ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

18
ಆಗಸ್ಟ್

ಭ್ರಷ್ಟಾಚಾರ ಎಂದರೆ ಅನುಕೂಲ ಸಿಂಧು

– ಪವನ್ ಪರುಪತ್ತೆದಾರ   

ನನಗೊಬ್ಬ ಸ್ನೇಹಿತ ಇದ್ದಾನೆ ಪ್ರವೀಣ್ ಅಂತ, ನನ್ನ ಜೊತೆ ಓದಿಲ್ಲವಾದರೂ ನನ್ನ ಸಹಪಾಠಿ ಅವನು, ಒಂದೇ ತರಗತಿ ಆದರೆ ಬೇರೆ ಶಾಲೆ. ಅವನ ಕೆಲಸ ತಾಲ್ಲೂಕು ಕಚೇರಿಯಲ್ಲಿ. ಸರ್ಕಾರದಿಂದ ಕೊಟ್ಟ ಕೆಲಸ ಅಲ್ಲ, ಅವನೇ ಹುಡುಕಿ ಕೊಂಡಿರುವ ವೃತ್ತಿ. ನಿಜ ಹೇಳಬೇಕೆಂದರೆ ನಮ್ಮೂರಿನ ತಾಲ್ಲೂಕು ಕಚೇರಿಯೋಳಗಿರುವರಿಗಿಂತ ಇವನು ಹೆಚ್ಚು ಕೆಲಸ ಮಾಡುತ್ತಾನೆ. ಪಹಣಿ, registration, ಖಾತೆ ಬದಲಾವಣೆ, encumberance ಸರ್ಟಿಫಿಕೇಟ್, survey sketch ಕಾಪಿ, ನಿಮಗೇನು ಬೇಕು?? ತಾಲ್ಲೂಕು ಕಚೇರಿಯ ಗೇಟ್ ನ ಪ್ಯೂನ್ ಇಂದ ಹಿಡಿದು ತಹಶೀಲ್ದಾರ್ ತನಕ, ಏನು ಕೆಲಸ ಬೇಕಾದರುಮಾಡಿಕೊಡುತ್ತಾನೆ(ಮಾಡಿಸಿಕೊಡುತ್ತಾನೆ).

ಇತ್ತೀಚಿಗೆ ನನಗೆ ಬಹಳ ಜರೂರಾಗಿ ನಮ್ಮ ಜಮೀನಿನ ಪಹಣಿ ಬೇಕಾಗಿತ್ತು. ನಮ್ಮ ಊರಿನ ಪಹಣಿ ಕೇಂದ್ರ ಬಹಳ ದಿನಗಳಿಂದ ದುರಸ್ಥಿಯಲ್ಲಿತ್ತು. ಆಗಷ್ಟೇ ಕೊಡಲು ಶುರು ಮಾಡಿದ್ದರು. ಅದ್ದರಿಂದ ತಾಲ್ಲೂಕು ಕಚೇರಿ ಬಳಿ ಹೋಗಿ ಸಾಲು ನೋಡಿದೊಡನೆ ಭಯವಾಯ್ತು. ಅದರಲ್ಲೂ ನಮ್ಮ ಸರ್ಕಾರೀ ಕಛೇರಿಯೋಳಗಿನ ಗಣಕ ಯಂತ್ರಗಳು ಯಾವಾಗ ಕೆಡುತ್ತವೋ ಗೊತ್ತಿಲ್ಲ. ಇವತ್ತು ಕೆಟ್ಟರೆ ಇನ್ನು ರಿಪೇರಿ ಆಗುವುದು ಯಾವಾಗಲೋ??? ಅಲ್ಲಿವರೆಗೂ ನನಗೂ ಕಾಯುವ ಅವಕಾಶವಿರಲಿಲ್ಲ. ಮತ್ತಷ್ಟು ಓದು »

17
ಆಗಸ್ಟ್

`ಆವರಣ’ ಹಿಂದಿಗೆ

-ಕಾಲಂ ೯

ಕನ್ನಡದಲ್ಲಿ ವಾದ-ವಿವಾದಗಳಿಗೆ ಕಾರಣವಾಗಿದ್ದ ಎಸ್. ಎಲ್. ಭೈರಪ್ಪನವರ ‘ಆವರಣ’ ಹಿಂದಿ ಜಗತ್ತನ್ನೂ ಪ್ರವೇಶಿಸಿದೆ. ಈ ಹಿಂದೆಯೇ ತಮಿಳು, ಮರಾಠಿ, ಸಂಕ್ಸಿತಕ್ಕೆ ಆವರಣ ಹೋದ ಸುದ್ದಿ ಇತ್ತು.

ಮುಸ್ಲಿಂ ನವಾಬರ ‘ಜನಾನ’ದ ವರೆಗೆ ಕಥೆ ಪ್ರವೇಶಿಸಿದ್ದು ಒಂದು ಕಡೆಯಾದರೆ ಮತ್ತೊಂದೆಡೆ ಬುದ್ಧಿಜೀವಿಗಳ ಹರಕು-ಹುಳುಕನ್ನು ಕಾದಂಬರಿ ಹರಾಜು ಹಾಕಿ ವಿವಾದಕ್ಕೆ ಕಾರಣವಾಗಿತ್ತು. ಒಂದೇ ವರ್ಶದಲ್ಲಿ 20ಕ್ಕೂ ಹೆಚ್ಚು ಮುದ್ರಣಗಳಿಗೂ ಹೋಗಿತ್ತು.

