ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

20
ಜನ

ಮಿಡ್ನಾಪುರದಲ್ಲಿ ಕ್ರಾಂತಿಯ ಕಲರವ…

– ಭೀಮಸೇನ್ ಪುರೋಹಿತ್

ಬಂಗಾಳದ ತೋಟದಿಂದ, ತಾಯಿ ಭಾರತಿಗೆ ಪೂಜಿತಗೊಂಡ ಕ್ರಾಂತಿಯ ಹೂವುಗಳು ಅಸಂಖ್ಯ,ಅಂಥಾ ಒಬ್ಬ ಯುವಕನ ಸ್ಮರಣೆ ಇದು.

ಮಿಡ್ನಾಪುರ ಅನ್ನೋದು ಬಂಗಾಳದ ಒಂದು ಜಿಲ್ಲೆ. “ಅನುಶೀಲನ ಸಮಿತಿ”ಯ ಪ್ರಭಾವದಿಂದ ಅನೇಕ ಯುವಕ ಕ್ರಾಂತಿಕಾರಿಗಳು ಅಲ್ಲಿ ಬೆಳೆದಿದ್ರು..ಮಿಡ್ನಾಪುರದಲ್ಲಿ ಇದ್ದ ಆಂಗ್ಲ ಅಧಿಕಾರಿಗಳು ಅತಿಕ್ರೂರತನದಿಂದ ಆಳ್ವಿಕೆ ನಡೆಸ್ತಿದ್ರು.

ಅಲ್ಲಿನ ಮ್ಯಾಜಿಸ್ಟ್ರೇಟ್ ಗಳಂತೂ, ಕ್ರಾಂತಿಕಾರಿಗಳ ಮೇಲೆ ಕೇಸುಗಳನ್ನ ಹಾಕಿ, ವಿವಿಧ ಶಿಕ್ಷೆಗಳನ್ನ ವಿಧಿಸ್ತಿದ್ರು.ಹೀಗಾಗಿಯೇ, ಮಿಡ್ನಾಪುರದ ಯುವಕರು ಆಲ್ಲಿನ ಬ್ರಿಟಿಷರಿಗೆ ಒಂದು ಬಿಸಿ ಮುಟ್ಟಿಸಿದರು. ತಮ್ಮ ಜಿಲ್ಲೆಗೆ ಒಬ್ಬ ಭಾರತೀಯನನ್ನು ಮ್ಯಾಜಿಸ್ಟ್ರೇಟ್ ಮಾಡೋ ವರೆಗೂ, ಉಳಿದ ಆಂಗ್ಲ ಮ್ಯಾಜಿಸ್ಟ್ರೇಟ್ ಗಳನ್ನ ಕೊಲ್ತಿವಿ ಅಂತ..ಬ್ರಿಟಿಷರು ಇದನ್ನು ಅಷ್ಟೊಂದು ಪರಿಗಣಿಸಲಿಲ್ಲ.

ಆಗ ಅಲ್ಲಿಗೆ ‘ಜೇಮ್ಸ್ ಪ್ಯಾಡಿ’ ಅನ್ನೋನು ಮ್ಯಾಜಿಸ್ಟ್ರೇಟ್ ಆಗಿ ಬಂದ. ಪ್ರತಿಜ್ಞೆ ಮಾಡಿದ್ದ ಕ್ರಾಂತಿಕಾರಿಗಳು, ಅದೊಂದು ಸಮಾರಂಭದಲ್ಲಿ, ಅತಿಥಿಯಾಗಿ ಬಂದಿದ್ದ ಅವನನ್ನು ಗುಂಡು ಹಾರಿಸಿ ಕೊಂದೇ ಬಿಟ್ಟರು. ಬ್ರಿಟಿಷರು ಕಲ್ಕತ್ತೆಯಿಂದ ವೈದ್ಯರನ್ನು ಕರೆಸಿದರು. ವೈದ್ಯರು ಪ್ಯಾಡಿ ಯಾ ದೇಹದಿಂದ ಗುಂಡುಗಳನ್ನು ಹೊರತೆಗೆದರೂ, ಅವನನ್ನು ಬದುಕಿಸಲಾಗಲಿಲ್ಲ.. ಯುವಕರ ನಿಲುವು ಸ್ಪಷ್ಟವಾಗಿತ್ತು. ಆಂಗ್ಲರು ಈಗ ಸ್ವಲ್ಪ ಚಿನ್ತಿಸಲಾರಮ್ಭಿಸಿದರು..

ಆನಂತರ ‘ಡಾಗ್ಲಾಸ್’ ಎಂಬ ಆಂಗ್ಲನನ್ನು ಮತ್ತೆ ಮ್ಯಾಜಿಸ್ಟ್ರೇಟ್ ಆಗಿ ನಿಯೋಜಿಸಿದರು.. ಆತ ಮೊದಲಿಂದಲೂ ಹೆದರಿದ್ದ.ಅದೊಮ್ಮೆ “ಡಿಸ್ಟ್ರಿಕ್ಟ್ ಬೋರ್ಡ್” ನ ಸಭೆ ಇತ್ತು. ಸಂಜೆಯವರೆಗೂ ಶಾಂತಿಯುತವಾಗಿಯೇ ಇತ್ತು. ಆದರೆ ಗಂಟೆ ೫ ಆಗುತ್ತಿದ್ದಂತೆ ಇಬ್ರು ಯುವಕರು, ‘ಡಾಗ್ಲಾಸ್’ ನ ಹತ್ರ ಬಂದ್ರು. ನೋಡುನೋಡುತ್ತಲೇ ಆ ಆಂಗ್ಲನ ಮೇಲೆ ಗುಂಡು ಹಾರಿಸಲಾಯಿತು..ಆ ಅಧಿಕಾರಿ ಧರೆಗುರುಳಿದ.

