ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

12
ಆಗಸ್ಟ್

ಇನ್ನು10 ತಿಂಗಳಲ್ಲಿ ಭಾರತ ಚೀನಾ ನಡುವೆ ಸಂಭವನೀಯ ಯುದ್ಧ?

– ಗಣೇಶ್ ಕೆ ದಾವಣಗೆರೆ

chini yuddhaಚೀನಾದ ತಗಾದೆ ಶುರುವಾದಮೇಲೆ ಭಾರತ ೬೪ ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸೇನೆಗೆ ಹೊಸ ಆಯಾಮ ನೀಡುವ ಯೋಜನೆಗೆ ಅಸ್ತು ಎಂದಿದೆ. ಸಾವಿರಾರು ಸೇನೆಯ ತುಕಡಿಗಳನ್ನ ಹೊಂದಿದ ಸ್ಟ್ರೈಕಿಂಗ್ ಕಾರ್ಪ್ ನಿಯೋಜಿಸಲು ಉದ್ದೇಶಿಸಿದೆ. ಹಿಂದಿನ ವಾರದ ದಿ ವೀಕ್ ಪ್ರಕಟಿಸಿರುವ ಸೇನಾ ವಲಯದ ಅಭಿಮತದ ಪ್ರಕಾರ ಚೀನಾ ನಮ್ಮ ಮೇಲೆ ಎರಗಿ ಬರುವುದು ಅಷ್ಟೇನೂ ಸುಲಭದ ಕೆಲಸವೇನಲ್ಲ. ಚೀನೀಯರು ಆಕ್ರಮಣ ಮಾಡಿದರೆ, ಭಾರತವು ಚೀನಾದ ದುರ್ಬಲ ವಲಯಗಳ ಮೇಲೆ ಆಕ್ರಮಣ ಮಾಡಲಿದೆ. ಟಿಬೆಟ್ ಮೂಲಕ ಸಾವಿರಾರು ಕಿಲೋಮೀಟರ್ ಉದ್ದದ ರೈಲು ಮಾರ್ಗ ನಿರ್ಮಿಸಿ ಸೇನೆಯನ್ನ, ಜನರನ್ನ ವಾಯುಪುತ್ರನ ವೇಗದಲ್ಲಿ ಸಾಗಿಸುತ್ತೇವೆ ಎಂದು ಬೀಗುತ್ತಿರುವ ಚೀನಾ ಅದೇ ಕಾರಣಕ್ಕಾಗಿ ಕಳವಳಗೊಂಡಿದೆ. ಟಿಬೆಟ್‌ನಲ್ಲಿರುವ ರೈಲು ಮಾರ್ಗ ಹಲವಾರು ಸೇತುವೆಗಳನ್ನ ಒಳಗೊಂಡಿದೆ. ಜೊತೆಗೆ ಅಲ್ಲಿ ಬೆಂಗಾಡು. ಎಷ್ಟೇ ಎತ್ತರದಿಂದ ನೋಡಿದರೂ ನೆಲ ಕಾಣುತ್ತದೆ. ನಾಲ್ಕು ಸೇತುವೆಗಳನ್ನ ಒಡೆದು ಹಾಕಿದರೆ ಚೀನೀಯರು ಸೇನೆಯನ್ನ ಜಮಾವಣೆ ಮಾಡಲಿಕ್ಕೆ ರೈಲನ್ನ ಬಳಸಲಿಕ್ಕೆ ಸಾಧ್ಯವೇ ಇಲ್ಲ. ಅವನ್ನ ಮರು ನಿರ್ಮಿಸಿ ರೈಲು ಚಲಿಸುವ ಹೊತ್ತಿಗೆ ವಾರಗಳೇ ಬೇಕಾಗುತ್ತವೆ. ಜೊತೆಗೆ, ಟಿಬೆಟಿನಲ್ಲಿ ಹರಿಯುವ ನದಿಗಳಿಗೆ ರಾತ್ರೋ ರಾತ್ರಿ ಸೇತುವೆಗಳನ್ನ ಕಟ್ಟಿಕೊಡುವ ಕಠಿಣ ಪರಿಶ್ರಮದ, ಚಾಣಾಕ್ಷ, ಸಮರ್ಥ ಎಂಜಿನಿಯರುಗಳ ಬಳಗವಿದೆ ಭಾರತಕ್ಕೆ. ನಮ್ಮ ಸೇನೆಯ ಎಂಜಿನಿಯರುಗಳ ಈ ಎಲ್ಲ ವಿಶೇಷಣಗಳೂ ಮೊನ್ನೆ ಮೊನ್ನೆ ಸಂಭವಿಸಿದ ಉತ್ತರಾಖಂಡದ ಪ್ರಾಕೃತಿಕ ಅವಗಢದ ಸಮಯದಲ್ಲಿ ಸಾಬೀತಾಗಿದೆ.

ಮತ್ತಷ್ಟು ಓದು »

5
ಆಗಸ್ಟ್

ಭಯೋತ್ಪಾದನೆ, ರಾಜಕೀಯ ನೇತಾರರು ಮತ್ತು ಮಾಧ್ಯಮಗಳು

– ಪ್ರೇಮಶೇಖರ
Terrorismತೀರಾ ಇತ್ತೀಚಿನವರೆಗೂ ಭಯೋತ್ಪಾದನಾ ಧಾಳಿಗಳಿಗೆ ಸಂಬಂಧಿಸಿದಂತೆ ಇರಾಕ್ ಮತ್ತು ಪಾಕಿಸ್ತಾನಗಳ ನಂತರ ಭಾರತ ವಿಶ್ವದಲ್ಲಿ ಮೂರನೆಯ ಸ್ಥಾನದಲ್ಲಿತ್ತು.  ಈಗಲೂ ಈ ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳೇನೂ ಗಮನಾರ್ಹವಾಗಿ ತಗ್ಗಿಲ್ಲ.  ಆಂತರ್ಯುದ್ಧದ ದಳ್ಳುರಿಗೆ ಸಿಲುಕಿರುವ ಸಿರಿಯಾ, ಲಿಬಿಯಾಗಳು ಭಾರತವನ್ನು ಕೆಳಕ್ಕೆ ತಳ್ಳಿವೆ ಅಷ್ಟೆ.  ಅಂಕಿಅಂಶಗಳ ಪ್ರಕಾರ ೧೯೮೧ರಲ್ಲಿ ಖಲಿಸ್ತಾನ್ ಚಳುವಳಿ ಆರಂಭವಾದಂದಿನಿಂದ ಈ ದೇಶದಲ್ಲಿ ನಾಲ್ಕುಸಾವಿರ್ವಕ್ಕೂ ಅಧಿಕ ಭಯೊತ್ಪಾದನಾ ಧಾಳಿಗಳಾಗಿವೆ ಮತ್ತು ಈ ಪಿಡುಗಿಗೆ ದಿನಕ್ಕೆ ಸರಾಸರಿ ನಾಲ್ವರು ಭಾರತೀಯರು ಬಲಿಯಾಗುತ್ತಿದ್ದಾರೆ.
ಭಯೋತ್ಪಾದನೆ ಹೀಗೆ ಅವ್ಯಾಹತವಾಗಿ ಘಟಿಸುತ್ತಲೇ ಇರುವುದಕ್ಕೆ ಭಯೋತ್ಪಾದಕರ ರಕ್ತದಾಹದಷ್ಟೇ ನಮ್ಮ ರಾಜಕೀಯ ನೇತಾರರ ಹಾಗೂ ಮಾಧ್ಯಮಗಳ ಸ್ವಾರ್ಥಪರ ಬೇಜವಾದ್ದಾರಿಯುತ ವರ್ತನೆಯೂ ಕಾರಣ.  ಈ ಬಗೆಗಿನ ವಿಶ್ಲೇಷಣೆಯನ್ನು, ಪುಣೆ ಸ್ಫೋಟಗಳಿಗೆ ಸಂಬಂಧಿಸಿದಂತೆ ಅಪಾದಿತನಾಗಿರುವ ಸೈಯದ್ ಮಖ್ಬೂಲ್ ದೆಹಲಿ ಪೊಲೀಸರಿಗೆ ನೀಡಿದ ಈ ಹೇಳಿಕೆಯಿಂದ ಪ್ರಾರಂಭಿಸೋಣ:
ಪ್ರತಿಯೊಂದು ಧಾಳಿಯ ನಂತರವೂ ರಾಜಕೀಯ ಹೇಳಿಕೆಗಳು ಹೊರಬರುತ್ತವೆ ಮತ್ತು ಇವು ಆ ರಾಜಕೀಯ ನೇತಾರರ ಒತ್ತಡಕ್ಕೆ ಸಿಲುಕುವ ತನಿಖಾದಿಕಾರಿಗಳನ್ನು ಅಂತಿಮವಾಗಿ ಗೊಂದಲಕ್ಕೀಡುಮಾಡುತ್ತವೆ.  ಪ್ರತಿಕ್ರಿಯಿಸಲು ಇವರಿಗೆ ಸ್ವಲ್ಪ ಸಮಯ ಹಿಡಿಯುತ್ತದೆ ಮತ್ತು ನಮಗೆ ಸಿಗುವ ಈ ಹೆಚ್ಚುವರಿ ಸಮಯ ತಪ್ಪಿಸಿಕೊಳ್ಳಲು ನಮಗೆ ಅವಕಾಶ ಮಾಡಿಕೊಡುತ್ತದೆ.
25
ಜುಲೈ

