ಹೊಸ ಚಳುವಳಿಯ ಅರುಣೋದಯ
ಪ್ರೊ. ವಿವೇಕ ಧಾರೇಶ್ವರ, ಬೆಂಗಳೂರು
ವಚನ ಚಳುವಳಿ ಹಾಗೂ ಜಾತಿ ವ್ಯವಸ್ಥೆಯ ಕುರಿತ ಡಂಕಿನ್ ಅವರ ಪ್ರಬಂಧದ ವಿರುದ್ಧವಾಗಿ ನಡೆದ ವಾಗ್ದಾಳಿಯನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ಅದರಲ್ಲೂ ಪ್ರೊ. ಶಿವಪ್ರಕಾಶರನ್ನು ಬಿಟ್ಟರೆ ಮತ್ಯಾರೂ ಆ ಪ್ರಬಂಧವನ್ನು ಓದಿದಂತೆ ಕಾಣುವುದಿಲ್ಲ. ಇಲ್ಲಿ ಗಮನಿಸಬೇಕಾದ ಎರಡು ಅಂಶಗಳಿವೆ: 1) ಇದು ಡಂಕಿನ್ ವಿಚಾರಕ್ಕೊಂದೇ ಹುಟ್ಟಿದ ವಿರೋಧವಲ್ಲ ಎಂಬುದು ಸ್ಪಷ್ಟ. ಬಾಲಗಂಗಾಧರರ ‘ಹೀದನ್..’ (ಸ್ಮೃತಿ-ವಿಸ್ಮೃತಿ) ಗ್ರಂಥವು ಹುಟ್ಟುಹಾಕಿದ ಸಂಶೋಧನಾ ಕಾರ್ಯಕ್ರಮದ ಕುರಿತ ಚರ್ಚೆಯಿಂದಾಗಿ ಹುಟ್ಟಿಕೊಂಡ ಚಿಂತನಾ ಪರಿಸರವನ್ನೇ ಇಲ್ಲಿ ಗುರಿಯಾಗಿಟ್ಟುಕೊಳ್ಳಲಾಗಿದೆ ಎಂಬುದು ಖಚಿತ. 2) ಇದನ್ನು ನಾನು ಗುಂಪು, ಸಮುದಾಯ ಎಂಬುದಾಗಿ ಗುರುತಿಸದೇ ಪರಿಸರ ಎಂದು ಏಕೆ ಕರೆಯುತ್ತೆನೆಂದರೆ, ಇಲ್ಲಿರುವವರು ಬೇರೆ ಬೇರೆ ದೇಶಗಳಿಗೆ ಸೇರಿದ್ದಾರೆ, ಬೇರೆ ಬೇರೆ ಭಾಷೆಗಳನ್ನು ಆಡುತ್ತಾರೆ, ವಿಭಿನ್ನ ಸಂಸ್ಥೆಗಳು ಹಾಗೂ ಸಾಮಾಜಿಕ ಹಿನ್ನೆಲೆಗಳಿಗೆ ಸೇರಿದ್ದಾರೆ. ಈ ಸಂಶೋಧಕರು ತಮಗಿರುವ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ನೆಲೆಯಲ್ಲಿ ಮಾತ್ರವೇ ಒಟ್ಟಿಗೆ ಬಂದಿದ್ದಾರೆ. ಸಂಶೋಧನಾಸಕ್ತಿಯೇ ಇವರನ್ನೆಲ್ಲ ಒಟ್ಟಿಗೆ ತಂದಿದೆಯೇ ವಿನಃ ಯಾವುದೇ ರಾಜಕೀಯ ಉದ್ದೇಶವಾಗಲೀ, ಸಾಮಾಜಿಕ ಹೋರಾಟವಾಗಲೀ ಅಲ್ಲ. ಅವರ ಮೇಲೆ ನಡೆಯುತ್ತಿರುವ ದಾಳಿಯ ರಭಸವನ್ನು ಹಾಗೂ ಕೆಸರೆರಚಾಟದ ಸ್ವರೂಪವನ್ನು ವಿಶ್ಲೇಷಿಸುವುದಕ್ಕೂ ಮೊದಲು ಈ ಮೇಲಿನ ಎರಡೂ ಅಂಶಗಳನ್ನು ಗುರುತಿಸಿಕೊಳ್ಳುವುದು ಮುಖ್ಯ.
ಈ ಸಂಶೋಧಕರ ಸಂಶೋಧನೆಯ ಕುರಿತು ಚರ್ಚೆಯೇ ನಡೆಯುತ್ತಿಲ್ಲ, ಬದಲಾಗಿ ಈ ಸಂಶೋಧನೆಯ ರಾಜಕೀಯ ಪರಿಣಾಮದ ಕುರಿತು ಕಟು ಟೀಕೆಗಳು ಬರುತ್ತಿವೆ. ಒಂದು ಸಂಶೋಧನಾ ಕಾರ್ಯಕ್ರಮದ ಪರಿಣಾಮದ ಕುರಿತು ಚರ್ಚಿಸಲೇ ಬಾರದು ಎಂದು ನಾನು ಹೇಳುತ್ತಿಲ್ಲ. ಆದರೆ ಅಂಥ ಚರ್ಚೆಗೂ ಮುನ್ನ ಆ ಸಂಶೋಧಕರ ವಾದ ಹಾಗೂ ಸಂಶೋಧನೆಗಳು ಏನು ಎಂಬುದನ್ನು ತಿಳಿದುಕೊಳ್ಳುವುದಾದರೂ ಬೇಡವೆ? ಈ ಸಂಶೋಧನೆಯು ಹೊಸದೇ ಆದ ವಿಚಾರವೊಂದನ್ನು ತಿಳಿಸುತ್ತಿದೆ, ಸಾಮಾನ್ಯ ಜ್ಞಾನಕ್ಕೆ ವಿರುದ್ಧವಾಗಿದೆ, ಹಾಗೂ ಬೌದ್ಧಿಕ ಸವಾಲನ್ನು ಎಸೆಯುತ್ತದೆ ಎಂಬ ಕಾರಣಕ್ಕಾದರೂ ಅದನ್ನು ಗಂಭೀರವಾಗಿ ಪರಿಶೀಲಿಸುವ ಒಂದು ಪ್ರಯತ್ನವಾದರೂ ಕಾಣಬೇಡವೆ? ಸ್ಮೃತಿ-ವಿಸ್ಮೃತಿಯಲ್ಲಿ ಬರುವ ಹೇಳಿಕೆಯೊಂದು ನಮ್ಮಲ್ಲಿ ಅನೇಕರನ್ನು ಕಾಡಿದೆ: ಅದೆಂದರೆ, “ಹಿಂದೂಯಿಸಂ” ಎಂಬುದು ಅಸ್ತಿತ್ವದಲ್ಲಿ ಇಲ್ಲವೊಂದೇ ಅಲ್ಲ ಯುರೋಪಿಯನ್ನರು ಅಂಥದ್ದೊಂದು ಸಂಗತಿ ಇದೆ ಎಂಬುದಾಗಿ ಅಂದುಕೊಂಡೇ ಭಾರತೀಯ ಸಂಸ್ಕೃತಿಯನ್ನು ಅನುಭವಿಸಿದರು. ಈ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲಿಕ್ಕಾಗಿ ಸ್ಮೃತಿ-ವಿಸ್ಮೃತಿಯಲ್ಲಿ ರಿಲಿಜನ್ನಿನ ಕುರಿತು ಒಂದು ಸಿದ್ಧಾಂತವನ್ನು ರಚಿಸಿ ರಿಲಿಜನ್ನೆಂದರೆ ಏನು? ಅದು ಭಾರತದಲ್ಲಿ ಇರಲಿಕ್ಕೆ ಹೇಗೆ ಸಾಧ್ಯವಿಲ್ಲ ಎಂಬುದನ್ನು ವಿವರಿಸಲಾಗಿದೆ. ಇವು ಗಹನವಾದ ಹೇಳಿಕೆಗಳಾಗಿದ್ದು ಈ ವಾದವನ್ನು ಅರ್ಥಮಾಡಿಕೊಂಡ ನಮ್ಮಲ್ಲಿ ಕೆಲವರಾದರೂ ರೋಮಾಂಚಿತರಾದೆವಷ್ಟೇ ಅಲ್ಲ ಸಮಾಜ ವಿಜ್ಞಾನಗಳಲ್ಲಿ ಸಿದ್ಧಾಂತವನ್ನು ಕಟ್ಟುವುದು ಸಾಧ್ಯ ಎಂಬ ಹೇಳಿಕೆಗೆ ದೃಷ್ಟಾಂತವನ್ನು ಕಣ್ಣಾರೆ ನೋಡಿ ಸ್ಫೂರ್ತಿಗೊಂಡೆವು. ಅಂದರೆ ನಮಗೆ ಸಾಮಾಜಿಕ ಜಗತ್ತಿನ ಜ್ಞಾನವನ್ನು ನಿಸರ್ಗ ವಿಜ್ಞಾನಗಳ ದಾರಿಯಲ್ಲೇ, ಅದಕ್ಕೂ ಭಿನ್ನವಾಗಿ ಕಟ್ಟಬಹುದು ಎಂಬುದನ್ನು ಅದು ತೋರಿಸಿತು. ಈ ಸಿದ್ಧಾಂತವನ್ನು ಕಟ್ಟುವ ಕೆಲಸವೇ ಇಂದು ನಾನು ಉಲ್ಲೇಖಿಸುತ್ತಿರುವ ಈ ಹೊಸ ಸಂಶೋಧನಾ ಪರಿಸರವನ್ನು ರೂಪಿಸಿದೆ.
CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ
ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸಿದವರು ಗೆಲಿಲಿಯೋ ಮತ್ತು ಬ್ರುನೋ.ಈ ಮೂವರು ಬರುವವರೆಗೂ ಸೂರ್ಯನೇ ಭೂಮಿಯ ಸುತ್ತ ಸುತ್ತುತ್ತಾನೆ ಅಂತಲೇ ಜನರು ನಂಬಿದ್ದರು.ಅದೇ ಜನರ ಮಧ್ಯದಿಂದ ಎದ್ದು ಬಂದು,’ಇಲ್ಲ ಸ್ವಾಮಿ ಭೂಮಿಯೇ ಸುತ್ತೋದು’ ಅಂದಿದ್ದ ಕೋಪರ್ನಿಕಸ್ ಅದೇ ಜನರಿಂದ ಹುಚ್ಚ ಅನ್ನಿಸಿಕೊಂಡಿದ್ದ.ಅವನ ನಂತರ ಬಂದ ಗೆಲಿಲಿಯೋ ಮತ್ತು ಬ್ರುನೋ ಸಹ ಕೋಪರ್ನಿಕಸ್ ವಾದಕ್ಕೆ ಸೈ ಅಂದರು.
ಸಮಾಜದ ನಂಬಿಕೆಯ ಬುಡವನ್ನು ಅಲುಗಾಡಿಸುವ ಯಾವುದೇ ಪ್ರಯತ್ನಕ್ಕೆ ದೊಡ್ಡ ಮಟ್ಟದಲ್ಲೇ ಅಡೆ-ತಡೆಗಳು ಎದುರಾಗಬೇಕಲ್ಲವೇ? ಗೆಲಿಲಿಯೋ,ಬ್ರೂನೋಗು ಅದೇ ಆಯಿತು. ಇವರ ಸಂಶೋಧನೆಯಿಂದ ಕನಲಿ ಕೆಂಡವಾದ ಪೋಪ್ ಎಂಟನೇ ಅರ್ಬನ್,“Heliocentric System” ಅನ್ನುವುದೇ ಸುಳ್ಳು ಎಂದು ಸಾರ್ವಜನಿಕವಾಗಿ ಗೆಲಿಲಿಯೋ ಮತ್ತು ಬ್ರೂನೋನನ್ನು ಖಂಡಿಸಿ, ಅವರಿಬ್ಬರ ಸಂಶೋಧನೆಗೂ ನಿರ್ಬಂಧವನ್ನೂ ಹೇರಿದರು.
ಗೆಲಿಲಿಯೋನನ್ನು ಜೈಲಿಗೂ ತಳ್ಳಲಾಯಿತು, ಸಾಯುವವರೆಗೂ ಗೃಹ ಬಂಧನದಲ್ಲಿರಿಸಲಾಯಿತು.1642ರಲ್ಲಿ ಗೆಲಿಲಿಯೋ ಮರಣವನ್ನಪ್ಪಿದಾಗ ಆತನನ್ನು ಕ್ರೈಸ್ತರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಬಿಡಲಿಲ್ಲ.ಇನ್ನು ಬಾಹ್ಯಾಕಾಶವೆಂಬುದು Finite ಅಲ್ಲ, Infinite. ಅದಕ್ಕೆ ಕೊನೆಯೇ ಇಲ್ಲ ಎಂದು ವಾದಿಸುವ ಧೈರ್ಯ ತೋರಿದ ಬ್ರೂನೋನನ್ನಂತೂ,೧೫೯೨ರಲ್ಲಿ ಬಂಧಿಸಿ ರೋಮನ್ ಕ್ಯಾಥೋಲಿಕ್ ಚರ್ಚ್ನ ನ್ಯಾಯಾಲಯದ(The Inquisition) ಮುಂದೆ 7 ವರ್ಷಗಳ ಕಾಲ ವಿಚಾರಣೆ ಗೊಳಪಡಿಸಿ, ಕೊನೆಗೆ ಉರಿವ ಜ್ವಾಲೆಯಲ್ಲಿ ಸುಡುವ ಮರಣದಂಡನೆಯನ್ನು ವಿಧಿಸಿದರು.
ಚೀನಿಗಳೊಂದಿಗಿನ ಯುದ್ಧ ಸೈನಿಕ ಕಾರ್ಯಾಚರಣೆಯೇ ಆಗಬೇಕಿಲ್ಲ
– ರಾಕೇಶ್ ಶೆಟ್ಟಿ
ಮೂರುವರೆ ವರ್ಷಗಳ ಹಿಂದಿನ ಮಾತು.ಬಹುಷಃ ೨೦೦೯ರ ನವೆಂಬರ್ ತಿಂಗಳಿರಬಹುದು.ಪ್ರಧಾನಿ ಮ(ಮೌ?)ನಮೋಹನ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.ಅದನ್ನು ಚೀನಾ ಖಡಕ್ ಆಗಿ ವಿರೋಧಿಸಿ, ’ನೀವು ಭಾರತೀಯರು ೧೯೬೨ ರ ಅನುಭವವನ್ನ ಮರೆತಿದ್ದಿರ!’ ಅಂತ ಬಹಿರಂಗವಾಗೇ ಹೇಳುವ ದಾರ್ಷ್ಟ್ಯ ತೋರಿತ್ತು.ಅಂದು ಅದು ಕ್ಯಾತೆ ತೆಗೆದಿದ್ದು ’ತವಾಂಗ್’ ನ ಕುರಿತಾಗಿ.
