ನಮೋ “ಅರಿಹಂತಾಯ” : ವಿಕ್ಷಿಪ್ತ ಶಕ್ತಿಗಳ ಅಣ್ವಸ್ತ್ರ ಬೆದರಿಕೆಗೆ ಭಾರತದ ಸುರಕ್ಷಾ ಕವಚ.
– ಶ್ರೇಯಾಂಕ ಎಸ್ ರಾನಡೆ
“ಅರಿಹಂತ” ಅಂದರೆ ಸಂಸ್ಕೃತ ಭಾಷೆಯಲ್ಲಿ “ಶತ್ರುಗಳ ವಿನಾಶಕ” ಎಂದರ್ಥ ( ಅರಿ=ಶತ್ರು. ಹಂತ = ವಿನಾಶಕ ). ‘ಐಎನ್ಎಸ್ ಅರಿಹಂತ್’ ಭಾರತದ ಮೊದಲ ಸ್ವದೇಶಿ ನಿರ್ಮಿತ ಅಣ್ವಸ್ತ್ರ ಜಲಾಂತರ್ಗಾಮಿ ನೌಕೆ. ನವೆಂಬರ್ 5 ಕ್ಕೆ ಅರಿಹಂತ ಹಿಂದೂ ಮಹಾಸಾಗರದಲ್ಲಿ ಸುಮಾರು 300 ಮೀಟರ್ ಆಳಕ್ಕೆ ಧುಮುಕಿ ಮೊದಲ ಹಂತದ ಗಸ್ತು ಪರೀಕ್ಷಣವನ್ನು ಯಶಸ್ವಿಯಾಗಿ ಪೂರೈಸಿದೆ. ಇದರ ಲೋಕಾರ್ಪಣೆಯೊಂದಿಗೆ ಭಾರತ ದೇಶ ಭೂ(ಪೃಥ್ವಿ, ಅಗ್ನಿ ಕ್ಷಿಪಣಿಗಳು), ವಾಯು ಹಾಗೂ ಜಲ ಹೀಗೆ ಮೂರೂ ಮಾಧ್ಯಮಗಳಲ್ಲಿಯೂ ನ್ಯೂಕ್ಲಿಯರ್ ಶಸ್ತ್ರ ಬಲವಿರುವ “ಅಣ್ವಸ್ತ್ರ ತ್ರಿವಳಿ” ಶಕ್ತಿಯಾಗಿದೆ. ರಷ್ಯ, ಅಮೆರಿಕ, ಫ್ರಾನ್ಸ್, ಇಂಗ್ಲೆಂಡ್, ಚೀನ ದೇಶಗಳನ್ನು ಹೊರತುಪಡಿಸಿ ಪರಮಾಣು ತಂತ್ರಜ್ಞಾನದ ಜಲಾಂತರ್ಗಾಮಿಯನ್ನು ಅಭಿವೃದ್ಧಿಪಡಿಸಿ ಬಳಸುತ್ತಿರುವ “ಅಣ್ವಸ್ತ್ರ ತ್ರಿವಳಿ” ಸಾಮಾರ್ಥ್ಯವಿರುವ ವಿಶ್ವದ ಆರನೇ ದೇಶ ಭಾರತ. ಏಷ್ಯಾದ ಖಂಡದ ಎರಡನೇ ದೇಶ. ಮತ್ತಷ್ಟು ಓದು 
#MeToo, ಒಂದೆರಡು ಪ್ರಶ್ನೆಗಳು from Me Too…!
– ಸುಜಿತ್ ಕುಮಾರ್
ಸ್ಥಳ ವರ್ಲಿ, ಮುಂಬೈ. ಅದು ಕಡುಕಪ್ಪು ಕೋಟುಗಳು ಹಾಗು ಎಲ್ಲೆಂದರಲ್ಲಿ ಸೀಳಿಕೊಂಡು ಗಾಳಿಗೆ ಹಾರಾಡುತ್ತಿರುವ ಡ್ರೆಸ್ಸುಗಳೇ ತುಂಬಿ ತುಳುಕುತ್ತಿರುವ ಸ್ಟೇಡಿಯಂ. ಸೇರಿರುವರೆಲ್ಲ ಸಿನಿಮಾರಂಗದಲ್ಲಿ ಒಂದಿಲ್ಲೊಂದು ಬಗೆಯಲ್ಲಿ ಗುರುತಿಸಿಕೊಂಡಿರುವ ದೊಡ್ಡ ದೊಡ್ಡ ಹಸ್ತಿಗಳು. ಘಾಡ ಮೌನದ ಸೀರಿಯಸ್ನೆಸ್ ಅನ್ನು ಒಳಗೊಂಡ ಆ ಮುಖಗಳನ್ನು ಗಮನಿಸಿದಾಗ ಮುಂದಿದ್ದ ಸ್ಟೇಜಿನ ಮೇಲೆ ಇಂದು ತೀರಾ ಸಾಮನ್ಯವೆನಿಸಿಕೊಂಡಿರುವಂತೆ ಕೇಂದ್ರ ಸರ್ಕಾರಗಳ ನಡೆಯ ವಿರುದ್ಧವೋ, ದೇವಸ್ಥಾನಗಳಿಗೆ ಮಹಿಳೆಯ ಪ್ರವೇಶ ಬೇಕೆಂಬುದರ ಬಗ್ಗೆಯೂ ಅಥವಾ ಜೀವ ಪಣವಿಟ್ಟು ಕಾದಾಡುವ ಸೈನಿಕರ ನಡೆಗಳ ಬಗ್ಗೆಯೂ ಜನತೆಗೆ ಅರ್ಥವಾಗದ ದುಬಾರಿ ಭಾಷೆಯಲ್ಲಿ ಅವರವರೇ ಚರ್ಚಿಸಿ, ಮಧ್ಯದಲ್ಲಿ ಒಂದೆರೆಡು ಮದ್ಯಗಳನ್ನು ಏರಿಸಿ, ಕೊನೆಗೆ ತೂರಾಡುತ್ತಾ ಮನೆಗೆ ತೆರಳುವ ಹೈ ಪ್ರೊಫೈಲ್ ಪ್ರಗತಿಪರರ ಕಾರ್ಯಕ್ರಮವೇನೋ ಎಂದೆನಿಸುತ್ತಿತ್ತು. ಮತ್ತಷ್ಟು ಓದು 
ಪಟೇಲ್ ಎಂಬ ಉಕ್ಕಿನ ಪುರುಷ, ಸ್ವತಂತ್ರ ಭಾರತದ ಐಕ್ಯತೆಯ ಪ್ರತೀಕ.
– ಶ್ರೇಯಾಂಕ ಎಸ್ ರಾನಡೆ.
