ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

17
ಮಾರ್ಚ್

ರಿಲಿಜನ್ನಿನ ಅಫೀಮು “ಶಂಕರಾಚಾರ್ಯ ಹಿಲ್” ಅನ್ನು “ತಖ್ತ್-ಈ-ಸುಲೇಮಾನ್” ಆಗಿಸುತ್ತದೆ

ರಾಕೇಶ್ ಶೆಟ್ಟಿ

ಶಂಕರಾಚಾರ್ಯ ಹಿಲ್ಬೆಳಗ್ಗೆ ಎದ್ದು ನಮ್ಮಲ್ಲಿ ಕೆಲವರು ಹೇಳುತಿದ್ದ “ನಮಸ್ತೆ ಶಾರದ ದೇವಿ ಕಾಶ್ಮಿರಪುರವಾಸಿನಿ||” ಅನ್ನುವ ಉದ್ಘೋಷವನ್ನು ಇನ್ಮುಂದೆ ಬದಲಾಯಿಸಬೇಕಾದ ಅನಿವಾರ್ಯತೆ ಬರಬಹುದು ಅನ್ನಿಸುತ್ತಿದೆ.ಯಾಕೆಂದರೆ, ನಮ್ಮ ’ಭಾರತೀಯ ಪುರಾತತ್ವ ಇಲಾಖೆ’ ಮಾಡುತ್ತಿರುವ ಕೆಲಸವೇ ಅಂತದ್ದು.

ಟ್ರಿಬ್ಯೂನ್ ಪೇಪರಿನಲ್ಲಿ ಬಂದ ವರದಿಯ ಪ್ರಕಾರ,ಜಮ್ಮು-ಕಾಶ್ಮೀರದ “ಶಂಕರಾಚಾರ್ಯ ಹಿಲ್” ಅನ್ನು ಭಾರತೀಯ ಪುರಾತತ್ವ ಇಲಾಖೆ “ತಖ್ತ್-ಈ-ಸುಲೇಮಾನ್” ಅಂತ ಬದಲಾಯಿಸಿದೆ.ಕಾಶ್ಮೀರವನ್ನು ಈ ಹಿಂದೆ ಶಾರದ ದೇಶ,ಶಾರದ ಪೀಠ ಅಂತೆಲ್ಲ ಕರೆಯುತಿದ್ದರು.ಮೇಲೆ ಹೇಳಿದ್ದ “ನಮಸ್ತೆ ಶಾರದ ದೇವಿ ಕಾಶ್ಮಿರಪುರವಾಸಿನಿ||” ಅದನ್ನೇ ಸಾರುತ್ತಿದೆ.ಇನ್ನು ಶಂಕರಾಚಾರ್ಯರು ದೇಶದ ನಾಲ್ಕು ಮೂಲೆಗಳಿಗೂ ಸಾಗಿ ಶಾರದ ಪೀಠಗಳನ್ನು ಸ್ಥಾಪಿಸಿದ್ದು ಎಲ್ಲರಿಗೂ ತಿಳಿದಿರುವುದೇ,ಹಾಗಿದ್ದ ಮೇಲೆ,ಇವನೆಲ್ಲಿಂದ ಬಂದ ಸುಲೇಮಾನ್?

ದಾಲ್ ನದಿಯ ಕಡೆಗೆ ಮುಖಮಾಡಿ ನಿಂತಿರುವ ಈ ಪರ್ವತವಿರುವುದು ಶ್ರೀನಗರದಲ್ಲಿ.ಇದೇ ಜಾಗದಲ್ಲಿ ಆದಿ ಶಂಕರಾಚಾರ್ಯರು 788-820 ADರಲ್ಲಿ ನೆಲೆಸಿದ್ದರು ಅನ್ನುತ್ತದೆ ಇತಿಹಾಸ.ಪಂಡಿತ್ ಆನಂದ್ ಕೌಲ್ ಅವರ ಪ್ರಕಾರ ಈ ದೇವಸ್ಥಾನದ ನಿರ್ಮಾಣ ಮಾಡಿದ್ದು ಸಂಡಿಮನ್ ಎಂಬುವವ 2629 -2564 BC ಯಲ್ಲಿ.ಆ ನಂತರ ರಾಜ ಗೋಪಾದಿತ್ಯ 426–365 BCರಲ್ಲಿ ಮತ್ತು ರಾಜ ಲಲಿತಾಧಿತ್ಯ 697–734BC ರಲ್ಲಿ ಇದರ ಪುನುರುಜ್ಜೀವನ ಮಾಡಿಸಿದ್ದರು.ಝೈನ್-ಉಲ್-ಅಬಿದ್ದೀನ್ ಅವರು ದೇವಸ್ಥಾನದ ಮೇಲ್ಛಾವಣಿಯನ್ನು ದುರಸ್ತಿ ಮಾಡಿಸಿದ್ದರು.1841–1846ರಲ್ಲಿ ಸಿಖ್ ಗವರ್ನರ್ ಶೇಕ್ ಗುಲಾಂ ಮೊಹಿದುದ್ದೀನ್ ಕೂಡ ದುರಸ್ತಿ ಮಾಡಿಸಿದ್ದರು.ಇದನ್ನು ಜ್ಯೋತೇಶ್ವರ ದೇವಸ್ಥಾನವೆಂದು ಕರೆಯಲಾಗುತಿತ್ತು.ಬೌದ್ಧರಿಗೂ ಪೂಜ್ಯನೀಯವಾದ ಸ್ಥಳವಿದು.ಅವರಿದನ್ನು ಪಾರಸ್- ಪಹಾರ್ ಅನ್ನುತ್ತಾರೆ.ಶಂಕರರು ಇಲ್ಲಿ ಶಿವಲಿಂಗ ಪ್ರತಿಷ್ಟಾಪಿಸಿದ್ದರು.ಶಂಕರರು ಇಲ್ಲಿ ಬಂದನಂತರ,ಈ ಪರ್ವತ ಮತ್ತು ದೇವಸ್ಥಾನವನ್ನು ಶಂಕರಾಚರ್ಯರ ಹೆಸರಿನಿಂದಲೇ ಗುರಿತಿಸಲಾಗುತ್ತಿದೆ.