ಚೀನಿಗಳ ಬೆದರಿಕೆ ಬಗ್ಗೆ ಮಾತಡುವುದಕ್ಕಿಂತ ಮೊದಲು, ಏನಿದು ‘ತವಾಂಗ್’ ಅದಕ್ಕಾಗಿ ಯಾಕಿಷ್ಟು ಕಿತ್ತಾಟ? ಇದು ಯಾರಿಗೆ ಸೇರಿದ್ದು? ಭಾರತೀಯರಿಗೋ? ಚೀನಿಗಳಿಗೋ? ಈ ಮೊದಲು ಇದು ಯಾರಿಗೆ ಸೇರಿತ್ತು? ಅಂತ ನೋಡ ಹೊರಟರೆ, ಐತಿಹಾಸಿಕಾವಾಗಿ ಅಂದರೆ ೧೯೧೪ರಲ್ಲಿ ಬ್ರಿಟಿಷರು ಮೆಕ್-ಮಹೂನ್ ರೇಖೆಯನ್ನ ಗುರುತಿಸುವವರೆಗೂ ಅದು ಆಗಿನ ‘ಟಿಬೆಟ್’ ಗೆ ಸೇರಿತ್ತು. ೧೯೧೪ರಲ್ಲಿ ತವಾಂಗ್ ಅನ್ನು ೧೩ನೆ ಲಾಮ ಭಾರತಕ್ಕೆ ಬಿಟ್ಟು ಕೊಟ್ಟರು.ಆ ನಂತರ ಬಂದ ೧೪ನೆ ಅಂದರೆ ಈಗಿನ ‘ದಲೈ ಲಾಮ’ ಕೂಡ ತವಾಂಗ್ ಅನ್ನು ಭಾರತದ ಅಂಗವೆಂದೇ ಮಾನ್ಯ ಮಾಡಿದರು.
ಆದರೆ ೧೯೫೦ ರ ದಶಕದಲ್ಲಿ ಚೀನಿಗಳು ‘ಟಿಬೆಟ್’ ಅನ್ನು ಆಕ್ರಮಿಸಿಕೊಂಡರಲ್ಲ. ಈಗ ಅವರು ಹೇಳುವುದು , ‘ಒಂದು ಕಾಲದಲ್ಲಿ ತವಾಂಗ್ ಟಿಬೆಟ್ಗೆ ಸೇರಿತ್ತು, ಈಗ ಟಿಬೆಟ್ ನಮಗೆ ಸೇರಿದೆ, ಹಾಗಾಗಿ ಈ ತವಾಂಗ್ ನಮಗೆ ಸೇರಬೇಕು’ ಅಂತ (ಅದರ ಜೊತೆಗೆ ಇರಲಿ ಅಂತ ಇಡಿ ಅರುಣಾಚಲ ಪ್ರದೇಶವನ್ನು ಕೊಡಿ ಅನ್ನುತಿದ್ದಾರೆ).
ಸಾವರ್ಕರ್ ಮತ್ತು ನೆಹರೂ : ಹೋಲಿಸಬಾರದ ವ್ಯಕ್ತಿಗಳು
– ಚಕ್ರವರ್ತಿ ಸೂಲಿಬೆಲೆ
(ಮೇ ೨೮) ಸಾವರ್ಕರ್ ಜನ್ಮ ದಿನ. ಈ ಸಂಧರ್ಭದಲ್ಲಿ ಭಾರತದ ದಿಕ್ಕು ಬದಲಿಸಿದ ಇಬ್ಬರು ವ್ಯಕ್ತಿಗಳ ತುಲನಾತ್ಮಕ ಬರಹ ಇಲ್ಲಿದೆ. ಯಾರು ಯಾವ ಬಗೆಯಲ್ಲಿ ದಿಕ್ಕು ಬದಲಿಸಿದರು ಅಥವಾ ತಪ್ಪಿಸಿದರು ಎನ್ನುವುದು ಓದುಗರ ವಿವೇಚನೆಗೆ ಬಿಟ್ಟಿದ್ದು…
ಇತಿಹಾಸದ ಪುಟಗಳು ಅದೆಷ್ಟು ಬೇಗ ಹಿಂದೆ ಹಿಂದೆ ಹೋಗಿಬಿಡುತ್ತವಲ್ಲ! ಒಂದು ಪುಟವನ್ನು ತಿರುವಿಹಾಕಿದಂತೆ ಆ ಪುಟದಲ್ಲಿರುವ ಸಂಗತಿಗಳನ್ನೆಲ್ಲಾ ಮರೆತುಬಿಟ್ಟರೆ ಮುಗಿದೇಹೋಯಿತು. ನೆನಪಿಟ್ಟುಕೊಂಡು ಮುಂದಡಿ ಇಡುವವ ಮಾತ್ರ ವಿಜಯಿಯಾದಾನು. ನಮ್ಮ ಇತಿಹಾಸ ಒಂಥರಾ ಸೆಮಿಸ್ಟರ್ ಪದ್ಧತಿಯ ಶಿಕ್ಷಣದಂತಾಗಿಬಿಟ್ಟಿದೆ. ಈ ಸೆಮಿಸ್ಟರ್ ನಲ್ಲಿ ಕಲಿತದ್ದು ಮುಂದಿನ ಬಾರಿಗೆ ಬೇಕಾಗಲಾರದು. ಸದ್ಯಕ್ಕೆ ಸಾವರ್ಕರ್ ಭಾರತೀಯರ ಪಾಲಿಗೆ ಹಾಗೆಯೇ ಆಗಿಬಿಟ್ಟಿದ್ದಾರೆ. ಅವರು ಹುಟ್ಟಿ125 ವರ್ಷ ಕಳೆಯುವುದರೊಳಗಾಗಿ ಅವರು ಸಮಾಜದ ಕಣ್ಣಿಂದ ದೂರವೇ ಆಗಿಬಿಟ್ಟಿದ್ದಾರೆ. ಯಾವ ರಾಷ್ಟ್ರದ ಏಕತೆ- ಅಖಂಡತೆಗಾಗಿ; ಯಾವ ಪರಿಪೂರ್ಣ ಸಮಾಜದ ಪರಿಪೂರ್ಣ ಉನ್ನತಿಗಾಗಿ ತಮ್ಮ ಜೀವನವನ್ನೇ ತೇಯ್ದುಬಿಟ್ಟರೋ ಆ ವ್ಯಕ್ತಿ ಅದೇ ದೇಶದ ಸ್ಮೃತಿಯಿಂದ ದೂರವಾಗೋದು ದುರಂತವೇ ಸರಿ.
ಹಾಗೆ ನೋಡಿದರೆ ಕಳೆದ ಶತಕದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬೌದ್ಧಿಕವಾಗಿ ಹಾಗೆಯೇ ಪ್ರತ್ಯಕ್ಷವಾಗಿ ಪಾಲ್ಗೊಂಡ ಅಪರೂಪದ ಸಾಹಸಿ ಸಾವರ್ಕರರೇ ಎಂಬುದರಲ್ಲಿ ಅನುಮಾನವಿಲ್ಲ. ಸಿಕ್ಕಸಿಕ್ಕಲ್ಲಿ ಗುಂಡು ಹೊಡೆದು ಅದನ್ನೇ ಕ್ರಾಂತಿ ಎನ್ನುತ್ತಿರಲಿಲ್ಲ ಸಾವರ್ಕರ್. ಅವರ ಪ್ರತಿಯೊಂದು ಕೆಲಸದ ಹಿಂದೆ ಬೆಟ್ಟದಷ್ಟು ಚಿಂತನೆ, ಫಲಿತಾಂಶದ ನಂತರದ ಪರಿಸ್ಥಿತಿಯ ಕುರಿತು ಮುಂದಾಲೋಚನೆ- ಎಲ್ಲವೂ ಇರುತ್ತಿತ್ತು. ಅವರು ಲೇಖನಿ ಹಿಡಿದರೆ ಆ ಕಾಲಘಟ್ಟದ ಮಹಾಮಹಿಮ ಲೆಖಕರನ್ನೂ ಮೀರಿಸುವಷ್ಟು ಪ್ರತಿಭಾವಂತ. ಪಿಸ್ತೂಲು ಹಿಡಿದರೆ, ಎದುರಾಳಿಗಳ ರಕ್ತವೇ ತಣ್ಣಗಾಗುವಷ್ಟು ಕೆಚ್ಚೆದೆ. ಮಾತಿಗೆ ನಿಂತರೆ ಮೈಯೆಲ್ಲ ಕಿವಿಯಾಗಿ ಕೇಳಬೇಕೆನ್ನಿಸುವ ಮಧುರ ದನಿ, ಅಸ್ಖಲಿತ ವಿಚಾರಗಳ ಧಾರಾಪ್ರವಾಹ. ಬಿಡಿ. ಅಂತಹ ವ್ಯಕ್ತಿ ಯುಗಕ್ಕೊಬ್ಬರೇ!