ಮತ್ತಷ್ಟು ಓದು »

19
ಜನ

ಸ್ವಾಮಿ ವಿವೇಕಾನಂದರೊಳಗಿನ ’ಮನುಷ್ಯ’ ಮತ್ತು ಮನುಷ್ಯನೊಳಗಿನ ’ಅವಿವೇಕ’

– ರಾಕೇಶ್ ಶೆಟ್ಟಿ

ಓದು,ಅನುಭವ ಮತ್ತು ವಯಸ್ಸು,ಮನುಷ್ಯನನ್ನ ಮಾಗಿಸುತ್ತದೆ ಅನ್ನುತ್ತಾರೆ,ಆದರೆ ಕೆಲವರ ಪಾಲಿಗೆ ಓದು,ಅನುಭವದ ಜೊತೆಗೆ ವಯಸ್ಸು ಬಾಗಿಸುತ್ತದೆ ದೇಹ ಮತ್ತೆ ತಲೆ ಎರಡನ್ನೂ…! ಅಂತವರ ವಿಷಯ ಪಕ್ಕಕ್ಕಿರಲಿ….ವಿವೇಕಾನಂದರ ವಿಷಯಕ್ಕೆ ಬರೋಣ…

ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಸ್ವಾಮಿ ವಿವೇಕಾನಂದರು ಜಪಾನ್ ಮೂಲಕ ಸಾಗುವಾಗ ಅಲ್ಲಿನ ನಗರ ವೀಕ್ಷಣೆಯ ನಂತರ ತಮ್ಮ ಮದರಾಸಿ ಶಿಷ್ಯರಿಗೆ ಬರೆದ ಪತ್ರದ ಸಾಲುಗಳಿವು.ಈ ಪತ್ರದ ಕೆಲವು ಸಾಲುಗಳು ಇಂದಿಗೂ ನಮ್ಮ ನಡುವಿನ ತಲೆ ಕೆಟ್ಟ ಸಮಸ್ಯೆಗಳ ಅರಿವಿದ್ದೆ ಅವರು ಅಂದೇ ಹೇಳಿದ್ದರೇನೋ ಅನ್ನುವಂತಿವೆ.

“ಜಪಾನೀಯರ ಪಾಲಿಗಂತೂ ಭಾರತವೆಂದರೆ ಇನ್ನೂ ಎಲ್ಲ ಶ್ರೇಷ್ಠ-ಉನ್ನತ ವಿಚಾರಗಳ ಸ್ವಪ್ನ ಲೋಕವೇ ಆಗಿದೆ.ಆದರೆ ನೀವು?ನೀವೆಂಥವರು?… ಜೀವನವಿಡೀ ಕಾಡು ಹರಟೆಯಲ್ಲೇ ಮುಳುಗಿರುವವರು.ಕೇವಲ ಹರಟೆ ಮಲ್ಲರು.ಇನ್ನೆಂಥವರು ನೀವು? ಬನ್ನಿ ಇಲ್ಲಿಗೆ.ಈ ಜನರನ್ನು ನೋಡಿ ಬಳಿಕ ನಾಚಿಕೆಯಿಂದ ಮುಖ ಮುಚ್ಚಿ ಕುಳಿತುಕೊಳ್ಳಿ.

ಸಮುದ್ರ ದಾಟಿದರೆ ನಿಮ್ಮ ಜಾತಿ ಕೆಟ್ಟು ಹೋಗುತ್ತದಲ್ಲವೇ…!? ಬುದ್ದಿ ಕೆಟ್ಟ ಅರಳು ಮರಳು ಜನಾಂಗ…! ಶತಶತಮಾನಗಳಿಂದಲೂ ಮೂಢನಂಬಿಕೆ-ಕಂದಾಚಾರಗಳ ಕಂತೆಗಳನ್ನೇ ತಲೆಯ ಮೇಲೆ ಹೊತ್ತು ಕುಳಿತಿರುವವರು…!

ಈ ಆಹಾರವನ್ನು ಮುಟ್ಟಬಹುದೇ? ಆ ಆಹಾರವನ್ನು ಮುಟ್ಟಬಹುದೇ? ಎಂಬ ಬಹಳ ದೊಡ್ಡ ವಿಮರ್ಶೆಯಲ್ಲಿ ನೂರಾರು ವರ್ಷಗಳಿಂದ ಮುಳುಗಿದ್ದೀರಲ್ಲಾ-ಎಂಥ ಮನುಷರು ನೀವೆಲ್ಲ!

ಮತ್ತಷ್ಟು ಓದು »

13
ಜನ

‘ಚಿತ್ತಗಾಂಗ್’ನಲ್ಲಿ ಸ್ವಾತಂತ್ರ್ಯ’ಸೂರ್ಯ’ನ ಉದಯ…!

– ಭೀಮಸೇನ್ ಪುರೋಹಿತ್

‘ಚಿತ್ತಗಾಂಗ್’ ಅನ್ನೋ ಹೆಸರು ಕೇಳಿದರೆ ಸಾಕು, ಸ್ವಾತಂತ್ರ್ಯ ಇತಿಹಾಸವನ್ನು ಓದಿದ ಪ್ರತಿಯೊಬ್ಬರಿಗೂ ಮೈನವಿರೇಳುತ್ತದೆ. ಅಂಥಾ ಚಮತ್ಕಾರ ನಡೆದ ಸ್ಥಳ ಅದು. ಕ್ರಾಂತಿಕಾರಿಗಳ, ದೇಶಪ್ರೇಮಿಗಳ ಪುಣ್ಯಕ್ಷೇತ್ರವದು.ಆದರೆ, ದೇಶ ವಿಭಜನೆಯಾದ ಮೇಲೆ, ಈಗ ಈ ಜಾಗ ‘ಬಾಂಗ್ಲಾದೇಶ’ದಲ್ಲಿದೆ..

ಅವನ ಹೆಸರು ‘ಸೂರ್ಯಸೇನ್’. ವೃತ್ತಿಯಿಂದ ಶಿಕ್ಷಕ.. ಎಲ್ಲ ವಿದ್ಯಾರ್ಥಿಗಳ ಪ್ರೀತಿಯ ‘ಮಾಸ್ಟರ್ ದಾ’.ಹುಟ್ಟಿದ್ದು ನೌಪರ ಎಂಬ ಗ್ರಾಮದಲ್ಲಿ, 1894 ರಲ್ಲಿ…ಅದಾಗಲೇ, ಬಂಗಾಳದ ಪ್ರಸಿದ್ಧ ಸಂಘಟನೆಗಳಾದ ‘ಅನುಶೀಲನ ಸಮಿತಿ’ ಮತ್ತು ‘ಜುಗಾಂತರ’ ದಿಂದ ಪ್ರಭಾವಿತನಾಗಿದ್ದ..

