ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

12
ಫೆಬ್ರ

ಸದ್ದಿಲ್ಲದೇ ಸ್ತ್ರೀ ಶಿಕ್ಷಣಕ್ಕೆ ನಾಂದಿ ಹಾಡಿದ ಹರಿಕಾರ – ಶ್ರೀ ಶಿವಕುಮಾರ ಸ್ವಾಮೀಜಿ.

– ಡಾ.ಸುದರ್ಶನ ಗುರುರಾಜರಾವ್

9e1bce87-ff5c-42f8-9dee-335621550861ಸರಿ ಸುಮಾರು ನೂರಾಹನ್ನೊಂದು ವರ್ಷಗಳ ಕಾಲ ದೇಶಸೇವೆಯೇ ಈಶಸೇವೆ ಎಂದೆನ್ನುತ್ತಾ, ಜನತೆಯಲ್ಲಿಯೇ ಜನಾರ್ದನನನ್ನು ಕಂಡು ನಮ್ಮನ್ನಗಲಿದ ಯುಗಪುರುಷ, ನಡೆದಾಡುವ ದೇವರೆಂದೇ ಜನಮಾನಸಗಳಲ್ಲಿ ನೆಲೆಯಾಗಿದ್ದ ಶ್ರೀ ಶಿವಕುಮಾರಸ್ವಾಮಿಗಳು ನಮ್ಮನ್ನು ತೊರೆದು ನೈತಿಕವಾಗಿ ದಿನೇ ದಿನೇ ಅಧೋಗತಿಗಿಳಿಯುತ್ತಿರುವ ನಮ್ಮ ಸಮಾಜವನ್ನು ಆ ಮೂಲಕವಾಗಿ ಸಾತ್ವಿಕ ಸಮುದಾಯವನ್ನು ಅನಾಥರನ್ನಾಗಿ ಮಾಡಿ ಹೋದದ್ದು ದುಃಖಕರವಾದ ಸಂಗತಿಯೇ ಸರಿ. ಕಾಲನ ಕರೆಗೆ ಓಗೊಡದವರಾರು?

ಸ್ವಾಮೀಜಿಗಳ ಬಗ್ಗೆ ಅವರು ಹಗಲಿರುಳು ದುಡಿದು ಕಾಯಾ ವಾಚಾ ಮನಸಾ ದೀನರ ಕರೆಗೆ ಓಗೊಟ್ಟದ್ದು, ಏನೂ ಇದ್ದಿಲ್ಲದ ಒಂದು ಬಿಡಿ ಮಠವನ್ನು ಬೃಹತ್ ಸಂಸ್ಥೆಯನ್ನಾಗಿ ಬೆಳೆಸಿದ್ದು, ಆ ಮೂಲಕವಾಗಿ ಲಕ್ಷಾಂತರ ಜೀವಗಳ ಅಭಿವೃದ್ಧಿಗೆ ಕಾರಣರಾದದ್ದು , ಜಾತ್ಯಾತೀತರೆಂದು ಕೊಚ್ಚಿಕೊಳ್ಳುವ ಸರಕಾರಗಳ ಅನೀತಿಯ ಕಾಕದೃಷ್ಟಿಗೆ ಬಿದ್ದು ಕಷ್ಟ ಅನುಭವಿಸಿದರೂ ಒಂದೇ ಒಂದು ಮಾತನಾಡದೆ ಮಠದ ಮಕ್ಕಳಿಗೆ ಅನ್ನಪೋಷಣೆ ವಿದ್ಯಾದಾನಗಳನ್ನು ಅವಿರತವಾಗಿ ಮುಂದುವರಿಸಿದ್ದು ಎಲ್ಲವನ್ನು ಕೇಳಿ, ಓದಿ ತಿಳಿದಿದ್ದೇವೆ. ಇವೆಲ್ಲದರ ನಡುವೆ ತುಮಕೂರಿನ ಆಸುಪಾಸಿನಲ್ಲಿ ನಾನಾ ಕಾರಣಗಳಿಗೆ ವಿದ್ಯಾಭ್ಯಾಸಕ್ಕೆ ಅವಕಾಶವಿಲ್ಲದ ಹೆಣ್ಣುಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಟ್ಟ ಸಮಾನತೆಯ ಹರಿಕಾರ ಶ್ರೀ ಸ್ವಾಮೀಜಿಗಳು ಎಂಬುದು ಬಹುತೇಕರಿಗೆ ತಿಳಿದಿಲ್ಲದ ವಿಚಾರ.

