ಕದ್ದ ಸಿನಿಮಾದ ಆಸ್ಕರ್ ಪಯಣ
ಡಾ ಅಶೋಕ್ ಕೆ ಆರ್
“ಬಿಡ್ರೀ ರೀ. ಆಸ್ಕರ್ ಪ್ರಶಸ್ತಿ ಕೊಡೋದು ಪರದೇಶದೋರು. ಅದು ಸಿಗದಿದ್ರೆ ನಾವ್ಯಾಕೆ ತಲೆಕೆಡಿಸಿಕೊಳ್ಳಬೇಕು” ಎಂದು ನಮಗೆ
ನಾವೇ ಸಮಾಧಾನ ಪಟ್ಟುಕೊಳ್ಳುತ್ತೇವಾದರೂ ‘ಸ್ಲಂ ಡಾಗ್ ಮಿಲೇನಿಯರ್’ ಚಿತ್ರದ ಸಂಗೀತಕ್ಕೆ ಎ. ಆರ್. ರೆಹಮಾನ್ ಗೆ ಆಸ್ಕರ್ ಪ್ರಶಸ್ತಿ ಬಂದಾಗ ಖುಷಿಪಟ್ಟಿದ್ದು ಸುಳ್ಳಲ್ಲ. ಮುಂದೊಂದು ದಿನ ಭಾರತೀಯ ಭಾಷೆಯ ಚಿತ್ರವೊಂದಕ್ಕೆ ಆಸ್ಕರ್ ದೊರೆತರೆ ಅಭೂತಪೂರ್ವವಾಗಿ ಸಂಭ್ರಮಿಸುವುದೂ ಸತ್ಯ. ಇಲ್ಲಿಯವರೆಗೆ ಭಾರತ ನಲವತ್ತೈದು ಚಿತ್ರಗಳನ್ನು ಆಸ್ಕರ್ ಪ್ರಶಸ್ತಿಗೆಂದು ಕಳುಹಿಸಿದೆಯಾದರೂ ಯಾವೊಂದು ಚಿತ್ರವೂ ಪ್ರಶಸ್ತಿ ಪಡೆದಿಲ್ಲ. ಪ್ರಶಸ್ತಿಯ ಸನಿಹಕ್ಕೆ ಬಂದಿದ್ದು ಬೆರಳೆಣಿಕೆಯ ಚಿತ್ರಗಳಷ್ಟೇ. ಭಾರತೀಯ ಚಿತ್ರವೆಂದರೆ ಹಿಂದಿ ಚಿತ್ರಗಳು ಮಾತ್ರ ಎಂಬ ಪೂರ್ವಗ್ರಹವೂ ಇದಕ್ಕೆ ಕಾರಣ ಎಂದರೆ ತಪ್ಪಲ್ಲ. ನಲವತ್ತೈದು ಚಿತ್ರಗಳಲ್ಲಿ ಮೂವತ್ತು ಹಿಂದಿ ಭಾಷೆಯವು, 8 ತಮಿಳು, ಮಲಯಾಳಂ, ಮರಾಠಿ ಬಂಗಾಳಿಯ ಎರಡು ಮತ್ತು ಉರ್ದುವಿನ ಒಂದು ಚಿತ್ರ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಕಳುಹಿಸಲಾಗಿದೆ. ಈ ವರ್ಷ ಆಸ್ಕರ್ ಗೆ ಭಾರತದಿಂದ ಆಯ್ಕೆ ಮಾಡಿ ಕಳುಹಿಸಿದ ಚಿತ್ರ ಅನುರಾಗ್ ಬಸು ನಿರ್ದೇಶನದ ಹಿಂದಿ ಚಿತ್ರ ‘ಬರ್ಫಿ’. ನಿಜಕ್ಕೂ ಇದು ಆಸ್ಕರ್ ಮೆಟ್ಟಿಲೇರಲು ಸಮರ್ಥವಾದ ಚಿತ್ರವೇ?
ಬೆಂಗಳೂರು ಕನ್ನಡಿಗರಿಗೊಂದು ಬಹಿರಂಗ ಪತ್ರ
-ಭರತ್ ಬಿಕೆ
ಬೆಂಗಳೂರಲ್ಲೀ ಇದೀರಾ ? ಬೆಂಗಳೂರಿಗೆ ಬಂದ್ರಾ ?? ಸಂತೋಷ 🙂 ಬೆಂಗಳೂರಲ್ಲೇ ಹುಟ್ಟೀ, ಬೆಂಗಳೂರಲ್ಲೇ ಬೆಳೆದ್ರಾ ?? ತುಂಬಾ ಸಂತೋಷ 🙂
ಬೆಂಗಳೂರಲ್ಲೇ ಬದುಕಬೇಕು ಅಂತಾ ಇದೀರಾ ?? ಇನ್ನೂ ಸಂತೋಷ:)
ಆದರೇ ಇಲ್ಲಿನ ಭಾಷೆ, ನೆಲ, ಜಲ, ವ್ಯವಸ್ಥೆ, ಅವಸ್ಥೆ,ಸಮಸ್ಯೆಗಳ ಬಗ್ಗೆ ಸ್ವಲ್ಪ ಯೋಚನೆ ಮಾಡಿದ್ದೀರಾ? ಅದಕ್ಕಾಗಿ, ಅದಕ್ಕೆ ಸಂಬಂಧಿಸಿದ ವಿಚಾರಗಳಲ್ಲೀ ಭಾಗವಹಿಸಿದ್ದೀರಾ ??