ಭಾರತದ ಸ್ವಾತಂತ್ರ್ಯ, ಚಿತ್ತಗಾಂಗ್ ಗ್ರಾಮದಿಂದಲೇ ಪ್ರಾರಂಭವಾಗಬೇಕೆಂಬ ಮಹತ್ವಾಕಾಂಕ್ಷೆ ಹೊದಿದ್ದ.. ಅದಕ್ಕಾಗಿ ಮಾಸ್ಟರ್ ದಾ, ಸಂಘಟನೆಯನ್ನೂ ಶುರು ಮಾಡಿದ್ರು.. ಶಿಕ್ಷಕರಾಗಿದ್ದರಿಂದ ಸಂಘಟನೆ ಮಾಡೋದು ಅಷ್ಟೇನೂ ಕಷ್ಟ ಆಗ್ಲಿಲ್ಲ. ಶಾಲೆಯಲ್ಲಿನ, ಕೇವಲ 14-15 ವರ್ಷದೊಳಗಿನ ಪುಟ್ಟ ವಿದ್ಯಾರ್ಥಿಗಳೂ ಸೂರ್ಯಸೇನನ ಜೊತೆ ಸಹಕರಿಸಲು ಮುಂದೆ ಬಂದ್ರು..

ಮತ್ತಷ್ಟು ಓದು »

9
ಜನ

ಸಂಸ್ಕೃತಿ ಸಂಕಥನ – 17 ಜಾತಿ, ರಿಲಿಜನ್ ಹಾಗೂ ಸೆಕ್ಯುಲರಿಸಂ ಭಗವದ್ಗೀತೆ ವಿವಾದ

-ರಮಾನಂದ ಐನಕೈ

ಕೇವಲ ಭಗವದ್ಗೀತೆ ಮಾತ್ರವಲ್ಲ, ಇತ್ತೀಚಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಸಂಪ್ರ ದಾಯಗಳಿಗೆ ಸಂಬಂಧಪಟ್ಟಂತೆ ಅನೇಕ ಸಂಗತಿ ಗಳು ವಿವಾದಕ್ಕೆ ಕಾರಣವಾಗುತ್ತಿವೆ. ಹಾಗೂ ಇವೆಲ್ಲ ರಾಜಕೀಯ ಸ್ವರೂಪ ಪಡೆದು ಸೆಕ್ಯುಲರ್ ಪ್ರಭುತ್ವ ಸಂದಿಗ್ಧದಲ್ಲಿ ಸಿಲುಕುವಂತಾಗುತ್ತಿದೆ. ಹಾಗಾದರೆ ಈ ದೇಶದಲ್ಲಿ ಏನು ನಡೆಯುತ್ತಿದೆ?

ಭಗವದ್ಗೀತೆ ವಿವಾದಕ್ಕೆ ಸಂಬಂಧಪಟ್ಟಂತೆ ಪತ್ರಿಕೆಗಳಲ್ಲಿ ದಿನನಿತ್ಯ ಹೇಳಿಕೆಗಳು ಬರುತ್ತಲಿವೆ. ಈ ಕುರಿತು ಒಂದು ಅಭಿಪ್ರಾಯ ರೂಪಿಸುವ ಪ್ರಯತ್ನ ನಡೆಯುತ್ತಿದೆ. ಅಂದರೆ ಭಾರತೀಯ ಸಂಸ್ಕೃತಿಯ ಕುರಿತಾದ ಪರಸ್ಪರ ತಪ್ಪು ತಿಳುವಳಿಕೆ ಗಾಗಿ ಭಗವದ್ಗೀತೆಯನ್ನು ಬಹಿರಂಗವಾಗಿ ಹರಾಜಿಗೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಗೀತೆಯಿಂದ ಶೂದ್ರರಿಗೆ ಹಾಗೂ ದಲಿತರಿಗೆ ಭಾರೀ ಅಪಾಯವಿದೆ ಎಂದು ಭಯ ಹುಟ್ಟಿಸಲು ಪ್ರಯತ್ನಿ ಸುತ್ತಿದ್ದಾರೆ. ಇಲ್ಲಿ ಒಂದನ್ನು ಗಮನಿಸಬೇಕು. ಇವೆಲ್ಲ ಸಾಮಾನ್ಯ ಜನರ ಅಥವಾ ಸಮೂಹದ ಅಭಿಪ್ರಾಯಗಳಲ್ಲ. ಆಯಾ ಸಮುದಾಯದ ವಕ್ತಾರರು ಅಥವಾ ಚಿಂತಕರೆನಿಸಿಕೊಂಡವರು ಮಾಧ್ಯಮಗಳ ಮೂಲಕ ಈ ರೀತಿ ಧರ್ಮಯುದ್ಧ ಮಾಡುತ್ತಿದ್ದಾರೆ. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತಾಗಿದೆ ಪರಿಸ್ಥಿತಿ. ಈ ಪರಿ ಅರೆಬರೆ ಚಿಂತಕರನ್ನು ನೋಡಿದರೆ ಒಂದು ದಿನ ದೇವರ ವಿಗ್ರಹಗಳನ್ನು ಕಿತ್ತು ಕೈಯಲ್ಲಿ ಆಯುಧ ವಾಗಿ ಹಿಡಿದು ಹೊಡೆದುಕೊಂಡರೆ ಅಚ್ಚರಿಯೇ ನಿಲ್ಲ.

