ನೋಡುವ ‘ದೃಷ್ಟಿ’ ಬದಲಿಸಬಲ್ಲ ‘ನೈನ್ ಲೈಫ್ಸ್’
– ಡಾ.ಅಶೋಕ್ ಕೆ ಆರ್
ಪ್ರವಾಸಕಥನವೆಂದರೆ ಭೇಟಿ ನೀಡಿದ ತಾಣಗಳ ಮಾಹಿತಿ, ಆ ಜಾಗಕ್ಕೆ ಹೋಗಲಿರುವ ಸಾರಿಗೆ ವ್ಯವಸ್ಥೆಯ ಬಗೆಗಿನ ಮಾಹಿತಿ, ಅಲ್ಲಿ ಸಿಗುವ ವಿಧವಿಧದ ಭೋಜನಗಳ ಮಾಹಿತಿ, ಅಬ್ಬಬ್ಬಾ ಎಂದರೆ ಆ ಸ್ಥಳದ ಪೂರ್ವೇತಿಹಾಸದ ಮಾಹಿತಿ – ಇವು ಸಿದ್ಧರೂಪದ ಬಹುತೇಕ ಪ್ರವಾಸಕಥನಗಳ ಹೂರಣ. ಈ ಸಿದ್ಧ ರೂಪವನ್ನು ಹೊರತುಪಡಿಸಿದ ಪ್ರವಾಸಕಥನಗಳೂ ಉಂಟು, ಅವು ಆತ್ಮರತಿಯೊಡನೆ ತಮ್ಮದೇ ಸ್ವಂತ ಸಂಗತಿಗಳನ್ನು, ಸಣ್ಣಪುಟ್ಟ ಸಮಸ್ಯೆಗಳನ್ನು ವೈಭವೀಕರಿಸಿಕೊಂಡು ಬರೆಯಲ್ಪಟ್ಟ ಹೆಸರಿಗಷ್ಟೇ ಪ್ರವಾಸಕಥನವೆನ್ನಿಸಿಕೊಳ್ಳುವ ಬರವಣಿಗೆಗಳು. ಇವೆಲ್ಲ ರೀತಿಯ ಪ್ರವಾಸಕಥನಗಳು ನಾಚುವಂತೆ ಇರುವ ಪುಸ್ತಕ “ನೈನ್ ಲೈಫ್ಸ್” (Nine Lives). ಪ್ರಕೃತಿ ಸೌಂದರ್ಯದ ವರ್ಣನೆ, ಸ್ಥಳಪುರಾಣದ ಜೊತೆಜೊತೆಗೆ ಆಯ್ದ ಒಂಭತ್ತು ಜನರ ಮತ್ತವರ ಸುತ್ತಲಿನವರ ಕಥೆಯಿದೆ. ಪ್ರಾಚೀನ ಭಾರತದಿಂದ ಇಂದಿನವರೆಗೂ ಸಾಗಿ ಬಂದಿರುವ ‘ವೃತ್ತಿ’ಯಲ್ಲಿ ಕಾಲ ಸರಿದಂತೆ ಆದ ಬದಲಾವಣೆಗಳಿವೆ. ತನ್ನ ಇಪ್ಪತ್ತೈದು ವರುಷಗಳ ಭಾರತದ ಪ್ರವಾಸದಲ್ಲಿ ಭಾರತದ ಸಾಂಸ್ಕೃತಿಕ – ಬಹಿಷ್ಕೃತ ಲೋಕದರ್ಶನ ಮಾಡಿಸುವವನು ವಿಲಿಯಂ ಡ್ಯಾಲ್ರಿಂಪಲ್ (William Dalrymple) ಎಂಬ ಸ್ಕಾಟಿಷ್ ಲೇಖಕ! ಭಾರತೀಯನಾಗದೇ ಹೋದ ಕಾರಣಕ್ಕೆ ಇಂಥದೊಂದು ಒಳನೋಟ ಈ ಲೇಖಕನಿಗೆ ಲಭ್ಯವಾಯಿತಾ? ಒಳಗಿದ್ದು ನೋಡುವವರ ಭಾವಪರಿಧಿಗೆ ದಕ್ಕದ ವಿಷಯಗಳು ಹೊರಗಿನಿಂದ ನೋಡುವವರಿಗೆ ದಕ್ಕುತ್ತದೆ.
ಜೈನ ಧರ್ಮದ ಸನ್ಯಾಸಿನಿ, ಕಣ್ಣೂರಿನ ನೃತ್ಯಪಟು, ಕರ್ನಾಟಕದ ದೇವದಾಸಿಯರು, ಸಾವಿರಾರು ಪುಟದ ಗೀತೆಗಳನ್ನು ಹಾಡುವ ಅನಕ್ಷರಸ್ಥರು, ಸೂಫಿ ಪಂತದ ಹೆಂಗಸು, ಟಿಬೆಟ್ಟಿನಿಂದ ಭಾರತಕ್ಕೆ ವಲಸೆ ಬಂದ ಬೌದ್ಧ ಬಿಕ್ಕು, ಚೋಳರ ಕಾಲದ ಶೈಲಿಯ ಕೆತ್ತುವ ಶಿಲ್ಪಿ, ಮಾಟಗಾತಿ, ಕುರುಡು ಹಾಡುಗಾರ – ಇವಿಷ್ಟು ನೈನ್ ಲೈಫ್ಸ್ ಪುಸ್ತಕದಲ್ಲಿ ಲೇಖಕ ನಮ್ಮೊಡನೆ ಮುಖಾಮುಖಿಯಾಗಿಸುವ ವ್ಯಕ್ತಿಗಳು. ಓದುಗರೊಡನೆ ಮುಖಾಮುಖಿಯಾಗುವುದು ಕೇವಲ ವ್ಯಕ್ತಿ ಮಾತ್ರವಲ್ಲ; ಆ ವ್ಯಕ್ತಿಯ ವ್ಯಕ್ತಿತ್ವ, ಅವರ ಮನೆಯವರ ತಲ್ಲಣ – ಸಂತಸ, ಆ ವ್ಯಕ್ತಿಯ ಸಾಮಾಜಿಕ ಆರ್ಥಿಕ ಸ್ಥಿತಿ – ಸಮಸ್ಯೆ, ಹೀಗೆ ಒಬ್ಬ ವ್ಯಕ್ತಿಯ ಬಗ್ಗೆ ತಿಳಿಸುತ್ತೇನೆಂದು ಹೇಳುವ ಲೇಖಕ ಆ ವ್ಯಕ್ತಿಯ ಮೂಲಕ ಒಂದಿಡೀ ಪ್ರಾದೇಶಿಕತೆಯ ವಿವರವನ್ನು ಧರ್ಮ – ಧರ್ಮಗಳ ನಡುವಿನ ತಿಕ್ಕಾಟ – ಸಾಮರಸ್ಯಗಳನ್ನು ಸುಲಲಿತ ಓದಿನ ಮೂಲಕ ಮನಸ್ಸಿಗೆ ತಲುಪಿಸುತ್ತಾರೆ. ಹೊರಗಣನವನಾದ ಕಾರಣಕ್ಕೋ ಏನೋ ಯಾವೊಂದು ಪೂರ್ವಾಗ್ರಹವೂ ಇಲ್ಲದೆ ಕಂಡದ್ದನ್ನು ಕೇಳಿದ್ದನ್ನು ಯಥಾವತ್ತಾಗಿ ಬರೆದಿರುವ ಪ್ರಯತ್ನವನ್ನೂ ಗಮನಿಸಬಹುದು.