ಮೂಲಕಥೆ ಉತ್ತರಭಾರತದ ಹಿಂದಿ ಜಗತ್ತಿನದೇ. ಇದೀಗ ಕಾದಂಬರಿ ಹಿಂದಿ ಜಗತ್ತನ್ನು ಪ್ರವೇಶಿಸಿದೆ. ಕುವೆಂಪು ಭಾಷಾ ಭಾರತಿಯ ಅಧ್ಯಕ್ಷರಾಗಿರುವ ಡಾ|  ಪ್ರಧಾನ ಗುರುದತ್ ಹಿಂದಿಗೆ ಅನುವಾದಿಸಿದ್ದಾರೆ.

ಇಂಡಿಯಾ ಟುಡೇ ಹಿಂದಿ ಅವತರಣಿಕೆಯ ಈ ವಾರದ ಸಂಚಿಕೆ ಅರ್ಧ ಪುಟದ ವಿಮರ್ಶೆ ಪ್ರಕಟಿಸಿದೆ. ವಿಮರ್ಶಕ ಶಶಿಭೂಷಣ ದ್ವಿವೇದಿಗೆ ಪ್ರಧಾನರ ಅನುವಾದ ಸಮಧಾನ ತಂದಿಲ್ಲ.

ಇದೇ ಅಗಸ್ಟ್ 16ರಂದು ಕೇರಳದ ಕೊಚ್ಚಿನ್ ನಲ್ಲಿ ಆವರಣದ ಸಂಸ್ಕೃತ ಆವೃತ್ತಿಗೆ ಕೇಂದ್ರ ಸಾಹಿತ್ಯ ಅಕಾಡಮಿಯ ‘ಅತ್ಯುತ್ತಮ ಅನುವಾದ’ ಪುರಸ್ಕಾರ ಸಿಗಲಿದೆ ಎಂದು ಗೊತ್ತಾಗಿದೆ.

**********

17
ಆಗಸ್ಟ್

ಜಾತಿ ಸೂಚಕ ಹೆಸರಿಗೆ ನಿರ್ಬಂಧ, ಹಿಮಾಚಲ ಪೊಲೀಸರ ಮಾದರಿ ನೀತಿ

-ರಾಕೇಶ್ ಎನ್ ಎಸ್

ಹಿಮಾಚಲ ಪ್ರದೇಶದ ಪೊಲೀಸ್ ಇಲಾಖೆ ಅತ್ಯುತ್ತಮ ನಿರ್ಧಾರವೊಂದನ್ನು ಕೈಗೊಂಡಿದೆ. ಅದೇನೆಂದರೆ ತನ್ನ ಪೊಲೀಸರ ಪೂರ್ಣ ಹೆಸರಿನ ಜೊತೆ ಸಾಮಾನ್ಯವಾಗಿ ಒಂದು ಭಾಗವಾಗಿರುವ ಜಾತಿ ಸೂಚಕ ಹೆಸರನ್ನು ಕಿತ್ತು ಹಾಕುವ ವಿಶಿಷ್ಟ ಯೋಜನೆಯನ್ನು ಅದು ಹಾಕಿಕೊಂಡಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ನ ಜೂನ್ ೨೪ರ ನವದೆಹಲಿ ಆವೃತ್ತಿಯ ಮುಖಪುಟದಲ್ಲಿನ ವರದಿಯೊಂದು ಹೇಳುತ್ತಿತ್ತು.

ಇಂದು ಜಾತಿ ಈ ಹಿಂದಿಗಿಂತಲೂ ಹೆಚ್ಚು ಬಲಿಷ್ಠವಾಗಿ ತನ್ನ ಕಬಂಧ ಬಾಹುವನ್ನು ಚಾಚುತ್ತಿರುವುದು ಅಧುನಿಕತೆಯ ಮುಖವಾಡ ಹಾಕಿಕೊಂಡಿರುವ ನಮಗೆಲ್ಲ ನಾಚಿಕೆಗೇಡಿನ ಸಂಗತಿ. ಆದರೂ ವೈಯುಕ್ತಿಕ ಜೀವನದಲ್ಲಿ ‘ಜಾತೀಯ ಭಾವನೆ’ ಹೊಂದಿದ್ದೇ ಆದರೆ ಅದನ್ನು ಸುಮ್ಮನೆ ಬಿಟ್ಟು ಬಿಡಬಹುದು. ಆದರೆ ಸಾರ್ವಜನಿಕ ಜೀವನ ನಡೆಸುವ ಜನರು ಕೂಡ ಜಾತಿಯ ಹೊಲಸನ್ನು ಮೈಮೇಲೆ ಹಾಕಿಕೊಂಡು ವ್ಯವಹಾರ ನಡೆಸುತ್ತಿರುವುದು ನಿಜವಾದ ದುರಂತ. ರಾಜಕಾರಣಿಗಳಲ್ಲಿ, ಸರ್ಕಾರಿ ಅಧಿಕಾರಿಗಳಲ್ಲಿ (ಪತ್ರಕರ್ತರಲ್ಲೂ ಇದು ಹೆಚ್ಚಿನ ಪ್ರಮಾಣದಲ್ಲಿ ಇದೆ) ಜಾತಿಯ ಭಾವನೆ ಇರುವುದು ಮತ್ತು ಅದು ಅವರ ವ್ಯವಹಾರದಲ್ಲಿ ಪ್ರತಿಫಲಿಸುತ್ತಿರುವುದು ನಿಜಕ್ಕೂ ಅಕ್ಷಮ್ಯ. ಇಂತಹ ಸಂದರ್ಭದಲ್ಲಿ ಹಿಮಾಚಲ ಪೊಲೀಸರ ಈ ನಿರ್ಧಾರ ನಮ್ಮ ಕಣ್ಣು ತೆರೆಸುವಂತದ್ದಾಗಿದೆ. ಮತ್ತಷ್ಟು ಓದು »
16
ಆಗಸ್ಟ್

