ಕನ್ನಡ ಟಿವಿ ವಾಹಿನಿಗಳು ಹಾಗೂ ಮೂಢನಂಬಿಕೆಗಳ ಪ್ರಸಾರ
ಕನ್ನಡದ ಎಲ್ಲ ಟಿವಿ ವಾಹಿನಿಗಳೂ ಜ್ಯೋತಿಷ್ಯವೆಂಬ ಅವೈಜ್ಞಾನಿಕ ಹಾಗೂ ಮೂಢನಂಬಿಕೆಗಳನ್ನು ಬಲಪಡಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದು ಇದು ಮಾಧ್ಯಮಗಳಿಗೆ ಇರಬೇಕಾದ ಜವಾಬ್ದಾರಿಗೆ ವಿರುದ್ಧವಾದುದು. ವಿಜ್ಞಾನದ ಆವಿಷ್ಕಾರವಾದ ಟಿವಿಯನ್ನು ತಮ್ಮವ್ಯಾಪಾರ ಹೆಚ್ಚಿಸಿಕೊಳ್ಳಲು ಜ್ಯೋತಿಷಿಗಳಿಗೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿರುವ ಟಿವಿ ವಾಹಿನಿಗಳು ಯಾವುದೇ ನಾಚಿಕೆ ಇಲ್ಲದೆ ಈ ಕೆಲಸದಲ್ಲಿ ತೊಡಗಿವೆ. ವಿಜ್ಞಾನಿಗಳು ಶ್ರಮ ವಹಿಸಿ ಸಂಶೋಧಿಸಿದ ಟಿವಿ ಮಾಧ್ಯಮ ಇಂದು ಅವೈಜ್ಞಾನಿಕ ವಿಚಾರಗಳು ಹಾಗೂ ಮೂಢನಂಬಿಕೆಗಳನ್ನು ಬಲಪಡಿಸಲು ದುರುಪಯೋಗವಾಗುತ್ತಿದೆ. ಇದನ್ನು ಪ್ರಜ್ಞಾವಂತರು ವಿರೋಧಿಸಬೇಕಾಗಿದೆ. ಮಾಧ್ಯಮಗಳಿಗೆ ಜನರನ್ನು ವಿಚಾರವಂತರನ್ನಾಗಿ ಮಾಡುವ ಮಹತ್ತರ ಜವಾಬ್ದಾರಿ ಇದೆ. ಇದನ್ನು ಕಡೆಗಣಿಸಿ ೨೧ ಶತಮಾನದಲ್ಲೂ ಜ್ಯೋತಿಷ್ಯ, ವಾಸ್ತು ಎಂಬ ವೈಜ್ಞಾನಿಕ ಆಧಾರಗಳಿಲ್ಲದ ಪುರೋಹಿತಶಾಹಿ ವಿಚಾರಗಳನ್ನು ಜನರ ಮೇಲೆ ಹೇರಲು ಯತ್ನಿಸುತ್ತಿರುವ ಟಿವಿ ವಾಹಿನಿಗಳ ಧೋರಣೆಯನ್ನು ವಿಚಾರವಂತರು, ಸಾಹಿತಿಗಳು, ವಿಜ್ಞಾನಿಗಳು, ತಂತ್ರಜ್ಞರು, ಪ್ರಜ್ಞಾವಂತರು ವಿರೋಧಿಸಬೇಕಾಗಿದೆ.
ಇಂದು ದೇಶಾದ್ಯಂತ ಭ್ರಷ್ಟಾಚಾರದ ವಿರುದ್ಧ ಹೋರಾಟ ರೂಪುಗೊಳ್ಳುತ್ತಿರುವ ಹೊತ್ತಿನಲ್ಲಿ ಮೂಢನಂಬಿಕೆಗಳನ್ನು ಬಲಪಡಿಸುವ ಪುರೋಹಿತಶಾಹಿ ಕುತಂತ್ರದ ವಿರುದ್ಧವೂ ಹೋರಾಟ ನಡೆಯಬೇಕಾದ ಅಗತ್ಯ ಇದೆ. ಕಷ್ಟಪಟ್ಟು ದುಡಿದು ತಿನ್ನುವುದರ ಬದಲು ಕೆಲವು ಪುರೋಹಿತಶಾಹಿಗಳು ಜ್ಯೋತಿಷ್ಯ, ವಾಸ್ತುವಿನ ಹೆಸರಿನಲ್ಲಿ ಜನರ ನಂಬಿಕೆಗಳನ್ನು, ಜನರ ಭಯವನ್ನು ತಮ್ಮ ಜೇಬು ತುಂಬಿಸಿಕೊಳ್ಳಲು ಸುಲಭೋಪಾಯವಾಗಿ ಬಳಸಿಕೊಳ್ಳುತ್ತಿರುವುದೂ ಒಂದು ರೀತಿಯ ಭ್ರಷ್ಟಾಚಾರವಲ್ಲವೇ? ಇಂಥ ಭ್ರಷ್ಟಾಚಾರಕ್ಕೆ ಟಿವಿ ವಾಹಿನಿಗಳು ಕೈಗೂಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸಮಂಜಸವೆಂದು ಟಿವಿ ವಾಹಿನಿಗಳನ್ನು ನಡೆಸುವವರು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಅಗತ್ಯ ಇದೆ. ಜ್ಯೋತಿಷ್ಯ, ವಾಸ್ತು ಇಲ್ಲದೆ ಪಾಶ್ಚಾತ್ಯ ರಾಷ್ಟ್ರಗಳು ಅಭಿವೃದ್ಧಿ ಸಾಧಿಸಿವೆ. ಹೀಗಿರುವಾಗ ನಮ್ಮ ಟಿವಿ ವಾಹಿನಿಗಳು ಜ್ಯೋತಿಷ್ಯ, ವಾಸ್ತುಗಳನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸುತ್ತ್ತಿರುವುದು ಯಾವ ಪುರುಷಾರ್ಥ ಸಾಧನೆಗಾಗಿ ಎಂದು ನಾವು ಕೇಳಬೇಕಾಗಿದೆ. ಮತ್ತಷ್ಟು ಓದು 
ಬಸವನ ಗುಡಿಯಲ್ಲಿ ‘ಕರಪ್ಷನ್ ಸಾಕು’ ಆ೦ದೋಲನ. ನಾ ಕ೦ಡ೦ತೆ
– ಹರೀಶ್ ಆತ್ರೇಯ
ಕಿರಣ್ ಬೇಡಿ ಸ್ವಾಮಿ ಅಗ್ನಿವೇಶ್ ರ ಪ್ರಚೋದಕನಕಾರಿ ಭಾಷಣ, ಶ್ರೀ ಬಾಲಸುಬ್ರಹ್ಮಣ್ಯ೦ ರ ನಿರೂಪಣೆ ಮತ್ತು ಗಣ್ಯರ ಭಾಷಣದ ಅನುವಾದ, ಅರವಿ೦ದ್ ಖೇಜ್ರಿವಾಲರ ಜನಲೋಕಪಾಲ್ ಕಾನೂನು ಪಾಠ, ಕೆಲ ಕಾರ್ಯತಕರ್ತರ ಉತ್ಸಾಹ, ನೈಜ ಕಾಳಜಿ. ಇನ್ನೂ ಕೆಲವರ ಶೋ, ವಾಲ೦ಟೀರ್ ಟೀ ಶರ್ಟ್ ಮೇಲೆ ಎಲ್ಲರ ಕಣ್ಣು, ಮಾಸ್ಟರ್ ಹಿರಣ್ಣಯ್ಯರನವರ ಅನುಭವದ ಮಾತು, ಅಣ್ಣಾ ಹಜಾರೆಯವರ ಮುಗ್ಧ ನುಡಿಗಳು, ರಾಜಕಾರಣಿಗಳ/ ಸರ್ಕಾರಿ ಅಧಿಕಾರಿಗಳ ಮೋಸದಿ೦ದ ಬೇಸತ್ತ ಜನರ ಹತಾಶ ನುಡಿಗಳು, ಜೈಕಾರ, ಗಲೀ ಗಲೀಮೆ ಶೋರ್ ಹೈ ಸಾರೆ ನೇತ ಚೋರ್ ಹೈ ಎನ್ನುವ ಘೋಷಣೆಗಳು, ಇನ್ನೂ ಕೆಲವರಿಗೆ ಇಲ್ಲೇನ್ ನಡೀತಿದೆ ಅ೦ತ್ಲೇ ಗೊತ್ತಿಲ್ದೆ ಇರೋ ಅಮಾಯಕತೆ (?) ಇದೆಲ್ಲರ ನಡುವೆ ನಮ್ ಯಡ್ಯೂರಪ್ಪನವರ ಪರ ಅದ್ಯಾರೋ ನರಸಿ೦ಹ (ಮು. ಮುಖ್ಯಮ೦ತ್ರಿ) ಎ೦ಬುವವನ ಪ್ರಚಾರ, ಸ್ವರಾತ್ಮ ತ೦ಡದ ಪಾಪ್ ರೀತಿಯ ಸ೦ಗೀತ ಅದಕ್ಕೆ ಜನರು ತಲೆದೂಗಿದ್ದು, ಇವು ನಿನ್ನೆಯ ಆ೦ದೋಲನದ ಹೈಲೈಟ್.
