ಎಂಥಾ ಮರುಳಯ್ಯಾ ಇದು…
– ಚಾಮರಾಜ ಸವಡಿ
ತುಂಬ ದಿನಗಳ ಹಿಂದೆ ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಸಂದರ್ಶನವೊಂದರಲ್ಲಿ ಹೇಳಿದ ಮಾತೊಂದು ನೆನಪಾಗುತ್ತಿದೆ. ಓದುಗರನ್ನು ಈ ಪರಿ ಸೆಳೆಯುವಲ್ಲಿ ನೀವು ಯಶಸ್ವಿಯಾಗಿದ್ದು ಹೇಗೆ? ಎಂಬಂರ್ಥದ ಪ್ರಶ್ನೆಗೆ ಯಂಡಮೂರಿ ಉತ್ತರ: ಅವರ ದೌರ್ಬಲ್ಯವನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ.
ಇವತ್ತು ನಮ್ಮ ಸುತ್ತಮುತ್ತ ನಡೆಯುತ್ತಿರುವ ಹಲವಾರು ವಿಷಯಗಳನ್ನು ನೋಡಿದಾಗ ನನಗೆ ಈ ಮಾತು ಪದೆ ಪದೆ ನೆನಪಿಗೆ ಬರತೊಡಗಿದೆ.
ಸ್ವಾಮಿಗಳು, ಕಪಟ ಜ್ಯೋತಿಷಿಗಳು, ಬಹುತೇಕ ರಾಜಕಾರಣಿಗಳು, ಟಿವಿಗಳು, ಪತ್ರಿಕೆಯವರು, ಸರ್ಕಾರಿ ನೌಕರರು, ವಕೀಲರು, ವೈದ್ಯರು- ಹೀಗೆ ನೀವು ಯಾವುದೇ ರಂಗ ನೋಡಿದರೂ ಸಾಕು, ಯಂಡಮೂರಿ ಹೇಳಿದ ಮಾತು ಸತ್ಯ ಎಂಬುದು ಸ್ಪಷ್ಟವಾಗುತ್ತ ಹೋಗುತ್ತದೆ. ಪ್ರತಿಯೊಬ್ಬರೂ ಜನರ ದೌರ್ಬಲ್ಯ ಹಾಗೂ ಅನಿವಾರ್ಯತೆಗಳನ್ನೇ ಬಳಸಿಕೊಳ್ಳುವವರು. ಎಲ್ಲೋ ಒಬ್ಬಿಬ್ಬರು ಪುಣ್ಯಾತ್ಮರು ಇರಬಹುದು. ಆದರೆ, ಬಹುತೇಕರ ಜೀವನ ನಡೆಯುತ್ತಿರುವುದೇ ಜನರನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುವುದರಿಂದ.
ಸಾಮಾನ್ಯ ವ್ಯಕ್ತಿಯಂತೆ ಓಡಾಡಿಕೊಂಡವ ಕಾವಿ ಬಟ್ಟೆ ಧರಿಸಿದ ಕೂಡಲೇ ಆತ ಸ್ವಾಮೀಜಿಯಾಗಿಬಿಡುತ್ತಾನೆ. ಕಿಂಚಿತ್ತೂ ವಿಚಾರ ಮಾಡದೇ ಆತನ ಕಾಲಿಗೆ ಬೀಳಲು ಜನ ಹಾತೊರೆಯತೊಡಗುತ್ತಾರೆ. ಖಾಲಿ ಓಡಾಡಿಕೊಂಡವ, ಒಂದಕ್ಕೆರಡು ಪಟ್ಟು ಹಣ ಕೊಡುತ್ತೇನೆ ಎಂದ ಕೂಡಲೇ ಸಾಲ ಮಾಡಿ ಹಣ ಕೊಡಲು ಜನ ಮುಂದಾಗುತ್ತಾರೆ. ಜ್ಯೋತಿಷಿಗಳು ಹೇಳಿದಂತೆ ನಡೆದುಕೊಳ್ಳುವವರು, ಜಾಹೀರಾತು ನೋಡಿ ಔಷಧಿ ಕೊಳ್ಳುವವರು, ಕೆಲಸಕ್ಕೆ ಹಣ ಕಟ್ಟುವವರು, ಅರ್ಧ ರೇಟಿಗೆ ಚಿನ್ನ ಕೊಳ್ಳಲು ಹಾತೊರೆಯುವವರು, ಕೆಲಸ ಕೊಡುತ್ತೇನೆ ಎಂದರೆ ಕರೆದಲ್ಲಿಗೆ ಹೋಗುವವರು ನಮ್ಮ ಸುತ್ತಮುತ್ತಲೇ ಇದ್ದಾರೆ. ಮಾತಿಗೆ ಬಂದರೆ, ಅವರೂ ರಾಜಕಾರಣಿಗಳನ್ನು, ಜ್ಯೋತಿಷಿಗಳನ್ನು, ಸ್ವಾಮೀಜಿಗಳನ್ನು, ನಕಲಿ ವೈದ್ಯರನ್ನು, ವಂಚಕರನ್ನು ಬೈಯುವವರೇ. ಆದರೆ, ತಮಗೆ ಲಾಭವಾಗುತ್ತದೆ ಎಂದು ಅನಿಸಿದ ತಕ್ಷಣ ವಿವೇಚನೆ ಮರೆತುಬಿಡುತ್ತಾರೆ. ಕಣ್ಣು ಮುಚ್ಚಿಕೊಂಡು ಹಳ್ಳಕ್ಕೆ ಬೀಳುತ್ತಾರೆ.