ಹೋರಾಟದ ಸಾಗರಕೆ ಸಾವಿರಾರು ನದಿಗಳು.ನೀವು!?

15
ಆಗಸ್ಟ್

ಸುಮ್ಮನೆ ಬರಲಿಲ್ಲ ಸ್ವಾತಂತ್ರ್ಯ…!

– ರಾಕೇಶ್ ಶೆಟ್ಟಿ

ಇವತ್ತು ೬೫ನೇ ಸ್ವಾತಂತ್ರ್ಯ ಸಂಭ್ರಮ,ದೆಹಲಿಯ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿ ಭಾಷಣ ಮಾಡಲಿದ್ದಾರೆ ನಮ್ಮ ಪ್ರಾಮಾಣಿಕ ಪ್ರಧಾನಿ.ಮತ್ತೆ ನಾಳೆ ಇದೇ ಪ್ರಾಮಾಣಿಕ ಪ್ರಧಾನಿಯ ಸರ್ಕಾರದ ಅನೈತಿಕತೆಯ ವಿರುದ್ಧ ಅಣ್ಣಾ ಹಜ಼ಾರೆ ಮತ್ತೆ ಉಪವಾಸ ಕೂರುತಿದ್ದಾರೆ.ಅಣ್ಣಾ ಇದನ್ನ ಎರಡನೇ ಸ್ವಾತಂತ್ರ್ಯ ಹೋರಾಟ ಅನ್ನುತಿದ್ದಾರೆ.ಆದರೆ ಮೊದಲ ಸ್ವಾತಂತ್ರ್ಯ ಹೋರಾಟದ ಆಳ-ಅಗಲಗಳನ್ನ ಸರಿಯಾಗಿ ತಿಳಿಯಲಾಗದೇಯೆ ಶಾಲೆ-ಕಾಲೇಜು ಪಾಸಾಗಿ ಬಂದ ನಮ್ಮಲ್ಲಿ ಅದಿನ್ನೆಷ್ಟು ಜನಕ್ಕೆ ಈ ಎರಡನೇ ಹೋರಾಟ ಕಿಚ್ಚು ಹಚ್ಚಬಹುದು,ಅದನ್ನ ಕಾಲವೇ ಉತ್ತರಿಸಲಿದೆ.

ಅಣ್ಣಾ ಉಪವಾಸ ಹೋರಾಟಕ್ಕೆ ಜಯವಾಗಲಿ ಅಂತ ಹಾರೈಸುತ್ತ,ಅಣ್ಣಾ ಉಪವಾಸ ಸತ್ಯಾಗ್ರಹಕ್ಕೆ ಆರಂಭದಲ್ಲೆ ಕಲ್ಲು ಹಾಕಿ ತಲೆಕೆಟ್ಟವರಂತೆ ಮಾತನಾಡುತ್ತಿರುವ ಕಾಂಗ್ರೆಸ್ಸಿನ ಮಂದಿಗೂ ಮತ್ತು ಕೇಂದ್ರ ಗೃಹ ಸಚಿವರಿಗೂ ಮತ್ತು ಕನಿಷ್ಠ ದೆಹಲಿ ಪೋಲಿಸ್ ಪರ್ಮಿಷನ್ ಸಹ ಕೊಡಿಸಲಾಗದ ಅಸಾಹಯಕ ಆದರೆ At the same time ಪ್ರಾಮಾಣಿಕ ಪ್ರಧಾನಿಯ ಶೋಚನೀಯ ಸ್ಥಿತಿಗೆ ಕಂಬನಿ ಮಿಡಿಯುತ್ತ, ಉಪವಾಸ ಸತ್ಯಾಗ್ರಹದಂತ ಹೋರಾಟದ ಅಸ್ತ್ರ ಹಿಡಿದು ನಿಲ್ಲುವವರ ಮನಸ್ಥಿತಿಯ ಕುರಿತಾಗಿ ಮಹಮ್ಮದ್ ಅಲಿ ಜಿನ್ನಾ ಹೇಳಿರುವ ಮಾತುಗಳು ನೆನಪಿಸಿಕೊಳ್ಳುತಿದ್ದೇನೆ.