ಸಾರ್ವಜನಿಕವಾಗಿ ?? ವಯಕ್ತಿಕವಾಗಿ ??
ಅಷ್ಟೆಲ್ಲಾ ಯಾಕೇ ಬಿಡಿ.. ಫೇಸ್ ಬುಕ್ ಪ್ರೋಫೈಲಲ್ಲೀ ಪೋಸ್ಟ್ ಮಾಡಿದಿರಾ ? ಸಂಬಂಧಿಸಿದ ಪೋಸ್ಟ್ ಗಳಿಗೇ ಲೈಕ್ ಮಾಡಿಡ್ಡೀರಾ ?? ಕಮೇಂಟ್ ಕೊಟ್ಟಿದ್ದೀರಾ ??
ಕಾನೂನಿನಂಗಳ ೯ : ಹೆಣ್ಣಿಗೆ ಆಸ್ತಿಯಲ್ಲಿ ಸಮಾನ ಹಕ್ಕು
ಉಷಾ ಐನಕೈ ಶಿರಸಿ
ಭಾರತೀಯ ಸಂಸ್ಕೃತಿಗೆ ಜಾಗತಿಕ ಮಟ್ಟದಲ್ಲಿ ಒಂದು ವಿಶಿಷ್ಟವಾದ ಸ್ಥಾನಮಾನ ಇದೆ. ವೈವಿಧ್ಯಮಯವಾದ ಭೌಗೋಲಿಕ ಸ್ವರೂಪ, ವಿಭಿನ್ನವಾದ ಭಾಷೆ, ಆಚಾರ, ರೂಢಿ ಹೀಗೆ ಭಾರತದಲ್ಲಿ ಸಾಂಸ್ಕೃತಿಕ ವೈವಿಧ್ಯತೆ ಅಪಾರ. ಈ ಕಾರಣಕ್ಕಾಗೇ ಭಾರತದೇಶ ಜಾಗತಿಕ ಕುತೂಹಲದ ತಾಣವಾಗಿದೆ. ಭಾರತೀಯ ಸಮಾಜಕ್ಕೆ ಸಾವಿರಾರು ವರ್ಷಗಳ ಪರಂಪರೆ ಇದೆ. ಇಷ್ಟೊಂದು ವರ್ಷ ಈ ಸಂಸ್ಕೃತಿ ಸುಸಂಬದ್ಧವಾಗಿ ಸಾಗಿಬಂದಿದೆ ಅಂದರೆ ಇದರ ಹಿಂದೆ ನ್ಯಾಯ, ನೀತಿ, ಧರ್ಮ ಮುಂತಾದವುಗಳು ಇದೆ ಅಂತಲೇ ಅರ್ಥ. ಅಂದರೆ ಒಂದು ರೀತಿಯ ಕಾನೂನುಗಳ ಪರಿಕಲ್ಪನೆಯಲ್ಲೇ ನಮ್ಮ ಸಂಸ್ಕೃತಿ ಸಾಗಿಬಂದಿದೆ. ಅದನ್ನೇ ಸಂಪ್ರದಾಯ, ರೂಢಿ, ಶ್ರುತಿ, ಸ್ಮೃತಿ, ಉಪನಿಷತ್ ಮುಂತಾದವುಗಳಾಗಿ ಕಾನೂನಿನ ಅಂಗವೆಂದು ಗುರುತಿಸಲ್ಪಟ್ಟಿವೆ. ನಾವಿಂದು ನೋಡುತ್ತಿರುವ ಹಿಂದೂ ಕಾನೂನು ಪ್ರಾಚೀನ ಭಾರತದಲ್ಲಿನ ಸಂಪ್ರದಾಯ, ಪದ್ದತಿ, ಸ್ಮೃತಿಗಳನ್ನಾಧರಿಸಿಯೇ ಇದೆ.
ಈ ಹಿಂದೂ ಕಾನೂನು ಎನ್ನುವುದು ಎಲ್ಲ ಭಾರತೀಯರಿಗೆ ಅಥವಾ ಹಿಂದೂಗಳು ಎನಿಸಿಕೊಂಡ ಭಾರತೀಯರಿಗೆ ಅನ್ವಯಿಸುತ್ತದೆ. ಇದರಲ್ಲಿ ವಿವಾಹ, ಜೀವನಾಂಶ, ದತ್ತಕ, ವಾರಸಾ, ಸಂರಕ್ಷ ಅಧಿನಿಯಮ, ಆಸ್ತಿ ವಿಭಾಗ ಮುಂತಾದವುಗಳೆಲ್ಲ ಬರುತ್ತವೆ.
ಚಿಕಾಗೋದಲ್ಲಿ ಹರಿದ ವಿವೇಕಾಮೃತ ಧಾರೆ
– ಚಕ್ರವರ್ತಿ ಸೂಲಿಬೆಲೆ
ಸ್ವಾತಂತ್ರ್ಯ ಹೋರಾಟದ ಹೊತ್ತು. ಕ್ರಾಂತಿಕಾರಿಯೊಬ್ಬ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಸಂದರ್ಭ. ಪ್ರೀತಿಲತಾ ವಡ್ಡೆದಾರ್ ಎಂಬ ಮತ್ತೊಬ್ಬ ಮಹಿಳಾ ಕ್ರಾಂತಿಕಾರಿಗೆ ಜೈಲಿನಿಂದಲೇ ಪತ್ರ ಬರೆದ. ಅಚಾನಕ್ಕಾಗಿ ನಿನ್ನ ತೋಳಿನ ರವಿಕೆಯ ಮೇಲಿದ್ದ ವಿವೇಕಾನಂದರ ಚಿತ್ರ ನನ್ನ ಕಣ್ಣಿಗೆ ಬಿತ್ತು. ಬಹಳ ಆನಂದವಾಯ್ತು. ನಮ್ಮ ಕಾಲದ ಋಷಿ ಆತ. ಆತನನ್ನು ಅನುಸರಿಸುವುದು ಒಳಿತು.ಮುಂದೆ ಪೊಲೀಸರೊಂದಿಗಿನ ಕದನದಲ್ಲಿ ಆ ಹುಡುಗಿ ಅಸುನೀಗಿದಳು.