ಈ ಪರಿಸ್ಥಿತಿಗೆ ಮುಖ್ಯ ಕಾರಣವೆಂದರೆ ಭಾರತೀಯ ಸಂಸ್ಕೃತಿಯನ್ನು ರಿಲಿಜನ್ ಎಂದು ವ್ಯಾಖ್ಯಾನಿಸಿಕೊಳ್ಳುತ್ತಿರುವುದು. ಯುರೋಪಿ ಯನ್ನರು ಇಡೀ ಭಾರತೀಯ ಸಂಸ್ಕೃತಿಯನ್ನು ಸೇರಿಸಿ ಹಿಂದೂಯಿಸಂ ಎಂದು ಕರೆದು ಅದಕ್ಕೆ ರಿಲಿ ಜನ್ನಿನ ಲಕ್ಷಣ ಸೇರಿಸಲು ಪ್ರಯತ್ನಿಸಿದರು. ಆದ್ದರಿಂದಲೇ ನಾವಿಂದು ಹಿಂದೂಯಿಸಂ ಅಂದರೆ ಇಸ್ಲಾಂ ಹಾಗೂ ಕ್ರಿಶ್ಚಿಯಾನಿಟಿ ಇದ್ದಹಾಗೆ ಒಂದು ಅಖಂಡವಾದ ರಿಲಿಜನ್ ಎಂದು ತಿಳಿದುಕೊಂಡಿ ದ್ದೇವೆ. ಹಾಗಾಗಿ ಹಿಂದೂ ಸಂಪ್ರದಾಯಗಳನ್ನೆಲ್ಲ ರಿಲೀಜಿಯಸ್ ಚಟುವಟಿಕೆಯೆಂಬಂತೆ ಅತ್ಯಂತ ಗುಮಾನಿಯಿಂದ ನೋಡಲಾಗುತ್ತದೆ. ರಿಲಿಜೀ ಯಸ್ ಚಟುವಟಿಕೆಗಳ ಸಾರ್ವಜನೀಕರಣವನ್ನು ಸೆಕ್ಯುಲರ್ ನೀತಿ ಒಪ್ಪುವುದಿಲ್ಲ. ಅದಕ್ಕಾಗಿ ಎಡ ಪಂಥೀಯ ಚಿಂತಕರಿಗೆ ಇಂಥ ಸಾಂಪ್ರದಾಯಿಕ ಆಚರಣೆಗಳೆಲ್ಲ ನಿಷಿದ್ಧ ಹಾಗೂ ಮೌಢ್ಯ.

ಮತ್ತಷ್ಟು ಓದು »

28
ಡಿಸೆ

“ಯೂನಿವರ್ಸಲ್ ಬ್ರದರ್‌ಹುಡ್” ಬರೀ ಬೂಟಾಟಿಕೆಯೇ ?

-ಸಾಗರ್ ಮೈಸೂರು

ಸ್ವಾಮೀ,
ಯಾಕೆ ಮುಗ್ಧ ಜನರ ತಲೆಯಲ್ಲಿ ವಿಷದ ಬೀಜ ಬಿತ್ತುತ್ತಿದ್ದೀರಿ? ನೀಮಗೂ ಭಯೋತ್ಪಾದಕರನ್ನು ಹುಟ್ಟು ಹಾಕುವ ಮುಲ್ಲಾ ಗಳಿಗೂ ಅಥವಾ ಭಾಷಾ ದುರಭಿಮಾನಿಗಳಿಗೂ ಏನು ವ್ಯತ್ಯಾಸ? ಸಾಮರಸ್ಯದಿಂದ ಬದುಕುವ ಬಗೆ ಹೇಗೆಂದು ತಿಳಿದಿದ್ದರೆ ಬರೆಯಿರಿ. ಇಲ್ಲಾಂದ್ರೆ ಸುಮ್ಮನಿರಿ. ನಿಮ್ಮನ್ತವರನ್ತು ಬರೆದು , ಬೆಂಕಿ ಹಚ್ಚಿ ತಣ್ಣಗೆ ಕುಳಿತು ಚಂದ ನೋಡುತ್ತಿರಿ. ಅಮಾಯಕರು ನಿಮ್ಮಿಂದ ಪ್ರೇರಿತರಾಗಿ ಯಾರದೋ ಮೈಮೇಲೆ ಬಿದ್ದು ಸಮಾಜದ ಶಾಂತಿ ಕದದುತ್ತಾರೆ ಅಥವಾ ಜೀವ ಬಿಡುತ್ತಾರೆ. ದುರಭಿಮಾನ, ಭಯೋತ್ಪಾದನೆ ಹುಟ್ಟುವುದು ಮೊದಲು ಮನಸ್ಸಿನಲ್ಲಿ. ಪ್ರೇರಿತರದವರು ಕೆಲವರು ಚಾಕು ಬಳಸುತ್ತಾರೆ, ಕೆಲವರು ಬಾಂಬು ಹಾಕುತ್ತಾರೆ, ಅವರವರ ಯೋಗ್ಯತೆಗೆ ತಕ್ಕಂತೆ. ನಿಮ್ಮಂಥವರು ಚಂದ ನೋಡುತ್ತೀರಿ.
“ಬೆಂಗಳೂರಿನ ಜುಟ್ಟು ಈಗಾಗಲೇ ರೆಡ್ಡಿಗಳ ಕೈಯ್ಯಿಗೆ ಕೊಟ್ಟಾಗಿದೆ” ಎಂದು ಮಹಾನ್ ಮೇಧಾವಿಯೊಬ್ಬರು (ಹಾಗೆಂದು ತಿಳಿದ) ಹೇಳಿದಾಗ ಅದ್ಯಾವನೋ ‘ವಿಷ್ಣು’ ಎಂಬುವವ ನೀಡಿದ್ದ ‘ಪ್ರತಿಕ್ರಿಯೆ’ ಅದು! ಹೌದಾ?! ಅದು ನಿಜಾನಾ? ನಮ್ಮ ಬೆಂಗಳೂರನ್ನ ನಿಜವಾಗಿಯೂ ‘ಅನ್ಯರು’, ‘ಕನ್ನಡೇತರರು’ ಆಳುತ್ತಿದ್ದಾರಾ ಎಂಬ ಪ್ರಶ್ನೆಯನ್ನ ನಮಗೆ ನಾವೇ ಹಾಕಿಕೊಂಡು serious ಆಗಿ ‘ಪರೀಕ್ಷಿಸಲು’ ಹೊರಟರೆ ಆ ‘ವಿಷ್ಣು’ ಎಂಬುವವನ ‘ಅಡ್ರಸ್ಸ್ ಹುಡುಕು’ವ ಮನಸ್ಸಾಗುತ್ತದೆ! ಅವನಿಗೊಂದು ವಿಶೇಷವಾದ ‘ದೊಣ್ಣೆ’ ರೆಡಿಮಾಡಿಸುವ ಕನಸು ಮೂಡುತ್ತದೆ!! ಆ ಮೇಧಾವಿ ಎಂಬ ಪತ್ರಕರ್ತ ಯಾವಾಗ ನೋಡಿದರೂ ‘ಭಾರತ’, ‘ಭಾರತೀಯತೆ’ ಎಂದು ಕಿರುಚಾಡುವವ. ಅಂಥವನೇ “ಪರಭಾಷಿಕರನ್ನ ಮಟ್ಟ ಹಾಕದಿದ್ದರೆ ಅಪಾಯ ತಪ್ಪಿದ್ದಲ್ಲ” ಎಂಬ ಸತ್ಯವನ್ನ ಕಂಡುಕೊಂಡಿದ್ದಾನೆ ಎಂದರೆ, ಅದರ ಮಹತ್ವವನ್ನ ನೀವೇ ಅರ್ಥಮಾಡಿಕೊಳ್ಳಿ.