“ಪ್ರಾಚೀನ ಭಾರತ ಅನೇಕ ವರ್ಷಗಳ ಕಾಲ ಬ್ರಿಟಿಷರ ಗುಲಾಮಗಿರಿಯಲ್ಲಿತ್ತು ಎಂಬುದು ಅತ್ಯಂತ ತಲೆತಗ್ಗಿಸುವ ವಿಚಾರ. ಆದರೆ ಈಗ ಸ್ವಾತಂತ್ರ್ಯ ಲಭಿಸಿದೆ. ಎಲ್ಲಾ ಭಾರತೀಯರ ಕರ್ತವ್ಯವೆಂದರೆ ಸ್ವತಂತ್ರ ಭಾರತ ಮತ್ತೊಮ್ಮೆ ಗುಲಾಮವಾಗದಂತೆ ನೋಡಿಕೊಳ್ಳಬೇಕು. ಏನಿದ್ದರೂ ಅದು ಮುಂದೆ ಸಾಗಬೇಕು, ಹಿನ್ನಡೆಯಬಾರದು ಆಗಲೇ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಒದಗುತ್ತದೆ.”- ಸರ್ದಾರ್ ವಲ್ಲಭಭಾಯಿ ಪಟೇಲ್. ಮತ್ತಷ್ಟು ಓದು 
ಸಮಾನತೆಯ ಪ್ರಶ್ನೆ, ಸಾಮರಸ್ಯದ ಸಂಕೇತ ಶಬರಿಮಲೆ
– ಸ್ನೇಹಾ ಸಾಗರ
ಕೆಲ ದಿನಗಳ ಪ್ರಶ್ನೆಯಲ್ಲ, ಹಲವು ವರ್ಷಗಳ ಪ್ರಶ್ನೆ. ‘ಶಬರಿಮಲೆಗೆ ಹೆಣ್ಣಿಗೇಕೆ ಪ್ರವೇಶವಿಲ್ಲ’ ಎನ್ನುವುದು. ಹೆಣ್ಣೆೆಂದೆರೆ ಅಪವಿತ್ರತೆ ಎನ್ನುವುದೋ, ಪಂದಳದ ರಾಜ ಹೆಣ್ಣಿನ ವಿರೋಧಿ ಎನ್ನುವುದೋ ಅಥವಾ 48 ದಿನಗಳ ಕಠಿಣ ವೃತ ಮತ್ತು ದೊಡ್ಡ ಪಾದ, ಸಣ್ಣ ಪಾದಗಳನ್ನು ಹತ್ತಿ ದೇವರ ದರ್ಶನ ಪಡೆಯುವುದು ಹೆಣ್ಣಿನ ಶಕ್ತಿಗೆ ಆಗದ್ದು ಎನ್ನುವುದೋ. ಒಟ್ಟಿನಲ್ಲಿ ಶಬರಿಮಲೆ ಅಂದಿಗೂ – ಇಂದಿಗೂ ಪ್ರಶ್ನೆೆಯೇ, ವಿವಾದವೇ. ಆದರೆ ಅದು ಯಾರಿಗೆ ಎನ್ನುವುದು ದೊಡ್ಡ ಪ್ರಶ್ನೆೆ. ಭಾರತವೆಂದರೆ ಪರಂಪರೆ, ಭಾರತವೆಂದರೆ ಸಂಸ್ಕೃತಿ – ಸಂಪ್ರದಾಯ ಎನ್ನುವರಿಗೆ ಹಾಗೂ ದೇವರೊಡನೆ ಸಂಪ್ರದಾಯ, ಸಂಸ್ಕೃತಿಗಳ ಬಗ್ಗೆೆ ನಂಬಿಕೆಗಳನ್ನು ಉಳಿಸಿಕೊಂಡು ಬಂದವರಿಗೆ ಖಂಡಿತ ಶಬರಿಮಲೆಯ ಈ ಕಟ್ಟುಪಾಡು ಸಮಸ್ಯೆೆಯೇ ಅಲ್ಲ. ಮತ್ತಷ್ಟು ಓದು 
ಅರ್ಝಿ ಹುಕುಮತ್-ಇ-ಹಿಂದ್ ಆಜಾದ್: ಸ್ವತಂತ್ರ ಭಾರತದ ಪ್ರಾಂತೀಯ ಸರಕಾರಕ್ಕೆ 75..!
– ಶ್ರೇಯಾಂಕ ಎಸ್ ರಾನಡೆ.
‘ಬೋಸ್ ಹಾಗೂ ಐಎನ್ಎ ಪ್ರತಿನಿಧಿಗಳನ್ನು “ದೇಶಭಕ್ತರಲ್ಲೇ ಶ್ರೇಷ್ಠರು” ಎಂದು ಬ್ರಿಟಿಷ್ರಾಜ್ ಪರಿಗಣಿಸಿತು’- ಎಡ್ವಡ್ಸ್ ಮೈಕಲ್, ದಿ ಲಾಸ್ಟ್ ಇಯರ್ಸ್ ಆಫ್ ಬ್ರಿಟಿಷ್ ಇಂಡಿಯಾ, ಕ್ಲೀವ್ಲ್ಯಾಂಡ್ ಪ್ರಕಾಶನ, 1964, ಪುಟ: 93.
ಅಕ್ಟೋಬರ್ 21, 1943, ಭಾರತ ಬ್ರಿಟಿಷರಿಂದ ದಾಸ್ಯದ ಮುಕ್ತಿಗಾಗಿ ಸ್ವಾತಂತ್ರ್ಯದ ಪ್ರಾಪ್ತಿಗಾಗಿ ಕೊನೆಯ ಸ್ವಾತಂತ್ರ್ಯ ಸಂಗ್ರಾಮಕ್ಕೆ ತುದಿಗಾಲಲ್ಲಿ ನಿಂತಿದ್ದ ಸಂದರ್ಭ. ಒಂದೆಡೆ ಗಾಂಧೀಜಿಯೇ ಸ್ವಾತಂತ್ರ್ಯ ದೊರಕಲು ಹಳೆಯ ಮಾರ್ಗಗಳಿಗೆ ಶುಭವಿದಾಯ ಹೇಳಿ, 1942ರಲ್ಲಿ “ಮಾಡು ಇಲ್ಲವೆ ಮಡಿ: ಭಾರತ ಬಿಟ್ಟು ತೊಲಗಿ” ಆಂದೋಲನಕ್ಕೆ ಕರೆ ನೀಡಿದ್ದರೆ, ಮತ್ತೊಂದೆಡೆ ಅದಕ್ಕೆ ಪರೋಕ್ಷ ಉತ್ತೇಜನ ಮತ್ತು ಅಂತಹ ಹೋರಾಟಕ್ಕೆ ಅನಿವಾರ್ಯತೆಯನ್ನು ಸೃಷ್ಟಿಸುವ ಪ್ರಕ್ರಿಯೆ ವಿದೇಶಿ ನೆಲದಲ್ಲಿ ನೆಲೆಸಿದ್ದ ಭಾರತೀಯ ಹೋರಾಟಗಾರರಿಂದ ನಡೆಯುತ್ತಿತ್ತು. ಮತ್ತಷ್ಟು ಓದು 
ISROಗೆ ಸಾಧ್ಯವಾಗಿದ್ದು HALಗೇಕೆ ಸಾಧ್ಯವಾಗಲಿಲ್ಲ?
