ಗೆಂದಾಲಾಲ್ ದಿಕ್ಷಿತ್ — ಅಪರೂಪದ ಅಜ್ಞಾತ ಕ್ರಾಂತಿಕಾರಿ..!!!
-ಭೀಮಸೇನ್ ಪುರೋಹಿತ್
ಭಾಳ ಅಂದ್ರೆ ಆ ಹುಡುಗನಿಗೆ 9-10 ವರ್ಷ ವಯಸ್ಸಿರಬಹುದು.. ಅವತ್ತೊಂದಿನ, ಬೆಳಗಿನ ನಸುಕಿನಲ್ಲಿಯೇ ಎದ್ದು, ತನ್ನೂರಿನಲ್ಲಿ ಹರಿಯುತ್ತಿದ್ದ ಯಮುನಾ ನದಿಗೆ ತೆರಳಿ ಸ್ನಾನ ಮಾಡಿ ಶುದ್ಧನಾದ. ಮಿಂದೆದ್ದು ಬಂದವನೇ, ದಡದ ಮೇಲಿದ್ದ ಕಾಳಿಯ ಗುಡಿಯೆಡೆ ಹೊರಟ.. ಪೂಜೆಗೆ ಹೋಗ್ತಾ ಇರಬಹುದೆಂದು ಎಲ್ಲರೂ ಅನ್ಕೊಂಡಿದ್ರು.. ಆದ್ರೆ ಅವನು ಹೋಗ್ತಿದ್ದಿದ್ದು ಪೂಜೆಗಲ್ಲ, ಪ್ರತಿಜ್ಞೆಗೆ..!!!!!!!!
” ತಾಯೆ, ಆಂಗ್ಲರ ದುರಾಡಳಿತದಲ್ಲಿ ನಲುಗುತಿರುವ ದೇಶದ ಸ್ವಾತಂತ್ರ್ಯವೇ ನನ್ನ ಜೀವನದ ಧ್ಯೇಯ.. ನನ್ನ ಕೊನೆ ಉಸಿರಿನವರೆಗೂ, ಕೊನೆ ರಕ್ತದ ಹನಿ ಪುಟಿಯುವವರೆಗೂ ಭಾರತಿಯ ಸೇವೆಗಾಗಿ ನನ್ನ ಬದುಕು ಮುಡಿಪು”, ಅಂತ ಆ ಸಣ್ಣ ಬಾಲಕ ಶಪಥಗೈದಿದ್ದ..!!!!
ಅವನ ಹೆಸರು “ಗೆಂದಾಲಾಲ್ ದಿಕ್ಷಿತ್”. 1888 ರಲ್ಲಿ, ಉತ್ತರಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಹಳ್ಳಿಯೊಂದರಲ್ಲಿ ಜನನ. ಸಣ್ಣವನಿಂದಲೂ ದೇಶಭಕ್ತಿಯನ್ನು ಮೈಗೂಡಿಸಿಕೊಂಡಿದ್ದವ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿದ ಮೇಲೆ, DAV ಶಾಲೆಯಲ್ಲಿ ಶಿಕ್ಷಕನಾಗಿ ಸೇರಿಕೊಂಡ..
ಅದು 1905. ‘ಒಡೆದು ಆಳುವ’ ನೀತಿಯನ್ನೇ ಅನುಸರಿಸುತ್ತಿದ್ದ ಆಂಗ್ಲರ ಅಧಿಕಾರಿ “ಲಾರ್ಡ್ ಕರ್ಜನ್” ಬಂಗಾಳವನ್ನು ವಿಭಜಿಸಿದ. ಅವನೇನೋ ಜನರನ್ನು ಒಡೆಯಲು ಹಾಗೆ ಮಾಡಿದ.. ಆದರೆ ಆದದ್ದೇ ಬೇರೆ. ಅವನ ಈ ಕೃತ್ಯಕ್ಕೆ ಇಡೀ ದೇಶವೇ ಎದ್ದು ನಿಂತಿತು. ಎಲ್ಲೆಲ್ಲೂ ಹರತಾಳ, ಮೆರವಣಿಗೆ, ಹೋರಾಟಗಳು ನಡೆದವು. ತಿಲಕರಂತೂ ತಮ್ಮ ಕೇಸರಿ ಪತ್ರಿಕೆಯಲ್ಲಿ ಪ್ರತಿದಿನ, ಬಂಗಾಳ-ವಿಭಜನೆಯ ವಿರುದ್ಧ ಬೆಂಕಿಯ ಬರಹಗಳನ್ನು ಪ್ರಕಟಿಸ್ತಿದ್ರು.. ಅದರ ಕಿಡಿ, ಗೆನ್ದಾಲಾಲನಿಗೂ ಬಡಿಯಿತು. ತಿಲಕರಿಂದ ತುಂಬಾ ಸ್ಫೂರ್ತಿಗೊಂಡ ಗೆಂದಾಲಾಲ್, ಅವರು ಶುರುಮಾಡಿದ ಶಿವಾಜಿ-ಉತ್ಸವ, ಸಾರ್ವಜನಿಕ ಗಣೇಶ-ಉತ್ಸವ ಇದರಿಂದಲೂ ಪ್ರಭಾವಿತನಾದ. ಶಿವಾಜಿಯ ಚರಿತೆಯನ್ನು ಓದಿ, ಆ ಛತ್ರಪತಿಯ ಸಂಘಟನಾ ಕೌಶಲ್ಯ, ಧೈರ್ಯಗಳಿಂದ ಉತ್ತೇಜಿತಗೊಂಡ. ಗೆಂದಾಲಾಲ್ ಸಣ್ಣವನಿದ್ದಾಗ ಮಾಡಿದ್ದ ಪ್ರತಿಜ್ಞೆ ಈಡೇರುವ ಕಾಲ ಆಗ ಬಂದಿತ್ತು.. ಅದರ ಫಲವೇ, ಭಾರತದ ಕ್ರಾಂತಿ ಇತಿಹಾಸದಲ್ಲಿ, ಮತ್ತೊಂದು ಕ್ರಾಂತಿ ಸಂಘಟನೆಯ ಜನನ..
