ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

17
ಡಿಸೆ

ಭಾರತೀಯ ಸಂಸ್ಕೃತಿ,ಪರಂಪರೆಯ ಚೇತನವಾದ ಭಗವದ್ಗೀತೆ, ಕೇವಲ ದಾಯಾದಿಗಳ ಕಲಹವೇ..?

– ಎಸ್.ಎನ್.ಭಾಸ್ಕರ್‍, ಬಂಗಾರಪೇಟೆ

ಭಗವದ್ಗೀತೆಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವನ್ನಾಗಿ ಘೋಷಣೆ ಮಾಡುವ ಬಗ್ಗೆ ಪ್ರಸ್ತಾಪಿತವಾದ ಹಿನ್ನೆಲೆಯಲ್ಲಿ ದಿನಾಂಕ ೧೨-೧೨-೨೦೧೪ ರಂದು ಕನ್ನಡಪ್ರಭ ಪತ್ರಿಕೆಯಲ್ಲಿ “ದಾಯಾದಿಗಳ ಕಲಹ ರಾಷ್ಟ್ರೀಯ ಗ್ರಂಥವಾಗಬೇಕೆ?” ಎಂಬ ಶೀರ್ಷಿಕೆ ಅಡಿಯಲ್ಲಿ ಲೇಖನವೊಂದು ಪ್ರಕಟವಾಗಿತ್ತು.

ಭಗವದ್ಗೀತೆಯ ವ್ಯಾಪ್ತಿಯ ಬಗ್ಗೆ, ಮಹತ್ವದ ಬಗ್ಗೆ ಸೂಕ್ತವಾದ ಅರಿವು ಇಲ್ಲದೇ ಬರೆದಂತಹ ಈ ಲೇಖನಕ್ಕೆ ಪ್ರತಿಕ್ರಿಯೆ ನೀಡುವ ನಿಟ್ಟಿನಲ್ಲಿ ಈ ಕೆಳಗಿನ ಲೇಖನವನ್ನು ಬರೆಯಲಾಗಿದೆ.

—————————————————————————————————-

“ಭಗವದ್ಗೀತೆಯನ್ನು ಅಭ್ಯಸಿಸಿ, ಭಗವಂತನ ಈ ಸೃಷ್ಠಿಯ ಪರಿಕಲ್ಪನೆಯನ್ನು ತಿಳಿದ ಅರಿವಿನ ಮುಂದೆ ಜಗತ್ತಿನಲ್ಲಿ ಅಸ್ಥಿತ್ವದಲ್ಲಿರುವ ಸಮಸ್ತ ಅಂಶಗಳು ಗೌಣವೆನಿಸುತ್ತವೆ” – ಆಲ್ಬರ್ಟ್ ಐನ್‌ಸ್ಟೈನ್.

“ಜೀವನದಲ್ಲಿ ಸಂದೇಹಗಳು ನನ್ನ ಕಾಡಿದಾಗ, ದುಃಖ, ಭ್ರಮನಿರಸನಗಳು ಎದುರಾದಾಗ, ಯಾವುದೇ ಆಶಾಕಿರಣಗಳು ಗೋಚರಿಸದಿದ್ದಾಗ, ಭಗವದ್ಗೀತೆಯ ಕಡೆ ನಾನು ಮುಖಮಾಡುತ್ತೇನೆ, ಮರುಕ್ಷಣ ದುಃಖ ದುಮ್ಮಾನಗಳು ಕರಗಿ, ಮನಸ್ಸಿನನಲ್ಲಿ ವಿಶ್ವಾಸದ ಮಂದಹಾಸ ಮೂಡುತ್ತದೆ. ಭಗವದ್ಗೀತೆಯನ್ನು ಧ್ಯಾನಿಸುವ ವ್ಯಕ್ತಿಯು ನಿರಂತರ ಸುಖಿಯಾಗುತ್ತಾನೆ, ಪ್ರತಿನಿತ್ಯವೂ ಜೀವನದ ಹೊಸ ಹೊಸ ಅರ್ಥಗಳನ್ನು ತಿಳಿಯುತ್ತಾನೆ” – ಮಹಾತ್ಮಾ ಗಾಂಧಿ.

ಮತ್ತಷ್ಟು ಓದು »

6
ಡಿಸೆ

ರಾಮ ಜನ್ಮಭೂಮಿ/ಬಾಬರಿ ವಿವಾದ : ಭೂತಕಾಲದ ತಪ್ಪುಗಳು ಭವಿಷ್ಯಕ್ಕೆ ಭಾರವಾಗಬಾರದು

– ರಾಕೇಶ್ ಶೆಟ್ಟಿ

Ayodhya Issue and Unityಮುಂಬೈನಿಂದ ನಾನು ಬೆಂಗಳೂರಿಗೆ ಹೊರಟಿದ್ದ ಸೆಪ್ಟಂಬರ್ ೩೦,೨೦೧೦ರ ಗುರುವಾರದ ಆ ದಿನ ಉಳಿದ ದಿನಗಳಂತೆ ಇರಲಿಲ್ಲ.ಒಂದು ಬಗೆಯ ಕುತೂಹಲ,ಕಾತರ,ಆತಂಕಗಳು ಭಾರತದ ಬಹುತೇಕರಲ್ಲಿ ಮನೆ ಮಾಡಿದ್ದ ದಿನವದು.ಅಲಹಬಾದ್ ಉಚ್ಚ ನ್ಯಾಯಾಲಯ ಅಯೋಧ್ಯೆಯ “ರಾಮ ಜನ್ಮ ಭೂಮಿ/ಬಾಬರಿ ಮಸೀದಿ” ವಿವಾದದ ಕುರಿತು ತೀರ್ಪು ನೀಡುವ ದಿನವಾಗಿತ್ತದು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಹಳಷ್ಟು ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದವು,ಸೂಕ್ಷ್ಮ,ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಪಡೆಯ ಕಣ್ಗಾವಲಿತ್ತು.ಜನರ ಜೊತೆಗೆ ವಿಶೇಷವಾಗಿ ಟಿ.ಆರ್.ಪಿ ಮಾಧ್ಯಮಗಳು ಕೂಡ ಸಂಯಮದಿಂದ ವರ್ತಿಸಬೇಕು ಎನ್ನುವ ಮನವಿಗಳು ಸರ್ಕಾರದಿಂದಲೇ ಬರುತಿತ್ತು.ಮಧ್ಯಾಹ್ನ ೩.೩೦ರ ಸುಮಾರಿಗೆ ತೀರ್ಪು ಹೊರಬರಲಿದೆ ಎನ್ನುವ ಸುದ್ದಿಗಳು ಹರಿದಾಡುತಿದ್ದವು.ನನ್ನ ವಿಮಾನವಿದ್ದಿದ್ದು ಸಂಜೆಯ ವೇಳೆಗೆ.ಆದರೆ,ಬಾಬರಿ ಮಸೀದಿ ಧರಾಶಾಹಿಯಾದ ಮೇಲೆ ಭೀಕರ ದಂಗೆಗೆ ಸಾಕ್ಷಿಯಾಗಿದ್ದ ಮುಂಬೈನಲ್ಲಿ ತೀರ್ಪು ಹೊರಬಂದ ಮೇಲೆ ಏನಾದರೂ ಆಗಬಾರದ್ದು ಶುರುವಾದರೇ,ಅದಕ್ಕೂ ಮುಖ್ಯವಾಗಿ ನಾನು ಹೋಗಬೇಕಾದ ದಾರಿಯಲ್ಲೇ “ಅತಿ ಸೂಕ್ಷ್ಮ ಪ್ರದೇಶ”ಗಳು ಇದ್ದವಾದ್ದರಿಂದ,ಸೇಫರ್ ಸೈಡ್ ಎಂಬಂತೆ ತುಸು ಬೇಗವೇ ನಾನು ಮತ್ತು ನನ್ನ ಸಹುದ್ಯೋಗಿ ಕ್ಯಾಬ್ ಹತ್ತಿಕೊಂಡೆವು.