– ಅಜಿತ್ ಶೆಟ್ಟಿ ಹೆರಾಂಜೆ
ಸುಮಾರು 78 ವರ್ಷ ಇತಿಹಾಸ ಇರುವ ವಿಮಾನ ತಯಾರಿಕ ಕಂಪೆನಿಯೊಂದು ಇಂದಿಗೂ ತೆವಳುತ್ತ ಕುಂಟುತ್ತಾ ಸಾಗುತ್ತಿದೆ ಅಂದರೆ ಅದಕ್ಕೆಯಾರುಹೊಣೆ? ಅದನ್ನ ನಿರ್ವಹಣೆ ಮಾಡುತ್ತಿರುವ ಸರಕಾರವಾ? ಅಥವಾ ಅಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಾ? ಅಥವಾ ಕಾರ್ಮಿಕರಿಂದ ಕೆಲಸ ತೆಗೆಸುತ್ತಿರುವ ಅಧಿಕಾರಿ ವರ್ಗವಾ? ಅಥವಾ ಇವರೆಲ್ಲರೂ ಕಾರಣರ? ಹೌದು ನಾನು ಎತ್ತಿರುವ ಪ್ರಶ್ನೆ ಹೆಚ್ಎಎಲ್ ಬಗ್ಗೆ.ಈ ಪ್ರಶ್ನೆ ಈಗ ಯಾಕೆ ಗಂಭೀರ ಸ್ವರೂಪ ಪಡೆದಿದೆ ಎಂದರೆ ಇಂದು ಬಹಳಷ್ಟು ಮಂದಿಗೆ ಎಚ್ಎಎಲ್ ಅಂದರೆ ಅಮೇರಿಕದ ಬೋಯಿಂಗ್ ಕಂಪೆನಿಯ ತರವೋ ಅಥವಾ ರಶ್ಯಾದ ಸುಕೋಯಿ ಕಂಪೆನಿಯ ತರಹವೋ ಎಂದು ಅನಿಸೋಕೆ ಶುರು ಆಗಿದೆ. ಆದರೆ ವಾಸ್ತವಾಂಶ ಹಾಗಿಲ್ಲ. ಎಚ್ಎಎಲ್ ಸ್ಥಾಪನೆಯಾಗಿ 79 ವರ್ಷ ಕಳೆದರೂ ಇವತ್ತಿಗೂ ಈ ಕಂಪೆನಿ 79 ವರ್ಷಗಳ ಹಿಂದೆ ತಾನೇನನ್ನು ಮಾಡುತ್ತಿದಯೋ ಬಹುತೇಕ ಅದೇ ಕೆಲಸವನ್ನು ಇಂದಿಗೂ ಮಾಡುತ್ತಿರುವುದು ಈ ದೇಶದ ಬಹುದೊಡ್ಡ ದುರಂತ. ಎಚ್ಎಎಲ್ ಇಂದಿಗೂ ಬಹುತೇಕ ಕೆಲಸ ವಿದೇಶಿ ನಿರ್ಮಿತ ಯುದ್ದ ವಿಮಾನಗಳ ಬಿಡಿಬಾಗಾಗಳನ್ನ ಇಲ್ಲಿಗೆ ತಂದು ಅದೇ ಕಂಪೆನಿಗಳ ಸಹಯೋಗದೊಂದಿಗೆ ಜೋಡಿಸುವ ಕಾರ್ಯವಷ್ಟೆ. ಒಂದು ಸಣ್ಣವ್ಯತ್ಯಾಸ ಅಂದರೆ 79 ವರ್ಷದ ಹಿಂದೆ Harlow PC-5 ವಿಮಾನವನ್ನು ಜೋಡಿಸಿತ್ತು ಇವತ್ತು ಸುಕೋಯಿ ಯಯದ್ದ ವಿಮಾನದ ಬಿಡಿ ಭಾಗವನ್ನ ಜೋಡಿಸಸುತ್ತಿದೆ ಅಷ್ಟೆ. ಎಚ್ಎಎಲ್ ತಾನಾಗಿಯೇ ಅಭಿವೃದ್ಧಿಪಡಿಸಿದ ವಿಮಾನ ಹಾಗು ಹೆಲಿಕಾಪ್ಟರ್ ಸಂಖ್ಯೆ ಬಹಳಾ ಕಡಿಮೆ.
ಹಿಂದುಸ್ಥಾನ್ ಏರೋನೋಟಿಕ್ಸ್ ಲಿಮಿಟೆಡ್ ಇದರ ಮೂಲ ಹೆಸರು ಹಿಂದುಸ್ಥಾನ್ ಏರ್ಕ್ರಾಫ್ಟ್ ಲಿಮಿಟೆಡ್ ಎಂದು.ಇದನ್ನ 1940 ರಲ್ಲಿ ಅಂದಿನ ಮೈಸೂರು ಸರಕಾರದ ಸಹಯೋಗದೊಂದಿಗೆ 25 ಲಕ್ಷ ರೂಪಾಯಿ ಬಂಡವಾಳ ಹಾಕಿ ಸ್ಥಾಪಿಸಿದವರು ವಾಲ್ ಚಂದ ಹೀರಾಚಂದ್ ಎನ್ನುವವರು.1941ರಲ್ಲಿ ಅಂದಿನ ಬ್ರಿಟಿಷ್ ಸರಕಾರ ಈ ಕಂಪನಿಯ ಮೂರನೇ ಒಂದರಷ್ಟು ಪಾಲನ್ನು ಖರೀದಿಸಿತು. ಕಾರಣ ಅಂದಿನ ಕಾಲಕ್ಕೆ ಬ್ರಿಟಿಷರ ಸೈನ್ಯಕ್ಕೆ ಆಧುನಿಕ ಮಿಲಿಟರಿ ಉಪಕರಣವನ್ನು ಸರಬರಾಜು ಮಾಡಲು ಏಷ್ಯಾ ಖಂಡದಲ್ಲಿ ಒಂದು ವ್ಯವಸ್ಥೆ ಬೇಕಿತ್ತು.ಅದರಂತೆಯೇ 1942 ರಲ್ಲಿ ಅಮೆರಿಕಾದ Central Aircraft Manufacturing Company (CAMCO) ಎನ್ನುವ ಕಂಪೆನಿಯ ಸಹಯೋಗದೊಂದಿಗೆ Harlow PC-5 ಎನ್ನುವ ವಿಮಾನವನ್ನು ನಿರ್ಮಿಸಿತು.ನಂತರ ಇದು ಭಾರತೀಯ ವಾಯು ಪಡೆಯ ಒಂದು ಮುಖ್ಯ ಯುದ್ಧ ವಿಮಾನವಾಗಿ ಬಹಳಷ್ಟು ವರ್ಷ ಸೇವೆ ಸಲ್ಲಿಸಿತು. 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಮೇಲೆ ಈ ಸಂಸ್ಥೆ ಯನ್ನು ಭಾರತ ಸರ್ಕಾರ ಸಂಪೂರ್ಣ ತನ್ನ ಅಧೀನಕ್ಕೆ ತೆಗೆದುಕೊಂಡಿತು, ಅಕ್ಟೋಬರ್ 1, 1964 ರಲ್ಲಿ ಅಂದಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರು ಇದನ್ನ ಹಿಂದುಸ್ಥಾನ್ ಏರೋನೋಟಿಕ್ಸ್ ಲಿಮಿಟೆಡ್ ಎಂದು ಮರು ನಾಮಕರಣ ಮಾಡಿ ಇದಕ್ಕೊಂದು ಮರು ಹುಟ್ಟು ಕೊಟ್ಟರು.ಹೆಚ್ಎಎಲ್ ಅನ್ನು ಆಧುನಿಕ ಭಾರತದ ಸೇನೆಯ ಬೇಡಿಕೆಯನ್ನು ಪೂರೈಸುವ ಒಂದು ಉತ್ತಮ ಸಂಸ್ಥೆಯನ್ನಾಗಿ ಮಾಡ ಬೇಕೆಂಬ ಶಾಸ್ತ್ರಿಯವರ ಕನಸನ್ನ ನಂತರದ ದಿನಗಳಲ್ಲಿ ಬಂದ ಸರ್ಕಾರಗಳು ಸಾಕಾರಗೊಳಿಸುವಲ್ಲಿ ಸೋತಿವೆ. ಹೆಚ್ ಎ ಎಲ್ ಸಂಸ್ಥೆಗೆ ಸುಮಾರು 79 ವರ್ಷದ ಇತಿಹಾಸ ಇದೆ.ಆದರೆ ಇಂದಿಗೂ ವಿಶ್ವದ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಅಭಿವೃದ್ಧಿಪಡಿಸುವ ವಿಷಯದಲ್ಲಿ ಯಾವುದೇ ಕಂಪೆನಿಗಳ ಹತ್ತಿರಕ್ಕೂ ನಿಲ್ಲುವುದಿಲ್ಲ.
