ಬಡ್ಜೆಟ್ಟೆಂಬ ಬಕಾಸುರ
– ನಾಗೇಶ ಮೈಸೂರು
ಈಗ ನಾನು ಹೇಳ ಹೊರಟಿರುವುದು ವಾರ್ಷಿಕ ಬಡ್ಜೆಟ್ಟಿನ (ಆಯವ್ಯಯ ಲೆಕ್ಕಾಚಾರ) ಕುರಿತು. ಪ್ರತಿ ವರ್ಷದ ಫೆಬ್ರವರಿ ಕೊನೆಗೆ ಸಂಸತ್ತಿನಲ್ಲಿ ಹಣಕಾಸು ಮಂತ್ರಿಗಳು ಮಂಡಿಸುವ ದೇಶದ ಬಡ್ಜೆಟ್ಟಲ್ಲ ಬಿಡಿ. ಸ್ವಲ್ಪ ಪುಟ್ಟ ಮಟ್ಟದಲ್ಲಿ ಕಂಪನಿಗಳಲ್ಲಿ ನಡೆಯುವ ವಾರ್ಷಿಕ ಬಡ್ಜೆಟ್ಟಿನ ಕುರಿತು. ಕಂಪನಿ ಚಿಕ್ಕದೋ, ಮಧ್ಯಮ ಗಾತ್ರದ್ದೋ, ದೊಡ್ಡದೋ ಒಟ್ಟಾರೆ ಒಂದಲ್ಲಾ ಒಂದು ರೀತಿ ಆಯವ್ಯಯದ ಲೆಕ್ಕಾಚಾರ ನಡೆದೇ ನಡೆಯುತ್ತದೆ. ಆಯಾ ಸಂಸ್ಥೆಯ ವಾತಾವರಣಕ್ಕೆ ಸರಿ-ಸೂಕ್ತ ಮಟ್ಟದಲ್ಲಿ.
ತುಂಬ ಸರಳವಾಗಿ ಹೇಳುವುದಾದರೆ ಈ ಇಡೀ ವಾರ್ಷಿಕ ವ್ಯಾಯಾಮ ಎರಡು ಮುಖ್ಯ ಅಂಶಗಳ ಸುತ್ತ ಗಿರಕಿ ಹೊಡೆಯುವ ಪುನರಾವರ್ತನ ಚಕ್ರ. ಮೊದಲಿಗೆ ಸಂಸ್ಥೆಗೆ ಆ ವರ್ಷದಲ್ಲಿ ಏನೆಲ್ಲ ಮೂಲೆಗಳಿಂದ ಬರಬಹುದಾದ ಆದಾಯದ ಅಂದಾಜು ಮಾಡಿಟ್ಟುಕೊಳ್ಳುವುದು. ಮತ್ತೊಂದು ಕಡೆಯಿಂದ ಆ ಆದಾಯ ಮೂಲಕ್ಕೆ ಸಂವಾದಿಯಾಗಿ ಏನೆಲ್ಲ ಖರ್ಚು ವೆಚ್ಚಗಳನ್ನು ನಿಭಾಯಿಸಬೇಕಾಗಿ ಬರುವುದೋ ಎಂದು ಅಂದಾಜು ಲೆಕ್ಕಾಚಾರ ಹಾಕುವುದು. ಇವೆರಡು ಅಂದಾಜುಗಳನ್ನು ಕ್ರೋಢಿಕರಿಸಿದರೆ ಒಟ್ಟಾರೆ ನಿವ್ವಳ ಲಾಭ, ನಷ್ಟಗಳ ಅಂದಾಜು ಸಿಗುತ್ತದೆ. ಜತೆಗೆ ಅದನ್ನು ನಿಭಾಯಿಸಲು ಬೇಕಾದ ಹಣ ಬಲ, ಜನ ಬಲ, ಯಂತ್ರ ಬಲ ಇತ್ಯಾದಿಗಳ ಸ್ಥೂಲ ಅಂದಾಜು ಸಿಗುತ್ತದೆ. ಇದನ್ನು ಗುರಿಯತ್ತ ನಡೆಸುವ ಆಧಾರವಾಗಿಟ್ಟುಕೊಂಡು ತಮ್ಮಲ್ಲಿನ ಹಣಕಾಸು ಮತ್ತಿತರ ಸಂಪನ್ಮೂಲಗಳನ್ನು ಸಮರ್ಥವಾಗಿ ಸರಿಯಾದ ಕಡೆ ವಿನಿಯೋಗಿಸಲು ಪ್ರಯತ್ನಿಸುವುದು ಇದರ ಮೂಲೋದ್ದೇಶ. ಹಣ ತುಟ್ಟಿಯಾದ ಕಾರಣ ಮತ್ತು ಹೇರಳವಾಗಿ ದೊರಕದ ಸಂಪನ್ಮೂಲವಾದ ಕಾರಣ ಇರುವಷ್ಟು ಹಣದ ಸೂಕ್ತ ಸದ್ವಿನಿಯೋಗ ಮಾಡಿಕೊಳ್ಳುವುದು ಅತಿ ಮುಖ್ಯವಾದ ಅಂಶ. ಆಯ ವ್ಯಯದ ಲೆಕ್ಕಾಚಾರ ಈ ದಿಸೆಯಲ್ಲಿ ನಡೆಯಲು ಸಹಕಾರಿಯಾಗುವ ಹೆಜ್ಜೆ ಮತ್ತು ನಿಭಾಯಿಸಿ ಸಂಭಾಳಿಸುವ ಆಯುಧ. ಮತ್ತಷ್ಟು ಓದು 
