ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

18
ಮಾರ್ಚ್

ಎಂ ಎನ್ ಸಿಗಳ ತೆಕ್ಕೆಗೆ ಔಷಧ – ಹೆಲ್ತ್ ಫಾರ್ Only rich!

– ಹರ್ಷ ಕುಗ್ವೆ

ಒಂದು ದೇಶದಲ್ಲಿ ತಯಾರಿಸಲಾಗುವ  ಔಷಧ ಮಾತ್ರೆಗಳು ಆ ದೇಶದ ಜನರ  ಆರೋಗ್ಯಕ್ಕಾಗಿ ಅಲ್ಲದೇ ಕೇವಲ ಬಿಸಿನೆಸ್ ಕಂಪನಿಗಳ,  ಅಥವಾ ಬಹುರಾಷ್ಟ್ರೀಯ ಕಂಪನಿಗಳ ಲಾಭಕ್ಕಾಗಿ ತಯಾರಿಸಲ್ಪಟ್ಟರೆ ಏನಾಗುತ್ತದೆ??

ಇದು ಸಧ್ಯದ  ನಮ್ಮ ಭಾರತದ ಸ್ಥಿತಿ. ಇದಕ್ಕೆ ನಮ್ಮ ರಾಜಕಾರಣಿಗಳ, ಉದ್ಯಮಿಗಳ  ದುರಾಸೆ ಒಂದೆಡೆ ಕಾರಣವಾದರೆ ವಿದೇಶೀ ದೈತ್ಯ ಕಂಪನಿಗಳ ಹಸಿವು ಮತ್ತೊಂದು ಕಾರಣ..
ಇದೆಲ್ಲಾ ಹೇಗಾಯ್ತು ಕೊಂಚ ನೋಡೋಣ.

ನಮ್ಮ ದೇಶವು ಪರಕೀಯರ ನೇರ ಮುಷ್ಠಿಯಿಂದ ಪಾರಾದ ಬಳಿಕ ಹಲವಾರು ಕ್ಷೇತ್ರಗಳಲ್ಲಿ ದಾಪುಗಾಲನ್ನಿಟ್ಟಿತ್ತು. ಔಷಧ ತಯಾರಿಕೆಯ ಉದ್ದಿಮೆಯಲ್ಲಿ ಸಹ ಅದು ಮುಂದುವರೆದ ದೇಶಗಳೂ ಹುಬ್ಬೇರಿಸಿ ನಿಲ್ಲುವಂತೆ  ಅಭಿವೃದ್ಧಿ ಸಾಧಿಸಿತು. ನಮ್ಮ ಸಕರ್ಾರವು ಪಾಲಿಸಿದ ಕೆಲವಾರು ಉತ್ತಮ ಆರ್ಥಿಕ ನೀತಿಗಳಿಂದಾಗಿ ನಮ್ಮ ದೇಶದ ಔಷದೋದ್ಯಮವನ್ನು MNC ಸ್ಪರ್ಧೆಯಿಂದ  ರಕ್ಷಿಸಿ ಅದು ಅಭೂತಪೂರ್ವ ಬೆಳವಣಿಗೆ ಸಾಧಿಸುವಂತೆ ಮಾಡಲಾಗಿತ್ತು.  ಔಷದ್ಯುತ್ಪನ್ನಗಳ ಉತ್ಪಾದನೆಯ ಪ್ರಮಾಣದಲ್ಲಿ ಇಡೀ ಪ್ರಪಂಚದಲ್ಲಿ ನಾವೇ ಮೂರನೇ ಸ್ಥಾನಪಡೆಯುವ ಹಂತಕ್ಕೆ ಈ ಬೆಳವಣಿಗೆ ತಲುಪಿತು. ಮಾತ್ರವಲ್ಲ ಜನರ ಅಗತ್ಯಕ್ಕನುಗುಣವಾಗಿ  ಉತ್ತಮ ಗುಣಮಟ್ಟದ ಔಷಧಿಗಳು ಕಡಿಮೆ ಬೆಲೆಯಲ್ಲಿ ಲಭ್ಯವಾಗುವಂತೆ ಮಾಡಿದ್ದೂ ನಮ್ಮ ಉದ್ದಿಮೆಯ ಹೆಗ್ಗಳಿಕೆ.
2105ರ ಸುಮಾರಿಗೆ ಭಾರತದ ಔಷಧಿ ಮಾರುಕಟ್ಟೆಯಲ್ಲಿ ಒಂದು ವರ್ಷಕ್ಕೆ ನಡೆಯುವ ವಹಿವಾಟು   ಎಷ್ಟು ಗೊತ್ತೇ? ಬರೋಬ್ಬರಿ 90ಸಾವಿರ ಕೋಟಿ!

ಮತ್ತಷ್ಟು ಓದು »

18
ಮಾರ್ಚ್

‘ಕುಂದನಗರಿ’ಯ ಸಮ್ಮೇಳನದ ನೆನಪುಗಳು…!

– ಅರೆಹೊಳೆ ಸದಾಶಿವ ರಾವ್

ಹಾಗೆ ನೋಡಿದರೆ ಬೆಳಗಾವಿಗೆ ನಾನು ಎರಡು ತಿಂಗಳಿಗೊಮ್ಮೆ ಹೋಗುತ್ತಿರುತ್ತೇನೆ. ಹಾಗಾಗಿ ಸಂಪೂರ್ಣ ಅಲ್ಲದಿದ್ದರೂ ಬೆಳಗಾವಿಯ ರಸ್ತೆ ಮತ್ತದರ ದುರವಸ್ತೆಗಳನ್ನು ಆಗಾಗ ಗಮನಿಸಿದ್ದೇನೆ. ಇವತ್ತು ಬೆಳಗಾವಿ ಏನಾದರೂ ನಮ್ಮ ಪ್ರಭುಗಳ ಗಮನ ಸೆಳೆದಿದ್ದರೆ, ಅದಕ್ಕೆ ಮರಾಠಿಗರು ಖಂಡಿತಕ್ಕೂ ಕಾರಣರು! ಏಕೆಂದರೆ ಬೆಳಗಾವಿ ತಮ್ಮದು ಎಂಬ ವಿವಾದವನ್ನು ಸದಾ ಜೀವಂತವಾಗಿಟ್ಟುಕೊಂಡಿರುವವರು ಮರಾಠಿಗರು. ಈ ಹಿನ್ನೆಲೆಯಲ್ಲಿ ನಮ್ಮ ಪ್ರಭುತ್ವ, ಬೆಳಗಾವಿಯನ್ನು ಒಂದು ಕಣ್ಣಿಟ್ಟು ನೋಡುತ್ತಲೇ ಇರುತ್ತದೆ! ಅದಿಲ್ಲವಾಗಿದ್ದರೆ ಬಹುಶ: ಈ ಕುಂದನಗರಿಯೂ  ಉತ್ತರ ಕರ್ನಾಟಕದ ಇತರ ಜಿಲ್ಲೆ-ಪಟ್ಟಣಗಳಂತೆ ನಿರ್ಲಕ್ಷ್ಯದ ಬೇಗುದಿಯಲ್ಲಿ ಕಾಲ ತಳ್ಳುತ್ತಲೇ ಇರುತ್ತಿತ್ತೇನೋ!.