ರಾಫೆಲ್ : ಇಲ್ಲದ ಹಗರಣ ಸೃಷ್ಟಿಸಲು ಹೊರಟ ರಾಹುಲ್
– ರಾಕೇಶ್ ಶೆಟ್ಟಿ
ರಾಫೆಲ್ ಬಗ್ಗೆ ಈ ಹಿಂದೆಯೇ ಬರೆದಿದ್ದ ಲೇಖನದಲ್ಲಿ ದೇಸಿ ಗೊಬೆಲ್ಸ್ ರಾಹುಲ್ ಆಂಡ್ ಕಂಪೆನಿ ಯಾವ ರೀತಿಯಲ್ಲಿ, ಹಿಟ್ಲರ್ ಸರ್ಕಾರದ Goebbels Theoryಯನ್ನು ಯಶಸ್ವಿಯಾಗಿ ಅಳವಡಿಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ವಿವರಿಸಿದ್ದೆ.ಕಳೆದ ಕೆಲವು ತಿಂಗಳಿನಿಂದ ರಾಫೆಲ್ ಕುರಿತು ಜನರ ಮನದಲ್ಲಿ ಅನುಮಾನ ಮೂಡಿಸುವಂತೆಯೇ ಆಗೀಗ ಮಾತನಾಡುತ್ತಿದ್ದ ಕಾಂಗ್ರೆಸ್ ಈಗ ಪದೇ ಪದೇ ರಾಫೆಲ್ ಒಪ್ಪಂದದಲ್ಲಿ ಹಗರಣ ನಡೆದಿದೆಯೆಂದು ಬೊಬ್ಬೆ ಹೊಡೆಯುತ್ತಿದೆ.ಕರ್ನಾಟಕದಲ್ಲಂತೂ ಪ್ರತಿ ಜಿಲ್ಲೆಯಲ್ಲೂ ಈ ಬಗ್ಗೆ ಪ್ರತಿಭಟನೆಯನ್ನು ಕಾಂಗ್ರೆಸ್ ನಡೆಸುತ್ತಿದೆ. ಮಂಗಳೂರಿನಲ್ಲಿ ನಡೆದ ರಾಫೆಲ್ ಪ್ರತಿಭಟನೆಯ ವಿಡಿಯೋ ತುಣುಕೊಂದು, ಕಾಂಗ್ರೆಸ್ ಎಂಬ ಪುರಾತನ ಪಕ್ಷದ ದೈನೇಸಿ ಸ್ಥಿತಿಗೆ ಕೈಗನ್ನಡಿ ಹಿಡಿದಂತಿತ್ತು. ಪ್ರತಿಭಟನೆಗೆ ಬಂದ ಅರ್ಧದಷ್ಟು ಕಾರ್ಯಕರ್ತರಿಗೆ ಯಾವ ವಿಷಯಕ್ಕಾಗಿ ಪ್ರತಿಭಟನೆ ಎಂದೇ ಗೊತ್ತಿರಲಿಲ್ಲ.ಕೆಲವರು ಪೆಟ್ರೋಲ್,ಡೀಸೆಲ್ ಬೆಲೆ ಇಳಿಸಬೇಕು ಎಂದರೆ,ಇನ್ನು ಕೆಲವರು ಬಾಯಿಗೆ ಬಂದಷ್ಟು ಅಂಕಿ ಸಂಖ್ಯೆಯಲ್ಲಿ ಹಗರಣವಾಗಿದೆ ಎನ್ನುತ್ತಿದ್ದರು. ಕೆಲವರಿಗೆ ರಾಫೆಲ್ ಎಂದರೇನು ಎನ್ನುವುದೂ ಗೊತ್ತಿಲ್ಲ ಆದರೂ ಪ್ರತಿಭಟಿಸಬೇಕು.ಯಾಕೆ? ಯಾಕೆಂದರೆ ಆರೋಪ ಮಾಡುತ್ತಿರುವುದು ಮೋದಿಯ ಮೇಲಲ್ಲವೇ ಅದಕ್ಕಾಗಿ.
HAL ಅನ್ನು ಬಿಟ್ಟು ರಿಲಯನ್ಸ್ ಜೊತೆಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಮೋದಿ ಸರ್ಕಾರ ಜನರಿಗೆ ಮೋಸ ಮಾಡಿದೆ ಎನ್ನುವ ಬಗ್ಗೆಯೇ ಹೆಚ್ಚು ಮಾತನಾಡಲಾಗುತ್ತಿದೆ. ಮೋದಿ ಅಧಿಕಾರಕ್ಕೆ ಬಂದರೆ ಅಂಬಾನಿ,ಅದಾನಿಯಂತವರಿಗೆ ಮಾತ್ರ ಲಾಭ ಎಂದು ಗಂಜಿಗಿರಾಕಿಗಳು ಚುನಾವಣೆಗೆ ಮೊದಲು ಕುಯ್ಯಿಗುಡುತ್ತಿದ್ದರು. ಈಗ ಈ ಒಪ್ಪಂದವನ್ನಿಡಿದು ನೋಡಿ ಹೇಳಿರ್ಲಿಲ್ವಾ ಎನ್ನುತ್ತಿದ್ದಾರೆ. ದಸಾಲ್ಟ್ ಹಾಗೂ ರಿಲಯನ್ಸ್ ಒಪ್ಪಂದದ ಬಗ್ಗೆ ಮಾತನಾಡುವ ಮೊದಲು,ದೇಶದ ರಕ್ಷಣಾ ಉದ್ಯಮದಲ್ಲಿ ಈಗಾಗಲೇ ಇರುವ ಖಾಸಗಿ ಕಂಪೆನಿಗಳ ಬಗ್ಗೆಯೂ ಒಮ್ಮೆ ನೋಡಿಬಿಡೋಣ. ಅಪಾಚೆ ಅಟ್ಯಾಕ್ ಹೆಲಿಕಾಪ್ಟರ್ ಹಾಗೂ ಚಿನುಕ್ ಹೆವಿ ಲಿಫ್ಟ್ ಹೆಲಿಕಾಪ್ಟರ್ ಗಾಗಿ ಅಮೆರಿಕಾದ ಜೊತೆಗೆ ನಡೆದ ಒಪ್ಪಂದದಲ್ಲಿ ಇಂಡಿಯನ್ ಆಫ್ಸೆಟ್ ಪಾಲುದಾರರನ್ನಾಗಿ ಬೋಯಿಂಗ್ ಆರಿಸಿಕೊಂಡಿದ್ದು ಟಾಟಾ ಅಡ್ವಾನ್ಡ್ಸ್ ಸಿಸ್ಟಮ್,ಡೈನಮೆಟಿಕ್ ಟೆಕ್ನಲಾಜಿಸ್ ಮತ್ತಿತ್ತರರನ್ನು.
