ಪ್ರತ್ಯಕ್ಷ ಕಂಡು ಪರಾಂಬರಿಸಿ ನೋಡಿದ ಮೇಲೂ ನಮೋ ಎನ್ನದಿದ್ದರೆ…
– ರಾಜೇಶ್ ರಾವ್
ಯಾವ ಘಟನೆ ಸಹನೆಯ ಕಟ್ಟೆಯೊಡೆದು ಸ್ವಾಭಿಮಾನ ಸಿಡಿದೆದ್ದು ನಡೆದಿತ್ತೋ ಆ ಘಟನೆ ಆತನನ್ನು ಜಗತ್ತಿಗೇ ಪರಿಚಯಿಸಿತು. ಜಗತ್ತಿಗೆ ಜಗತ್ತೇ ಆತನನ್ನು ಖಳನಾಯಕನನ್ನಾಗಿ, ರಾಕ್ಷಸನನ್ನಾಗಿ ಕಂಡು ದೂಷಿಸಿತು. ಜೊತೆಯಲ್ಲಿದ್ದವರೂ ದೂರವಾದರು. ಮಾಧ್ಯಮಗಳಿಂದ ನಿತ್ಯ ದೂಷಣೆಗಳ ಸಹಸ್ರನಾಮ. ರಾಷ್ಟ್ರವಿರೋಧಿ ಶಕ್ತಿಗಳಂತೂ ಹಬ್ಬದೂಟವೆಂಬಂತೆ ಈ ಸನ್ನಿವೇಶವನ್ನು ತಮಗೆ ತಕ್ಕಂತೆ ಮಾರ್ಪಡಿಸಿಕೊಂಡು ಕಣ್ಣಿಗೆ ರಾಚುವ ಸತ್ಯವನ್ನು ಕಾಲಗರ್ಭದಲ್ಲಿ ಅಡಗುವಂತೆ ಮಾಡಿದರು. ಮಾಧ್ಯಮಗಳು ಮುಚ್ಚಿಟ್ಟ ಕಾರಣ ಸಾಮಾನ್ಯ ಜನರಿಗೂ ಸತ್ಯ ತಿಳಿಯದೆ ಅವರೂ ದ್ವೇಷಿಸತೊಡಗಿದರು. ಅವನದೆಲ್ಲವನ್ನೂ ಮೌನವಾಗಿ ಸಹಿಸಿದ. ಮೌನವಾಗಿಯೇ ಕೆಲಸವನ್ನು ಮಾಡುತ್ತಾ ತನ್ನ ಜವಾಬ್ದಾರಿಯನ್ನು ಚ್ಯುತಿಯಿಲ್ಲದಂತೆ ಪೂರೈಸಿದ. ಯಾಕೆಂದರೆ ಅವನಲ್ಲೊಬ್ಬ ನಾಯಕನಿದ್ದ, ಸಂಘಟನಕಾರನಿದ್ದ, ಸಂಘದ ಶಿಸ್ತು, ಸಂಯಮ, ಸೇವಾಗುಣದ ಮೂರ್ತರೂಪವಿತ್ತು!
ಅದು 2013ರ ಜೂನ್ ತಿಂಗಳು. ಶಾಂತವಾಗಿದ್ದ ಗಂಗೆ ಉಕ್ಕಿ ಹರಿದಿದ್ದಳು. ಉತ್ತರ ಭಾರತ ಜಲ ಪ್ರಳಯದಿಂದ ತತ್ತರಿಸಿತ್ತು. ಚಾರ್ ಧಾಮಗಳಲ್ಲಿ ಯಾತ್ರಿಕರು ನಾಲ್ಕೂ ಕಡೆ ದಿಕ್ಕಾಪಾಲಾಗಿದ್ದರು. ಉತ್ತರಾಖಂಡದ ಜನರ ಬವಣೆಗೆ ಉತ್ತರ ಹೇಳುವವರಿರಲಿಲ್ಲ. ಕೇಂದ್ರ, ರಾಜ್ಯ ಸರಕಾರಗಳೆರಡೂ ನಿಷ್ಕ್ರಿಯವಾಗಿದ್ದ ಅಂತಹ ಕ್ಲಿಷ್ಟಕರ ಸಮಯದಲ್ಲಿ ಸಹಾಯಕ್ಕಾಗಿ ಪರಿತಪಿಸುತ್ತಿದ್ದ ಸಾವಿರಾರು ಸಂತ್ರಸ್ಥರಲ್ಲಿ ಸುಮಾರು 15,000 ಮಂದಿ ಸಂತ್ರಸ್ಥರನ್ನು ಹುಡುಕಾಡಿ ಅವರ ನೆರವಿಗೆ ಧಾವಿಸಿದ ಆತನ ಪಡೆ, ಸುಮಾರು 80 ಟೊಯೊಟಾ ಇನ್ನೋವಾ ಕಾರುಗಳಲ್ಲಿ ಅವರನ್ನು ಡೆಹ್ರಾಡೂನಿನ ಸುರಕ್ಷಿತ ಸ್ಥಳಕ್ಕೆ ಸಾಗಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದರಲ್ಲದೆ, ಅಲ್ಲಿಂದ 25 ಐಷಾರಾಮಿ ಬಸ್ಸುಗಳ ಸಹಾಯದಿಂದ ನವದೆಹಲಿಗೆ ಪ್ರಯಾಣ ವ್ಯವಸ್ಥೆ ಕಲ್ಪಿಸಿದರು. ಇದು ಒಬ್ಬ ನಾಯಕನಾದವ ಮಾಡುವ ಕಾರ್ಯ.ಪಾಕಿಸ್ತಾನದ ಪ್ರಧಾನಿ ನಮ್ಮ ದೇಶದ ಪ್ರಧಾನಿಯನ್ನು ಹಳ್ಳಿ ಹೆಂಗಸು ಎಂದು ಜರೆದಾಗ ಬೇರೆ ನಾಯಕರಿರಲಿ ಪ್ರಧಾನಿಯ ಪಕ್ಷದ ನಾಯಕರೇ ತುಟಿಪಿಟಿಕ್ಕೆನ್ನದಿದ್ದಾಗ ನಮ್ಮ ದೇಶದ ಪ್ರಧಾನಿಯನ್ನು ಹೀಯಾಳಿಸುವ ಅಧಿಕಾರ ತಮಗಿಲ್ಲವೆಂದು ಹೇಳುವ ಮೂಲಕ ಯುಧಿಷ್ಟಿರನ “ಮೂರನೆಯವ ಎದುರಾದಾಗ ನಾವು ನೂರೈವರು” ಎಂಬ ಮಾತನ್ನು ಅಕ್ಷರಷಃ ಪಾಲಿಸಿದ ನಾಯಕ ಪ್ರಸಕ್ತ ಸನ್ನಿವೇಶದಲ್ಲಿ ಆತನೊಬ್ಬನೇ!
ಮುನ್ನುಗ್ಗುತ್ತಿದ್ದ ವಿಸ್ತರಣಾ ಮನೋಭಾವದ ಚೀನಾಕ್ಕೆ ಖಡಕ್ಕಾಗಿ ಉತ್ತರ ನೀಡಿದ ನಾಯಕ ಆತನಲ್ಲದೆ ಮತ್ಯಾರು? ವೀಸಾಕ್ಕಾಗಿ ಅಂಗಲಾಚದೇ ಅಮೇರಿಕಾದವರನ್ನೇ ಭಾರತದ ವೀಸಾಕ್ಕಾಗಿ ಸರತಿಯಲ್ಲಿ ನಿಲ್ಲುವಂತೆ ಮಾಡುತ್ತೇನೆಂದು ಘೋಷಿಸುವ ಧೈರ್ಯ ಮತ್ಯಾರಿಗಿದೆ? ಹೌದು, ಯಾವ ದೊಣ್ಣೆನಾಯಕನ ಅಪ್ಪಣೆಗೆ ಕಾಯದೇ ಸಂಧಿಗ್ಧ ಪರಿಸ್ಥಿತಿಯಲ್ಲಿ ಸ್ವಯಂ ಖಚಿತ ನಿರ್ಧಾರದೊಂದಿಗೆ ಮುನ್ನುಗ್ಗುವುದು ಮಾತ್ರವಲ್ಲ ಅದನ್ನು ಯಶಸ್ವಿಯಾಗಿ ಪೂರೈಸುವುದನ್ನು ಹಾಗೂ ದೇಶದ ಘನತೆ, ಸ್ವಾಭಿಮಾನ, ಗೌರವಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳುವ ಧೈರ್ಯ-ಸ್ಥೈರ್ಯ ಪ್ರದರ್ಶಿಸುವುದನ್ನು ಸರ್ದಾರ ಪಟೇಲ್ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿಯವರ ನಂತರದ ರಾಜಕೀಯ ನಾಯಕರಲ್ಲಿ ನೋಡಬಹುದಾದ ಏಕೈಕ ವ್ಯಕ್ತಿ ನರೇಂದ್ರ ಮೋದಿ!
