ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

5
ಮಾರ್ಚ್

ಉತ್ತರ ಪ್ರದೇಶದಲ್ಲಿ ಆನೆಗೆ ಬಲ ಬರಲಿದೆಯೇ ಅಥವಾ ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆಯೇ ?

-ನಾಗಣ್ಣ ಜಿಕೆ

ಮಾಚ್೯ ನ 6ರಂದು 5 ರಾಜ್ಯಗಳ ಚುನಾವಣಿ ಫಲಿತಾಂಶ ಘೋಷಣೆಯಾಗಲ್ಲಿದ್ದು ಇಡಿ ದೇಶ ಐದು ರಾಜ್ಯಗಳ ಕಡೆ ಗಮನ ಹರಿಸಿದೆ. ಮುಖ್ಯವಾಗಿ ಉತ್ತರಪ್ರದೇಶದ ಚುನಾವಣಾ ಫಲಿತಾಂಶ ಜನತೆಯಲ್ಲಿ ಕುತೂಹಲ ಕೆರಳಿಸಿದೆ ಕಾರಣ ಉತ್ತರಪ್ರದೇಶದ ರಾಜಕಾರಣ ರಾಷ್ಟ್ರರಾಜಕರಣಕ್ಕೆ ದಿಕ್ಸೂಚಿ ಮತ್ತು ನಿಣ೯ಯಕ ಶಕ್ತಿ.
ಉತ್ತರಪ್ರದೇಶದಲ್ಲಿ ಚುನಾವಣಿಗೆ ಸ್ಪಧ೯ಸಿದ್ದ ಪ್ರಮುಖ ರಾಜಕೀಯ ಪಕ್ಷಗಳೆಲ್ಲವೂ ತಮ್ಮ ಪ್ರತಿಷ್ಟೆಯನ್ನು ಪಣಕಿಟ್ಟು ಚುನಾವಣಿ ಆಕಾಡಕ್ಕೆ ದುಮುಕಿದ್ದವು ಇಲ್ಲಿ ಪಕ್ಷಕದ ಸೋಲು ಗೆಲವುಗಿಂತ ವ್ಯಕ್ತಿಗತ ಸೋಲು ಗೆಲವು ಬಹಳ ಮುಖ್ಯವಾದ್ದದ್ದು ಭವಿಷ್ಯದ ಪ್ರಧಾನಿಯೆಂದು ಬಿಂಬಿಸಿಕೊಳ್ಳುತ್ತಿರುವ ರಾಹುಲ್ಗಾಂಧಿ ಮತ್ತೊಂದು ಕಡೆ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಮಾಯಾವತಿ ಮತ್ತು ಉತ್ತರಪ್ರದೇಶದಲ್ಲಿ ಅಸ್ತಿತ್ವ ಸ್ಥಾಪಿಸಲು ಹೊರಟಿರುವ ಆಖಿಲೇಶ್ ಯಾದವ್ ಇವರ ಸೋಲು ಗೆಲುವೆ ಮುಖ್ಯವಾಗಿದೆ. 2008ರ ವಿಧಾನಸಭಾ ಚುನಾವಣಿಯಲ್ಲಿ ಬಿ.ಎಸ್.ಪಿಗಿದ್ದ ವಚ್ಚ್ರಸ್ಸು ಈ ಚುನಾವಣಿಯಲ್ಲಿ ಇದ್ದಂತೆ ಕಾಣುತ್ತಿಲ್ಲ ಇದಕ್ಕೆ ಹಲವಾರು ಕಾರಣಗಳಿವೆ, ಬಿ.ಎಸ್.ಬಿ ನಾಯಕಿಯಾದ ಮಾಯಾವತಿ ಕಳೆದ ಚುನಾವಣಿಯಲ್ಲಿ ಬ್ರಾಹ್ಮಣರು ಸೇರಿದ್ದಂತೆ ಮೇಲ್ವಗ್ರದವರ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು ಅದರೆ ಚುನಾವಣಿಯ ನಂತರ ಅವರು ಬ್ರಾಹ್ಮಣರಿಗೆ ಕೊಟ್ಟ ಭರವಸೆಯನ್ನ ಹಿಡೇರಿಸಿಲ್ಲ ಸಹಜವಾಗಿ ಈ ವಗ್ರದ ಜನ ಬೇರೆ ಪಕ್ಷಕ್ಕೆ ಒಲವು ತೋರಿಸಿದ್ದಾರೆ.

ಮತ್ತಷ್ಟು ಓದು »

23
ಫೆಬ್ರ

ಹೀಗೊಂದು ವೇದೋಕ್ತ ವಿವಾಹ

-ಕ.ವೆಂ.ನಾಗರಾಜ್

ಸುಮಾರು ಒಂದು ವರ್ಷದ ಹಿಂದಿನ ಘಟನೆ. ಅವನ ಹೆಸರು ಸುನಿಲ, ಓರ್ವ ಸ್ಫುರದ್ರೂಪಿ ಹಿಂದೂ ತರುಣ, ಹಾಸನ ಮೂಲದವನು. ಅವಳು ಒಲಿವಿಯ, ಮನಮೋಹಕ ಚೆಲುವಿನ ಕ್ರಿಶ್ಚಿಯನ್ ನವಯುವತಿ, ಮಂಗಳೂರಿನ ಕಡೆಯವಳು. ಇಬ್ಬರಿಗೂ ಪರಿಚಯವಾಯಿತು, ಮಾತುಕಥೆಗಳಾದವು, ಪ್ರೇಮಾಂಕುರವಾಯಿತು. ಮದುವೆಯಾಗಲು ನಿರ್ಧರಿಸಿದರು. ಜಾತಿ ಬೇರೆಯಾದ್ದರಿಂದ ಎರಡೂ ಮನೆಯವರು ಪ್ರಾರಂಭದಲ್ಲಿ ಒಪ್ಪದಿದ್ದರೂ ಅವರ ಧೃಢ ನಿರ್ಧಾರದಿಂದಾಗಿ ಒಪ್ಪಿಗೆ ಸಿಕ್ಕಿತು. ಸುನಿಲನ ಇಚ್ಛೆಯಂತೆ ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಒಲಿವಿಯ ಸಮ್ಮತಿಸಿದಳು.

