ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

19
ಜೂನ್

ಕಲ್ಬುರ್ಗಿ,ಕಲ್ಲು ಮತ್ತು Colonial Consciousness

– ರಾಕೇಶ್ ಶೆಟ್ಟಿ

consciousnessಬೆಂಗಳೂರಿನ ವಿಜ್ಞಾನ ಭವನದಲ್ಲಿ ಜೂನ್ ೯ರ ಸೋಮವಾರ ನಡೆದ ಮೌಢ್ಯಮುಕ್ತ ಸಮಾಜ, ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ವಯಸ್ಸಿನಲ್ಲಿ ಹಿರಿಯರಾದ (ಕೇವಲ ವಯಸ್ಸಿನಲ್ಲಷ್ಟೇ) ಪ್ರೊ.ಎಂ.ಎಂ. ಕಲ್ಬುರ್ಗಿಯವರು, ” ದೇವರ ವಿಗ್ರಹಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗದು. ಅವುಗಳಿಗೆ ಕಾಯುವ ಶಕ್ತಿಯೂ ಇಲ್ಲ, ಕಾಡುವ ಶಕ್ತಿಯೂ ಇಲ್ಲ. ದೇವತೆ, ದೇವಾಲಯಗಳ ವಿರುದ್ಧ ಚಳವಳಿ ನಡೆಯಬೇಕು.” ಅಂತೆಲ್ಲ ಬಡಬಡಿಸಿ ಎಲ್ಲರಿಂದ ತಪರಾಕಿ ಹಾಕಿಸಿಕೊಂಡ ಮೇಲೆ “ನಾ ಹಂಗೇ ಹೇಳೇ ಇಲ್ಲಾರೀ, ನಾನು ಹಿಂದೂ ಇದ್ದೀನಿ, ನಾನ್ಯಾಕೇ ಮೂತ್ರ ಮಾಡಿ ಅಂತ ಹೇಳ್ತೀರ್ರೀ… ಅನಂತಮೂರ್ತಿ ಹಿಂಗ್ ಬರ್ದಾರಾ ಅಂತ ನಾನ್ ಸಭಿಯೋಳಗ ಹೇಳಿನ್ರೀ… ತಪ್ಪ್ ತಿಳಿ ಬ್ಯಾಡರ್ರೀ…” ಅಂತೆಲ್ಲ ಸೃಷ್ಟೀಕರಣ ಕೊಟ್ಟರು.

ನಿಜವಾಗಿ ಕಲ್ಬುರ್ಗಿಯವರ ಮನಸ್ಸಿನಲ್ಲಿದ್ದಿದ್ದು “ಮೂರ್ತಿ”ಗಳ ಮೇಲೆ ಮೂತ್ರ ಮಾಡಿದ ಹೊರೆ ಹೊರಿಸಿ ಅದರ ಜೊತೆಗೆ ಮೂರ್ತಿ ಪೂಜೆ ಮಾಡುವ ಜನರ “ಮೌಢ್ಯ” (ಅವರ ಮಂದ ಬುದ್ದಿಯ ಪ್ರಕಾರ) ನಿವಾರಿಸುವುದಾಗಿತ್ತು ಅನ್ನಿಸುತ್ತದೆ.ಕಲ್ಬುರ್ಗಿಯವರು ಹೀಗೆ ಹೇಳಿಕೆ ಕೊಡುವುದರಿಂದ ಒಂದೇ ಕಲ್ಲಿಗೆ ಎರಡು ಹಕ್ಕಿ (“ಮೂರ್ತಿ” ಮತ್ತು “ಮೌಢ್ಯ”) ಹೊಡೆಯುವ ಆಲೋಚನೆಯಲ್ಲಿದ್ದರೇನೋ.ಪಾಪ!

“ಮೂರ್ತಿ”ಗಳ ಮೇಲೆ ಕಲ್ಬುರ್ಗಿಯವರಿಗೆ ಈ ವಿಶೇಷ ಮಮತೆ ಯಾಕೆ? ಪ್ರಜಾವಾಣಿಯಲ್ಲಿ “ಮೂರ್ತಿ”ಗಳಿಗೆ ೧೦ ಲಕ್ಷ ಸರ್ಕಾರಿ ಕಾಣಿಕೆ ಕೊಟ್ಟದ್ದನ್ನು ವಿರೋಧಿಸಿ ಸೋತುಹೋಗಿದ್ದ ಕಲ್ಬುರ್ಗಿಗಳು,”ಮೂರ್ತಿಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗುವುದಿಲ್ಲ” ಅನ್ನುವ ಮೂಲಕ ಸೇಡು ತೀರಿಸಿಕೊಂಡರು, ಅನ್ನುವಲ್ಲಿಗೆ ಅವರ ಹೇಳಿಕೆಯ ಮೊದಲನೇ “ಹಕ್ಕಿ” ಯಾವುದೆಂದು ಹೊಳೆಯುತ್ತದೆ.

ಅಸಲಿಗೆ ತಪ್ಪೆಲ್ಲ ಆಯ್ಕೆ ಸಮಿತಿಯದ್ದು!
“ಪರಾವಲಂಬಿ ಜೀವಿ”ಗಳ ನಡುವೆ “ಪ್ರಶಸ್ತಿ/ಹಣ”ವನ್ನು ಸಮನಾಗಿ ಹಂಚಿದ್ದರೆ ಮೂತ್ರ,ಮೂರ್ತಿ ಇತ್ಯಾದಿ ವಿವಾದಗಳೇ ಆಗ್ತಿರ್ಲಿಲ್ಲ ಮಾರ್ರೆ. ಎಲ್ಲವನ್ನೂ ಒಬ್ಬರಿಗೆ ಕೊಟ್ಟರೆ.ಇನ್ನೊಬ್ಬರಿಗೆ (ತಮಗಾದ) ಅನ್ಯಾಯವನ್ನು ಪ್ರಶ್ನಿಸುವ ಅಭಿವ್ಯಕ್ತಿ ಸ್ವಾತಂತ್ರ್ಯ(!) ಇದ್ದೇ ಇರುತ್ತದಪ್ಪ… (ಸೂ : “ಪರಾವಲಂಬಿ ಜೀವಿ”ಗಳನ್ನು ಕೆಲವರು “ಬುದ್ಧಿಜೀವಿ”ಗಳು ಅನ್ನುತ್ತಾರೆ.ನಾನು ಇನ್ಮುಂದೆ ಪ್ರೀತಿಯಿಂದ “ಪರಾವಲಂಬಿ ಜೀವಿ” ಎನ್ನುತ್ತೇನೆ)

ಮತ್ತಷ್ಟು ಓದು »

9
ಜೂನ್

ಐಡಿಯಾಲಜಿಯ ಅಪಾಯಗಳು!

– ಡಾ. ಶ್ರೀಪಾದ ಭಟ್

ಸಹಾಯಕ ಪ್ರಾಧ್ಯಾಪಕ,ತುಮಕೂರು ವಿಶ್ವವಿದ್ಯಾನಿಲಯ

SIಹದಿನಾರನೆಯ ಲೋಕಸಭಾ ಚುನಾವಣಾ ಫಲಿತಾಂಶ ಬಂದು ತಿಂಗಳಾಗುತ್ತ ಬಂತು. ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎಂಬಂತೆ ಈ ಚುನಾವಣೆ ಕುರಿತ ಚರ್ಚೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಏಕೆಂದರೆ ಮಾಧ್ಯಮಗಳು, ಗದ್ದುಗೆಯ ಕನಸು ಕಾಣುತ್ತಿದ್ದ ಗೆದ್ದ-ಸೋತ ಪ್ರಮುಖ ಪಕ್ಷಗಳು, ಯಾರಿಗೂ ಬಹುಮತ ಬರದಿದ್ದರೆ ಆಟವಾಡಿಸುವ ಭ್ರಮೆಯಲ್ಲಿದ್ದ ಪ್ರಾದೇಶಿಕ ಪಕ್ಷಗಳು-ಪುಡಿ ಪಕ್ಷಗಳು, ಒಂದೆರಡು ಸ್ಥಾನಗಳ ಕೊರತೆ ಬಿದ್ದರೆ ಲಾಭ ಮಾಡಿಕೊಳ್ಳುವ ಹವಣಿಕೆಯಲ್ಲಿದ್ದ ಪಕ್ಷೇತರರು, ಇವರೆಲ್ಲರ ಬೆಂಬಲಿಗರು, ಕಾರ್ಯಕರ್ತರು ಹೀಗೆ ಇವರೆಲ್ಲರಿಗೂ ಅನಿರೀಕ್ಷಿತ ಆಘಾತ ನೀಡಿದ ದೇಶದ ಜನಸಾಮಾನ್ಯರು ಇದುವರೆಗಿನ ಚುನಾವಣೆಯಲ್ಲೇ ಸದ್ಯ ಅತ್ಯಂತ ಹೆಚ್ಚು ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನತಂತ್ರ ವ್ಯವಸ್ಥೆಯಲ್ಲಿ ಇಂಥ ಬೆಳವಣಿಗೆ ಅಗತ್ಯ. ಆದರೆ ಈ ಚರ್ಚೆಯ ಆಯಾಮಗಳನ್ನು ಗಮನಿಸುವುದು ಒಳಿತು.