ಸಿದ್ಧಗಂಗಾ ಮಠದ ಶಾಲೆಯ ಮೊತ್ತ ಮೊದಲ ವಿದ್ಯಾರ್ಥಿನಿಯಾದ ನನ್ನ ತಾಯಿಯ ಅನುಭವದ ಪರಿಚಯ ಈ ಲೇಖನದ ಉದ್ದೇಶ. ಇದನ್ನು ಹೇಳುವಾಗ, ಬರೆಯುವಾಗ ಭಕ್ತಿ, ಕೃತಜ್ಞತೆಗಳು ಎದೆತುಂಬಿ ನಿಂತಿವೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲವಷ್ಟೇ. ಮತ್ತಷ್ಟು ಓದು »

1
ಫೆಬ್ರ

ನಮೋ ಶಿವಕುಮಾರ ಸ್ವಾಮಿ: ಶರಣಂ ಗಚ್ಛಾಮಿ!

~ ತುರುವೇಕೆರೆ ಪ್ರಸಾದ್
ಗಾಂಧಿನಗರ
ತುರುವೇಕೆರೆ-572227

9e1bce87-ff5c-42f8-9dee-335621550861ಸಿದ್ಧಗಂಗೆಯ ಐಸಿರಿ, ತಾನಾಗಬಲ್ಲನಿಲ್ಲಿ ನರನು ನಾರಾಯಣನು ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟ ಶ್ರೇಷ್ಠ ನರಹರಿ, ಸಿದ್ಧಗಂಗೆಯ ಸಾಧನೆಯ ಉತ್ತುಂಗದ ಗಿರಿ ಡಾ.ಶ್ರೀ ಶಿವಕುಮಾರಸ್ವಾಮೀಜಿ ಭೌತಿಕವಾಗಿ ನಮ್ಮನ್ನೆಲ್ಲಾ ಅಗಲಿ ಹೋಗಿದ್ದಾರೆ. ಸುಮಾರು 9 ದಶಕಗಳ ಕಾಲ ಅವರು ಮನುಕುಲಕ್ಕೆ ಸಲ್ಲಿಸಿದ ಸೇವೆ ಅನುಪಮವಾದದು, ಅನನ್ಯವಾದದು, ಮಾನವೀಯತೆಯ ಇತಿಹಾಸದಲ್ಲಿ ಎಂದೆಂದಿಗೂ ಅಜರಾಮರವಾಗಿ ‘ನಭೂತೋ ನಭವಿಷ್ಯತ್’ ಎನ್ನುವಂತೆ ದಾಖಲಾಗುವಂತಾದ್ದು. ಶಾಂತಿ ನೆಮ್ಮದಿ ಬಯಸಿದವನಿಗೆ ದಿವ್ಯ ದರ್ಶನ, ನರಳುತ್ತಾ ಬಂದವನಿಗೆ ಮಾನವೀಯ ಸೇವೆಯ ದಿಗ್ದರ್ಶನ, ಹಸಿದವನಿಗೆ ಅನ್ನ, ಅನಾಥನಿಗೆ ಪ್ರೀತಿಯ ಸಿಂಚನ, ಅರಿವಿನ ಜೋಳಿಗೆ ಹಿಡಿದು ಬಂದವನಿಗೆ ಜ್ಞಾನ- ಸಿದ್ಧಗಂಗಾ ಸ್ವಾಮೀಜಿಯ ಬಹುಮುಖಿ ದಾಸೋಹದ ವೈಖರಿಯೇ ಅನನ್ಯ! ಮತ್ತಷ್ಟು ಓದು »

30
ಜನ

ಅಬ್ಬಾ..ಈ ದೇಶದಲ್ಲಿ ಅದೆಂತಹ ಅಸಹಿಷ್ಣುತೆ..!

– ವರುಣ್ ಕುಮಾರ್
ಪುತ್ತೂರು

modi-naseer.jpg

  • ಈ ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆಶಾರುಖ್ ಖಾನ್
  • ನನ್ನ ಪತ್ನಿಗೆ ಮತ್ತು ನನಗೆ ಈ ದೇಶದಲ್ಲಿ ಇರಲು ಭಯವಾಗುತ್ತಿದೆ, ಯಾಕೆಂದರೆ ಇಲ್ಲಿ ಅಸಹಿಷ್ಣುತೆ ಇದೆಅಮೀರ್ ಖಾನ್
  • ನನ್ನ ಮೊಮ್ಮಕ್ಕಳಿಗೆ ಈ ದೇಶದಲ್ಲಿರಲು ಭಯವಾಗುತ್ತಿದೆನಾಸೀರುದ್ದಿನ್ ಷಾ

