ಭ್ರಷ್ಟ ಜಯಲಲಿತಾ ಯಾವೆಲ್ಲದರ ಫಲಿತಾಂಶ?
– ಚೇತನಾ ತೀರ್ಥಹಳ್ಳಿ
ಅಧಿಕೃತವಾಗಿ ತನ್ನ ಸ್ವಂತದವರೆಂದು ಹೇಳಿಕೊಳ್ಳಲು ಮತ್ತೊಂದು ಜೀವ ಜೊತೆಗಿರದ ಜಯಲಲಿತಾ ಇವೆಲ್ಲವನ್ನೂ ಮಾಡಿಟ್ಟಿದ್ದು ಯಾಕಾಗಿ? ತನ್ನ ನೆಲದ ಬಡ ಜನರಿಗೆ ರೂಪಾಯಿಗೊಂದು ಇಡ್ಲಿ, ಕುಡಿಯುವ ನೀರು, ಸೂರು ಎಂದೆಲ್ಲ ಜನಪರ – ಜನಪ್ರಿಯ ಯೋಜನೆಗಳನ್ನು ರೂಪಿಸಿದ ಜಯಲಲಿತಾ ಅದೇ ಜನರ ತೆರಿಗೆ ಹಣವನ್ನು ನುಂಗಿ ಕೂತಿರುವುದು ಯಾಕೆ? ನಿಜಕ್ಕೂ ಈ ಪರಿಯ ಹಪಾಹಪಿ ಅವರಲ್ಲಿದೆಯೇ? ತುಸು ಜಂಭದ, ಆದರೆ ಅಪ್ರಮಾಣಿಕತೆ ಕಾಣದ ಅವರ ಮುಖ ಹಾಗೂ ನಿಲುವಿನಲ್ಲಿ ಮೋಸವಿದೆಯೇ? ಇಂದು ನಾವು ನೋಡುತ್ತಿರುವ ಭ್ರಷ್ಟ ರಾಜಕಾರಣಿ ಜಯಲಲಿತಾ ರೂಪುಗೊಂಡಿದ್ದು ಹೇಗೆ?
ಬದುಕನ್ನು ಗಂಡು – ಹೆಣ್ಣೆಂಬ ಭೇದ ಮೀರಿದ ದೃಷ್ಟಿಕೋನದಿಂದ ನೋಡಬೇಕೆನ್ನುವುದು ನಿಜವಾದರೂ ಅದರ ಹೊರಳಾಟಗಳನ್ನು ನೋಡುವಾಗ ಈ ಭೇದದ ಊರುಗೋಲು ಅಗತ್ಯವಾಗಿಬಿಡುತ್ತದೆ. ಏಕೆಂದರೆ, ಬದುಕು ಒಂದೇ ಆದರೂ ಅದನ್ನು ಹೆಣ್ಣು ಎದುರುಗೊಳ್ಳುವ ಬಗೆಯೇ ಬೇರೆ ಮತ್ತು ಗಂಡು ಒಳಗೊಳಿಸಿಕೊಳ್ಳುವ ಬಗೆ ಬೇರೆ. ಏಕೆಂದರೆ, ನಾಗರಿಕತೆಯ ಆರಂಭಕಾಲದಿಂದಲೂ ಗಂಡು ಹೆಣ್ಣಿಗೆ ಕೊಡಲಾಗಿರುವ ಅವಕಾಶಗಳು ಹಾಗಿವೆ.
ಸದ್ಯದ ಭಾರತೀಯ ರಾಜಕಾರಣದ ಮುಖ್ಯಧಾರೆಯಲ್ಲಿರುವ ಐವರು ಹೆಣ್ಣುಗಳ ಬದುಕು ಮತ್ತು ಸಾಧನೆಗಳು ವಿಶಿಷ್ಟವೇ. ಅವರ ಹಗರಣಗಳೂ ಕೂಡಾ. ಭ್ರಷ್ಟಾಚಾರದ ವಿಷಯಕ್ಕೆ ಬಂದಾಗ ಅಲ್ಲಿ ಕೂಡ ಲಿಂಗ ತಾರತಮ್ಯ ಇರುವುದಿಲ್ಲ. ವಿಚಾರಣೆ, ಶಿಕ್ಷೆ, ಪರಿಣಾಮಗಳಿಗೆ ಸಂಬಂಧಿಸಿದಂತೆ ಅದನ್ನು ತರತಮವಿಲ್ಲದೆಯೇ ನೋಡಬೇಕಾಗುತ್ತದೆ. ಈ ಸಾಮಾಜಿಕ ಆಯಾಮವನ್ನು ಮೀರಿ, ಮಾನಸಿಕ ಸ್ತರದಲ್ಲಿ ನೋಡುವಾಗ, ಮಾನವೀಯ ಚಿಂತನೆಗೆ ಹಚ್ಚಿ ನೋಡುವಾಗ ಬಿಚ್ಚಿಕೊಳ್ಳುವ ದೃಶ್ಯಗಳೂ ಬೇರೆಯೇ ಇರುತ್ತವೆ. ಅಲ್ಲಿ ಮಾಯಾವತಿಯ ಮೂರ್ತಿಗಳಿಗೆ, ಚಿನ್ನದ ಕತ್ತಿಗಳಿಗೆ ಬೇರೆಯೇ ಅರ್ಥ ಕಾದಿರುತ್ತದೆ. ಹಿಂಜಿಹೋದ ಕಾಟನ್ ಸೀರೆಯನ್ನಷ್ಟೆ ಉಡುವ ಮಮತಾ ಬ್ಯಾನರ್ಜಿಯ ಹೆಸರು ಯಾಕೆ ಚೀಟಿ ವ್ಯವಹಾರದಂಥದರಲ್ಲಿ ಕಾಣಿಸುತ್ತದೆ ಎಂಬುದರ ಅರಿವಾಗುತ್ತದೆ. ಯಾಕೆ ಉಮಾ ಭಾರತಿ ಹಾಗೆ ರಚ್ಚೆ ಹಿಡಿದ ಮಗುವಿನಂತಾಡುತ್ತಾರೆ ಎಂದರೆ ಅವರ ಸೋತ ಹೃದಯದ ನೋವು ಕೇಳಿಸುತ್ತದೆ. ಸೋನಿಯಾರ ನಗುವಿಲ್ಲದ ಮುಖವೂ ಅವರ ಪರಿವಾರದೊಂದಿಗೆ ಹೆಣೆದುಕೊಂಡ ಹಗರಣಗಳು, ಹಣದ ವ್ಯವಹಾರಗಳು ಮತ್ತೊಂದೇ ಕಥೆ ಹೇಳತೊಡಗುತ್ತವೆ. ಈ ಎಲ್ಲವನ್ನು ಆ ಎಲ್ಲರ ಅಪರಾಧಗಳ ಸಮರ್ಥನೆಗಾಗಿ ಖಂಡಿತ ಬಳಸಬಾರದು. ಆದರೆ ಅರ್ಥೈಸಿಕೊಳ್ಳಲು ಮತ್ತು ನಮ್ಮನಮ್ಮ ಸ್ತರಗಳಲ್ಲಿ ಅವನ್ನು ಅನ್ವಯಿಸಿಕೊಂಡು ನೋಡಲು ಇವು ಬೇಕಾಗುತ್ತವೆ.
ಮತ್ತಷ್ಟು ಓದು 
ಧರ್ಮ ಮತ್ತು ಅಂಧತ್ವ
-ಡಾ ಅಶೋಕ್ ಕೆ ಆರ್.
