ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

24
ಏಪ್ರಿಲ್

ಇಂದಿನ ಯುವಕರು ಹಾಳಾಗಿದ್ದಾರೆಯೇ?

ಯೊಗೀಶ್ ಕೈರೋಡಿ

‘ಈಗಿನ ಯುವಕರು ಹಾಳಾಗಿದ್ದಾರೆ; ದಾರಿ ತಪ್ಪುತ್ತಿದ್ದಾರೆ’, ಇಂತಹ ಮಾತನ್ನು ಸಲೀಸಾಗಿ ಹೇಳಿ ಬಿಡುತ್ತೇವೆ. ಇದು ಸುಲಭದಲ್ಲಿ ಹೊರಳಿಕೊಳ್ಳುವ ನಾಲಗೆಯ ಮಾತೇ ಹೊರತು ಬುದ್ಧಿಪೂರ್ವಕ ವಿವೇಚನಯುಕ್ತ ಮಾತಲ್ಲ. ಭವಿಷ್ಯದ ಕುರಿತಂತೆ ಗಂಭೀರ ಚಿಂತನೆ ಹೊಂದಿರುವ ಅಧ್ಯಯನ ಶೀಲ ಹಾಗೂ ಮಾನವಪರವಾಗಿ ಯೋಚಿಸಿ ಕಾರ್ಯ ಪ್ರವೃತ್ತರಾಗುವ ಯುವಕರು ನಮ್ಮ ಸುತ್ತ ಸಾಕಷ್ಟು ಇದ್ದಾರೆ. ಪ್ರತೀ ಕಾಲವೂ ಕೂಡ ತನ್ನ ನಂತರದ ತಲೆಮಾರನ್ನು ಕೆಟ್ಟಿದ್ದಾರೆ ಎಂದೇ ಪರಿಗಣಿಸಿ ಸಾಗುತ್ತಾ ಬಂತು. ಆದುದರಿಂದ ಇದೆಲ್ಲ ತಲೆಕೆಡಿಸಬೇಕಾದ ಸಂಗತಿಯಲ್ಲ.

ಒಂದು ವೇಳೆ ಯುವಕರು ದಾರಿತಪ್ಪಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುವುದಾದರೂ ಅದರ ಹೊಣೆ ಸುತ್ತಲಿನ ಸಮಾಜದ್ದೇ ಹೊರತು ಯುವಕರದ್ದಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಯುವಕರು ಸಾಕಷ್ಟು ಪ್ರಮಾಣದಲ್ಲಿ ಭಾಗಿಯಾಗಿದ್ದರು, ಅವರಿಗೆ ದೇಶ ಪ್ರೇಮವಿತ್ತು ಎಂದರೆ ಈ ರೀತಿಯ ಸದ್ಭಾವನೆಯನ್ನು ಆ ಕಾಲದ ಜವಾಬ್ದಾರಿಯುತ ಜನವರ್ಗ ಅಥವಾ ನಾಯಕರು ರೂಪಿಸಿದ್ದರು. ಇಂದು ರೀತಿಯ ಸದ್ಭಾವ ನೆಲೆಗೊಳ್ಳುವ ವಾತಾವರಣಕ್ಕಿಂತ ಮಾನವ ದ್ವೇಷಿ ವಾತಾವರಣ ನಿರ್ಮಾಣಕ್ಕೆ ಹೆಚ್ಚಿನ ಅವಕಾಶಗಳು ಒದಗಿ ಬರುತ್ತಿದೆ. ಇದರಿಂದ ಮುಕ್ತಗೊಂಡು ಸ್ವತಂತ್ರ ಹಾಗೂ ಸ್ವಸ್ಥ ಮನಸ್ಸು ಯುವ ಸಮುದಾಯದಲ್ಲಿ ನೆಲೆಗೊಳ್ಳುವ ವಾತಾವರಣ ನಿರ್ಮಾಣ ಒಂದು ಬಗೆಯ ಆಂದೋಲನದಂತೆ ನಡೆಯಬೇಕು. ವರ್ತಮಾನದ ನಮ್ಮ ಸುತ್ತಮುತ್ತಲಿನ ವಿದ್ಯಾಮಾನಗಳನ್ನು ಗಮನಿಸುವುದರೊಂದಿಗೆ ಸ್ವಸ್ಥ ಸಮಾಜದ ನಿರ್ಮಿತ ಸಾಧ್ಯ.

ವಿಭಜಕ ಮನಸ್ಸುಗಳ ಸೃಷ್ಟಿ:

ಜಾತಿ, ಮತ, ಪಕ್ಷ ಈ ಮೂರು ಅಂಶಗಳು ಮಾನವ ಮನಸ್ಸನ್ನು ನಿರಂತರ ಒಡೆಯುತ್ತಿದೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟ. ಒಂದು ಸಮಾಜದ ಏಳಿಗೆಯಲ್ಲಿ ಜಾತಿ ಅಥವಾ ಮತದ ಸೇವಾಪರ ಚಟುವಟಿಕೆಯ ಮಹತ್ವವನ್ನು ಅಲ್ಲಗೆಳೆಯುವಂತಿಲ್ಲ. ಜನತೆಯ ಕಣ್ಣೀರನ್ನು ಒರೆಸುವ ಕಾರ್ಯಗಳನ್ನು ಸಾಂಘಿಕ ನೆಲೆಯಲ್ಲಿ ಮಾಡಿದೆ ಎಂಬುದು ಸತ್ಯ. ಒಂದು ಸಮುದಾಯದ ಒಳಗಿರುವ ಉಳ್ಳವರು ದುರ್ಬಲರ ಏಳಿಗೆಗೆ ಸ್ಪಂದಿಸಲು ಇದೊಂದು ಉತ್ತಮ ವ್ಯವಸ್ಥೆ. ಆದರೆ ಒಂದು ವ್ಯವಸ್ಥೆಯ ಒಳಗಡೇ ಒಬ್ಬರನ್ನು ಒಬ್ಬರು ಅವಲಂಬಿಸಿ ಸಹಕಾರ ಪ್ರವೃತ್ತಿಯಿಂದ ಬದುಕಬೇಕಾದುದು ಅಷ್ಟೇ ಅಗತ್ಯ. ಸ್ವಸಂಘಟನೆಯ ಬಲವರ್ಧನೆಗಾಗಿ ಅನ್ಯ ಸಮುದಾಯವನ್ನು ಅನಾವಶ್ಯಕ ಶತ್ರುವಾಗಿ ಬಿಂಬಿಸುವ ಸಂದರ್ಭ ಒದಗಿ ಬರಬಹುದು. ಇದು ಪರಸ್ಪರ ಅಪನಂಬಿಕೆಗೆ ಕಾರಣವಾಗಿ ಮಾತು ಮುರಿಯದೆಯೂ ಅಶಾಂತಿಗೆ ಕಾರಣವಾಗಬಹುದು. ಪೂರ್ವಾಗ್ರಹ ಮನೆ ಮಾಡಬಹುದು. ಇನ್ನು ತನ್ನ ಪಕ್ಷಬಲಪಡಿಸಿ ಅಧಿಕಾರಕ್ಕೆ ಮತ್ತಷ್ಟು ಓದು »

23
ಏಪ್ರಿಲ್

ಬಂಗಾರಪಲ್ಕೆಗೆ ಮುಕ್ತಿ ಎಂದು?

ಪವನ್ ಎಂ.ಟಿ

ನಮ್ಮ ಸರಕಾರ ಕ್ರಿಕೇಟ್ ಆಟಗಾರರಿಗೆ ೨೫ ಲಕ್ಷ ರೂಪಾಯಿ ಹಣವನ್ನು ಕೊಡಲು ಮುಂದಾಗಿದೆ. ಪಾಪ ಅವರಿಗೆ ಏನೂ ಇಲ್ಲ ನೋಡಿ ಅದಕ್ಕೆ ಕೊಡ್ಲಿ ಬಿಡಿ. ನಮ್ಮ ಸರಕಾರದ ಹಣೆ ಬರಹವೇ ಅಷ್ಟು. ಹಣ ಇರುವವರಿಗೆ ಹಣವನ್ನು ನೀಡುತ್ತಾರೆಯೇ ಹೊರತು ಬಡವರಿಗೆ ನೀಡುವುದಿಲ್ಲ. ನಮ್ಮಲ್ಲಿ ಶ್ರೀಮಂತರೇ ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ ವಿನಹ ಬಡವ ಶ್ರೀಮಂತನಾದದಿಲ್ಲ. ನಮ್ಮಲ್ಲಿ ಕಾನೂನನ್ನು ಪಾಲಿಸುವವರಿಗೆ ಮಾತ್ರ ಕಾನೂನಿದೆ. ಆದರೆ ನಮ್ಮಲ್ಲಿ ಒಂದು ಒತ್ತಿನ ಊಟಕ್ಕೂ ಕಷ್ಟಪಡೊ, ನಾಗರೀಕ ಸೌಲಭ್ಯವನ್ನೇ ಕಾಣದೆ ಇರೋ ಕೆಲವು ಗ್ರಾಮಗಳಿವೆ, ಜನರಿದ್ದಾರೆ ಅಂತ ಸರಕಾರಕ್ಕೆ ಗೊತ್ತೇ ಇಲ್ಲ ಅಂತ ಕಾಣ್‌ತ್ತದೆ. ಯಾಕಂದ್ರೇ ನಮ್ಮ ಸರಕಾರಕ್ಕೆ ಕುರ್ಚಿ ಉಳಿಸ್‌ಕೊಳ್ಳೊ ಚಿಂತೆಯಾದರೆ ವಿರೋಧ ಪಕ್ಷಕ್ಕೆ ಕುರ್ಚಿ ಬೀಳಿಸೋ ಚಿಂತೆ ಇದರ ನಡುವೆ ಸಿಲುಕಿರೂ ಜನರ ಗತಿ ಅದೋಗತಿ.