ಅದಿರಲಿ, ಈಗ ವಿಷಯ ಅದಲ್ಲ. ಇಪ್ಪತ್ತೈದು ವರ್ಷಗಳ ನಂತರ ಈ ಕುಂದ ನಗರಿಯಲ್ಲಿ ಎರಡನೆಯ ವಿಶ್ವ ಕನ್ನಡ ಸಮ್ಮೇಳನ ನಡೆಯಿತಲ್ಲ; ಒಂದು ಅಪೂರ್ವ ಅವಕಾಶವೆಂಬಂತೆ, ನಾನೂ ಅದರಲ್ಲಿ ಭಾಗವಹಿಸುವ ಉದ್ದೇಶದಿಂದ ಹೋಗಿದ್ದೆ. ಸಮ್ಮೇಳನದ ಬಗ್ಗೆ, ಅಲ್ಲಿ ಮುಳುಗಿ ಹೋದ ೩೭ಕೋಟಿ ರೂಪಾಯಿಗಳ ಬಗ್ಗೆ ಮಾಧ್ಯಮಗಳು ಮಾತಾಡುತ್ತಲೇ ಇರುವುದನ್ನು ಕೇಳಿದ್ದೀರಿ. ನಾನು ಗಮನಿಸಿದ ಒಂದು ಅಂಶವೆಂದರೆ, ಬೆಳಗಾವಿಗೆ ಕಾಲಿಟ್ಟರೆ ಪ್ರತೀ ರಸ್ತೆಗಳೂ ರಿಪೇರಿಯಾಗಿರುವುದು ಬಿಟ್ಟರೆ, ಪಟ್ಟಣ ಸಿಂಗಾರಗೊಂಡಿರುವುದು ಮಾತ್ರ ಕಣ್ಣಿಗೆ ಕಾಣುತ್ತದೆ.  ಮತ್ತೆ ಈ ಮೂವತ್ತೇಳು ಕೋಟಿ ಎಲ್ಲಿಗೆ ಹೋಗಿದೆ ಎಂಬುದಕ್ಕೆ ಹುಟುಕಾಡಿದರೂ ಏನೂ ಸಿಗುವುದಿಲ್ಲ.

ಇನ್ನು ಕನ್ನಡ ವೆಂದರೆ ಏನು? ಅದರ ಉಳಿವು-ಅಳಿವು  ಎಂದರೆ ಏನು ಎಂಬುದೂ ಪ್ರಶ್ನೆಯಾಗಿ ಕಾಡಿದ್ದು ಸುಳ್ಳಲ್ಲ! ಈ ರೀತಿಯ ದ್ವಂದ್ವಕ್ಕೂ ಕಾರಣವಿದೆ. ಇದು ವಿಶ್ವ ಕನ್ನಡ ಸಮ್ಮೇಳನ. ಬೆಳಗಾವಿಯ ನಗರದ ಪ್ರತೀ ಗೋಡೆಯ ಮೇಲೂ ಕನ್ನಡ ಉಳಿಸಿ-ಬೆಳೆಸಿ ಎಂಬ ಉದ್ಘೋಷವೇ ಕಾಣುತ್ತಿತ್ತು. ಆದರೆ ಇಡೀ ಮೂರುದಿನ ನಡೆದ ಸಮ್ಮೇಳನದಲ್ಲಿ ಈ ಹಿನ್ನೆಲೆಯಲ್ಲಿ ಏನಾದರೂ ಕ್ರಮಗಳನ್ನು ಸರಕಾರ ಆಗಲೀ, ಸಮ್ಮೇಳನ ಸಮಿತಿಯಾಗಿಯಾಗಲೀ ಕೈಗೊಂಡ ಬಗ್ಗೆ ವರದಿಯಾಗಿಲ್ಲ. ಅದೂ ಅಲ್ಲದೇ ಇದೇ ರೀತಿಯ ಸಮ್ಮೇಳನವನ್ನು ಐದು ವರ್ಷಗಳಿಗೊಮ್ಮೆ ನಡೆಸುವ ತೀರ್ಮಾನವನ್ನು ‘ಬಹುಜನರ’ ಬೇಡಿಕೆಯ ಮೇರೆಗೆ ಮುಖ್ಯಮಂತ್ರಿಗಳು ಕೈಗೊಂಡರು. ಅದು ಒಂದು ರೀತಿಯಲ್ಲಿ ಸಂತಸದ ವಿಚಾರವೇ ಸರಿ…..ಆದರೆ…? ಮತ್ತಷ್ಟು ಓದು »

13
ಮಾರ್ಚ್

ಓದೋದೊಂದು, ಮಾಡೋದೊಂದು

ಸುಪ್ರೀತ್, ಬೆಂಗಳೂರು

ಆತ ಕಂಪ್ಯೂಟರ್ ಸೈನ್ಸಿನಲ್ಲಿ ಡಿಗ್ರಿ ಪಡೆದಿರುತ್ತಾನೆ ಆದರೆ ಶೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿರುತ್ತಾನೆ. ಆಕೆ ಟಿಸಿಎಚ್ ಮಾಡಿಕೊಂಡು ಕಾಲ್ ಸೆಂಟರಿನಲ್ಲಿ ದುಡಿಯುತ್ತಿರುತ್ತಾಳೆ. ಈಕೆಯದು ಬಿಕಾಂ ಪದವಿ ಆದರೆ ಕೆಲಸ ಮಾಡುವುದು ಇಂಜಿನಿಯರಿಂಗ್ ಕಂಪೆನಿಯಲ್ಲಿ. ಅವರಿಗೆ ಅರ್ಥಶಾಸ್ತ್ರ, ಸಮಾಜಶಾಸ್ತ್ರಗಳಲ್ಲಿ ಡಾಕ್ಟರೇಟ್ ಇರುತ್ತದೆ, ಜಾಹೀರಾತು ಕಂಪೆನಿಯ ವ್ಯವಸ್ಥಾಪಕರಾಗಿರುತ್ತಾರೆ. ಕೆಲವು ಮಂದಿ ಇಂಜಿನಿಯರಿಂಗ್ ಓದಿರುತ್ತಾರೆ ಪತ್ರಿಕೋದ್ಯಮದ ಗಿರಣಿಗೆ ಬಿದ್ದಿರುತ್ತಾರೆ. ಎಂಬಿಬಿಎಸ್ ಓದಿ ರಾಷ್ಟ್ರ ಜಾಗೃತಿಗಾಗಿ ಸಂಘಟನೆ ಕಟ್ಟಿಕೊಂಡಿರುತ್ತಾರೆ. ಗಮನಿಸುತ್ತಾ ಹೋದರೆ ಹತ್ತರಲ್ಲಿ ಐದು ಮಂದಿ ಓದುವುದೇ ಒಂದು ಮುಂದೆ ಜೀವನದಲ್ಲಿ ಮಾಡುವುದೇ ಮತ್ತೊಂದು!

ಓದಿ ಓದಿ ಮರುಳಾದ!

ಶಿಕ್ಷಣವೆನ್ನುವುದು ಮೂಲಭೂತವಾಗಿ ಶುರುವಾಗಿದ್ದು ಉದ್ಯೋಗ ಹಿಡಿದು ಕಮಾಯಿ ಮಾಡಲಿ ಎನ್ನುವ ಕಾರಣಕ್ಕಲ್ಲ. ಅಕ್ಷರಗಳನ್ನು ಓದಲು, ಬರೆಯಲು ಕಲಿಯುವುದೇ ಶಿಕ್ಷಣದ ಪ್ರಮುಖ ಉದ್ದೇಶವಾಗಿತ್ತು. ಓದು ಬರಹ ಕಲಿತವನಿಗೆ ನಾಗರೀಕತೆಯ ಪರಿಚಯವಾಗಿರುತ್ತದೆ, ಶಿಸ್ತು ರೂಢಿಯಾಗಿರುತ್ತದೆ. ಶಿಕ್ಷಿತ ವ್ಯಕ್ತಿಯು ಮುಂದೆ ಸಮಾಜ ಸತ್ಪ್ರಜೆಯಾಗುತ್ತಾನೆ ಎನ್ನುವುದು ರೂಢಿಗತ ನಂಬಿಕೆಯಾಗಿತ್ತು. ಹೀಗಾಗಿ ಓದಿಗೂ ಹೊಟ್ಟೆ ಪಾಡಿಗಾಗಿ ಹಿಡಿಯುವ ನೌಕರಿಗೂ ಅಂತಹ ಸಂಬಂಧವೇನೂ ಇರಲಿಲ್ಲ. ಅಲ್ಲದೆ, ಇಂದಿನ ಹಾಗೆ ವೃತ್ತಿ ಪರ ಶಿಕ್ಷಣ ಕೋರ್ಸುಗಳ ಹಾವಳಿಯೂ ಇಲ್ಲದ ದಿನಗಳಲ್ಲಿ ಶಿಕ್ಷಣವೆಂದರೆ ದಿನಪತ್ರಿಕೆ ಓದಬಲ್ಲಷ್ಟು, ಪತ್ರ, ಅರ್ಜಿಗಳನ್ನು ಬರೆಯಬಲ್ಲಷ್ಟು, ಕೂಡು, ಕಳೆ, ಗುಣಿಸು ಎನ್ನುವ ಗಣಿತವನ್ನೂ ಕಲಿಯುವುದು ಎಂದೇ ಭಾವಿಸಲಾಗುತ್ತಿತ್ತು. ಮತ್ತಷ್ಟು ಓದು »

