ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

23
ಸೆಪ್ಟೆಂ

ವಿರೋಧಿಗಳೆಸೆದ ಕಲ್ಲನ್ನೇ ತನ್ನ ಏಳಿಗೆಯ ಮೆಟ್ಟಿಲಾಗಿಸಿಕೊಂಡ ಮೋದಿ

– ಪ್ರಸನ್ನ  ಬೆಂಗಳೂರು

NaModiಭಾರತದ ರಾಜಕೀಯ ಇತಿಹಾಸದಲ್ಲಿ ೧೦ ವರ್ಷಗಳಿಗೂ ಹೆಚ್ಚು ಕಾಲ ವಿರೋಧ ಪಕ್ಷಗಳು,ಮಾಧ್ಯಮಗಳು,ಪ್ರಗತಿಪರರು ಟಾರ್ಗೆಟ್ ಮಾಡಿರುವುದು ನರೇಂದ್ರ ಮೋದಿಯವರನ್ನು . ಮೋದಿಯವನರನ್ನು  ಬಿಜೆಪಿ ತನ್ನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಮೇಲೆ ಅವರ ಮೇಲಿನ ಹಿಂದಿನ ಆರೋಪಗಳ ಜೊತೆ ಜೊತೆಗೆ ಅವರ ಅಭಿವೃದ್ಧಿ ಕಾರ್ಯಗಳನ್ನು ವಿಶ್ಲೇಷಣೆಗೊಳಪಡಿಸಲಾಗುತ್ತಿದೆ. ಈ ಹಿಂದೆ ಪ್ರಧಾನಿಯಾದವರ ಬಗ್ಗೆ ಇಷ್ಟೊಂದು ವಿಶ್ಲೇಷಣೆ ವಿಮರ್ಶೆ ಪರೀಕ್ಷೆ ನಡೆದಿತ್ತೆ? ನಡೆದು ಅಂತಹ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬಂದಿದ್ದರೆ ಬಹುಶಃ ಭಾರತವಿಂದು ಇಂತಹ ಪರಿಸ್ಥಿತಿಯಲ್ಲಿರುತ್ತಿರಲಿಲ್ಲ ಅಲ್ಲವೆ? ಮೋದಿ ಈ ಪರಿ ಬೆಳೆದಿದ್ದಕ್ಕೆ ಕಾರಣ ಹುಡುಕುತ್ತಾ ಹೊರಟವನಿಗೆ ಕಂಡದ್ದು ಈ ವಿಭಿನ್ನವಾದ ಆದರೆ ತೆರೆಮರೆಯ ಕಾರಣ.

ಅದು ತನ್ನ ಕುಕೃತ್ಯಕ್ಕೆ ತಾನೆ ಬಲಿಯಾದ ಆತನ ದ್ವೇಷ ವರ್ಗ.ಇವರ ದ್ವೇಷ,’ತನ್ನೊಡಲ ಬೆಂಕಿ ತನ್ನನ್ನಲ್ಲದೆ ಅನ್ಯರನ್ನು ಸುಡದು‘ ಎಂಬ ಜನಪ್ರಿಯ ವಚನದಂತೆ ದ್ವೇಷಿಗಳೇ ನಾಲಿಗೆ ಕಚ್ಚಿಕೊಳ್ಳುವಂತಾಗಿರುವುದು ಸುಳ್ಳಲ್ಲ. ತಾನು ವೈಭವೀಕರಿಸಿದ ಸುಳ್ಳು ತನಗೇ ತಿರುಗುಬಾಣವಾಗಿರುವುದು ಅವರ ಈಗಿನ ಬಡಬಡಿಕೆಗೆ ಕಾರಣವಾಗಿದೆ. ಈ ವರ್ಗ ಮೋದಿಯ ವಿರುದ್ದ ಮಾಡಿದ ಅಪಪ್ರಚಾರಗಳೇ ಅಪಚಾರಗಳೇ ಅವರಿಗೆ ಇಂದು ಮುಳುವಾಗಲು ಮೂಲ ಕಾರಣವೆಂದು ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲದಿದ್ದರೂ ಅದು ಸತ್ಯವಲ್ಲವೆಂದು ತಳ್ಳಿ ಹಾಕಲು ಅವರಿಗೆ ಸಾಧ್ಯವಾಗುವುದಿಲ್ಲ.

ಮೋದಿ ಮಾಡದ ತಪ್ಪಿಗೆ ಅವನನ್ನು ಹೊಣೆಗಾರನನ್ನಾಗಿಸುವ ಮೂಲಕ ಆತನ ಬೆಳವಣಿಗೆ ದಾರಿ ಮಾಡಿಕೊಟ್ಟದ್ದು ಹೇಗೆ?

ಮತ್ತಷ್ಟು ಓದು »