ಹನ್ನೊ೦ದು ಗ೦ಟೆಯಿ೦ದ ೨:೫೦ರ ತನಕ ಕಾರ್ಯಕರ್ತರ ಜನಗಳ ಮತ್ತು ಅಲ್ಲಿ ಆಡುತ್ತಿದ್ದ ಯುವಕರ ಮುಖಗಳನ್ನು ಗಮನಿಸುತ್ತಾ ಬ೦ದೆ. ಅಣ್ಣಾ ಹಜಾರೆಯವ್ರು ಬ೦ದದ್ದು ೨:೫೦ ಕ್ಕೆ. ಅಲ್ಲಿಯವರೆಗೂ ಒ೦ದೆರಡು ಬಾರಿ ಸ್ಟೇಜಿನ ಹತ್ರ ಸುತ್ತ ಮುತ್ತ ಓಡಾಡ್ತಾ ಎಲ್ಲರ ಅಭಿಪ್ರಾಯಗಳನ್ನ ಸ೦ಗ್ರಹಿಸುತ್ತಾ ನಿ೦ತೆ. ಕಾರ್ಯಕರ್ತನೊಬ್ಬ “ನೀವು ವಾಲ೦ಟೀರಾ”? ಅ೦ತ ಕೇಳಿದ “ಅಲ್ಲಪ್ಪ” ಅ೦ದೆ “ಹೀಗೆಲ್ಲಾ ಓಡಾಡ್ಬೇಡಿ ಸರ್ ಬಾ೦ಬ್ ಥ್ರೆಟ್ ಇದೆ “ಅ೦ದ ಆಯ್ತಣ್ಣ ಅ೦ತ ಒ೦ಕಡೆ ಕೂತು ಅವರ ಕೆಲ್ಸಾನ ಗಮನಿಸುತ್ತಾ ಬ೦ದೆ. ಮನೇಲಿ ಇರಕ್ಕೆ ಬೋರ್ ಆಗಿ ನಾವೂ ಟಿ ವೀಲಿ ಕಾಣ್ತೀವಲ್ಲ ಅ೦ತ ಯೋಚಿಸ್ಕೊ೦ಡ್ ಬ೦ದು ಟೈಟ್ಸ್, ಅರೆ ತೋಳಿನ ಟಾಪ್ (ಇನ್ನೂ ಕೆಲವರು ಬನೀನ್ ಥರದ್ದು, ಬೇಡ ಬಿಡಿ) ಹಾಕ್ಕೊ೦ಡ್ “ಹೇ ಇಟ್ಸ್ ವೆರಿ ಫನ್ನಿ ಯೋ ನೋ, ಐ ಅಯಾಮ್ ಆಲ್ಸೋ ಎ ವಾಲ೦ಟೀರ್ ಹಿಯರ್, ಇಲ್ಲಿ ಸಕ್ಕತ್ತಾಗಿದೆ, ಐ ವಾನ ವೇರ್ ದಿಸ್ ಟಿ ಶರ್ಟ್, ಹ್ಮ್ ಲೆಟ್ಸ್ ಗೋ ಇನ್ ಸೈಡ್ ದಿ ವಾನ್ ” ಅ೦ತ ಹೋದವರು ಅರ್ಧ ಗ೦ಟೆಯನ೦ತರ ಸರ್ವಾ೦ಗ ಸು೦ದರಿಯರಾಗಿ ಬ೦ದರು.
ಶಿಕ್ಷಣ ಎಂಬ ವ್ಯಾಪಾರದ ಕುರಿತು…..
ಅರೆಹೊಳೆ ಸದಾಶಿವರಾವ್
ಈಗ ಎಲ್ಲಿ ನೋಡಿದರೂ ಶೈಕ್ಷಣಿಕ ವರ್ಷದ ಪುನರಾರಂಭದ ಕಾಲ. ಇತ್ತೀಚೆಗೆ ಶಿಕ್ಷಣದ ಕೆಲವು ಮಹತ್ವದ ಫಲಿತಾಂಶಗಳು ಹೊರಬಿದ್ದುವು. ಯಾಕೋ ಇವುಗಳನ್ನು ಗಮನಿಸಿದಾಗ ಕೆಲವು ಪ್ರಶ್ನೆಗಳು ಏಳುತ್ತವೆ. ಹೀಗೇ ಎಸ್ಎಸ್ಎಲ್ಸಿ ಫಲಿತಾಂಶವನ್ನು ಗಮನಿಸುತ್ತಿದ್ದಾಗ, ನನಗೆ ತಿಳಿದ ಕೆಲವು ಶಾಲೆಗಳು ನೂರು ಶೇಕಡಾ ಬಂದದ್ದನ್ನು ಓದಿದೆ. ಆದರೆ ಆ ಶಾಲೆಗಳು ವಾಸ್ತವಿಕವಾಗಿ ಆ ರೀತಿಯ ಗುಣಮಟ್ಟದ ಶಿಕ್ಷಣವನ್ನು ಕೊಟ್ಟ ಬಗ್ಗೆ ಅನುಮಾನಗಳಿದ್ದುವು. ಕೊನೆಗೆ ಈ ನೂರು ಶೇಕಡಾದ ಮರ್ಮವನ್ನು ತಿಳಿಯಹೋದರ ಅಚ್ಚರಿ ಹುಟ್ಟಿದ ಅಂಶವೆಂದರೆ, ಅಲ್ಲಿಂದ ಈ ಪರೀಕ್ಷೆಗೆ ಬರೆದ ವಿದ್ಯಾರ್ಥಿಗಳು ಕೇವಲ ೧೩ಎಂಬುದು! ಮತ್ತೊಂದು ಶಾಲೆಯ ಪರಿಚಿತ ಮುಖ್ಯೋಪಾದ್ಯಾಯರು ತಮ್ಮ ಶಾಲೆಯ ಫಲಿತಾಂಶವನ್ನು ನೂರು ಶೇಕಡಾ ನಿರೀಕ್ಷಿಸಿದ್ದೆ. ಆದರೆ ಕೇವಲ ೮೭ ಶೇಕಡಾ ಬಂತೆಂದು ಅಳಲು ತೋಡಿಕೊಂಡಾಗ ಅವರ ಶಾಲೆಯಲ್ಲೆಷ್ಟು ವಿದ್ಯಾರ್ಥಿಗಳು ಕುಳಿತಿದ್ದರು ಎಂದು ಪ್ರಶ್ನಿಸಿದರೆ ಆಶ್ಚರ್ಯ ಕಾದಿತ್ತು. ಒಟ್ಟೂ ಕುಳಿತ ನೂರು ಮಕ್ಕಳಲ್ಲಿ ೮೭ ಜನ ಮಕ್ಕಳು ಉನ್ನತ ದರ್ಜೆಯಲ್ಲಿ ಪಾಸಾಗಿದ್ದರು!. ಆದರೆ ಪತ್ರಿಕೆಯಲ್ಲಿ ಹಾಕಿಕೊಳ್ಳಲು ಅವರ ಫಲಿತಾಂಶದ ಶೇಕಡಾವಾರು ೮೭ ಮಾತ್ರ!. ಮತ್ತಷ್ಟು ಓದು 
ಉಗ್ರರ ಉಪದ್ರವಕ್ಕೆ ಪರಿಹಾರವಿಲ್ಲವೇ?