ತುಷ್ಟೀಕರಣ ನಿಲ್ಲದ ಹೊರತು ಕಾಶ್ಮೀರ ತಣಿಯದು
– ಯೋಗೀಶ ತೀರ್ಥಪುರ
ಕಾಶ್ಮೀರ ಹಿಂದೂಗಳ ಪಾಲಿಗೆ ನರಕವಾಗಿ ಪರಿವರ್ತಿತವಾಗಿದೆ. ಹಿಂಸೆ, ಶೋಷಣೆಯ ದಳ್ಳುರಿಯಲ್ಲಿ ಇಲ್ಲನ ಹಿಂದೂಗಳ ಸ್ಥಿತಿ ತೀರಾ ದಯನೀಯವಾಗಿದೆ. ಇಷ್ಟೆಲ್ಲ ನಡೆದಿದ್ದರೂ ಕಾಶ್ಮೀರ ಸರ್ಕಾರ ಹಾಗೂ ಕೇಂದ್ರ ಸರ್ಕಾರ ತುಷ್ಟೀಕರಣ ರಾಜಕಾರಣದಲ್ಲೇ ಮುಂದುವರಿದಿರುವುದು ದುರದೃಷ್ಟಕರ.
1947ರ ವಿಭಜನೆಯ ನಂತರದ ಕಾಲದಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ದಿಂದ ಸುಮಾರು 4.5 ಲಕ್ಷ ಹಿಂದುಗಳು ಕಾಶ್ಮೀರಕ್ಕೆ ಸ್ಥಳಾಂತರಗೊಂಡರು. ಈ ಹಿಂದುಗಳಿಗೆ ಕಾಶ್ಮೀರದಲ್ಲಿ ಮತದಾನದ ಹಕ್ಕಿಲ್ಲ ಮತ್ತು ಯಾವುದೇ ಪರಿಸ್ಥಿತಿಯಲ್ಲಿ ಹಿಂದುಗಳಿಗೆ ವಿಧಾನಸಭೆಯಲ್ಲಿ 31% ರಷ್ಟೇ ಪ್ರತಿ ನಿಧಿತ್ವ ಸಿಗುವಂತೆ ಒಟ್ಟು ಸ್ಥಾನಗಳ ಹೊಂದಾಣಿಕೆಯನ್ನು ಮಾಡಲಾಗಿದೆ.
ಕಾಶ್ಮೀರಿ ಹಿಂದುಗಳಲ್ಲಿ ಸಾಕ್ಷರತಾ ಪ್ರಮಾಣವು 88%ರಷ್ಟು ಇದ್ದರೂ ರಾಜ್ಯ ಸರಕಾರದ ಸೇವೆ, ಸಾರ್ವಜನಿಕವಲಯ ಮತ್ತು ಸರಕಾರಿ ಕಂಪೆನಿಗಳಲ್ಲಿ ಹಿಂದು ಕಾರ್ಮಿಕರ ಪ್ರಮಾಣವು 4.8% ರಷ್ಟು ಮಾತ್ರ ಇದೆ. 1980 ರಿಂದ 1990ರ ಅವಧಿಯಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಾದ ಮೇಲೆ ಈ ಪ್ರಮಾಣವು 1.7%ಕ್ಕೆ ಇಳಿಯಿತು. ಕಾಶ್ಮೀರದಲ್ಲಿನ ಯಾವ ಆರ್ಥಿಕ ವ್ಯವಹಾರವೂ ಹಿಂದೂಗಳ ಕೈಯಲ್ಲಿ ಇಲ್ಲ. ಕಾಶ್ಮೀರದ 97.4% ಭೂಮಿಯು ಮುಸಲ್ಮಾನರ ಒಡೆತನದಲ್ಲಿದೆ. ಕೇವಲ 2.6% ಭೂಮಿಯು ಮಾತ್ರ ಹಿಂದು ಮತ್ತು ಇತರ ಅಲ್ಪಾಸಂಖ್ಯಾತರ ಒಡೆತನದಲ್ಲಿದೆ. 1985ರಲ್ಲಿ ಕಾಶ್ಮೀರದಲ್ಲಿ ನೋದವಣೆ ಮಾಡಲ್ಪಟ್ಟ ಲಘು ಉದ್ಯೋಗಗಳ ಸಂಖ್ಯೆ 46,293 ಇತ್ತು. ಇದರಲ್ಲಿ 0.01% ರಷ್ಟು ಉದ್ಯೋಗಗಳು ಹಿಂದುಗಳ ಒಡೆತನದಲ್ಲಿದ್ದವು ಮತ್ತು ವಿದ್ಯುತ್ ಆಧಾರಿತ ಉದ್ಯೋಗಗಳ ಪೈಕಿ 98.9%ರಷ್ಟು ಮುಸಲ್ಮಾನರ ಒಡೆತನದ್ದಲಿವೆ. ಕಾಶ್ಮೀರದಲ್ಲಿನ 96%ರಷ್ಟು ಸೇಬು ತೋಟಗಳ ಜಮೀನು ಮುಸಲ್ಮಾನರ ಒಡೆತನದ್ದಲಿದೆ.
‘ದೇಶ ಮೊದಲು’ ಎಂದ ಕದನ ಕಲಿಗಳ ಆತ್ಮ ಸಮ್ಮಾನವನ್ನು ದೇನಿಸುತ್ತಾ….
– ರಾಘವೇಂದ್ರ ಅಡಿಗ ಎಚ್ಚೆನ್
ಯಾರೇ ಒಬ್ಬ ವ್ಯಕ್ತಿ ಸೈನ್ಯಕ್ಕೆ ಸೇರುತ್ತಾನೆಂದರೆ ಆ ವ್ಯಕ್ತಿಯ ಜಾತಿ, ಧರ್ಮಗಳೇನು ಎನ್ನುವುದನ್ನು ಯಾರೊಬ್ಬರೂ ಕೇಳುವುದಿಲ್ಲ. ಬದಲಾಗಿ ಅವನಿಗಿರುವ ದೇಶಾಭಿಮಾನಕ್ಕೆ ದೇಶವಾಸಿಗಳೆಲ್ಲಾ ತಲೆದೂಗುತ್ತಾರೆ. ಸೈನ್ಯಕ್ಕೆ ಸೇರ್ಬಹುದಾದ ವ್ಯಕ್ತಿ ಯಾರೇ ಆದರೂ ಅವನ ಬಗ್ಗೆ ಇಡಿ ದೇಶವೇ ಹೆಮ್ಮೆ ಪಡುತ್ತದೆ ಏಕೆಂದರೆ ಭಾರತೀಯ ಸೇನೆ ನಿರ್ವಹಿಸುವ ಕಾರ್ಯ ಅಂತಹುದು. ಮಳೆ, ಚಳಿ, ಶೀತ ಮಾರುತ, ಬಿರು ಬಿಸಿಲು ಎನ್ನುವುದನ್ನೂ ಲೆಕ್ಕಿಸದೆ ಹಗಲಿರುಳೂ ದೇಶದ ಗಡಿ ಕಾಯುವ ಯೋಧರ ದೇಶ ನಿಷ್ಠೆಯಿಂದಾಗಿಯೇ ಇಂದು ನಾವೆಲ್ಲಾ ನೆಮ್ಮದಿಯಿಂದ ಬದುಕುತ್ತಿದ್ದೇವೆ.
