ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

1
ಜುಲೈ

ಪ್ರೀತಿ ಕುರುಡಾದರೂ ಪ್ರಿತಿಸುವವರು ಕುರುಡಾಗದಿರಲಿ

– ಪವನ್ ಪಾರುಪತ್ತೇದಾರ್

ಅಗ್ರಹಾರದ ಶಾಮಣ್ಣನವರಿಗೆ ತಮ್ಮ ಮಗಳನ್ನ ಬ್ಯಾಂಕ್ ಮ್ಯಾನೇಜರ್ ಮಾಡಬೇಕಂಬ ಅಸೆ ಇತ್ತು.ಮಗಳಿಗೆ SSLC ವರೆಗೂ ಹಳ್ಳಿಯಲ್ಲಿನ ಶಾಲೆಯಲ್ಲಿ ಓದಿಸಿದರು, ಪ್ರತಿದಿನ ಮಗಳನ್ನ ಶಾಲೆಗೆ ಕರೆದೊಯ್ಯುವುವುದು ಮತ್ತೆ ಕರೆತರುವುದು ಅವರದೇ ಕೆಲಸ. ಮನೆಗೆ ಕರೆ ತಂದೊಡನೆ ಮುದ್ದಾಗಿ ಮಾತನಾಡಿಸಿ ಶಾಲೆಯ ಬಗ್ಗೆ ವಿಚಾರಿಸುವುದು ಇವೆಲ್ಲ ನಡೆಯುತ್ತಿತ್ತು. ಆದರೆ ಹಳ್ಳಿಯಲ್ಲಿ ಕಾಲೇಜ್ ಇಲ್ಲದಿದ್ದರಿಂದ ಅನಿವಾರ್ಯವಾಗಿ ಪಕ್ಕದ ಪಟ್ಟಣಕ್ಕೆ ಸೇರಿಸಬೇಕಾಯ್ತು, ಪ್ರತಿ ದಿನ ಬಸ್ ಅಲ್ಲಿ ಪ್ರಯಾಣ ಮಗಳು ಮನೆಯಿಂದ ಹೊರ ಮತ್ತೆ ಸಂಜೆ ಬರುವ ವರೆಗೂ ಅವಳದ್ದೇ ಚಿಂತೆ ಶಾಮಣ್ಣ ಮತ್ತು ಅವರ ಹೆಂಡತಿಗೆ. ಆಗಾಗ ಕಾಲೇಜ್ ಬಳಿ ಹೋಗುತಿದ್ದರು, ಒಂದೆರಡು ಸಲಿ ಅವರು ಹೋದಾಗ ಮಗಳು ಕಾಲೇಜ್ ನಲ್ಲಿ ಇರಲಿಲ್ಲ.

ಮಗಳು ಮನೆಗೆ ಬಂದಮೇಲೆ ಕೇಳಿದಾಗ ಸ್ನೇಹಿತೆಯ ಮನೆಗೆ ಓದಲು ಹೋಗಿದ್ದೆ ಎಂದಳು. ಆದರು ಶಾಮಣ್ಣ ನವರಿಗೆ ಏನೋ ಒಂದು ರೀತಿ ಅನುಮಾನ ಮಗಳು ಎಲ್ಲಾದರೂ ತಪ್ಪು ದಾರಿ ತುಳಿಯುತಿರುವಳೋ ಅನ್ನೋ ಭಯ, ಕಾಲೇಜ್ ಹತ್ತಿರದಲ್ಲೇ ಇದ್ದಿದ್ದರೆ ಮೊದಲಿನ ಹಾಗೆ ತಾನೆ ಜೊತೆಯಲಿ ಹೋಗಿ ಬರಬಹುದಾಗಿತ್ತು ಅನ್ನೋ ಯೋಚನೆ ಇನ್ನು ಸ್ವಲ್ಪ ದಿನಗಳಾದ ಮೇಲೆ ಕಾಲೇಜ್ ಗೆ ಹೋದ ಶಾಮಣ್ಣ ನವರ ಮಗಳು ಮತ್ತೆ ಮನೆಗೆ ತಿರುಗಿ ಬಂದಿಲ್ಲ. ಆಮೇಲೆ ತಿಳಿದ ವಿಷಯ ಅಂದ್ರೆ ಅವಳು ಪಟ್ಟಣದಲ್ಲಿನ ಒಬ್ಬ ಆಟೋ ಡ್ರೈವರ್ ಜೊತೆ ಓದಿ ಹೋಗಿದ್ದಳು, ಹತ್ತಾರು ಎಕರೆ ಜಮೀನು ಅಸ್ತಿ ಪಾಸ್ತಿ ಎಲ್ಲ ಇದ್ದ ಶಾಮಣ್ಣನವರಿಗೆ ಮಗಳ ಮದುವೆ ಮಾಡುವುದು ಅಷ್ಟೇನೂ ಕಷ್ಟದ ಕೆಲಸವಾಗಿರಲಿಲ್ಲ. ಆದರೆ ಮಗಳು ವಿದ್ಯಾವಂತೆ ಅಗಲಿ ಎಂದು ಅಸೆ ಪಟ್ಟಿದ್ದಕ್ಕೆ ಶಾಮಣ್ಣ ನವರಿಗೆ ಸಿಕ್ಕ ಪ್ರತಿಫಲ ಬಹಳ ವಿಷಾದನೀಯ. ಬಹಳ ಕಟ್ಟುನಿಟ್ಟಿನ ಬ್ರಾಹ್ಮಣ ಕುಟುಂಬ ಊರಿನ ಜನ ಮಾತ್ರವಲ್ಲದೆ ನೆಂಟರು ಇಷ್ಟರ ಮಧ್ಯೆ ಸಹ ಅವಮಾನ ಪಡುವಂತಾಯಿತು.

ಮತ್ತಷ್ಟು ಓದು »

29
ಜೂನ್

ಸರ್ಕಾರಿ ಇಂಗ್ಲಿಶ್ ಶಾಲೆ – ಬೇಲಿಯೇ ಎದ್ದು ಹೊಲವ ಮೇಯ್ದೊಡೆ ಕಾಯುವರಾರು ?