– ಮುರಳೀಧರ ದೇವ್
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷಗಳಿಗೆ ಏನಾಗಿದೆ? ಒಂದಾದ ಮೇಲೆ ಒಂದರಂತೆ ಹಗರಣಗಳು, ಅವಾಂತರಗಳು, ಒಟ್ಟಿನಲ್ಲಿ ಇಡೀ ಭಾರತ ದೇಶ ವಿಶ್ವಡೆದುರು ತಲೆ ತಗ್ಗಿಸುವ ಹಾಗೆ ಆಗಿದೆ. ಕಾಮನ್ ವೆಲ್ತ್ ಕ್ರೀಡೆಯ ಹಗರಣದಿಂದ ಸರ್ಕಾರದ ಮಹತ್ವದ ಹುದ್ದೆಗಳಲ್ಲಿರುವವರೆಲ್ಲರೂ ಭಾಗಿಗಳು ಅಂತ ಕಾಣ್ಸುತ್ತೆ. ಈಗ ಕೇಂದ್ರದ ಮತ್ತೊಂದು ಅವಾಂತರ, ಇತ್ತೀಚೆಗೆ ಕೇಂದ್ರೀಯ ತನಿಖಾ ದಳ ಪಾಕಿಸ್ತಾನಕ್ಕೆ ರವಾನಿಸಿದ ಪಟ್ಟಿಯಲ್ಲಿ ಕೆಲವರು ಭಾರತದ ಜೈಲಿನಲ್ಲಿ ಇದ್ದಾರೆ. ಅಲ್ಲದೇ ಆ ಪಟ್ಟಿಯಲ್ಲಿರುವವರನ್ನು ತನಿಖಾದಳವೆ ವಿಚಾರಣೆ ನಡೆಸಿದೆ ಹಾಗಿದ್ದೂ ಇಂತಹ ಲೋಪ ಆಗೋಕೆ ಹೇಗೆ ಸಾಧ್ಯ? ಕಡೆ ಪಕ್ಷ ರೆಡ್ ಕಾರ್ನರ್ ನೋಟೀಸ್ ಜಾರಿ ಮಾಡುವಾಗಲಾದ್ರೂ ಪಟ್ಟಿಯನ್ನು ಸರಿಯಾಗಿ ಪರಿಶೀಲನೆ ಮಾಡೋಕೆ ಆಗೋಲ್ವಾ? ತನಿಖಾ ಸಂಸ್ಥೆಗಳ ನಡುವೆ ಅಷ್ಟೂ ಸಮನ್ವಯ ಸಾಧಿಸೋಕೆ ಆಗೋಲ್ವಾ? ಇತ್ತೀಚಿನ ಬೆಳವಣಿಗೆಗಳಿಂದ ಭಾರತ ವಿಶ್ವ ಸಮುದಾಯದೆದುರು ಅಪರಾಧಿ ಸ್ಥಾನದಲ್ಲಿ ನಿಲ್ಲುವ ಹಾಗೆ ಆಗಿದೆ.
ಈಗ ಪಾಕಿಸ್ತಾನ ಇದೆ ಅಂಶಗಳನ್ನು ಮುಂದಿಟ್ಟುಕೊಂಡು ತನ್ನಲ್ಲಿ ಯಾವುದೇ ಭಯೋತ್ಪಾದಕರಿಲ್ಲ ಅವರೆಲ್ಲ ಭಾರತದಲ್ಲೇ ಇದ್ದಾರೆ ಅಂತ ಹೊಸ ವಾದ ಮುಂದಿಟ್ಟರು ಆಶ್ಚರ್ಯವಿಲ್ಲ. ಅಲ್ಲದೇ ಈಗ ಹಿಡಿದಿರುವ ಉಗ್ರರಿಂದ ಸರ್ಕಾರ ಕಡೆದು ಕಟ್ಟೆ ಹಾಕಿದ್ದು ಅಷ್ಟರಲ್ಲೇ ಇದೆ. ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ಮಾಡಿದ, ಮುಂಬೈ ನಗರವನ್ನು ನಡುಗಿಸಿದ ಉಗ್ರಗಾಮಿಗಳಿಗೆ ನಮ್ಮ ಜೈಲುಗಳಲ್ಲಿ ಭಾರಿ ಅತಿಥಿ ಸತ್ಕಾರಗಳು ನಡೀತಾ ಇವೆ. ಇದನ್ನೆಲ್ಲ ನೋಡಿ ಪಾಕಿಸ್ತಾನದಲ್ಲಿರುವ ಉಗ್ರಗಾಮಿಗಳು ತಾವೇ ಶರಣಾಗಿ ಬಂದರು ಪಾಕಿಸ್ತಾನಕ್ಕಿಂತ ಹೆಚ್ಚಿನ ಅನುಕೂಲಗಳು ಇಲ್ಲೇ ಸಿಗುತ್ತವೆ. ಅಲ್ಲ ಆಡಳಿತ ನಡೆಸುವ ಪಕ್ಷಕ್ಕೆ ಉಗ್ರಗಾಮಿಗಳಲ್ಲೂ ವೋಟ್ ಬ್ಯಾಂಕ್ ರಾಜಕಾರಣ ಮಾಡೋಕೆ ನಾಚಿಕೆ ಆಗೋಲ್ವಾ? ಹೀಗೆ ಭಾರತದ ಮೇಲೆ ದಾಳಿ ಮಾಡುವ ಉಗ್ರರನ್ನು ಎಷ್ಟು ದಿನ ಅಂತ ತೆರಿಗೆದಾರರ ಹಣದಿಂದ ಸಾಕಬೇಕು.