11
ಮಾರ್ಚ್

ವಿಶ್ವ ಕನ್ನಡ ಸಮ್ಮೇಳನ – ಏನಿದೆ, ಏನಿರಬೇಕಾಗಿತ್ತು?

ವಸಂತ ಶೆಟ್ಟಿ, ಬೆಂಗಳೂರು

ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನಕ್ಕೆ ಇನ್ನೇನು ಹೊತ್ತು ಎಣಿಕೆ ಶುರುವಾಗಿದೆ. ನಾಟಕ, ಕವನ ವಾಚನ, ಗಮಕ ವಾಚನ, ಕುಣಿತ, ಹಾಡುಗಾರಿಕೆ ಸೇರಿದಂತೆ ನಾಡಿನ ಕಲೆ, ಸಂಸ್ಕೃತಿ ಪ್ರದರ್ಶನಕ್ಕೆ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಅನ್ನುತ್ತೆ ಸಮ್ಮೇಳನದ ವೆಬ್ ಸೈಟ್ ಅಲ್ಲಿರೋ ಕರೆಯೋಲೆ. ಇದಲ್ಲದೇ, ಕೆಲವು ಒಳ್ಳೆಯ ವಿಷಯಗಳ ಬಗ್ಗೆ ಚರ್ಚಾ ಗೋಷ್ಟಿಯನ್ನು ಏರ್ಪಡಿಸಲಾಗಿದೆ ಅಂತಲೂ ಕಂಡೆ. ಕನ್ನಡ, ಕನ್ನಡಿಗ, ಕರ್ನಾಟಕ ಇತಿಹಾಸದಲ್ಲೆಂದೂ ಕಂಡಿರದಂತಹ ಸವಾಲುಗಳನ್ನು ಎದುರಿಸುತ್ತಿರುವ ಜಾಗತೀಕರಣದ ನಂತರದ ಈ ದಿನಗಳಲ್ಲಿ ಇಂತಹ ಸಮ್ಮೇಳನಗಳು ಹೆಚ್ಚಿನ ಮಹತ್ವ ಪಡೆದಿವೆ ಕೂಡಾ. ಈ ಸಮ್ಮೇಳನ ಕರ್ನಾಟಕದ, ಕನ್ನಡಿಗರ ನಾಳೆಗಳನ್ನು ಕಟ್ಟಲು ಆಗಬೇಕಾದ ಕೆಲಸಗಳ ಬಗ್ಗೆ, ಇವತ್ತು ನಾವೆಲ್ಲಿದೀವಿ, ಈ ದಿನ ನಮ್ಮೆದುರು ಇರುವ ಸವಾಲುಗಳೇನು, ನಾವು ಸಾಗಬೇಕಾದ ದಾರಿ ಯಾವುದು, ಎಂತದ್ದು ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚಿಸುವ, ಹೊಸ ದಿಕ್ಕು,ದೆಸೆ ನೀಡುವ ವೇದಿಕೆಯಾಗುತ್ತೆ ಅನ್ನುವುದು ನನ್ನ ನಿರೀಕ್ಷೆಯಾಗಿತ್ತು, ಆದರೆ ಕಾರ್ಯಕ್ರಮದ ಪಟ್ಟಿ ನೋಡಿದಾಗ ಕೆಲ ಮಟ್ಟಿಗೆ ನಿರಾಸೆಯಾಗಿದೆ ಅಂತಲೇ ಹೇಳಬೇಕು. ಜ್ಞಾನಾಧಾರಿತ ಹೊಸ ಜಗತ್ತಿನ ಸವಾಲುಗಳನ್ನು ಎದುರಿಸಿ ಗೆಲ್ಲಲು ಕನ್ನಡಿಗರ ಕಲಿಕೆ, ದುಡಿಮೆಯ ವ್ಯವಸ್ಥೆಗಳನ್ನು ಆದ್ಯತೆಯ ಮೇರೆಗೆ ಚೆನ್ನಾಗಿ ಕಟ್ಟಿಕೊಳ್ಳಬೇಕಾದ ತುರ್ತು ಅಗತ್ಯ ನಮ್ಮ ಮುಂದಿದೆ. ಆದರೆ ಕಾರ್ಯಕ್ರಮದ ಪಟ್ಟಿ ನೋಡಿದ್ರೆ, ಈ ಸಮ್ಮೇಳನ ಹೊಟ್ಟೆಗೆ ಹಿಟ್ಟಿನ ವಿಷಯಗಳಿಗಿಂತ ಹೆಚ್ಚು ಜುಟ್ಟಿನ ಮಲ್ಲಿಗೆಯ ವಿಷಯಗಳತ್ತಲೇ ಗಮನ ಹರಿಸಿದೆಯೆನೋ ಅನ್ನುವಂತಿದೆ !

ಏನಿದೆ?

ಹಾಗಂತ, ಸಮ್ಮೇಳನದಲ್ಲಿ ಪ್ರಯೋಜನವಾಗುವಂತಹ ವಿಷಯಗಳೇ ಇಲ್ಲ ಅಂತಿಲ್ಲ. ಜಾಗತೀಕರಣ, ಮಾರುಕಟ್ಟೆ ಮತ್ತು ಯುವಕರ ಮೇಲೆ ಬೀರಿರುವ ಪ್ರಭಾವದ ಬಗ್ಗೆ ಜಾಗತೀಕರಣ ಕರ್ನಾಟಕ ಅನ್ನುವ ಗೋಷ್ಟಿ, ಗಡಿನಾಡಲ್ಲಿರುವ ಕನ್ನಡಿಗರ ಶಿಕ್ಷಣ ಸವಾಲುಗಳು, ಸಾಮಾಜಿಕ, ಸಾಂಸ್ಕೃತಿಕ ಸ್ಥಿತಿಗತಿಗಳ ಬಗ್ಗೆ ಬೆಳಕು ಚೆಲ್ಲುವ ಗಡಿನಾಡ ಕನ್ನಡಿಗರು ಅನ್ನುವ ಗೋಷ್ಟಿ, ಕನ್ನಡ ತಂತ್ರಾಂಶ, ವಿಜ್ಞಾನ ಶಿಕ್ಷಣದಂತಹ ವಿಷಯಗಳ ಬಗೆಗಿನ ಜ್ಞಾನ-ವಿಜ್ಞಾನ-ತಂತ್ರಜ್ಞಾನ-ಕರ್ನಾಟಕಅನ್ನುವ ಗೋಷ್ಟಿ, ಆಡಳಿತದಲ್ಲಿ ಕನ್ನಡ ಬಳಕೆ ಬಗೆಗಿನ ಕನ್ನಡ ಭಾಷಾ ಬಳಕೆ ಅನ್ನುವ ಗೋಷ್ಟಿ, ಕೃಷಿ ರಂಗ ಎದುರಿಸುತ್ತಿರುವ ಸವಾಲುಗಳ ಬಗೆಗಿನ ಕೃಷಿ-ಸಾಧನೆ ಸವಾಲು ಗೋಷ್ಟಿಗಳು ಈ ಕಾಲಮಾನಕ್ಕೆ ಪ್ರಸ್ತುತವೆನ್ನಿಸುವಂತಹ ಗೋಷ್ಟಿಗಳಾಗಿವೆ. ಇಲ್ಲಿ ಪಾಲ್ಗೊಳ್ಳುತ್ತಿರುವವರು ಅಷ್ಟೇ ಯೋಗ್ಯರು ಅನ್ನುವುದು ಕೂಡಾ ಗಮನಿಸಬೇಕಾದದ್ದು.  ಮತ್ತಷ್ಟು ಓದು »

10
ಮಾರ್ಚ್

ಅವಳೊಂದಿಗೆ ಆ ಭಾಷೆಯೂ ಮಣ್ಣಾಯಿತು!