ಕ್ಯಾಬ್ ಹೊರಟಂತೇ,ಡ್ರೈವರ್ ಅನ್ನು ಮಾತಿಗೆಳೆದೆ.”ಇವತ್ತು ತೀರ್ಪು ಬರಲಿಕ್ಕಿದೆಯಲ್ಲ.ನಿಮಗೇನನ್ನಿಸುತ್ತದೆ,ಆ ಜಾಗ ಯಾರಿಗೆ ಸೇರಿಬೇಕು ನಿಮ್ಮ ಪ್ರಕಾರ?”.ಅವರು ನನ್ನತ್ತ ತಿರುಗಿ “ತಪ್ಪು ತಿಳಿಯಬೇಡಿ ಸರ್.ನಿಮ್ಮ ಪ್ರಶ್ನೆಯೇ ಸರಿಯಿಲ್ಲ.ಜಾಗ ಯಾರಿಗೆ ಸೇರಬೇಕು ಎನ್ನುವುದು ‘ಅಹಂ’ನ ಪ್ರಶ್ನೆಯಾಗುತ್ತದೆ.ಆ ಅಹಂ ಮುಂದೇ ಪ್ರತಿಷ್ಟೆ, ದ್ವೇಷವನ್ನಷ್ಟೇ ಹೊರಡಿಸುತ್ತದೆ.ಅಸಲಿಗೆ ಇದು “ನಂಬಿಕೆ”ಯ ಪ್ರಶ್ನೆ.ಈ ಸಮಸ್ಯೆಯ ಪರಿಹಾರವಾಗಬೇಕಿರುವುದು ಪರಸ್ಪರ ಸಂವಾದ,ಸಾಮರಸ್ಯ,ಶಾಂತಿಯ ಅನುಸಂಧಾನದಿಂದಲೇ ಹೊರತು, ಇದು ಸರ್ಕಾರ,ನ್ಯಾಯಾಲಯದಲ್ಲಿ ಇತ್ಯರ್ಥವಾಗುವ ವಿಷಯವಲ್ಲ.ಆ ಜಾಗ ರಾಮ ಜನ್ಮಭೂಮಿಯೆಂಬುದು ಹಿಂದೂಗಳ ನಂಬಿಕೆಯಾಗಿದೆ.ಮೊಘಲ ಬಾಬರ್ ಆದೇಶಂತೆ ಅಲ್ಲಿದ್ದ ಮಂದಿರವೊಂದನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಿಸಲಾಗಿರುವ ವಾದವಿದೆಯಲ್ಲ ಸರ್ ಅದು ನಿಜವೇ ಆದರೆ,ಅಲ್ಲಿ ಮಂದಿರವೇ ನಿರ್ಮಾಣವಾಗಬೇಕು.ಯಾಕೆಂದರೆ ರಾಮ,ರಾಮಾಯಣ,ಕೃಷ್ಣ,ಮಹಾಭಾರತವೆಲ್ಲ ಈ ದೇಶದ ಜನರಿಗೆ ಕೇವಲ ಪುರಾಣಗಳಲ್ಲ.ಅವು ಜನರ ಜೀವನದ ಭಾಗಗಳು.ಹೀಗಿರುವಾಗ ಅಲ್ಲಿನ ಜನರ ನಂಬಿಕೆಗಳಿಗೆ ಬೆಲೆ ಕೊಟ್ಟು ಬಾಬರಿನಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದ.

ಮತ್ತಷ್ಟು ಓದು »

27
ನವೆಂ

ಒಂದಿಡಿ ಜನಾಂಗಕ್ಕೆ ಕಂಟಕವಾದವರನ್ನು ವೈಭವೀಕರಿಸುವುದೇಕೆ?

– ಡ್ಯಾನಿ ಪಿರೇರಾ,ಹಳ್ಳಿಮೈಸೂರು

Frncis Xvierನ.16 ರ ಕನ್ನಡಪ್ರಭ ದಿನಪತ್ರಿಕೆಯಲ್ಲಿ ‘ಫ್ರಾನ್ಸಿಸ್ ಕ್ಸೇವಿಯರ್ ಪಾರ್ಥಿವ ಶರೀರ ಪ್ರದರ್ಶನಕ್ಕೆ ಅಪಸ್ವರ’ ಎಂಬ ಶೀರ್ಷಿಕೆ ಅಡಿಯಲ್ಲಿ ಸಂತನೆಂದು ಹೇಳಲಾಗುವ ಪ್ರಾನ್ಸಿಸ್ ಕ್ಸೇವಿಯರ್‍ರ ಬಗ್ಗೆ ವರದಿಯಾಗಿತ್ತು. ಆತನ ಪಾರ್ಥಿವ ಶರೀರ ನ.22 ರಿಂದ ಜ.4 ರ ವರೆಗೆ ಸಾರ್ವಜನಿಕ ದರ್ಶನಕ್ಕಿಡಲಾಗುತ್ತಿದೆ.

ಈ ನಡುವೆ ಈ ವಿವಾದಿತ ಸಂತನ ವಿಚಾರದಲ್ಲಿ ಆತನು ನಡೆಸಿದ ಮತಾಂತರದ ಕ್ರೌರ್ಯ ಹಾಗೂ ಮಾರಣಹೋಮ ಇತಿಹಾಸದ ಪುಟಗಳಲ್ಲಿ ದಾಖಲಾಗಿದ್ದೂ ಈತ ಒಬ್ಬ ಮಹಾನ್ ಸಂತ ಎಂದು ಆತನನ್ನು ವೈಭವೀಕರಿಸುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಸಹಜವಾಗಿ ಏಳುತ್ತದೆ. ಭಾರತದ ಸಂತ ಪರಂಪರೆಗೂ ಪಾಶ್ಚತ್ಯ ಸಂತ ಪರಂಪರೆಗೂ ಅಜಗಜಾಂತರ ವ್ಯತ್ಯಾಸವಿದೆ. ಒಬ್ಬ ವ್ಯಕ್ತಿ ಆತ ಯಾವುದೇ ಜಾತಿಗೆ ಸೇರಿರಲಿ ಆತ ಮಾಡಿದ ಮಾನವತೆಯ ಸೇವೆಯನ್ನು ಅತ್ಯಂತ ಕೃತಜ್ಞತೆಯನ್ನು ಸ್ಮರಿಸಿ, ಆತನಿಗೆ ಸಂತ ಪದವಿ ನೀಡುವುದು ಈ ನೆಲದ ಪರಂಪರೆ. ಆದರೆ ಪಾಶ್ಚತ್ಯ ಜಗತ್ತಿನ ಸಂತ ಪದವಿಯನ್ನೇರಲು ಇಂಥಹ ಮಾನದಂಡವೇನಿಲ್ಲ ಎನಿಸುತ್ತದೆ!  ಒಬ್ಬ ವ್ಯಕ್ತಿ ತನ್ನ ಮತದ ಹಿತಕ್ಕೆ ಪೂರಕವಾಗಿ ನಡೆದು, ಇತರ ಮತಗಳ ಅವಹೇಳನ ಗೈದು ಇತರ ಮತೀಯರ ಮೇಲೆ ಮರಣ ಮೃದಂಗ ಬಾರಿಸಿದರೆ ಆತ ಶ್ರೇಷ್ಠನೆಂದು ಪರಿಗಣಿತವಾಗುತ್ತದೆ ಎನ್ನುವುದಕ್ಕೆ ಕ್ಸೇವಿಯರ್ ಸಂತ ಪದವಿ ಅಲಂಕರಿಸಿದ್ದೇ ಸಾಕ್ಷಿ ಎನ್ನಬೇಕಾಗುತ್ತದೆ. ಇನ್ನೊಂದು ಮತದ ನಂಬಿಕೆಗಳ ವಿರುದ್ಧ ನಡೆದುಕೊಂಡಾಗಲೂ ಅವನನ್ನು ಆರಾಧಿಸುವ ಮನಸ್ಥಿತಿ ಏರ್ಪಟ್ಟರೆ ಅತನನ್ನು ಯಾವ ಅರ್ಥದಲ್ಲಿ ಸಂತ ಎನ್ನ ಬಹುದು ಎನ್ನುವ ಪ್ರಶ್ನೆ ಸಹಜವಾಗಿ ಏಳುತ್ತದೆ. ಈ ಹಿನ್ನೆಲೆಯಲ್ಲಿ ಕ್ಸೇವಿಯರ್ ಒಬ್ಬ ಸಂತನೆಂದು ಕ್ರೈಸ್ತ ಸಮಾಜ ಒಪ್ಪಿಕೊಂಡರೂ ಮಾನವತೆಯ ನೆಲೆಗಟ್ಟಿನಲ್ಲಿ ಯೋಚಿಸುವ ಯಾವುದೇ ಜನಾಂಗ ಇದನ್ನು ಒಪ್ಪಲು ಸಾಧ್ಯವಾಗುವುದಿಲ್ಲ.
ಮತ್ತಷ್ಟು ಓದು »

21
ನವೆಂ

ನಂಬಿಕೆ-ಮೂಢನಂಬಿಕೆ ಗೆರೆ ಎಳೆಯುವುದು ಹೇಗೆ?

