ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

29
ಮಾರ್ಚ್

ಉಪಖಂಡದಲ್ಲಿ ಏಕಾಂಗಿ ಭಾರತ?

– ಡಾ ಅಶೋಕ್ ಕೆ ಆರ್

ISPCತೀರ ಹಿಂದಿನ ಮಾತಲ್ಲ. ಕೆಲವೇ ದಿನಗಳ ಹಿಂದೆ ಅಫ್ಜಲ್ ಗುರುವನ್ನು ನೇಣಿಗೇರಿಸಿ ಅವನ ದೇಹವನ್ನು ಆತನ ಮನೆಯವರಿಗೆ ನೀಡದೆ ಜೈಲಿನಲ್ಲೇ ಮಣ್ಣು ಮಾಡಲಾಗಿತ್ತು. ಕಾಶ್ಮೀರದಲ್ಲಿ ಪ್ರತಿಭಟನೆಗಳಾದವು, ಅಫ್ಜಲ್ ಗುರು ಅಲ್ಲಿಯವನಾಗಿದ್ದರಿಂದ. ಇದೇ ಸಮಯದಲ್ಲಿ ಪಾಕಿಸ್ತಾನದ ರಾಜಕೀಯ ಪಕ್ಷಗಳು ಅಫ್ಜಲ್ ಗುರುವಿನ ದೇಹವನ್ನು ಆತನ ಮನೆಯವರಿಗೆ ಹಿಂದಿರುಗಿಸಬೇಕು ಎಂಬ ನಿರ್ಣಯ ತೆಗೆದುಕೊಂಡವು, ನಿರ್ಣಯ ಮಾಡಿದ್ದು ಹಾದಿಬೀದಿಯಲ್ಲಾಗಿರದೆ ಸಂಸತ್ತಿನಲ್ಲಾಗಿತ್ತು.ಈ ಕಾರಣದಿಂದ ನಿರ್ಣಯಕ್ಕೆ ಅಧಿಕೃತತೆಯ ಮುದ್ರೆ ಲಭಿಸಿತ್ತು. ಪಾಕಿಸ್ತಾನದ ಈ ನಡೆಗೆ ಭಾರತದಲ್ಲಿ ಅಗಾಧ ವಿರೋಧ  ವ್ಯಕ್ತವಾಗಿದ್ದು ಸಹಜ ಪ್ರತಿಕ್ರಿಯೆಯಾಗಿತ್ತು. ನಮ್ಮ ಮನೆಯ ವಿಷಯದಲ್ಲಿ ಅನ್ಯರು ಮೂಗು ತೂರಿಸುವುದು ಕೋಪ ತರಿಸುವ  ವಿಷಯವೇ ಸರಿ.

ಶ್ರೀಲಂಕಾದ ಎಲ್ ಟಿ ಟಿ ಇ ಸಂಘಟನೆಯ ಹುಟ್ಟಿಗೆ ಅನೇಕ ಐತಿಹಾಸಿಕ ಕಾರಣಗಳಿವೆ.ಶ್ರೀಲಂಕಾದ ಈ ಆಂತರಿಕ ಸಮಸ್ಯೆಯ ಉದ್ಭವವಾಗಿದ್ದು ಬ್ರೀಟೀಷರ ಆಡಳಿತದ ಕಾರಣದಿಂದ ಎಂದರೆ ತಪ್ಪಾಗಲಾರದು.ಶ್ರೀಲಂಕಾದ ಎಸ್ಟೇಟುಗಳಲ್ಲಿ ಕೆಲಸ ಮಾಡಲೆಂದು ಶ್ರಮಜೀವಿಗಳಾದ ತಮಿಳರನ್ನು ಕರೆದುಕೊಂಡು ಹೋಗಿತ್ತು ಅಂದಿನ ಬ್ರಿಟೀಷ್ ಆಡಳಿತ. ಬ್ರಿಟೀಷರು ಶ್ರೀಲಂಕ ತೊರೆದ ನಂತರ ಅಲ್ಲಿನ ಬಹುಸಂಖ್ಯಾತರಾದ ಸಿಂಹಳೀಯರು ಲಂಕ ತಮಿಳರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ನೋಡಕಲಾರಂಭಿಸಿದ್ದರು.

ಮತ್ತಷ್ಟು ಓದು »

23
ಮಾರ್ಚ್

‘ಸತ್ತು ಬದುಕುವುದು ಹೇಗೆ!?’ ಎಂದು ತೋರಿಸಿಕೊಟ್ಟವನ ನೆನಪಿಗೆ…

– ರಾಕೇಶ್ ಶೆಟ್ಟಿ

ಕ್ರಾಂತಿಕಾರಿಗಳೆಂದರೆ ಹಾದಿ ತಪ್ಪಿದ ದೇಶ ಭಕ್ತರಲ್ಲ, ಅವರಿಗೂ ಧ್ಯೇಯ,ಗುರಿ,ಆದರ್ಶಗಳಿರುತ್ತವೆ.ಮತ್ತು ಆ ಆದರ್ಶಗಳನ್ನ ಪಾಲಿಸಲು ತಮ್ಮ ಜೀವವನ್ನು ಸಹ ಅವರು ಅರ್ಪಿಸಬಲ್ಲರು ಅಂತ ಜಗತ್ತಿಗೆ ತೋರಿಸಿಕೊಟ್ಟವರು, ಹುಟ್ಟಿ ಬಂದು ಅಷ್ಟೇ ಬೇಗ ಅದಿನ್ಯಾವ್ದೋ ತುರ್ತು ಕೆಲಸವಿದೆ ಅನ್ನುವಂತೆ ಎದ್ದು ಹೊರಟವರು,ಸತ್ತು ಬದುಕುವುದು ಹೇಗೆ ಅಂತ ತೋರಿಸಿಕೊಟ್ಟು ಹೋದವರು ಭಗತ್ ಸಿಂಗ್,ರಾಜಗುರು ಮತ್ತು ಸುಖದೇವ್.

