ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

25
ಡಿಸೆ

ಆಪ್ ಎಂಬ ನೀರಮೇಲಣ ಗುಳ್ಳೆ …

– ಅವಿನಾಶ್ ಹೆಗ್ಡೆ

AAPಒಂದು ರಾಜಕೀಯ ಪಕ್ಷಕ್ಕೆ ಸೈದ್ದಾಂತಿಕ ಹಿನ್ನೆಲೆ ಇಲ್ಲದೆ ಇದ್ದರೆ, ಮತ್ತು ಸ್ಪಷ್ಟ ಗುರಿಯಿಲ್ಲದೆ ಇದ್ದರೆ ಏನಾಗಬಹುದು ಅನ್ನುವುದಕ್ಕೆ ಒಂದು ಸ್ಪಷ್ಟ ಉದಾಹರಣೆ ಆಮ್ ಆದ್ಮಿ ಪಾರ್ಟಿ …. ಆಪ್ ರಾಜಕೀಯಕ್ಕೆ ಪ್ರವೇಶ ಕೊಡುತ್ತೇವೆ ಅಂದಾಗ ಅವರನ್ನ ಗಂಭೀರವಾಗಿ ಪರಿಗಣಿಸಿದವರ ಸಂಖ್ಯೆ ತುಂಬಾ ಕಡಿಮೆ.ಆದರೆ ದೆಹಲಿ ಚುನಾವಣಾ ಆಪ್ ಕಡೆ ದೇಶ ನೋಡುವಂತೆ ಮಾಡಿದ್ದು ಸುಳ್ಳಲ್ಲ ..

ಆದರೆ ಬಂಗಾಳದಲ್ಲಿ ೩೪ ವರ್ಷದ ಸರಕಾರವನ್ನ ಬೇರು ಸಮೇತ ಕಿತ್ತು ಹಾಕಿದ್ದ ಮಮತಾ ಬ್ಯಾನರ್ಜಿಗೆ ಕೂಡ ಕೊಡದ ಪ್ರಚಾರವನ್ನ ಮಾಧ್ಯಮಗಳು ಆಪ್ ಗೆ ಕೊಟ್ಟಿದ್ದವು ಮತ್ತು  ಅದರ ಹಿಂದೆ ಮಾದ್ಯಮಗಳ ಸ್ಪಷ್ಟ ಕಮ್ಯುನಿಸ್ಟ್ ಹಿತಾಸಕ್ತಿ ಇತ್ತು,ಬಿಜೆಪಿಯ ಗೆಲುವನ್ನ ಮರೆಮಾಚುವ ಉದ್ದೇಶ ಸ್ಪಷ್ಟವಾಗಿತ್ತು. ಲೋಕಪಾಲ್ ಚಳುವಳಿಯ ಹೋರಾಟವನ್ನ ಮತ್ತು ಅಣ್ಣ ಹಜಾರೆಯವರನ್ನ ಬಳಸಿಕೊಂಡಿದರ ಬಗ್ಗೆ ಮಾಧ್ಯಮಗಳು ಈ ಸಂದರ್ಭದಲ್ಲಿ ಯಾಕೆ ಕಣ್ಣು ಮುಚ್ಚಿಕೊಂಡವು ಅನ್ನುವುದು ಎಲ್ಲರಿಗು ಗೊತ್ತಿರುವಂತದೆ.ಇರಲಿ …..

ಮತ್ತಷ್ಟು ಓದು »

24
ಡಿಸೆ

ಕೇವಲ ಬ್ರಾಹ್ಮಣರ ಟೀಕೆಗೆ ಮಾತ್ರ ಮೀಸಲೇ ಈ ಪತ್ರಿಕೆ?

– ವಿದ್ಯಾ ಕುಲಕರ್ಣಿ

ಬ್ರಾಹ್ಮಣನವೆಂಬರ್ 18 ನೇ ತಾರೀಖಿನಿಂದ ಇವತ್ತಿನ ವರೆಗೆ ವಾತಾ೯ಭಾರತಿ ಪತ್ರಿಕೆಯಲ್ಲಿನ ಅಂಕಣಗಳನ್ನು ನಾನು ಓದುತ್ತಿದ್ದೇನೆ. ಸುಮಾರು ನಾಲ್ಕೈದು ಅಂಕಣಗಳು ಕಾರಣವಿಲ್ಲದೇ ಬ್ರಾಹ್ಮಣರ ಟೀಕೆಯನ್ನು ಮಾಡಿವೆ. ಯಾಕೆ ಹೀಗೆ ಇವರೆಲ್ಲ ಕಾರಣವಿಲ್ಲದೇ ಬ್ರಾಹ್ಮಣರನ್ನು ಹುರಿದು ಮುಕ್ಕುತ್ತಿದ್ದಾರೆ ? ಮನನೊಂದು ಈ ಲೇಖನ ಬರೆಯುತ್ತಿದ್ದೇನೆ.

ಯಾವ ಲೇಖನಗಳಲ್ಲಿ ಬ್ರಾಹ್ಮಣರನ್ನು ಎಳೆದು ತರುವ ಅವಶ್ಯಕತೆಯೇ ಇಲ್ಲವೋ ಅಲ್ಲೆಲ್ಲ ವಿನಾಕಾರಣ ಬ್ರಾಹ್ಮಣರನ್ನು ಎಳೆದು ತಂದು ಗೂಬೆ ಕೂರಿಸಿದ್ದಾರೆ . ಕೆಳಗಿನ ಉಧಾಹರಣೆಗಳಿಂದ ನೀವಿದನ್ನು ತಿಳಿಯಬಹುದು.

