ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

5
ಏಪ್ರಿಲ್

ಗುಂಡು ಬಿಡದ ಬಂದೂಕುಗಳ ನಡುವೆ!

– ಸಂತೋಷ್ ಆಚಾರ್ಯ

೧೯೫೯ರಲ್ಲಿ ಜನರಲ್ ತಿಮ್ಮಯ್ಯ ಭಾರತ ಚೀನಾ ಯುದ್ಧದ ಸಾಧ್ಯತೆ ಮತ್ತು ಅದಕ್ಕೆ ಬೇಕಾದ ತಯಾರಿಯನ್ನು ಮಾಡಲು ಒಪ್ಪಿಗೆ ಕೇಳಿದಾಗ ಆಗಿನ ರಕ್ಷಣಾ ಮಂತ್ರಿಯಾಗಿದ್ದ ಕೃಷ್ಣ ಮೆನನ್ ಅದನ್ನು ನಿರಾಕರಿಸಿದ್ದರು. ಇದರಿಂದ ಕುಪಿತಗೊಂಡ ಜನರಲ್ ರಾಜೀನಾಮೆಯನ್ನು ಎಸೆದಿದ್ದರು. ಜನರಿಂದ ಸರ್ಕಾರ ಎನ್ನುವ ಅರ್ಥದ ಪ್ರಜಾಪ್ರಭುತ್ವ ಶುರುವಾದ ಹೊತ್ತಲ್ಲೇ ಜನರು ಬದಲಿಸಬಯಸುವ ಸರ್ಕಾರದ ನೀತಿಗಳನ್ನು ಬದಲಿಸುವ ಅನುಮತಿ ಆಗಲೇ ಇರಲಿಲ್ಲ. ನೆಹರೂ ರಾಜೀನಾಮೆಗೆ ಒಪ್ಪದೇ ಅವರನ್ನು ಅವರ ಅವಧಿ ಮುಗಿಯುವ ತನಕ(೧೯೬೧) ಇಟ್ಟುಕೊಂಡಿದ್ದು ಮತ್ತು ಭಾರತ ಯುದ್ಧದಲ್ಲಿ(೧೯೬೨) ಹೀನಾಯವಾಗಿ ಸೋತದ್ದು ಈಗ ಕೇವಲ ಇತಿಹಾಸ! ನೆಹರೂ ಚಾಣಾಕ್ಷತನದಿಂದ ವರ್ತಿಸಿದ್ದರೆ ಯುದ್ಧವನ್ನು ತಪ್ಪಿಸಬಹುದಿತ್ತು ಎಂದು ಈಗಲೂ ಎಷ್ಟೋ ಜನ ಹೇಳುತ್ತಾರೆ. ತನ್ನ ತಂತ್ರವನ್ನು ಒಪ್ಪಲಿಲ್ಲವೆಂದು ರಾಜೀನಾಮೆ ಎಸೆದು ಸರ್ಕಾರದಿಂದ ದೂರ ಸರಿಯುವುದಕ್ಕೂ ತಾನು ಮಾಡಿದ್ದು ಸರಿ ಎಂದು ಅದಕ್ಕಾಗಿ ಸರ್ಕಾರಕ್ಕೆ ಕೇರೇ ಎನ್ನದೆ ಅದನ್ನು ಕೋರ್ಟಿಗೆಳೆಯುವುದಕ್ಕೂ ಎಷ್ಟು ವ್ಯತ್ಯಾಸಗಳನ್ನು ನಾವು ಗುರುತಿಸಬಹುದು?
ತನ್ನ ಕಾರ್ಯಾವಧಿಯ ಕೊನೆಯ ವರ್ಷದಲ್ಲಿ ಇಂತಹಾ ಅಗ್ನಿಪರೀಕ್ಷೆ ಜನರಲ್ ವಿ.ಕೆ ಸಿಂಗ್‍ಗೆ ಬೇಕಿತ್ತೇ ಎಂದು ಸಾಮಾನ್ಯವಾಗಿ ಅನಿಸುವುದು ಸಹಜ. ಆದರೆ ಸ್ವಲ್ಪವೂ ಕ್ರಮಬದ್ಧತೆಯಿಂದ ನಿರ್ವಹಿಸದ ಸರ್ಕಾರಿ ಕಚೇರಿಗಳಿಗೆ ಇದು ಮುಖದ ಮೇಲೆ ಹೊಡೆದ ಕಪಾಳಮೋಕ್ಷ. ರಕ್ಷಣಾ ಮಂತ್ರಾಲಯದ ಮುಂದೆ ಭೂ ಸೇನೆಯ ಸಮಸ್ಯೆಗಳು ಗುಡ್ಡಗಟ್ಟುತ್ತಿವೆ. ಜನರಲ್ ವಯಸ್ಸಿನ ಸಮಸ್ಯೆಯಿಂದ ಶುರುವಾಗಿ ಲಂಚದ ಕೇಸು, ಟ್ರಕ್ಕುಗಳಲ್ಲಿ ನಡೆದ ಭ್ರಷ್ಟಾಚಾರ, ಲೀಕಾದ ಪತ್ರ ಹೀಗೆ ವಿ.ಕೆ ಸಿಂಗ್ ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸುತ್ತಿದ್ದಾರೆ. ಈ ನಡುವೆ ತಮ್ಮ ಸ್ವಾರ್ಥಕ್ಕಾಗಿ ತಾವೇ ಪತ್ರವನ್ನು ಲೀಕ್ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಇಳಿ ವಯಸ್ಸಿನ ಮಾನಸಿಕ ಸ್ಥಿತಿಗಳನ್ನು ನೋಡುವುದಾದರೆ ಅಲ್ಲಗಳೆಯಬಹುದಾದ ವಿಚಾರವೇನೂ ಅಲ್ಲ. ಆದರೂ ಮೊದಲು ಕಮಾಂಡೋ ಆಗಿದ್ದ ಜನರಲ್ ಹೀಗೆ ಮಾಡಬಹುದೇ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ವಿ.ಕೆ ಸಿಂಗ್ ಒಬ್ಬ ಹೋರಾಟಗಾರ. ನೇರವಾಗಿ ವಿಷಯಗಳನ್ನು ನಿಭಾಯಿಸುವ ನಿಷ್ಠುರ ವ್ಯಕ್ತಿ. ಅವರ ಮೇಲೆ ಆಪಾದನೆ ಹೊರಿಸುವ ಮೊದಲು ಮನಸ್ಸು ಕೂಡ ಎಲ್ಲೋ ಒಪ್ಪಲು ನಿರಾಕರಿಸುತ್ತದೆ.
ಮತ್ತಷ್ಟು ಓದು »

4
ಏಪ್ರಿಲ್

ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ

– ರಾಕೇಶ್ ಶೆಟ್ಟಿ

ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ  ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…

ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!