ಮತ್ತಷ್ಟು ಓದು »

26
ಡಿಸೆ

ನನ್ನ ಬದುಕು ಪರಿವರ್ತಿಸಿದ ಬಂಗಾರಪ್ಪ

-ಬನವಾಸಿ ಸೋಮಶೇಖರ್, ಮಂಗಳೂರು
“1992 ನೇ ಇಸ್ವಿ.ನಾನು ಆಗಷ್ಟೇ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ಮುಗಿಸಿದ್ದೆ.ಫಲಿತಾಂಶ ಇನ್ನೂ ಬಂದಿರಲಿಲ್ಲ.ಅತ್ಯಂತ ಕಡು ಬಡತನದ ಕುಟುಂಬ ನಮ್ಮದು.ಒಂದು ಹೊತ್ತಿನ ತುತ್ತಿಗೂ ತತ್ವಾರ ಪಡುವಂತ ದಯನೀಯ ಮತ್ತು ಶೋಚನೀಯ ಸ್ಥಿತಿ.ತಂದೆ ನಾ ಮಗುವಾಗಿರುವಾಗಲೇ ಗತಿಸಿದ್ದರು.ಮೂರು ಜನ ಅಣ್ಣಂದಿರು, ಒಬ್ಬಳು ಸಹೋದರಿ.ದೊಡ್ಡಣ್ಣ 10-11ರ ಪ್ರಾಯದಲ್ಲಿಯೇ ಮನೆ ಬಿಟ್ಟು ಹೋದವನು ನಾಪತ್ತೆಯಾಗಿದ್ದ.ಅಮ್ಮ ಅವನಿಗಾಗಿ ಹುಡುಕಾಡಿ ಹುಡುಕಾಡಿ ಹೈರಾಣಾಗಿದ್ದರು.ಉಳಿದ ಇಬ್ಬರು ಅಣ್ಣಂದಿರಲ್ಲಿ ಒಬ್ಬ ಮಾತ್ರ ಅತ್ಯಂತ ಶ್ರಮಜೀವಿ.ಇಬ್ಬರೂ ಕೂಲಿ ಕೆಲಸ ಮಾಡಿ ತುತ್ತಿನ ಚೀಲ ತುಂಬಿಸುತ್ತಿದ್ದರು. ಅನ್ನಕ್ಕಾಗಿ ಹಾತೊರೆಯುವ ಪರಿಸ್ಥಿತಿ ಅದಾಗಿತ್ತು. ಅದಕ್ಕಾಗಿ ಒಮ್ಮೊಮ್ಮೆ ಅಕ್ಕ,ಅಣ್ಣಂದಿರೊಂದಿಗೆ ಜಗಳವಾಡಿದ್ದು ಇಂದಿಗೂ ನೆನಪಿದೆ. ಕೊನೆಯ ಮಗನಾದ ನನ್ನನ್ನು ಓದಿಸಬೇಕೆಂಬುದು ಅಮ್ಮನ ಮಹದಾಸೆ ಅಣ್ಣಂದಿರ ಹಿರಿಯಾಸೆಯಾಗಿತ್ತು.
ನಾನಾದರೋ ಮನೆಯ ದೈನ್ಯೇಸಿ ಸ್ಥಿತಿಯನ್ನು ನೋಡಿ ಮನೆ ಬಿಟ್ಟು ಹೋಗಿ ಏನಾದರೂ ಕೆಲಸ ಮಾಡಿ ಮನೆಗೆ ಆಸರೆಯೊದಗಿಸಬೇಕೆಂದು ಹಾತೊರೆದು ಮನೆ ತೊರೆದು ಬೆಂಗಳೂರಿನತ್ತ ಮುಖ ಮಾಡಿಯೇ ಬಿಟ್ಟಿದ್ದೆ. ಕೈಯಲ್ಲಿ  ಸಂಗ್ರಹಿಸಿಟ್ಟಿದ್ದ ಇಪ್ಪತ್ತು ರೂಪಾಯಿ ಇತ್ತಷ್ಟೇ.ಯಾವ್ಯಾವುದೋ ಬಸ್ ಹತ್ತಿ ನಿರ್ವಾಹಕನ ಕಣ್ ತಪ್ಪಿಸಿ ಟಿಕೇಟು ತೆಗೆಸದೇ ಬೆಂಗಳೂರಿಗೆ ಬಂದಿಳಿದಿದ್ದೆ.ಆಗ ನಾಡಿನ ದೊರೆಯಾಗಿದ್ದವರೇ ನಮ್ಮ ಸಾರೆಕೊಪ್ಪ ಬಂಗಾರಪ್ಪನವರು.ಅವರು ನಮ್ಮ ಪಕ್ಕದ ತಾಲೂಕಿನವರಾಗಿದ್ದರಿಂದಲೂ ನಮ್ಮೂರಲ್ಲಿ ಅವರ ಬಗ್ಗೆ ಅಪಾರ ಜನಪ್ರೀಯತೆ ಇದ್ದುದರಿಂದಲೂ ಅವರಲ್ಲಿಗೆ ಹೋಗಿ ಏನಾದರೂ ಸಹಾಯ ಪಡೆದು ಬೆಂಗಳೂರಲ್ಲಿ ಕೆಲಸ ಮಾಡಬಹುದೆಂದು ಯೋಚಿಸಿ ಸೊರಬದವನೆಂದು ಸುಳ್ಳು ಹೇಳಿ ಮುಖ್ಯಮಂತ್ರಿಗಳ ಗೃಹ ಕಛೇರಿಯನ್ನು ಹರಸಾಹಸ ಮಾಡಿ ಪ್ರವೇಶಿಸಿದ್ದೆ.ಸಾವಿರಾರು ಸಾರ್ವಜನಿಕರು ಅಹವಾಲು ಸಲ್ಲಿಸಲು ಸರತಿಯಲ್ಲಿ ನಿಂತು ಕಾಯುತ್ತಿದ್ದರು.ನಾನೂ ಹಾಗೆಯೇ ಮಾಡಿದೆ. ಮತ್ತಷ್ಟು ಓದು »
26
ಡಿಸೆ