ಸಂಸ್ಕೃತಿ ಸಂಕಥನ – ೧೩ ಬಾಲಗಂಗಾಧರರ ಸೂಕ್ಷ್ಮದರ್ಶಕದಲ್ಲಿ ಕೋಲಾರದ ಘಟನೆ
– ರಮಾನಂದ ಐನಕೈ
ಇತ್ತೀಚೆಗೆ ಕೋಲಾರದ ಭಗವದ್ಗೀತಾ ಅಭಿಯಾನದ ಸಂದರ್ಭದಲ್ಲಿ ಸ್ವರ್ಣವಲ್ಲೀ ಸ್ವಾಮೀಜಿಯವರಿಗೆ ಹಾಗೂ ಭಗವದ್ಗೀತೆಗೆ ಅವಮಾನ ಮಾಡಿದ ಘಟನೆಯ ಹಿಂದೆ ಅನೇಕ ತಪ್ಪು ತಿಳುವಳಿಕೆಗಳು ಕೆಲಸ ಮಾಡಿವೆ. ಮೇಲ್ನೋಟಕ್ಕೆ ನೋಡಿದರೆ ಇದೊಂದು ರಾಜಕೀಯ ಚದುರಂಗದಾಟ ಎಂಬುದು ಸ್ಪಷ್ಟ. ಹಿಂದೆ ಇದೇ ಭಗವದ್ಗೀತಾ ಅಭಿಯಾನ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಡೆದಿದೆ. ಕಳೆದ ವರ್ಷ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಲ್ಲೆಲ್ಲೂ ನಡೆಯದ ಭಯಂಕರ ವಿರೋಧ ಕೋಲಾರದಲ್ಲೇ ಏಕೆ ನಡೆಯಿತು? ಅದನ್ನು ಅರಿತುಕೊಳ್ಳುವ ಅಗತ್ಯ ಇದೆ.
ಕೋಲಾರದಲ್ಲಿ ಕಾರ್ಮಿಕ ವರ್ಗ ಪ್ರಬಲವಾಗಿದೆ. ಹಾಗಾಗಿ ಇಲ್ಲಿ ಕಮ್ಯುನಿಸ್ಟ್ ಪಾರ್ಟಿಯ ಪ್ರಾಬಲ್ಯ ಇದೆ. ಜೊತೆಗೆ ರಾಜ್ಯದಲ್ಲಿ ದಲಿತ ಸಂಘರ್ಷ ಸಮಿತಿ ಹುಟ್ಟು ಹಾಕಿದ ಕೃಷ್ಣಪ್ಪ ಇದೇ ಜಿಲ್ಲೆಯವರು. ದಲಿತ ಹೋರಾಟವೂ ಈ ಜಿಲ್ಲೆಯಲ್ಲಿ ಹೆಚ್ಚು ಜೀವಂತವಾಗಿದೆ. ಈ ಕಾರಣಕ್ಕಾಗಿ ಅವರು ಭಗವದ್ಗೀತಾ ಅಭಿಯಾನವನ್ನು ಭಾರತೀಯ ಜನತಾ ಪಾರ್ಟಿಯ ಪ್ರೊಪಗಾಂಡಾ ಎಂಬಂತೆ ಗ್ರಹಿಸಿರುವ ಸಾಧ್ಯತೆ ಇದೆ. ಇಂದು ಭಾರತೀಯ ಸಮಾಜಶಾಸ್ತ್ರವನ್ನು ನಿರ್ಣಯಿಸುತ್ತಿರುವುದು ಇಂಥ ತಪ್ಪು ತಿಳುವಳಿಕೆಗಳೆ. ಭಗವದ್ಗೀತೆ ಅಂದರೆ ಬ್ರಾಹ್ಮಣರದ್ದು, ಮೇಲ್ವರ್ಗದ್ದು ಎಂಬ ನಂಬಿಕೆ ಇದೆ. ಇತ್ತೀಚೆಗೆ ಎಸ್.ಎಫ್.ಐ. ರಾಜ್ಯ ಉಪಾಧ್ಯಕ್ಷರ ಸಂದರ್ಶನದಲ್ಲೂ ಇದು ಸ್ಪಷ್ಟವಾಗಿದೆ. ಭಾಜಪಾ ಮೇಲ್ವರ್ಗದವರ ಪಕ್ಷ. ಹಾಗಾಗಿ ಭಗವದ್ಗೀತೆಯ ಪ್ರಚಾರದ ಮೂಲಕ ಪಕ್ಷ ಬಲಪಡಿಸುತ್ತಿದ್ದಾರೆಂಬ ತಿಳುವಳಿಕೆಯೂ ಇರಬಹುದು.
ನಮ್ಮ ಯುವಜನತೆಯ ಯೋಚನೆಯ ದಿಕ್ಕು…….???
-ಅರೆಹೊಳೆ ಸದಾಶಿವರಾವ್
ಪ್ರದಕ್ಷಿಣೆ ಎಂಬ ಅಂತರ್ಜಾಲ ಪತ್ರಿಕೆಯೊಂದನ್ನು ಇತ್ತೀಚೆಗೆ ಆರಂಭಿಸಿದ ನಂತರದ ಕೆಲವು ಅನುಭವಗಳು ಒಮ್ಮೊಮ್ಮೆ ಮನಸ್ಸಿಗೆ ತುಂಬಾ ಯೋಚನೆಯ ಸರಕನ್ನು ಒದಗಿಸುತ್ತವೆ. ಇದರಲ್ಲಿ ಮುಖ್ಯವಾದದ್ದು ನಮ್ಮ ಇಂದಿನ ಯುವ ಜನತೆಯ ಆಲೋಚನೆಗಳು.