3
ಸೆಪ್ಟೆಂ

ರೂಪಾಯಿ,ಪೆಟ್ರೋಲ್ ಮತ್ತು ಸ್ವದೇಶಿ

– ಪ್ರಶಸ್ತಿ.ಪಿ ಶಿವಮೊಗ್ಗ

usd_to_inr_since99ರೂಪಾಯಿ ಮೌಲ್ಯ ಅಪಮೌಲ್ಯ ಆಗ್ತಾ ಆಗ್ತಾ ಅದ್ರ ಬೆಲೆ ಅರವತ್ತೆಂಟು ದಾಟಾಯ್ತು.. ಇನ್ನಾದ್ರೂ ನಾವು ಎಚ್ಚೆತ್ತಿಲ್ಲ. ಮನೆಗೊಂದು ಕಾರು, ತೆಲೆಗೊಂದು ಬೈಕು ಅಂತ ಜುಂ ಜಾಮಾಗಿರೋ ನಾವು ನಮ್ಮೀ ವೈಭವದಿಂದಲೇ ಪೆಟ್ರೋಲ್ ದರ ಗಗನಕ್ಕೇರಿರೋದು ಅಂತಲೂ ತಿಳೀತಿಲ್ಲ. ಪೆಟ್ರೋಲ್ ಬೆಲೆ ಏನಾದ್ರಾಗ್ಲಿ, ಅದ್ರಿಂದ ಡಾಲರ್ ದರ ಅರವತ್ತಲ್ಲ ನೂರು ಮುಟ್ಟಿದ್ರೂ ನಮಗೇನು ಅಂದ್ರಾ ? ಡಾಲರ್ ದರ ಹೆಚ್ಚಾದಷ್ಟೂ ಟೆಕ್ಕಿಗಳಿಗೆ, ರಫ್ತು ಮಾಡೋರಿಗೆ ಲಾಭವೇ ಅಲ್ವಾ ? ದೇಶಕ್ಕೇನಾದ್ರೆ ನಮಗೇನು ಅಂದ್ರಾ ? !! ರಫ್ತೆಂದರೆ ಚೀನಾದಂತೆ ಬೇಕಾಬಿಟ್ಟಿ ವ್ಯವಹಾರವಲ್ಲ, ಅಗ್ಗದ ದರದಲ್ಲಿ ಚೀನಾದವ್ರೂ ಎಲ್ಲಾ ಕಡೆ ಕಸದಂತೆ ತಂದು ಎಲ್ಲಾ ದೇಶಗಳಲ್ಲಿ, ಭಾರತಕ್ಕೂ ತಂದು ಸುರಿತಿರುವಾಗ, ಕೂಲಿಯಿಂದ ಹಿಡಿದು ಕಚ್ಚಾವಸ್ತುಗಳವರೆಗೆ ಎಲ್ಲದರ ಬೆಲೆ ಏರಿದ್ರೂ ಗುಣಮಟ್ಟ ಕಾದುಕೊಳ್ಳೋ ಅನಿವಾರ್ಯತೆಯಿರೋ ಭಾರತೀಯ ರಫ್ತು ಉದ್ಯಮಕ್ಕೂ ಹೊಡೆತ ಬೀಳುತ್ತಿದೆ ಅದ್ರ ಮದ್ಯ ಕೊಕ್ಕೆ ತೆಗೆಯೋ ಹೊರದೇಶಗಳ ನೂರಾರು ಕಾನೂನುಗಳು ಬೇರೆ…ಅದೆಲ್ಲಾ ದೊಡ್ಡ ತಲೆ ನೋವು ಅಂದ್ರಾ ? ಸರಿ,ಹೋಗ್ಲಿ ಬಿಡಿ.ಅದಿರ್ಲಿ,   ಪೆಟ್ರೋಲ್ ಬೆಲೆ ಏರ್ತಾ ಇದ್ರೂ ರೂಪಾಯಿ ಬೆಲೆ ಇಳಿತಾ ಇದ್ರೂ ಘನ ಸರ್ಕಾರ ಏನು ಮಾಡ್ತಾ ಇದೆ ಅಂತ ಬೊಬ್ಬೆ ಹಾಕೋ ಬದ್ಲು ಆ ಸಮಯದಲ್ಲಿ ನಮ್ಮಿಂದ ಏನಾದ್ರೂ ಮಾಡ್ಬಹುದಾ ಅಂತ್ಯಾಕೆ ಯೋಚ್ನೆ ಮಾಡ್ಬಾರ್ದು ?

ಮತ್ತಷ್ಟು ಓದು »

28
ಆಗಸ್ಟ್

ಸ್ವಾತಂತ್ರ್ಯ ಇನ್ನೆಷ್ಟು ದಿನ !!!

– ಮಧುಚಂದ್ರ , ಭದ್ರಾವತಿ                      

೨೯ ಮೇ ೧೪೫೩, ಅಟ್ಟೋಮನ್ ತುರ್ಕರು ಕಾಂಸ್ಟನ್ಟಿನೋಪಾಲ್ ನಗರವನ್ನು ಆಕ್ರಮಿಸಿ (ಇಂದಿನ ಇಸ್ತಾಂಬುಲ್) ತಮ್ಮ ವಶಕ್ಕೆ ತಗೆದುಕೊಂಡ ದಿನ. ಈ ದಿನಕ್ಕೂ ಮುಂಚೆ ಪೂರ್ವ ಮತ್ತು ಪಶ್ಚಿಮಗಳ ವ್ಯಾಪಾರ ಮತ್ತು ಭಾಂದವ್ಯ ಸಮುದ್ರ ಮಾರ್ಗವಾಗಿ ಈ ನಗರದ ಮೂಲಕವೇ ನಡೆಯುತ್ತಿತ್ತು. ತುರ್ಕರ ಆಕ್ರಮಣದೊಂದಿಗೆ ಪಶ್ಚಿಮದವರ ವ್ಯಾಪಾರದ ಬಾಗಿಲು ಸಂಪೂರ್ಣವಾಗಿ ಮುಚ್ಚಲ್ಪಟ್ಟಿತು. ಹೊಸ ಮಾರ್ಗದ ಅನ್ವೇಷಣೆ ಪಶ್ಸಿಮದವರಿಗೆ ಅನಿವಾರ್ಯವಾಯಿತು.

ಮೊದಲಿಗೆ ಸ್ಪೇನ್ ದೇಶದ ನಾವಿಕ ಕೊಲಂಬಸ್ ಮುಂದಾದ, ಭಾರತವನ್ನು ಕಂಡುಹಿಡಿಯುವ ಬದಲಿಗೆ ಅಮೇರಿಕ ಖಂಡವನ್ನು ಅನ್ವೇಷಿಸಿದ. ನಂತರ ಪೋರ್ಚುಗಲ್ನ ನಾವಿಕ ಬರ್ತ ಲೋಮಿಯ ಡಯಾಜ್ , ಪೋರ್ಚುಗಲ್ ದೇಶದ ದಕ್ಷಿಣದಿಂದ ಆರಂಭಿಸಿ ಆಫ್ರಿಕಾ ಖಂಡದ ತುದಿಯನ್ನು ಮುಟ್ಟಿದ ಆದರೆ ಸಮುದ್ರದಲ್ಲಿ ಉಂಟಾದ ಭಾರಿ ಅನಾಹುತಗಳಿಂದ ಅವನ ಸಹ ನಾವಿಕರು ಮುಂದೆ ಸಾಗಲು ನಿರಾಕರಿಸಿದರು. ಆಫ್ರಿಕದ ತುಟ್ಟ ತುದಿ ಕೇಪ್ ಆಫ್ ಗುಡ್ ಹೋಪ್ ಕಂಡು ಹಿಡಿದು ಪೋರ್ಚುಗಲ್ಗೆ ಹಿಂದಿರುಗಿದ. ಮತ್ತೆ ಅದೇ ಯತ್ನವನ್ನು ಪೋರ್ಚುಗಲ್ಲಿನ ವಾಸ್ಕೋ ಡ ಗಾಮ ಬರ್ತ ಲೋಮಿಯ ಡಯಾಜ್ ಬಳಸಿದ ಮಾರ್ಗದಲ್ಲೇ ಹೋಗಿ ಆಫ್ರಿಕಾ ಖಂಡವನ್ನು ಒಂದು ಸುತ್ತು ಹಾಕಿ ಕಡೆಗೆ ಕೇರಳದ ಕಲ್ಲಿ ಕೋಟೆಯಲ್ಲಿ ೨೦ ಮೇ ೧೪೯೮ ಕಾಲಿಟ್ಟ. ಕಲ್ಲಿಕೋಟೆಯ ದೊರೆ ಜಮೂರಿನ ವಾಸ್ಕೋ ಡ ಗಾಮನನ್ನು ಆತ್ಮೀಯವಾಗಿ ಸ್ವಾಗತಿಸಿ ಪೂರ್ವ ಪಶ್ಚಿಮಗಳ ವ್ಯಾಪಾರಕ್ಕೆ ಮುನ್ನುಡಿ ಬರೆದ.