‘ಕಾಪ’ ಪಂಚಾಯಿತಿ!
– ಪ್ರಶಾಂತ್ ಯಾಳವಾರಮಠ
ಸುನೀತಾ(21) ಮತ್ತು ‘ಜಸ್ಸಾ’ ಉರ್ಫ್ ಜಸ್ಬೀರ್ ಸಿಂಗ(22) ಒಬ್ಬರನ್ನೊಬ್ಬರು ಪ್ರೀತಿಸಿ.. ’ಪ್ರೀತಿ ಮಾಡಬಾರದು ಮಾಡಿದರೆ ಜಗಕೆ ಹೆದರಬಾರದು’ ಅಂದು ಕೊಂಡು ಮನೆಯವರ ಮತ್ತು ಊರಿನವರ ವಿರೋಧದ ನಡುವೆ ಮದುವೆಯಾಗಿದ್ದರು! ತಮ್ಮ ಪುಟ್ಟ ಸಂಸಾರ, ಪುಟ್ಟ ಮನೆ ಮತ್ತೆ ತಮಗೆ ಒಂದು ಪುಟ್ಟ ಮಗುವಿನ ಬರುವಿಗೆ ಕಾಯ್ತಾ ಹಾಯಾಗಿದ್ದರು ಅಂದರೆ ಸುನೀತಾ ೫ ತಿಂಗಳ ಗರ್ಭಿಣಿ!.
ಹೀಗೆ ಎಲ್ಲವೂ ಚೆನ್ನಾಗಿರುವಾಗ ಒಂದು ದಿನ ಮುಂಜಾನೆ ಸುನಿತಾಳ ತಂದೆಯ ಮನೆ ಮುಂದೆ ಅತೀ ಕ್ರೂರತನಕ್ಕೆ ಸಾಕ್ಷಿಯಾಗಿ ಎರಡು ದೇಹಗಳು ಬಿದ್ದಿದ್ದವು! ಅಬ್ಬಾ ಎಂತಹ ರಾಕ್ಷಸರು ಅಂತೀರಾ ಗರ್ಭಿಣಿಯ ಹೊಟ್ಟೆಗೆ ಒದ್ದಿದ್ದರು, ಮುಖಕ್ಕೆ ಗುದ್ದಿದ್ದರು ಮತ್ತು ಎರಡು ದೇಹಗಳಿಗೆ ಇರಿದಿದ್ದರು!
ಹೊಳೆಯಲ್ಲಿ ಇಳಿದ ಮೇಲೆ ಮಳೆಯಾದರೇನು? ಚಳಿಯಾದರೇನು?!!
– ರಾಘವೇಂದ್ರ ನಾವಡ ಕೆ ಎಸ್
ಊಹೆ ನಿಜವಾಗುವ ಎಲ್ಲಾ ಲಕ್ಷಣಗಳೂ ಕ೦ಡುಬರುತ್ತಿವೆ! ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧೀ ಆ೦ದೋಲನ ಠುಸ್ಸಾಗುವ ಎಲ್ಲಾ ಸಾಧ್ಯತೆಗಳೂ ಇವೆ! ಇಲ್ಲಿ ನಾನೀಗ ಹೇಳ ಹೊರಟಿರುವುದು ಅಣ್ಣಾ ಹಜಾರೆಯವರ ಶಕ್ತಿ ಕು೦ದಿತೆ೦ದಲ್ಲ… ಅಥವಾ ಉತ್ತರ ಕುಮಾರನ ಪೌರುಷವನ್ನು ಅಣ್ಣಾ ಹಜಾರೆ ತೋರಿಸಿದರೆ೦ದಲ್ಲ! ಬದಲಾಗಿ ಹೇಗೆ ನಾವೇ ಆರಿಸಿ ಕಳುಹಿಸಿದ ನಮ್ಮ ಕಲ್ಯಾಣದ ಬಗ್ಗೆ ಯೋಚಿಸಬೇಕಾದ ನಾಯಕರು ತಮ್ಮನ್ನು ಹಾಗೂ ತಮ್ಮ ಗಳಿಕೆಯನ್ನು ರಕ್ಷಿಸಿಕೊಳ್ಳಲು ಮು೦ದಾಗಿರುವ ಬಗ್ಗೆ.. ಅದಕ್ಕಾಗಿ ತುಳಿದಿರುವ ಹಾದಿಗಳ ಬಗ್ಗೆ..!