ರಾಫೆಲ್ ಒಪ್ಪಂದ ಹೇಗೆ ಭಾರತ-ಫ್ರಾನ್ಸ್ ಸರ್ಕಾರಗಳ ನಡುವೆ ನಡೆದಿದೆಯೋ ಅದೇ ರೀತಿಯಲ್ಲಿ ಭಾರತ-ಅಮೆರಿಕಾದ ನಡುವೆ M777 ULH ಆರ್ಟಿಲರಿಗಳ ಒಪ್ಪಂದವಾಗಿತ್ತು. ೧೪೫ರಲ್ಲಿ ೨೫ಗನ್ ಗಳನ್ನು ಅದರ ಉತ್ಪಾದಕ ಸಂಸ್ಥೆ ಬಿಇಎಸ್ ಸಿಸ್ಟಮ್ ಪೂರೈಸಿದರೆ, ಇನ್ನುಳಿದ ೧೨೦ನ್ನು ಭಾರತದಲ್ಲಿ ಜೋಡಣೆ ಮಾಡಲು ಒಪ್ಪಂದವಾಗಿತ್ತು. ಈ ಒಪ್ಪಂದದಲ್ಲಿ ಆಫ್ ಸೆಟ್ ಪಾಲುದಾರನನ್ನಾಗಿ ಬಿಇಎಸ್ ಸಿಸ್ಟಮ್ ಆರಿಸಿಕೊಂಡಿದ್ದು ಮಹಿಂದ್ರಾ ಡಿಫೆನ್ಸ್ ಅನ್ನು.
ಅಜಾತ ಶತ್ರುವಿನ ನೆಪದಲ್ಲಿ ಆಂಧ್ರದ ಬೃಹಸ್ಪತಿಯ ನೆನೆಯುತ್ತ…
– ರಾಕೇಶ್ ಶೆಟ್ಟಿ
ಬದುಕಲಿಕ್ಕೆಂದೇ ದಿನ ಸಾಯುವವರು,ಬೇಗ ಸತ್ತರೆ ಸಾಕೆಂದು ಬದುಕುವವರ ನಡುವೆ, ಸತ್ತು ಬದುಕುವುದು ಹೇಗೆ ಎಂದು ತೋರಿಸಿಕೊಟ್ಟ ಪುಣ್ಯಾತ್ಮರಿಗೆ ಈ ದೇಶದಲ್ಲಿ ಕೊರತೆಯಿಲ್ಲ. ಅದು ಹದಿಹರೆಯದಲ್ಲೇ ನೇಣಿಗೆ ಕೊರಳೊಡ್ಡಿ ಬ್ರಿಟಿಷರ ನಿದ್ದೆಗೆಡಿಸಿದ ಭಗತನಿರಬಹುದು,ಮೈ ಆಜಾದ್ ಹೂಂ ,ಆಜಾದ್ ಹೀ ರಹೂಂಗ ಎಂದು ಬ್ರಿಟಿಷರ ಕೈಗೆ ಕಡೆಯವರೆಗೂ ಸಿಗದೇ ಹುತಾತ್ಮರಾದ ಚಂದ್ರ ಶೇಖರ್ ಆಜಾದ್ ಅವರಿರಬಹುದು,ದೇಶ ಬಿಟ್ಟು ಪರದೇಶದಲ್ಲೊಂದು ಸೈನ್ಯ ಕಟ್ಟಿ ಭಾರತವನ್ನು ದಾಸ್ಯ ಮುಕ್ತ ಮಾಡುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆಯಿರಬಹುದು (ಅವರು ವಿಮಾನಾಪಘಾತದಲ್ಲಿ ಸಾಯಲಿಲ್ಲವೆಂದೇ ಬಲವಾಗಿ ನಂಬುವವನು ನಾನು), ೬೫ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿ,ಗಾಂಧಿಯವ ಥಿಯರಿಗಳನ್ನೇ,ವಾಸ್ತವದಲ್ಲಿ ಪಾಲಿಸುವಂತೆ ಬದುಕಿದ ಸಂತ ಲಾಲ್ ಬಹಾದ್ದೂರ್ ಶಾಸ್ತ್ರಿಗಳಿರಬಹುದು,ನೆಹರೂ ಕಾಲದ ಅಡಾಲೆದ್ದು ಹೋದ ಭಾರತದ ಅರ್ಥ ವ್ಯವಸ್ಥೆಯನ್ನು ಬದಲಿಸಿ ಭಾರತದ ಆರ್ಥಿಕ ಪಥವನ್ನೇ ಬದಲಿಸಿ ನಿಲ್ಲಿಸಿದ ಪಿವಿ ನರಸಿಂಹರಾವ್ ಅವರಿರಬಹುದು,ಸ್ವಾತಂತ್ರ್ಯ ಬಂದಾಗಿನಿಂದ ಅದೇ ಕಿತ್ತು ಹೋದ,ಡಾಂಬರು ಕಾಣದ ರಸ್ತೆಗಳನ್ನು ಸುವರ್ಣ ಚತುಷ್ಪತ,ಪ್ರಧಾನ್ ಮಂತ್ರಿ ಗ್ರಾಮೀಣ್ ಸಡಕ್ ಯೋಜನೆಗಳ ಮೂಲಕ ರಾವ್ ಅವರು ಹಾಕಿಕೊಟ್ಟ ಆರ್ಥಿಕ ತಳಹದಿಯ ಮೇಲೆ ನವಭಾರತ ನಿರ್ಮಾಣಕ್ಕೆ ಶರವೇಗ ನೀಡಿದ ಕವಿಹೃದಯಿ ಅಟಲ್ ಬಿಹಾರಿ ವಾಜಪೇಯಿಯವರಿರಬಹುದು… ಹೀಗೆ ಸತ್ತು ಬದುಕುವುದು ಹೇಗೆಂದು ಹೇಳಿಕೊಟ್ಟವರ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.