ಅವರು ಹುತಾತ್ಮರಾಗಿ ಇಂದಿಗೆ ೮೦ ವರ್ಷಗಳಾಯಿತು.ಬಹುಷಃ ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ  ಕ್ರಾಂತಿಯ ಕಿಡಿಯನ್ನ ಭಾರತೀಯರಲ್ಲಿ ಬಡಿದ್ದೆಬ್ಬಿಸಿದ ಅಪ್ರತಿಮ ವ್ಯಕ್ತಿ ಭಗತ್ ಸಿಂಗ್.ಚಂದ್ರ ಶೇಖರ್ ಆಜಾದ್ರಂತ ಮಹಾನ್ ಗುರುವಿನ ಶಿಷ್ಯ ಗುರುವನ್ನು ಮೀರಿಸುವಂತೆ ಮುನ್ನಡೆದು ಬಿಟ್ಟರು.ಜಲಿಯನ್ ವಾಲ ಬಾಗ್ನ ದುರಂತ ಭಾರತದ ಸ್ವಾತಂತ್ರ್ಯ ಹೋರಾಟದ ಕ್ರಾಂತಿಯ ಕಿಡಿಯ ಉದಯಕ್ಕೆ ಮುನ್ನುಡಿ ಬರೆದಿತ್ತು.ಗಾಂಧೀಜಿಯವರ ಅಸಹಕಾರ ಚಳುವಳಿಗೆ ಓ ಕೊಟ್ಟು ಬೀದಿಗಿಳಿದ ಭಾರತೀಯರಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ಮುದುಕರವರೆಗೂ ಎಲ್ಲರು ಇದ್ದರು.ಅಂತವರ ಮಧ್ಯೆ ಬಾಲಕ ಭಗತ್ ಕೂಡ ಇದ್ದ.ಚೌರಿ-ಚೌರಾದ ಘಟನೆಯ ನಂತರ ಗಾಂಧೀಜಿ ಏಕಾಏಕಿ ಚಳುವಳಿಯನ್ನ ಹಿಂದೆ ಪಡೆದಾಗ,ಮತ್ತು ಆ ನಂತರ ಗಾಂಧೀಜಿಯ ಮಾತು ಕೇಳಿ ಶಾಲೆ ಬಿಟ್ಟು ಹೊರಬಂದು ಪಟ್ಟ ಪಾಡು ಇವೆಲ್ಲ ಭಗತ್ ಮನಸಿನಲ್ಲಿ ಗಾಂಧೀವಾದದ ಬಗ್ಗೆ ನಂಬಿಕೆ ಕಳೆಯುವಂತೆ ಮಾಡಿತು.ಬಹುಷಃ ಇವೆರಡು ಘಟನೆಗಳು ಭಗತ್ ಸಿಂಗ್ನ  ಮುಂದಿನ ಜೀವನ ದಿಕ್ಕನ್ನು ಬದಲಾಯಿಸಿದವು ಅನ್ನಬಹುದೇನೋ?

ಮತ್ತಷ್ಟು ಓದು »

19
ಮಾರ್ಚ್

ರಾಮಸೇತು ಒಡೆದರೆ ಥೋರಿಯಮ್ ನಿಕ್ಷೇಪಕ್ಕೆ ಎಳ್ಳು ನೀರು…

-ಚಕ್ರವರ್ತಿ ಸೂಲಿಬೆಲೆ

Rama Sethuve1ನಮಗೇ ಅರಿವಿಲ್ಲದೇ ಭಯಾನಕ ಪರಿಸ್ಥಿತಿಯತ್ತ ತೆವಳಿಕೊಂಡು ಹೋಗುತ್ತಿದ್ದೇವೆ! ನಾವು ಬಳಸುವ ಪೆಟ್ರೋಲು – ಡೀಸೆಲ್ಲಿನ ಮುಕ್ಕಾಲು ಭಾಗ ಆಮದು ಮಾಡಿಕೊಳ್ಳುತ್ತಿದ್ದೇವೆ. ಕಳೆದ ವರ್ಷದ ಲೆಕ್ಕಾಚಾರದ ಪ್ರಕಾರ ೧೩೪ ಶತಕೋಟಿ ಡಾಲರುಗಳಷ್ಟು ತೈಲ ಆಮದು ಮಾಡಿಕೊಂಡಿದ್ದೇವೆ. ಆಮದು ಮಿತಿಮೀರಿ ರಫ್ತು ನೆಲ ಕಚ್ಚುತ್ತಿರುವುದರಿಂದ ಡಾಲರಿನೆದುರು ರೂಪಾಯಿ ಸೋಲುತ್ತಲೇ ಸಾಗುತ್ತಿದೆ. ಒಂದಷ್ಟು ಜನಕ್ಕೆ ರೂಪಾಯಿಯ ಅಪಮೌಲ್ಯ ಲಾಭದಾಯಕವೆನಿಸಿದರೂ ಭಾರತದ ದೃಷ್ಟಿಯಿಂದ ಬಲು ಭಯಾನಕ.
ಅದೇಕೋ ನೆಹರೂ ಕಾಲದಿಂದಲೂ ಈ ದೇಶಕ್ಕೆ ದೂರದೃಷ್ಟಿಯ ಕೊರತೆ ಇದೆ. ಮುಂದಿನ ನೂರು ವರ್ಷಗಳಿಗೆ, ಸಾವಿರ ವರ್ಷಗಳಿಗೆ ಯೋಜನೆ ರೂಪಿಸುವ ಪ್ರಯತ್ನಗಳೇ ಇಲ್ಲ. ಅದು ಬಿಡಿ, ಅಂತಾರಾಷ್ಟ್ರೀಯ ಒತ್ತಡಗಳಿಗೆ ಮಣಿದು ಇರುವ ಸಂಪತ್ತನ್ನೂ ನಾಶ ಮಾಡಿಕೋಳ್ಳುವ ಜಾಯಮಾನ ನಮ್ಮದು.

ಎನರ್ಜಿ ಇನ್‌ಫರ್ಮೇಶನ್ ಏಜೆನ್ಸಿಯ ಪ್ರಕಾರ ಅಮೆರಿಕಾ, ಚೀನಾ, ರಷ್ಯಾ ಬಿಟ್ಟರೆ ಹೆಚ್ಚು ತೈಲ ಬಳಸುವ ರಾಷ್ಟ್ರ ನಮ್ಮದೇ. ಉಳಿದ ಮೂರು ರಾಷ್ಟ್ರಗಳೂ ತೈಲ ಹೊರತೆಗೆದು ಸಂಸ್ಕರಿಸಿ ಬಳಸುವಲ್ಲಿ ಸ್ವಾವಲಂಬಿಯಾಗುವತ್ತ, ಅಷ್ಟೇ ಅಲ್ಲ, ತಮ್ಮ ತೈಲ ಕಂಪನಿಗಳನ್ನು ತೈಲ ರಾಷ್ಟ್ರಗಳಿಗೆ ಕಳಿಸುವತ್ತಲೂ ಗಮನ ನೀಡುತಿವೆ. ನಾವು ಮಾತ್ರ ಕಂಡುಹಿಡಿದಿರುವ ತೈಲ ಸಂಪತ್ತನ್ನು ಹೊರತೆಗೆಯಲೂ ಮೀನಾಮೇಷ ಎಣಿಸುತ್ತ ಬಿಲಿಯನ್‌ಗಟ್ಟಲೆ ಡಾಲರುಗಳನ್ನು ವ್ಯರ್ಥ ಮಾಡುತ್ತ, ಕಾಲ ಕಳೆಯುತ್ತಿದ್ದೇವೆ. ಅದೇ ಏಜೆನ್ಸಿಯ ಅಂಕಿ ಅಂಶದ ಪ್ರಕಾರ ೨೦೧೦ರಲ್ಲಿ ನಾವು ಏಳುವರೆ ಲಕ್ಷ ಬ್ಯಾರಲ್‌ನಷ್ಟು ತೈಲವನ್ನು ಪ್ರತಿ ನಿತ್ಯ ಹೊರತೆಗೆದರೆ, ಆ ವರ್ಷ ೩೨ ಲಕ್ಷ ಬ್ಯಾರಲ್‌ನಷ್ಟು ತೈಲವನ್ನು ಪ್ರತಿನಿತ್ಯ ಬಳಸಿದ್ದೇವೆ. ಅಂದಮೇಲೆ ಅಂತಾರಾಷ್ಟ್ರೀಯ ಒತ್ತಡಗಳು ನಮ್ಮ ಮೇಲೆ ಹೇಗಿರಬಹುದೆಂದು ಲೆಕ್ಕ ಹಾಕಿ. ನಮಗೆ ಪೆಟ್ರೋಲು- ಡೀಸೆಲ್ಲು ಕಳಿಸುವುದಿಲ್ಲವೆಂದು ತೈಲ ರಾಷ್ಟ್ರಗಳು ನಿರ್ಬಂಧ ಹೇರಿ ಕುಂತುಬಿಟ್ಟರೆ ನಮ್ಮ ಕಥೆ ಮುಗಿದೇಹೋಯ್ತು. ಹಾಹಾಕಾರ ಉಂಟಾಗಿಬಿಡುತ್ತೆ.