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ

ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು, ಕರ್ನಾಟಕ

ಮೌಢ್ಯ ವಿರೋಧಬೆಂಗಳೂರಿನಲ್ಲಿ ಇನ್ನೂರಾ ಎಂಟು ಪ್ರಗತಿಪರ ಸ್ವಾಮೀಜಿಗಳೆಂದು ಕರೆದುಕೊಂಡಿರುವವರು ಮೂಢ ನಂಬಿಕೆ ನಿಷೇಧ ಕಾಯ್ದೆ ಜಾರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಸಂತೋಷ. ಯಾರಲ್ಲೂ ಮೌಢ್ಯ ಎಂಬುದು ಇರಬಾರದು. ಯಾಕೆಂದರೆ ನಾವೆಲ್ಲ ವೈಜ್ಞಾನಿಕ (ಹಾಗೆಂದರೇನು ಎಂಬುದೇ ಬೇರೆ ಚರ್ಚೆಯ ಸಂಗತಿ) ಯುಗದಲ್ಲಿದ್ದೇವೆ! ಈಗ ಧರಣಿ ಕುಳಿತಿದ್ದ ಸ್ವಾಮೀಜಿಗಳು ಕಾವಿ ಧರಿಸಿದ್ದಾರೆ, ಕೆಲವರು ವಿಭೂತಿಯನ್ನೂ ರುದ್ರಾಕ್ಷಿ ಮಾಲೆಯನ್ನೂ ಧರಿಸಿದ್ದಾರೆ. ಅನೇಕಾನೇಕ ಜನರ ನಂಬಿಕೆಯನ್ನು ಪ್ರತಿನಿಧಿಸುವ ಮಠಾಧೀಶರಾಗಿದ್ದಾರೆ. ಇವೆಲ್ಲದರ ಗೋಜಿಲ್ಲದೇ ಆರಾಮವಾಗಿ ದೇಶದ ಸಂವಿಧಾನಕ್ಕೆ ಅನುಸಾರವಾಗಿ ನಾನಂತೂ ಬದುಕುತ್ತಿದ್ದೇನೆ. ನನ್ನ ದೃಷ್ಟಿಯಲ್ಲಿ ಈ ಸ್ವಾಮೀಜಿಗಳ ವೇಷವೇ ಮೌಢ್ಯ. ಅವರು ಪ್ರತಿನಿಧಿಸುವ ಮಠಗಳೂ ಮೌಢ್ಯ. ಆದರೂ ಅವರು ಇವುಗಳಿಗೆ ಹೊರತಾದ ಯಾವುದೋ ಮೌಢ್ಯ ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆ. ತಮಾಷೆ ಎಂದರೆ ನವೆಂಬರ್ ಎರಡನೆಯ ವಾರದಲ್ಲಿ ಸಿದ್ಧಗಂಗಾ ಕ್ಷೇತ್ರದಲ್ಲಿ ನಡೆದ ಸಂತರ ಸಮ್ಮೇಳನದಲ್ಲಿ ಪಾಲ್ಗೊಂಡು ಭಾರತೀಯ ಪ್ರಾಚೀನ ಪರಂಪರೆಯ ಉಳಿವಿನ ಪಣ ತೊಟ್ಟ ಕೆಲವು ಸ್ವಾಮೀಜಿಗಳೂ ಈ ಧರಣಿಯಲ್ಲಿದ್ದಾರೆ. ಮೂಢ ನಂಬಿಕೆ ನಿಷೇಧದ ಪಟ್ಟಿಯಲ್ಲಿರುವ ಪೂಜೆ, ಪಾದಪೂಜೆಯಾದಿಯಾಗಿ ಅನೇಕಾನೇಕ ಸಂಗತಿಗಳನ್ನು ಸದ್ಯ ಆಚರಿಸುತ್ತಿರುವ ಸ್ವಾಮೀಜಿಗಳು ಇವರು!

ಕೆಲವು ತಿಂಗಳುಗಳ ಹಿಂದೆ ರಾಜ್ಯದಲ್ಲಿ ಸರ್ಕಾರದಿಂದ ರಚಿತವಾದ ಸಮಿತಿಯೊಂದು ಮೂಢ ನಂಬಿಕೆ ನಿಷೇಧ ಕಾಯ್ದೆಯ ಕರಡು ಪ್ರತಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ಅದಿನ್ನೂ ಸರ್ಕಾರದ ಪರಿಶೀಲನೆಯ ಹಂತದಲ್ಲೇ ಇದೆ. ಸಾರ್ವಜನಿಕ ಚರ್ಚೆಗೆ ಅದಿನ್ನೂ ತೆರೆದುಕೊಂಡಿಲ್ಲ. ಅದರಲ್ಲಿ ಹೇಳಲಾದ ಕೆಲವು ಸಂಗತಿಗಳು ಅಂತರ್ಜಾಲದ ಕೆಲವು ಮೂಲಗಳಿಂದ ಅಷ್ಟಿಷ್ಟು ಲಭ್ಯವಾಗಿದೆ. ಹತ್ತಾರು ಬಗೆಯ ಆಚಾರ ವಿಚಾರಗಳನ್ನು, ನಂಬಿಕೆ ನಿಷೇಧಗಳನ್ನು ಅನುಸರಿಸುವ ಆದರೂ ಜೊತೆಯಲ್ಲೇ ಬದುಕುವ ವೈವಿಧ್ಯಮಯ ಸಮಾಜ ನಮ್ಮದು. ಸಾಲದ್ದಕ್ಕೆ ಜನತಂತ್ರ ವ್ಯವಸ್ಥೆ ಬೇರೆ ಇದೆ. ಧಾರ್ಮಿಕ ಆಚರಣೆಯ ಸ್ವಾತಂತ್ರ್ಯ ಅಂದರೇನೆಂದು ನಾವು ಅನುಸರಿಸುವ ಸಂವಿಧಾನವೂ ಸ್ಪಷ್ಟವಾಗಿ ಹೇಳಿದೆ. ಇಂಥ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಮುಕ್ತ ಚರ್ಚೆಗೆ ಕರಡನ್ನು ತೆರೆದು ಕೂಲಂಕಷವಾಗಿ ತಿದ್ದುಪಡಿ ಮಾಡದೇ ಸರ್ಕಾರ ನೇಮಿಸಿದ ಸಮಿತಿಯ ಕೆಲ ಸದಸ್ಯರ ಹಾಗೂ ತಾವು ಸಂದರ್ಶಿಸಿದ್ದೇವೆ ಎಂದು ಹೇಳಲಾದ ಆಯ್ದ ಕೆಲವರ ಅಭಿಪ್ರಾಯವನ್ನು ಸಮಾಜದ ಸಕಲರ ಅಭಿಪ್ರಾಯ ಎಂದು ಸ್ವೀಕರಿಸುವುದಾದರೂ ಹೇಗೆ? ಇಂಥ ಮೂಲಭೂತ ಸಂಗತಿ ಕರಡನ್ನು ಸರ್ಕಾರಕ್ಕೆ ಸಲ್ಲಿಸಿದಾಗಲೇ ಸಾಕಷ್ಟು ಚರ್ಚೆಯಾಗಿದೆ. ಅದಿರಲಿ.

ಮತ್ತಷ್ಟು ಓದು »

11
ನವೆಂ

ಕಾನೂನು Vs ಪ್ರತ್ಯೇಕತೆ – ಬದಲಾಗಬೇಕಾಗಿದ್ದು ಯಾರು ?

– ಶೈಲೇಶ್ ಕುಲ್ಕರ್ಣಿ

Jammu-Kashmirಕಾಲಕಾಲಕ್ಕೆ ಭಾರತದ ಕೆಲವೊಂದು ರಾಜ್ಯಗಳ ಆಡಳಿತಾರೂಢ ಜನಪ್ರತಿನಿಧಿಗಳೇ ಭಾರತವಿರೋಧಿ ಭಾವನೆಗಳನ್ನ ಸಾರ್ವಜನಿಕವಾಗಿ ಪ್ರದರ್ಶನಕ್ಕಿಡೋದು ಅವ್ಯಾಹತವಾಗಿ ನಡೆದುಕೊಂಡು ಬಂದಿದೆ.ಈಗ್ಗೆ ಸ್ವಲ್ಪ ಸಮಯದ ಕೆಳಗೆ ಜಮ್ಮುಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂವಿಧಾನದ ೩೭೦ನೆ ವಿಧಿ ಆ ರಾಜ್ಯದಲ್ಲಿ ಜಾರಿಗೊಂಡ ಪಕ್ಷದಲ್ಲಿ ಆ ರಾಜ್ಯ ಭಾರತದಭಾಗವಾಗಿ ಮುಂದುವರೆಯೋದಿಲ್ಲ ಅಂತ ಸಾರ್ವಜನಿಕವಾಗಿಯೇ ಹೇಳಿದ್ದರು.ಹೀಗೆ ಪ್ರತೀ ಬಾರಿ ಒಡಕಿನ ರಾಗ ಆಲಾಪಿಸಿದಾಗಲೂ ಅವರೆಲ್ಲರ ದುಃಖಕ್ಕೆ  AFSPA ನಂಥ  ಕಾನೂನನ್ನೇ  ಹೊಣೆಯಾಗಿಸೋದು ಮಾಮೂಲಿ ಸಂಗತಿ .