ಸತತ ನೂರು ವರ್ಷಗಳ ಕಾಲ ಯಾವುದೇ ಅಡೆತಡೆ ಇಲ್ಲದೆ ಭಾರತದ ಪಶ್ಚಿಮ ಸಮುದ್ರ ತೀರದ ಎಲ್ಲಾ ಪ್ರಮುಖ ನಗರದಲ್ಲಿ ಒಂದು ಒಂದು ಶಾಖೆಗಳನ್ನು ಸ್ಥಾಪಿಸಿ ಪೋರ್ಚುಗೀಸರು ತಮ್ಮ ವ್ಯಾಪಾರ ಮುಂದುವರೆಸಿದರು. ೧೬೦೦ ಬ್ರಿಟೀಷರು, ೧೬೦೨ ರಲ್ಲಿ ಡಚ್ಚರು, ೧೬೬೪ ರಲ್ಲಿ ಫ್ರೆಂಚರು ಈಸ್ಟ್ ಇಂಡಿಯಾ ಕಂಪನಿ ಹೆಸರಿನಲ್ಲಿ ಭಾರತ ಖಂಡದಲ್ಲಿ ನಿಧಾನವಾಗಿ ತಮ್ಮ ಖಾತೆ ತೆರೆದರು.

ಮತ್ತಷ್ಟು ಓದು »

28
ಆಗಸ್ಟ್

ನಮೋ ಅಭಿವೃದ್ಧಿ ಮಂತ್ರಕ್ಕೆ ಅನುಸರಿಸಬೇಕಾದ ಪ್ರಚಾರತಂತ್ರ ಯಾವುದು?

– ನವೀನ್ ನಾಯಕ್

NaModi       ನರೇಂದ್ರ ಮೋದಿ ಇತ್ತೀಚೆಗೆ ಅತಿ ಹೆಚ್ಚಾಗಿ ಚರ್ಚೆಗೆ ತುತ್ತಾಗುತಿದ್ದಾರೆ. ಮೋದಿಯವರೇ ಮುಂದಿನ ಪ್ರಧಾನಿಯಾಗಬೇಕೆಂದು ಹಲವಾರು ರೀತಿಯಲ್ಲಿ ಉತ್ಸಾಹಿ ಯುವಕರು ಸ್ವಯಂಪ್ರೇರಣೆಯಿಂದ ಕೆಲಸ ನಿರ್ವಹಿಸುತಿದ್ದಾರೆ. ಅಭಿಮಾನಿಗಳ ಗುಂಪುಗಳಿರಬಹುದು, ಸಾಮಾಜಿಕ ತಾಣದಲ್ಲಿರುವ ಪೇಜ್, ಗ್ರೂಪ್ ಯಾವುದೇ ಆಗಬಹುದು. ರಾಜಕೀಯ ವಿಷಯದಲ್ಲಿ ಮಲಗಿದ್ದ ಯುವಪಡೆ ಎದ್ದು ನಿಂತಿರುವುದು ಸ್ವಾಗತಾರ್ಹ. ಪ್ರಸಕ್ತ ರಾಜಕೀಯ ದೊಂಬರಾಟದಲ್ಲಿ ಕಡಿವಾಣ ಹಾಕಬೇಕೆಂದರೆ ಯುವಕರ ಪಾತ್ರ ಬೇಕೆಬೇಕು. ಇತಿಹಾಸವೂ ಅದನ್ನೇ ಸಾರಿ ಸಾರಿ ಹೇಳಿದೆ. ನಮೋ ವಿಷಯದಲ್ಲಿ ಗಂಭೀರವಾದ ವಿಚಾರವೆಂದರೆ ಈ ಯುವಕರ ಕೆಲಸ ನೀರಿಕ್ಷಿತ ಮಟ್ಟವನ್ನು ತಲುಪುತ್ತದೆಯಾ. ಇವರ ಉತ್ಸಾಹಕ್ಕೆ 2014 ತಣ್ಣೀರೆರಚಬಹುದೇ ಎಂಬ ಅನುಮಾನ ನನಗೆ. ನನ್ನ ಅನುಮಾನಕ್ಕೆ ಕಾರಣವಿಲ್ಲದೆಯಿಲ್ಲ.