ವೇದೋಕ್ತ ರೀತಿಯಲ್ಲಿ ಮದುವೆಯಾಗಲು ನಿರ್ಧರಿಸಿ ಬೆಂಗಳೂರಿನ ವೇದಾಧ್ಯಾಯಿ ಸುಧಾಕರ ಶರ್ಮರನ್ನು ಭೇಟಿಯಾದರು. ಅವರು ಒಲಿವಿಯಳನ್ನು ಆಕೆ ಇನ್ನುಮುಂದೆ ಸುನಿಲನಂತೆ ಸಸ್ಯಾಹಾರಿಯಾಗಿರಲು ಸಾಧ್ಯವೇ ಎಂದು ವಿಚಾರಿಸಿದರು. ಆಕೆಗೆ ತಕ್ಷಣಕ್ಕೆ ಉತ್ತರಿಸಲಾಗಲಿಲ್ಲ. ಶರ್ಮರು ಹೇಳಿದರು -“ಆಹಾರ ಪದ್ಧತಿ ಬದಲಾಯಿಸಲು ನನ್ನ ಒತ್ತಾಯವಿಲ್ಲ. ಆದರೆ ಸಸ್ಯಾಹಾರಿಯಾಗಲು ನಿರ್ಧರಿಸಿದರೆ ಮಾತ್ರ ನಾನು ಮದುವೆ ಮಾಡಿಸುವೆ. ಇಲ್ಲದಿದ್ದರೆ ಬೇರೆಯವರ ಮಾರ್ಗದರ್ಶನದಲ್ಲಿ ಮದುವೆಯಾಗಬಹುದು. ನಿರ್ಧಾರವನ್ನು ಈ ಕೂಡಲೇ ತೆಗೆದುಕೊಳ್ಳಬೇಕಿಲ್ಲ. ನಿಧಾನವಾಗಿ ಯೋಚಿಸಿದ ನಂತರದಲ್ಲಿ ತಿಳಿಸಿ”. ನಂತರ ತಿಳಿಸುವುದಾಗಿ ಹೋದ ಅವರು ಕೆಲವು ದಿನಗಳ ನಂತರ ಮತ್ತೆ ಬಂದು ಶರ್ಮರನ್ನು ಭೇಟಿ ಮಾಡಿದರು. ಒಲಿವಿಯ ಇನ್ನುಮುಂದೆ ಸಸ್ಯಾಹಾರಿಯಾಗಿರಲು ನಿರ್ಧರಿಸಿದ್ದಳು.
ಮತ್ತಷ್ಟು ಓದು »

18
ಫೆಬ್ರ

ಆವೇಶಕ್ಕೆ ಬಲಿಯಾದ ಕಂದ

-ಸತೀಶ್ ರಾಮನಗರ

ಆಕೆ ತನ್ನ ಮಗನನ್ನೇ ಕೊಂದಿದ್ದಾಳೆ ಎಂಬುದನ್ನು ಕೇಳಿ ಒಂದು ಕ್ಷಣ ಆಶ್ಚರ್ಯಚಕಿತನಾದೆ. ಆಕೆ ತನ್ನ ಮಗನನ್ನು ಕೊಂದಿದ್ದಾಳೆ ಎಂದು ಆರೋಪಿಸಿ ಪೊಲೀಸ ಠಾಣೆಯಲ್ಲಿ ದೂರು ನೀಡಿರುವುದು ಆಕೆಯ ಪತಿಯೇ. ಈಗ ಆರೋಪಿತಳನ್ನು ಬೇರೆಯವರ ಮೂಲಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲು ಪ್ರಯತ್ನಿಸುತ್ತಿರುವುದು ಕೂಡ ಆಕೆಯ ಪತಿಯೇ.

ಮಾದಣ್ಣ ಹಾಗು ಗೌರಮ್ಮನವರದು ಇಬ್ಬರು ಮಕ್ಕಳೊಂದಿಗಿನ ಮಧ್ಯಮ ವರ್ಗದ ಸಂತೃಪ್ತಿ ಸಂಸಾರ. ಮಗ ರಮೇಶನಿಗೆ 5 ವರ್ಷ. ಮಗಳು ಲಕ್ಷ್ಮಿಗೆ 7 ವರ್ಷ. ಇಬ್ಬರ ಮುಖ್ಯ ಕಸುಬು ವ್ಯವಸಾಯ.

ನಾಳೆಯ ಲಕ್ಷ್ಮಿ ಪೂಜೆಗೆ ಮನೆಯಲ್ಲವನ್ನು ಶುಚಿಗೊಳಿಸಿ, ಗೌರಮ್ಮ ಗಂಡನ ದಾರಿ ಕಾಯುತಿದ್ದಳು. ಮಾದಣ್ಣ ಮನೆಗೆ ಬಂದ ತಕ್ಷಣವೇ, ನಾಳೆ ಹಬ್ಬಕ್ಕೆ ನನಗೆ ಸೀರೆ, ಮಕ್ಕಳಿಗೆ ಹೊಸ ಬಟ್ಟೆ ಜೊತೆಗೆ ಗಿರವಿ ಅಂಗಡಿಯಲ್ಲಿಟ್ಟಿರುವ, ನನ್ನ ಓಲೆ ಜುಮುಕಿ, ಮಾಂಗಲ್ಯ ಸರವನ್ನು ನಾಳೆ ಬೆಳಿಗ್ಗೆ ಬಿಡಿಸಿಕೊಂಡು ತರಲೇ ಬೇಕು ಎಂದು ತಾಕೀತು ಮಾಡಿದಳು. ಮಾದಣ್ಣ ಸರಿ ಎಂದು ತಲೆಯಲ್ಲಾಡಿಸಿ ಊಟ ಮಾಡಿ ಮಲಗಿದ.