ಮತ್ತಷ್ಟು ಓದು »

18
ಮಾರ್ಚ್

ನರೇಂದ್ರ ಮೋದಿ v /s ರಾಹುಲ್ ಗಾಂಧಿ …ಅನುಭವಿ v /s ಅನನುಭವಿ

– ಅಜಿತ್ ಶೆಟ್ಟಿ,ಉಡುಪಿ

NaGa೨೦೧೪ ರ ಲೋಕಸಭೆ ಮಹಾಸಮರ ಇನ್ನೇನು ಬಂದೇ ಬಿಡುತ್ತೆ.ಎರಡು ಪ್ರಮುಖ ಒಕ್ಕೂಟಗಳಾದ ಎನ್.ಡಿ.ಎ ಹಾಗೂ ಯು.ಪಿ.ಎ ತನ್ನ ಪ್ರಧಾನಿ ಅಭ್ಯರ್ಥಿ ಯಾರೆಂದು ಅಧಿಕೃತವಾಗಿ ಘೋಷಿಸದಿದ್ದರೂ, ತಮ್ಮ ಪ್ರಧಾನಿ ಅಭ್ಯರ್ಥಿಗೆ ಸಕಲ ವೇಷ-ಭೂಷಣ ತೊಡಿಸಿ ರಂಗಕ್ಕೆ ಇಳಿಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿವೆ. ನೆಹರು ಕುಟುಂಬಕ್ಕೆ ಜೋತು ಬಿದ್ದಿರುವ ಕಾಂಗ್ರೆಸ್ ತಿಂಗಳ ಹಿಂದೆ ಜೈಪುರದಲ್ಲಿ ನಡೆದ ಚಿಂತನಾ ಶಿಬಿರ ದಲ್ಲಿ ಆ ವಂಶದ ಕುಡಿ , ನಲವತ್ತು ಮೀರಿದ ಯುವಕ ರಾಹುಲ್ ಗಾಂಧಿ ಯವರಿಗೆ ಪಕ್ಷದಲ್ಲಿ “ನಂಬರ್ ಟೂ” ಸ್ಥಾನ ಕೊಟ್ಟು ಅವರನ್ನೇ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದೆ. ವೀರಪ್ಪ ಮೊಯಿಲಿ, ದಿಗ್ವಿಜಯ್ ಸಿಂಗ್ , ಜಿತೀನ್ ಪ್ರಸಾದ್ ರಂತವರು ರಾಹುಲ್ ಗುಣಗಾನದಲ್ಲೇ ತೊಡಗಿ ಬಹಿರಂಗವಾಗೇ ಅವರನ್ನು ಪ್ರಧಾನಿ ಅಭ್ಯರ್ಥಿಎಂದಿದ್ದಾರೆ.ಎನ್.ಡಿ.ಎಯ ಪ್ರಮುಖ ಪಕ್ಷ ಬಿಜೆಪಿ ಇತ್ತೀಚಿಗೆ ನಡೆದ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಗುಜರಾತ್ ನ ಮೂರುಬಾರಿಯ ಜನಪ್ರಿಯ ಮುಖ್ಯಮಂತ್ರಿ ನರೇಂದ್ರ ಮೋದಿಯವರಿಗೆ ವಿಶೇಷ ಆದ್ಯತೆ ನೀಡಿದೆ . ಪಕ್ಷದಲ್ಲಿ ಏನೇ ಗೊಂದಲ ಇದ್ದರೂ, ಕಾರ್ಯಕಾರಿ  ಸಭೆಯಲ್ಲಿ ಮೋದಿಗೆ ಕೊಟ್ಟ ಪ್ರಾಮುಖ್ಯತೆ ಸೂಚ್ಯವಾಗಿ ಮೋದಿನೇ ಮುಂದಿನ ಪ್ರಧಾನಿ ಅಭ್ಯರ್ಥಿ ಎನ್ನುವಂತಿತ್ತು.ಹಾಗೇ ಪಕ್ಷದ ರಾಷ್ಟೀಯ ಅಧ್ಯಕ್ಷ ರಾಜನಾಥ್ ಸಿಂಗ್ ರ ಹೇಳಿಕೆಗಳು ಕೂಡ ಇದಕ್ಕೆ ಪುಷ್ಟಿ ನೀಡುತಿತ್ತು .

ಒಂದು ವೇಳೆ ಈವರಿರ್ವರು ಪ್ರಧಾನಿ ಅಭ್ಯರ್ಥಿಗಳಾದರೆ, ಮೋದಿ ಮುಂದೆ ರಾಹುಲ್ ಎನ್ನುವುದು ಅನುಭವಿ ಭೀಷ್ಮನ ಮುಂದೆ ಅನನುಭವಿ ಬಡಾಯಿ ಉತ್ತರ ಕುಮಾರನನ್ನು ತಂದು ನಿಲ್ಲಿಸಿದಂತೆ.ಇದು ನಿಸ್ಸಂಶಯವಾಗಿ ಅನುಭವಿ v /s ಅನನುಭವಿ ನಡುವಿನ ಸಮರ.ಹೌದು ಮೇಷ್ಟ್ರ ಮಗ ಮೇಷ್ಟ್ರು ಅಗಬಾರದು, ಡಾಕ್ಟರ್ ಮಗ ಡಾಕ್ಟರ್ ಆಗಬಾರದು ಅಂತೇನು ಇಲ್ಲಾ ಹಾಗೇ ತಲತಲಾಂತರದಿಂದ ರಾಜಕೀಯ ವಂಶದಿಂದ ಬಂದ ರಾಜಕಾರಣಿ ಮಗ ಪ್ರದಾನಿ ಆಗಬಾರದಂತೆನೂ ಇಲ್ಲ.ಆದರೆ, ಅವನು ತನ್ನ ಸ್ವಂತ ಅರ್ಹತೆಯಿಂದ ಆ ಪದವಿ ಪಡೆಯಬೇಕೇ ವಿನಹ , ತನ್ನ ತಂದೆ ಅನುಭವಿಸಿದ ಹುದ್ದೆ, ತಂದೆ ಹೆಸರು , ಕುಟುಂಬದ ಹೆಸರು ಇವನ ಅರ್ಹತೆ ಆಗಬಾರದು. ರಾಹುಲ್ ತನ್ನ ಕುಟುಂಬ ನಡೆಸಿದ ಅಧಿಕಾರ ನೋಡಿದ್ದಾನೆ ಹೊರತು ಅಧಿಕಾರ ನಡೆಸಿ ಗೊತ್ತಿಲ್ಲ . ರಾಹುಲ್ ಈ ತನಕ ಉಸ್ತುವಾರಿ ವಹಿಸಿಕೊಂಡ ಬಿಹಾರ್ , ಗುಜರಾತ್ , ತಮಿಳುನಾಡು , ಮತ್ತು ಆತನ ಸ್ವಕ್ಷೇತ್ರ ಅಮೇಥಿಯನ್ನು ಹೊಂದಿರುವ ಉತ್ತರ ಪ್ರದೇಶದ  ಚುನಾವಣೆ  ಎಲ್ಲಾ ಕಡೆ ಕಾಂಗ್ರೆಸ್ ಮಕಾಡೆ ಮಲಗಿತ್ತು.ಉತ್ತರ ಪ್ರದೇಶದ ಚುನಾವಣೆಯಂತು ರಾಹುಲ್ v /s ಅಕಿಲೇಶ್ ಅಂತಾನೇ ಬಿಂಬಿತ ವಾಗಿತ್ತು.ಅಲ್ಲೂ ಕಾಂಗ್ರೆಸ್ಗೆ ಸೋಲು.ರಾಹುಲ್ ನ ಸ್ವಕ್ಷೇತ್ರ ಅಮೇಥಿಯಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತು ತೀವ್ರ ಮುಖ ಭಂಗ ಅನುಭವಿಸಿತ್ತು.ಜನ ಸ್ಪಷ್ಟವಾಗಿ ರಾಹುಲ್ ರ ನಾಯಕತ್ವವನ್ನು ನಿರಾಕರಿಸಿದ್ದು ಎದ್ದು ಕಾಣುತ್ತಿತ್ತು.
ಮತ್ತಷ್ಟು ಓದು »