ಧರ್ಮವನ್ನು ಅಫೀಮು ಎಂದವರಿಂದ ಮತ್ತೇನು ನಿರೀಕ್ಷಿಸಲಾದೀತು?
– ನರೇಂದ್ರ ಕುಮಾರ ಎಸ್.ಎಸ್
ತೆಹಲ್ಕಾ’ದ ತರುಣ್ ತೇಜಪಾಲ್ ಅವರು ನಡೆಸಿರುವರೆನ್ನಲಾದ ಲೈಂಗಿಕ ಹಲ್ಲೆ ಪ್ರಕರಣ, ಮಾಧ್ಯಮದ ಮುಖವಾಡವನ್ನು ಕಿತ್ತೆಸೆದಿದೆ. ಇದೇ ’ತೆಹಲ್ಕಾ’ವು, ಆಗಾಗ “ಕುಟುಕು ಕಾರ್ಯಾಚರಣೆ”ಯ ಮೂಲಕ ರಾಜಕಾರಣಿಗಳನ್ನು ಸಿಕ್ಕಿಹಾಕಿಸುತ್ತಿತ್ತು. ಒಂದು ಗುಪ್ತ ಕ್ಯಾಮೆರಾ ಜೊತೆಗೆ ತೆರಳುವ ಈ “ಕುಟುಕು ಕಾರ್ಯಾಚರಣೆ ಪಡೆ”, ರಾಜಕಾರಣಿಗಳಿಗೆ ತಿಳಿಯದಂತೆ ಬಲೆ ಬೀಸುತ್ತಿತ್ತು. ಅವರಿಗೆ ಆಮಿಷವನ್ನು ತೋರಿಸಿ, ಆಗ ನಡೆಯುವ ಪೂರ್ಣ ಸಂಭಾಷಣೆಯನ್ನು ಕ್ಯಾಮೆರಾ ಮೂಲಕ ಸೆರೆಹಿಡಿದು, ಆ ನಂತರ ವಿಡಿಯೋವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿತ್ತು. ಆ ವಿಡಿಯೋ ನೋಡಿದ ಜನ, ಅದರಲ್ಲಿರುವ ರಾಜಕಾರಣಿ ಭ್ರಷ್ಟಾಚಾರಿಯೇ ಎಂದು ನಿರ್ಧಾರಕ್ಕೆ ಬರುವ ರೀತಿಯಲ್ಲಿ ಅದನ್ನು ಪ್ರಸ್ತುತ ಪಡಿಸಲಾಗುತ್ತಿತ್ತು. ನ್ಯಾಯಾಂಗ ವಿಚಾರಣೆಯ ಬದಲು ಮಾಧ್ಯಮಗಳೇ ವಿಚಾರಣೆ ನಡೆಸಿ, ರಾಜಕಾರಣಿಯನ್ನು ತಪ್ಪಿತಸ್ಥ ಎಂದು ಘೋಷಿಸಲಾಗಿಬಿಡುತ್ತಿತ್ತು.
ವ್ಯಕ್ತಿಯೊಬ್ಬ ಭ್ರಷ್ಟಾಚಾರಿ ಅಲ್ಲದಿದ್ದರೂ, ಆಮಿಷಕ್ಕೊಳಗಾಗಿ ಕೆಲವು ತಪ್ಪುಗಳನ್ನು ಮಾಡುವನು. ಉದಾಹರಣೆಗೆ, ಮನೆಗೆಲಸಕ್ಕೆ ಬರುವ ಹುಡುಗ/ಹುಡುಗಿ ಕಳ್ಳರಾಗಿರುವುದಿಲ್ಲ. ಅವರು ಕಷ್ಟಪಟ್ಟು ಕೆಲಸ ಮಾಡಿ ಸಂಪಾದಿಸುವ ಉದ್ದೇಶ ಹೊಂದಿಯೇ ಕೆಲಸಕ್ಕೆ ಬಂದಿರುತ್ತಾರೆ. ಆದರೆ, ಅವರು ಕೆಲಸ ಮಾಡುವ ಮನೆಯಲ್ಲಿ, ಈ ಹುಡುಗ/ಹುಡುಗಿಯ ಕಣ್ಣಿಗೆ ಕಾಣಿಸುವಂತೆ ಹಣವನ್ನೋ ಇಲ್ಲವೇ ಆಭರಣಗಳನ್ನೋ ಇಟ್ಟಿದ್ದರೆ, ಅವರು ಆಮಿಷಕ್ಕೆ ಒಳಗಾಗಿಬಿಡುತ್ತಾರೆ. ಅಲ್ಲಿ ಇಟ್ಟಿರುವ ಹಣ/ಆಭರಣವನ್ನು ಯಾರೂ ಗಮನಿಸುತ್ತಿಲ್ಲವೆಂದು ತಿಳಿದಾಗ, ಅದನ್ನು ತೆಗೆದುಕೊಳ್ಳೋಣ ಎಂದೆನ್ನಿಸಿಬಿಡಬಹುದು. ಆಮಿಷದಿಂದ ಉಂಟಾದ ಆಸೆಯಿಂದ ತಪ್ಪಿಸಿಕೊಳ್ಳಲಾಗದೆ “ಕಳ್ಳತನ” ನಡೆದುಬಿಡುತ್ತದೆ. ಇಲ್ಲಿ ಕಳ್ಳತನ ಮಾಡಿದ ಹುಡುಗ/ಹುಡುಗಿಯದು ಎಷ್ಟು ತಪ್ಪೋ, ಅಷ್ಟೇ ತಪ್ಪು ಆ ಹಣ/ಆಭರಣಗಳನ್ನು ಇವರ ಕಣ್ಣಿಗೆ ಕಾಣುವಂತೆ ಇಟ್ಟು ಆಮಿಷ ಕೊಟ್ಟವರದೂ ಆಗಿರುತ್ತದೆ, ಅಲ್ಲವೆ?