ಮತ್ತಷ್ಟು ಓದು »

2
ಏಪ್ರಿಲ್

ಬೆಳೆ ಬೆಳೆಸಿದರಷ್ಟೆ ನೆಲದ ಒಡೆತನ

–  ಟಿ.ಎಂ.ಕೃಷ್ಣ

ಆಹಾರ ಧಾನ್ಯಗಳ ಬೆಲೆ ಒಂದೇ ಸಮನೆ ಗಗನಕ್ಕೇರುತ್ತಲೇ ಇದೆ. ಜನಸಾಮಾನ್ಯರೇನು- ಅಷ್ಟೋ ಇಷ್ಟೋ ಸ್ಥಿತಿವಂತರೇ ಜೀವನ ನಿರ್ವಹಿಸಲು ಸಾಧ್ಯವಾಗದಂತಾಗಿದೆ. ಕೆಳ, ಮದ್ಯಮ ವರ್ಗದವರು ತರಗೆಲೆಗಳಂತೆ ತತ್ತರಿಸತೊಡಗಿದ್ದಾರೆ. ಮುಂದುವರಿದ(?) ಮನುಷ್ಯನ ಅಗತ್ಯಗಳು ಅಗಣಿತವಾಗಿರಬಹುದಾದರೂ, ಮೂಲಭೂತ ಅಗತ್ಯವಾದ ಅನ್ನಾಹಾರಗಳ ಲಭ್ಯತೆ ಕಠಿಣವಾದರೆ ಏನಿದ್ದರೂ, ಯಾವುದೇ ತಂತ್ರಜ್ಞಾನವಿದ್ದರೂ ಅವೆಲ್ಲಾ ಅಪ್ರಸ್ತುತವಾಗಿಬಿಡುತ್ತವೆ. (ಚಿನ್ನದ ಕತ್ತಿ ಇದೆಯೆಂದು ಕುತ್ತಿಗೆ ಕೊಯ್ದುಕೊಳ್ಳಲಾದೀತೆ?)

ಅಗತ್ಯವಸ್ತುಗಳು ಕೈಗೆಟುಕದಂತಾಗಿರುವ ಈ ಸಂದರ್ಭದಲ್ಲಿ ಸರ್ಕಾರದ ಕಡೆ ಕೈ ತೋರಿಸುವುದು ಅನಿವಾರ್ಯವಾದರೂ, ಆಯಕಟ್ಟಿನ ಜಾಗಕ್ಕೆ ಕೈತೋರಿಸದಿರುವುದು ನಮ್ಮಲ್ಲಿನ ಪ್ರಜ್ಞಾವಂತರ ಪ್ರಜ್ಞೆಯ ಅವನತಿಯನ್ನು ಸೂಚಿಸುತ್ತದೆ. ಕುರಿಗಳು ಹಳ್ಳಕ್ಕೆ ಬಿದ್ದಂತೆ ಪ್ರತಿಯೊಬ್ಬರೂ ಪ್ರಸ್ತಾಪಿಸುತ್ತಿರುವುದು ಮಳೆ ಅಭಾವ, ಬೆಳೆನಷ್ಟ, ವ್ಯಾಪಾರಿಗಳು ಸೃಷ್ಟಿಸುತ್ತಿರುವ ಕೃತಕ ಅಭಾವ, ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ, ಜನಸಂಖ್ಯೆಯ ಹೆಚ್ಚಳ ಇತ್ಯಾದಿ…ಈ ಎಲ್ಲ ಕಾರಣಗಳಿಗೆ ನಿದರ್ಶನಗಳಿದ್ದರೂ, ಅವೆಲ್ಲಾ ತಾತ್ಕಾಲಿಕ ಅವ್ಯವಸ್ಥೆಗಳೇ ಹೊರತು ಮೂಲಭೂತ ಸತ್ಯಗಳಲ್ಲವೇ ಅಲ್ಲ.

ಮತ್ತಷ್ಟು ಓದು »

2
ಏಪ್ರಿಲ್

ವಿವೇಕಾನಂದರ ವಾರಸುದಾರರು ಕೋಮುವಾದಿಗಳಲ್ಲ – ಪ್ರಗತಿಪರರು

– ಡಾ.ಭಾಸ್ಕರ್ ಮಯ್ಯ

ಆಧುನಿಕ ತತ್ವಶಾಸ್ತ್ರದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ. ವೇದಾಂತ ದರ್ಶನಕ್ಕೆ ನೂರಾರು ವ್ಯಾಖ್ಯಾನಗಳಿವೆ. ಆದರೆ ಅವುಗಳಲ್ಲಿ ಪ್ರಮುಖ ಸ್ಥಾನವಿರುವುದು `ಶಾಂಕರ ವೇದಾಂತ’ಕ್ಕೆ. ಆದರೆ, ಶಂಕರರು ವೇದಾಂತ ದರ್ಶನಕ್ಕೆ ವ್ಯಾಖ್ಯಾನ ಬರೆದಿರುವುದು ಭಾವವಾದೀ ದೃಷ್ಟಿಯಿಂದ ಶಂಕರರು ಭಾವವಾದದ ಮೇರು ಶಿಖರ ಎಂಬಲ್ಲಿ ಎರಡು ಮಾತಿಲ್ಲ. ಅವರಿಗೆ ಸರಿಗಟ್ಟುವ ಭಾವವಾಣಿ ದಾರ್ಶನಿಕರುಪಾಶ್ಚಾತ್ಯ ದರ್ಶನ ಶಾಸ್ತ್ರದಲ್ಲಿ ದೊರಕುವುದಿಲ್ಲ. ಆದರೆ, ವಿವೇಕಾನಂದರು ವೇದಾಂತಕ್ಕೆ ವ್ಯವಹಾರಿಕ ರೂಪವನ್ನು ಕೊಟ್ಟರು. ಈ ಬಗೆಯ ವ್ಯಾಖ್ಯಾನ ಕೂಡಾ ತತ್ವಶಾಸ್ತ್ರಕ್ಕೆ ನವನವೀನ.