ವೇಳಿ ನಾಚಿಯರ್
– ರಂಜನ್ ಕೇಶವ
ಅದು ೧೭೭೩ ರ ಸಮಯ. ಕಪಟ ದೊರೆ ಆರ್ಕೋಟ್ ನವಾಬ ಬ್ರಿಟಿಷರೊಂದಿಗೆ ಕೈ ಜೋಡಿಸಿ ಶಿವಗಂಗೆಯ ರಾಜ ಬಡಗನಾಥ ಪೆರಿಯ ಒಡೆಯದೇವರ್ ದೇವಸ್ಥಾನದ ಪ್ರವಾಸದಲ್ಲಿ ನಿಶ್ಯಸ್ತ್ರನಾಗಿದ್ದಾಗ ಧಾಳಿ ಮಾಡಿ ಹತ್ಯೆಗೈದು ಶಿವಗಂಗೆಯನ್ನು ವಶಪಡಿಸಿಕೊಂಡಿದ್ದ. ಇದಾಗಿ ೮ ವರ್ಷಗಳು ಕಳೆದಾಗಿತ್ತು. ಆಗ ಒಡೆಯ ದೇವರ್ ರ ಪತ್ನಿ ವೇಳಿ ನಾಚಿಯರ್ ತಮ್ ಮಂತ್ರಿ ತಾಂಡವ ಪಿಳೈಯ ಸಹಾಯದ ಮೇರೆಗೆ ದಿಂಡಿಗಲ್ ಸಮೀಪದ ವಿರೂಪಾಚಿಪಾಳಯಮ್ ಗೆ ತಪ್ಪಿಸಿಕೊಂಡು ಹೋಗಿರುತ್ತಾರೆ. ಅಲ್ಲಿನ ಪಾಳೇಗಾರ ಗೋಪಾಲನಾಯಕನ ರಕ್ಷಣೆಯಲ್ಲಿ ಕಾಲಕಳೆಯುತ್ತಾ ಕಳೆದುಹೋದ ಶಿವಗಂಗೆಯನ್ನು ಮರಳಿ ಪಡೆಯಲು ಸಕಲ ಸಿದ್ಧತೆಯನ್ನು ನಾಚಿಯರ್ ನಡೆಸುತ್ತಿದ್ದರು. ಇದಕ್ಕಾಗಿ ನೆರೆಹೊರೆಯವರೆಲ್ಲರ ಸಹಾಯವನ್ನು ಜೊತೆಗೂಡಿಸುತ್ತಿದ್ದರು . ಮತ್ತಷ್ಟು ಓದು 
ಸ್ವಾಮಿ ವಿವೇಕಾನಂದರ ಒಂದು ಮರು ಓದು
3, 4, 5 ಜೂನ್ 2016
ಸ್ಥಳ ಮತ್ತು ಆತಿಥ್ಯ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ, ಕರ್ನಾಟಕ
ಸಹ ಸಂಘಟಕರು: Vergelijkende Cultuurwetenschappen (ಗೆಂಟ್ ವಿಶ್ವವಿದ್ಯಾಲಯ, ಬೆಲ್ಜಿಯಂ); SDM Centre for Interdisciplinary Research in Humanities and Social Sciences (ಉಜಿರೆ, ಭಾರತ) ಮತ್ತು India Platform
ಪ್ರವೇಶ: ಉಚಿತ, ಆದರೆ ನೊಂದಾವಣೆ ಖಡ್ಡಾಯ.