ನಿಮ್ಮ ಮನೆಗೆ ಇನ್ನಾರದೋ ಮನೆಯ ರಸ್ತೆಯಲ್ಲಿ ಅಥವ ತೋಟದ ರಸ್ತೆಯಲ್ಲಿ ಹೋಗಬೇಕು ಎಂದಾದರೆ ನಿಮಗೆ ಮನೆಗೆ ಅಥವ ತೋಟಕ್ಕೆ ಸಂಬಂಧಪಟ್ಟ ಮಾಲಿಕನಿಂದ ಏನೆಲ್ಲ ನಿರ್ಭಂದಗಳು ಬರಬಹುದೆಂದು ನೀವೆ ಯೋಚಿಸಿ. ನಿವು ಅವ್ರು ಹೇಳುವ ಎಲ್ಲಾ ಮಾತುಗಳನ್ನು ಸರಿಯಾಗಿ ಕೇಳಿದರೆ ಮಾತ್ರ ನಿಮಗೆ ಅಲ್ಲಿ ಸಂಚರಿಸಲು ಅವಕಾಶ. ಹಾಗೆಂದು ನಿರ್ಭಂದನೆಯನ್ನು ಸಹಿಸಿಕೊಂಡು ಎಷ್ಟುದಿನವೆಂದು ನೀವು ಓಡಾಡುತ್ತಿರಿ. ಅದು ನಿಮ್ಮಿಂದ ನಮ್ಮಿಂದ ಕಂಡಿತಾ ಸಾಧ್ಯವಿಲ್ಲ. ಆದ್ರೆ ಇಲ್ಲಿ ಎಲ್ಲ ನಿರ್ಭಂದನೆಗಳ ನಡುವೆ ಸರಿಯಾದ ರಸ್ತೆ ಇಲ್ಲದೆಬದುಕುತ್ತಿರುವವರು ಬೆಳ್ತಂಗಡಿತಾಲೂಕಿನ ದಿಡುಪೆಯ ಸಮೀಪದ ಬಂಗಾರು ಪಲ್ಕೆಯ ಮಲೆಕುಡಿರು. ಪಾಪ ಇವರ ಪರಿಸ್ಥಿತಿಯನ್ನು ನಮ್ಮಲ್ಲಿ ಆಡಳಿತಗಾರರೆಂದು ಕರೆಯಿಸಿಕೊಳ್ಳುವವರಿದ್ದಾರಲ್ಲ ಅವರೊಮ್ಮೆ ಬಂದು ನೋಡಬೇಕು.

ನಾವು ಮಲೆಕುಡಿಯರ ಪ್ರದೇಶಗಳಿಗೆ ಭೇಟಿ ನೀಡಿದಾಗ ನಮಗೆ ದಿಡುಪೆಯ ಬಂಗಾರು ಪಲ್ಕೆ ಅನೇಕ ಕಾರಣಗಳಿಂದ ಕುತೂಹಲ ಮೂಡಿಸಿತ್ತು  ಇಲ್ಲಿಯ ರಸ್ತೆ, ಜನ, ನಾಗರಿಕ ಸೌಲಭ್ಯ ಎಲ್ಲವೂ ಇಲ್ಲಿ ವಿಭಿನ್ನವೇ.

ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ದಿಡುಪೆ ಎನ್ನವ ಸ್ಥಳದಿಂದ ಸುಮಾರು ೧೫ ಕಿಲೋಮೀಟರ್ ದೂರದಲ್ಲಿರುವ ಬಂಗಾರ್ ಪಲ್ಕೇಗೆ ತೆರಳಬೇಕಾದರೆ, ಪ್ರಪಂಚದ ಅತ್ಯಂತ ಕೆಟ್ಟದಾದ ರಸ್ತೆ ನಮಗೆ ಸಿಗುತ್ತದೆ. ಮನುಷ್ಯ ಸರಿಯಾಗಿ ಕಾಲು ನಡಿಗೆಯಲ್ಲಿಯೂ ಸಂಚರಿಸಲು ಸಾಧ್ಯವಿಲ್ಲದ ಈ ರಸ್ತೆ ಕುದುರೆಮುಖ ರಾಷ್ಟ್ರೀಯ ಉಧ್ಯಾನದ ಒಳಗಿದೆ. ಬೇಸಿಗೆ ಸಮಯವಾದುದರಿಂದ ನಮಗೆ ತೆರಲು ಒಂದೊ ೪ ವೀಲ್ ವ್ಯವಸ್ಥೆಯಿರುವ ಒಂದು ಜೀಪ್ ನಮಗೆ ಸಿಕ್ಕಿತು ಈ ೪ ವೀಲ್ ಜೀಪ್ ಬಿಟ್ಟು ಬೇರೆ ಯಾವುದೇ ವಾಹನ ಅಲ್ಲಿಗೆ ತೆರಳು ಸಾಧ್ಯವಿಲ್ಲ. ಮತ್ತಷ್ಟು ಓದು »

21
ಏಪ್ರಿಲ್

ಸೀಟ್ ಬೇಕು ಆದ್ರೆ ರಾಜ್ಯ ಬೇಡಾ….

– ಚೇತನ್ ಜೀರಾಳ್

ಡಾ. ಬಿ. ಆರ್. ಅಂಬೇಡ್ಕರ್ ಅವರ ಜನುಮ ದಿನದಂದು ಒಂದು ಸೋಜಿಗದ ವಿಷಯ ಹೊರಬಿದ್ದಿದೆ. ಪತ್ರಿಕೆಗಳಲ್ಲಿ ಇದರ ಬಗ್ಗೆ ವರದಿಯಾದರು ಸಹ, ಇದನ್ನ ಪತ್ರಿಕೆಗಳು ಗಂಭೀರವಾಗಿ ಪರಿಗಣಿಸಿದಂತೆ ಕಾಣಲಿಲ್ಲ. ವಿಷಯ ಏನಪ್ಪ ಅಂದರೆ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ ಸಿಂಗ್ ಅವರು, ಸದ್ಯಕ್ಕೆ ಅಸ್ಸಾಂ ರಾಜ್ಯದಲ್ಲಿ ನೆಲೆಸುತ್ತಿದ್ದಾರೆ ಅನ್ನೋದನ್ನ ದಾಖಲೆಗಳು ಹೇಳುತ್ತಿವೆ. ಮನಮೋಹನ್ ಸಿಂಗ್ ಹಾಗೂ ಅವರ ಪತ್ನಿ ದಿಸ್ಪುರ್ ಕ್ಷೇತ್ರದ ಮತದಾರರಾಗಿದ್ದು, ಈ ಸಾರಿಯ ಚುನಾವಣೆಯಲ್ಲಿ ಮತದಾನ ಮಾಡಿಲ್ಲ ಅಂತ ಪತ್ರಿಕೆಗಳಲ್ಲಿ ವರದಿಯಾಗಿದೆ ಹಾಗೂ ಇದನ್ನ ಆ ಕ್ಷೇತ್ರದ ಉಸ್ತುವಾರಿ ವಹಿಸಿದ್ದ ಚುನಾವಣಾ ಅಧಿಕಾರಿ ಸಹ ನಿಜವೆಂದು ಹೇಳಿದ್ದಾರೆ.