– ಚಿತ್ರಾ ಸಂತೋಷ್

ಕಾಡುಹಂದಿ ಬೇಟೆ ಅಂದ್ರೆ ಅವಳಿಗಿಷ್ಟ. ದಟ್ಟಾರಣ್ಯದಲ್ಲಿ ಹೆಜ್ಜೆಗೊಂದು ಸಿಗುತ್ತಿದ್ದ ಆಮೆಗಳನ್ನೂ ಅವಳು ಬಿಟ್ಟವಳಲ್ಲ. ತಾನು ಹೋದಲೆಲ್ಲಾ ಬಿಲ್ಲು ಬಾಣಗಳನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿದ್ದ ಆ ಹೆಣ್ಣುಮಗಳು ತನ್ನ ಜೀವನಶಾಲೆಯನ್ನು ತಾನೇ ನಿರ್ಮಿಸಿಕೊಂಡವಳು. ಅವಳು ಹುಟ್ಟಿದ್ದು ಉತ್ತರ ಅಂಡಮಾನ್‌ನ ದಟ್ಟ ಕಾನನದಲ್ಲಿ. ೮೫ ವರ್ಷಗಳ ಹಿಂದೆ ಅವಳು ಹುಟ್ಟಿದಾಗ ಅವಳ ಜೊತೆ ಒಡನಾಡುವ ಸಂಗತಿಗಳಿದ್ದರು. ಸಮಾಜದ ಮುಖ್ಯವಾಹಿನಿ ಅಂದ್ರೆ ಅವಳಿಗೇನೂ ಗೊತ್ತಿಲ್ಲ. ವಿದ್ಯೆಯೆಂಬುವುದರ ನಂಟು ಆ ಕಾಡಿಗಿಲ್ಲ. ಭಾರತದಲ್ಲಿ ಬ್ರಿಟಿಷ್ ಅಧಿಪತ್ಯವಿದ್ದಾಗ ಅಂಡಮಾನನ್ನು ‘ಶಿಕ್ಷಾರ್ಹ ತಾಣ’ವೆಂದು ಪರಿಗಣಿಸಿ, ಸ್ವಾತಂತ್ರಕ್ಕಾಗಿ ಹೋರಾಡಿದ ಅದೆಷ್ಟೋ ಭಾರತೀಯರನ್ನು ಅಲ್ಲಿ ಶಿಕ್ಷೆಗೆ ಗುರಿಪಡಿಸುತ್ತಿದ್ದನ್ನು ಕಣ್ಣಾರೆ ಕಂಡಿದ್ದಾಳೆ. ತನ್ನ ಪರಿವಾರದವರು ಕಳ್ಳಭಟ್ಟಿ ಕುಡಿದು ಎಂಜಾಯ್ ಮಾಡುತ್ತಿದ್ದಾಗ ತಾನೂ ಅವರೊಂದಿಗೆ ಸಂಭ್ರಮಿಸಿದ್ದಾಳೆ. ೨೦೦೪ರಲ್ಲಿ ಅಂಡಮಾನ್ ಪ್ರದೇಶಕ್ಕೆ ಭೀಕರ ಸುನಾಮಿ ಕಾಲಿಟ್ಟಾಗ ೩೫೧೩ ಮಂದಿ ಸಾವನ್ನಪ್ಪಿದ್ದರೂ, ಈಕೆ ಮಾತ್ರ ಬದುಕುಳಿದಿದ್ದಳು. ಇದು ಅವಳ ಅದೃಷ್ಟವೋ ಏನೋ?

ಅಂಥ ಉತ್ಸಾಹದ ಬದುಕು ಕಂಡ ಆ ಕಾಡಿನ ಮಹಿಳೆಯ ಹೆಸರು ಬೋ ಎಸ್‌ಆರ್…
ಅದೇನು ವಿಶೇಷ ಅಂತೀರಾ? ಇತ್ತೀಚೆಗಷ್ಟೇ ಬೋ ಎಸ್‌ಆರ್ ನಿಧನವಾಗಿದ್ದಾಳೆ. ಇದು ಇವಳ ಸಾವು ಮಾತ್ರವಲ್ಲ, ದೇಶದ ಪುರಾತನ ಭಾಷೆಯ ಸಾವು, ಸಾಂಸ್ಕೃತಿಕ ಪರಂಪರೆಯ ಸಾವು ಕೂಡಾ ಹೌದು.

ಬೋ ಎಂದರೆ….

