ದ ಪ್ರತಾಪನನ್ನು ಅವನ ಅರಿವಿಗೆ ಬಾರದಂತೆ ಇಬ್ಬರು ಮೊಘಲ್ ಸವಾರರು ಹಿಂಬಾಲಿಸುತಿದ್ದರು ! ಇಬ್ಬರಲ್ಲೂ ಪ್ರತಾಪನನ್ನು ಕೊಂದು ಷೆಹಂಷಾಹ್ ನಿಂದ ಪುರಸ್ಕಾರ ಪಡೆಯುವ ಆಕಾಕ್ಷೆಯಿತ್ತು.

ಚೇತಕ್ ಕುದುರೆ ತನ್ನ ಸ್ವಾಮಿಯನ್ನು ರಕ್ಷಿಸಲೆಂದು ನೆಲದ ಏರಿಳಿತ, ಕಲ್ಲು ಬಂಡೆ ಮತ್ಯಾವ ಅಡೆತಡೆಗಳಿಗೂ ಸ್ವಲ್ಪವೂ ವೇಗ ಕುಗ್ಗಿಸದೇ ಒಂದೇ ರಭಸದಲ್ಲಿ ಓಡುತ್ತಿತ್ತು. ಕಾಲಿನ ಗಾಯದ ರಕ್ತಸ್ರಾವದಲ್ಲೂ ಯಾವ ಬಾಧೆಯನ್ನೂ ಲೆಕ್ಕಿಸದೇ ಮುನ್ನುಗ್ಗುತ್ತಿತ್ತು. ಹೀಗೆ ಸಾಗುತ್ತಾ ಒಂದು ನದಿಯ ಕವಲನ್ನು ಚೇತಕ್ ಒಂದೇ ನೆಗೆತಕ್ಕೆ ದಾಟಿತು. ಆದರೆ ಆ ಮೊಘಲ್ ಸೈನಿಕರ ಕುದುರೆಗಳಿಗೆ ದಾಟಲಾಗದೆಯೇ ಅಲ್ಲೇ ನಿಂತವು. ಮತ್ತಷ್ಟು ಓದು »

28
ಏಪ್ರಿಲ್

ಶೂರ್ಪನಖಿ, ಆಹಾ! ಎಂಥಾ ಸುಖಿ!

– ನಾಗೇಶ ಮೈಸೂರು

4398694301_230970e9f7

ನಮ್ಮ ಟೀವಿ ಸೀರಿಯಲ್ಗಳಲ್ಲಿ ಬರುವ ಹೆಣ್ಣು ವಿಲನ್ ಪಾತ್ರಗಳಿಗೆಲ್ಲ ಈ ಶೂರ್ಪನಖಿ ಪಾತ್ರವೂ ಸ್ಪೂರ್ತಿಯಿರಬಹುದೇ?

ಬಹುಶಃ ರಾಮಾಯಣದ ಪಾತ್ರಗಳನ್ನು ವಿಶ್ಲೇಷಣೆಗೆ ಪರಿಗಣಿಸಿದಾಗ, ಅದರಲ್ಲೂ ಮಹಿಳೆಯ ಪಾತ್ರದ ವಿಷಯಕ್ಕೆ ಬಂದರೆ ಸೀತೆ, ಕೈಕೆ, ಮಂಡೋದರಿ, ಮಂಥರೆ ಹೀಗೆ ಎಷ್ಟೋ ಪಾತ್ರಗಳು ಕಣ್ಮುಂದೆ ಬಂದು ನಿಲ್ಲುತ್ತವೆ. ಆದರೆ ಅವುಗಳ ನಡುವೆ ಸಾಮಾನ್ಯವಾಗಿ ಯಾರೂ ಪರಿಗಣಿಸದ ಒಂದು ವಿಶೇಷ ಪಾತ್ರವೆಂದರೆ ಶೂರ್ಪನಖಿಯದು. ತೀರಾ ಪ್ರಖರವಾಗಿ ಎದ್ದು ಕಾಣದೆ, ತೆಳುವಾದ ಮೇಲುಸ್ತರದಲ್ಲೇ ಮುಲುಗಾಡುವ ಈ ಪಾತ್ರ ಇಡೀ ರಾಮಾಯಣದಲ್ಲಿ ಬಂದು ಹೋಗುವ ಆವರ್ತಗಳ ಗಣನೆಯಲ್ಲಿ ಕೆಲವೇ ಕೆಲವಾದರೂ, ಆ ಪಾತ್ರ ಇಡೀ ರಾಮಾಯಣ ಕಥನದಲ್ಲುಂಟುಮಾಡುವ ಪರಿಣಾಮ ನೋಡಿದರೆ, ಈ ಪಾತ್ರದ ಕುರಿತು ಅಷ್ಟಾಗಿ ಪರಿಶೀಲನೆ, ವಿಶ್ಲೇಷಣೆ ನಡೆದಿಲ್ಲವೆಂದೇ ಕಾಣುತ್ತದೆ. ಮತ್ತಷ್ಟು ಓದು »

27
ಏಪ್ರಿಲ್

ಮನುಷ್ಯನಾಗುವುದೆಂದರೇನು?