ಸಂಸ್ಕೃತಿ ಸಂಕಥನ 15 -ಭಾರತೀಯ ಪ್ರಭುತ್ವದ ಸೆಕ್ಯುಲರ್ ಗೊಂದಲಗಳು

ರಮಾನಂದ ಐನಕೈ

ಬಹುಸಂಸ್ಕೃತಿ ಹಾಗೂ ರಿಲಿಜನ್  ಎರಡೂ ಒಟ್ಟಿಗೇ ಬಾಳಬೇಕಾದ ಭಾರತದಂತಹ ದೇಶದಲ್ಲಿ ಪ್ರಭುತ್ವ  ತಟಸ್ಥವಾಗಿರಲು ಸಾಧ್ಯವೇ? ಏಕೆಂದರೆ ಇಲ್ಲಿ ನಂಬಿಕೆಯಲ್ಲಿ ಭಿನ್ನತೆ ಇದೆ. ಇಂಥಲ್ಲಿ ಸೆಕ್ಯುಲರ್ ಪ್ರಭುತ್ವ ಯಾರಿಗೆ ನ್ಯಾಯ ನೀಡುತ್ತದೆ? ಒಂದಕ್ಕೆ ನೀಡಿದ ನ್ಯಾಯ ಇನ್ನೊಂದಕ್ಕೆ ಅನ್ಯಾಯವಾಗಲು ಸಾಧ್ಯ. ಏಕೆಂದರೆ ರಿಲಿಜನ್ನವರು ಲೋಕಜ್ಞಾನದಲ್ಲಿ ಬದುಕುತ್ತಾರೆ. ಸಂಸ್ಕೃತಿಯಲ್ಲಿ ಕ್ರಿಯಾಜ್ಞಾನ ಇರುತ್ತದೆ. ಸೆಕ್ಯುಲರ್ ನೀತಿ ಲೋಕಜ್ಞಾನದಲ್ಲಿ ಉದಯಿಸಿದ್ದು. ಹಾಗಾಗಿ ಕ್ರಿಯಾಜ್ಞಾನದ ಸೂಕ್ಷ್ಮತೆಗೆ ಸ್ಪಂದಿಸುವಲ್ಲಿ ಸೋಲುವ ಸಾಧ್ಯತೆ ಇದೆ. ಹಾಗಾಗಿ ಸೆಕ್ಯುಲರ್ ನೀತಿಯನ್ನು ಭಾರತೀಯ ಸಂದರ್ಭದಲ್ಲಿ ಪುನರ್ಪರಿಶೀಲನೆ ಮಾಡುವ ಅಗತ್ಯ ಇದೆ.

ಭಾರತ ಸರಕಾರದ ಸೆಕ್ಯುಲರ್ ನೀತಿಯ ಸುತ್ತ ಹಲವು ಸಂದಿಗ್ಧಗಳಿವೆ. ನಮ್ಮ ಪ್ರಭುತ್ವಕ್ಕೆ ಈ ಪರಿಸ್ಥಿತಿ ಎದುರಾಗಲು ಕಾರಣವೇನು? ಸೆಕ್ಯುಲರ್ ಎಂಬ ಸಮಾನತೆಯ ಮಂತ್ರ ನಮ್ಮಲ್ಲಿ ಯಾವ ಫಲಿತಾಂಶ ನೀಡುತ್ತಿದೆ?

ಮತ್ತಷ್ಟು ಓದು »

23
ಡಿಸೆ

ವಿಶಿಷ್ಟ ಸ್ಯೆಕಲ್ಲಿನ ಬೆಲ್ಜಿಯಂ ಜೋಡಿ

-ಗೋವಿಂದ ನೆಲ್ಯಾರು

ನಡುರಾತ್ರೆ ಎಪಿ ಸುಬ್ರಮಣ್ಯಂ ಅವರಿಂದ ಸತತ ನನ್ನ ಸಂಪರ್ಕ ಪ್ರಯತ್ನ. ನಾನು ರಾತ್ರಿ ಬೇಗ ಮಲಗುವ ವ್ಯಕ್ತಿ. ಅದುದರಿಂದ ನಿದ್ದೆಯ ಮದ್ಯೆ ಕಿವಿಗೊಟ್ಟು ಎಲ್ಲಕ್ಕೂ ಹೂಂಗುಟ್ಟಿದೆ. ಎರಡು ಜನ ಎರಡು ಪೆಡಲ್ ಎರಡು ಚಕ್ರದ ಗಾಡಿ ಯಾವುದೂ ಸ್ಪಷ್ಟವಾಗಿ ಅರ್ಥವಾಗಿರಲಿಲ್ಲ.   ಕಿವಿ ಸಮಸ್ಯೆಯೂ  ನನಗುಂಟು.    ಮರುದಿನ ಮಾಮೂಲಿ ಒಂಬತ್ತು ಕಿಮಿ ದೂರದ ತ್ರಿಚಕ್ರ ತಿರುಗಾಟದಿಂದ ಹಿಂತಿರುಗಿದ ನಂತರ ನಮ್ಮ ಸುಬ್ಬಣ್ಣ ಮೊದಲು ಮಾತನಾಡಿದ ಅನಿಲ ಪರದೇಶಿ ಸೈಕಲಿಗರ ಬೇಟಿಯಾದೆಯಾ ? ಎನ್ನುವಾಗಲೇ ನನಗೆ ಎಚ್ಚರವಾದುದು, ಒಂದು ಅವಕಾಶ ತಪ್ಪಿಸಿಕೊಂಡೆನಾ ? ಕೂಡಲೇ ಸುಬ್ರಮಣ್ಯಂ ಅವರ ಪುನಹ ಸಂಪರ್ಕಿಸಿದೆ. ಅವರು ಸೈಕಲ್ ಸವಾರರ ಜಾಲತಾಣದ ವಿಳಾಸವೂ ಚೂರು ಪ್ರವಾಸದ ವಿವರವನ್ನೂ ಕೊಟ್ಟರು.         http://eurasia.cyclic.eu/
ನೋಡಿದರೆ ಅವರಿರುವುದು ಜರ್ಮನಿಯ ಪ್ರಖ್ಯಾತ ಹೇಸ್ ಕಂಪೇನಿಯ ಪಿನೊ ಎನ್ನುವ ಇಬ್ಬರು ಪ್ರಯಾಣಿಸಬಹುದಾದ ಸೈಕಲು. ಪ್ರಾಯುಶ: ಈ ಸೈಕಲು ಇನ್ನೊಮ್ಮೆ ನೋಡುವ ಅವಕಾಶ ಸಿಗುವುದು ದುರ್ಲಬ. ಕೂಡಲೆ ಪೆಡಲಿಸಿದೆ ರಸ್ತೆ ಬದಿಗೆ. ಕಾಲು ಗಂಟೆಯೊಳಗೆ ಅವರು ಆಗಮಿಸಿದರು. ಒಬ್ಬ ಸೈಕಲ್ ಆಸಕ್ತ ನಿಮಗೆ ದಾರಿಯಲ್ಲಿ ಸಿಗಬಹುದೆಂಬ ಸೂಚನೆ ಮೊದಲೇ ಸುಬ್ಬಣ್ಣ ಅವರಿಗಿತ್ತಿದ್ದರು ಅನಿಸುತ್ತದೆ.
ಮತ್ತಷ್ಟು ಓದು »