ಮೊದಲನೆಯದಾಗಿ ಭಾರತದ ಯಾವ ರಾಜಕೀಯ ನಾಯಕನಿಗೂ ಲೋಕಪಾಲ ಮಸೂದೆಯ ಮ೦ಡನೆಯಾಗುವುದು ಬೇಕಿಲ್ಲ! ಆ ಮೂಲಕ ತಾವು ಬಟಾ ಬಯಲಿಗೆ ಬೀಳುವುದು ಇಷ್ಟವಿಲ್ಲ.. ತನ್ನ ಮಕ್ಕಳು ಮರಿ ಮೊಕ್ಕಳು ಅವರ… ಹೀಗೆ ಹತ್ತಾರು ತಲೆಮಾರುಗಳು ಆರಾಮಾಗಿ ಕುಳಿತು ತಿನ್ನಲೆ೦ದು ಮಾಡಿಕೊ೦ಡ ಆಸ್ತಿಯನ್ನು ಯಾರು ತಾನೇ ತನ್ನ ಜಮಾನಾದಲ್ಲೇ ಅದನ್ನು ಕಳೆದುಕೊಳ್ಳಲು ಇಷ್ಟ ಪಡುತ್ತಾನೆ? ಮು೦ದೆ ನಮ್ಮ ಅಪ್ಪ ನಮಗಾಗಿ ಏನನ್ನೂ ಮಾಡಿಟ್ಟಿಲ್ಲ! ಎ೦ಬ ಮಾತನ್ನು ಕೇಳಲು ಅವರು ಸಿಧ್ಧರಿಲ್ಲ! ನಾಯಕರ ಈ ಹಪಾಹಪಿಯೇ ಆದಷ್ಟೂ ಹಜಾರೆ ಹಾಗೂ ಅವರ ಟೀಮ್ ನ ದಿಕ್ಕು ತಪ್ಪಿಸುವತ್ತ ತನ್ನೆಲ್ಲಾ ಪಟ್ಟುಗಳನ್ನೂ ಬಳಸಿಕೊ೦ಡು ಆಖಾಡಕ್ಕೆ ಇಳಿದಿದೆ! ಮು೦ದೇನು? ಕಾದು ನೋಡಬೇಕು!!
ಒಸಾಮಾ – ಒಬಾಮಾ…!
– ಡಾ.ಅಜಕ್ಕಳ ಗಿರೀಶ್ ಭಟ್
ಅಂತೂ ಅಮೆರಿಕ ಒಸಾಮಾನನ್ನು ಕೊಂದಿದೆ ಅನ್ನುವುದನ್ನು ಅದು ಅಧಿಕೃತವಾಗಿ ಘೋಷಿಸಿದೆ. ಹೀಗೆ ಕೊಲ್ಲುವುದು ಅಮೆರಿಕಕ್ಕೆ ಏನೂ ಕಷ್ಟದ ಸಂಗತಿಯಲ್ಲ. ಅದು ಅದನ್ನು ದಕ್ಕಿಸಿಕೊಳ್ಳಬಲ್ಲುದು. ಆದರೆ ಹಲವು ಪ್ರಶ್ನೆಗಳು ಎಲ್ಲರ ಮನಸ್ಸಲ್ಲೂ ಏಳುವುದು ಸಹಜ. ಕೆಲದಿನಗಳಾದ ನಂತರ ಆ ಪ್ರಶ್ನೆಗಳನ್ನು ಎಲ್ಲರೂ ಮರೆಯುತ್ತಾರೆ ಅನ್ನೋದು ಕೂಡ ನಮಗೆಲ್ಲ ಗೊತ್ತು.ನಾವು ಕೂಡ ಮರೀತೇವೆ.ಹಾಗೆ ಮರೆಯುವುದು ನಮ್ಮ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಮುಖ್ಯ.ಆದರೂ ಈಗ ಮನಸಲ್ಲಿ ಬಂದ ಆಲೋಚನೆಗಳಲ್ಲಿ ಕೆಲವನ್ನು ಮರುನೆನೆದುಕೊಳ್ಳುತ್ತೇನೆ.ಇವು ನನ್ನ ಮನಸಲ್ಲಿ ಮಾತ್ರ ಬಂದ ಪ್ರಶ್ನೆಗಳಲ್ಲವಾದ್ದರಿಂದ ಈ ಪ್ರಶ್ನೆಗಳ ಬಗ್ಗೆ ನಾನು ಯಾವುದೇ ಕಾಪಿರೈಟ್ ಕ್ಲೈಮ್ ಮಾಡುವುದಿಲ್ಲ!!!