ಉಳಿದ ಸಂಗತಿ ಹಾಗಿರಲಿ. ನಮ್ಮ ದೇಶದಲ್ಲಿ ಒಂದು ಎಂಬುದನ್ನು ಜನ ದೇವರಲ್ಲೂ ಇಟ್ಟುಕೊಂಡಿಲ್ಲ. ಅವು ಕೋಟಿ ಲೆಕ್ಕದಲ್ಲಿ ಇವೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ವೈವಿಧ್ಯವಂತೂ ಪ್ರತಿ ಹತ್ತಿಪ್ಪತ್ತು ಕಿ.ಮೀ.ಗೆ ಬದಲಾಗುತ್ತದೆ. ಏಕರೂಪತೆಯನ್ನು ಒಪ್ಪದ, ಆದರೆ ಭಾವನಾತ್ಮಕ ಏಕತೆಗೆ ಮಹತ್ವ ನೀಡುವ ಇಂಥ ದೇಶದಲ್ಲಿ ಯಾವುದೋ ಒಂದು ಐಡಿಯಾಲಜಿ ಸ್ಥಾಪನೆಯಾಗಬೇಕು ಎಂದು ಬಯಸುವುದು ಭ್ರಮೆಯಲ್ಲದೇ ಬೇರಲ್ಲ. ಜನತಂತ್ರ ವ್ಯವಸ್ಥೆ ಇಲ್ಲಿನ ವೈವಿಧ್ಯಕ್ಕೆ ಬೆನ್ನೆಲುಬಾಗಿದೆ. ಹೀಗಾಗಿಯೇ ಒಂದೇ ಐಡಿಯಾಲಜಿ ಹೇರುವ ಯಾರಿಗೇ ಆದರೂ ಜನ ಹೊರಹೋಗುವ ಬಾಗಿಲು ತೋರುತ್ತಾರೆ. ತ್ರಿಪುರಾ, ಪ.ಬಂಗಾಳದಲ್ಲಿ ಮಾರ್ಕ್ಸ್ ವಾದಿಗಳು ಜಾಗಖಾಲಿಮಾಡಿದ್ದು ಹೀಗೆ. ಸ್ವಾತಂತ್ರ್ಯ ಬಂದ ಹತ್ತಿಪ್ಪತ್ತು ವರ್ಷ ದೇಶಾದ್ಯಂತ ಸಾರಾಸಗಟು ಸ್ಥಾನ ಪಡೆಯುತ್ತಿದ್ದ ಕಾಂಗ್ರೆಸ್ ಬೆರಳೆಣಿಕೆ ಸ್ಥಾನ ಪಡೆಯಲೂ ಹೆಣಗಾಡುವ ಸ್ಥಿತಿ ಬಂದಿದ್ದೂ ಹೀಗೆಯೇ. ಹಿಂದೂ, ಮುಸ್ಲಿಂ, ಮಾರ್ಕ್ಸ್, ಮಾವೋ, ನೆಹರೂ ಹೀಗೆ ಒಂದನ್ನೇ ಸ್ಥಾಪಿಸಬಯಸುವ ಎಲ್ಲ ಬಗೆಯ ಮೂಲಭೂತವಾದಿಗಳನ್ನೂ ಜನ ತೂಗುವುದು ಒಂದೇ ತಕ್ಕಡಿಯಲ್ಲಿ.

ಈ ಫಲಿತಾಂಶದಿಂದ ಎಡ ಚಿಂತಕರು ಎಂದು ಗುರುತಿಸಿಕೊಂಡವರ ಸ್ಥಿತಿಯಂತೂ ಚಿಂತಾಜನಕವಾಗಿದೆ. ಪ್ರಚಾರದ ವೇಳೆ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಕೆಲವರಂತೂ ನಾಪತ್ತೆಯಾಗಿದ್ದಾರೆ. ಇನ್ನು ಕೆಲವರಿಗೆ ಜೀವನವೇ ಸಾಕಾಗಿದೆ. ಎಡಪಂಥೀಯ ಚಿಂತನೆಯಲ್ಲಿ ಗುರುತಿಸಿಕೊಂಡಿದ್ದವರೊಬ್ಬರು ಫಲಿತಾಂಶ ಬಂದ ನಾಲ್ಕು ದಿನಗಳ ನಂತರ ಭೇಟಿಯಾದರು. ಅವರ ಮುಖದಲ್ಲಿ ಯಾವ ಉತ್ಸಾಹವೂ ಇರಲಿಲ್ಲ. ಸೂತಕದ ಕಳೆ. ಏನಾಯ್ತು ಅಂದೆ. ಪ್ರಳಯವೇ ಆಗಿ ಇವರೊಬ್ಬರೇ ಬದುಕಿದ್ದಾಗ ಆಗುವ ಹತಾಶೆ, ಸಂಕಟ, ಆಘಾತಗಳೆಲ್ಲ ಅವರಲ್ಲಿ ಮೈವೆತ್ತಿದ್ದವು. ಯಾಕೆಂದು ಕೇಳಿದರೆ ಮೋದಿ ಪ್ರಧಾನಿಯಾಗ್ತಾರಲ್ಲ, ಬಿಜೆಪಿ ಈ ಪಾಟಿ ಸ್ಥಾನ ಗೆದ್ದುಬಿಟ್ತಲ್ಲ ಅಂತೆಲ್ಲ ಗೋಳು ತೋಡಿಕೊಳ್ಳತೊಡಗಿದರು. ಹೋಗ್ಲಿ ಬಿಡಿ ಸಾರ್, ಜನತಂತ್ರ ವ್ಯವಸ್ಥೆಯಲ್ಲಿ ಒಮ್ಮೆ ಅವರು ಮತ್ತೊಮ್ಮೆ ಮತ್ತೊಬ್ಬರು ಮೇಲೆ ಕೆಳಗೆ ಆಗುವುದು ಸಹಜವಲ್ಲವೇ? ಅದನ್ಯಾಕೆ ಇಷ್ಟು ಸೀರಿಯಸ್ಸಾಗಿ ತಗೋತೀರಿ ಅಂದೆ. ಹಂಗಲ್ಲ ಸಾರ್, ನಿಮಗೆ ಅರ್ಥವಾಗಲ್ಲ, ದೇಶದ ಕತೆ ಏನು ಅಂತೆಲ್ಲ ವರಾತ ಶುರು ಇಟ್ಟುಕೊಂಡರು.

ಮತ್ತಷ್ಟು ಓದು »

6
ಜೂನ್

ಬುದ್ಧಿಜೀವಿಗಳೇ, ಕಾದು ನೋಡುವುದಲ್ಲದೆ ನಿಮಗೆ ಅನ್ಯ ಮಾರ್ಗವಿಲ್ಲ!

– ಸಹನಾ ವಿಜಯ್ ಕುಮಾರ್

ಪ್ರಗತಿಪರರು ಹಾಗೂ ಬುದ್ಧಿಜೀವಿಗಳುAction and reaction are equal and opposite. ಕ್ರಿಯೆ ಮತ್ತು ಪ್ರತಿಕ್ರಿಯೆಗಳು ವಿರುದ್ಧ ದಿಕ್ಕಿನಲ್ಲಿದ್ದರೂ ಸಮಬಲದಿಂದಿರುತ್ತವೆ. ಇದು ನ್ಯೂಟನ್ನ ಮೂರನೆಯ ನಿಯಮ. ಸುಮಾರು ಮೂರು ಶತಕಗಳಿಗೂ ಹಿಂದೆ, ಅಂದರೆ ಕ್ರಿ.ಶ. 1687ರಲ್ಲಿ ನ್ಯೂಟನ್ ಜಗತ್ತಿಗೆ ಸಾಬೀತುಪಡಿಸಿದ್ದು. ಈಗ 2014ರಲ್ಲಿ ನಾವು ಭಾರತೀಯರು ಈ ನಿಯಮದ ಸತ್ಯಾಸತ್ಯತೆಯನ್ನು ಮತ್ತೆ ಸಾಬೀತುಪಡಿಸಿದ್ದೇವೆ! ಇಲ್ಲಿ ಕ್ರಿಯೆ – ಚುನಾವಣಾ ಪೂರ್ವದಲ್ಲಿ ಇಡೀ ದೇಶದಲ್ಲಿ ಒಂದು ವ್ಯವಸ್ಥಿತ ಜಾಲವು ಮೋದಿಯವರ ಕುರಿತ ಭಯವನ್ನು ಹುಟ್ಟುಹಾಕಿದ್ದು. ಪ್ರತಿಕ್ರಿಯೆ – ಜನಸಾಮಾನ್ಯರು ಆ ಭಯದ ಹುಟ್ಟಡಗಿಸಿ ಮೋದಿಯವರಿಗೆ ಐತಿಹಾಸಿಕ ವಿಜಯ ದೊರಕಿಸಿಕೊಟ್ಟಿದ್ದು. ಒಂದು ವಿಶೇಷವೆಂದರೆ ಪ್ರತಿಕ್ರಿಯೆಯು ಕ್ರಿಯೆಗಿಂತ ಬಹಳ ಪಟ್ಟು ಹೆಚ್ಚಿದೆ, ತೀಕ್ಷ್ಣವಾಗಿದೆ ಹಾಗೂ ಮುಟ್ಟಿ ನೋಡಿಕೊಳ್ಳುವ ಹಾಗಿದೆ! ಈಗ ನ್ಯೂಟನ್ ಬದುಕಿದ್ದರೆ ಬಹಳ ಖುಷಿಪಡುತ್ತಿದ್ದ!

