ಮಂಗಳಮುಖಿಯರಿಗೂ ದಕ್ಕಿದ ಹಕ್ಕುಗಳು
ಭಾರತದಲ್ಲಿ ಫೆಬ್ರವರಿ 9ರಿಂದ ಪ್ರಾರಂಭವಾಗಿರುವ ಜನಗಣತಿಯಲ್ಲಿ ಸ್ತ್ರೀ ಪುರುಷರ ಜೊತೆಗೆ ಪ್ರಥಮ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತರನ್ನೂ ಸೇರಿಸಲು ನಿರ್ಧರಿಸಿರುವುದನ್ನು ಸ್ವಾಗತಿಸಿರುವುದಾಗಿ ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಹೇಳಿದೆ.
ಗುರುವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಜನಗಣತಿ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಕಾರ್ಯಕರ್ತರು ಸರಕಾರಕ್ಕೆ ತಾವು ಸಲ್ಲಿಸುತ್ತಿರುವ ಬೇಡಿಕೆಗಳ ಬಗ್ಗೆ ವಿವರ ನೀಡಿದರು.
ಭಾರತದಲ್ಲಿ 1872ರಿಂದ ಜನಗಣತಿ ಪ್ರಾರಂಭವಾಗಿ ಪ್ರತಿ 10 ವರ್ಷಗಳಿಗೊಮ್ಮೆ ನಡೆಯುತ್ತಿದೆ. ಸರಣಿಯಲ್ಲಿ 15ನೆಯ ಹಾಗೂ ಸ್ವಾತಂತ್ರ್ಯ ಬಳಿಕದ 7ನೇ ಜನಗಣತಿ ಇದಾಗಿದೆ. ಈಗಾಗಲೇ ಜನಗಣತಿಗೆ ಸಕಲ ಸಿದ್ದತೆಗಳಾಗಿದ್ದು ಸ್ತ್ರೀ ಪುರುಷರ ಜೊತೆಗೆ ಭಾರತ ಇತಿಹಾಸದಲ್ಲೇ ಪ್ರಥಮ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತರನ್ನು ದಾಖಲಿಸಲು ಮುಂದಾಗಿದೆ. ಇದನ್ನು ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಸ್ವಾಗತಿಸುತ್ತದೆ ಎಂದು ವೇದಿಕೆ ಹರ್ಷ ವ್ಯಕ್ತಪಡಿಸಿತು.
ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ : ಈ ವೇದಿಕೆಯು ಕರ್ನಾಟದ ಲೈಂಗಿಕ ಅಲ್ಪಸಂಖ್ಯಾತರ ಸಮುದಾಯದವರ ರಾಜ್ಯಮಟ್ಟದ ಪ್ರಜಾಸತ್ತಾತ್ಮಕ ಸಂಸ್ಥೆಯಾಗಿದ್ದು, 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಾರ್ಯನಿರತವಾಗಿದೆ. ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಲೈಂಗಿಕ ಅಲ್ಪಸಂಖ್ಯಾತರ ಮಾನವ ಹಕ್ಕುಗಳನ್ನು ಸಂರಕ್ಷಿಸುವುದು ಮತ್ತು ಅವರ ಪರವಾಗಿ ಸರ್ಕಾರ, ಮಾದ್ಯಮ, ಸರ್ಕಾರೇತರ ಸಂಸ್ಥೆಗಳು ಮತ್ತು ಸಮುದಾಯ ಆಧಾರಿತ ಸಂಸ್ಥೆಗಳೊಂದಿಗೆ ವಕಾಲತ್ತು ನಡೆಸುತ್ತಿದೆ. ವೇದಿಕೆಯು ಲೈಂಗಿಕ ಅಲ್ಪಸಂಖ್ಯಾತರ ವಿಷಯದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವುದು, ಸಾಮಾಜಿಕ ಚಳವಳಿಗಳೊಂದಿಗೆ ಕೈ ಜೋಡಿಸಿ ಸಾರ್ವಜನಿಕ ಕಾರ್ಯಕ್ರಮಗಳ ಮುಖಾಂತರ ಲೈಂಗಿಕ ಅಲ್ಪಸಂಖ್ಯಾತರ ಪರವಾಗಿ ಸಮಾಜ ಬದಲಾವಣೆ ಕೆಲಸ ಮಾಡುತ್ತಿದೆ. ಮತ್ತಷ್ಟು ಓದು 
ಕಾಂಗ್ರೆಸ್ ಸಂಸದ ಭಾರತಕ್ಕೆ ಸೇರಿದವನಲ್ಲವೇ?