ಬೋ ಎಂಬುವುದು ವಿಶಿಷ್ಟವಾದ ಬುಡಕಟ್ಟು ಭಾಷೆ. ಈ ಭಾಷೆಯ ತವರು ಆಫ್ರಿಕಾ. ೭೦,೦೦೦ ವರ್ಷಗಳ ಹಿಂದೆಯೇ ಬೋ ಎನ್ನುವ ಬುಡಕಟ್ಟು ಜನಾಂಗ ಆಗ್ನೇಯ ಏಷ್ಯಾ ಭಾಗಕ್ಕೆ ವಲಸೆ ಬಂದಿದ್ದರು. ಅಂತೆಯೇ ಅಂಡಮಾನಿನಲ್ಲೂ ಬೋ ಜನಾಂಗ ಅಸ್ತಿತ್ವ ಕಂಡುಕೊಂಡಿತ್ತು. ೧೮೫೮ರಲ್ಲಿ ಅಂಡಮಾನಿನಲ್ಲಿ ಬೋ ಜನಾಂಗಕ್ಕೆ ಸೇರಿದ ಸುಮಾರು ೫ ಸಾವಿರ ಜನರಿದ್ದರು. ಕ್ರಮೇಣ ಅಲ್ಲಿ ಬ್ರಿಟೀಷರು ತಮ್ಮ ಅಧಿಪತ್ಯ ಸ್ಥಾಪಿಸಿದಾಗ ಅಮಾಯಕ ಬೋ ಜನಾಂಗ ಬ್ರಿಟೀಷರ ದಬ್ಬಾಳಿಕೆಗೆ ಬಲಿಯಾದರು. ಸಮಾಜದ ಮುಖ್ಯವಾಹಿನಿಯ ಕುರಿತು ಒಂದಿಷ್ಟೂ ತಿಳಿವಿರದ ಬೋ ಜನರಿಗೆ ರೋಗಗಳು ಬಂದರೂ ಅದಕ್ಕೂ ಸಾವೇ ಪರಿಹಾರ. ಬ್ರಿಟೀಷರ ದಬ್ಬಾಳಿಕೆ ಮತ್ತು ಹೇಳಿಕೇಳದೆ ಬರುವ ಹಲವಾರು ಸಾಂಕ್ರಾಮಿಕ ರೋಗಗಳ ಪರಿಣಾಮ ಬೋ ಜನಾಂಗ ವಿನಾಶದ ಹಾದಿ ಹಿಡಿಯಿತು.
ಕಳೆದ ನಲವತ್ತು ವರ್ಷದಿಂದ ಬೋ ಎಸ್‌ಆರ್ ಅವಳದು ಏಕಾಂಗಿ ಬದುಕು. ಅವಳಿಗೆ ಬರುವುದು ಅದೊಂದೇ ಭಾಷೆ ಬೋ. ಹಾಗಾಗಿ ಸುತ್ತಮುತ್ತಲಿನ ಯಾರ ಜೊತೆಯೂ ಸಂವಹನ ಸಾಧ್ಯವಿರಲಿಲ್ಲ. ೧೯೭೦ರಲ್ಲಿ ಭಾರತ ಸರ್ಕಾರ ಅಂಡಮಾನಿನಲ್ಲಿದ್ದ ಬೋ ಎಸ್‌ಆರ್ ಸೇರಿದಂತೆ ವಿವಿಧ ಬುಡಕಟ್ಟು ಜನಾಂಗಗಳಿಗೆ ಕಾಂಕ್ರೀಟ್ ಮನೆ ಮತ್ತು ೫೦೦ ರೂ. ಪಿಂಚಣಿ ಒದಗಿಸಿತ್ತು. ಆ ಪುಟ್ಟ ಮನೆಯೊಂದೇ ಬೋ ಸಂಸಾರ. ಬಹಳಷ್ಟು ವರ್ಷಗಳ ಹಿಂದೆಯೇ ಗಂಡನನ್ನು ಕಳೆದುಕೊಂಡ ಬೋ ಎಸ್‌ಆರ್‌ಗೆ ಮಕ್ಕಳೂ ಇರಲಿಲ್ಲ. ಜೀವನದ ಕೊನೆ ಗಳಿಗೆಯಲ್ಲಿ ಆಕೆ, ”ನಮ್ಮ ಜನಾಂಗದಲ್ಲಿ ನಾನು ಒಬ್ಬಳೇ ಉಳಿದಿದ್ದೇನೆ. ನಾನು ಕೊನೆಯವಳು ಎಂಬುವುದು ಹೆಮ್ಮೆಯಾಗುತ್ತಿದೆ. ಆದರೆ, ನಾನು ಮತ್ತೆ ಹುಟ್ಟಿದ ಆ ದಟ್ಟಾರಣ್ಯಕ್ಕೆ ಮರಳಬೇಕು. ಈ ನಾಡಿಗಿಂತ ಆ ಕಾಡು ಚೆನ್ನ. ಅದೇ ಮುಳ್ಳುಹಂದಿ, ಆಮೆ ಬೇಟೆಯಾಡಬೇಕು. ಕಾಡಿನೊಂದಿಗೆ ಮತ್ತೆ ನಾನು ಬದುಕಬಲ್ಲೆ. ಕಾಡಿನಲ್ಲಿ ನನ್ನ ಭವಿಷ್ಯ ಇದೆ, ಕಾಡಾದರೂ ನನಗೆ ಸಂಗಾತಿಯಾಗುತ್ತಿತ್ತು…. ”ಎಂದು ಹಂಬಲಿಸುತ್ತಿದ್ದಳಂತೆ. ಮತ್ತಷ್ಟು ಓದು »

7
ಮಾರ್ಚ್

ಹಿರಿಯ ಜೀವದ ಮನ ಆ ಕ್ಷಣ ತಳಮಳಗೊಂಡಿದ್ಯಾಕೆ?

– ನಿಲುಮೆ 
 

Reading between the lines ಎಂಬ ಮಾತನ್ನು ಕೇಳಿರಬಹುದು. ಅಂತ ಮಾತಿಗೆ ಒಳ್ಳೆಯ ಉದಾಹರಣೆ ಚಿದಾನಂದ ಮೂರ್ತಿಯವರ ಪತ್ರ. ಪಾಪ ವಯಸ್ಸಾಯಿತು. ಅದರಿಂದ ಹೀಗೆಲ್ಲ ಬಡಬಡಿಸುತ್ತಿದ್ದಾರೆ ಅಂಥ ಕೆಲವು ಪತ್ರಿಕೆಗಳು ಬರೆದು ಕಾಸಿಗೆ ರಾಜ ಮಾರ್ಗ ಮಾಡಿಕೊಂಡವು. ನಿಜ.ಚಿಮೂ ಅವರಿಗೆ ವಯಸ್ಸಾಯಿತು.ಆದರೆ ಅವರಳೊಗಿನ ಸಂಶೋಧಕನಿಗೆ ಇತಿಹಾಸದ ಕ್ರೂರ ಅಧ್ಯಾಯಗಳ ಅರಿವಿದೆ. ಮೈ ಮರೆತರೆ ಮತ್ತೊಮ್ಮೆ ಇತಿಹಾಸ ಮರುಕಳಿಸಬಹುದೆಂದ ಸಹಜ ಆತಂಕವೂ ಇದೆ. ಹಂಪಿಯ ಬಗ್ಗೆ ಹೋರಾಡಿದವರ ಅರಿವಿಗೆ ದಂಡೆತ್ತಿ ಬಂದು ಧೂಳಿಪಟ ಮಾಡಿದವರ,ರಕ್ಕಸ ತಂಗಡಿಯ ನೆನಪು ಬಾರದಿರಬಹುದೇ? ಭಾವುಕ ಜೀವಿ ಚಿಮೂ ಅವರಿಗೆ ಇಳಿ ವಯಸ್ಸಿನಲ್ಲಿ ಇವೆಲ್ಲ ಇನ್ನೂ ಹೆಚ್ಚಾಗಿ ಕಾಡುತ್ತಿರಬಹುದು,ಅದರಲ್ಲೂ ಮೈ-ಕೈಗೆ ಎಣ್ಣೆ ಸವರಿಕೊಂಡು ಸತ್ಯ ಹೇಳಲು ಬಂದವರ ಕಣ್ಣಿಗೆ ಮಣ್ಣೇರಚಿ ಹಾದಿ ತಪ್ಪಿಸುವ ಜನರ ಮಧ್ಯೆ ಮಾತಾಡುವ ಚಾಣಕ್ಷ ಮಂದಿಯ ನಡುವೆ ದಿಗಿಲಿಗೆ ಬಿದ್ದ ಆ ಹಿರಿಯ ಜೀವದ ತಲ್ಲಣ ನಮಗರಿವಾಗುತ್ತಿಲ್ಲವಾ?
 
ಕೆಲ ದಿನಗಳ ಹಿಂದೆ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ರಾಜ್ಯಪಾಲರು ಹಿರಿಯ ವಿದ್ವಾಂಸ,ಸಂಶೋಧಕ ಚಿಮೂ ಅವರಿಗೆ ಡಾಕ್ಟರೇಟ್ ನಿರಾಕರಿಸಿದಾಗ ಕನ್ನಡ ಸಾರಸ್ವತ ಲೋಕವೇ ರಾಜ್ಯಪಾಲರೆಡೆಗೆ ತಿರುಗಿ ನಿಂತಿತ್ತು. ತಪ್ಪಿನ ಅರಿವಾದ ರಾಜ್ಯಪಾಲರು ಚಿಮೂ ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದು ಆಯಿತು. ಹಾಗೆ ಡಾಕ್ಟರೇಟ್ ಪಡೆದ ನಂತರ ಚಿಮೂ ಅವರು ಪ್ರಜಾವಾಣಿಯಲ್ಲಿ ’ರಾಜ್ಯಪಾಲರು ಇದನ್ನು  ಗಮನಿಸಬೇಕು’ ಅನ್ನುವ ಶೀರ್ಷಿಕೆಯ ಪತ್ರವನ್ನು  ವಾಚಕರ ವಾಣಿಗೆ ಬರೆದ್ರು. ಅದರಲ್ಲಿ ಗೋರಿ ಪಾಳ್ಯದಲ್ಲಿ ಹಸಿರು ಬಾವುಟ ನೋಡಿದ್ದರ ಬಗ್ಗೆ, ಅಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ, ಮಾಂಸದಂಗಡಿಯ ಮುಂದೆ ನಿಂತ ಹಸುವಿಗೆ ಮರುಗುತ್ತ ಇದ್ದಿದ್ದನ್ನ ಹೇಳಿಕೊಂಡಿದ್ದಾರೆ. ಹಾಗೆಯೆ ಅದರಲ್ಲಿ ಮತಾಂತರದ ಬಗ್ಗೆಯು ಮಾತುಗಳಿವೆ.
3
ಮಾರ್ಚ್

ಬದುಕ ‘ಜಾತ್ರೆ’ ಯಲ್ಲಿ ಸಾಹಿತ್ಯದ ಪಾತ್ರ!