ಮುಖ್ಯವಾದ ವಿಷ್ಯ ಏನಪ್ಪಾ ಅಂದ್ರೆ ಡಾ. ಮನಮೋಹನ್ ಸಿಂಗ್, ಅಸ್ಸಾಂನಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಬಂದಿದ್ದಾರೆ ಹಾಗೂ ಹಿಂದೆಯೂ ಆಯ್ಕೆಯಾಗಿದ್ದರು. ಮತದಾನ ಪ್ರತಿಯೊಬ್ಬ ನಾಗರೀಕನ ಮೂಲ ಕರ್ತವ್ಯ ಎಂದು ನಮ್ಮ ಸಂವಿಧಾನದಲ್ಲಿ ಹೇಳಲಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಒಂದು ಜನಪ್ರಿಯ ಸರ್ಕಾರವನ್ನು ಆರಿಸಲು ಪ್ರತಿಯೊಬ್ಬ ಪ್ರಜೆಗೂ ನೀಡಲಾಗಿರುವ ಪವಿತ್ರ ಹಕ್ಕು ಅನ್ನೋದನ್ನ ನಮ್ಮ ದೇಶದ ಪ್ರಧಾನ ಮಂತ್ರಿಗಳು ಮರೆತು ಬಿಟ್ಟಿದ್ದಾರೆಯೇ?? ಪ್ರಜ್ಞಾವಂತ ಜನರು ಚುನಾವಣೆಯಿಂದ ವಿಮುಖರಾಗುತ್ತಿದ್ದಾರೆ ಎಂದು ಹೇಳುತ್ತಿರವ ಈ ಸಮಯದಲ್ಲಿ ಒಬ್ಬ ರಾಜಕಾರಣಿ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿರುವ ಮನಮೋಹನ್ ಸಿಂಗ್ ಅವರಿಂದ ಇಂತಹ ನಡೆ ಸರಿಯಾದುದಲ್ಲ.

ಮತ್ತಷ್ಟು ಓದು »

21
ಏಪ್ರಿಲ್

ಪೂರ್ವಾವಲೋಕನ : ಒಂದು ಸಂವಾದ

– CSLC

ಕನ್ನಡದ ವಿದ್ವಾಂಸ ಜಗತ್ತಿಲ್ಲಿ ನಮ್ಮ ಸಮಾಜದ ಮತ್ತು ಸಮಾಜವಿಜ್ಞಾನದ ಕುರಿತು ವೈಜ್ಞಾನಿಕವಾಗಿ ಹೆಚ್ಚು ಚರ್ಚೆಯಾಗಬೇಕೆಂಬ ಉದ್ದೇಶದಿಂದ ಬಾಲಗಂಗಾಧರರ ಹಲವಾರು ಆಂಗ್ಲ ಭಾಷೆಯ ಲೇಖನಗಳನ್ನು ಕನ್ನಡಕ್ಕೆ ಅನುವಾದಿಸಿಲಾದ ’ಪೂರ್ವಾವಲೋಕನ’ ಕೃತಿಯನ್ನು (ಅಭಿನವ ಪ್ರಕಾಶನ) ಇತ್ತೀಚೆಗೆ ಪ್ರಕಟಿಸಲಾಗಿದೆ. ಈ ಪುಸ್ತಕದಲ್ಲಿರುವ ಕೆಲವಾರು ಲೇಖನಗಳ ಆಧಾರದ ಮೇಲೆ “ಪೂರ್ವಾವಲೋಕನ : ಒಂದು ಸಂವಾದ”  ಒಂದು ದಿನ ಕಾರ್ಯಾಗಾರವನ್ನು ಇದೇ ತಿಂಗಳ ೨೪ ರಂದು ಸರ್ಕಾರಿ ಕಲಾ  ಕಾಲೇಜು, ಕೆ.ಆರ‍್. ಸರ್ಕಲ್ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ನಾವು ಬರೆದ ಲೇಖನಗಳಿಗೆ ಹಾಗೂ ಇತರ ಗೆಳೆಯರ ಲೇಖನಗಳಿಗೆ ಪ್ರತಿಕ್ರಿಯೆ ಬರೆದಂತಹ ಸಂದರ್ಭದಲ್ಲಿ ಆಸಕ್ತಿದಾಯಕವಾಗಿ ಚರ್ಚೆಗೆ ಅನುವು ಮಾಡಿಕೊಡಲಾಗಿದೆ. ಆದಕಾರಣ ಇದು ಕೇವಲ ಅಂತರ್ಜಾಲದಲ್ಲಿ ನಡೆಯುವ ಚರ್ಚೆಗೆ ಸೀಮಿತವಾಗದೆ, ನೇರವಾಗಿ ಮುಖಾಮುಖಿಯಾಗಿ ಚರ್ಚಿಸಲು ಒಂದು ಸುಸಂದರ್ಭ ಎಂದು ತಿಳಿದು ತಮ್ಮೆಲ್ಲರನ್ನೂ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ. ಕಾರ್ಯಾಗಾರಕ್ಕೆ ಬರಲು ಯಾವುದೇ ಪ್ರವೇಶ ಶುಲ್ಕವಿಲ್ಲ, ನಿಮ್ಮ ಆಸಕ್ತಿಯೇ ಶುಲ್ಕವಾಗಿದೆ. ಹಾಗೂ ಕೆಳಕಂಡ ಲೇಖನಗಳನ್ನು ಓದಿಕೊಂಡು ಬಂದು ಚರ್ಚಿಸಬಹುದು.
ರಾಜಾರಾಮ ಹೆಗ್ಡೆಯವರು “ Why Understand Western Culture” which is translated as ” ಪಾಶ್ಚಾತ್ಯ ಸಂಸ್ಕತಿಯನ್ನು ಯಾಕೆ ಅರ್ಥ ಮಾಡಿಕೊಳ್ಳಬೇಕು? (ಪುಟ ಸಂಖ್ಯೆ ೧೦೦ – ೧೧೫  ಪೂರ್ವಾವಲೋಕನ) ಲೇಖನದ ಕುರಿತು ಚರ್ಚಿಸಲಿದ್ದಾರೆ.
ಪ್ರೊ. ಜಿ ಸಿವರಾಮಕ್ರಷ್ಣನ್  ” To Follow Our fore Fathers…” which is translated as “ನಮ್ಮ ಪೂರ್ವಜರನ್ನು ಅನುಸರಿಸಿ…” ಸಂಪ್ರದಾಯದ ಸ್ವರೂಪ” (ಪುಟ ಸಂಖ್ಯೆ ೮೫-೧೦೦  ಪೂರ್ವಾವಲೋಕನ) ಲೇಖನದ ಕುರಿತು ಚರ್ಚಿಸಲಿದ್ದಾರೆ.
19
ಏಪ್ರಿಲ್