ಅದು 1999 ಮೇ ತಿಂಗಳು, ಪಾಕಿಗಳು ಕಾರ್ಗಿಲ್ನ, ಪೂರ್ವ ಬಟಾಲಿಕ್ನ ಮತ್ತು ದ್ರಾಸ್ನ ಉತ್ತರ ದಿಕ್ಕಿನ ಬೆಟ್ಟಗಳನ್ನು ಏರತೊಡಗಿದರು. ಗಟ್ಟಿ ಮುಟ್ಟಾಗಿದ್ದ ಬಂಕರುಗಳನ್ನು ತಮ್ಮೊಂದಿಗಿಟ್ಟುಕೊಂಡಿದ್ದ ಅವರು ಭಾರತೀಯದ ಸರ್ವ ರೀತಿಯ ಧಾಳಿಗೂ ಸನ್ನದ್ದರಾಗಿದ್ದರು. ಹಳ್ಳಿಗಾಡಿನ ದನಗಾಹಿಗಳಿಂದ ಪಾಕಿಸ್ತಾನದ ಈ ಕುಟಿಲೋಪಾಯವನ್ನರಿತ ನಮ್ಮ ಸೇನೆ ವರದಿ ತರಲೆಂದು ಸೌರಭ್ ಕಾಲಿಯಾ ನೇತೃತ್ವದಲ್ಲಿ ಐವರನ್ನು ಗುಡ್ಡ ಹತ್ತಿಸಿತು. ಶತ್ರುಪಡೆಗಳ ಸಾಮರ್ಥ್ಯದ ಅಂದಾಜಿಲ್ಲದ ನಮ್ಮವರು ಬೆಟ್ಟ ಹತ್ತಿ ಪಾಕ್ ನ ಮತಾಂಧ ಸೈನಿಕರ ಕೈಯಲ್ಲಿ ಸಿಕ್ಕಿಹಾಕಿಕೊಂಡು ಕ್ರೂರವಾದ ಹಿಂಸೆಗೆ ತುತ್ತಾದರು. ಅಷ್ಟೆ ಅಲ್ಲ ಅವರುಗಳ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಭಾರತೀಯ ಸೇನಾ ಶಿಬಿರಕ್ಕೆ ಹಿಂತಿರುಗಿಸಲಾಯಿತು.
ಅಂದಿನ ವಾಜಪೇಯಿ ನೇತೃತ್ವದ ಎನ್.ಡಿ.ಎ. ಸರ್ಕಾರವು ತಕ್ಷಣವೇ ‘ಆಪರೇಷನ್ ವಿಜಯ್’ ಹೆಸರಿನಲ್ಲಿ ಸೈನಿಕ ಕಾರ್ಯಾಚರಣೆ ನಡೆಸಲು ಆದೇಶ ನೀಡಿತು. ಆದರೆ ಅಂತಹಾ ಸೂಕ್ಷ್ಮ ಸ್ಥಿತಿಯಲ್ಲಿ ದೇಶದ ಗಡಿ ಕಾಯುತ್ತಿದ್ದ ಸೈನಿಕರ ಬಳಿ ಸರಿಯಾದ ಆಧುನಿಕ ಶಸ್ತ್ರಾಸ್ತ್ರಗಳೂ ಇರಲಿಲ್ಲ! ದೇಹ ರಕ್ಷಣೆಗೆ ಅವಷ್ಯವಾದ ಬಟ್ಟೆಗಳೂ ಇರಲಿಲ್ಲ! ಮತ್ತಷ್ಟು ಓದು 
ಮಹಾತ್ಮಾ ಗಾಂಧಿಯವರ ಆಸೆಯನ್ನು ನೆರವೇರಿಸಲಿರುವ ಸೋನಿಯಾ!
– ನರೇಂದ್ರ ಕುಮಾರ್
1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ, ಕಾಂಗ್ರೆಸ್ಸಿನ ನಾಯಕರ ಮುಂದೆ ಮಹಾತ್ಮಾ ಗಾಂಧಿಯವರು ತಮ್ಮ ಆಸೆಯೊಂದನ್ನು ಹೇಳಿದರು. ಅದೆಂದರೆ, “ಭಾರತಕ್ಕೆ ಸ್ವಾತಂತ್ರ್ಯ ಪಡೆಯುವುದು ಕಾಂಗ್ರೆಸ್ಸಿನ ಉದ್ದೇಶವಾಗಿತ್ತು. ಈಗ ಅದು ನೆರವೇರಿದೆ. ಹೀಗಾಗಿ, ಇನ್ಮುಂದೆ ಕಾಂಗ್ರೆಸ್ಸಿನ ಆವಶ್ಯಕತೆಯಿರುವುದಿಲ್ಲ. ಈಗ ಕಾಂಗ್ರೆಸ್ಸನ್ನು ವಿಸರ್ಜಿಸಿಬಿಡೋಣ. ನಿಮಗೆ ಅಗತ್ಯವೆನಿಸಿದರೆ ಹೊಸದೊಂದು ರಾಜಕೀಯ ಪಕ್ಷವನ್ನು ಕಟ್ಟಿಕೊಳ್ಳಿ”. ಇದಕ್ಕೆ ಸರ್ದಾರ್ ಪಟೇಲರ ಸಮ್ಮತಿಯೂ ಇತ್ತು. ಆದರೆ, ಸ್ವತಂತ್ರ ಭಾರತದ ಪ್ರಧಾನಿಯಾಗುವ ಕನಸು ಕಾಣುತ್ತಿದ್ದ ಪಂಡಿತ್ ನೆಹರೂ ಅವರು ಇದಕ್ಕೆ ಒಪ್ಪಲಿಲ್ಲ. ಇಷ್ಟು ವರ್ಷಗಳ ಕಾಲ ಕಷ್ಟಪಟ್ಟ ನಂತರ, ಅದರ ಫಲವನ್ನು ಉಣ್ಣುವುದರಲ್ಲಿ ತಪ್ಪೇನಿದೆ ಎನ್ನುವುದು ಅವರ ವಾದವಾಗಿತ್ತು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರಿಂದ ಬಂದಿದ್ದ ಪ್ರಸಿದ್ಧಿಯನ್ನು ಅಧಿಕಾರದ ಖುರ್ಚಿಗೆ ಏರುವುದಕ್ಕೆ ಉಪಯೋಗಿಸಿಕೊಳ್ಳುವುದೇ ಸರಿ ಎಂದು ಅವರು ಹೇಳಿದರು. ಇದಾದ ಸ್ವಲ್ಪ ದಿನದಲ್ಲೇ ಗಾಂಧೀಜಿಯವರ ಕೊಲೆಯೂ ಆಗಿಹೋಯಿತು. ಗಾಂಧೀಜಿಯವರ ಆಸೆ ಹಾಗೆಯೇ ಉಳಿದು ಬಿಟ್ಟಿತ್ತು!
1947ರಲ್ಲಿ “ಸಂವಿಧಾನ ಸಭೆ” (Constituent Assembly) ಅಸ್ತಿತ್ವಕ್ಕೆ ಬಂದಿತು. ನೆಹರೂ ಪ್ರಧಾನಿಯಾದರು. ವಿವಿಧ ಪಕ್ಷಗಳಿಗೆ ಸೇರಿದವರಿಗೂ ಸರಕಾರದಲ್ಲಿ ಅವಕಾಶ ನೀಡಿದರು. ಆ ನಂತರ, ಸರಕಾರದಲ್ಲಿ ಕಾನೂನು ಮಂತ್ರಿಯಾಗಿದ್ದ ಡಾ||ಅಂಬೇಡ್ಕರ್ ಅವರ ನೇತೃತ್ವದಲ್ಲಿ ಭಾರತದ ಸಂವಿಧಾನ ರಚನೆಯಾಯಿತು. 1951ರಲ್ಲಿ ಮೊದಲ ಚುನಾವಣೆಯಾಯಿತು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 364 ಸ್ಥಾನಗಳು ಲಭಿಸಿದವು. ಮತ್ತಾವ ಪಕ್ಷವೂ ಮೂರಂಕಿ ಮುಟ್ಟಲಿಲ್ಲ. 1957ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಸ್ಥಾನಗಳು 371 ಆದವು. ಈ ಬಾರಿಯೂ ಮತ್ತಾವ ಪಕ್ಷವೂ ಮೂರಂಕಿ ಮುಟ್ಟಲಿಲ್ಲ.
ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗಳಿಸಿದ ಸ್ಥಾನಗಳು ಕೆಳಗಿನ ಕೋಷ್ಟಕದಲ್ಲಿದೆ:
ಚಿದಂಬರಂ ಪಿಳ್ಳೆ
– ನವೀನ್ ನಾಯಕ್
ಭರತಖಂಡದ ಒಂದೊಂದೆ ಭಾಗಗಳನ್ನು ತಮ್ಮ ಕುತಂತ್ರದಿಂದ ಕಬಳಿಸಿದ ಬ್ರಿಟೀಶರು ಎಲ್ಲೆಲ್ಲೂ ತಮ್ಮ ಧಾರ್ಷ್ಟ್ಯವನ್ನು ತೋರತೊಡಗಿದರು. ನಮ್ಮ ಸಂಸ್ಕೃತಿಯನ್ನು ಒಂದೆಡೆ ಹೀಯಾಳಿಸುತ್ತ ಇನ್ನೊಂದೆಡೆ ಮತಾಂತರಿಸುತ್ತ ತಮ್ಮ ಸಾಮ್ರಾಜ್ಯವನ್ನು ಶಾಶ್ವತಗೊಳಿಸಲು ಸರ್ವಪ್ರಯತ್ನವನ್ನು ಮಾಡುತ್ತಲೇ ಇದ್ದರು. ತೆರಿಗೆ ಪದ್ದತಿಯ ವಿರೂಪದಿಂದ ಲಕ್ಷಾಂತರ ನೇಕಾರರು , ಕಾರ್ಮಿಕರು ಬೀದಿಗೆ ಬಿದ್ದರು.ದೇಶಿಯ ಮಾರುಕಟ್ಟೆಯನ್ನು ತಮ್ಮ ಕೈವಶ ಮಾಡಿಕೊಂಡು ಅನಾವಶ್ಯಕ ತೆರಿಗೆಗಳನ್ನು ಹೇರಿ ಸಾಮಾನ್ಯ ಜನರು ತತ್ತರಿಸುವಂತೆ ಮಾಡತೊಡಗಿದರು. ಸಮುದ್ರ ಪಯಣಗಳಿಗೂ ಇದರ ಬಿಸಿ ತಟ್ಟಿತ್ತು. ಆ ದಿನಗಳಲ್ಲಿ ಕೊಲೊಂಬೊ ಹಾಗು ತೂತ್ತುಕುಡಿಯ ನಡುವಿನ ಹಡಗು ಪಯಣದ ಸಂಪೂರ್ಣ ಅಧಿಕಾರ ಬ್ರಿಟೀಶರ ಕೈಯಲ್ಲಿತ್ತು. ಬ್ರಿಟೀಶ್ ಇಂಡಿಯಾ ಸ್ಟೀಮ್ ನ್ಯಾವಿಗೇಶನ್ ಕಂಪನಿ ಎಂಬ ಈ ಸಂಸ್ಥೆ ತಮಗಿಷ್ಟ ಬಂದಂತೆ ಪ್ರಯಾಣ ವೆಚ್ಚವನ್ನು ಏರಿಸತೊಡಗಿದರು. ಇವರ ದುರಹಂಕಾರಕ್ಕೆ ಸೆಡ್ಡು ಹೊಡೆಯಲು ಲೆಕ್ಕಚಾರ ಹಾಕಿ ಕುಳಿತವರೇ ಚಿದಂಬರಂ ಪಿಳ್ಳೆ.
ತಮಿಳುನಾಡಿನ ಓಟ್ಟಪ್ಪಿದಪುರಂನಲ್ಲಿ ಉಳಗನಾಥಂ ಮತ್ತು ಪರಮಾಯಿ ಅಮ್ಮಾಳ್ ದಂಪತಿಗೆ ಸೆಪ್ಟಂಬರ್ 5 1827 ರಲ್ಲಿ ಚಿದಂಬರಂ ಪಿಳ್ಳೆಯವರು ಜನಿಸಿದರು. ತನ್ನ ಹದಿಮೂರನೇ ವಯಸ್ಸಿನವರೆಗೆ ಜನ್ಮಸ್ಥಳದಲ್ಲೇ ಕಳೆದ ಚಿದಂಬರಂರವರು ಮುಂದಿನ ವಿದ್ಯಾಭ್ಯಾಸಕ್ಕಾಗಿ ತೂತ್ತುಕುಡಿ ಎಂಬಲ್ಲಿಗೆ ಬಂದರು. ತಮ್ಮ ವಿದ್ಯಾಭ್ಯಾಸ ಮಾಡುತ್ತ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿ ತಮ್ಮ ಪ್ರಭುತ್ವ ಸ್ಥಾಪಿಸಿಕೊಂಡರು. ತದನಂತರ ಕೆಲಕಾಲ ತಾಲ್ಲೂಕು ಕಛೇರಿಯಲ್ಲಿ ಗುಮಾಸ್ತನಾಗಿ ದುಡಿದರು. ಈ ಕೆಲಸ ಚಿದಂಬರಂರವರಿಗೆ ತೃಪ್ತಿಯನ್ನು ತಂದು ಕೊಡುವಲ್ಲಿ ವಿಫಲವಾಯಿತು. ಚಿದಂಬರಂರವರ ವಂಶದ ಹಿರಿತಲೆಗಳು ವಕೀಲಿ ವೃತ್ತಿಯಲ್ಲಿ ನಿಷ್ಣಾತರಾಗಿದ್ದರು. ಇದೇ ಪ್ರಭಾವವನ್ನು ಬಳಸಿಕೊಂಡು ಅನ್ಯಾಯವಾಗಿ ಪೋಲಿಸ್ ಇಲಾಕೆಯ ಕಪಿಮುಷ್ಟಿಯಲ್ಲಿ ಸಿಲುಕಿದ ನಿರಪರಾಧಿಗಳ ಪರವಾಗಿ ವಾದಿಸಲು ವಕೀಲಿ ಅಭ್ಯಸಿಸಿ ತಿರುಚ್ಚಿಯ ಸಬ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಿದರು. ಎಷ್ಟೋ ಬಾರಿ ನಿರಪರಾಧಿಗಳ ಪರವಾಗಿ ನಿಃಶುಲ್ಕವಾಗಿ ಮೊಕದ್ದಮೆ ನಡೆಸಿಕೊಟ್ಟು ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದರು. ಚಿದಂಬರಂರವರ ಈ ಕೆಲಸದಿಂದ ಬ್ರಿಟೀಶರು,ಪೋಲಿಸ್ ಅಧಿಕಾರಿಗಳ ದ್ವೇಷಕ್ಕೆ ಒಳಗಾಗತೊಡಗಿದರು.