ಗಾ೦ಧಿ ಹ೦ತಕ ಗೋಡ್ಸೆ ಮತ್ತು ಆರ್.ಎಸ್.ಎಸ್ ಎನ್ನುವ ಭಯೋತ್ಪಾಧಕ ಸ೦ಘಟನೆ ..!!!
– ಗುರುರಾಜ್ ಕೊಡ್ಕಣಿ
ಆತ ಹೇಳುತ್ತಲೇ ಹೋದ .’ನೀವು ಏನೇ ಹೇಳಿ ಸರ್,ಆರ್.ಎಸ್.ಎಸ್ ಕೂಡಾ ಒ೦ದು ರೀತಿಯ ಭಯೋತ್ಪಾದನಾ ಸ೦ಘಟನೆಯೇ,ಅ೦ಥ ಮಹಾನ ವ್ಯಕ್ತಿ ಗಾ೦ಧಿಯನ್ನು ಕೊ೦ದನಲ್ಲ ಆ ಬೋಳಿ ಮಗ ಗೋಡ್ಸೆ,ಅವನು ಆರ್.ಎಸ್.ಎಸ್ ನವನೇ.ಅ೦ದಮೇಲೆ ಅದು ಭಯೋತ್ಪಾದನಾ ಸ೦ಘಟನೆಯಲ್ಲದೇ ಮತ್ತೇನು’ ಎ೦ದ.ಆತ ನನಗೆ ಪರಿಚಿತ.ಇದುವರೆಗೂ ಆತ ಇತಿಹಾಸವನ್ನು ವಿಷಯವಾಗಿಯೋ ಅಥವಾ ಅಸಕ್ತಿಗಾಗಿಯೋ ಓದಿಕೊ೦ಡವನಲ್ಲ. ಕನಿಷ್ಟ ಪಕ್ಷ ಆತ ಒ೦ದೇ ಒ೦ದು ಕಾದ೦ಬರಿಯನ್ನು ಕೂಡಾ ಓದಿದ್ದನ್ನು ನಾನು ನೋಡಿಲ್ಲ. ಆತನಿಗೆ ’ಆರ್.ಎಸ್.ಎಸ್’ನ ವಿಸ್ತೃತ ರೂಪವಾದರೂ ತಿಳಿದಿದಿಯೋ ನನಗೆ ಅನುಮಾನ.ಕಾ೦ಗ್ರೆಸ್ಸಿನಲ್ಲಿ ಪುಢಾರಿಯಾಗಿರುವ ಆತನ ದೂರದ ಸ೦ಬ೦ಧಿಯೊಬ್ಬನ ಮಾತುಗಳನ್ನು ಕೇಳಿ ಬ೦ದಿದ್ದ.ಅದನ್ನೇ ನನ್ನ ಮು೦ದೇ ಒದರುತ್ತಿದ್ದ.ಇನ್ನು ಈತನಿಗೆ ಆರ್.ಎಸ್.ಎಸ್.ನ ಧೋರಣೆಗಳು,ಗಾ೦ಧಿ ಹತ್ಯೆಯ ಹಿನ್ನಲೆ ಇವುಗಳನ್ನು ವಿವರಿಸುವುದು ನನ್ನಿ೦ದಾಗದ ಕೆಲಸವೆ೦ದೆನಿಸಿ ’ಬರ್ತಿನಿ’ ಎ೦ದಷ್ಟೇ ಹೇಳಿ ಅಲ್ಲಿ೦ದ ಹೊರಟೆ.
ಆದರೆ ಅವನ ಮಾತಿನಲ್ಲಿನ ಎರಡು ಅ೦ಶಗಳು ನನ್ನನ್ನು ಯೋಚಿಸುವ೦ತೇ ಮಾಡಿದವು. ಅವನ೦ತೇ ಅಲೋಚಿಸುವ ಅನೇಕ ವಿದ್ಯಾವ೦ತರನ್ನು,ಜಾತ್ಯಾತೀತವಾದಿಗಳನ್ನು ನಾನು ನೊಡಿದ್ದೇನೆ.ಗೋಡ್ಸೆ ಗಾ೦ಧಿಯನ್ನು ಹತ್ಯೆಗೈದ ಎನ್ನುವುದೇನೋ ಸರಿ, ಆದರೆ ಆರ್.ಎಸ್.ಎಸ್ ಭಯೋತ್ಪಾಧನಾ ಸ೦ಘಟನೆಯಾಗಿದ್ದು ಯಾವಾಗ..? ಗೊಡ್ಸೆ ಕೆಲಕಾಲ ಆರ್.ಎಸ್.ಎಸ್ ನ ಸದಸ್ಯನಾಗಿದ್ದ ಎ೦ಬುದನ್ನೂ ಒಪ್ಪಿಕೊಳ್ಳೋಣ.ಅ೦ದ ಮಾತ್ರಕ್ಕೆ ಅರ್.ಎಸ್.ಎಸ್ ಭಯೋತ್ಪಾದನಾ ಸ೦ಘಟನೆಯಾಗಿಬಿಡಬೇಕೇ..? ಇದನ್ನು ಮೂರ್ಖರ ಆಲೋಚನಾ ಧಾಟಿಯೆನ್ನದೇ ಬೇರೆ ವಿಧಿಯಿಲ್ಲ.ಗೋಡ್ಸೆಯ ಗಾ೦ಧಿ ಹತ್ಯೆಯನ್ನೇ ಮಾನದ೦ಡವಾಗಿಟ್ಟುಕೊ೦ಡು ಆರ್.ಎಸ್.ಎಸ್ ಅನ್ನು ಭಯೋತ್ಪಾದಕ ಸ೦ಘಟನೆ ಎ೦ದು ಹೆಸರಿಸಬಹುದಾದರೇ,ಇ೦ದಿರಾ ಗಾ೦ಧಿಯವರ ಹತ್ಯೆಗೈದವನು ಸಿಖ್ಖ ಎ೦ಬ ಕಾರಣಕ್ಕೆ ಸಿಖ್ಖರೆಲ್ಲರೂ ಕೊಲೆಗಾರರು ಎನ್ನವುದು ಮೂರ್ಖತನವೆನಿಸುವುದಿಲ್ಲವೇ..? ಅಥವಾ ಇ೦ದಿರಮ್ಮನ ಹತ್ಯೆಯ ನ೦ತರ ಸಾವಿರಾರು ಸಿಖ್ಖರ ನರಮೇಧಕ್ಕೆ ಕಾರಣವಾಯಿತಲ್ಲ ಕಾ೦ಗ್ರೆಸ್ ಅದನ್ನು ’ಸಿಖ್ಖ ವಿರೋಧಿ ಪಕ್ಷ’ ಎ೦ದು ಕರೆಯಬಹುದೇ..?