ಅವರು ಉಳಿಸಿದ್ದು ಒಂದೆರಡು ಕೋಟಿ ಮಾತ್ರವಲ್ಲ…
– ಗೋಪಾಲ್ ಕೃಷ್ಣ
ಓಡುವುದರಲ್ಲಿ ಹುಸೇನ್ ಬೋಲ್ಟ್ ತನ್ನ ದಾಖಲೆಯನ್ನು ತಾನೆ ಸರಿಗಟ್ಟುತ್ತಾನೆ. ಭ್ರಷ್ಟಾಚಾರದಲ್ಲಿ ನಮ್ಮ ನೇತಾರರು, ಅಧಿಕಾರಿಗಳು ಬೋಲ್ಟ್ ಗೆ ಅನುರೂಪ. ಆದರೆ ಭ್ರಷ್ಟಾಚಾರ ಪತ್ತೆ ಹಚ್ಚುವುದರಲ್ಲಿ! ಹೌದು, ಇಂತಹದ್ದೊಂದು ದಾಖಲೆಯೂ ಸೃಷ್ಟಿಯಾದಂತಿದೆ. ಅದು ನಮ್ಮ ಮಹಾಲೇಖಪಾಲರಿಂದ. ಎರಡನೆ ತಲೆಮಾರಿನ ತರಂಗಗುಚ್ಛ ಹಂಚಿಕೆಯಲ್ಲಾದದ್ದು 1.76 ಲಕ್ಷ ಕೋಟಿ ಅವ್ಯವಹಾರ. ಇದೇ ಐತಿಹಾಸಿಕ ದಾಖಲೆ ಎನ್ನುತ್ತಿದ್ದರು. ಅದನ್ನೂ ಮೀರಿಸಿದ್ದು 1.86 ಲಕ್ಷ ಕೋಟಿಯ ‘ಕೋಲ್’ಗೇಟ್ ಹಗರಣ. ಎರಡನ್ನೂ ಹೊರಚೆಲ್ಲಿದವರು ಮಹಾಲೇಖಪಾಲರೇ. ಅಂದ ಮೇಲೆ ಅವರದೇ ಹೊಸ ದಾಖಲೆ ಸೃಷ್ಟಿಯಾಗಿದೆ.
ದೆಹಲಿಯಲ್ಲಿ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿನ ಹಗರಣ, ಎರಡನೆ ತಲೆಮಾರಿನ ತರಂಗಗುಚ್ಛ ಹಗರಣ ಮತ್ತು ಇದೀಗ ಕಲ್ಲಿದ್ದಲು ಗಣಿ ಹಂಚಿಕೆಯಲ್ಲಿನ ಲೋಪಗಳು ಕೇಂದ್ರ ಸರ್ಕಾರವನ್ನು ಬೆತ್ತಲುಗೊಳಿಸಿವೆ. ಭ್ರಷ್ಟಾಚಾರ ವಿರೋಧಿ ಹೋರಾಟವೆನ್ನುವುದು ಒಂದು ಫ್ಯಾಷನ್ ಆಗಿ ಹೋಗಿದೆ. ಈ ಒಂದು ಎಳೆಯನ್ನು ಹಿಡಿದುಕೊಂಡು ಖ್ಯಾತಿ, ಪ್ರಖ್ಯಾತಿ, ಕುಖ್ಯಾತಿ ಗಳಿಸುವವರಿಗೇನೂ ಲೆಕ್ಕವಿಲ್ಲ. ಅಂತಹವರುಗಳ ಮಧ್ಯೆಯೇ ಬೆರಳಣಿಕೆಯಷ್ಟು ಜನರು ಮಾತ್ರ ಪ್ರಾಮಾಣಿಕತೆ, ದಿಟ್ಟತನವನ್ನು ತಮ್ಮ ಕಾರ್ಯದಲ್ಲಿ ತೋರಿಸುತ್ತಾರೆ. ಈ ಸಾಲಿನಲ್ಲಿ ಅಗ್ರಗಣ್ಯರೆನ್ನುವಂತೆ ಕಾಣುವವರು ವಿನೋದ್ರಾಯ್.
ಎರಡು ರಾಷ್ಟ್ರೀಯ ಪಕ್ಷಗಳ ತುಲನೆ
– ಚಕ್ರವರ್ತಿ ಸೂಲಿಬೆಲೆ
ಬ್ರಿಟಿಷರ ಕೊನೆಯ ವೈಸ್ರಾಯ್ ಮೌಂಟ್ ಬ್ಯಾಟನ್. ಹಾಗಾದರೆ ಭಾರತದ ಮೊದಲ ವೈಸ್ರಾಯ್ ಯಾರು ಗೊತ್ತ? ಮತ್ಯಾರು? ಈ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ!
ನೆಹರೂ ಅತ್ಯಂತ ಶ್ರದ್ಧೆಯಿಂದ ಆಂಗ್ಲರ ರಾಜನೀತಿಯನ್ನು ಅರಿತುಕೊಂಡರು. ಅದನ್ನು ಹಂತಹಂತವಾಗಿ ಪ್ರಯೋಗಿಸಲಾರಂಭಿಸಿದರು. ಅಧಿಕಾರ ಕೈಗೆ ದಕ್ಕುವ ಮುನ್ನಿನ ಚುನಾವಣೆಗಳಲ್ಲಿ ತಮ್ಮ ಚಾಕಚಕ್ಯತೆಯನ್ನು, ವಿಭಜಿಸಿ ಗೆಲ್ಲುವ ತಂತ್ರವನ್ನು ಚೆನ್ನಾಗಿಯೇ ಬಳಸಿದರು. ಒಂದೆಡೆ ಮುಸಲ್ಮಾನರನ್ನು ಓಲೈಸಿ ಗೆಲ್ಲುವುದು, ಮತ್ತೊಂದೆಡೆ ಪಟೇಲರನ್ನು ಕಡು ಹಿಂದೂವಾಗಿ ಬಿಂಬಿಸಿ ಹಿಂದೂಗಳ ಮತವನ್ನು ಸೆಳೆದುಕೊಳ್ಳುವ ತಂತ್ರಗಾರಿಕೆ ಯಶಸ್ವಿಯಾಯ್ತು. ನೆಹರೂ ಪಕ್ಕಾ ಇಂಗ್ಲೀಶ್ ಬಾಬುವಾಗಿಬಿಟ್ಟರು. ಆಗಲೇ ಗಾಂಧೀಜಿ ಗಾಬರಿಯಿಂದ ಹೇಳಿದ್ದು, ‘ದೇಶ ವಿಭಜನೆಗೊಂಡು ಸ್ವಾತಂತ್ರ್ಯ ಬಂತು. ಇನ್ನು ಮುಂದೆ ಕಾಂಗ್ರೆಸ್ಸನ್ನು ವಿಸರ್ಜಿಸಿಬಿಡೋಣ.’ ಸ್ವತಃ ಗಾಂಧೀಜಿಗೆ ಅಸಹ್ಯವಾಗಿತ್ತು. ತಾನೇ ಮೂಲೆ ಮೂಲೆಗೆ ಕೊಂಡೊಯ್ದ ಕಾಂಗ್ರೆಸ್ಸು ಮುಂದೊಮ್ಮೆ ದೇಶದ ದುರ್ಗತಿಗೆ ಕಾರಣವಾಗುತ್ತದೆಂಬ ಸ್ಪಷ್ಟ ಅರಿವು ಅವರಿಗಿತ್ತು.