ಹೌದಲ್ಲವೇ, ಇವರು ಹೇಳಿದಂತೆ ಕಳೆದ ನಾಲ್ಕೂವರೆ ವರ್ಷಗಳಿಂದ ಎಷ್ಟೊಂದು ಅಸಹಿಷ್ಣುತೆ ಇದೆಯಲ್ಲವೆ, ಎಲ್ಲ ಕಡೆಗಳಲ್ಲಿ ಗೋವಿನ ಹೆಸರಲ್ಲಿ ಕೊಲೆ,ಸುಲಿಗೆ ಧರ್ಮದ ಹೆಸರಲ್ಲಿ ಗಲಭೆ, ಅಲ್ಪಸಂಖ್ಯಾತರಿಗಂತೂ ಉಸಿರುಗಟ್ಟಿದ ಸ್ಥಿತಿ. ಒಂದೇ ಎರಡೇ, ಇದಕ್ಕೆಲ್ಲ ಯಾರು ಮುಖ್ಯ ಕಾರಣ ಕೇಂದ್ರ ಸರ್ಕಾರ. ಅದರಲ್ಲೂ ಮುಖ್ಯವಾಗಿ ಮೋದಿ. ಈ ಮನುಷ್ಯ ಬಂದ ಮೇಲಂತೂ ಈ ದೇಶದ ಬಗ್ಗೆ ತಾತ್ಸರ ಮೂಡುವಂತೆ ಮಾಡಿದ್ದಾನೆ. ಅಲ್ಲವೇ.. ಅಷ್ಟಕ್ಕೂ‌ ಮೋದಿಯ ಬಗ್ಗೆ ಈ ನಮ್ಮ ದೇಶಭಕ್ತ(?)ರಿಗೆ ಯಾಕೆ ಇಷ್ಟೊಂದು ಕೋಪ ಸ್ವಲ್ಪ‌ ಮೆಲುಕು ಹಾಕೋಣ. ಮತ್ತಷ್ಟು ಓದು »

27
ಜನ

ಸಿದ್ಧಗಂಗಾ ಶ್ರೀಗಳಿಗೇಕಿಲ್ಲ ಭಾರತರತ್ನ?

ರಾಕೇಶ್ ಶೆಟ್ಟಿ

“ಮೂರು ಬಿಟ್ಟೋರು ಊರಿಗೇ ದೊಡ್ಡೋರು” ಅನ್ನೋ. ಗಾದೆ ಮಾತು ಯಾರಿಗಾದರೂ ಸೂಕ್ತವಾಗಿ ಅನ್ವಯವಾಗುವುದಿದ್ದರೆ ಅದು ಕಾಂಗ್ರೆಸ್ ಪಕ್ಷ ಹಾಗೂ ಅದನ್ನು ಬೆಂಬಲಿಸುವ ಗಂಜಿಗಿರಾಕಿಗಳಿಗೆ. ಕಾರಣವೇನು ಗೊತ್ತೇ, ತನ್ನ ಪಕ್ಷದ ಇತಿಹಾಸದಲ್ಲಿ ಮಾಡಲಾಗಿರುವ ಅನ್ಯಾಯಗಳ ಪಟ್ಟಿ ಅಕ್ಷಯಪಾತ್ರೆಯಂತದ್ದು ಎನ್ನುವುದು ಗೊತ್ತಿದ್ದರೂ ಬೇರೆ ಪಕ್ಷಗಳನ್ನು ಟೀಕಿಸಲು ಹೊರಟಾಗ ಕಾಂಗೈ ನಾಯಕರು ನಾಚಿಕೆ ಬಿಟ್ಟು ನಿಲ್ಲುತ್ತಾರೆ. ಇದಕ್ಕೆ ಇತ್ತೀಚಿನ ಉದಾಹರಣೆ, ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡದಿರುವ ವಿವಾದ.

ಇವತ್ತಿಗೆ ಸಿದ್ದರಾಮಯ್ಯನವರಿಂದ ಹಿಡಿದು ಕಾಂಗಿ ಮರಿಪುಢಾರಿಗಳೆಲ್ಲ ಬಿಜೆಪಿಯನ್ನು ಈ ಬಗ್ಗೆ ಪ್ರಶ್ನಿಸುತ್ತಿವೆ.ಆದರೆ,ಹಾಗೆ ಪ್ರಶ್ನಿಸುವ ಭರದಲ್ಲಿ ದೇಶದ ಉನ್ನತ-ಅತ್ಯುನ್ನತ ಪ್ರಶಸ್ತಿಗಳ ಮಾನವನ್ನು ಮೂರು ಬಿಟ್ಟವರ ಪಕ್ಷ ಹೇಗೆ ಕಳೆದಿದೆ ಎನ್ನುವುದನ್ನು ಇವರು ಮರೆತಿರುವಂತಿದೆ.

ಮತ್ತಷ್ಟು ಓದು »

14
ಜನ

ಶಬರಿಮಲೆ: ಇದು ಹಿಂದೂಗಳ‌ ಸೋಲೇ ?