ಮತ್ತಷ್ಟು ಓದು »

15
ಮಾರ್ಚ್

ಕಾಮನ ಹಬ್ಬ

– ಹಂಸಾನಂದಿ

ಕಾಮನ ಹಬ್ಬಇವತ್ತು ಫಾಲ್ಗುಣದ ಹುಣ್ಣಿಮೆ. ಅಂದ್ರೆ ಕಾಮನ ಹಬ್ಬ. ಶಿವ ಮನ್ಮಥನ ಮುಂದೆ ತನ್ನ ಹಣೆಗಣ್ಣನ್ನ ತೆರೆದು ಅವನ ಸುಟ್ಟ ದಿನವೇ ಇದು ಅನ್ನೋದು ನಮ್ಮ ನಂಬಿಕೆ. ಈ ದಿನವೇ ಅವನು ಮನ್ಮಥನನ್ನು ಸುಟ್ಟು, ನಂತರ ಅಲ್ಲೇ ಸುಳಿಯುತ್ತಿದ್ದ ಪಾರ್ವತಿಯನ್ನು ಕಂಡು, ಅವಳನ್ನು ಮೆಚ್ಚಿ ಮದುವೆಯಾಗಿದ್ದು; ವಿರಕ್ತರಲ್ಲಿ ವಿರಕ್ತನಾಗಿದ್ದ ಶಿವನು ಪ್ರೇಮಿಗಳಲ್ಲಿ ಪ್ರೇಮಿಯಾಗಿ ಕಂಗೊಳಿಸಿದ್ದು, ನಂತರ ಷಣ್ಮುಖ ಹುಟ್ಟಿದ್ದು ಇದೇ ಕಾಳಿದಾಸನ ಕುಮಾರ ಸಂಭವ ಕಾವ್ಯದ ಮುಖ್ಯ ಹೂರಣ.

ಅದಕ್ಕೇ ಶಿವನನ್ನು ಭರ್ತೃಹರಿ ತನ್ನ ಶೃಂಗಾರ ಶತಕದಲ್ಲಿ ಹೀಗೆ ಕೊಂಡಾಡುತ್ತಾನೆ: (ಪದ್ಯ -೯೭)

ಏಕೋ ರಾಗಿಷು ರಾಜತೇ ಪ್ರಿಯತಮಾದೇಹಾರ್ಧಧಾರೀ ಹರೋ
ನೀರಾಗಿಷ್ವಾಪಿ ಯೋ ವಿಮುಕ್ತ ಲಲನಾಸಂಗೋ ನ ಯಸ್ಮಾತ್ಪರಃ |
ದುರ್ವಾರ ಸ್ಮರಬಾಣಪನ್ನಗವಿಷಜ್ವಾಲಾವಲೀಢೋ ಜನಃ
ಶೇಷಃ ಕಾಮವಿಡಂಬಿತೋ ಹಿ ವಿಷಯಾನ್ ಭೋಕ್ತುಂ ನ ಮೋಕ್ತುಂ ಸಮಃ ||

(ಸಾರಾಂಶ: ಪ್ರೇಮಿಗಳಲ್ಲಿ ಅಗ್ರೇಸರನಾದವನು ತನ್ನ ದೇಹದ ಅರ್ಧಭಾಗದಲ್ಲೇ ತನ್ನ ಪ್ರಿಯೆ ಪಾರ್ವತಿಯನ್ನು ಧರಿಸಿ ಅರ್ಧನಾರೀಶ್ವರನಾದಂತಹ ಶಿವ. ಅದೇ ರೀತಿ ಅವನೇ ಹೆಣ್ಣಿನ ಸಂಗವನ್ನು ತೊರೆದ ವಿರಾಗಿಗಳಲ್ಲೂ ಅವನೇ ಅಗ್ರಗಣ್ಯ! ಅದಕ್ಕೇ ಅಲ್ಲವೇ ನಿವಾರಿಸಲಾರದ ಹಾವಿನ ವಿಷ ಜ್ವಾಲೆಯಂತಹ ಕಾಮಬಾಣಗಳನ್ನು ಅವನು ತಡೆಯಲು ಸಾಧ್ಯವಾಗಿದ್ದು? ಸಾಮಾನ್ಯ ಜನರಿಂದ ಆಗುವುದೇನು? ಪಾಪ, ಕಾಮಬಾಣಗಳಿಗೆ ಸಿಲುಕಿದರೆ ಅವರು, ಅನುಭವಿಸಲೂ, ಬಿಡಲೂ, ಒಂದೂ ಅರಿಯದೇ ಹೋಗುವರು!)
ಮತ್ತಷ್ಟು ಓದು »

15
ಮಾರ್ಚ್

ಧರ್ಮ ಅನಿವಾರ್ಯವೇ?

– ಪ್ರಸನ್ನ ಬೆಂಗಳೂರು

ಧರ್ಮಅಯ್ಯೋ! ನಮ್ಮ ದೇಶದಲ್ಲಿ ಕಾನೂನಿಗೆ ಬೆಲೆ ಇಲ್ಲ ಕಣ್ರೀ ಎಂದು ನಿರಾಶದಾಯಕ ಮಾತುಗಳನ್ನು ನಾವು ಕೇಳಿರುತ್ತೇವೆ.
ಅದಕ್ಕೆ ಕಾರಣವೇನು ಎಂಬುದನ್ನು ನಾವು ಎಂದಾದರೂ ಮನಗಾಣಲು ಪ್ರಯತ್ನಿಸಿದ್ದೇವೆಯೆ?