 –ವಸಂತ್ ಶೆಟ್ಟಿ
ಜನರ ಅಪೇಕ್ಷೆಗಳನ್ನು ಈಡೇರಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಜನರಿಂದ ಬೇಡಿಕೆ ಬಂದ್ರೆ ಆರನೇ ತರಗತಿಯಿಂದ ಎಲ್ಲೆಡೆ ಇಂಗ್ಲಿಶ್ ಮಾಧ್ಯಮದ ಶಾಲೆಗಳನ್ನು ತೆರೆಯಲು ಸರ್ಕಾರ ತಯಾರಾಗಿದೆ ಅನ್ನುವ ಹೇಳಿಕೆಯನ್ನು ಪ್ರಾಥಮಿಕ ಮತ್ತು ಪ್ರೌಡಶಾಲೆ ಸಚಿವರಾದ ಕಾಗೇರಿಯವರು ಹೇಳಿದ್ದು ಮೊನ್ನೆ ಮೊನ್ನೆ ಪತ್ರಿಕೆಗಳಲ್ಲಿ ಕಂಡೆ. ಬೇಲಿಯೇ ಎದ್ದು ಹೊಲವ ಮೇಯೊದು ಅಂದ್ರೆ ಇದೇನಾ ಅನ್ನಿಸ್ತಾ ಇತ್ತು. ಒಂದೆಡೆ ಪಾಲಿಕೆ ವ್ಯಾಪ್ತಿಯ ಕನ್ನಡ ಶಾಲೆಗಳನ್ನು ಸಿ.ಬಿ.ಎಸ್.ಈ ತೆಕ್ಕೆಗೆ ಕೊಡಿಸಿ ತಮ್ಮ ಜನ್ಮ ಪಾವನವಾಯ್ತು ಅನ್ನುವ ಸಚಿವರೊಬ್ಬರು, ಇನ್ನೊಂದೆಡೆ ಜನರ ಅಪೇಕ್ಷೆ ಈಡೇರಿಸಲು ಎಲ್ಲೆಡೆ ಇಂಗ್ಲಿಶ್ ಶಾಲೆಗಳನ್ನು ತೆರೆಯುವುದಾಗಿ ಹೇಳುವ ಈ ಸಚಿವರು. ಇವರ ಹೊಣೆಗಾರಿಕೆ ಇಲ್ಲದ ಈ ನಡೆಗಳು ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಗಟ್ಟಿಯಾದ ಸಮಾಧಿಯೊಂದನ್ನು ಸದ್ದಿಲ್ಲದೇ ಕಟ್ಟುತ್ತಿವೆ ಅನ್ನಬಹುದು.
ಇದೇ ಸಂದರ್ಭದಲ್ಲಿ ತಾಯ್ನುಡಿ ಶಿಕ್ಷಣದ ಬದಲು ಇಂಗ್ಲಿಶ್ ಬೇಕೆನ್ನುವವರ ವಾದವಾದರೂ ಏನು ಅಂದರೆ ನನಗೆ ಕಾಣುವುದು ಕೆಳಗಿನ ಕೆಲವು ಮಾತುಗಳು. ಅವುಗಳಿಗೆ ನನ್ನ ಅನಿಸಿಕೆ ಏನು ಅನ್ನುವುದನ್ನು ಈ ಸಂದರ್ಭದಲ್ಲಿ ಬರೆದಿರುವೆ.
ಕನ್ನಡ ಮಾಧ್ಯಮ ಬೇಕು ಅನ್ನುವವರದ್ದು ಬೂಟಾಟಿಕೆ. ಕನ್ನಡ ಮಾಧ್ಯಮ ಬೇಕು ಅನ್ನುವ ಸಾಹಿತಿಗಳು, ಚಿಂತಕರು, ಕನ್ನಡ ಪರ ಹೋರಾಟಗಾರರು, ರಾಜಕಾರಣಿಗಳು ತಮ್ಮ ಮಕ್ಕಳನ್ನು ಸೇರಿಸುವುದು ಇಂಗ್ಲಿಶ್ ಮಾಧ್ಯಮದ ಸಿ.ಬಿ.ಎಸ್.ಈ/ಐ.ಸಿ.ಎಸ್.ಈ ಶಾಲೆಗಳಿಗೆ, ಆದರೆ ಸಾಮಾನ್ಯ ಜನರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸಬೇಕು. ತಮ್ಮ ಮಕ್ಕಳು ಯಾವ ಮಾಧ್ಯಮದಲ್ಲಿ ಕಲಿಯಬೇಕು ಅನ್ನುವುದನ್ನು ಪಾಲಕರ ನಿರ್ಧಾರಕ್ಕೆ ಬಿಡಿ.   ಮತ್ತಷ್ಟು ಓದು »
29
ಜೂನ್

ಭ್ರಷ್ಟಾಚಾರ ಮತ್ತು ಕಪ್ಪು ಹಣದ ಬಗ್ಗೆ ದನಿ ಎತ್ತಿದ್ದಕ್ಕೆ ಜನಸಾಮಾನ್ಯನಿಗೆ ಯು.ಪಿ.ಎ ಇ೦ದ ಶಿಕ್ಷೆ…!!!

ಮಂಜುನಾಥ್ ಮಠದ್

(ಬೆಲೆಯೇರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯನ ಮನದಾಳದ ಮಾತು ಈ ಲೇಖನವಾಗಿ ಮೂಡಿ ಬಂದಿದೆ – ನಿಲುಮೆ )

ಭ್ರಷ್ಟಾಚಾರ ಮತ್ತು ಕಪ್ಪು ಹಣದ ಬಗ್ಗೆ ದನಿ ಎತ್ತಿದ ಬಾಬ ರಾಮ್ ದೇವ್ ಅವರನ್ನು  ರಾತ್ರೋರಾತ್ರಿ ಬ೦ಧಿಸಿ,ಲೋಕ ಪಾಲ್ ಮಸೂದೆ ಜಾರಿಗೆ ತರಲು ಯತ್ನಿಸುತ್ತಿರುವ ಅಣ್ಣಾ ಹಜಾರೆಯವರನ್ನು ವ೦ಚಿಸುತ್ತಿರುವ ಕೇ೦ದ್ರದ ಯು.ಪಿ.ಎ ಸರ್ಕಾರ, ಅದರ ವಿರುದ್ದ  ದನಿ ಎತ್ತಿದ ಜನ ಸಾಮಾನ್ಯನ ಮೇಲೂ ಡೀಸೆಲ್,ಅಡುಗೆ ಅನಿಲ,ಸೀಮೇಎಣ್ಣೆ ದರಗಳನ್ನು ಹೆಚ್ಚಿಸುವ ಮೂಲಕ ತನ್ನ ಸೇಡನ್ನು ತೀರಿಸಿಕೊ೦ಡಿದೆ.