ಇದಕ್ಕೆ ಪೂರ್ವಭಾವಿಯಾಗಿ ಒಂದೆರಡು ಮಾತುಗಳನ್ನು ನಿಮ್ಮೊಡನೆ ಹೇಳಿಕೊಳ್ಳಲೇ ಬೇಕು. ಅದು ನಮ್ಮ ಬಾಲ್ಯದ ದಿನಗಳು. ಕನಸುಗಳು ಮತ್ತು ಕನಸುಗಳು ಮಾತ್ರವೇ ತುಂಬಿಕೊಂಡಿದ್ದ ಕಣ್ಣುಗಳಿಗೆ ಮನೆಯ ಬಡತನ, ಬೆನ್ನ ಹಿಂದಿರುವ ಸಹೋದರತೆಯ ಬಂಧಗಳು ಅಥವಾ ಆ ಮೂಲಕ ಬಂದೊದಗಿದ ಜವಾಬ್ದಾರಿಗಳು……ಇತ್ಯಾದಿಗಳಾವುವೂ ಹೊರೆ ಅನಿಸುತ್ತಿರಲಿಲ್ಲ. ಅದಕ್ಕೆ ಕಾರಣಗಳು ನಾವು ಬಾಲ್ಯವನ್ನು ಅನುಭವಿಸುತ್ತಿದ್ದ ರೀತಿ. ಮನೆಯಂಗಣದಲ್ಲಿಯೋ, ತೋಟದಲ್ಲಿಯೋ, ಗದ್ದೆಯಲ್ಲಿಯೋ ನಮ್ಮದೇ ಯಕ್ಷಗಾನ, ಪಾಠ ಪುಸ್ತಕಗಳ ನಡುವೆ ಕದ್ದು ಓದುತ್ತಿದ್ದ ಕಾದಂಬರಿ, ಸುಧಾ, ತರಂಗ, ಪ್ರಜಾಮತದಂತಹ ಪತ್ರಕೆಗಳು, ಕಥೆ ಪುಸ್ತಕಗಳು……ಇತ್ಯಾದಿಗಳು, ಮೈಲುಗಟ್ಟಳೆ ದೂರ ನಡೆಯುತ್ತಿದ್ದ ಯಕ್ಷಗಾನಕ್ಕೂ ಕಾಲನಡಿಗೆಯಲ್ಲಿಯೇ ಹೋಗಿ ರಾತ್ರಿ ಇಡೀ ಅರ್ದಂಬರ್ಧ ನೋಡುತ್ತಿದ್ದ ಯಕ್ಷಗಾನ-ನಾಟಕಗಳು, ಶಾಲೆಯಲ್ಲಿ ಪ್ರತೀ ಶನಿವಾರದಂದು ನಡೆಯುತ್ತಿದ್ದ ನಮ್ಮದೇ ಪ್ರತಿಭಾಪ್ರದರ್ಶನಗಳು, ಪ್ರತೀ ಶುಕ್ರವಾರ ಸಂಜೆ ಶಾಲೆಯಲ್ಲಿ ನಡೆಯುತ್ತಿದ್ದ ಭಜನೆ……ಇತ್ಯಾದಿಗಳೆಲ್ಲಾ ನಮಗೆ ಬದುಕು ಎಂದರೆ ಏನು ಎಂಬುದನ್ನು ತೋರಿಸುವಲ್ಲಿ ಸಹಾಯಕವಾಗುತ್ತಿದ್ದುವು. ಇಂತಹ ಪರಿಸರ ನಮ್ಮನ್ನು ಸಾಕಷ್ಟು ಉಲ್ಲಾಸದಿಂದಿರುವಂತೆ ನೋಡಿಕೊಳ್ಳುತ್ತಿದ್ದುವು. ಹಾಗೆಂದೇ ಸಹಜವಾಗಿ ಮುಂದೆ ಸಾಹಿತ್ಯ, ಕಲೆಗಳತ್ತ ನಮ್ಮ ಆಸಕ್ತಿ ಬೆಳೆಯುವಲ್ಲಿ ಇವುಗಳು ಸಹಾಯಕವಾಗುತ್ತಿದ್ದುವು.
ಈ ಎಲ್ಲಾ ಹಿನ್ನೆಲೆಗಳೂ ಮುಂದೆ ನಮ್ಮ ಪ್ರತೀ ಕೃತಿಯಲ್ಲೂ ಸಹಜವಾಗಿ ಆಶಾವಾದವನ್ನು ಬಿಂಬಿಸುತ್ತಿದ್ದುವು. ಅದಕ್ಕೆಂದೇ ಅಂದಿನ ಆರಂಭದ ಕವಿಗಳು, ಕತೆಗಾರರು ಅಥವಾ ಚಿಂತಕರು ಆಶಾವಾದದ ಮಾತಾಡುತ್ತಿದ್ದರು, ನಮ್ಮ ಸುತ್ತ ಮುತ್ತಲಿನ ಪ್ರಕೃತಿಗಳೇ ಎಲ್ಲದಕ್ಕೂ ಸಮೃದ್ಧ ವಸ್ತುವಾಗಿ, ಪ್ರತೀ ಕೆಲಸದಲ್ಲೂ…ಅದು ಸಾಹಿತ್ಯವಿರಲಿ, ಬದುಕಿರಲಿ ಒಂದು ಉಲ್ಲಾಸದ ಮತ್ತು ಉತ್ಸಾಹದ ವಾತಾವರಣಕ್ಕೆ ಕಾರಣವಾಗುತ್ತಿದ್ದುವು.
ಉಡುಪಿಯ ಕೃಷ್ಣ ತಿರುಗಿ ನಿಂತಷ್ಟು ಸುಲಭವಲ್ಲ ’ಮಡೆ ಸ್ನಾನ’ ನಿಲ್ಲುವುದು…!
– ರಾಕೇಶ್ ಶೆಟ್ಟಿ
“ಮಡೆಸ್ನಾನ ಅಥವಾ ಎಂಜೆಲೆಲೆ ಮೇಲೆ ಉರುಳು ಸೇವೆ ಮಾಡುವುದನ್ನು ನಿಷೇಧಿಸುವುದರಿಂದ ಯಾವ ರೀತಿ ಲಾಭವೂ ಇಲ್ಲ ನಷ್ಟವೂ ಇಲ್ಲ. ನಾನು ಈ ವಿಷಯದಲ್ಲಿ ತಟಸ್ಥ ನೀತಿ ಅನುಸರಿಸುತ್ತೇನೆ” ಹೀಗಂತ ಹೇಳಿರೋದು ಪೇಜಾವರಶ್ರೀಗಳು…!
ಒಂದು ಕಡೆ ದಲಿತ ಕಾಲೋನಿಗಳಲ್ಲಿ ಓಡಾಡಿ ಹಿಂದೂ ಧರ್ಮವನ್ನು ಉದ್ಧರಿಸುವ ಮತ್ತು ಮತಾಂತರವನ್ನ ವಿರೋಧಿಸುವ ಮಾತನಾಡುವ ಶ್ರೀಗಳಿಗೆ ಮಡೆಸ್ನಾನದಿಂದ ಯಾವ ಧರ್ಮಕ್ಕೆ,ಹೇಗೆ ನಷ್ಟವಾಗಬಹುದು ಮತ್ತು ಹಿಂದೂ ಅನ್ನುವ ಧರ್ಮದ ಬಗ್ಗೆ ಮಾಧ್ಯಮಗಳ ಮೂಲಕ ಜಗತ್ತಿಗೆ ಯಾವ ಸಂದೇಶ ತಲುಪಬಹುದು ಅನ್ನುವುದರ ಅರಿವಿರಲಿಕ್ಕಿಲ್ಲವಾ? ಇದ್ದರೆ ಈ ರೀತಿ ಮೈಗೆ ಎಣ್ಣೆ ಹಚ್ಚಿಕೊಂಡವರಂತೆ ಹೇಳಿಕೆ ನೀಡುತಿದ್ದರಾ?
’ಮಡೆ ಸ್ನಾನ’ ಅನ್ನುವ So Called ಧಾರ್ಮಿಕ ನಂಬಿಕೆ(!?) ನಡೆದುಕೊಂಡು ಬಂದ ಹಾದಿಗೆ ೪೦೦ ವರ್ಷಗಳ ಇತಿಹಾಸವಿದೆ.ಆದರೆ ತೀರಾ ಇದು ಮಾಧ್ಯಮಗಳಲ್ಲಿ ದೊಡ್ದ ಮಟ್ಟದ ಸುದ್ದಿ ಮಾಡಲಿಕ್ಕಾರಂಭಿಸಿದ್ದು ಬಹುಷಃ ಕಳೆದ ವರ್ಷದಿಂದಲೇ…! ಸದ್ಯ.ಈಗಲಾದರೂ ನಮ್ಮ ದನಿ ಕೇಳಿಬರುತ್ತಿದೆ ಅನ್ನುವ ಸಂತೋಷದ ಜೊತೆ ಜೊತೆಗೆ ಇಂತ ಅನಿಷ್ಟ ಪದ್ಧತಿಗಳಿಗೆ ಬ್ರೇಕ್ ಹಾಕಬೇಕಾದ ಸರ್ಕಾರ ಮತ್ತು ಸರ್ಕಾರದ ಸಚಿವರೇ ’ನೋ ಕಮೆಂಟ್ಸ್’ ಅನ್ನುವುದು ನೋಡಿ ಬೇಸರವೂ ಆಗುತ್ತದೆ.