-ರಾಜಕುಮಾರ.ವ್ಹಿ.ಕುಲಕರ್ಣಿ, ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ

36374889-corruption

ಮೊನ್ನೆ ನನ್ನೂರಿನ ಆ ಹಳ್ಳಿಗೆ ಹೋಗಿದ್ದೆ. ಊರ ಹೆಬ್ಬಾಗಿಲಲ್ಲಿ ಪರಿಚಿತರೋರ್ವರು ಭೇಟಿಯಾದರು. ಅದು ಇದು ಮಾತನಾಡುತ್ತ ತಮ್ಮ ಅಣ್ಣನ ಮಗನಿಗೆ ಸರ್ಕಾರಿ ಕೆಲಸ ಸಿಕ್ಕ ವಿಷಯ ತಿಳಿಸಿದರು. ವಿಷಯ ಕೇಳಿ ತುಂಬ ಸಂತೋಷವಾಯಿತು. ಬಾಲ್ಯದಿಂದಲೂ ಬಡತನದಲ್ಲೇ ಬೆಳೆದ ಹುಡುಗ ಪರಿಶ್ರಮ ಪಟ್ಟು ಓದಿ ಡಿಪ್ಲೋಮ ಡಿಗ್ರಿ ಸಂಪಾದಿಸಿದ್ದ. ಆತನ ಅರ್ಹತೆಗೆ ತಕ್ಕುದಾದ ಹುದ್ದೆ ಲೋಕೋಪಯೋಗಿ ಇಲಾಖೆಯಲ್ಲಿ ಲಭಿಸಿತ್ತು. ನನ್ನ ಪರಿಚಿತರು ತಮ್ಮ ಅಣ್ಣನ ಮಗನ ಕುರಿತು ಅಭಿಮಾನದಿಂದ ಮಾತನಾಡಿದರು. `ನೋಡ್ರಿ ಅವ್ನಿಗಿ ಭಾಳ ಛಲೋ ಡಿಪಾರ್ಟ್‍ಮೆಂಟ್ ಸಿಕ್ಕಾದ. ಇನ್ನ ಮುಂದ ಅವ್ನಿಗಿ ಯಾರೂ ಹಿಡಿಯೋ ಹಂಗಿಲ್ಲ. ಯಾಕಂದ್ರ ಮುಂದ ಸುರಿಯೋದೆಲ್ಲ ರೊಕ್ಕದ ಮಳಿನಾ. ಬ್ಯಾಡ ಅಂದ್ರೂ ಮಂದಿ ಮನಿಗಿ ಬಂದು ರೊಕ್ಕ ಕೊಡ್ತಾರ. ರೊಕ್ಕ ಎಣಿಸಾಕ ಅಂವ ಒಂದು ಆಳ ಇಟ್ಕೊಬೇಕಾಗ್ತದ. ಎರ್ಡ ವರ್ಷದಾಗ ಅಂವ ಹ್ಯಾಂಗ ಮನಷ್ಯಾ ಆಗ್ತಾನ ನೋಡ್ರಿ’ ಒಂದು ಕ್ಷಣ ಕಾಲ ಸ್ತಬ್ಧವಾದಂತಾಯಿತು. ಹಾಗಾದರೆ ಅವರ ದೃಷ್ಟಿಯಲ್ಲಿ ಮನುಷ್ಯನಾಗುವುದೆಂದರೇನು. ಸರ್ಕಾರಿ ನೌಕರಿಗೆ ಸೇರಿ ಲಂಚ ಹೊಡೆಯುತ್ತ, ಬಂಗ್ಲೆ ಮೇಲೆ ಬಂಗ್ಲೆ ಕಟ್ಟಿಸಿ, ಹವಾನಿಯಂತ್ರಿತ ಕಾರುಗಳಲ್ಲಿ ಓಡಾಡುತ್ತ ಐಷಾರಾಮಿ ಬದುಕು ನಡೆಸುವಾತನೇ ನಿಜವಾದ ಮನುಷ್ಯ ಎನ್ನುವ ಅವರ ಯೋಚನಾ ಲಹರಿ ಅರೇ ಕ್ಷಣ ನನ್ನನ್ನು ನಾನು ಯಾರು? ಎನ್ನುವ ಯೋಚನೆಗೆ ಹಚ್ಚಿತು. ಒಂದಿಷ್ಟು ಶೃದ್ಧೆ, ನಿಷ್ಟೆ, ಪ್ರಾಮಾಣಿಕತೆಯ ನೆರಳಲ್ಲಿ ಬದುಕು ನೂಕುತ್ತಿರುವ ಜನ ಮನುಷ್ಯರೇ ಅಲ್ಲ ಎನ್ನುವ ಅಭಿಪ್ರಾಯ ಅವರ ಮಾತಿನುದ್ದಕ್ಕೂ ಇಣುಕುತ್ತಿತ್ತು. ಮತ್ತಷ್ಟು ಓದು »

25
ಏಪ್ರಿಲ್

ಸಾಯಣರ ವೇದವ್ಯಾಖ್ಯಾನವು ಏನನ್ನು ತಿಳಿಸುತ್ತದೆ?