ಮಾದಣ್ಣ, ಬೆಳಿಗ್ಗೆ ತನ್ನ ಬಳಿಯಲ್ಲಿದ್ದ ಚೂರು ಪಾರು ಹಣವನ್ನೆಲ್ಲ ಒಟ್ಟುಗೂಡಿಸಿ, ಆ ಹಣದಲ್ಲಿ ಮಕ್ಕಳಿಗೆ ಬಟ್ಟೆ ಹಾಗು ಹೆಂಡತಿಗೆ ಸೀರೆಯನ್ನು ತರಲಷ್ಟೇ ಸಾಧ್ಯವಾಯಿತು. ತನ್ನ ಗಂಡ ವಡವೆಗಳನ್ನು ಬಿಡಿಸಿಕೊಂಡು ತರುತ್ತಾನೆ ಎಂಬ ನಿರೀಕ್ಷೆಯಲ್ಲಿದ್ದ ಗೌರಮ್ಮ ನಿಗೆ ಬಟ್ಟೆಗಳನ್ನಷ್ಟೇ ನೋಡಿ ನಿರಾಶೆಯಾಯಿತು. ವಡವೆಗಳಿಲ್ಲದೆ ಲಕ್ಷ್ಮಿ ಪೂಜೆ ಹೇಗೆ ಮಾಡುವುದೆಂಬ ಚಿಂತಯಿಂದ ಮೌನವಾದಳು. ಅಕ್ಕ ಪಕ್ಕದ ಮನೆಯ ಹೆಂಗಸರನ್ನು ಸಂಜೆ ಮನೆಗೆ ಲಕ್ಷ್ಮಿ ಪೂಜೆಗೆ ಬರಲೇಬೇಕೆಂದು ಅದಾಗಲೇ ಹೇಳಿ ಬಂದಿದ್ದಳು. ಸಂಜೆ ಅವರುಗಳು ಮನೆಗೆ ಬಂದರೆ, ಯಾವ ಮುಖವನ್ನು ಹೊತ್ತುಕೊಂಡು ಪೂಜೆ ಮಾಡುತ್ತಿಲ್ಲ ಎಂದು ಹೇಳುವುದು ಎಂಬ ಪ್ರಶ್ನೆ ಅವಳನ್ನು ಕಾಡತೊಡಗಿತು. ಮತ್ತಷ್ಟು ಓದು »

8
ಫೆಬ್ರ

ಕೇಸರಿಕರಣ ಅಂದರೆ ಕೇಸರಿ ಬಣ್ಣದ ಪುಸ್ತಕವೇ?

– ಅಶ್ವಿನ್ ಅಮೀನ್

ದ್ವಾರಕನಾಥ್ ಅವರೇ, ನೀವು ಇತ್ತೀಚಿಗೆ ಪ್ರಜಾವಾಣಿಯಲ್ಲಿ ಬರೆದ ‘ಪ್ರಾಥಮಿಕ ಪಠ್ಯದಲ್ಲಿ ಕೇಸರೀಕರಣದ ಸ್ಯಾಂಪಲ್’ ಎಂಬ ಲೇಖನದ ಬಗ್ಗೆ ಹಲವು ಸಂದೇಹಗಳಿರುವುದರಿಂದ ಈ ಪ್ರತಿಕ್ರಿಯೆಯನ್ನು ನೀಡಲಿಚ್ಚಿಸುತ್ತೇನೆ.