– ವರುಣ್ ಕುಮಾರ್
ಪುತ್ತೂರು

sabarimala-temple-manoramaಕಳೆದ‌ ಕೆಲ‌ ತಿಂಗಳುಗಳಿಂದ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಎಂದರೆ‌ ಅದು ಶಬರಿಮಲೆಗೆ ಮಹಿಳಾ ಪ್ರವೇಶದ ಕುರಿತಾಗಿ ಬಂದಂತಹ ತೀರ್ಪು. ಈ ಕುರಿತಾಗಿ ಚರ್ಚೆಗಳು, ವಾದ- ವಿವಾದಗಳು,ಸಂಭಾಷಣೆಗಳು ಈಗ ಅತಿ ಸಾಮಾನ್ಯ. ಆದರೆ ಶಬರಿಮಲೆಯು ಇಂತಹ ಚರ್ಚೆಗಳಿಗೆ ಗುರಿಯಾಗುತ್ತಿರುವುದು ಇದು ಮೊದಲ ಬಾರಿಯೇನಲ್ಲ. ಇದರ ಕುರಿತಾದ ಒಂದು ಸಣ್ಣ ಅವಲೋಕನೆಯು ಈ ಕೆಳಗಿನಂತಿದೆ. ಮತ್ತಷ್ಟು ಓದು »

8
ಜನ

ಹೊಲವನು ಉಳುತಾ ಅಳುವಾ ಯೋಗಿಯ ನೋಡಿಲ್ಲಿ!

– ತುರುವೇಕೆರೆ ಪ್ರಸಾದ್
ಪಂಚವಟಿ
ನಂ.6, 13ನೇ ವಾರ್ಡ್
ಗಾಂಧಿನಗರ
ತುರುವೇಕೆರೆ-572227

5bg1ಇಂದು ಮಾಜಿ ಪ್ರಧಾನಿ ಚೌದುರಿ ಚರಣ್‍ಸಿಂಗ್ ಹೆಸರಲ್ಲಿ ನಾವು ಮತ್ತೊಂದು ರಾಷ್ಟ್ರೀಯ ರೈತ ದಿನವನ್ನು ಆಚರಿಸುತ್ತಿದ್ದೇವೆ. ಆದರೆ ಡಿ.23 ರಾಷ್ಟ್ರೀಯ ರೈತ ದಿನ ಎಂದು ಬಹುತೇಕರಿಗೆ ಗೊತ್ತಿರಲಿಕ್ಕಿಲ್ಲ. ನೆಹರು, ಇಂದಿರಾ, ರಾಜೀವ್ ಜಯಂತಿಯಂತೆ ರೈತ ದಿನಾಚರಣೆ ಬಗ್ಗೆ ಯಾವ ಪಠ್ಯಪುಸ್ತಕದಲ್ಲೂ ಉಲ್ಲೇಖವೂ ಇರಲಿಕ್ಕಿಲ್ಲ. ತಮ್ಮ ಹೆಸರಿನಲ್ಲಿ ಈ ರೀತಿ ಸರ್ಕಾರಗಳು, ಜನಪ್ರತಿನಿಧಿಗಳು ದೊಡ್ಡ ಮನುಷ್ಯರು ರೈತದಿನಾಚರಣೆ ಎಂಬ ನಾಮಕಾವಸ್ಥೆ ಆಚರಣೆ ನಡೆಸುತ್ತಾರೆಂಬುದು ಬಹುಶಃ ಲಕ್ಷಾಂತರ ರೈತರಿಗೇ ಗೊತ್ತಿರಲಿಕ್ಕಿಲ್ಲ. ಟಿಪ್ಪು ಜಯಂತಿಗೆ ಮಾಡಿಕೊಂಡಂತೆ ಸರ್ಕಾರವೇನೂ ವಾರಗಟ್ಟಲೆ ಮುಂಚೆ ರೈತ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡ ವರದಿ, ಸುದ್ದಿ ಯಾವ ಪತ್ರಿಕೆಯಲ್ಲೂ ಬರುವುದಿಲ್ಲ. ಇಂತಹ ಒಂದು ದಿನವನ್ನು ಅರ್ಥಪೂರ್ಣವಾಗಿ ಮಾಡಬೇಕು, ಸಂಭ್ರಮದಿಂದ ಆಚರಿಸಬೇಕು, ಅದೊಂದು ರೈತರ ಹಬ್ಬವಾಗಬೇಕು ಎಂದು ಯಾವ ಬುದ್ದಿಜೀವಿಗಳ ದಂಡೂ ಸರ್ಕಾರವನ್ನು ಒತ್ತಾಯಿಸುವುದಿಲ್ಲ. ಅದರ ರೂಪರೇಷೆಗೆ ಸಂವಾದ, ಗೋಷ್ಠಿ, ಚಿಂತನೆಗಳು ನಡೆಯುವುದೂ ಇಲ್ಲ. ಇದೆಲ್ಲಾ ನಮ್ಮ ಅನ್ನದಾತನನ್ನು ನಾವು ಯಾವ ದುಸ್ಥಿತಿಯಲ್ಲಿ ಇಟ್ಟಿದ್ದೇವೆ ಮತ್ತು ಅವನಿಗೆ ನಾವು ಯಾವ ಗೌರವ ಸಲ್ಲಿಸುತ್ತಿದ್ದೇವೆ ಎಂಬುದರ ದ್ಯೋತಕ. ಮತ್ತಷ್ಟು ಓದು »

3
ಜನ

ಮೋದಿರಾಗಾ ಸರಿಸಿ ಮತ ಹಾಕಲು ಮತ್ತೊಂದು ಹೆಸರು ಹೇಳುವಿರಾ?