ಇದು ಸ್ವಾಮಿ ವಿವೇಕಾನಂದರ ದೇಹತ್ಯಾಗದ ಬಹು ವರ್ಷಗಳ ನಂತರ ನಡೆದ ಘಟನೆ. ಅವರು ಬದುಕಿದ್ದಾಗಲೇ ಅಪರೂಪದ ಮತ್ತೊಂದು ಘಟನೆ ಜರುಗಿತ್ತು.
ಸ್ವಾಮೀಜಿ ಪ್ರಯಾಣಿಸುತ್ತಿದ್ದ ರೈಲು ತಮ್ಮೂರನ್ನು ಹಾದುಹೋಗಲಿದೆ ಎಂದರಿತ ಒಂದು ಊರಿನ ಜನ ತಮ್ಮ ಊರಿನಲ್ಲಿ ರೈಲು ನಿಲ್ಲಿಸುವಂತೆ ಕೇಳಿಕೊಂಡರು. ಅದನ್ನು ನಿಯಮ ಬಾಹಿರವೆಂದು ಸ್ಟೇಷನ್ ಮಾಸ್ಟರ್ ನಿರಾಕರಿಸಿದಾಗ ಅವರು ಗೋಗರೆದರು. ಆಗಲೂ ಕೇಳುವ ಲಕ್ಷಣಗಳು ಕಾಣದಾದಾಗ ಊರಿನ ಜನ ರೈಲು ಹಳಿಗಳ ಮೇಲೆ ಅಂಗಾತ ಮಲಗಿಬಿಟ್ಟರು. ಶ್ರೇಷ್ಠ ಸಂತನೊಬ್ಬನ ಪಾದಸ್ಪರ್ಷ ನಮ್ಮೂರಿನ ನೆಲಕ್ಕೆ ಆಗಲಿಲ್ಲವೆಂದರೆ ನಮ್ಮೆಲ್ಲರ ಬದುಕು ವ್ಯರ್ಥ ಎನ್ನುವುದು ಅವರ ನಿಲುವಾಗಿತ್ತು. ರೈಲು ಬಂತು. ಆನರು ಹಳಿಯಿಂದ ಅಲುಗಾಡುವ ಲಕ್ಷಣ ಕಾಣದಿದ್ದಾಗ ಸ್ಟೇಷನ್ ಮಾಸ್ಟರ್ ಗಾಬರಿಗೊಂಡು ನಿಲುಗಡೆ ಸೂಚಿಸಿದ. ಜನ ಫ್ಲಾಟ್ಫಾರಮ್ನತ್ತ ಧಾವಿಸಿದರು. ಸ್ವಾಮೀಜಿ ಮೆಟ್ಟಿಲ ಬಳಿ ಬಂದು, ನಿಂತಿದ್ದ ಜನರತ್ತ ಕೈಬೀಸಿದರು. ರೈಲು ಮತ್ತೆ ಹೊರಟಿತು.
ಅಬ್ಬ! ಇದು ವ್ಯಕ್ತಿಯೊಬ್ಬನಿಗೆ ಸಿಗಬಹುದಾದ ಅತ್ಯಂತ ಶ್ರೇಷ್ಠ ಗೌರವ. ಆತನ ಚಿಂತನೆಗಳನ್ನು ಅನುಸರಿಸುತ್ತ ಜೀವ ತೆರುವುದು ಒಂದೆಡೆಯಾದರೆ ಆತನಿಗಾಗಿ ಬಯಸಿ ಪ್ರಾಣ ಕೊಡಲು ಸಿದ್ಧವಾಗುವುದು ಮತ್ತೊಂದು. ಸ್ವಾಮೀಜಿ ಎರಡೂ ರೀತಿಯ ಅನುಯಯಿಗಳನ್ನು ಹೊಂದಿದ್ದ ಅಪರೂಪದ ವ್ಯಕ್ತಿಯಾಗಿದ್ದರು.
ಮರೆಯಾಯಿತೇ, ನಮ್ಮ ಕ್ರಿಯಾಶೀಲತೆ ?