ಆಗ ನಾನು ಕಲ್ಬುರ್ಗಿಯಲ್ಲಿ ಓದುತ್ತಿದ್ದೆ. ಗೆಳೆಯನೊಬ್ಬನನ್ನು ಕಾಣುವ ಸಲುವಾಗಿ ಕಲ್ಬುರ್ಗಿಯಿಂದ ಲಿಂಗಸೂರು ಕಡೆಗೆ ಹೋಗುವ ಬಸ್ಸನ್ನೇರಿದೆ. ದಾರಿ ಮಧ್ಯದಲ್ಲಿ ಕುಟುಂಬವೊಂದು ಬಸ್ಸಿನೊಳಗೆ ಬಂತು. ಮಗ, ಸೊಸೆ ಮತ್ತು ಅತ್ತೆ ಎಂಬುದು ಅವರ ಮಾತಿನಿಂದ ಅರಿವಾಗುತ್ತಿತ್ತು. ಅದು ಮುಸ್ಲಿಂ ಕುಟುಂಬವೆಂದು ತಿಳಿದಿದ್ದು ಬುರ್ಖಾ ಧರಿಸಿದ್ದ ಸೊಸೆಯ ಉಡುಪಿನಿಂದ. ಉತ್ತರ ಕರ್ನಾಟಕದ ಕಡೆ (ನಂತರದ ದಿನಗಳಲ್ಲಿ ಕರಾವಳಿ ಭಾಗದಲ್ಲೂ ಕಂಡಂತೆ) ಮುಸ್ಲಿಮರನ್ನು ಅವರ ಮಾತಿನ ದಾಟಿಯಿಂದ ಗುರುತು ಹಿಡಿಯಲಾಗುವುದಿಲ್ಲ ನಮ್ಮ ಹಳೆ ಮೈಸೂರು ಭಾಗದಲ್ಲಿ ಗುರುತಿಸುವಂತೆ, ಮತ್ತು ಬಹುತೇಕ ಎಲ್ಲ ಕನ್ನಡ ಚಿತ್ರಗಳಲ್ಲೂ ತೋರಿಸಿರುವಂತೆ. ಅಂದು ಬಸ್ಸೇರಿದ ಕುಟುಂಬದಲ್ಲಿ ಅತ್ತೆ ಉತ್ತರ ಕರ್ನಾಟಕದ ಕಡೆಯ ಸೀರೆಯನ್ನು ಉಟ್ಟಿದ್ದರು, ಸೊಸೆ ಬುರ್ಖಾಧಾರಿಯಾಗಿದ್ದರು.
ಕಳೆದೊಂದು ವಾರದಿಂದ ಅಂತರ್ಜಾಲ ತಾಣಗಳಲ್ಲಿ ಬುರ್ಖಾದ ಬಗೆಗಿನ ಚರ್ಚೆ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಮೇಲಿನ ಘಟನೆ ನೆನಪಾಯಿತು. ‘ನಾನು ವಿವಾದದ ವಿಷಯಗಳನ್ನು ಎತ್ತಿಕೊಂಡು ಮಾತನಾಡುತ್ತಿದ್ದೇನೋ ಅಥವಾ ನಾನು ಮಾತನಾಡಿದ್ದೆಲ್ಲವೂ ವಿವಾದವಾಗುತ್ತೋ ಗೊತ್ತಿಲ್ಲ’ ಎಂದೇ ಮಾತುಗಳನ್ನಾರಂಭಿಸಿದ್ದ ದಿನೇಶ್ ಅಮೀನ್ ಮಟ್ಟುರವರ ಮಾತುಗಳು ಮತ್ತೆ ಚರ್ಚೆಗಳೊಂದಷ್ಟನ್ನು ಹುಟ್ಟುಹಾಕಿವೆ. ಪತ್ರಕತ್ರ ಬಿ.ಎಂ.ಬಷೀರ್ರವರ “ಬಾಡೂಟದ ಜೊತೆ ಗಾಂಧಿ ಜಯಂತಿ” ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ. ಅವರು ಮೋದಿಯ ಬಗ್ಗೆ, ಮಾಧ್ಯಮದ ಬಗ್ಗೆ, ಮಂಗಳೂರಿನ ಕೋಮು ಸಾಮರಸ್ಯದ ಬಗ್ಗೆ, ಆ ಕೋಮು ಸಾಮರಸ್ಯದಿಂದಲೇ ಹುಟ್ಟಿದ ಕೋಮುವಾದತನದ ಬಗ್ಗೆ, ಕೋಮುವಾದಿಗಳ ಅಟ್ಟಹಾಸದ ನಡುವೆಯೇ ನಿಜ ಜಾತ್ಯತೀತ ಮನೋಭಾವದ ಧರ್ಮಸಹಿಷ್ಣುಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ಕೊನೆಗೆ ಅವರ ಭಾಷಣ ಚರ್ಚೆಗೊಳಗಾಗುತ್ತಿರುವುದು ಅವರು ಪ್ರಸ್ತಾಪಿಸಿದ ಬುರ್ಖಾ ಪದ್ಧತಿಯ ಬಗೆಗೆ ಮಾತ್ರ! ಅವರು ಬುರ್ಖಾ ವಿಷಯಕ್ಕೆ ಬರುವುದಕ್ಕೆ ಮೊದಲು ಮುಸ್ಲಿಂ ಸಮಾಜದ ಒಳಬೇಗುದಿಗಳನ್ನು ಸಮಾಜದ ಮುಂದೆ ತೆರದಿಡುವ ಕೆಲಸವನ್ನು ಬೋಳುವಾರ ಮೊಹಮದ್, ಸಾರಾ ಅಬೂಬಕ್ಕರ್, ಫಕೀರ್ ಮೊಹಮದ್ ಕಟ್ಪಾಡಿ ಸಮರ್ಥವಾಗಿ ನಿರ್ವಹಿಸಿದ್ದಾರೆ. ಅವರು ಹಾಕಿದ ದಾರಿಯಲ್ಲಿ ಜ್ಯೋತಿಯನ್ನಿಡಿದು ನಡೆಯುವವರ ಕೊರತೆ ಎದ್ದು ಕಾಣುತ್ತಿದೆ ಎಂಬ ಮಾತುಗಳನ್ನು ಹೇಳಿದ್ದಾರೆ. ಬಿ.ಎಂ.ಬಷೀರ್ ಸ್ವಲ್ಪ ಸಾಫ್ಟ್ ಕಾರ್ನರಿನಲ್ಲಿ ಬರೆಯೋದು ಜಾಸ್ತಿ. ಮುಸ್ಲಿಂ ಸಮುದಾಯದ ತಲ್ಲಣಗಳು ಈ ಪುಸ್ತಕದಲ್ಲಿ ಕಾಣಸಿಗುತ್ತಿಲ್ಲ ಎಂದು ಸಲಹೆಯನ್ನು ಕೊಟ್ಟಿದ್ದಾರೆ. ಮುಸ್ಲಿಮನಾದವನು ಆ ಸಮುದಾಯದ ತಲ್ಲಣಗಳನ್ನು ಸಮರ್ಥವಾಗಿ ಬಿಂಬಿಸಲು ಸಾಧ್ಯ ಎಂಬುದು ಎಷ್ಟು ಸತ್ಯವೋ ಮುಸ್ಲಿಂ ಲೇಖಕನಾದ ಮಾತ್ರಕ್ಕೆ ಮುಸ್ಲಿಂ ಸಮುದಾಯದ ತಲ್ಲಣಗಳನ್ನಷ್ಟೇ ಬರೆಯಬೇಕು ಎಂಬುದೂ ಒಪ್ಪತಕ್ಕ ವಿಷಯವೇನಲ್ಲ. ಮತ್ತಷ್ಟು ಓದು 
” ಬನ್ನಿ , ಪ್ರೀತಿಯಿಂದ ಬದಲಾಯಿಸೋಣ ನಮ್ಮ ಈ ಭಾರತವನ್ನು “
-ದರ್ಶನ್ ಕುಮಾರ್
ಭಾರತ ಎಂದ ತಕ್ಷಣ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಅನ್ನಿಸುವುದು, ಈ ದೇಶದ ತುಂಬಾ ಬರಿ ಸಮಸ್ಯೆಗಳ ಸಾಗರವೆ ಇದೆ ಅನ್ನುವಂತಹ ಭಾವನೆ . ನನ್ನ ಪ್ರಶ್ನೆ, ಈ ಸಮಸ್ಯೆಗಳ ಕಾರಣಕರ್ತರು ಯಾರು ??? ಇದಕ್ಕೆ ಉತ್ತರ ಹುಡಕಲು ಹೊರಟರೆ “ಮೊಟ್ಟೆ ಮೊದಲ-ಕೋಳಿ ಮೊದಲ” ಅನ್ನೋ ಪ್ರಶ್ನೆಗಳೇ ನಮಗೆ ಸಿಗೋ ಉತ್ತರಗಳು . ಕೆಲವರು ಸರ್ಕಾರಗಳೇ ಇದಕ್ಕೆ ಕಾರಣವೆಂದರೆ, ಈ ಸರ್ಕಾರಗಳು ರಚಿಸಲ್ಪಟ್ಟಿದ್ದು ನಮ್ಮಂತಹ ಜನ ಸಾಮಾನ್ಯರಿಂದಲ್ಲವೇ.. ಅನ್ನೋ ಪ್ರಶ್ನೆಗಳ ಸರಣಿ ಮುಂದುವರೆಯುತ್ತದೆ ವಿನಹ ಉತ್ತರ ಸಿಗುವುದಿಲ್ಲ .