ಮೋದಿ ಸ್ವಲ್ಪ ಸಿಹಿ , ಸ್ವಲ್ಪ ಕಹಿ

– ಕೆ.ಎಂ.ವಿಶ್ವನಾಥ (ಮಂಕವಿ) ಮರತೂರ

Modi12ನಮ್ಮ ಭಾರತ ಬಹು ಭವ್ಯವನ್ನು ಮೆರೆಯುವ ದೇಶ, ಪ್ರಪಂಚದಲ್ಲೆ ಉತ್ತಮವಾದ ಇತಿಹಾಸ ಹೊಂದಿರುವ ದೇಶ ಅನೇಕ ಅದ್ಭುತಗಳಿಗೆ ಹೆಸರಾದ ದೇಶ , ರಾಜಕೀಯದಲ್ಲಿ ಈಡಿ ಪ್ರಪಂಚವೆ ಕಣ್ಣರಳಿಸಿ ನೋಡುವಂತೆ ಇರುವ ದೇಶ , ಇಂದಿನ ರಾಜಕೀಯ ಏಕೊ ಬೇಸರ ಮೂಡಿಸುತ್ತಿದೆ. ಏಕೆಂದರೆ ಎಲ್ಲವು ಗಿಮಿಕ್ ಬರಿ ಜಾಹಿರಾತು ಜೀವನ ಜಾಹಿರಾತಿನಲ್ಲಿ ರಾಜಕೀಯ ನೈಜವಾಗಿ ಜನರ ಮುಟ್ಟು ಕೆಲಸಗಳು ಆಗುತ್ತಿಲ್ಲ ಎಂಬುವುದು ಭಾರತೀಯರ ಪಾಲಿಗೆ ಕಹಿಸತ್ಯ.

ಇತ್ತಿಚಿಗೆ ನಮ್ಮ ಅಂತರಜಾಲ ತಾಣಗಳಲ್ಲಿ ಮಾನ್ಯ ಮೋದಿಯವರ ವಿಚಿತ್ರ ಜಾಹಿರಾತುಗಳನ್ನು ನೋಡಿ ಗಾಬರಿ ಹುಟ್ಟಿಸುತ್ತವೆ. ಇನ್ನೇನು ತಾನು ಈ ದೇಶದ ಪ್ರಧಾನಿಯಾಗಿರುವೇನು ಎಂಬ ಕಲ್ಪನೆ ಅವು ನೊಡುಗರಿಗೆ ಮೂಡಿಸುತ್ತವೆ. ಮುಗ್ದ ಜನರನ್ನು ಇನ್ನಷ್ಟು ಮಂದರನ್ನಾಗಿ ಮಾಡುವ ಈ ಜಾಹಿರಾತುಗಳು ಅವರಿಂದ ಅದೆಷ್ಟು ಹಣ ವಸೂಲಿ ಮಾಡಬಹುದು ಲೆಕ್ಕಹಾಕಿ ನಾಳೆ ಇವರು ನಮ್ಮ ದೇಶದ ಪ್ರಧಾನಿಯಾದರೆ ಈಡಿ ನಮ್ಮ ದೇಶವನ್ನು ಜಾಹಿರಾತಿನಲ್ಲಿ ಮುಳಗಿಸುವುದರಲ್ಲಿ ಸಂದೇಹವೆ ಇಲ್ಲಾ.

ಮೊನ್ನೆ  ಪ್ರತಾಪ ರವರು ಬರೆದ ಮೋದಿ ಯಾರು ತುಳಿಯದ  ಹಾದಿ ಪುಸ್ತಕ ಓದಿದೆ ಅಲ್ಲಿ ಪುಸ್ತಕ ದುದ್ದಕ್ಕು  ಅವರ ವ್ಯಕ್ತಿತ್ವ ಬಹಳ ಮಾರ್ಮಿಕವಾಗಿ ಬರೆದಿದ್ದಾರೆ. ಅವರು ಅತಿ ಚಿಕ್ಕ ವಯಸ್ಸಿನಲ್ಲಿಯೆ ಈ ರಾಜಕೀಯ ಹಾದಿ ಹಿಡಿದು ಆರ್ ಎಸ್ ಎಸ್ ನ ಪಕ್ಕ ಕಾರ್ಯಕರ್ತನಾಗಿ ಮತ್ತೆ ಅದೆ ಗರಡಿಯಲ್ಲಿ ಪಳಗಿದ ಹುಲಿ ಎಂಬ ಮಾತು ಒಂದಡೆ ಕೇಳಿ ಬರುತ್ತದೆ. ಅವರ ಛಲ ಸಾಧನೆ ಎಲ್ಲವು ಮೆಚ್ಚಲೇಬೇಕು ಒಬ್ಬ ವ್ಯಕ್ತಿ ಯಾರ ಸಹಾಯವಿಲ್ಲದೆ ರಾಜಕೀಯ ರಂಗದಲ್ಲಿ ಅಷ್ಟು ಮೇಲೆತ್ತರಕ್ಕೆ ಬೆಳಿಯುವವುದು ಸಾಮಾನ್ಯವಾದ ಮಾತಲ್ಲಾ, ಆದರೆ ತಾನು ಈ ದೇಶದ ಪ್ರಧಾನಿಯಾಗಬೇಕು ಎನ್ನುವುದು ಸಾಮಾನ್ಯ ಜನ ಮಾತಾಡಿ ಅವರಿಗೆ ಗೌರವದಿಂದ ಸೂಚಿಸಬೇಕು, ಆದರೆ ಅದೇಕೊ ಮೋದಿಯವರು ಈ ಜಾಹಿರಾತಿನ ಸಹಾಯ ಪಡೆದು ತಾವು ಮುಂದಿನ ಪ್ರಧಾನಿಯೆಂದು ಬಿಂಬಿಸುತ್ತಿರುವರು ತಿಳಿಯದು, ಇದು ಹುಲಿಗೆ ಹೋಲಿಸುವ ರೀತಿ ಸರಿಯೆ ನೀವೆ ಯೋಚಿಸಿ.
ಮತ್ತಷ್ಟು ಓದು »