ರಾಜಕಾರಣಿಯೊಬ್ಬ ಸತ್ತರೆ ಜನ ಸಾಮಾನ್ಯನೊಬ್ಬನಿಗೆ ತನ್ನದೇ ಕುಟುಂಬದ ಸದಸ್ಯನೊಬ್ಬ ಹೊರಟು ಬಿಟ್ಟನಲ್ಲ ಎನ್ನುವಷ್ಟು ದುಃಖವಾಗುತ್ತದೆಯೆಂದರೇ ಅದು ನಿಜಕ್ಕೂ ಬದುಕಿನ ಸಾರ್ಥಕತೆಯೇ ಸರಿ. ಕವಿ ಹೃದಯದ,ವಾಗ್ದೇವಿಯ ವರಪುತ್ರನಂತೆ ಮಂತ್ರಮುಗ್ಧ ವಾಗ್ಮಿಯಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಅಂತಹದ್ದೊಂದು ಬದುಕನ್ನು ಬದುಕಿ ಉದಾಹರಣೆಯಾಗಿ ಇಲ್ಲಿಂದ ಮುಂದಕ್ಕೆ ಹೊರಟಿದ್ದಾರೆ. ಆಗಸ್ಟ್ ೧೭ರ ಎಲ್ಲಾ ಪತ್ರಿಕೆ,ಚಾನೆಲ್ಲುಗಳ ತುಂಬಾ ವಾಜಪೇಯಿಯವರ ಜೀವನ ಚರಿತ್ರೆ, ಭಾಷಣಗಳು,ವ್ಯಕ್ತಿಚಿತ್ರಣ ತುಂಬಿ ಹೋಗಿತ್ತು.ಈಗಾಗಲೇ ವಾಜಪೇಯಿಯವರ ಬಗ್ಗೆ ಹಲವಾರು ಲೇಖನಗಳು ಬಂದಿವೆ,ಇನ್ನು ಅವರ ಬಗ್ಗೆ ಬರೆಯಲಿಕ್ಕೆ ಉಳಿದಿರುವುದಾದರೂ ಏನು ಅನ್ನಿಸುತ್ತದೆ.ಆದರೆ ಮಹಾನ್ ವ್ಯಕ್ತಿಗಳು ಬದುಕಿದ್ದಾಗ ಮಾತ್ರವಲ್ಲ,ಮರಣದಲ್ಲೂ ಸಂದೇಶಗಳನ್ನು ಬಿಟ್ಟು ಹೋಗುತ್ತಾರೆ ಅಥವಾ ಅವರ ಶಿಷ್ಯರು ಆ ಕೆಲಸವನ್ನು ಮಾಡುತ್ತಾರೆ. ವಾಜಪೇಯಿಯವರ ಅಂತಿಮ ಯಾತ್ರೆ ಅಂತಹದ್ದೊಂದು ಗಟ್ಟಿಯಾದ ಸಂದೇಶವನ್ನು ದೆಹಲಿ ರಾಜಕಾರಣದಲ್ಲಿ ಘಂಟಾಘೋಷವಾಗಿ ಮೊಳಗಿಸಿದೆ. ಅಂತಿಮ ಯಾತ್ರೆಯ ಐದು ಕಿಲೋಮಿಟರ್ರುಗಳನ್ನು ಪ್ರಧಾನಿ ನರೇಂದ್ರ ಮೋದಿ,ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ನಡೆದುಕೊಂಡೇ ಸಾಗಿದರು. ರಸ್ತೆಯ ತುಂಬೆಲ್ಲಾ ಜನಸಾಗರ ಸೇರಿತ್ತು. ರಾಜೀವ್ ಗಾಂಧೀಯವರ ಅವರ ಹತ್ಯೆಯಾಗಿ ಅಂತಿಮ ಯಾತ್ರೆ ನಡೆದಾಗ ಸೇರಿದ್ದು ಬಿಟ್ಟರೆ ದೆಹಲಿ ಮತ್ತೆ ಇಷ್ಟು ಜನರನ್ನು ನೋಡಿದ್ದು ಈಗಲೇ ಎನ್ನುವ ಮಾತುಗಳು ಕೇಳಿಬಂದವು.ನಿಜವಾಗಿಯೂ ದೆಹಲಿಗೆ ೧೪ ವರ್ಷಗಳ ಹಿಂದೆಯೇ ಅಂತಹದ್ದೊಂದು ದಿನ ಬಂದಿತ್ತು.ಅದು ಪಿ.ವಿ ನರಸಿಂಹರಾವ್ ಅವರು ಮರಣ ಹೊಂದಿದ್ದ ದಿನ. ನೆಹರೂ ಕಾಲದ ಹಳಿತಪ್ಪಿ ಅಡಾಲೆದ್ದು ಹೋಗಿದ್ದ ಅರ್ಥಿಕ ನೀತಿಯನ್ನೇ ೯೦ರ ದಶಕದವರೆಗೂ ನಡೆಸಿಕೊಂಡು ಭಾರತವನ್ನು ಜಗತ್ತಿನ ಬಲಾಢ್ಯ ರಾಷ್ಟ್ರಗಳ ಮುಂದೆ ಮಂಡಿಯೂರಿ ದೈನೇಸಿ ಸ್ಥಿಯಲ್ಲಿ ಕುಳಿತಿರುವಂತೆ ಮಾಡಲಾಗಿತ್ತಲ್ಲ,ಆ ಸ್ಥಿತಿಯನ್ನು ಬದಲಿಸಿ ಭಾರತದ ನವ ಆರ್ಥಿಕತೆಯಾ ರೂವಾರಿ,ಆಂಧ್ರದ ಜನರ ಪ್ರೀತಿಯ ಬೃಹಸ್ಪತಿ,ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ೨೦೦೪ರಲ್ಲಿ ತಮ್ಮ ದೇಹವನ್ನು ತ್ಯಜಿಸಿದರು. ಆದರೆ,ದೇಶದ ಜನರಿಗೆ ಅಂತಹದ್ದೇನೂ ನಡೆಯಲೇ ಇಲ್ಲ,ಅಸಲಿಗೆ ಆ ವ್ಯಕ್ತಿಯ ಸಾವು ಒಂದು ಸುದ್ದಿಯೇ ಅಲ್ಲವೆನ್ನುವಂತೆ ಮಾಡಿಸುವಲ್ಲಿ ನೆಹರೂ ಪರಿವಾರ ಮತ್ತು ಅವರ ಸಾಕು ನಾಯಿಗಳಂತೆ ವರ್ತಿಸುವವರು ಮಾಡಿದ್ದರು.
ರಾಫೆಲ್ ಯುದ್ಧ ವಿಮಾನದ ಸತ್ಯಾಸತ್ಯತೆಗಳು
– ರಾಕೇಶ್ ಶೆಟ್ಟಿ
ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಮುಗಿದ ನಂತರ ಕೇಂದ್ರದ ರಾಜಕೀಯ ವಲಯದಲ್ಲಿ ಅತಿಹೆಚ್ಚು ಸದ್ದು ಮಾಡುತ್ತಿರುವುದು ರಾಫೆಲ್ ಯುದ್ಧ ವಿಮಾನ ಖರೀದಿಯ ವಿವಾದ.ಕಳೆದ ವಾರದ ಅಂಕಣದಲ್ಲಿ ಸಂಸದ ರಾಹುಲ್ ಗಾಂಧೀ ಸಂಸತ್ತಿನಲ್ಲಿ ರಾಫೆಲ್ ಬಗ್ಗೆ ಮಾತನಾಡಿದ್ದನ್ನು ಅದಕ್ಕೆ ಭಾರತ ಹಾಗೂ ಫ್ರಾನ್ಸ್ ಸರ್ಕಾರ ನೀಡಿದ ಸ್ಪಷ್ಟಿಕರಣದ ಬಗ್ಗೆ ಹೇಳಿದ್ದೆ.