ನೊಂದಾಯಿಸಿಕೊಳ್ಳಲು, ತಮ್ಮ ಪೂರ್ಣ ಹೆಸರು, ಸಂಸ್ಥೆ ಮುಂತಾದ ವಿವರಗಳೊಂದಿಗೆ ಇಲ್ಲಿಗೆ ಬರೆಯಿರಿ: revisitingvivekananda@gmail.com
ಕಡೆಯ ದಿನಾಂಕ: 10 ಮೇ 2016.
ಸಮ್ಮೇಳನದ ಚಟುವಟಿಕೆಗಳ ತಾತ್ಕಾಲಿಕ ವೆಳಾಪಟ್ಟಿ ಮತ್ತು ಇಂಗ್ಲಿಷ್ concept noteಗಾಗಿ ನೋಡಿ: http://www.cslc.in/dharma-and-ethics/?page=Dharma_And_Ethics_8 ಮತ್ತಷ್ಟು ಓದು 
ಸಾವರ್ಕರ್ ಬಗ್ಗೆ ಮಾತಾಡುವುದಕ್ಕೂ ಯೋಗ್ಯತೆ ಬೇಕು
-ಡ್ಯಾನಿ ಪಿರೇರಾ
ಹಳ್ಳಿಮೈಸೂರು-573210
23-03-2016 ರಂದು ಭಗತ್ ಸಿಂಗ್, ರಾಜಗುರು ಸುಖದೇವರ ಬಲಿದಾನದ ದಿನ ಸಾಮಾಜಿಕ ಜಾಲತಾಣದಲ್ಲಿ ಇದ್ದಕ್ಕಿದ್ದಂತೆ ಒಂದು ಸುದ್ಧಿ ಕಾಣಿಸಿತು. ಅದು ಕಾಂಗ್ರೆಸ್ಸಿನ ಅಧಿಕೃತ ಐಎನ್ಸಿ ಟ್ವಿಟರ್ ನಲ್ಲಿ ಪ್ರಕಟವಾದ ಸಂದೇಶ ವಾಗಿತ್ತು. ಅದರಲ್ಲಿ ಹೇಳುತ್ತಿರುವುದೇನು?! ಭಗತ್ ಸಿಂಗ್, ಸ್ವಾತಂತ್ರ್ಯವೀರ ಸಾವರ್ಕರ್ರ ಭಾವಚಿತ್ರದಡಿಯಲ್ಲಿ ಒಬ್ಬರನ್ನು ದೇಶಭಕ್ತ ಮತ್ತೊಬ್ಬರನ್ನು ದೇಶದ್ರೋಹಿ ಎಂದು ಟ್ವಿಟ್ ಮಾಡಲಾಗಿರುವ ಸಂದೇಶವದು! ಈ ದೇಶದ ಸ್ವಾತಂತ್ರ್ಯ ಯೋಧರ ಬಗೆಗಿನ ಕಾಂಗ್ರೆಸ್ಸಿನ ಮಾನಸೀಕತೆಯನ್ನು ಬಲ್ಲವರಿಗೆ ಈ ಹೇಳಿಕೆಯನ್ನು ನೋಡಿದಾಗ ಆಶ್ಚರ್ಯವಾಗುವುದಿಲ್ಲವಾದರೂ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲಾತಾಣಗಳಲ್ಲಿ ಒಂದಷ್ಟು ಹುಡುಕಾಟ ನಡೆಸುವ ಯುವ ಮನಸ್ಸುಗಳಿಗೆ ಸ್ವಾತಂತ್ರ್ಯ ಹೋರಾಟಗಾರನೊಬ್ಬನ ಮಾತ್ರವಲ್ಲದೇ ಇಡೀ ಜೀವನವನ್ನೇ ದೇಶ ಮಾತೆಯ ಸೇವೆಗಿಟ್ಟ ಮಹಾನ್ ವ್ಯಕ್ತಿಯ ವ್ಯಕ್ತಿತ್ವ ಪ್ರೇರಣೆ ಕೊಡಬೇಕಾಗುವ ವಿಷಯವಾಗಬೇಕಾದ ಹಿನ್ನೆಲೆಯಲ್ಲಿ ಅವರ ಬಗೆಗಿನ ಕಾಂಗ್ರೆಸ್ ಪಕ್ಷದ ಮಾತು ನಿಜಕ್ಕೂ ತಪ್ಪು ಸಂದೇಶ ಕೊಡುವಂತದ್ದು! ಇವರೇಕೆ ಹೀಗೆ? ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ನಡುವೆ ಭಿನ್ನಾಭಿಯವಿದ್ದೊಡನೇ ಆ ವ್ಯಕ್ತಿ ವಿದ್ರೋಹಿ ಆಗಬಲ್ಲನೇ?! ಮತ್ತಷ್ಟು ಓದು 