22
ಜುಲೈ

ಕಾಂಗ್ರೆಸ್ಸಿನ ‘ನಮೋ’ನಿಯಾ ಮತ್ತು ಸೆಕ್ಯುಲರ್ ‘ನಾಯಿಮರಿ’

–  ರಾಕೇಶ್ ಶೆಟ್ಟಿ

NaModiಭಾರತದಲ್ಲಿ ಭಾವುಕತೆಗೇನಾದರೂ ಬರವುಂಟೇ? ಹಾಗೇನಾದರೂ ಇದ್ದಿದ್ದರೆ ನಮ್ಮ ಸ್ಥಿತಿ ಸ್ವಲ್ಪಮಟ್ಟಿಗಾದರೂ ಸುಧಾರಿಸುತ್ತಿತ್ತೋ ಏನೋ? ಆದರೆ,ಭಾವುಕತೆ ಅನ್ನುವುದು ನಮ್ಮ ಅಸ್ಮಿತೆಯ ಭಾಗವಾಗಿರುವುದರಿಂದಲೇ ನಮ್ಮ ರಾಜಕಾರಣಿಗಳು,ರಾಜಕೀಯ ಪಕ್ಷಗಳು ಪದೇ ಪದೇ ಭಾವುಕತೆಯ ಬಿರುಗಾಳಿಯೆಬ್ಬಿಸಿ ತಮ್ಮ ಹಗರಣ,ವೈಫಲ್ಯಗಳನ್ನು ಮುಚ್ಚಿಕೊಳ್ಳುವುದು.ಅದರಲ್ಲೂ ಇಂತ ವಿಷಯದಲ್ಲಿ ಕಾಂಗ್ರೆಸ್ಸ್ ಪಕ್ಷದ್ದು ಉಳಿದೆಲ್ಲರಿಗಿಂತ ಒಂದು ‘ಕೈ’ ಮೇಲೆಯೇ ಹೌದು.

೨೪ ಗಂಟೆಯ ಮೀಡಿಯಾ ಯುಗದಲ್ಲಿ ದೊಡ್ಡ ದೊಡ್ಡ ಹಗರಣಗಳು ಸುದ್ದಿಯಾದಗಾಲೆಲ್ಲ ಕಾಂಗ್ರೆಸ್ಸ್ ಅದರಿಂದ ಹೊರಬರಲು ಒಂದು ಸಣ್ಣ ಎಳೆಯೇನಾದರೂ ಸಿಗುತ್ತದೆಯಾ ಅಂತ ನೋಡುತ್ತಿರುತ್ತದೆ.ಈ ಬಾರಿ ರೂಪಾಯಿ ಮೌಲ್ಯ ಕುಸಿದು,ಆಡಳಿತ ವ್ಯವಸ್ಥೆಯೇ ಹಳ್ಳ ಹಿಡಿದು ಕುಳಿತಿರುವಾಗ ಅದಕ್ಕೆ ಕಾಣಿಸಿದ ಬೆಳಕಿನ ಹಾದಿ “ನಾಯಿ ಮರಿ”…!

ಹೌದು. ಗುಜರಾತ್ ಮುಖ್ಯಮಂತ್ರಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಬಳಸಿದ ನಾಯಿ ಮರಿ ಪದ.ರಾಯಿಟರ್ಸ್ ನೀಡಿದ ಸಂದರ್ಶನದಲ್ಲಿ ನಾಯಿ ಮರಿ ಬಂದಿದ್ದು ಹೇಗೆ ಅಂತ ನೋಡಿದರೆ,

ಸಂದರ್ಶಕ: “ಏನು (೨೦೦೨ ರ ಗಲಭೆ) ನಡೆಯಿತೋ ಆ ಬಗ್ಗೆ ನೀವು ಪಶ್ಚಾತ್ತಾಪ ಪಡುತ್ತಿರಾ?”

ಮತ್ತಷ್ಟು ಓದು »

18
ಜುಲೈ

ಮುಸ್ಲಿಂ ಸಮುದಾಯದ ಉತ್ಪ್ರೇಕ್ಷಿತ ಕೊರಗುಗಳು

– ಪ್ರೇಮ ಶೇಖರ

Bharatiya Muslimaru“ಇಂದು ಈ ದೇಶದಲ್ಲಿ ಹಿಂಸೆ, ಹತ್ಯಾಕಾಂಡಗಳು ನಡೆದಿರುವುದು ಜಾತಿ ಸಮಾವೇಶ, ರ‍್ಯಾಲಿಗಳಿಂದಲ್ಲ. ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ಏರ್ಪಡಿಸಿಕೊಂಡು ಬಂದ ಹಿಂದೂ ಸಮಾಜೋತ್ಸವದಂತಹ ಸಮಾವೇಶಗಳು, ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ್ದವು.  ಹಲವು ಕೋಮುಗಲಭೆಗಳಿಗೆ, ಹಿಂಸೆಗಳಿಗೆ ಬಿಜೆಪಿ ಮತ್ತು ಆರೆಸ್ಸೆಸ್‌ನ ರ‍್ಯಾಲಿಗಳು ಕಾರಣವಾಗಿವೆ.  ಅವು ಸಮಾಜವನ್ನು, ದೇಶವನ್ನು ಒಡೆದಿವೆ.”

ಉತ್ತರ ಪ್ರದೇಶದಲ್ಲಿ ಜಾತಿಯಾಧಾರಿತ ರ‍್ಯಾಲಿಗಳನ್ನು ನಿರ್ಬಂಧಿಸಿ ಕಳೆದ ಗುರುವಾರ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಮರುದಿನವೇ ಅಂದರೆ ಶುಕ್ರವಾರ ಪ್ರಕಟವಾದ ಕನ್ನಡ ದೈನಿಕವೊಂದರ ಸಂಪಾದಕೀಯದಲ್ಲಿ ಕಂಡುಬಂದ ಸಾಲುಗಳಿವು.  ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ನಡೆಸಿಕೊಂಡು ಬಂದ ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಹೇಳುವ ಈ ಸಂಪಾದಕೀಯ ಅಕ್ಬರುದ್ದೀನ್ ಒವೈಸಿಯಂತಹ ಮಂದಿಗಳು ಹದಿನೈದು ನಿಮಿಷಗಳಲ್ಲಿ ಹಿಂದೂಗಳನ್ನು ಮಟ್ಟಹಾಕುತ್ತೇವೆಂದು ಘೋಷಿಸುವ ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಮೌನವಾಗಿದೆ.

ನನ್ನ ಅರಿವಿನ ಪ್ರಕಾರ ಈ ದೇಶ “ಒಡೆದದ್ದು” ೧೯೪೭ರಲ್ಲಿ ಮತ್ತು ಅದಕ್ಕೆ ಆರೆಸ್ಸೆಸ್ ಆಗಲೀ, ಬಿಜೆಪಿಯಾಗಲೀ ಏರ್ಪಡಿಸಿದ ರ‍್ಯಾಲಿಗಳು ಕಾರಣವಾಗಿರಲಿಲ್ಲ.  ಬ್ರಿಟಿಷ್ ವಸಾಹತುಶಾಹಿ ಆಳರಸರ ಕೈಗೊಂಬೆಯಾಗಿ, ಅವರ ಸಕ್ರಿಯ ಸಹಕಾರದಿಂದ ಮುಸ್ಲಿಂ ಲೀಗ್ ನಡೆಸಿದ ರ‍್ಯಾಲಿಗಳು ಸಮಾಜವನ್ನು ಒಡೆದವು ಮತ್ತು ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಮುಸ್ಲಿಂ ಲೀಗ್ ಆಗಸ್ಟ್ ೧೬, ೧೯೪೬ರಂದು ಕಲ್ಕತ್ತಾ ನಗರದಲ್ಲಿ ಆಯೋಜಿಸಿದ “ಡೈರೆಕ್ಟ್ ಆಕ್ಷನ್ ಡೇ” ಎಂಬ ಕೋಮುವಾದಿ ರ‍್ಯಾಲಿ ಮತ್ತದು ಬಲಿತೆಗೆದುಕೊಂಡ ಸುಮಾರು ನಾಲ್ಕುಸಾವಿರ ಜೀವಗಳು ದೇಶದ ಐಕ್ಯತೆಗೆ ಅಂತಿಮ ಹೊಡೆತ ನೀಡಿ ಭಾರತ ಇಬ್ಬಾಗವಾಗಲು ಕಾರಣವಾದವು.  ಭಾರತವಷ್ಟೇ ಇಬ್ಬಾಗವಾಗಲಿಲ್ಲ, ಮುಸ್ಲಿಂ ಲೀಗ್‌ನ ಮೂರ್ಖತನದಿಂದಾಗಿ ಉಪಖಂಡದ ಬಲಿಷ್ಟ ಮುಸ್ಲಿಂ ಸಮುದಾಯವೂ ಇಬ್ಬಾಗವಾಯಿತು. ೧೯೭೧ರಲ್ಲಿ ಅದು ಮೂರು ಭಾಗಗಳಾಗಿ ಹೋಳಾಗಿ ಮತ್ತಷ್ಟು ಕೃಶವಾಯಿತು.  ಈ ಒಡೆಯುವಿಕೆಗೂ ಬಿಜೆಪಿಯಾಗಲೀ, ಆರೆಸ್ಸೆಸ್ ಆಗಲೀ ಕಾರಣವಾಗಿರಲಿಲ್ಲ.
ಮತ್ತಷ್ಟು ಓದು »

17
ಜುಲೈ

‘ಹಿಂದು’ ಶಬ್ದ ಕೇಳುತ್ತಲೇ ಇವರೇಕೆ ಹುಯಿಲೆಬ್ಬಿಸುತ್ತಾರೆ?

– ಪ್ರವೀಣ್ ಪಟವರ್ಧನ್

Modi12ಕೆಲ ದಿನಗಳ ಹಿಂದಷ್ಟೇ ಬೋಧ್ಗಯಾ ಬಾಂಬ್ ಬ್ಲಾಸ್ಟ್ ಪ್ರಕರಣದ ನಂತರ ನೀಡಿದ್ದ ವಿಚಿತ್ರ- ವಿಕೃತ ಹೇಳಿಕೆಗಳನ್ನು ಆಧರಿಸಿ, ತಮಗೆ ಸಮಯ ಬಂದಾಗಲೆಲ್ಲಾ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಿ, ಇತರರ (ಉದ್ದೇಶಪೂರ್ವಕವಾಗಿ ಗುಜರಾತಿನ ಮುಖ್ಯಮಂತ್ರಿ ಮೋದಿಯವರ) ತೇಜೋವಧೆ ಮಾಡುವ ಕಾಂಗ್ರೆಸ್ಸಿಗ “ಒಸಾಮಾ ಜೀ” ಎಂದು ಮುಕ್ತ ಮನಸ್ಸಿನಿಂದ ಮರ್ಯಾದೆ ನೀಡಿದ ಖ್ಯಾತಿಯ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯಸಿಂಗ್ ಅವರನ್ನು ಕುರಿತು Facebook  ಜಾಲತಾಣದಲ್ಲಿ ಒಂದು ವ್ಯಂಗ್ಯ ಚಿತ್ರ ಹರಿದಾಡುತ್ತಿತ್ತು. ಸಂಕ್ಷಿಪ್ತವಾಗಿ ಹೇಳುವುದಾದರೆ ವ್ಯಂಗ್ಯಚಿತ್ರದಲ್ಲಿ ಇದ್ದುದು ಇಷ್ಟೇ. “ಟೀವಿಯಲ್ಲಿ ದಿಗ್ವಿಜಯಸಿಂಗ್ ಒಂದು ಪತ್ರಿಕಾ ಹೇಳಿಕೆ ನೀಡುತ್ತಿದ್ದಾಗ ಮನೆಯಲ್ಲಿನ ಸಾಕಿದ ನಾಯಿಗಳು ಟೀವಿ ನೋಡುತ್ತಾ ಬೊಗಳುತ್ತಿವೆ. ಮುಂದೇನೂ ಹೇಳಲಾರೆ. ನೀವೇ ಅರ್ಥ ಮಾಡಿಕೊಳ್ಳಬಲ್ಲಿರಷ್ಟೇ.

ರಾಜಕಾರಣಿಯೆಂದರೆ ಅಲ್ಲಿ ವಾದ-ವಿವಾದಗಳು ಸಾಮಾನ್ಯ. ಈಗಿನ ರಾಜಕಾರಣದಲ್ಲಿ ಜನಪರ ಕೆಲಸ ಮಾಡುವುದಕ್ಕಿಂತ ವಾದಗಳಿಗೆ ಸಿಲುಕಿಕೊಳ್ಳುವುದೇ ಹೆಚ್ಚು. ಒಬ್ಬರ ಮೇಲೋಬ್ಬರ ಕೆಸರೆರಚಾಟ. ವಿರೋಧ ಪಕ್ಷದ ವ್ಯಕ್ತಿಯ ತೇಜೋವಧೆ, ಸುಳ್ಳು ಆರೋಪ, ಅರ್ಥವಿಹೀನ ಹೇಳಿಕೆ ಇವೆಲ್ಲವೂ ಕೆಸರೆರೆಚಾಟದ ವಿವಿಧ ಮುಖಗಳು. ನಿಮ್ಮ ಸರ್ಕಾರ ಹೀಗೆ ಮಾಡಿದ್ದು ಸರಿಯೇ ಎಂಬ ಪ್ರಶ್ನೆಗೆ ಸಿಗುವ ಉತ್ತರ, ನಮ್ಮ ಹಿಂದಿನ ಸರ್ಕಾರ ಇದಕ್ಕಿಂತಲೂ ಕೆಟ್ಟ ಕೆಲಸ ಮಾಡಿತ್ತು ಅದರ ಬಗ್ಗೆ ಮಾತಾಡೋಣವೇ ಎಂದು ಕುಟುಕಿ ತಮ್ಮ ಲೋಪಗಳನ್ನು cover-up ಮಾಡಿಕೊಳ್ಳುವವರೇ ಈ ದಿನ ಹೆಚ್ಚು.

ಮತ್ತಷ್ಟು ಓದು »

8
ಜುಲೈ

’ಹರಶರಣ ದೆನಿಲೋನ ಹಾದಿಯಲ್ಲಿ’ ಶಿವಪ್ರಕಾಶರ ಲೇಖನಕ್ಕೊಂದು ಪ್ರತಿಕ್ರಿಯೆ

-ಬಾಲಚಂದ್ರ ಭಟ್

Danielouಈ ಲೇಖನ ಪ್ರಜಾವಾಣಿಯಲ್ಲಿ ಪ್ರಕಟವಾದ ಎಚ್.ಎಸ್.ಶಿವಪ್ರಕಾಶರ ಜುಲೈ ೫ ರಂದು ಪ್ರಕಟವಾದ ’ಹರಶರಣ ದೆನಿಲೋನ ಹಾದಿಯಲ್ಲಿ’ ಬರಹಕ್ಕೆ ಪ್ರತಿಕ್ರಿಯೆ. ಬಹಳಷ್ಟು ವಿಷಯಗಳನ್ನು ಲೇಖನದಲ್ಲಿ ಉಲ್ಲೇಖಿಸಿದ್ದನ್ನು ಓದಿದ ನಂತರ ಸ್ವಲ್ಪ ಲೇಖನ ಏನು ಹೇಳಹೊರಟಿದೆಯೆಂಬುದರ ಬಗ್ಗೆ ಗೊಂದಲ ಮೂಡಿತು. ನಾನು ತಿಳಿದುಕೊಂಡಂತೆ ಲೇಖಕರು ಒಟ್ಟಾರೆಯಾಗಿ ಏನು ಹೇಳುತ್ತಾರೆಂದರೆ,