“ಯಾವ ಮನುಷ್ಯ ಉಪವಾಸ ಸತ್ಯಾಗ್ರಹಕ್ಕೆ ಇಳಿಯುತ್ತಾನೋ ಅಂತವನು ಅವನ ಮನಸಿನ ಮಾತಿನಂತೆ ನಡೆಯುತ್ತಾನೆ ಮತ್ತು ಅವನಿಗೆ ಅವನೇನು ಮಾಡುತ್ತಿದ್ದಾನೆ ಎಂಬುದರ ಸಂಪೂರ್ಣ ಅರಿವಿರುತ್ತದೆ.ಅವರನ್ನು ಹಾದಿ ತಪ್ಪಿದವರು ಅನ್ನುವ ಮೊದಲು ಅವರನ್ನು ಹಾದಿ ತಪ್ಪಿಸಿರುವುದು ಈ ವ್ಯವಸ್ತೆ ಅನ್ನುವುದನ್ನ ಮರೆಯಬಾರದು,ಮತ್ತು ಈ ವ್ಯವಸ್ತೆಯ ವಿರುದ್ಧ ಯುವಕರು ಸಿಡಿದಿದ್ದಾರೆ” . ಅವರು ಹಾಗೇ ಹೇಳಿದ್ದು ಕ್ರಾಂತಿಕಾರಿ ಭಗತ್ ಸಿಂಗ್ ಮತ್ತು ಸಂಗಡಿಗರು ಬ್ರಿಟಿಶ್ ಕೈದಿಗಳಂತೆ ಭಾರತೀಯ ಕೈದಿಗಳಿಗೂ ಜೈಲಿನಲ್ಲಿ ಸಮಾನ ಹಕ್ಕು ನೀಡುವಂತೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟವನ್ನ ಬಹಿರಂಗವಾಗಿ ಬೆಂಬಲಿಸಿ.ಆಗಲೂ ಸಹ ಕಾಂಗ್ರೆಸ್ಸ್ ಭಗತ್ ಸಿಂಗ್ ಅವರ ಉಪವಾಸದ ಹೋರಾಟದ ಬಗ್ಗೆ ಈಗ ಅಣ್ಣಾ ಅವರ ಹೋರಾಟದ ವಿರುದ್ಧ ಇರುವಂತೆಯೆ ಇತ್ತು. ಅದಿರಲಿ, ಈ ಹೋರಾಟ ನಡೆದಿದ್ದು ಬರೋಬ್ಬರಿ ೬೩ ದಿನಗಳ ಕಾಲ! ಕಡೆಗೂ ಭಗತ್ ಸಿಂಗ್ ಮತ್ತವರ ಗೆಳೆಯರ ಎದುರು ಬ್ರಿಟಿಷ್ ಸರ್ಕಾರ ಮಂಡಿಯೂರಲೇ ಬೇಕಾಯಿತು,ಆದರೆ ಅಷ್ಟರೊಳಗಾಗಲೇ ನಾವು ’ಜತೀನ್ ದಾ’ ಅವರನ್ನ ಕಳೆದುಕೊಂಡಾಗಿತ್ತು 😦

ಮತ್ತಷ್ಟು ಓದು »

15
ಆಗಸ್ಟ್

ಸತ್ಯೇಂದ್ರನಾಥ್ ಬೋಸ್ – Another Forgotten Hero…

– ಭೀಮ ಸೇನ್ ಪುರೋಹಿತ್

ನಮ್ಮ ದೇಶದ ಸ್ವಾತಂತ್ರ್ಯಹೋರಾಟಕ್ಕೆ ಅತಿಹೆಚ್ಚು ಹಾಗು ಪ್ರಖರ ಕೊಡುಗೆಗಳನ್ನು  ನೀಡಿದ ಯಶಸ್ಸು ‘ಪಶ್ಚಿಮ ಬಂಗಾಳ’ ರಾಜ್ಯಕ್ಕೆ ಸಲ್ಲುತ್ತದೆ. ಆ ಬಂಗಾಳದ ಮತ್ತೊಂದು ಹುಲಿಯೇ “ಸತ್ಯೇಂದ್ರನಾಥ್ ಬೋಸ್”. ಇವನ ಇಡೀ ಕುಟುಂಬವೇ ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿತ್ತು. ಅವನ ತಂದೆ ‘ರಾಜನಾರಾಯಣ ಬೋಸ್’, ಸಹೋದರರಾದ ‘ಜ್ಞಾನೇಂದ್ರನಾಥ್ ಬೋಸ್’,’ಭೂಪೆಂದ್ರನಾಥ್ ಬೋಸ್’,ಎಲ್ಲರೂ ಸ್ವಾತಂತ್ರ್ಯ ಹೋರಾಟಗಾರರೆ.. ಮಿಡ್ನಾಪುರ್ ಜಿಲ್ಲೆಯಲ್ಲಿ ಜನಿಸಿದ ಸತ್ಯೇನ್, ಓದಿನಲ್ಲಿ ಜಾಣ. ಬಿ.ಎ ತನಕ ಓದಿದರೂ, ಮುಂದೆ ಓದಲಾಗಲಿಲ್ಲ..ಇನ್ನೊಂದು ವಿಶೇಷ ಅಂದ್ರೆ, ಈ ಸತ್ಯೇಂದ್ರನಾಥ್, ಶ್ರೀ ಅರವಿಂದ್ ಘೋಶರಿಗೆ ಸಂಬಂಧಿ…