–ಮಧುಚಂದ್ರ ಭದ್ರಾವತಿ
ಅಮೇರಿಕ ಖಂಡವನ್ನು ಅನ್ವೇಷಣೆ ಮಾಡಿದ ಸಲುವಾಗಿ ಸ್ಪೇನ್ ದೇಶದ ರಾಣಿ ಇಸಬೆಲ ಒಂದು ಕೂಟವನ್ನು ಏರ್ಪಡಿಸಿದ್ದಳು. ಅಲ್ಲಿಗೆ ಕೊಲಂಬಸ್ ಸಹ ಬಂದಿದ್ದನು. ಎಲ್ಲರೂ ಮೇಜಿನ ಮುಂದೆ ಕುಳಿತಿರುವಾಗ ಅಲ್ಲಿ ನೆರೆದಿದ್ದ ಅಮಂತ್ರಿತರನ್ನು ಕುರಿತು ” ಮೊಟ್ಟೆಯನ್ನು ಯಾರು ಮೇಜಿನ ಮೇಲೆ ನಿಲ್ಲಿಸುತ್ತಿರ ” ಎಂದು ಪ್ರಶ್ನೆಯನ್ನು ಇಟ್ಟಳು. ಅಲ್ಲಿದ್ದ ಮಹಾ ಜನರು ಅದೇನು ಮಹಾ ಎಂದು ಮೊಟ್ಟೆಯನ್ನು ಮೇಜಿನ ಮೇಲೆ ನಿಲ್ಲಿಸಲು ಪ್ರಯತ್ನಿಸಿ ವಿಫಲರಾದರು. ಆಗ ಕೊಲಂಬಸ್ ಬೆಂದ ಮೊಟ್ಟೆಯನ್ನು ಕುಕ್ಕಿ ನಿಲ್ಲಿಸಿದಾಗ ಅಲ್ಲಿ ನೆರೆದಿದ್ದ ಕೆಲವರು ಹೊಗಳಿದರೆ, ಮತ್ತೆ ಕೆಲವರು ಇದನ್ನು ನಾನು ಮಾಡುತಿದ್ದೆ ಇದರಲ್ಲಿ ಏನು ಇದೆ ಎಂದು ತಿರಸ್ಕಾರದಿಂದ ತೆಗಳಿದರು.
ಎಲ್ಲಿದೇ ನಮ್ಮಲ್ಲಿ ಭಾರತೀಯತೆ?
-ಮಧುಚಂದ್ರ ಭದ್ರಾವತಿ
ಆಗಸ್ಟ್ ೧೫ರ ಸಂಭ್ರಮ ನೋಡಿ ಏನಾದ್ರು ಬರೆಯಲೇ ಬೇಕೆನಿಸಿತು. ೧೪ನೆ ತಾರಿಖು ಮಧ್ಯರಾತ್ರಿ ೧೧.೫೯ ರಿಂದ ೧೨.೦೦ಗೆ ಸರಿಯಾಗಿ ಗಡಿಯಾರದ ಮುಳ್ಳು ತಿರುಗಿದಾಗ ಮನೆಯ ಹೊರಗೆ ಪಟಾಕಿ ಶಬ್ಧದ ಅಬ್ಬರ ಕೇಳಿಸಿತು. ಒಂದರ್ಥದಲ್ಲಿ ಭಾರತ ಯಾವುದಾದರು ಕ್ರೀಡೆಯಲ್ಲಿ(ಕೇವಲ ಕ್ರಿಕೆಟ್ ಮಾತ್ರ) ವಿಜಯಿ ಆದರೆ ಆಚರಿಸುವ ಪಟಾಕಿಯ ಸಂಭ್ರಮ ಅದು. ಭಾರತೀಯರಿಗೆ ಭಾರತೀಯತೆ ಅರಿವು ಮೂಡುವುದು ಎರಡು ಸಂದರ್ಭದಲ್ಲಿ ಮಾತ್ರ ಒಂದು ಸ್ವತಂತ್ರ ದಿವಸದಂದು ಮತ್ತೊಂದು ಕ್ರಿಕೆಟ್ನಲ್ಲಿ ಗೆದ್ದಾಗ ಬಿಟ್ಟರೆ, ಸತ್ – ಪ್ರಜೆಗಳು ಉಳಿದ ೩೬೩ ದಿನ ಬೇರೆಯವರ ಗುಲಾಮರಗಿರುತ್ತಾರೆ. ಒಂದೆಡೆ ಮಾಹಿತಿ ತಂತ್ರಜ್ಞಾನವೆಂಬ ಗುಲಾಮ ಗಿರಿಯಲ್ಲಿ ಜ್ಞಾನಿಗಳು ಮತ್ತೊಂದೆಡೆ ಗಣಿಗಾರಿಕೆ,ಬ್ರಷ್ಟಚಾರ,ಸ್ವಜನ ಪಕ್ಷಪಾತ ಹೆಸರಿನಲ್ಲಿ ಅಜ್ಞಾನಿಗಳು.ಇಂತಹವರನ್ನು ತನ್ನ ಮಡಿಲಲ್ಲಿಟ್ಟು ಸಲಹುತ್ತಿರುವ ಕರುಣಾ ಮಾಯಿ ಭಾರತ ಮಾತೆ ಎಷ್ಟು ದಿನ ಸಹಿಸಿಯಾಳು?ಈ ಸ್ವಾತಂತ್ರ್ಯಕ್ಕೆ ಅಸ್ಸಾಮಿನ ಉರಿಯ ಅರಿವುಂಟೇ?