ಹಸಿರುಕಾನನದ ಮಗಳೀಕೆ ಗೌರಾದೇವಿ…..

– ಚಿತ್ರ ಸಂತೋಷ್

ಉತ್ತರ ಖಾಂಡದ ರೇನಿ ಗ್ರಾಮದಲ್ಲಿ  ಮರಗಳನ್ನು ಕಡಿಯಲು ಬಂದ ಅಧಿಕಾರಿಗಳ ವಿರುದ್ಧ ಬಂಡೆದ್ದವಳು ಗೌರಾದೇವಿ. ಬುಡಕಟ್ಟು ಜನರಿಗೆ ದಟ್ಟಾರಣ್ಯಗಳೇ ತವರು. ಕಾಡಿಗೂ-ನಮಗೂ ಇರುವುದು ಅಮ್ಮ-ಮಕ್ಕಳ ಸಂಬಂಧ.ಬದುಕಿದರೆ ನಮಗೆ ಆಸರೆ ನೀಡಿದ ಈ ಹಸಿರು ಕಾಡುಗಳಿಗಾಗಿ ಬದುಕಿ …ಎಂದು ಹಳ್ಳಿ ಮನೆಗಳ ಜಗುಲಿಯಲ್ಲಿ ಕುಳಿತು ಜಾಗೃತಿಯ ಕಹಳೆ ವೊಳಗಿಸಿದವಳು ಇವಳೇ ಗೌರಾದೇವಿ. ದೇಶದ್ಯಾಂತ ಪರಿಸರ ಕ್ರಾಂತಿ ಮಾಡಿದ ಚಿಪ್ಕೋ ಚಳವಳಿನ್ನು ಹುಟ್ಟು ಹಾಕಿದ್ದೇ ಇವಳು. ಇಂಥ ಗೌರಾದೇವಿಯನ್ನು ಗೌರವದಿಂದ ನೆನೆಯುವ ಕೆಲಸವನ್ನು ನಾವು ಮಾಡಬೇಕಿದೆ.

“ಸಹೋದರರೇ  ಈ ಅರಣ್ಯ ಪ್ರದೇಶ ನಮ್ಮ ಜೀವಮೂಲ. ನಮ್ಮ ಹುಟ್ಟಿನಿಂದ ಸಾವಿನ ತನಕದ ಜೀವನ ಬಂಡಿಗೆ ಸಾಥ್ ನೀಡುವುದು ಇದೇ ಹಸಿರು ಕಾನನ. ಈ ‘ರಮೆಯೇ ನಮ್ಮಮ್ಮ. ನೀವು ನಿಮ್ಮ ಹರಿತವಾದ ಗರಗಸವನ್ನು ನಮ್ಮಮ್ಮನ ಕರುಳಿಗೆ ಇಡುವ ವೊದಲು ನನ್ನ ಎದೆಗೆ ಹಿಡಿ”