ಇದೆಲ್ಲದರ ಮೂಲವಿರುವುದು ೨೦೦೧ರಲ್ಲಿ ಭಾರತೀಯ ವಾಯುಪಡೆ (IAF) ತನಗೆ ೧೨೬ ಮೀಡಿಯಂ ಮಲ್ಟಿ ರೋಲ್ ಕಂಬ್ಯಾಟ್ ಯುದ್ಧ ವಿಮಾನಗಳ ಅವಶ್ಯಕತೆಯಿದೆ ಎನ್ನುವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದಾಗ. ಸಾಧಾರಣವಾಗಿ IAF ಬಳಿ ಕಡಿಮೆಯೆಂದರೂ ೪೫ ಸ್ಕ್ವಾಡ್ರನ್ಸ್ ನಷ್ಟು ಯುದ್ಧವಿಮಾನಗಳು ಇರಬೇಕು ಅಥವಾ ಕನಿಷ್ಟವೆಂದರೂ ೩೯ಸ್ಕ್ವಾಡ್ರನ್ಸ್ ನಷ್ಟು ಇರಬೇಕು ಎನ್ನುವ ನಿಯಮವಿದೆ.ನಮ್ಮ ಬಳಿಯಿದ್ದ ಮಿಗ್ ೨೧ ಮತ್ತು ಮಿಗ್ ೨೭ರ ಜೀವಿತಾವಧಿಗಳು ಮುಗಿಯುತ್ತ ಬಂದಿದ್ದವು ಮೇಲಾಗಿ,ಆ ಯುದ್ಧ ವಿಮಾನಗಳ ಮಿತಿಯನ್ನು ಕಾರ್ಗಿಲ್ ಯುದ್ಧ ಮನಗಾಣಿಸಿತ್ತು ಕೂಡ. ಈ ಹಿನ್ನೆಲೆಯಲ್ಲಿ ಇಂತಹದ್ದೊಂದು ಬೇಡಿಕೆ IAF ನಿಂದ ಬಂದಿತ್ತು. ೨೦೦೭ರಲ್ಲಿ ಈ ಕುರಿತು RFP (request for proposals) ಸಲ್ಲಿಸಿತ್ತು. ೬ ಶಸ್ತ್ರಾಸ್ತ್ರ ತಯಾರಿಕಾ ಕಂಪೆನಿಗಳು ಬಿಡ್ ಸಲ್ಲಿಸಿದ್ದವು. ತೀವ್ರತರನಾದ ಪರೀಕ್ಷೆಗಳ ಮೂಲಕ ಅಂತಿಮವಾಗಿ ರಾಫೆಲ್ ಮತ್ತು ಯುರೋ ಫೈಟರ್ ಟೈಫೂನ್ ವಿಮಾನಗಳು ಅಂತಿಮ ಸುತ್ತಿನಲ್ಲಿ ಉಳಿದಿದ್ದವು.ಇದರಲ್ಲಿ ಅಂತಿಮವಾಗಿ ಆಯ್ಕೆಯಾಗಿದ್ದು ರಾಫೆಲ್.ಇಷ್ಟೆಲ್ಲಾ ಆಗುವಾಗ ೨೦೧೨ ಬಂದಿತ್ತು. ಸರಿ ಸುಮಾರು ಹನ್ನೊಂದು ವರ್ಷಗಳು ವರದಿ,ಪ್ರಪೋಸಲ್ ಹಾಗೂ ಯುದ್ಧ ವಿಮಾನದ ಆಯ್ಕೆಯಲ್ಲಿಯೇ ಕಳೆದು ಹೋಗಿತ್ತು. ಹಾಗೂ ಹೀಗೂ ರಾಫೆಲ್ ಖರೀದಿಯ ಕುರಿತ ವ್ಯಾವಹಾರಿಕ ಚರ್ಚೆಗಳು ಶುರುವಾಗಿದ್ದು ೩೧ ಜನವರಿ ೨೦೧೨ ರ ನಂತರ.
ಕಾರ್ಗಿಲ್ ವಿಜಯೋತ್ಸವ ಕಲಿಸಿದ ಪಾಠಗಳು
– ಅಜಿತ್ ಶೆಟ್ಟಿ ಹೆರಂಜೆ
ಇಂದು ಕಾರ್ಗಿಲ್ ವಿಜಯ ದಿವಸದ ವರ್ಷಾಚರಣೆಯನ್ನು ನಾವು ದೇಶದಾದ್ಯಂತ ಮಾಡುತ್ತಿದ್ದೇವೆ. 1999ಮೇ ತಿಂಗಳಲ್ಲಿ ಪ್ರಾರಂಭವಾದ ಈ ಯುದ್ಧ ಸುಮಾರು 3 ತಿಂಗಳುಗಳ ಕಾಲ ನಡದು 27 ನೆ ಜುಲೈ 1999 ಕ್ಕೆ ಮುಕ್ತಾಯಗೊಂಡಿತು. ಈ ಭೀಷಣ ಯುದ್ಧದಲ್ಲಿ ಭಾರತ ಒಟ್ಟು ತನ್ನ 724 ವೀರ ಸೈನಿಕರನ್ನು ಕಳೆದುಕೊಂಡಿತು. ಈ ಯುದ್ಧಕ್ಕೆ ಪ್ರತಿ ದಿನ ಸರ್ಕಾರಕ್ಕೆ 10 ರಿಂದ 15 ಕೋಟಿಯಷ್ಟು ವೆಚ್ಚವಾಗಿತ್ತು. ಹಾಗಿದ್ದಾಗ ಈ ಯುದ್ಧಕ್ಕೆ ಸರ್ಕಾರ ಖರ್ಚು ಮಾಡಿದ ಒಟ್ಟು ವೆಚ್ಚ ನೀವೇ ಅಂದಾಜಿಸಿ. ಈ ಯುದ್ಧ ನಮಗೆ ಕಲಿಸಿದ ಪಾಠ ಅನೇಕ. ಅದರಲ್ಲೂ 21ನೆ ಶತಮಾನದ ಹೊಸ್ತಿಲಿನಲ್ಲಿ ನಡೆದ ಈ ಯುದ್ಧ, ಯಾವುದೇ ಯುದ್ಧವನ್ನು ಗೆಲ್ಲಲು ಕೇವಲ ಸೈನ್ಯ ಶಕ್ತಿ ಅಷ್ಟೇ ಅಲ್ಲ ಅತ್ಯಾಧುನಿಕ ತಂತ್ರಜ್ಞಾನವೂ ಅತ್ಯಂತ ಆವಶ್ಯಕ ಎನ್ನುವ ಪಾಠವನ್ನು ನಮ್ಮ ದೇಶ ರಾಜಕೀಯ ನಾಯಕರಿಗೆ ಕನ್ನಡಿ ತೋರಿಸಿ ಕೆನ್ನೆಗೆ ಬಾರಿಸಿ ಹೇಳಿತು.ಕಾರ್ಗಿಲ್ ಯುದ್ಧ ನಮಗೆ ಕಲಿಸಿದ ಮತ್ತು ನಾವು ಅದರಿಂದ ಕಲಿತ ಪಾಠವೇನು.? ಬನ್ನಿ ತಿಳಿಯೋಣ.
ಸಾಮಾನ್ಯವಾಗಿ ಯುದ್ಧವನ್ನು ಗೆಲ್ಲಬೇಕಾದರೆ ವೈರಿ ಪಡೆಯನ್ನು ಕಟ್ಟಿ ಹಾಕಿ ಅವರ ಬಗ್ಗೆ ಇಂಚಿಂಚು ಮಾಹಿತಿ ಕಲೆ ಹಾಕಿದಮೇಲೆ, ವೈರಿಗಳ ವಿರುದ್ಧ ಯಾವ ರೂಪದ ಕಾರ್ಯಾಚರಣೆ ಮಾಡಬೇಕು, ಅದಕ್ಕೆ ಬೇಕಾಗಿರುವ ಸೈನ್ಯದ ಸಂಖ್ಯೆ ಅವರಿಗೆ ಬೇಕಾದ ಶಸ್ತ್ರಾಸ್ತ್ರಗಳು ಇತ್ಯಾದಿಗಳನ್ನು ನಿರ್ಧರಿಸಿದಮೇಲಷ್ಟೇ ಯುದ್ಧ ತಂತ್ರ ರೂಪಿಸುವುದು. ದುರಾದೃಷ್ಟವಶಾತ್ ಕಾರ್ಗಿಲ್ ಯುದ್ಧ ಆರಂಭವಾಗಿ ಅದನ್ನು ಬಹುತೇಕ ಮುಗಿಸುವ ತನಕ ನಮಗೆ ನಿಖರವಾಗಿ ಶತ್ರುಗಳು ಯಾರು ಅವರು ನಿಜವಾಗಿಯೂ ಪಾಕಿಸ್ತಾನ ಹೇಳಿದಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ಉಗ್ರಾವಾದಿಗಳೋ ಅಥವಾ ಪಾಕಿಸ್ತಾನದ ಸೈನಿಕರೋ ಅನ್ನುವುದು ಮತ್ತು ಈ ವೈರಿ ಪಡೆಯ ಸಂಖ್ಯೆ ಎಷ್ಟು ಇವರು ಅಡಗಿರುವ ಆಯಕಟ್ಟಿನ ಸ್ಥಳಗಳು ಯಾವುದು, ಅವರಲ್ಲಿ ಎಷ್ಟು ಮದ್ದು ಗುಂಡುಗಳ ದಾಸ್ತಾನುಗಳಿವೆ. ಅವರಲ್ಲಿ ಇರೋ ಶಸ್ತ್ರಾಸ್ತ್ರಗಳ ಬಗ್ಗೆ ಯಾವುದೆ ಸ್ಪಷ್ಟ ಮಾಹಿತಿಗಳಿಲ್ಲದೆ ಕೇವಲ ಒಂದು ಅಂದಾಜಿನ ಮೆಲೆ ಯುದ್ದ ಮಾಡಿದ್ದೆವು. ಇನ್ನೊಂದು ಅರ್ಥದಲ್ಲಿ ಹೇಳುವುದಾದರೆ ಕುರುಡ ಆನೆಯನ್ನು ವರ್ಣಿಸಿದಂತೆ, ನಮಗೆ ಅಂದು ಕಾರ್ಗಿಲ್ ಒಳಗೆ ನುಸುಳಿ ಬಂದ ಪಾಕಿಸ್ತಾನದ ನುಸುಳುಕೋರರ ಬಗ್ಗೆ ಇದ್ದ ಮಾಹಿತಿ.