ಬಿಜೆಪಿಗೂ ಕಾಂಗ್ರೆಸ್ಸಿಗೂ ಒಂದು ಎದ್ದುಕಾಣುವಂತಹ ಭಿನ್ನತೆ ಇದೆ. ಒಂದು, ಕಾರ್ಯಕರ್ತರಿಂದಲೇ ನಿರ್ಮಾಣಗೊಂಡ, ಕೆಡರ್ ಆಧಾರಿತ ಪಕ್ಷ. ಮತ್ತೊಂದು, ಅಗತ್ಯ ಬಿದ್ದಾಗ ಕಾರ್ಯಕರ್ತರನ್ನು ಕೊಂಡುಕೊಳ್ಳುವ ಪಕ್ಷ. ಇವತ್ತಿಗೂ ನಾನು ಕಾಂಗ್ರೆಸ್ಸಿಗ ಎಂದು ಎದೆ ತಟ್ಟಿ ಹೇಳುವ ಸಾಮಾನ್ಯ ಕಾರ್ಯಕರ್ತರನ್ನು ತೋರಿಸಿ ನೋಡೋಣ. ಅಲ್ಲಿ ಕರುಳ ಸಂಬಂಧಗಳಿಲ್ಲ. ಅದೊಂಥರಾ ನಕಲು ಮಾಡಿಸಿ ನೂರು ಪ್ರತಿಶತ ಅಂಕ ಗಳಿಸುವ ಶಾಲೆಯಿದ್ದಂತೆ. ಆ ಶಾಲೆಯಲ್ಲಿ ಕೆಲಸ ನಡೆಯುವುದೇ ಕೊನೆಯ ಆರು ದಿನಗಳಲ್ಲಿ. ಹೀಗಾಗಿ ಬಂದ ಫಲಿತಾಂಶಕ್ಕೆ ಬೆನ್ನು ತಟ್ಟಿಕೊಳ್ಳುವವರು ಇರುತ್ತಾರೆಯೇ ಹೊರತು, ಆನಂದ ಪಡುವವರಲ್ಲ. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ಬಿಟ್ಟು ಹೊರಬಂದಾಗ ತಾನು ತಾಯಿಯ ಮಡಿಲಿನಿಂದ ಹೊರಗೆ ಬಂದುಬಿಟ್ಟಿದ್ದೇನೆಂದು ಯಾರಿಗೂ ಅನ್ನಿಸೋದೇ ಇಲ್ಲ. ಅಲ್ಲಿ ತಪ್ಪಾದಾಗ ಪ್ರಶ್ನೆ ಯಾರನ್ನು ಕೇಳಬೇಕೆಂದು ಯಾರಿಗೂ ಗೊತ್ತೇಇರುವುದಿಲ್ಲ. ಗೋಹತ್ಯೆ ನಿಷೇಧ ಹಿಂತೆಗೆದುಕೊಂಡಿದ್ದನ್ನು ಕೇಳಿ ಅನೇಕ ಕಾಂಗ್ರೆಸ್ಸಿಗರೇ ಗರಮ್ ಆಗಿದ್ದಾರೆ. ದುರ್ದೈವ, ಈ ದರ್ದನ್ನು ಯಾರೆದುರು ತೋಡಿಕೊಳ್ಳಬೇಕೆಂದು ಗೊತ್ತಿಲ್ಲವಷ್ಟೆ. ಮುಖ್ಯಮಂತ್ರಿ ಸ್ಥಾನ ಸಿಗದಿದ್ದುದಕ್ಕೆ ಖರ್ಗೆಯ ಬಳಗ ಜಿಲ್ಲೆ ಜಿಲ್ಲೆಗಳಲ್ಲಿ ರಾಡಿ ಎಬ್ಬಿಸಿತಲ್ಲ, ಅದಕ್ಕೆಲ್ಲ ಪ್ರಚಾರವೇ ಸಿಗಲಿಲ್ಲ ಏಕೆ? ಬಹಳ ಸಿಂಪಲ್ಲು. ಈ ರೀತಿ ಜೀವ ಕೊಡುವ ಕಾರ್ಯಕರ್ತರು ಅಲ್ಲಿಲ್ಲ; ಖರೀದಿಸಿದವರಿಗಾಗಿ ತಲೆಕೆಡಿಸಿಕೊಳ್ಳಬೇಕಿಲ್ಲ ಅಂತರ್ಥ! ಇಷ್ಟು ಮಾತ್ರ ಬಿಜೆಪಿಯೊಳಗೆ ಕಿರಿಕಿರಿಯಾಗಿಬಿಟ್ಟಿದ್ದರೆ ಮಾಧ್ಯಮಗಳಿಗೆ ಹಬ್ಬವಾಗಿಬಿಟ್ಟಿರುತ್ತಿತ್ತು. ಏಕೆ ಗೊತ್ತೇನು? ರಾಯಚೂರಿನಲ್ಲಾಗುವ ಒಂದು ಸಣ್ಣ ಬೆಳವಣಿಗೆಗೂ ಮಡಿಕೇರಿಯ ಕಾರ್ಯಕರ್ತ ನೊಂದುಕೊಳ್ಳುತ್ತಾನೆ. ಅವನ ಹೃದಯ ಕಂಪಿಸುತ್ತದೆ.
ಹೇಗೆ ಹೇಳಲಿ? ಏನು ಹೇಳಲಿ?
– ಪ್ರೊ.ರಾಜಾರಾಮ ಹೆಗಡೆ
ದೇವನೂರು ಮಹಾದೇವರವರ ಲೇಖನಕ್ಕೆ ಪ್ರತಿಕ್ರಿಯೆ {ಪ್ರಜಾವಾಣಿಯಲ್ಲಿ ಅಪ್ರಕಟಿತ ಲೇಖನ}
ದೇವನೂರು ಮಹಾದೇವರ ಪ್ರತಿಕ್ರಿಯೆಯನ್ನು ಓದಿದ ನಂತರ, ಅವರು ಏನನ್ನು ಹೇಗೆ ಹೇಳಿದ್ದಾರೆ ಎಂಬುದನ್ನು ಕಂಡ ನಂತರ ಅವರನ್ನು ಕಾಡಿದ ಆ “ಹೇಗೆ ಹೇಳಲಿ? ಏನು ಹೇಳಲಿ?” ಎಂಬ ಪ್ರಶ್ನೆ ಈಗ ಅವರದಕ್ಕಿಂತ ನನ್ನದೇ ಆಗಿದೆ. ಅವರು ನಮ್ಮ ಕುರಿತು ಏಕೆ ಇಂಥ ಭಾಷೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ಸ್ಪಷ್ಟ. ಅವರಿಗೆ ಸಿಟ್ಟಿದೆ. ದೇವನೂರರು ಒಂದು ಸಮೂಹದ ಹಿತದೃಷ್ಟಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅವರ ಜೀವನ ಈ ಕುರಿತಾಗಿಯೇ ಒಂದು ಹೋರಾಟ ಎಂದರೂ ತಪ್ಪಿಲ್ಲ. ಇಷ್ಟನ್ನು ಖಚಿತವಾಗಿ ಹೇಳಬಲ್ಲಷ್ಟು ನಾನು ಅವರನ್ನು ಬಲ್ಲೆ. ಹಾಗೂ ಅದನ್ನು ಗಮನಿಸುವುದು ಮುಂದಿನ ಸಂವಾದಕ್ಕೆ ನಿರ್ಣಾಯಕ ಎಂಬುದಾಗಿ ನನಗನಿಸುತ್ತದೆ. ಏಕೆಂದರೆ ಯಾರದೇ ಪ್ರಾಮಾಣಿಕತೆಯ ಮೇಲೆ ಅಪನಂಬಿಕೆಯನ್ನಿಟ್ಟು ಬೌದ್ಧಿಕ ಚರ್ಚೆಯನ್ನು ಪ್ರಾರಂಭಿಸುವುದರಿಂದ ಚರ್ಚಿಸತಕ್ಕ ವಿಷಯಕ್ಕೆ ನ್ಯಾಯ ಸಲ್ಲುವುದಿಲ್ಲ.