8
ಮಾರ್ಚ್

ಭಾರತದ ಮಾಣಿಕ್ಯ – ಮಾಣಿಕ್ ಸರ್ಕಾರ್

-ಡಾ. ಅಶೋಕ್ ಕೆ ಆರ್

Manik Sarkarಭಾರತ ಬಡದೇಶವೇ? ನಮ್ಮ ರಾಜಕಾರಣಿಗಳು ಅಧಿಕೃತವಾಗಿಯೇ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ನೋಡಿದರೆ ಭಾರತದಲ್ಲಿ ಬಡವರ ಅಸ್ತಿತ್ವವೇ ಇಲ್ಲವೇನೋ ಎಂಬ ಭಾವನೆ ಮೂಡಿದರೆ ತಪ್ಪಲ್ಲ. ಎಲ್ಲೋ ಕೆಲವರನ್ನು ಹೊರತುಪಡಿಸಿ ನಮ್ಮ ಸಂಸದರು ಸಚಿವರು ಶಾಸಕರು ಮುಖ್ಯಮಂತ್ರಿಗಳೆಲ್ಲ ಕೋಟಿಗೂ ಅಧಿಕ ಬೆಲೆಬಾಳುವವರೇ! ಶಾಸನಸಭೆಯಲ್ಲಿ ಯಾರದೂ ವಿರೋಧವಿಲ್ಲದೆ ಅಂಗೀಕೃತವಾಗುವ ಮಸೂದೆ “ಶಾಸಕ – ಸಚಿವರ” ವೇತನ ಹೆಚ್ಚಳ ಮಾತ್ರ! ರಾಜಕಾರಣಿಗಳ ಬಗ್ಗೆ ರಾಜಕೀಯದ ಬಗ್ಗೆ ಅಪಾಯಕಾರಿ ಮಟ್ಟದಲ್ಲಿ ಬೆಳೆಯುತ್ತಿರುವ ಸಿನಿಕತೆಯ ನಡುವೆ ರಾಜಕಾರಣವೆಂದರೆ ಕೇವಲ ಹಣ ಮಾಡುವ, ಅನೈತಿಕ ರೀತಿಯಲ್ಲಿ ಜನರ ಮಧ್ಯೆಯೇ ವಿರೋಧ ಬೆಳೆಸುವ ದಂಧೆಯಲ್ಲ ಎಂಬುದನ್ನು ನಿರೂಪಿಸುವ ರಾಜಕಾರಣಿಗಳೂ ಇದ್ದಾರೆ ಎಂದರೆ ನಂಬುವುದು ಕೊಂಚ ಕಷ್ಟದ ಕೆಲಸವೇ ಸರಿ! ಅದರಲ್ಲೂ ಕರ್ನಾಟಕದ ರಾಜಕಾರಣ ಹಿಂದೆಂದೂ ಕಾಣದ ರೀತಿಯಲ್ಲಿ ಅಧಃಪತನಕ್ಕೊಳಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರನ್ನು ಅಪಹಾಸ್ಯದ ಸರಕನ್ನಾಗಿಸಿರುವುದು ಸುಳ್ಳಲ್ಲ.  ಈ ವಿಷಮ ಪರಿಸ್ಥಿತಿಯಲ್ಲಿ ರಾಜಕಾರಣವೆಂದರೆ ಪ್ರಚಾರಕ್ಕಾಗಿ ಹಪಹಪಿಸುವುದಲ್ಲ, ವೋಟಿಗಾಗಿ ನೈತಿಕತೆ ತೊರೆಯುವುದಲ್ಲ, ಇವೆಲ್ಲಕ್ಕಿಂತ ಹೆಚ್ಚಾಗಿ ತನ್ನತನ ಕಳೆದುಕೊಳ್ಳುವುದಲ್ಲ ಎಂಬುದನ್ನು ನಿರೂಪಿಸುತ್ತ ತನ್ನ ಸಾಮರ್ಥ್ಯದ ಮಟ್ಟಿಗೆ ಜನರಿಗೆ ಅನುಕೂಲವನ್ನು ಮಾಡಿಕೊಡುತ್ತಿರುವ ಮಾಣಿಕ್ ಸರ್ಕಾರ್ ಬಗ್ಗೆ ತಿಳಿದುಕೊಳ್ಳುವುದು ರಾಜಕಾರಣಿಗಳಿಗೆ ಮತ್ತವರಿಗೆ ಮತ ನೀಡುವ ಜನರಿಗೂ ಅವಶ್ಯಕ.

“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ತ್ರಿಪುರದಲ್ಲಿ 1998ರಿಂದಲೂ ಮುಖ್ಯಮಂತ್ರಿಯಾಗಿರುವವರು ಮಾಣಿಕ್ ಸರ್ಕಾರ್! ಜನವರಿ 22 1949ರಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಮಾಣಿಕ್ ಸರ್ಕಾರ್ ವಿಧ್ಯಾರ್ಥಿ ದೆಸೆಯಲ್ಲಿದ್ದಾಗ ನಕ್ಸಲ್ ವಿಚಾರಧಾರೆಗಳಿಗೆ ಆಕರ್ಷಿತರಾಗಿ ಕಮ್ಯುನಿಷ್ಟ್ ಪಕ್ಷ ಸೇರಿದರು. ಎಸ್ ಎಫ್ ಐನ ಪ್ರತಿನಿಧಿಯಾಗಿ, ಎಸ್ ಎಫ್ ಐನ ರಾಜ್ಯ ಕಾರ್ಯದರ್ಶಿಯಾಗಿ, ಅದೇ ಎಸ್ ಎಫ್ ಐನ ಅಖಿಲ ಭಾರತ ಸಮಿತಿಗೆ ಉಪಾಧ್ಯಕ್ಷನಾಗಿ ತಮ್ಮ ಹೋರಾಟದ ಹಾದಿಯನ್ನು ಮುಂದುವರೆಸಿದ ಮಾಣಿಕ್ 1972ರಲ್ಲಿ ಸಿ ಪಿ ಐ (ಎಂ)ನ ರಾಜ್ಯ ಕಮಿಟಿಯ ಸದಸ್ಯನಾಗಿ ಆಯ್ಕೆಯಾಗುತ್ತಾರೆ. 1978ರಲ್ಲಿ ಸಿ ಪಿ ಐ (ಎಂ)ನ ರಾಜ್ಯ ಕಾರ್ಯದರ್ಶಿಯಾಗುತ್ತಾರೆ. ಅದೇ ವರ್ಷ ಎಡರಂಗ ಮೊದಲ ಬಾರಿಗೆ ಅಧಿಕಾರಕ್ಕೆ ಬರುತ್ತದೆ. 1985ರಲ್ಲಿ ಮಾಣಿಕ್ ಸರ್ಕಾರ್ ಪಕ್ಷದ ಸೆಂಟ್ರಲ್ ಕಮಿಟಿಯ ಸದಸ್ಯರಾಗುತ್ತಾರೆ.