ಹೀಗೆ ಮಾಡುವ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಿತ್ತು. ಏಕೆಂದರೆ ಈ ಕ್ರಿಯೆಯನ್ನು ಹುಟ್ಟುಹಾಕಿದವರು ಅಂತಿಂಥವರಲ್ಲ, ಮೂರು ವರ್ಗಗಳಾಗಿ ವಿಂಗಡಿಸಬಹುದಾದ ಘಟಾನುಘಟಿಗಳು. ಒಂದು ವರ್ಗ ರಾಜಕಾರಣಿಗಳದ್ದಾದರೆ ಮತ್ತೊಂದು ಸುದ್ದಿ ಮಾಧ್ಯಮಗಳದ್ದು. ಮೂರನೆಯ ಹಾಗೂ ಅತ್ಯಂತ ಕುಲೀನ(?) ವರ್ಗ ಪ್ರಗತಿಪರರು ಹಾಗೂ ಬುದ್ಧಿಜೀವಿಗಳದ್ದು. ರಾಜಕಾರಣಿಗಳು ಸಿದ್ಧಾಂತ ಭೇದ ಮರೆತು ಒಂದಾದರು. ಮೋದಿಯವರನ್ನು ರಾಕ್ಷಸನೆಂದು ಬಿಂಬಿಸಿ ತಮ್ಮ ಕ್ರಿಯೆಗೆ ಮೊದಲಿಟ್ಟುಕೊಂಡರು. ಇನ್ನು ಸುದ್ದಿ ಮಾಧ್ಯಮದವರು ಹಿಂದೆ ಬೀಳುತ್ತಾರೆಯೇ? ಅಪಸ್ಮಾರ ಇರುವವರಿಗಿಂತ ಹೆಚ್ಚಾಗಿ ದೇಹ ಮನಸಿನ ಸ್ಥಿಮಿತ ಕಳೆದುಕೊಂಡು ಆ ಕ್ರಿಯೆಗೆ ಶಕ್ತಿ ಹಾಗೂ ವೇಗ ತುಂಬಿದರು. ಯಾವ ರಾಷ್ಟ್ರೀಯ ಚಾನೆಲ್ ನೋಡಿದರೂ ಮೋದಿ ಎಂಬ ನರಹಂತಕನ ಗೋಧ್ರಾ ಕಥೆಯೇ. ಇನ್ನುಳಿದವರು ಪ್ರಗತಿಪರರು ಹಾಗೂ ಬುದ್ಧಿಜೀವಿಗಳು. ಇದೊಂಥರಾ ವಿಚಿತ್ರ ತಳಿ. ತಮಗೆ ತಲೆಯಿಂದ ಕಾಲಿನವರೆಗೂ ರಕ್ತ ಮಾಂಸಗಳ ಬದಲು ಬುದ್ಧಿಯೇ ತುಂಬಿಕೊಂಡಿದೆಯೆಂಬ ಭ್ರಾಂತಿಯ ಜನ. ಉಳಿದವರು ಕೇವಲವೆಂಬ ಉದ್ಧಟತನ. ಜೊತೆಗೆ ಇವರ ಆವುಟವನ್ನು ಎಲ್ಲರೂ ಸಹಿಸ ಲೇಬೇಕೆಂಬ ತಿಕ್ಕಲುತನ. ಇವರೂ ಗುಂಪುಕಟ್ಟಿಕೊಂಡು ತಮ್ಮ ಕೈಲಾದಷ್ಟು ‘ಭಯೋತ್ಪಾದನೆ'(ಭಯ+ಉತ್ಪಾದನೆ) ಮಾಡಿದರು.

ಈಗ ಇವರೆಲ್ಲರಿಗೂ ತಕ್ಕ ಪ್ರತಿಕ್ರಿಯೆ ನೀಡಿದ್ದೇವೆ ನೋಡಿ, ಬಾಲ ಮುದುರಿಕೊಂಡು ಸುಮ್ಮನಾಗಿದ್ದಾರೆ. ರಾಜಕಾರಣಿಗಳು ಪರಸ್ಪರ ದೋಷಾರೋಪಣೆಯ ಕೆಸರೆರಚಾಟದಲ್ಲಿ ನಿರತರಾಗಿದ್ದಾರೆ. ರಾಜ್‍ದೀಪ್ ಸರ್‍ದೇಸಾಯಿ, ಬರ್ಖಾ ದತ್ ಹಾಗೂ ಅರ್ಣಬ್ ಗೋಸ್ವಾಮಿಯರು ಇಂಗು ತಿಂದ ಮಂಗನ ಮುಖ ಮಾಡಿಕೊಂಡು ವಿಧಿಯಿಲ್ಲದೆ ಮೋದಿ ಸರ್ಕಾರದ ಮೊದಲ ದಿಟ್ಟ ಹೆಜ್ಜೆಗಳ ಸಮಾಚಾರ ಬಿತ್ತರಿಸುತ್ತಿದ್ದಾರೆ. ಕಡೇಪಕ್ಷ ಇವರು ಜನರಿಂದ ಓಡಿಹೋಗುತ್ತಿಲ್ಲ. ತಮ್ಮ ಲೆಕ್ಕಾಚಾರ ತಪ್ಪಾದುದನ್ನು ಮುಕ್ತವಾಗಿ ಒಪ್ಪಿಕೊಳ್ಳುತ್ತಿದ್ದಾರೆ. ಆದರೆ ಈ ಬುದ್ಧಿಜೀವಿಗಳು ಹಾಗೂ ಪ್ರಗತಿಪರರ ದಂಡಿದೆಯಲ್ಲ, ಇವರ ಪಾಡು ಯಾರಿಗೂ ಬೇಡ. ಅತ್ತ ತಪ್ಪನ್ನು ಒಪ್ಪಿಕೊಳ್ಳಲಾಗದೆ, ಇತ್ತ ಸತ್ಯವನ್ನು ಅಲ್ಲಗಳೆಯಲೂ ಆಗದೆ ಕಾದ ಹೆಂಚಿನ ಮೇಲೆ ಕುಳಿತಂತೆ ಚಡಪಡಿಸುತ್ತಿದ್ದಾರೆ.

ಮತ್ತಷ್ಟು ಓದು »

31
ಮೇ

ಆ ಅಗೋಚರ ‘ಫ್ಯಾಂಟಮ್’ ವ್ಯಕ್ತಿಗೆ ಒಂದು ಸೆಲ್ಯೂಟ್

– ರಾಘವೇಂದ್ರ ಸುಬ್ರಹ್ಮಣ್ಯ

ರಾಮೇಶ್ವರನಾಥ್ ಖಾವ್ಹಿಂದಿಯ ‘ಡಾನ್’ ಚಿತ್ರದಲ್ಲಿ ವರದಾನ್ ಎಂಬ ಪಾತ್ರದ ಪರಿಚಯ ಮಾಡಿಕೊಡುವಾಗ ‘ಪೊಲೀಸ್ ಇಲಾಖೆಯಬಳಿ ಈತನ ಯಾವುದೇ ಸ್ಪಷ್ಟವಾದ ಫೋಟೋ ಇಲ್ಲ’ ಎನ್ನುವ ಮಾತು ಬರುತ್ತದೆ. ನಾನು ಅದನ್ನುನೋಡುವಾಗ ತಲೆಕೆಡಿಸಿಕೊಂಡಿದ್ದೆ. ಅದು ಹೇಗೆ ಒಬ್ಬ ವೃತ್ತಿನಿರತ ಅಪರಾದಿಯ ಒಂದೇ ಒಂದುಚಿತ್ರ ಅಥವಾ ಚಹರೆಯಾಗಲೀ ಪೊಲೀಸ್ ಇಲಾಖೆಯ ಬಳಿ ಇಲ್ಲದಿರಲು ಸಾಧ್ಯ? ಹೆಸರು ಗೊತ್ತಿದ್ದಮೇಲೆ, ಒಬ್ಬ ವ್ಯಕ್ತಿಯ ಇರುವಿಕೆಯ ಬಗ್ಗೆ ಗೊತ್ತಿದ್ದ ಮೇಲೆ, ಅದು ಹೇಗೆ ಬೇರೇನೂಗೊತ್ತಿಲ್ಲದಿರಲು ಸಾಧ್ಯ!? ಅಂತೆಲ್ಲಾ ಮೈಪರಚಿಕೊಂಡಿದ್ದೆ. ಇದೇ ವಿಚಾರದಲ್ಲಿ ನೂರಾರುಲೇಖನಗಳನ್ನು ಓದಿದ ನಂತರ ಗೊತ್ತಾಗಿದ್ದೇನೆಂದರೆ, ವರದಾನ್ ಒಬ್ಬನೇ ಅಲ್ಲ, ಜಗತ್ತಿನಲ್ಲಿಇಂತಹುದೇ ವ್ಯಕ್ತಿಗಳು ಬಹಳ ಜನ ಇದ್ದಾರೆ ಎಂದು. ಅದೂ ಅಲ್ಲದೆ ವರದಾನ್ ಕಾನೂನಿನ ಆಚೆಬದಿ ಇದ್ದವ. ಆದರೆ ಕಾನೂನಿನ ಕಡೆಗೇ ಇದ್ದು ತಮ್ಮ ಬಗ್ಗೆ, ತಮ್ಮ ಖಾಸಗೀ ಜೀವನದ ಬಗ್ಗೆಅವನಷ್ಟೇ ರಹಸ್ಯವನ್ನು ಉಳಿಸಿಕೊಂಡು ಬಂದಿರುವವರು ಇದ್ದಾರೆ ಮತ್ತು ಅವರ ದೇಶಗಳಿಗೆಅಂಥವರ ಸೇವೆ ಬಹಳ ದೊಡ್ಡದು ಎಂದೂ ಕೂಡ ತಿಳಿಯಿತು.