ನಮ್ಮ ದುರುದ್ದೇಶದ ಕುರಿತು ಅವರು ಕಟ್ಟಿಕೊಂಡಿರುವ ಚಿತ್ರಗಳನ್ನು ಅವರ ಲೇಖನದ ಮೂಲಕ ಗ್ರಹಿಸುತ್ತ ಹೋದಾಗ ನಮ್ಮ ಕುರಿತು ಯಾವ ರೀತಿಯ ಚಿತ್ರಣವು ಅವರ ವಲಯದಲ್ಲಿ ಗಟ್ಟಿಯಾಗುತ್ತಿದೆ ಎಂಬುದಕ್ಕೆ ಮತ್ತೊಂದು ದೃಷ್ಟಾಂತ ಸಿಕ್ಕಂತಾಯಿತು. ಹಾಗಂತ ಇದೇನೂ ನನಗೆ ಆಘಾತ ನೀಡಲಿಲ್ಲ. ಈ ಥೆರಪಿಯನ್ನು ನನಗೆ ಹಾಗೂ ನನ್ನ ಗುಂಪಿಗೆ ನಾವು ಬಾಲು ಜೊತೆ ಸೇರಿ ಸಂಶೋಧನೆ ಪ್ರಾರಂಭಿಸಿದಾಗಿನಿಂದಲೂ ನೀಡಲಾಗುತ್ತಿದೆ. ಸಂಶೋಧನೆ ಮಾಡುವುದು ಕೇವಲ ಬೌದ್ಧಿಕ ಪ್ರಶ್ನೆಯೊಂದೇ ಅಲ್ಲ, ಅದು ಪ್ರವಾಹದ ವಿರುದ್ಧ ಈಜುವ ಕೆಲಸ ಕೂಡ ಆಗಿದೆ ಎಂಬುದು ನಮಗೆ ಈಗಾಗಲೇ ಅನುಭವ ವೇದ್ಯವಾಗಿದೆ. ನಮ್ಮ ದುರುದ್ದೇಶದ ಕುರಿತು ಹುಟ್ಟುತ್ತಿರುವ ಕಥೆ ಸಾಕಷ್ಟು ಬೇರುಬಿಡುತ್ತಿದೆ ಎಂಬುದನ್ನು ಪ್ರಜಾವಾಣಿ ಪ್ರತಿಕ್ರಿಯೆಗಳಿಂದ ಮನಗಾಣುತ್ತಿದ್ದೇನೆ. ದೇವನೂರರೇ ಕೊಟ್ಟ ಆಡಿನ ಕಥೆಯಂತೆ ಹತ್ತಾರು ಮಂದಿ ಒಂದು ಸುಳ್ಳನ್ನು ಹೇಳುತ್ತಿದ್ದರೆ, ಹಾಗೂ ನಾವು ಸುಮ್ಮನೇ ಇದ್ದರೆ ಜನ ಅದನ್ನೇ ಸತ್ಯವೆಂದು ನಂಬಿಬಿಡುವ ಸಾಧ್ಯತೆಯಿದೆ. ಒಂದೊಮ್ಮೆ ನಮ್ಮ ಸಂಶೋಧನೆಯು ದೇವನೂರರು ಅಂದುಕೊಂಡಂತೇ ಯಾವುದೇ ಮಾನವ ಸಮುದಾಯದ ಅಹಿತವನ್ನು ಬಯಸುವ ದುರುದ್ದೇಶವನ್ನು ಹೊಂದಿಲ್ಲ ಅಂತಾದರೆ, ಈ ನಿಟ್ಟಿನಲ್ಲಿ ಈಗಿರುವ ಜ್ಞಾನದ ಮಿತಿಗಳನ್ನು ಕಳೆದು ಇನ್ನೂ ಹೆಚ್ಚು ಸ್ಪಷ್ಟತೆಯನ್ನು, ನ್ಯಾಯವನ್ನು ಸಾಧಿಸುವುದು ಅಂತಾದರೆ, ದೇವನೂರರ ನೋವಿಗೆ ಇರಬಹುದಾದ ಕಾರಣಗಳೇ ಮಾಯವಾಗುತ್ತವೆ. ಮುಂದೆ ಅವರ ಜೊತೆ ಅರ್ಥಪೂರ್ಣ ಸಂವಾದ ಸಾಧ್ಯವಾಗಬಹುದು ಎಂಬ ಆಶಯದಿಂದ ಈ ಲೇಖನ.