ಬದಲಾವಣೆ ಬಯಸುವುದಾದರೆ ಬಸವನಗುಡಿಗೆ ಬನ್ನಿ…
– ರಾಕೇಶ್ ಶೆಟ್ಟಿ
ಬಸವನಗುಡಿಗೆ ಬಂದ ತಕ್ಷಣ ಬದಲಾವಣೆಯಾಗುತ್ತಾ? ಅನ್ನುವ ಪ್ರಶ್ನೆ ನಿಮ್ಮದಾದರೆ ನನ್ನ ಉತ್ತರ ’ಇಲ್ಲ’! ಅಂತಲೇ. ಭ್ರಷ್ಟಚಾರ ಅನ್ನುವ ಬ್ರಹ್ಮ ರಾಕ್ಷಸನ ವಿರುದ್ಧ ಅಣ್ಣ ಹಜ಼ಾರೆ ನೇತೃತ್ವದಲ್ಲಿ ಶುರುವಾಗಿರುವ ಈ ಹೋರಾಟವೇ ಅಂತಿಮವಲ್ಲ.ಇದು ಆರಂಭವಷ್ಟೆ ಅನ್ನುವುದು ನನ್ನ ಅಭಿಪ್ರಾಯ.
ಅಂತಿಮವಾಗುವುದಾದರೂ ಹೇಗೆ ಹೇಳಿ, ಭ್ರಷ್ಟಚಾರ ಅಂದಾಕ್ಷಣ ಎಲ್ಲರ ಕಣ್ಣು ಮೊದಲು ಬೀಳುವುದೂ ಕಳ್ಳ(ಎಲ್ಲ ಅಲ್ಲ) ರಾಜಕಾರಣಿಗಳ ಮೇಲೆ,ಆಮೇಲೆ ಸರ್ಕಾರಿ ಕಛೇರಿ ಮತ್ತು ಅಧಿಕಾರಿಗಳ ಮೇಲೆ.ತಪ್ಪೇನಿಲ್ಲ ಬಿಡಿ…! ಭ್ರಷ್ಟಚಾರ ಅನ್ನೋ ಪಿರಮಿಡ್ನ ತುತ್ತ ತುದಿಯಲ್ಲಿರೋ ಅವರ ಮೇಲೆ ಎಲ್ಲರ ಕಣ್ಣು ಬೀಳುವುದು ಸಹಜ.ಆದರೆ, ’ನಾವುಗಳೆಷ್ಟು ಸಾಚಾ?’ ಅಂತ ನಮ್ಮನ್ನೇ ನಾವ್ಯಾವತ್ತಾದರೂ ಕೇಳಿಕೊಂಡಿದ್ದೇವೆಯೇ?
ನರೇ೦ದ್ರ ಮೋದಿ ಎ೦ಬ ಭಾರತದ ಚಲಾವಣೆಯ ನಾಣ್ಯ !!
ರಾಘವೇಂದ್ರ ನಾವಡ ಕೆ ಎಸ್
ಎಲ್ಲರೂ ಮಹಾನ್ ವ್ಯಕ್ತಿಗಳಾಗಲು ಸಾಧ್ಯವಿಲ್ಲ.. ಎಲ್ಲರೂ ಮಹಾತ್ಮರಾದರೆ ಅತ೦ತ್ರರಾಗೋರ್ಯಾರು? ಎ೦ಬ ಉಡಾಪೆಯ ಮಾತೊ೦ದಿದೆ! ಸೂಕ್ತ ಸಮಯದಲ್ಲಿ ಸುಪ್ತವಾಗಿ ನಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಿ, ಜನ ಕಲ್ಯಾಣಕ್ಕಾಗಿ ಚಿ೦ತಿಸುವವರೆಲ್ಲಾ ಮಹಾತ್ಮರೇ ಆಗುತ್ತಾರೆ!