ಮೊದಲನೆಯದಾಗಿ ನೀವು ಅರ್ಥೈಸಿಕೊಂಡಂತೆ ‘ಕೇಸರೀಕರಣ’ ಎಂದರೇನು ಎಂದು ತಿಳಿಯಬಯಸುತ್ತೇನೆ. ಭಾರತದ ಮೂಲ ಇತಿಹಾಸವನ್ನು, ಸಂಸ್ಕೃತಿಯನ್ನು, ಪರಂಪರೆಯನ್ನು, ಪ್ರಾಚೀನ ಭಾರತದ ಜನರ ಜೀವನ ವಿಧಾನಗಳನ್ನು, ಅವರು ಆಚರಿಸಿಕೊಂಡು ಬರುತ್ತಿದ್ದ ವಿವಿಧ ಆಚರಣೆಗಳನ್ನು ಯಥಾವತ್ತಾಗಿ ತಿಳಿಸಿಕೊಡುವುದು ಕೇಸರೀಕರಣವಾಗುತ್ತದೆಯೇ?.. ಇಷ್ಟಕ್ಕೂ ನಿಮಗೆ ಈ ‘ಕೇಸರಿ’ ಎಂಬ ಕಲರ್ ಕೋಡ್ ಕೊಟ್ಟವರು ಯಾರು?… ಹಾಗಿದ್ದಲ್ಲಿ ಹಿಂದಿನ ಪಠ್ಯಪುಸ್ತಕಗಳಲ್ಲಿ ಇದ್ದಂತೆ ಭಾರತದ ಮೇಲೆ ಹಲವು ಬಾರಿ ಧಾಳಿ ಮಾಡಿ ಇಲ್ಲಿನ ಹಲವು ವೈಭವೋಪೇತ ದೇಗುಲಗಳನ್ನು ನಾಶ ಮಾಡಿ, ಸಂಪತ್ತನ್ನು ಲೂಟಿಗೈದ ಮಹಮ್ಮದ್ ಗಜಿನಿ, ಮಹಮ್ಮದ್ ಘೋರಿ ಮುಂತಾದ ಲೂಟಿಕೋರರ ವರ್ಣನೆ.. ಭಾರತದ ಮೇಲೆ ದಂಡೆತ್ತಿ ಬಂದ ಅಲೆಕ್ಸಾಂಡರನನ್ನು ಸೋಲಿಸಿ ಓಡಿಸಿದ ‘ಭಾರತೀಯ’ ದೊರೆ ‘ಪೌರವ’ನನ್ನು ವರ್ಣಿಸದೇ ಅಲೆಕ್ಸಾಂಡರನನ್ನು ವರ್ಣಿಸಿರುವುದು.. ಸ್ವಾತಂತ್ರ ಹೋರಾಟದ ಪಾಠಗಳಲ್ಲಿ ಆಜಾದ್, ಸಾವರ್ಕರ್, ನೇತಾಜಿ, ಭಗತ್ ಸಿಂಗ್, ಲಾಲ ಲಜಪತ್ ರಾಯ್ ಯಂತವರನ್ನು ನಾಲ್ಕೈದು ಸಾಲುಗಳಿಗೆ ಸೀಮಿತಗೊಳಿಸಿ ಗಾಂಧೀ-ನೆಹರೂ ಮುಂತಾದ ಕಾಂಗ್ರೆಸ್ಸ್ ನಾಯಕರುಗಳ ಬಗ್ಗೆ ಪುಟಗಟ್ಟಲೆ ಬರೆಯುವುದು.. ಮೌಲಾನ ಅಬ್ದುಲ್ ಕಲಾಮ್ ಅಜಾದರಂತಹ ಗಾಂಧಿಯ ಹಿಂಬಾಲಕರ ಬಗ್ಗೆ ಪಾಠಗಳನ್ನು ಸೃಷ್ಟಿಸಿ, ಅಶ್ಫಾಕುಲ್ಲ ಖಾನ್ ನಂತಹ ಕ್ರಾಂತಿಕಾರಿ ದೇಶಪ್ರೇಮಿಯನ್ನು ಕಡೆಗಣಿಸಿರುವುದು.. ಶಿವಾಜಿ ರಾಜ್ಯ ಕಟ್ಟಿದ ರೀತಿ, ಭಾರತೀಯ ಸಂಸ್ಕೃತಿಯ ಉಳಿವಿಗಾಗಿ ಅವನು ಪಟ್ಟ ಶ್ರಮದ ಬಗ್ಗೆ ಪಾಠಗಳನ್ನು ರಚಿಸದೇ ಔರಂಗಜೇಬನನ್ನು ಪಠ್ಯದಲ್ಲಿ ವರ್ಣಿಸಿ ಸೇರಿಸಿರುವುದು .. ಇವೆಲ್ಲ ನಿಮಗೆ ಸರಿ ಕಂಡು ಬರುವುದೇ.. ಒಂದರ್ಥದಲ್ಲಿ ಇವೆಲ್ಲ ‘ಹಸಿರೀಕರಣ’ವಾಗದೆ?!!!! ಅದಕ್ಕೇಕೆ ನೀವು ‘ಹಸಿರು’ ಎಂಬ ಕಲರ್ ಕೋಡ್ ಕೊಡುವುದಿಲ್ಲ.? ಸುಳ್ಳು ಇತಿಹಾಸವನ್ನು ಸೃಷ್ಟಿಸಿ ಬರೆದರೆ ಅದು ನಿಮಗೆ ಒಪ್ಪಿಗೆಯಾಗುತ್ತದೆ. ಅದೇ ಭಾರತದ ನಿಜವಾದ ಇತಿಹಾಸವನ್ನು ಮಕ್ಕಳಿಗೆ ತೆರೆದಿಟ್ಟರೆ ಅದು ಹೇಗೆ ಕೇಸರೀಕರಣವಾಗುತ್ತದೆ?

ಮತ್ತಷ್ಟು ಓದು »

7
ಫೆಬ್ರ

ಆ ವಿಧಿಯಾಟವ ಬಲ್ಲವರಾರು ?

 –  ಪ್ರಸಾದ್.ಡಿ.ವಿ.

ನಾನು ಇಂತಹದ್ದೊಂದು ಲೇಖನ ಬರೆಯುತ್ತೇನೆಂದು ನನ್ನ ಕನಸ್ಸು ಮನಸ್ಸಿನಲ್ಲಿಯು ಎಣಿಸಿರಲಿಲ್ಲ. ನನ್ನ ನಂಬಿಕೆಗಳ ವಾಸ್ತವದ ನೆಲೆಗಟ್ಟನ್ನೆ ಆ ಸಂದರ್ಭ ಅಲ್ಲಾಡಿಸುತ್ತದೆಂದು ನಾನು ಎಂದೂ ಭಾವಿಸಿರಲಿಲ್ಲ. ನೆನ್ನೆ ನನ್ನ ಕಣ್ಣೆದುರೆ ಗತಿಸಿದ ಘಟನೆ ನನ್ನನ್ನು ಈ ಲೇಖನ ಬರೆಯುವವರೆಗೂ ಸರಿಯಾಗಿ ನಿದ್ರಿಸಲು ಬಿಡುತ್ತಿಲ್ಲ.