ಹೋಗ್ಲಿ ಬಿಡಿ ನಾವು ಏನು ಮಹಾ ಮಾಡೋಕೆ ಆಗುತ್ತೆ, ಈ ವ್ಯವಸ್ತೆ ಇರೋದೆ ಹೀಗೆಂದು, ಆ ವ್ಯವಸ್ಥೆಯಲ್ಲಿ ನಮ್ಮ ಪಾತ್ರವೇನು ಇಲ್ಲ ಎಂಬಂತೆ ನುಣಿಚಿಕೊಳ್ಳುತ್ತಾ ಸಾಗಿದ್ದೇವೆ ಅಲ್ಲವೇ? ಈ ಭ್ರಷ್ಟ ವ್ಯವಸ್ತೆಯಲ್ಲಿ ಯಾವುದಾದರು ಒಂದು ರೀತಿಯಲ್ಲಿ ನಾವು ಕೂಡ ಭ್ರಷ್ಟಾಚಾರಕ್ಕೆ ಸಹಾಯ ಮಾಡಿದ್ದೇವೆ ಅಥವಾ ಸಹಾಯ ಪಡೆದುಕೊಂಡಿದ್ದೇವೆ ಅಲ್ಲವೇ ?. ಇಂದಿನ ನಮ್ಮ ಭಾರತದಲ್ಲಿ ಮತ್ತೊಮ್ಮೆ ಏನಾದರೂ ಬುದ್ಧ ಹುಟ್ಟಿದ್ದರೆ “ಸಾವಿಲ್ಲದ ಮನೆಯಲ್ಲಿ ಸಾಸಿವೆ” ತೆಗೆದುಕೊಂಡು ಬಾ ಎಂದು ಹೇಳುವದರ ಬದಲು “ಭ್ರಷ್ಟಾಚಾರ ಇಲ್ಲದ ಜಾಗದಿಂದ ಅಥವಾ ಭ್ರಷ್ಟಾಚಾರವನ್ನೇ ಮಾಡದ ವ್ಯಕ್ತಿಯನ್ನು” ಹುಡುಕಿಕೊಂಡು ಬಾ ಎಂದು ಹೇಳಿರುತ್ತಿದ್ದನೇನೋ ..! ಮತ್ತಷ್ಟು ಓದು 
ಸಾಮಾನ್ಯನ ಕಣ್ಣಲ್ಲಿ ಕರಾವಳಿ ಕೋಮುವಾದ
-ಪ್ರಸಾದ್ ಗಣಪತಿ
ಪದೇ ಪದೇ ಕರಾವಳಿಯಲ್ಲಿ ಗಲಭೆಯಾದಾಗ ಕರಾವಳಿ ಕೋಮುವಾದ, ಕರಾವಳಿ ತಾಲಿಬಾನ್ ಎನ್ನುವ ಮಾತುಗಳು ಕೇಳಿ ಬರುತ್ತವೆ. ಪಕ್ಷವೊಂದರ ಆಡಳಿತಾವಧಿಯಲ್ಲಿ ನಡೆದ ಒಂದು ಸಮುದಾಯದ ಓಲೈಕೆ ನೀತಿಗಳು, ಹಾಗೂ ಒಂದು ಸಮುದಾಯದ ಮೇಲಿನ ಹಲ್ಲೆಗಳ ಬಗ್ಗೆ ತಳೆದ ಮೃದು ನೀತಿಗಳು ಈ ಅಸಹನೆ ಇದರ ಬೆನ್ನಿಗಿದ್ದಾವೆ ಎಂದು ಯಾರು ಹೇಳುವುದಿಲ್ಲ. ಪುತ್ತೂರಿನ ಹಿಂದೂ ಯುವತಿ ಸೌಮ್ಯ ಭಟ್ ಳನ್ನು ಇರಿದು ಕೊಂದಿದ್ದು, ಕಾಟಿಪಳ್ಳದಲ್ಲಿ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ, ಬಳ್ಕುಂಜೆ ರೇಪ್ ಮತ್ತು ಆತ್ಮಹತ್ಯೆ, ಲವ್ ಜಿಹಾದ್ ಮತ್ತು ಸಾಮಾಜಿಕ ತಾಣಗಳಲ್ಲಿ ಬೆತ್ತಲೆ ಚಿತ್ರಗಳ ( ಹಿಂದೂ ಯುವತಿಯರ ಚಿತ್ರ) ಈ ರೀತಿಯ ಪ್ರಕರಣಗಳಾದಗ ಸುಮ್ಮನಿರುವ ಬುದ್ಧಿ ಜೀವಿ ಬಳಗ, ಇನ್ನೊಂದು ಸಮುದಾಯದ ಮೇಲೆ ಹಲ್ಲೆ ನಡೆದಾಗ ಮಾತನಾಡುವುದು, ದೂರದೂರಲ್ಲಿ ಕುಳಿತು ಒಂದು ಪ್ರದೇಶದ ಜನರನ್ನು ಕೋಮುವಾದಿಗಳೆನ್ನುವುದು ಸತ್ಯಕ್ಕೆ ಅಪಚಾರವೆಸಗುವ ಕೆಲಸ. ಹಿಂದೆ ರೆಸಾರ್ಟ್ ಅಟ್ಯಾಕ್ ಆದಾಗ ಬರೆದ ಒಂದು ಲೇಖನದಲ್ಲಿ ನನ್ನ ಗ್ರಹಿಕೆಯನ್ನು ಬರೆದಿದ್ದೇನೆ.
ದೃಶ್ಯ ಮಾಧ್ಯಮದಲ್ಲಿ ಒಂದೇ ಸವನೆ ಮಂಗಳೂರಿನ ಪಡೀಲ್ನಲ್ಲಿ ನಡೆದ ಯುವಕ- ಯುವತಿಯರ ಮೇಲಿನ ಹಲ್ಲೆಯನ್ನು ನೋಡುತ್ತಾ ಯಾವುದು ಸರಿ ? ಯಾವುದು ತಪ್ಪು ? ಎಂದು ನಿರ್ಧರಿಸಲಾಗದ ಸ್ಥಿತಿಯಲ್ಲಿ ಜನರು ಇರಬಹುದುದಾದ ಈ ಹೊತ್ತಿನಲ್ಲಿ ನನ್ನ ಅಭಿಪ್ರಾಯ ಬರೆಯುತ್ತಿರುವೆ. ಸಾಮಾನ್ಯವಾಗಿ ಕೋಮುವಾದ, ಧರ್ಮ ರಕ್ಷಣೆಯ ಕೃತ್ಯವೆಂದು ಹೇಳಲ್ಪಡುತ್ತಿರುವ ಇವು ಇನ್ನೊಂದು ಮಗ್ಗುಲಲ್ಲಿ ನೋಡಿದರೆ ಸಾಂಸ್ಕೃತಿಕ,ಸಾಮಾಜಿಕ, ಸಂಘರ್ಷವಾಗಿ ಗೋಚರಿಸುತ್ತವೆ. ಸಾಮಾನ್ಯವಾಗಿ ಇಲ್ಲಿ ಏನು ನಡೆಯುತ್ತಿದೆ ಎಂದು ಇತರೆ ಪ್ರದೇಶದಲ್ಲಿ ಕುಳಿತವರಿಗೆ ಅರ್ಥವಾಗುವುದು ಕೊಂಚ ಕಷ್ಟ.
ಅವರೆಲ್ಲರೂ ಪ್ರತಿಭಾವಂತರೇ ಆದರೆ…..