ಈ ಪ್ರಸ್ತುತ ಲೇಖನಕ್ಕೆ ಮತ್ತೊಮ್ಮೆ ನರೇ೦ದ್ರ ಮೋದಿಯೇ ಕಥಾವಸ್ತು! ನಿನ್ನೆ ನನ್ನ ಆತ್ಮೀಯ ಪ್ರಸ್ಕಾ ಕಳುಹಿಸಿದ ಮೊಬೈಲ್ ಸ೦ದೇಶವೇ ಮತ್ತೊಮ್ಮೆ ನನ್ನ ಲೇಖನಕ್ಕೆ ಆಧಾರವಾಗಿದೆ. ಮೋದಿ ಸರ್ಕಾರದ ಮತ್ತೊ೦ದು ಸಾಧನೆಯನ್ನೇ ಈ ಲೇಖನದಲ್ಲಿ ಬಿ೦ಬಿಸುತ್ತಿದ್ದೇನೆ. ಈ ಹಿ೦ದೆ ನರೇ೦ದ್ರ ಮೋದಿಯವರ ಬಗ್ಗೆ ಇಷ್ಟಕ್ಕೂನರೇ೦ದ್ರ ಮೋದಿ ಮಾಡಿರುವ ತಪ್ಪಾದರೂ ಏನು? ಎ೦ಬ ಲೇಖನದಲ್ಲಿ ಗುಜರಾತ್ ಯಶೋಗಾಥೆಯನ್ನು ಸಾದ್ಯ೦ತವಾಗಿ ವಿವರಿಸುವ ಪ್ರಯತ್ನ ಮಾಡಿದೆ.

ಪಾಕಿಸ್ತಾನದ ಭೂಪಟ 17.05.2011ರ ಕನ್ನಡಪ್ರಭದಲ್ಲಿ…
– ಪಿ.ಎಸ್.ರಂಗನಾಥ
ಒಂದು ದೇಶದ ಭೂಪಟ ಅಂದರೆ ಅದರ ಭೌಗೋಳಿಕ ವಿನ್ಯಾಸ ಹಾಗು ಅದರ ಸರಿಹದ್ದು ಗಳನ್ನು ತೋರಿಸುವ ಚಿತ್ರ ಅಂತ ನಮ್ಮೆಲ್ಲರಿಗು ಗೊತ್ತಿರುವ ವಿಷಯ. ಪ್ರತಿಯೊಂದು ದೇಶವೂ ತನ್ನದೇ ಆದ ಒಂದು ನಕ್ಷೆಯನ್ನು ಸಿದ್ದಪಡಿಸಿಕೊಂಡು ಅಂತರಾಷ್ಟ್ರೀಯವಾಗಿ ತನ್ನನ್ನು ಗುರುತಿಸಿಕೊಳ್ಳುತ್ತದೆ. ಸದ್ಯಕ್ಕೆ ನಮ್ಮ ದೇಶಕ್ಕೆ ಬಂದರೆ ನಮ್ಮ ಕೆಲವು ಪ್ರಾಂತ್ಯಗಳು ಪಾಕಿಸ್ತಾನ ಹಾಗು ಚೀನಾದ ವಶದಲ್ಲಿದ್ದರು ನಾವುಗಳು ನಮ್ಮ ದೇಶದ ಗಡಿಯನ್ನು ಹಾಕಿ ನಾವು ಗುರುತಿಸಿಕೊಂಡಿದ್ದೇವೆ ಹಾಗು ಸರಕಾರ ಅದನ್ನು ಒಪ್ಪಿ ಅಧಿಕೃತವಾಗಿ ಮುದ್ರೆ ಹಾಕಿದೆ ಜತೆ ರಾಷ್ಟ್ರದ ಪ್ರಜೆಗಳಿಗೆ ಸಹ ಒಪ್ಪಿಗೆ ಯಾಗಿದೆ. ಯಾವುದೇ ಪುಸ್ತಕಗಳಲ್ಲಿ, ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಹಾಗು ರಾಷ್ಟ್ರದ ಮೂಲೆ ಮೂಲೆ ಗಳಲ್ಲಿ ಮುದ್ರಿತವಾಗಿ ಪ್ರಸಾರ ವಾಗುತ್ತಿರುವುದು POK (Pak Occupied Kashmir) ಹಾಗು ಚೈನಾ ಆಕ್ರಮಿತ ಕೆಲ ಭಾಗವನ್ನು ಒಳಗೊಂಡ ಭೂಪಟ ಮಾತ್ರ. ಆದರೆ ಪಾಕಿಸ್ತಾನ POK ಪ್ರಾಂತ್ಯವನ್ನು ತನ್ನ ಅಧಿಕೃತ ನಕ್ಷೆ ಯಾಗಿ ಉಪಯೋಗಿಸುತ್ತಿದೆ. ಅದನ್ನು ನಮ್ಮ ರಾಷ್ಟ್ರದವರು ಒಪ್ಪುವುದಿಲ್ಲ ಹಾಗು ಆ ಪ್ರಾಂತ್ಯ ಪಾಕಿಸ್ತಾನದ ವಶದಲ್ಲಿದ್ದರು ಸಹ ಅದಕ್ಕೆ ಅಂತರಾಷ್ಟ್ರೀಯ ಮನ್ನಣೆ ಇನ್ನು ದೊರಕಿಲ್ಲ. ಅದು disputed area ಅಂತ ಬೇರೆ ದೇಶದವರು dotted / dashed line ನಲ್ಲಿ ತೋರಿಸುತ್ತಾರೆ.