’ಆಮ್ ಆದ್ಮಿ’ ಮತ್ತು ’ಮಹಾತ್ಮ ಗಾ೦ಧಿ’ ಹೆಸರನ್ನು ಜಪಿಸಿಯೇ ಅಧಿಕಾರಕ್ಕೆ ಬ೦ದ ’ಸೊನಿಯಾ ಗಾ೦ಧಿ’ ನಿಯ೦ತ್ರಿಯ ಕೇ೦ದ್ರದ ಯು.ಪಿ.ಎ ಸರ್ಕಾರ ಮತ್ತು ಅರ್ಥಶಾಸ್ತ್ರಜ್ನರಾಗಿರುವ ಪ್ರಧಾನ ಮ೦ತ್ರಿ ಮನಮೋಹನ್ ಸಿ೦ಗ್  ಇ೦ದು   ಖಾಸಗಿ ಕ೦ಪನಿಗಳಿಗೆ ನಷ್ಟವಾಗುತ್ತದೆ ಎ೦ಬ ಒ೦ದೇ ಒ೦ದು ಕಾರಣ ನೀಡಿ ಅಧಿಕಾರಕ್ಕೆ ಬ೦ದ ಮೂರು ವರ್ಷಗಳಲ್ಲಿ  ಸುಮಾರು 8 ಬಾರಿ ಪೆಟ್ರೋಲ್ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಿ  ದಿನೋಪಯೋಗಿ ವಸ್ತುಗಳ  ಬೆಲೆ ನಿಯ೦ತ್ರಣಕ್ಕೆ ತರಲಾಗದೆ ’ಆಮ್ ಆದ್ಮಿ’ ಗೆ ಹೊರೆಯಾಗಿ ಪರಿಣಮಿಸಿದೆ.

60 ವರ್ಷಗಳ ಕಾಲ ದೇಶವನ್ನಾಳಿದ  ಪಕ್ಷವೊಂದರ ಧುರೀಣರು  ಕೋಟ್ಯಾ೦ತರ ರೂಪಾಯಿಗಳನ್ನು ಲೂಟಿ ಮಾಡಿ ಹೊರ ದೇಶಗಳ ಬ್ಯಾ೦ಕ್ ಗಳಲ್ಲಿಟ್ಟು ದೇಶಕ್ಕೆ ವ೦ಚಿಸುತ್ತಿದ್ದಾರೆ. ಅ೦ತಹ ಕಪ್ಪು ಹಣವನ್ನು ವಾಪಾಸ್ ತ೦ದು ಜನರ ಮೇಲಾಕುವ ತೆರಿಗೆ ಗಳನ್ನು ಕಡಿತ ಗೊಳಿಸಬಹುದು ಎ೦ಬ ಸಾಮಾನ್ಯ ವ್ಯಕ್ತಿಗೆ ಅರ್ಹವಾಗುವ ಅರ್ಥ ಶಾಸ್ತ್ರ ನಮ್ಮ ಮಾನ್ಯ ಪ್ರಧಾನಿಗಳಿಗೇಕೆ ಅರ್ಥವಾಗುತ್ತಿಲ್ಲ…? ಮತ್ತಷ್ಟು ಓದು »

28
ಜೂನ್

ಹಿಂದಿ ಹೇರಿಕೆಯಲ್ಲೂ ಸುಣ್ಣ ಬೆಣ್ಣೆ..!

– ಮಹೇಶ. ಎಮ್. ಆರ್

ಇವತ್ತಿನ (೨೬-೦೬-೧೧) ಪ್ರಜಾವಾಣಿ ದಿನಪತ್ರಿಕೆಯಲ್ಲಿ ಮಿನಿಸ್ಟ್ರಿ ಆಫ್ ಮೈಕ್ರೊ, ಸ್ಮಾಲ್ ಆಂಡ್ ಮಿಡಿಯಮ್ ಎಂಟರಪ್ರೈಜಸ್ ಅವರು ತಮ್ಮ ಕಾಯರ್ ಬೋರ್ಡ್ ಎಂಬ ಸಂಸ್ಥೆಯ ಮೂಲಕ ಒಂದು ಜಾಹೀರಾತನ್ನು ಕೊಟ್ಟಿದ್ದಾರೆ. ಅದು ಸಂಪೂರ್ಣ ಹಿಂದಿಯಲ್ಲಿರೋದು ಕಾಣುತ್ತೆ. ಅವರ ಮಾಹಿತಿ ಪ್ರಜಾವಾಣಿ ಓದುವ ಅಥವಾ ಆ ಜಾಹೀರಾತನ್ನು ನೋಡುವ ಬಹುತೇಕ ಜನರಿಗೆ, ಕಣ್ಣಿಗೆ ಬಿದ್ದರೂ ಮಾಹಿತಿ ತಿಳಿಸುವ ಹಂತಕ್ಕೆ ಅದು ಹೋಗುವುದಿಲ್ಲ ಎಂಬುದು ಸತ್ಯ. ಹೀಗಾಗಿ ಮಾಹಿತಿ ಕೊಡುವ ಉದ್ದೇಶಕ್ಕಿಂತ ಅದರಲ್ಲಿ ಹಿಂದಿ ಹೇರಿಕೆಯ ಉದ್ದೇಶನೇ ಎದ್ದು ಕಾಣುತ್ತೆ. ಇನ್ನು ಈ ಜಾಹೀರಾತು ಕೊಟ್ಟ ಕಾಯರ್ ಬೋರ್ಡ ಅನ್ನೋ ಸಂಸ್ಥೆಯ ಕೇಂದ್ರ ಕಚೇರಿ ಕೇರಳದ ಕೊಚ್ಚಿಯಲ್ಲಿದೆ. ಕೇರಳದ ಬಾಶೆ ಮಲಯಾಳಂ, ಹೀಗಾಗಿ ಅಲ್ಲಿನೂ ಇದೇ ರೀತಿ ಹಿಂದಿಯಲ್ಲಿ ಕೊಟ್ಟಿದ್ದಾರಾ ಅಂತ ನೋಡಿದ್ರೆ,, ಅಲ್ಲಿನ ಮಲಯಾಳ ಮನೋರಮಾ ದಿನಪತ್ರಿಕೆಯಲ್ಲಿ ಇದೇ ಜಾಹೀರಾತು ಸಂಪೂರ್ಣ ಆಂಗ್ಲ್ ಬಾಶೆಯಲ್ಲಿತ್ತು. ವಿಚಿತ್ರ ಅಂದ್ರೆ, ಕಾಯರ್ ಬೋರ್ಡ ತಮ್ಮೂರಿನಲ್ಲಿ ಆಂಗ್ಲ ಬಾಶೆಯಲ್ಲಿ ಜಾಹೀರಾತು ಹಾಕಿಸಿ, ನಮ್ಮೂರಿನಲ್ಲಿ ಹಿಂದಿಯಲ್ಲಿ ಜಾಹೀರಾತು ಹಾಕಿಸಿದ್ದು.! ಎರಡು ಹಿಂದಿಯೇತರ ದಿನಪತ್ರಿಕೆಗಳೇ. ಒಂದು ಪ್ರಾದೇಶಿಕ ದಿನಪತ್ರಿಕೆಯಲ್ಲಿ ಆಂಗ್ಲ ಮತ್ತೊಂದರಲ್ಲಿ ಹಿಂದಿ ಹಾಕಿದ್ದು ಯಾಕೆ ಅನ್ನೋದಶ್ಟೆ ಪ್ರಶ್ನೆ. ಎರಡೂ ಕಡೆ ಪ್ರಾದೇಶಿಕ ಬಾಶೆನೇ ಇರಬೇಕಿತ್ತು ಅನ್ನೋದು ಮಾತ್ರ ವಿವಾದಕ್ಕೆ ಎಡೆ ಇಲ್ಲದ ವಾದ.! ಅಂದಹಾಗೆ ಬೆಂಗಳೂರಿನಲ್ಲೂ ಅದರ ಪ್ರಾದೇಶಿಕ ಕಚೇರಿ ಇದೆ.