1) ವಿಜಯಾ ಮಹೇಶ್ ಎಂಬುವವರು ‘ ರಾಜ ಕನಕನಾಯಕ ಕನಕದಾಸನಾದ ಕಥೆ’ ಎಂಬ ಅಂಕಣದಲ್ಲಿ ಕನಕದಾಸರ ಕೃತಿಗಳ ಬಗ್ಗೆ ವಿಮಶಾ೯ತ್ಮಕವಾಗಿ ಬರೆಯಬಹುದಿತ್ತು. ಆ ಮೂಲಕ ಕನಕರ ಕೆಲವು ಕೃತಿಗಳ ಬಗ್ಗೆ ಸಾಮಾನ್ಯ ಜನತೆಗೆ ವಿಷಯ ತಿಳಿಯುತ್ತಿತ್ತು. ಹೆಚ್ಚಿನ ಜನ ಕನಕರ ಕೃತಿಯಾದ ‘ರಾಮಧಾನ್ಯ ಚರಿತೆ’ಯನ್ನು ‘ರಾಮಧ್ಯಾನ ಚರಿತೆ’ ಎಂದು ತಪ್ಪಾಗಿ ಓದುತ್ತಾರೆ. ಇನ್ನು ಈ ಕೃತಿಗೆ ಅಷ್ಟಾಗಿ ವಿಮಶೆ೯ ಬಂದಿಲ್ಲವೆಂದು ಓದುಗ ವಲಯದಲ್ಲಿ ಅಪಸ್ವರವಿದೆ. ಈ ಎಲ್ಲವನ್ನು ಲೇಖಕಿ ಈ ಅಂಕಣದಲ್ಲಿ ವಿಮಶಿ೯ಸಬಹುದಿತ್ತು. ಆದರೆ ಇವರು ತಮ್ಮ ಲೇಖನವನ್ನು ಕನಕರ ಕೃತಿ ವಿಮಶೆ೯ಗೆ ಅಥವಾ ಅವರ ಜೀವನ ವಿಮಶೆ೯ಗೆ ಮೀಸಲಿಡದೇ ಕೇವಲ ಬ್ರಾಹ್ಮಣರ ಟೀಕೆಗೆ ಮೀಸಲಾಗಿರಿಸಿದ್ದಾರೆ. ಅವರು ಹೇಳುತ್ತಾರೆ ; ಕೃಷ್ಣದೇವರಾಯನ ಒಂದು ಯುದ್ಧದಲ್ಲಿ ಕನಕರ ಅಪಾರ ಶ್ರಮದಿಂದ ಸೋಲುವ ಹಂತದಲ್ಲಿದ್ದ ರಾಯ ಗೆಲುವು ಸಾಧಿಸಿದನಂತೆ.ಗೆಲುವಿನ ಸುದ್ದಿ ಕೇಳಿದ ವ್ಯಾಸರಾಯರು ಕನಕನನ್ನು ಯಾವುದೇ ರೀತಿಯಿಂದ ಗೌರವಿಸದೇ ಇತ್ತ ಕೃಷ್ಣದೇವರಾಯನೂ ಗೌರವಿಸದೆ ಕನಕರು ಬುದ್ಧಿಭ್ರಮಣರಾದರಂತೆ.

ಮತ್ತಷ್ಟು ಓದು »

19
ಡಿಸೆ

ಭಗವದ್ಗೀತೆಯ ನೈತಿಕ ಜಿಜ್ಞಾಸೆ

– ರಮಾನಂದ ಐನಕೈ

ಭಗವದ್ಗೀತೆಭಗವದ್ಗೀತೆ ಭಾರತೀಯರ ಅತ್ಯಂತ ಪವಿತ್ರವಾದ ಗ್ರಂಥ. ಆದರೆ ಕಳೆದ ಅನೇಕ ವರ್ಷಗಳಿಂದ ಈ ಗ್ರಂಥ ವಿವಾದಕ್ಕೆ ಎಡೆಯಾಗುತ್ತಲಿದೆ. ಭಗವದ್ಗೀತೆಯನ್ನು ಟೀಕಿಸುವ ಬಹುತೇಕ ಜನ ಅದನ್ನು ಓದಿಯೇ ಇಲ್ಲ. ಇನ್ನೂ ಕೆಲವು ಓದಿದವರಿಗೆ ಅದು ಅರ್ಥವೇ ಆಗಿಲ್ಲ. ಅದನ್ನು ಓದಿ ಅರ್ಥಮಾಡಿಕೊಂಡವರಿಗೆ  ಈ ವಿವಾದ ಎಬ್ಬಿಸಿದವರು ಹಾಸ್ಯಾಸ್ಪದರಾಗಿ ಕಾಣುತ್ತಿದ್ದಾರೆ. ಇಷ್ಟೆಲ್ಲ ಗೊಂದಲವಾಗಲು ಮುಖ್ಯ ಕಾರಣವೆಂದರೆ ನಾವು ಭಗವದ್ಗೀತೆಯನ್ನು ಗೃಹಿಸುತ್ತಿರುವ ರೀತಿ. ಭಗವದ್ಗೀತೆಯನ್ನುವುದು ಒಂದು ಕತೆಯಲ್ಲ. ಅಥವಾ ಬೈಬಲ್, ಕುರಾನುಗಳಂತೆ ಧರ್ಮಗ್ರಂಥವಲ್ಲ. ಅದು ಸಾಮಾಜಿಕ ವ್ಯವಸ್ಥೆಯನ್ನು ನಿರ್ದೇಶಿಸಲು ಹುಟ್ಟಿಕೊಂಡ ಸಂವಿಧಾನವೂ ಅಲ್ಲ. ಭಗವದ್ಗೀತೆಯೆಂದರೆ ಬದುಕಿನ ಜಿಜ್ಞಾಸೆ. ಮನುಷ್ಯ ನೆಮ್ಮದಿಯಿಂದ ಬದುಕಲು ದಾರಿತೋರಿಸುವ ಮಾರ್ಗದರ್ಶಿ. ಹೀಗೆ ಅರ್ಥೈಸಿಕೊಂಡಾಗ ಭಗವದ್ಗೀತೆ ಪ್ರತಿಯೊಬ್ಬರಿಗೆ ನೀತಿಪಾಠವಾಗಿ ತೆರೆದುಕೊಳ್ಳುತ್ತದೆ.