“ಅಲಿಪುರ ಬಾಂಬ್ ಪ್ರಕರಣ” ಮತ್ತು “ಮಾಣಿಕ್ ತೊಲಾ ಗಾರ್ಡನ್ ಬಾಂಬ್ ಪ್ರಕರಣ”, ಈ ಎರಡು ಪ್ರಕರಣಗಳೂ, ಸ್ವಾತಂತ್ರ್ಯಹೋರಾಟದ ಸಮಯದಲ್ಲಿ, ಬಂಗಾಳ ಪ್ರಾಂತದಲ್ಲಿ ನಡೆದ ಬಹುದೊಡ್ಡ ಬ್ರಿಟಿಶ್ ವಿರೋಧಿ ಕಾರ್ಯಗಳು.. ಇವೆರಡರ ಹಿಂದೆ ಇದ್ದಿದ್ದು ಬಂಗಾಳದ “ಅನುಶೀಲನ ಸಮಿತಿ” ಹಾಗು “ಯುಗಾಂತರ ಸಮಿತಿ”ಯ ಕ್ರಾಂತಿಕಾರಿಗಳು, ಹಾಗು ಈ ಕ್ರಾಂತಿಕಾರಿಗಳನ್ನ ಪ್ರೆರೆಪಿಸಿದವ್ರು, ಮಹಾನ್ ರಾಷ್ಟ್ರವಾದಿ ( ನಾನಂತೂ ಅವರನ್ನ ‘ಮಹರ್ಷಿ’ ಅಂತಾನೆ ಕರೆಯೋದು ) ಶ್ರೀ ಅರವಿಂದ್ ಘೋಷ್…. ಈ ಎರಡು ಪ್ರಕರಣಗಳಾದ ಮೇಲೆ ಬ್ರಿಟಿಷರು ಎಚ್ಚೆತ್ತು ತನಿಖೆ ಶುರು ಮಾಡಿದ್ರು.. ಎರಡರಲ್ಲಿಯೂ ಬಳಸಲಾದ ಬಾಂಬ್ ಗಳು ಒಂದೇ ಥರದ್ದು ಅಂತ ಗೊತ್ತಾಯ್ತು. ಹೀಗಾಗಿ ಅನುಶೀಲನ ಸಮಿತಿ ಹಾಗು ಯುಗಾಂತರದ ಕೆಲವು ಕ್ರಾಂತಿಕಾರಿಗಳನ್ನ ಬಂಧಿಸಲಾಯ್ತು. ಜೊತೆಗೆ ಇವರೆಲ್ಲರ ಹಿಂದೆ ಇರೋರು ಅರವಿಂದ ಘೋಶರೆ ಅಂತ ಅಪಾದನೆ ಹೊರಿಸಿ ಅವರನ್ನೂ ಜೈಲಿಗೆ ಕಳಿಸಿದರು..ಇದು ಕ್ರಾಂತಿಕಾರಿಗಳಲ್ಲಿ ಬೇಸರ ಹಾಗು ಆಕ್ರೋಶವನ್ನ ಮೂಡಿಸ್ತು..

ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಯ್ತು. ಬ್ರಿಟಿಷರು ಎಂದಿನಂತೆ ಕ್ರಾಂತಿಕಾರಿಗಳಿಗೆ ಚಿತ್ರಹಿಂಸೆ ಕೊಟ್ಟು ಬಾಯಿಬಿಡಿಸೋದಕ್ಕೆ ಪ್ರಯತ್ನಿಸಿದರು.. ಅದಕ್ಕೆ ಹೆದರಿ, ಬ್ರಿಟಿಷರ ಆಮಿಷಕ್ಕೆ ಸೋತು, ‘ನರೇನ್ ಗೋಸ್ವಾಮಿ’ ಅನ್ನೋನು approver ಆಗ್ಬಿಟ್ಟ.. ಭಾರತದ ಇತಿಹಾಸದುದ್ದಕ್ಕೂ ದೇಶಭಕ್ತರಷ್ಟೇ, ದೇಶದ್ರೋಹಿಗಳೂ ಇದಾರೆ..!!!
ಇತ್ತ ಕೋರ್ಟ್ ನಲ್ಲಿ ನರೇನ್ ಎಲ್ಲರ ವಿರುದ್ಧ ಸಾಕ್ಷಿ ಹೇಳೋದಕ್ಕೆ ಶುರು ಮಾಡಿದ. ಅಷ್ಟೇ ಆಗಿದ್ರೆ ಸುಮ್ನಿರ್ತಿದ್ರೆನೋ.. ಆದ್ರೆ ನರೇನ್, ಅರವಿಂದ ಘೋಷ್ ವಿರುದ್ಧನೂ ಸಾಕ್ಷಿ ಹೇಳೋದಕ್ಕೆ ತಯಾರಾದ.ಅಲ್ಲಿಗೆ ಕ್ರಾಂತಿಕಾರಗಳ ಸಿಟ್ಟು ಮಿತಿ ಮೀರಿತು..ಜೈಲಿನ ಒಳಗಿದ್ದ ‘ಸತ್ಯೇಂದ್ರನಾಥ್’ ಹಾಗು ಅವನ ಗೆಳೆಯ ‘ಕನ್ನಯ್ಯಲಾಲ್ ದತ್ತ’ ಇಬ್ರೂ ಸೇರಿ ಆ ದ್ರೋಹಿ ನರೇನ್ ಸಂಹಾರಕ್ಕೆ ಪ್ಲಾನ್ ಹಾಕಿದರು…