ಮತ್ತಷ್ಟು ಓದು »

27
ಜೂನ್

ಪ್ರಜಾಪ್ರಭುತ್ವ ಭಾರತದಲ್ಲಿ ಗಾಂಧಿತ್ವದ ಮೌಲ್ಯಗಳು

– ಅರಹೊಳೆ ಸದಾಶಿವರಾಯರು

ಪ್ರತೀ ವರ್ಷವೂ ನಾವು ಗಣರಾಜ್ಯದಿನ, ಸ್ವಾತಂತ್ರ್ಯ ದಿನ, ಗಾಂಧಿ ಜಯಂತಿ ಹಾಗೂ ಗಾಂಧೀಜಿ ಪುಣ್ಯತಿಥಿಗಳನ್ನು ಆಚರಿಸುತ್ತೇವೆ-ಒಂದು ರೀತಿಯ ಅನಿವಾರ್ಯತೆಯಿಂದ ಆಚರಿಸಿದಂತೆ. ಈ ಸಂದರ್ಭಗಳಲ್ಲಿ ಮಾತ್ರ ನಮಗೆ, ಗಾಂಧೀಜಿಯವರ ತತ್ವ-ಚಿಂತನೆಗಳು ಪ್ರವಾಹೋಪಾದಿಯಲ್ಲಿ ನೆನಪಾಗುತ್ತವೆ ಮತ್ತು ಆ ಕ್ಷಣದಲ್ಲಿಯೇ ಅವುಗಳು ಮರೆತೂ ಹೋಗುತ್ತವೆ. ಈ ಹಿನ್ನೆಲೆಯಲ್ಲಿ ನಮ್ಮನ್ನು ನಾವು ಚಿಂತನೆಗೊಡ್ಡಿಕೊಂಡಾಗ, ಒಂದು ರೀತಿಯ ಖೇದಾಶ್ಚರ್ಯಗಳು ಹುಟ್ಟುತ್ತವೆ.

ಪರಿಮಿತಿಯರಿತಾಶೆ, ಪರವಶತೆಯಳಿದ ಸುಖ

ವಿರತಿಯೊಡವೆರೆದ ಲೋಕೋದ್ಯೋಗಯುಕ್ತಿ

ಪರಿಕಿಸುತ ಜೀವಿತವ ಸತ್ಯವನೆ ಪಿಡಿವ ಮತಿ

ವರಗಳೀ ನಾಲ್ಕೆ ವರ-ಮಂಕುತಿಮ್ಮ

ಪರಿಮಿತವಾದ ಆಸೆ ಇರಬೇಕು, ವ್ಯಾಮೋಹ ತೊರೆದ ಸುಖವಿರಬೇಕು, ವಿರಕ್ತಿಯಿಂದ ಕೂಡಿದ ಉದ್ಯೋಗ ಯುಕ್ತಿ ಇರಬೇಕು. ಜೀವನವನ್ನು ಪರೀಕ್ಷಿಸುತ್ತಾ, ಸತ್ಯವನ್ನು ಪ್ರೀತಿಸುವ ಬುದ್ದಿ ಇರಬೇಕು.ಇದು ಕನ್ನಡದ ಭಗವದ್ಗೀತೆಯೆಂದೇ ಜನಜನಿತವಾಗಿರುವ ಮಂಕುತಿಮ್ಮನ ಕಗ್ಗದ ಸಾಲುಗಳು. ಇದರ ಉದ್ಧರಣೆಯೊಂದಿಗೆ ನಾನು ಇಂದು ಪ್ರಸ್ತುತ ಪಡಿಸಲಿರುವ ವಿಚಾರಧಾರೆಗೆ ಮೊದಲಂಕಿತ ಇಡುತ್ತಿದ್ದೇನೆ. ಮತ್ತಷ್ಟು ಓದು »

27
ಜೂನ್

ಜಾತಿ ವಿನಾಶವೋ? ಸಂಪ್ರದಾಯಗಳ ವಿನಾಶವೋ?