– ಸಂತೋಶ್ ತಮ್ಮಯ್ಯ
ನೇಪಾಳದ ಹಿಂದೂ ರಾಜನನ್ನು ಪದಚ್ಯುತಗೊಳಿಸಿದಾಗ ಭಾರತದಲ್ಲಿ ಯಾವ ಕಮ್ಯುನಿಷ್ಟ್ ಕಾಮ್ರೆಡನಿಗೂ ಪೆಟ್ಟು ಬಿದ್ದಿರಲಿಲ್ಲ. ಪಾಕಿಸ್ಥಾನದ ರಿಂಕಲ್ ಕುಮಾರಿಯನ್ನು ಮತಾಂಧರು ಮತಾಂತರಿಸಿದಾಗ ಇಲ್ಲಿನ ಯಾವ ಹಿಂದುವೂ ಬೀದಿಗೆ ಇಳಿದಿರಲಿಲ್ಲ. ಅಲ್ಲೆಲ್ಲೋ ಪಾಶ್ಚಾತ್ಯ ದೇಶದಲ್ಲಿ ಗಣಪತಿ, ಲಕ್ಷ್ಮಿ, ಬ್ರಹ್ಮದೇವರನ್ನು ಹೆಂಗಸರ ಚಡ್ಡಿಗಳಲ್ಲಿ ಚಿತ್ರಿಸಿ ರಾಂಪ್ವಾಕ್ ಮಾಡಿದಾಗಲೂ ಹಿಂದುಗಳಾರೂ ಬಸ್ಸುಗಳಿಗೆ ಕಲ್ಲು ಬಿಸಾಡಿರಲಿಲ್ಲ. ಅದಾವುದೋ ಕೆರೆಬಿಯನ್ ದೇಶದಲ್ಲಿ ಹಿಂದುವಾದವನು ಅಧ್ಯಕ್ಷನಾಗಬಾರದು ಎಂದಾಗ ಜಗತ್ತಿನಾದ್ಯಂತ ಹಿಂದುಗಳಾರೂ ಖಂಡಿಸಲಿಲ್ಲ. ಅವೆಲ್ಲಾ ಬಿಡಿ. ಕಾಶಿ ವಿಶ್ವನಾಥನ ದರ್ಶನಕ್ಕೆ ಹೋದರೂ ಹಿಂದುಗಳಿಗೆ ಪಕ್ಕದ ಪರಮ ಅಸಹ್ಯವಾದ ಕಟ್ಟಡವೊಂದು ಸಾಮರಸ್ಯದ ಪ್ರತೀಕದಂತೆಯೇ ಕಾಣುತ್ತದೆ. ಅಯೋಧ್ಯೆಯ ರಾಮ ಇನ್ನೂ ಟೆಂಟ್ ವಾಸಿಯಾದರೂ ಬಹುತೇಕರಿಗೆ ಅದೇನೂ ಅಂಥ ಕೊರಗಿನಂತೆ ಕಾಣುವುದಿಲ್ಲ. ಯಾವ ಹಿಂದೂ ಸಂನ್ಯಾಸಿಯೂ ಮೌಲ್ವಿಗಳಂತೆ ಅಬ್ಬರಿಸುವುದಿಲ್ಲ. ಒಂದು ವೇಳೆ ಸಂನ್ಯಾಸಿ ಅಬ್ಬರಿಸಿದರೂ ಯಾರಿಗೂ ಹೆದರಿಕೆಯಾಗುವಂತೆ ಕಾಣುವುದೂ ಇಲ್ಲ.
ಅದು ಹಿಂದುವಿನ ಅತಿಯಾದ ಸಾತ್ತ್ವಿಕತೆಯೋ ಅಥವಾ ಭಂಡತನ ಮಿಶ್ರಿತ ಅತಿಯಾದ ಭಯವೋ ಎಂದು ವಿಶ್ಲೇಷಿಸುವುದು ಕಷ್ಟ. ಆದರೆ ಆತನಿಗೆ ಹಿಂದು ಎಂಬ ಕಾರಣಕ್ಕೆ ಸಿಟ್ಟು ಬರದಿರುವುದಂತೂ ಸತ್ಯ. ಮೇಲಿನ ಎಲ್ಲಾ ಸಂದರ್ಭಗಳಲ್ಲಿ ಅದು ಸಾಭೀತಾಗಿದೆ. ಬೀದಿಗಿಳಿಯಲು, ಪ್ರತಿಭಟಿಸಲು ಹಿಂದುವಿಗೆ ದಿನಕ್ಕೊಂದು ಕಾರಣವಾದರೂ ಸಿಗುತ್ತವೆ. ಆದರೆ ಅದು ನಡೆಯುವುದಿಲ್ಲ. ಏಕೆಂದರೆ ಹಿಂದುವಿಗೆ ಸಮಾಜಕ್ಕಾಗಿ ಎಂದಿಗೂ ಸಿಟ್ಟು ಬರುವುದಿಲ್ಲ.