ಬಾಜಿರಾಯನ ಉತ್ತರದ ದಂಡಯಾತ್ರೆ
-ರಂಜನ್ ಕೇಶವ
ಬಾಜಿರಾಯನ ಅಶ್ವದಳ ತಲ್ಕತೋರಾ ಎಂಬಲ್ಲಿ ಕೆಂಪುಕೋಟೆ ತೋರುವಲ್ಲೇ ಡೇರೆ ಹಾಕಿತ್ತು. ಮರಾಠರ ಖಡ್ಗಗಳನ್ನು ಹೊತ್ತ ಈ ಅಶ್ವಬಲ ದಿನಕ್ಕೆ ನಲವತ್ತು ಕಿಲೋಮೀಟರ್ ವೇಗದಲ್ಲಿ ಒಂದೇ ಸಮನೇ ಯಾವ ಮುನ್ಸೂಚನೆಯಿಲ್ಲದೇ ಒಂದೇ ರಭಸಕ್ಕೆ ದೆಹಲಿಯ ಸರಹದ್ದನ್ನು ತಲುಪಿತ್ತು. ಇದರ ಸುದ್ದಿ ಹಬ್ಬಿದಂತೆ ಮೊಘಲ್ ಸಿಂಹಾಸನ ಗಡ ಗಡ ನಡುಗಿ ಅಲ್ಲಿಂದ ಕಾಲ್ಕೀಳಲು ದೋಣಿಗಳನ್ನು ಸಿದ್ಧಪಡಿಸಿದರು. ಅದರಲ್ಲೂ ಬಾಜಿರಾಯನ ಸೋಲಿಲ್ಲದ ಜಯಭೇರಿ ಭಾರತದುದ್ದಗಲಕ್ಕೂ ಹಬ್ಬಿತ್ತು. ಅವನ ಪರಾಕ್ರಮವನ್ನೆದುರಿಸುವ ಧೈರ್ಯ ಇವರಿಗೆಲ್ಲಿಂದ ಬರಬೇಕು ಪಾಪ. ಸಾವಿರ ವರ್ಷದ ಹಿಂದೆ ಇಮ್ಮಡಿ ಪುಲಕೇಶಿ ದಕ್ಷಿಣದಿಂದ ಉತ್ತರಕ್ಕೆ ಜಯಭೇರಿ ಬಾರಿಸಿದ್ದ. ಅದರ ನಂತರ ಈಗ ಬಾಜಿರಾಯ ಎರಡನೆಯ ಬಾರಿ ಉತ್ತರ ಭಾರತವನ್ನು ರಕ್ಷಿಸಲು ಕುದುರೆಯೇರಿ ಬಂದಿದ್ದ. ಮತ್ತಷ್ಟು ಓದು 
ಕಾಂಗ್ರೆಸ್-ಕಮ್ಯುನಿಷ್ಟರ ಮೈತ್ರಿ, ಬಂಗಾಳಕ್ಕೆ ಸಿಕ್ಕಿದ್ದು ಕರಾಳ ರಾತ್ರಿ
-ಶ್ರೀನಿವಾಸ ರಾವ್
ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಕೊಲೆ, ದಾಳಿ – ಭಯೋತ್ಪಾದನೆಗೆ ಧರ್ಮವಿಲ್ಲ- ಕಮ್ಯುನಿಷ್ಟರು
26/11ರ ಮುಂಬೈ ದಾಳಿ, ದಾಳಿ ಮಾಡಿದ್ದು ಇಸ್ಲಾಮ್ ನ ಭಯೋತ್ಪಾದಕರು -ಭಯೋತ್ಪಾದನೆಗೆ ಧರ್ಮವಿಲ್ಲ- ಬುದ್ಧಿಜೀವಿಗಳು, ಕಮ್ಯುನಿಷ್ಟರು. ಉಗ್ರ ಯಾಕೂಬ್ ಮೆಮನ್ ಗೆ ಗಲ್ಲು ಶಿಕ್ಷೆ – ಭಯೋತ್ಪಾದನೆಗೆ ಧರ್ಮವಿಲ್ಲ!