ವಸಾಹತುಶಾಹಿ ಆಳ್ವಿಕೆಯ ಜೊತೆಗೇ ಭಗವದ್ಗೀತೆಯನ್ನು ಬೇರೆ ರೀತಿಯಲ್ಲಿ ಅರ್ಥೈಸುವ ಚಿಂತನಾಪರಂಪರೆ ಬೆಳೆದುಬಂತು. ಏಕೆಂದರೆ ಪಾಶ್ಚಾತ್ಯರು ಪ್ರೊಟೆಸ್ಟಾಂಟ್ ವಿಚಾರಧಾರೆಯ ನೆಲೆಯಲ್ಲಿ ಭಗವದ್ಗೀತೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ಹಾಗಾಗಿ ಅವರಿಗೆ ಭಗವದ್ಗೀತೆ ರಿಲಿಜನ್ನಿನ ಜಿಜ್ಞಾಸೆಯಾಯಿತೇ ವಿನಃ ಬದುಕಿನ ಜಿಜ್ಞಾಸೆಯಾಗಿ ಕಾಣಲೇಇಲ್ಲ. ಅದಕ್ಕೆ ಮುಖ್ಯ ಕಾರಣ ಸಾಂಸ್ಕೃತಿಕ ವೈರುದ್ಧ್ಯತೆ. ಇದೇ ಮುಂದೆ ಸೆಕ್ಯುಲರ್ ಚಿಂತನಾ ವಿಧಾನದಲ್ಲೂ ಮುಂದುವರಿಯುತ್ತಾ ಬಂತು. ಇದು ಇಂದು ಆಧುನಿಕ ಭಾರತದಲ್ಲಿ ಭಗವದ್ಗೀತೆಯ ಕುರಿತಾಗಿ ಅಖಾಡವನ್ನೇ ನಿರ್ಮಾಣ ಮಾಡುತ್ತಲಿದೆ. ಹಾಗಾಗಿ ಭಗವದ್ಗೀತೆಯಲ್ಲಿ ಏನಿದೆ ಮತ್ತು ಅದು ಏನು ಹೇಳುತ್ತಲಿದೆ ಎಂಬುದನ್ನು ಈ ಶತಮಾನದ ಭಾಷೆಯಲ್ಲಿ ಅರ್ಥಮಾಡಿಕೊಳ್ಳುವ ಅಗತ್ಯವಿದೆ.

ಮತ್ತಷ್ಟು ಓದು »

18
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೩

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨

ಭಾಗ ೧ ಮತ್ತು ೨ ರಲ್ಲಿ ‘370ನೇ ವಿಧಿಯ ಸಾಂವಿಧಾನಿಕ ಸಿಂಧುತ್ವ’ ಮತ್ತು ‘370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ’ಯ ಬಗ್ಗೆ ಮಾತನಾಡಿದೆವು. ಭಾಗ ೩ ರಲ್ಲಿ ಮುಂದಿನ ಹಾದಿಯ ಬಗ್ಗೆ ಚಿಂತಿಸೋಣ

ಮುಂದಿನ ಹಾದಿ

ಮೇಲೆ ನೀಡಿದ ಎಲ್ಲ ಉದಾಹರಣೆಗಳು ಸಾಬೀತುಪಡಿಸುವುದಿಷ್ಟೇ, ಸಂವಿಧಾನದ 370ನೇ ವಿಧಿ ಪ್ರಜಾಪ್ರಭುತ್ವದ ಆದರ್ಶಗಳು ಮತ್ತು ನಾಗರಿಕತೆ, ಮಾನವ ಹಕ್ಕುಗಳ ಕುರಿತ ಅಂತರಾಷ್ಟ್ರೀಯ ಕಾನೂನುಗಳ ಕಲ್ಪನೆಗಳ ಮೇಲೆ ನಡೆಯತ್ತಿರುವ ಅತಿಯಾದ ಅಣಕ. ಇದು ಭಾರತದ ಜನಸಂಖ್ಯೆ ಗಣನೀಯ ಪ್ರಮಾಣದ ಭಾಗವೊಂದನ್ನು ದ್ವತೀಯ ದರ್ಜೆಯ ಮತ್ತು ನಾಗರಿಕರೇ ಅಲ್ಲದ ಸ್ಥಿತಿಗೆ ಇಳಿಸುತ್ತದೆ. ವಿಪುಲ್ ಕೌಲನ ಪ್ರಕರಣವನ್ನು ಮತ್ತೆ ನೋಡುವುದಾದರೆ, ಅಂದಿನ ಮುಖ್ಯಮಂತ್ರಿ ಗುಲಾಮ್ ನಬೀ ಆಜಾದ್ರ ಕಾರ್ಯದರ್ಶಿ ನೀಡಿದ “ರಾಜ್ಯಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿಯ ಅಡಿಯಲ್ಲಿ ಭಾರತ ಸರ್ಕಾರದ ಗೃಹ ಇಲಾಖೆ ನೀಡುವ ಯಾವುದೇ ಸೂಚನೆಯನ್ನು ಪಾಲಿಸಲು ಜಮ್ಮು ಕಾಶ್ಮೀರ ರಾಜ್ಯ ಸರ್ಕಾರ ಬಾಧ್ಯವಲ್ಲ. ಆದ್ದರಿಂದ ನಿಮ್ಮ ಮಗುವಿನ ವೈದ್ಯಕೀಯ ವೆಚ್ಚವನ್ನು ಪಾವತಿಸಲು ಸಾಧ್ಯವಿಲ್ಲ” ಎನ್ನುವ ನಿರ್ದಯ ಉತ್ತರ ಕೌಲ್ ಕುಟುಂಬದಲ್ಲಿ ಅಣುಮಾತ್ರವಷ್ಟಾದರೂ ಜೀವಂತವಾಗಿದ್ದ ಭರವಸೆಯನ್ನು ತುಂಡರಿಸಿ ಅಡಗಿಸಿತು. ಜಮ್ಮು ಕಾಶ್ಮೀರ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ ಹದಿಮೂರು ವರ್ಷದ ಅದೃಷ್ಟಹೀನ ಬಾಲಕನ ಬವಿಷ್ಯವನ್ನು ಅಂಧಕಾರಕ್ಕೆ ನೂಕಿತು.