ಇಂತವರಲೊಬ್ಬರು ನಮ್ಮ ದೇಶದಮಹಾನ್ ಗೂಡಚಾರ ತಂತ್ರಜ್ಞ ರಾಮೇಶ್ವರನಾಥ್ ಖಾವ್. ಭಾರತದ ಸರ್ಕಾರದ ಅಡಿಯಲ್ಲಿರುವಅತ್ಯಂತ ರಹಸ್ಯಮಯ ಇಲಾಖೆಯಾದ “ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗ (RAW – Research and Analysis Wing) “ದ ಸಂಸ್ಥಾಪಕ ಪಿತಾಮಹ. ಸ್ವತಃ ರಾ ಜಗತ್ತಿನ ಅತ್ಯಂತ ರಹಸ್ಯಮಯರಕ್ಷಣಾ ಇಲಾಖೆ. ಅಮೇರಿಕಾದ CIA ಬಗ್ಗೆಯಾದರೂ ಭಾರತದ ಜನಕ್ಕೆ ಗೊತ್ತಿದೆಯೇನೋ, ಆದರೆ ರಾಬಗ್ಗೆ ವ್ಯಾಪಕವಾಗಿ ತಿಳಿದಿರಲಿಕ್ಕಿಲ್ಲ, ಇತ್ತೀಚೆಗೆ ಸಲ್ಮಾನನ ‘ಏಕ್ ಥಾ ಟೈಗರ್’ ಚಿತ್ರನೋಡುವವರೆಗೂಎಷ್ಟೋ ಬಾರಿ ಸರ್ಕಾರಗಳು ‘ರಾ’ದ ಇರುವಿಕೆಯ ಬಗ್ಗೆಯೇ ಸ್ಪಷ್ಟಿಕರಣ ನೀಡಿರಲಿಲ್ಲ. ಅದರರಚನೆಯೇ ಹಾಗಿದೆ ಬಿಡಿ. ‘ರಾ’ದ ಬಗ್ಗೆ ಇನ್ನೊಮ್ಮೆ ಯಾವಾಗಲಾದರೂ ಬರೆಯುತ್ತೇನೆ.

ಮೊದಲೇ ಹೇಳಿದಂತೆ ‘ರಾ’ ಅಷ್ಟೊಂದು ರಹಸ್ಯಮಯವಾಗಿದ್ದಮೇಲೆ, ಅದರ ಸಂಸ್ಥಾಪಕ ಕತೆಯೇನೂಬೇರೆಯಲ್ಲ. ಶತ್ರು ರಾಷ್ಟ್ರಗಳಿಗೆ ಮತ್ತವುಗಳ ಗೂಡಚಾರ ಇಲಾಖೆಗೆ ‘ರಾ’ದ ಮುಖ್ಯಸ್ಥ ಯಾರುಮತ್ತವ ನೋಡಲು ಹೇಗಿದ್ದಾನೆ ಎಂಬುದೂ ಬಹಳ ಕಾಲ ತಿಳಿದಿರಲಿಲ್ಲ. 1918ರಲ್ಲಿವಾರಣಾಸಿಯಲ್ಲಿ ಜನಿಸಿದ ಖಾವ್, ಶ್ರೀನಗರದಿಂದ ವಲಸೆಬಂದ ಕಶ್ಮೀರಿ ಪಂಡಿತರ ಕುಟುಂಬದವರು.ಇವರ ತಂದೆತಾಯಿಗಳ ಬಗ್ಗೆ ಯಾವ ಹೆಚ್ಚಿನ ಮಾಹಿತಿಯೂ ಲಭ್ಯವಿಲ್ಲ. ಖಾವ್ ಅವರನ್ನುಬೆಳೆಸಿದ್ದು ಅವರ ಮಾವ ಪಂಡಿತ್ ತ್ರಿಲೋಕಿ ನಾಥ್ ಖಾವ್. ತನ್ನ ಮಾವನವರ ಪ್ರೋತ್ಸಾಹಮತ್ತು ಸಹಾಯದಿಂದ ಒಳ್ಳೆಯ ಹಾಗೂ ಅತ್ಯುನ್ನತ ವಿದ್ಯಾಭ್ಯಾಸ ಪಡೆದ ಖಾವ್, 1940ರಲ್ಲಿ ‘ಗುಪ್ತಚರ ದಳ (I.B – Intelligence Bueareu)’ ದಲ್ಲಿ ಪೊಲೀಸ್ ಸಹಾಯಕಸೂಪರಿಂಟೆಂಡೆಂಟ್ ಆಗಿ ನಿಯುಕ್ತಿಗೊಂಡರು. ಸ್ವಾತಂತ್ರಾನಂತರ ನೆಹರೂರವರ ರಕ್ಷಣಾದಳದಮುಖ್ಯಸ್ಥನಾಗಿ ನಿಯೋಜಿತರಾಗಿ, ಆನಂತರ ಒಂದರ ಮೇಲೊಂದು ರೋಚಕ ಮೆಟ್ಟಿಲುಗಳನ್ನೇರುತ್ತಾಹೋದರು.

ಮತ್ತಷ್ಟು ಓದು »

29
ಮೇ

ತನ್ನದೇ ಮನಸ್ಸು(ಮಾನಸ), ಶಿರ(ಕೈಲಾಸ)ವನ್ನು ಹೊಂದಿರುವ ತನ್ನ ಮಗುವನ್ನು ಭಾರತ ಮರಳಿ ಪಡೆದೀತೇ?

– ರಾಜೇಶ್ ರಾವ್

ಕೈಲಾಸ ಮಾನಸ ಸರೋವರ“ಅಮೇರಿಕಾದಲ್ಲಿ ನಾವು ಆಶ್ರಯ ಪಡೆದಿದ್ದರೆ ನನ್ನ ಸಂಗಾತಿಗಳೂ ಅಮೇರಿಕರನ್ನರಾಗಿ ನಮ್ಮಲ್ಲೂ ಟಿಬೆಟ್ ತನ ಮಾಯವಾಗುತ್ತಿತ್ತು. ಭಾರತದ ಸಹಿಷ್ಣುತೆಯೇ ಜಗತ್ತಿನಲ್ಲಿ ನಾವು ನಮ್ಮತನವನ್ನು ಉಳಿಸಿಕೊಂಡಿದ್ದೇವೆ”-ದಲಾಯಿ ಲಾಮ.  ಹಿಂದೂಗಳ ಸಹಿಷ್ಣುತೆಯ ಮನೋಭಾವನೆಯನ್ನು ವಿಶ್ವವೇ ಕೊಂಡಾಡುತ್ತದೆ. ಆದರೆ ಸಹಿಷ್ಣುಗಳಾಗುವ ಭರದಲ್ಲಿ ನಮ್ಮ ಭದ್ರತೆಗೆ ನಾವೇ ಕೊಳ್ಳಿ ಇಟ್ಟುಕೊಂಡಿರುವುದು ಅಷ್ಟೇ ಸತ್ಯ! ಬಂದವರಿಗೆಲ್ಲರಿಗೂ ಆಶ್ರಯ ಕೊಟ್ಟೆವು. ಕೆಲವರು ನಮ್ಮೊಂದಿಗೆ ಕಲೆತರು, ಕಲಿತರು. ಇನ್ನು ಕೆಲವರು ನಮ್ಮ ಬುಡಕ್ಕೇ ಕೊಳ್ಳಿ ಇಟ್ಟರು,ಇಡುತ್ತಲೇ ಇದ್ದಾರೆ! ಆಶ್ರಯ ಬೇಡಿ ಬಂದ ದಲಾಯಿ ಲಾಮರಿಗೇನೋ ಆಶ್ರಯ ಕೊಟ್ಟೆವು. ಆದರೆ ಭಾರತದ ರತ್ನ ಖಚಿತ ಕಿರೀಟವನ್ನೇ(ಟಿಬೆಟ್) ಕಳೆದುಕೊಂಡು ಬಿಟ್ಟೆವು!
ಸಹಸ್ರಾರು ವರ್ಷಗಳ ಕಾಲ ಭಾರತದ ಭಾಗವಾಗಿದ್ದು ಕೈಲಾಸ ಮಾನಸ ಸರೋವರಗಳನ್ನೊಳಗೊಂಡ ಟಿಬೆಟ್ ಮಂಗೋಲಿಯಾ, ಚೀನಾದ ರಾಜರುಗಳು ಹಾಗೂ ಬ್ರಿಟಿಷರ ಆಕ್ರಮಣಗಳಿಗೆ ತುತ್ತಾಗಿದ್ದರೂ ತನ್ನ ಸ್ವಾತಂತ್ರ್ಯವನ್ನು ಉಳಿಸಿಕೊಂಡಿತ್ತು. ಆದರೆ 1950ರಲ್ಲಿ ಟಿಬೆಟನ್ನು ಚೀನಾ ಆಕ್ರಮಣ ಮಾಡಿದ ನಂತರ ಟಿಬೆಟಿಯನ್ನರು ತಮ್ಮ ಸ್ವಾತಂತ್ರ್ಯ ಸಾರ್ವಭೌಮತೆಗಳನ್ನು ಕಳೆದುಕೊಂಡುಬಿಟ್ಟರು. ಎರಡನೇ ವಿಶ್ವಯುದ್ಧದ ಕಾಲದಲ್ಲಿ ತನಗೆ ಸಮುದ್ರ ತೀರಗಳಿಲ್ಲದ ಹಿನ್ನೆಲೆಯಲ್ಲಿ ಜಪಾನ್ ಒಡ್ಡಿದ ಸವಾಲಿಗೆ ಮುಖಾಮುಖಿಯಾಗಿ ನಿಲ್ಲುವ ಸಂದರ್ಭದಲ್ಲಿ ಭಾರತದಿಂದ ಅವಶ್ಯಕ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳಲು ಟಿಬೆಟ್ ಮಾರ್ಗದ ಅನುಮತಿ ಕೇಳಿದಾಗ ಚೀನಾದ ವಿಸ್ತರಣಾವಾದಿ ನೀತಿ ಹಾಗೂ ಗೋಮುಖವ್ಯಾಘ್ರತನವನ್ನು ಅರಿತಿದ್ದ ಟಿಬೆಟ್ ಅನುಮತಿ ನಿರಾಕರಿಸಿತ್ತು.