ಭಾರತದಲ್ಲಾಗಲೀ ಅಥವಾ ವಿದೇಶಗಳಲ್ಲಿ ಇಸ್ಲಾಂ ನ ಮೂಲಭೂತವಾದಿಗಳು, ಮತಾಂಧ ಉಗ್ರರು ದಾಳಿ ನಡೆಸಿದಾಗಲೆಲ್ಲಾ ’ಭಯೋತ್ಪಾದನೆಗೆ ಧರ್ಮವಿಲ್ಲ’ವೆಂಬ ಹೇಳಿಕೆ (ready made statement) ಸಿದ್ಧವಾಗಿರುತ್ತದೆ. ಇಂಥದ್ದೊಂದು ಹೇಳಿಕೆಯನ್ನು coin(ಪರಿಚಯಿಸಿದ್ದೇ)ಮಾಡಿದ್ದೇ ಈ ಕಮ್ಯುನಿಷ್ಟರು ಹಾಗೂ ಕಮ್ಯುನಿಷ್ಟರ ಕೃಪಾಪೋಷಿತ ಬುದ್ಧಿಜೀವಿಗಳು. ಭಯೋತ್ಪಾದಕರ ದಾಳಿ ನಡೆದಾಗಲೆಲ್ಲಾ ಇವರಿಂದ ಇಂಥಹ ಹೇಳಿಕೆ ಬರುವುದಾದರೂ ಯಾಕೆ ಅಂದುಕೊಂಡಿದ್ದೀರಿ? ಇಸ್ಲಾಮ್ ಗೆ ಪರ್ಯಾಯವಾದ, ಅಂಥಹದ್ದೇ ಒಂದು ಭಯೋತ್ಪಾದನೆಯನ್ನು ಇವರೂ ಪರಿಚಯಿಸಿದ್ದಾರೆ ಆದ್ದರಿಂದ…
ಮತ್ತಷ್ಟು ಓದು 
ನಿಜವಾದ ಹೀರೋಗಳಿವರು
– ಮಯೂರಲಕ್ಷ್ಮೀ.
ಅವರು ಯುವಕರು… ಅಪ್ರತಿಮ ಧೈರ್ಯ, ಸಾಹಸ ಪ್ರವೃತ್ತಿ, ತೇಜಸ್ಸು ಮತ್ತು ಸದ್ಗುಣಗಳು ಅವರಲ್ಲಿತ್ತು.. ಅವರಲ್ಲಿದ್ದ ನಾಯಕತ್ವ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಕುರಿತ ಜ್ಞಾನದಿಂದ ಅವರು ಏನನ್ನಾದರೂ ಸಾಧಿಸಬಹುದಿತ್ತು.. ಅದು ಬ್ರಿಟಿಷರು ಭಾರತೀಯರನ್ನು ದಾಸ್ಯದಲ್ಲಿಟ್ಟು ಆಳುತ್ತಿದ್ದ ಕಾಲ. ಆ ಮೂವರೂ ಯಾವುದೇ ಅಧಿಕಾರದ ಆಮಿಷಕ್ಕೆ ಒಳಗಾಗಲಿಲ್ಲ, ತಾವೇ ವಿಧಿಸಿಕೊಂಡ ದೇಶರಕ್ಷಣೆಯ ಕಟ್ಟುಪಾಡುಗಳನ್ನು ಮೀರದೆ ಆಂಗ್ಲರಿಂದ ದೇಶವನ್ನು ಮುಕ್ತಗೊಳಿಸಲು ಯಾವ ತ್ಯಾಗವನ್ನಾದರೂ ಮಾಡಲು ಸಿದ್ಧರಾದರು. ಅಂತೆಯೇ ತಮ್ಮ ಪ್ರಾಣವನ್ನೂ ದೇಶಕ್ಕಾಗಿ ಅರ್ಪಿಸಿದರು. ಈ ದೇಶ ಎಂದೂ ಮರೆಯದ ಮರೆಯಲಾಗದ ಯುವಚೇತನರು ಈ ಮೂವರು.. ನಮ್ಮ ಇಂದಿನ ಯುವಶಕ್ತಿಗೆ ನಿಜವಾದ ಮಾದರಿ ಇವರೇ…!
ಸೈನಿಕರೊಂದಿಗೆ ಸದೃಢ ಭಾರತ ಸರಕಾರ
– ಅನಿರುದ್ಧ ಎಸ್.ಆರ್ , ಭದ್ರಾವತಿ
“ಈ ಕ್ಷಣದಿಂದಲೇ ಪಾಕಿಸ್ಥಾನ ಅಪ್ರಚೋದಿತ ದಾಳಿ ನಡೆಸುವುದನ್ನು ನಿಲ್ಲಿಸಬೇಕು, ಭಾರತದ ಕಡೆಯಿಂದ ಎಂದಿಗೂ ಸ್ವಯಂ ಪ್ರೇರಿತವಾಗಿ ಗುಂಡಿನ ದಾಳಿ ನಡೆಯುವುದಿಲ್ಲ. ಆದರೆ ನಿಮ್ಮ ಕಡೆಯಿಂದ ಗುಂಡಿನ ದಾಳಿಯೇನಾದರೂ ನಡೆದರೆ, ಆನಂತರ ನಮ್ಮಿಂದ ಹಾರುವ ಗುಂಡುಗಳನ್ನು ಲೆಕ್ಕ ಹಾಕಲು ನಿಮಗೆ ಸಾಧ್ಯವಿಲ್ಲ ” ಹೀಗೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದು ಸರಕಾರದ ಗೃಹ ಸಚಿವರಾದ ರಾಜನಾಥ್ ಸಿಂಗ್.