ಬಹುಶಃ ಚಿಪ್ಕೋ ಚಳವಳಿ ಹುಟ್ಟುವ ವೊದಲು ಓರ್ವ ಬುಡಕಟ್ಟು ಮಹಿಳೆ ಉತ್ತರ ಖಾಂಡದ ಆ ಬೃಹತ್ ಅರಣ್ಯದಲ್ಲಿ ಈ ರೀತಿ ಮರಗಳನ್ನು ತಬ್ಬಿಕೊಂಡು ಸರ್ಕಾರದ ಅಕಾರಿಗಳ ಎದುರು ಈ ರೀತಿ ಅಳಲು ತೋಡಿಕೊಂಡಿದ್ದು ಬಹಳಷ್ಟು ಜನರಿಗೆ ನೆನಪು ಇರಲಿಕ್ಕಿಲ್ಲ. ಚಿಪ್ಕೋ ಚಳವಳಿ ಕುರಿತು ಮಾತೆತ್ತಿದ್ದರೆ ತಕ್ಷಣಕ್ಕೆ ನೆನಪಿಗೆ ಬರುವುದು ಸುಂದರ್ ಲಾಲ್ ಬಹುಗುಣ ಎಂಬ ಮಹಾನ್ ವ್ಯಕ್ತಿ. ಆದರೆ, ಇವರಿಗಿಂತಲೂ ವೊದಲು ಅಲ್ಲಿ ಮಹಿಳೆಯೊಬ್ಬಳ ದನಿಯಿತ್ತು,  ದೇಶದಾದ್ಯಂತ ಬೃಹತ್ ಪರಿಸರ ಕ್ರಾಂತಿಗೆ ಮುನ್ನುಡಿಯಾದ ಆ ಚಳವಳಿಯ ಹಿಂದೆ ಅನಕ್ಷರಸ್ಥೆ ಮಹಿಳೆಯ ಶ್ರಮ ಇತ್ತು, ಕಣ್ಣೀರಿತ್ತು, ಜಾಗೃತಿಯ ಕಹಳೆಯಿತ್ತು.

ಅವಳ ಹೆಸರು ಗೌರಾದೇವಿ.

ಮತ್ತಷ್ಟು ಓದು »

17
ಏಪ್ರಿಲ್

ಎಂಡ್ ‘ದಿ’ ಸಲ್ಫಾನ್…!

13
ಏಪ್ರಿಲ್

ರಾಷ್ಟ್ರೀಯ ಪಕ್ಷಗಳ ಒಡೆದು ಆಳುವ ನೀತಿ…!

– ಚೇತನ್ ಜೀರಾಳ್

ಕಳೆದ ಎರಡು ವಾರಗಳಲ್ಲಿ ನಡೆದಿರುವ ಸುದ್ದಿಗಳ ಬಗ್ಗೆ ನಿಮ್ಮ ಗಮನ ಹರಿಸಲು ಇಷ್ಟಪಡುತ್ತೇನೆ. ಪತ್ರಿಕೆಗಳಲ್ಲಿ ಕೇವಲ ಸುದ್ದಿ ಎನ್ನುವಂತೆ ಇವುಗಳನ್ನು ಬಿತ್ತರಿಸಲಾಯಿತು, ಆದರೆ ಇವುಗಳ ಬಗ್ಗೆ ಎಲ್ಲೂ ಚರ್ಚೆಯಾಗಿಲ್ಲ.

ಮರುಚುನಾವಣೆ ಹಾಗೂ ತೆಲುಗಿನಲ್ಲಿ ಭಾಷಣ:
ಮೊನ್ನೆ ನಡೆದ ಮರುಚುನಾವಣೆಯ ಪ್ರಚಾರಕ್ಕಾಗಿ ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡವು, ಅದಕ್ಕಾಗಿಯೇ ಹೊರರಾಜ್ಯದ ಚಲನಚಿತ್ರ ನಟ/ನಟಿಯರನ್ನು ಕರೆಸಿದ್ದವು. ಮತದಾರನನ್ನು ಓಲೈಸುವ ಭರದಲ್ಲಿ ನಮ್ಮ ರಾಜಕೀಯ ಪಕ್ಷಗಳು ಮಾಡುತ್ತಿರುವ ತಪ್ಪುಗಳು ಮಾತ್ರ ಬಹಳ ದೊಡ್ಡದಾಗಿವೆ. ಬಂಗಾರ ಪೇಟೆಯಲ್ಲಿ ನಡೆದ ಉಪಚುನಾವಣೆಗಾಗಿ ನಡೆಸಿದ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷ ತೆಲಗು ಚಿತ್ರನಟ ಚಿರಂಜೀವಿಯನ್ನು ಬಳಸಿಕೊಂಡಿತ್ತು. ಅವರು ಸಹ ಭರ್ಜರಿಯಾಗಿ ತೆಲುಗಿನಲ್ಲಿ ಭಾಷಣ ಮಾಡಿ ಹೊರಟು ಹೋದರು. ಇದರಲ್ಲಿ ತಪ್ಪೇನು ಅಂತೀರಾ? ಮತದಾರನನ್ನು ಓಲೈಸುವ ಭರದಲ್ಲಿ ಕರ್ನಾಟಕದ ವಿವಿಧ ಭಾಷಿಕರಲ್ಲಿ ಒಡಕುಂಟು ಮಾಡಲಾಗುತ್ತಿದೆ. ಮೊನ್ನೆ ನಡೆದಿದ್ದು ಸಹ ಅದೇ, ಹಲವು ಶತಮಾನ ಅಥವಾ ಹಲವು ದಶಕಗಳಿಂದ ಇಲ್ಲಿ ನೆಲೆಸಿರುವ ತೆಲುಗು ಭಾಷಿಕರು ಕನ್ನಡದವರೇ ಆಗಿಹೋಗಿದ್ದಾರೆ. ಆದರೆ ನೀವು ತೆಲುಗರು ನೀವು ಕನ್ನಡಿಗರಲ್ಲಾ ಅಂತಾ ತೋರಿಸೋ ಪ್ರಯತ್ನಗಳೇ ಚಿರಂಜೀವಿ ಯಂತಹ ತೆಲುಗು ನಟರನ್ನು ಕರೆದುಕೊಂಡು ಬಂದು ಕರ್ನಾಟಕದಲ್ಲಿ ಭಾಷಣ ಮಾಡಿಸುವುದು. ಕರ್ನಾಟಕದ ಜನರನ್ನ ಓಲೈಸಲು ಆಂಧ್ರಪ್ರದೇಶದ ಕರಾವಳಿ ತೀರದ ಒಬ್ಬ ನಟ ಬಂದು ನೀವು ಕನ್ನಡಿಗರಲ್ಲಾ ಎಂದು ಸಂದೇಶ ನೀಡಿಸುವ ಕೆಲಸ ಮಾಡುತ್ತಿರುವ ಪಕ್ಷಗಳು ಮಾಡುತ್ತಿರುವುದಾದರು ಏನು ಅನ್ನೋದನ್ನ ತಾವೇ ಪ್ರಶ್ನಿಸಿಕೊಳ್ಳಲಿ.