ಮೋದಿಯವರನ್ನು ಪ್ರಚಾರ ಮಾಡುತ್ತಿರುವ ಶೈಲಿ ಸ್ವತಃ ನಮೋ ಅಭಿವೃದ್ದಿ ಕನಸ್ಸಿನ ವಿರೋಧವಾಗಿದೆ. ಮುನ್ನುಗುತ್ತಿರುವ ವೇಗದಲ್ಲಿ ಗುರಿಯನ್ನೇ ಮರೆಯಲಾಗಿದೆ. ಮೋದಿ ನಾಯಕತ್ವದಲ್ಲಿ ಸರಕಾರ ರಚಿಸಬೇಕಾದರೆ ಆ ಸರಕಾರ ನಮ್ಮ ಕನಸ್ಸಿನ ಭಾರತ ಕಟ್ಟಬೇಕಾದರೆ ಮೋದಿ ಹೆಸರಲ್ಲಿ ಅಥವಾ ಬಿಜೆಪಿ ಹೆಸರಲ್ಲಿ ಗೆಲ್ಲುವ ಅಭ್ಯರ್ಥಿ ಹೇಗಿರಬೇಕು, ಅವನ ಕನಸುಗಳೇನಾಗಿರಬೇಕು, ಸಮಾಜ ಪರಿವರ್ತನೆಯಲ್ಲಿ ಆತನ ಸ್ಪಷ್ಟ ನಿರ್ಧಾರವೇನು. ಈ ಅಂಶಗಳು ಮುಖ್ಯವಾಗುವುದಿಲ್ಲವೇ? ಈ ಮಹತ್ತರ ಅಂಶಗಳನ್ನು ಮರೆತು ಅವರ ಹೆಸರಲ್ಲಿ ಅಯೋಗ್ಯರನ್ನು ಗೆಲ್ಲಿಸಿಬಿಟ್ಟರೆ. ಕಂಡ ಕನಸು ತಿರುಗಿ ಬೆಂಕಿ ಕೆಂಡವಾಗುತ್ತದೆಯಲ್ವಾ? ಕರ್ನಾಟಕದಲ್ಲಿ ಬದಲಾವಣೆ ಭರದಲ್ಲಿ ಬಿಜೆಪಿ ಬೆಂಬಲಿಸಿದಾಗ ಯಡವಟ್ಟಾಗಿದ್ದು ಈ ಅಂಶಗಳೇ. ಅಪಾತ್ರರೆಲ್ಲ ಗೆದ್ದು ಉಂಡಾಡಿ ಗುಂಡನ ಹಾಗೆ ಆಡಿದ್ದ ಉದಹಾರಣೆ ಕಣ್ಣ ಮುಂದಿರುವಾಗ ಮತ್ತದೇ ಹೆಜ್ಜೆಯನ್ನಿಟ್ಟರೆ ಏನು ಪ್ರಯೋಜನ ?.. ಬದಲಾವಣೆ ಎಲ್ಲರಿಗೂ ಬೇಕು ಅದೇ ಭರದಲ್ಲಿ ಯೋಗ್ಯರು ಮತ್ತು ಅಯೋಗ್ಯರ ನಡುವಿನ ವ್ಯತ್ಯಾಸ ಮರೆಯಬಾರದು.
ಮತ್ತಷ್ಟು ಓದು »

22
ಆಗಸ್ಟ್

ಮ್ಯೂಟ್ ಮೋಡ್ ನಲ್ಲಿ ಭಾರತ, ಫೈಟ್ ಮೋಡ್ ನಲ್ಲಿ ಚೀನಾ!!

– ವಿಕಾಸ್ ಪುತ್ತೂರು

Mouna -China‘ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸು’ ಎಂದು ಸಾರುತ್ತಲೇ “ಶಾಂತಿಧೂತ”ನೆಂದು ಖ್ಯಾತಿಗಳಿಸಿದ  ಆ ಗಾಂಧಿಯೂ ಕೂಡ, ಇಂದಿದ್ದಿದ್ದರೆ, ಪ್ರಸ್ತುತ ಚೀನಾದ ತಕರಾರುಗಳಿಗೆ ಬೇಸತ್ತು ಕೆನ್ನೆ ತೋರಿಸುವುದನ್ನು ನಿಲ್ಲಿಸಿ, ಒಂದು  ಬಾರಿಸಿ ಬಿಡುತ್ತಿದ್ದರೇನೋ! ಅದೇನೆ ಇರಲಿ,  ನಮ್ಮ ಪ್ರಧಾನಿಗಳು ಮಾತ್ರ, ಚೀನಾ ವಿಷಯದಲ್ಲಿ ಆ ಗಾಂಧಿಯ ಮೂರು ಮಂಗಗಳ ಗುಣಗಳನ್ನು ಯತಾವತ್ತಾಗಿ  ಅನುಸರಿಸಿರುವಂತೆ ಕಾಣುತ್ತಿದೆ, ಚೀನಾದ ಅತಿಕ್ರಮಣಗಳನ್ನು ಕಂಡೂ ಕಾಣದಂತೆ ಕುರುಡರಾಗಿಬಿಟ್ಟಿದ್ದಾರೆ, ಅವರ ಆಕ್ರಮಣಗಳ ಬಗ್ಗೆ ತುಟಿಬಿಚ್ಚದೆ  ಚಕಾರವೆತ್ತದೆ ಮೂಕರಾಗಿಬಿಟ್ಟಿದ್ದಾರೆ,  ಚಿಂಗಿಯರ ಕುತಂತ್ರಗಳನ್ನಂತೂ  ಬೇಕೆಂದೇ ಕೇಳಿಸಿಕೊಳ್ಳದೆ ಕಿವುಡನೂ ಆಗಿಬಿಟ್ಟಿದ್ದಾರೆ! ಅವರೇ ಹೇಳುವಂತೆ, ಗಾಂಧಿಯ ಹಾದಿಯಲ್ಲಿ ಸಾಗುವುದೆಂದರೆ ಇದೇ ಇರಬೇಕೇನೋ! ಕಳೆದ ಹತ್ತು ವರ್ಷಗಳಲ್ಲಿ ಮನಮೋಹನರು ಸದನ ಪ್ರವೇಶಿಸಿರುವುದಕ್ಕಿಂತ ಹೆಚ್ಚು  ಬಾರಿ ಚೀನಿಯರು ಭಾರತವನ್ನು ಅತಿಕ್ರಮವಾಗಿ  ಪ್ರವೇಶಿಸಿದ್ದಾರೆ. ಆರ್ಥಿಕವಾಗಿ ಹಾಗು ಸಾಂಸ್ಕೃತಿಕವಾಗಿ  ಭಾರತವನ್ನು ಮುಗಿಸಲು ತುದಿಗಾಲಲ್ಲಿ ನಿಂತು ಅತ್ಯಂತ ವ್ಯವಸ್ತಿತವಾಗಿ ಷಡ್ಯಂತ್ರ ರಚಿಸಿರುವ,  ರಚಿಸುತ್ತಿರುವ ಚೀನಾಗೆ ಸಮರ್ಥವಾಗಿ ಉತ್ತರ ಕೊಡಲು ಸಾಧ್ಯವಾಗದೆ, ಪ್ರಶ್ನೆಯ ಹುಡುಕಾಟದಲ್ಲಿಯೇ ಕಪಟ ನಾಟಕವಾಡುತ್ತಿದೆ ನಮ್ಮ ಕೇಂದ್ರ ಸರಕಾರ.