ನನ್ನ ತಾತನಿಗೆ ಆರೋಗ್ಯ ಕೈಕೊಟ್ಟು ಎರಡು ವರ್ಷವೇ ಸರಿದಿರಬಹುದು. ವಯಸ್ಸಾದ ದೇಹ ರೋಗಗಳ ಕಣಜವೆಂಬಂತೆ. ನನ್ನವ್ವ(ಅಜ್ಜಿ)ನಿಗೆ ಅವಳ ಗಂಡನೇ ದೈವ. ಆ ದೇವತೆಯ ಇಚ್ಛಾಶಕ್ತಿಯೆ ತನ್ನ ಗಂಡನ ಪ್ರಾಣವನ್ನು ಹಿಡಿದಿಟ್ಟಿದೆ ಎನಿಸುತ್ತದೆ. ನನ್ನ ಅಮ್ಮ, ಚಿಕ್ಕಮ್ಮಂದಿರು ಮತ್ತು ಮಾವನಿಗೆ ನನ್ನಜ್ಜನನ್ನು ಹೇಗಾದರು ಮಾಡಿ ಉಳಿಸಿಕೊಳ್ಳಬೇಕೆಂಬ ಆಸೆ. ಆದ್ದರಿಂದ ಅಜ್ಜನನ್ನು ಮೈಸೂರಿನ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ದಿನವೂ ಅವರನ್ನು ಕಾಯುತ್ತಿದ್ದಾರೆ. ನಾನು ಭಾವನೆಗಳನ್ನು ಅಪ್ಪಿ ಜೋತಾಡುವ ಮನೋಭಾವದವನಲ್ಲವೇ ಅಲ್ಲ. ವಾಸ್ತವಿಕ ಮತ್ತು ವೈಚಾರಿಕ ನೆಲೆಗಟ್ಟುಗಳೆ ನನ್ನ ಯೋಚನಾಧಾಟಿಯ ಅಡಿಪಾಯಗಳು, ಬಂಧನಗಳು ಮತ್ತು ಸಂಬಂಧಗಳೆಂದರೆ ತುಸು ತಟಸ್ಥನೆ. ಕೆಲವೊಮ್ಮೆ ತುಂಬಾ ಭಾವುಕನಾಗುವುದುಂಟು ಆದರೆ ಅದು ತೀರಾ ವಿರಳ. ನನ್ನ ಯೋಚನಾಧಾಟಿಯೋ ಇಲ್ಲವೆ ತಟಸ್ಥ ಭಾವದ ಉದ್ದಟತನವೋ, “ಅಜ್ಜನಿಗೆ ವಯಸ್ಸಾಯ್ತು, ಮಗನ ಮದುವೆಯನ್ನೂ ನೋಡಿದ್ದಾಯ್ತು ಮೊಮ್ಮಗನನ್ನು ಮುದ್ದಿಸಿದ್ದೂ ಆಯ್ತು, ಅವರು ಹೊರಡುವ ಕಾಲ ಸನ್ನಿಹಿತವಾಯಿತೆಂದರೆ ಹೋಗಲಿ ಬಿಡಿ. ಯಾಕಷ್ಟು ಭಾವುಕರಾಗುತ್ತೀರಿ?” ಎಂದುಬಿಟ್ಟೆ. ಎಲ್ಲರೂ ನನ್ನನ್ನು ಯಾವುದೇ ಭಾವನೆಗಳಿಲ್ಲದ ಬಂಡೆಯೆಂಬಂತೆ ನೋಡಿ, “ಬಾಯಿಗೆ ಬಂದಂತೆ ಹರಟಬೇಡ, ಕಾಲು ಮುರಿಯುತ್ತೇನೆ” ಎಂದು ಅಮ್ಮ ಗದರಿದರು. ನಾನು ನನ್ನಲ್ಲೆ ಇವರಿಗೆ ಬುದ್ಧಿಯಿಲ್ಲ, ಯಾರು ಪುಂಗಿ ಊದಿದರು ಸರಿಯಾಗದವರು ಇವರು ಎಂದು ಸುಮ್ಮನೆ ಹೊರಬಂದೆ. ಅವರ ಭಾವೋತ್ಕಟತೆಯ ಆಳವನ್ನು ವಿಮರ್ಶಿಸುವ ಗೋಜಿಗೂ ಹೊಗಲಿಲ್ಲ ನಾನು.

ಮತ್ತಷ್ಟು ಓದು »

2
ಫೆಬ್ರ

ಏನ್ ಗುರು ರಾಜಕೀಯನಾ?

-ಅಶ್ವಿನ್ ಎಸ್ ಅಮೀನ್

ಇತ್ತೀಚೆಗೆ ಬನವಾಸಿ ಬಳಗದವರು ನಡೆಸುತ್ತಿರುವ  ‘ಏನ್ ಗುರು’ ಎಂಬ ಬ್ಲಾಗ್ ನಲ್ಲಿ ಪ್ರಕಟವಾದ ‘RSS ಕಣ್ಣಲ್ಲಿ ಭಾಷಾ ನೀತಿ, ಒಕ್ಕೂಟ ಮತ್ತು ಸಮಾಜ’ ಎಂಬ ಲೇಖನವನ್ನು ಓದಿದೆ. ಲೇಖಕರ ಮಾತುಗಳು ಏಕಮುಖಿಯಾಗಿವೆಯೇನೋ ಎನಿಸಿ ಈ ಪ್ರತಿಕ್ರಿಯೆಯನ್ನು ದಾಖಲಿಸುತ್ತಿದ್ದೇನೆ.

ಲೇಖನ ಆರಂಭದಲ್ಲಿ ಅರೆಸ್ಸಿಸಿನ ಧನಾತ್ಮಕ ಅಂಶಗಳ ಕುರಿತು ಲೇಖಕರು ಗಮನ ಸೆಳೆಯುತ್ತಾರೆ. ಆದರೆ ಒಂದು ಕಡೆ ನೆರೆ ಬರ ಹಾಗು ಇತರ ವಿಕೋಪಗಳ ಸಂದರ್ಭದಲ್ಲಿ ಜಾತಿ ಮತ ಲೆಕ್ಕಿಸದೆ ಜನತೆಯ ಸಹಾಯಕ್ಕೆ ಧಾವಿಸುವ ಆರೆಸ್ಸೆಸ್ ನ ಬಗ್ಗೆ ಹೊಗಳುವ ಲೇಖಕರು ಮತ್ತೊಂದು ಕಡೆ ಪ್ರಾಂತೀಯ ವಿರೋಧದ ಬಗ್ಗೆ ಮಾತನಾಡುತ್ತಾರೆ.! ಪ್ರಾಂತೀಯ ಹಾಗು ವೈವಿಧ್ಯತಾ ವಿರೋಧವಿದ್ದರೆ ಆರೆಸ್ಸೆಸ್ ದೇಶದ ಯಾವದೇ ಭಾಗದಲ್ಲಿ ಉಂಟಾಗುವ ವಿಕೋಪಗಳ ಸಂದರ್ಭದಲ್ಲಿ ನೆರವಿಗೆ ಧಾವಿಸುತ್ತಿತ್ತೆ..?!