ಕಳೆದ ಶತಮಾನದ ಆರಂಭದಲ್ಲಿ ಸುಮಾರು 65ಲಕ್ಷದಷ್ಟು ಜನಸಂಖ್ಯೆ ಟಿಬೆಟಿನಲ್ಲಿತ್ತು. ಆದರೆ ಟಿಬೆಟನ್ನು ಆಕ್ರಮಿಸಿದ ಚೀನಾ 15ಲಕ್ಷದಷ್ಟು ಜನರ ಮಾರಣಹೋಮ ನಡೆಸಿತು. ಚೀನಾದ ಪಾಶವೀಯತೆ ಯಾವ ಪರಿ ಇತ್ತೆಂದರೆ ಲಿಥಾಂಗ್ ವಿಹಾರದ ಮೇಲೆ ಬಾಂಬು ಹಾಕಿದಾಗ ವಿಹಾರದೊಳಗಿದ್ದ 6500 ಜನರ ಪೈಕಿ 4500ಕ್ಕೂ ಹೆಚ್ಚು ಜನರು ಹೆಣವಾಗಿ ಬಿದ್ದರು. 1959ರಲ್ಲಿ ದಲಾಯಿ ಲಾಮ ಸ್ವಯಂ ಗಡಿಪಾರಾಗಿ ಭಾರತದ ಆಶ್ರಯ ಪಡೆದರು. ಆದರೆ ಟಿಬೆಟಿಯನ್ನರ ಪರಿಸ್ಥಿತಿ ಮತ್ತಷ್ಟು ಶೋಚನೀಯವಾಯಿತು. ಟಿಬೆಟನ್ನರು ದಲಾಯಿ ಲಾಮ ಭಾವಚಿತ್ರ ಇಟ್ಟುಕೊಳ್ಳುವುದು, ಬೌದ್ಧವಿಹಾರಗಳಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸುವುದು ಇವೆಲ್ಲಾ ಚೀನಾ ಆಕ್ರಮಿತ ಟಿಬೆಟಿನಲ್ಲಿ ಅಪರಾಧಗಳಾಗಿವೆ. ಟಿಬೆಟಿನಲ್ಲೇ ಇರುವ ಮಾನಸ ಸರೋವರ ಕೈಲಾಸಗ ಪರ್ವತಗಳಿಗೆ ಹೋಗಬೇಕಾದರೂ ಟಿಬೆಟಿಯನ್ನರು ಚೀನಾ ಸರಕಾರದ ಅನುಮತಿ ಪಡೆಯಬೇಕು. TAR ಮಾನ್ಯ ಮಾಡಿರುವ ಧಾರ್ಮಿಕ ಉತ್ಸವಗಳನ್ನು ಮಾತ್ರ ಟಿಬೆಟನ್ನರು ಆಚರಿಸಬೇಕು. ಬೌದ್ಧ ಸನ್ಯಾಸಿಗಳು ಇತರ ವಿಹಾರಗಳಿಗೆ ಭೇಟಿ ನೀಡುವಂತಿಲ್ಲ. ಚೀನಾ ಸರಕಾರ ನಿಗದಿಪಡಿಸಿರುವಷ್ಟೇ ಸಂಖ್ಯೆಯ ಸನ್ಯಾಸಿಗಳು ವಿಹಾರಗಳಲ್ಲಿರಬೇಕು. ಅಲ್ಲದೆ ಅವುಗಳಲ್ಲಿ ಕಡ್ಡಾಯವಾಗಿ ‘ದೇಶಭಕ್ತಿ ಶಿಕ್ಷಣದ’ ತರಗತಿ, ಚೀನಾದ ಆಡಳಿತ ಸಾಧನೆ ಕಂಠಪಾಠ ಮಾಡುವ ತರಗತಿಗಳಿಗೆ ಹಾಜರಾಗುವುದು, “ವಿಶಾಲ ತಾಯ್ನಾಡಿಗೆ” ಗೌರವ ಅರ್ಪಿಸುವ ಪ್ರಮಾಣ ಮಾಡುವುದು ಕಡ್ಡಾಯ. ಪ್ರವಾಸಿಗರು ಸ್ಥಳೀಯ ಟಿಬೆಟನ್ನರೊಂದಿಗೆ ಮಾತಾಡುವುದಾಗಲೀ, ಟಿಬೆಟ್ ಕಾಲೊನಿಗಳಿಗೆ ಹೋಗುವುದಾಗಲೀ ನಿಷಿದ್ದ! ಚೀನಾ ವಿರೋಧಿ ಚಟುವಟಿಕೆಗಳನ್ನು ನಡೆಸುವವರನ್ನು ಅವರ ಕುಟುಂಬದವರೇ ಸಾರ್ವಜನಿಕವಾಗಿ ಕಲ್ಲೆಸೆಯುವಂತಹ ಶಿಕ್ಷೆ ನೀಡಲಾಗುತ್ತದೆ. ಅಲ್ಲದೆ ಅಣ್ವಸ್ತ್ರ ಪರೀಕ್ಷೆಗೂ ಟಿಬೆಟ್ ನೆಲವನ್ನು ಬಳಸಲಾಗುತ್ತಿದೆ.
ಮತ್ತಷ್ಟು ಓದು »

28
ಮೇ

“ಮಹಾನ್” ಇತಿಹಾಸಕಾರರೆಂಬ “ಮಹಾತ್ಮ”ರ ಸನ್ನಿಧಿಯಲ್ಲಿ….

– ರಾಘವೇಂದ್ರ ಅಡಿಗ ಎಚ್ಚೆನ್

Eminent Historiansಕೆಲತಿಂಗಳ ಹಿಂದೆ ಬೆಂಗಳೂರಿನ ಟೀಚರ್ಸ್ ಕಾಲೇಜು ಸಭಾಂಗಣದಲ್ಲಿ ಒಂದು ಅಪರೂಪದ ಪುಸ್ತಕಗಳ ಬಿಡುಗಡೆ ಸಮಾರಂಭ ಏರ್ಪಾಡಾಗಿತ್ತು. ಕನ್ನಡದ ಖ್ಯಾತ ಲೇಖಕರಾದ ಡಾ. ಎಸ್.ಎಲ್. ಭೈರಪ್ಪನವರು ಭಾಗವಹಿಸಿದ್ದ ಆ ಕಾರ್ಯಕ್ರಾಮಕ್ಕೆ ಬಹಳ ನಿರೀಕ್ಷೆಗಳನ್ನಿಟ್ಟುಕೊಂಡು ನನ್ನಂತಹ ಸಾಕಷ್ಟು ಜನರು ಬಂದಿದ್ದರು. ಅಸಲಿಗೆ ಅಲ್ಲಿ ಬಿಡುಗಡೆಯಾಗುತ್ತಿದ್ದ ಪುಸ್ತಕಳು ಸಹ ಅಷ್ಟೇ ಕುತೂಹಲ ಹುಟ್ಟಿಸುವಂತಿದ್ದವು. ಸ್ವತಂತ್ರ  ಭಾರತದ ಖ್ಯಾತ ಪತ್ರಿಕಾ ಬರಹಗಾರ, ಸಂಶೋಧಕ ಅರುಣ್ ಶೌರಿಯವರ ಪುಸ್ತಕದ ಬಿಡುಗಡೆ ಕಾರ್ಯಕ್ರಾಮವದಾಗಿತ್ತು.

ಅರುಣ್ ಶೌರಿ ಅವರೊಬ್ಬ ಪತ್ರಕರ್ತ, ಪತ್ರಿಕಾ ಸಂಪಾದಕ, ಧೀಮಂತ ರಾಜಕಾರಣಿ, ಸತ್ಯನಿಷ್ಟ ಬರಹಗಾರರಾಗಿ ಭಾರತದಾದ್ಯಂತ ಹೆಸರು ಮಾಡಿದವರು. ಕೇಂದ್ರದಲ್ಲಿ ಎನ್.ಡಿ.ಎ. ಸರ್ಕಾರವಿದ್ದ ಸಂದರ್ಭದಲ್ಲಿ ಸಮಾಚಾರ ಮತ್ತು ಪ್ರಸಾರ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಶೌರಿಯವರು ಸರ್ಕಾರಿ ಕೆಲಸ ಹಾಗೂ ಪತ್ರಿಕಾ ರಂಗ ಎರಡರಲ್ಲಿಯೂ ಒಳ್ಳೆಯ ಹೆಸರನ್ನು ಗಳಿಸಿಕೊಂಡಿರುವವರು.ಭಾರತದ ಪ್ರಸಿದ್ದ ಆಂಗ್ಲ ದೈನಿಕ “ಇಂಡಿಯನ್ ಎಕ್ಸ್ ಪ್ರೆಸ್”ನಲ್ಲಿ ಸಾಕಷ್ಟು ವರ್ಷ ಕೆಲಸ ಮಾಡಿದ್ದ ಶೌರಿಯವರು ಆ ಸಮಯದಲ್ಲಿ ಸಾಕಷ್ಟು ಭ್ರಷ್ಟಾಚರಗಳನ್ನು, ಹಗರಣಗಳನ್ನೂ ಬೆಳಕಿಗೆ ತಂದಿದ್ದರು. ಇವರ ಕೆಲಸ, ಸಮಾಜ ಸೇವೆಗೆ ಮೆಚ್ಚಿ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ, ದಾದಾಭಾಯಿ ನವರೋಜಿ ಪುರಸ್ಕಾರ, ಫ್ರೀಡಮ್ ಟು ಪಬ್ಲಿಷ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.