ಅರೆಹೊಳೆ ಸದಾಶಿವ ರಾವ್

ಒಂದು ರೀತಿಯ ನವೀಕರಣಗೊಂಡ ಮೂಡ್‌ನೊಂದಿಗೆ ಬರೆಯಕುಳಿತರೆ, ಅದೇಕೋ ‘ಜಾತ್ರೆ’ಬಹಳವಾಗಿ ಕಾಡುತ್ತಿದೆ. ಇದು ಎಲ್ಲೆಡೆಯಲ್ಲಿಯೂ ಜಾತ್ರೆನಡೆಯುವ ಸಂದರ್ಭ. ಅದರಲ್ಲೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಒಂದು ರೀತಿಯ ದೇವ-ದೈವದ ಕೇಂದ್ರವಾಗಿರುವ ಕಾರಣ, ಇದು ಒಂದು ರೀತಿಯ ಜಾತ್ರೆಯ ಸೀಸನ್. ಅದು ಕೋಲ, ಮಾರಿ, ನೇಮ, ರಥೋತ್ಸವ, ಗೆಂಡ ಸೇವೆ,…..ಇತ್ಯಾದಿ ಹೆಸರಿನಿಂದ  ನಡೆಯುವ ವರ್ಷಂಪ್ರತಿ ಧಾರ್ಮಿಕ ಕಾರ್ಯಕ್ರಮಗಳಾದರೆ,  ಅಷ್ಟಬಂಧ, ಬ್ರಹ್ಮಕಲಶೋತ್ಸವ, ಪುನ:ಪ್ರತಿಷ್ಠೆ, ನಾಗಮಂಡಲ…..ಇತ್ಯಾದಿಗಳಿಂದ ಕರೆಯಿಸಿಕೊಳ್ಳುವ ವಿಶೇಷ ಉತ್ಸವಗಳು. ಈಗ ನೀವು ಒಮ್ಮೆ ರಸ್ತೆ ಬದಿ ಹಾದಿರಿ ಎಂದಾದರೆ, ಇಂತಹ ಬ್ಯಾನರ್‌ಗಳು, ಕಟೌಟ್‌ಗಳು, ತೋರಣಗಳು ಎಲ್ಲೆಂದರಲ್ಲಿ ಕಾಣಸಿಕ್ಕಿದರೆ, ಎಲ್ಲಾ ಧಾರ್ಮಿಕ ಕೇಂದ್ರಗಳು ಹೊಸ ಬಣ್ಣ ಬಳಿದುಕೊಂಡು ಸಿಂಗಾರಗೊಂಡು ನಿಂತಿರುತ್ತವೆ. ಇಂತಹ ಉತ್ಸವಗಳು ಇಡಿಯ ಊರಿಗೆ ಊರೇ ಸಂಭ್ರಮಿಸಲು ಕಾರಣವಾಗುತ್ತವೆ. ಈ ಮೂಲಕ ನಾಟಕ, ಯಕ್ಷಗಾನ ಹಾಗೂ ಇನ್ನಿತರ ಕಲಾ ಪ್ರಕಾರಗಳ ಪ್ರದರ್ಶನ, ಊರಿನ ಸಂಭ್ರಮಕ್ಕೆ ಮೆರುಗು ನೀಡಿದರೆ, ಒಂದು ರೀತಿಯ ಜಡ ಹಿಡಿದ ಮನಸ್ಸುಗಳಿಗೆ ನವೀಕರಣವಾಗುವಲ್ಲಿ ಬಹು ಮುಖ್ಯ ಪಾತ್ರವಹಿಸುತ್ತದೆ.

ಇತ್ತೀಚೆಗೆ ನನ್ನೂರಿನ ಜಾತ್ರೆಯಲ್ಲಿ ಎರಡು ದಿನ ಕಳೆದು ಬಂದಾಗ ನನಗನಿಸಿದ್ದು, ಇದೂ ಜೀವನದ ಒಂದು ಅವಿಭಾಜ್ಯ ಅಂಗವೇ ಅಲ್ಲವೇ ಎಂಬುದು. ಅಲ್ಲಿ ಏನುಂಟು ಏನಿಲ್ಲ ಹೇಳಿ? ಬಾಲ್ಯದ ಗೆಳೆಯರ ಪುನರ್ಮಿಲನ, ಕುಡಿಮೀಸೆಯ ದಿನಗಳ ಕನಸಿನ ಮರು ನೆನಪು, ಚಾಪೆ ಹಿಡಿದೇ ಆಟಕ್ಕೆಂದು ಹೋಗಿ ೫ರೂಪಾಯಿಯ ಟಿಕೆಟ್ ಪಡೆದು ಗದ್ದೆಯಲ್ಲಿ ಮಲಗಿ ಬೆಳಗ್ಗೆದ್ದು ಮನೆಗೆ ಮರಳಿದ ದಿನದ ಮೆಲುಕು, ಆಟಿಕೆಯ ಅಂಗಡಿಯ ಮುಂದೆ ನಿಂತು ಇದು ಬೇಕೇ ಬೇಕೆಂದು ರೊಚ್ಚೆ ಹಿಡಿದು ಸಿಗದಾಗ ಮನೆಗೆ ಬಂದು ಅಳುಮೋರೆ ಹಾಕಿ ಹಬ್ಬ ಬಹಿಷ್ಕಾರ ಮಾಡಿದ ದಿನಗಳ ಗಮ್ಮತ್ತು……ಒಂದೇ ಎರಡೇ!. ಇದೆಲ್ಲಾ ಬಾಲ್ಯದ ದಿನಗಳು ಮರಳಿ ಬರಬೇಕೆಂದರೆ ಮತ್ತು ಬದುಕಿನ ಇಂದಿನ ಜಂಜಡಗಳಿಗೆ ತುಸು ನೆಮ್ಮದಿ ಸಿಗಬೇಕೆಂದಿದ್ದರೆ, ವರ್ಷಕ್ಕೊಮ್ಮೆ ನಡೆಯುವ ಹಬ್ಬಕ್ಕೆ ಹೋಗಿಯೇ ಸವಿಯಬೇಕು ಎಂಬುದನ್ನು ಈ ಸಲ ನನ್ನೂರ ಹಬ್ಬ ನನಗೆ ಖಚಿತವಾಗಿಸಿತು.
ಮತ್ತಷ್ಟು ಓದು »