ಚಾಚಾ… Oh My God… !!!
– ಅಶ್ವಿನ್ ಅಮೀನ್
ನವೆಂಬರ್ 14. ನೆಹರೂ ಜನ್ಮ ದಿನ. ನಾವು ಶಾಲಾ ದಿನಗಳಲ್ಲಿರುವಾಗ ನಮಗೆಲ್ಲ ಖುಷಿಯ ದಿನ.. ಕಾರಣ ಅಂದು ನಮ್ಮ ದಿನ.. ಮಕ್ಕಳ ದಿನ.. ಮನೋರಂಜನಾ ಕಾರ್ಯಕ್ರಮಗಳು, ಆಟೋಟ, ಸಿಹಿ ತಿಂಡಿ, ಅರ್ಧ ದಿವಸ ರಜಾ ಬೇರೆ.. !! ಆಹಾ ಮಕ್ಕಳಿಗೆ ಅದೇ ಚಂದ.. ಅಂದು ನಾವೆಲ್ಲಾ ‘ಚಾಚಾ…’ ಎನ್ನುತ್ತಾ ಶಿಕ್ಷಕರು ಕೊಟ್ಟ ಸಿಹಿ ತಿನ್ನುತ್ತಾ ಖುಷಿಪಡುತ್ತಿದ್ದೆವು.
ಆದರೆ…
ಆ ಸಿಹಿ ತಿನ್ನುತ್ತಿದ್ದ ಬಾಯಿ ಯಾಕೋ ಇಂದು ಕಹಿಯೆನಿಸುತ್ತಿದೆ.ಮತ್ತೆ ‘ಚಾಚಾ…’ ಎಂದು ಕೂಗಲು ಮನಸ್ಸೇ ಬರುತ್ತಿಲ್ಲ. ನೆಹರೂ ಹೆಸರು ಕೇಳಿದರೇನೇ ಏನೋ ಒಂದು ಆಕ್ರೋಶ, ಅಸಹ್ಯತನ…!ಅಂತಹ ಒಬ್ಬ ದುರ್ಬಲ ಪ್ರಧಾನಿಯನ್ನು ಭಾರತ ಹೊಂದಿತ್ತಾ ಎಂಬ ಬಗ್ಗೆ ಅನುಮಾನ.ಖಂಡಿತಾ ನಾನು ಬದಲಾಗಿಲ್ಲ.ನಾನು ಈಗಲೂ ಅದೇ ದೇಶ ಪ್ರೇಮಿ.ಆದರೆ ನನ್ನ ಜ್ಞಾನ ಬದಲಾಯಿತು.ನನ್ನ ಮುಂದಿದ್ದ ಸುಳ್ಳಿನ ಇತಿಹಾಸ ಕರಗುತ್ತಾ ಹೋದಂತೆ ನೆಹರೂ ಬಗೆಗಿನ ತೆರೆಮರೆಯ ರಹಸ್ಯಗಳು ಒಂದೊಂದಾಗಿ ಗೋಚರಿಸತೊಡಗಿದವು.ಆ ತೆರೆಯ ಹಿಂದೆ ಕಂಡದ್ದೆಲ್ಲ ಸ್ವಾರ್ಥದ,ನಾಚಿಕೆಗೇಡಿನ,ಅಸಹ್ಯಕರ,ಹೇಡಿ ಹಾಗೂ ಮೂರ್ಖತನದ ಪರಮಾವಧಿ…!
ಕಾಂಗ್ರೆಸ್ಸಿನ ಆಗಿನ ಅಧ್ಯಕ್ಷ ಮೋತಿಲಾಲರು ತನ್ನ ಮಗ ನೆಹರೂರವರನ್ನು ತನ್ನ ನಂತರ ಕಾಂಗ್ರೆಸ್ಸ್ ಅಧ್ಯಕ್ಷ ಪಟ್ಟಕ್ಕೇರಿಸಲು ಗಾಂಧೀಯ ಬೆನ್ನು ಬಿದ್ದಿದ್ದ ಕಾಲವದು.ಹಲವು ವರ್ಷಗಳ ಒತ್ತಡದ ನಂತರ ಗಾಂಧೀ ಮೊತಿಲಾಲರ ಹಠಕ್ಕೆ ಬಗ್ಗಲೇಬೇಕಾಯಿತು. ಉಕ್ಕಿನ ಮನುಷ್ಯ ವಲ್ಲಭ ಭಾಯಿ ಪಟೇಲರಿಗೆ ಬಹುಮತ ಇದ್ದ ಹೊರತಾಗಿಯೂ ಪಟೇಲ್ ಅವರನ್ನು ತಣ್ಣಗಾಗಿಸಿ ನೆಹರೂರವರನ್ನು ಕಾಂಗ್ರೆಸ್ಸ್ ಅಧ್ಯಕ್ಷ ಗಾದಿಯಲ್ಲಿ ಕೂರಿಸಿಯೇ ಬಿಟ್ಟರು.
ಮತಾಂಧ ಭಯೋತ್ಪಾದಕರೊಡನೆ ವೇದಿಕೆ ಹಂಚಿಕೊಂಡರೂ ಇವರು “ಜಾತ್ಯಾತೀತ”ರೇ!!