ಆಧ್ಯಾತ್ಮ ಮತ್ತು ಶಿವನ ಕುರಿತು ಅಪಾರ ಶ್ರದ್ದೆಯನ್ನು ಚಿದಂಬರಂ ಬೆಳೆಸಿಕೊಂಡಿದ್ದರು.ತಮಿಳು ಸಾಹಿತ್ಯವನ್ನು ಓದಿ ಅದ್ಭುತ ಜ್ಞಾನವನ್ನು ಮೈಗೂಡಿಸಿಕೊಂಡಿದ್ದರಲ್ಲದೇ ಯೋಗ್ಯ ಗುರುಗಳ ಮತ್ತು ಸಾಧುಗಳ ಸಂಪರ್ಕವನ್ನು ಸಹ ಬೆಳೆಸಿಕೊಂಡಿದ್ದರು. ಜೊತೆಗೆ ರಾಷ್ಟ್ರೀಯ ವಿಚಾರಗಳಲ್ಲಿ ಅತೀವ ಆಸಕ್ತಿಯನ್ನು ಹೊಂದಿದ್ದರು. 1898 ಡಿಸೆಂಬರ್ ಸಮಯದಲ್ಲಿ ಮದ್ರಾಸಿನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತ ಸಮಿತಿಯ ಕಾರ್ಯದರ್ಶಿ ಮತ್ತು ಕೋಶಾಧಿಕಾರಿಯ ಹೊಣೆಯನ್ನು ಹೊತ್ತಿಕೊಂಡಿದ್ದರು. ಆ ಮಹಾಧಿವೇಶನದಲ್ಲಿ ಭಾಗವಹಿಸಿದ ಒಟ್ಟು 614 ಪ್ರತಿನಿಧಿಗಳಲ್ಲಿ 519ಜನ ತಮಿಳುನಾಡಿನಿಂದಲೇ ಬಂದಿದ್ದರು. ಅಷ್ಟು ಜನರನ್ನು ಅಧಿವೇಶನಕ್ಕಾಗಿ ಕಲೆಹಾಕಿದ್ದ ಶ್ರೇಯಸ್ಸು ಚಿದಂಬರಂರವರದೇ !
ಮತ್ತಷ್ಟು ಓದು 
ಹೀಗೊಂದು ಊರಿನ ಕತೆ:
– ಬಾಲಚಂದ್ರ ಭಟ್
ಅದೊಂದು ಊರು. ಬಡವ-ಬಲ್ಲಿದ, ಬುದ್ದಿವಂತ, ದಡ್ಡ ಎಲ್ಲರೂ ಇದ್ದ ಊರು. ಆ ಊರಿಗೆ ದರೋಡೆಕೋರರ ಕಾಟ. ಹಿಂಸೆ, ಬಲಾತ್ಕಾರ, ದೋಚುವದು ಇವೆಲ್ಲವನ್ನೂ ಮಾಡುತ್ತಿದ್ದರು.ದರೋಡೆಕೊರರನ್ನು ಎದುರಿಸುವದಕ್ಕೆ ಭಯಪಟ್ಟ ಕೆಲವು ಚಿಂತಕರು ದರೋಡೆಕೋರರ ಜೊತೆ ಸಂಧಾನಕ್ಕಿಳಿಯುವ ದಾರಿಯನ್ನು ಯೋಚಿಸಿದರು. ಕೆಲವು ಸಾಹಸಿಗಳು ದಾಳಿಕೋರರಿಗೆ ಅವರದೇ ರೀತಿಯಲ್ಲಿ ಉತ್ತರಿಸುವ ಯೋಜನೆ ಹಾಕಿಕೊಂಡರು.ಒಮ್ಮೆ ದರೋಡೆಕೋರರು ಹಳ್ಳಿಗೆ ಧಾಳಿಯಿಟ್ಟರು. ಚಿಂತಕರು ವಿದ್ಯಾವಂತರೇನೊ ಹೌದು. ಆದರೆ ದರೋಡೆಕೋರರನ್ನು ಎದುರಿಸುವ ಧೈರ್ಯ ಇರಲಿಲ್ಲ. ಹೆದರಿ ಬಾಗಿಲು ಹಾಕಿಕೊಂಡರು.ದರೋಡೆಕೋರರು ಬಗ್ಗದಿದ್ದಾಗ ಚಿಂತಕರು ಊರಿನ ಸಂಪತ್ತನಲ್ಲಿ ಕೆಲವು ಭಾಗವನ್ನು ಹಂಚಿಕೊಳ್ಳುವ ಒಪ್ಪಂದದೊಂದಿಗೆ ಪ್ರಾಣವನ್ನು ಉಳಿಸಿಕೊಂಡರು. ಆದರೆ ಊರಿನ ಕೆಲ ಸಾಹಸಿಗಳು ದರೋಡೆಕೋರರ ಜೊತೆ ಹೋರಾಡಿದರು. ಎರಡೂ ಕಡೆ ಪ್ರಾಣ ಹಾನಿ ಸಂಭವಿಸಿತು.ಇದೆಲ್ಲದಕ್ಕೂ ಚಿಂತಕರ ಮನೆಯ ಮುಚ್ಚಿದ ಬಾಗಿಲುಗಳೆ ಪ್ರೇಕ್ಷಕರಾದವು. ಹಾಗೂ ಹೀಗೂ ಊರಿನ ಹೋರಾಟಗಾರರು ದರೋಡೆಕೋರರನ್ನು ಬಗ್ಗು ಬಡಿದರು. ಕೆಲವು ದರೋಡೆಕೋರರು ಓಡಿ ಹೋದರು. ಸೆರೆಸಿಕ್ಕ ದರೋಡೆಕೋರರನ್ನು ತಳಿಸಲಾಯಿತು. ಊರು ದರೋಡೆಕೋರರಿಂದ ಮುಕ್ತಿ ಹೊಂದಿ ಉಸಿರಾಡುವಂತಾಯಿತು. ಊರಿನ ವಾತಾವರಣ ತಿಳಿಯಾಯಿತು.ಈಗ ಚಿಂತಕರು ಮನೆಯ ಬಾಗಿಲನ್ನು ತೆರೆದು ಹೊರಬಂದರು. ಊರಿನ ಜನರಿಂದ ತಳಿಸಲ್ಪಡುತ್ತಿದ್ದ ದರೋಡೆಕೋರರನ್ನು ನೋಡಿದರು. ಕೂಡಲೇ ದರೋಡೆಕೋರರ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ವಿರೋಧಿಸಿದರು. ಈ ಊರಿನಲ್ಲಿ ಮಾನವೀಯ ಹಕ್ಕುಗಳ ಉಲ್ಲಂಘನೆಯಾಗುತ್ತಿದೆಯೆಂದು ಆಪಾದಿಸಿದರು. ಮಾನವೀಯತೆಯ ಪಾಠ ಹೇಳಿದರು.ಅವರನ್ನು ಬಲಿಪಶುಗಳೆಂದು ಸಂತೈಸಲಾಯಿತು. ಕ್ರಮೇಣ ದರೋಡೆಕೋರರನ್ನು ಸಾಮಜಿಕ ವಲಯದಲ್ಲಿ ಸಂತೈಸುವದು, ಅವರ ಹಕ್ಕು, ಅಭಿವೃದ್ಧಿ, ಕಲ್ಯಾಣಗಳ ಕುರಿತ ಆಂದೋಲನಗಳು ಆ ಊರಿನ ಸಮಾಜಮುಖಿ ಬೆಳವಣಿಗೆಯಾಗಿ ಮಾರ್ಪಾಟಾಯಿತು. ಆ ಊರಿನ ಕೆಲವು ಭಾಗಗಳನ್ನು ದರೋಡೆಕೋರರಿಗೆ ಸ್ವತಂತ್ರವಾಗಿ ಬಿಟ್ಟುಕೊಡುವಂತೆ ಒತ್ತಡ ಹೇರಿದರು. ದರೋಡೆಕೋರರಿಗಾಗಿಯೇ ಅವರಿಗೆ ಒಪ್ಪಿತವಾದ ನ್ಯಾಯಾಂಗಕ್ಕೆ ಅವಕಾಶ ಒದಗಿಸಬೇಕೆಂದು ಒತ್ತಾಯಿಸಲಾಯಿತು. ದರೋಡೆಕೋರರನ್ನು ವಿರೋಧಿಸುವವರನ್ನು ಮನುಷ್ಯ ವಿರೋಧಿ ಎಂದು ಕರೆಯಲಾಯಿತು. ಆ ಊರಿನ ರಾಜಕೀಯ ಹಿತಾಸಕ್ತಿ ಹಾಗೂ ಪೈಪೋಟಿಯೆ ಇವೆಲ್ಲಕ್ಕೂ ಕಾರಣ ಎನ್ನುವದು ನಿರ್ವಿವಾದವಾಗಿತ್ತು.