ಸಾಮಾನ್ಯ ಭಾರತೀಯನೊಬ್ಬನ ಪ್ರಶ್ನೆಗಳು
– ಶಿವಶಂಕರ್ ಪುತ್ರನ್, ಕೊಡಿಯಾಲ್ ಬೈಲ್
ಅಲ್ಲಾ ಸ್ವಾಮಿ, ಮಹಾತ್ಮರ ಸಿದ್ದಾ೦ತಗಳನ್ನು ಪಾಲಿಸುವವರೆ, ಯಾರೋ ಒಬ್ಬ ಸ೦ಸತ್ ಸದಸ್ಯ ಶಫಿಯಕುರ್ ರೆಹಮಾನ್ ವಂದೇಮಾತರ೦ನ್ನ ಗೌರವಿಸದೆ,ಆಮೇಲೆ ತಾನು ಯಾಕೆ ಗೌರವಿಸಿಲ್ಲ
ಅನ್ನೋದಕ್ಕೆ ಸ್ಪಷ್ಟನೆ ನೀಡ್ತಾನೆ.ಆತನ ಆ ಕ್ರಿಯೆ ದೇಶದಲೆಲ್ಲ ದೊಡ್ಡ ಅಲ್ಲೋಲಕಲ್ಲೋಲವನ್ನ ಉ೦ಟು ಮಾಡುತ್ತೆ.ಸಾಮಾಜಿಕ ತಾಣಗಳಾದ ಫೇಸ್ಬುಕ್,ಟ್ವಿಟ್ಟರ್ಗಳಲ್ಲಿ ಅವನ ವಿರುದ್ದ ಜನ ತಮ್ಮ ಕ್ರೋಧ ವ್ಯಕ್ತಪಡಿಸುತ್ತಾರೆ.ಕನ್ನಡದ ಬ್ಲಾಗೊ೦ದರಲ್ಲಿ ಸತ್ಯವಿಶ್ವಾಸಿಗಳಿಗೆ ದೇಶಪ್ರೇಮವನ್ನ ಬೋಧಿಸಲು ಹೋದವನ ಲೇಖನಕ್ಕೆ ಉತ್ತರಿಸುವ ನೆಪದಲ್ಲಿ ಹಲವಾರು ವ್ಯಕ್ತಿಗಳು ತಾವು ಹಾಗು ತಮ್ಮವರು ಯಾಕೆ ವಂದೇಮಾತರ೦ ಹಾಡಬಾರದು,ಯಾಕೆ ಗೌರವಿಸಬಾರದೆ೦ದು ತಮ್ಮ ಸ೦ಸದನ ವರ್ತನೆಯನ್ನ ಸಮರ್ಥಿಸಿಕೊಳ್ಳುವಾಗ ಒಬ್ಬ ಹುಲು ಭಾರತಿಯನಾಗಿ,ಒಬ್ಬ ಸಾಮಾನ್ಯ ಹಿ೦ದುವಾಗಿ, ಅದರೆ ಒಬ್ಬ ಅಪ್ಪಟ್ಟ ಭಾರತೀಯನಾಗಿ ಮನದಲ್ಲಿ ಹುಟ್ಟುವ ಹಲವಾರು ಗೊ೦ದಲಗಳಿಗೆ ಉತ್ತರವೆ ಸಿಗುತ್ತಿಲ್ಲ.ಹಾಗೆ ಮು೦ದುವರಿದು ಕೆಲವು ಮಿತ್ರರಲ್ಲಿ ಕೇಳಿದೆ, ಅವರಿಗೂ ಅದೇ ಗೊಂದಲ.ಅವರಲ್ಲಿ ಕೆಲವರು ಸದ್ಯಕಷ್ಟೆ ರಾಜ್ಯದ ಚುನಾವಣೆಯಲ್ಲಿ ಬಾಗಿಯಾಗಿ ಕೆಲವರು ಭ್ರಮನಿರಸಗೊ೦ಡರೆ,ಕೆಲವರು ಪಕ್ಷ ನಿಷ್ಟೆ ಬದಲಿಸಿ ಹೊಟ್ಟೆತು೦ಬಿಸಿಕೊ೦ಡವರು.ಹಾಗಾಗಿ,ಅವರಲ್ಲಿ ಕೇಳುವುದು ವ್ಯರ್ಥವೆಂದೆನಿಸಿ ಯಾಕೆ ನಮ್ಮ ಮುಸಲ್ಮಾನ ಬ೦ಧುಗಳಲ್ಲೆ ಕೇಳಬಾರದು ಅನಿಸಿತು.ಸ೦ಸಾರದ ಗೊಂದಲಗಳ ನಡುವೆ ಪ್ರತಿಯೊಬ್ಬ ನನ್ನ ಭೇಟಿಮಾಡುವಸ್ಟು ಸಮಯವಿಲ್ಲದಿರುವುದರಿ೦ದ ಇಲ್ಲೇ ಕೇಳುತ್ತಿದ್ದೇನೆ.ಅಷ್ಟೆ ಅಲ್ಲದೆ, ಇನ್ನು ಕೆಲವು ದಿನಗಳಿ೦ದ ಮನಸಿನಲ್ಲಿ ನನ್ನ ಮುಂದಿನ ಜನಾ೦ಗದ ಬಗ್ಗೆ ಯೋಚಿಸಿ ಇನ್ನು ಕೆಲವು ಪ್ರಶ್ನೆಗಳನ್ನ ಇಡುತ್ತಿದೇನೆ.ಇದನ್ನ ನೇರವಾಗಿ ಕೇಳಿದರೆ ನನ್ನ ಜೀವಕ್ಕೆ ಅಪಾಯ ಯಾಕೆ೦ದರೆ ನಾನೊಬ್ಬ ಹಿ೦ದು ಹಾಗು ನನ್ನ ಜಾತಿಯ ಆಧಾರದಲ್ಲಿ ಚುನಾವಣೆಯ ಸಮಯದಲ್ಲಿ ನನ್ನ ಮತಕ್ಕೆ ಮಾತ್ರ ಮರ್ಯಾದೆ ಅಲ್ಲದೆ ನನ್ನ ರಕ್ಷಣೆಗಲ್ಲ ಎ೦ದು ಸಣ್ಣ೦ದಿನಲ್ಲೆ ನನಗೆ ಅರ್ಥವಾಗಾಗಿದೆ.ಆದುದರಿ೦ದ ನನ್ನ ಪ್ರಶ್ನೆ ಪ್ರತಿಯೊಬ್ಬ ಸಾಮಾನ್ಯ ಭಾರತೀಯನ(ನಿಮ್ಮ ಪ್ರಕಾರ ಸತ್ಯವಿಶ್ವಾಸಿಯಲ್ಲದ ಅಬ್ರಾಹಂನ ಸಿದ್ದಾ೦ತಗಳಿಗೆ ಒಳಪಡದ ಅಪ್ಪ-ಅಮ್ಮನಿಲ್ಲದ ಜನಾ೦ಗ)ಪ್ರಶ್ನೆಯೆಂದು ತಿಳಿಯಬಹುದು.
‘ಕುಮಾರ’ ಮುಖ್ಯಮಂತ್ರಿ ಗಾದಿಗೆ! ‘ಮೋದಿ’ ಪ್ರಧಾನಿ ಹುದ್ದೆಗೆ!
– ಗೋಪಾಲಕೃಷ್ಣ
ಅಭಿವೃದ್ಧಿಯೇ ಮಾತನಾಡುವುದಾದರೆ; ‘ಕುಮಾರಣ್ಣ’ ಮುಖ್ಯಮಂತ್ರಿ ಗಾದಿಗೆ! ‘ಮೋದಿಜಿ’ ಪ್ರಧಾನಿ ಹುದ್ದೆಗೆ!
ಅರವತ್ತಾರು ವಸಂತಗಳ ಬಂಧಮುಕ್ತ ಬದುಕು.ಈ ನಡುವೆ ದೇಶ ಕಂಡದ್ದು 13 ಮಂದಿ ಪ್ರಧಾನಮಂತ್ರಿಗಳನ್ನು. ರಾಜ್ಯವನ್ನಾಳಿದ್ದು 21 ಮುಖ್ಯಮಂತ್ರಿಗಳು. ಇವರೆಲ್ಲರಲ್ಲಿಯೂ; ದೇಶದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ಪಿ.ವಿ.ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿಯವರನ್ನು ಮತ್ತೆ ಮತ್ತೆ ನೆನದರೆ, ರಾಜ್ಯದಲ್ಲಿ ದೇವರಾಜ ಅರಸು ಅವರ ಸಾಮಾಜಿಕ ಪರಿಕಲ್ಪನೆ, ರಾಮಕೃಷ್ಣ ಹೆಗಡೆ ಅವಧಿಯ ಜನಪರ ಕಾರ್ಯಕ್ರಮಗಳು, ಎಸ್.ಎಂ.ಕೃಷ್ಣ ಅವರ ಲಯ ತಪ್ಪದ ಆಡಳಿತ, ಹೆಚ್.ಡಿ.ಕುಮಾರಸ್ವಾಮಿಯವರ ಇಪ್ಪತ್ತೇ ತಿಂಗಳ ಆಡಳಿತವನ್ನು ಮಾತ್ರ ಇಂದಿಗೂ ಮೆಲುಕು ಹಾಕುವಂತಾಗಿದೆ.