ಕಾನೂನು (ಧರ್ಮ) ಎನ್ನುವುದು ನಿರ್ಬಂಧ, (ಇಲ್ಲಿ ನಾನು ಧರ್ಮ ಎನ್ನುವುದನ್ನು ಕಾನೂನು ಎಂದೆ ಕರೆಯುತ್ತಿದ್ದೇನೆ ಕಾರಣ ಬಹುತೇಕರಿಗೆ ನಮ್ಮಲ್ಲಿ ಧರ್ಮವೆಂದಾಕ್ಷಣ ಒಂದು ತೆರನಾದ ಅಸಡ್ಡೆ ಅಥವ ಯಾವುದಕ್ಕೂ ಬೇಡದ ಅಥವ ನಾನು ಅದರಿಂದ ದೂರವಿದ್ದು ಎಲ್ಲ ಧರ್ಮೀಯರಿಗೂ ಒಳ್ಳೆಯವನು ಸಮಾನ ಎನಿಸಿಕೊಳ್ಳಬೇಕೆನ್ನುವ ಚಟವಿರುತ್ತದೆ ಹಾಗಾಗಿ ಧರ್ಮ ಎಂಬುದನ್ನು ಕಾನೂನೆಂದೆ ನಾನು ಸಂಬೋಧಿಸುತ್ತೇನೆ.ಅದು ಹೌದೂ ಕೂಡ) ಸಂಕೋಲೆ ಅದನ್ನು ಮುರಿಯುವುದು ಧಿಕ್ಕರಿಸುವುದು ಹದಿಹರೆಯದಲ್ಲಿ ಸಾಹಸದ ಕೆಲಸ ಎನಿಸಿಕೊಳ್ಳುತ್ತದೆ. ಅಂತಹ ಕಾರ್ಯವನ್ನು ಕೆಲವರು ಆಸ್ವಾದಿಸುತ್ತಾರೆ. ಭಾರತೀಯ ಸಂಪ್ರದಾಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲೇಬೇಕೆಂಬ ನಿಯಮವಿಲ್ಲ. ಆದ್ದರಿಂದಲೇ ಇಲ್ಲಿ ಕಾನೂನು ಮುರಿಯುವುದು ತಪ್ಪಿನ ಕೆಲಸ ಎನಿಸಿಕೊಳ್ಳುವುದೇ ಇಲ್ಲ. ಎಲ್ಲವೂ ಸ್ವಯಂ ನಿಯಂತ್ರಣದ ನೈತಿಕತೆಯ ಮೇಲೆ ನಿಂತಿರುತ್ತದೆ. ಉದಾಹರಣೆಗೆ ರಾತ್ರಿ ಹನ್ನೆರಡು ಗಂಟೆಯಲ್ಲಿ ನಿರ್ಜನ ಪರಿಸ್ಥಿತಿಯಲ್ಲಿ ಹಸಿರು ದೀಪಕ್ಕಾಗಿ ಕಾಯುವುದಿಲ್ಲ. ಕಾರಣ ನನ್ನಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂಬ ನೈತಿಕತೆಯಷ್ಟೇ ಇಲ್ಲಿ ಕೆಲಸ ಮಾಡುತ್ತದೆ.

ಮತ್ತಷ್ಟು ಓದು »