ಅಗಾಧ ಪ್ರತಿಭೆ
1863ನೆಯ ಇಸವಿ ಜನವರಿ 12 ರಂದು ಕಲ್ಕತ್ತಾದ ಒಂದು ಕ್ಷತ್ರಿಯ ಕುಟುಂಬದಲ್ಲಿ ಜನಿಸಿದ ವಿವೇಕಾನಂದರು ಅಗಾಧ ಪ್ರತಿಭೆಯ ವ್ಯಕ್ತಿ. ಆ ಕಾಲದಲ್ಲಿಯೇ ಬಿ.ಎ. ಶಿಕ್ಷಣ ಮುಗಿಸಿದ ವಿವೇಕಾನಂದರು ( ಮೂಲ ಹೆಸರು ನರೇಂದ್ರನಾಥ) ವಿದ್ಯಾರ್ಥಿ ಜೀವನದಲ್ಲಿ ನಾಸ್ತಿಕರಾಗಿದ್ದರು. ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ಅವರ ಚಿಂತನಾ ಕ್ರಮವೇ ಬದಲಾಯಿತು.ರಾಮಕೃಷ್ಣರು ಮಹಾನ್ ಸಂತರಾಗಿದ್ದರೂ ಅನಕ್ಷರಸ್ತರು. ವಿವೇಕಾನಂದರು ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಯ ಪ್ರಖಾಂಡ ಪಂಡಿತರು. ರಾಮಕೃಷ್ಣ ಪರಮಹಂಸರು ಮತ್ತು ವಿವೇಕಾನಂದರು ಒಂದೇ ಜೀವನದ ಎರಡು ಮುಖಗಳು ಅಥವಾ ಒಂದೇ ಸತ್ಯದ ಎರಡು ರೂಪಗಳು. ಇನ್ನೊಂದು ಬಗೆಯಲ್ಲಿ ಹೇಳುವುದಾದರೆ ರಾಮಕೃಷ್ಣರು ಅನುಭೂತಿ  ಆದರೆ ವಿವೇಕಾನಂದರು ಅವರ ವ್ಯಾಖ್ಯಾನ ಅಭಿವ್ಯಕ್ತಿ.

ವಿವೇಕಾನಂದರು ಹಾರ್ಬರ್ತ್ ಸ್ಪೆನ್ಸರ್ ಹಾಗೂ ಜಾನ್ ಸ್ಟುವರ್ಟ್ರಮಿಲ್ ಅವರ ಪ್ರೇಮಿಯಾಗಿದ್ದರು. ಶೆಲಿ, ವರ್ಡ್ಸ್ವರ್ತ್ರ ದಾರ್ಶನಿಕತೆ, ಹೆಗಲ್ನ ವಸ್ತುನಿಷ್ಠ ಆದರ್ಶವಾದ ಹಾಗೂ ಫ್ರಾನ್ಸಿನ ರಾಜ್ಯಕ್ರಾಂತಿ ವಿವೇಕಾನಂದರನ್ನು ತೀವ್ರವಾಗಿ ಪ್ರಭಾವಿಸಿತ್ತು.
ವಿವೇಕಾನಂದರು ಕೇವಲ 39 ವರ್ಷಗಳ ಕಾಲ ಜೀವಿಸಿದ್ದರೂ ಅವರ ಸಂದೇಶ ಇವತ್ತಿನ ಕೋಮುವಾದಿ ರಾಜಕೀಯಕ್ಕೆ ಅತ್ಯಂತ ಪ್ರಬಲವಾದ ಶಸ್ತ್ರ. ರಾಮಮೋಹನ್ ರಾಯ್, ಕೇಶವ ಚಂದ್ರ ಸೇನ್, ದಯಾನಂದ ಸರಸ್ವತಿ, ರಾನಡೆ, ಅನಿಬೆಸೆಂಟ್ ಮತ್ತು ರಾಮಕೃಷ್ಣರು ಹದಮಾಡಿದ ನೆಲದಲ್ಲಿ ವಿವೇಕಾನಂದರು ಅಶ್ವತ್ಥದಂತೆ ಬೆಳೆದು ನಿಂತರು. ಇಂದು ಕೋಮುವಾದಿಗಳು ಆ ಅಶ್ವತ್ಥದ ರೆಂಬೆಕೊಂಬೆಗಳನ್ನು ಕಡಿದು ಯೂಪಸ್ಥಂಭ (ಬಲಿಸ್ಥಂಭ)ವನ್ನಾಗಿ ರೂಪಿಸುತ್ತಿದ್ದಾರೆ.

ಮತ್ತಷ್ಟು ಓದು »

19
ಮಾರ್ಚ್

ಸಂಸ್ಕೃತಿ ಸಂಕಥನ – 27 – ನಮಗೆ ನಾವೇ ಪರಕೀಯರು

-ರಮಾನಂದ ಐನಕೈ

1947 ಅಗಸ್ಟ್ 15ರಂದು ಭಾರತ ಪರಕೀಯರ ದಾಸ್ಯದಿಂದ ಮುಕ್ತವಾಯಿತು ಎಂದು ಭಾಷಣ ಬಿಗಿಯುತ್ತೇವೆ. ಇದು ನಿಜವೇ? ಕೇವಲ ಆಡಳಿತ ಮತ್ತು ಅಧಿಕಾರ ಹಸ್ತಾಂತರ ಮಾಡಿದಾಕ್ಷಣ ದಾಸ್ಯ ವಿಮೋಚನೆ ಆಯಿತು ಅಂತ ನಿರ್ಧರಿಸಿಬಿಡಬಹುದೇ? ವಸಾಹತು ಪ್ರಭಾವದಿಂದ ಮಲೀನವಾದ ಭಾರತೀಯ ಮನಸ್ಸುಗಳಿಗೆ ಮುಕ್ತಿ ಸಿಕ್ಕಿದೆಯೇ? ಒಂದೊಮ್ಮೆ ಸಿಗದಿದ್ದ ಪಕ್ಷದಲ್ಲಿ ಇದೂ ಒಂದು ರೀತಿಯ ಮಾನಸಿಕ ದಾಸ್ಯ ಅಲ್ಲವೇ? ಈ ಮಾಸಿಕ ಅವಲಂಬನೆಯಿಂದ ಹೊರ ಬರುವುದು ಹೇಗೆ?