ಸಾಯುವ ಕೊನೆ ಕ್ಷಣದಲ್ಲೂ ಆ ಮೂವರ ಬಾಯಲ್ಲಿ ಮೊಳಗಿದ ಮಂತ್ರ…. ಭಾರತ್ ಮಾತಾ ಕೀ ಜೈ!
– ನಿತ್ಯಾನಂದ ವಿವೇಕವಂಶಿ
ಈ ದೇಶಕ್ಕೆ ಸ್ವಾತಂತ್ರ್ಯವೆಂಬುದು ಸುಮ್ಮನೆ ಬರಲಿಲ್ಲ. ಸುಮಾರು ಆರೂವರೆ ಲಕ್ಷ ವೀರ ವೀರಾಂಗನೆಯರ ಪ್ರಾಣತ್ಯಾಗದ ಫಲವಾಗಿ ಈ ಸ್ವಾತಂತ್ರ್ಯ ದೊರಕಿದೆ. ಅವರು ತಮ್ಮ ನೆತ್ತರು ಹರಿಸಿ ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಈ ಸ್ವಾತಂತ್ರ್ಯ ಹೋರಾಟವೆಂಬ ಮಹಾ ಯಜ್ಞದಲ್ಲಿ ತಮ್ಮ ಪ್ರಾಣವನ್ನೇ ಆಹುತಿಯನ್ನಾಗಿ ನೀಡಿದ ವೀರರ ತ್ಯಾಗ ಬಲಿದಾನಗಳು ಅನನ್ಯವಾದವು. ಹೋರಾಟದ ಈ ಇತಿಹಾಸದಲ್ಲಿ ಹಲವಾರು ರೋಚಕ ಘಟನೆಗಳು, ರೋಮಾಂಚನಕಾರಿ ಕಥೆಗಳು, ಅದ್ವಿತೀಯ ತ್ಯಾಗ ಬಲಿದಾನದ ಘಟನೆಗಳಿವೆ. ಅವುಗಳಲ್ಲಿ ಕೆಲವು ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಟ್ಟಿದ್ದರೆ, ಇನ್ನು ಕೆಲವು ಅಜ್ಞಾತವಾಗಿ, ಹೊರ ಪ್ರಪಂಚಕ್ಕೆ ಪ್ರಕಟಗೊಳ್ಳದೇ, ಕಾಲಗರ್ಭದಲ್ಲಿ ಹೂತುಹೋಗಿ ಕಣ್ಮರೆಯಾಗಿವೆ. ಹೀಗೆ ಇತಿಹಾಸದ ಪುಟಗಳಲ್ಲಿ ದಾಖಲಾಗಿ ಉಳಿದಿರುವ ರೋಚಕ ಘಟನೆಗಳಲ್ಲಿ ಭಗತ್ಸಿಂಗ್, ರಾಜಗುರು, ಸುಖದೇವ್ರ ತ್ಯಾಗ ಬಲಿದಾನಗಳು ಚಿರಸ್ಮರಣೀಯವಾದುದಾಗಿದೆ. ತಮ್ಮ ಮಾತೃಭೂಮಿಯನ್ನು ಪರಕೀಯರ ಆಳ್ವಿಕೆಯಿಂದ ಮುಕ್ತಗೊಳಿಸಲು, ದಾಸ್ಯದ ಸಂಕೋಲೆಯನ್ನು ಕಿತ್ತೊಗೆಯಲು ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಸಮರವನ್ನೇ ಸಾರಿದ ಈ ಮೂವರು ಕ್ರಾಂತಿಕಾರಿಗಳಿಗೆ ಬ್ರಿಟೀಷ್ ನ್ಯಾಯಾಲಯವು ಗಲ್ಲು ಶಿಕ್ಷೆಯನ್ನು ವಿಧಿಸಿತು. 23 ಮಾರ್ಚ್ 1931 ರಂದು ತಮ್ಮ 23-24 ನೇ ವಯಸ್ಸಿನಲ್ಲಿಯೇ ಈ ಮೂವರು ಕ್ರಾಂತಿಸೋದರರು ನಗುನಗುತ್ತಾ ಬಲಿಗಂಬವನ್ನೇರಿದರು. ದುರದೃಷ್ಟಕರ ಸಂಗತಿಯೆಂದರೆ ನಮಗ್ಯಾರಿಗೂ ಆ ದಿನದ ನೆನಪೇ ಇಲ್ಲ. ಪ್ರತೀ ವರ್ಷ ಮಾರ್ಚ್ 23 ರಂದು ವಾರ್ತಾ ಇಲಾಖೆಯಿಂದ ದಿನಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ಜಾಹಿರಾತು ಬಿಟ್ಟರೆ, ‘ಶಹೀದ್ ಡೇ’ಯನ್ನು ಆಚರಿಸುವ ಕೆಲವು ಸಂಘಟನೆಗಳನ್ನು ಬಿಟ್ಟರೆ ಇಡೀ ದೇಶದಲ್ಲಿ ಎಲ್ಲಿಯೂ ಈ ಅಪೂರ್ವ ಬಲಿದಾನವನ್ನು ಸ್ಮರಿಸಿಕೊಳ್ಳುತ್ತಿಲ್ಲ. ಕಾರಣವೇನೆಂದರೆ ನಮಗೆ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರ ಹೆಸರೂ ಕೂಡಾ ನೆನಪಿಲ್ಲ.
ಮತ್ತಷ್ಟು ಓದು 
೨೦೧೪ರ ಚುನಾವಣ ಕಣದ ಸುತ್ತ
– ಡಾ.ಕಿರಣ್ ಎಂ ಗಾಜನೂರು
ಭಾರತದಲ್ಲಿ ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಂಡಿದೆ.ಹಾಗೆ ನೋಡುವುದಾದರೆ ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳಿಗಿಂತ ೨೦೧೪ರ ಈ ಲೋಕಸಭಾ ಚುನಾವಣೆ ಹೆಚ್ಚು ಚರ್ಚೆಯಲ್ಲಿದೆ ಮತ್ತು ಜನ ಸಮಾನ್ಯರಲ್ಲಿಯು ಒಂದು ಸಹಜ ಕುತೂಹಲವನ್ನು ಈ ಚುನಾವಣೆ ಹುಟ್ಟುಹಾಕಿದೆ.ಭಾರತದಲ್ಲಿನ ಪ್ರಮುಖ ರಾಜಕೀಯ ಚಿಂತಕರು,ಮಾಧ್ಯಮಗಳು ಈ ವಿದ್ಯಮಾನಕ್ಕೆ ಹಲವಾರು ಕಾರಣಗಳನ್ನು ಗುರುತಿಸಿದ್ದಾರೆ ಅದರಲ್ಲಿ ಬಹಳ ಮುಖ್ಯವಾದದ್ದು
೧) ಆಡಳಿತಾತ್ಮಕ ಮತ್ತು ಭ್ರಷ್ಟಾಚಾರದ ಕಾರಣಕ್ಕಾಗಿ (ಮುಖ್ಯವಾಗಿ ಬೆಲೆ ಎರಿಕೆ) ರೂಪಿತಗೊಂಡ ಕಾಂಗ್ರೆಸ್ಸ್ ವಿರೋಧಿ ನಿಲುವು
೨) ಬಿ.ಜೆ.ಪಿ ತನ್ನ ಪ್ರಧಾನಿ ಆಭ್ಯರ್ಥಿ ನರೆಂದ್ರ ಮೋದಿಯವರ ಹಿನ್ನಲೆಯಲ್ಲಿ ರೂಪಿಸಿಕೊಂಡ ಜನಪ್ರಿಯತೆ.