– ಸಂತೋಷ್ ಕುಮಾರ್ ಪಿ.ಕೆ, ಶಂಕರಘಟ್ಟ

ಇತ್ತೀಚೆಗೆ ಶಿವಮೊಗ್ಗದಲ್ಲಿ ಜಾತಿ ವಿನಾಶ ಸಮಾವೇಶವೊಂದು ಜರುಗುತ್ತಿರುವುದು ಒಳ್ಳೆಯ ಸುದ್ದಿ. ಸಮಾಜದಲ್ಲಿರುವ ಅನ್ಯಾಯ ಶೋಷಣೆಗಳನ್ನು ಹೋಗಲಾಡಿಸಲು ಚಳುವಳಿಗಳು, ಸಮಾವೇಶಗಳು ಯಾವ ಸ್ವರೂಪದಲ್ಲಾದರೂ ನಡೆಯಲೇಬೆಕು. ಅದು ಭೌದ್ದಿಕ ಚಳುವಳಿಯಾಗಲಿ, ಸಾಮಾಜಿಕ ಚಳುವಳಿಯಾಗಲೀ ಎರಡೂ ಸಹ ಅಷ್ಟೇ ಪ್ರಮುಖವಾದವು. ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಮಾವೇಶ ಜಾತಿಯನ್ನು ನಾಶಮಾಡಲು ಅಂತರಜಾತಿವಿವಾಹಿತರನ್ನು ಹಾಗೂ ಅದಕ್ಕೆ ಸಂಬಂಧಿಸಿದ ಸಮಾನ ಮನಸ್ಕರನ್ನು ಒಟ್ಟಿಗೆ ಸೇರಿಸುವ ಪ್ರಯತ್ನವನ್ನು ಮಾಡುತ್ತಿದೆ. ಅದರ ಜೊತೆ ಜೊತೆಗೆ ಭೌದ್ಧಿಕ ಚಳುವಳಿಯೂ ಸಹ ಆಗಿಂದಾಗ್ಗೆ ನಡೆಯುತ್ತಲೇ ಇದೆ. ಅಂತಹ ಚಳುವಳಿಯ ಕುರುಹಾಗಿ ಹಲವಾರು ಲೇಖನಗಳು ಮಾದ್ಯಮಗಳಲ್ಲಿ ಬರುತ್ತಿವೆ. ಹಾಗೆ ಬಂದಂತಹ ಒಂದು ಲೇಖನದ ವಿಮರ್ಶೆಯನ್ನು ಇಲ್ಲಿ ಮಾಡಲು ಪ್ರಯತ್ನಿಸಲಾಗುವುದು. ಇಂತಹ ಪ್ರಯತ್ನ ಏಕೆಂದರೆ ಕಳೆದ ೬೦, ೭೦ ವರ್ಷಗಳಿಂದಲೂ ಇಂತಹ ಚಳುವಳಿ ಸಮಾವೇಶ ನಡೆಯುತ್ತಿದ್ದರೂ ಜಾತಿ, ಶೋಷಣೆ, ಅನ್ಯಾಯ ದಿನೆದಿನೇ ಹೆಚ್ಚಾಗುತ್ತಿವೆ. ಕೇವಲ ಹಳೆಯ ಹಲಸಲು ವಿಚಾರಗಳನ್ನೇ ಪುನರಾವರ್ತಿಸುವ ಬದಲು ಸಮಸ್ಯೆ ಎಲ್ಲಿಂದ ಉಗಮವಾಗುತ್ತಿದೆ ಎಂಬುದನ್ನು ತುರ್ತಾಗಿ ಅರಿಯಬೇಕಾಗಿದೆ. ಆದ್ದರಿಂದ ಪ್ರಸಕ್ತ ಕಾಲಘಟ್ಟದಲ್ಲಿ ಇದುವರೆಗೂ ನಾವು ಕೇಳಿಕೊಂಡು ಬಂದಂತಹ ವಿಚಾರಗಳನ್ನು ಹಾಗೂ ಇಂದು ಹೇಳುತ್ತಿರು ವ ವಿಚಾರಗಳನ್ನು ಜೊತೆಗೆ ನಮ್ಮನ್ನು ನಾವೇ ಪುನರಾವಲೋಕಿಸುವ ಸಂದರ್ಭ ಇಂದು ನಮ್ಮ ಮುಂದಿದೆ.

ಎಸ್. ಕೆ ಭಗವಾನ್ ದಿನಾಂಕ 3 ಜೂನ್ 2011 ರಂದು ಪ್ರಜಾವಾಣಿಯಲ್ಲಿ  ಬರೆದ ಅವರ ಲೇಖನದ ಒಟ್ಟಾರೆ ವಾದ ಈ ರೀತಿಯಾಗಿತ್ತು,  ಜಾತಿಯನ್ನು ಇದುವರೆಗೂ ದೂರಿದ್ದು ಸಾಕು, ಇನ್ನು ಅದನ್ನು ನಾಶ ಮಾಡಲೇಬೇಕು. ಜಾತಿ ನಾಶವಾದರೆ ಹಲವಾರು ಸವಲತ್ತುಗಳು ಸಹ ಸುಮುದಾಯಗಳಿಗೆ ದೊರೆಯುತ್ತವೆ ಎಂದು ಲೇಖಕರು ಹೇಳುತ್ತಾರೆ. ಆದರೆ ಹಾಗೆ ಹೇಳುವ ಮುನ್ನ ಕೆಳಕಾಣಿಸಿರುವ ಪ್ರಶ್ನೆಗಳಿಗೆ ಯಾರಾದರೂ ಉತ್ತರಿಸಲೇಬೇಕು. ಮತ್ತಷ್ಟು ಓದು »

27
ಜೂನ್

ಹೆಸರಲ್ಲಿ ಏನಿದೆ?!

– ಹೇಮಾ ಪವಾರ್, ಬೆಂಗಳೂರು

ಕಷ್ಟಗಳು ಹೇಗ್ಹೇಗೆ ಬರುತ್ತವೆ ಎಂದು ಅಂದಾಜಿಸುವುದು  ತುಂಬಾ ಕಷ್ಟ! ಇಂತಹ ಕಂಪೆನಿಯ CEO ಎಂದು ತನ್ನ ಹೆಸರು ಹೇಳಿ ಪರಿಚಯಿಸಿಕೊಂಡ ಆ ಮನುಷ್ಯ ನನ್ನ ಕಿವಿಗಳು available mode ನಲ್ಲಿವೆ ಎಂದು ಪರಿಗಣಿಸಿದ ಹಾಗಿತ್ತು, ನಿಲ್ಲಿಸದೆ ಇಪ್ಪತ್ತುನಿಮಿಷಗಳವರೆಗೆ ಮಾತಾಡುತ್ತಿದ್ದ, ಕೇಳುತ್ತ ಕಣ್ಣು ತೆರೆದುಕೊಂಡೇ ನಿದ್ದೆ ಮಾಡುವುದುನನಗೆ ಹೊಸತಲ್ಲ ಅನ್ನಿ ಆದರೆ ಇದ್ದಕ್ಕಿದ್ದ ಹಾಗೆ ನನಗೆ ನೆನಪಾಗಿದ್ದು ನಾನವನ ಹೆಸರುಮರೆತಿದ್ದೇನೆಂದು. ಆತನ ಮಾತುಕೇಳಿಸಿಕೊಳ್ಳುತ್ತಲೆ ತಲೆಗೆ ಕೆಲಸ ಕೊಟ್ಟೆ, ಎಲ್ಲವನ್ನೂrecall ಮಾಡಿಕೊಳ್ಳ ತೊಡಗಿದೆ, ಕೆಲಸಕ್ಕೆ ಬಾರದ ಅವನ ಎಲ್ಲ ಮಾತುಗಳುನೆನಪಾಗುತ್ತಿದ್ದವು ಹೆಸರೊಂದು ನೆನಪಾಗಲೊಲ್ಲದು.