ಮೊದಲು ಭಾರತದಲ್ಲಿ ಮುಸ್ಲಿಂ ವಸಾಹತುಶಾಹಿ ಆಡಳಿತ ನಡೆಯಿತು. ನಂತರ ಸುದೀರ್ಘ ಕಾಲ ಕ್ರಿಶ್ಚಿಯನ್ ವಸಾಹತುಶಾಹಿ ರಾಜ್ಯಭಾರ ನಡೆಯಿತು. ಇವರೆಲ್ಲರೂ ಸೇರಿ ಭಾರತೀಯ ಸಂಸ್ಕೃತಿಯ ಕುರಿತು ಬೇರೆಯದೇ ಆದ ಚಿತ್ರಣ ಕಟ್ಟಿಕೊಟ್ಟರು. ಭಾರತೀಯ ಚಿಂತಕರೂ ಕೂಡಾ ಅದನ್ನೇ ಪಠಿಸುತ್ತ ಬಂದರು. ಸದ್ಯ ಭಾರತವನ್ನು ಆಳುತ್ತಿರುವುದು ಇದೇ ವಸಾಹತುಶಾಹಿ ಪ್ರಜ್ಞೆ. ಈ ಕಾರಣಕ್ಕಾಗಿ ಭಾರತದಲ್ಲಿ ರಾಷ್ಟ್ರತತ್ವಗಳಿಗೂ ಜನಸಾಮಾನ್ಯರ ಅನುಭವಕ್ಕೂ ತಾಳೆಯಾಗಲಾರದು. ಅದರ ಫಲಿತಾಂಶಗಳೇ ಸಂಘರ್ಷಗಳು. ಆದ್ದರಿಂದ ನಿಜವಾದ ನಮ್ಮ ಸಂಸ್ಕೃತಿಯನ್ನು ಅರಿತು ಅದರ ಆಧಾರದ ಮೇಲೆ ನಮ್ಮ ದೇಶದ ಜನಜೀವನವನ್ನು ರೂಪಿಸುವ ತುತರ್ು ಇದೆ.

ಸಾವಿರಾರು ವರ್ಷಗಳಿಂದ ಬಾಳಿ ಬೆಳಗಿದ ಭಾರತೀಯ ಸಂಸ್ಕೃತಿ ಐರೋಪ್ಯರ ಆಗಮನದಿಂದಾಗಿ ತನ್ನ ಸ್ವರೂಪವನ್ನೇ ಬದಲಿಸಿಕೊಂಡದ್ದು ಈಗ ಇತಿಹಾಸ. ಭಾರತ ಐರೋಪ್ಯರಿಗೆ ಅರ್ಥವಾಗಲಿಲ್ಲ. ಇಲ್ಲಿನ ಸಂಸ್ಕೃತಿ ಅವರಿಗೆ ಒಗಟಾಯಿತು. ಅಷ್ಟರಲ್ಲಾಗಲೇ ಪ್ರತಿ ಸಂಸ್ಕೃತಿಗೆ ಇತಿಹಾಸ ಬರೆಯುವ ಕಲೆಯನ್ನು ಐರೋಪ್ಯರು ಕರಗತ ಮಾಡಿಕೊಂಡಿದ್ದರು. ಇತಿಹಾಸ ಮಾತ್ರ ಅವರಿಗೆ ಸತ್ಯ ದಾಖಲೆಯಾಗಿತ್ತು. ಏಕೆಂದರೆ ಸತ್ಯವೇದವಾದ ಬೈಬಲ್ಲೇ ಅವರಿಗೆ ನಿಜವಾದ ಇತಿಹಾಸ. ಭಾರತೀಯ ಇತಿಹಾಸವನ್ನು ಎಲ್ಲಿಂದ ಆರಂಭಿಸಬೇಕು? ಅವರಿಗಾದ ದೊಡ್ಡ ಸಮಸ್ಯೆ ಅದು. ಯಾವುದೇ ಭಾರತೀಯ ಪಂಡಿತರನ್ನು ಭಾರ ತೀಯ ಇತಿಹಾಸದ ಕುರಿತು ಕೇಳಿದರೆ ಅವರೆಲ್ಲ ಪುರಾಣದ ರೋಚಕ ಕಥೆಗಳನ್ನೇ ಹೇಳಿದರು. ಒಂದೇ ಕಥೆಯನ್ನು ಬೇರೆ ಬೇರೆ ಪಂಡಿತರು ಬೇರೆ ಬೇರೆ ರೀತಿಯಲ್ಲಿ ಹೇಳಿದರು. ಸಂಶಯ ಶುರುವಾಯಿತು. ಆಗ ಐರೋಪ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಭಾರತವನ್ನು ಗ್ರಹಿಸತೊಡಗಿದರು.

ಮತ್ತಷ್ಟು ಓದು »

15
ಮಾರ್ಚ್

ಜಗತ್ತಿನಾದ್ಯಂತ ಸಂಚಲನ ಸೃಷ್ಟಿಸಿದ ಅನಾನಿಮಸ್ ಹ್ಯಾಕರ್ ಗಳು ಭಾರತದಲ್ಲಿ ವಿಫಲರಾಗಿದ್ದೇಕೆ?