ಮುಂದಿದೆ ಮಾರಿ ಹಬ್ಬ : ಯಡಿಯೂರಪ್ಪ ಅವರ ಮುಂದಿನ ರಾಜಕೀಯ ನಡೆಯೇನು?
-”ಸಿದ್ಧಾರ್ಥ ”
೨೪ ದಿನಗಳ ಸೆರೆಮನೆ ವಾಸದ ನಂತರ ಅಂತೂ ಇಂತೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾರೆ. ಇದನ್ನೇ ಒಂದು ವಿಜಯೋತ್ಸವವೆಂಬಂತೆ ಅವರ ಬೆಂಬಲಿಗರು ಬಾಣ ಬಿರುಸು, ಪಟಾಕಿಗಳನ್ನು ಸಿಡಿಸಿ ಹರ್ಷಿಸಿದ್ದಾರೆ. ಯಡಿಯೂರಪ್ಪ ಅವರು ದೇಗುಲಗಳ, ಮಠಗಳ ದರ್ಶನ ಕಾರ್ಯದಲ್ಲಿ ಮುಳುಗಿದಂತೆ ನಟಿಸುತ್ತಿದ್ದರು, ಅವರ ಅಂತರ್ಯ್ಯದಲ್ಲಿ ಮುಕ್ಕಾಗಿ ಹೋದ ವೈಬವವನ್ನು, ಅಧಿಕಾರವನ್ನು ಮರಳಿ ಪಡೆಯುವುದು ಹೇಗೆ ಎಂಬ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ. ಅದಕ್ಕೆ ಪೂರಕವೆನ್ನುವಂತೆ ಅವರ ಆಪ್ತ ಮಂತ್ರಿಗಳನೇಕರು ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಕಾರಣೀಭೂತರಾದ ಯಡಿಯೂರಪ್ಪನವರೇ ಪಕ್ಷದ ಪ್ರಶ್ನಾತೀತ ನಾಯಕರು ಆದ್ದರಿಂದ ಅವರನ್ನೇ ರಾಜ್ಯದ ಪಕ್ಷಾದ್ಯಕ್ಷರನ್ನಾಗಿ ಮಾಡಿ ಎಂಬ ಬೆದರಿಕೆ ರೂಪದ ಒತ್ತಡವನ್ನು ಹೈಕಮಾಂಡ್ಗೆ ರವಾನಿಸಿದ್ದಾರೆ.
ಸೆರಮನೆ ವಾಸ, ಅದೆಷ್ಟೇ ಅಲ್ಪಾವಧಿಯಾದಾಗಿರಲಿ ಅದಷ್ಟೇ ಸುಖ ವೈಬೋಗಗಳಿಂದ ಕೂಡಿರಲಿ, ಮಾನಸಿಕವಾಗಿ ಅದು ಸೆರಮನೆ ವಾಸವೇ. ಪರಿಸ್ಥಿತಿಯ ಶಿಶುವಾಗಿ ತಮ್ಮದಲ್ಲದ ತಪ್ಪಿಗೆ ಸೆರಮನೆ ವಾಸ ಕಂಡ ಯಡಿಯೂರಪ್ಪನವರಿಗೆ ಕಡ್ಡಾಯ ಬಂದನ ಒಂದು ರೀತಿಯಲ್ಲಿ ಪಾಠವಾಗಬೇಕಾಗಿತ್ತು. ಸಾಮಾನ್ಯವಾಗಿ ಸೆರೆಮನೆಯಲ್ಲಿ ಸಿಗುವ ಏಕಾಕಿತನದಲ್ಲಿ ವ್ಯಕ್ತಿಯೊಬ್ಬರ ಮನಸ್ಸು ಹಲವು ಬದಲಾವಣೆಗೆ ಒಳಪಡುತ್ತದೆ. ಸರಿ ತಪ್ಪುಗಳ ವಿಮರ್ಶೆಯ ಆತ್ಮಾವಲೋಕನಕ್ಕೆ ಅದು ಸಕಾಲವಾಗುತ್ತದೆ. ಕೆಲವೊಮ್ಮೆ ಏಕಾಂಗಿ ತನದಲ್ಲಿ ವ್ಯಕ್ತಿಯ ಮನಸ್ಸು, ಪ್ರತಿಭೆ ಅರಳುತ್ತದೆ. ಮತ್ತಷ್ಟು ಓದು 
ಸಂಸ್ಕೃತಿ ಸಂಕಥನ – ೧೦: ಪ್ರೊಟೆಸ್ಟಾಂಟರೇಕೆ ಕೆಥೋಲಿಕ್ ಪ್ರೀಸ್ಟ್ಗಳ ಮೇಲೆ ಪ್ರಹಾರಮಾಡಿದರು?
– ರಮಾನಂದ ಐನಕೈ
ಸಂಸ್ಕೃತಿ ಸಂಕಥನ – ೧೦
ಕೆಥೋಲಿಕ್ ಕ್ರಿಶ್ಚಿಯಾನಿಟಿ ರಿಲಿಜನ್ನಿನ ಸೀಮೆ ದಾಟಿ ಅನೈತಿಕವಾಗಿದೆ. ಇದಕ್ಕೆ ಕಾರಣ ಕ್ಯಾಥೋಲಿಕ್ ಪ್ರೀಸ್ಟ್ಗಳು. ಇವರು ದೇವರು ಮತ್ತು ಜನರ ನಡುವೆ ಮಧ್ಯವರ್ತಿಗಳ ಪಾತ್ರವಹಿಸಿ ಜನರ ರಿಲಿಜನ್ನಿನ ಸ್ವಾತಂತ್ರ್ಯ ಹರಣ ಮಾಡಿದ್ದಾರೆ. ಚರ್ಚ್ ಅನ್ನುವ ಸಂಸ್ಥೆಯ ಮೂಲಕ ಅಧಿಕಾರ ಚಲಾಯಿಸುತ್ತ ಸಮಾಜವನ್ನು ಶ್ರೇಣೀಕರಣಗೊಳಿಸುತ್ತಿದ್ದಾರೆ. ಸ್ವಾರ್ಥ ಹಾಗ ಅಧಿಕಾರದಾಹದಿಂದ ಜನರಲ್ಲಿ ತಾರತಮ್ಯ ಹುಟ್ಟುಹಾಕುತ್ತಿದ್ದಾರೆ. ಪ್ರೀಸ್ಟ್ಹುಡ್ಡನ್ನು ಪಾರಂಪರಿಕ ಮಾಡಿಕೊಂಡಿದ್ದಾರೆ. ಹಾಗಾಗಿ ಕ್ಯಾಥೋಲಿಕ್ ಕ್ರಿಶ್ಚಿಯಾನಿಟಿ ಕೂಡಾ ಒಂದು ಸುಳ್ಳು ರಿಲಿಜನ್ನಿನ ಸ್ವರೂಪ ಪಡೆದುಕೊಂಡಿದೆ. ಇದಕ್ಕೆಲ್ಲ ಮುಖ್ಯ ಕಾರಣ ಕೆಥೋಲಿಕ್ ಪ್ರೀಸ್ಟ್ಗಳು. ಪ್ರೀಸ್ಟ್ಗಳು ನಿಜವಾದ ಕಂತ್ರಿ(ಕನ್ನಿಂಗ್)ಗಳು ಎಂಬುದು ಪ್ರೊಟೆಸ್ಟಾಂಟ್ ಸುಧಾರಣಾವಾದಿಗಳ ಉಗ್ರ ಆರೋಪ.