ಮಹೇಶ ಪ್ರಸಾದ ನೀರ್ಕಜೆ
ಅರುಣಾಚಲ ಪ್ರದೇಶ ಪ್ರವಾಸದಲ್ಲಿರುವ ಬಾಬಾ ರಾಮ್ ದೇವ್ ಸಮಾವೇಶಕ್ಕೆ ಬಂದಿದ್ದ ಅಲ್ಲಿನ ಕಾಂಗ್ರೆಸ್ ಸಂಸದ ನಿನಾಂಗ್ ಎರಿಂಗ್ ಬಾಬಾ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂಬುದು ಇತ್ತೀಚಿನ ಸುದ್ದಿ. “ಯು ಬ್ಲಡಿ ಇಂಡಿಯನ್”, “ಸಾಲೆ ಕುತ್ತೇ, ಮೈಕ್ ತೋಡ್ ದೂಂಗಾ, ಸ್ಟೇಜ್ ಫೋಡ್ ದೂಂಗಾ, ಯೋಗಾ ಕರ್ನೇ ಆಯೀ ಹೇ, ಯೋಗಾ ಕರ್. ಕರಪ್ಷನ್ ಕೆ ಬಾರೇ ಮೇ ಬೋಲೇಗಾ ತೋ ಮಾರ್ ಡಾಲೂಗಾ!” ಇತ್ಯಾದಿ. ಈ ಬಗ್ಗೆ ಸಾಕಷ್ಟು ವಿವರಗಳು ಸಿಗುತ್ತಿವೆ ಅಂತರ್ಜಾಲದಲ್ಲಿ. ನಮ್ಮ ಟಿವಿ ಮಾಧ್ಯಮಗಳು ಭಾರತ ಬಾಂಗ್ಲಾದೇಶ ಕ್ರಿಕೆಟ್ ಪಂದ್ಯದಲ್ಲಿ ಹೇಗೆ ಭಾರತ ಬಾಂಗ್ಲಾದೇಶದ ಮೇಲೆ ಸೇಡು ತೀರಿಸಿಕೊಂಡಿತು ಎಂದು ವಿಮರ್ಷಿಸುವುದರಲ್ಲಿ ಬ್ಯುಸಿಯಾಗಿದ್ದವು. ಅವುಗಳಿಗೆ ಹೇಗೆ ಈಶಾನ್ಯ ಭಾರತದ ಮಂದಿ ಹೇಗೆ ಭಾರತದ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಬೇಕಿಲ್ಲ. ಇರಲಿ. ಈಗ ಪ್ರಶ್ನೆಯೇನೆಂದರೆ ಕಾಂಗ್ರೆಸ್ ಸಂಸದ ಬಾಬಾರನ್ನು “ಯೂ ಬ್ಲಡಿ ಇಂಡಿಯನ್”ಅನ್ನಬೇಕಿದ್ದರೆ ಆತ ಇಂಡಿಯನ್ ಅಲ್ಲವೇ? ಎಲ್ಲಿಯವನು ಆತ? ಚೈನಾದವನೇ? ಅಥವಾ ಬೋಡೋ ದೇಶದವನೇ? ಅಥವಾ ಬೇರೆ ಪಾಶ್ಚಿಮಾತ್ಯ ದೇಶದವನೇ?
ಮತ್ತಷ್ಟು ಓದು 
ಓಶೋ ವಿಚಾರಗಳು ಪ್ರಾಕ್ಟಿಕಲ್ಲಾಗಿವೆಯೇ?