ಭಾರತದಲ್ಲಿ ಹಗರಣಗಳು ಹೊಸದಲ್ಲ, ಹಗರಣಗಳ ಕುರಿತ ರಾಜಕೀಯ ಮತ್ತು ರಾಜಕೀಯೇತರ ಗದ್ದಲ, ಪ್ರತಿಭಟನೆಗಳು ಹೆಚ್ಚಾಗಿ ಚಳುವಳಿಗಳಾಗಿ ಮಾರ್ಪಟ್ಟ ನಂತರ ಅಧಿಕಾರದಲ್ಲಿರುವ ಪಕ್ಷಗಳು ಆ ಹಗರಣದ ತನಿಖೆಗೆ ವಿವಿಧ ಹಂತದ ತನಿಖಾ ಆಯೋಗಗಳನ್ನು ರಚಿಸುವುದೂ ಹೊಸದಲ್ಲ. ಸಿ.ಐ.ಡಿ ಪೋಲೀಸರಿಂದ ಹಿಡಿದು ನ್ಯಾಯಂಗ, ಸದನ ಸಮಿತಿ, ಸಿ.ಬಿ.ಐ ಸಂಸ್ಥೆಗಳೆಲ್ಲವನ್ನೂ ತನಿಖೆ ಮಾಡಲು ನಿಯೋಜಿಸುವುದು ಸಾಮಾನ್ಯ. ವಿಪರ್ಯಾಸದ ಸಂಗತಿಯೆಂದರೆ ಇಂತಹ ಎಷ್ಟೋ ತನಿಖಾ ಸಂಸ್ಥೆಗಳು ನೀಡಿದ ಅನೇಕಾನೇಕ ವರದಿಗಳು ಅನುಷ್ಠಾನಗೊಳ್ಳದೆ ಸರಕಾರದ ಯಾವುದೋ ಒಂದು ಕಛೇರಿಯಲ್ಲಿ ಧೂಳು ಹಿಡಿದು ಹಾಳಾಗುತ್ತವೆಯೇ ಹೊರತು ತನಿಖಾ ಆಯೋಗ ನೀಡಿದ ಸಲಹೆ ಸೂಚನೆಗಳನ್ನು ಯಥಾವತ್ತಾಗಿ ಜಾರಿಗೆ ತರುವುದು ಅಪರೂಪದ ಸಂಗತಿಯೇ ಆಗಿಹೋಗಿದೆ.
ಸಲಹೆ ಸೂಚನೆಗಳು ಜಾರಿಗೆ ಬರದಿರಲು ಪಟ್ಟಭದ್ರ ಹಿತಾಸಕ್ತಿಗಳ ಕೈವಾಡ, ರಾಜಕೀಯ ಪಕ್ಷಗಳ ವೋಟ್ ಬ್ಯಾಂಕ್ ಅನಿವಾರ್ಯತೆ, ಅಧಿಕಾರಸ್ಥ ಪಕ್ಷಗಳೇ ಬದಲಾವಣೆಗೊಳ್ಳುವುದು ಮತ್ತು ಕೆಲವು ಸಂದರ್ಭದಲ್ಲಿ ಆರೋಪಕ್ಕೊಳಗಾದವರು ಮತ್ತು ವಿವಿಧ ಕಾರಣಗಳಿಂದ ಅವರಿಗೆ ಬೆಂಬಲ ನೀಡುವವರು ಪ್ರತಿಭಟನೆಯ ರೂಪದಲ್ಲಿ ವಿರೋಧ ವ್ಯಕ್ತಪಡಿಸುವುದು. ಬಿಜೆಪಿಯ ದುರಾಡಳಿತದಿಂದ ಬೇಸತ್ತು ಕಾಂಗ್ರೆಸ್ಸಿಗೆ ಅವಕಾಶ ನೀಡಿದ ಕರ್ನಾಟಕದ ಮತದಾರ ಕಳೆದೊಂದೂವರೆ ವರುಷದಿಂದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಿಂದ ಭ್ರಮನಿರಸನಕ್ಕೊಳಗಾಗಿರುವುದೇ ಅಧಿಕ. ಮತ್ತಷ್ಟು ಓದು 
ಏನಿದು “ಪುರೋಹಿತಶಾಹಿ”? ಅದೆಲ್ಲಿದೆ? ಅದರ ಮೇಲೇಕೆ ಇವರಿಗೆ ಈ ಪರಿ ಕೋಪ?”
– ರಾಕೇಶ್ ಶೆಟ್ಟಿ
ಫೇಸ್ಬುಕಿನಲ್ಲಿ ದಿನಕ್ಕೆ ಅದೆಷ್ಟು ಲಕ್ಷ ಸ್ಟೇಟಸ್ ಅಪ್ಡೇಟ್ ಗಳು ಬರುತ್ತವೆಯೋ ಗೊತ್ತಿಲ್ಲ.ಅವುಗಳಲ್ಲಿ ಜೊಳ್ಳು-ಕಾಳು ಎಲ್ಲವೂ ಇರುತ್ತವೆ.ಇತ್ತೀಚೆಗೆ ನಮ್ಮ ಮೀಡಿಯಾಗಳಲ್ಲಿ “ಪ್ರಭಾ” ಎನ್ನುವವರ ಫೇಸ್ಬುಕ್ ಟಿಪ್ಪಣಿಯ ಮೇಲೆ “ವಿ.ಆರ್ ಭಟ್” ಅವರು ಮಾಡಿದ ಪ್ರತಿಕ್ರಿಯೆ ದೊಡ್ಡ ವಿವಾದವನ್ನೇ ಸೃಷ್ಟಿಸಿ, ಭಟ್ಟರ ಮೇಲೆ ಕೇಸು ದಾಖಲಾಗಿ ಅವರ ಬಂಧನವೂ ಆಯಿತು. ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾದ ಆ ಸ್ಟೇಟಸ್ಸಿನಲ್ಲಿ,ಪ್ರಭಾ ಅವರು “ಪುರೋಹಿತಶಾಹಿ” ಗಳನ್ನು ಟೀಕಿಸಿ ಅವರ ಮೇಲೆ ಸಿಟ್ಟು ಮಾಡಿಕೊಂಡು ಬರೆದಿದ್ದರು. ಭಟ್ಟರ ಕಮೆಂಟಿನ ಗಲಾಟೆಯಲ್ಲಿ ಕಳೆದು ಹೋಗಿದ್ದು, ಪ್ರಭಾ ಅವರು ಬರೆದ ಸ್ಟೇಟಸ್ಸಿನಲ್ಲಿದ್ದ “ಪುರೋಹಿತಶಾಹಿ”ಯ ಬಗ್ಗೆ ಆಗಬೇಕಿದ್ದ ಚರ್ಚೆ.
ಈ ಲೇಖನವನ್ನು ಓದುತ್ತಿರುವ ಬಹುತೇಕ ಜನ ಸಾಮಾನ್ಯರಿಗೆ “ಪುರೋಹಿತಶಾಹಿ” ಎಂದರೇನು ಎನ್ನುವ ಪ್ರಶ್ನೆ ಮೂಡಿದ್ದರೆ ಆಶ್ಚರ್ಯವೇನಿಲ್ಲ. ಹಾಗಾಗಿ ಪುರೋಹಿತಶಾಹಿಯನ್ನು ಅರ್ಥವೇನು ನೋಡೋಣ.
ಪುರೋಹಿತರು ಎಂದರೆ ದೇವರು ಮತ್ತು ಮಾನವನ ನಡುವಿನ ಮಧ್ಯವರ್ತಿಗಳು ಹಾಗೂ ಧರ್ಮದ ಏಕಸ್ವಾಮ್ಯ (ಒಂದರ್ಥದಲ್ಲಿ Copy Rights) ವನ್ನು ಹೊಂದಿದ್ದಾರೆ. ಶಾಹಿ ಎಂದರೆ ಆಳ್ವಿಕೆ ಎಂದರ್ಥ. ಪುರೋಹಿತರ ಆಳ್ವಿಕೆಯೇ “ಪುರೋಹಿತಶಾಹಿ”.
ಏನಿದು “ಪುರೋಹಿತಶಾಹಿ”? ಅದೆಲ್ಲಿದೆ? ಅದರ ಮೇಲೆಕೆ ಇವರಿಗೆ ಈ ಪರಿ ಕೋಪ?”