ಮತ್ತಷ್ಟು ಓದು »

15
ಆಗಸ್ಟ್

ಯಾರಿಗೆ ಬಂತು ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ

– ಪವನ್ ಪರುಪತ್ತೆದಾರ್

ಮೊದಲಿಗೆ ನಿಲುಮೆಯ ಎಲ್ಲ ಓದುಗರಿಗೆ ಸ್ವಾತಂತ್ರ್ಯದಿನದ ಶುಭಾಶಯಗಳು. ೬೫ ನೆ ಸ್ವತಂತ್ರ ದಿನದ ಆಚರಣೆ ಎಲ್ಲ ಕಡೆ ಭರ್ಜರಿಯಿಂದ ಸಾಗಲಿ ಎಂದು ಆಶಿಸೋಣ. ೧೯೪೭ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ಸಿಕ್ಕಿದ ವಿಷಯ ನಮಗೆಲ್ಲ  ತಿಳಿದಿದ್ದೆ. ಇಂದು  ನಮಗೆ  ಅ  ಸ್ವಾತಂತ್ರ್ಯ ಎಷ್ಟರ ಮಟ್ಟಿಗೆ  ಸಿಕ್ಕಿದೆಯೆಂದರೆ ನಮ್ಮ ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸುವ  ಮಟ್ಟಿಗೆ ಸಿಕ್ಕಿದೆ. ನಾ ಬೇಕಾದರೆ ಬಾಜಿ ಕಟ್ಟುತ್ತೇನೆ ನಾಳಿನ ಪೇಪರ್ ನೋಡಿ ನಮ್ಮ ರಾಜ್ಯದಲ್ಲೇ  ಒಂದೆರಡು  ಕಡೆಯಾದರು ಧ್ವಜವನ್ನು ಉಲ್ಟಾ ಹಾರಿಸಿರುತ್ತಾರೆ. ಬ್ರಿಟಿಷರ ದಬ್ಬಾಳಿಕೆ ಹದ್ದು ಮೀರಿದಾಗ ಹಿಂಸೆಯ ನಾನಾ ಮಾರ್ಗಗಳು ಪ್ರಯೋಗಿಸಿ ಹುತಾತ್ಮರಾದವರು, ನಂತರ ದೇಶವನ್ನೆಲ್ಲ ಒಟ್ಟಿಗೆ ಸಂಘಟಿಸಿ ಅಹಿಂಸೆಯಿಂದ ಮಾತ್ರ ನಮಗೆ ಸ್ವಾತಂತ್ರ್ಯ ಸಾಧ್ಯ ಎಂದು ತೋರಿಸಿಕೊಟ್ಟು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ  ಮಹಾತ್ಮರು, ನಮ್ಮ ಈಗಿನ ಸ್ವಾತಂತ್ರ್ಯವನ್ನೇನಾದರು ನೋಡಿದ್ದರೆ, ಇವರಿಗೆ  ಯಾಕಾದ್ರು ಸ್ವಾತಂತ್ರ್ಯ ಕೊಡಿಸಿದೆವೋ ಎಂದು ಮರುಗುತಿದ್ದರೆನೋ…..