ಸಮಾಜ ಮತ್ತು ದೇಶಕ್ಕಾಗಿ ಸತ್ಯದೆಡೆಗಿನ ನಡೆ ಅನಿವಾರ್ಯ…
-ಮಹೇಂದ್ರ ಕುಮಾರ್
ನಾನು ಅದೆಷ್ಟು ವರ್ಷ ಸಂಘ ಸಂಘ(ಆರ್ ಎಸ್ ಎಸ್) ಎಂದು ಕೆಲಸ ಮಾಡಿದ್ದೇನೆ. ನನ್ನ ತುಂಬು ಯೌವನವನ್ನು ಸಂಘ ಹೇಳುವ ಕಾರ್ಯಗಳಿಗೆ ವಿನಿಯೋಗಿಸಿದ್ದೇನೆ. ಇಂದಿಗೂ ಅದೆಷ್ಟೋ ಯುವಕರು ಸಂಘ ಸಂಘ ಎಂದು ತಮ್ಮ ಸರ್ವಸ್ವವನ್ನೂ ಸಂಘಕ್ಕಾಗಿ ತ್ಯಾಗ ಮಾಡುತಿದ್ದಾರೆ. ಸಂಘದ ಮಾರ್ಗದರ್ಶನದಂತೆ ಬೀದಿಯಲ್ಲಿ ನಿಂತು ಹಿಂದುತ್ವ ಹಿಂದುತ್ವ ಎಂದು ಬಡಿದಾಡಿ ಜೈಲುಸೇರಿ ಸಮಾಜದಲ್ಲಿ ರೌಡಿ ಪಟ್ಟ ಕಟ್ಟಿಕೊಂಡ ಅದೆಷ್ಟೋ ಯುವಕರು ತಮ್ಮ ಜೀವನದ ಹುಡುಕಾಟದಲ್ಲಿ ತೊಳಲುತಿದ್ದಾರೆ. ಇನ್ನು ಸಂಘ ಹೇಳುವ ದೇಶಭಕ್ತಿ ಹಿಂದುತ್ವದಿಂದ ಪ್ರೇರಣೆಗೊಂಡು ಪ್ರತಿವರ್ಷ ತಮ್ಮ ದುಡಿಮೆಯ ದೊಡ್ಡ ಭಾಗವನ್ನೇ ಧಾರೆ ಎರೆಯುವ ಅದೆಷ್ಟು ದಾನಿಗಳಿದ್ದಾರೆ. ದೊಡ್ಡ ದೊಡ್ಡ ಪದವಿಯನ್ನು ಪಡೆದುಕೊಂಡು ಮದುವೆಯೂ ಆಗದೆ ಸಂಘವೇ ಜೀವನ, ಸಂಘವೇ ಸರ್ವಸ್ವ ಎಂದು ನಂಬಿಕೊಂಡು ಮುಪ್ಪಿನಕಾಲದಲ್ಲಿ ಯಾರೂ ಇಲ್ಲದ ಅನಾಥರಂತೆ ಜೀವಿಸುವ ಅದೆಷ್ಟು ಮಹಾನ್ ಚೇತನಗಳಿವೆ.
ಇನ್ನು ತಮ್ಮ ಸ್ವಂತದ ಜೀವನ ನಡೆಸುತ್ತಲೇ ಸಂಘ ಎಂದರೆ ದೇಶ, ಸಂಘ ಎಂದರೆ ಹಿಂದುತ್ವ ಎಂದು ಸಂಘವನ್ನು ಸಾಮೂಹಿಕವಾಗಿ ಬೆಂಬಲಿಸುವ ಅಷ್ಟು ಲಕ್ಷ ಮುಗ್ದ ದೇಶವಾಸಿಗಳು… ಬೇಷ್, ಸುಮಾರು ಎಂಬತ್ತೇಳು ವರ್ಷಗಳ ಅಂತರದಲ್ಲಿ ಸಂಘದ ಸಾಧನೆ ಮೆಚ್ಚುವಂತದ್ದೇ.
ಸಂಘ ವ್ಯಾಪಿಸದ ಜಾಗವಿಲ್ಲ, ಈ ದೇಶದ ಪ್ರಭಲ ಸಂಘಟನೆಯಾಗಿ ಹೊರಹೊಮ್ಮಿರುವ ಸಂಘ ಇಷ್ಟು ದೊಡ್ಡಮಟ್ಟಕ್ಕೆ ಬೆಳೆದು ನಿಲ್ಲಲು ಬಳಸಿಕೊಡಿದ್ದು ಎರಡೇ ಎರಡು ವಿಚಾರಗಳನ್ನು, ದೇಶಭಕ್ತಿ ಮತ್ತು ಹಿಂದುತ್ವ. ಅದ್ಭುತ… ಇಂದು ಈ ದೇಶದಲ್ಲಿ ಯಾವುದೇ ಕಂಪೆನಿಗಳೂ, ರಾಜಕೀಯ ಪಕ್ಷಗಳೂ ಸೇರಿದಂತೆ ಯಾರೆಂದರೆ ಯಾರೂ ಸಾಧಿಸಲಾಗದ್ದನ್ನು ಸಂಘ ಸಾಧಿಸಿದೆ. ಟಾಟಾ, ರಿಲಯನ್ಸ್ ನಂತಹಾ ಕಂಪನಿಗಳನ್ನೆಲ್ಲಾ ಒಟ್ಟುಗೂಡಿಸಿ ಅವರ ಒಟ್ಟು ಆಸ್ಥಿಯ ಮೌಲ್ಯಮಾಪನ ಮಾಡಿದರೂ ಈ ದೇಶದಲ್ಲಿ ಸಂಘ ಹೊದಿರುವ ಆಸ್ಥಿಗಿಂತ ಕಡಿಮೆಯೇ…
ಮತ್ತಷ್ಟು ಓದು 
ಯಾವ್ ಜಾತಿಯ ಮುಖ್ಯಮಂತ್ರಿ ಬೇಕು!?
– ರಾಕೇಶ್ ಶೆಟ್ಟಿ
ಯಡ್ಡಿ ಕೆಳಗಿಳಿದಾಗ ಬರೆದಿದ್ದು.. ಈಗ ಸದಾ ಇಳಿಯುವಾಗಲೂ ಅಪ್ಪ್ಲೈ ಆಗುತ್ತೆ…! ಅತಿ ಕೆಟ್ಟ ರಾಜಕಾರಣಕ್ಕೆ ನಮ್ಮ ರಾಜ್ಯ ಸಾಕ್ಷಿಯಾಗಿರುವುದು ದೌರ್ಭಾಗ್ಯ…!