– ವಿನಾಯಕ ಹಂಪಿಹೊಳಿ
vedaಸಾಯಣಾಚಾರ್ಯರು ಋಗ್ವೇದಕ್ಕೆ ಭಾಷ್ಯವನ್ನು ಬರೆಯುವಾಗ ಮೊದಲು ವೇದ ಎಂದರೇನು ?, ಅದರ ಲಕ್ಷಣವೇನು ಎಂಬುದರ ಕುರಿತು ಒಂದು ದೀರ್ಘ ಚರ್ಚೆಯನ್ನು ಮಾಡಿದ್ದಾರೆ. ಅದರಲ್ಲಿ ಪೂರ್ವಪಕ್ಷದ ವಾದಗಳನ್ನೆಲ್ಲ ಒಂದೊಂದಾಗಿ ಪರಿಗಣಿಸಿ, ವೇದದ ಲಕ್ಷಣದ ಕುರಿತು ತಮ್ಮ ಸಿದ್ಧಾಂತವನ್ನು ಮಂಡಿಸಿ, ಪೂರ್ವಪಕ್ಷಿಯ ಸಂದೇಹಗಳನ್ನೆಲ್ಲ ಪರಿಹರಿಸುತ್ತಾ ಸಾಗಿದ್ದಾರೆ. ಆ ಚರ್ಚೆ ಏನು ಎಂಬುದು ಮುಖ್ಯವಲ್ಲ. ಆ ಚರ್ಚೆಯಲ್ಲಿ ಪೂರ್ವಪಕ್ಷಿಗಳು ಮತ್ತು ಸಿದ್ಧಾಂತಿಗಳು ವೇದದ ಕುರಿತು ಯಾವ ದೃಷ್ಟಿಕೋಣವನ್ನು ಇಟ್ಟುಕೊಂಡಿದ್ದರು ಎಂಬುದು ಇಲ್ಲಿ ಮುಖ್ಯ. ಹೀಗಾಗಿ ಆ ಚರ್ಚೆಯ ಆದಿಭಾಗದ ಸಾರಾಂಶವನ್ನು ಮಾತ್ರ ನೋಡೋಣ. ಮೊದಲು ಪೂರ್ವಪಕ್ಷದ ವಾದಗಳನ್ನು ಪಟ್ಟಿ ಮಾಡಿ ನಂತರ ಸಾಯಣರು ಕೊಟ್ಟ ವೇದದ ವ್ಯಾಖ್ಯಾನವನ್ನು ನೀಡಲಾಗಿದೆ. ಪೂರ್ವಪಕ್ಷದ ಮತ: ವೇದ ಎನ್ನುವದು ಯಾವದನ್ನು? ವೇದಕ್ಕೆ ಲಕ್ಷಣಗಳೇನಾದರೂ ಇವೆಯೇ? ಪ್ರತ್ಯಕ್ಷ, ಅನುಮಾನ ಮತ್ತು ಆಗಮ ಎಂಬ ಮೂರು ಪ್ರಮಾಣಗಳಿವೆಯಲ್ಲ (ಊಟ ಮಾಡಿದರೆ ಹೊಟ್ಟೆ ತುಂಬುತ್ತದೆ ಎನ್ನುವದಕ್ಕೆ ಪ್ರತ್ಯಕ್ಷ ಪ್ರಮಾಣ, ಹೊಗೆಯಾಡುತ್ತಿರುವಲ್ಲಿ ಬೆಂಕಿಯಿರಬಹುದೆಂಬುದಕ್ಕೆ ಅನುಮಾನ ಪ್ರಮಾಣ, ಯಾಗದಿಂದ ಸ್ವರ್ಗಪ್ರಾಪ್ತಿ ಎಂಬುದಕ್ಕೆ ಆಗಮ ಪ್ರಮಾಣ), ಅವುಗಳಲ್ಲಿ ಕೊನೆಯ ಆಗಮ ಪ್ರಮಾಣವೆಂಬುದೇ ವೇದದ ಲಕ್ಷಣವೆನ್ನಲು ಸಾಧ್ಯವಿಲ್ಲ. ಏಕೆಂದರೆ ಮನ್ವಾದಿ ಸ್ಮೃತಿಗಳೂ ಆಗಮಗಳಾಗಿವೆ. ವೇದ ಎನ್ನುವದು ಸ್ವರ್ಗ ಅಥವಾ ಮೋಕ್ಷಕ್ಕೆ ಸಾಧನ ಎಂಬ ಲಕ್ಷಣವನ್ನೂ ಹೇಳಲು ಸಾಧ್ಯವಿಲ್ಲ ಕಾರಣ ಇತಿಹಾಸ ಪುರಾಣಗಳೂ ಸ್ವರ್ಗ ಅಥವಾ ಮೋಕ್ಷಕ್ಕೆ ಸಾಧನಗಳಾಗಿರುತ್ತವೆ. ಆಗಮವೇ ವೇದದ ಲಕ್ಷಣ ಎನ್ನುವದು ಅತಿವ್ಯಾಪ್ತಿದೋಷ ಒಳಗೊಂಡಿದೆ. ಬೆಳ್ಳಗಿರುವದು ಹಾಲಿನ ಲಕ್ಷಣ ಎಂದರೆ, ಸುಣ್ಣವೂ ಬೆಳ್ಳಗಿರುವದರಿಂದ, ಈ ಲಕ್ಷಣವಾಕ್ಯವು ಅತಿವ್ಯಾಪ್ತಿದೋಷ (Necessary But Not Sufficient) ಎಂಬ ದೋಷವನ್ನು ಹೊಂದಿರುತ್ತದೆ. ಮತ್ತಷ್ಟು ಓದು »

24
ಏಪ್ರಿಲ್

ಶನಿಯ ಬೆನ್ನೇರಿದ ಕಾಕ, ಇದೆಲ್ಲ ನಾಟಕ ಯಾಕ?