ನನ್ನ  ಮಾತುಗಳು ಅತಿಶಯೋಕ್ತಿ ಎನಿಸಬಹುದು. ಆದರೆ ನಮ್ಮ ದೇಶದಲ್ಲಿ ಎಲ್ಲರಿಗು ಎಷ್ಟು ಸ್ವಾತಂತ್ರ್ಯವಿದೆ ಅಂತ ನಿಮಗೆ ಗೊತ್ತು. ಟ್ರಾಫಿಕ್ ಪೋಲಿಸ್ ಡಾಕುಮೆಂಟ್ ಸರಿ ಇದ್ದರು ಲಂಚ ಪಡೆಯುವ ಸ್ವಾತಂತ್ರ್ಯ, ಖಾತೆ ಬದಲಾವಣೆ ಮಾಡಿಸಬೇಕಾದರೆ ಪತ್ರ ಸ್ಕಾನ್ನಿಂಗ್ ಮಾಡುವನಿಂದ ಹಿಡಿದು, ಮೊಹರು ಹಾಕುವ ಗುಮಸ್ತನಿಂದ ಹಿಡಿದು, revinue inspector ತನಕ ಲಂಚ ಪಡೆಯುವ ಸ್ವಾತಂತ್ರ್ಯ. ಗೆದ್ದೊಡನೆ ತಮ್ಮ ಕ್ಷೇತ್ರದ ಜನತೆಯನ್ನು ಮರೆತು ರೆಸಾರ್ಟ್ ಗಳಲ್ಲಿ ವಾಸ್ತವ್ಯ ಹೂಡುವ ಸ್ವಾತಂತ್ರ್ಯ, ಪಕ್ಷದ ತತ್ವ ಸಿದ್ಧಾಂತಗಳನ್ನು ಮರೆತು ಪಕ್ಷಾಂತರ ಮಾಡುವ ಸ್ವಾತಂತ್ರ್ಯ, ರೈತನ ಜಮೀನನ್ನು ಕಸಿದು ಅಧುನಿಕರಣದ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುವ ಸ್ವಾತಂತ್ರ್ಯ, ನಮ್ಮ ಭೂಮಿಯ ಸಂಪತ್ತಲ್ಲದೆ ಅಂತರಂಗದಲ್ಲಿರುವ ತರಂಗಾಂತರಗಳನ್ನು ಮೋಸದಿಂದ ಮಾರುವ ಸ್ವಾತಂತ್ರ್ಯ, ಇನ್ನು ತಮಾಷೆಯೆಂದರೆ ತಪ್ಪು ಮಾಡಿ ದುಷ್ಕ್ರುತ್ಯಗಳನ್ನೆಸಗಿ ವಾರ್ಷಿಕ ೧೧ ಕೋಟಿ ಹಣವನ್ನು ಸರ್ಕಾರದಿಂದ ಖರ್ಚು ಮಾಡಿಸಿಕೊಳ್ಳೋ ಸ್ವಾತಂತ್ರ್ಯ ಮತ್ತು ತಪ್ಪಿತಸ್ತ ಎಂದು ಖಾತರಿಯಾದ ಮೇಲು ಶಿಕ್ಷೆ ಇಲ್ಲದೆ ಐಶಾರಾಮಿ ಜೀವನ ನಡೆಸುವ ಸ್ವಾತಂತ್ರ್ಯ, ಇಂತಹದ್ದೆನ್ನಲ್ಲ ವಿರೋಧಿಸಿದರೆ ವಿರೋಧಿಸಿದವರ ವಿರುದ್ದವೇ ಕೇಸು ಜಡಿಯುವ ಸ್ವಾತಂತ್ರ್ಯ.ಆಹಾ ಹೇಳುತ್ತಾ ಹೋದರೆ ಪುಟಗಟ್ಟಲೆ ಇಂತಹ ಸ್ವಾತಂತ್ರ್ಯಗಳು ಸಿಗುತ್ತವೆ.

ಮತ್ತಷ್ಟು ಓದು »

15
ಆಗಸ್ಟ್

ಸ್ವಾತಂತ್ರ್ಯ ಸಂಭ್ರಮ

11
ಆಗಸ್ಟ್

ಕಾಂಗ್ರೆಸ್ಸಿನ ದೇವರು ಮತ್ತು ಪೂಜಾರಿಗಳು..!

ಸಚಿನ್.ಕೆ

ಯುಪಿಎ ಒಕ್ಕೂಟದ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಆದ ಶ್ರೀಮತಿ ಸೋನಿಯ ಗಾಂಧಿ ಸರ್ವೈಕಲ್ ಕ್ಯಾನ್ಸರ್ ನಿಂದ ಬಳಲುತಿದ್ದು ಅಮೆರಿಕದ ಪ್ರಖ್ಯಾತ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಷಯ ಎಲ್ಲರಿಗೂ ಗೊತ್ತಿರುವಂತಹದ್ದು. ಅವರು ಬೇಗ ಗುಣಮುಖರಾಗಲಿ ಎಂದು ದೇಶದ ಬಹುತೇಕ ಜನರು ದೇವರಲ್ಲಿ ಪ್ರಾರ್ಥಿಸುತಿದ್ದಾರೆ. ನಾವು ಸಹ ಅವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇವೆ.
ಇಂದು ಮತ್ತು ಮೊನ್ನೆಯ ಕೆಲ ಮುಖ್ಯ ಘಟನೆಗಳನ್ನು ನಾನು ಇಲ್ಲಿ ಪ್ರಸ್ತಾಪಿಸಬೇಕೆಂದಿದ್ದೇನೆ.