ಬುದ್ಧಿಜೀವಿಗಳ Definitionನ ಪ್ರಕಾರ “ಪುರೋಹಿತಶಾಹಿ”ಯೆಂದರೆ ದೇವರ ಬಗ್ಗೆ ಭಯ ಮೂಡಿಸಿ ಜನರನ್ನು ಮೂರ್ತಿ ಪೂಜೆಗಳಲ್ಲಿ ತೊಡಗಿಸಿ,ನೆಪ ಹೇಳಿ ಜೇಬು ತುಂಬಿಸಿಕೊಳ್ಳುವವರು ಮತ್ತು ಭವಿಷ್ಯ ಇತ್ಯಾದಿ ನೆಪದಲ್ಲಿ ಮೋಸ ಮಾಡುವವರು” ಅನ್ನುವ ಧಾಟಿಯಲ್ಲಿರುತ್ತದೆ. (ಬಹುಷಃ ಇದಕ್ಕಿಂತ ಉತ್ತಮ Definition ಇದ್ದರೂ ಇರಬಹುದು)
ಒಟ್ಟಾರೆಯಾಗಿ ಬುದ್ಧಿಜೀವಿಗಳ ಈ ಪುರೋಹಿತಶಾಹಿಯ ಕುರಿತ ಮೇಲಿನ Definition ಅನ್ನು ಅರ್ಥಮಾಡಿಕೊಂಡಾಗ ತಿಳಿಯುವುದೇನೆಂದರೆ, “ದೇವರು ಮತ್ತು ಜನರ ನಡುವಿನ ಮಧ್ಯವರ್ತಿಗಳಾದ ಈ ಪುರೋಹಿತರು ಜನರನ್ನು ನಮ್ಮ ಧರ್ಮ ಗ್ರಂಥಗಳು ಮತ್ತು ಆಚರಣೆಗಳಿಂದ ದೂರವಿರಿಸಿ ಮೂರ್ತಿ ಪೂಜೆಯ ಮೂಲಕ ಮೋಸ ಮಾಡಿ ಸಮಾಜವನ್ನು/ಧರ್ಮವನ್ನು ಹಾಳು ಮಾಡುತಿದ್ದಾರೆ”
ನಮ್ಮ ಬುದ್ಧಿಜೀವಿಗಳ ಈ ವಾದದ ಮೂಲವನ್ನು ನಿಮ್ಮ ಮುಂದೆ ಇಡಲು ಬಯಸುತ್ತೇನೆ.ಆಗ ನಮಗೆ ಮುಂದಿನ ಚರ್ಚೆಯ ಹಾದಿ ಸುಲಭವಾಗಾಹುದು.
ನಾಡು- ನುಡಿ: ಮರುಚಿಂತನೆ-‘ಕರ್ಣಾಟಕ’ ದ ಇತಿಹಾಸ’-ಭಾಗ 1
ಪ್ರೊ.ರಾಜಾರಾಮ್ ಹೆಗಡೆ, ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ.
ಕರ್ಣಾಟಕ ಶಬ್ದದ ವ್ಯುತ್ಪತ್ತಿ ಹಾಗೂ ಇತಿಹಾಸದ ಕುರಿತು ಏಕೀಕರಣ ಹೋರಾಟ ಕಾಲದಲ್ಲಿ ಶಂಬಾ ಜೋಶಿಯವರಾದಿಯಾಗಿ ಅನೇಕ ವಿದ್ವಾಂಸರು ಚರ್ಚಿಸಿದ್ದಾರೆ. ಈ ಶಬ್ದದ ಉಲ್ಲೇಖವನ್ನು ಬಹುಶಃ ಕ್ರಿಸ್ತಶಕದ ಆದಿಯಿಂದ ವಿಭಿನ್ನ ಸಂಸ್ಕೃತ ಗ್ರಂಥಗಳಲ್ಲಿ ಗುರುತಿಸಬಹುದು. ಕನ್ನಡ ಶಾಸನಗಳಲ್ಲಿ ಈ ಶಬ್ದವು ರಾಷ್ಟ್ರಕೂಟರ ಕಾಲದಿಂದ ಕಾಣಿಸಿಕೊಳ್ಳುವುದಾಗಿ ತಿಳಿದುಬರುತ್ತದೆ. ತದನಂತರ ಇಲ್ಲಿಯ ರಾಜರನ್ನು ಕರ್ಣಾಟ ರಾಜರೆಂದೂ, ಸೈನ್ಯವನ್ನು ಕರ್ಣಾಟ ಬಲವೆಂದೂ ಸಂಸ್ಕೃತದಲ್ಲಿ ಕರೆದರೆ, ಕನ್ನಡ ನುಡಿ, ಕನ್ನಡನಾಡು ಎಂಬುದಾಗಿ ಇಲ್ಲಿಯ ಜನರು ರಾಷ್ಟ್ರಕೂಟರ ಕಾಲದಿಂದಲೇ ಕನ್ನಡ ಸಾಹಿತ್ಯದಲ್ಲಿ ಈ ಶಬ್ದವನ್ನು ಬಳಸಿದ್ದಾರೆ. ತಮಿಳರು ಇವರನ್ನು ಕನ್ನಡಿ, ಕನ್ನಡಿ ಅರಸರ್ ಎಂದು ಕರೆದಿರುವುದೂ ಕಂಡುಬರುತ್ತದೆ. ಈ ಕುರಿತು ಇಲ್ಲಿ ನೀಡಿದ ವಿವರಗಳಿಗೆ ಇನ್ನಷ್ಟು ಈಚೆಗಿನ ಹಾಗೂ ಮುಂದಿನ ವಿವರಗಳು ಸೇರಿ ಈ ಶಬ್ದ ಇನ್ನೂ ಪ್ರಾಚೀನವೆಂದು ಸಿದ್ಧವಾಗಲೂಬಹುದು. ಅದರಿಂದ ಕರ್ನಾಟಕವೊಂದು ಭೂಪ್ರದೇಶ, ಹಾಗೂ ಅದರಲ್ಲಿ ಆಡುತ್ತಿದ್ದ ಭಾಷೆ ಕನ್ನಡ ಎಂಬ ಸತ್ಯಗಳಿಗೇನೂ ಕುಂದುಬರಲಾರದೆಂಬ ತರ್ಕದಿಂದ ಮುಂದುವರಿಯೋಣ.
ನಮಗೆ ಇಲ್ಲಿರುವ ಸಮಸ್ಯೆ ಎಂದರೆ ಈ ಶಬ್ದವನ್ನು ಇಂದಿನ ನಮ್ಮ ವ್ಶೆಜ್ಞಾನಿಕ ಇತಿಹಾಸದ ಪರಿಕಲ್ಪನೆಗೆ ನಾವು ಹೇಗೆ ಒಗ್ಗಿಸಿದ್ದೇವೆ ಹಾಗೂ ಅದು ಆ ಕಲ್ಪನೆಗೆ ಎಷ್ಟರಮಟ್ಟಿಗೆ ಒಗ್ಗುತ್ತದೆ ಎಂಬ ವಿಚಾರ. ಕರ್ನಾಟಕದ ಏಕೀಕರಣ ಕಾಲದಲ್ಲಿ ಕರ್ನಾಟಕದ ಇತಿಹಾಸವನ್ನು ವ್ಶೆಜ್ಞಾನಿಕವಾಗಿ ರಚಿಸಲಾಯಿತು. ಈ ರಚನೆಯಲ್ಲಿ ಇದ್ದ ಪೂರ್ವಗೃಹೀತಗಳೆಂದರೆ: 1) ಕನ್ನಡ ಭಾಷೆಯ ಮೂಲಕ ಒಂದು ಪ್ರದೇಶವನ್ನು ಕಲ್ಪಿಸಿಕೊಳ್ಳಲು ಸಾಧ್ಯ, ಅಂಥ ಪ್ರದೇಶವೇ ಕರ್ನಾಟಕವಾಗಿದೆ. ಕರ್ನಾಟಕ ಎಂಬುದು ಒಂದು ಪ್ರಕಾರದ ರಾಷ್ಟ್ರ ಕಲ್ಪನೆ ಹಾಗೂ ಅದು ಭಾರತ ಎಂಬ ರಾಷ್ಟ್ರದ ಅಂಗಭೂತವಾಗಿದೆ. 2) ಇದೊಂದು ಸಾಂಸ್ಕೃತಿಕ ಪ್ರಭೇದವಾಗಿದೆ ಹಾಗೂ ಇದು ಭಾಷೆಯನ್ನು ಆಧರಿಸಿದೆ, ಅಂದರೆ ಕನ್ನಡ ಬಾಷೆಯ ಮೂಲಕ ಕನ್ನಡ ಸಂಸ್ಸೃತಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯ. 3) ಈಗ ಈ ಎರಡೂ ಸಂಗತಿಗಳನ್ನು ನಾವು ಮರೆತಿರುವುದರಿಂದ ಅವನ್ನು ಕಲ್ಪಿಸಿಕೊಳ್ಳುವ ಅವಸ್ಥೆ ಬಂದಿದೆ. ಆದರೆ ಅವು ಸತ್ಯವಾಗಿದ್ದಲ್ಲಿ ಅವು ಇತಿಹಾಸದಲ್ಲಿ ಸಿಕ್ಕಲೇಬೇಕು. 