ನೋಡಿ,ಇದು ಅನ್ಯಾಯವಲ್ಲವೇ? ವ್ಯಕ್ತಿಯನ್ನು ವಿಚಾರಣೆಯಿಲ್ಲದೆ ಕೊಲ್ಲುವುದು ನ್ಯಾಯವೇ?
ಆಧುನಿಕ ನ್ಯಾಯಶಾಸ್ತ್ರದಲ್ಲಿ ಎಲ್ಲಾದರೂ ವಿಚಾರಣೆಯಿಲ್ಲದೆ ಹೀಗೆ ಶಿಕ್ಷೆ ನೀಡುವುದನ್ನು ಸಮರ್ಥಿಸಲಾಗಿದೆಯೇ? ಲಾಡೆನ್ ಗೆ ಫೇರ್ ಟ್ರಯಲ್ ನೀಡಲಾಗಿಲ್ಲ. ಅವನನ್ನು ಯಾವ ಕೋರ್ಟಿನಲ್ಲಿ ವಿಚಾರಣೆ ಮಾಡಲಾಗಿದೆ? ತಾನು ಕೊಲೆ ಮಾಡಿದ್ದೇನೆ ಅಂತ ಒಬ್ಬ ವ್ಯಕ್ತಿ ಹೇಳಿದ ಕೂಡಲೇ ಯಾವ ಕೋರ್ಟು ಕೂಡ ವಿಚಾರಣೆಯಿಲ್ಲದೆ ಆ ವ್ಯಕ್ತಿಯನ್ನು ಗಲ್ಲಿಗೆ ಹಾಕುವುದಿಲ್ಲ. ಹಾಗಿರುವಾಗ ,ಅಮೆರಿಕವಿರಬಹುದು ಅಥವಾ ಅದರಪ್ಪನಿರಬಹುದು, ಕಾನೂನನ್ನು ಕೈಗೆ ತೆಗೆದುಕೊಳ್ಳುವುದೆಂದರೇನು? ಓಯ್!! ಅಮ್ನೆಸ್ಟಿ ಇಂಟರ್ ನ್ಯಾಷನಲ್ ಅನ್ನುವ ಸಂಸ್ಥೆಯವರೇ!!!ಎಲ್ಲಿದ್ದೀರಿ? ಒಸಾಮಾನ ಮಾನವ ಹಕ್ಕಿಗೆ ಬೆಲೆ ಇಲ್ಲವೇ???
ಕುರುಕ್ಷೇತ್ರದ ಯುದ್ಧಕ್ಕೆ ಕೃಷ್ಣನೇ ಸರಿ ಅಣ್ಣಾ !
– ರಾಕೇಶ್ ಶೆಟ್ಟಿ
ಕುಂಭಕರ್ಣ ನಿದ್ದೆಯಿಂದ ಎದ್ದ ಭಾರತವನ್ನ ಮತ್ತೆ ನಿದ್ದೆಗೆ ದೂಡಲಾಗುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಕಾಡಲಾರಂಭಿಸಿದೆ.ಕೆಲವೆ ದಿನದ ಹಿಂದೆ ಅಣ್ಣಾ ಹಜ಼ಾರೆಯವರ ಉಪವಾಸ ಸತ್ಯಾಗ್ರಹದಿಂದ ನಿದ್ದೆಯಲ್ಲಿದ್ದ ಜನ (ಎಲ್ಲ ಜನ ಅಂತೇಳಲು ಸಾಧ್ಯವಿಲ್ಲ) ಎದ್ದು ಬಂದು, ಕಡೆಗೆ ಸೋನಿಯಾ ಮೇಡಂ ಅವರ ಯುಪಿಎ ಸರ್ಕಾರ ಅಣ್ಣನ ಮುಂದೆ ಮಂಡಿಯೂರಿ ಕುಳಿತಾಗಲೇ, ‘ಪಿಕ್ಚರ್ ಅಭಿ ಬಾಕಿ ಹೈ ಮೇರಿ ದೋಸ್ತ್’ ಅಂತ ಬಹುಷಃ ಬಹುತೇಕರಿಗೆ ಅನ್ನಿಸಿತ್ತು.ಅದನ್ನ ನಿಜ ಮಾಡಲೆಂಬಂತೆ ಜನಲೋಕಪಾಲ ಸಮಿತಿ ರಚನೆಯಾದ ಮರುದಿನವೇ ಕೇಂದ್ರ ಮಂತ್ರಿ ಕಪಿಲ್ ಸಿಬಲ್, ಖುದ್ದು ಸಮಿತಿಯ ಸದಸ್ಯರಾಗಿದ್ದೂ, ಸಮಿತಿಯ ಬಗ್ಗೆ ಕೊಂಕು ನುಡಿದು,ಕಡೆಗೆ ನಂಬಿಕೆಯಿಲ್ಲದಿದ್ದರೆ ತೊಲಗಿ ಅಂತ ಅಣ್ಣಾ ಗದರಿದ್ಮೇಲೆ ಯಥಾಪ್ರಕಾರ ರಾಜಕಾರಣಿಗಳ ಹೇಳಿಕೆಯಂತೆ ’ತಪ್ಪಾಗಿ ಅರ್ಥೈಸಲಾಗಿದೆ; ಅಂತೇಳಿ ತೇಪೆ ಹಾಕಿದ್ರು.ಮೊಯ್ಲಿ,ಮನೀಶ್ ತಿವಾರಿಯವ್ರು ಕೊಂಕಿಸಿದ್ದಾಯ್ತು.