– ರೋಹಿತ್ ಚಕ್ರತೀರ್ಥ

shani-shingnapur_650x400_41460171606ನಮ್ಮ ದೇಶದಲ್ಲಿ ಖರ್ಚಿಲ್ಲದೆ ಪ್ರಸಿದ್ಧಿ ಒದಗಿಸುವ ಎರಡು ಸಂಗತಿಗಳಿವೆ. ಒಂದು ಬುದ್ಧಿಜೀವಿಯಾಗುವುದು, ಇನ್ನೊಂದು ಮಹಿಳಾವಾದಿಯಾಗುವುದು. ಬುದ್ಧಿಜೀವಿಯಾಗಬೇಕಾದರೆ ನೀವು ಸೆಕ್ಯುಲರ್ ಎಂದು (ಏನೆಂದು ಗೊತ್ತಿರದಿದ್ದರೂ) ತೋರಿಸಿಕೊಳ್ಳಬೇಕು. ಹಿಂದೂಗಳನ್ನು, ಅವರ ಆಚರಣೆ, ಪದ್ಧತಿ, ಹಬ್ಬಹರಿದಿನಗಳನ್ನು ಬಯ್ಯಬೇಕು. ಹಿಂದೂ ದೇವರನ್ನು, ದೇವಾಲಯಗಳನ್ನು ಪ್ರಶ್ನಿಸಬೇಕು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ರಿಲಿಜನ್ನುಗಳನ್ನು ಓಲೈಸಬೇಕು. ಮೋದಿಯನ್ನು ತೆಗಳಬೇಕು. ಭಯೋತ್ಪಾದಕರನ್ನು, ನಕ್ಸಲರನ್ನು ಬೆಂಬಲಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಿಮಗೆ ಬೆನ್ನುಮೂಳೆ ಇರಬಾರದು. ಜೊತೆಗೆ, ಅರ್ಥವತ್ತಾದ ಮಾತು, ತರ್ಕಬದ್ಧವಾದ ಚಿಂತನೆ – ಇವೆರಡರ ಬಗ್ಗೆ ನೀವು ಎಂದೆಂದೂ ತಲೆ ಕೆಡಿಸಿಕೊಂಡಿರಬಾರದು. ಹಾಗೆಯೇ, ಮಹಿಳಾವಾದಿಯಾಗುವುದು ಕೂಡ ಸುಲಭ. ಮೊದಲಿಗೆ ಮಹಿಳಾವಾದ = ಪುರುಷದ್ವೇಷ ಎಂಬ ಸಮೀಕರಣ ಬರೆಯಿರಿ. ಮಹಿಳೆಗೆ ಸ್ವಾತಂತ್ರ್ಯ ಬೇಕು ಅನ್ನಿ. ಉದ್ಯೋಗದಲ್ಲಿ, ಸಂಸತ್ತಿನಲ್ಲಿ, ಬಸ್ಸಿನಲ್ಲಿ, ಚಿತ್ರಮಂದಿರದಲ್ಲಿ, ನಡೆದಾಡುವ ರಸ್ತೆಯಲ್ಲಿ – ಹೀಗೆ ಎಲ್ಲೆಲ್ಲೂ ಹೆಣ್ಣಿಗೆ ಸಮಾನತೆ ಬೇಕೆಂದು ಬೊಬ್ಬೆ ಹೊಡೆಯಿರಿ. ಉದ್ಧೇಶವೇ ಇಲ್ಲದೆ ಪ್ರತಿಭಟನೆ ಮಾಡಿದರೂ ಓಕೆ. ವಿರೋಧಿಸದವರಿಗೂ ಧಿಕ್ಕಾರ ಕೂಗಿದರೂ ಓಕೆ. ಒಟ್ಟಲ್ಲಿ ನಿಮ್ಮ ಮಾತು, ಕೂಗಾಟ, ಹಾರಾಟ, ಹೋರಾಟವೆಲ್ಲ ನಾಲ್ಕು ಜನಕ್ಕೆ ಗೊತ್ತಾಗಬೇಕು, ಪತ್ರಿಕೆ ಟಿವಿಗಳಲ್ಲಿ ಬರಬೇಕು. ಮತ್ತು ಇವೆಲ್ಲದರ ಜೊತೆ, ನೀವು, ಮೇಲೆ ಹೇಳಿದ ಬುದ್ಧಿಜೀವಿಯೂ ಆಗಿರಬೇಕಾದ್ದು ಅನಿವಾರ್ಯ. ಎರಡು ವರ್ಷಗಳ ಹಿಂದೆ ಒಂದು ಬುದ್ಧಿಜೀವಿ ಮಹಿಳಾಪರ ಲೇಖಕಿ, “ಮೋದಿಯ ಮುಖ ನೋಡಿದರೇನೇ ಆತ ಸ್ತ್ರೀದ್ವೇಷಿ ಅನ್ನೋದು ಗೊತ್ತಾಗುತ್ತದೆ” ಎಂದಿದ್ದರು. ಇಂಥ ಹೇಳಿಕೆ ಕೊಡುವವರಿಗೆ ಮಹಿಳಾಪರ ಸಂಘಟನೆಗಳಲ್ಲಿ ಒಳ್ಳೆಯ ಬೇಡಿಕೆ ಇದೆ. ಮತ್ತಷ್ಟು ಓದು »