4) ಈ ಸಂಸ್ಕೃತಿ ಈ ಕರ್ನಾಟಕವೆಂಬ ಪ್ರದೇಶದ ಇತಿಹಾಸದ ಮೂಲಕ ಮೈದಳೆದಿರುವುದರಿಂದ ಇದರ ಇತಿಹಾಸವನ್ನು ತಿಳಿದುಕೊಂಡರೆ ಈ ಸಂಸ್ಕೃತಿಯನ್ನು ತಿಳಿದುಕೊಳ್ಳಲು ಸಾಧ್ಯ. 5) ಹಾಗಾಗಿ ಕರ್ನಾಟಕದ ಇತಿಹಾಸದ ಕುರಿತ ತಿಳುವಳಿಕೆಯಿಂದ ಅದರ ಸಂಸ್ಕೃತಿಯ ಕುರಿತ ಜಾಗೃತಿ ಮೂಡುತ್ತದೆ. 6) ಈ ಜಾಗೃತಿ ಏಕೆ ಬೇಕೆಂದರೆ: ಈ ಭಾಷೆ, ಪ್ರದೇಶ, ಸಂಸ್ಕೃತಿ ಹಾಗೂ ಇತಿಹಾಸದ ಆಧಾರದ ಮೇಲೆ ಒಂದು ಪ್ರಭುತ್ವವನ್ನು ರಚಿಸುವುದು ಸಾಧ್ಯ ಹಾಗೂ ಅಂಥ ಪ್ರಭುತ್ವವು ಈ ಭಾಷೆಯನ್ನಾಡುವ ಜನರ ಸರ್ವತೋಮುಖ ಏಳ್ಗೆಗೆ ಮಾರ್ಗವಾಗಲು ಸಾಧ್ಯ. ಈ ರೀತಿ ಇಲ್ಲಿಯ ಜನರ ಏಳ್ಗೆಗೂ ಇವರ ಇತಿಹಾಸಕ್ಕೂ ಅವಿನಾಭಾವಿ ಸಂಬಂಧ ಇದೆ ಎಂದು ನಂಬಿಕೊಂಡು ಕರ್ನಾಟಕದ ಇತಿಹಾಸದ ರಚನೆಯಾಯಿತು. ಮತ್ತಷ್ಟು ಓದು 
ಐನೂರಾತೊಂಬತ್ತೇಳು ಅಡಿ ಎತ್ತರದ ಕನಸು ಮತ್ತದರ ಅಗತ್ಯತೆ:
– ರಾಘವೇಂದ್ರ ಸುಬ್ರಹ್ಮಣ್ಯ
ಮಾನವರು ಅನಾದಿಕಾಲದಿಂದಲೂ ದೇವರು, ಪ್ರಾಣಿಗಳು ಹಾಗೂ ಇನ್ನಿತರ ನಿರ್ಜೀವಿ ವಸ್ತುಗಳ ವಿಗ್ರಹ ಹಾಗೂ ಪ್ರತಿಮೆಗಳನ್ನು ಕಟ್ಟುತ್ತಲೇ ಬಂದಿದ್ದಾರೆ. 1939ರಲ್ಲಿ ಜರ್ಮನಿಯ ಗುಹೆಯೊಂದರಲ್ಲಿ ಪತ್ತೆಯಾದ ಜಗತ್ತಿನ ಅತ್ಯಂತ ಪುರಾತನವಾದ ‘ಸಿಂಹಮಾನವ (Lion Man)’ನ ವಿಗ್ರಹ ಸರಿಸುಮಾರು ನಲವತ್ತು ಸಾವಿರ ವರ್ಷಗಳಷ್ಟು ಹಳೆಯದು. ವಿಗ್ರಹ ಹಾಗೂ ಪ್ರತಿಮೆಗಳ ಬಗೆಗಿನ ನಮ್ಮ ಒಲವು ಎಷ್ಟು ಹಳೆಯದು ಎಂದು ಇದರಿಂದಲೇ ತಿಳಿದುಬರುತ್ತದೆ. ಅಂದಿನಿಂದಲೂ ನಾವು ಹಲವಾರು ಕಾರಣಗಳಿಗಾಗಿ ಪ್ರತಿಮೆಗಳನ್ನು ಕಟ್ಟುತ್ತಲೇ ಬಂದಿದ್ದೇವೆ.
ನಾಗರೀಕತೆ ಬೆಳೆದಂತೆ, ಮುಂದುವರೆದಂತೆ ಮಾನವರು ದೇವರಿಗೆ ಮಾತ್ರವಲ್ಲದೆ, ಕೆಲವೊಂದು ಐತಿಹಾಸಿಕ ಘಟನೆಗಳು (ಯುದ್ಧದ ಗೆಲುವು, ಸ್ವಾಂತತ್ರ್ಯ), ಗಣ್ಯವ್ಯಕ್ತಿಗಳು (ಚಿಂತಕರು, ಅತೀಂದ್ರೀಯ ಶಕ್ತಿಯುಳ್ಳವರು) ಹಾಗೂ ಸ್ಮರಣೀಯ ಪ್ರಾಣಿ (ಸ್ಫಿಂಕ್ಸ್, ಬ್ಯಾರಿ ದ ಸೈಂಟ್ ಬರ್ನಾರ್ಡ್)ಗಳ ನೆನಪು ದೀರ್ಘಕಾಲ ಉಳಿಯಲು, ಹಾಗೂ ಆ ನೆನಪುಗಳನ್ನು ಮುಂದಿನ ತಲೆಮಾರಿಗೆ ದಾಟಿಸಲು ಸಹ ಶಿಲ್ಪಕಲಾಕೃತಿಗಳು ಒಂದು ಒಳ್ಳೆಯ ಮಾರ್ಗ ಎಂಬುದನ್ನು ಅರಿತುಕೊಂಡರು. ಆ ಕಾರಣಕ್ಕಾಗಿಯೇ ಝೀಯಸ್ ನ ಮೂರ್ತಿ, ಲಿಬರ್ಟಿ ಪ್ರತಿಮೆ, ಸಾಂಚೀ ಸ್ತೂಪ, ಕಮಕೂರದ ಬುದ್ದ, ಕೋಪನ್ ಹೇಗನ್ನಿನ ಮತ್ಯಕನ್ಯೆ, ರೀಯೋದ ವಿಮೋಚಕ ಕ್ರಿಸ್ತ (ಇತ್ತೀಚಿನ ಉದಾಹರಣೆಯಲ್ಲಿ ಮಾಯಾವತಿ ಹಾಗೂ ಆಕೆಯ ಆನೆಗಳು ) ಮುಂತಾದುವು ಸೃಷ್ಟಿಸಲ್ಪಟ್ಟವು. ಮುಂದೆ ಲೋಹಯುಗದಲ್ಲಿ ಈ ಕಾರ್ಯಕ್ಕಾಗಿ ಕಲ್ಲಿನಬದಲು ಲೋಹವೂ ಉಪಯೋಗವಾಯಿತು. ನಾಗರೀಕತೆಯ ಮಟ್ಟ ಹಾಗೂ ಗಣ್ಯತೆಯ ಮಟ್ಟಕ್ಕನುಗುಣವಾಗಿ ಕಬ್ಬಿಣ, ಕಂಚು, ಉಕ್ಕು, ಹಾಗೂ ಚಿನ್ನ ಈ ಕೆಲಸಕ್ಕಾಗಿ ಬಳಕೆಯಾಗಲಾರಂಭಿಸಿದವು. ಪಿರಮಿಡ್ಡುಗಳಲ್ಲಿ ಫೆರ್ಹೋಗಳ ಪ್ರತಿಮೆಗಳು ಚಿನ್ನದಲ್ಲೂ, ಹಾಗೂ ಸೇವಕರು ಹಾಗೂ ಕಾವಲಿಗಾರರ ಪ್ರತಿಮೆಗಳು ಕಬ್ಬಿಣ/ಕಂಚಿನಲ್ಲಿ ಇರುವುದನ್ನು ನೀವು ಗಮನಿಸರಬಹುದು. ಹಲವಾರು ಬಾರಿ ನಾಗರೀಕತೆಯ ಚಿಂತನೆಗಳನ್ನೂ ಕೂಡ ಶಿಲ್ಪಗಳಲ್ಲಿ ಬೆಸೆಯಲು ಪ್ರಯತ್ನಗಳು ನಡೆದವು. ಉದಾಹರಣೆಗೆ, ಈಸ್ಟರ್ ದ್ವೀಪದಲ್ಲಿರುವ ನೂರಾರು ಮಾನವರೂಪಿ ನಿಗೂಡ ಶಿಲ್ಪಗಳು ಏನನ್ನೋ ಹೇಳಲು ಬಯಸುತ್ತಿವೆ ಎಂದು ನೋಡುಗರಿಗೆ ಅನಿಸಿದರೆ ಆಶ್ಚರ್ಯವೇನಿಲ್ಲ. ಒಟ್ಟಿನಲ್ಲಿ ಇತಿಹಾಸದುದ್ದಕ್ಕೂ ಒಂದು ನಗರದ, ದೇಶದ, ಹಾಗೂ ನಾಗರೀಕತೆಯ ಔನ್ನತ್ಯವನ್ನು ಪ್ರತಿಮೆ ಹಾಗೂ ಕಲಾಕೃತಿಗಳು ಸಾರಲು ಪ್ರಯತ್ನಿಸಿವೆ ಎಂದರೆ ತಪ್ಪೇನಿಲ್ಲ. ಹತ್ತಾರುಸಾವಿರ ವರ್ಷಗಳಿಂದ ಮಾನವರು, ನಾಗರೀಕತೆಗಳು, ದೇಶಗಳು ಹಾಗೂ ಪ್ರದೇಶಗಳು ತಮ್ಮ ಅಸ್ಮಿತೆಯನ್ನು ಕೆಲ ಪ್ರತಿಮೆಗಳ ಮೂಲಕ ಪ್ರಚುರಪಡಿಸಲು ಪ್ರಯತ್ನಿಸಿವೆ.