2
ಮಾರ್ಚ್

ಹಾರೋಬೂದಿಯ ವಿರುದ್ಧ ಅಖಾಡಕ್ಕಿಳಿದ ಪೇಜಾವರ ಶ್ರೀ ಮತ್ತು ಸಂಘಟನೆಗಳು

ಪವನ್ ಎಂ ಟಿ

ಎಂಥ ದೊಡ್ಡ ದೊಡ್ಡರೆಲ್ಲ ಬಂದ್ರು, ವೀಡಿಯೋ ಮಾಡಿದ್ರು, ಪತ್ರಿಕೆಯವ್ರು ಬಂದ್ರು ಏನೆಲ್ಲ ಬರೆದ್ರೂ, ಬೂದಿ ಪರೀಕ್ಷೆ ಮಾಡ್ತೀವಿ ಅಂತ ಬಂದ್ರು, ಬೇಕಾದ್ದು ರಿಪೋರ್ಟ್ ಕೊಟ್ರು ಆದ್ರು ಯಾರಿಂದಲೂ ಏನೂ ಮಾಡೋಕೆ ಆಗ್ಲಿಲ್ಲ. ಇನ್ನು ನೀವ್ ವಿಡೀಯೋ ಮಾಡಿ ಏನ್ ಬರೆದ್ರೂ ನಮಗೇನಿಲ್ಲ. ಇದು ಸರ್ಕಾರದ್ದೇ ಪ್ರೋಜೆಕ್ಟ್, ಸರಕಾರದ್ದೇ ಕಂಪೆನಿ. ಏ ಇವರ ಇವರ ಕಾರಿಗೆ ಅಡ್ಡ ನಿಲ್ಲಿಸ್ರೋ. ಕ್ಯಾಮೆರಾ ಕಿತ್ತುಕೊಳ್ಳೋ….”

ಎಂದು ಇತ್ತಿಚೆಗೆ ಉಡುಪಿಯ ಪ್ರತಿಷ್ಠಿತ ಕಂಪೆನಿಯ ಗುತ್ತಿಗೆದಾರನೊಬ್ಬ ಹಾರೋಬೂದಿ ಇರುವ ಸ್ಥಳಕ್ಕೆ ಹೋದ್ರೆ ಈ ರೀತಿ ಧಮ್ಕಿ ಹಾಕುತ್ತಾನೆ. ಇಷ್ಟೆಲ್ಲ ಧೈರ್ಯದಿಂದ ಈ ಗುತ್ತಿಗೆದಾರ ಮಾತಾಡ್ತಾ ಇರಬೇಕಾದ್ರೆ ಅವನ ಹಿಂದೆ ಪ್ರಬಲವಾದ ಕಾಣದ ಕೈ ಇರಬಹುದು ನೀವೆ ಯೋಚಿಸಿ. ಇಂಥ ಎಷ್ಟೋ ಜನರ ಉಪಟಳವನ್ನು ನಮ್ಮ ಜನ ಎಷ್ಟು ದಿನ ಅಂತ ಸಹಿತಾರೇ? ಅದಕ್ಕೆ ನೋಡಿ ಈ ಪ್ರತಿಷ್ಠಿತ ಕಂಪೆನಿ ಮತ್ತು ಅಹಂಕಾರಿಗಳ ವಿರುದ್ಧ ನೊಂದ ಜನತೆ ಚಳುವಳಿಗೆ ಇಳಿದಿದ್ದಾರೆ.

ಯುಸಿಪಿಎಲ್ ವಿರುದ್ಧ ಜನಾಂದೋಲನ”

“ಪೇಜಾವರ ಶ್ರೀ ಹಾರೋಬೂದಿಯಿಂದ ತೊಂದರೆಗೊಳಗಾದವರ ನಿವಾಸಗಳಿಗೆ ಭೇಟಿ, ನಾಗಾರ್ಜುನ ಆಧುನಿಕ ಭಸ್ಮಾಸುರ ಈ ಯೋಜನೆಯ ವಿರುದ್ಧ ಯಾರೇ ಹೋರಾಟ ಮಾಡಿದರೂ ನನ್ನ ಸಂಪೂರ್ಣ ಬೆಂಬಲ ಇದೆ”

ಹಾರೂಬೂದಿ ಅತ್ಯಂತ ವಿಷಕಾರಕ ಅಂಶ ಹೊಂದಿದ್ದು ಪರಿಸರ ಜಾನುವಾರು ಹಾಗೂ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಲಿದೆ- ಪರಿಸರವಾದಿ ಡಾ.ಎನ್.ಎ. ಮಧ್ಯಸ್ಥ ಆತಂಕ”

“ ಕಂಪೆನಿಯನ್ನು ಸ್ಥಗಿತಗೊಳಿಸಲು ಮಾರ್ಚ್ ೫ ರಂದು ದಕ್ಷಿಣಕನ್ನಡ ಉಡುಪಿ ಬಂದ್ ನಡೆಸಲು ನಿರ್ಧಾra

ಇವೆಲ್ಲ ಇತ್ತೀಚೆಗೆ ಪ್ರಜಾವಾಣಿಯಲ್ಲಿ ಮೂಡಿಬಂದ ಸುದ್ದಿಗಳು

ನಿಲುಮೆಯ ಪ್ರಿಯ ಓದುಗರೇ, ಕಳೆದ ಕೆಲವು ದಿನಗಳ ಹಿಂದೆ ನಂದಿಕೂರಿನ ಪ್ರತಿಷ್ಠಿತ ಕಂಪೆನಿಯ ಕುರಿತಂತೆ ಹಾರೋಬೂದಿಯ ನೋಡಿದಿರಾ ಎಂಬ ಲೇಖನ ಪ್ರಕಟವಾಗಿತ್ತು. ಅದರಲ್ಲಿ ಬೂದಿಯಿಂದ್ ಆಗುತ್ತಿರುವ ತೊಂದರೆಯ ಬಗ್ಗೆ ಮತ್ತು ಜನರ ಬಗ್ಗೆ ಹೇಳಲಾಗಿತ್ತು. ಈ ಸಮಸ್ಯೆಯನ್ನು ಬಗೆಹರಿಸಲು ಸಂಘಟನೆ ಮತ್ತು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದರ ಮುಂದುವರಿಕೆಯೆಂಬಂತೆ ಈ ಸಮಸ್ಯೆಯ ವಿರುದ್ಧ ಜನಾಂದೋಲನ ಆರಂಭವಾಗಿದೆ.

ಪೇಜಾವರಶ್ರೀಗಳು ಸೇರಿದಂತೆ ಅನೇಕ ಪ್ರಮುಖರು ಈ ಅಂದೋಲನದಲ್ಲಿ ಪಾಲ್ಗೊಂಡಿದ್ದಾರೆ. ಈ ಆಂದೋಲನ ಪ್ರಾರಂಭವಾಗಿ ನಂದಿಕೂರಿನ ಸುತ್ತಮುತ್ತಲ ಪ್ರದೇಶಗಳಾದ ಎರ್ಮಾಳು, ಕಟ್ಪಾಡಿ, ಉದ್ಯಾವರ ಸೇರಿದಂತೆ ಸುಮಾರು ೫೦ ಕಡ್‌ಗಳಲ್ಲಿ ಪಾದಯಾತ್ರೆ ನಡೆಸಿ ಜನಜಾಗೃತಿ ಮೂಡಿಸಲಾಗಿದೆ. ಅಲ್ಲದೇ ಇದೇ ಮಾರ್ಚ್ ೫ ರಂದು ದಕ್ಷಿಣಕನ್ನಡ ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ. ಈ ಜನಾಂದೋಲನದಲ್ಲಿ ಪಾದಯಾತ್ರೆಯ ಮೂಲಕ ಕಂಪೆನಿಯ ಯೋಜನೆಯ ಅಪಾಯವೆನ್ನು ಬಿಂಬಿಸುವ ಟ್ಯಾಬ್ಲೋ ಹಾಗೂ ಧ್ವನಿಮುದ್ರಿತ ಯಕ್ಷಗಾನ ಪ್ರಸಂಗ, ಕಂಪೆನಿ ವಿರೋಧಿ ಘೋಷಣೆಗಳು, ಭಿತ್ತಿಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಗಿದೆ. ದಕ್ಷೀಣಕನ್ನಡ ಜಿಲ್ಲಾ ಬಂದ್‌ಗೆ ಜಿಲ್ಲೆಗಳ ಪ್ರಮುಖ ಸಂಘಟನೆಗಳಾದ ಮೀನುಗಾರರ ಸಂಘ, ಉಡುಪಿ ತಾಲೂಕು ಗ್ರಾಮ ಪಂಚಾಯಿತಿ ಒಕ್ಕೂಟ, ವಿಜಯಕುಮಾರ ಹೆಗ್ಡೆ ನೇತೃತ್ವದ ರೈತಸಂಘ, ಉದ್ಯಾವರ ಗ್ರಾಮ ಸಂರಕ್ಷಣಾ ಸಮಿತಿ ಮೊದಲಾದ ಸಂಘಟನೆಗಳು ಬೆಂಬಲ್ ಸೂಚಿಸಿವೆ.