ಮತ್ತಷ್ಟು ಓದು »

28
ಫೆಬ್ರ

ಅವರಿಗೆ ಸಾಚಾರ್ ವರದಿ: ನಮಗೇಕಿಲ್ಲ ಪಚೌರಿ ವರದಿ?

-ಸಂತೋಷ್ ತಮ್ಮಯ್ಯ

Rama Sethuveಭಾರತದಲ್ಲಿ ಹಿಂದುಗಳು ಎಂದರೆ ಎರಡನೇ ದರ್ಜೆಯ ಜನರು ಮತ್ತು ಹಿಂದುಗಳನ್ನು ಎಲ್ಲಿಡಬೇಕೋ ಅಲ್ಲೇ ಇಡಲಾಗುತ್ತಿದೆ ಎಂಬುದಕ್ಕೆ ರಾಮಸೇತು ಪ್ರಕರಣವೇ ಸಾಕ್ಷಿ. ಕೇಂದ್ರ ಸರಕಾರ ರಾಜೇಂದ್ರ ಪಚೌರಿ ವರದಿಯನ್ನು ತಿರಸ್ಕರಿಸುವುದರ ಮೂಲಕ ಅದನ್ನು ಸಾಭೀತುಪಡಿಸಿದೆ. ಸುಪ್ರಿಂಕೋರ್ಟಿಗೆ ತಾನು ಸೇತುಸಮುದ್ರಂ ಯೋಜನೆಯನ್ನು ಮಾಡಲು ಬಯಸಿರುವುದಾಗಿಯೂ, ಇಷ್ಟಿಷ್ಟು ಖರ್ಚುವೆಚ್ಚಗಳನ್ನು ಅದಕ್ಕಾಗಿ ಇಟ್ಟಿರುವುದಾಗಿಯೂ ಇದು ರಾಷ್ಟ್ರದ ಮಹತ್ತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂಬುದರ ಬಗ್ಗೆ ಅಫಿಡವಿಟ್ ಅನ್ನು ಸಲ್ಲಿಸಿದೆ.
ಸಲ್ಲಿಸದೇ ಇನ್ನೇನು ತಾನೇ ಮಾಡಿಯಾರು? ರಾಮಸೇತು ಹಿಂದೂ ಭಾವನೆಗಳಿಗೆ ಸಂಬಂಧಪಟ್ಟ ಸಂಗತಿ, ರಾಮಸೇತು ರಾಮಾಯಣಕ್ಕೆ ಸಂಬಂಧಪಟ್ಟ ಸಂಗತಿ, ರಾಮಸೇತು ಹಿಂದೂ ತತ್ತ್ವಶಾಸ್ತ್ರ, ಅಧ್ಯಾತ್ಮದ ಪರಾಕಾಷ್ಠೆಗೆ ಸಂಬಂಧಪಟ್ಟ ಸಂಗತಿ, ರಾಮಸೇತು ವಿಶ್ವದ ಓರ್ವ ಮಹಾನ್ ಆದರ್ಶಪುರುಷನೊಬ್ಬನ , ಧರ್ಮಸಂಸ್ಥಾಪಕನೊಬ್ಬನಿಗೆ ಸಂಬಂಧಪಟ್ಟ ಸಂಗತಿ.  ಆ ಆದರ್ಶಪುರುಷ  ಹಿಂದೂ ದೇವರು ಎಂಬ ಉದಾಸೀನತನ ಸರಕಾರಕ್ಕೆ ಇರುವಾಗ ಈ ಸರಕಾರ ಅಫಿಡವಿಟ್ ಅನ್ನೂ ಸಲ್ಲಿಸುತ್ತದೆ ಮತ್ತು ಅಯೋಧ್ಯೆಯನ್ನೂ ತುಂಡುಮಾಡಿ ಹಂಚಿಬಿಡುತ್ತದೆ. ಅಂದು ಬಾಬರ್ ಮಾಡಿದಂತೆ ರಾಮಕುರುಹನ್ನೇ ಒಡೆಯುತ್ತದೆ. ಹಾಗಾಗಿ ರಾಜೇಂದ್ರ ಪಚೌರಿ ಎಂಬ ವಿಶ್ವವಿಖ್ಯಾತ ಪರಿಸರ ಶಾಸ್ತ್ರಜ್ನ, ಚಿಂತಕ ಹೇಳುವ ಮಾತನ್ನು ಸರಕಾರ ಕೇಳುವ ಸ್ಥತಿಯಲ್ಲಿರುವುದಿಲ್ಲ. ಅದನ್ನು ತಿರಸ್ಕರಿಸದೇ ಇರುವುದಿಲ್ಲ.
ಕೆಲವರ್ಷಗಳ ಹಿಂದೆ ರಾಜೇಂದ್ರ ಪಚೌರಿ ವರದಿ ಸರಕಾರದ ಸೇತುಸಮುದ್ರಂ  ಯೋಜನೆಯ ಅವೈಜ್ನಾನಿಕತೆ ಮತ್ತು ತಿಕ್ಕಲುತನಗಳನ್ನು ಎಳೆಎಳೆಯಾಗಿ ಬಿಡಿಸಿ ವರದಿಯನ್ನು ಸಿದ್ಧ ಮಾಡಿತ್ತು. ಭೂಗೋಳದ ದಕ್ಷಿಣದ ಸಮುದ್ರಗಳ ಜಲಚರಗಳ ತವರು ಮನೆ ಈ ಪ್ರದೇಶ ಎಂದು ಬಣ್ಣಿಸಿತ್ತು. ಈ ಪ್ರದೇಶದಲ್ಲಿ ನಡೆಯುವ ಯಾವುದೇ ಮಾನವ ಹಸ್ತಕ್ಷೇಪಗಳು ಈ ಜಲಚರಗಳ ಸಂತತಿಯನ್ನು ಕೊಲ್ಲುತ್ತದೆ ಎಂದು ಹೇಳಿತ್ತು. ಮತ್ತು ಭಾರತ ಮತ್ತು ಶ್ರೀಲಂಕಾ ನಡುವಿನ ಕಡಲ್ಗಾಲುವೆಗೆ  ಪರ್ಯಾಯ ಮಾರ್ಗವನ್ನು ಸೂಚಿಸಿತ್ತು. ಆದರೆ ಸರಕಾರ, ಯಾವ ರಾಜೇಂದ್ರ ಪಚೌರಿಯವರ ಮಾತಿಗಾಗಿ ವಿಶ್ವಸಂಸ್ಥೆ ಕಾಯುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಒಂದು ಸಲಹೆಗಾಗಿ ಯುನೆಸ್ಕೋ ಬೇಡಿಕೊಳ್ಳುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಡೇಟ್‌ಗಾಗಿ ವಿದೇಶದ ವಿಶ್ವವಿದ್ಯಾಲಯಗಳು ಕಾಯುತ್ತವೆಯೋ, ಯಾವ ನೊಬೆಲ್ ಪ್ರಶಸ್ತಿ ಸಮಿತಿ ಯಾವ ರಾಜೇಂದ್ರ ಪಚೌರಿಯವರನ್ನು ಆಹ್ವಾನಿಸುತ್ತದೆಯೋ ಅಂಥ ಪಚೌರಿಯವರನ್ನು, ಅವರ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತದೆ. ಕಾರಣ ರಾಮ ಹಿಂದು. ರಾಮಸೇತು ಹಿಂದೂ ಭಾವನೆ.ಅದು ದೇಶದಲ್ಲಿ ಅಂಥಾ ದೊಡ್ಡ ಸಂಗತಿಯೇನಲ್ಲ ಎಂಬ ತನ್ನ ಎಂದಿನ ಕಾಂಗ್ರೆಸ್ ನೀತಿ. ಹಾಗಾಗಿ ಕಾಂಗ್ರೆಸ್‌ಗೆ ಯಾವಾಗಲೂ ಮುಸಲ್ಮಾನರಿಗೆ ಹೆಚ್ಚು ತಿನ್ನಿಸಿ, ಅವರಿಗೆ ಹೆಚ್ಚು ಕುಡಿಸಿ, ಹೆಚ್ಚು ಸಂಬಳ ಕೊಡಿಸಿ, ಹೆಚ್ಚುಹೆಚ್ಚಾಗಿ ಮಿಲಿಟರಿಗೆ ಸೇರಿಸಿಕೊಳ್ಳಿ, ಮೇಷ್ಟ್ರನ್ನಾಗಿ ನೇಮಿಸಿಕೊಳ್ಳಿ,ಗುಮಾಸ್ತರನ್ನಾಗಿಸಿಕೊಳ್ಳಿ. ಅವರನ್ನು ಜತನದಿಂದ ನೋಡಿಕೊಂಡಿರಿ. ಪಾಪ ಅವರು ಬಡವರು ನೋಡಿ, ಮೀಸಲಾತಿ ಸಿಗದೇ ಇದ್ದರೆ ಅವರು ಸತ್ತೇಹೋದಾರು ಎಂದೆಲ್ಲಾ ಆಲಾಪಿಸುವ ರಾಜೇಂದ್ರ ಸಾಚಾರ್ ವರದಿ ಮಾತ್ರ ಇಷ್ಟವಾಗುತ್ತದೆ. ರಾಜೇಂದ್ರ ಪಚೌರಿ ವರದಿ ಮೂಲೆಗುಂಪಾಗುತ್ತದೆ.