ಜಮ್ಮು-ಕಾಶ್ಮೀರದ ಜೊತೆಗೇ ಭಾರತದ ನೈಋತ್ಯದ ರಾಜ್ಯಗಳ(ಅಸ್ಸಾಂ, ಮಣಿಪೂರ್) ಕೆಲ ಚುನಾಯಿತ ಪ್ರತಿನಿಧಿಗಳು ತಮ್ಮ ರಾಜ್ಯಗಳಲ್ಲಿ ಭಾರತೀಯ ಸೈನ್ಯ AFSPA (ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ೧೯೫೮) ಕಾನೂನಿನ ಅಡಿಯಲ್ಲಿ ಇರೋದನ್ನ ಬಲವಾಗಿ ವಿರೋಧಿಸಿಕೊಂಡೆ ಬಂದಿದ್ದಾರೆ. ಈ ವಿಶೇಷಾಧಿಕಾರದ ಅನ್ವಯದಿಂದ ತಮ್ಮ ರಾಜ್ಯಗಳು ಸೈನ್ಯದ ಛಾಯೆಯಲ್ಲೇ ಬದುಕಬೇಕಾದ ಅನಿವಾರ್ಯಕ್ಕೆ ಸಿಲುಕಿವೆ. ಸಂಪೂರ್ಣರಾಷ್ಟ್ರವೇ ಮಿಲಿಟರಿಯ ಹಂಗಿಲ್ಲದೆ ಮನಸೋಇಚ್ಛೆ ಬಾಳ್ವೆ ನಡೆಸುತ್ತಿರುವಾಗ ಪ್ರಜಾತಂತ್ರದ ಹೆಸರಿನಡಿಯಲ್ಲಿ ಹಾಡುಹಗಲೇ ತಮ್ಮ ಸ್ವಾತಂತ್ರ್ಯಹರಣಕ್ಕೆ ಸೈನ್ಯದಬಳಕೆ ಪ್ರಜಾತಂತ್ರಕ್ಕೆ ಮತ್ತು ಮಾನವೀಯತೆಗೆ ಮಾಡಿದ ಅಪಚಾರ ಅನ್ನೋದು ಅವರ ವಾದ .
ಪರಿಸ್ಥಿತಿಯ ಲಾಭಪಡೆವ ಸೈನ್ಯ ಅಲ್ಲಿನ ಪ್ರಜೆಗಳ ಮೇಲೆ ದೌರ್ಜನ್ಯಕ್ಕೂ ಮುಂದಾಗುತ್ತದೆ ಅನ್ನೋದು ಆ ವಾದದ ಸರಣಿ. .

ಕೂಲಂಕುಶವಾಗಿ ಈ ಎಲ್ಲ ವಾದಗಳ ಮೂಲ ಕೆದಕಿದಲ್ಲಿ ಅಲ್ಲಿ ಅಡಗಿರೋದು ಕ್ಷುದ್ರರಾಜಕಾರಣವಲ್ಲದೆ ಜನಪರ ಕಾಳಜಿ ಅಥವ ಮಾನವಸಂವೇದನೆ ಖಂಡಿತ ಅಲ್ಲ ಅನ್ನೋದು ಸ್ಪಷ್ಟವಾಗಿ ಕಾಣಬಹುದು.

ಮತ್ತಷ್ಟು ಓದು »

31
ಆಕ್ಟೋ

ವಿಜ್ಞಾನಿಗಳೇಕೆ ಪೂಜೆ ಮಾಡಬಾರದು?

– ಡಾ. ಪ್ರವೀಣ್ ಟಿ. ಎಲ್

ಉಪನ್ಯಾಸಕರು, ಕುವೆಂಪು ವಿಶ್ವವಿದ್ಯಾನಿಲಯ

Isro Chief in Turupatiಮಂಗಳಯಾನದ ಯಶಸ್ವೀ ಕಾರ್ಯಾಚರಣೆ ಬಗ್ಗೆ ಇಡೀ ದೇಶವೇ ಸಂತಸಪಟ್ಟಿದೆ. ಇಡೀ ವಿಶ್ವವೇ ಭಾರತದ ಕಡೆಗೆ ನೋಡುವಂತರ ಸಾಧನೆಯನ್ನು ಭಾರತೀಯ ವಿಜ್ಞಾನಿಗಳು ಮಾಡಿರುವುದು ಮಹಾನ್ ಸಾಧನೆಯೇ ಸರಿ. ಆದರೆ ಕೆಲವು ‘ಚಿಂತಕರು’ ಈ ಇಡೀ ಕಾರ್ಯಾಚರಣೆಯ ಮುಖ್ಯಸ್ಥರಾಗಿದ್ದ ವಿಜ್ಞಾನಿ ರಾಧಾಕೃಷ್ಣನ್‍ರವರ ನಡೆಯ ಕುರಿತು ತಮ್ಮ ಕುಹಕ, ತಕರಾರುಗಳನ್ನು ಅಂತರ್ಜಾಲ, ಮತ್ತಿತರ ಕಡೆಗಳಲ್ಲಿ ಹರಿಯಬಿಡುತ್ತಿದ್ದಾರೆ. ರಾಧಾಕೃಷ್ಣನ್‍ರವರು ‘MOM’ ನ ಸಣ್ಣ ಮಾದರಿಯೊಂದನ್ನು ತಿರುಪತಿಗೆ ತಂದು, ತಮ್ಮ ಧರ್ಮಪತ್ನಿಯೊಡನೆ ಪೂಜಾ ಕಾರ್ಯಗಳನ್ನು ನೇರವೇರಿಸಿದ್ದು ಅವರ ಟೀಕೆಗೆ ಕಾರಣ.

ಉಡಾವಣೆಗೊಂಡ ‘MOM’ ಮಂಗಳನ ತಲುಪುವ ಮುಂಚೆಯೇ ಇದೊಂದು ವಿಫಲಯತ್ನವೇನೋ ಎಂಬಂತೆ ಕೆಲವರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿದ್ದರು. ಇನ್ನೂ ಕೆಲವರು ವಿಫಲವಾಗಿದೆ ಎಂಬ ತೀರ್ಮಾನಕ್ಕೂ ಬಂದಿದ್ದರು. ಅಷ್ಟೇ ಅಲ್ಲದೇ ಈ ವಿಫಲತೆಗೆ ವಿಜ್ಞಾನಿಗಳು ತಿರುಪತಿಗೆ ತೆರಳಿ ‘ತಲೆಬೋಳಿಸಿ’ಕೊಳ್ಳದೇ ವಾಪಾಸಾದುದೇ ಪ್ರಮುಖ ಕಾರಣ ಎಂಬಂತೇ ಕುಹಕವಾಡಲು ಶುರುಮಾಡಿದರು. ಕುಹಕಗಳಿಗೆಲ್ಲಾ ಉತ್ತರವನ್ನು ವಿಜ್ಞಾನಿಗಳು ಈಗಾಗಲೇ ನೀಡಿದ್ದಾರೆ.

ಈ ‘ವೈಜ್ಞಾನಿಕ’ ಚಿಂತಕರ ಪ್ರಮುಖ ತಕರಾರೆಂದರೆ, ವಿಜ್ಞಾನಿಗಳು ದೇವಸ್ಥಾನಗಳಿಗೆ ತೆರಳಿ ತಾವು ತಯಾರಿಸಿದ ಆಯುಧದ ಪೂಜೆ ನೆರವೇರಿಸಿರುವುದು ಎಷ್ಟು ಸರಿ. ವಿಜ್ಞಾನಿಗಳಿಗೆ ವಿಶ್ವದ ಸೃಷ್ಟಿಯ ಕುರಿತು ವೈಜ್ಞಾನಿಕ ಕಾರಣಗಳು ತಿಳಿದಿದ್ದರೂ ಸಹಾ ದೇವರ ಅಸ್ತಿತ್ವವನ್ನು ನಂಬುತ್ತಾರೆ ಮತ್ತು ತಮ್ಮ ವೈಜ್ಞಾನಿಕ ಪ್ರಯೋಗಗಳಲ್ಲಿ ದೇವರ ಕೈವಾಡ ಇದೆ ಎಂದುಕೊಳ್ಳುವುದು ಅಜ್ಞಾನ/ ಮೂಢತೆ ಎಂಬುದವರ ವಾದ. ISRO ಒಂದು ಸರ್ಕಾರಿ ಸಂಸ್ಥೆಯಾಗಿದ್ದು, ಭಾರತ ಒಂದು ಜಾತ್ಯಾತೀತ ರಾಷ್ಟ್ರ ಎಂಬುದನ್ನು ರಾಧಾಕೃಷ್ಣನ್‍ರವರು ನೆನಪಿಡಬೇಕು ಎಂದು ಅಪ್ಪಣೆ ಹೊರಡಿಸುತ್ತಾರೆ.

ಮೇಲಿನ ತಕರಾರುಗಳು ಭಾರತದ ಕುರಿತ ಈ ಚಿಂತಕರ ಅಜ್ಞಾನವನ್ನೂ, ಅವೈಜ್ಞಾನಿಕತೆಯನ್ನೂ, ಮೌಢ್ಯತೆಯನ್ನೂ ಪ್ರದರ್ಶಿಸುತ್ತಿವೆ. ಈ ಚಿಂತಕರುಗಳು ತಪ್ಪಾದ ‘ಯೂರೋಪಿನ ಗ್ರಹಿಕೆ’ಗಳಿಂದ ಕೂಡಿದ ತಮ್ಮ ವಿವರಣೆಗಳನ್ನೇ ವೈಜ್ಞಾನಿಕ ಎಂದು, ತಾವೇ ವಿಜ್ಞಾನದ ಪಿತಾಮಹರೆಂಬ ತೀರ್ಮಾನಕ್ಕೆ ಬಂದಿದ್ದಾರೆ. ಜೊತೆಗೆ ಯೂರೋಪಿನ ಸೆಕ್ಯುಲರ್ ಚಿಂತನೆಯ ನಕಲನ್ನು ಭಾರತದಲ್ಲಿ ವೈಜ್ಞಾನಿಕತೆಯ ಹೆಸರಲ್ಲಿ ವ್ಯಾಪಾರ ಮಾಡುತ್ತಿರುವುದು ಕಂಡುಬರುತ್ತದೆ. ವಿಜ್ಞಾನಿಗಳ ಈ ನಡೆಯನ್ನು ಅವೈಜ್ಞಾನಿಕ, ಮೌಢ್ಯ ಎನ್ನಲು ಕಾರಣ ಅವರ ಆಚರಣೆ ಮತ್ತು ನಂಬಿಕೆಗಳ ನಡುವಿನ ಸಂಬಂಧ. ಅಂದರೆ ಬಾಹ್ಯಾಕಾಶ ನೌಕೆಯ ಉಡಾವಣೆಗೂ ದೇವರ ಮೇಲಿನ ನಂಬಿಕೆಗೂ ಸಂಬಂಧ ಇದೆ ಎಂಬುದು. ದೇವರೇ ಬಂದು ಕ್ಷಿಪಣಿಯನ್ನು ಉಡಾವಣೆ ಮಾಡುತ್ತಾನೆ ಎಂದೇನೂ ವಿಜ್ಞಾನಿಗಳು ನಂಬಿಲ್ಲವಲ್ಲ. ಹಾಗಿದ್ದರೆ ಅವರು ವರ್ಷಗಟ್ಟಲೇ ಶ್ರಮಪಟ್ಟು ತಯಾರಿಸುವ ಅವಶ್ಯಕತೆಯಾದರೂ ಏನಿತ್ತು. ಅಲ್ಲದೇ ಅದಕ್ಕೆ ನಿರ್ದಿಷ್ಟ ಕಾಲಕ್ಕೆ ಬೇಕಾಗುವಷ್ಟು ಇಂಧನವನ್ನು, ಆಧುನಿಕ ತಂತ್ರಜ್ಞಾನವನ್ನು ಬಳಸುವ ಅಗತ್ಯವಾದರೂ ಏಕೆ?

ಮತ್ತಷ್ಟು ಓದು »

19
ಆಕ್ಟೋ

ಇತಿಹಾಸದಿಂದ ಏನನ್ನೂ ಕಲಿಯಲು ಸಿದ್ಧರಾಗಿದ್ದಲ್ಲಿ,ಮರುಕಳಿಸುವ ಇತಿಹಾಸವನ್ನೇ ನೋಡಬೇಕಾಗುತ್ತದೆ

 – ಮಯೂರಲಕ್ಷ್ಮಿ

ಇತಿಹಾಸಜಾರ್ಜ ಸಂತಾಯನ ಎನ್ನುವ ಪ್ರಸಿದ್ಧ ಕವಿ ಮತ್ತು ತತ್ವಜ್ಞಾನಿ ಇತಿಹಾಸವನ್ನು ಕುರಿತು ತನ್ನ ಅಭಿಪ್ರಾಯವನ್ನು ಹೀಗೆ ತಿಳಿಸಿದ್ದಾನೆ.

ಒಂದು ದೇಶದ ಸಂಸ್ಕೃತಿಯ ದ್ಯೋತಕ ಅದರ ಪರಂಪರೆ ಧ್ಯೇಯ ನಿಷ್ಠೆ ಮತ್ತು ಅದರ ಇತಿಹಾಸವನ್ನೂ ಅವಲಂಬಿಸಿದೆ.

ಉನ್ನತ ಸಂಸ್ಕೃತಿಯನ್ನು ಹೊಂದಿದ ದೇಶಗಳು ಸುಭಿಕ್ಷವಾಗುವುದು ತನ್ನಲ್ಲಿ ಅಂತರ್ಗತವಾಗಿರುವ ಐತಿಹಾಸಿಕ ಮೌಲ್ಯಗಳ ಜಾಗೃತಿಯಿಂದ ಮಾತ್ರ.

ತಮ್ಮ ಅಸಾಧಾರಣ ಇಚ್ಛಾಶಕ್ತಿಯಿಂದ ಅಪರಿಮಿತ ಸಂಕಲ್ಪಶಕ್ತಿಯಿಂದ ಇತಿಹಾಸವನ್ನೇ ನಿರ್ಮಿಸಿದವರ ಸಂಖ್ಯೆ ಅತ್ಯಾಧಿಕ. ಇಂತಹ ಇತಿಹಾಸದ ಅರಿವು ಶಿಕ್ಷಣದಿಂದ ಮಾತ್ರ ಸಾಧ್ಯವೇ? ಹಾಗಿದ್ದಲ್ಲಿ ಇತಿಹಾಸವನ್ನು ನಮ್ಮ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಕಡ್ಡಾಯವಾಗಿ ಇತಿಹಾಸ ಇರಬೇಕೋ ಅಥವಾ ಐಚ್ಛಿಕವಾಗಿ ಕಲಿಯಬೇಕೋ ಎನ್ನುವ ಪ್ರಶ್ನೆ ಮೂಡುವುದು.

ಒಂದು ವ್ಯವಸ್ಥೆಯಲ್ಲಿ ಸಾಗುತ್ತಿರುವ ನಮ್ಮ ಶಿಕ್ಷಣ ವ್ಯವಸ್ಥೆಯ ಇತಿಮಿತಿಗಳನ್ನರಿತು ಅವಲೋಕಿಸಿದಾಗ ನಮ್ಮ ಮುಂದಿನ ದೇಶದ ರೂವಾರಿಗಳಾದ ಇಂದಿನ ಯುವಶಕ್ತಿಗೆ ಇತಿಹಾಸವನ್ನೂ ಇತಿಹಾಸದಿಂದ ನಾವು ಕಲಿತಿರುವ ಮತ್ತು ಕಲಿಯಬೇಕಾಗಿರುವುದನ್ನೂ ಅರಿಯಬೇಕಾದ ಇತಿಹಾಸ ಪ್ರಜ್ಞೆ ಇದೆಯೇ? ಅಥವಾ ಜಾಗೃತವಾಗಿಲ್ಲವೇ? ನಮ್ಮ ತರುಣ ಪೀಳಿಗೆಯನ್ನು ಗತವೈಭವ ಎನ್ನುವ ನಮ್ಮ ಇತಿಹಾಸದತ್ತ ಸಂಪರ್ಕಿಸುವಲ್ಲಿ ನಾವು ಸೋಲುತ್ತಿದ್ದೇವೆಯೇ?