ಬಹುಷಃ ಗಾಂಧೀಜಿ,ಜೆಪಿ ನಂತರ ಈ ಮಟ್ಟಕ್ಕೆ ಜನರನ್ನ ಸೆಳೆದಿದ್ದು ಅಣ್ಣಾ ಹಜ಼ಾರೆಯವರೇ ಇರಬೇಕು.ಅವರ ಈ ಪರಿಯ ಜನಪ್ರಿಯತೆ ಪುಡಿವೋಟಿಗಾಗಿ ದೇಶವನ್ನೆ ಬೇಕಾದರು ಮಾರಬಲ್ಲ (ಪುರುಲಿಯಾ ಶಸ್ತ್ರಾಸ್ತ್ರ ಕರ್ಮಕಾಂಡಕ್ಕಿಂತ ದೇಶವನ್ನ ಅಡ ಇಡುವ ಉದಾಹರಣೆ ಬೇಕಾ?) ಹಗಲು ವೇಷದ ರಾಜಕಾರಣಿಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು ಸುಳ್ಳಲ್ಲ.ಸಾಲಾಗಿ ಎಲ್ಲ ಅಣ್ಣನ ವಿರುದ್ಧ ಸದ್ದಿಲ್ಲದೆ ಕೆಲಸ ಶುರು ಹಚ್ಚಿಕೊಂಡರು…!
ಭಾರತದಲ್ಲಿ ಕನ್ನಡನೂ ಇದೆ ಹಿಂದಿ ಮಾತ್ರ ಅಲ್ಲ
ಸಂಪಾದಕೀಯ ಅನ್ನೋ ಮೊಟ್ಟೆಯ ಮೇಲೆ ಒಂದು ಪ್ರೀತಿಯ ಕುಟುಕು…
– ಮಹೇಶ್ ಪ್ರಸಾದ್ ನೀರ್ಕಜೆ
ಸಂಪಾದಕೀಯದಲ್ಲಿ ಪ್ರಕಟವಾದ ಬ್ಲಾಗ್ ಬರಹಕ್ಕೆ ಪ್ರತಿಯಾಗಿ ನನ್ನ ಅನಿಸಿಕೆ ಇದು.
ಸಾಯಿ ಬಾಬಾರ ಸುತ್ತ ಇರುವ ಪವಾಡಗಳ ಬಗೆಗಿನ ವಿವಾದಗಳ ಬಗ್ಗೆ ಸಂಪಾದಕೀಯ ಈ ಹಿಂದೆ ಒಂದೆರಡು ಲೇಖನಗಳಲ್ಲಿ ಬರೆದಿತ್ತು (ಅದರಲ್ಲಿ ಒಂದು ಸನ್ಮಾರ್ಗ ಎನ್ನುವ ಪತ್ರಿಕೆಯಲ್ಲಿ ಪ್ರಕಟವಾದ ಸಂಪಾದಕೀಯ ಬರಹ). ಅವುಗಳಲ್ಲೊಂದು ಲೇಖನಕ್ಕೆ ಬಂದ ಪ್ರತಿಕ್ರಿಯೆಯೊಂದಕ್ಕೆ ಪ್ರತಿಯಾಗಿ ಸಂಪಾದಕೀಯ ಬರೆದ ಸ್ಪಷ್ಟೀಕರಣ ರೂಪದ ಬರಹವೇ ನಾನು ಮೇಲೆ ನೀಡಿದ ಬ್ಲಾಗ್ ಬರಹ. ಈ ಬ್ಲಾಗ್ ಬರಹದ ಸಾರಾಂಶ ಏನೆಂದರೆ ಸಾಯಿ ಬಾಬಾ ಮಾಡಿದ ಸಮಾಜ ಮುಖೀ ಕೆಲಸಗಳ ಬಗ್ಗೆ ಮೆಚ್ಚುಗೆಯಿದ್ದರೂ ಮೂಲತಹ ಬಾಬಾ ನಡೆದ ದಾರಿ ಪವಾಡಗಳನ್ನೊಳಗೊಂಡ ದಾರಿಯಾಗಿದ್ದು ಅದು ಜನರನ್ನು ದಿಕ್ಕುತಪ್ಪಿಸುವ, ಮೌಢ್ಯತೆಗೆ ನೂಕುವ ಮೋಸದ, ಸುಳ್ಳಿನ ದಾರಿಯಾಗಿದೆ, ಆದ್ದರಿಂದ ನಮಗೆ ಅಂತಹ ಸುಳ್ಳಿನ ದಾರಿ ಬೇಕೋ ಅಥವಾ ಬುಧ್ಧ ಹಾಕಿಕೊಟ್ಟ ಸತ್ಯದ ದಾರಿ ಬೇಕೋ ಎಂಬ ಜಿಜ್ಞಾಸೆ. ಕೊನೆಯಲ್ಲಿ ಸಂಪಾದಕೀಯ ಹೀಗೆ ಹೇಳುತ್ತದೆ – “ಬುದ್ಧನ ಸತ್ಯ ಮಾರ್ಗವೇ ನಿಜವಾದ ಬದುಕಿನ ತಳಪಾಯ. ಅದರ ಮೇಲೇ ನಮ್ಮ ಬದುಕು ಕಟ್ಟಿಕೊಳ್ಳುವಂತಾಗಬೇಕು” ಮತ್ತು “ನಾವು ಸತ್ಯದ ಮಾರ್ಗದಲ್ಲಿ ಊರ್ಧ್ವಮುಖಿಗಳಾಗಬೇಕೇ ಹೊರತು ಸುಳ್ಳಿನ ಮಾರ್ಗದಲ್ಲಿ ಅಧೋಮುಖಿಗಳಾಗಬಾರದು ಅಲ್ಲವೇ?”