ಆರೆಸ್ಸೆಸಿನ ಪೂಜನೀಯ ಗುರುಗಳಾದ ಮಾಧವ ಸದಾಶಿವ ಗೋಳವಾಲ್ಕರ್ ಗುರೂಜಿಯವರ ‘ಚಿಂತನ ಗಂಗಾ’ ಪುಸ್ತಕವನ್ನಾಧರಿಸಿ ಆ ಲೇಖನವನ್ನು ಬರೆಯಲಾಗಿದೆ. ಆ ಸಮಗ್ರ ಗ್ರಂಥವನ್ನು ಲೇಖಕರು ಓದಿರುವುದು ಸಂತೋಷದಾಯಕ. ಆದರೆ ಅದನ್ನು ಸರಿಯಾಗಿ ಅರ್ಥೈಸುವಲ್ಲಿ ಎಡವಿದ್ದಾರೆ ಎಂಬುದೇ ವಿಪರ್ಯಾಸ.! ಮತ್ತಷ್ಟು ಓದು »

1
ಫೆಬ್ರ

ಇಂದಿನ ರಾಜಕೀಯ ಮತ್ತು ಮಾಧ್ಯಮಗಳ ನಡುವೆ ಕಂಡುಬರುವಂತಹ ಸಾಮ್ಯತೆಗಳು

-ರಾಜುವಿನಯ್ ದಾವಣಗೆರೆ

ಇತ್ತೀಚಿಗೆ ನಾವು ಪ್ರಚಲಿತ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ.ಇಂದಿನ ರಾಜಕೀಯ ವ್ಯವಸ್ಥೆಗೂ,  ಇಂದಿನ  ಮಾಧ್ಯಮ (ದೃಶ್ಯ)ಗಳಿಗೂ ವ್ಯತ್ಯಾಸಗಳೇ ಕಾಣುತ್ತಿಲ್ಲ.

ರಾಜಕೀಯದಲ್ಲಿ  ರಾಜಕಾರಣಿಗಳು ಪಕ್ಷದಿಂದ ಪಕ್ಷಗಳಿಗೆ ಹಾರುತ್ತಾ, ವಲಸೆ ಹೋಗುವುದು ಸಾಮಾನ್ಯವಾಗಿದೆ.
ದೃಶ್ಯ ಮಾಧ್ಯಮಗಳಲ್ಲೂ ಇದನ್ನು ಕಾಣುತ್ತಿದ್ದೇವೆ.

———–*ಪಕ್ಷಾಂತರ*———–

ಇಂದು   ಒಂದು  ಟಿವಿಯಲ್ಲಿ ಇದ್ದವರು ನಾಳೆ ಬೇರೆ ವಾಹಿನಿಯಲ್ಲಿರುತ್ತಾರೆ. ಸುವರ್ಣದಲ್ಲಿದ್ದವರು ಇನ್ಯಾವುದೋ ವಾಹಿನಿಗೆ ಜಿಗಿದಿರುತ್ತಾರೆ. ಇದು ನಿರಂತರವಾಗಿ ಆಗುತ್ತಿದೆ.
ರಾಜಕಾರಣಿಗಳು ತಮ್ಮ ಸ್ವಾರ್ಥ ಸಾಧನೆಗೆ ತಮ್ಮ ರಾಜಕೀಯ ಭವಿಷ್ಯಕ್ಕೆ ಜಿಗಿದಾಟಗಳು ಪರದಾಟಗಳು ಮಾಡುತ್ತಿದ್ದರೆ, ಅವರುಗಳ ತಪ್ಪುಗಳನ್ನು ಜನರಿಗೆ ತೋರಿಸುತ್ತಿದ್ದೇವೆ ಎಂಬ ಭ್ರಾಂತಿಯಲ್ಲಿರುವ ನಮ್ಮ ಮಾಧ್ಯಮಗಳು ತಮ್ಮ ನೆಲೆಗಳಲ್ಲಿ ಉಳಿಯಲು ಸಾಧ್ಯವಾಗುತ್ತಿಲ್ಲ.  ರಾಜಕಾರಣಿಗಳ ಪಕ್ಷಾಂತರಗಳ ಬಗ್ಗೆ ಗಂಟೆಗಟ್ಟಲೇ ಟಿ.ವಿ ಸ್ಟುಡಿಯೋದಲ್ಲಿ ಮಾತಾನಾಡುವ ಬಹುತೇಕ ಪತ್ರಕರ್ತ ಮಿತ್ರರು ಅವರುಗಳು ತಮ್ಮ ಮೂಲ ವಾಹಿನಿಗಳಿಂದ ಜಿಗಿದು ಮತ್ತೊಂದು ವಾಹಿನಿಯಲ್ಲಿ ಕುಳಿತಿರುತ್ತಾರೆ.

ಮತ್ತಷ್ಟು ಓದು »

1
ಫೆಬ್ರ

ನೆನಪಿನ ಮೂಸೆಯಲಿ ‘ಕೋಲ್ಕಾತ್ತಾದ ಕಾಲೇಜಿನಲ್ಲಿ’