ಮತ್ತಷ್ಟು ಓದು »

16
ಆಕ್ಟೋ

ಮ೦ಗಳಯಾನದ ಬಗ್ಗೆ ಅಮ೦ಗಳಕರ ಮಾತನ್ನಾಡುವವರ ಕುರಿತು…

-ಗುರುರಾಜ್ ಕೊಡ್ಕಣಿ

ಮಂಗಳಯಾನಸುಮಾರು ಮೂರು ವಾರಗಳ ಹಿ೦ದೆ ಯಶಸ್ವಿಯಾದ ’ಮ೦ಗಳಯಾನ’ ಯೋಜನೆಯ ಬಗ್ಗೆ ನೀವು ಕೇಳಿರುತ್ತೀರಿ.ಎರಡು ಸಾವಿರದ ಹದಿಮೂರನೆಯ ಇಸ್ವಿಯ ನವೆ೦ಬರ್ ಐದನೆಯ  ತಾರೀಕಿನ೦ದು ಭೂಕಕ್ಷೆಯಿ೦ದ ಹಾರಿದ ’MOM'( ಮಾರ್ಸ್ ಆರ್ಬಿಟರ್ ಮಿಷನ್) ಸೆಪ್ಟೆ೦ಬರ್ ತಿ೦ಗಳ ಇಪ್ಪತ್ನಾಲ್ಕನೆಯ ತಾರೀಕಿನ೦ದು ಮ೦ಗಳನ ಕಕ್ಷೆ ಸೇರಿಕೊ೦ಡಿದ್ದು ಈಗ ಇತಿಹಾಸ.ನಿಜಕ್ಕೂ ಇದೊ೦ದು ಐತಿಹಾಸಿಕ ಸಾಧನೆ.ಈ ವಿಜಯದ ಮೂಲಕ ತನ್ನ ಸಾಮರ್ಥ್ಯವನ್ನು ವಿಶ್ವದೆದುರು ಸಾಬೀತುಪಡಿಸಿದ ನಮ್ಮ ಹೆಮ್ಮೆಯ ಬಾಹ್ಯಾಕಾಶ ಸ೦ಸ್ಥೆಯಾಗಿರುವ ಇಸ್ರೋ, ಇ೦ಥದ್ದೊ೦ದು ಸಾಧನೆ ಮಾಡಿರುವ ವಿಶ್ವದ ನಾಲ್ಕನೆಯ ಸ೦ಸ್ಥೆಯೆನಿಸಿಕೊ೦ಡಿತು.ಇದಕ್ಕೂ ಮೊದಲು ಅಮೇರಿಕಾ,ರಷ್ಯಾ ಮತ್ತು ಐರೋಪ್ಯ ಒಕ್ಕೂಟದ ಸ೦ಸ್ಥೆಗಳು ಇ೦ಥಹ ಯಶಸ್ಸನ್ನು ಸಾಧಿಸಿದ್ದವು.ಅಲ್ಲದೆ ಈ ಸಾಧನೆಯನ್ನು ಮಾಡಿರುವ ಏಷ್ಯಾದ ಮೊದಲ ರಾಷ್ಟ್ರ ಎನ್ನುವ ಹೆಗ್ಗಳಿಕೆಯೂ ಭಾರತದ್ದಾಗಿದೆ ಎ೦ದರೇ ನಮಗೆ ಹೆಮ್ಮೆಯೆನಿಸಬಹುದು.ವಿಚಿತ್ರವೆ೦ದರೆ ವೈಜ್ನಾನಿಕ ಕ್ಷೇತ್ರದಲ್ಲಿ ಭಾರತಕ್ಕಿ೦ತ ಬಹು ದೂರ ಸಾಗಿರುವ ಚೀನಾ ದೇಶಕ್ಕೆ ಕುಜಗ್ರಹವಿನ್ನೂ ಕೈವಶವಾಗಿಲ್ಲ.ಸುಮಾರು ಸಾವಿರದ ಮುನ್ನೂರು ಕೇಜಿಗಳಷ್ಟು ತೂಗುವ ಉಪಗ್ರಹವನ್ನು ಅರವತ್ತಾರು ಕೋಟಿ ಕಿಲೋಮೀಟರುಗಳಷ್ಟು ದೂರಕ್ಕೆ ಕಳುಹಿಸಲು ಇಸ್ರೋ ಮಾಡಿರುವ ಖರ್ಚು ಕೇವಲ ನಾನೂರೈವತ್ತು ಕೋಟಿ ರೂಪಾಯಿಗಳು.ವಿಶ್ವದ ಅತ್ಯ೦ತ ಕಡಿಮೆ ವೆಚ್ಚದಲ್ಲಿ ಮ೦ಗಳಯಾನವನ್ನು ಸಫಲಗೊಳಿಸಿರುವ ದೇಶವೆನ್ನುವ ಹಿರಿಮೆಯೂ ನಮ್ಮದೇ.ವರ್ಷಗಟ್ಟಲೇ ಕಷ್ಟಪಟ್ಟು ದುಡಿದು ಅ೦ಗಾರಕನನ್ನು ಗೆದ್ದ ಇಸ್ರೋದ ವಿಜ್ನಾನಿಗಳು ಅ೦ತಿಮ ಕ್ಷಣಗಳಲ್ಲಿ ಭಾವುಕರಾಗಿ ಒಬ್ಬರನ್ನೊಬ್ಬರು ತಬ್ಬಿಕೊ೦ಡು ಆನ೦ದಭಾಷ್ಪವನ್ನು ಸುರಿಸಿದ್ದು ನಿಜಕ್ಕೂ ಹೃದಯಸ್ಪರ್ಶಿಯಾಗಿತ್ತು.ದೊಡ್ಡದೊ೦ದು ಮಹತ್ವಾಕಾ೦ಕ್ಷೆಯ ಯಜ್ನವೊ೦ದರ ಸಫಲತೆಯ ಅದ್ಭುತ ತೃಪ್ತಿ ಅವರದ್ದು.

ಆದರೆ ಈ ಸ೦ಭ್ರಮಾಚರಣೆಯ ನ೦ತರ ನಡೆದ ಕೆಲವು ಘಟನೆಗಳು ನಮ್ಮ ಕೆಲವು ಪ್ರಗತಿಪರ ಬರಹಗಾರರ ಮತ್ತು ಹಲವು ರಾಜಕಾರಣಿಗಳ ರುಗ್ಣ ಮಾನಸಿಕತೆ ಹಿಡಿದ  ಕನ್ನಡಿಯ೦ತಿದ್ದವು.ಹೀಗೊ೦ದು ಯಶಸ್ಸಿನ ನ೦ತರ ಚಿಕ್ಕದೊ೦ದು ಅಭಿನ೦ದನಾ ಭಾಷಣವನ್ನು ಮಾಡಿದ ನಮ್ಮ ಪ್ರಧಾನಮ೦ತ್ರಿ ನರೇ೦ದ್ರ ಮೋದಿಯವರು,’ಇ೦ಥಹ ಆಕಾಶಯಾನದ ಕನಸು ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿಯವರಿಗೂ ಇತ್ತು’ ಎ೦ದುಬಿಟ್ಟರು.ನಮ್ಮ ಕೆಲವು ಪುಢಾರಿಗಳಿಗೆ ಅಷ್ಟು ಸಾಕಾಯಿತು.’ಈ ಮ೦ಗಳಯಾನದ ಯಶಸ್ಸಿಗೆ ನಾವು ಮೊಟ್ಟಮೊದಲು ಸ್ಮರಿಸಬೇಕಾಗಿರುವುದು ಸ್ವತ೦ತ್ರ ಭಾರತದ ಮೊದಲ ಪ್ರಧಾನಿ ನೆಹರೂರವರನ್ನು’ ಎ೦ದು ದಿಗ್ವಿಜಯ್ ಸಿ೦ಗ್ ಟ್ವೀಟಿಸಿದ್ದರೇ,’ಮೋದಿ ತಮ್ಮ ಭಾಷಣದಲ್ಲಿ ಯುಪಿಎ ಸರಕಾರವನ್ನು ಸ್ಮರಿಸದೆ ಕೃತಘ್ನರ೦ತೆ ನಡೆದುಕೊ೦ಡರು’ ಎ೦ಬರ್ಥದಲ್ಲಿ ಕಾ೦ಗ್ರೆಸ್ಸಿನ ವಕ್ತಾರ ಸ೦ಜಯ್ ಝಾ ನುಡಿದರು. ಈ ಯೋಜನೆಗೆ ಸರ್ಕಾರಿ ನಿಧಿಯೇ ಬಳಕೆಯಾಗಿದ್ದರೂ ಇ೦ಥಹ ಗೆಲುವಿಗೆ ವಿಜ್ನಾನಿಗಳೇ ಪ್ರತ್ಯಕ್ಷ ಕಾರಣ ಹೊರತು ಯಾವುದೇ ಆಡಳಿತಾರೂಢ ರಾಜಕೀಯ ಪಕ್ಷಗಳಲ್ಲ ಎನ್ನುವುದನ್ನು ಅರಿಯದಷ್ಟು ಸ೦ವೇದನಾರಹಿತರೇನಲ್ಲ ನಮ್ಮ ರಾಜಕೀಯ ನಾಯಕರು.ಆದರೂ ತಮ್ಮ ರಾಜಕೀಯ ಹಿತಾಸಕ್ತಿಗಳಿಗಾಗಿ ಈ ಅಭೂತಪೂರ್ವ ಯಶಸ್ಸಿನ ಕೀರ್ತಿಯನ್ನು ತಮ್ಮದಾಗಿಸಿಕೊಳ್ಳಲು ಎಲ್ಲ ಪ್ರಮುಖ ಪಕ್ಷಗಳು ಹೆಣಗಾಡಿದವು.ವೈಜ್ನಾನಿಕ ಯಶಸ್ಸನ್ನೂ ಸಹ ರಾಜಕೀಯದಾಟಕ್ಕೆ ಬಳಸಿಕೊ೦ಡ ರಾಜಕೀಯ ನೇತಾರರ ಚರ್ಯೆ ದೇಶದ ನಾಗರಿಕರಲ್ಲಿ ಪ್ರಜಾ ಪ್ರತಿನಿಧಿಗಳೆಡೆಗೊ೦ದು ತಿರಸ್ಕಾರ ಮೂಡಿಸಿದ್ದು ಸುಳ್ಳಲ್ಲ.