21
ಡಿಸೆ

ರಷ್ಯಾದಲ್ಲಿ ಭಗವದ್ಗೀತೆ ನಿಷೇಧಕ್ಕೆ ಯಾಕೀ ಕೂಗಾಟ ?

-ಅರವಿಂದ್

ಮಾಧ್ಯಮಗಳಲ್ಲಿ ಹಾಗೂ ಲೋಕಸಭೆಯಲ್ಲಿ ನೆನ್ನೆಯಿಂದಲೂ ಒಕ್ಕೊರಲಿಗಿನ ವಾದ-ವಿವಾದ. ಬಿಜೆಪಿ ಇನ್ನಿತರ ವಿರೋಧಪಕ್ಷಗಳು, ಹಿಂದೂ ಹೋರಾಟಗಾರರು, ಇಸ್ಕಾನು ಎಲ್ಲರದೂ ಒಂದೇ, ಮಾತು. ರಷ್ಯಾದಲ್ಲಿ ಭಗವದ್ಗೀತೆ ನಿಷೇಧ ಬೇಡವೆಂಬ ಕೂಗು. ಇದ್ಯಾಕೋ ಗೊತ್ತಾಗಲಿಲ್ಲ. ರಷ್ಯಾದಲ್ಲಿ ಭಗವದ್ಗೀತೆ ನಿಷೇಧಿಸಿದರೆ ಭಾರತಕ್ಕಾಗುವ ನಷ್ಟವೇನು ? ಹೇಳಿ ಕೇಳಿ ರಷ್ಯಾ ಕಮ್ಯೂನಿಷ್ಟ್ ದೇಶ. ಆ ದೇಶ ಭಾರತದಂತೆ ಯಾವುದೇ ಧರ್ಮ ತಳಹದಿಯ ಮೇಲೆ ನಿರ್ಮಾಣವಾದ ದೇಶವಲ್ಲ. ಅದು ಧರ್ಮವನ್ನು ಅಫೀಮು ಎಂದುಕೊಂಡ ದೇಶ. ಇಂಥ ದೇಶಕ್ಕೆ ಧರ್ಮಗಳಿಂದ ನಾಗರೀಕರನ್ನು ಉದ್ಧಾರ ಮಾಡುವ ರಾಜಕೀಯವೂ ಇಲ್ಲ. ಇಂಥ ದೇಶದಲ್ಲಿ ಭಗವದ್ಗೀತೆಯಾದರೇನು, ಖುರಾನಾದರೇನು ಇನ್ಯಾವುದೇ…. ಇದ್ದರೇನು ಧರ್ಮಗ್ರಂಥಗಳಿಗೆ ವಿಶೇಷ ಮಾನ್ಯತೆಯೂ ಇಲ್ಲ.

ರಷ್ಯಾಕ್ಕೆ ತನ್ನದೇ ಆದ ಇತಿಹಾಸವಿದೆ, ಕಮ್ಯೂನಿಷ್ಟ್ ಮ್ಯಾನಿಫೆಸ್ಟೋ ಅಲ್ಲಿನ ಧರ್ಮಗ್ರಂಥವಿದ್ದಂತೆ. ಇಂಥ ದೇಶದಲ್ಲಿ ಭಗವದ್ಗೀತೆ ನಿಷೇಧಿಸಬಾರದೆಂಬ ಕೂಗು, ಅದಕ್ಕೆ ಬೇಕಾದ ರಾಜತಾಂತ್ರಿಕತೆಯ ರಾಯಭಾರ ಭಾರತಕ್ಯಾಕೆ ಅಂತ ತಿಳಿಯುತ್ತಿಲ್ಲ. ಹೋರಾಟ ಇವೆಲ್ಲ ಅವಶ್ಯಕತೆ ಇದ್ಯಾ ? ಭಾರತದಲ್ಲಿ ಮುಸಲ್ಮಾನ, ಕ್ರ್ಯೆಸ್ತ ಅನುಯಾಯಿಗಳು ಆ ಧರ್ಮದ ಪ್ರಚಾರ ಕ್ಯೆಗೊಂಡರೆ ಅದು ಮತಾಂತರವಾದರೆ, ರಷ್ಯಾಗೂ ಅದು ಅನ್ವಯಿಸುವುದಿಲ್ಲವೇ ? ನಾನಿಲ್ಲಿ ಯಾವುದೇ ಧರ್ಮ ದೊಡ್ಡದು ವಿಶಾಲವಾದದ್ದೂ ಅನ್ನೋ ತುಲನೆಗೆ ಹೇಳುತ್ತಿಲ್ಲ. ಪ್ರತಿ ದೇಶಕ್ಕೂ ಅದರದ್ದೇ ಆದ ಸಂವಿಧಾನ ಕರಡು ಇರುತ್ತದೆ. ರಷ್ಯಾಕ್ಕೆ ಭಗವದ್ಗೀತೆಯ ಅವಶ್ಯಕತೆಯಿಲ್ಲ ಮತ್ತು ಅಲ್ಲಿ ಭಗವದ್ಗೀತೆಯ ಯಾವುದೋ ಅಧ್ಯಾಯದ ಯಾವುದೋ ಸಾಲು ಅಹಿಂಸೆಯನ್ನು ಸೃಷ್ಠಿಮಾಡುತ್ತದೆ ಎಂಬ ಆಲೋಚನೆಯಿದ್ದರೆ ಇರಲಿ ಬಿಡಿ, ಅದರಿಂದ ನಮಗ್ಯಾವ ನಷ್ಟವೂ ಇಲ್ಲ. ಭಗವದ್ಗೀತೆ ಭಾರತದ ಸಂಸ್ಕೃತಿಗೆ ತಳಹದಿಯಾದರೆ, ಅದು ಭಾರತಕ್ಕಾದೀತು. ರಷ್ಯಾವೂ ಭಾರತದಂತೆ ಪಾಲಿಸಬೇಕು ಅನ್ನುವ ಹಠ ಯಾಕೆ ? ಅದೇನೋ ಆಗಬಾರದ್ದು ಮಾಡಬಾರದ್ದು ಮಾಡುತ್ತಿರುವಂತೆ ಕೂಗಾಡುವ ಅವಶ್ಯಕತೆಯೇನಿದೆ. ಮತ್ತಷ್ಟು ಓದು »