– ಆದೇಶ್ ಕುಮಾರ್

ಹೌದು ನನಗೆ ಇನ್ನೂ ನೆನೆಪಿದೆ. ಅದು ಅಣ್ಣಾ ಹಜಾರೆಯವರ ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುತಿದ್ದ ಕಾಲ. ಆಗ ತಾನೆ ಕೆಲವೊಂದು ದೇಶಗಳಲ್ಲಿ ಹ್ಯಾಕರ್ ಗಳು ಅನಾನಿಮಸ್ (ಅಜ್ಞಾತ) ಎಂಬ ಗುಂಪೊಂದನ್ನು ಕಟ್ಟಿಕೊಂಡು ಹಲವು ದೇಶಗಳ ಸರ್ಕಾರಿ ವೆಬ್ಸೈಟ್ ಗಳಿಗೆ ಲಗ್ಗೆ ಹಾಕಿ ಭ್ರಷ್ಟಾಚಾರವನ್ನು ಕೊನೆಗಾಣಿಸಿ ಎಂಬ ಪೋಸ್ಟ್ ಗಳನ್ನು ಹಾಕುತ್ತಿದ್ದರು.
ಇತ್ತ ನಮ್ಮ ದೇಶದಲ್ಲೂ ಕೂಡ ಭ್ರಷ್ಟಾಚಾರದ ಹೋರಾಟ ತಾರಕಕ್ಕೇರುತ್ತಿದುದ್ದನ್ನು ಕಂಡು ಅದಕ್ಕೆ ಜೊತೆ ನೀಡಲು ಆ ಗುಂಪು ಭಾರತದಲ್ಲೂ ಉದಯಿಸಿತು. ಮೊದಲಿಗೆ ಅದು ತನ್ನ ಕಾರ್ಯಚರಣೆಯನ್ನು ನಮ್ಮ ದೇಶದ ಒಂದು ಸರ್ಕಾರಿ ವೆಬ್ಸೈಟ್ ಅನ್ನು ಹ್ಯಾಕ್ ಮಾಡುವುದರೊಂದಿಗೆ ಪ್ರಾರಂಬಿಸಿತು. ಅದು ಸಾಮಾನ್ಯ ಸರ್ಕಾರಿ ವೆಬ್ಸೈಟ್ ಗಳನ್ನು ಮಾತ್ರ ಹ್ಯಾಕ್ ಮಾಡಿದ್ದರೆ ಅದು ಇನ್ನೂ ಇಲ್ಲೇ ಇರುತಿತ್ತೇನೊ. ಆದರೆ ಅದು ಭಾರತದ ಯಾವೊಬ್ಬ ಪ್ರಜೆಯು ಇಷ್ಟಪಡದ ಕೆಲಸಕ್ಕೆ ಕೈಹಾಕಿತು. ಅಂದರೆ ನಮ್ಮೆಲ್ಲರ ಹೆಮ್ಮೆಯ ಭಾರತ ಸೇನೆಯ ವೆಬ್ಸೈಟ್ ಅನ್ನು ಹ್ಯಾಕ್ ಮಾಡಿತು.(ಅದು ಹ್ಯಾಕ್ ಮಾಡಿತೊ ಅಥವಾ ವೆಬ್ಸೈಟ್ ಅನ್ನು ಡೌನ್ ಮಾಡಿತೊ ಇದುವರೆಗೂ ತಿಳಿದಿಲ್ಲ).

ಇದನ್ನು ಯಾವೊಬ್ಬ ಭಾರತೀಯನು ಸಹಿಸಿಕೊಳ್ಳುವ ಸ್ಥಿತಿಯಲ್ಲಿರಲಿಲ್ಲ. ಅನಾನಿಮಸ್ ಗುಂಪು ನಡೆಸುತಿದ್ದ ಫೇಸ್ ಬುಕ್ ಮತ್ತು ಟ್ವಿಟ್ಟರ್ ಗಳಲ್ಲಿ ಅದರ ವಿರುದ್ಡ ಟೀಕೆಗಳ ಸುರಿಮಳೆಯಾಯಿತು. ಕೆಲವೊಂದು ಕಾಮೆಂಟುಗಳು ಮತ್ತು ಟ್ವೇಟುಗಳು ಹೀಗಿದ್ದವು:
ಮತ್ತಷ್ಟು ಓದು »