ಹಾಗಾದರೆ, ೨೦೧೪ ರ ಚುನಾವಣೆ ಈ ಎರಡು ನಿಲುಗಳ ಆಧಾರದಲ್ಲಿಯೆ ನಡೆಯುತ್ತದಾ? ದೇಶದ ಎಲ್ಲಾ ಭಾಗದ ಮತದಾರ ಈ ನಿಲುವುಗಳ ಆಧಾರದಲ್ಲಿಯೆ ಮತ ಚಲಾಯಿಸುತ್ತಾನಾ? ಎಂಬ ಪ್ರಶ್ನೆಯನ್ನು ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳ ಹಿನ್ನಲೆಯಲ್ಲಿ ವಿಶ್ಲೇಷಿಸಿ ಕೇಳಿಕೊಂಡರೆ, ’ಖಂಡಿತಾ ಇಲ್ಲಾ’ ಎಂಬ ಉತ್ತರವನ್ನೂ ಯಾರಾದರೂ ನೀರಿಕ್ಷಿಸಬಹುದಾಗಿದೆ…! ಏಕೆಂದರೆ ಕಳೆದ ಹತ್ತು ವರ್ಷಗಳ ಕಾಲ ಈ ದೇಶವನ್ನು ಆಳಿದ ಯುಪಿಎ ಸರ್ಕಾರ ಹಲವಾರು ಹಗರಣಗಳನ್ನು ತನ್ನ ಮೇಲೆ ಎಳೆದುಕೊಂಡಿದ್ದರೂ ಆದರ ಜೊತೆ ಜೊತೆಗೆ ’ಆರ್.ಟಿ.ಐ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನ”ಯಂತಹ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವುದರ ಮೂಲಕ ಸಮಾಜದ ಹಲವು ವರ್ಗಗಳ ಜನರ ಬೆಂಬಲವನ್ನು ಗಳಿಸಿಕೊಂಡಿದೆ .ಅದೂ ಅಲ್ಲದೆ, ಈ ದೇಶವನ್ನು ಹೆಚ್ಚು ಕಾಲ ಆಳಿದ ಕಾಂಗ್ರೆಸ್ಸ್ ಪಕ್ಷ ಅದರದ್ದೆ ಆದಂತಹ ಒಂದು ಮತದಾರರ ವರ್ಗ ಮತ್ತು ಬುದ್ದಿಜೀವಿಗಳ ಗುಂಪನ್ನು ಸೃಷ್ಟಿಸಿಕೊಂಡಿದೆ ಅವರು ಎಂದಿಗೂ ಕಾಂಗ್ರೆಸ್ಸ್ ಅನ್ನು ಬೆಂಬಲಿಸುತ್ತಾರೆ ಮತ್ತು ಚುನಾವಣೆಯಲ್ಲಿ ಈ ಅಂಶ ಖಂಡಿತವಾಗಿ ಪ್ರಭಾವ ಬೀರಲಿದೆ.ಇದರ ಜೊತೆಗೆ ದೇಶದ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ಸ್ ವಲಯದಲ್ಲಿ ಗುರುತಿಸಿಕೊಂಡಿರುವ ರಾಹುಲ್ ಗಾಂಧಿಯವರು ಇತ್ತಿಚೆಗೆ “ಭಾರತಕ್ಕೆ ಬೇಕಿರುವುದು ಇಲ್ಲಿನ ವಿವಿಧತೆಯನ್ನು ಅವುಗಳ ನೆಲೆಯಲ್ಲಿಯೆ ಗುರುತಿಸಿ ಬೆಳೆಸಬೇಕಾದ ರಾಜಕೀಯ ಪಕ್ಷವೆ ಹೊರತು ವ್ಯಕ್ತಿ ಕೇಂದ್ರಿತ ಪಕ್ಷವಲ್ಲ” ಎಂಬ ಮಾದರಿಯ ಪ್ರಜಾಸತ್ತಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಕಾಂಗ್ರೆಸ್ಸಿನಲ್ಲಿ ತಮ್ಮ ಈ ನಿಲುವನ್ನು ಜಾರಿಗೆ ತರುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಇದಕ್ಕೆ ಉದಾಹರಣೆ ಇತ್ತೀಚೆಗೆ ಕಾಂಗ್ರೆಸ್ಸ್ ಪಕ್ಷದೊಳಗೆ ನಡೆದ ಆಂತರಿಕ ಚುನಾವಣೆ.ಈ ಅಂಶವು ದೇಶದ ಮಧ್ಯಮ ವರ್ಗದ ಮತದಾರರನ್ನು ಖಂಡಿತಾ ಸೆಳೆಯುತ್ತದೆ.
ಸಿಂಧುರಕ್ಷಕ್ ಮುಳುಗಿತೆಂದರೆ ಹಿಂದೂಸ್ಥಾನವೂ ಮುಳುಗಿದಂತೆ!
– ರಾಜೇಶ್ ರಾವ್
ಭಾರತೀಯ ನೌಕೋದ್ಯಮಕ್ಕೆ ಸಹಸ್ರಾರು ವರ್ಷಗಳ ಇತಿಹಾಸವಿದೆ. ಋಗ್ವೇದದಲ್ಲಿ ನೌಕೆಗಳ ಉಲ್ಲೇಖವಿದೆ. ವೇದಕಾಲದಲ್ಲಿ ನೌಕೆಗಳ ಬಗ್ಗೆ, ಅವುಗಳನ್ನು ತಯಾರಿಸುವ, ಬಳಸುವ ಬಗ್ಗೆ ಜನತೆಗೆ ಅರಿವು ಇತ್ತು. ಅಂದರೆ ಸಾಗರ ಗರ್ಭದೊಳಗಡಗಿರುವ ಅಪಾರ ಸಂಪನ್ಮೂಲಗಳ ಬಗ್ಗೆ ಜನ ತಿಳಿದಿದ್ದರು. ಆಧುನಿಕ ವಿಜ್ಞಾನದ ಅರಿವಿಗೆ ದೊರಕಿದ ಮಾಹಿತಿಯನ್ನು ಆಧರಿಸಿದರೂ ಭಾರತವೇ ನೌಕೋದ್ಯಮದ ತವರು. ಕ್ರಿ.ಪೂ 2300ರ ಸುಮಾರಿಗೆ ಗುಜರಾತಿನ ಲೋಥಲ್ ಎಂಬ ಪ್ರದೇಶದಲ್ಲಿರುವ ಮಾಂಗ್ರೋಲ್ ಬಂದರಿನ ಬಳಿ ಸಿಂಧೂ ನಾಗರೀಕತೆಯ ಸಮಯದಲ್ಲಿ ಮೊದಲ ಉಬ್ಬರವಿಳಿತದ ಹಡಗು ನಿರ್ಮಾಣವಾಯಿತು. ಮೌರ್ಯರ ಆಳ್ವಿಕೆಯ ಸಮಯದಲ್ಲಿ ಜಲಮಾರ್ಗದ ಸಮಸ್ತ ಆಗು ಹೋಗುಗಳು ನವಾಧ್ಯಕ್ಷನ ನಿಯಂತ್ರಣದಲ್ಲಿತ್ತು. ಕೌಟಿಲ್ಯನ ಅರ್ಥ ಶಾಸ್ತ್ರದಲ್ಲಿ ನೌಕೆಗಳ ಬಗೆಗಿನ ಅಗಾಧ ಮಾಹಿತಿಯಿದೆ. ಮೌರ್ಯರಲ್ಲದೆ ಚೋಳ, ಶಾತವಾಹನ, ಗುಪ್ತ, ಪಾಲ, ಪಾಂಡ್ಯ, ವಿಜಯನಗರ, ಕಳಿಂಗ, ಮರಾಠರ ಆಳ್ವಿಕೆಯ ಕಾಲದಲ್ಲೂ ನೌಕೋದ್ಯಮ ಪ್ರಸಿದ್ದಿ ಪಡೆದಿತ್ತು. ಪಾಶ್ಚಿಮಾತ್ಯ ದೇಶಗಳೊಡನೆ ವ್ಯಾಪಾರ ವಹಿವಾಟು ಬಹು ಹಿಂದಿನಿಂದಲೂ ಸಾಗರ ಮಾರ್ಗವಾಗಿಯೇ ನಡೆದಿತ್ತು. ಮರಾಠ ನೌಕಾ ಪಡೆಯಂತೂ ಮೂರು ಶತಮಾನಗಳ ಕಾಲ ತನ್ನ ಪಾರುಪತ್ಯ ಸ್ಥಾಪಿಸಿತ್ತು. ಯೂರೋಪಿನ ನೌಕಾಪಡೆಗಳು ಅನೇಕ ಸಲ ಮರಾಠರ ನೌಕಾಪಡೆಗಳೆದುರು ನಿಲ್ಲಲಾರದೆ ಓಡಿ ಹೋಗಿದ್ದವು. ಕನ್ಹೋಜಿ ಆಂಗ್ರೇಯಂತಹ ಸಾಗರ ವೀರ ಎಂದೆಂದಿಗೂ ಅಮರ.