ಮೊದಲಿನಿಂದಲೂ ಅಧ್ಯಯನ, ಸಂಶೊಧನೆಗಳಲ್ಲಿ ಆಸಕ್ತಿ ತಳೆದಿದ್ದ ಅರುಣ್ ಶೌರಿಯವರು ತಾವೇ ಖುದ್ದಾಗಿ ಸಾಕಷ್ಟು ಪುಸ್ತಕಗಳನ್ನು  ರಚಿಸಿದ್ದಾರೆ. “The Only Fatherland’’, “The World of Fatwas’’, “Eminent Historians’’, “ Does He know a Mother’s Heart?’’ ಇವೇ ಮೊದಲಾದ ಕೃತಿಗಳನ್ನು ರಚಿಸಿರುವ ಶೌರಿ ಈ ಒಂದೊಂದರಲ್ಲಿಯೂ ಸಾಕಷ್ಟು ಮಾಹಿತಿಯನ್ನು ಓದುಗರೊಡನೆ ಹಂಚಿಕೊಂಡಿದ್ದಾರೆ.ಅರುಣ್ ಶೌರಿಯವರ ಬರಹಗಳನ್ನು ಅರ್ಥ ಮಾಡಿಕೊಳ್ಳುವುದು ತುಸು ತ್ರಾಸದಾಯಕವದ ಕೆಲಸ.ಅವರಷ್ಟು ಚಿಂತನೆಗೆ ಹಚ್ಚುವ  ಬರಹಗಾರರು ಮತ್ತೊಬ್ಬರು ಸಿಕ್ಕುವುದು ತೀರಾ ಅಪರೂಪವೆನ್ನಬೇಕು. ಅಂತಹಾ ಶೌರಿಯವರ ಪುಸ್ತಕವೊಂದು ಕನ್ನಡಕ್ಕೆ ಬಂದಿದೆ.ಅರುಣ್ ಶೌರಿಯವರ “Eminent Historians’’ಕೃತಿಯನ್ನು “ಮಹಾನ್” ಇತಿಹಾಸಕಾರರು ಎನ್ನುವ ಹೆಸರಿನಲ್ಲಿ ಮಂಜುನಾಥ ಅಜ್ಜಂಪುರರವರು ಕನ್ನದಕ್ಕೆ ಅನುವಾದಿಸಿ ನಮ್ಮ ಕೈಗಿತ್ತಿದ್ದಾರೆ. ಇತಿಹಾಸದ ಬಗ್ಗೆ  ಆಸಕ್ತಿ ಇರುವ ಪ್ರತಿಯೊಬ್ಬರಿಗೂ ಇಷ್ಟವಾಗುವ ಕೃತಿ ಇದು ಎಂದರೆ ತಪ್ಪಾಗಲಾರದು.

ಮತ್ತಷ್ಟು ಓದು »

19
ಮೇ

ಚುನಾವಣೆ 2014: ಯುಪಿಎ ಸೋಲಿಗೆ ಕಾರಣಗಳೇನು?

– ತುರುವೇಕೆರೆ ಪ್ರಸಾದ್

SRಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ನಿಜವಾಗಿದ್ದು ಅದರಂತೆ ಬಿಜೆಪಿ ಮತ್ತು ಅದರ ಮಿತ್ರಪಕ್ಕಗಳನ್ನೊಳಗೊಂಡ ಎನ್‍ಡಿಎ ಕಳೆದ 25 ವರ್ಷಗಳಲ್ಲೇ ಐತಿಹಾಸಿಕ ಎನ್ನಬಹುದಾದ ಭಾರೀ  ಗೆಲುವು ದಾಖಲಿಸಿದೆ. ಯುಪಿಎ ನೂರರ ಗಡಿ ಮುಟ್ಟಲಾಗದೆ ದಯನೀಯ ಸೋಲು ಕಂಡಿದೆ. ಯುಪಿಎ ವೈಫಲ್ಯಕ್ಕೆ ಕಾರಣವಾದ ಹಲವು ಅಂಶಗಳಿವೆ. ಅವುಗಳಲ್ಲಿ  ಮಿತಿ ಮೀರಿದ ಭ್ರಷ್ಟಾಚಾರ, ಸಾಲು ಸಾಲು ಹಗರಣಗಳು, ಹಣದುಬ್ಬರ, ಬೆಲೆಯೇರಿಕೆ  ಇವು ಪ್ರಮುಖ ಕಾರಣಗಳು. ಯುಪಿಎ ಸರ್ಕಾರದ ವೈಫಲ್ಯಕ್ಕೆ ಕಾರಣವಾದ  ಅಂಕಿ-ಅಂಶಗಳನ್ನು ಖ್ಯಾತ ಪತ್ರಕರ್ತ ಸೆನ್‍ಗುಪ್ತ ಪಟ್ಟಿ ಮಾಡಿದ್ದಾರೆ.  ಅವುಗಳ ಸಾರಾಂಶ ಈ ಕೆಳಕಂಡಂತಿದೆ

•    ಯುಪಿಎ ಆಢಿತಾವಧಿಯಲ್ಲಿ ನಡೆದ 1.76 ಲಕ್ಷ ಕೋಟಿಯ 2ಜಿ ಹಗರಣ, 1.85 ಲಕ್ಷ ಕೋಟಿಯ ಕಲ್ಲಿದ್ದಲು ಹಂಚಿಕೆ ಹಗರಣ, ರೂ.3600 ಕೋಟಿಯ ಅಗಸ್ಟಾ ವೆಸ್ಟ್‍ಲ್ಯಾಂಡ್ ಹೆಲಿಕಾಪ್ಟರ್ ಹಗರಣ, 90 ಕೋಟಿ ಹಣ ದುರುಪಯೋಗದ ಕಾಮನ್‍ವೆಲ್ತ್ ಕ್ರೀಡಾಕೂಟದ ಹಗರಣ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಶನ್‍ನಿಂದ 5000 ಕೋಟಿ ದುರುಪಯೋಗದ ಆರೋಪ ಹೊತ್ತಿರುವ ಮಾಯಾವತಿ ಸರ್ಕಾರದ ಹಗರಣ- ಇವನ್ನು ಜನ ಎಂದಿಗೂ ಕ್ಷಮಿಸುವುದಿಲ್ಲ ಎಂಬುದನ್ನು ಈ ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾರೆ.

•    2011ರಲ್ಲಿ ಸುಮಾರು 4 ಲಕ್ಷ ಕೋಟಿ ಕಪ್ಪು ಹಣ ಭಾರತದಿಂದ ಆಚೆ ಸಾಗಿಸಲಾಗಿದೆ. ಇದು 2010ರ ಶೇ.24ರಷ್ಟು ಹೆಚ್ಚು. ಪ್ರತಿ ವರ್ಷ ಇದು ಅವ್ಯಾಹತವಾಗಿ ನಡೆದು ಬಂದಿದೆ. ಆದರೆ ಸ್ವಿಸ್ ಬ್ಯಾಂಕ್‍ನಲ್ಲಿದೆ ಎಂದು ಹೇಳಾಗಿರುವ 1456 ಬಿಲಿಯನ್ ಡಾಲರ್ ಹಣ ಹಿಂದೆ ಪಡೆಯಲು ಯುಪಿಎ ಸರ್ಕಾರ ಯಾವ ಗಂಭೀರ ಪ್ರಯತ್ನವನ್ನೂ ಮಾಡಲಿಲ್ಲ.

•    ಯುಪಿಎ ಸರ್ಕಾರದ ಮಹದಾಕಾಂಕ್ಷಿ ಯೋಜನೆ ಎನಿಸಿದ ಉದ್ಯೋಗ ಖಾತ್ರಿ ಯೋಜನೆಯಡಿ ಯುಪಿಎ ಸರ್ಕಾರ 1.9ಲಕ್ಷ ಕೋಟಿ ಹಣ ವೆಚ್ಚ ಮಾಡಿದೆ. ಆದರೆ ಶೇ.31 ಗ್ರಾ.ಪಂಚಾಯ್ತಿಗಳಿಗೆ ಈ ಹಣ ಹೇಗೆ ವಿನಿಯೋಗಿಸಬೇಕು ಎಂಬುದೇ ಗೊತ್ತಿಲ್ಲ, ರಾಜ್ಯದಲ್ಲಿನ ಹಳೆ ಉಳಿಕೆ, ಬಳಕೆಯ ಲೆಕ್ಕವೇ ಇಡದೆ  ಕಳೆದ 3 ವರ್ಷಗಳಿಂದ ಒಟ್ಟಾರೆ 11549 ಕೋಟಿ  ಹಣ ಬಿಡುಗಡೆ ಮಾಡಲಾಗಿದೆ.   4.33 ಲಕ್ಷ ಜಾಬ್ ಕಾರ್ಡ್‍ಗಳಿಗೆ ಭಾವಚಿತ್ರವೇ ಇಲ್ಲ, ಗ್ರಾಮೀಣ  ಪ್ರದೇಶದಲ್ಲಿ ಕೇವಲ ಶೇ.20 ಹಣವನ್ನು ಮಾತ್ರ ಉದ್ದೇಶಿತ ಯೋಜನೆಗಳಿಗೆ ಬಳಸಲಾಗಿದ್ದು ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಸಿಎಜಿ ಆಕ್ಷೇಪಿಸಿದೆ.