– ಸುಪ್ರೀತ್.ಕೆ.ಎಸ್
ಈ ಲೇಖನದ ಉದ್ದೇಶ ಓಶೋ ಮೇಲಿನ ನನ್ನ ಪ್ರೀತಿ, ಮುನಿಸು, ಅಭಿಮಾನ, ಆತನ ಬಗೆಗಿರುವ ಬೆರಗು, ಕುತೂಹಲ, ಅನುಮಾನ, ಅಸಹ್ಯಗಳನ್ನು ಬರೆದಿರಿಸುವುದು, ಆ ಮೂಲಕ ನನ್ನೊಳಗೊಂದು ಸ್ಪಷ್ಟ ನಿಲುವನ್ನು ರೂಪಿಸಿಗೊಳ್ಳುತ್ತಾ ಹೋಗುವುದು ಎಂದಾಗಿತ್ತು. ಓಶೋನ ವಿಚಾರಗಳನ್ನು ನಾನೆಷ್ಟೇ ಮೆಚ್ಚಿದರೂ
ಅವನ್ನು ಯಥಾವತ್ತಾಗಿ ಬ್ಲಾಗಿಗೆ ಹಾಕುವುದು ವ್ಯರ್ಥ ಶ್ರಮ ಎನ್ನಿಸಿ ಸುಮ್ಮನಾದೆ. ಹಾಗೆ ನೋಡಿದರೆ ಅಂತರ್ಜಾಲದಲ್ಲಿ ಓಶೋ ಸಾಹಿತ್ಯಕ್ಕೆ ಕೊರತೆಯೇನೂ ಇಲ್ಲ. ಆತನ ಪ್ರತಿಯೊಂದು ಭಾಷಣ, ಪುಸ್ತಕಗಳು ಅಂತರ್ಜಾಲದಲ್ಲಿ ಲಭ್ಯವಿವೆ. ಕನ್ನಡದಲ್ಲಿಯೂ ಓಶೋ ವಿಚಾರಗಳಿಗಾಗಿಯೇ ಮೀಸಲಾದ ಪತ್ರಿಕೆಯಿದೆ. ಇಂಗ್ಲೀಷಿನಲ್ಲಿ ತುಂಬಾ ಸರಳವಾಗಿರುವ ಪ್ರವಚನಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಹೊರಟರೆ ನಮ್ಮ ಶ್ರದ್ಧೆಯೆಂಬ ಕಲ್ಮಷವೇ ಸೇರಿಕೊಂಡು ಭಾಷಾಂತರ ಮೂಲಕ್ಕಿಂತ ಹೆಚ್ಚು ಕ್ಲಿಷ್ಟಕರವಾಗಿಬಿಡುತ್ತದೆ. ಮೇಲಾಗಿ ಓಶೋ ಇಂಥದ್ದೊಂದು ವಿಷಯದ ಬಗ್ಗೆ ಎಂದು ತಯಾರಾಗಿ ಮಾತಾಡಿದವನಲ್ಲ. ತನ್ನ ಸಂನ್ಯಾಸಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೋದ. ಒಂದೊಂದು ಪ್ರವಚನದಲ್ಲೂ ಬೇರೆ ಬೇರೆ ಆಯಾಮಗಳಲ್ಲಿ ವಿಷಯಗಳನ್ನು ವಿವರಿಸುತ್ತಾ ಹೋಗುವ ಆತನ ಶೈಲಿಯನ್ನು ಅನೇಕ ವೇಳೆ ನಾವು ವಿರೋಧಾಭಾಸ ಎಂದು ಭಾವಿಸುತ್ತೇವೆ.