ಭಾರತೀಯ ನೌಕಾಪಡೆ ಜಗತ್ತಿನ ಐದನೇಯ ಅತಿ ದೊಡ್ಡ ನೌಕಾಪಾಡೆಯಾಗಿದ್ದು, ಇದರಲ್ಲಿ ಸುಮಾರು 55,000 ಜನರು ಕಾರ್ಯನಿರತರಾಗಿದ್ದಾರೆ. ಇವರಲ್ಲಿ ಸುಮಾರು 5,000 ಜನ ನೌಕಾ ವಾಯುಪಡೆಗೆ ಸೇರಿದ್ದು ಮತ್ತು ಸುಮಾರು 2೦೦೦ ಜನ ನೌಕಾ ಕಮಾಂಡೋಗಳಾಗಿದ್ದಾರೆ. ಭಾರತೀಯ ನೌಕಾಪಡೆ 155 ನೌಕೆಗಳನ್ನು ಹೊಂದಿದ್ದು, ಐ.ಎನ್.ಎಸ್.ವಿರಾಟ್ ಎಂಬ ವಾಯು ಯುದ್ಧ ನೌಕೆಯನ್ನು ಹೊದಿದೆ. ಸಂಪೂರ್ಣ ಏಷ್ಯಾ ಖಂಡದಲ್ಲಿರುವ ಎರಡು ವಾಯು ಯುದ್ಧ ನೌಕೆಗಳಲ್ಲಿ ಇದು ಒಂದು. ಸ್ವತಂತ್ರ ಭಾರತದ ನೌಕಾಪಡೆ ಇತಿಹಾಸದಲ್ಲಿ ಹಡಗಿನೊಂದಿಗೇ ಜಲಸಮಾಧಿಯಾದ ಹಾಗೂ ಸಾಯುವ ಮೊದಲು 67 ಜನರ ಜೀವ ರಕ್ಷಣೆ ಮಾಡಿದ್ದ ಮೊದಲ ಹಾಗೂ ಏಕೈಕ ಕ್ಯಾಪ್ಟನ್ ಮಹೇಂದ್ರನಾಥ್ ಮುಲ್ಲಾರಂತಹ ವೀರರನ್ನು ಹೊಂದಿದ್ದ ನೌಕಾಪಡೆ ನಮ್ಮದ್ದು.
ಜಾತ್ಯಾತೀತರೆನಿಸಿಕೊಳ್ಳಲು ಮುಸಲ್ಮಾನರ ಟೋಪಿ ಧರಿಸಲೇಬೇಕೆ?
– ನರೇಂದ್ರ ಕುಮಾರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂದನ್ ನೀಲೇಕಣಿಯವರು ಸ್ಪರ್ಧಿಸುತ್ತಿರುವುದು ಅಧಿಕೃತವಾಗಿ ಪ್ರಕಟವಾಗಿದೆ. ಅವರು ಕಾಂಗ್ರೆಸ್ ಅಭ್ಯರ್ಥಿಯೆಂದು ಘೋಷಣೆಯಾದ ಕೂಡಲೇ ಮುಸಲ್ಮಾನರ ಟೋಪಿ ಧರಿಸಿ ತಾವು ಕೂಡಾ “ಜಾತ್ಯಾತೀತ”ರೆಂದು ಲೋಕಕ್ಕೆಲ್ಲಾ ಸಾರಿದರು. ಈ ರೀತಿ ಮುಸಲ್ಮಾನ ಟೋಪಿ ಧರಿಸಿ “ಜಾತ್ಯಾತೀತ”ರಾಗುವುದು ಕಾಂಗ್ರೆಸ್ ಪರಂಪರೆಯೇ ಆದಂತಿದೆ. ಅದಕ್ಕಿಂತಲೂ ಮಿಗಿಲಾಗಿ, ಮುಸಲ್ಮಾನ ಟೋಪಿ ಧರಿಸದಿದ್ದವರನ್ನು “ಕೋಮುವಾದಿ” ಎಂದು ಖಂಡಿಸಲಾಗುತ್ತದೆ. ಒಂದೆರಡು ವರ್ಷದ ಹಿಂದೆ ಗುಜರಾತಿನಲ್ಲಿ ನಡೆದ ಸದ್ಭಾವನಾ ಸಭೆಯೊಂದರಲ್ಲಿ ನರೇಂದ್ರ ಮೋದಿಯವರಿಗೆ ಮುಸಲ್ಮಾನರೊಬ್ಬರು ಟೋಪಿ ನೀಡಿದರು. ಮೋದಿಯವರು ಆ ಟೋಪಿಯನ್ನು ಧರಿಸಲಿಲ್ಲ. ಆ ಕೂಡಲೇ ಅವರನ್ನು “ಕೋಮುವಾದಿ” ಎಂದು ಖಂಡಿಸಲಾಯಿತು.
ಇದು ಯಾವ ಸೀಮೆ ಜಾತ್ಯಾತೀತತೆ? ಒಂದು ಕೋಮಿನ ಟೋಪಿ ಧರಿಸಿದರೆ ಜಾತ್ಯಾತೀತ, ಧರಿಸದಿದ್ದರೆ ಕೋಮುವಾದಿ!? ಈ ದೇಶದಲ್ಲಿ ಬೇರೆ ಕೋಮುಗಳೇ ಇಲ್ಲವೆ? ಅವುಗಳಲ್ಲಿ ಅನೇಕ ಕೋಮುಗಳೂ ಅಲ್ಪಸಂಖ್ಯಾತವಲ್ಲವೇ? ಆ ಕೋಮುಗಳ ಲಾಂಚನವನ್ನೋ, ಟೋಪಿಯನ್ನೋ ಈ ರಾಜಕಾರಣಿಗಳು ಏಕೆ ಧರಿಸಿ ಪತ್ರಿಕೆಗಳಲ್ಲಿ ಚಿತ್ರ ಹಾಕಿಸಿಕೊಳ್ಳುವುದಿಲ್ಲ? ಮುಸಲ್ಮಾನ ಟೋಪಿ ಧರಿಸದಿದ್ದವರು ಕೋಮುವಾದಿಯಾಗುವುದಾದರೆ, ಆ ಉಳಿದ ಅಲ್ಪಸಂಖ್ಯಾತ ಕೋಮುಗಳ ಟೋಪಿ ಧರಿಸದಿದ್ದವರೂ ಕೋಮುವಾದಿ ಆಗಬೇಕಲ್ಲವೇ? ಮುಸಲ್ಮಾನರಿಗಿಂತ ಬಹಳ ಕಡಿಮೆ ಸಂಖ್ಯೆಯಲ್ಲಿರುವವರು ಜೈನರು. ಯಾವ ರಾಜಕಾರಣಿಯೂ ಜೈನರ ದಿರಿಸು ಧರಿಸಿ ತನ್ನ “ಜಾತ್ಯಾತೀತತೆ”ಯನ್ನು ಮೆರೆದದ್ದು ನನಗೆ ತಿಳಿದಿಲ್ಲ. ಅಥವಾ ಪಾರ್ಸಿ ಲಾಂಚನ ಧರಿಸಿಯೋ, ಇಲ್ಲವೇ ಬೌದ್ಧರ ದಿರಿಸು ಧರಿಸಿಯೋ, ಕ್ರೈಸ್ತರಂತೆ ವೇಷ ಹಾಕಿದ್ದೋ ಎಲ್ಲೂ ನೋಡಿಲ್ಲ.