12
ಮಾರ್ಚ್

‘ತುರ್ತು ಪರಿಸ್ಥಿತಿ’ ವಿರುದ್ಧದ ಹೋರಾಟದಲ್ಲಿ ಹಾಸನ ಜಿಲ್ಲೆ ವಹಿಸಿದ ಪಾತ್ರ

-ಕ.ವೆಂ.ನಾಗರಾಜ್

ತುರ್ತು ಪರಿಸ್ಥಿತಿಪರಕೀಯರ ಸಂಕೋಲೆಯಿಂದ ೧೯೪೭ರಲ್ಲಿ ದೇಶ ಸ್ವತಂತ್ರಗೊಂಡ ಕೇವಲ ೨೮ ವರ್ಷಗಳ ನಂತರದಲ್ಲಿ ಸ್ವಕೀಯರಿಂದಲೇ ಪ್ರಜಾಪ್ರಭುತ್ವಕ್ಕೆ ಅತಿ ದೊಡ್ಡ ಗಂಡಾಂತರ ೧೯೭೫ರಲ್ಲಿ ತುರ್ತುಪರಿಸ್ಥಿತಿ ರೂಪದಲ್ಲಿ ಬಂದೆರಗಿತ್ತು. ಎರಡು ವರ್ಷಗಳ ಈ ತುರ್ತುಪರಿಸ್ಥಿತಿಯ ಅವಧಿ ದೇಶದ ಅತ್ಯಂತ ಕಲಂಕಿತ ಅವಧಿಯಾಗಿದ್ದು, ಇಂದು ಕಂಡುಬರುತ್ತಿರುವ ಅಧಿಕಾರದ ಹಪಾಹಪಿಗೆ ಭದ್ರ ತಳಪಾಯ ಒದಗಿಸಿತ್ತು. ಅಲಹಾಬಾದ್ ಉಚ್ಚನ್ಯಾಯಾಲಯವು ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಮೇಲಿದ್ದ ಭ್ರಷ್ಠಾಚಾರದ ಆರೋಪವನ್ನು ಎತ್ತಿ ಹಿಡಿದು ಅವರ ಚುನಾವಣೆಯ ಗೆಲುವನ್ನು ಅನೂರ್ಜಿತಗೊಳಿಸಿದ್ದಲ್ಲದೆ ಮುಂದಿನ ಆರು ವರ್ಷಗಳು ಅವರು ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದ್ದನ್ನು ಅವರು ಲೆಕ್ಕಿಸದೆ ಹೇಯಮಾರ್ಗ ಹಿಡಿದು ದೇಶದ ಮೇಲೆ ಅನಗತ್ಯವಾದ ತುರ್ತುಪರಿಸ್ಥಿತಿ ಹೇರಿ ಸರ್ವಾಧಿಕಾರಿಯಾಗಿ ಅಟ್ಟಹಾಸದಿಂದ ಮೆರೆದರು. ಕಹಿಯಾದ ಕಠಿಣ ಸತ್ಯವೆಂದರೆ ಭ್ರಷ್ಠಾಚಾರ ತಪ್ಪಲ್ಲವೆಂಬ ಭಾವನೆಗೆ, ಭ್ರಷ್ಠಾಚಾರ ಇಂದು ಮುಗಿಲೆತ್ತರಕ್ಕೆ ಬೆಳೆದಿರುವುದಕ್ಕೆ ಅಂದು ಹಾಕಿದ್ದ ಈ ಭದ್ರ ಬುನಾದಿಯೇ ಕಾರಣ. ಕಾಯದೆ, ಕಾನೂನುಗಳನ್ನು ಅನುಕೂಲಕ್ಕೆ ತಕ್ಕಂತೆ ತಿದ್ದಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘವೂ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳನ್ನು ನಿಷೇಧಿಸಲಾಯಿತು. ಲೋಕಸಭೆಯ ಅವಧಿ ಪೂರ್ಣಗೊಂಡರೂ ಸಂಸತ್ತಿನಲ್ಲಿ ನಿರ್ಣಯ ಮಾಡಿ ಮತ್ತೆ ಎರಡು ವರ್ಷಗಳ ಅವಧಿಗೆ ಮುಂದುವರೆಸಲಾಯಿತು. ಸಂವಿಧಾನಕ್ಕೆ ಹಲವು ತಿದ್ದುಪಡಿಗಳನ್ನು ಮಾಡಲಾಯಿತು. ೧೯೭೫ರ ಜೂನ್ ೨೬ರ ಬೆಳಕು ಹರಿಯುವಷ್ಟರಲ್ಲಿ ಭಾರತದ ಸ್ವತಂತ್ರತೆ ನಿರ್ಬಂಧಿಸಲ್ಪಟ್ಟಿತು. ಅಭಿವ್ಯಕ್ತಿ ಸ್ವಾತಂತ್ರ್ಯ, ಲೇಖನ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಸ್ವಂತ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ, ಇತ್ಯಾದಿ ಎಲ್ಲಾ ನಾಗರಿಕ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ದೇಶಾದ್ಯಂತ ನೂರಾರು ವಿರೋಧ ಪಕ್ಷದ ನಾಯಕರುಗಳನ್ನು ಬಂಧಿಸಿ ಸೆರೆಯಲ್ಲಿರಿಸಿದರು. ಜನರು ಸರ್ಕಾರದ ವಿರುದ್ಧ ಮಾತನಾಡಲು ಅಂಜುವಂತೆ ಆಯಿತು. ಆಕಾಶವಾಣಿ ಇಂದಿರಾವಾಣಿ ಆಯಿತು, ದೂರದರ್ಶನ ಇಂದಿರಾದರ್ಶನವಾಯಿತು. ಇಂದಿರಾ ಪರ ಸುದ್ದಿಗಳಿಗೆ ಮಾತ್ರ ಅವಕಾಶ. ‘ಇಂದಿರಾ ಅಂದರೆ ಇಂಡಿಯಾ, ಇಂಡಿಯಾ ಅಂದರೆ ಇಂದಿರಾ’ ಆಗಿಹೋಯಿತು.

ಮತ್ತಷ್ಟು ಓದು »

11
ಮಾರ್ಚ್

’ಗ೦ಡಸರೇ ಕೆಟ್ಟವರು’ ಎನ್ನುವ ಮುನ್ನ..

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

Misuse of IPC 498Aರಾಹುಲ್ ತು೦ಬಾ ಬುದ್ದಿವ೦ತ ಇ೦ಜೀನಿಯರಿ೦ಗ್ ವಿದ್ಯಾರ್ಥಿಯಾಗಿದ್ದ.ಪದವಿ ಮುಗಿಸಿದ ಅವನಿಗೆ ಅವನ ಬುದ್ದಿಮತ್ತೆಗೆ ತಕ್ಕ೦ತೇ ಅಮೇರಿಕದ ಪ್ರತಿಷ್ಠಿತ ಕ೦ಪನಿಯೊ೦ದರಲ್ಲಿ ನೌಕರಿ ಸಿಕ್ಕಿತ್ತು.ಸುಮಾರು ಐದು ವರ್ಷಗಳ ಕಾಲ ಅಲ್ಲಿ ದುಡಿದ ಅವನು ಮರಳಿ ಭಾರತಕ್ಕೆ ತೆರಳಲು ನಿಶ್ಚಯಿಸಿದ.ತನ್ನ ಪೋಷಕರಿಗೆ ಅವನು ತನ್ನ ನಿರ್ಧಾರ ತಿಳಿಸಿದಾಗ ಅವರೂ ಸಹ ಸ೦ತಸ ವ್ಯಕ್ತಪಡಿಸಿದ್ದರು.ಇದೇ ಖುಷಿಯಲ್ಲಿ ಅವರು ತಮ್ಮ ಒಬ್ಬನೇ ಮಗನ ಮದುವೆ ಮಾಡುವುದರ ಬಗ್ಗೆ ಯೋಚಿಸಿದರು.ಆ ಬಗ್ಗೆ ಅವರು ರಾಹುಲನೊ೦ದಿಗೆ ಚರ್ಚಿಸಿದಾಗ ಅವನೂ ಸಮ್ಮತಿಸಿದ್ದ.ಅವರು ಅವನಿಗೆ ತಕ್ಕ ವಧುವಿಗಾಗಿ ಹುಡುಕಾಟ ನಡೆಸತೊಡಗಿದರು.ಅಲ್ಲದೇ ಅವನ ಮಾಹಿತಿಯನ್ನು ವಿವಾಹ ಸ೦ಬ೦ಧಿ ಅ೦ತರ್ಜಾಲ ತಾಣವೊ೦ದರಲ್ಲೂ ಪ್ರಕಟಿಸಿದ್ದರು.