ಯೇಸುವಿನ ಬಗ್ಗೆ ಇದುವರೆಗೂ ನಾನು ಕೇಳಿರುವ ಪ್ರವಚನಗಳಲ್ಲಿ ಒಂದಕ್ಕಿಂತ ಒಂದು ಭಿನ್ನವಾದ, ಕೆಲವೊಂದು ವೇಳೆ ವೈರುಧ್ಯಗಳಂತೆ ಕಾಣುವ ಹಾಗೆ ಆತ ಮಾತನಾಡಿದ್ದಾನೆ. ಹೀಗಾಗಿ ಓಶೋ ಚಿಂತನೆ ಎಂಬುದು ನನ್ನೆದುರು ಸಮುದ್ರದ ಹಾಗೆ ನಿಂತಂತೆ ಭಾಸವಾಗುತ್ತದೆ. ಕಲ್ಲು ಸಕ್ಕರೆಯ ದೊಡ್ಡ ಬಂಡೆಯೆದುರು ನಿಂತಂತೆ ಅನ್ನಿಸುತ್ತದೆ. ಹೀಗಾಗಿ ಆತನ ಪ್ರವಚನಗಳನ್ನು ಯಥವಾತ್ತಾಗಿ ಭಾಷಾಂತರಿಸಿ ಬ್ಲಾಗಿಗೆ ಹಾಕುವುದಕ್ಕಿಂತ ಆತನ ಪ್ರೇರಣೆಯಿಂದ ನಾನು ಕಂಡುಕೊಂಡ ಸತ್ಯ ಯಾವುದು, ಆತ ನನ್ನಲ್ಲಿ ಹುಟ್ಟುಹಾಕಿದ ವಿಚಾರಗಳು ಯಾವುವು, ಅವು ನನ್ನೊಳಗೆ ಮಾಡಿದ ಪ್ರಭಾವಗಳೇನು ಎಂಬುದರ ಬಗ್ಗೆ ಬರೆಯುತ್ತೇನೆ. ಮತ್ತಷ್ಟು ಓದು 
ಹಾರೋ ಬೂದಿಯ ನೋಡಿದಿರಾ?
ಪವನ್ ಎಂ ಟಿ
ಒಂದು ದಿನ ಮನೆಯಲ್ಲಿ ಬಿದ್ದಿರುವ ಧೂಳನ್ನು ಗುಡಿಸದೇ ಇದ್ದರೇನೆ ಕಿರಿಕಿರಿ ಆಗ್ತಾ ಇರುತ್ತೆ. ಹಾಗಿರುವಾಗ ಹೇಗೆ ಇದ್ರೂ ಧೂಳಿನ ಒಳಗೆ ಇರಬೇಕಂದ್ರೆ ಹೇಗಾಗಬಹುದು?
ದಿನನಿತ್ಯದ ಸಣ್ಣ ಸಂಗತಿಯೇ ಹೀಗಾದರೆ ಉಡುಪಿ ಜಿಲ್ಲೆಯ ಪಡುಬಿದ್ರೆಯ ನಂದಿಕೂರು ಗ್ರಾಮದ ಸುತ್ತಮುತ್ತಲಿನ ಜನರ ಸ್ಥಿತಿ ನೆನಪಿಸಿಕೊಂಡರೇ ಮೈ ಜುಮ್ ಎನ್ನುತ್ತದೆ. ಕಾರಣವಿಷ್ಟೆ. ಪಡುಬಿದ್ರಿ ಸಮೀಪದಲ್ಲಿ ಇತ್ತೀಚೆಗೆ ಬೃಹತ್ ಕಂಪೆನಿಯೊಂದು ತನ್ನ ಕಾರ್ಯಾರಂಭ ಮಾಡಿದೆ. ಅದರ ಆರಂಭದ ಸಂದರ್ಭದಲ್ಲೇ ತೀವ್ರ ಪ್ರತಿರೋಧ ಇತ್ತಾದರೂ ಹಣವಂತರ ಮುಂದೆ ಈ ಚಳುವಳಿ ಸೋತು ಸುಣ್ಣವಾಯಿತು. ಸಮಾಜ ಸೇವೆ ಮಾಡುತ್ತೇವೆಂದು ಹೇಳಿ ಮತ ಪಡೆದ ಜನಪ್ರತಿನಿಧಿಗಳು ಈ ಕಂಪೆನಿಯ ರಕ್ಷಣೆಗೆ ನಿಂತರು. ಇದೀಗ ಕಂಪೆನಿಯು ತನ್ನ ಹತ್ತು ಶೇಕಡಾ ಕೆಲಸ ಆರಂಭ ಮಾಡಿದೆ ಅಷ್ಟೇ. ಆದರೆ ಅದು ಕೊಟ್ಟ ಹೊಡತಕ್ಕೆ ಇಲ್ಲಿನ ಸ್ಥಳೀಯ ಜನತೆ ತತ್ತರಿಸುತ್ತಿದೆ. ಇಲ್ಲಿನ ಕಾರ್ಖಾನೆಯು ಉಗುಳುತ್ತಿರುವ ತ್ಯಾಜ್ಯದ ಧೂಳಿನಿಂದ ಅನೇಕ ರೀತಿಯ ಶಾರೀರಿಕ ತೊಂದರೆಗಳನ್ನು ಇಲ್ಲಿನ ಪ್ರಜೆಗಳು ಅನುಭವಿಸುತ್ತಿದ್ದಾರೆ. ತನ್ನದಲ್ಲದ ತಪ್ಪಿಗೆ ಮಕ್ಕಳು ಮಹಿಳೆಯರು ಸೇರಿದಂತೆ ಚರ್ಮ, ಶ್ವಾಸಕೋಶ ಸಂಬಂಧಿ ರೋಗಗಳಿಂದ ಬಳಲುತ್ತಿದ್ದಾರೆ. ಮತ್ತಷ್ಟು ಓದು 
ಒಲವೆಂಬ ವಿಸ್ಮಯ!
ಈ ಪ್ರೀತಿ ಅಂದರೆ ಏನು?
ಹಾಗಂತ ಕೇಳಿ ನೋಡಿ ಪ್ರೀತಿಯಲ್ಲಿ ಬಿದ್ದವರಿಗೆ ಮಾತನಾಡಲು ಪದಗಳೇ ಸಿಕ್ಕುವುದಿಲ್ಲ. ಎಂದೂ ಪ್ರೀತಿಸಿರದವರಿಗೆ ಮಾತನಾಡಲಿಕ್ಕೆ, ವಾದಿಸುವುದಕ್ಕೆ ಸಾವಿರ ಸಾವಿರ ಸಂಗತಿಗಳು ಸಿಕ್ಕುತ್ತವೆ. ನೂರಾರು ಥಿಯರಿಗಳು ಕೈಗೆ ಎಟುಕುತ್ತವೆ. ಹತ್ತಾರು ಶ್ರೇಷ್ಠ ಚಿಂತಕರು ಹೇಳಿದ ಸಿದ್ಧಾಂತಗಳು ನೆರವಿಗೆ ಬರುತ್ತವೆ. ಆದರೆ ಪ್ರೀತಿಯಲ್ಲಿ ಮುಳುಗಿದವರನ್ನು ಕೇಳಿ, ಅವರಿಗೆ ಮಾತೇ ಬರದು, ಅವರು ಪ್ರೀತಿ ಕೊಡಮಾಡುವ ಮಧುರ ಅನುಭೂತಿಯನ್ನು ಸವಿಯುವುದರಲ್ಲಿ ಮಗ್ನರಾಗಿರುತ್ತಾರೆ, ಮಾತು ಮರೆತಿರುತ್ತಾರೆ.