-ನಟರಾಜು 

ಒಂದು ಬಾರಿ ಗೆಳೆಯನೊಬ್ಬನ ಜೊತೆ ಕೊಲ್ಕತ್ತಾದ ವೈದ್ಯ ವಿದ್ಯಾಲಯದ ಕ್ಯಾಂಪಸ್ ಗೆ ಹೋಗಿದ್ದೆ. ಅಂದು ಪ್ರಥಮ ವರ್ಷದ ಎಂಬಿಬಿಎಸ್ ಪದವಿಯ ಪ್ರವೇಶಕ್ಕಾಗಿ ಕೌಂಸಿಲಿಂಗ್ ನಡೆಯುತ್ತಿತ್ತು. ಆ ಜಾಗದಲ್ಲಿ ರಾಜಕೀಯ ಪಕ್ಷಗಳ ವತಿಯಿಂದ ಮೂರ್ನಾಲ್ಕು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ರಾಜಕೀಯ ಪಕ್ಷದ ಮಾಹಿತಿ ಇರುವ ದೊಡ್ಡ ದೊಡ್ಡ ಬ್ಯಾನರ್ ಗಳನ್ನು ನೋಡಿ, ಕಾಲೇಜಿನ ಆವರಣದಲ್ಲಿ ರಾಜಕೀಯ ಪಕ್ಷದವರಿಗೇನು ಕೆಲಸ ಅಂತ ನಾನು ಕುತೂಹಲದಿಂದ ಆ ಮಳಿಗೆಯ ಬಳಿ ಹೋಗಿದ್ದೆ. ಆ ಮಳಿಗೆಯ ಒಬ್ಬ ವ್ಯಕ್ತಿ ನಾನು ಹೊಸ ವಿದ್ಯಾರ್ಥಿ ಇರಬೇಕು ಅಂತ ತಮ್ಮ ಸಂಘದ ಭಿತ್ತಿ ಪತ್ರವೊಂದನು ಕೈಗಿತ್ತಿದ್ದ. ಬೆಂಗಾಳಿ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲಿದ್ದ ಭಿತ್ತಿ ಪತ್ರವನು ಓದಿ ನನ್ನ ಗೆಳೆಯನೆಡೆಗೆ ತಿರುಗಿದ್ದೆ. ಆತ ಮುಗಳ್ನಕ್ಕಿದ್ದ. ಕಾಲೇಜಿಗೆ ಪ್ರವೇಶ ಪಡೆದ ಮೊದಲ ದಿನದಿಂದಲೇ ತಮ್ಮ ತಮ್ಮ ರಾಜಕೀಯ ಪಕ್ಷದ ಒಲವನ್ನು ವಿದ್ಯಾರ್ಥಿಗಳು ತಮಗಿಷ್ಟ ಬಂದ ಪಕ್ಷದ ವಿದ್ಯಾರ್ಥಿ ಸಂಘದಲಿ ನೋಂದಾಯಿಸುವುದರ ಮೂಲಕ ವ್ಯಕ್ತಪಡಿಸಬಹುದು ಅಂತ ನನ್ನ ಗೆಳೆಯ ಹೇಳಿದ್ದ.

ಮತ್ತಷ್ಟು ಓದು »

30
ಜನ

ಪ್ರೀತಿಯ ಮಟ್ಟು ಸರ್, ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.

– ಪೂರ್ಣಚಂದ್ರ

(ಇತ್ತೀಚಿಗೆ ದಿನೇಶ್ ಅಮಿನ್  ಮಟ್ಟು ಅವರು ಬರೆದ ಬಹುಚರ್ಚಿತ ಲೇಖನಕ್ಕೆ ಪೂರ್ಣಚಂದ್ರ ಅವರು ಪ್ರತಿಕ್ರಿಯಯನ್ನು ಕಳುಹಿಸಿದ್ದಾರೆ. ಓದಿ..)

ಪ್ರೀತಿಯ ಮಟ್ಟು ಸರ್,

ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.
ನಮಸ್ಕಾರಗಳು. ನನ್ನ ಪರಿಚಯ ನಿಮಗೆ ಇಲ್ಲ ಎಂದು ಕಾಣುತ್ತೆ. ಆದರೆ, ನಿಮ್ಮ ಪರಿಚಯ ನನಗೆ ೧೦ ವರ್ಷದ್ದು. ನಿಮ್ಮ ಅಂಕಣಗಳನ್ನು ಓದುತ್ತಾ ಬೆಳೆದವನು ನಾನು.

ವಿವೇಕಾನಂದರ ಬಗ್ಗೆ ನೀವು ಬರೆದ ಲೇಖನ ಓದಿದ ಬಳಿಕ, ನನಗನಿಸಿದ್ದನ್ನು ನಿಮ್ಮೊಂದಿಗೆ ಹಂಚಿಕೊಳ್ಳಬೇಕು ಅನಿಸಿತು. ಅಷ್ಟರಲ್ಲಿಯೇ ವಿವೇಕಾನಂದರ ಪರ ಎಂದು ಭ್ರಮಿಸಿರುವ, ಭಾವಿಸಿಕೊಂಡಿರುವ ಬಲಪಂಥೀಯ ಮೂಲಭೂತವಾದಿಗಳು ನಿಮ್ಮ ವಿರುದ್ಧ ಕತ್ತಿ ಬೀಸಲಾರಂಭಿಸಿದರು.
ಇದಕ್ಕೆ ಪ್ರತಿಯಾಗಿ, ತಾವು ಮಟ್ಟು ಪರ(ವಿವೇಕನಂದ ಪರ ಅಲ್ಲ) ಎಂದು ಭ್ರಮಿಸಿರುವ ಎಡಪಂಥೀಯ ಹಾಗೂ ಪ್ರಗತಿಪರ ಮೂಲಭೂತವಾದಿಗಳು ಕೂಡ ತಮ್ಮ ಕತ್ತಿಗೆ ಸಾಣೆ ಹಿಡಿಯಲಾರಂಭಿಸಿದರು.

ಈ ಎರಡೂ ವರ್ಗದ ಮೂಲಭೂತವಾದಿಗಳು ಶಿವಮೊಗ್ಗ ಮತ್ತು ಬೆಂಗಳೂರಿನ ಬೀದಿಗಳಲ್ಲಿ, ನಿಮ್ಮ ಕಚೇರಿ ಎದುರು, ಬ್ಲಾಗ್‌ಗಳಲ್ಲಿ ಕತ್ತಿ ಬೀಸಾಡುವಾಗ ಮಧ್ಯೆ ಪ್ರವೇಶಿಸಲು ಭಯವಾಯಿತು. ಯಾರದ್ದಾದರೂ ಕತ್ತಿ ನನ್ನನ್ನೇ ತಿವಿದುಬಿಡಬಹುದು ಎಂದು ಸುಮ್ಮನಾದೆ. ಈಟಿ, ಭರ್ಜಿ, ಕತ್ತಿ ಗುರಾಣಿಗಳ ಅಬ್ಬರ ಕಡಿಮೆಯಾಗಿದೆ. ಹಾಗಾಗಿ ಇದು ಸೂಕ್ತ ಸಮಯ ಎಂದು ನನಗನಿಸಿದ್ದ ಕೆಲ ಸಂಗತಿಗಳನ್ನು ಹೇಳಲು ಪ್ರಯತ್ನಿಸುವೆ. ಮತ್ತಷ್ಟು ಓದು »