ಶಾ ಬಾನು,ಫೆಮಿನಿಸಂ,ಸೆಕ್ಯುಲರಿಸಂ ಮತ್ತು ಸಮಾನ ನಾಗರೀಕ ಸಂಹಿತೆ
– ರಾಕೇಶ್ ಶೆಟ್ಟಿ
ದೇಶದಲ್ಲಿರುವ ಷರಿಯತ್ ಕೋರ್ಟುಗಳಿಗೆ ಕಾನೂನು ಮಾನ್ಯತೆಯಿಲ್ಲ.ಫತ್ವಾ ಹೊರಡಿಸುವುದು ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟು ಇತ್ತೀಚೆಗೆ ನೀಡಿದ ತೀರ್ಪು ಮತ್ತೊಮ್ಮೆ “ಸಮಾನ ನಾಗರೀಕ ಸಂಹಿತೆ”ಯ ಜಾರಿಯ ಬಗ್ಗೆ ಚರ್ಚೆ ಶುರುವಾಗುವಂತೆ ಮಾಡಿದೆ. ಸಮಾನ ನಾಗರೀಕ ಸಂಹಿತೆಯ ಜೊತೆ ಜೊತೆಗೆ ಈ ತೀರ್ಪಿನ ಜೊತೆಗೆ ನೆನಪಾಗುವುದು ೮೦ರ ದಶಕದ ’ಶಾ ಬಾನು ಪ್ರಕರಣ’
ಏನಿದು ಶಾ ಬಾನು ಪ್ರಕರಣ : ಇಂದೋರಿನ ವಕೀಲ ಮೊಹಮ್ಮದ್ ಅಹ್ಮದ್ ಖಾನ್ ನ ಪತ್ನಿ ಶಾ ಬಾನು.ಮದುವೆಯಾಗಿ ೧೪ ವರ್ಷಗಳ ನಂತರ ಎರಡನೇ ಮದುವೆಯಾದ ಅಹ್ಮದ್ ಖಾನ್.ಇಬ್ಬರು ಹೆಂಡಿರ ಜೊತೆ ಸಂಸಾರ ನಡೆಸಿ ಕಡೆಗೆ ಕೆಲ ವರ್ಷಗಳ ನಂತರ ಐದು ಮಕ್ಕಳ ತಾಯಿಯಾಗಿದ್ದ ಶಾ ಬಾನುವನ್ನು ಆಕೆಯ ೬೨ನೇ ವಯಸ್ಸಿನಲ್ಲಿ ಆಕೆಯ ಐದು ಮಕ್ಕಳ ಜೊತೆಗೆ ಹೊರಹಾಕಿದ.ಒಪ್ಪಂದದಂತೆ ಮಾಸಿಕ ೨೦೦ ರೂ ಜೀವನಾಂಶವನ್ನು ಆಕೆಗೆ ನೀಡದಿದ್ದರ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಏಪ್ರಿಲ್ ೧೯೭೮ರಲ್ಲಿ ದಾವೆ ಹೂಡುತ್ತಾರೆ ಶಾ ಬಾನು.ಮಾಸಿಕ ೫೦೦ರೂ ಜೀವನಾಂಶ ಬೇಕೆಂದು ಕೇಳಿಕೊಳ್ಳುತ್ತಾರೆ.
ನವೆಂಬರ್ ೧೯೭೮ರಲ್ಲಿ ಖಾನ್ ಶಾ ಬಾನು ಅವರಿಗೆ ತಲಾಖ್ ನೀಡಿ,ಈಗ ಆಕೆ ನನ್ನ ಪತ್ನಿಯಲ್ಲ ಮತ್ತು ಆಕೆಗೆ ಇಸ್ಲಾಮಿಕ್ ಲಾ ಮೂಲಕ ಕೊಡಬೇಕಾದ ೫,೪೦೦ ರೂ ಬಿಟ್ಟರೆ ನಾನು ಇನ್ನಾವುದೇ ಹಣವನ್ನು ಕೊಡಬೇಕಾಗಿಲ್ಲ ಎಂದು ವಾದಿಸುತ್ತಾನೆ ಖಾನ್.ಆಗಸ್ಟ್ ೧೯೭೯ರಲ್ಲಿ ಸ್ಥಳೀಯ ನ್ಯಾಯಾಲಯ ಮಾಸಿಕ ೨೫ರೂ ನೀಡುವಂತೆ ತೀರ್ಪು ಕೊಟ್ಟಿತ್ತು.ಶಾ ಬಾನು ಕೇಸನ್ನು ಹೈಕೋರ್ಟಿಗೆ ಕೊಂಡೊಯ್ದರು.ಅಲ್ಲಿ ಶಾ ಬಾನು ಪರವಾಗಿ ೧೯೮೦ರ ಜುಲೈನಲ್ಲಿ ಬಂದ ತೀರ್ಪು ಮಾಸಿಕ ೧೭೯ ರೂ ನೀಡುವಂತೆ ತೀರ್ಪು ನೀಡುತ್ತದೆ.ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಖಾನ್ ಹೋಗುತ್ತಾನೆ.ಶಾ ಬಾನು ಈಗ ನನ್ನ ಪತ್ನಿಯಲ್ಲ ಇಸ್ಲಾಮಿಕ್ ಕಾನೂನಿಂತೆ ಆಕೆಗೆ ನಾನು ತಲಾಖ್ ನೀಡಿ ಎರಡನೇ ಮದುವೆಯಾಗಿದ್ದೇನೆ ಎನ್ನುತ್ತಾನೆ.
ಇತಿಹಾಸ ಮರು ಕಲಿಸಬೇಕೇ?