೧. ಆಲೆನ್ ದೆನಿಲೋ ನ ವಿಚಾರಗಳು, ಬಹುತೇಕ ಭಾರತೀಯ ಆಧ್ಯಾತ್ಮಿಕ ಪರಿಕಲ್ಪನೆಗಳಿಗಿಂತ(‘ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತ’) ಭಿನ್ನವಾಗಿತ್ತು, ಹಾಗೂ

೨. ಭಾರತದ ಆಧ್ಯಾತ್ಮಿಕ ವಿಷಯಗಳ ಬಗ್ಗೆ ’ಸ್ಟೀರಿಯೊಟೈಪಡ್ ಪೌರಾತ್ಯ’ ಚಿಂತನೆಗಳಿಂದ, ಹಾಗೂ ವಸಾಹತುಶಾಹಿ ಪರಿಕಲ್ಪನೆಗಳಿಂದ ಹೊರತಾಗಿದ್ದವು.

ಈ ಮೇಲಿನ ಎರಡು ಲೇಖಕರ ಅಭಿಪ್ರಾಯಗಳನ್ನು ಈ ಕೆಳಗಿನಂತೆ ವಿಮರ್ಶಿಸಿದ್ದೇನೆ.ಹಾಗೆಯೆ ಪ್ರಶ್ನೆಗಳ ಮೂಲಕ ನನ್ನಲ್ಲಿನ ಗೊಂದಲಗಳನ್ನ ಪ್ರಸ್ತಾಪಿಸಿದ್ದೇನೆ. ತಪ್ಪಿದ್ದಲ್ಲಿ ಸರಿಪಡಿಸಿ.

೧. ನಾನು ಹಾಗೆ ತಿಳಿದುಕೊಳ್ಳಲು ಕಾರಣ ಶಿವಪ್ರಕಾಶರು ಹೀಗೆ ಉಲ್ಲೇಖಿಸಿರುವದು: “ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತವನ್ನೇ ಭಾರತದ ಸಾರ ಸರ್ವಸ್ವವೆನ್ನುವರು ಆ ಕಾಲದ ಬಹಳ ಮಂದಿ ವಿದ್ವಾಂಸರು. ಅವರಲ್ಲಿ ಬಹುತೇಕ ಪ್ರಭೃತಿಗಳು ಭಾರತೀಯರೆಂದರೆ ಜೀವನೋತ್ಸಾಹ, ರಾಗರತಿಗಳಿಲ್ಲದ ಓಡುಗಾಲ ಯೋಗಿಗಳೆಂದು ಬಗೆದಿದ್ದರು. ಆದರೆ ವಿದ್ವತ್ತು, ರಸಗ್ರಾಹಿತ್ವ ಮತ್ತು ವ್ಯಕ್ತಿಗತ ಆಧ್ಯಾತ್ಮಿಕ ಸಾಧನೆಗಳ ತ್ರಿವೇಣಿಸಂಗಮವಾಗಿದ್ದ ದೆನಿಲೋ ಒತ್ತು ನೀಡಿದ್ದು ಭಾರತೀಯರ ರಸವಿಮುಖಿಯಾದ ಸಮಣಪಂಥೀಯ ಅಧ್ಯಾತ್ಮವಾದಕ್ಕಲ್ಲ, ಐಂದ್ರಿಕ ಜಗತ್ತಿಗೆ ತನ್ನನ್ನು ಪೂರ್ಣವಾಗಿ ತೆರೆದುಕೊಂಡು ಹಾಕುವ ಪ್ರತಿಯೊಂದು ತುತ್ತನ್ನೂ ಬಿಂದುವಾಗಿ ಮಾಡಿಕೊಂಡ ಶೈವ-ಶಾಕ್ತರ ಪೂರ್ಣಾದ್ವೈತಕ್ಕೆ.”

ಮತ್ತಷ್ಟು ಓದು »

20
ಜೂನ್

ಜಾನ್ ಮೆಕೇನ್ ಸ್ಪರ್ಧಿಯಾಗುವ ಮುನ್ನವೇ ಗೆದ್ದಿದ್ದರು ಒಬಾಮಾ, ಹಾಗೆಯೇ ಮೋದಿಯೂ!

– ಗೋಪಾಲ ಕೃಷ್ಣ

MoObಅದು 2008ರ ನವೆಂಬರ್ 04ನೇ ತಾರೀಖು.  ಹಲವು ಕಾರಣಗಳಿಗೆ ಅಮೇರಿಕಾ ಅಧ್ಯಕ್ಷೀಯ ಚುನಾವಣೆ ವಿಶೇಷತೆ ಪಡೆದುಕೊಂಡಿತ್ತು.  ಅದಕ್ಕೆ ಮುಖ್ಯವಾಗಿ ಕಾರಣವಾಗಿದ್ದು ಬರಾಕ್ ಒಬಾಮಾ.  ಎಲ್ಲಾ ಅಡೆತಡೆಗಳನ್ನು ದಾಟಿ ಚುನಾವಣೆಯ ಹೊಸ್ತಿಲಲ್ಲಿ ನಿಂತ ಒಬಾಮಾಗೆ ರಿಪಬ್ಲಿಕನ್ ಪಕ್ಷದ ಜಾನ್ ಮೆಕೇನ್ ಪ್ರತಿಸ್ಪರ್ಧಿಯಾಗಿದ್ದರು.  ಒಬಾಮಾ ಅವರೇ ಗೆಲ್ಲುತ್ತಾರೆ ಎನ್ನುವುದು ಚುನಾವಣೆಗೂ ಮುನ್ನವೆ ಅಮೇರಿಕಾದಲ್ಲಿ ಮಾತ್ರವಲ್ಲ ಇಡಿ ವಿಶ್ವದಲ್ಲೇ ನಿರೀಕ್ಷೆಗಳನ್ನು ಹುಟ್ಟಿಸಿತ್ತು.  ಆ ಪರಿಯ ಸಂಚಲನ ಮೂಡಿಸಿದ್ದರು ಒಬಾಮಾ.  ಅವರ ಪ್ರಚಾರ ವೈಖರಿ, ಬದಲಾವಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ್ದು, ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಬಳಸಿಕೊಂಡದ್ದು ಎಲ್ಲವೂ ಒಬಾಮಾ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ್ದವು.  ಅಂತೆಯೇ ಗೆದ್ದು, ಅಧ್ಯಕ್ಷರಾದರು.

ಒಬಾಮಾ ಗೆಲುವಿನ ಹಾದಿಗೆ ಸಾಮ್ಯತೆ ಎನಿಸುವಂತಹ ಬೆಳವಣಿಗೆಗಳು ಭಾರತದಲ್ಲಿಯೂ ಗೋಚರಿಸುತ್ತಿವೆ, ಅದು ಮುಂದಿನ ಲೋಕಸಭಾ ಚುನಾವಣೆಗೆ.  ಇದಕ್ಕೆ ಕಾರಣವಾಗಿರುವುದು ನರೇಂದ್ರ ಮೋದಿಯವರ ನಡೆಗಳು ಮತ್ತು ಅವರ ವಿರೋಧಿಗಳ ಅಡ್ಡಗಾಲುಗಳು.