———————————————————————————————————————————————-
ಅಂತು ಬಿಜೆಪಿ ಹೈಕಮಾಂಡ್ ಧೈರ್ಯ ಮಾಡಿದೆ…! ಯಡ್ಯೂರಪ್ಪನವ್ರಿಗೆ ಕುರ್ಚಿ ಬಿಡಿ ಅನ್ನುವ ಸಂದೇಶವನ್ನ ರವಾನಿಸಿದೆ.ಸಂದೇಶ ಮಾಧ್ಯಮದ ಮೂಲಕ ಬಂದಿದ್ದು ನಿನ್ನೆ ಬೆಳಿಗ್ಗೆಯೇ.ಆದ್ರೆ ಇನ್ನ ಯಡ್ಯೂರಪ್ಪ ಮಾತ್ರ ಜಪ್ಪಯ್ಯ ಅನ್ನುತ್ತಿಲ್ಲ..!
ಕಳೆದ ೧೦-೧೫ ದಿನಗಳಿಂದ ಕರ್ನಾಟಕ ಸರ್ಕಾರ ಜನರ ಸಮಸ್ಯೆಯನ್ನ ನೋಡೋದು ಬಿಟ್ಟು ತನ್ನ ಬುಡ ಭದ್ರ ಮಾಡಿಕೊಳ್ಳುವ ಬಗ್ಗೆಯೇ ತಲೆಕೆಡಿಸಿಕೊಂಡು ಕೂತಿದೆ.ಕಳೆದ ಹತ್ತು ದಿನ ಬಿಡಿ, ಉತ್ತರ ಕರ್ನಾಟಕದಲ್ಲಿ ನೆರೆ ಬಂದು ಜನ ತುತ್ತು ಅನ್ನಕ್ಕೆ ಸೂರಿಗೆ ಪರದಾಡುತ್ತಿರುವಾಗಲೇ ರೆಡ್ಡಿಗಳು ಬಂಡಾಯದ ಬಾವುಟ ಹಾರಿಸಿದಾಗಲೂ ಜನ ಸತ್ತರೆ ಸಾಯಲಿ ಕುರ್ಚಿ ಉಳಿದರೆ ಸಾಕು ಅಂತ ಬಿಜೆಪಿ ಸರ್ಕಾರವೇ ದೆಹಲಿಗೆ ಓಡಿ ಹೋಗಿತ್ತು…! ಹಾಗೇನಾದರೂ ಯಡ್ಯೂರಪ್ಪ ಬಂಡಾಯಕ್ಕೆ ಬಗ್ಗದೇ ರಾಜೀನಾಮೆ ಕೊಟ್ಟಿದ್ದರೆ ಜನ ಮತ್ತೆ ಗೆಲ್ಲಿಸಿ ಕಳಿಸುತಿದ್ದರೇನೋ.ಆದರೆ ಯಡ್ಯೂರಪ್ಪ ಶರಣಾಗಿ ಕುರ್ಚಿಯ ಮುಂದೆ ಬೋರಲು ಬಿದ್ದಿದ್ದರು..!
ಹಾಗೇ ನೋಡಿದರೆ ಈ ಸರ್ಕಾರ ರೆಡ್ಡಿಗಳ ಬಂಡಾಯದ ಸಮಯದಲ್ಲಿ ಉತ್ತರ ಕರ್ನಾಟಕ ಪ್ರವಾಹಕ್ಕೆ ಸಿಕ್ಕಿ ತತ್ತರಿಸುತ್ತಿದ್ದರೂ ಹಾಳು ಬಿದ್ದು ಹೋಗಿ ಅನ್ನುವಂತೆ ಸುಮ್ಮನಿದ್ದಿದ್ದೇ ಕಡೆ ಬಾರಿಯೇನಲ್ಲ,ಅದಾದ ಮೇಲೆ ರೆಸಾರ್ಟ್ನಲ್ಲಿ ಕತ್ತೆ ವ್ಯಾಪರಕ್ಕಿಳಿದಾಗಲೂ ತಿಂಗಳುಗಟ್ಟಲೇ ರಾಜ್ಯ ಅನಾಥವಾಗಿತ್ತು.ಸರ್ಕಾರಿ ಯಂತ್ರಕ್ಕೆ ತುಕ್ಕು ಹಿಡಿದಿತ್ತು.
ಮತ್ತೆ ಮುಖ್ಯಮಂತ್ರಿಯ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲರು ಅನುಮತಿ ನೀಡಿದಾಗ ಖುದ್ದು ಆಡಳಿತ ಪಕ್ಷವೇ ಬಂದ್ ಕರೆ ಕೊಟ್ಟೂ ವೋಟ್ ಹಾಕಿ ಕಳುಹಿಸಿದ ಜನಸಾಮಾನ್ಯರಿಗೆ ತೊಂದರೆ ಕೊಟ್ಟಿದ್ದು ಮಹಾನ್ ಸಾಧನೆಯೇ (?) ಸರಿ.ಅದೆಲ್ಲಾ ಆಗಿ ಮತ್ತೆ ಸುಪ್ರಿಂ ಕೋರ್ಟ್ ತೀರ್ಪು ಬಂದ ಮೇಲೂ ಮತ್ತೆ ದೆಹಲಿಯಲ್ಲಿ ಕುರ್ಚಿ ಸವಾರಿ ಮಾಡಿ ಬಂದಾಗಲೂ ಕರ್ನಾಟಕ ಅನಾಥವಾಗಿತ್ತು.