ಮತ್ತಷ್ಟು ಓದು »

17
ಡಿಸೆ

ಸಲಿಂಗ ಕಾಮ ಕಾನೂನು ಬಾಹಿರ ಯಾಕೆ?

-ಬಾಲಚಂದ್ರ ಭಟ್

Salinga Kamigaluಸಲಿಂಗ ಕಾಮದ ಬಗ್ಗೆ ಸುಪ್ರೀಮ್ ಕೋರ್ಟ್ ಕೊಟ್ಟ ಬಹಳ ಕಾರಣಗಳಿಗಾಗಿ ಹುಬ್ಬೇರಿಸುವಂತೆ ಮಾಡಿದೆ. ಬಹಳಷ್ಟು ಜನರು ತೀರ್ಪಿನ ಬೆಂಬಲಕ್ಕಿದ್ದರೆ, ಇನ್ನು ಕೆಲವರು ಇದು ಸಲಿಂಗಿಗಳ ಹಕ್ಕು ಚ್ಯುತಿ ಎಂದು ತರ್ಕಿಸುತ್ತಿದ್ದಾರೆ. ಮೂಲತಹ ಸಲಿಂಗ ಕಾಮವೆಂಬುದು ಪೌರಾತ್ಯ, ಹಾಗೂ ಅರಬ್ ದೇಶಗಳಲ್ಲಿ ನಿಷೇಧಕ್ಕೊಳಗಾಗಲು ಮುಖ್ಯ ಕಾರಣ ಅಲ್ಲಿನ ರಿಲಿಜಿಯನ್ ಸಂಸ್ಕೃತಿ. ಮುಸ್ಲೀಮ್ ಕ್ರಿಶ್ಚಿಯನ್ ಮತ್ತಿತರ ಅಬ್ರಾಹಮಿಕ್ ಧರ್ಮಗ್ರಂಥಗಳು ಸಲಿಂಗ ಕಾಮವನ್ನು ಧರ್ಮವಿರೋಧಿ ಎಂದು ಬೋಧಿಸುತ್ತವೆಯಾದ್ದರಿಂದ ಅದನ್ನು ಅಪರಾಧ ಎಂದು ಸ್ವೀಕರಿಸಲಾಗಿತ್ತು. ವೈಜ್ನಾನಿಕ ಎಂದು ಹೇಳಲ್ಪಡುವ ನಾಸ್ತಿಕರ ರಾಜಕೀಯ ಪಕ್ಷ ಕಮ್ಯುನಿಸ್ಮ್ ಕೂಡ ಸಲಿಂಗ ಕಾಮದ ಬಗೆಗೆ ಬೇರೆಯದೆ ನಿರ್ಧಾರವನ್ನು ಹೊಂದಿರಲಿಲ್ಲ. ಬದಲಾಗಿ ರಿಲಿಜಿಯನ್ ಗಳು ಕೊಟ್ಟ ತೀರ್ಪನ್ನೆ ಸಲಿಂಗಿಗಳ ಮೇಲೆ ಹೇರಿತು. ಆದರೆ ಕಾರಣದ ವ್ಯಾಖ್ಯಾನವನ್ನಷ್ಟೆ ಬದಲು ಮಾಡಿತು. ಇದು ‘ಅನಾಗರಿಕ’ ಎಂಬ ಕಾರಣಕ್ಕೆ ಸ್ಟಾಲಿನ್ ನ ರಾಜಕಾರಣದಲ್ಲಿ ಅಪರಾಧವೆಂದು ಪರಿಗಣಿಸಲಾಗಿತ್ತು. (ಅನಾಗರಿಕ ಎಂದು ತೀರ್ಮಾನಿಸುವಲ್ಲಿ ವೈಜ್ನಾನಿಕ ಧೋರಣೆಯೇ ಇಲ್ಲದಿದ್ದದ್ದು ಕಮ್ಯುನಿಸ್ಮ್ ನ ವೈಜ್ನಾನಿಕ ನಿಲುವನ್ನು ಅನುಮಾನಪಡುವಂತಾಗಿದೆ).

ಮತ್ತಷ್ಟು ಓದು »

12
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370Artilce 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ

370ನೇ ವಿಧಿಯ ನಿಂದನೆ ಮತ್ತು ಪ್ರಜ್ಞಾಪೂರ್ವಕ ದುರುಪಯೋಗಗಳ ಮೇಲೆ ಗಮನಹರಿಸಿದರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸಂಭಂಧಿಸಿದಂತೆ ಸಂಘಾತ್ಮಕ ವಿಷಯಗಳ ಯಾದಿಯಲ್ಲಿ 99ರಲ್ಲಿ 6  ಮತ್ತು ಸಹವರ್ತಿ ಪಟ್ಟಿಯ 52ರಲ್ಲಿ 21 ವಿಷಯಗಳು ಇನ್ನೂ ಹೊರಪಟ್ಟಿರುವುದು ಗೋಚರವಾಗುತ್ತದೆ. ಜಮ್ಮು ಕಾಶ್ಮೀರದ ಪ್ರಮಾಣ ವಚನದ ಪಠ್ಯ ಉಳಿದವುಗಿಳಿಗಿಂತ ಭಿನ್ನವಾಗಿದೆ. ರಾಜ್ಯದ ಶಾಸನಸಭೆಯ ಕಾಲಾವಧಿ ಅರು ವರ್ಷ. ಜಮ್ಮು ಕಾಶ್ಮೀರ ರಾಜ್ಯದ ಸಂವಿಧಾನದ ಪ್ರಸ್ತಾವನೆಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಶಬ್ದಗಳಿಗೆ ಜಾಗವಿಲ್ಲ. ಬ್ರಷ್ಟಾಚಾರ ನಿಯಂತ್ರಣ ಕಾಯಿದೆ (Prevention of Corruption) 1988,  ಭಾರತೀಯ ದಂಡಸಂಹಿತೆ (Indian Penal Code), ಗೃಹೀಯ ಹಿಂಸಾ ಕಾಯಿದೆ(Domestic Violence Act), ಧಾರ್ಮಿಕ ಸಂಸ್ಥೆ (ದುರುಪಯೋಗ ನಿಯಂತ್ರಣ) ಕಾಯಿದೆ 1988, ಅರಣ್ಯ ಹಕ್ಕು ಕಾಯಿದೆ,ವನ್ಯಜೀವಿ ಸಂರಕ್ಷಣಾ ಕಾನೂನು, ನಗರ ಭೂ ಮಿತಿ ಕಾನೂನು ಇತ್ಯಾದಿಗಳು ಜಮ್ಮು ಕಾಶ್ಮೀರ ರಾಜ್ಯಕ್ಕೆ ಅನ್ವಯವಾಗುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐನ ಅಧಿಕಾರ ಸೀಮಿತವಾಗಿದೆ, ಅಂದರೆ ಜಮ್ಮು ಕಾಶ್ಮೀರ ರಾಜ್ಯದಲ್ಲಿ ದಾಖಲಾದ ದೂರಿನ ಮೇಲೆ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ. ರಾಜ್ಯಕ್ಕೆ ಸಂಭಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಕಾನೂನು ವ್ಯಾಪ್ತಿ ಅಪೀಲಿಗೆ ಮಾತ್ರ ಸೀಮಿತವಾಗಿದೆ ಮತ್ತು ಫೆಡರಲ್ ಕೋರ್ಟ ಆಗಿ ಕಾರ್ಯನಿರ್ವಹಿಸುವ ಅಧಿಕಾರ ಮೊಟಕುಗೊಂಡಿದೆ.

ಕಡೆಯಪಕ್ಷ ರಾಜ್ಯದ ಜನತೆಗೆ 370ನೇ ವಿಧಿಯು ನಿಜವಾಗಿ ಹಿತಕಾರಿಯಾಗಿದೆಯೇ? ಎನ್ನುವುದನ್ನು ವಿಶ್ಲೇಷಿಸಿದರೆ, ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಜನ ಪ್ರತಿನಿಧಿ ಕಾಯಿದೆ (People representation act 1950) ರಾಜ್ಯಕ್ಕೆ ಅನ್ವಯವಾಗದೇ ಇರುವುದರಿಂದ ಚುನಾವಣಾ ಕ್ಷೇತ್ರಗಳ ಮರುವಿಂಗಡನೆಯನ್ನು ಜಾರಿಗೆ ತರುವ ಯಾವುದೇ ಅಧಿಕಾರ ಕೇಂದ್ರಕ್ಕೆ ಇರುವುದಿಲ್ಲ. 2002ರಲ್ಲಿ ಜಮ್ಮು ಕಾಶ್ಮೀರವನ್ನು ಹೊರತುಪಡಿಸಿ ಇಡೀ ದೇಶದಲ್ಲಿ ಕ್ಷೇತ್ರ ಪುನರ್ವಿಂಗಡನೆಯನ್ನು ಕೈಗೊಳ್ಳಲಾಯಿತು. ಕೆಲವು ಆಯ್ದ ಪ್ರದೇಶಗಳ ಹಿತಾಸಕ್ತಿಗನುಗುಣವಾಗಿ 370ನೇ ವಿಧಿಯ ದುರುಪಯೋಗ ನಡೆದಿದೆ.

ಮತ್ತಷ್ಟು ಓದು »

11
ಡಿಸೆ

ಎಎಪಿ ಗೆಲುವಿನ ಗುಂಗಿನಲ್ಲಿ ‘ಪೊರಕೆ’ ಹಿಡಿಯಲು ಹೊರಟವರು

ರಾಕೇಶ್ ಶೆಟ್ಟಿ

AAPಮಿನಿ ಲೋಕಸಭಾ ಚುನಾವಣೆ ಎಂದೇ ಪರಿಗಣಿತವಾಗಿದ್ದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಸಮೀಕ್ಷೆಯಂತೆಯೇ ೪ ರಾಜ್ಯಗಳಲ್ಲಿ ಬಿಜೆಪಿ ಮತ್ತು ೧ ರಾಜ್ಯದಲ್ಲಿ ಕಾಂಗ್ರೆಸ್ಸ್ ತನ್ನ ಮುದ್ರೆಯೊತ್ತಿದೆ.ಆದರೆ,ಆಮ್ ಆದ್ಮಿ ಪಕ್ಷಕ್ಕೆ ೨೮ ಸ್ಥಾನಗಳನ್ನು ನೀಡುವ ಮೂಲಕ ಅಚ್ಚರಿಯ ಫಲಿತಾಂಶ ನೀಡಿದ್ದು ದೆಹಲಿಯ ಮತದಾರರು.

ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಎಎಪಿ ಪಕ್ಷ ೧೦-೧೫ ಸೀಟು ಪಡೆಯಬಹುದು ಮತ್ತು ಆ ಮೂಲಕ ಸರ್ಕಾರ ರಚಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಹುದು ಅನ್ನುವ ಅಭಿಪ್ರಾಯಗಳೇ ಬಂದಿತ್ತು.ಆದರೆ ಮತದಾರಪ್ರಭು ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷದೆಡೆಗೆ ಹೆಚ್ಚು ಉದಾರಿಯಾಗಿದ್ದಾನೆ.’ರಾಜಕಾರಣಿಗಳೆಲ್ಲ ಭ್ರಷ್ಟರು’ ಅನ್ನುತಿದ್ದ ಕೇಜ್ರಿವಾಲ್ ತಾವೇ ಒಂದು ರಾಜಕೀಯ ಪಕ್ಷ ಸ್ಥಾಪಿಸುತ್ತೇವೆ ಅಂತ ಹೊರಟು ನಿಂತು ಪ್ರಸಕ್ತ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿ ಅದನ್ನು ಕಟ್ಟಿಕೊಳ್ಳುತ್ತ ಹೊರಟಾಗ ಯಾವ ರಾಜಕಾರಣಿಗಳು ಅದನ್ನು ಲೆಕ್ಕಕ್ಕೇ ತೆಗೆದುಕೊಳ್ಳಲಿಲ್ಲ. ದೆಹಲಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸ್ ನಡುವೆ ನೇರಾನೇರ ಹಣಾಹಣಿ ನಡೆಯಲಿದೆ ಅನ್ನುವಷ್ಟು ನಿರ್ಲಕ್ಷ್ಯದಲ್ಲಿದ್ದ ಶೀಲಾ ದಿಕ್ಷೀತ್ ಕೂಡ,ಕೇಜ್ರಿವಾಲ್ ಮುಂದೆ ಸೋತು ಸುಣ್ಣವಾಗಿದ್ದಾರೆ.

ಮತ್ತಷ್ಟು ಓದು »

4
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370ಹದಿಮೂರು ವರ್ಷದ ವಿಪುಲ್ ಕೌಲ್ ಜಮ್ಮು ಕಾಶ್ಮೀರ ರಾಜ್ಯದ ಲೋಕೋಪಯೋಗಿ ಇಲಾಖೆಯ ನಾಲ್ಕನೇ ವರ್ಗದ ನೌಕರರೊಬ್ಬರ ಮಗ. ಹಲವು ವ್ಯಾಧಿಗಳಿಂದ ಬಳಲುತ್ತಿರುವ ವಿಪುಲ ಅವನ ಕುಟುಂಬ ತನ್ನ ಭವಿಷ್ಯವನ್ನೇ ಬಲಿಕೊಟ್ಟು ಕೊಡಿಸುತ್ತಿರುವ ಚಿಕಿತ್ಸೆಯ ಕಾರಣದಿಂದಾಗಿ ಇಂದು ಬದುಕಿದ್ದಾನೆ. 2001ರಲ್ಲಿ ಆತನ ಕುಟುಂಬದವರು ಸಹಾಯಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು, ಅಂತೆಯೇ ಅವರಿಗೆ 20ಲಕ್ಷ ರೂ ಸಹಾಯ ಧನದ ಭರವಸೆಯನ್ನು ನೀಡಲಾಗಿತ್ತು. ಆದರೆ ಸರ್ಕಾರ ಬದಲಾದ ನಂತರ ಸಹಾಯ ನಿಂತುಹೋಯಿತು. ತತ್ಕಾಲಕ್ಕೆ ಗೃಹ ಮಂತ್ರಾಲಯ ಮಧ್ಯಪ್ರವೇಶಿಸಿ ನೆರವನ್ನು ಮುಂದುವರಿಸುವಂತೆ ಸೂಚಿಸಿತು. ಇಷ್ಟಾದ ಮೇಲೂ ಅವರಿಗೆ ದೊರಕಿದ್ದು ದಿ 24 ಜುಲೈ 2007ರ ಒಂದು ಪತ್ರ, ಪತ್ರದ ಒಕ್ಕಣೆಯಲ್ಲಿ “ಸಂವಿಧಾನದ ವಿಧಿ 370ರ ಅನ್ವಯ ಜಮ್ಮು ಕಾಶ್ಮೀರ ಸರ್ಕಾರ ಗೃಹ ಮಂತ್ರಾಲಯದ ಸೂಚನೆಯನ್ನು ಪಾಲಿಸುವ ಬಾಧ್ಯತೆಯನ್ನು ಹೊಂದಿರುವುದಿಲ್ಲ.” ಎಂದು ಉಲ್ಲೇಖಿಸಲಾಗಿತ್ತು !

ಇದೊಂದು 370ನೇ ವಿಧಿಯ ದುರುಪಯೋಗದ ಪ್ರತ್ಯೇಕ ಪ್ರಕರಣವಲ್ಲ. 1950ರಲ್ಲಿ ಸಂವಿಧಾನ ಜಾರಿಗೆ ಬಂದಾಗಿನಿಂದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವ್ಯತಿರಿಕ್ತವಾದ ಸ್ವಾರ್ಥ ಉದ್ಧೇಶಗಳ ಪೂರ್ತಿಗಾಗಿ 370ನೇ ವಿಧಿಯ ನಿಂದನೆ ಮತ್ತು ದುರುಪಯೋಗ ಮತ್ತೆ ಮತ್ತೆ ನಡೆಯಲ್ಪಟ್ಟಿದೆ.