– ನರೇಂದ್ರ ಕುಮಾರ್
ಮುಲ್ಲಾ ಅಬ್ದುಲ್ ಸಲಾಂ ಜ಼ಯೀಫ಼್ ಎನ್ನುವ ಹೆಸರು ಭಾರತದಲ್ಲಿ ಹೆಚ್ಚಿನ ಜನರಿಗೆ ತಿಳಿದಿರಲಾರದು. 1990ರ ದಶಕದಲ್ಲಿ ಆಫ಼್ಘಾನಿಸ್ತಾನದಲ್ಲಿ ತಾಲಿಬಾನ್ ಸ್ಥಾಪನೆಯಾಯಿತು. ಆಫ಼್ಘಾನಿಸ್ತಾನ ಮತ್ತು ಪಾಕಿಸ್ತಾನಗಳಲ್ಲಿ ತಾಲಿಬಾನ್ ನಡೆಸಿರುವ ಮತಾಂಧ ಕೆಲಸಗಳು ಜಗತ್ಪ್ರಸಿದ್ಧ. ಆಫ಼್ಘಾನಿಸ್ತಾನದ ಹಜ಼ರತ್ ಪ್ರದೇಶದಲ್ಲಿರುವ ಬಾಮ್ವಾಮ್ ಕಣಿವೆಯಲ್ಲಿದ್ದ ೬ನೇ ಶತಮಾನದ ಬೃಹತ್ ಬುದ್ಧ ಭಗವಾನನ ಪ್ರತಿಮೆಗಳನ್ನು 2001ರಲ್ಲಿ ಭಗ್ನಗೊಳಿಸಿದಾಗ, ತಾಲಿಬಾನ್ ಹೆಸರು ಜಗತ್ತಿನಲ್ಲೆಲ್ಲಾ ಪ್ರಸಿದ್ಧವಾಯಿತು. ಜಗತ್ತಿನೆಲ್ಲೆಡೆಯಿಂದ ಬುದ್ಧನ ಪ್ರತಿಮೆಗಳನ್ನು ಹಾಳುಗೆಡವಿದ ಕಾರ್ಯವನ್ನು ಖಂಡಿಸಲಾಯಿತು. ಆದರೆ, ತಾಲಿಬಾನ್ ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳಲಿಲ್ಲ. ಮೇಲೆ ಹೇಳಿದ “ಮುಲ್ಲಾ ಅಬ್ದುಲ್ ಸಲಾಂ ಜ಼ಯೀಫ಼್” ಎನ್ನುವವರು ಈ ತಾಲಿಬಾನ್ನ ಸಂಸ್ಥಾಪಕರಲ್ಲಿ ಒಬ್ಬರು. ತಾಲಿಬಾನ್ ಸಂಸ್ಥಾಪನೆ ಮಾಡಿದ ಮುಲ್ಲ ಮೊಹಮ್ಮದ್ ಓಮರ್ ಹೆಸರು ಸ್ವಲ್ಪಮಟ್ಟಿಗೆ ಎಲ್ಲರಿಗೂ ತಿಳಿದಿರುತ್ತದೆ. ಈ ಮುಲ್ಲಾ ಅಬ್ದುಲ್ ಸಲಾಮ್ ಜ಼ಯೀಫ಼್, ಮುಲ್ಲಾ ಓಮರ್^ನ ಬಲಗೈ ಭಂಟನಾಗಿದ್ದ. 2001ರಲ್ಲಿ ಅಮೆರಿಕಾದಲ್ಲಿ ಭಯೋತ್ಪಾದಕ ಕೃತ್ಯ ನಡೆಸಿದ ನಂತರದಲ್ಲಿ, ಒಸಾಮಾ ಬಿನ್ ಲಾಡೆನ್ನಿಗೆ ಆಫ್ಘಾನಿಸ್ತಾನದಲ್ಲಿ ಆಶ್ರಯ ಒದಗಿಸಿದವರು ಇವರೇ!
ರಾಹುಲ್ ಗಾ೦ಧಿ ,ಬೆ೦ಗಳೂರು ರಾಜ್ಯ ಮತ್ತು ಕನ್ನಡ
– ಗುರುರಾಜ ಕೊಡ್ಕಣಿ,ಯಲ್ಲಾಪುರ
’ಕರ್ನಾಟಕ ಮತ್ತು ಬೆ೦ಗಳೂರಿಗೆ ಜನ ಉದ್ಯೋಗ ಅರಸಿ ಹೋಗುತ್ತಾರೆ,ಏಕೆ೦ದರೆ ಇವೆರಡೂ ಕಾ೦ಗ್ರೆಸ್ ಆಡಳಿತವಿರುವ ರಾಜ್ಯಗಳು ’ ಎ೦ದು ಹೇಳಿಕೆ ನೀಡಿದ್ದರೆ೦ಬ ಕಾರಣಕ್ಕೇ ದೇಶದ ಅತೀ ದೊಡ್ಡ ರಾಜಕೀಯ ಪಕ್ಷದ ನಾಯಕ ರಾಹುಲ್ ಗಾ೦ಧಿ ಅಪಹಾಸ್ಯಕ್ಕೀಡಾಗಿದ್ದರು.ಆದರೆ ನಿಜಕ್ಕೂ ಅವರು ಹಾಗೆ ಹೇಳಿದ್ದರಾ ಎನ್ನುವುದರ ಬಗ್ಗೆ ಅನೇಕ ಅನುಮಾನಗಳಿವೆ. ಒ೦ದು ವೇಳೆ ಅವರು ಹಾಗೆ ಹೇಳಿದ್ದೇ ಹೌದಾದಲ್ಲಿ ರಾಜ್ಯದ ರಾಜಧಾನಿಯ ಬಗ್ಗೆಯೇ ಯುವನಾಯಕನಿಗೆ ತಿಳಿಯದಿರುವುದು ಅತ್ಯ೦ತ ಖೇದಕರ. ರಾಹುಲ್ ಗಾ೦ಧಿ ಹೇಳಿದ್ದಾರಾ ,ಇಲ್ಲವಾ ಎನ್ನುವುದನ್ನು ಪಕ್ಕಕ್ಕಿಟ್ಟು ಮೇಲಿನ ಮಾತನ್ನು ಒಮ್ಮೆ ಗ೦ಭೀರವಾಗಿ ಪರಾಮರ್ಶಿಸಬೇಕಾದ ಪರಿಸ್ಥಿತಿ ಇ೦ದು ಕನ್ನಡಿಗರಿಗಿದೆ ಎನ್ನುವುದೂ ಸತ್ಯವೇ. ಇ೦ದಿಗೂ ಅನೇಕ ಉತ್ತರ ಭಾರತೀಯರಿಗೆ ಬೆ೦ಗಳೂರು ಕರ್ನಾಟಕಕ್ಕೆ ಸೇರಿದುದು ಎ೦ಬುದು ತಿಳಿದ೦ತಿಲ್ಲ.ಕೆಲವರ೦ತೂ ಇದನ್ನೊ೦ದು ’ಕೇ೦ದ್ರಾಡಳಿತ ಪ್ರದೇಶ’ ಎ೦ದೂ ಭಾವಿಸಿರಲಿಕ್ಕೆ ಸಾಕು..!!