ಒಬಾಮಾ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗುವುದು ಸುಲಭವಾಗಿರಲಿಲ್ಲ.  ಜಾನ್ ಎಡ್ವಡ್ರ್ಸ್ ಮತ್ತು ಹಿಲರಿ ಕ್ಲಿಂಟನ್ ಅವರಿಂದ ಭಾರೀ ಸ್ಪರ್ಧೆಯನ್ನೇ ಎದುರಿಸಬೇಕಾಯಿತು.  ಅದರಲ್ಲೂ ಹಿಲರಿ ಕ್ಲಿಂಟನ್ ಕೊನೆಯ ಕ್ಷಣದವರೆಗೂ ಒಬಾಮಾ ಹಾದಿಗೆ ಮುಳ್ಳಾಗುತ್ತಲೇ ಇದ್ದರು.  ಅಧ್ಯಕ್ಷೀಯ ಚುನಾವಣೆಗಿಂತಲೂ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಆಯ್ಕೆಯೇ ಅಮೇರಿಕಾದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.  ಇದು ಒಬಾಮಾ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನೂ ವಹಿಸಿತ್ತು.  ‘We ಓeeಜ ಅhಚಿಟಿge’ ‘ಅಊಂಓಉಇ, ತಿe ಛಿಚಿಟಿ’  ಎಂಬ ಘೋಷವಾಕ್ಯಗಳೊಂದಿಗೆ ಒಬಾಮಾ ಜನರ ಬಳಿಗೆ ಹೋದರು.  ಹಿಲರಿ ಕ್ಲಿಂಟನ್ ‘ಇxಠಿeಡಿieಟಿಛಿe’ ಬಗ್ಗೆ ಮಾತನಾಡುತ್ತ ಜನರನ್ನು ತನ್ನತ್ತ ಸೆಳೆಯಲು ಪ್ರಯತ್ನಿಸಿದರು.  ಮೊದಮೊದಲು ಜನರ ಭಾವನೆಗಳು ಅನುಭವಿ ಎಂಬ ಕಾರಣಕ್ಕೆ ಹಿಲರಿಯತ್ತ ವಾಲುತ್ತಿದ್ದವು.  ಒಬಾಮಾರಾದರೂ ಹೊಸಬರು, ಇನ್ನು ಕಲಿಯಬೇಕಾದ್ದು ಬಹಳಷ್ಟಿದೆ ಎಂಬ ಅಭಿಪ್ರಾಯವೂ ಮೂಡಿತ್ತು.  ಆದರೆ ವಾಸ್ತವವನ್ನರಿತು ಬದಲಾವಣೆ ತರಲು ತನ್ನಲ್ಲಿರುವ ಸಾಮಥ್ರ್ಯವನ್ನು ಜನರಿಗೆ ಬಿಡಿಬಿಡಿಯಾಗಿ ಬಿಚ್ಚಿಟ್ಟರು ಒಬಾಮಾ.  ಹಿಲರಿ ತಮ್ಮ ಅನುಭವದ ಬಗ್ಗೆ ಹೇಳಿದರೆ ಹೊರತು, ಬದಲಾವಣೆಯ ಬಗ್ಗೆ ಜನರನ್ನು ಸೆಳೆಯಲಿಲ್ಲ.  ಅಭ್ಯರ್ಥಿ ಆಯ್ಕೆಯಲ್ಲಿ ಒಬಾಮಾಗೆ ಶೇ.52ರಷ್ಟು ಮತ ಬಂದಿದ್ದರೆ, ಹಿಲರಿ ಶೇ.42 ಮತಗಳಿಗೆ ತೃಪ್ತಿಪಡಬೇಕಾಯಿತು.  ಹಿರಿತನಕ್ಕಿಂತಲೂ ಇಚ್ಛಾಶಕ್ತಿಯೇ ಮುಖ್ಯ ಎಂಬುದನ್ನು ಸಾಬೀತುಪಡಿಸಿದರು.  ಇದು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಅವಕಾಶವನ್ನು ಒಬಾಮಾಗೆ ತಂದಿತ್ತಿತು.

ಮತ್ತಷ್ಟು ಓದು »

17
ಜೂನ್

ಬೌದ್ದರನ್ನು ಓಡಿಸಲು ಶಂಕರರೇನು ಅರಸರಾಗಿದ್ದರೇ?

– ಸಂತೋಶ್ ತಮ್ಮಯ್ಯ

Shankaraacharya1ಕೆಲವರ ಮನಸ್ಸೇ ವಿಚಿತ್ರವಾದುದು. ಅವರದ್ದು ವಿನಾಕಾರಣ ನಿರಾಕರಣವಾದ. ಇದ್ದುದನ್ನು ಇಲ್ಲವೆನ್ನುವುದು, ಇಲ್ಲದ್ದನ್ನು  ಇದೆ ಎನ್ನುವುದು , ವಿನಾಕಾರಣ ಖಂಡಿಸುವುದು, ವಿಪರೀತವನ್ನು ಮಂಡಿಸುವುದು, ವಿಚಿತ್ರ ಸ್ವಭಾವಗಳು. ಉದಾಹರಣೆಗೆ ಎಲ್ಲರಿಗೂ ಇಷ್ಟವಾಗುವ ಸಿನೆಮಾವನ್ನು ಕೆಲವರು ವಿನಾಕಾರಣ ಬಯ್ಯುತ್ತಾರಲ್ಲಾ ಅಂಥವರು.  ಆ ಮನಸ್ಸನ್ನು  ಸಿನಿಕವೆನ್ನಿ, ಪೂರ್ವಗ್ರಹವೆನ್ನಿ, ಅಬದ್ಧವೆನ್ನಿ, ಅಸ್ವಸ್ಥವೆನ್ನಿ ಎಲ್ಲವೂ ಸರಿಯೇ. ನಮ್ಮ ಸಾಹಿತ್ಯಲೋಕದಲ್ಲಿ ಅಂಥವರನೇಕರು ಸಿಗುತ್ತಾರೆ. ಅವರೆಲ್ಲರೂ   ಸಂದರ್ಭ ಸಿಕ್ಕಾಗಲೆಲ್ಲಾ ಹೀಗೆ ಹೇಳಿಕೆಗಳನ್ನು ಕೊಡುತ್ತಿರುತ್ತಾರೆ. ಭೈರಪ್ಪನವರು ಬರೆದಾಗ, ನ್ಯಾಯನೀತಿಯನ್ನು ಇನ್ಯಾರೋ ಎತ್ತಿ ಹಿಡಿದಾಗ, ಚಿದಾನಂದ ಮೂರ್ತಿಗಳು ಏನನ್ನೋ ಶೋಧಿಸಿದಾಗಲೆಲ್ಲಾ   ಅದಕ್ಕೆ ಸಂಪೂರ್ಣ ನೇತ್ಯಾತ್ಮಕವಾದುದನ್ನು ಹಿಡಿದು ಹೇಳಿಕೆಗಳನ್ನು ನೀಡಲಾರಂಭಿಸುತ್ತಾರೆ. ಅದಕ್ಕೆ ಕೆಲವು ಪತ್ರಕರ್ತರು ಕನ್ನಡದ ಮನಸ್ಸು ಎಂಬ ಹೆಸರು ಕೊಟ್ಟುಬಿಡುತ್ತಾರೆ. ಇಂಥ ಸತ್ಯದ ಆವರಣವನ್ನೇ ಕನ್ನಡದ ಮನಸ್ಸು ಎನ್ನುವುದಾದರೆ ಅದು ಕನ್ನಡಕ್ಕೆ ಮುಸುಕಿರುವ ಆವರಣ ಎನ್ನದೆ  ವಿಧಿ ಇಲ್ಲ. ಇಂಥವರ ಗುಂಪಿಗೆ ಈಗ ಮತ್ತೊಬ್ಬರು ಸೇರಿದ್ದಾರೆ.