ಭಾರತದ ಅತಿದೊಡ್ಡ ಶತ್ರು ಪಾಕಿಸ್ತಾನ, ಬೇರೆಲ್ಲಾ ರಾಷ್ಟ್ರಗಳು ಬಹುತೇಕ ಭಾರತದ ಮಿತ್ರರಾಷ್ಟ್ರಗಳೇ ಎಂದು ವಿಶ್ವಾವ್ಯಾಪಿ ಬಿಂಬಿತವಾಗಿರುವುದು ಭಾರತದ ಅತಿದೊಡ್ಡ ದುರಂತ. ರಾಷ್ಟ್ರೀಯ ಭದ್ರತೆಯ ವಾಸ್ತವಕ್ಕಿಳಿದು ನೋಡಿದಾಗ ಭಾರತಕ್ಕೆ, ಪಾಕಿಸ್ತಾನಕ್ಕಿಂತಲೂ  ಚೀನಾದಿಂದ ನೂರು ಪಟ್ಟು ಹೆಚ್ಚು ಆತಂಕ  ಸೃಷ್ಟಿಯಾಗಿದೆ. ಭಾರತದ ಭೂ ಹಾಗು ಸಾಗರಕ್ಕೆ, ಇತರೆ ಒಟ್ಟು 9ರಾಷ್ಟ್ರಗಳು ಅಂಟಿಕೊಂಡಿವೆ, ದಕ್ಷಿಣಕ್ಕೆ ಶ್ರೀಲಂಕಾ ಹಾಗು ಮಾಲ್ಡೀವ್ಸ್. ಪಶ್ಚಿಮಕ್ಕೆ ಪಾಕಿಸ್ತಾನ ಹಾಗು ಅಫಗಾನಿಸ್ತಾನ, ಪೂರ್ವಕ್ಕೆ ನೇಪಾಳ, ಭೂತಾನ್, ಬಾಂಗ್ಲಾದೇಶ ಹಾಗು ಬರ್ಮಾ ಮತ್ತು ಉತ್ತರದಿಂದ ಪೂರ್ವದವರೆಗೂ ಮಹಾಕಂಟಕ ಚೀನಾ. ಈ 9ನೆರೆರಾಷ್ಟ್ರಗಳ ಪೈಕಿ ಭೂತಾನ್ ಎಂಬ ಪುಟ್ಟ ದೇಶವೊಂದನ್ನು  ಬಿಟ್ಟರೆ, ಉಳಿದ  8 ದೇಶಗಳೊಡನೆಯೂ  ಭಾರತದ  ಸಂಬಂಧ ಹಳಸಿದೆ! ಅತ್ಯಂತ ಆತಂಕಕಾರಿ  ಸಂಗತಿ ಎಂದರೆ, ಭಾರತವನ್ನು ಮಣಿಸಲು ಹಾತೊರೆಯುತ್ತಿರುವ ಚೀನಾ, ಉಳಿದ 7 ರಾಷ್ಟ್ರಗಳನ್ನೂ ಒಟ್ಟುಗೂಡಿಸಿ ಬಿಲಿಯನ್ ಡಾಲರ್ಗಟ್ಟಲೆ ಬಂಡವಾಳ ಹೂಡುತ್ತಾ, ತನ್ನ ಸಂಗಡ ಶಿಶ್ಯವೃಂದದಂತೆ ಇರಿಸಿಕೊಂಡಿದೆ.

ಮತ್ತಷ್ಟು ಓದು »

22
ಆಗಸ್ಟ್

ರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು” ಪುಸ್ತಕದ ಕುರಿತು

– ಮು . ಅ . ಶ್ರೀರಂಗ  ಯಲಹಂಕ  ಬೆಂಗಳೂರು

ನಮಗೆ ನಾವೇ ಪರಕೀಯರುರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು ” (ನ. ನಾ. ಪ) (ಪ್ರಕಾಶಕರು : ರಾಷ್ಟ್ರೋತ್ಹಾನ ಸಾಹಿತ್ಯ ಬೆಂಗಳೂರು -೧೯ )ಪುಸ್ತಕ ಓದುವ ಮುನ್ನ ನಾನು ಪ್ರೊ .ಎಸ್ .ಎನ್. ಬಾಲಗಂಗಾಧರ (ಬಾಲು)ಅವರ ವಿಚಾರಗಳನ್ನು ಆಧರಿಸಿದ ಕನ್ನಡಕ್ಕೆ ಅನುವಾದವಾಗಿರುವ ಮೂರುಪುಸ್ತಕಗಳನ್ನು ಓದಿದ್ದೆ (ಪೂರ್ವಾವಲೋಕನ ,ಭಾರತದಲ್ಲಿ ಜಾತಿ ವ್ಯವಸ್ಥೆ ಇದೆಯೆ? ಮತ್ತು ಹುಡುಕಾಟವನ್ನು ನಿಲ್ಲಿಸದಿರೊಣ). ಸ್ಮೃತಿ-ವಿಸ್ಮೃತಿ ;ಭಾರತೀಯ ಸಂಸ್ಕೃತಿ ತನ್ನ ವಿಚಾರ ಮತ್ತು ಗಾತ್ರದಲ್ಲಿ ತುಂಬಾ ಘನವಾಗಿದೆ ಹೀಗಾಗಿ ನಿಧಾನವಾಗಿ ಓದಿ ಅರ್ಥಮಾಡಿಕೊಳ್ಳಬೇಕಾಗಿದೆ. ಇದುವರೆಗೆ ಸುಮಾರು ಇನ್ನೂರು ಪುಟಗಳನ್ನು ಓದಿದ್ದೆನೆ. ರಮಾನಂದರ ಪ್ರಸ್ತುತ ಪುಸ್ತಕ ಮೇಲೆ ಹೇಳಿದ ಬಾಲು ಅವರ ನಾಲ್ಕು ಪುಸ್ತಕಗಳ ಅದರಲ್ಲೂ ಮುಖ್ಯವಾಗಿ ಸ್ಮೃತಿ-ವಿಸ್ಮೃತಿ ಪುಸ್ತಕದಲ್ಲಿರುವ ವಿಷಯಗಳನ್ನು ನೇರವಾಗಿ ಭಟ್ಟಿ ಇಳಿಸಿರುವುದರ ಪ್ರತಿಫಲ! ಇದಕ್ಕೆ ಪುರಾವೆಗಳು ರಮಾನಂದರ ನ.ನಾ.ಪ.. ಪುಸ್ತಕದಲ್ಲೇ ಇವೆ.