16
ಏಪ್ರಿಲ್

ಬ್ಯಾಟಲ್ ಆಫ್ ಅಸಲ್ ಉತ್ತರ್

– ರಂಜನ್ ಕೇಶವ

a13bb3246cdeb67b1c52ef54fd147bb6ಸೆಪ್ಟಂಬರ್ 6 1965 ರಂದು ಪಾಕಿಸ್ತಾನೀ ಸೇನೆಯನ್ನು ತಡೆಯುವ ಸಲುವಾಗಿ ನಾಲ್ಕನೇ ಗ್ರೆನೇಡಿಯರ್ ಬ್ರಿಗೇಡ್, ಇಚೋಗಿಲ್ ಕಾಲುವೆಯ ಪನ್ನಾ ಸೇತುವೆಯನ್ನು ಆಕ್ರಮಿಸಲು ಕಳುಹಿಸಿರುತ್ತಾರೆ. ಅದು ಸೇನಾನೆಲೆ ದಿಬ್ಬಾಪುರದಿಂದ 11 ಕಿ ಮೀ ದೂರದ ಪ್ರದೇಶ . ಆದರೆ ಪಾಕಿಗಳು ಷೆಲ್ ಧಾಳಿ ಮುಖಾಂತರ ತೀವ್ರವಾಗಿ ಪ್ರತಿಕ್ರಿಯಿಸಿದ್ದರಿಂದ ಭಾರತೀಯ ಪಡೆ ಮುಂದುವರೆದರೂ ಸೇತುವೆಯನ್ನು ದ್ವಂಸಗೊಳಿಸಲಾಗದೇ ಹಿಮ್ಮೆಟ್ಟಬೇಕಾಯಿತು . ಅದೇ ಸಮಯದಲ್ಲಿ ಒಂದು ಗೋರ್ಖಾ ಪಡೆ ಬಲ್ಲನ್ವಾಲಾ ಎಂಬ ಪ್ರದೇಶವನ್ನು ಗೆಲ್ಲಲಾಗದೇ ಹಿಮ್ಮೆಟ್ಟಬೇಕಾಯಿತು . ಮತ್ತೆ ಪ್ರಾರಂಭದ ವಿಫಲತೆಯನ್ನು ಸರಿಪಡಿಸಿಕೊಂಡು ಸೇನಾವ್ಯೂಹವನ್ನು ಪುನರ್ ರಚಿಸಲು ಖೇಮ್ ಖರನ್ ನ ಅಸಲ್ ಉತ್ತರ್ ಎಂಬಲ್ಲಿಗೆ ಬಂದು ಸೇರಿದರು. ಮತ್ತಷ್ಟು ಓದು »