ಧರ್ಮವೆಂದರೆ ಏನು, ದೇವರು ಇದ್ದಾನಾ? ಅಂತೆಲ್ಲಾ ಕೇಳಿದಾಗ ದೈವತ್ವದ ಅನುಭವವನ್ನು, ತನ್ನನ್ನೇ ತಾನು ಕಳೆದುಕೊಳ್ಳುವ ಮಗ್ನತೆಯನ್ನು ಎಂದೂ ಕಂಡಿರದವ ಮಾತ್ರ ಉಗ್ರವಾಗಿ ವಾದ ಮಾಡಬಲ್ಲ. ದೇವರಿದ್ದಾನೆ, ಅವನನ್ನು ನಂಬದವರು ದುರುಳರು ಎಂದು ಅಬ್ಬರಿಸಬಲ್ಲ. ದೇವರು ಎಂಬುದು ನಮ್ಮ ದೌರ್ಬಲ್ಯ, ನಮಗೆ ನಾವು ಮಾಡಿಕೊಳ್ಳುವ ವಂಚನೆ ಎಂದು ಉಪದೇಶಿಸಬಲ್ಲ. ಆದರೆ ದೇವರನ್ನು ಅನುಭವಿಸಿದವ ಮಾತ್ರ ಯಾವ ಮಾತನ್ನೂ ಆಡದೆ ಮೌನವಾಗಿ ಹಿಮಾಲಯದ ನಿಶ್ಯಬ್ಧ, ನಿರ್ಮಾನುಶ ಗುಹೆಗಳಲ್ಲಿ ಧ್ಯಾನಿಸುತ್ತಿರುತ್ತಾನೆ. ಖಾಲಿಯಾದ ಡಬ್ಬಗಳು ಜೋರಾಗಿ ಸದ್ದು ಮಾಡುತ್ತಾ ಬಡಿದುಕೊಳ್ಳುತ್ತಿರುತ್ತವೆ! ಎಂದಿನಂತೆ!
ಎರಡು ವಿಪರೀತಗಳು
ಪ್ರೀತಿಯ ಅನುಭವವನ್ನು ಹಂಚಿಕೊಳ್ಳುವಾಗ, ಪ್ರೀತಿಯನ್ನು ವ್ಯಾಖ್ಯಾನಿಸಲು ಕೂರುವಾಗ ನಾವು ಎರಡು ವಿಪರೀತಗಳಿಗೆ ಹೋಗುವ ಅಪಾಯವಿರುತ್ತದೆ. ಪ್ರೀತಿಯನ್ನು ತೀರಾ ಭಾವುಕವಾಗಿ ವರ್ಣಿಸುತ್ತಾ, ಪ್ರೀತಿ ಈ ಜಗತ್ತಿನದ್ದೇ ಅಲ್ಲ. ಅದು ಇಂದ್ರಿಯಗಳಿಗೆ ನಿಲುಕದ್ದು, ಅದು ಎಂಥಾ ವಿರೋಧವನ್ನಾದರೂ ಎದುರಿಸಬಲ್ಲದು. ಇಡೀ ಪ್ರಪಂಚವನ್ನೇ ಬೇಕಾದರೂ ಎದುರು ಹಾಕಿಕೊಂಡು ಪ್ರೀತಿ ಬದುಕಬಲ್ಲದು. ಪ್ರೀತಿಗೆ ಹಣ, ಅಂತಸ್ತಿನ ಹಂಗು ಇಲ್ಲ. ಅದು ಮುಖ ನೋಡಿ, ಭವಿಷ್ಯವನ್ನು ಆಲೋಚಿಸಿ ಪ್ರೀತಿಗೆ ಬೀಳಿಸುವುದಿಲ್ಲ. ಪ್ರೀತಿಯೆಂಬುದು ಒಂದು ಪವಾಡ. ನಮ್ಮ ನಿಯಂತ್ರಣವೇ ಇಲ್ಲದ ಆದರೆ ನಮ್ಮೆಲ್ಲರನ್ನೂ ನಿಯಂತ್ರಿಸುವ ಅಗೋಚರವಾದ ಶಕ್ತಿ ಪ್ರೀತಿ. ಪ್ರೀತಿಸಿದವರಿಗೆ ಪ್ರೀತಿಯೇ ದೇವರು. ಪ್ರೀತಿಗಿಂತ ದೊಡ್ಡದು ಅವರಿಗೆ ಬೇರೇನೂ ಕಾಣುವುದಿಲ್ಲ. ನಮ್ಮ ಜೀವನದ ಏಕೈಕ ಗುರಿಯೇ ಪ್ರೀತಿ. ಅಂತೆಲ್ಲಾ ಭಾವುಕವಾಗಿ ಪ್ರೀತಿಯ ಅಗಾಧತೆಯನ್ನು ಮೆರೆಸುವ ಭರದಲ್ಲಿ ವಾಸ್ತವದಿಂದ ದೂರಾಗುವ, ತೀರಾ ಎಮೋಶನಲ್ ಆಗುವ ಅಪಾಯವಿದೆ. ಮತ್ತಷ್ಟು ಓದು 
ನಾಸ್ತಿಕನಾಗೋದು ಅಂದ್ರೆ….