ತುಂಬಾ ಕಾಮನ್ ಎನಿಸುವ ಹೆಸರದು,ಸುರೇಶ ಮಹೇಶ ರಮೇಶ ಸತೀಶಗಳ ಹಾಗೆ ಆದರೆ ಈ ಚಾಟರ್ ಬಾಕ್ಸ್ ಯಾವ ಶ ಎಂದು ಹೊಳೆಯಲೇ ಇಲ್ಲ. ಹೆಸರು ಮನುಷ್ಯನಿಗೆ ತುಂಬಾ ಮುಖ್ಯವೆನ್ನುತ್ತಾರೆ (ಸಾಕು ನಾಯಿಬೆಕ್ಕುಗಳಿಗೂ?!), ಎಲ್ಲರಿಗು ನೆನಪಿನಲ್ಲಿರುವಂತಹ ಹೆಸರಿಡಬಾರದಿತ್ತೆ? ಇವನಿಗೆ‘ಮಾತೇಶ’ ಎಂದಿಟ್ಟಿದ್ದರೆ ಹೆಚ್ಚು ಸರಿಯಿತ್ತು ಅಂದುಕೊಳ್ಳುತ್ತಿದ್ದಂತೆ ಮುಖದಲ್ಲಿಮುಗುಳುನಗೆ ಮೂಡಿತು. ತನ್ನ ಮಾತನ್ನು ಇವಳು ಎಂಜಾಯ್ ಮಾಡುತ್ತಿದ್ದಾಳೆ ಅನ್ನಿಸಿತೇನೋ ಅವನಿಗೆ ಪಾಪ ಇನ್ನೂ ಹುರುಪಿನಿಂದ ಮಾತನಾಡ ತೊಡಗಿದ. ನನಗೆ ಅವನ ಹೆಸರು ನೆನಪಾಗದೇ, ಅವನಿಗೆ ಉತ್ತರಿಸಲೂ, ಅವನನ್ನು ಮಾತಡದಂತೆ ತಡೆಯಲೂ ಆಗದೆ ಆ ಜಾಗ ಬಿಟ್ಟು ಎದ್ದುಬಿದ್ದು ಓಡಿಬರುವ ಹಾಗಾಗುತ್ತಿತ್ತು.

ನನ್ನ ಗೆಳತಿ ಒಬ್ಬರಿದ್ದಾರೆ ಆಕೆಯ ಹೆಸರು ’ಹೂ’ ಎಂದು, ಮೊದಲನೇ ಬಾರಿ ಕೇಳಿದಾಗನಿಮ್ಮ ಹಾಗೇ ನನಗೂ ’ವಿಚಿತ್ರ’ ಎನಿಸಿತ್ತು, ಆಕೆಯ ಹಲವು ನಾರ್ಥ್ಇಂಡಿಯನ್ ಗೆಳೆಯರು ಆಕೆಯ ಹೆಸರನ್ನು ಹಿಂದಿಗೆ ಭಾಷಾಂತರಿಸಿ ‘ಫೂಲ್’ (fool) ಎಂದುಕರೆಯುತ್ತಾರೆ. ಇಂಗ್ಲಿಷ್ ನಲ್ಲಿ ಆಕೆಯನ್ನು ರೇಗಿಸುವುದು ಇನ್ನು ಸುಲಭ ’who ishoo?’ ಎಂತಲೋ ’who let the dogs out, who(o) whoo whoo’ ಎಂದು ಕಿಚಾಯಿಸತೊಡಗುತ್ತೇವೆ. ವಿದೇಶಿಯರು ಯಾರಾದರು ಕೇಳಿದರೆ, ಇವರು ಹೂ ವೇರ್ ವಾಟ್ ಅಂತೆಲ್ಲ ಹೆಸರಿಟ್ಟುಕೊಳ್ಳುತ್ತಾರ ಎಂದು ತಲೆ ಕೆರೆದುಕೊಳ್ಳಬೇಕು.

ಮತ್ತಷ್ಟು ಓದು »

23
ಜೂನ್

ರಾಜಕಾರಣದಲ್ಲಿ ಆಣೆ ಮತ್ತು ಆಣೆಯ ರಾಜಕಾರಣ

ಸಂತೋಷ್ ಕುಮಾರ್ ಪಿ.ಕೆ

ಇತ್ತೀಚಿನ ರಾಜಕಾರಣದ ಬೆಳವಣಿಗೆಯಲ್ಲಿ ಹೆಚ್.ಡಿ.ಕುಮಾರ ಸ್ವಾಮಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡ್ಯೂರಪ್ಪ ಇವರ ನಡುವೆ ಸಂಧಾನವೇರ್ಪಟ್ಟಿಲ್ಲ ಎಂಬುದನ್ನು ಸಾಬೀತುಪಡಿಸಲು ಧರ್ಮಸ್ಥಳದ ಮಂಜುನಾಥ ಕ್ಷೇತ್ರದಲ್ಲಿ ಆಣೆ ಮಾಡಲು ಸನ್ನದ್ದರಾಗಿರುವುದು ಬಹುಟೀಕೆಗೆ ಒಳಗಾಗಿದೆ. ಇದು ಮೇಲ್ನೋಟಕ್ಕೆ ಕೇವಲ ಆಣೆ ಪ್ರಮಾಣದ ಸಮಸ್ಯೆಯಂತೆ ಕಂಡರೂ ಸಹ ಆ ಸಮಸ್ಯೆಯ ಆಳ ಅಗಲ ನಾವು ಊಹಿಸಲು ಸಾಧ್ಯವಿರದ ಮಟ್ಟಿಗೆ ಇದೆ. ಬಹುತೇಕ ಚಿಂತಕರು, ಲೇಖಕರು ಹಾಗೂ ವಿದ್ವಾಂಸರನ್ನೊಳಗೊಂಡು ಆ ಆಣೆ ಮಾಡುವ ಪ್ರವೃತ್ತಿಯನ್ನು ಕಟುವಾಗಿ ಟೀಕಿಸುತ್ತಿದ್ದಾರೆ, ಇಲ್ಲಿ ಕೇವಲ ಆಣೆ ಪ್ರಮಾಣದ ವಿಚಾರವನ್ನುವಿವಮರ್ಶಿಸಿದರೆ ಒಂದೊ, ರಾಜಕಾರಣಿಗಳ ಮೇಲೆ ಕೋಪ ಮಾಡಿಕೊಳ್ಳಬೇಕಾಗುತ್ತದೆ, ಇಲ್ಲವೆ ಅಂತಹ ಪ್ರೃತ್ತಿಯೇ ಕೆಟ್ಟದೆಒಳ್ಳೆಯದೋ ಎಂಬ ನಿರಪಯುಕ್ತ ಚರ್ಚೆಯನ್ನು ಮಾಡಬೇಕಾಗುತ್ತದೆ. ಆದ್ದರಿಂದ ಆಣೆ ಮಾಡುವ ಪ್ರವೃತ್ತಿಯನ್ನು ಪ್ರಶ್ನೆಮಾಡುವ ನೆಪದಲ್ಲಿ ನಮ್ಮ ರಾಜ್ಯಾಂಗದ ಅಥವಾ ಸೆಕ್ಯುಲರಿಸಂ ಸಮಸ್ಯೆಯನ್ನು ಇಲ್ಲಿ ಚರ್ಚಿಸಲು ಪ್ರಯತ್ನಿಸುತ್ತೇನೆ. ಹಾಗಾಗಿ ಆಣೆ ಮಾಡುವುದರಲ್ಲಿ ತಪ್ಪೇನಿದೆ ಎಂಬುದನ್ನು ನೋಡುವಾ ಅಥವಾ ಆಣೆ ಮಾಡುವುದು ನಮಗೇಕೆ ತಪ್ಪಾಗಿ ಗೋಚರಿಸುತ್ತಿದೆ ಎಂಬುದನ್ನು ಅವಲೋಕಿಸುವ. ಮತ್ತಷ್ಟು ಓದು »