– ಗೋಪಾಲಕೃಷ್ಣ
ಚಿಕ್ಕಮಗಳೂರು

4CE0D6B8-390C-4E23-889C-7727E2BCC073ಹಾಗೆ ಒಮ್ಮೆ ಕಲ್ಪಿಸಿಕೊಳ್ಳಿ; 2014ರಲ್ಲಿ ನರೇಂದ್ರ ಮೋದಿಯವರಿಗೆ ಬಹುಮತ ಸಿಗದೇ ಇದ್ದಿದ್ದರೆ, 18 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ, 16 ಸದಸ್ಯರನ್ನು ಹೊಂದಿದ್ದ ಚಂದ್ರಬಾಬು ನಾಯ್ಡು, 37 ಸ್ಥಾನ ಹೊಂದಿದ್ದ ಎಐಎಡಿಎಂಕೆ ಹೇಗೆಗೆಲ್ಲಾ ‘ಪೊಲಿಟಿಕಲ್ ಬ್ಲಾಕ್‍ಮೇಲ್’ ಮಾಡಬಹುದಿತ್ತು! ಅಂದು ಎನ್‍ಡಿಎ ಮೈತ್ರಿಕೂಟದ 336 ಸದಸ್ಯರಲ್ಲಿ 282 ಸ್ಥಾನಗಳೊಂದಿಗೆ ಬಿಜೆಪಿ ಸ್ಪಷ್ಟ ಬಹುಮತ ಪಡೆದಿತ್ತು. ಬಿಜೆಪಿ ಎನ್ನುವುದಕ್ಕಿಂತಲೂ ನರೇಂದ್ರ ಮೋದಿಯವರಿಗಾಗಿ ದೇಶ ನೀಡಿದ್ದ ಸ್ಪಷ್ಟ ಜನಾದೇಶವದು. ಹೀಗಿದ್ದರೂ ಶಿವಸೇನೆ ಪ್ರತಿಬಾರಿಯೂ ಕಿತಾಪತಿ ಮಾಡುತ್ತಲೇ ಬರುತ್ತಿದೆ. ಚಂದ್ರಬಾಬು ನಾಯ್ಡು ಅತ್ತಲಿಂದ ಇತ್ತ ಇತ್ತಲಿಂದ ಅತ್ತ ಜಿಗಿಯುತ್ತಲೇ ಇದ್ದಾರೆ. ಇನ್ನು ಜಯಲಲಿತಾ ಬದುಕಿದ್ದಿದ್ದರೆ ಅದು ಇನ್ನೊಂದು ರೀತಿಯ ರಾಜಕಾರಣವಾಗುತ್ತಿತ್ತು ಬಿಡಿ. ಮತ್ತಷ್ಟು ಓದು »

2
ಜನ

ಕನ್ನಡಿಗನೊಬ್ಬನ ಕ್ಲಾಸಿಕ್ ವಿಮಾನಗಳು ಆಗಸದಲ್ಲಿ ಹಾರುವುದನ್ನು ನೋಡಲು ಇನ್ನೆಷ್ಟು ದಶಕಗಳು ಕಾಯಬೇಕೋ?!