14
ಏಪ್ರಿಲ್

ಬಾಬಾಸಾಹೇಬ್ ಅಂಬೇಡ್ಕರ್ : ಇದ್ದದ್ದು ಇದ್ದ ಹಾಗೆ

– ರೋಹಿತ್ ಚಕ್ರತೀರ್ಥ

images (2)ಇದು ಡಾ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಸಪಾದ ಜನ್ಮಶತಮಾನೋತ್ಸವದ ವರ್ಷ. ಹತ್ತೊಂಬತ್ತನೇ ಶತಮಾನದ ಕೊನೆಯ ದಶಕದಲ್ಲಿ ಹುಟ್ಟಿದ ಅಂಬೇಡ್ಕರ್ ಆ ಕಾಲದ ಅನಕ್ಷರತೆ, ಜಾತಿ ತಾರತಮ್ಯ, ಶೋಷಣೆ, ನಿರುದ್ಯೋಗ, ಸ್ವಾತಂತ್ರ್ಯ ಹೋರಾಟ ಮುಂತಾದ ಎಲ್ಲ ಪರಿಸ್ಥಿತಿಗಳನ್ನೂ ನೋಡಬೇಕಾಯಿತು, ಸ್ವತಃ ಅನುಭವಿಸಬೇಕಾಯಿತು. ಹುಡುಗ ಚೂಟಿ, ಬುದ್ಧಿವಂತ. ಜಾತಿಯ ಕಾರಣವೊಂದೇ ಮುಂದಾಗಿ ಆತನ ಭವಿಷ್ಯವನ್ನು ಕಮರಿಸಬಾರದೆಂಬ ಎಚ್ಚರದಿಂದ ಬ್ರಾಹ್ಮಣ ಗುರು ಮಹಾದೇವ ಅಂಬೇಡ್ಕರ್, ತನ್ನ ಈ ಪ್ರೀತಿಯ ಶಿಷ್ಯನಿಗೆ ಅಂಬಾವಾಡೇಕರ್ ಎಂಬ ಕುಲಸೂಚಕವನ್ನು ತಿದ್ದಿ ಅಂಬೇಡ್ಕರ್ ಎಂಬ ನಾಮಕರಣ ಮಾಡಿದರು. ಅಲ್ಲಿಂದ ಮುಂದಕ್ಕೆ ಹುಡುಗ, ಹುಟ್ಟಿದೂರು ಸತಾರದಲ್ಲಿ ಪ್ರಾಥಮಿಕ ಶಾಲೆ ಮುಗಿಸಿ, ಮುಂಬಯಿಯ ಪ್ರತಿಷ್ಠಿತ ಎಲ್ಫಿನ್‍ಸ್ಟನ್ ಹೈಸ್ಕೂಲು, ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮುಂದುವರೆಸಿ, ಉನ್ನತ ಶಿಕ್ಷಣಕ್ಕಾಗಿ ಅಮೆರಿಕ, ಇಂಗ್ಲೆಂಡ್ ಪ್ರವಾಸಗಳನ್ನು ಮಾಡಿದ್ದೆಲ್ಲ ನಂಬಲಸಾಧ್ಯವೆನಿಸುವ ವಾಸ್ತವ.ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಪಡೆದಾಗ ಅಂಬೇಡ್ಕರರಿಗೆ 26 ವರ್ಷ. ನಂತರದ ಪ್ರಯಾಣ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಡೆಗೆ. ಅಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಜೊತೆಗೆ ಬ್ಯಾರಿಸ್ಟರ್-ಎಟ್-ಲಾ ಎಂಬ ಕಾನೂನು ಪದವಿ ಪಡೆದು, ತನ್ನ 32ನೇ ವಯಸ್ಸಿಗೆ ಡಿಎಸ್‍ಸಿ ಗಳಿಸಿ ಭಾರತಕ್ಕೆ ಮರಳಿದರು. ದಲಿತರ ಹುಡುಗನೊಬ್ಬ ಹೀಗೆ ಅಖಂಡ 28 ವರ್ಷ ವ್ಯಾಸಂಗವೊಂದರಲ್ಲೇ ಮುಳುಗಿ, ವಿದೇಶದ ಹೆಸರುವಾಸಿ ಸಂಸ್ಥೆಗಳಲ್ಲಿ ಡಿಗ್ರಿಯ ಮೇಲೆ ಡಿಗ್ರಿಯನ್ನು ಸಂಪಾದಿಸಿದ ಕತೆ ರೋಮಾಂಚನಗೊಳಿಸುವಂಥಾದ್ದು. ಮತ್ತಷ್ಟು ಓದು »

11
ಏಪ್ರಿಲ್

ಋಗ್ವೇದ ೧೦.೮೫.೧೩ ಅಘಾಸು ಹನ್ಯಂತೇ ಗಾವಃ

– ವಿನಾಯಕ ಹಂಪಿಹೊಳಿ

rigvedaಸ್ವಘೋಷಿತ ಅಭಿನವ ಪ್ರವಾದಿ ಜಾಕೀರ ನಾಯ್ಕರ ಶಿಷ್ಯರೊಂದಿಗೆ ಸ್ವಲ್ಪ ದಿನಗಳ ಹಿಂದೆ ನನ್ನ ಕೆಲವು ಮಿತ್ರರು ಚರ್ಚೆಯೊಂದನ್ನು ನಡೆಸಿದ್ದರು. ಆ ಚರ್ಚೆಯಲ್ಲಿ ನಾನೂ ಭಾಗವಹಿಸಿದ್ದೆ. ಅಲ್ಲಿ ನಮ್ಮ ವಿರೋಧಿಗಳ ವಾದವೊಂದು ನನ್ನ ಗಮನ ಸೆಳೆಯಿತು. ಅಲ್ಲಿ ನಮ್ಮ ವಿರೋಧಿಗಳು “ಋಗ್ವೇದದಲ್ಲಿ ಗೋಮಾಂಸದ ಉಲ್ಲೇಖವಿದೆ. ಮದುವೆಯ ಸಂದರ್ಭದಲ್ಲಿ ಆಕಳುಗಳನ್ನು ಕಡಿಯಲಾಗುತ್ತಿತ್ತು ಎಂಬುದಕ್ಕೆ ಆಧಾರವಿದೆ. ಬೇಕಾದರೆ ಋಗ್ವೇದದ ೧೦ನೇ ಮಂಡಲದ ೮೫ನೇ ಸೂಕ್ತದ ೧೩ನೇ ಋಕ್ಕನ್ನು ನೋಡಿ” ಎಂದು ಹೇಳಿದ್ದರು. ಆ ಋಕ್ಕು ಹೀಗಿತ್ತು.