ಮತ್ತಷ್ಟು ಓದು »

14
ಮೇ

ಶ್ರೀ ಶಂಕರಾಚಾರ್ಯ ಜೀವನ ಸಂದೇಶ

– ರಾಘವೇಂದ್ರ ಅಡಿಗ ಎಚ್ಚೆನ್

Shankaraacharya1ಭಾರತದಲ್ಲಿ ಹಿಂದೂ ಧರ್ಮವು ಸಂಕಷ್ಟದಲ್ಲಿದ್ದ ಎಂಟನೇ ಶತಮಾನದ ಕಾಲಘಟ್ಟದಲ್ಲಿ, ಹಿಂದೂಗಳಲ್ಲಿದ್ದ ಜಾತಿ ಪದ್ದತಿ, ಮೂಢ ಆಚರಣೆಗಳ ಬಗ್ಗೆ ಆಗ ಪ್ರಬಲರಾಗಿದ್ದ ಬೌದ್ದ ಸನ್ಯಾಸಿಗಳು ಸಾಕಷ್ಟು ನಿಂದನೆಗಳನ್ನು ಮಾಡುತ್ತಿದ್ದ ಕಾಲದಲ್ಲಿ ಹಿಂದೂ ಧರ್ಮೀಯರಲ್ಲಿ ಮತ್ತೆ ಆತ್ಮವಿಶ್ವಾಸ ಹುಟ್ಟಿಸಿ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ತಮ್ಮ ಅದ್ವೈತ ತತ್ವದ ಮೂಲಕ ಧರ್ಮ ಜಾಗೃತಿಯನ್ನುಂಟುಮಾಡಿ ಹಿಂದೂ ಧರ್ಮವನ್ನು ಪುನರುತ್ತಾನಗೊಳಿಸಿದವರು ಶ್ರೀ ಶಂಕರಾಚಾರ್ಯರು. ಕಳೆದ ಮೇ 4 ರಂದು ಜಗದ್ಗುರು ಆದಿ ಶಂಕರಾಚಾರ್ಯರ ಜಯಂತಿಯನ್ನು ವಿಶ್ವಾದ್ಯಂತ ಆಚರಿಸಲಾಯಿತು.

ಭಾರತದಲ್ಲಿ ಹಿಂದೂ ಧರ್ಮವು ಸಂಕಷ್ಟದಲ್ಲಿದ್ದ ಎಂಟನೇ ಶತಮಾನದ ಕಾಲಘಟ್ಟದಲ್ಲಿ, ಹಿಂದೂಗಳಲ್ಲಿದ್ದ ಜಾತಿ ಪದ್ದತಿ, ಮೂಢ ಆಚರಣೆಗಳ ಬಗ್ಗೆ ಆಗ ಪ್ರಬಲರಾಗಿದ್ದ ಬೌದ್ದ ಸನ್ಯಾಸಿಗಳು ಸಾಕಷ್ಟು ನಿಂದನೆಗಳನ್ನು ಮಾಡುತ್ತಿದ್ದ ಕಾಲದಲ್ಲಿ ಹಿಂದೂ ಧರ್ಮೀಯರಲ್ಲಿ ಮತ್ತೆ ಆತ್ಮವಿಶ್ವಾಸ ಹುಟ್ಟಿಸಿ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ತಮ್ಮ ಅದ್ವೈತ ತತ್ವದ ಮೂಲಕ ಧರ್ಮ ಜಾಗೃತಿಯನ್ನುಂಟುಮಾಡಿ ಹಿಂದೂ ಧರ್ಮವನ್ನು ಪುನರುತ್ತಾನಗೊಳಿಸಿದವರು ಶ್ರೀ ಶಂಕರಾಚಾರ್ಯರು. ತಾವು ಬದುಕಿದ್ದು ಕೇವಲ 32 ವರ್ಷಗಳಷ್ಟೇ ಆದರೂ ಆದಿ ಶಂಕರರು ತಾವು ಮಾಡಿದ ಕಾರ್ಯ, ಗಳಿಸಿದ ಕೀರ್ತಿ , ಅಪಾರವಾದುದು. ಶ್ರೀಮದ್ಭಗವದ್ಗೀತೆ, ಉಪನಿಷತ್ತುಗಳು, ಬ್ರಹ್ಮಸೂತ್ರಗಳಿಗೆ ಭಾಷ್ಪಗಳನ್ನು ಬರೆದ ಮೊದಲಿಗರು ಶ್ರೀ ಶಂಕರಾಚಾರ್ಯರು. ಶಂಕರಾಚಾರ್ಯರು ಭಾರತೀಯ ವೈಚಾರಿಕ ರಂಗದಲ್ಲಿ ಕ್ರಾಂತಿಯನ್ನೇ ಮಾಡಿದ್ದವರು. ಇವರು ಯಾವೊಂದು ಹೊಸತಾದ ಮತ, ಪಂಥಗಳನ್ನು ಸ್ಥಾಪಿಸಿಲ್ಲವಾದರೂ ಹಿಂದೂ ಧರ್ಮದಲ್ಲಿನ ವೇದಸಂಪ್ರದಾಯವನ್ನೇ ಎತ್ತಿಹಿಡಿದರು. ವೇದಗಳಲ್ಲಿನ ಸತ್ವವನ್ನೂ, ಸಾರವನ್ನು ತಮ್ಮದೇ ಆದ ನೆಲೆಯಲ್ಲಿ ನಿಷ್ಕರ್ಷಿಸುವ ಮೂಲಕ ಜಗತ್ತಿಗೆ ಪ್ರಕಾಶಪಡಿಸಿದವರು ಆಚಾರ್ಯ ಶಂಕರರು ಎಂದರೆ ತಪ್ಪಾಗಲಾರದು.

ಜೀವನ

ಅದು ಎಂಟು-ಒಂಭತ್ತನೇ ಶತಮಾನಗಳ ಮಧ್ಯದ ಅವಧಿ. ಭಾರತ ದಕ್ಷಿಣ ಸಮುದ್ರ ತೀರದ ಕೇರಳ ರಾಜ್ಯದ ಕಾಲಟಿ ಎಂಬೊಂದು ಸಣ್ಣ ಹಳ್ಳಿ. ಆ ಹಳ್ಳಿಯಲ್ಲಿ ಶಿವಗುರು ಹಾಗೂ ಆರ್ಯಾಂಬರೆನ್ನುವ ಬಡ ಬ್ರಾಹ್ಮಣಾ ದಂಪತಿಗಳು ವಾಸವಾಗಿದ್ದರು. ಊಟ, ವಸತಿಗಳಎಲ್ಲಾ ಅದು ಹೇಗೋ ದಿನನಿತ್ಯವೂ ನಡೆಯುತ್ತಿದ್ದರೂ ಆ ದಂಪತಿಗಳೈಗೆ ‘ತಮ್ಮದಾದ ಒಂದು ಮಗುವಿಲ್ಲ, ತಮಗೆ ಸಂತಾನಭಾಗ್ಯವಿಲ್ಲ’ ಎನ್ನುವ ಚಿಂತೆಯು ಬಲವಾಗಿ ಕಾಡುತ್ತಿತ್ತು. ಹೀಗಿರಲು ಇದೇ ಚಿಂತೆಯಲ್ಲಿ ಆ ಈರ್ವರೂ ತಾವು ಈ ಕುರಿತು ಪರಮೇಶ್ವರನ ಮೊರೆಹೋಗಲು ತೀರ್ಮಾನಿಸಿ ಅದರಂತೆ ಪರಮೇಶ್ವರನನ್ನು ಶ್ರದ್ದಾ ಭಕ್ತಿಗಳಿಂದ ಆರಾಧಿಸಿಲು ಮುಂದಾದಾರು. ಅದೊಂದು ದಿನ ಪರಮೇಶ್ವರನು ತಾನು ಶಿವಗುರುವಿನ ಕನಸಿನಲ್ಲಿ ಕಾಣಿಸಿಕೊಂಡು- “ಭಕ್ತಾ, ನಿನ್ನ ಪೂಜೆಗೆ ಮೆಚ್ಚಿದ್ದೇನೆ. ನಿನ್ನ ಕೋರಿಕೆಯನ್ನು ನಾನು ಈಡೇರಿಸಲಿದ್ದೇನೆ, ನಿನಗೆಂತಹಾ ಮಗನು ಬೇಕು? ಮಹಾನ್ ಜ್ಞಾನಿಯಾದ, ಆದರೆ ಅಲ್ಪಾಯುವದ ಮಗನು ಬೇಕೋ, ಇಲ್ಲವೇ ಅಲ್ಪ ಜ್ಞಾನಿಯಾದ ದೀರ್ಘಾಯುವಾದ ಮಗನು ಬೇಕೋ?” ಎಂದೆನ್ನಲು ಶಿವಗುರುವು ತಾನು ಕ್ಷಣಕಾಲವೂ ಯೋಚಿಸದೆ- “ನನಗೆ ಮಹಾಜ್ಞಾನಿಯಾದ ಮಗನು ಬೇಕು” ಎಂದೆನ್ನಲು “ತಥಾಸ್ತು” ಎಂದ ಪರಮೇಶ್ವರನು ತಾನು ಅಂತರ್ಧಾನನಾದನು. ಅದಾದ ಕೆಲ ತಿಂಗಳಿನಲ್ಲಿಯೇ ಮಾತೆ ಆರ್ಯಾಂಬಾ ಜನ್ಮತಃ ಮಹಾಜ್ಞಾನಿಯಾದ ಶಂಕರನಿಗೆ ಜನ್ಮವಿತ್ತಳು.