. ಇದರ ಬಗ್ಗೆ ಒಂದು ಚಿಂತನೆ ನಡೆಸುವ ಉದ್ದೇಶ ಈ ಲೇಖನದ್ದು.
‘ಸತ್ಯ ಸಾಯಿ’ ಮತ್ತು ‘ಸತ್ಯ ಸಾಯಿಸುವ’ ಮಾಧ್ಯಮಗಳು
ಅರೆಹೊಳೆ ಸದಾಶಿವರಾಯರು
ಫೇಸ್ ಬುಕ್ನಲ್ಲಿ ಒಂದು ಸಾಲು ಓದಿದೆ. ‘ಮ್ಯಾಜಿಷಿಯನ್’ ಸತ್ಯ ಸಾಯಿಬಾಬಾ ಇನ್ನಿಲ್ಲ ಎಂದು ಒಬ್ಬರು ವ್ಯಂಗ್ಯವಾಗಿ ಬರೆದುಕೊಂಡಿದ್ದರು. ಮುಂದುವರಿಯುತ್ತಾ, ಈ ಸತ್ಯಸಾಯಿಬಾಬಾ ಎಂಬ ಜಾದೂಗಾರನನ್ನು ಕೇವಲ ಮಾಧ್ಯಮಗಳು ಈ ಮಟ್ಟಿಗೆ ದೇವಮಾನವನನ್ನಾಗಿ ಮಾಡಿವೆ ಎಂದೂ ಸೇರಿಸಿಕೊಂಡಿದ್ದರು.
ಮೊದಲಾಗಿ ಮಾನವ ಎಂದರೆ ಏನು ಎಂಬತ್ತ ಗಮನ ಹರಿಸಬೇಕು. ಅದಕ್ಕೂ ಮೊದಲಾಗಿ ಒಂದು ವಿಷಯ ಸ್ಪಷ್ಟೀಕರಣದೊಂದಿಗೇ ಲೇಖನ ಆರಂಭಿಸಬೇಕು. ಅದೆಂದರೆ ನಾನು ಸಾಯಿ ಬಾಬಾ ಅವರ ಭಕ್ತನೂ ಅಲ್ಲ ಮತ್ತು ಅವರ ಪವಾಡಗಳ ಕುರಿತು ಪರ-ವಿರೋಧ ಎಂದು ಹೇಳಿಕೊಳ್ಳುವಷ್ಟು, ಜ್ಞಾನಿಯೂ ಅಲ್ಲ. ಆ ಮಟ್ಟಿಗೆ ಈ ವಿಷಯದಲ್ಲಿ ನಾನು ತಟಸ್ಥ. ಇನ್ನು ಮಾನವ ಎಂದರೆ…..!. ಜೀವಂತ ಇರುವ ಎಲ್ಲವೂ ಮಾನವನಾಗುವುದಿಲ್ಲ ಅಥವಾ ಮನುಷ್ಯಗರ್ಭದಲ್ಲಿ ಜನಿಸಿದ ಎಲ್ಲರೂ ಮಾನವನಂತೆ ಬದುಕುವುದಿಲ್ಲ. ಪರಸ್ಪರರನ್ನು ಪ್ರೀತಿಸುತ್ತಾ ಸಾಧ್ಯವಾದಷ್ಟೂ ಜನರ ಬಳಿ, ಜನರನ್ನು ಗೌರವಿಸುತ್ತಾ ಬದುಕುವುದು ಮಾನವೀಯ ಧರ್ಮ ಎನಿಸುತ್ತದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಜನಸೇವೆಯೇ ಜನಾರ್ದನ ಸೇವೆ ಎಂದುಕೊಂಡು, ಅಕ್ಷರಶ: ಅದನ್ನೇ ಪಾಲಿಸಿದರೆ ಆತ ಜನರ ಪಾಲಿಗೆ ಜನಾರ್ದನನಾಗುತ್ತಾನೆ;ದೇವತ್ವವನ್ನು ಪಡೆಯುತ್ತಾನೆ-ಸಾಯಿಬಾಬಾ ವಿಷಯದಲ್ಲಿಯೂ ಅದೇ ಆಗಿದೆ. ಮತ್ತಷ್ಟು ಓದು 
ಕ್ರಾಂತಿಗೆ ಅಕ್ಷರದ ಹಂಗೇಕೆ?