ಹಾಗೆ ರಾಹುಲನ ಅಪ್ಪ ಅಮ್ಮ ರಾಹುಲನಿಗಾಗಿ ಹುಡುಗಿ ಹುಡುಕುವ ಪ್ರಯತ್ನದಲ್ಲಿದ್ದಾಗ ಮದುವೆಯ ವೆಬ್ ಸೈಟಿನಲ್ಲಿ ಅವರಿಗೆ ಪರಿಚಯವಾದ ಹುಡುಗಿಯ ಹೆಸರು ಕವಿತಾ.ಅವರಿಗೆ ಹುಡುಗಿಯ ರೂಪ ಇಷ್ಟವಾಗಿತ್ತು. ಅವರು ರಾಹುಲನಿಗೆ ಅವಳನ್ನು ತೋರಿಸಿದಾಗ ಅವನು ಕವಿತಾಳನ್ನು ಮೊದಲ ನೋಟದಲ್ಲೇ ಮೆಚ್ಚಿದ್ದ.ಎಲ್ಲರಿಗೂ ಹುಡುಗಿ ಒಪ್ಪಿಗೆಯಾಗಿದ್ದರಿ೦ದ ಅವರು ಕವಿತಾ ಮತ್ತವಳ ಪೋಷಕರನ್ನು ತಮ್ಮ ಮನೆಗೆ ಆಹ್ವಾನಿಸಿ ಮಾತುಕತೆ ನಡೆಸಲು ನಿರ್ಧರಿಸಿದರು.ಕವಿತಾಳ ತಾಯಿ ಕೆಲವು ವರ್ಷಗಳ ಹಿ೦ದೆ ತೀರಿ ಹೋಗಿದ್ದರು.ಕವಿತಾ ಮತ್ತು ಅವಳ ತ೦ದೆ ರಾಹುಲನ ಮನೆಗೆ ಬ೦ದು ಮದುವೆಯ ಮಾತುಕತೆ ನಡೆಸಿದರು.ಮೂಲತ: ತಾವು ಮು೦ಬಯಿಯ ನಿವಾಸಿಗಳೆ೦ದು,ತಮಗೂ ರಾಹುಲ್ ಇಷ್ಟವಾಗಿರುವುದಾಗಿ ತಿಳಿಸಿದರು.ಕವಿತಾಳ ಸರಳ ವ್ಯಕ್ತಿತ್ವ,ಹಿರಿಯರೆಡೆಗಿನ ಅವಳ ಗೌರವವನ್ನು ಕ೦ಡ ರಾಹುಲನ ತ೦ದೆತಾಯಿಗಳು ಇವಳೇ ತಮ್ಮ ಸೊಸೆಯೆ೦ದು ಆಗಲೇ ತೀರ್ಮಾನಿಸಿದ್ದರು.ಹಿರಿಯರೆಲ್ಲರೂ ಸೇರಿ ಮದುವೆಯ ದಿನಾ೦ಕವನ್ನು ನಿರ್ಧರಿಸಿದರು. ಅತ್ಯ೦ತ ಸರಳ ಜೀವಿಗಳಾಗಿದ್ದ ರಾಹುಲನ ಪೋಷಕರು ವರದಕ್ಷಿಣೆ ,ವರೋಪಚಾರದ೦ತಹ ಯಾವ ಬೇಡಿಕೆಗಳನ್ನೂ ವಧುವಿನ ತ೦ದೆಯ ಮು೦ದಿಡಲಿಲ್ಲ.

ಮತ್ತಷ್ಟು ಓದು »

10
ಮಾರ್ಚ್

ಜಾತೀಯತೆ: ಏನು? ಎತ್ತ?

– ಡಾ. ಶ್ರೀಪಾದ ಭಟ್

ಜಾತಿ ರಾಜಕಾರಣಸೆಪ್ಟೆಂಬರ್ 13, 2007ರಂದು 11 ನೇ ಪಂಚವಾರ್ಷಿಕ ಯೋಜನೆ ಕುರಿತ ಯೋಜನಾ ಆಯೋಗದ ಸಮಾಲೋಚನಾ ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ “ಸ್ಪೆಶಲ್ ಅಟೆನ್ಷನ್ ವುಡ್ ನೀಡ್ ಟು ಬಿ ಪೇಯ್ಡ್ ಟು ಡಿಸ್ಟ್ರಿಕ್ಟ್ಸ್ ವಿತ್ ಎಸ್‍ಸಿ, ಎಸ್‍ಟಿ, ಒಬಿಸಿ ಆಂಡ್ ಮೈನಾರಿಟಿ ಕಾನ್ಸನ್‍ಟ್ರೇಶನ್’’ ಎಂದು ಭಾಷಣ ಮಾಡಿದ್ದರು. ಅಲ್ಪ ಸಂಖ್ಯಾತರಿಗೆ ಸರ್ಕಾರಿ ಯೋಜನೆಯಲ್ಲಿ ಸಿಂಹಪಾಲು ದೊರೆಯಬೇಕು ಎಂದೂ ಅವರು ಹೇಳಿದ್ದರು. ಸಿಂಗ್ ಮೂಲತಃ ಅರ್ಥಶಾಸ್ತ್ರಜ್ಞರು, ರಾಜಕಾರಣಿಯಲ್ಲ. ಆದರೆ ಅವರ ಧಾಟಿ ಮತಬ್ಯಾಂಕಿನ ಮೇಲೆ ಕಣ್ಣಿಟ್ಟ ಯಾವ ರಾಜಕಾರಣಿಗೂ ಕಡಿಮೆ ಇರಲಿಲ್ಲ. ಅಂದಿನ ಸಭೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಹಿರಿಯ ಅಧಿಕಾರಿಗಳು ಎಲ್ಲ ಹಾಜರಿದ್ದರು. ಸರ್ಕಾರದ ಯೋಜನೆಯ ಲಾಭ ಬಡವರಿಗೆ ದೊರೆಯಬೇಕು ಎಂದು ಹೇಳುವ ಬದಲು ಅಲ್ಪ ಸಂಖ್ಯಾತರಿಗೆ ದೊರೆಯಬೇಕು ಎಂದು ಅವರು ಹೇಳಿದ್ದರಲ್ಲಿ ಅಭಿವೃದ್ಧಿಗಿಂತಲೂ ಮತಗಳಿಕೆಯ ವಾಸನೆ ಢಾಳಾಗಿ ರಾಚಿದರೆ ಅದರಲ್ಲಿ ಅವರ ತಪ್ಪಿಲ್ಲ. ಕರ್ನಾಟಕದಲ್ಲಿ ಶಾದಿ ಭಾಗ್ಯ ಯೋಜನೆ ಕುರಿತ ಸರ್ಕಾರದ ನಿಲುವನ್ನು ಕೂಡ ಇದೇ ದೃಷ್ಟಿಯಲ್ಲಿ ನೋಡಬಹುದು. ಆ ಸರ್ಕಾರ, ಈ ಸರ್ಕಾರ ಎಂದಲ್ಲ ಎಲ್ಲ ಸರ್ಕಾರಗಳ ಯೋಜನೆಗಳೂ ಮತಗಳಿಕೆಯತ್ತ ನೆಟ್ಟಿರುವುದರಿಂದ ಅವರ ಘೋಷಣೆಗಳು ಹೀಗಾಗಿಬಿಡುತ್ತವೆ ಅಷ್ಟೆ.