ಕಾನೂನಿನಂಗಳ ೬ : ಕಾನೂನಿನ ಕಣ್ಣಲ್ಲಿ ವಿವಾಹ
ಉಷಾ ಐನಕೈ ಶಿರಸಿ
ಹಿಂದೂ ಸಂಪ್ರದಾಯದ ಪ್ರಕಾರ ವಿವಾಹ ಅಂದರೆ ಒಂದು ಪವಿತ್ರ ಬಂಧನ. ಈ ಮೂಲಕ ಮಾತ್ರ ಮನುಷ್ಯ ಪರಿಪೂರ್ಣತೆಯತ್ತ ಹೋಗಲು ಸಾಧ್ಯ ಎಂಬ ನಂಬಿಕೆಯಿದೆ. ಈ ವೈವಾಹಿಕ ಜೀವನ ಸುಸಂಬದ್ಧವಾಗಿ ಸಾಗಲು ಅನುಕೂಲವಾಗುವಂತೆ ಕಾನೂನುಗಳನ್ನು ರಚಿಸಲಾಗಿದೆ. ಈ ಕಾನೂನುಗಳು ವಿವಾಹ ಅಂದರೇನು? ವಿವಾಹವನ್ನು ಯಾವಾಗ ಅನೂರ್ಜಿತಗೊಳಿಸಬಹುದು? ಗಂಡ-ಹೆಂಡತಿಯ ಹಕ್ಕು-ಬಾಧ್ಯತೆಗಳು ಹಾಗೂ ಅದನ್ನು ಚ್ಯುತಿಗೊಳಿಸಿದಲ್ಲಿ ಪಡೆಯಬಹುದಾದ ಶಿಕ್ಷೆಗಳು ಮುಂತಾದವುಗಳನ್ನೆಲ್ಲ ವಿವರಿಸುತ್ತದೆ.
ಹಿಂದೂ ಸಂಪ್ರದಾಯದಲ್ಲಿ ವಿವಾಹಕ್ಕೆ ಒಂದು ವಿಶೇಷ ಅರ್ಥವಿದೆ. ಇಲ್ಲಿ ವಿವಾಹ ಒಂದು ಪವಿತ್ರ ಬಂಧನ. ಹೆಣ್ಣು-ಗಂಡು ಪರಸ್ಪರ ಅಗ್ನಿಸಾಕ್ಷಿಯಾಗಿ ಕೈಹಿಡಿದು ನೆಮ್ಮದಿಯ ಬದುಕಿಗೆ ಸಂಕಲ್ಪ ಕಟ್ಟಿಕೊಳ್ಳುವ ಸಂದರ್ಭ ಇದು. ವಿವಾಹವಿಲ್ಲದ ಜೀವನ ಅಪೂರ್ಣ ಎಂಬ ಭಾವನೆ ನಮ್ಮಲ್ಲಿದೆ. ‘ಧರ್ಮೇ ಚ ಅರ್ಥೇ ಚ ಕಾಮೇ ಚ ನಾತಿ ಚರಿತವ್ಯಾ ತ್ವಯೀಯಮ್ ನಾತಿ ಚರಾಮಿ’ ಎನ್ನುತ್ತ ಧರ್ಮ, ಅರ್ಥ, ಕಾಮ ಈ ಮೂರರಲ್ಲೂ ಇಬ್ಬರೂ ಒಂದಾಗಿ ಬಾಳೋಣ ಎನ್ನುವ ಪ್ರತಿಜ್ಞೆಯೊಂದಿಗೆ ವಿವಾಹ ಸಂಸ್ಕಾರ ನಡೆಯುತ್ತದೆ. ಹಾಗಾಗಿ ಹಿಂದೂ ಪದ್ಧತಿಯಲ್ಲಿ ವಿವಾಹ ಒಂದು ಧಾರ್ಮಿಕ ಸಂಸ್ಕಾರ.
ವಿವಾಹ ಎಂದರೆ ಹೆಣ್ಣು-ಗಂಡು ಒಂದಾಗಿ ಬಾಳುವುದಕ್ಕೋ, ಸಂತಾನೋತ್ಪತ್ತಿಗೋ ಸೀಮಿತವಾಗಿಲ್ಲ. ಇದರ ಅರ್ಥ ಬಹು ವಿಶಾಲವಾಗಿದೆ. ಹೆಣ್ಣು-ಗಂಡು ಸೇರಿ ಒಂದು ಪೂರ್ಣತೆಯನ್ನು ಕಾಣುವುದು. ಈ ರೀತಿಯಾಗಿ ಇಡೀ ಬದುಕನ್ನೇ ಪೂರ್ಣತೆಯತ್ತ ಒಯ್ಯುವುದು. ಈ ಬದುಕಿನಲ್ಲಿ ಸಾವಿರಾರು ಕನಸುಗಳಿವೆ. ನೂರಾರು ಸವಾಲುಗಳಿವೆ. ಎರಡು ವಿಭಿನ್ನ ಮನಸ್ಸುಗಳು ಒಂದೇ ಬಿಂದುವಿನೊಂದಿಗೆ ಮುಂದುವರಿಯುವ ವಿಸ್ಮಯವಿದೆ. ಹೀಗೆ ವಿವಾಹದ ಅರ್ಥ ಮಾಡುತ್ತಹೋದರೆ ಅನಂತದೆಡೆಗೆ ಸಾಗುತ್ತದೆ. ಇದೇ ಭಾರತೀಯ ಸಂಸ್ಕೃತಿ. ಭಾರತೀಯ ಸಂಸ್ಕೃತಿಯಲ್ಲಿ ವಿವಾಹ ಬಂಧನ ಎನ್ನುವುದು ಅದ್ಭುತವಾದ ಲಕ್ಷಣ.