– ಚಿತ್ರ ಸಂತೋಷ್
ಮಧ್ಯಪ್ರದೇಶದ ತಲನ್ಪುರ ಗ್ರಾಮದಲ್ಲಿ ಓದು ಬರಹ ತಿಳಿಯದ ಬುಡಕಟ್ಟು ಮಹಿಳೆಯರೇ ಸಾಮಾಜಿಕ ಕ್ರಾಂತಿಗೆ ಮುನ್ನುಡಿಯಾಗಿದ್ದಾರೆ. ನಿತ್ಯ ಕುಡಿದು, ಸಂಸಾರದ ಒಂದಿಷ್ಟು ಚಿಂತೆಯಿಲ್ಲದ
ಪುರುಷರಿಗೆ ಬುದ್ಧಿ ಕಲಿಸಬೇಕೆಂಬ ಉದ್ದೇಶದಿಂದ ಇಡೀ ಹಳ್ಳಿಯ ಮಹಿಳೆಯರು ಒಂದಾಗಿ ಸಾರಾಯಿ ನಿಷೇಧ ಮಾಡಿದ್ದಾರೆ.
ಆ ಹಳ್ಳಿಯೇ ಹಾಗೆಯೇ. ಬುಡಕಟ್ಟು ಬದುಕುಗಳ ಸಂಗಮ. ನೂರಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳನ್ನು ಹೊಂದಿರುವ ಆ ಹಳ್ಳಿಯಲ್ಲಿ ಹೊತ್ತಿನ ಊಟಕ್ಕೂ ಕಷ್ಟ. ಪತಿ-ಪತ್ನಿಯರು ಎಲ್ಲಾರೂ ಕೂಲಿಗಾಗಿ ಅರಸುವವರು. ವಿದ್ಯೆ, ಶಿಕ್ಷಣ ಎಂಬುವುದು ಅವರ ಪಾಲಿಗೆ ಮರೀಚಿಕೆ. ಸಾಂಪ್ರದಾಯಿಕ ಬದುಕಿನ ಚೌಕಟ್ಟಿನಲ್ಲಿಯೇ ಇಂದಿಗೂ ಬದುಕು ಸವೆಸುವ ಅಲ್ಲಿನ ಕುಟುಂಬಗಳಲ್ಲಿ ಆಧುನಿಕತೆಯ ಥಳುಕಿಲ್ಲ. ಸಿನಿಮಾ, ಫ್ಯಾಷನ್ ಯಾವುದೂ ಗೊತ್ತಿಲ್ಲ. ದುಡಿಯುವುದು, ದಿನದ ಮೂರು ಹೊತ್ತಿನ ಅನ್ನ ತುಂಬಿಸಿಕೊಳ್ಳುವುದಷ್ಟೇ ಅವರಿಗೆ ಗೊತ್ತು.
ಅದು ಮಧ್ಯಪ್ರದೇಶದ ತಲನ್ಪುರ್ ಎಂಬ ಹಳ್ಳಿ. ಇಲ್ಲಿನ ಜನಸಂಖ್ಯೆ ಸುಮಾರು ೩೦೦೦. ಇಂದೋರ್ನಿಂದ ಇಲ್ಲಿಗೆ ಸುಮಾರು ೧೮೦ ಕಿ.ಮೀ. ದೂರವಿದೆ.