14
ಮಾರ್ಚ್

ಯಹ್ ದಿಲ್ಲಿ ಹೇ ದಿಲ್‌ವಾಲೊಂಕಿ” ಎಂಬುದನ್ನು ಆತ ನನಗೆ ತೋರಿಸಿಕೊಟ್ಟಿದ್ದ

ರಾಕೇಶ್ ಎನ್ ಎಸ್

ಸುಪ್ರೀಂ ಕೋರ್ಟ್‌ನ ಮುಂದೆ ಇಂದು ನಮ್ಮ ರಾಜ್ಯಕ್ಕೆ ಸಂಬಂಧಪಟ್ಟ ಯಾವುದೇ ಪ್ರಕರಣಗಳು ಇಲ್ಲ ಮತ್ತು ಎಂದು ಖಾತ್ರಿ ಮಾಡಿಕೊಂಡ ಬಳಿಕ ಕಚೇರಿಗೆ ಆರಾಮವಾಗಿಯೇ ಹೊರಟಿದ್ದೆ. ಅಪಾರ್ಟ್‌ಮೆಂಟ್‌ನಿಂದ ಹೊರ ಬರುತ್ತಲೆ ರಿಕ್ಷಾವೊಂದು ಬಂತು. ಅದನ್ನು ಏರಿ ಆತ್ಮೀಯರಿಗೆ ಮೆಸೇಜ್ ಕಳಿಸುವ ನನ್ನ ನಿತ್ಯ ಪೂಜೆಯನ್ನು ಶುರು ಮಾಡಿಕೊಂಡೆ. ನಮ್ಮಲ್ಲಿಂದ ಕೌಶಂಬಿ ಮೆಟ್ರೋ ಸ್ಟೇಶನ್‌ಗೆ ೧೫ ನಿಮಿಷಗಳ ಪ್ರಯಾಣ (ಟ್ರಾಫಿಕ್ ಇಲ್ಲದೇ ಹೋದರೆ). ಮೆಟ್ರೋ ಸ್ಟೇಶನ್‌ನ ಬಳಿ ರಿಕ್ಷಾ ಇಳಿದು ಹಣ ಕೊಡೋಣ ಎಂದು ಕಿಸೆಗೆ ಕೈ ಹಾಕಿದರೆ ಪರ್ಸ್ ಇಲ್ಲ. ತಕ್ಷಣವೇ ಶಾಕ್ ಹೊಡೆದಂತೆ ಆಯಿತು. ಇದೀಗ ಕೆಲಸ ಕೆಟ್ಟಿತ್ತು ಅಂತ ಅಂದು ಕೊಂಡರು ವಿಚಲಿತನಾಗಲಿಲ್ಲ. ಪರ್ಸ್ ಮನೆಯಲ್ಲೆ ಬಿಟ್ಟಿದ್ದೇನಾ ಅಥವಾ ಪಿಕ್ ಪಾಕೆಟ್ ಅಯಿತಾ ಅಥವಾ ಎಲ್ಲದರೂ ಬಿತ್ತಾ ಎಂಬ ಗೊಂದಲ ತಲೆಯಲ್ಲಿ ಫ್ಯಾನ್‌ನಂತೆ ತಿರುಗುತ್ತಿತ್ತು. ಹಾಗಂತ ಮೊದಲ ಕಾರಣವನ್ನು ಈ ರಿಕ್ಷಾ ಡ್ರೈವರ್ ಜೊತೆ ಹೇಳುವ ಹಾಗಿಲ್ಲ. ಹೇಳಿದ್ದೆ ಆದರೆ ಅವನು ಯಾವ ಭಾಷೆ ಪ್ರಯೋಗ ಮಾಡುತ್ತಾನೆ ಅನ್ನುವುದು ತಕ್ಷಣವೆ ಫ್ಲಾಶ್ ಆಗಿ ಹೋಗಿತ್ತು. ಇನ್ನು ಯಾರಾದರೂ ಪಿಕ್ ಪಾಕೆಟ್ ಮಾಡಿದ್ದಾರೆ ಎಂದು ಸುಮ್ಮನೆ ಹೇಳುವುದು ಸರಿಯಲ್ಲ. ಏನು ಮಾಡುವುದು ಅಂದು ಕೊಂಡು ತಕ್ಷಣವೇ ಪರ್ಸ್ ಹುಡುಕುವ ರೀತಿ ಮಾಡಿದೆ. ಪರ್ಸ್ ಸಿಗಲೇ ಇಲ್ಲ. ನಾನು ಸಾಮಾನ್ಯವಾಗಿ ನನ್ನ ಪ್ಯಾಂಟ್‌ನ ಮುಂದಿನ ಕಿಸೆಯಲ್ಲಿ ನೂರಿನ್ನೂರು ರೂಪಾಯಿ ಇಟ್ಟುಕೊಂಡಿರುತ್ತೇನೆ. ಆದರೆ ಇಂದು ಆ ರೀತಿಯೂ ಮಾಡಿಲ್ಲ ಎಂಬುದನ್ನು ಕಿಸೆಗೆ ಕೈ ಹಾಕಿ ಖಾತ್ರಿ ಪಡಿಸಿಕೊಂಡೆ. ಸರಿ, ರಿಕ್ಷಾದವನಿಗೆ ನನ್ನ ಸ್ಥಿತಿ ಅರ್ಥವಾಯಿತು. ಅವನು ಏನೂ ಹೇಳಲಿಲ್ಲ. ನನ್ನ ಪುಣ್ಯ. ನನ್ನನ್ನು ಅಲ್ಲೇ ಬಿಟ್ಟು ಮುಂದೆ ಹೋದ. ನನ್ನ ಪ್ರಕಾರ ಅವನು ಮಾಡಿದ ದೊಡ್ಡ ಪುಣ್ಯದ ಕೆಲಸ ಅದೇ. ಮತ್ತಷ್ಟು ಓದು »

12
ಮಾರ್ಚ್

”ಇಂದು’ ಆಕೆ ಬದುಕಿದ್ದರೆ!?’

– ರಾಕೇಶ್ ಶೆಟ್ಟಿ

(ವಾಜಪೇಯಿಯವರ ಬಗ್ಗೆ ನರೇಂದ್ರ ಅವರು ಬರೆದ ಲೇಖನದಲ್ಲಿ ’ಆಪರೇಶನ್ ಬ್ಲೂ ಸ್ಟಾರ್ ಅನ್ನು ಎಳೆದು ತಂದಿದ್ದು ನೋಡಿ ಈ ಹಿಂದೆ ನಾನು ದೇಶ ಕಂಡ ಖಡಕ್ ಪ್ರಧಾನಿಯವರ ಬಗ್ಗೆ ಬರೆದ ಲೇಖನ ನೆನಪಾಯಿತು.ವಾಜಪೇಯಿಯಂತವರನ್ನ ಹೊಗಳಲು ಬೇರೆ ಇನ್ಯಾರನ್ನು ತೆಗಳಬೇಕಾದ ಅವಶ್ಯಕತೆಯೇನಿಲ್ಲ)

ಅದು ೧೯೭೭ – ೭೮ರ ಇಸವಿಯಿದ್ದಿರಬೇಕು, ಬಿಹಾರದ ಬೆಲ್ಚಿ ಎಂಬ ಗ್ರಾಮದಲ್ಲಿ ಮೇಲ್ಜಾತಿಯವರ ಕ್ರೌರ್ಯಕ್ಕೆ  ಸಿಕ್ಕಿ ದಲಿತರ ಮಾರಣ ಹೋಮವಾಗಿತ್ತು. ಘಟನೆಯಲ್ಲಿ ನೊಂದವರಿಗೆ ಸಾಂತ್ವಾನ ಹೇಳಲು (ರಾಜಕೀಯ ಉದ್ದೇಶವು ಇತ್ತು, ಅದು ಬೇರೆ ಮಾತು ಬಿಡಿ) ಅದೇ ದಿನ ನಡು ರಾತ್ರಿಯಲ್ಲಿ ಏಕಾಂಗಿಯಾಗಿ ದಿಲ್ಲಿಯಿಂದ ಹೊರಟು,ಜೀಪಿನಿಂದ ಪ್ರಯಾಣ ಶುರು ಮಾಡಿ,ನಂತರ ಜೀಪು ಮುಂದೆ ಸಾಗದಿದ್ದಾಗ ರೈತನ ಟ್ರಾಕ್ಟರ್ ನಲ್ಲಿ ಮುಂದೆ ಸಾಗಿ, ನಡುವಲ್ಲಿ ನದಿ ಬಂದಾಗ ಆನೆಯೇರಿ ಘಟನೆ ನಡೆದ ಸ್ಥಳಕ್ಕೆ ಒಬ್ಬಂಟಿಯಾಗಿ ಬಂದ ಅವರನ್ನು ನೋಡಿದಾಗ ನೊಂದವರಿಗೆ ಸಾಕ್ಷಾತ್ ‘ತಾಯಿ’ಯನ್ನು ನೋಡಿದಂತೆ ಆಯ್ತು. ಆ ತಾಯಿ ‘ಇಂದಿರಾ ಗಾಂಧೀ’ ಅವರ ಕಣ್ಣೀರು ಒರೆಸಿದ್ದಳು.