ಅಂದು ಕೊಂಡ ತಕ್ಷಣ ಆಯಿತೆ? ನಾವು ನಮ್ಮೆಲ್ಲ ಕಷ್ಟಗಳನ್ನು ಪರಿಪಾಟಲುಗಳನ್ನು ದೇವರ ತಲೆಗೆ ಹಾಕಿ ಒಂದು ಕ್ಷಣ ನೆಮ್ಮದಿಯ ನಿಟ್ಟುರಸಿರು ಬಿಟ್ಟುಬಿಡುತ್ತೇವೆ. ಆದರೆ ಆ ಅಧಾರದ ಬಗ್ಗೆಯೇ ಅಪನಂಬಿಕೆ ಇರುವ ನಾಸ್ತಿಕರ ಕಥೆಯೇನು? ಒಂದೆಡೆ ತಲೆಯಲ್ಲಿನ ಒತ್ತಡಗಳನ್ನು ನಿವಾರಿಸಿಕೊಳ್ಳಲು ಇರುವ ಆಧಾರ ತಪ್ಪಿತು. ಮತ್ತೊಂದೆಡೆ ದೇವರನ್ನು ನಂಬದೇ ಇರುವುದರಿಂದ ಆಗುವ ಭಯಂಕರ ಸಮಸ್ಯೆಗಳ ಬಗ್ಗೆ ಜನರು ಹೇಳುವ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಪುಕ್ಕಲನಾಗಿದ್ದರೆ ದೇವರೆ ಗತಿ!! ಒಟ್ಟಾರೆ ಸಾಕಷ್ಟು ಮನೋದಾರ್ಢ್ಯವಿಲ್ಲದೆ ನಾಸ್ತಿಕನಾಗಲು ಸಾಧ್ಯವಿಲ್ಲ. ನಾನು ದೇವರನ್ನು ನಂಬುವುದಿಲ್ಲ ಎಂದು ಹೇಳುವುದು ಸುಲಭ. ಆದರೆ ಇಡೀ ಜೀವನವೆಲ್ಲ ಹಾಗೆಯೇ ಬದುಕುವುದು ಇದೆಯಲ್ಲ ಅದು ನಿಜಕ್ಕೂ ಚಾಲೆಂಜಿಂಗ್.
ನಮ್ಮ ‘ಅವಸ್ಥೆಯ’ ಹಿಂದೆ, ನಮ್ಮ ಮನಸ್ಸು ಕೆಲಸ ಮಾಡುತ್ತಿರುತ್ತದೆ. ಈ ಮನಸ್ಸು ತನ್ನ ಒಳಬೇಗುದಿಗಳನ್ನು ಕಡಿಮೆ ಮಾಡಿಕೊಳ್ಳಲು ಹಲವಾರು ಉಪಾಯಗಳನ್ನು ಹುಡುಕಿಕೊಂಡಿರುತ್ತದೆ. ಒಂದರ್ಥದಲ್ಲಿ ಸೇಫ್ಟಿ ವಾಲ್ವ್ ನ ಹಾಗೆ. ಮನುಷ್ಯನಿಗೆ ಆಗಾಗ ಕಾಡುವ ಒಂಟಿತನ, ಬೇಸರ, ಅಭದ್ರತೆ ಇತ್ಯಾದಿಗಳನ್ನು ಪರಿಹಾರ ಮಾಡಿಕೊಳ್ಳಲು ಇರುವ ಏಕೈಕ ಉಪಾಯ ಅದನ್ನು ವರ್ಗಾಯಿಸುವುದು. ಆಗ ಆ ಕ್ಷಣಕ್ಕಾದರೂ ಆ ವಿಷಯದಿಂದ ಮುಕ್ತಿ ಸಿಗುತ್ತದೆ. ಈ ವಿಷಯದಲ್ಲಿ ದೇವರು ದಯಾಮಯಿ. ನಮಗೆ ಯಾವಾಗಲೂ ಇಂಥ ಸಂದರ್ಭದಲ್ಲಿ ಸಹಾಯಕ್ಕೆ ಒದಗಿ ಬರುತ್ತಾನೆ. ಮತ್ತಷ್ಟು ಓದು 
ಮದರ್ ತೆರೇಸಾ ಸೋಗುಗಾತಿ ಎಂದವನು ಓಶೋ!!!