ಆಗಿನ ತುರ್ತು ಸನ್ನಿವೇಶಕ್ಕೆ ಹಂಗಾಮಿ ಏರ್ಪಾಡಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಲಾಗಿತ್ತು. ಜಮ್ಮು ಕಾಶ್ಮೀರದ ಮೇಲೆ ಆಕ್ರಮಣವೆಸಗಿದ್ದ ಪಾಕಿಸ್ತಾನ ರಾಜ್ಯದ ಭೂಭಾಗವನ್ನು ನ್ಯಾಯಬಾಹಿರವಾಗಿ ತನ್ನ ವಶಕ್ಕೆ ತೆಗೆದುಕೊಂಡಿತ್ತು. ವಿಷಯವನ್ನು ವಿಶ್ವಸಂಸ್ಥೆಗೆ ಒಯ್ಯಲಾಗಿ ವಿಶ್ವಸಂಸ್ಥೆಯ ಭದ್ರತಾ ಮಂಢಳಿಯು ಕೆಲವು ಪೂರ್ವಾನ್ವಯ ಷರತ್ತುಗಳೊಂದಿಗೆ ಜನಮತಗಣನೆಯನ್ನು ನಡೆಸುವ ಗೊತ್ತುವಳಿಯನ್ನು ಅಂಗೀಕರಿಸಿತು. ಆ ಷರತ್ತುಗಳೆಂದರೆ ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ತನ್ನ ಸೈನ್ಯವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಮತ್ತು ತಾನು ಸ್ಥಾಪಿಸಿದ ಆಡಳಿತ ವ್ಯವಸ್ಥೆಯನ್ನು ತಗೆದುಹಾಕಬೇಕು. ಹಾಗೆಯೇ ಭಾರತದ ಸಂವಿಧಾನವನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ನಿರಾಕರಿಸಲ್ಪಡುವುದು.

ಮತ್ತಷ್ಟು ಓದು »

2
ಡಿಸೆ

ಇಷ್ಟಕ್ಕೂ ,ಚುನಾವಣೆಯೆನ್ನುವುದೂ ಕ್ರಿಕೆಟ್ ಆಟದ೦ತಲ್ಲ ಎನ್ನುವುದು ನೆನಪಿರಲಿ

– ಗುರುರಾಜ ಕೊಡ್ಕಣಿ,ಯಲ್ಲಾಪುರ

Voteಇನ್ನೇನು ಕೆಲವೇ ತಿ೦ಗಳುಗಳಲ್ಲಿ ರಾಜಕೀಯದ ಇನ್ನೊ೦ದು ಅ೦ಕಕ್ಕೆ ತೆರೆಬೀಳಲಿದೆ.ಚುನಾವಣೆಯೆ೦ಬ ಮತ್ತೊ೦ದು ಮಹಾಪರ್ವಕ್ಕೆ ದೇಶ ಸಜ್ಜಾಗುತ್ತಿದೆ.ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರಕ್ಕೆ ರಣತ೦ತ್ರಗಳನ್ನು ರೂಪಿಸಿವೆ,ಪ್ರಚಾರ ಆರ೦ಭಿಸಿವೆ.ಈ ಬಾರಿ ದೇಶದ ಜನತೆಯೂ ಅಷ್ಟೇ ಉತ್ಸಾಹದಿ೦ದ ಚುನಾವಣೆಯನ್ನು ಎದುರು ನೋಡುತ್ತಿದ್ದಾರೆ.ಸಾಮಾಜಿಕ ತಾಣಗಳಲ್ಲಿ ನೆಚ್ಚಿನ ನಾಯಕರ ಬಗ್ಗೆ ಬಿಸಿ ಬಿಸಿ ಚರ್ಚೆಗಳಾಗುತ್ತಿವೆ,ವಾಗ್ವಾದಗಳಾಗುತ್ತಿವೆ.ದಿನ ಪತ್ರಿಕೆಗಳಲ್ಲಿ ಪು೦ಖಾನುಪು೦ಖವಾಗಿ ಪ್ರತಿಯೊ೦ದು ರಾಜಕೀಯ ಪಕ್ಷದ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಪರ ವಿರೋಧ ಲೇಖನಗಳು ಪ್ರಕಟವಾಗುತ್ತಿವೆ.ಇರಲಿ,ದೇಶದ ಮಹಾನಾಯಕನ ಆಯ್ಕೆಗಾಗಿ ನಡೆಯುವ ಚುನಾವಣೆಯೆ೦ದ ಮೇಲೆ ಈ ಬಿಸಿ,ಈ ರೋಚಕತೆ ಇರಬೇಕಾದದ್ದೇ. ಮತದಾನವೆನ್ನುವುದು ಪ್ರಜೆಗಳ ವೈಯಕ್ತಿಕ ವಿಷಯವೆ೦ಬುದು ಎಲ್ಲರಿಗೂ ಗೊತ್ತಿರುವ ವಿಷಯವೇ.ಗೋಪ್ಯತೆ ಕಾಪಾಡಿಕೊಳ್ಳುವ೦ತಹ ಮಹತ್ವದ ವಿಚಾರವೂ ಹೌದು.ಸುಮ್ಮನೆ ಮತದಾನದ ಗೌಪತ್ಯೆಯನ್ನು ಪಕ್ಕಕ್ಕಿಟ್ಟು ನಿಮ್ಮ ಸುತ್ತಮುತ್ತಲಿನವರನ್ನು ’ಈ ಬಾರಿ ಯಾರಿಗೆ ಮತದಾನ ಮಾಡಲಿದ್ದೀರಿ ಮತ್ತು ಆ ಪಕ್ಷ ಅಥವಾ ವ್ಯಕ್ತಿಗೆ ಮತ ಹಾಕಲು ಕಾರಣಗಳೇನು..’? ಎ೦ದು ಕೇಳಿ ನೋಡಿ.ನಿಮಗೆ ತರಹೇವಾರಿ ಉತ್ತರಗಳು ಸಿಗಬಹುದು.