– ಸುಜಿತ್ ಕುಮಾರ್

Kingfisher_Airlines‘ಈತ ನಮ್ಮ ನೂರು ಬಿಲಿಯನ್ ಕಂಪನಿಯ ಚೇರ್ಮ್ಯಾನ್. ಅಪ್ಪನ ಕಂಪನಿಯನ್ನು ಮುನ್ನಡಿಸಿಕೊಂಡು ಬಂದು ಎದ್ವಾ ತದ್ವಾ ಸಾಲವನ್ನು ಮಾಡಿ ತೀರಿಸಲಾಗದೆ ಇಂದು ವಿದೇಶದಲ್ಲಿ ಅಡಗಿ ಕೂತಿದ್ದಾನೆ. ಆತ ಮಾಡಿರುವ ಸಾಲದ ಮೊತ್ತ ಹೆಚ್ಚು ಕಡಿಮೆ ನಮ್ಮ ಇಡೀ ಕಂಪನಿಯ ರೆವೆನ್ಯೂ ಮೊತ್ತಕ್ಕೆ ಸಮ. ನಮ್ಮ ಕಂಪನಿಯನ್ನಷ್ಟೇ ಅಲ್ಲದೆ ನಮ್ಮನ್ನು ನಂಬಿಕೊಂಡು ಕೂತಿರುವ ಇನ್ನೂ ಹತ್ತಾರು ಕಂಪನಿಗಳ ಭವಿಷ್ಯದೊಟ್ಟಿಗೆ ಚೆಲ್ಲಾಡಿ ಮರೆಯಾದವನಿವ’ ಎಂಬ ಮಾತುಗಳಿಗೆ ಪೂರಕವಾಗಿರುವ ಹಾಗು ಅದೇ ಪೇಜಿನಲ್ಲಿ ಕಂಪನಿಯ ಇತರ ಉದ್ಯೋಗಿಗಳನ್ನು Mr. ಅಥವ Mrs. ಎಂಬ ಗೌರವ ಸೂಚಕಗಳನ್ನು ಬಳಸಿ ಸಂಭೋದಿಸಿವುದು ಒಂದೆಡೆಯಾದರೆ ಇನ್ನೊಂದೆಡೆ ಅಲ್ಲೇ ಕಂಪನಿಯ ಚೇರ್ಮ್ಯಾನ್ ನನ್ನು ಕೇವಲ ಹೆಸರಿನಿಂದಷ್ಟೇ ಕರೆಯುವ ಕಂಪನಿಯ ವೆಬ್ಸೈಟ್ ಅನ್ನು ಎಲ್ಲಿಯಾದರೂ ಕಂಡಿರುವಿರಾ? ಇಲ್ಲವಾದರೆ ಒಂದು ಕಾಲಕ್ಕೆ ಇಡೀ ವಿಶ್ವದಲ್ಲೇ ಟಾಪ್ ಸ್ಪಿರಿಟ್ ಕಂಪನಿಗಳಲ್ಲಿ ಒಂದಾಗಿ ಇಂದು ಅಕ್ಷರ ಸಹ ತನ್ನ ಉಳಿವಿಗಾಗಿ ಪರದಾಡುತ್ತಿರುವ ಯುಬಿ.ಗ್ರೂಪ್ಸ್ ನ ವೆಬ್ಸೈಟ್ ಗೆ ಒಮ್ಮೆ ಭೇಟಿ ಕೊಡಿ. ತನಗೆ ಅನ್ನ ಕೊಟ್ಟ ಒಡೆಯನಾದರೂ, ತಪ್ಪು ಮಾಡಿದಾಗ ಆತನನ್ನು ಕಳ್ಳನೆಂದೇ ಕರೆಯುತ್ತೀವಿ ಎಂಬಂತಿದೆ ಅಲ್ಲಿಯ ಬೋರ್ಡ್ ಆಫ್ ಡೈರೆಕ್ಟರ್ ಗಳ ಮಾತುಗಳು. ಮತ್ತಷ್ಟು ಓದು »

21
ಡಿಸೆ

ಮೋದಿ ಮತ್ತೊಮ್ಮೆ ಎನ್ನುವುದಕ್ಕಿಂತ, ಮೋದಿ ಮತ್ತೆ ಮತ್ತೆ ಎನ್ನಿ!