೧೯೭೧ರ ಸಮಯದಲ್ಲಿ ಪಾಕಿಗಳು ಅವರ ಸಹೋದರರು ಎಂದೆ ಹೇಳಿಕೊಳ್ಳುವ ಬಾಂಗ್ಲಾದೇಶದವರ ಮೇಲೆ ದೌರ್ಜನ್ಯ ಮಾಡುತಿದ್ದಾಗ,ಸೈನ್ಯವನ್ನು ನುಗ್ಗಿಸಿ ಪಾಕಿಗಳಿಗೆ ಮರೆಯಲಾಗದ ಪಾಠವನ್ನೇ ಕಲಿಸಿದ್ದರು, ಆಗಿನ ವಿರೋಧ ಪಕ್ಷದ ನಾಯಕರಾಗಿದ್ದಂತಹ ‘ವಾಜಪೇಯಿ’ ಅವರೇ ಅವರನ್ನು ‘ದುರ್ಗಾ’ ಅಂತ ಕರೆದಿದ್ದರು.ಆ ಯುದ್ಧದಲ್ಲಿ ಇಂದಿರಾ ಗಾಂಧಿಯವರು ನಡೆದು ಕೊಂಡ ರೀತಿಯತ್ತಲ್ಲ, ಆ ಯುದ್ಧದಲ್ಲಿ ಅವರು ತೋರಿದ ಗಟ್ಟಿತನವನ್ನ ಮತ್ಯಾವ ಭಾರತದ ಪ್ರಧಾನಿಯೂ ತೋರಿಸಿಲ್ಲ ಬಿಡಿ.ಖುದ್ದು ಅವರಪ್ಪನನ್ನೇ  ಈ ವಿಷಯದಲ್ಲಿ ಅವರು ಮೀರಿಸಿದ್ದರು.
ಮತ್ತಷ್ಟು ಓದು »

12
ಮಾರ್ಚ್

ಸಂಸ್ಕೃತಿ ಸಂಕಥನ – 26 – ಭಾರತೀಯರ ನೈತಿಕ ಸ್ವರೂಪ

-ರಮಾನಂದ ಐನಕೈ

ನೈತಿಕತೆ ಅಂದರೆ ಏನು? ಜಗತ್ತಿನ ಎಲ್ಲಾ ಸಂಸ್ಕೃತಿಗಳ ನೈತಿಕ ಪ್ರಜ್ಞೆ ಒಂದೇ ತೆರನಾಗಿದೆಯೇ? ಪ್ರಸ್ತುತ ಭಾರತೀಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಇದು ಸ್ಪಷ್ಟವಾಗದಿದ್ದರೆ ನಾವು ನಮ್ಮ ಸಂಸ್ಕೃತಿಯನ್ನು ಅರಿತುಕೊಳ್ಳಲು ತೊಡಕಾಗುತ್ತದೆ.

ಯುರೋಪಿಯನ್ನರ ನೈತಿಕ ಪ್ರಜ್ಞೆಗೂ ಭಾರತೀಯರ ನೈತಿಕಪ್ರಜ್ಞೆಗೂ ಅಜಗಜಾಂತರ ವ್ಯತ್ಯಾಸವಿದೆ. ಪಾಶ್ಚಾತ್ಯರು ನೈತಿಕತೆಯನ್ನು ಗ್ರಹಿಸುವ ರೀತಿಯೇ ಬೇರೆ, ನಾವು ನಿರ್ಣಯಿಸುವ ರೀತಿಯೇ ಬೇರೆ. ಭಾರತೀಯ ಪುರಾಣಗಳು ನೈತಿಕತೆಯ ಬುನಾದಿ ಅನ್ನುತ್ತೇವೆ. ನಮ್ಮ ಸಂಸ್ಕೃತಿಯಲ್ಲಿರುವಷ್ಟು ನೀತಿ ಬೇರೆಲ್ಲೂ ಇಲ್ಲ ಅನ್ನುತ್ತೇವೆ. ರಾಮ, ಕೃಷ್ಣ, ಬುದ್ಧ, ಬಸವ, ಸೀತಾ, ತಾರಾ, ಮಂಡೋದರಿ ಮುಂತಾಗಿ ನೈತಿಕ ಆದರ್ಶದ ಮಾಡೆಲ್ಗಳೇ ನಮ್ಮ ಇತಿಹಾಸ ಹಾಗೂ ಪುರಾಣಗಳಲ್ಲಿ ಸಿಗುತ್ತವೆ. ಇಷ್ಟಾಗಿಯೂ ಐರೋಪ್ಯರು ಭಾರತೀಯರನ್ನೇಕೆ ಅನೈತಿಕರು ಅಂದರು?