ಮತ್ತಷ್ಟು ಓದು »

26
ನವೆಂ

ಆಚರಣೆ, ಸಂಪ್ರದಾಯ,ನಂಬಿಕೆ ಮತ್ತು ಕಾಕತಾಳಿಯಗಳು

-ಮು.ಅ ಶ್ರೀರಂಗ,ಬೆಂಗಳೂರು

Indian Tradition N Heritageಒಬ್ಬ ಬ್ರಾಹ್ಮಣನ  ಮನೆಯಲ್ಲಿ ಬೆಕ್ಕೊಂದು ಓಡಾಡಿಕೊಂಡಿತ್ತು. ಹಳೆಯ ಕಾಲದ ಆ ಮನೆಯಲ್ಲಿದ್ದ ಇಲಿ,ಹೆಗ್ಗಣಗಳನ್ನು ತಿಂದುಕೊಂಡು ಅವುಗಳ ಕಾಟ ತಪ್ಪಿಸ್ಸಿದ್ದರಿಂದ ಸಹಜವಾಗಿ ಆ ಬೆಕ್ಕನ್ನು ಕಂಡರೆ ಮನೆಮಂದಿಗೆಲ್ಲಾ ಅಕ್ಕರೆಯಿತ್ತು.ಆ ಕುಟುಂಬದ  ಯಜಮಾನನ ತಂದೆಯದೋ ತಾಯಿಯದೋ  ತಿತಿ ಮಾಡಬೇಕಾದ ದಿನ ಬೆಕ್ಕು ಮನೆಯೊಳಗೆಲ್ಲಾ ಓಡಾಡಿ ಮೈಲಿಗೆ ಮಾಡುವುದು ಸರಿಯಲ್ಲ ಎಂದು ಅದನ್ನು ಮನೆಯ ಕಂಬವೊಂದಕ್ಕೆ ಕಟ್ಟಿಹಾಕಿದರು. ಆ ದಿನದ ಕೆಲಸ, ಊಟ ಎಲ್ಲಾ ಮುಗಿದ ನಂತರ ಆ ಬೆಕ್ಕಿಗೆ ಬಂಧನದಿಂದ ಬಿಡುಗಡೆಯಾಯ್ತು. ಕಾಲ ಕಳೆದಂತೆ ಆ ಮನೆಯ ಯಜಮಾನ ತೀರಿಕೊಂಡ. ಅವನ ಮಕ್ಕಳು ಅಪ್ಪನ ತಿತಿ ಮಾಡುವ ಸಮಯ ಬಂತು. ಆಗ ಮನೆಯಲ್ಲಿ  ಬೆಕ್ಕು ಇರಲಿಲ್ಲ. ಹೀಗಾಗಿ ಅಕ್ಕ ಪಕ್ಕದ ಮನೆಯವರಿಂದ ಕಾಡಿ ಬೇಡಿ ಬೆಕ್ಕೊಂದನ್ನು ತಂದು ಕಂಬಕ್ಕೆ ಕಟ್ಟಿದರು. ಅಂದಿನ ಕೆಲಸ ಮುಗಿದ ನಂತರ ವಾಪಸ್ಸು ಕೊಟ್ಟರು. ಇದು ಹೀಗೆ ಪ್ರತಿ ಸಾರಿ ತಿತಿ ಮಾಡುವಾಗಲೂ ಮುಂದುವರಿಯಿತು.  ಇದೊಂದು ಕಾಲ್ಪನಿಕ ಕಥೆ ಎಂಬುದರಲ್ಲಿ ಸಂದೇಹವಿಲ್ಲ. ಹಾಗೆ ನೋಡಿದರೆ ಐತಿಹಾಸಿಕವಾದುದನ್ನು ಬಿಟ್ಟರೆ ನಾವು ಓದುವ ಕತೆ ಕಾದಂಬರಿಗಳೆಲ್ಲ ಕಾಲ್ಪನಿಕವಾದವುಗಳೇ. ಅದರ  ಬಗ್ಗೆ ಚರ್ಚೆ ಈಗ ಬೇಡ. ಏಕೆಂದರೆ ಈ ಬರಹ ಸಾಹಿತ್ಯಕ್ಕೆ ಸಂಬಧಿಸಿದ್ದಲ್ಲ. ಈ ಬೆಕ್ಕಿನ ಕತೆಯಲ್ಲಿ ನಾವು ತಿಳಿದುಕೊಳ್ಳಬೇಕಾದ ಅಂಶ ಒಂದಿದೆ. ನಾವುಗಳು ಕೆಲವೊಂದು ಆಚರಣೆಗಳಿಗೆ ಇದು ಏಕೆ? ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುವುದಿಲ್ಲ. ಮಕ್ಕಳೇನಾದರು ಕೇಳಿದರೆ “ನೀನೊಬ್ಬ ಅಧಿಕ ಪ್ರಸಂಗಿ, ತಲೆಹರಟೆ”ಎಂದು ಬೈದು ಅವರನ್ನು ಸುಮ್ಮನಾಗಿಸುತ್ತೇವೆ. ತಂದೆ ತಾಯಿಗೆ  ಅಜ್ಜಿ, ತಾತನಿಗೆ ಹೆದರಿದ ಆ ಮಕ್ಕಳು ಸುಮ್ಮನಾಗುತ್ತವೆ. ಅವರು ದೊಡ್ಡವರಾದ ಮೇಲೆ ಹಿಂದಿನವರು ತಮಗೆ  ಮಾಡಿದ್ದನ್ನೇ ತಮ್ಮ ಮಕ್ಕಳಿಗೂ ಮಾಡುತ್ತಾರೆ. ಈ ಕೊಂಡಿಗಳು ಒಂದಕ್ಕೊಂದು ಸೇರಿಕೊಳ್ಳುತ್ತಾಹೋಗಿ ಆಚರಣೆಗಳಾಗಿ,ಸಂಪ್ರದಾಯಗಳಾಗಿ ಮುಂದುವರಿಯುತ್ತವೆ.
ಮತ್ತಷ್ಟು ಓದು »