ಮತ್ತಷ್ಟು ಓದು »

12
ಏಪ್ರಿಲ್

ಅವರೆತ್ತರಕ್ಕೆ ಏರಲಾಗದಿದ್ದರೆ ತೆಪ್ಪಗಿರಿ…!

– ರಾಕೇಶ್ ಶೆಟ್ಟಿ

“ಇಂದಿನ ಪರಿಸ್ಥಿತಿಯಲ್ಲಿ ಮಹಾತ್ಮ ಗಾಂಧೀಜಿ ಅವರು ಇದ್ದಿದ್ದರೆ, ಅವರು ಕೂಡಾ ಭ್ರಷ್ಟರಾಗುತ್ತಿದ್ದರು. ರಾಜಕೀಯದಲ್ಲಿ ಉಳಿಯಬೇಕಾದರೆ ಭ್ರಷ್ಟರಾಗದೆ ಇರಲು ಸಾಧ್ಯವೇ ಇಲ್ಲ” ಇಂತ ಹೇಳಿಕೆ ಕೊಟ್ಟೊವ್ರು ಯಾರು ಅನ್ನೋದು ಎಲ್ರಿಗು ಗೊತ್ತಿದೆಯಲ್ವಾ? ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವ್ರು.ಒಂದ್ ಕಡೆ ದೇವೆಗೌಡ್ರು ಫೋಟೊ,ಇನ್ನೊಂದ್ ಕಡೆ ಇದೇ ಮಹಾತ್ಮನ ಫೋಟೊ ಹಾಕೊಂಡಿರೋ ಪಕ್ಷದ ರಾಜ್ಯಾಧ್ಯಕ್ಷರ ಬಾಯಿಯಲ್ಲಿ ಬಂದ ಮುತ್ತಿನಂತ ಮಾತುಗಳಿವು.

ಮುತ್ತುಗಳು ಬಿದ್ದಾಗ ಆರಿಸಿ ಮನೆಗ್ ತಗೊಂಡು ಹೋಗೊದು ರೂಢಿ,ಆದ್ರೆ ಕುಮಾರ ಸ್ವಾಮಿ ಅವ್ರ ಮುತ್ತನ್ನ ಹಿಡಿದು ಅವರಿಗೆ ಪೈಡ್ ಪೈಡ್ ಅಂತ ಎಲ್ಲ ಕಡೆಯಿಂದ ಬಾರಿಸುತಿದ್ದಾರೆ.ಬಾರಿಸದೆ ಬಿಡ್ಬೇಕಾ? ಒಂದು ಕಡೆ ಮಹಾತ್ಮರ ಹೋರಾಟದಿಂದ ಸ್ಪೂರ್ತಿ ಪಡೆದ ೭೬ ವರ್ಷದ ಅಣ್ಣಾ ಹಜಾರೆಯಂತವರು ಸತ್ತತಿಂಹರನ್ನ ಬಡಿದೆಬ್ಬಿಸಲು ಉಪವಾಸ ಕೂತರೆ,ಇನ್ನೊಂದು ಕಡೆ ಈ ಕುಮಾರಸ್ವಾಮಿ ಮಹಾತ್ಮರ ಬಗ್ಗೆ ಇಂತ ಮಾತನಾಡಲು ಹೊರಟಿದ್ದಾರೆ!

ಮತ್ತಷ್ಟು ಓದು »

12
ಏಪ್ರಿಲ್

ಇನ್ನೊಂದು ಸಮರಕ್ಕೆ ಸಿದ್ಧರಾಗಿ…

-ಸಂಪತ್ ಕುಮಾರ್

ಅಣ್ಣ ಹಜಾರೆಯವರ  ಉಪವಾಸವೇನೋ ಮುಗಿಯಿತು. ರಂಗೋಲೆಯ ಕೆಳಗೆ ನುಸುಳುವ ಬುದ್ಧಿ ಉಳ್ಳ ರಾಜಕಾರಣಿಗಳು ಎಂತಹ ಕಾನೂನು ತಯಾರಿಸುತ್ತರೋ ಕಾದುನೋಡಬೇಕು. ಈಗಾಗಲೇ ಅಸ್ತಿತ್ವದಲ್ಲಿರುವ ಲೋಕಾಯುಕ್ತದಂತಹ ಸಂಸ್ಥೆಯಿಂದ ಆಗುತ್ತಿರುವ ಭ್ರಷ್ಟಾಚಾರಿಗಳ ಬೇಟೆ ಅವರಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿರುವುದು ಸರ್ವವೇದ್ಯ. ಅಲ್ಲದೆ ಇಂತಹ ವಿಧೇಯಕ ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವುದೂ ಅನುಮಾನ.ಇಂತಹ ಪರಿಸ್ತಿತಿಯಲ್ಲಿ ಇನ್ನೊದು ಹೋರಾಟದ ಅಗತ್ಯ ಇದೆ.