ನಾನು ಕಳೆದ ೪ ವರ್ಷಗಳಿಂದ ಕೊಲ್ಲಿ ರಾಷ್ಟ್ರಗಳಲ್ಲಿ ದುಡಿಯುತಿದ್ದೀನಿ, ಸಾಮನ್ಯವಾಗಿ ಭಾರತದ ಭೂಪಟ, ರಾಷ್ಟ್ರದ ಲಾಂಛನ, ಭಾವುಟ ಗಳನ್ನು ನೋಡಿ ನನಗೆ ಬಹಳ ಖುಶಿ ಯಾಗುತ್ತೆ. ಯಾವುದಾದರು ಕಛೇರಿ ಗಳಲ್ಲಿ ಹಾಕಿರುವ ಪ್ರಪಂಚದ ಭೂಪಟ ದಲ್ಲಿ ನಮ್ಮ ಭಾರತ ದೇಶವನ್ನು ಗಮನಿಸುವುದು ನನ್ನ ಅಭ್ಯಾಸ, ಒಂದು ವೇಳೆ ಭಾರತದ ಭೂಪಟದಲ್ಲಿ ಏನಾದರು ವ್ಯತ್ಯಾಸ ಗಳಿದ್ದರೆ, ಅಲ್ಲಿರುವ ಭಾರತೀಯ ಸಿಬ್ಬಂದಿ ಯವರ ಗಮನಕ್ಕೆ ತರುವ ಪ್ರಯತ್ನ ಮಾಡಿ ಬದಲಾಯಿಸಲು ಯತ್ನಿಸುವೆ. ಕೆಲವರು ನನ್ನ ವಿಚಾರಕ್ಕೆ ಸಹಮತ ವ್ಯಕ್ತ ಪಡಿಸಿ ವಿಷಾದ ವ್ಯಕ್ತ ಪಡಿಸುದ್ದುಂಟು. ಇನ್ನು ಕೆಲವರು, ಇಲ್ಲಿ ಸಿಗೋದೆ ಇದೇ ಮ್ಯಾಪ್ ಇದು ಬಿಟ್ರೆ ಬೇರೆ ವಿಧಿಯಿಲ್ಲ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸುತಿದ್ದರು, .
ಕನ್ನಡಪ್ರಭ ೧೭.೦೫.೨೦೧೧ ಪುಟ ೯ರಲ್ಲಿ ಪ್ರಕಟವಾಗಿರುವ ಲೇಖನ “ದಾವುದ್ ನ ಮುಗಿಸುವ ಗುಂಡು ಸಿದ್ಧವಾಗಿಲ್ಲವೇ? ರಲ್ಲಿ ಮುದ್ರಿತವಾಗಿರುವ ಪಾಕಿಸ್ತಾನದ ಭೂಪಟ, ನಮ್ಮ ದೇಶದ ಕಾಶ್ಮಿರದ ಒಂದು ಭಾಗವನ್ನು ಅದರಲ್ಲಿ ಒಳಗೊಂಡಿದೆ.
ಒಸಾಮ ಸತ್ತ… ಭಾರತ ಬದುಕಿದೆಯಾ!?
– ರಾಕೇಶ್ ಶೆಟ್ಟಿ
ತನ್ನ ಮಕ್ಕಳಿಗೆ ಮಾತ್ರ ’ಜಿಹಾದ್’ನೆಡೆಗೆ ಬರಬೇಡಿ ನನ್ನಾಣೆ ಅಂತೇಳಿ, ಕಂಡೋರ ಮಕ್ಕಳ ಬೆನ್ನ ಹಿಂದೆ ಅವಿತು ಕುಳಿತು ಮನುಶ್ಯರನ್ನ ಹುಳಗಳಿಗಿಂತ ಕಡೆಯದಾಗಿ ಸಾಯಿಸಿದ ಒಸಾಮ ಅನ್ನುವ ಸೈತಾನನೊಬ್ಬ ಸತ್ತರೆ ನಾವ್ಯಾಕೆ ಕುಣಿಯಬಾರದು!? ಕುಣಿದರೇನು ತಪ್ಪು?ಇನ್ನೇನು ಅಳಬೇಕಿತ್ತಾ?
ಒಸಾಮ ಸತ್ತರೆ ನಾವ್ಯಕೆ ಕುಣಿಯಬೇಕು? ಅನ್ನುವ ಬರಹವನ್ನೋದಿದೆ.ಅದರಲ್ಲಿ ’ದೇಶ ಪ್ರೇಮ’ ಅನ್ನುವ ಪದದ ಬಗ್ಗೆಯೂ ಉಡಾಫ಼ೆಯಿದೆ.ದೇಶಪ್ರೇಮ ಅನ್ನುವುದನ್ನ ತಾವು ವಿರೋಧಿಸುವ ಪಕ್ಷ/ಸಂಘಟನೆಯ ಗುತ್ತಿಗೆ ಕೊಡಲಾಗಿದೆಯೆಂಬಂತೆ,ಅವರು ಮಾತ್ರವೇ ದೇಶ ಪ್ರೇಮಿಗಳು ಅಂದುಕೊಂಡು,ಅವರ ಮೇಲಿನ ಅಸಹನೆಯನ್ನ ’ದೇಶ ಪ್ರೇಮಿ’ಗಳು ಅನ್ನುವ ಪದಕ್ಕೆ ಜೋಡಿಸಿ ಮಾತನಾಡಿದ್ದಾರೆ ಲೇಖಕರು.