ಭಾರತದ ಎಡಪಂಥೀಯರು ದೇಶವಿರೋಧದತ್ತೇಕೆ ಸಾಗುತ್ತಾರೆ?
– ವಿನಾಯಕ್ ಹಂಪಿಹೊಳಿ
ಭಾರತದಲ್ಲಿ ಇಂದು ಎಡಪಂಥವು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಸರ್ಕಾರದಿಂದ ಎಲ್ಲ ಸವಲತ್ತುಗಳನ್ನು ಪಡೆದರೂ, ಶಿಕ್ಷಣ ಕ್ಷೇತ್ರದ ಎಲ್ಲ ಆಯಕಟ್ಟಿನ ಜಾಗಗಳನ್ನು ಆವರಿಸಿದರೂ, ಸೋಶಿಯಲ್ ಮೀಡಿಯಾ ಹೊರತುಪಡಿಸಿ ಬಹುತೇಕ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಎಡಪಂಥೀಯ ಚಿಂತನೆಯನ್ನೇ ಪ್ರಸಾರ ಮಾಡಿದ್ದರೂ, ಸರ್ಕಾರೀ ಪ್ರಶಸ್ತಿಗಳಲ್ಲಿ ಬಹುತೇಕ ಪಾಲನ್ನು ಎಡಪಂಥೀಯರಿಗೆ ಮೀಸಲಿಟ್ಟಿದ್ದರೂ, ಹಲವಾರು ಜನಪರ ಸರ್ಕಾರೀ ಯೋಜನೆಗಳು ಎಡಪಂಥೀಯ ಚಿಂತನೆಯನ್ನೇ ಅವಲಂಬಿಸಿಕೊಂಡಿದ್ದರೂ ಅದೇಕೋ ಬಹುತೇಕ ಭಾರತೀಯರು ಮಾತ್ರ ಎಡಪಂಥವನ್ನು ಒಪ್ಪಿಕೊಂಡೇ ಇಲ್ಲ.
ಎಡಪಂಥ ಶಬ್ದವು ಫ್ರೆಂಚ್ ಕ್ರಾಂತಿಯ ಅವಧಿಯಲ್ಲಿ ಹುಟ್ಟಿರುವ ಶಬ್ದವಾದರೂ ಕಾಲಕ್ರಮದಲ್ಲಿ, ಸೋಶಿಯಾಲಿಸಂ, ಕಮ್ಯುನಿಸಂ ಮುಂತಾದ ಕಲ್ಪನೆಗಳನ್ನು ಒಳಗೊಳ್ಳುತ್ತ ಹೋಯಿತು. ಸಮಾಜದಿಂದ ಹೆಚ್ಚು ಪ್ರಯೋಜನ ಪಡೆಯಲಾಗದವರ ಕುರಿತು ವಿಶೇಷ ಕಾಳಜಿಯನ್ನು ತೋರಿಸುವದು ಎಡಪಂಥದ ತತ್ತ್ವ. ಬಹುಸಂಖ್ಯಾತ ರಿಲಿಜನ್ನಿನವರಿಂದ ತುಳಿತಕ್ಕೊಳಗಾಗುವ ಅಲ್ಪಸಂಖ್ಯಾತ ರಿಲಿಜನ್ನಿನ ಜನರ ಕುರಿತು ಕಾಳಜಿ ತೋರಿಸುತ್ತದೆ. ಶ್ರೀಮಂತರಿಂದ ಅನ್ಯಾಯಕ್ಕೊಳಗಾದ ಬಡವರ ಪರವಾಗಿ ನಿಲ್ಲುತ್ತದೆ. ಒಟ್ಟಿನಲ್ಲಿ ಸಮಾಜದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಎಂಬ ಆದರ್ಶ ಸ್ಥಾಪಿಸುವದೇ ಇದರ ಉದ್ದೇಶ.
ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗೆ ಕಾರಣವಾಗುವ ಪ್ರತಿಯೊಂದನ್ನೂ ಎಡಪಂಥವು ವಿರೋಧಿಸುತ್ತದೆ. ಬಹುಸಂಖ್ಯಾತರಿರುವ ರಿಲಿಜನ್ನಿನ ಜನರಿಂದ ಅಲ್ಪಸಂಖ್ಯಾತರ ರಿಲಿಜನ್ನಿನ ಜನರಿಗೆ ಸಾಮಾಜಿಕ ಅನ್ಯಾಯಗಳಾಗುವದರಿಂದ ರಿಲಿಜನ್ನುಗಳನ್ನು ವಿರೋಧಿಸುತ್ತದೆ. ಖಾಸಗೀ ಉದ್ಯಮಗಳಿಂದಾಗಿ ಆರ್ಥಿಕ ಸಂಪತ್ತುಗಳು ಉದ್ದಿಮೆದಾದರಲ್ಲಿಯೇ ಕ್ರೋಢೀಕರಣಗೊಳ್ಳುವದರಿಂದ ಖಾಸಗೀಕರಣವನ್ನು ವಿರೋಧಿಸುತ್ತದೆ. ರೈತರು ಬೆಳೆಯುವ ಬೆಳೆಯನ್ನು ಸಂಗ್ರಹಿಸಿಟ್ಟುಕೊಳ್ಳುವ ಜಮೀನುದಾರರನ್ನು ವಿರೋಧಿಸುತ್ತದೆ.
ವೋಟ್ ಬ್ಯಾಂಕ್ ಮದ್ದಾನೆಗೆ ಸಿಲುಕಿ ನರಳಿದ ಸಿಸಿಸಿ
– ಅನಿರುದ್ಧ ವಸಿಷ್ಟ,ಭದ್ರಾವತಿ
ಏಕರೂಪ ನಾಗರಿಕ ಸಂಹಿತೆ – ಸುಪ್ರೀಂ ಕೋರ್ಟ್ V/S ಜಮಾತೆ ವಿಚಾರಧಾರೆ
ವ್ಯಾಪಾರಕ್ಕೆಂದು ಭಾರತಕ್ಕೆ ಬಂದು ದೇಶದ ಸಂಪತ್ತನ್ನು ಕೊಳ್ಳೆ ಹೊಡೆದದ್ದು ಮಾತ್ರವಲ್ಲದೇ, ದೇಶವನ್ನು ದಾಸ್ಯದ ಸಂಕೋಲೆಯಲ್ಲಿ ಬೀಳಿಸಿ, ಅಬ್ಬರಿಸಿದ ಬ್ರಿಟೀಷರ ಒಡೆದಾಳುವ ನೀತಿಯ ಮನಸ್ಥಿತಿ, ಭಾರತೀಯ ವಂಶವಾಹಿಯಲ್ಲಿ ಸೇರಿಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಆದರೆ,ಇವರನ್ನು ಓಡಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟೆವೆಂದು ಬೀಗುವ ಅಹಿಂಸಾವಾದಿ(?)ಗಳ ಕಾಂಗ್ರೆಸ್, ಎಲ್ಲ ಕ್ರೆಡಿಟ್ನ್ನು ತನ್ನ ತೆಕ್ಕೆಗೆ ಹಾಕಿಕೊಂಡದ್ದು ಮಾತ್ರವಲ್ಲದೇ, ಬ್ರಿಟೀಷರ ಒಡೆದಾಳುವ ನೀತಿಯನ್ನೇ ಮೈಗೂಡಿಸಿಕೊಂಡಿತು. ಭಾರತೀಯ ಸ್ವಾತಂತ್ರ್ಯದ ಜನಕ ಮಹಾತ್ಮ ಗಾಂಧಿಯವರ ಮಾತನ್ನು ಧಿಕ್ಕರಿಸಲು ಆರಂಭಿಸಿದ ಜವಹರಲಾಲ್ ನೆಹರೂ,ತಮ್ಮಿಚ್ಚೆಗೆ ಬಂದಂತೆ ಸರ್ಕಾರ ನಡೆಸಲು ಆರಂಭಿಸಿದ್ದು ಮಾತ್ರವಲ್ಲದೇ, ದೇಶದ ಅಲ್ಪಸಂಖ್ಯಾತರನ್ನು ವೋಟ್ ಬ್ಯಾಂಕ್ ಆಗಿ ಪರಿವರ್ತಿಸಿ, ಶಾಶ್ವತಗೊಳಿಸಲು ಯೋಚಿಸಿ, ವೋಟ್ ಬ್ಯಾಂಕ್ ಎಂಬ ಅನಿಷ್ಟ ಪದ್ದತಿಯನ್ನು ಭಾರತದ ರಾಜಕಾರಣಕ್ಕೆ ಕೊಡುಗೆಯನ್ನಾಗಿ ನೀಡಿದರು.