ಯುರೋಪಿಯನ್ನರು ಭಾರತಕ್ಕೆ ಬಂದಾಗ ಅವರಿಗೆ ಇಲ್ಲಿನ ಸಂಸ್ಕೃತಿ ಅರ್ಥವಾಗಲಿಲ್ಲ. ಇಡೀ ಭಾರತೀಯ ಸಂಸ್ಕೃತಿಗೆ ನೈತಿಕ ತಳಪಾಯವೇ ಇಲ್ಲ ಎಂದು ನಿರ್ಣಯಿಸಿದರು. ಭಾರತೀಯರಿಗೆ ಮೊರಲ್ ಹಾಗೂ ಎಥಿಕ್ಸ್ನ ಕಲ್ಪನೆಯೇ ಇಲ್ಲ. ನಾಗರಿಕತೆಯಿಂದ ಬಹಳ ಹಿಂದುಳಿದಿದ್ದಾರೆ. ಇದೊಂದು ಪತನಗೊಂಡ ಸಂಸ್ಕೃತಿ. ಇಲ್ಲಿನ ಮೂತರ್ಿಪೂಜೆ, ಜಾತಿಪದ್ಧತಿ, ಸಾಮಾಜಿಕ ಆಚರಣೆಗಳೆಲ್ಲವೂ ಅವರಿಗೆ ಅನೈತಿಕ ಆಚರಣೆಗಳಂತೆ ಕಂಡವು. ಭಾರತೀಯರು ಅಪ್ರಾಮಾಣಿಕರು, ಸುಳ್ಳು ಹೇಳುವವರು ಹಾಗೂ ಮೋಸಗಾರರು ಎಂಬುದಾಗಿ ವಣರ್ಿಸಿದರು. ಭಾರತೀಯ ಸಂಸ್ಕೃತಿ ಭ್ರಷ್ಟಗೊಂಡಿದೆ ಎಂದು ವ್ಯಾಖ್ಯಾ ನಿಸಿದರು. ಆದ್ದರಿಂದ ಭಾರತದ ಪುನರುದ್ಧಾರಕ್ಕೆ ಕೈಹಾಕಿದರು. ಈ ಕಾರಣಕ್ಕಾಗೇ ಹಲವು ಕಾನೂನು ಗಳನ್ನು ಮಾಡಿದರು. ಭಾರತದ ಜಾತಿ ವ್ಯವಸ್ಥೆಯನ್ನಂತೂ ಎಥಿಕಲ್ ಭ್ರಷ್ಟಾಚಾರದ ಮೂರ್ತರೂಪ ಎಂದರು. ಭಾರತೀಯರ ಎಥಿಕ್ಸೇ ಅನೈತಿಕವೆಂದು ಜರಿದ ಬಗ್ಗೆ ಸಹಸ್ರ ಉದಾಹರಣೆಗಳಿವೆ.

ಮತ್ತಷ್ಟು ಓದು »

8
ಮಾರ್ಚ್

ಇದು ಭರತವರ್ಷ : ಆ ಹೆಣ್ಣು ಮಗಳ ಹೋರಾಟಕ್ಕೆ ಅಂತ್ಯ ಇದೆಯಾ???

– ರಾಕೇಶ್ ಶೆಟ್ಟಿ

ಕಾಶ್ಮೀರದಲ್ಲಿ ಕಲ್ಲೊಂದು ಬಿದ್ದ ಮರುಕ್ಷಣದಲ್ಲೇ ಮಂಡಿಯೂರಿ ಕ್ಯಾಮೆರ ಹಿಡಿದು ಜಗತ್ತಿಗೆ ಸಾರುವ ಮಾಧ್ಯಮಗಳು,ತಡವಾಗಿಯಾದರೂ ಪ್ರತಿಕ್ರಿಯಿಸುವ ಕೇಂದ್ರ ಸರ್ಕಾರ,ಅಥವಾ ಇನ್ನುಳಿದ ಯಾವುದೆಂದರೆ ಯಾವುದೇ ರಾಜಕೀಯ ಪಕ್ಷಗಳು,ಕಳೆದ ವರ್ಷ ಅಲ್ಲಿನ ಪ್ರತ್ಯೇಕವಾದಿ ಹೋರಾಟಗಾರು ಇಡಿ ರಾಜ್ಯವನ್ನ ೨-೩ ತಿಂಗಳು ದಿಗ್ಭಂದನದಲ್ಲಿಟ್ಟು, ಜನ ಸಾಮಾನ್ಯರು ದಿನ ನಿತ್ಯದ ಅಗತ್ಯ ವಸ್ತುಗಳಿಗೆ ಪರದಾಡುತಿದ್ದರೂ ಸಹ, ಆ ‘ನತದೃಷ್ಟ ರಾಜ್ಯ’ಕ್ಕೂ ನಮಗೂ ಯಾವ ಸಂಬಂದವೇ ಇಲ್ಲ ಅನ್ನುವಂತೆ ಕುಳಿತಿದ್ದರು.ಭಾರತದ ಆ ನತದೃಷ್ಟ ರಾಜ್ಯದ ಹೆಸರು ‘ಮಣಿಪುರ’.ಈಶಾನ್ಯ ಭಾರತದ ಸಪ್ತ ಸಹೋದರಿ ರಾಜ್ಯಗಳಲ್ಲೊಂದಾದ ಮಣಿಪುರವನ್ನ ನೆಹರೂ ಭಾರತದ ಮುಕುಟ ಮಣಿ ಅಂದಿದ್ದರಲ್ಲ ಅದೇ ಮಣಿಪುರ…! ಆ ಮಣಿಪುರದ ರಕ್ತ ಸಿಕ್ತ ಅಧ್ಯಾಯದ ಬಗ್ಗೆ ಮುಂದೊಮ್ಮೆ ಬರೆಯುವೆ.
  
ಇಂದು ‘ವಿಶ್ವ ಮಹಿಳಾದಿನ’, ಬೇರೆ ಬೇರೆ ದೇಶದ ಮಹಿಳೆಯರನ್ನ ನೆನಪಿಸಿಕೊಳ್ಳುವ ಮಾಧ್ಯಮಗಳ ಕಣ್ಣಿಗೆ, ಮಣಿಪುರದ (ಭಾರತದ) ಉಕ್ಕಿನ ಮಹಿಳೆ ಇರೋ ಚಾನು ಶರ್ಮಿಲ ಕಾಣಿಸುವುದಿಲ್ಲ. ಇರಲಿ ಬಿಡಿ ದೊಡ್ಡವರ ಪತ್ರಿಕೆಗಳು ತಣ್ಣಗಿರಲಿ,ಆ ಮಹಿಳೆಯ ಹೋರಾಟದ ಚಿತ್ರಣವನ್ನ ದಾಖಲಿಸುವ ಪುಟ್ಟ ಪ್ರಯತ್ನ ನನ್ನದು.ಈ ಹಿಂದೆಯೇ ಈಕೆಯ ಬಗ್ಗೆ ಬರೆದಿದ್ದೆ,ಆಕೆಯ ಹೋರಾಟದ ಬದುಕು ನಮಗೆಲ್ಲ ಸ್ಪೂರ್ತಿಯಾಗಲಿ.