ಅಭಿಮಾನ, ಆರಾಧನೆ ಮತ್ತು ಅನಿವಾರ್ಯತೆ
– ಮು.ಅ ಶ್ರೀರಂಗ, ಬೆಂಗಳೂರು
ಈ ನನ್ನ ಬರಹ ತನ್ನ ಸ್ವರೂಪದಲ್ಲಿ ಸ್ವಲ್ಪ ಅಮೂರ್ತವಾಗಿರಬೇಕಾಗಿರುವುದು ಅನಿವಾರ್ಯವಾಗಿದೆ! ಹೀಗಾಗಿ ಇದನ್ನು ನೀವು ಸರಸರನೆ ಓದಲು ಸಾಧ್ಯವಾಗದೆ ಇರಬಹುದು. ಕೆಲವೊಂದು ವಿಷಯಗಳನ್ನು “ಮೂರ್ತ”ರೂಪದಲ್ಲಿ ಹೇಳಲು ಹೊರಟಾಗ ಅವು ತೀರಾ ತೆಳುವಾಗುತ್ತವೆ. ಅಭಿಮಾನ ಮತ್ತು ಆರಾಧನೆಯ ನಡುವಿನ ಗೆರೆಯೂ ಹೀಗೆ ತೆಳುವಾದದ್ದೇ. ಆ ಗೆರೆ ಅಳಿಸಿಹೋದಾಗ ಅಭಿಮಾನ + ಆರಾಧನೆ =ಅನಿವಾರ್ಯತೆ ಎಂಬ ಸರಳ ಸಮೀಕರಣ ರೂಪುಗೊಂಡು ಬಿಡುತ್ತದೆ.
“ಓಲೈಕೆ ಮತ್ತು ತುಷ್ಟೀಕರಣ” ಜಾತ್ಯಾತೀತತೆಯ ಸಂಕೇತಗಳೇ?
– ಮು ಅ ಶ್ರೀರಂಗ ಬೆಂಗಳೂರು
ಒಂದು ರಾಜಕೀಯ ಧೋರಣೆಗೆ ಕಂಕಣಬದ್ಧವಾದ “ಹೊಸತು”ಎಂಬ ಮಾಸಪತ್ರಿಕೆಯ ಜುಲೈ ೨೦೧೩ರ ಸಂಚಿಕೆಯಲ್ಲಿ “ಆಧುನಿಕೋತ್ತರವಾದವೂ ಸಿ. ಎಸ್. ಎಲ್. ಸಿ. ಚಿಂತನಾಕ್ರಮವೂ”ಎಂಬ ಲೇಖನವನ್ನು ಬೆಂಗಳೂರಿನ ಕೆ. ಪ್ರಕಾಶ್ ಎಂಬುವವರು ಬರೆದಿದ್ದಾರೆ. ೫ ಪುಟಗಳಷ್ಟು ವಿಸ್ತಾರವಾದ ಆ ಲೇಖನದ ೧೬ ಪ್ಯಾರಾಗಳಲ್ಲಿ ಸುಮಾರು ೧೫ ಜನ ಬುದ್ಧಿಜೀವಿಗಳ,ಚಿಂತಕರ,ಉದ್ದುದ್ದದ ವಾಕ್ಯಗಳನ್ನು(ಉದ್ಧರಣೆಗಳು)ಪ್ರಕಾಶ್ ಅವರು ತಮ್ಮ ಲೇಖನಕ್ಕೆ “ಬಲ”ಬರಲಿ ಎಂದು ಉಪಯೋಗಿಸಿಕೊಂಡಿದ್ದಾರೆ. ಆ ದೊಡ್ಡ ದೊಡ್ಡ ವಾಕ್ಯಗಳ ನಡುವೆ “ಫಿಲ್ಲರ್”ತರಹ ತಮ್ಮ ನಾಲ್ಕೈದು ಸಾಲುಗಳನ್ನು ಸೇರಿಸಿದ್ದಾರೆ. ಆ “ಫಿಲ್ಲರ್”ಗಳ ಮುಖ್ಯ ಉದ್ದೇಶ ಕುವೆಂಪು ವಿ. ವಿ.ಯಲ್ಲಿನ ಸಿ ಎಸ್ ಎಲ್ ಸಿ ಯನ್ನು ಖಂಡಿಸುವುದಷ್ಟೇ ಆಗಿದೆ.
“ಮಡೆ ಸ್ನಾನ”ದಿಂದ ಪ್ರಾರಂಭವಾಗುವ ಈ ಲೇಖನ ಕೊನೆಗೆ ಬಂದು ನಿಲ್ಲುವುದು “ವಚನಗಳು vs ಜಾತಿ ವ್ಯವಸ್ಥೆ”ಬಗ್ಗೆ “ಪ್ರಜಾವಾಣಿ”ಪತ್ರಿಕೆಯಲ್ಲಿ ಸುಮಾರು ಮೂರು ತಿಂಗಳಿನಷ್ಟು ಕಾಲ ನಡೆದ ವಾದ-ಪ್ರತಿವಾದದ “ಅನುಭವ ಮಂಟಪದಲ್ಲಿ”. ಪ್ರಕಾಶ್ ಅವರು ತುಂಬಾ ಆರಾಧಿಸುವ ಪ್ರೊ। ಐಜಾಜ್ ಅಹ್ಮದ್ ಅವರೇ “ಆಧುನಿಕೋತ್ತರವಾದವು ಹಲವು ವಿಭಿನ್ನ ಎಳೆಗಳಿಂದ ರಚಿತವಾಗಿದ್ದು ಅದನ್ನು ಒಂದು ಸುಸಂಬದ್ಧ ಚಿಂತನೆಯಾಗಿ ಮಂಡಿಸುವುದು ಕಷ್ಟ ಎಂದು ಎಚ್ಚರಿಸುತ್ತಲೇ ಅದರ ಪ್ರಮುಖ ಲಕ್ಷಣಗಳನ್ನು ಗುರುತಿಸುತ್ತಾರಂತೆ”(ಹೊಸತು ಜುಲೈ ೨೦೧೩ ಪುಟ ೩೦). ಸಿ ಎಸ್ ಎಲ್ ಸಿ ಯದೂ ಆ ಹಲವು ಹಾದಿಗಳಲ್ಲಿ ಒಂದು ಎಳೆ ಎಂದು ಪ್ರಕಾಶ್ ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲ.