ಭಾರತೀಯ ಸಂಸ್ಕೃತಿಯ ಕುರಿತು ಬರೆಯುತ್ತಿರುವಾಗ ಈ ತಲೆಬರಹದ ಪ್ರಸ್ತುತತೆಯ ಕುರಿತು ಪ್ರಶ್ನೆ ಏಳುವುದು ಸಹಜ. ಆದರೆ ಇದಕ್ಕೆ ಔಚಿತ್ಯ ಇದೆ. ಕಳೆದ ನಾನೂರು ವರ್ಷಗಳಿಂದ ಭಾರ ತೀಯ ಸಂಸ್ಕೃತಿ ಹಲವಾರು ತಪ್ಪು ದೃಷ್ಟಿಕೋನಗಳಿಂದ ಅರ್ಥ ವ್ಯತ್ಯಾಸಗಳನ್ನು ಹೊಂದುತ್ತ ಬಂದಿದೆ. ನಮ್ಮ ಸಮಾಜ ವಿಜ್ಞಾನಗಳೂ ಇದೇ ತಪ್ಪುದಾರಿಯಲ್ಲಿ ಸಾಗಿವೆ. ಹಾಗಾಗಿ ಪ್ರೊ. ಬಾಲ ಗಂಗಾಧರರು ಹೇಳುವ ಪ್ರಕಾರ ಈಗೇನಾದರೂ ನಿಜವಾದ ಭಾರತೀಯ ಸಂಸ್ಕೃತಿಯನ್ನು ಅರಿಯ ಬೇಕೆಂದರೆ ಮೊದಲು ಪ್ರಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು. ಅಷ್ಟರಮಟ್ಟಿಗೆ ಪಾಶ್ಚಾತ್ಯ ದೃಷ್ಟಿಕೋನಗಳು ನಮ್ಮ ಸಂಸ್ಕೃತಿಯನ್ನು ವ್ಯಾಖ್ಯಾನಿಸಿವೆ.
ಯಡಿಯೂರಪ್ಪ ರಾಜಕೀಯದಲ್ಲಿ ‘ಮಾಜಿ’ ಆಗಿದ್ದಾರೆಯೇ?
-‘ಸಿದ್ಧಾರ್ಥ‘
೩೩ ವರ್ಷಗಳ ವೃತ್ತಿ ಜೀವನದಲ್ಲಿ ಅರ್ಧಾಂಶಕ್ಕೂ ಹೆಚ್ಚು ಕಾಲ ಅಧಿಕಾರಕ್ಕೆ ರಾಜಕಾರಣಿಗಳ ಪತ್ರಿಕಾ ಕಾರ್ಯದರ್ಶಿಯಾಗಿ ಆಪ್ತ ಸಿಬ್ಬಂದಿ ವರ್ಗದಲ್ಲಿ ಕೆಲಸ ಮಾಡಿರುವ ನನಗೆ ಅಧಿಕಾರ ತರುವ ಸಂತೋಷ, ಅಧಿಕಾರ ತ್ಯಾಗದಿಂದ ಬರುವ ವಿಷಾದ ಎರಡನ್ನೂ ಅತೀ ಸಂಮೀಪದಿಂದ ನೋಡಿ ಅನುಭವಿಸುವ ಅವಕಾಶ ಸಿಕ್ಕಿದೆ. ಅಧಿಕಾರ ಹೋದ ಕೂಡಲೇ, ಚುನಾವಣೆ ಸೋತ ಕೂಡಲೇ, ಆಕಾಶವೇ ಕಳಚಿ ಬಿದ್ದಂತೆ ಮೂಲೆಗೆ ಬೀಳುವ ರಾಜಕಾರಣಿಗಳನ್ನು, ಹೋದದ್ದು ಅಧಿಕಾರ ತಾನೇ? ಎಂದು sportive DV ಆಗಿ ನಗು ಮುಖ ಧರಿಸುವ ಧುರೀಣರನ್ನು ನೋಡಿದ್ದೇನೆ. ಹೊಟ್ಟೆಯಲ್ಲಿನ ನೋವು, ಮತ್ಸರ, ಈರ್ಷೆಗೆ ಸಿಲುಕಿ ಉತ್ತರಾಧಿಕಾರಿಯ ಪ್ರಮಾಣ ವಚನ ಸಮಾರಂಭಕ್ಕೆ ಗೈರುಹಾಜರಾದ ನಿರ್ಗಮಿತ ಮುಖ್ಯಮಂತ್ರಿಗಳನೇಕರನ್ನು ನೋಡಿದ್ದೇನೆ. ಅಧಿಕಾರ ಗ್ರಹಣದ ನಂತರ ಖುದ್ದಾಗಿ ಕಛೇರಿಗೆ ಕೊಂಡೊಯ್ದು ಪ್ರತಿಷ್ಠಾಪಿಸಿ ಶುಭ ಹಾರೈಸಿ ಹಗುರ ಹೃದಯದೊಂದಿಗೆ ಖಾಸಗಿ ವಾಹನದಲ್ಲಿ ಮನೆಗೆ ತೆರಳಿದ ವಿವೇಕಿಗಳನ್ನು, ಸಾಮಾನ್ಯ ಶಾಸಕರಾಗಿ ಅತೀವ ಉತ್ಸ್ಸಾಹ ದಿಂದ ಶಾಸನ ಸಭೆಗೆ ಮರಳಿ ಕ್ರಿಯಾತ್ಮಕವಾಗಿ ಕಲಾಪಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಿದ ಹಿರಿಯರನೇಕರ ಮಾತುಗಳು ನನ್ನ ಕಿವಿಗಳಲ್ಲಿ ಇನ್ನೂ ರಿಂಗಣಿಸುತ್ತಿವೆ.