ಮತ್ತಷ್ಟು ಓದು »

27
ಫೆಬ್ರ

“ಸ್ವಾತಂತ್ರ್ಯವೀರ”ನ ವ್ಯಕ್ತಿತ್ವ ಅನಾವರಣ..!!

ಭೀಮಸೇನ್ ಪುರೋಹಿತ್

“ಭಗತ್ ಸಿಂಗ್, ರಾಜಗುರು,ಆಜಾದ್ ಮುಂತಾದ ಕ್ರಾಂತಿಕಾರಗಳ ಹೆಸರುಗಳನ್ನು ಕೇಳಿದಾಗಲೆಲ್ಲ ನಾವು ಆದರದಿಂದ ತಲೆಬಾಗುತ್ತೇವೆ.ಆದರೆ, ಇಂತಹ ನೂರಾರು ಕ್ರಾಂತಿಕಾರಗಳನ್ನ ನಿರ್ಮಿಸಿದ ‘ಸಾವರ್ಕರ’ರನ್ನು ಸ್ಮರಿಸುವಾಗ ಸಂಕೋಚಕ್ಕೆ ಒಳಗಾಗುವುದು ಬಹಳ ದೌರ್ಭಾಗ್ಯದ ಸಂಗತಿ. ವೀರ ಸಾವರ್ಕರರ ಬಗ್ಗೆ ಅನೇಕ ಭ್ರಮೆಗಳನ್ನು ಹಬ್ಬಿಸಿರುವುದೇ ಇದಕ್ಕೆ ಕಾರಣ..”

ಮಾಜಿ ಕೇಂದ್ರಮಂತ್ರಿ ಹಾಗು ಕಾಂಗ್ರೆಸ್ ನಾಯಕ  ‘ವಸಂತ ಸಾಠೆ’ ಯವರ ಈ ಮಾತು ಯಾವಾಗಲೂ ನನ್ನನ್ನು ಕಾಡಿವೆ.. ಇಲ್ಲಸಲ್ಲದ, ಮಿಥ್ಯಾ ಆರೋಪಗಳನ್ನೇ ನಿಜವೆಂದು ನಂಬಿ, ಒಬ್ಬ ರಾಷ್ಟ್ರೀಯ ಪುರುಷನನ್ನು ಹಿಂಬದಿಗೆ ಸರಿಸಿ, ಅವರ ತೇಜೋವಧೆಯನ್ನೇ ನಿರಂತರವಾಗಿ ಮುಂದುವರೆಸಿಕೊಂಡು ಬಂದಿರುವುದು ನಿಜಕ್ಕೂ ಬೇಸರದ ಸಂಗತಿಯೇ..

ಕೇವಲ ಸಾವರ್ಕರರ ಮೇಲಿನ ವೃಥಾ ಅಭಿಮಾನದಿಂದ ಈ ಲೇಖನ ಹೊರಟಿಲ್ಲ.. ಬದಲಾಗಿ ಸಾವರ್ಕರರ ನಿಜಜೀವನದ ಮೇಲೆ ಬೆಳಕು ಚೆಲ್ಲುವ ಪ್ರಯತ್ನವಷ್ಟೇ..