ಮತ್ತಷ್ಟು ಓದು »

9
ಮಾರ್ಚ್

ಸತ್ಕಾರದ ಸ್ವರೂಪ

-ಮಯೂರಲಕ್ಷ್ಮಿ

ಅತಿಥಿ ದೇವೋ ಭವಃಮನೆಗೆ ಬರುವ ಅತಿಥಿ ಅಭ್ಯಾಗತರನ್ನು ಆದರದಿಂದ ಸ್ವಾಗತಿಸಿ ಸತ್ಕರಿಸುವುದು ನಮ್ಮ ಭಾರತೀಯ ಸಂಸ್ಕೃತಿಯಷ್ಟೇ!  ಸುಭಾಷಿತವೊಂದು ಹೀಗಿದೆ:

ಯ: ಸಾಯಮತಿಥಿಂ ಪ್ರಾಪ್ತಂ

ಯಥಾಶಕ್ತಿ ನ ಪೂಜಯೇತ್|

ತಸ್ಯಾಸೌ ದುಷ್ಕೃತಂ ದತ್ತ್ವಾ

ಸುಕೃತಂ ಚಾಪಕರ್ಪತಿ||

ಮತ್ತಷ್ಟು ಓದು »

25
ಫೆಬ್ರ

ನಮ್ಮ ದೇಶದ ಕಥೆ ಇಷ್ಟೇ ಕಣರೋಪ್ಪು!!!

– ಮಧು ಚಂದ್ರ , ಭದ್ರಾವತಿ

AbdulKalamಅವುಲ್ ಪಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಮ್ ಯಾರಿಗೆ ಗೊತ್ತಿಲ್ಲ ಹೇಳಿ , ನಮ್ಮ ದೇಶದ ಮಾಜಿ ರಾಷ್ಟ್ರಪತಿ ಹಾಗು ಕ್ಷಿಪಣಿ ಗಳ ಜನಕ ಎಂದೇ ಪ್ರಸಿದ್ಧರು.

ಕಲಾಂ ಅವರು ಇಸ್ರೋ ಸಂಸ್ಥೆಯ ಉಪಗ್ರಹ ಉಡಾವಣ ವಾಹನಗಳ ಯೋಜನೆಯ ಕಾರ್ಯದಲ್ಲಿ ತೊಡಗಿದ್ದಾಗ, ಅವರಿಗೆ ಬೆರಿಲಿಯಮ್ ಡಯಾ ಫಾರ್ಮ್ಗಳ ಅವಶ್ಯಕತೆ ಇತ್ತು. ಬೇರಿಲಿಂ ಡಯಾ ಫಾರ್ಮ್ಗಳನ್ನು ವಿಮಾನ, ರಾಕೆಟ್ ಹಾಗು ಕ್ಷಿಪಣಿಗಳ ಭ್ರಮಣ ದಿಕ್ಸೂಚಿಗಳಲ್ಲಿ ಬಳಸುತ್ತಾರೆ. ಭ್ರಮಣ ದಿಕ್ಸೂಚಿಗಳಿಂದ ವಿಮಾನ , ರಾಕೆಟ್ ಹಾಗು ಕ್ಷಿಪಣಿಗಳು ನೆಲದ ಮೇಲೆ ಎಷ್ಟು ಎತ್ತರದಲ್ಲಿ ಹಾರುತ್ತಿವೆ ಎಂದು ಸೂಚಿಸುತ್ತವೆ.

ಅಂದು ನಮ್ಮ ದೇಶದಲ್ಲಿ ಉತ್ಪಾದನೆ ಮಾಡಲು ಯಾವುದೇ ಉದ್ಯಮಗಳು ಇಲ್ಲದೆ ಇರುವುದರಿಂದ , ಇದನ್ನು ಅಮೇರಿಕದಿಂದ ಅಮದು ಮಾಡಿಕೊಳ್ಳುತ್ತಿದ್ದರು . ಇಸ್ರೋದಿಂದ ನಮ್ಮ ಯೋಜನೆಗೆ ನಮಗೆ ಇಷ್ಟು ಡಯಾ ಫಾರ್ಮ್ಗಳು ಬೇಕು ಎಂದು ಅಮೆರಿಕಕ್ಕೆ ಬೇಡಿಕೆ ಇಟ್ಟರು.