– ಸಾಗರ ಮುಧೋಳ

4CE0D6B8-390C-4E23-889C-7727E2BCC073ಕಳೆದ ಒಂದು ದಶಕದ ಹಿಂದೆ ಯಾರಾದರೂ ಒಬ್ಬ ವಿದ್ಯಾರ್ಥಿ ಅಥವಾ ಯುವಕ ತಾನೂ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಬೇಕು ಅಂದುಕೊಂಡಿದ್ದರೆ, ಅದು ಅವನ ದೃಷ್ಟಿಯಲ್ಲಿ ವಿಜ್ಞಾನಿ, ಅಧ್ಯಾಪಕ, ಅಧಿಕಾರಿ, ವೈದ್ಯ ಹೀಗೆ ಹಲವು ಬಗೆಯಲ್ಲಿ ಯೋಚಿಸುತ್ತಿದ್ದ. ಆದರೆ, ತಪ್ಪಿಯೂ ನಾನೊಬ್ಬ ರಾಜಕಾರಣಿಯಾಗಬೇಕೆಂದು ಚಿಂತಿಸುತ್ತಿರಲಿಲ್ಲ. ರಾಜಕಾರಣವೆಂದರೆ ಅದೊಂದು ಸಮಾಜದ ಬಹು ಜನರ ಆಶೋತ್ತರಗಳಿಂದ ಅಸ್ಪೃಶ್ಯವಾಗಿಯೇ ಉಳಿದ ಕ್ಷೇತ್ರ. ಅಲ್ಲಿ ಮಾನವೀಯತೆ, ಪ್ರಾಮಾಣಿಕತೆ, ಒಳ್ಳೆಯತನಕ್ಕೆ ಬೆಲೆಯೇ ಇಲ್ಲ. ರಾಜಕಾರಣವಿರುವುದೇ ದುಡ್ಡು ಮಾಡುವುದಕ್ಕೆ, ಜನರನ್ನು ಮೋಸ ಮಾಡುವುದಕ್ಕೆ ಎನ್ನುವುದು ನಾಡಿನ ಹಲವರಿಂದ ಅಸ್ಖಲಿತವಾಗಿ ಹೊಮ್ಮುತ್ತಿದ್ದ ವಾಣಿ. ಯಾರೊಬ್ಬರೂ ಊಹಿಸಿರಲಿಲ್ಲ! 2014 ರ ಸಂದರ್ಭದಿಂದ ಈ ದೇಶದಲ್ಲಿ ಬಾಲಿವುಡ್, ಕ್ರಿಕೆಟ್ ಗಿಂತ ಅತಿ ಹೆಚ್ಚು ಚರ್ಚೆ ಮತ್ತು ಮೆಚ್ಚುಗೆ ಪಡೆದ ವಿಷಯ ರಾಷ್ಟ್ರದ ರಾಜಕೀಯವೇ ಆಯಿತು. ಮೋದಿ ಎಂದರೆ ಅವರೊಬ್ಬ Political leader ಅಲ್ಲ, ಬದಲಾಗಿ ದೇಶದ ಬ್ರಾಂಡ್! ಮೋದಿ ಟೀ,ಮೋದಿ ಕುರ್ತಾ,ಮೋದಿ ಜಾಕೆಟ್ ಎಲ್ಲವೂ ಬ್ರಾಂಡ್. ಮೋದಿಗೆ ಸಂಬಂಧಿಸಿರುವುದೆಲ್ಲವು ಬ್ರಾಂಡ್. ಹಿಂದೆ ಅಪ್ಪ -ಅಮ್ಮ ಮನೆಯಲ್ಲಿ ರಾತ್ರಿ ನ್ಯೂಸ್ ನೋಡುತ್ತಿರಬೇಕಾದರೆ, ತಮ್ಮನ್ನು ಇಂದಿನ ಕ್ರಿಕೆಟ್ ಮ್ಯಾಚನ್ನು ನೋಡುವುದರಿಂದ ತಪ್ಪಿಸಿರುವವರ ಕಡೆ ಮಕ್ಕಳು ಶಪಿಸುತ್ತಾ ಮೂಗು ಮುರಿಯುತ್ತಿದ್ದರು. ಆದರೆ ಮೋದಿ ಎಂಟ್ರಿ ಕೊಟ್ಟ ಮೇಲೆ ಸಕುಟುಂಬ ಸಮೇತರಾಗಿ ಮನೆಯ ಟಿ.ವಿ. ಪರದೆಯ ಮೇಲೆ ಮೋದಿ ಗಾಥೆಯನ್ನು ನೋಡಲು ಶುರುಹಚ್ಚಿದರು. 2014 ರಲ್ಲಿ ಮೋದಿ ಗೆಲ್ಲುವುದು ಅನಿವಾರ್ಯ ಮಾತ್ರವಲ್ಲ, ಅಂತಿಮವಾದ ಪೂರ್ವ ನಿಯೋಜಿತ ತೀರ್ಮಾನವಾಗಿತ್ತು. Breaking news ಗಾಗಿ ಹಪಹಪಿಸುತ್ತಿದ್ದ ನ್ಯೂಸ್ ಚಾನೆಲ್ ಗಳಿಗೆ ಮೋದಿಯಿಂದ ಪ್ರತಿದಿನ Breaking news ಸಿಗುವ ಹಾಗಾಯಿತು. ಕೊನೆಗೆ ಮೋದಿ ಸುನಾಮಿಯ ಎದುರು ಪ್ರತಿಪಕ್ಷಗಳು ಕೊಚ್ಚಿಕೊಂಡು ಹೋದವು. ಅತ್ತ ನಾಯಕತ್ವವುಯಿಲ್ಲದೆ, ಇತ್ತ ಧ್ಯೇಯೋದ್ದೇಶಗಳು ಇಲ್ಲದ ಪ್ರತಿಪಕ್ಷಗಳು ಮೋದಿಯ ವಿಜಯಕ್ಕೆ ತಲೆ ಬಾಗಲೇ ಬೇಕಾಯಿತು. ಮೋದಿ ಈ ದೇಶದ ಪ್ರಧಾನಮಂತ್ರಿ ಎಂದು ಜನ ಹೇಳುತ್ತಿರುವಾಗ, ” ನಾನು ಈ ದೇಶದ ಪ್ರಧಾನಮಂತ್ರಿಯಲ್ಲ, 125 ಕೋಟಿ ಭಾರತೀಯರ ಪ್ರಧಾನ ಸೇವಕ” ಎಂದ ಮೋದಿಯ ಕೃತಜ್ಞತಾ ಭಾವಕ್ಕೆ ಇಡೀ ದೇಶ ಶರಣೆಂದಿತು. ಮತ್ತಷ್ಟು ಓದು »

11
ಡಿಸೆ

ಬಾರ್ಡರ್-ಗವಾಸ್ಕರ್ ಸರಣಿ : ಅಂದು – ಇಂದು!

– ಸುಜಿತ್ ಕುಮಾರ್

ಸ್ಥಳ : ಕೊಲ್ಕತ್ತಾ. ಮಾರ್ಚ್ 15, 2001.