ಇದೆಲ್ಲ ಬೆಳವಣಿಗೆಗಳನ್ನು ನೋಡಿದಾಗ ನೊಂದ ಜನರಿಗೆ ನ್ಯಾಯ ದೊರೆಯಬಹುದೆಂಬ ಆಶಾಕಿರಣ ಮೂಡುತ್ತಿದೆ. ಈಗ ಹೋರಾಟ ಮುಂದಾಗಿರುವ ಸಂಘಟನೆಗಳು ಯಾವುದೇ ಒತ್ತಡಕ್ಕೆ ಮಣಿಯದೇ ಜನಪರವಾದ ಹೋರಾಟ ಮಾಡಿ ಮುಂದೆ ಬರಬಹುದಾದ ದೊಡ್ಡ ಗಂಡಾಂತರವನ್ನು ತಪ್ಪಿಸಬೇಕಾಗಿದೆ. ಇದಲ್ಲದೇ ಈ ಹೋರಾಟಕ್ಕೆ ಸ್ಥಳೀಯ ಜನರ ಬೆಂಬಲವೂ ಅತ್ಯಗತ್ಯ.

ಚಿತ್ರ ಕೃಪೆ: deccanherald.com, thecanaratimes.com

26
ಫೆಬ್ರ

ನಾವು ಸ್ವತಂತ್ರರೇ..?

ಮಮತ ಕಂಡ್ಲೂರು

ಅಂದು ಸಿಕ್ಕಿತ್ತು ಮುಕ್ತಿ

ಕಳಚಿತ್ತು ಆ ಪರರ ಕಪಿಮುಷ್ಟಿ

ಅಂತೂ ಇಂತೂ ಸ್ವಾತಂತ್ರ್ಯ ಬಂತೆಂದರು ಹಿರಿಯರು

ತನ್ನ ಕರುಳಕುಡಿಗಳಿವರೆಲ್ಲ ಒಂದೆಂಬ ಭಾವದಿ

ಇಹರೆಂದು ‘ಭರತಮಾತೆ’ಯ ಎದೆಯು ಮಿಡಿದಿತ್ತು.

ಆಹಾ, ಎಂಥಾ ಪರಮಾನಂದವಾಗುತ್ತಿದೆ.

ನಮ್ಮದೇ ನೆಲ,ಜಲ,ಗಾಳಿ ಕೊನೆಗೆ ನಮ್ಮದೇ ‘ಸರಕಾರ’.

ನೆಮ್ಮದಿಯ ಉಸಿರು ಬಿಡುತ್ತಿದ್ದಂತೆ,

ಆರಂಭವಾಯ್ತು ಪ್ರಗತಿಯ ಅರಸುವಿಕೆ!

ಜನ್ಮತಾಳಿದುವು ಕಟ್ಟಡಗಳು ಗೆದ್ದಲಗೂಡಿನ ತೆರದಿ.

ಬಲಿಯಾಗಿ ಪಕ್ಷಪಕ್ಷಗಳ ಸ್ವಾರ್ಥರಾಜಕೀಯಕ್ಕೆ

ಅನಾಥಭಾವದಿ ನರಳುವಂತಾಯ್ತು ಬಡಜನತೆ.

ಬೆಳೆದವು ಸರಕಾರದ ಯೋಜನೆಗಳು ಹನುಮಂತನ ಬಾಲದಂತೆ…… ಮತ್ತಷ್ಟು ಓದು »

23
ಫೆಬ್ರ

ವೋಟ್ ಬ್ಯಾಂಕ್ ಜಪ – ಕಾನೂನು ಸುವ್ಯವಸ್ಥೆ ನೆಪ !

– ರಾಕೇಶ್ ಶೆಟ್ಟಿ
ಈ ಲೇಖನವನ್ನ ಬರೆದಿದ್ದು ಕಳೆದ ವರ್ಷ ರಾಜೀವ್ ಗಾಂಧೀಯವ್ರ ಹುತಾತ್ಮರಾದ ದಿನದಂದು,ಆದರೆ ಇಂದಿಗೂ ಇದು ಪ್ರಸ್ತುತವೇ,ಬಹುಶಃ ಈ ಕಾಂಗ್ರೆಸ್ಸ್ ಸರ್ಕಾರ ಈ ಅವಧಿ ಮುಗಿದ ಮೇಲೂ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ್ರೆ ಇನ್ನ ೬-೭ ವರ್ಷ ಈ ಲೇಖನ ಪ್ರಸ್ತುತವೇ! ಯಾವ್ದಪ್ಪ ಇದು ಅಂತ ವಿಷ್ಯಾ ಅಂತೀರಾ,ಅದೇ ಸ್ವಾಮಿ ಅಫ಼್ಜಲ್ ಗುರು ಅನ್ನೋ ಉಗ್ರಗಾಮಿಯನ್ನ ಗಲ್ಲಿಗೇರಿಸೊದು.ಮೊನ್ನೆ ಕಸಬ್ಗೆ ಹೈ-ಕೊರ್ಟ್ ಗಲ್ಲು ಶಿಕ್ಷೆ ನೀಡಿದೆ ಅಂದಾಗ ನನಗೆ ಮತ್ತೆ ಮತ್ತೆ ನೆನಪಾಗಿದ್ದು ಅಫ಼್ಜಲ್! (ಹಳೇ ಲೇಖನದಲ್ಲಿ ಕಸಬ್ ಇರಲಿಲ್ಲ ಈಗ ಅವನು ಸೇರಿಕೊಂಡಿದ್ದಾನೆ.ಮತ್ತೆ ಇದೇ ಲೇಖನವನ್ನ ಪ್ರಕಟಿಸುವ ದಿನ ಬಾರದಿರಲಿ 😦 )

ಇಂದು ರಾಜೀವ್ ಗಾಂಧೀ ಹುತಾತ್ಮರಾದ ದಿನ.ಆದರೆ ನನಗೆ ಈಗ ನೆನಪಾಗುತ್ತಿರುವವರು ಅವರಮ್ಮ ಇಂದಿರಾ.’ಇಂದಿರಾ ಗಾಂಧಿ!’ ಬಹುಷಃ ಸ್ವತಂತ್ರ ಭಾರತದ ಇತಿಹಾಸದಲ್ಲಿ ದೇಶದ ರಕ್ಷಣೆಯ ವಿಷಯದಲ್ಲಿ ಯಾವ ರಾಜಿ ಮಾಡಿಕೊಳ್ಳದೆ ಮುನ್ನುಗ್ಗುತಿದ್ದ ಅವರಂತ ಇನ್ನೊಬ್ಬ ಪ್ರಧಾನಿ ಈ ದೇಶಕ್ಕೆ ಮತ್ತಿನ್ಯಾರು ಸಿಕ್ಕಿಲ್ಲ ಅಂದರೆ ಅದು ಉತ್ಪ್ರೇಕ್ಷೆಯಾಗಲಾರದು!

ಮತ್ತಷ್ಟು ಓದು »