-ಅ.ಸು.ರವೀಂದ್ರ,ಶಿವಮೊಗ್ಗ
History Repeats. ಇತಿಹಾಸ ಮರುಕಳಿಸುತ್ತಿದೆ. ಯಾವುದೇ ಮಹತ್ತರ ಘಟನೆ ಪುನರಾವರ್ತನೆಗೊಂಡಾಗ ಮಾಧ್ಯಮಗಳಲ್ಲಿ ಕೇಳಿ ಬರುವ ಪದಗಳಿವು. ಆದರೆ ಈಗಿನ ಚರ್ಚೆಯ ವಿಷಯ ಇತಿಹಾಸವನ್ನು ಮರು `ಕಲಿಸುವ` ಬಗ್ಗೆ. ಕೇಂದ್ರದಲ್ಲಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭೂತಪೂರ್ವ ಬಹುಮತದೊಂದಿಗೆ ಭಾ.ಜ.ಪ. ಸರ್ಕಾರ ಅಧಿಕಾರಕ್ಕೆ ಬರುತ್ತಲೆ ಸರ್ಕಾರ ತನ್ನ ಗುಪ್ತ ಕಾರ್ಯಸೂಚಿಯ ಪ್ರಕಾರ ಇತಿಹಾಸದ ಪಾಠಗಳನ್ನು ತಿದ್ದಬಹುದೆಂಬ ಹುಯಿಲು ಎಡಪಂಥೀಯ ಹಾಗೂ ಮೆಕಾಲೆ ಗೋತ್ರಜರಿಂದ ಆರಂಭವಾಗಿದೆ. ಎನ್.ಡಿ.ಎ. ಸರ್ಕಾರದ ಅಧಿಕಾರದ ಸಂದರ್ಭದಲ್ಲಿಯೇ ಆಗಿನ ಸಚಿವ ಶ್ರೀ ಮುರಳಿ ಮನೋಹರ ಜೋಷಿಯವರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದರಾದರೂ ಹೆಚ್ಚಿನ ಯಶ ಕಂಡಿರಲಿಲ್ಲ. ಆಗ ಹುಸಿ ಜಾತ್ಯಾತೀತ ವಾದದ ಭ್ರಮೆ ನಮ್ಮ ರಾಜಕೀಯ ಕ್ಷೇತ್ರವನ್ನು ಆವರಿಸಿದ್ದ ಕಾಲ. ಮೈತ್ರಿಕೂಟದ ಮಿತ್ರ ಪಕ್ಷಗಳೂ ಈ ವಿಚಾರದಲ್ಲಿ ಭಾ.ಜ.ಪ.ವನ್ನು ಬೆಂಬಲಿಸಲು ತಯಾರಿರಲಿಲ್ಲ. ಬೌದ್ಧಿಕ ಕ್ಷೇತ್ರದಲ್ಲಿ ದಶಮಾನಗಳಿಂದ ಪ್ರತಿಷ್ಠಾಪಿಸಿದ್ದ ವರ್ಗಕ್ಕೆ ಇತಿಹಾಸ, ಪರಂಪರೆ, ಸ್ವಾಭಿಮಾನಿ ರಾಷ್ಟ್ರ ಭಕ್ತಿಯಂತಹ ವಿಷಯಗಳು ಹೇಗೂ ವರ್ಜ್ಯವಾಗಿದ್ದವು. ಇವರ ತಾಳಕ್ಕೆ ಕುಣಿಯುವ ಮಾಧ್ಯಮಗಳು ಶಿಕ್ಷಣವನ್ನು ಕೇಸರೀಕರಣಗೊಳಿಸಲಾಗುತ್ತಿದೆ ಎಂದು ಬೊಬ್ಬೆ ಹಾಕಿ ಈ ವಿಷಯದ ಬಗ್ಗೆ ಅರ್ಥಪೂರ್ಣ ಚರ್ಚೆ ನಡೆಯಲು ಅವಕಾಶವನ್ನೇ ಕೊಡಲಿಲ್ಲ. ಸ್ವಯಂ ಬಹುಮತವಿಲ್ಲದ ಪಕ್ಷ ದಿಟ್ಟ ನಿರ್ಧಾರಗಳನ್ನು ಏಕ ಪಕ್ಷೀಯವಾಗಿ ಕೈಗೊಳ್ಳುವ ಸ್ಥಿತಿಯಲ್ಲಿರಲಿಲ್ಲ. ಆದರೆ ಕಳೆದ ಹದಿನೈದು ವರ್ಷಗಳಲ್ಲಿ ಗಂಗೆ ಯಮುನೆಯರಲ್ಲಿ ಸಾಕಷ್ಟು ನೀರು ಹರಿದುಹೋಗಿದೆ. ಈ ಬಾರಿಯ ಚುನಾವಣೆಯಲ್ಲಿ ಸ್ಥಾಪಿತ ಎಲ್ಲಾ ಸೈದ್ಧಾಂತಿಕ ಮಿಥ್ಯೆಗಳನ್ನು ನಿವಾಳಿಸಿ ಮತದಾರ ತೀರ್ಪು ನೀಡಿದ್ದಾನೆ, ವ್ಯವಸ್ಥೆಯನ್ನು ಅಮೂಲಾಗ್ರವಾಗಿ ಬದಲಿಸಿ ಹೊಸ ಶಕೆಯನ್ನು ಆರಂಭಿಸುವ ಆಡಳಿತ ಪಕ್ಷದ ಭರವಸೆಗಳನ್ನು ನಂಬಿ ಆದೇಶ ನೀಡಿದ್ದಾನೆ.
ಈಗ ಪ್ರಶ್ನೆ ಎದ್ದಿರುವುದು ನಮಗೆ ಇಂತಹ ಇತಿಹಾಸದ ಪಾಠಗಳ ಪುನರ್ವಿಮರ್ಶೆ ಅಗತ್ಯವಿದೆಯೋ ಇಲ್ಲವೋ ಎಂಬುದು. ಇದೆ ಎಂದಾದಲ್ಲಿ ಹಿಂದಿನ ವ್ಯವಸ್ಥೆಯ ಲೋಪವನ್ನು ಒಫ್ಫಿಕೊಂಡು ಸರಿಪಡಿಸಿಕೊಳ್ಳಬೇಕು. ಇಲ್ಲವೆಂದಾದಲ್ಲಿ ಈವರೆಗೆ ಅನುಸರಿಸಿದ ಕ್ರಮಗಳಿಂದ ನಾವು ಸಾಧಿಸಿರುವುದಾದರೂ ಏನು ಎಂಬುದರ ಮೌಲ್ಯಮಾಪನ ಆಗಬೇಕು. ೧೯೪೭ ರಲ್ಲಿ ಭಾರತ ಬ್ರಿಟಿಷರ ದಾಸ್ಯದಿಂದ ಬಿಡುಗಡೆ ಹೊಂದಿದಾಗಲೇ ಇಂತಹ ಕ್ರಮದ ಅಗತ್ಯ ಇತ್ತು. ಆಗ ನಮಗೆ ರಾಜಕೀಯ ಸ್ವಾತಂತ್ರ್ಯವೇನೋ ಸಿಕ್ಕಿತ್ತು. ಆದರೆ ಎರಡು ಶತಮಾನಗಳ ಅವರ ಆಡಳಿತದ ಪ್ರಭಾವದಿಂದಾಗಿ ನಮ್ಮ ವೈಚಾರಿಕ, ಸಾಂಸ್ಕೃತಿಕ ವಿಚಾರಗಳ ದಾಸ್ಯದ ಮನಸ್ಥಿತಿ ಬದಲಾಗಲೇ ಇಲ್ಲ. ಪಂಡಿತ್ ನೆಹರೂರವರು ಮನಸ್ಸು ಮಾಡಿದಲ್ಲಿ ಒಂದು ಸ್ವತಂತ್ರ ಸ್ವಾಭಿಮಾನಿ ರಾಷ್ಟ್ರಕ್ಕೆ ಅಗತ್ಯವಾಗಿದ್ದ, ತನ್ನ ಸಂಸ್ಕೃತಿ ಪರಂಪರೆಯ ಬಗ್ಗೆ ಅಭಿಮಾನವುಳ್ಳ, ಅಂತಹ ಧೀಃಶಕ್ತಿಯನ್ನು ಪ್ರೇರೇಪಿಸಬಲ್ಲ ನವಪೀಳಿಗೆಯನ್ನು ಬೆಳೆಸಬಹುದಿತ್ತು. ಸ್ವಾತಂತ್ರ್ಯ ಪಡೆದ ಘಳಿಗೆಯಲ್ಲಿನ ಜನಮಾನಸದ ಹುಮ್ಮಸ್ಸು, ಮನಸ್ಥಿತಿ, ಅಂತಹ ಕ್ರಮಗಳಿಗೆ ಪೂರಕವಾಗಿ ಸ್ಪಂದಿಸುವುದರಲ್ಲಿ ಅನುಮಾನವಿರಲಿಲ್ಲ. ಅವರ ಅಂದಿನ ಆಡಳಿತಾತ್ಮಕ ಕ್ರಮಗಳು ಪ್ರಜಾ ಸಂಕುಲಕ್ಕೆ ಹೊಟ್ಟೆ ಬಟ್ತೆ ನೀಡುವ ಮಟ್ಟಿಗೆ ಸೀಮಿತವಾಗಿದ್ದವು ಅನ್ನಿಸುತ್ತವೆ. ದೇಶವೊಂದರ ಚುಕ್ಕಾಣಿ ಹಿಡಿದ ನಾಯಕತ್ವಕ್ಕೆ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ತೊಡಗಿಸಿಕೊಳ್ಳಬಲ್ಲ ಯುವಪೀಳಿಗೆಗೆ ಸೂಕ್ತ ಮಾರ್ಗದರ್ಶನ ಮಾಡಬೇಕಾದ ಆದ್ಯತೆಗಳೂ ಇರುತ್ತವೆ ಎಂಬುದನ್ನು ಅಂದಿನ ಸರ್ಕಾರ ಮರೆತಿದ್ದೇ ನಾವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಅನುಭವಿಸುತ್ತಿರುವ ಅನಾಥ ಪ್ರಜ್ಞೆಗೆ ಕಾರಣವಾಗಿದೆ ಎಂಬುದರಲ್ಲಿ ಅನುಮಾನವಿಲ್ಲ.