ಮೂರು ತಿಂಗಳ ನಂತರ ಅಮೆರಿಕವು, ಭಾರತವು ಖಂಡಾಂತರ ಕ್ಷಿಪಣಿಗಳ ಅಭಿರುದ್ದಿಯಲ್ಲಿ ಬೇರಿಲಿಂ ಡಯಾ ಫಾರ್ಮ್ಗಳನ್ನು ಬಳಸುತ್ತಾರೆ ಎಂದು ಬೇಡಿಕೆ ಪೂರೈಸಲು ನಿರಾಕರಿಸಿತು.

ಮತ್ತಷ್ಟು ಓದು »

24
ಫೆಬ್ರ

ನಮ್ಮ ಮಕ್ಕಳಿಗೆ ಎಂಥ ಶಿಕ್ಷಣ ಕೊಡಬೇಕು?

ವಲವಿ, ಬಿಜಾಪೂರ

ಶಿಕ್ಷಣ ವ್ಯವಸ್ಥೆ೧೯೮೩ ಅಥವಾ ೧೯೮೪ ನೇ ಇಸ್ವಿ ಇರಬಹುದೇನೋ? ಸರಿಯಾಗಿ ನೆನಪಿಲ್ಲ. ನಮ್ಮ ಶಾಲೆಯಲ್ಲಿ (ಆಗ ನಾನು ೮/೯ ತರಗತಿಯಲ್ಲಿ ಒದುತ್ತಿರಬಹುದು ) ಪೈಥಾಗೋರಸನ ಪ್ರಮೇಯವನ್ನು ನನ್ನ ಗುರುಗಳು ಹೇಳುತ್ತಾ ಈ ಸೂತ್ರವನ್ನು ಪೈಥಾಗೊರಸನಕ್ಕಿಂತಲೂ ಮೊದಲು ಹೇಳಿದವನು ಭಾಸ್ಕರಾಚಾರ್ಯ ಎಂದು ವಿವರಿಸುತ್ತಾ ಅವನ ಲೀಲಾವತಿ ಗ್ರಂಥದಲ್ಲಿ ಈ ಸಾಲುಗಳನ್ನು ಹೇಳಲಾಗಿದೆ ಎಂದು ಪೈಥಾಗೋರಸನ ಪ್ರಮೇಯದ ರೀತಿಯಲ್ಲಿ ಬಿಡಿಸಬಹುದಾದ ಒಂದು ಲೆಕ್ಕವನ್ನು ತಿಳಿಸಿದ್ದರು. ಆಗ ನಾನು, ಸರ್ ಹಾಗಿದ್ದರೆ ಅದನ್ನು ಪುಸ್ತಕದಲ್ಲೇಕೆ ಬರೆದಿಲ್ಲ?? ಎಂದು ಸಹಜವಾಗಿ ಕೇಳಿದ್ದೆ. ಆಗವರು ನಮ್ಮನ್ನು ನಾವು(ಭಾರತೀಯರನ್ನು) ಹೊಗಳಿಕೊಳ್ಳುವ ಜಾಯಮಾನ ನಮಗಿಲ್ಲ ಎಂದಿದ್ದರು. ಅವರು ವ್ಯಂಗವಾಗಿ ಇದನ್ನು ಹೇಳಿದರೋ ಸಹಜವಾಗಿ ಹೇಳಿದರೋ ನನಗಂತೂ ಅರ್ಥವಾಗಿರಲಿಲ್ಲ.

ಮುಂದೆ ನಾನು ಶಿಕ್ಷಕಿಯಾಗಿ ಗಣಿತ ವಿಷಯದ ತರಬೇತಿಗಾಗಿ ಹೋದಾಗ ಶ್ರೀಮತಿ ಮಂಜುಳಾ ಜೋಷಿ ಎನ್ನುವ ತರಬೇತುದಾರರು ಇದೇ ವಿಷಯವನ್ನು ಮತ್ತು ಭಾಸ್ಕರಾಚಾರ್ಯರ ಅವೇ ಸಾಲುಗಳನ್ನು ಪೈಥಾಗೊರಸನ ಪ್ರಮೇಯ ಕುರಿತು ಹೇಳುವಾಗ ಪುನಃ ಹೇಳಿದರು. (ಬಹುಶಃ ೨೦೦೨/೨೦೦೩ ರಲ್ಲಿ ಹೇಳಿರಬಹುದು.) ಆಗಲೂ ನಾನು ಮೇಲಿನ ಪ್ರಶ್ನೆ ಕೇಳಿದೆ. ಆಗ ಬಿಜೆಪಿ ಸರ್ಕಾರ ಪಠ್ಯ ಪುಸ್ತಕ ಬದಲಾವಣೆ ಮಾಡಲು ಹೊರಟು ಕೇಸರೀಕರಣಗೊಳಿಸುತ್ತಿದೆ ಎಂಬ ಬೊಬ್ಬೆ ಎಲ್ಲೆಡೆ ಶುರುವಾಗಿತ್ತು. ಹಾಗಾಗಿ ಶ್ರೀಮತಿ ಜೋಷಿಯವರು ನಾವು ಹಾಗೆ ಹೇಳಿಕೊಳ್ಳಲು ಬಿಡುತ್ತಿಲ್ಲ ಸರ್ಕಾರವೇನು ಮಾಡಬೇಕು? ಎಂದು ಪ್ರಶ್ನಿಸಿ ಚರ್ಚೆಯನ್ನು ಹುಟ್ಟುಹಾಕಿದ್ದರು. ಬಹುತೇಕ ಶಿಕ್ಷಕರು ನಮ್ಮ ಪೂರ್ವಿಕರ ಸಾಧನೆಗಳನ್ನು ನಮ್ಮ ಮಕ್ಕಳಿಗೆ ತಿಳಿಸುವದರಿಂದ ಅವರು ಸ್ಪೂರ್ತಿಗೊಳ್ಳುತ್ತಾರೆ ಆತ್ಮವಿಶ್ವಾಸ ಬೆಳೆಸಿಕೊಳ್ಳುತ್ತಾರೆಂದು ವಾದಿಸಿದರು. ಅಂದರೆ ತರಬೇತಿಗೆ ಹಾಜರಾಗಿದ್ದ ೧೦೦ ಶಿಕ್ಷಕರಲ್ಲಿ ಸುಮಾರು ೮೦/೯೦ ಜನ ಹೀಗೆ ವಾದಿಸಿದರೆಂದರೆ ಜನರಿಗೆ ತಮ್ಮ ಪೂರ್ವಿಕರ ಮಹತ್ವದ ಲಸ ಸಂಶೋಧನೆಗಳನ್ನು ತಮ್ಮ ಪರಂಪರೆಯನ್ನು ಮುಂದಿನ ಪೀಳಿಗೆ ತಿಳಿಯಲಿ ಎಂಬ ಆಶಯ ಇದೆ ಎಂದಾಯ್ತು. ಆದರೂ ಅಂಥ ಕೆಲಸಗಳು ನಡೆದಾಗ ಕೆಲವರು ನಿಲ್ಲಿಸಲು ಕೇಸರೀಕರಣವೆಂದು ಬೊಬ್ಬೆ ಹೊಡೆಯುತ್ತಾರೆ. ಪುರೋಹಿತಶಾಹಿಯ ಹುನ್ನಾರವೆಂದು, ಇನ್ನು ಕೆಲವರು ಬ್ರಾಹ್ಮಣಿಕೆಯ ಹೇರಿಕೆ ಎಂದೂ ಏನೇನೋ ಅಲ್ಲಸಲ್ಲದ ಅಪಪ್ರಚಾರ ಮಾಡುತ್ತಾರೆ. ಅದು ಹ್ಯಾಗೋ ಇವರ ದನಿ ಮೇಲಾಗಿ ಪಠ್ಯಪುಸ್ತಕಗಳಲ್ಲಿ ಅದೇ ಬ್ರಿಟೀಷರನ್ನು ಯುರೋಪಿಯನ್ನರನ್ನು ಹೊಗಳುವಂಥ ಪಾಠಗಳೇ ಪಠ್ಯ ಪುಸ್ತಕದಲ್ಲಿ ಬಂದು ಬಿಡುತ್ತವೆ.
ಮತ್ತಷ್ಟು ಓದು »