‘ಎಂಡೋ ನಿಷೇಧಿಸಿ’ – ಶರದ್ ಪವಾರ್ ಗೊಂದು ಬಹಿರಂಗ ಪತ್ರ
*ರಶ್ಮಿ. ಕಾಸರಗೋಡು
ಶರದ್ ಪವಾರ್ ಜೀ,
ನಮಸ್ತೆ. ಕೇಂದ್ರ ಕೃಷಿ ಮಂತ್ರಿಯಾಗಿದ್ದು ಕೊಂಡು ಭ್ರಷ್ಟಾಚಾರದ ಹೊದಿಕೆ ಹೊದ್ದು ಗಾಢ ನಿದ್ರೆಗೆ ಜಾರಿರುವ ನೀವು ಎಂದಾದರೂ ಸಾಮಾನ್ಯ ಜನರ ಬಗ್ಗೆ ಯೋಚಿಸಿದ್ದೀರಾ? ಹಣ ಕೂಡಿಡುವ ನಿಮ್ಮ ಕಾಯಕದ ನಡುವೆ ಒಂದಷ್ಟು ಹೊತ್ತು ವಿರಾಮ ಸಿಕ್ಕರೆ ಎಂಡೋಸಲ್ಫಾನ್ ಪೀಡಿತರ ಬಗ್ಗೆ ಒಮ್ಮೆ ದೃಷ್ಟಿ ಹಾಯಿಸಿ. ಕೇರಳದ ಪುಟ್ಟ ಜಿಲ್ಲೆಯಾದ ಕಾಸರಗೋಡಿನ ಎಣ್ಮಕಜೆ, ಬೋವಿಕ್ಕಾನ, ಪೆರ್ಲ, ಪೆರಿಯ ಮೊದಲಾದ ಊರುಗಳಲ್ಲಿ ಎಂಡೋಸಲ್ಫಾನ್ ಎಂಬ ವಿಷದಿಂದಾಗಿ ಪ್ರಾಣ ಕಳೆದುಕೊಂಡವರೆಷ್ಟು ಮಂದಿ? ಇನ್ನೂ ಜೀವಂತ ಶವವಾಗಿರುವವರು, ಅಂಗವೈಕಲ್ಯತೆಯಿಂದು ಬಳಲುತ್ತಿರುವ ಮಕ್ಕಳು …ಇಲ್ಲೊಂದು ನರಕವಿದೆ. ಸಂಕಷ್ಟಕ್ಕೆ ಸಿಲುಕಿರುವ ಈ ಜನರ ಕೂಗು ನಿಮಗೆ ಕೇಳಿಸುತ್ತಿಲ್ಲವೇ?
ಗೇರುಬೀಜದ ಮರಗಳಿಗೆ ಈ ವಿಷವನ್ನು ಸಿಂಪಡಿಸಿ ಜನರ ಬಾಳನ್ನು ನರಕವಾಗಿಸಿದ ಪ್ಲಾಂಟೇಷನ್ ಕಾರ್ಪರೇಷನ್ ಇದೀಗ ಮೌನ ವಹಿಸಿರುವುದು ಎಷ್ಟು ಸರಿ?. ಕಾಸರಗೋಡಿನ 11 ಪಂಚಾಯತುಗಳ ಜನರು ಎರಡು ದಶಕಗಳಿಂದ ಎಂಡೋ ಪೀಡೆಗೆ ಬಲಿಯಾಗುತ್ತಾ ಬಂದಿರುವುದು ನಿಮಗೆ ಕಾಣಿಸುವುದಿಲ್ಲವೇ? ಎಂಡೋ ಪೀಡಿತರ ಸಂಕಷ್ಟಗಳ ಬಗ್ಗೆ ದಿನ ನಿತ್ಯವೂ ಒಂದಲ್ಲ ಒಂದು ಸುದ್ದಿ ವರದಿಯಾಗುತ್ತಲೇ ಇದ್ದರೂ ನೀವು ಕಿವಿ, ಕಣ್ಣು ಮುಚ್ಚಿ ಕುಳಿದ್ದೀರಾ? ‘ಎಂಡೋ’ ವಿಷ ಎಂದು ಇಷ್ಟರವರೆಗೆ ಪ್ರೂವ್ ಆಗಿಲ್ಲ ಆದ್ದರಿಂದ ಎಂಡೋ ನಿಷೇಧ ಯಾಕೆ ಅಂತಾ ಕೇಳ್ತಿದ್ದೀರಲ್ಲಾ? ಎಂಡೋ ಪೀಡಿತ ಪ್ರದೇಶಗಳಿಗೊಮ್ಮೆ ಭೇಟಿ ನೀಡಿ ನೋಡಿ. ಈ ಜನರ ಸಂಕಷ್ಟಕ್ಕೆ ನಿಮ್ಮ ಮನ ಮರುಗದೇ ಇದ್ದರೆ ನಿಮ್ಮದು ‘ಕಲ್ಲು ಹೃದಯ’ ಅಂತಾ ಅಂದುಕೊಳ್ಳುತ್ತೀನಿ.
ಮತ್ತಷ್ಟು ಓದು 