ಮತ್ತಷ್ಟು ಓದು »

16
ಆಕ್ಟೋ

ತಮಿಳ್ ಮಕ್ಕಳನ್ನು ಆತಂಕದ ಗುಮ್ಮನ ಕೈಗಿತ್ತ ‘ಅಮ್ಮ’!

– ತುರುವೇಕೆರೆ ಪ್ರಸಾದ್

Jayalilthaತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 18 ವರ್ಷಗಳ ನಂತರ ಅವರ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು ಇದೀಗ ಶಿಕ್ಷೆಯಾಗಿದೆ. ಅಧಿಕಾರ ಹಾಗೂ ಕೀರ್ತಿಯ ಉತ್ತುಂಗದಲ್ಲಿದ್ದಾಗಲೇ ಅವರು ಜೈಲು ಸೇರುವಂತಾಗಿದೆ. ಹಾಲಿ ಮುಖ್ಯಮಂತ್ರಿಯೊಬ್ಬರು ಭ್ರಷ್ಟಾಚಾರ ಹಾಗೂ ಅಕ್ರಮ ಸಂಪತ್ತು ಗಳಿಕೆ ಆರೋಪದ ಮೇಲೆ ಜೈಲು ಸೇರುತ್ತಿರುವುದೂ ಇದೇ ಮೊದಲ ಬಾರಿಯಾದ್ದರಿಂದ ಈ ಪ್ರಕರಣ ಭಾರೀ ಮಹತ್ವ ಹಾಗೂ ಪ್ರಚಾರ ಪಡೆದಿದೆ. ಎಲ್ಲಾ ತತ್ವ, ಸಿದ್ಧಾಂತ,ಕಾನೂನಿನ ನಿಯಂತ್ರಣ ಮೀರಿ ಅಪರಾಧೀಕರಣಗೊಳ್ಳುತ್ತಿರುವ ರಾಜಕೀಯ ಕ್ಷೇತ್ರಕ್ಕೆ ನ್ಯಾಯಾಲಯದ ತೀರ್ಪು ಒಂದು ಎಚ್ಚರಿಕೆಯ ಗಂಟೆ ಎಂದರೆ ತಪ್ಪಾಗಲಾರದು. ಇದು ಜಯಲಲಿತಾ ವಿರೋಧಿಗಳಿಗೆ ಸಿಕ್ಕ ಜಯವೂ ಹೌದು, ಹಾಗೆಯೇ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸತ್ಯ, ನ್ಯಾಯಕ್ಕೆ ಸಿಕ್ಕ ಜಯವೂ ಹೌದು.

ಆದರೆ ಈ ಪ್ರಕರಣದ ಹಿನ್ನಲೆಯಲ್ಲಿ ಕೆಲವೊಂದು ಅಂಶಗಳನ್ನು ಯೋಚಿಸಬೇಕಿದೆ. ಜಯಲಲಿತಾ ಅವರಿಗೆ ಅಕ್ರಮ ಸಂಪತ್ತು ಗಳಿಕೆ ಆರೋಪದ ಹಿನ್ನಲೆಯಲ್ಲಿ ಶಿಕ್ಷೆಯಾಗಿರುವುದರಿಂದ ಇನ್ನು ಮುಂದಾದರೂ ನಮ್ಮ ರಾಜಕೀಯ ಕ್ಷೇತ್ರ ಶುದ್ಧೀಕರಣಗೊಳ್ಳುತ್ತದೆ ಎಂದು ನಂಬುವ ಹಾಗಿಲ್ಲ. ಯಾಕೆಂದರೆ ಜಯಲಲಿತಾ ಅವರ ಅಕ್ರಮ ಅಸ್ತಿ ಪ್ರಮಾಣ ಕೇವಲ 66 ಕೋಟಿ. ಆದರೆ ಸಾವಿರಾರು ಕೋಟಿ ಅಕ್ರಮ ಆಸ್ತಿ ಮಾಡಿ, ಸ್ವಿಸ್ ಬ್ಯಾಂಕಿನಲ್ಲಿ ಕೋಟ್ಯಂತರ ರೂಪಾಯಿ ಇಟ್ಟಿರುವ ನೂರಾರು ರಾಜಕಾರಣಿಗಳು, ಉದ್ಯಮಿಗಳು ಹಾಗೂ ಅಧಿಕಾರಿಗಳು ಇದ್ದಾರೆ. ಅವರೆಲ್ಲರ ವಿರುದ್ಧ ನಮ್ಮ ಕಾನೂನು ಏನೂ ಮಾಡಲಾಗಿಲ್ಲ. ಸ್ವಾತಂತ್ಯ್ರ ಬಂದ ನಂತರ ದೇಶದಲ್ಲಿ ನಡೆದಿರುವ ಒಟ್ಟಾರೆ ಹಗರಣಗಳಲ್ಲಿ ರೂ.91063323430000 ರಷ್ಟು ದೊಡ್ಡ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಹೇಳಲಾಗಿದೆ. ಈ ಅಕ್ರಮ ಹಣದ ಫಲಾನುಭವಿಗಳಲ್ಲಿ ಎಷ್ಟು ಮಂದಿಗೆ ಶಿಕ್ಷೆ ಆಗಿದೆ? ಯಾಕೆ ಆಗಿಲ್ಲ? ಎಂದು ಯೋಚಿಸಬೇಕಿದೆ.