ಭಾರತದ ಜನಸಂಖ್ಯೆ 121 ಕೋಟಿಯನ್ನು ದಾಟಿರಬಹುದು. ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸುಮಾರು 5400 ಮಂದಿಯಷ್ಟೇ. ಆದರೆ, ಇಷ್ಟು ಜನ ಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನರ ಆಶಯಗಳಿಗೆ ತಕ್ಕಂತೆ ನಡೆಯುವುದು ಅಪರೂಪ. ಅವರುಗಳ ನಿಷ್ಠೆಯೇನಿದ್ದರೂ ದೇಶವಾದರೆ ಪ್ರಧಾನಿಗೆ! ರಾಜ್ಯವಾದರೆ ಮುಖ್ಯಮಂತ್ರಿಗೆ ಮೀಸಲು ಎಂಬಂತಿರುತ್ತದೆ. ಸಂವಿಧಾನದ ಪ್ರಕಾರ ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿಯನ್ನು ಶಾಸಕರು, ಲೋಕಸಭಾ ಸದಸ್ಯರು ಆಯ್ಕೆ ಮಾಡಬೇಕು. ಆ ಪರಿಪಾಠ ಮುರಿದು ಬಿದ್ದು ಎಷ್ಟೋ ವರ್ಷಗಳು ಆಗಿವೆ. ಈಗೇನಿದ್ದರೂ ಚುನಾವಣಾ ಪೂರ್ವದಲ್ಲಿಯೇ ನಾಯಕನ ಆಯ್ಕೆ ಇಲ್ಲವೇ ಹೈಕಮಾಂಡ್ ಹೇಳಿದವರು ಅತ್ಯುನ್ನತ ಹುದ್ದೆಯಲ್ಲಿ ಕೂರುತ್ತಾರೆ.
ಇನ್ನೂ ಬೇಕೆ ಇಂಥ ರಾಜಕೀಯ ಮೀಸಲಾತಿ?
-ಸಾತ್ವಿಕ್ ಎನ್.ವಿ.
ಒಂದು ವಿಷಯವಂತೂ ಸಂಸತ್ತಿನಲ್ಲಿ ಒಂದು ಸಣ್ಣ ಚರ್ಚೆಯೂ ಇಲ್ಲದೇ ಸರ್ವಾನುಮತದಿಂದ ಅನುಮೋದನೆ ಪಡೆಯುತ್ತದೆ. ಸಂಸದರು ಇದಕ್ಕೆ ವಿರೋಧ ಇಲ್ಲವೆ ಅನುಮಾನ ವ್ಯಕ್ತಪಡಿಸುವುದು ಪ್ರತಿಗಾಮಿತನ ಎಂದೇ ಭಾವಿಸುತ್ತಾರೆ. ಪಕ್ಷಬೇಧ ಮರೆತು ಬೆಂಬಲಿಸುತ್ತಾರೆ. ಅದುವೇ ಚುನಾವಣೆಯಲ್ಲಿ ನೀಡಲಾಗಿರುವ ರಾಜಕೀಯ ಮೀಸಲಾತಿಯ ನವೀಕರಣ. ಇದು ಪ್ರತಿ ಹತ್ತು ವರ್ಷಕ್ಕೊಮ್ಮೆ ನವೀಕರಣಕ್ಕೆ ಬರುತ್ತದೆ. ಆಗ ಸಂಸತ್ತು ಈ ಪದ್ಧತಿಯನ್ನು ನಿರಾಕರಿಸಬಹುದು ಇಲ್ಲವೇ ಮುಂದಿನ ಹತ್ತು ವರ್ಷಕ್ಕೆ ನವೀಕರಿಸಬಹುದು. ಆದರೆ ಸಂಸತ್ತು ಯಾವುದೇ ಚರ್ಚೆಯಿಲ್ಲದೇ ನವಿಕರಿಸುತ್ತಲೇ ಬಂದಿದೆ. ಸರ್ಕಾರ ಯಾ ರಾಜಕೀಯಪಕ್ಷಗಳಿಗೆ ದಲಿತ/ಹಿಂದುಳಿದ ವರ್ಗಗಳ ಬಗ್ಗೆ ಇಷ್ಟೊಂದು ಪ್ರೀತಿ ಎಲ್ಲಿಂದ ಉಕ್ಕಿತೆಂದು ಆಶ್ಚರ್ಯವಾಗಬಹುದು. ಆದರೆ ಇದರ ಹಿಂದಿನ ತಂತ್ರ ಬೇರೆಯದೇ ಇದೆ.
ಯಾಕೆಂದರೆ ಸಂವಿಧಾನದಲ್ಲಿ ದಲಿತ ಜನವರ್ಗದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ನೀಡಲಾದ ಈ ಮೀಸಲಾತಿಯು ರಾಜಕೀಯ ಪಕ್ಷಗಳ ಕೈಯಲ್ಲಿ ಸಿಕ್ಕಿ ತನ್ನ ಮೂಲ ಉದ್ದೇಶವನ್ನು ಎಂದೋ ಮರೆತಿದೆ. ಮೀಸಲು ಕ್ಷೇತ್ರದಲ್ಲಿ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸುತ್ತವೆ. ಗೆದ್ದ ಸ್ಪರ್ಧಿಯು ತನ್ನ ಸಮುದಾಯದ ಪ್ರತಿನಿಧಿಯಾಗಿರುತ್ತಾನೆ. ತನ್ನ ಸಮುದಾಯದ ಅಭಿವೃದ್ಧಿಯ ಸಲುವಾಗಿ ಸದನದಲ್ಲಿ ಧ್ವನಿ ಎತ್ತುವುದು ಆತನ ಕರ್ತವ್ಯವಾಗಿರುತ್ತದೆ. ಆದರೆ ಪಕ್ಷವೊಂದರ ಹಂಗಿನಲ್ಲಿರುವ ವ್ಯಕ್ತಿಯಿಂದ ಇಂಥ ದೃಢ ಮತ್ತು ನಿಷ್ಠುರ ಕೆಲಸಗಳನ್ನು ನಿರೀಕ್ಷಿಸಲು ಸಾಧ್ಯವೇ? ಆತ ದಲಿತವರ್ಗದಿಂದ ಬಂದಿದ್ದರೂ ತನ್ನ ಪಕ್ಷಕ್ಕಾಗಿಯೇ ತಯಾರಾದವನು. ಆತ ತನ್ನ ಪಕ್ಷದ ಸಿದ್ಧಾಂತದಿಂದ ಎಷ್ಟು ಹೊರಗೆ ನಿಂತು ಕೆಲಸ ಮಾಡಲು ರಾಜಕೀಯ ಪಕ್ಷಗಳು ಅವಕಾಶ ನೀಡುತ್ತಿವೆ? ಹೆಚ್ಚಿನ ಸಂದರ್ಭದಲ್ಲಿ ಆಯ್ಕೆಯಾದ ವ್ಯಕ್ತಿಯು ಪಕ್ಷವೊಂದರಲ್ಲಿ ಸದಸ್ಯರ ಸಂಖ್ಯೆ ಹೆಚ್ಚಿಸುವ ಇಲ್ಲವೇ ಹೌದಪ್ಪನಾಗಿ ಬಳಕೆಯಾಗುವ ಸಂದರ್ಭವೇ ಹೆಚ್ಚು. ಇಂಥ ಸಂದರ್ಭದಲ್ಲಿ ದಲಿತ ಸದಸ್ಯನೊಬ್ಬನಿಗೆ ಇತರೆ ವರ್ಗದ ರಾಜಕೀಯ ನೇತಾರನಿಗಿಂತ ಹೆಚ್ಚಿನ ಜವಾಬ್ದಾರಿ ಮತ್ತು ಹೊಣೆಗಾರಿಕೆ ಇರಬೇಕಾಗುತ್ತದೆ. ಮತ್ತಷ್ಟು ಓದು 