ಮತ್ತಷ್ಟು ಓದು »

26
ಫೆಬ್ರ

ರಾಮಸೇತು: ಭಕ್ತಿ ಭಾವನೆಯ ಜೊತೆಗೆ ಜೀವನೋಪಾಯದ ಪ್ರಶ್ನೆಯೂ ಹೌದು

– ಅಜಿತ್ ಶೆಟ್ಟಿ,ಉಡುಪಿ

Raama Setuveರಾಮಾಯಣ ಮತ್ತು ಮಹಾಭಾರತ ಗ್ರಂಥಗಳು ಹಿಂದೂಗಳಿಗೆ ಧಾರ್ಮಿಕ ಪವಿತ್ರ ಗ್ರಂಥಗಳಾಗಿದ್ದು, ಈ ಎರಡೂ ಕೃತಿಗಳು ಇತಿಹಾಸದ ಕಥೆಗಳಾಗಿವೆ .ಅನಾದಿಕಾಲದಿಂದ ಮಹಾಪಂಡಿತರು, ತಿಳಿದವರು ಇವನ್ನು ಪಂಚಮವೇದವೆಂದು ಕೈ ಮುಗಿಯುತ್ತಾರೆ. ಸಾವಿರಾರು ವರ್ಷಗಳಿಂದ ಭಾರತೀಯರ ಜನಜೀವನದಲ್ಲಿ ಮಿಳಿತವಾಗಿರುವ ಈ ಪವಿತ್ರ ಗ್ರಂಥಗಳ ಯಥಾರ್ಥವೇನು ಎಂದು ಕೇಳಿದರೆ ಏನೂಂತ ಹೇಳಬೇಕು? ಆರ್ಯ-ದ್ರಾವಿಡರು ವೈರಿಗಳೆಂದು ಕಥೆ ಕಲ್ಪಿಸಿ, ರಾಮ ಯಾವ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದನೆಂದು ಸರ್ಟಿಫಿಕೇಟ್ ಕೊಡಿ,ಸಾಕ್ಷಧಾರ ಕೊಡಿ ಎನ್ನುವ ಮೂರ್ಖ ಕರುಣಾನಿಧಿಯಂಥವರಿಗೆ ಏನೆಂದು ಉತ್ತರಿಸಬೇಕು ?

ಮೊದಲು ಹಿಂದೂ ರಾಷ್ಟ್ರ ಅಖಂಡ ಭಾರತದ ಮೇಲೆ ಮಹಮದೀಯರ ಆಕ್ರಮಣವಾಯಿತು . ನಂತರ ವ್ಯವಹಾರಕ್ಕೆ ಬಂದ ಕ್ರೈಸ್ತ ಯುರೋಪಿಯನ್ನರ ಆಕ್ರಮಣ . ಮಹಮದೀಯರು ಹೆದರಿಸಿ ಬೆದರಿಸಿ,ಕೊಲೆ ಸುಲಿಗೆ ಮಾಡುತ್ತ ನಮ್ಮ ಸಂಪತ್ತು ಲೂಟಿ ಹೊಡೆದರು.ಮೋಸದಿಂದ, ವಿಶ್ವಾಸಘಾತುಕ ಕೆಲಸದಿಂದ,ಕುಟಿಲ ತಂತ್ರದಿಂದ ಹಿಂದೂ ದೊರೆಗಳನ್ನು ಸೋಲಿಸಿ,ಪ್ರಜೆಗಳನ್ನು ಹೆದರಿಸಿ,ಒಪ್ಪದವರ ಕೊಲೆ ಮಾಡಿ ಅವರ ಮತ ಪ್ರಚಾರ ಮಾಡಿ ಮತಾಂತರಿಸಿದರು.ಅಲ್ಲಾವುದ್ದೀನ್ ಖಿಲ್ಜಿ, ಔರಂಗಜೇಬ್,ತುಘಲಕ್ ಅವರಿಂದ ಟಿಪ್ಪುವಿನವರೆಗೆ ಎಲ್ಲರೂ ಭಾರತೀಯ ಸಂಸ್ಕೃತಿಯ ಮೇಲೆ ಆಕ್ರಮಣದ ಆಡಳಿತ ನಡೆಸಿದವರೇ. ಅದಕ್ಕೆ ಇರಬೇಕು ವಿಲ್ ದುರಂಟ್ STORY OF CIVILIZATION ಕೃತಿಯಲ್ಲಿ ಭಾರತದ ಮೇಲೆ ನಡೆದ ಇಸ್ಲಾಮಿನ ಆಕ್ರಮಣ ವಿಶ್ವದ ಇತಿಹಾಸದ ಅತ್ಯಂತ ರಕ್ತಸಿಕ್ತ ಅದ್ಯಾಯವೆಂದಿದ್ದು.ಯುರೋಪಿಯನ್ನರು ಭಾರತೀಯರ ಶಕ್ತಿ ಅಡಗಿರುವುದು ಭಾರತೀಯ ಸಂಸ್ಕೃತಿಯಲ್ಲಿ ಎಂದು ಮನಗಂಡು ಹಿಂಸಾ ಮಾರ್ಗವನ್ನು ಬದಿಗಿಟ್ಟು, ಹಿಂದೂ ನಂಬಿಕೆ , ಅಚಾರ ವಿಚಾರ ದೇವರನ್ನು ಪ್ರಶ್ನಿಸುತ್ತಾ,ಲೇವಡಿ ಮಾಡುತ್ತ,ಹಣದ ಆಮಿಷವೊಡ್ಡಿ ಮಿಷನರಿಗಳ ಮೂಲಕ ಉಪಾಯದಿಂದ ಮತಾಂತರದ ಕ್ರೈಸ್ತಿಕರಣಕ್ಕೆ ಮುಂದಾದರು.ಹಿಂದೂ ಧರ್ಮ ಪ್ರಸಾರಕ್ಕೆ ಇಲ್ಲಿತನಕ ಎಲ್ಲಿಯೂ ಹಿಂದೂಗಳು ಯುದ್ದ ಮಾಡಿಲ್ಲ,ಇನ್ನೊಂದು ಧರ್ಮವನ್ನು ನಿಂದಿಸಿಲ್ಲ ತೀರ ವಿಪರೀತವಾಗುತ್ತಿದೆ,ಸ್ವಾಭಿಮಾನಕ್ಕೆ ದಕ್ಕೆಯಾಗುತ್ತಿದೆ ಎಂದೆನಿಸಿದಾಗ ಅದಕ್ಕೆ ಉತ್ತರಿಸಿದ್ದಾರೆ.

ಮತ್ತಷ್ಟು ಓದು »