21
ಜೂನ್

ಜಾತಿ ಎಂಬ ಜಾಡ ಹಿಡಿದು…

– ವಸಂತ್ ಕೋಡಿಹಳ್ಳೀ ಲಕ್ಕೂರು

ಮನುಷ್ಯ ಹುಟ್ಟುತ್ತಾ ಹುಟ್ಟುತ್ತಾ ಸ್ವಾತಂತ್ರ ಜೀವಿ!, ಅವನು ಬೆಳೆದಂತೆಲ್ಲ ಸಮಾಜದ ಕಟ್ಟುಪಾಡುಗಳು ಅವನ ಸ್ವಾತಂತ್ರವನ್ನು ಕಸಿದುಕೊಳ್ಳುತ್ತಾ ಬರುತ್ತದೆ. ಕರ್ನಾಟಕದ ಶ್ರೇಷ್ಟ ಕವಿ ಕುಂವೆಂಪುರವರು ತನ್ನ ವಿಶ್ವಮಾನವ ಸಂದೇಶದಲ್ಲಿ ಹೀಗೆ ಹೇಳುತ್ತಾರೆ. “ಪ್ರತಿಯೊಂದು ಮಗುವೂ ಹುಟ್ಟುತ್ತಲೆ ವಿಶ್ವಮಾನವ. ಬೆಳೆದಂತೆ ನಾವು ಅದನ್ನು ‘ಅಲ್ಪಮಾನವ’ನನ್ನಾಗಿ ಮಾಡುತ್ತೇವೆ. ಎಂದರೆ ಹುಟ್ಟುವಾಗ ಎಲ್ಲರೂ ವಿಶ್ವಮಾನವರಾಗಿಯೇ ಹುಟ್ಟುತ್ತಾರೆ. ಬೆಳೆದಂತೆ ನಾವು ಅವರನ್ನು ಜಾತಿ, ಧರ್ಮ, ಬಾಷೆ, ದೇಶ, ಜನಾಂಗ ಎಂಬಲ್ಲ ಕಟ್ಟು ಪಾಡುಗಳಿಂದ ಬಂಧಿಸುತ್ತೇವೆ. ಬಹುಶಃ ಅವನು ಹುಟ್ಟಿದ ಸಮಜ ಅವನನ್ನು ಅಲ್ಪನನ್ನಾಗಿಸುತ್ತದೆ. ಇಲ್ಲಿ ‘ಸಮಾಜ’ವೆಂಬುದು ಮನುಷ್ಯ ಕಳಂಕವಲ್ಲವೇ

ಸರಿ ನಾನು ಕವಲುದಾರಿಗಳಲ್ಲಿ ಸಾಗಿ ಮನುಷ್ಯನ ನಿಗೂಢ ಜಾಡು ಹಿಡಿದು. ಅವನ ಕೆಲವು ಪದರುಗಳನ್ನು ಇಲ್ಲಿ ಮಂಡಿಸಲು ಪ್ರಯತ್ನಿಸುತ್ತೇನೆ. ಕುವೆಂಪುರವರು ಒಂದು ಜನಾಂಗ ಮತ್ತೊಂದು ಜನಾಂಗವನ್ನು ಮೆಟ್ಟಿ ತುಳಿಯುವುದು ವಿರಾಟ್ ಶಕ್ತಿ, ವಿರೋಧಿ ಕೃತ್ಯ, ಹೇಡಿತನ ಎಂದು ಬಣ್ಣಿಸುತ್ತಾರೆ. ಸಮಾಜದ ನೆರಳಿನಲ್ಲಿ ನಮ್ಮ ಬೆಳವಣಿಗೆಗಾಗಿ ತಮ್ಮ ಜೀವನದ ಮೌಲ್ಯಗಳನ್ನು ಸರಿದೂಗಿಸುವ ನೆಪದಲ್ಲಿ “ಜಾತಿ, ಬಾಷೆ, ಸಂಸ್ಕೃತಿಗಳ ಮೊರೆ ಹೋಗುವುದಂತೂ ಸರಿ ?. ಅಂದರೆ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬಂತೆ ವಿಂಗಡಿಸಿ ಉನ್ನತವಾದ ಸ್ತಾನಗಳನ್ನು ಮೇಲಿನ ಮೂರೂ ವರ್ಗದವರು ಪಡೆದುಕೊಂಡು ಶೂದ್ರರನ್ನು ಇಂದಿಗೂ ತುಳಿಯುತ್ತಾ ಶೋಷಣೆ ಗೈಯುವುದು ಯಾವ ನ್ಯಾಯ ? ಮತ್ತಷ್ಟು ಓದು »

20
ಜೂನ್

ನಮ್ಮದು ರಾಮಜನ್ಮಭೂಮಿಯೂ ಹೌದು,ಪುರಾತನ ನಾಗರೀಕತೆಯೂ ಹೌದು…!