ಮತ್ತಷ್ಟು ಓದು »

12
ಮೇ

ರಾಜಕೀಯದ ‘ಬಂಡವಾಳ’

– ಸಂದೀಪ ಫಡ್ಕೆ, ಮುಂಡಾಜೆ

ಪಾರ್ಟಿ ಫಂಡ್ಅಧಿಕಾರದ ಚುಕ್ಕಾಣಿ ಹಿಡಿಯಲು, ರಾಜಕೀಯ ಪಕ್ಷಗಳಿಗೆ ಜನರ ಬೆಂಬಲ ಅವಶ್ಯಕ. ವಿವಿಧ ಆಶೋತ್ತರಗಳನ್ನು ಈಡೇರಿಸುವ ವಾಗ್ದಾನ ಮಾಡುವ ಇವರಿಗೆ, ಕಿಂಚಿತ್ತು ಸಹಾಯ ಮಾಡುವ ಅವಕಾಶ ನಮ್ಮ ಸಂವಿಧಾನ ಕೊಟ್ಟಿದೆ. ಪ್ರಜಾಪ್ರಭುತ್ವದ ದೃಷ್ಟಿಯಿಂದಲೂ, ನಾಗರಿಕರ ಹಕ್ಕು ಕೇವಲ ಮತದಾನಕಷ್ಟೇ ಸೀಮಿತವಾಗಬಾರದು. ಹಾಗಾಗಿ ಅರ್ಹ ವ್ಯಕ್ತಿ ಯಾ ಪಕ್ಷಕ್ಕೆ ದೇಣಿಗೆಯ ರೂಪದಲ್ಲಿ ಹಣದ ನೆರವನ್ನು ನೀಡಬಹುದು. ಆದರೆ, ಇತ್ತೀಚೆಗೆ ಸಂತ್ರಸ್ತರ ಪರಿಹಾರ ನಿಧಿಗೆ ಅಥವಾ ಸಮಾಜ ಸೇವೆಗೆ ಸಂದಾಯವಾಗುವ ಹಣಕ್ಕಿಂತ ಹೆಚ್ಚು ರಾಜಕೀಯ ಪಕ್ಷಗಳ ಪಾಲಾಗುತ್ತಿದೆ. ಸ್ವಾರ್ಥ ರಕ್ಷಣೆಗಾಗಿ, ಬೃಹತ್ ಉದ್ದಿಮೆದಾರರ ಕಪಿಮುಷ್ಠಿಯಲ್ಲಿ ಪಕ್ಷಗಳು ನಲುಗುತ್ತಿವೆ. ಇದರ ಇನ್ನೊಂದು ಮುಖವೆಂಬಂತೆ ಅಭ್ಯರ್ಥಿ ಯಾ ಪಕ್ಷಕ್ಕೆ ಹಣದ ಹೊಳೆ ಹರಿಯುತ್ತಿದೆ.

ಸ್ವಾತಂತ್ರ್ಯ ಪೂರ್ವದಲ್ಲೂ, ಉದ್ಯಮರಂಗ ಚುನಾವಣೆಯ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿತ್ತು. ಸದಸ್ಯತ್ವ ಶುಲ್ಕ ಮತ್ತು ವೈಯುಕ್ತಿಕ ದೇಣಿಗೆಯಿಂದ ಚುನಾವಣೆಯ ವೆಚ್ಚ ಭರಿಸಲು ಪಕ್ಷಗಳಿಗೆ ಸಾಧ್ಯವಾಗದೇ ಇದ್ದುದ್ದು ಇದಕ್ಕೆ ಪ್ರಮುಖ ಕಾರಣ. ಕಾಲಕ್ರಮೇಣ ಚುನಾವಣೆಯ ಸಿದ್ಧತೆ ಮತ್ತು ಕಾರ್ಯಗತಗೊಳಿಸುವುದು ದುಬಾರಿಯಾಗುತ್ತಾ ಹೋಯಿತು. 2009ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗೆ ಸರ್ಕಾರ ಸುಮಾರು 1120 ಕೋಟಿ ರೂಪಾಯಿ ವ್ಯಯಿಸಿದೆ. ಅಲ್ಲದೇ, ವಿವಿಧ ಅಭ್ಯರ್ಥಿ ಮತ್ತು ಪಕ್ಷಗಳು ಒಟ್ಟು ಸುಮಾರು 14 ಸಾವಿರ ಕೋಟಿ ಖರ್ಚು ಮಾಡಿರುವುದು ಅಂದಾಜಿಸಲಾಗಿದೆ. ಹೀಗಾಗಿ, ರಾಜಕೀಯ ಪಕ್ಷಗಳು ಹೆಚ್ಚಿನ ಹಣವನ್ನು ಕಂಪನಿಗಳಿಂದ ಪಡೆಯುತ್ತಿವೆ. ಈ ಸಲುವಾಗಿ, 1960ರಲ್ಲಿ ಕಂಪನಿ ಕಾಯ್ದೆಯನ್ನು ಜಾರಿಗೊಳಿಸಲಾಯಿತು. ಕಂಪನಿಗಳು ನಿಗದಿತ ಮೊತ್ತದಷ್ಟು ಹಣವನ್ನು ಪಕ್ಷಗಳಿಗೆ ನೀಡಬಹುದೆಂದು ಕಾಯ್ದೆ ಉಲ್ಲೇಖಿಸಿತ್ತು. ಆದರೆ ಇದು ಸಣ್ಣ ಮತ್ತು ಮಧ್ಯಮ ಉದ್ಯಮಿಗಳ ಕೆಂಗಣ್ಣಿಗೆ ಗುರಿಯಾಯಿತು. ಸರ್ಕಾರ ಕೇವಲ ತನಗೆ ಸಹಕರಿಸಿದ ಬೃಹತ್ ಉದ್ದಿಮೆದಾರರ ಹಿತ ಕಾಪಾಡುವಲ್ಲಿ ಶಾಮೀಲಾಯಿತು. ಹೀಗೆ ಟೀಕೆಗೊಳಪಟ್ಟ ಕಾಯ್ದೆಗೆ 1969ರಲ್ಲಿ ತಿದ್ದುಪಡಿ ತರಲಾಯಿತು. ಈ ತಿದ್ದುಪಡಿ, ರಾಜಕೀಯ ಪಕ್ಷಗಳಿಗೆ ಹಣ ಪೂರೈಸುವುದು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಿತು. ಆದರೆ, ಈ ‘ದೇಣಿಗೆ’ಯಿಂದ ಪಕ್ಷ ಮತ್ತು ಕಂಪನಿಗಳಿಗೆ ಪ್ರಯೋಜನವಿತ್ತು. ಆದ್ದರಿಂದ, ಅಕ್ರಮವಾಗಿ ಹಣ ರವಾನಿಸುವ ಚಟುವಟಿಕೆಗಳು ಶುರುವಾದವು. 1985ರಲ್ಲಿ ಮತ್ತೊಂದು ತಿದ್ದುಪಡಿ ತರಲಾಯಿತಾದರೂ ಪರಿಣಾಮ ಬೀರಲಿಲ್ಲ.

ಮತ್ತಷ್ಟು ಓದು »

17
ಏಪ್ರಿಲ್

ಕಾಂಗ್ರೆಸ್ ರಹಿತ ಭಾರತ ಸಾಧ್ಯವೇ?

– ಡಾ.ಅಶೋಕ್. ಕೆ. ಆರ್

indian-politician1‘ಯಥಾಸ್ಥಿತಿಗೋ ಬದಲಾವಣೆಗೋ ಸ್ಥಿರತೆಗೋ ಅಭಿವೃದ್ಧಿಗೋ ಸ್ಥಳೀಯ ಅನಿವಾರ್ಯತೆಗೋ ಮತ್ತೊಂದಕ್ಕೋ ಮಗದೊಂದಕ್ಕೋ ಒಟ್ಟಿನಲ್ಲಿ ಹೋಗಿ ವೋಟ್ ಮಾಡಿ!’

ಮೋದಿ ಜಪದ ಭಾಜಪ ಕಾಂಗ್ರೆಸ್ಸನ್ನು ಭಾರತದಿಂದ ಸಂಪೂರ್ಣ ನಿರ್ನಾಮವಾಗಿಸುವುದೇ ನಮ್ಮ ಗುರಿ ಎಂದು ಬಹಳಷ್ಟು ಪ್ರಚರಿಸುತ್ತಿದೆ. ಅನೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಏಳಿಗೆಯಿಂದ ರಾಷ್ಟ್ರೀಯ ಪಕ್ಷಗಳೆನ್ನಿಸಿಕೊಂಡ ಕಾಂಗ್ರೆಸ್ ಮತ್ತು ಭಾಜಪ ತಮ್ಮ ಅಸ್ತಿತ್ವವನ್ನು ಕಂಡುಕೊಳ್ಳಲೂ ಎಣಗುತ್ತಿರುವ ಪರಿಸ್ಥಿತಿಯಿದೆ. ಒಂದಷ್ಟು ರಾಜ್ಯಗಳಲ್ಲಿ ಭಾಜಪ ಪ್ರಭಾವಶಾಲಿಯಾಗಿ ಮಗದೊಂದಷ್ಟು ಕಡೆ ಕಾಂಗ್ರೆಸ್ ಪ್ರಭಾವಶಾಲಿಯಾಗಿ ಮತ್ತೊಂದು ಪಕ್ಷದ ಏಳಿಗೆಗೆ ಅಡ್ಡಿಯಾಗಿದ್ದರೆ ಇನ್ನುಳಿದವುಗಳಲ್ಲಿ ಮತದಾರ ಒಮ್ಮೆ ಕಾಂಗ್ರೆಸ್ಸಿಗೆ ಮತ್ತೊಮ್ಮೆ ಭಾಜಪಕ್ಕೆ ಅವಕಾಶ ನೀಡುವ ಮನಸ್ಸು ಮಾಡಿದ್ದಾನೆ.
ಕಾಂಗ್ರೆಸ್ಸಿಗರು ಮಾಡುವ ಭ್ರಷ್ಟಾಚಾರದಿಂದ ರೋಸಿ ಹೋಗಿ ಬೇರೊಂದು ಪಕ್ಷಕ್ಕೆ ಮತ ಹಾಕುವ ಜನರ ತೀರ್ಮಾನ ಬಹಳಷ್ಟು ಸಲ ಬೆಂಕಿಯಿಂದ ಬಾಣಲೆಗೆ ಹಾಕಿಸಿಕೊಂಡಂತೆ ಆಗುತ್ತಿದೆ. ಮತ್ತಷ್ಟು ಓದು »