ಮೂರ್ತಿಗಳೇ,ಸೈನ್ಯ ಸಾಮ್ರಾಟ ಅಶೋಕನ ಬಳಿಯೂ ಇತ್ತು.ಆದರೆ,ಗೆದ್ದಿದ್ದು ಕಳಿಂಗ …!
– ರಾಕೇಶ್ ಶೆಟ್ಟಿ
ಭಾರತ ಬಿಡದಿರಲು ನಿರ್ಧರಿಸಿದ ಮೇಲೆ ನಮ್ಮ ಅನಂತ ಮೂರ್ತಿಯವರು, ಕಳೆದ ವಾರ ಸಿ.ಎಂ ಸಿದ್ದರಾಮಯ್ಯ ನವರಿಗೆ ಮೋದಿಯಂತೆ ಸೈಬರ್ ಸೈನ್ಯ ಕಟ್ಟಲು ಹೇಳಿ ಮತ್ತೊಮ್ಮೆ ಸುದ್ದಿಯಾದರು.
ಭಾರತದ ದೇಶ ಕಂಡ ಬೃಹತ್ ಸೈನ್ಯ ಸಾಮ್ರಾಟ ಅಶೋಕನ ಬಳಿಯೂ ಇತ್ತು ಮೂರ್ತಿಗಳೇ.ಆದರೆ ಅವನೆದುರು ಸೋತು ಗೆದ್ದಿದ್ದು ’ಕಳಿಂಗ’ …! ಸಾಮ್ರಾಟ ಅಶೋಕನ ಸೈನ್ಯದೆದುರಿಗೆ ಕಳಿಂಗ ಅನ್ನುವ ಪುಟ್ಟ ರಾಷ್ಟ್ರ ಏನೇಂದರೇ ಏನು ಆಗಿರಲಿಲ್ಲ.ಅವರಲ್ಲಿ ಅಶೋಕನ ಬಳಿಯಿದ್ದಷ್ಟು ಶಸ್ತ್ರ-ಅಸ್ತ್ರಗಳಿರಲಿಲ್ಲ,ಸೈನ್ಯವೂ ಇರಲಿಲ್ಲ.ಅವರಲ್ಲಿ ಇದ್ದಿದ್ದು ಸ್ವಾಭಿಮಾನ ಮತ್ತು ಧೈರ್ಯ. ಸಾಮ್ರಾಟ ಅಶೋಕನ ಸೈನ್ಯಕ್ಕೆ ಎದೆಯೊಡ್ಡಿ ಅವರು ಹೇಳಿದ್ದು “ನೀನು ಮಹಾನ್ ಸಾಮ್ರಾಟನಿರಬಹುದು,ನಿನ್ನ ಶಕ್ತಿ ಅಸಾಧಾರಣವಿರಬಹುದು.ಆದರೆ,ನಮಗೆ ಕನಿಷ್ಟ ಆತ್ಮಾಭಿಮಾನದಿಂದ ಸಾಯುವ ಅಧಿಕಾರವಾದರೂ ಇದೆ- ನೀನದನ್ನು ನಮ್ಮಿಂದ ಕಿತ್ತುಕೊಳ್ಳಲಾರೆ” ಅನ್ನುವುದೇ ಆಗಿತ್ತು.
ನೀವು ದುಡ್ಡು ಕೊಟ್ಟು,ಏನು ಮಾಡಬೇಕು ಅಂತ ಹೇಳಿಕೊಟ್ಟು ಕಟ್ಟಬಹುದಾದ ಸೈಬರ್ ಸೈನ್ಯ ಸಾಮ್ರಾಟ ಅಶೋಕನ ಸೈನ್ಯದಂತೆಯೇ ಅಗಾಧವಾಗಿರಬಹುದು.ಆದರೆ ಅದಕ್ಕೆದುರಾಗಿ ನಿಂತಿರುವುದು ಸ್ವಾಭಿಮಾನಿ ’ಕಳಿಂಗ’ದಂತಹ ಸೈನ್ಯ. ಈ ಸೈನಿಕರು ದುಡ್ಡಿಗಾಗಿ,ಅಧಿಕಾರಕ್ಕಾಗಿ,ಆಯ್ಕೆ ಸಮಿತಿಗಳ ಸ್ಥಾನಗಳಿಗಾಗಿ,ವಿವಿಗಳ ನಾಮಫಲಕಗಳಲ್ಲಷ್ಟೇ ರಾರಾಜಿಸುವ, ವಿವಿಗಳ ಕುರ್ಚಿ ಬಿಸಿ ಮಾಡುವ ಹುದ್ದೆಗಳಿಗಾಗಿಯೋ ಇಲ್ಲ ಪ್ರಶಸ್ತಿಗಳಿಗಾಗಿಯೋ ಕಾದು ಕುಳಿತಿರುವ ಅವಕಾಶವಾದಿಗಳಲ್ಲ.ಇವರೆಲ್ಲ ಕೇಂದ್ರ ಸರ್ಕಾರದ ಭ್ರಷ್ಟಚಾರದ ವಿರುದ್ಧ ಜೊತೆಯಾದವರು. ನಿಮ್ಮ ಸೆಕ್ಯುಲರ್ ಬ್ರಿಗೇಡ್ ಕಳೆದ ೧೧ ವರ್ಷಗಳಲ್ಲಿ ಮೋದಿ ಅನ್ನುವವನ ಮೇಲೆ ಏಕಪಕ್ಷೀಯವಾಗಿ ಕಟ್ಟುತ್ತ ಬಂದ ಸುಳ್ಳಿನ ಕೋಟೆಯನ್ನು ಕಂಡು ರೋಸಿ ಹೋಗಿ, ಆ ಸುಳ್ಳಿನ ಕೋಟೆಯ ಭೇಧಿಸಲು ತಾನಾಗೇ ಹುಟ್ಟಿಕೊಂಡ ಸೈನ್ಯ. ನಿಮ್ಮ ಸೆಕ್ಯುಲರ್ ಬ್ರಿಗೇಡಿನ ಸುಳ್ಳುಗಳಿಗೆ ಸಾಕ್ಷಿ ಬೇಕಾದರೇ, ನಿಮ್ಮದೇ ಹೇಳಿಕೆಯ ಸುತ್ತ ತಿರುಗೋಣ ಬನ್ನಿ ಮೂರ್ತಿಗಳೇ,
ಮೋದಿ ಅಭಿಮಾನ ಮತ್ತು ಅಭಿಮಾನಿಗಳ ಸುತ್ತ
– ಮಹೇಶ್ ಪ್ರಸಾದ್ ನೀರ್ಕಜೆ
ಎಲ್ಲೆಡೆ ಮೋದಿ ಜಪ (ಪರ ವಿರೋಧ) ಆಗುತ್ತಿರುವಾಗ ಮೋದಿ ಬೆಂಬಲಿಗನಾಗಿದ್ದುಕೊಂಡೆ ನನ್ನದೊಂದು ಕ್ರಿಟಿಕ್ ಬರಹ ಇರಲಿ ಅನಿಸಿ ಬರೆಯುತ್ತಿದ್ದೇನೆ.