ಮೇ ೩, ೧೯೯೯ ರಂದು ತಾಂಶಿ ನಾಮ್ ಗ್ಯಾಲ್ ಎನ್ನುವ ಸ್ಥಳೀಯ ಕುರುಬ, ಬಂಜೂ ಟಾಪ್ ನಲ್ಲಿ ಕೆಲವು ಉಗ್ರರ ಚಟುವಟಿಕೆ ಬಗ್ಗೆ ಮಾಹಿತಿ ಕೊಟ್ಟ ನಂತರ ಯುದ್ಧ ಶುರುವಾಯಿತು. ಕಾರ್ಗಿಲ್ ಯುದ್ಧ ತನ್ನ ಉಚ್ಛ್ರಾಯ ಸ್ಥಿತಿಯಲ್ಲಿದ್ದ ಸಮಯ ಭಾರತೀಯ ಸೈನ್ಯ ಸುಮಾರು ೬೦%ದಷ್ಟು ಯುದ್ಧವನ್ನು ಪೂರೈಸಿದ ಸಮಯ. ಅಂತಹ ಸಂದರ್ಭದಲ್ಲಿ ಭಾರತೀಯ ಸೈನ್ಯದ ಓರ್ವ ಅಧಿಕಾರಿ ಕಾರ್ಗಿಲ್ ಪರ್ವತ ಶ್ರೇಣಿಯ ಉಗ್ರರ ಗುಂಡಿಗೆ ಹುತಾತ್ಮನಾಗುವ ಮುಂಚೆ ತಮ್ಮ ಮೇಲಧಿಕಾರಿಗೆ ಕಾಗದ ಬರೆದು ಹೇಳುತ್ತಾ, “ನಾವು ಯಾರೊಡನೆ ಯುದ್ಧ ಮಾಡುತ್ತಿದ್ದೇವೆ ಎನ್ನುವುದೇ ನಮಗೆ ಗೊತ್ತಿಲ್ಲ. ಇದು ನಮ್ಮನ್ನ ಪ್ರಪಾತದತ್ತ ಕೊಂಡೊಯ್ಯುಯುತ್ತಿದೆ”.. ಎಂದು ಹೇಳಿದ್ದರು.ಇದು ಕಾರ್ಗಿಲ್ ಯುದ್ಧದಲ್ಲಿ ಸೈನ್ಯಕ್ಕೆ ಸರ್ಕಾರಕ್ಕೆ ಇದ್ದ ಕ್ಲಾರಿಟಿ.ಇದೇ ಕಾರಣಕ್ಕೆ ನಾವು ಕ್ಯಾಪ್ಟನ್ ಸೌರಬ್ ಕಾಲಿಯ, ಕ್ಯಾಪ್ಟನ್ ವಿಕ್ರಮ್ ಭಾತ್ರ ಕ್ಯಾಪ್ಟನ್ ಅಹುಜಾ ಮುಂತಾದವರು ಸೇರಿದಂತೆ ಸುಮಾರು 724 ಮಂದಿ ಸೈನಿಕರನ್ನು ಕಳೆದುಕೊಳ್ಳಬೇಕಾಯಿತು. ಕ್ಯಾಪ್ಟನ್ ನಚಿಕೆತ್ ಪಾಕಿಸ್ತಾನದಲ್ಲಿ ಯುದ್ಧ ಕೈದಿಯಾಗಿ ಪಡಬಾರದ ಕಷ್ಟ ಸಹಿಸಬೇಕಾಗಿ ಬಂತು. ಇದು ಅಂದಿನ ಸರ್ಕಾರ ಮತ್ತು ಸೈನ್ಯದ ಕಾರ್ಯವಿಮುಖತೆ ಯಿಂದ ಆದ ಘಟನೆಯಲ್ಲ. ಬದಲಾಗಿ ಹಿಂದಿನ ಸರ್ಕಾರಗಳ ಅವರು ಆಡಳಿತದ ಸಮಯದಲ್ಲಿ ಅಂದಿನ ಯದ್ದಗಳು ಕಲಿಸಿದ ಪಾಠವನ್ನು ಕಲಿಯದೆ,ಕರ್ತವ್ಯ ವಿಮುಖರಾಗಿದ್ದು ಕಾರಣ.ಅಂದು ನಮ್ಮಲ್ಲಿ ತಂತ್ರಜ್ಞಾನದ ಮುಖಾಂತರ ವೈರಿಪಡೆಯ ಗತಿವಿಧಿ,ಸಂಖ್ಯೆ ಮತ್ತು ಅವರು ಹೊಂದಿರುವ ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿ ತಿಳಿಯುವ,ಗುಪ್ತಚಾರಿಕೆ ಮಾಡುವ ಯಾವುದೇ ವ್ಯವಸ್ಥೆ, ಸಾಧನ ಸಲಕರಣೆಗಳು ಇರಲಿಲ್ಲ.ಇಂತಹಾ ಉಪಯುಕ್ತ ಮಾಹಿತಿ ಕೊಡುವ ಬೇಹುಗಾರಿಕ ಉಪಗ್ರಹಗಳು ಇರಲಿಲ್ಲ..!! ಕಾರ್ಗಿಲ್ ಯುದ್ಧದಲ್ಲಿ ನಾವು ಬಹುತೇಕ ಸೈನಿಕರನ್ನು ಪಾಕಿಸ್ತಾನದ ಸೈನ್ಯದ ವಿರುದ್ದ ನೇರ ಯದ್ದದಲ್ಲಿ ಕಳೆದುಕೊಂಡದ್ದಲ್ಲ. ಬದಲಿಗೆ ವೈರಿಗಳ ಬಗ್ಗೆ ಮಾಹಿತಿ ಕಲೆಹಾಕುವ ಸಂದರ್ಭದಲ್ಲಿ ಕಳೆದುಕೊಂಡದ್ದು.ಈ ರೀತಿ ಇಪ್ಪತ್ತೊಂದನೇ ಶತಮಾನದಲ್ಲಿ ಮಾಹಿತಿ ತಂತ್ರಜ್ಞಾನ ಎಷ್ಟು ಅವಶ್ಯಕ ಎನ್ನುವುದು ಕಾರ್ಗಿಲ್ ಯದ್ದ ಕಲಿಸಿದ ಮೊತ್ತಮೊದಲ ಪಾಠ..!!