ಹಾಗಾದರೆ ಜಯಲಲಿತಾ ಅವರಿಗೆ ಶಿಕ್ಷೆ ಆಗಿದ್ದೇಕೆ? ಜಯಲಲಿತಾ ಅನುಭವದ ಕೊರತೆ ಹಾಗೂ ಮಿತಿ ಮೀರಿದ ಉದ್ಧಟತನದಿಂದ ಎಲ್ಲಾ ತೊಂದರೆಗಳನ್ನು ತಾವೇ ಆಹ್ವಾನಿಸಿಕೊಂಡರು. 1991-96 ರ ಅಧಿಕಾರಾವಧಿಯಲ್ಲಿ ಅವರು ತೆಗೆದುಕೊಂಡ ತಪ್ಪು ನಿರ್ಧಾರಗಳಿಗೆ ಅವರು ಈಗ ಭಾರೀ ಬೆಲೆ ತೆರುವಂತಾಗಿದೆ. ಆ ಅವಧಿಯಲ್ಲಿ ಅವರಿಗೆ ರಾಜಕೀಯ ಪ್ರಬುದ್ಧತೆ ಇರಲಿಲ್ಲ, ರಾಜಕೀಯಕ್ಕೆ ಬೇಕಾದ ಸೂಕ್ಷ್ಮತೆ, ದೂರಾಲೋಚನೆ , ಅನುಭವ ಯಾವುದೂ ಅವರಿಗಿರಲಿಲ್ಲ. ಹೋಗಲೆಂದರೆ ಅವರಿಗೆ ಆ ಸಮಯದಲ್ಲಿ ಸೂಕ್ತ ಮಾರ್ಗದರ್ಶನವೂ ಸಿಗಲಿಲ್ಲ. ಅವರ ಬಂಧುಗಳು ಅಧಿಕಾರದಲ್ಲಿ ಭಾರೀ ಹಸ್ತಕ್ಷೇಪ ನಡೆಸಿದರು.ನೂರಾರು ಕೋಟಿ ರೂಗಳ ಅಕ್ರಮ ನಡೆಯಿತು. ಜೊತೆಗೆ ಜಯಲಲಿತಾ ತಮ್ಮ ರಾಜಕೀಯ ಜೀವನದುದ್ದಕ್ಕೂ ವಿರೋಧಿಗಳನ್ನೇ ಸೃಷ್ಟಿಸಿಕೊಳ್ಳುತ್ತಾ ಹೋದರು. ಸುಬ್ರಹ್ಮಣ್ಯಸ್ವಾಮಿ, ಟಿ.ಎನ್.ಶೇಷನ್, ಚಿದಂಬರಂ ಎಲ್ಲರನ್ನೂ ಎದುರು ಹಾಕಿಕೊಂಡರು. ಪ್ರಜಾಪ್ರಭುತ್ವದಿಂದ ಬಂದ ಅಧಿಕಾರವನ್ನು ಸರ್ವಾಧಿಕಾರಿಯ ಧೋರಣೆಯಿಂದ ನಡೆಸಿದರು.ಅವರಲ್ಲಿ ಅಹಂ ತುಂಬಿ ತುಳುಕುತ್ತಿತ್ತು. ವಿರೋಧಿಗಳೊಂದಿಗೆ ರಾಜಕೀಯ ದ್ವೇಷಕ್ಕೆ ಮೀರಿದ ವೈಯಕ್ತಿಕ ಸೇಡಿನ ಮನೋಭಾವ ಬೆಳೆಸಿಕೊಂಡರು. ಯಾರನ್ನೂ ಬೇಕಾದರೂ ದುಡ್ಡು ಚೆಲ್ಲಿ ಕೊಂಡುಕೊಳ್ಳಬಲ್ಲೆ ಎಂಬ ದರ್ಪ ಮೆರೆದರು.

ಮತ್ತಷ್ಟು ಓದು »

14
ಆಕ್ಟೋ

ನಮ್ಮ ನಮ್ಮ ಭಾಷೆಯ ಸಮಸ್ಯೆ

– ಡಾ. ಶ್ರೀಪಾದ ಭಟ್

ಸಹಾಯಕ ಪ್ರಾಧ್ಯಾಪಕ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು.

ಕನ್ನಡ ಕಲಿವಾರಗಳ ಹಿಂದೆ ಭಾರತದ ಖಗೋಳ ವಿಜ್ಞಾನಿಗಳ ತಂಡ ಮಂಗಳನ ಕಕ್ಷೆಗೆ ಉಪಗ್ರಹವನ್ನು ಯಶಸ್ವಿಯಾಗಿ ಸೇರಿಸಿತು. ಈ ಸಂದರ್ಭದಲ್ಲಿ ಬಹುತೇಕ ಕನ್ನಡ ವಾಹಿನಿಗಳು ಚರ್ಚೆಯನ್ನು ಏರ್ಪಡಿಸಿದ್ದವು. ಖಗೋಳ ಅನ್ನುತ್ತಿದ್ದಂತೆ ಈ ಕುರಿತ ಭಾರತದ ಪ್ರಾಚೀನ ಜ್ಞಾನವೇತ್ತರನ್ನು ಹಾಗೂ ಇಂದಿನ ವಿಜ್ಞಾನಿಗಳನ್ನು ಅಥವಾ ಅವರ ಪ್ರತಿನಿಧಿಗಳು ಅಂದುಕೊಂಡವರನ್ನು ಚರ್ಚೆಗೆ ಆಹ್ವಾನಿಸಬೇಕಲ್ಲ? ವಾಹಿನಿಗಳೂ ಹಾಗೆಯೇ ಮಾಡಿದವು. ಎರಡೂ ಕ್ಷೇತ್ರದವರನ್ನು ಜೊತೆಗೆ ನಡುವೆ ವಿಚಾರವಾದಿಗಳನ್ನು ಕರೆತಂದು ಕೂರಿಸಲಾಗಿದ್ದ ಚರ್ಚೆಯೊಂದನ್ನು ನೋಡುತ್ತಿದ್ದೆ. ಜ್ಯೋತಿಷಶಾಸ್ತ್ರದಲ್ಲಿ ಮಂಗಳನ ಬಗ್ಗೆ ಹೀಗೆ ಹೇಳಿದೆ, ಹಾಗೆ ಹೇಳಿದೆ. ಅದೇ ಸತ್ಯ; ಭಾರತೀಯ ಋಷಿ ಮುನಿಗಳು ಅಣುವಿನ ಬಗ್ಗೂ ಪ್ರಸ್ತಾಪಿಸಿದ್ದಾರೆ, ಅವರಿಗೆಲ್ಲ ತಿಳಿದಿತ್ತು ಎಂಬಂತೆ ಆ ಶಾಸ್ತ್ರದವರು ಅನ್ನುತ್ತಿದ್ದರೆ ಮತ್ತೊಂದೆಡೆ ಹಾಗಾದ್ರೆ ಅವರಿಗೆ ಅಣುಬಾಂಬ್ ತಿಳಿದಿತ್ತಾ? ಇದೆಲ್ಲ ನಾನ್ಸೆನ್ಸ್ ಎಂದು ಆಧುನಿಕ ಜ್ಞಾನ ಪ್ರತಿಪಾದಕರು ಬಿಸಿಬಿಸಿ ಚರ್ಚೆ ಮಾಡುತ್ತಿದ್ದರು.ತಮ್ಮ ತಮ್ಮ ಪ್ರತಿಪಾದನೆಗೆ ಎರಡೂ ಗುಂಪಿನವರೂ ಬಲವಾಗಿ ಅಂಟಿಕೊಂಡೇ ಇದ್ದರು. ಸಮಯವಾಯ್ತು, ಚರ್ಚೆ ನಿಂತಿತು. ಇಂಥ ಚರ್ಚೆಗೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ.

ಕಾರಣ ಇಷ್ಟೇ. ಭಾರತದ ಪ್ರಾಚೀನ ಜ್ಞಾನ ಅಂದರೆ ಇಲ್ಲಿ ಚಂದ್ರ, ಸೂರ್ಯ, ಮಂಗಳ ಮೊದಲಾದವುಗಳ ಬಗ್ಗೆ ಜ್ಯೋತಿಷಶಾಸ್ತ್ರದಲ್ಲಿ ಹೇಳಿರುವ ಮಾತುಗಳು ಅಥವಾ ಪಾರಂಪರಿಕ ಜ್ಞಾನ. ಇವುಗಳ ವಿವರ ಭಾಸ್ಕರಾಚಾರ್ಯ, ವರಾಹಮಿಹಿರ ಮೊದಲಾದವರ ಕೃತಿಗಳಲ್ಲಿ ತಕ್ಕಮಟ್ಟಿಗೆ ದೊರೆಯುತ್ತದೆ. ಇದನ್ನು ಇಂದಿನ ಜ್ಯೋತಿಷ್ಕರು ತುಸು ತಿಳಿದಿರುತ್ತಾರೆ. ಇನ್ನು ಆಧುನಿಕ ವಿಜ್ಞಾನ ಕುರಿತು ಮಾತನಾಡುವವರು ವಿಜ್ಞಾನಿಗಳ ಸಾಧನೆಯನ್ನು ಪತ್ರಿಕೆಗಳಲ್ಲಿ ಓದಿದವರೋ ವಿಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಪಾಠ ಮಾಡುವವರೋ ಆಗಿದ್ದವರು. ಇವರಲ್ಲಿ ಎರಡೂ ವರ್ಗದವರೂ ಈ ಎರಡೂ ಕ್ಷೇತ್ರದ ಜ್ಞಾನ ಸೃಷ್ಟಿಗೆ ಕಾರಣರಾದವರಲ್ಲ, ಬದಲಿಗೆ ಯಾರೋ ಮಾಡಿದ ಪ್ರಯೋಗ-ಅದರ ಫಲಿತಗಳ ಅಂತಿಮ ಫಲಾನುಭವಿಗಳು.

ಮತ್ತಷ್ಟು ಓದು »