ಭಾರತದ ರಾಜಕಾರಣಿಗಳ ಕೋಟಿ ಕೋಟಿ ಕಪ್ಪು ಹಣ ಸ್ವಿಸ್ ಬ್ಯಾಂಕಿನಲ್ಲಿ ಕೊಳೆಯುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಹಣವನ್ನು ರಾಷ್ಟ್ರೀಯ ಸಂಪತ್ತೆಂದು ಘೋಷಿಸಿದರೆ ಭಾರತ ತನ್ನೆಲ್ಲ ಸಾಲದಿಂದ ಮುಕ್ತವಾಗಿ, ಹಣ ದುಬ್ಬರ, ಬಡತನ, ಮುಂತಾದ ತನ್ನೆಲ್ಲ ಕಷ್ಟ ಕೋಟಲೆಗಳಿಂದ ಹೊರಬರಲು ಸಾಧ್ಯ. ಇದಕ್ಕಾಗಿ ಅಣ್ಣ ಹಜಾರೆ ಅವರನ್ನು ಈ ಉದ್ದೇಶಕ್ಕಾಗಿ ಪುನಃ ಉಪವಾಸ ಕೂರಲು ಹೇಳುವುದು ಸ್ವಾರ್ಥ ಎನಿಸಬಹುದು. ಈ ವಿಚಾರವನ್ನೇ ತನ್ನ ಚುನಾವಣ ಪ್ರಾಣಾಳಿಕೆ ಮಾಡಿಕೊಂಡಿರುವ ಭಾ.ಜ.ಪ. ದಿಂದ ಇದನ್ನು ರಾಜಕೀಯಗೊಳಿಸಬಾರದು.
ಮತ್ತಷ್ಟು ಓದು »

8
ಏಪ್ರಿಲ್

ಈ ಹೋರಾಟ ಗೆಲ್ಲಲೇಬೇಕು…!

– ಬನವಾಸಿ ಬಳಗ

ಕಿಸನ್ ಬಾಬುರಾವ್ ಹಜಾರೆ ಎಂಬ ಹೆಸರಿನ ಆ ಹಿರಿಯರು ಇವತ್ತಿನಿಂದ ಭ್ರಷ್ಟಾಚಾರದ ವಿರುದ್ಧದ ಒಂದು ದೊಡ್ಡ ಹೋರಾಟಕ್ಕೆ ಮುನ್ನುಡಿ ಹಾಡಿದ್ದಾರೆ. ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ರೆಲೆಗನ್ ಸಿದ್ಧಿ ಎಂಬ ಹಳ್ಳಿಯನ್ನು ಮಾದರಿ ಹಳ್ಳಿಯಾಗಿ ರೂಪಿಸಿ, ತನ್ನಿಡೀ ಬದುಕನ್ನೇ ಸಮಾಜಕ್ಕಾಗಿ ಮೀಸಲಿಟ್ಟ ಈ ಹಿರಿಯರು ದೆಹಲಿಯ ಜಂತರ್ ಮಂತರ್ ಬಳಿ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.

ಭ್ರಷ್ಟಾಚಾರವೆಂಬ ಮಹಾ ಪಿಡುಗು
 
ಭಾರತದಲ್ಲಿ ದಿನಗಳೆದಂತೆ ಭ್ರಷ್ಟಾಚಾರವೆನ್ನುವುದು ಆಳವಾಗಿ ಬೇರೂರತ್ತಲೇ ಹೋಗುತ್ತಿದೆ. ಈ ರೋಗವು ರಾಜಕಾರಣದ ಮೊಗಸಾಲೆಯನ್ನೂ ಬಿಟ್ಟಿಲ್ಲದಿರುವಾಗ, ನಾಡಿನ ವ್ಯವಸ್ಥೆಗಳನ್ನು ಕಟ್ಟಿ ನಿರ್ವಹಿಸಬೇಕಾದ ಜನಪ್ರತಿನಿಧಿ ಸಭೆಗಳು ಕೂಡಾ ಭ್ರಷ್ಟಾಚಾರವನ್ನು ಇಲ್ಲವಾಗಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲವೆಂಬ ನೋವು ಜನರಲ್ಲಿದೆ. ಇಡೀ ವ್ಯವಸ್ಥೆಯೇ ಭ್ರಷ್ಟಾಚಾರದ ಕ್ಯಾನ್ಸರ್ ತಗುಲಿ ನಲುಗುತ್ತಿರುವಾಗ ಇದಕ್ಕೊಂದು ಮದ್ದು ಬೇಕು ಎಂದು ಜನಾಂದೋಲನ ರೂಪಿಸುವಲ್ಲಿ ಈ ಹಿರಿಯ ಜೀವ ತೊಡಗಿದೆ.
ಜನ್ ಲೋಕಪಾಲ್ ಮಸೂದೆಯನ್ನು ಸರಿಯಾಗಿ ರೂಪಿಸಿ ಜಾರಿಗೊಳಿಸಲು ಪ್ರಧಾನಮಂತ್ರಿಗಳಿಗೆ ಮೊರೆಯಿಡುತ್ತಿದ್ದರೂ ಅದು ಫಲಿಸಲಿಲ್ಲವೆಂದು ಇದೀಗ ಅಣ್ಣಾ ಹಜಾರೆಯವರು ಸಾಯೋವರೆಗೆ ಉಪವಾಸ ಮಾಡುವುದಾಗಿ ಘೋಷಿಸಿ, ಅದರಂತೆ ಸತ್ಯಾಗ್ರಹ ಆರಂಭಿಸಿದ್ದಾರೆ.