21
ಫೆಬ್ರ

ರಾಜಿನಾಮೆ ಕೊಡಲು ಸಿದ್ಧ !

– ನವೀನ್ ನಾಯಕ್

ಅಟಲ್,ಅಡ್ವಾಣಿ,ಮೋದಿರಾಜಿನಾಮೆ ಕೊಡಲು ಸಿದ್ಧ !
ಯಾರು ಗೊತ್ತೇ ಹೀಗೆ ಹೇಳಿದ್ದು ? ನರೇಂದ್ರ ಮೋದಿಯವರು !

ಅಡ್ವಾಣಿ ಮತ್ತು ಅಟಲ್ ಜೀಯರ ನಡುವೆ ಎದ್ದ ಭಿನ್ನಾಭಿಪ್ರಾಯಗಳಲ್ಲಿ ಮಹತ್ವದ ಎರಡು ಘಟನೆಗಳು ಒಂದು ಅಯೋಧ್ಯಾ ವಿಚಾರ ಇನ್ನೊಂದು ಮೋದಿಯವರ ರಾಜಿನಾಮೆ ವಿಚಾರ. ಮೋದಿಯವರ ವಿಚಾರದಲ್ಲಿ ಅಡ್ವಾಣಿಯವರು  ತಮ್ಮ ದೃಷ್ಟಿಕೋನವನ್ನು ಬೇರೆ ರೀತಿಯಾಗಿಸಿಕೊಂಡರು. ದಂಗೆಯ ಸಮಯದಲ್ಲಿ ಗುಜರಾತಿಗೆ ತೆರಳಿ ಅಲ್ಲಿಯ ಸಮಾಜದ ವಿವಿಧ ವರ್ಗಕ್ಕೆ ಸೇರಿದ ಅಪಾರ ಜನದೊಂದಿಗೆ ಮಾತನಾಡಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಅರಿತುಕೊಂಡರು. ಕ್ರಮಗಳ ಕುರಿತು ಅಲ್ಲಿಯ ಜನತೆ ತೃಪ್ತಿಯನ್ನು ಹೊಂದಿತ್ತು. ಇದರಿಂಧ ಮೋದಿಯವರು ಅಪರಾಧಿಯಾಗಿರಲಿಲ್ಲ ಬದಲಾಗಿ ಅವರು ಸ್ವಯಂ ರಾಜಕೀಯ ಬಲಿಪಶುವಾಗಿದ್ದಾರೆಂಬುದು ತಿಳಿದುಕೊಂಡರು. ಆದ್ದರಿಂದ ಮುಖ್ಯಮಂತ್ರಿಯಾಗಿ ಒಂದು ವರ್ಷವೂ ಕಳೆಯದ ಮೋದಿಯವರನ್ನು ಸಂಕೀರ್ಣ ಕೋಮು ಸನ್ನಿವೇಶಕ್ಕೆ ರಾಜಿನಾಮೆ ಪಡೆಯುವುದು ಅನ್ಯಾಯವಾಗುತ್ತದೆ. ಅದಲ್ಲದೇ ರಾಜಿನಾಮೆ ಪಡೆಯುವುದರಿಂದ ಗುಜರಾತಿನ ಸಾಮಾಜಿಕ ಸ್ಥಿತಿಗತಿಯನ್ನು ಧೀರ್ಘಕಾಲೀನವಾಗಿ ಹದಗೆಡಬಹುದೆಂದು ಅಡ್ವಾಣಿಯವರು ಅರಿತುಕೊಂಡರು.

ಮತ್ತಷ್ಟು ಓದು »