ಯಾರೋ ಕೇಶವ ಮೂರ್ತಿಯಂತೆ. ಇದುವರೆಗೆ ಅವರ ಮುಖ ನೋಡಿದವರಿಲ್ಲ. ಸಾಹಿತ್ಯ ಓದಿದವರಿಲಿಲ್ಲ. ಈ ಮಧ್ಯೆ ಕಾಂಗ್ರೆಸ್ ಆಡಳಿತಕ್ಕೆ ಬಂತು. ಗುರುತಿಸಿಕೊಳ್ಳುವುದು ಲಾಭದ ದೃಷ್ಟಿಯಿಂದ ಉತ್ತಮ ಎನಿಸಿತ್ತೋ ಏನೋ ಹೇಳಿಕೆಯೊಂದನ್ನು ಕೊಟ್ಟರು.”ನರೇಂದ್ರ  ಮೋದಿಗಿಂತ ಶಂಕರಾಚಾರ್ಯರು ಹೆಚ್ಚು ಕ್ರೂರಿ” ಎಂದರು. ನರೇಂದ್ರಮೋದಿಯವರನ್ನು ನವನವೀನವಾಗಿ ಟೀಕಿಸುವ ಜನರಿಗೆ ಒಮ್ಮೆ ಈ ಮಾದರಿಯ ಟೀಕೆ ಸ್ವಜನಶೀಲವಾಗಿ ಕಂಡಿರಬೇಕು. ಏಕೆಂದರೆ ಅಲ್ಲಿ ಮೋದಿಯೂ ಇದ್ದರೂ, ಶಂಕರಾಚಾರ್ಯರೂ ಇದ್ದರು. ಇತಿಹಾಸವನ್ನೂ ಬಯ್ದಂತಾಯಿತು. ವರ್ತಮಾನವನ್ನೂ ತೆಗಳಿದಂತಾಯಿತು. ವೋಟ್ ಬ್ಯಾಂಕ್‌ ರಾಜಕಾರಣಕ್ಕಂತೂ ಇಂಥ ಹೇಳಿಕೆಗಳ ಆವಶ್ಯಕತೆ ತುಂಬಾ ಇತ್ತು. ಖಂಡಿಸುವ ಈ ಹೇಳಿಕೆಗಳಿಗಾಗಿ ಅವರು ಸಾಕಷ್ಟು  ಶ್ರಮವನ್ನೇ ಪಟ್ಟಿರಬೇಕು.
ಬಹುಶಃ ಕೇಶವಮೂರ್ತಿಯವರಿಗೆ ಈ ಸಂಗತಿಗಳು ತಿಳಿದಿರಲಿಕ್ಕಿಲ್ಲ.

೧೯೮೪ರ ಸಿಕ್ಖ್ ನರಮೇಧದಲ್ಲಿ ಸತ್ತವರು ೨೭೩೩ ಎಂಬುದು ಸರಕಾರದ ದಾಖಲೆ. ಆದರೆ ದಂಗೆಯಲ್ಲಿ  ೨೫,೦೦೦ಕ್ಕೂ ಹೆಚ್ಚು ಜನರು ಸತ್ತರು ಮತ್ತು ಗಾಯಗೊಂಡಿದ್ದರು. ನೂರಾರು ಸಿಕ್ಖ್ ಮಹಿಳೆಯರ ಮೇಲೆ ಅತ್ಯಾಚಾರ ನಡೆಯಿತು. ಸುಮಾರು ೩ ಲಕ್ಷ ಸಿಕ್ಖರು ಮನೆಮಾರುಗಳನ್ನು ಬಿಟ್ಟು ಓಡಿ ಹೋದರು ಮತ್ತು ತಲೆ ಮರೆಸಿಕೊಂಡರು. ನೂರಾರು ಗುರುದ್ವಾರಗಳನ್ನು ಕೆಡವಲಾಯಿತು ಮತ್ತು ಧರ್ಮಗ್ರಂಥವನ್ನು ಸುಡಲಾಯಿತು.  ದೇಶ ಕಾಯುತ್ತಿದ್ದ ೩೦೦ ಜನ ಸಿಕ್ಖ್ ಯೋಧರನ್ನ್ನು  ಕೊಲ್ಲಲಾಯಿತು. ಬೊಕಾರೋ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ೧೨೦ ಜನ  ಸಿಕ್ಖರನ್ನು  ಸಾಮೂಹಿಕವಾಗಿ  ದಹಿಸಲಾಯಿತು. ಖಾನ್‌ಪುರದಲ್ಲಿ ೧೩ ವರ್ಷದ ಸಿಕ್ಖ್ ಬಾಲಕನನ್ನು  ಗ್ಯಾಸ್ ಸ್ಟವ್‌ನಲ್ಲೇ ಕೋಳಿ ಸುಡುವಂತೆ ಸುಡಲಾಯಿತು. ಅಗರ್ತಲಾದಲ್ಲಿ ವಾಸಿಸುತ್ತಿದ್ದ ೩೦ ಸಿಕ್ಖ್ ಕುಟುಂಬಗಳು ಜೀವರಕ್ಷಣೆಗಾಗಿ ಪೊಲೀಸ್ ಠಾಣೆಯ  ಮೆಟ್ಟಲೇರಿದರು. ಪೊಲೀಸರೇ ಅವರೆಲ್ಲರನ್ನು ಸಜೀವವಾಗಿ ಸುಟ್ಟರು. ಮಧ್ಯಪ್ರದೇಶದ ಜಬಲ್‌ಪುರದಲ್ಲಿ ೧೨ ಜನ ಸಿಕ್ಖರನ್ನು ರೈಲು ನಿಲ್ದಾಣದ  ಪ್ಲಾಟ್‌ಫಾರ್ಮ್‌ನಲ್ಲೇ ನೇಣು ಹಾಕಿ ಕೊಲ್ಲಲಾಯಿತು.

ಮತ್ತಷ್ಟು ಓದು »

13
ಜೂನ್

೨೦೦೪ ರಲ್ಲಿಯೇ ಅಡ್ವಾಣಿ ಯುಗಾ೦ತ್ಯ ಆಗಿ ಹೋಗಿತ್ತು!