ಇವೆಲ್ಲವೂ ನೆನಪಾದದ್ದು ಯಡಿಯೂರಪ್ಪನವರು ಅಧಿಕಾರ ಕಳೆದುಕೊಂಡ ಮರುಕ್ಷಣವೇ ಅವರ ಮನೆಯ ಮುಂದೆ ತುಂಬಿದ್ದ ಗೋಜುಗೋಜು ಜನ ಜಂಗುಳಿ ಏಕಾಏಕಿ ಮಾಯವಾದಾಗ. ಅಧಿಕಾರ ತರುವ ಜನ ಭಾಹುಳ್ಯವನ್ನು ಅಧಿಕಾರ ನಂತರದ ಜನ ವಿಯೋಗವನ್ನು ಪತ್ರಿಕೆಯೊಂದು ಛಾಯಾಚಿತ್ರಗಳ ಮೂಲಕ ಸಮರ್ಥವಾಗಿ ಪ್ರತಿಬಿಂಬಿಸಿತ್ತು. ಗಾದೆ ಮಾತೇ ಇಲ್ಲವೇ. ನಗುವಾಗ ಎಲ್ಲ ನೆಂಟರು ಅಳುವಾಗ ಯಾರೂ ಇಲ್ಲ.
ಭಾವುಕರಾಗೋಣ ಬನ್ನಿ!
-ಸಂತೋಷ್

ಮನುಷ್ಯನ ಜೀವನಕ್ಕೆ ಭಾವನೆಗಳು ಎಷ್ಟು ಮುಖ್ಯ? ಎಂದು ಕೇಳಿದರೆ ನಾನು ಕೋಡುವ ಉತ್ತರ ಖಂಡಿತ ಅವು ಮನುಷ್ಯನ ಜೀವನದ ಅವಿಭಾಜ್ಯ ಅಂಗವೆಂದು.ಭಾವನೆಗಳಿಲ್ಲದ ಮನುಷ್ಯ ಏನನ್ನು ಸಾದಿಸಲಾರ.ನಿಜವಾಗಲು ಭಾವನೆಗಳೇ ಮನುಷ್ಯನ ಜೀವನದ ದಾರಿದೀಪಗಳು.ಇದಕ್ಕೆಲ್ಲ ಅಪವಾದವೆಂಬಂತೆ,ನಮ್ಮಲ್ಲಿ ಹುಟ್ಟುವ ಸೂರ್ಯನನ್ನ,ಅರಳುವ ಗುಲಾಭಿಯನ್ನು,ಸುರಿಯುವ ಮಳೆಯನ್ನು,ಆಕಾಶದಲ್ಲಿ ಮೂಡುವ ಬಣ್ಣ ಬಣ್ಣದ ಚಿತ್ತಾರವನ್ನು,ರಂಗು ರಂಗಾಗಿ ಕಾಣುವ ಕಾಮನ ಬಿಲ್ಲನು ನೋಡಿ ಮುದಗೋಳದ ಕುಂಬಕರ್ಣರು ಇದ್ದಾರೆ!ಇದರ ಬಗ್ಗೆ ಅವರದೆಲ್ಲ ದಿವ್ಯ ನಿರ್ಲಕ್ಷೆ.
ಆದರೇ ಹಾಗೇ ನಿದ್ದೆ ಮಾಡುವ ಅವರು ಭಾವುಕತೆಯ ಸುಂದರ ಅನುಭವವನ್ನು ಕಳೆದುಕೋಳುತಾರೆ ಎಂಬುದೇ ನನ್ನ ಭಾವನೆ.ಕಡೇ ಪಕ್ಷ ಈ ಪ್ರಬಂದವನ್ನು ಓದಿದ ನಂತರವಾದರು ಅಂತ ಕುಂಬಕರ್ಣರು ನಿದ್ದೆಯಿಂದ ಎಚ್ಚೆತ್ತುಕೊಂಡರೆ ಸಂತೋಷ ಇಲ್ಲದಿದ್ದರೆ ನಾವು ನೀವು ಏನು ಮಾಡಕ್ಕೆ ಆಗುತ್ತೆ ಅವರನ್ನು ಅವರ ಪಾಡಿಗೆ ಬಿಡುವುದೇ ಸೂಕ್ತ.
ಭಾವುಕನಾದವನು ಸದ ಹೊಸತ್ತನ್ನೆ ಅನ್ವೇಷಣೆ ಮಾಡುತ್ತ ಇರುತ್ತಾನೆ.ಅವನು ಪ್ರಕೃತಿಯೊಂದಿಗೆ ಒಂದು ರೀತಿಯ ಸಂವಾದವನ್ನು ಸಮಾನತೆಯನ್ನು ಸಾದಿಸುತ್ತಾನೆ.ನಿಮ್ಮ ಕಣ್ಣಿಗೆ ಒಂದು ಸುಂದರ ಹೂವು ಅರಳಿ ನಿಂತಾಗ ಭಾವುಕನಾದವನ್ನು ಅದರ ಅರಳುವಿಕೆಯನ್ನು ನೆನೆದು ನೆನೆದು ಪುಳಕಗೋಳ್ಳುತದತ್ತಾನೆ.ಅದg ಬಣ್ಣಗಳನ್ನು ತನ್ನ ಕೈಯಿಂದ ಒರೆಸಿ ನೋಡುತ್ತಾನೆ. ಅದರ ಸುವಾಸನೆಗಾಗಿ ತನ್ನ,ಮೂಗನ್ನು ಅದರ ಬಳಿ ಕೊಂಡಯ್ಯತ್ತಾನೆ.ಧೀರ್ಘವಾದ ಉಸಿರನ್ನು ಏಳೆದುಕೊಂಡು ಅದರ ಸುವಾಸನೆಯನ್ನು ಆಸ್ವಾದಿಸುತ್ತಾನೆ.ಕೊನೆಗೆ ಆ ಹೂವಿನಿಂದ ಬಿಳ್ಕೋಡುವಾಗ ಆ ಹೂವಿಗೆ ಒಂದು ಹೂ ಮುತ್ತನ್ನು ನೀಡಿದರೇ ಅವನು ಭಾವುಕ ಎನಿಸಿಕೊಳ್ಳುತ್ತಾನೆ.
ಇದಾವ ಪರಿಯ ‘ಜನಚೇತನ ???