18
ಫೆಬ್ರ

ಸಮಾನತೆ, ವಿಶ್ವಭ್ರಾತೃತ್ವ ಮತ್ತು ನಾವು

-ಕ.ವೆಂ.ನಾಗರಾಜ್

Sodarate     “ನನಗೆ ಒಂದು ಕನಸು ಇದೆ. ಅದೆಂದರೆ ನನ್ನ ನಾಲ್ಕು ಮಕ್ಕಳು ಒಂದು ದಿನ ಅವರ ಬಣ್ಣಗಳಿಂದಲ್ಲದೆ ಅವರ ಗುಣಗಳಿಂದ ಗುರುತಿಸಲ್ಪಡುವ ದೇಶದಲ್ಲಿ ಬಾಳುತ್ತಾರೆ ಅನ್ನುವುದು” – ಇದು ಅಮೆರಿಕಾದ ದಿ. ಮಾರ್ಟಿನ್ ಲೂಥರ್ ಕಿಂಗ್ ರವರ ಉದ್ಗಾರ. ಇದು ಸಮಾನತೆಯನ್ನು ಬಯಸಿದ, ಅಲ್ಲಿ ಪ್ರಚಲಿತವಿದ್ದ ಕಪ್ಪು-ಬಿಳಿ ಜನಾಂಗ ದ್ವೇಷದ ವಿರುದ್ಧ ಹೋರಾಡಿದ್ದ ವ್ಯಕ್ತಿಯ ಕನಸು. ಸಮಾನತೆ ಅನ್ನುವ ಕಲ್ಪನೆ ಯಾವುದೇ ಆದರ್ಶಮಾನವನ ಗುರಿ. ಸಮಾನತೆ ಅಂದರೇನು ಅನ್ನುವುದಕ್ಕೆ ವಿವರಣೆ ನೀಡುವುದು ಕಷ್ಟವೇ ಸರಿ. ಸರಿಸಮ ಎಂಬುದು ನಿಘಂಟಿನ ಅರ್ಥ. ವ್ಯಾವಹಾರಿಕ ಜಗತ್ತಿನಲ್ಲಿ ಸಮಾನತೆಯ ಕಲ್ಪನೆಯ ಸಾಕಾರ ಹೇಗೆ ಎಂಬುದರ ಕುರಿತು ಚಿಂತಿಸಬೇಕಿದೆ. ಭಾರತದ ಸಂವಿಧಾನದಲ್ಲಿ ದೇಶದ ನಾಗರಿಕರಲ್ಲಿ ಜಾತಿ, ಮತ, ಲಿಂಗ, ಭಾಷೆ – ಇಂತಹ ಯಾವುದೇ ಕಾರಣದಿಂದ ಭೇದ ಕೂಡದು, ಎಲ್ಲರಿಗೂ ಸಮಾನವಾದ ಹಕ್ಕು ಇದೆ ಎಂದಿದೆ. ಆದರೆ ಇಲ್ಲಿ ಜಾತಿಯ ಹೆಸರಿನಲ್ಲಿ, ಮತದ ಹೆಸರಿನಲ್ಲಿ, ಲಿಂಗದ ಹೆಸರಿನಲ್ಲಿ, ಭಾಷೆಯ ಹೆಸರಿನಲ್ಲಿ ಭೇದ ಭಾವ ತಾಂಡವವಾಡುತ್ತಿರುವುದು ದುರ್ದೈವ. ಯಾರು ಈ ಸಮಾನತೆಯನ್ನು ಸಾಧಿಸಬೇಕಿದೆಯೋ ಆ ಆಳುವ ಸ್ಥಾನದಲ್ಲಿರುವ ಜನಪ್ರತಿನಿಧಿಗಳೇ ಇಂತಹ ಭೇದ ಭಾವಗಳನ್ನು ಉಳಿಸಿ, ಪೋಷಿಸಿಕೊಂಡು ಬರುತ್ತಿರುವುದು ಘೋರ ಸತ್ಯ.

ಮತ್ತಷ್ಟು ಓದು »

14
ಫೆಬ್ರ

ವ್ಯಾಲೆಂಟೈನ್ಸ್ ಡೇ ಮತ್ತು ಅದರ ಒಳ ಸುಳಿಗಳು

ಮಹೇಶ್ ಪ್ರಸಾದ್ ನೀರ್ಕಜೆ

ವ್ಯಾಲೆಂಟೈನ್ಸ್ ಡೇಹೌದ್ರೀ, ನಾನು ಕನ್ನಡ ಪ್ರೇಮಿಯೇ. ಇಂಗ್ಲಿಷ್ ವ್ಯಾಮೋಹದಿಂದ ಶೀರ್ಷಿಕೆಯಲ್ಲಿ ‘ಪ್ರೇಮಿಗಳ ದಿನ’ ಅನ್ನದೇ ವ್ಯಾಲೆಂಟೈನ್ಸ್ ಡೇ ಅಂದಿದ್ದಲ್ಲ. ಪ್ರೇಮಿಗಳ ದಿನ ಅಂತ ಹೇಳದೇ ಇದ್ದಿದ್ದಕ್ಕೆ ಕಾರಣ ತುಂಬಾ ಇದೆ. ಯಾಕೆಂದರೆ ವ್ಯಾಲೆಂಟೈನ್ಸ್ ಡೇ ಎನ್ನುವುದರ ಅರ್ಥ ನಾವೆಲ್ಲರು ತಿಳಿದಿರುವಂತೆ ಪ್ರೇಮಿಗಳ ದಿನ ಅಲ್ಲ! ಅದು ಹೇಗೆ ಅಂತ ಹೇಳುವ ಮೊದಲು ಇನ್ನೊಂದು ವಿಷಯ ಸ್ಪಷ್ಟಪಡಿಸುತ್ತೇನೆ. ಸಾಮಾನ್ಯವಾಗಿ ವ್ಯಾಲ್ಲೆಂಟೈನ್ಸ್ ಡೇ ವಿರೋಧಿಸುವ ಬಲ ಪಂಥೀಯರಿಗೂ, ಅಥವಾ ಏನೇ ಇದ್ದರೂ ವ್ಯಾಲೆಂಟೈನ್ಸ್ ಡೇ ಎನ್ನುವುದನ್ನು ಮಾನವತೆಯ ಮಟ್ಟಕ್ಕೆ ಎತ್ತರಿಸಿ ಸಮರ್ಥಿಸುವ ಎಡ ಪಂಥೀಯರಿಗೂ (ಕೆಲ ಎಡಪಂಥೀಯರು ಕೂಡ ಬೇರೆ ಕಾರಣಕ್ಕೆ ವ್ಯಾಲೆಂಟೈನ್ಸ್ ಡೇ ವಿರೋಧಿಸುತ್ತಾರೆ) ಈ ಬರಹ ಅಪಥ್ಯವಾಗಬಹುದು. ನನ್ನ ಪ್ರಯತ್ನವೇನಿದ್ದರೂ ಇವೆರಡನ್ನು ಬಿಟ್ಟು ಅವುಗಳಿಗಿಂತಲೂ ಮೇಲಿನ ಮಟ್ಟದಲ್ಲಿ ಮೂರನೇ ದೃಷ್ಟಿಕೋನವೊಂದನ್ನು ಅನ್ವೇಷಿಸುವುದು.

ಮೊದಲನೆಯದಾಗಿ ವ್ಯಾಲೆಂಟೈನ್ಸ್ ಡೇ ಮೂಲ ಕೆದಕಿದರೆ ನಮಗೆ ಇತಿಹಾಸದಲ್ಲಿ ಸಿಗುವುದು ಒಬ್ಬ ಪ್ರೇಮಿಯೋ ರಸಿಕನೋ ಅಥವಾ ಒಂದು ಪೌರಾಣಿಕ ಕಥೆಯ ಜನಪ್ರಿಯ ಪಾತ್ರವೋ ಅಲ್ಲ. ವ್ಯಾಲೆಂಟೈನ್ಸ್ ಎಂಬುದು ಮೂಲತಹ ಒಬ್ಬ ಸಂತನ ಹೆಸರು. ಇನ್ನೂ ಸರಿಯಾಗಿ ಹೇಳಬೇಕೆಂದರೆ ಕ್ರಿಶ್ಚಿಯಾನಿಟಿ ಇನ್ನೂ ಪಸರಿಸುತ್ತಿದ್ದ ಕಾಲದಲ್ಲಿ ಪೆಗನರ (ಶಬ್ದಾರ್ಥ : ಅನಾಗರಿಕ) ಕೈಯಲ್ಲಿ ಸಾಯುತ್ತಿದ್ದ ಕ್ರೈಸ್ತ ಸಂತರನ್ನು ವ್ಯಾಲೆಂಟೈನ್ ಎಂದು ಕರೆಯಲಾಗುತ್ತಿತ್ತಂತೆ. ಮತ್ತಷ್ಟು ಓದು »