,         ೧. ಬಾಲು ಅವರೇ ತಮ್ಮ ಮುನ್ನುಡಿಯಲ್ಲಿ—ರಮಾನಂದರ ಎಲ್ಲಾ ಲೇಖನಗಳು ಈ ವಿಷಯಗಳ ಕುರಿತಾಗಿ ಬೆಲ್ಜಿಯಂ ಹಾಗೂ ಭಾರತದಲ್ಲಿ ಕುವೆಂಪು ವಿ. ವಿ. ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳಿಂದ ಪ್ರಭಾವಿತವಾಗಿವೆ ಎಂದ್ದಿದ್ದಾರೆ (ಪುಟxii)

೨. ಲೇಖಕರ ಮಾತಿನಲ್ಲಿ ಸ್ವತಃ ರಮಾನಂದ ಐನಕೈ ಅವರೇ ಮೇಲೆ ಹೇಳಿದ ಬಾಲು ಅವರ ಮಾತುಗಳನ್ನೇ ಅನುಮೋದಿಸಿದ್ದಾರೆ—ಬಾಲು ಅವರ ಮೂಲ ಸಿದ್ಧಾಂತಕ್ಕೆ ಚ್ಯುತಿ ಬಾರದ ಹಾಗೆ ಅವರ ವಿಚಾರಗಳನ್ನು ನನ್ನ ಅನುಭವಗಳ ಮೂಲಕ ಸರಳವಾಗಿ ನಿರೂಪಿಸುವ ಕೆಲಸ ಮಾಡಿದ್ದೇನೆ (ಪುಟ xvi )(ರಮಾನಂದರ ಅನುಭವಗಳ ಪ್ರಮಾಣ ಈ ಪುಸ್ತಕದ ವಿಚಾರದಲ್ಲಿ ತೀರಾ ಕಡಿಮೆ ಎಂಬುದು ಓದುಗರಿಗೆ ಮನವರಿಕೆಯಾಗುತ್ತದೆ!)

೩. ರಮಾನಂದರ ಪ್ರಸ್ತುತ ಪುಸ್ತಕ್ಕಕ್ಕೆ (ನ.ನಾ.ಪ) ಹಿನ್ನೆಲೆ ಬರೆದಿರುವ ದಾ॥ ರಾಜಾರಾಮ ಹೆಗಡೆಯವರು ಸಹ ರಮಾನಂದರದು ಸ್ವತಂತ್ರ ಲೇಖನಗಳಾದರೂ ಕೂಡ ಭಾರತೀಯ ಸಂಸ್ಕೃತಿಯ ಕುರಿತು ಎಸ್ . ಎನ್ . ಬಾಲಗಂಗಧರ ಅವರ ಹೊಸ ವಾದಗಳಿಂದ ಪ್ರಭಾವಿತವಾಗಿವೆ. (ಪುಟ xviii)

ಮತ್ತಷ್ಟು ಓದು »

20
ಆಗಸ್ಟ್

“ಕೈ”ಲಾಗದ ಸರ್ಕಾರ ಮತ್ತು ನಮ್ಮ ಕಾಶ್ಮೀರ

–     ರಾಕೇಶ್ ಶೆಟ್ಟಿ

Kashmiraಬಡ ಬೆಸ್ತನೊಬ್ಬನ ಕತ್ತನ್ನು ಸೀಳಿ ಅವನದೇ ಬೋಟನ್ನೇರಿ ೧೦ ಜನರ ಪಾಕಿಸ್ತಾನದ ಸೈತಾನರ ತಂಡ ಗೇಟ್ ವೇ ಆಫ್ ಇಂಡಿಯಾ ಮೂಲಕ ಮುಂಬೈಗೆ ವಕ್ಕರಿಸಿಕೊಳ್ಳುತ್ತದೆ.೧೦ ಜನರಿಂದ ಬೇರ್ಪಟ್ಟ ಇಬ್ಬರು ಮೊದಲಿಗೆ ದಾಳಿಯಿಡುವುದು ’ಲಿಯೋಫೋಲ್ಡ್ ಕೆಫೆ”ಗೆ ಅಲ್ಲಿ ಕಂಡ ಕಂಡಂತೆ ಗುಂಡಿನ ಮಳೆ ಸುರಿಸಿದ ಆ ಇಬ್ಬರು ಪಾಕಿ ಉಗ್ರರು ಅಲ್ಲಿಂದ ರಾಜಾರೋಷವಾಗಿ ಹೊರಡುತ್ತಾರೆ.ಉಗ್ರರ ಕಣ್ಣಿಗೆ ಬೀಳದೆ ಅವಿತು ಕುಳಿತಿದ್ದವನೊಬ್ಬ ಮೆಲ್ಲಗೆ ಬಾಗಿಲ ಸಂದಿಯಿಂದ ರಾಕ್ಷಸರು ಇದ್ದಾರೋ ಅನ್ನುವುದನ್ನು ಖಾತ್ರಿ ಮಾಡಿಕೊಳ್ಳಲು ಇಣುಕಿದಾಗ ಬಾಗಿಲಿಗೆ ಕಲ್ಲೊಂದು ಬಡಿಯುತ್ತದೆ.ಮತ್ತೆ ನೋಡುತ್ತಾನೆ ಊಹೂಂ “ಗುಂಡಲ್ಲ… ಕಲ್ಲು…!”

ಉಗ್ರರು ಅಮಾಯಕರ ರಕ್ತ ಹರಿಸಿ ಅಲ್ಲಿಂದ ರಾಜಾರೋಷವಾಗಿ ಹೊರಟ ಮೇಲೆ ಬೀಟ್ ನಲ್ಲಿದ್ದ ಪೋಲಿಸ್ ಕಾನ್ಸ್ಟೇಬಲ್ ಗಳು  ಒಂದು ಕೈಯಲ್ಲಿ ಲಾಠಿ ಹಿಡಿದು ಇನ್ನೊಂದು ಕೈಯಲ್ಲಿ ಕಲ್ಲು ಎಸೆದು ಒಳಗಿನಿಂದ “ಗುಂಡು” ಬರುತ್ತಿಲ್ಲ ಅನ್ನುವುದನ್ನು ಕನ್ಫರ್ಮ್ ಮಾಡಿಕೊಂಡು ಒಳಬರುತ್ತಾರೆ. ಹೇಗಿದೆ ನೋಡಿ ಉಗ್ರನ ಕೈಯಲ್ಲಿ “ಎ.ಕೆ ೪೭” ಅವನೆದುರಿಸಲು ಬಂದ ಪೋಲಿಸಣ್ಣನ ಕೈಯಲ್ಲಿ “ಕಲ್ಲು”…! ಇದು ನಮ್ಮ ಭಾರತದ ಆಂತರಿಕ ರಕ್ಷಣಾ ವ್ಯವಸ್ಥೆಯ ಸ್ಥಿತಿ.ಭಾರತದ ಬಂಡವಾಳವನ್ನು ಸರಿಯಾಗಿಯೇ ಅರಿತಿದ್ದ ಪಾಪಿ ಪಾಕಿಗಳು ಆ ೧೦ ಜನರ ತಂಡವನ್ನು ನುಗ್ಗಿಸಿ ಒಂದಿಡಿ ಭಾರತವನ್ನು ದಿನಗಳ ಮಟ್ಟಿಗೆ ಗಾಬರಿ ಬೀಳಿಸಿದ್ದರು. ಮುಂಬೈ ಮಾರಣ ಹೋಮದ ನಂತರ ಆಗಿದ್ದಾದರೂ ಏನು? ಭಾರತ-ಪಾಕಿಸ್ತಾನಗಳು ಸಮರದಂಚಿಗೆ ಬಂದು ನಿಂತವು.ನಮ್ಮ ಸರ್ಕಾರ “ಹೊಡಿಬೇಡಿ.ಹೊಡೆದ್ರೆ ನೋವಾಗುತ್ತೆ” ಅನ್ನುವಂತೆಯೇ ವರ್ತಿಸಿದ್ದಲ್ಲವೇ? ಅದಕ್ಕಿಂತ ಹೆಚ್ಚೆಂದರೆ “ಹೋಗಿ.ನಾವು ನಿಮ್ಮೊಂದಿಗೆ ನಾವು ಕ್ರಿಕೆಟ್ ಆಡುವುದಿಲ್ಲ” ಅಂದರು ಅಷ್ಟೇ…!