ಇದರ ಪರಿಣಾಮ, ಬ್ರಿಟೀಷರಂತೆ ಒಡೆದಾಳುವ ನೀತಿಯನ್ನು ೬೦ ವರ್ಷಗಳ ಕಾಲ ಕಾಂಗ್ರೆಸ್ ಅನುಸರಿಸಿಕೊಂಡು ಬಂದದ್ದಲ್ಲದೇ, ಜಾತ್ಯತೀತ ರಾಷ್ಟ್ರವೆಂಬ ಹಣೆಪಟ್ಟಿಯನ್ನು ಕೇವಲ ಸಂವಿಧಾನದ ಪೀಠಿಕೆಗೆ ಮಾತ್ರ ಸೀಮಿತವಾಗಿಸಿ, ಓಲೈಕೆ ರಾಜಕಾರಣದ ವಿಷಬೀಜವನ್ನು ಬಿತ್ತಿ, ಹೆಮ್ಮರವನ್ನಾಗಿ ಬೆಳೆಸಿದೆ. ಪರಿಣಾಮ, ಜಾತ್ಯತೀತ ರಾಷ್ಟ್ರದಲ್ಲಿ ಜಾತಿ, ಧರ್ಮಗಳೇ ಇಂದು ಎಲ್ಲ ಕ್ಷೇತ್ರಗಳ ಪ್ರಮುಖ ವಿಚಾರ ಹಾಗೂ ವಿವಾದಗಳಾಗಿ ಪರಿವರ್ತನೆಯಾಗಿದ್ದು, ವಿಶ್ವ ಭ್ರಾತೃತ್ವವನ್ನು ಪ್ರಪಂಚಕ್ಕೆ ಸಾರಿದ ಭಾರತದ ಮಾನವನ್ನು ಜಾಗತಿಕ ಮಟ್ಟದಲ್ಲಿ ಹರಾಜು ಹಾಕಿತ್ತು. ಇಂದು ಹೆಮ್ಮರವಾಗಿ ಬೆಳೆದು ನಿಂತಿರುವ ಈ ವಿಚಾರಗಳು ಸಂವಿಧಾನದ ಮೂಲ ಆಶಯ ಹಾಗೂ ಈ ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನೇ ಉಲ್ಲಂಘಿಸುವ ಮಟ್ಟಕ್ಕೆ ಧರ್ಮಾಧಾರಿತ ಕಾನೂನು ಹಾಗೂ ವ್ಯವಸ್ಥೆಗಳನ್ನು ರೂಪಿಸಿ, ಬೀಗಲು ಅವಕಾಶ ಮಾಡಿಕೊಟ್ಟಿದೆ.ಅಭಿವೃದ್ಧಿಶೀಲ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಲು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳು, ಭಾರತವನ್ನು ವಿಶ್ವಗುರುನ್ನಾಗಿಸುವತ್ತ ಹೊರಳಿಸುತ್ತಿದೆ. ಆದರೆ, ಜಾಗತಿಕ ಮಟ್ಟದಲ್ಲಿ ಈ ವಿಚಾರಕ್ಕೆ ದೇಶದೊಳಗಿರುವ ಇಂತಹ ಅನಿಷ್ಟ ಪದ್ದತಿಗಳು ತೊಡಕಾಗುತ್ತವೆ.ಈ ಹಿನ್ನೆಲೆಯಲ್ಲಿ ದೇಶದಲ್ಲಿ ಸಮಾನ ನ್ಯಾಯ ಒದಗಿಸಲು ಸಮಾನ ನಾಗರಿಕ ಸಂಹಿತೆ ಜಾರಿಗೆ ತರಬೇಕಾದ ಅವಶ್ಯಕತೆ ಇದೆ. ಭಾರತ ಸಂವಿಧಾನ ಪೀಠಿಕೆಯಲ್ಲಿ ಹೇಳಿರುಂತೆ ಜಾತ್ಯತೀತ ಹಾಗೂ ಸಮಾನತೆಯನ್ನು ದೇಶದಲ್ಲಿ ವಾಸ್ತವವಾಗಿ ಜಾರಿಗೊಳಿಸಬೇಕಾದರೆ, ಸಮಾನ ನಾಗರಿಕ ಸಂಹಿತೆ ಜಾರಿಗೆ ಬರಲೇಬೇಕು.
ಮತ್ತಷ್ಟು ಓದು 