ಸೂರ್ಯಾಯಾ ವಹತುಃ ಪ್ರಾಗಾತ್ಸವಿತಾ ಯಮವಾಸೃಜತ್ | ಅಘಾಸು ಹನ್ಯಂತೇ ಗಾವೋsರ್ಜನ್ಯೋಃ ಪರ್ಯುಹ್ಯತೇ || ಮತ್ತಷ್ಟು ಓದು »

9
ಏಪ್ರಿಲ್

ಮಧುರೈ ಮೀನಾಕ್ಷಿ

– ರಂಜನ್ ಕೇಶವ

imageಭಯ ಹುಟ್ಟಿಸುವಂತಹ ಬೃಹತ್ ಗಾತ್ರದ ಕಂಬಗಳು. ಅದರಲ್ಲಿ ದೊಡ್ಡ ದೊಡ್ಡ ಗಾತ್ರದ ಸಿಂಹದಂತಿರುವ ರಾಕ್ಷಸನ ಕೆತ್ತನೆಗಳು. ಇಂಥಹ ಸಾಲು ಸಾಲು ಕಂಬಗಳು ದಾರಿಯ ಇಕ್ಕೆಲಗಳಲ್ಲಿ ಇರುತ್ತವೆ. ಮೊದಲಸಲ ನೋಡುವವರಿಗೆ ಇಲ್ಲಿನ ಭವ್ಯ ಕೆತ್ತನೆಗಳ ನೋಟವೇ ಒಮ್ಮೆ ದಿಗಿಲು ಹುಟ್ಟಿಸಬಹುದು. ಮೀನಾಕ್ಷಿ ಮಂದಿರಸಮೂಹಗಳು ಒಂದು ಬೃಹತ್ ಆವರಣದ ಮಧ್ಯೆಯಲ್ಲಿವೆ. ಇದಕ್ಕೆ ಉತ್ತರ, ದಕ್ಷಿಣ, ಪೂರ್ವ – ಪಶ್ಚಿಮ ಎಂಬಂತೆ ನಾಲ್ಕು ಪ್ರವೇಶದ್ವಾರಗಳು. ಒಳ ಪ್ರವೇಶಿಸುತ್ತಿದ್ದಂತೆ ಒಂದು ಚಕ್ರವ್ಯೂಹ ಪ್ರವೇಶಿಸಿದಂತೆ ಅನೇಕ ಮಾರ್ಗಗಳ ದರ್ಶನ. ಮಾರ್ಗಗಳ ಪರಿಚಯವಿಲ್ಲದೆ ಒಳ ಪ್ರವೇಶಿಸಿದರೆ ದಾರಿ ತಪ್ಪಿ ಒಳಗೊಳಗೆಯೇ ವ್ಯರ್ಥ ಸಮಯ ಕಳೆಯುವ ಸಾಧ್ಯತೆಯೇ ಹೆಚ್ಚು. ಮತ್ತಷ್ಟು ಓದು »

8
ಏಪ್ರಿಲ್

ಕಮ್ಯುನಿಸ್ಟರ ರಕ್ತ ಚರಿತ್ರೆಯ ಪುಟಗಳು

– ರಾಕೇಶ್ ಶೆಟ್ಟಿ

ನಕ್ಸಲ್ಇತ್ತೀಚೆಗೆ ಹೈದರಾಬಾದ್ ಯುನಿವರ್ಸಿಟಿಯ ರೋಹಿತ್ ವೆಮುಲ ಎಂಬ ಯುವಕನ ಆತ್ಮಹತ್ಯೆ ಹಾಗೂ ದೆಹಲಿಯ ಜೆ.ಎನ್.ಯು ವಿವಾದಗಳ ಸಮಯದಲ್ಲಿ ಕಾಕಗಳು (ಕಾಂಗ್ರೆಸ್+ಕಮ್ಯುನಿಸ್ಟ್) ಮೋದಿಯವರ ಸರ್ಕಾರ ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿವೆ ಎಂದು ಉಯಿಲೆಬ್ಬಿಸಿದ್ದಾರೆ.ಕರ್ನಾಟಕದಲ್ಲಿರುವ ಇವರ ಅಣ್ತಮ್ಮಂದಿರು ದಿನ ಬೆಳಗಾದರೆ ಟೌನ್ ಹಾಲ್ ಎದುರು ನಿಲ್ಲುತ್ತಿದ್ದಾರೆ. ಆದರೆ,ಯುನಿವರ್ಸಿಟಿ,ವಿದ್ಯಾರ್ಥಿಗಳ ಬಗ್ಗೆ ಮಾತನಾಡುವ ನೈತಿಕತೆ ಕಾಕಗಳಿಗಿದೆಯೇ? ಕರ್ನಾಟಕದ ಕುವೆಂಪು ಯುನಿವರ್ಸಿಟಿಯಲ್ಲಿದ್ದ CSLC ಎಂಬ ಸಂಶೋಧನಾ ಕೇಂದ್ರವನ್ನು ಮುಚ್ಚಿಸಿದ್ದು ಇದೇ ಕಾಂಗ್ರೆಸ್ ಸರ್ಕಾರ,ಮುಚ್ಛಿಸುವಂತೆ ಒತ್ತಡ ಹಾಕಿದ್ದು ಟೌನ್ ಹಾಲ್ ಬುದ್ಧಿಜೀವಿಗಳೇ. ಕಾಂಗ್ರೆಸ್ಸಿನವರ ಇತಿಹಾಸ ಎಲ್ಲರಿಗೂ ತಿಳಿದಿರುವುದೇ.ಆದರೆ ಈ ಕಮ್ಯುನಿಸ್ಟರ ಪುಣ್ಯ ಕಾರ್ಯಗಳ ಬಗ್ಗೆ ಸ್ವಲ್ಪ ಹೇಳಬೇಕು. (ಇದು ಕೇವಲ ಕೇರಳದ ಕಮ್ಯುನಿಸ್ಟರ ಇತಿಹಾಸ.ಬಂಗಾಳದ ಕಾಮ್ರೇಡುಗಳ ಕತೆ ಇದಕ್ಕೂ ದೊಡ್ಡದು)