-ಅರೆಹೊಳೆ ಸದಾಶಿವರಾವ್
ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ, ಇಡೀ ಮಂಗಳೂರೇ ಸ್ತಬ್ಧ!!. ಬಜಪೆಂದ ಮಂಗಳೂರಿನ ನೆಹರೂ ಮೈದಾನದ ತನಕ ರಸ್ತೆಯ ಇಕ್ಕೆಲಗಳಿಗೂ ಆದಿನ ಒಂದು ರೀತಿಯ ವಿಶ್ರಾಂತಿ. ಎಲ್ಲೆಲ್ಲೂ ಪಾರ್ಕಿಂಗ್ ಇಲ್ಲ, ರಸ್ತೆಯ ಇಕ್ಕೆಲಗಳಲ್ಲೂ ಪೋಲೀಸರೇ ಪೋಲಿಸರು!
ಅಡ್ವಾಣಿ ಬರುತ್ತರೆಂದಾಗಲೇ ಪೋಲಿಸರಿಗೆ
ಶುರುವಾಗಿತ್ತು ಒಂದು ರೀತಿಯ ಚಳಿ-ಮಳೆ!
ಹಾಗಾಗಿ ಎದುರು ಸಿಕ್ಕವರಿಗೆಲ್ಲಾ ಸಿಕ್ಕಿದ್ದು ಕೇವಲ
ಪೋಲಿಸ್ ಭಾಷೆಯ ಬೈಗುಳದ ಸುರಿಮಳೆ!!
ಇದು ವಿಐಪಿಗಳು ಯಾವುದೇ ಊರಿಗೂ ಬಂದರೂ ಇರುವ ಸಾಮಾನ್ಯ ತೊಂದರೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಹಾಗಾಗಿ ಇದರ ಬಗ್ಗೆ ಹೇಳುವುದು ಕೇಳುವುದು ಏನೂ ಬೇಕಿಲ್ಲ ಬಿಡಿ. ಆದರೆ ಇಲ್ಲಿ ಭಾರತೀಯ ಜನತಾ ಪಕ್ಷದ ಈ ನೇತಾರನ ಈ ಪರಿಯ ಜನ ಚೇತನ ಯಾತ್ರೆಯ ಬಗ್ಗೆ ಬರೆಯದಿದ್ದರೆ ಅದೇನೋ ಒಂದು ರೀತಿಯ ಕಿರಿ ಕಿರಿ ಕೊರೆಯುತ್ತಲೇ ಇರುತ್ತದೆ.
ಇಂದು ಕರ್ನಾಟಕದ ಪರಿಸ್ಥಿತಿ ನೋಡಿ. ಏನೋ ಮಾಡಲು ಹೋದ ಭಾಜಪ ಎಂಬ ಆಡಳಿತಾರೂಢ ಪಕ್ಷ, ಕಂಡ ಕಂಡಲ್ಲಿ ಗಳಿಸಿಕೊಂಡದ್ದು ಭ್ರಷ್ಟಾಚಾರದ ಹಣೆ ಪಟ್ಟಿ. ಸಂಪುಟದ ಹೆಚ್ಚಿನ ಸಚಿವರ ಮೇಲೆ ಒಂದಲ್ಲ ಒಂದು ರೀತಿಯ ಆಪಾದನೆ ಬಂದಾಗ, ದೆಹಲಿಯ ನಾಯಕರು ತೇಪೆ ಹಚ್ಚುವ ನೆಪದಲ್ಲಿ ಯಡ್ಯೂರಪ್ಪನವರಿಗೆ ಮತ್ತೆ ಮತ್ತೆ ಅಧಿಕಾರದಲ್ಲಿ ಮುಂದುವರಿಯುವ ಅವಕಾಶವನ್ನು ಕೊಟ್ಟರೇ ಹೊರತು, ಆಗಿದ್ದೇನು ಎಂದು ನೋಡುವ ಪ್ರಾಥಮಿಕ ಜ್ಞಾನವನ್ನೂ ತೋರಲಿಲ್ಲ. ಒಂದೆಡೆ ರೆಡ್ಡಿ ಬಣ, ಮತ್ತೊಂದೆಡೆ ಯಡ್ಡಿಬಣ, ಇದೆರಡಲ್ಲದೇ ಬೇರೆ ಬೇರೆ ಇನ್ನಿತರ ಬಣಗಳು, ಹೊರ ಪ್ರಪಂಚದಲ್ಲಿ ಕೈ ಕೈ ಹಿಡಿದು, ಕಮಲವನ್ನು ಒಡೆದು ‘ದಳ ದಳ’ವನ್ನೂ ಬೇರೆ ಮಾಡಿದ್ದಂತೂ ಸತ್ಯ. ಎಷ್ಟೇ ಸಲ ಇದರ ಬಗ್ಗೆ ವರಿಷ್ಠರಿಗೆ ದೂರು ಹೋದರೂ, ವರಿಷ್ಠರದ್ದು ಅಲ್ಲಿ ಜಾಣ ಕುರುಡು.
ಭಾಜಪದಲ್ಲಿ ಎಲ್ಲವೂ ಸರಿ ಇಲ್ಲ ಅಂದುಕೊಂಡವರೇ
ಎಲ್ಲರೂ; ಅಲ್ಲಿ ಏನೂ ಸರಿ ಇಲ್ಲ ಎಂದುಕೊಳ್ಳಲಾರದೇ
ಹೋದವರೇ ವರಿಷ್ಠರು; ಅದಕ್ಕೇ ಯಡ್ಯೂರಪ್ಪನವರು
ಮಾಡುತ್ತಾ ಹೋದರು ತಪ್ಪು ಒಂದಲ್ಲ ನೂರು!!
ಮತ್ತಷ್ಟು ಓದು 
“ಫೇಸ್ಬುಕ್” ನಿಸ್ತಂತು ಕನ್ನಡ ಸಾಹಿತ್ಯ – ಒಂದು ಇಣುಕು ನೋಟ!