ಮತ್ತಷ್ಟು ಓದು »

18
ಆಗಸ್ಟ್

ಸುಭಾಷರ ನೆನಪಿನೊಂದಿಗೆ ಮರೆಯಬಾರದ ಹೆಣ್ಣು

– ಚೇತನಾ ತೀರ್ಥಹಳ್ಳಿ

ಹೆಣ್ಣು- ಮಣ್ಣಿನ ಹಿಂದೆ ಬಿದ್ದವರೆಲ್ಲ ಕೆಡುತ್ತಾರೆ- ಹಾಗನ್ನುತ್ತಾರಲ್ಲವೆ? ಆದರೆ, ಸುಭಾಷರು ಮಾತ್ರ ಕೆಡಲಿಲ್ಲ. ಬದಲಾಗಿ ಉನ್ನತ ಗೌರವವನ್ನೇ ಪಡೆದರು. ಶತಮಾನಗಳ ಕಾಲ ಉಳಿಯುವಂತಾದರು. ಯಾಕೆ ಗೊತ್ತಾ? ಅವರು ಹಂಬಲಿಸಿದ ನೆಲ ಭಾರತ. ಮತ್ತು, ಅವರು ಪ್ರೇಮಿಸಿದ ಹೆಣ್ಣು ಎಮಿಲೀ!……….. ಸುಭಾಷ್ ಅವರನ್ನ ನೆನೆಸಿಕೊಂಡರೆ, ಎಮಿಲಿಗೂ ನಮ್ಮಿಂದ ಒಂದು ಗೌರವ ಸಲ್ಲಲಿ ಅಂತ ಹಾರೈಸ್ತಾ….

“ನಿನ್ನ ನೋಡಲು ಮತ್ತೆಂದೂ ಸಾಧ್ಯವಾಗದೆ ಹೋಗಬಹುದು. ಆದರೆ ನನ್ನ ನಂಬು. ನೀನು ಸದಾ ನನ್ನ ಹೃದಯದಲ್ಲಿ, ಆಲೋಚನೆಗಳಲ್ಲಿ, ಕನಸಲ್ಲಿ ಇದ್ದೇ ಇರುತ್ತೀಯೆ. ಹಾಗೇನಾದರೂ ವಿಧಿ ನಮ್ಮಿಬ್ಬರನ್ನು ಶಾಶ್ವತವಾಗಿ ಅಗಲಿಸಿದನೆಂದುಕೋ… ಮುಂದಿನ ಹುಟ್ಟಿನಲ್ಲಿ ಮತ್ತೆ ನಿನ್ನ ಸೇರಲು ನಾನು ಪರಿತಪಿಸುವೆ. ನನ್ನ ಕಿನ್ನರೀ… Jeden tag denke ich an sie- ನಿನ್ನನ್ನ ಪ್ರತಿದಿನವೂ ನೆನೆಸಿಕೊಳ್ಳುತ್ತೇನೆ”
( ಸುಭಾಷ್ ಚಂದ್ರ ಬೋಸ್, ಎಮಿಲೀ ಶೆಂಕಲ್ ಗೆ ಬರೆದ ಪತ್ರದಲ್ಲಿ)

ನರನರದಲ್ಲಿ ನೆಲದ ಉನ್ಮಾದ. ಹೋರಾಟದ ಕೆಚ್ಚು. ತನ್ನನ್ನೇ ದೇಶದ ಹೆಸರಿಗೆ ಬರೆದಿಟ್ಟ ಪ್ರೌಢ ಗಂಡಸಿನ ಎದೆಯಲ್ಲೂ ಒಂದು ಬೆಚ್ಚಗಿನ ಗೂಡು. ಪುಟ್ಟದೊಂದು ಖಾಸಗಿ ಬದುಕು. ಅಲ್ಲಿ, ಮೊಗೆದಷ್ಟೂ ಚಿಮ್ಮುವ ಪ್ರೀತಿ. ಎದೆ ಸೀಯುವ ವಿರಹದ ಕಾವು. ಕಾಸಗಲ ಕಣ್ಣೆದುರು ಮುಕ್ತ ಭಾರತದ ಕನಸು. ಒಳಗಿನೊಳಗಲ್ಲಿ ಅವಳ ಪ್ರೇಮ ಬಂಧನದ ನೆನಪು.

ಸುಭಾಷ್ ಚಂದ್ರ ಬೋಸ್… ಮತ್ತಷ್ಟು ಓದು »

15
ಆಗಸ್ಟ್

ಗುಂಡಿಗೆ ಎದೆ ಕೊಟ್ಟವ ೧೩ರ ಪೋರ..!