ಶಾಪ ವಿಮೋಚನೆಯಾಗದ ಅಹಲ್ಯೆಯರು…
– ರೂಪ ರಾವ್,ಬೆಂಗಳೂರು
ರಾಮಾಯಣದ ಸೀತಾ ಸ್ವಯಂವರದ ನಾಟಕದ ತಾಲೀಮು ನಡೆಯುತ್ತಿತ್ತು. 
ಅದರಲ್ಲಿ ಬರುವ ಅಹಲ್ಯಾ ಶಾಪ ವಿಮೋಚನೆಯ ಪ್ರಸಂಗವನ್ನೂ ವೇದಿಕೆಯಮೇಲೆ ತರೋಣ
“ಗೀತಾ ಅಹಲ್ಯಾ ಪಾತ್ರ ನೀನೇ ಮಾಡಬೇಕು .” ಮೇಡಂ ನನ್ನನ್ನು ಈ ಪಾತ್ರಕ್ಕೆ ಕರೆದಾಗ ನಾನು ಕಕ್ಕಾಬಿಕ್ಕಿ, ಜೊತೆಗೆ ಒಮ್ಮೆಗೆ,ಮಾಡಬಾರದೆನಿಸಿತು.
“ಮೇಡಂ ನಾ………….ನು …………ಈ ಪಾರ್ಟ್ ಮಾಡಲ್ಲ. ………” ಹಿಂಜರಿಕೆಯಿಂದಲೇ ನುಡಿದೆ.
“ಯಾಕೆ ಗೀತಾ “? ನನ್ನತ್ತಲೇ ತೀಕ್ಷ್ಣವಾಗಿ ನೋಡುತ್ತಾ
“ಮೇಡಂ iam not happy with Ahalya’s charactor. ತುಂಬಾ ಸಲ ಅನ್ಕೂಂಡಿದ್ದೀನಿ ಯಾಕೆ ಈ ಪಂಚ ಮಹಾ ಕನ್ನಿಕೆಯರ ಹೆಸರಲ್ಲಿ ಅಹಲ್ಯಾ ಹೆಸರು ಸೇರಿದೆ ಅಂತ?”
“ಯಾಕಮ್ಮಾ”? ಮತ್ತೆ ಪ್ರಶ್ನೆ ಎಸೆದರು.
” ಹಾಗಲ್ಲ ಮೇಡಂ ಗಂಡ ಇರದಿದ್ದಾಗ ಮತ್ತೊಬ್ಬನ ಜೊತೆ ಸಂಬಂಧ ಹೊಂದಿದವಳು. ಅಸಲಿಗೆ ಆ ಕಥೆಯೇ ಬೇಕಿರಲಿಲ್ಲ .ರಾಮನ ಔನ್ನತೆಯನ್ನ ಎತ್ತಿ ತೋರೋದಿಕ್ಕೆ ಈ ಕತೆ ಸೇರಿಸಿದ್ದಾರೆ ಅಷ್ಟೇ.
“ಸರಿ.ಆಯ್ತು,ನಿನಗೆ ಯಾವ ಪಾತ್ರ ಬೇಕೋ ಅದನ್ನೇ ಚೂಸ್ ಮಾಡು.ಆದರೂ ಪಾತ್ರಕ್ಕಿಂತ ಪಾತ್ರಧಾರಿಯ ಆ ಪಾತ್ರದಲ್ಲಿ ಹೇಗೆ ಇನ್ವಾಲ್ವ್ ಆಗ್ತಾನೆ ಅನ್ನೋದು ಮುಖ್ಯ. ಮತ್ತೆ ಪುರಾಣದಲ್ಲಿ ಕೇಳಿದ ಕಥೆಯನ್ನ ಆ ನೆಲೆಯಲ್ಲಿಯೇ ನೋಡುವುದಕ್ಕಿಂತ ಒಂದು ವಿಭಿನ್ನ ನೆಲೆಯಲ್ಲಿ ನೋಡಿದರೆ ಪಾತ್ರ ಇಂಟರೆಸ್ಟಿಂಗ್ ಆಗಿರುತ್ತೆ. ಅಹಲ್ಯಾ ಜೀವನದಲ್ಲಿ ನಿಜಕ್ಕೂ ಏನು ನಡೆದಿರಬಹುದು ಅನ್ನೋದನ್ನ ಯೋಚಿಸಿದರೆ ಆ ಪಾತ್ರ ನಿಜಕ್ಕೂ ತುಂಬಾ ಕಾಂಪ್ಲಿಕೇಟೆಡ್ ಅನ್ಸುತ್ತೆ. “ಮೇಡ್ಂ ಒಂದೇ ಸಲಕ್ಕೆ ಒಪ್ಪಿ, ಜೊತೆಗೇ ನನ್ನ ಮನಸಲ್ಲಿ ಅಲೆಯನ್ನು ಎಬ್ಬಿಸಿದರು.
ಮತ್ತಷ್ಟು ಓದು 