ಮೊದಲನೆಯದಾಗಿ ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ ಗಾದೆ ನಮಗೆ ಗೊತ್ತೇ ಇದೆ. ಮೇಲ್ನೋಟಕ್ಕೆ ಇದು ತೀರಾ ಸರಳ ವಿಚಾರ ಎನಿಸಿದರೂ ಆಚರಣೆಗೆ ಕಷ್ಟ ಅಂತ ಮೋದಿ ಮತ್ತು ಅವರ ಬೆಂಬಲಿಗರು ತುಳಿಯುತ್ತಿರುವ ಹಾದಿ ನೋಡಿದಾಗ ಅನಿಸುತ್ತಿದೆ. ಮೊನ್ನೆ ಮೊನ್ನೆ ಮೋದಿ ಪ್ರಧಾನ ಮಂತ್ರಿ ಅಭ್ಯರ್ಥಿ ಅಂತ ಆಯ್ಕೆ ಆದಾಗ ರಾಜನಾಥ್ ಸಿಂಗ್ ಜೊತೆ ಮೋದಿ ಪರಸ್ಪರ ಸಿಹಿ ಹಂಚಿಕೊಂಡಿದ್ದನ್ನು ನೋಡಿದಾಗ ಮೊದಲ ಬಾರಿಗೆ ನನಗೆ ಎಲ್ಲೋ ಎಡವಟ್ಟಾಗುತ್ತಿದೆ ಅನಿಸಿತು. ಟಿವಿ ಯಲ್ಲಿ ಇದನ್ನು ನೋಡುತ್ತಿದ್ದ ನನ್ನಂಥವರಿಗೆ ಆಗ ಈ ಗಾದೆ ನೆನಪಾದದ್ದು ಸುಳ್ಳಲ್ಲ. ಈಗ ಮೋದಿ ಬೆಂಬಲಿಗರ ವಿಚಾರದಲ್ಲೂ ನನಗೆ ಈ ಗಾದೆ ನೆನಪಾಗುತ್ತಿದೆ.
ಮತ್ತೊಮ್ಮೆ ಹೇಳುವುದಾದರೆ ನಾನು ಮೋದಿ ಪ್ರಧಾನ ಮಂತ್ರಿ ಆಗಬೇಕೆಂದು ಬಯಸುವವನು ಆದರೆ ಅದರ ಜೊತೆ ಜೊತೆಗೇ ನಾಳೆ ಭ್ರಮನಿರಸ ಗೊಳ್ಳಲು ಸಿಧ್ಧವಿಲ್ಲದಿರುವವನು. ಯಡ್ಯೂರಪ್ಪ ವಿಚಾರದಲ್ಲಿ ಈಗಾಗಲೇ ಒಮ್ಮೆ ಭ್ರಮನಿರಸ ಆಗಿದ್ದೇವೆ. ಹಾಗೆ ನೋಡಿದರೆ ಯಡ್ಯೂರಪ್ಪ ಕೂಡ ಪರಿಸ್ಥಿತಿ ಒತ್ತಡದಿಂದ ಭ್ರಷ್ಟರಾದರು ಹೊರತಾಗಿ ಸ್ವತಹ ಅವರೇ ಭ್ರಷ್ಟರಲ್ಲ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅವರಿಗೆ ಸ್ಪಷ್ಟ ಬಹುಮತ ಸಿಕ್ಕಿದ್ದಿದ್ದರೆ ಅವರು ರೆಡ್ಡಿಗಳ ಕಾಲು ಹಿಡಿಯಬೇಕಾಗಿರಲಿಲ್ಲ ಮತ್ತು ಕೊನೆಗೆ ಸಿಬಿಐ ಬಲೆಗೆ ಬಿದ್ದು ಜೈಲಿಗೂ ಹೋಗುತ್ತಿರಲಿಲ್ಲ. ಮೋದಿ ಕೂಡ ಹಾಗೆ ಮಾಡ್ತಾರೆ ಅಂತ ಹೇಳ್ತಿಲ್ಲ, ಆದರೆ ಮೋದಿ ಪ್ರಚಾರ ಅನ್ನುವುದು ಒಂದು ಮುಟ್ಟಬೇಕಾದ ಗುರಿ ಹೊರತು ಸಂಭ್ರಮಿಸಬೇಕಾದ ಮತ್ತು ಸಂಭ್ರಮದಲ್ಲಿ ಮೈಮರೆಯುವ ವಿಚಾರ ಅಲ್ಲ ಅನ್ನುವುದನ್ನು ಅವರ ಅಭಿಮಾನಿಗಳು ಅರ್ಥಮಾಡಿಕೊಂಡರೆ ಸಾಕು.