30
ಜನ

ಸಂಸ್ಕೃತಿ ಸಂಕಥನ – 20 – ಬುದ್ಧನನ್ನು ಹೈಜಾಕ್ ಮಾಡಿದ ಪ್ರೊಟೆಸ್ಟಾಂಟರು

-ರಮಾನಂದ ಐನಕೈ

ಎಲ್ಲರಿಗೂ ಅಚ್ಚರಿಯಾಗಬಹುದು. ಪ್ರೊಟೆಸ್ಟಾಂಟರು ಹೇಗೆ ಮತ್ತು ಏಕೆ ಬುದ್ಧಿಸಂನ್ನು ಹೈಜಾಕ್ ಮಾಡಿದರು ಎಂಬುದು. ಇಲ್ಲಿ ಹೈಜಾಕ್ ಅಂದರೆ ಅಪಹರಣ ಎಂಬ ಅರ್ಥವಲ್ಲ. ಪ್ರೊಟೆ ಸ್ಟಾಂಟರು ಬುದ್ಧಿಸಂನ್ನು ಹೇಗೆ ತಮ್ಮ ಸಮರ್ಥನೆ ಗಾಗಿ ಬಳಸಿಕೊಂಡರು ಎಂಬುದು. ಇದರ ಹಿಂದೆ ಸ್ವತಃ ಭಾರತೀಯರಿಗೆ ಅರ್ಥವಾಗದ ಹಲವು ರಹಸ್ಯಗಳಿವೆ. ಈ ರಹಸ್ಯಗಳನ್ನು ಬಾಲಗಂಗಾಧರರು ಸ್ವಾರಸ್ಯವಾಗಿ ಭೇದಿಸುತ್ತಾರೆ.

ಸಮಕಾಲೀನ ಭಾರತೀಯ ಚಿಂತಕರಿಗೆ ಬುದ್ಧಿಸಂ ಕುರಿತಾಗಿ ಒಂದು ಪೂರ್ವಗ್ರಹಿತ ಅಭಿ ಪ್ರಾಯಗಳಿವೆ. ಬುದ್ಧಿಸಂ ಮಾನವೀಯತೆಗಾಗಿ ಹೋರಾಡುತ್ತಿದೆ. ಇದು ಸಮಾಜದಲ್ಲಿನ ಅನಿಷ್ಟ ವನ್ನು ವಿರೋಧಿಸಿದೆ. ಯಜ್ಞಯಾಗಾದಿಗಳನ್ನು ಧಿಕ್ಕರಿಸಿದೆ. ಪ್ರಾಣಿ ಬಲಿ ವಿರೋಧಿಸಿ ಅಹಿಂಸಾ ತತ್ವ ಮೆರೆದಿದೆ. ಈ ಮೂಲಕ ಹಿಂದೂ ಯಿಸಂನ್ನು ವಿರೋಧಿಸಿದೆ. ಭಾರತದ ಜಾತಿ ವ್ಯವಸ್ಥೆಯನ್ನು ವಿಮರ್ಶಿಸಿದೆ. ಇಲ್ಲಿನ ವರ್ಣಾ ಶ್ರಮವನ್ನು ವಿರೋಧಿಸಿದೆ. ಇಲ್ಲಿನ ಪುರೋಹಿತ ಶಾಹಿಯನ್ನು ಹಾಗೂ ಬ್ರಾಹ್ಮಣರನ್ನು ವಿರೋಧಿಸಿದೆ. ಹಾಗಾಗಿ ಇದೊಂದು ವಿಶ್ವಮಾನ್ಯವಾದ ರಿಲಿಜನ್. ಬುದ್ಧಿಸಂ ಸಮಾಜದಲ್ಲಿನ ತರತಮ ವನ್ನು ಸಹಿಸುವುದಿಲ್ಲ. ಮನುಷ್ಯರ ಏಳ್ಗೆಗಾಗಿ ಹಂಬಲಿಸುತ್ತದೆ ಇತ್ಯಾದಿ. ಈ ಕಾರಣಕ್ಕಾಗೆ ನಮ್ಮ ದೇಶದ ದಲಿತ ಚಿಂತಕರೆಲ್ಲ ಬುದ್ಧಿಸಂ ಕಡೆಗೆ ಆಕರ್ಷಿತರಾದರು. ಅಂಬೇಡ್ಕರರು ಕೂಡ ಬುದ್ಧಿಸಂಗೆ ಮತಾಂತರ ಹೊಂದಿದ್ದು ಈ ಆಕರ್ಷಣೆಯಿಂದ. ನಿಜವಾಗಿಯೂ ಇದು ನಿಜವೆ? ಭಾರತೀಯ ಸಂಸ್ಕೃತಿಯೊಂದಿಗೆ ಬುದ್ಧಿಸಂ ವಿರೋಧವಾಗಿಯೇ ನಡೆದುಕೊಂಡು ಬಂದಿ ದೆಯೇ? ನಿಜವಾಗಿಯೂ ಬುದ್ಧ ವರ್ಣಾಶ್ರಮ ದಿಂದ ಹೊರಗುಳಿದು ವರ್ಣಾಶ್ರಮ ಪದ್ಧತಿಯನ್ನು ವಿರೋಧಿಸಿದನೇ? ಈಗ ನಾವು ವಿಸ್ಮೃತಿಯಿಂದ ಸ್ಮೃತಿಗೆ ಬರಬೇಕಾಗಿದೆ.

ಮತ್ತಷ್ಟು ಓದು »