ಬಳ್ಳಾರಿಯಲ್ಲಿ ಪ್ರತಿಪಕ್ಷದ ಮುಖಂಡರಾದ ಶ್ರೀ ಸಿದ್ದರಾಮಯ್ಯ ನವರು ಶ್ರೀ ದುರ್ಗಮ್ಮ ದೇವಸ್ಥಾನದಲ್ಲಿ ೧೦೧ ತೆಂಗಿನಕಾಯಿ ಹೊಡೆದು ಮೇಡಂ ಬೇಗ ಗುಣಮುಖರಾಗಲಿಎಂದು ಪೂಜೆ ಸಲ್ಲಿಸಿದರು 

ಮತ್ತಷ್ಟು ಓದು »

8
ಆಗಸ್ಟ್

ಈ ಕಥೆ ಮುಂದಿನ ರಾಜಕಾರಣಿಗಳಿಗೆ ಒಂದು ಪಾಠವಾಗಲಿ

– ರಾಕೇಶ್ ಎನ್ ಎಸ್

ಅದು ೧೯೬೦ನೇ ದಶಕದ ಕೊನೆಯ ಭಾಗ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರವೆಂಬ ಪುಟ್ಟ ಪಟ್ಟಣದಲ್ಲಿ ಬೂಕನೆಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಎಂಬ ವ್ಯಕ್ತಿ ಒಂದು ಅಕ್ಕಿ ಮಿಲ್‌ನಲ್ಲಿ ಸಾಮಾನ್ಯ ಗುಮಾಸ್ತನಾಗಿ ತಿಂಗಳಿಗೆ ಕೇವಲ ೧೩೦ ರೂ ಸಂಬಳ ಪಡೆದುಕೊಂಡು ದಿನ ಸಾಗಿಸುತ್ತಿದ್ದ. ಅಷ್ಟರಲ್ಲೇ ಆ ವ್ಯಕ್ತಿ ಒಂಚೂರು ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ಆಸಕ್ತನಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕನಾಗಿ, ಜನಸಂಘದ ಮುಖಂಡನಾಗಿ, ಆ ಬಳಿಕ ಶಿಕಾರಿಪುರ ಪುರ ಸಭೆಯ ಸದಸ್ಯನಾಗಿ, ತುರ್ತು ಪರಿಸ್ಥಿತಿ ಘೋಷಿಸಿದ ಅದಕ್ಕೆ ಸಡ್ಡು ಹೊಡೆದ ಹೋರಾಟಗಾರನಾಗಿ, ರಾಜ್ಯದಲ್ಲಿ ಬಿಜೆಪಿಯ ಮುಖವಾಣಿಯಾಗಿ, ರೈತಾಪಿ ಜನರ ದನಿಯಾಗಿ, ರಾಜ್ಯದ ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತ ಕತೆ ಈ ದೇಶದ ಪ್ರಜಾಪ್ರಭುತ್ವದ ಸೌಂದರ್ಯಕ್ಕೆ ಮುಕುಟ ಪ್ರಾಯವಾದದ್ದಾಗಿರಬೇಕಾಗಿತ್ತು. ಆದರೆ ಈ ನಾಡಿನ ದುರದೃಷ್ಟವೆಂದರೆ ಆ ವ್ಯಕ್ತಿ ಇಂದು ಈ ನಾಡು ಕಂಡು ಕೇಳರಿಯದ ರಾಕ್ಷಸ ರಾಜಕಾರಣದ ವಾರಸುದಾರನಾಗಿ ಬಿಟ್ಟಿದ್ದಾರೆ. ಪ್ರಜಾಪ್ರಭುತ್ವದ ಚೆಲುವನ್ನು ಹೀರಿದ ಬಂದಣಿಕೆಯಾಗಿ ಇತಿಹಾಸದ ಪುಟ ಸೇರಿದ್ದಾರೆ.

ಅಪನಂಬಿಕೆ, ಸ್ವಜನಪಕ್ಷಪಾತ, ಅಧಿಕಾರದ ಮೋಹ, ಇನ್ನೊಬ್ಬರ ಕಾಲೆಳೆಯುವ ಚಾಳಿ, ಭಟ್ಟಂಗಿಗಳ ಪಟಾಲಂ ಈ ಪಂಚ ಅನಿಷ್ಠ ಗುಣಗಳಲ್ಲಿ ಒಂದು ಗುಣವಿದ್ದರು ಕೂಡ ಒಬ್ಬ ವ್ಯಕ್ತಿಯ ಬದುಕು ಪಾತಳ ಮುಖಿ ಅಗುವುದರಲ್ಲಿ ಅನುಮಾನವಿಲ್ಲ. ಅಂತಹದ್ದರಲ್ಲಿ ಈ ಪಂಚ ಗುಣಗಳನ್ನೆ ತಮ್ಮ ನಡತೆಯಾಗಿಸಿಕೊಂಡಿವವರು ನಾಯಕರಾಗಿ ಬಿಟ್ಟರೆ ಅಥವಾ ನಾಯಕರೆಂದು ಕರೆಸಿಕೊಂಡರೆ ಅವರು ಮಾತ್ರವಲ್ಲ ಅವರಿರುವ ಸಮಾಜ ಅಥವಾ ಪರಿಸರ ಗಬ್ಬೆದ್ದು ಹೋಗುತ್ತದೆ ಎಂಬುದಕ್ಕೆ ಬಿ ಎಸ್ ಯಡಿಯೂರಪ್ಪ ಮತ್ತು ಕರ್ನಾಟಕದ ರಾಜ್ಯ ರಾಜಕೀಯವೇ ಸಾಕ್ಷಿ. ಮತ್ತಷ್ಟು ಓದು »