ಮೊದಲ ಇನ್ನಿಂಗ್ಸ್ :
ಆಸ್ಟ್ರೇಲಿಯ : 445/10
ಭಾರತ : 212/10

ಎರಡನೇ ಇನ್ನಿಂಗ್ಸ್ 😦 ಫಾಲೋ ಆನ್ )
ಭಾರತ : 657/7 (D)
ಆಸ್ಟ್ರೇಲಿಯ : 171/10

556780-vvs-laxman-rahul-dravid-2000-01-1495913138-800ಆ ದಿನದ ಸೂರ್ಯ ಪಶ್ಚಿಮದಲ್ಲಿ ಮರೆಯಾಗುತ್ತಾ ಕ್ರಿಕೆಟ್ ಲೋಕದ ಮಹಾ ಅಚ್ಚರಿಯೊಂದಕ್ಕೆ ಸಾಕ್ಷಿಯಾದನು. ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ಉಳಿದ ಆ ಟೆಸ್ಟ್ ಭಾರತದ ಪಾಲಿಗಂತೂ ವಿಶ್ವಕಪ್ನನ್ನೇ ಗೆದ್ದು ಬೀಗಿದ ಅನುಭವವನ್ನು ನೀಡಿತು. ಅಂದು ಕೋಲ್ಕತ್ತದ ಆಗಸ ರಂಗು ರಂಗಿನ ಪಟಾಕಿಗಳಿಂದ ಶೃಂಗಾರಗೊಳ್ಳುತ್ತಿದ್ದರೆ ಇತ್ತ ಕಡೆ ಇಡೀ ದೇಶವೇ ಹಬ್ಬದ ವಾತಾವರಣವೇನೋ ಎಂಬ ಸಂಭ್ರಮದಲ್ಲಿ ನಲಿಯಿತು. V V S ಲಕ್ಷ್ಮಣ್, ಹರ್ಭಜನ್ ಸಿಂಗ್ ಹಾಗು ರಾಹುಲ್ ದ್ರಾವಿಡ್ ಅಂದು ಖಾನ್, ರೋಷನ್ ಹಾಗು ಬಚ್ಚನ್ ರೆಲ್ಲರನ್ನೂ ಹಿಂದಿಕ್ಕಿ ದೇಶದ ಜನಮಾನಸದಲ್ಲಿ ಹೀರೋಗಳಾಗಿಬಿಟ್ಟರು. ಒಟ್ಟು 557 ರನ್ಗಳು ಹಾಗು 13 ವಿಕೆಟ್ಗಳ ಈ ಮೂವರ ಆಟ ಅಂದು ವಿಶ್ವ ಕ್ರಿಕೆಟ್ನಲ್ಲಿ ಮ್ಯಾಚ್ ಫಿಕ್ಸಿಂಗ್ ಎಂಬ ಸ್ಲೋ ಪಾಯಿಸನ್ನಿಂದ ನೇಪಥ್ಯಕ್ಕೆ ಸೇರುತ್ತಿದ್ದ ಭಾರತೀಯ ಕ್ರಿಕೆಟ್ನ ಪುನರ್ಜನ್ಮಕ್ಕೆ ಕಾರಣವಾಯಿತು. ಹೈಡೆನ್, ಲ್ಯಾಂಗರ್, ಪಾಂಟಿಂಗ್, ವಾ ಬ್ರದರ್ಸ್, ಗಿಲ್ಕ್ರಿಸ್ಟ್, ವಾರ್ನ್, ಗಿಲ್ಲೆಸ್ಪಿ, ಮೆಗ್ರಾತ್ ಎಂಬ ಕ್ರಿಕೆಟ್ ದಂತಕತೆಗಳೇ ತುಂಬಿದ್ದ ತಂಡವೊಂದನ್ನು ಫಾಲೋ ಆನ್ ನ ಹೊರತಾಗಿಯೂ ಸಿನಿಮೀಯ ರೀತಿಯಲ್ಲಿ ಸೋಲಿಸುವುದು ಅಂದಿನ ಕಾಲಕಷ್ಟೆ ಅಲ್ಲದೆ ಇಂದಿಗೂ ಸಹ ಸಾಮಾನ್ಯದ ಮಾತಲ್ಲ. ಮೊದಲ ಟೆಸ್ಟ್ ನಲ್ಲಿ ಸೋತು ಎರಡನೇ ಟೆಸ್ಟನ್ನು ಇಲ್ಲಿ ದಾಖಲೆಯ ಅಂಕಿ ಅಂಶಗಳೊಟ್ಟಿಗೆ ಗೆದ್ದ ಭಾರತ ಅದೇ ಆತ್ಮವಿಶ್ವಾಸದಲ್ಲಿ ಮೂರನೆಯ ಹಾಗು ಅಂತಿಮ ಟೆಸ್ಟನ್ನು ಗೆದ್ದು ಸರಣಿಯನ್ನು ವಶಪಡಿಸಿಕೊಂಡಿತು. ಆ ಮೂಲಕ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಕಾಂಗರೂಗಳ ಮೂರು ದಶಕದ ಕನಸಿಗೆ ತಣ್ಣಿರೆರಚಿತು! ಮತ್ತಷ್ಟು ಓದು »