-ರಾಘವೇಂದ್ರ ನಾವಡ

LK-NaMoಭಾ.ಜ.ಪಾ. ದ ಪ್ರಾಥಮಿಕ ಸದಸ್ಯತ್ವನ್ನೊ೦ದು ಬಿಟ್ಟು ಪಕ್ಷದಲ್ಲಿ ತನಗಿದ್ದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ ಅಡ್ವಾಣಿಯ ಹತಾಶ ನಡೆ ಆಶ್ಚರ್ಯವನ್ನೇನೂ ತರಲಿಲ್ಲ! ಬದಲಿಗೆ ಬೇಸರವನ್ನು೦ಟು ಮಾಡಿತು. ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿಗೆ ಗೈರು ಹಾಜರಾದಾಗಲೇ ಏನೋ ಮಹತ್ತರವಾದುದು  ನಡೆಯುತ್ತದೆ ಎ೦ಬುದನ್ನು ಊಹೆಯಿತ್ತು! ಆದರೆ ಅಡ್ವಾಣಿಯ ಈ ನಡೆಯನ್ನಲ್ಲ!  ಮೋದಿಯ ಮೇಲಿನ ಅಡ್ವಾಣಿಯವರ ವಿರೋಧದ ಅ೦ತ್ಯ ಹೇಗಾಗಬಹುದೆ೦ದು ಯೋಚಿಸುತ್ತಿದ್ದೆ.. ಮೋದಿಯ ಪದೋನ್ನತಿಯನ್ನು ಊಹಿಸಿಯಾಗಿತ್ತು! ಅದಕ್ಕಿದ್ದ ಅಡ್ವಾಣಿಯವರ ವಿರೋಧವನ್ನೂ ಅರ್ಥೈಸಿಕೊ೦ಡಿತ್ತು! ಆದರೆ ಅಡ್ವಾಣಿಯವರ ಈ ನಡೆ ಪಕ್ಷವನ್ನಷ್ಟೇ ಅಲ್ಲ! ಸಮಸ್ತ ಭಾ.ಜ.ಪಾ ಕಾರ್ಯಕರ್ತರಲ್ಲದೆ ಅದರ ಲಕ್ಷಾ೦ತರ ಅಭಿಮಾನಿಗಳಿಗೂ ಕ್ಷಣ ನಿಟ್ಟುಸಿರು ಬಿಡ್ಶುವ೦ತೆ ಮಾಡಿದೆ! ಕೇವಲ “ ಕೃಷ್ಣ “ ನ ಕೈಯಲ್ಲಿ ಆಯುಧ ಹಿಡಿಸಲೆ೦ದೇ  ಕುರುಕ್ಷೇತ್ರದಲ್ಲಿ ಪಾ೦ಡವರೊ೦ದಿಗೆ ಹಿಗ್ಗಾಮುಗ್ಗ ಹೋರಾಡಿದ ಭೀಷ್ಮರು ತನ್ನ ಗುರಿ ಈಡೇರಿದ ನ೦ತರ ಶರಶಯ್ಯೆಯಲ್ಲಿ ಮಲಗಿದ೦ತೆ.. ಭಾಜಪಾದ “ ಲಾಲಕೃಷ್ಣ“ ಶಸ್ತ್ರ ತ್ಯಾಗ ಮಾಡಿರುವುದು ಬೇಸರವನ್ನು೦ಟು ಮಾಡಿದುದರ ಜೊತೆಗೆ… ಹೆ೦ಡತಿಯ ಒತ್ತಾಯಕ್ಕೋ… ವಯಸ್ಸಿನ ಪ್ರಭಾವವೋ… ಶಕ್ತಿಯ ಕೊರತೆಯೋ  ಎ೦ಬುದರ ಗೊ೦ದಲದಲ್ಲಿ  ತನ್ನ ಅಪ್ರಸ್ತುತತೆಯನ್ನು ಮನಗ೦ಡ ತ೦ದೆಯೊಬ್ಬ ಏಕದ೦ ಕುಟು೦ಬದ  ಜವಾಬ್ದಾರಿಯನ್ನು  ಮಕ್ಕಳಿಗೆ ತಲ್ಲಣದಿ೦ದಲೇ  ನೀಡಿ, ಹೊರಬರುವುದನ್ನು ಕಲ್ಪಿಸಿಕೊಳ್ಳುವ೦ತೆ ಮಾಡುತ್ತದೆ!

ಅದು ೧೯೮೦ ರ ಕಾಲ..  ಜನಸ೦ಘದಿ೦ದ ಬೇರ್ಪಟ್ಟು ಭಾ.ಜ.ಪಾದ ಹುಟ್ಟಿಗೆ ಕಾರಣಕರ್ತರಾದವರಿಬ್ಬರಲ್ಲಿ ವಾಜಪೇಯಿಯ ಜೊತೆಗೆ ಅಡ್ವಾಣಿಯೂ ಒಬ್ಬರು.   ೧೯೮೬ ರಲ್ಲಿ ಆ ಪಕ್ಷದ ರಾಷ್ತ್ರೀಯ ಅಧ್ಯಕ್ಷರಾಗುವವರೆಗೂ  ಚುನಾವಣೆಗಳಲ್ಲಿ ಭಾಜಪಾದ ಸಾಧನೆಯೇನೂ ಹೇಳಿಕೊಳ್ಳುವ೦ತಹದ್ದಾಗಿರಲಿಲ್ಲ!  ಆದರೆ   ನ೦ತರದ್ದು ಇತಿಹಾಸ.. ಚುನಾವಣೆಯಿ೦ದ ಚುನಾವಣೆಗೆ ಸುಧಾರಿಸುತ್ತಲೇ ಹೋದ ಭಾಜಪಾ.. ಅಡ್ವಾಣಿಯವರು ಆರ೦ಭಿಸಿದ “ಶ್ರೀರಾಮ ರಥಯಾತ್ರೆಯ“ ಲಾಭವನ್ನು ಭರಪೂರವಾಗಿ ಪಡೆದುಕೊ೦ಡಿತು! ಕಾ೦ಗ್ರೆಸ್ಸಿಗೆ ಸಮಾನವಾಗಿ ಸೆಡ್ದುಹೊಡೆದು ನಿಲ್ಲಲು ಭಾಜಪಾಕ್ಕೆ ಶಕ್ತಿ ತು೦ಬಿದವರೆ೦ದರೆ ಇಬ್ಬರೇ.. ವಾಜಪೇಯಿ ಹಾಗೂ ಅಡ್ವಾಣಿ! ಲಕ್ಷಾ೦ತರ ಕಾರ್ಯಕರ್ತರ ಅಮಿತೋತ್ಸಾಹವೂ ಇವರೊ೦ದಿಗಿತ್ತು! ಬೆನ್ನಿಗೆ ಉಗ್ರ ಹಿ೦ದುತ್ವದ ಅಜೆ೦ಡಾ… ಬೆನ್ನು ಬೆನ್ನಿಗೆ ರಥಯಾತ್ರೆಗಳು..  ಭಾರತ ರಾಜಕೀಯದಲ್ಲಿ “ ರಾಮ-ಲಕ್ಷ್ಮಣ“ರೆ೦ದೇ ಖ್ಯಾತವಾದ ಈ ಜೋಡಿ  ಕಾ೦ಗ್ರೆಸ್ ಗೆ ಪರ್ಯಾಯವಾಗಿ ಭಾ.ಜ.ಪಾವನ್ನು ಬೆಳೆಸಿದ್ದಲ್ಲದೆ, ದೇಶದ ರಾಜಕೀಯದಲ್ಲಿ ಕಾ೦ಗ್ರೆಸ್ಸಿಗೆ ಬಹುದೊಡ್ಡ ಪರ್ಯಾರವಾಗಿ ಬೆಳೆದು ನಿ೦ತಿತು. ೧೯೯೬ ರ ಚುನಾವಣೆಯಲ್ಲಿ ಏಕೈಕ ಬಲು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಾ.ಜ.ಪಾಕ್ಕೆ ವಾಜಪೇಯಿ ನೇತಾರರಾದರು. ಚುನಾವಣೆಗೂ ಮುನ್ನ ಅಡ್ವಾಣಿ ವಾಜಪೇಯಿಯವರನ್ನು ಬಾ.ಜ.ಪಾ ದ ಪ್ರಧಾನ ಮ೦ತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದು ಫಲ ನೀಡಿತು! “ ಬದಲಾವಣೆಗಾಗಿ  ಭಾ.ಜ.ಪಾ.ವನ್ನು ತನ್ನಿ“ , “ ಈ ಬಾರಿ ಬಿ.ಜೆ.ಪಿ“ ಎ೦ಬ ಕಾರ್ಯಕರ್ತರ ಚುನಾವಣಾ ಘೋಷಣೆಗಳು ಫಲ ನೀಡಿದವು. ವಾಜಪೇಯಿಯವರ ಅಕಳ೦ಕಿತ ವ್ಯಕ್ತಿತ್ವ, ರಾಜಕೀಯ ಅನುಭವ ಹಾಗೂ ಅಡ್ವಾಣಿಯವರ ಪ್ರಖರ ಹಿ೦ದುತ್ವವಾದಕ್ಕೆ ಮತದಾರರು ಮಣೆ ಹಾಕಿದರು!

ಮತ್ತಷ್ಟು ಓದು »