ಅದು ಸೆಪ್ಟಂಬರ್ ೧೭,೧೯೯೬ರ ದಿನ.ಕೇರಳದ ಪರುಮಲ ಜಿಲ್ಲೆಯ ದೇವಸ್ವೋಮ್ ಕಾಲೇಜಿನ ಕ್ಯಾಂಪಸ್ಸಿಗೆ ಲಗ್ಗೆಯಿಟ್ಟ ಕಮ್ಯುನಿಸ್ಟರು ‘ಅನು,ಸುಜಿತ್,ಕಿಮ್’ ಎಂಬ ಎಬಿವಿಪಿಯ ಕಾರ್ಯಕರ್ತರ ಮೇಲೆ ಮುಗಿಬಿದ್ದರು.ಎಬಿವಿಪಿಯೊಂದಿಗೆ ಗುರುತಿಸಿಕಂಡಿದ್ದೇ ಈ ಹುಡುಗರು ಮಾಡಿದ್ದು ತಪ್ಪು,ಕೇರಳದಲ್ಲಿ ಕಮ್ಯುನಿಸ್ಟರು ನಿಮ್ಮನ್ನು ಸುತ್ತುವರೆದರೆಂದರೇ ಸ್ಟಾಲಿನ್/ಮಾವೋ ಪ್ರೇತಾತ್ಮ ಮೃತ್ಯು ರೂಪದಲ್ಲಿ ನಿಮ್ಮೆದುರು ಬಂದು ನಿಂತಂತೆಯೇ ಸರಿ.ಪ್ರಾಣ ಉಳಿಸಿಕೊಳ್ಳಲು ಓಡಿದ ಈ ಹುಡುಗರು ಪಂಪಾ ನದಿಗೆ ಹಾರಿ ಈಜಲಾರಂಭಿಸಿದ್ದರು.ನೀರಿಗೆ ಬಿದ್ದ ವಿದ್ಯಾರ್ಥಿಗಳ ಮೇಲೆ ಕಮ್ಯುನಿಸ್ಟ್ ಗೂಂಡಾಗಳು ಕಲ್ಲು ತೂರಲಾರಂಭಿಸಿದರು. ಆಚೆ ದಡದಲ್ಲಿ ಬಟ್ಟೆ ಒಗೆಯುತ್ತಿದ್ದ ಹೆಣ್ಣು ಮಕ್ಕಳು ಕಮ್ಯುನಿಸ್ಟರ ಕಲ್ಲಿನೇಟಿಗೆ ತುತ್ತಾಗಿ ಮುಳುಗುತ್ತಿದ್ದ ಹುಡುಗರತ್ತ ಸೀರೆಗಳನ್ನೆಸೆದು ಅವರನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರೇ,ಮಹಿಳಾವಾದದ ಭಾಷಣ ಬಿಗಿಯುವ ಕಾಮ್ರೇಡುಗಳು ಅವರ ಮೇಲೆ ಕಲ್ಲಿನ ಮಳೆ ಸುರಿದರು.ವಿಧಿಯಿಲ್ಲದೇ ಆ ಹೆಣ್ಣುಮಕ್ಕಳು ಪ್ರಾಣ ಉಳಿಸಿಕೊಳ್ಳಲು ಓಡಿದರು.ಇತ್ತ ಹದಿಹರೆಯದ ವಿದ್ಯಾರ್ಥಿಗಳ ಪ್ರಾಣಕ್ಕೆ ಆಜಾದಿ ಸಿಕ್ಕಿತ್ತು.ಸ್ಟಾಲಿನ್ ಘೋರಿಯೊಳಗಿಂದಲೇ ಲಾಲ್ ಸಲಾಂ ಎಂದನೇನೋ. ಕಡೆಗೇನಾಯ್ತು.ಅವರದ್ದೇ ಸರ್ಕಾರ,ಅವರು ಮಾಡಿದ್ದೇ ಕಾನೂನು.ಯಾರೆಂದರೇ ಯಾರಿಗೂ ಶಿಕ್ಷೆಯಾಗಲಿಲ್ಲ.ಇಂದು ಅದೇ ಕಮ್ಯುನಿಸ್ಟರು ವಿದ್ಯಾರ್ಥಿಗಳ ಆಜಾದಿ ಬಗ್ಗೆ ಮಾತನಾಡುತಿದ್ದಾರೆಂದರೇ ಎಂತ ವ್ಯಂಗ್ಯವಲ್ಲವೇ?

ಮತ್ತಷ್ಟು ಓದು »