– ರವಿ ಮುರ್ನಾಡು
ನವೆಂಬರ್ ತಿಂಗಳು ಬಂತಲ್ಲ…! ಸಂತಸದ ಸಂಗತಿಯೆಂದರೆ, ಮಾನ್ಯ ಕಂಬಾರರು ಜ್ಞಾನಪೀಠ ಪ್ರಶಸ್ತಿ ತಂದು,ಈ “ನವೆಂಬರ್ ಕನ್ನಡದ ಹಬ್ಬ” ವನ್ನು ಶ್ರೀಮಂತಗೊಳಿಸಿದರು. ಹನ್ನೊಂದು ತಿಂಗಳು ನಿದ್ದೆಗೆ ಬಿದ್ದು, ಒಂದು ತಿಂಗಳು ಭಾರೀ ಪ್ರಚಾರ ಪಡೆದುಕೊಳ್ಳುವ ಈ “ಕನ್ನಡದ ಹಬ್ಬ” ಅಂದಾಗ ಅದರ ಇನ್ನಿಲ್ಲದ ದೌರ್ಬಲ್ಯಗಳು ಬೀದಿಗೆ ಬರುತ್ತವೆ. ಕನ್ನಡದ ಕಾರ್ಯಕ್ರಮಗಳಲ್ಲಿ ವಿದೇಶಿ ಮೇಕಪ್ ಮೆತ್ತಿಕೊಂಡು, ಅರೆಬರೆಯ ಫ್ಯಾಷನ್ ಷೋ ವೇದಿಕೆಯಲ್ಲಿ ಇಂಗ್ಲೀಷ್- ಹಿಂದಿ ಹಾಡಿಗೆ ನೃತ್ಯ ಮಾಡುವ ಅವೇಶಗಳು ಮೈಮೇಲೆ ಬರುತ್ತವೆ. ರಾಷ್ಟ್ರದಲ್ಲಿ ಸಾಹಿತ್ಯಕ್ಕಾಗಿ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡಿಗರ ಆಡಂಭರ ಇದು !. ಅಭಿಮಾನದ ಬಗ್ಗೆ ಮಾತು ಒಕ್ಕಣಿಸುವಾಗ ಹೊರಗೆಡವಲಾರದ ನೋವು. ದೇಶದ ಇತರ ರಾಜ್ಯಗಳ ಜನರಲ್ಲಿರುವ ಅವರ ಮಣ್ಣಿನ ಭಾಷಾಭಿಮಾನಕ್ಕೆ ಹೋಲಿಸಿದಾಗ, ನಮ್ಮಲ್ಲಿ ಪ್ರಚಾರಕ್ಕೆ ಅಭಿಮಾನದ ಸೋಗು ಹಾಕಿದ ಉದಾಹರಣೆಗಳೇ ಹೆಚ್ಚು. ಒಂದು ಕಡೆ ರಾಜ್ಯದ ಹೃದಯ ಭಾಗಗಳೇ ತಾಯಿ ಭಾಷೆಯನ್ನು ಹರಾಜಿಗಿಟ್ಟಿವೆ. ಇನ್ನೊಂದೆಡೆ ನೆಲ ನಮ್ಮದು ಅಂತ ಕಾಳಗಕ್ಕಿಳಿದು, ಜೈಲೊಳಗೆ ಬಂಧಿಯಾದಂತೆ, ಕನ್ನಡ ಅಪರಾಧಿ ಸ್ಥಾನದಲ್ಲಿ ನಿಲ್ಲುತ್ತಿದೆ. ಯಾಕೆ ಹೀಗೆ? ಈ ನವೆಂಬರ್ ತಿಂಗಳಲ್ಲಿ ಮಾತ್ರ ಏಕೆ ಕನ್ನಡಕ್ಕೆ ಆವೇಶ..?
ಎಲ್ಲವನ್ನು ಮೌನದ ಕನ್ನಡಿಯಲ್ಲಿ ನೋಡಿದಾಗ ಕನ್ನಡದ ಭಾವಚಿತ್ರ ಒಡೆದ ಗಾಜಿನಂತೆ ನೂರಾರು ಬಿರುಕುಗಳು ಅಟ್ಟಹಾಸಗೈಯ್ಯುತ್ತಿವೆ. ಹೊರ ರಾಜ್ಯಗಳಿಂದ ಉದ್ಯೋಗಕ್ಕಾಗಿ ಬಂದ ಪರಭಾಷಿಗರು ಕನ್ನಡದ ಬಗ್ಗೆ ಹಿಗ್ಗಾಮುಗ್ಗ ಮಾತಾಡಿದರು. ಕನ್ನಡದ ಮನಸ್ಸುಗಳು ನೋವು ಅನುಭವಿಸಿದ್ದು ಯಾವತ್ತಿಗೂ ಮರೆತಿಲ್ಲ. ಎಲ್ಲಿ ಹೋದವು ಭಾಷಾಭಿವೃದ್ಧಿಗೆ ಸರಕಾರ ತಂದ ನೀತಿಗಳು ?. ಶಾಲಾ-ಕಾಲೇಜುಗಳಲ್ಲಿ ಭಾಷೆಯ ಬಗೆಗಿನ ಲಘು ವಿಚಾರಗಳು ವಿದ್ಯಾರ್ಥಿಗಳಲ್ಲಿ ಅಸಡ್ಡೆಗೆ ದಾರಿ ತೋರಿಸುತ್ತಿದೆ. ಕನ್ನಡ ಸಂಘಟನೆಗಳಲ್ಲಿ ಮುತುವರ್ಜಿ ವಹಿಸಿ ಬೀದಿ-ಬೀದಿಯಲ್ಲಿ ಕನ್ನಡದ ಆವೇಷ ಉಕ್ಕಿಸುವ ಉಮ್ಮಸ್ಸು ಮಂಕಾಗಿದೆ. ಗಣ್ಯ ವ್ಯಕ್ತಿಗಳ ರಣ ಕಹಳೆ ಮೊಳಗಿಸುವ ಕನ್ನಡದ ಬಗೆಗಿನ ಮಾತುಗಳು ಜಡ ಹಿಡಿದು ಮಲಗಿವೆ. ಇದು ಇಂದಿನ ಕನ್ನಡದ ದೌರ್ಬಲ್ಯಗಳಲ್ಲಿ ಮೊದಲು ಕಾಣುವಂತಹದ್ದು. ಆಂಗ್ಲ ಮತ್ತು ಹಿಂದಿ ಭಾಷೆಗಳ ನಡುವೆ ಬೇಧಭಾವ ಭಿತ್ತಿದ ಹಲವು ಉದಾಹರಣೆಗಳು ಹಲವು ವಿಧದಲ್ಲಿ ಅಭಿಮಾನ ಕುಸಿಯುವಂತೆ ಮಾಡಿದೆ ಅಂತ ಖೇಧ ವ್ಯಕ್ತಪಡಿಸುವುದು ಅನಿರ್ವಾಯ. ಪ್ರಶಸ್ತಿ ಕೊಡುವುದು ಪ್ರಚಾರಕ್ಕೆ ಅಲ್ಲ. ಅದು ಹೊಣೆಗಾರಿಕೆಯನ್ನು ಹೆಚ್ಚಿಸಲಿಕ್ಕೆ. ಪ್ರಶಸ್ತಿ ಅನ್ನುವ ಪದದ ಇನ್ನೊಂದು ಅರ್ಥ ಇದು. ಟಿ.ವಿ.ಮಾಧ್ಯಮ, ಆಕಾಶವಾಣಿ ಮಾಧ್ಯಮಗಳಂತೂ ಕನ್ನಡದ ಹೆಸರಿಟ್ಟು ಕನ್ನಡಿಗರನ್ನೇ ಬೀದಿಗೆ ತರುತ್ತಿವೆ. ಇದರ ಬಗ್ಗೆ ಪ್ರಶ್ನಿಸಿದವರಿಗೆ ಕನ್ನಡದ ನೆಲದಲ್ಲೇ ಕನ್ನಡತನದ ಚುಕ್ಕಾಣಿ ಹಿಡಿದವರ ಉತ್ತರ ಮೌನ.