– ಕೆ.ಎಸ್ ರಾಘವೇಂದ್ರ ನಾವಡ

ಇದು ಬಹಳ ಆಸಕ್ತಿದಾಯಕವಾದ ಸಾಧಾರಸಹಿತವಾದ ಬರಹ. ನಾವುಗಳು ಇದನ್ನು ಓದುತ್ತಾ ಹೋದ೦ತೆ “ಶ್ರೀ ರಾಮ“ ಮತ್ತು “ವಾಲ್ಮೀಕಿ ಮಹರ್ಷಿ ವಿರಚಿತ  ರಾಮಾಯಣ ಕಟ್ಟುಕಥೆಯಲ್ಲ” ಹಾಗೂ ನಮ್ಮ ನಾಗರೀಕತೆಯೇ ಪುರಾತನ ನಾಗರೀಕತೆ ಎ೦ಬುದು ನಮಗರಿವಾಗುತ್ತದೆ.ಈ ಲೇಖನದಲ್ಲಿ ವೈಜ್ಞಾನಿಕವಾಗಿ ಅದನ್ನು ಸಾದರ ಪಡಿಸಲು ಪ್ರಯತ್ನಿಸಿದ್ದೇನೆ. ನಾಸಾದವರು ತಿಳಿಸಿದ೦ತೆ, ಶ್ರೀ ರಾಮ ಜನಿಸಿದ್ದನೇ? ಶ್ರೀ ರಾಮಾಯಣ ನಡೆದಿತ್ತೇ ಎನ್ನುವ ಪ್ರಶ್ನೆಗಳಿಗೆ ಈ ಲೇಖನ ಅತ್ಯುತ್ತಮ ಹಾಗೂ ನ೦ಬಲರ್ಹವಾದ ದಾಖಲೆ.

ಮಹರ್ಷಿ ವಾಲ್ಮೀಕಿಗಳು ಶ್ರೀರಾಮನು ಅಯೋಧ್ಯೆಯ ರಾಜನಾಗಿ ಪಟ್ಟಾಭಿಷೇಕದ ನ೦ತರ ಮೊದಲ ಬಾರಿಗೆ  ಶ್ರೀರಾಮಾಯಣವನ್ನು ಬರೆದರೆ೦ಬುದು ನಮಗೆ ತಿಳಿದ ವಿಷಯ.ಆದ್ದರಿ೦ದ ಇದೇ ಮೂಲ ರಾಮಾಯಣ.ಮಹರ್ಷಿ ವಾಲ್ಮೀಕಿಗಳು ಮಹಾ ಜ್ಯೋತಿಷಿಗಳಾಗಿದ್ದರು. ಅವರು ರಾಮಾಯಣದ ಮಹತ್ತರ ದಿನಗಳ ಬಗ್ಗೆ ಆ ದಿನಗಳಲ್ಲಿ ಗ್ರಹ ಹಾಗೂ ನಕ್ಷತ್ರಗಳು ಯಾವ ಯಾವ ಮನೆಗಳಲ್ಲಿದ್ದವು ಎ೦ಬುದರ ಸಮೇತ ವಿವರಿಸುತ್ತಾರೆ. ಪ್ರತಿ ದಿನವೂ ಗ್ರಹಗತಿಗಳು ಬದಲಾಗುತ್ತಿರುತ್ತವೆ ಎ೦ಬುದು ನಮಗೆ ವೇದ್ಯವಿರುವ ವಿಚಾರ.“ಪ್ಲಾನೆಟರಿಯಮ್“ ಎನ್ನುವ ಸಾಫ್ಟ್ ವೇರ್ ನಲ್ಲಿ ಮಹರ್ಷಿ ವಾಲ್ಮೀಕಿ  ಹೆಸರಿಸಿರುವ  ಗ್ರಹಗತಿಗಳನ್ನು ಬರೆಯುವುದರ ಮೂಲಕ ಅದಕ್ಕೆ ಸರಿಯಾದ ಆ೦ಗ್ಲ ವಾರ್ಷಿಕ ದಿನಗಳನ್ನು ಪಡೆಯಬಹುದು. ಇದನ್ನು ನಾಸಾದವರು ಸಿಧ್ಢಪಡಿಸಿದ್ದಾರೆ.

ಭಾರತೀಯ ಕ೦ದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಪುಷ್ಕರ್ ಭಟ್ನಾಗರ್ ಈ ಸಾಫ್ಟ್ ವೇರ್ ಅನ್ನು ಯು.ಎಸ್. ನಿ೦ದ ಪಡೆದುಕೊ೦ಡರು. ಇದನ್ನು ಸೂರ್ಯಗ್ರಹಣ, ಚ೦ದ್ರಗ್ರಹಣ ಹಾಗೂ ಭೂಮಿಯಿ೦ದ ಇತರೆ ಗ್ರಹಗಳಿರುವ ದೂರವನ್ನು ಲೆಕ್ಕ ಹಾಕಲು ಬಳಸುತ್ತಿದ್ದರು.ಭಟ್ನಾಗರ್ ಅವರು ಅದರಲ್ಲಿ ಮಹರ್ಷಿ ವಾಲ್ಮೀಕಿ ಬರೆದಿರುವ ಎಲ್ಲಾ ಗ್ರಹಗಳ ಮಾಹಿತಿಗಳನ್ನು ಆಯಾ ದಿನಗಳಿಗೆ ಸ೦ಬ೦ಧಿಸಿದ೦ತೆ ನೀಡಲಾಗಿ, ಅದರಿ೦ದ ಮಹತ್ತರವಾದ ಹಾಗೂ ಉತ್ತಮ ಫಲಿತಾ೦ಶವನ್ನು ಪಡೆದರು. ಬಹುತೇಕವಾಗಿ ಶ್ರೀ ರಾಮನ ಜನನದಿ೦ದ ಹಾಗೂ ಅವನು ವನವಾಸವನ್ನು ಪೂರೈಸಿ ಅಯೋಧ್ಯೆಗೆ ಮರಳಿ ಬರುವವರೆಗಿನ ಎಲ್ಲಾ ಮಾಹಿತಿಗಳನ್ನು ಆ೦ಗ್ಲ ವಾರ್ಷಿಕ ದಿನಾ೦ಕದ೦ತೆ ಪಡೆದರು.
ಮತ್ತಷ್ಟು ಓದು »