– ರಾಕೇಶ್ ಶೆಟ್ಟಿ

ಸರಿಯಾಗಿ ಇಂದಿಗೆ ೬೯ ವರ್ಶದ ಹಿಂದಿನ,ಅಂದು ಆಗಸ್ಟ್ ೧೫ ,೧೯೪೨ನೆ ಇಸವಿ. ಆಗಿನ್ನೂ ಹುಬ್ಬಳಿಯ ಆಗಸದಲ್ಲಿ ಸ್ವಾತಂತ್ರ್ಯದ ಸೂರ್ಯ ಉದಯಿಸಿದ್ದ.ಹಕ್ಕಿಗಳ ಕಲರವದ ನಡುವೆ , ದುರ್ಗದ ಬಯಲಿನಲ್ಲಿ ‘ವಂದೇ ಮಾತರಂ’ ‘ಭಾರತ ಮಾತಾಕಿ ಜೈ’ ಘೋಷಣೆಗಳು ಮೊಳಗುತಿದ್ದವು. ಅಕ್ಕ ಪಕ್ಕದ ಮನೆಯ ಮಕ್ಕಳೆಲ್ಲ ಆಟವಾಡುತಿದ್ದರೆ ಅವನು ಮಾತ್ರ ಬೆಳಿಗ್ಗೆ ಬೇಗ ಎದ್ದು, ಶ್ವೇತವರ್ಣದ ಜುಬ್ಬಾ-ಪೈಜಾಮ ಧರಿಸಿ, ತನಗಿಂತಲೂ ಎತ್ತರವಿದ್ದ ಒಂದು ಬೊಂಬಿಗೆ ‘ತ್ರಿವರ್ಣ ಧ್ವಜ’ ಕಟ್ಟಿಕೊಂಡವನೇ ಮಲಗಿದ್ದ ತಾಯಿಯ ಬಳಿ ಹೋಗಿ ಅವಳನ್ನು ಎಬ್ಬಿಸಿ ಆಶೀರ್ವದಿಸುವಂತೆ ಕೇಳಿದ. ಶ್ವೇತ ವಸ್ತ್ರಧಾರಿಯಾಗಿ ‘ತ್ರಿವರ್ಣ ಧ್ವಜ’ವನ್ನಿಡಿದ ಮಗನನ್ನು ನೋಡಿ,

ಆ ತಾಯಿ ಕೇಳಿದಳು “ಎಲ್ಲಿ ಹೊರಟೆ ಮಗು?”
“ಅಮ್ಮ , ನಾನು ದುರ್ಗದ ಬಯಲಿನಲ್ಲಿ ನಡೆಯುತ್ತಿರುವ ‘ಕ್ವಿಟ್ ಇಂಡಿಯಾ ಚಳುವಳಿ’ಯಲ್ಲಿ ಪಾಲ್ಗೊಳ್ಳಲು ಹೊರಟಿದ್ದೇನೆ”

“ಆದರೆ ಮಗು, ಅಲ್ಲಿ ಹಿರಿಯರೇ ಇರುತ್ತಾರೆ ಕಣೋ!”
ಮತ್ತಷ್ಟು ಓದು »

13
ಆಗಸ್ಟ್

ಪ್ರಜಾಪ್ರಭುತ್ವಕ್ಕೇ ಮಾರಕವಾಗುವ ವ್ಯಕ್ತಿ ಪೂಜೆ

ಡಾ ಅಶೋಕ್ ಕೆ ಆರ್Modi12

‘ಒಂದೂರಲ್ಲಿ ಒಬ್ಬ ರಾಜ ಇದ್ದ. ಆತನಿಗೊಬ್ಬಳು ಸುರಸುಂದರಿ ಮಗಳು. ರಾಜನ ವೈರಿಗಳು ರಾಜನ ಮೇಲಿನ ದ್ವೇಷಕ್ಕೆ ಯುವರಾಣಿಯನ್ನು ಅಪಹರಿಸಿಬಿಟ್ಟರು. ಯುವರಾಣಿ ಅಘಾತಕ್ಕೊಳಗಾಗಿ ಮೂರ್ಛೆ ತಪ್ಪಿದಳು. ಆಘಾತದಿಂದ ಹೊರಬಂದ ಮೇಲೆ ನೋಡುತ್ತಾಳೆ ಯಾವುದೋ ಗುಹೆಯೊಳಗೆ ಕೈ ಕಟ್ಟಿಹಾಕಿಹಾಕಿದ್ದಾರೆ. ಹೊರಗಡೆ ಪಹರೆ. ಚಾಕಚಕ್ಯತೆಯಿಂದ ಕೈಗೆ ಕಟ್ಟಿದ್ದ ಹಗ್ಗವನ್ನು ಬಿಡಿಸಿ ವೈರಿಗಳೊಂದಿಗೆ ಶೌರ್ಯದಿಂದ ಹೊಡೆದಾಡಿ……..’ ರೀ ರೀ ರೀ ಕಥೆ ಹೋಗೋದು ಆ ರೀತಿ ಅಲ್ಲ …… ‘ಪಕ್ಕದ ದೇಶದ ಯುವರಾಜ ಏಕಾಂಗಿಯಾಗಿ ವೈರಿಗಳ ಮೇಲೆ ಕಾದಾಡಿ ಯುವರಾಣಿಯನ್ನು ರಕ್ಷಿಸುತ್ತಾನೆ. ಯುವರಾಜನ ಸಾಹಸಕ್ಕೆ ಮನಸೋತ ಯುವರಾಣಿಗೆ ಪ್ರೇಮಾಂಕುರವಾಗುತ್ತದೆ. ಹಿರಿಯರ ಆಶೀರ್ವಾದದೊಂದಿಗೆ ಮದುವೆಯಾಗಿ ನೂರ್ಕಾಲ ಚೆನ್ನಾಗಿ ಬಾಳಿ ಬದುಕುತ್ತಾರೆ’ ಇದು ಕಥೆ ಸಾಗುವ ರೀತಿ! ಚಿಕ್ಕಂದಿನಿಂದಲೂ ಈ ರೀತಿಯ ಕಥೆಗಳನ್ನೇ ಕೇಳಿ ಬೆಳೆದ ನಮಗೆ ಯುವರಾಣಿ ಅಬಲೆಯಲ್ಲ ಬಲಿಷ್ಠೆ, ತನ್ನನ್ನು ತಾನು ಕಾಪಾಡಿಕೊಳ್ಳಲು ಎಂದರೆ ಜೀರ್ಣಿಸಿಕೊಳ್ಳುವುದು ಕಷ್ಟವಾಗುತ್ತದಲ್ಲವೇ? ಯುವರಾಣಿಯ ಸಹಾಯಕ್ಕೆ ಯುವರಾಜನೊಬ್ಬ ಬೇಕೇ ಬೇಕು ಎಂಬ ಸಿದ್ಧಾಂತ ನಮ್ಮದು! ಮತ್ತಷ್ಟು ಓದು »