21
ಡಿಸೆ

ಜನಲೋಕಪಾಲ್ ಜಾರಿಯಿಂದ ಭ್ರಷ್ಟಾಚಾರ ನಾಶವಾಗಲಿದೆಯೇ ?

-ಉಮೇಶ್ ದೇಸಾಯಿ

ಹೌದು ಈ ಪ್ರಶ್ನೆ ಕಾಡುತ್ತಿದೆ. ಬಹುಶಃ ಅನೇಕರಿಗೂ ಈ ಪ್ರಶ್ನೆ ಕಾಡುತ್ತಿರಬಹುದು. ಸ್ವಲ್ಪ ಆರಾಮಾಗಿ ಉತ್ತರ ಹುಡುಕುವ. ಈಗ ನಾವು ನೀವು ವ್ಯವಸ್ಥೆ ಅಥವಾ ಸರಕಾರವನ್ನು ಸುಲಭವಾಗಿ ಟೀಕಿಸುತ್ತೇವೆ.ನಮ್ಮ ದೇಶದಲ್ಲಿ ಅಭಿವ್ಯಕ್ತಿಸ್ವಾತಂತ್ರ್ಯ ಇನ್ನೂ ಇದೆ

ಹೀಗಾಗಿ ನಾವು ಪೆನ್ನಿಂದ,ಕೀಲಿಮಣೆ ಕುಟ್ಟುವುದರಿಂದ ನಮ್ಮ ಕಹಿಭಾವನೆಗಳನ್ನುಮುಕ್ತವಾಗಿ ಕಾರುತ್ತೇವೆ. ಅದು ನಮ್ಮ ಹಕ್ಕು ನಿಜ. ಅದನ್ನು ನಾವು ಚಲಾಯಿಸುತ್ತೇವೆ ಕೂಡ.ಅನೇಕ ರೀತಿಯಲ್ಲಿ ಅಂದರೆ ಫೇಸಬುಕ್, ಟ್ವೀಟರ್ ಹಿಡಿದು ವಾಚಕರ ವಾಣಿವರೆಗೂ ನಮ್ಮ ಆಕ್ರೋಶ ಹರಿಯುತ್ತದೆ. ನಮ್ಮ ಈ ಕಾರುವಿಕೆಯಿಂದ ಏನಾದರೂ ಬದಲಾಗಿದೆಯೇ..

ನಮ್ಮ ಬೀದಿಯಲ್ಲಿ ಹಗಲು ದೀಪ ಉರಿಯುವುದು ಬಂದಾಗಿದೆಯೇ..ನಮ್ಮ ನಲ್ಲಿಯಲ್ಲಿ ನೀರು ನಿರಂತರ ಹರಿಯುತ್ತಿದೆಯೇ ಅಥವಾ ಉಗಿಸಿಕೊಂಡೂ ಕುರ್ಚಿಮೇಲೆ ಕೂಡುವ ರಾಜಕಾರಣಿ ಒಂದರೆಕ್ಷಣ ವಿಚಾರ ಮಾಡಿದ್ದಾನೆಯೇ..? ಈ ಪ್ರಶ್ನೆಗಳಿಗೆ ಪರಿಹಾರ ಸಿಕ್ಕಿಲ್ಲ ಯಾಕೆಂದರೆ ಇವು ನಾವು ಈಗಿರುವ ಸದ್ಯದ ಪರಿಸ್ಥಿತಿಯ ದ್ಯೋತಕ ವಾಗಿವೆ. ಹಾಗೂ ಇವುಗಳಿಗೆ ನಾವು ಚೆನ್ನಾಗಿ ಒಗ್ಗಿಕೊಂಡಿರುವೆವು..ನಮಗೂ ಗೊತ್ತು ಇವುಗಳಿಂದ ಬಿಡುಗಡೆ ಸಾಧ್ಯವಿಲ್ಲ ಅಂತ. ಆದರೇ ಕಾರುವುದು ಇನ್ನೂ ನಿಂತಿಲ್ಲ ..ಈಗ ಅದು ಹೊಸ ಆಯಾಮ ಪಡೆದುಕೊಂಡಿದೆ. ನಮಗೆ ನಮ್ಮ ದನಿ ಕೇಳಿಸಲು ಹೊಸ ಮುಖವಾಡಗಳು ಬಂದಿವೆ…ಅವರನ್ನು ನಾವು ನಮ್ಮನ್ನುಉದ್ಧಾರ ಮಾಡಲೆಂದೆ ಬಂದ ಅವತಾರಪುರುಷ ರನ್ನಾಗಿ ನೋಡುತ್ತಿದ್ದೇವೆ..ಜೈಕಾರ ಹೇಳುತ್ತಿದ್ದೇವೆ.

ಮತ್ತಷ್ಟು ಓದು »