ದೂರದ ಅಲ್ಬೇನಿಯಾದಲ್ಲಿ ಹುಟ್ಟಿದ ಅಗ್ನೆಜ್ ಗಾಂಡ್ಜೆ ಬೊಜಾಕ್ಜಿಯು ಎಂಬ ಬಾಲಕಿ ಭಾರತದ ಕೊಳಚೆ ಪ್ರದೇಶಗಳ ರಾಜಧಾನಿ ಎಂದು ಹೆಸರುವಾಸಿಯಾಗಿದ್ದ ಕೊಲ್ಕತ್ತಾಗೆ ಕ್ರೈಸ್ತ ನನ್ ಆಗಿ ಆಗಮಿಸಿ ಕುಷ್ಠರೋಗಿಗಳ, ಅನಾಥ ಮಕ್ಕಳ ಪಾಲಿಗಷ್ಟೇ ಅಲ್ಲದೆ ಇಡೀ ಜಗತ್ತಿಗೆ ಮದರ್ ತೆರೆಸಾ ಎಂದು ಪರಿಚಿತಳಾದಳು. ಭಾರತದ ಕೊಳಚೆ ಪ್ರದೇಶಗಳ ವಾಸಿಗಳ ಏಳ್ಗೆಗಾಗಿ ಶ್ರಮಿಸಿದ್ದಕ್ಕಾಗಿ ನೊಬೆಲ್ ಬಹುಮಾನವನ್ನೂ ಪಡೆದಳು – ಇದಿಷ್ಟು ನಾವು ಆಕೆಯ ಬಗ್ಗೆ ತಿಳಿದ ವಿಚಾರಗಳು. ಆದರೆ ಗಾಂಧಿ ಇಂದ ಬುದ್ದನವರೆಗೂ, ಆಧ್ಯಾತ್ಮದಿಂದ ಲೈಂಗಿಕತೆಯವರೆವಿಗೂ ಎಲ್ಲವನ್ನೂ, ಎಲ್ಲವನ್ನೂ ತನ್ನ ಮಾತುಗಳಲ್ಲಿ ಹಿಡಿದು ಹೊಸ ಅರ್ಥ ಕೊಡುವ ಓಶೋ ರಜನೀಶ್ ಮದರ್ ತೆರೆಸಾ ಬಗ್ಗೆ ಬೇರೆಯದೇ ರೀತಿಯಾದ ಅಭಿಪ್ರಾಯ ವ್ಯಕ್ತಪಡಿಸುತ್ತಾನೆ. ನೊಬೆಲ್ ಪ್ರಶಸ್ತಿಯಿಂದ ಪ್ರಖ್ಯಾತಿಯನ್ನು ಪಡೆದ ತೆರೆಸಾರನ್ನು, ಸೋಗುಗಾರ್ತಿ, ಕಪಟಿ ಹಾಗೂ ಹಿಪೋಕ್ರಿಟ್ ಎಂದು ಕರೆಯುತ್ತಾನೆ. ತನ್ನ ಅಭಿಪ್ರಾಯಗಳು ವಿಪರೀತವಾಗಿರುವಂತೆ ನೋಡಿಕೊಳ್ಳುತ್ತಿದ್ದ ರಜನೀಶನ ಅಭಿಪ್ರಾಯವನ್ನು ಅಕ್ಷರಶಃ ಒಪ್ಪುವುದು ಯಾರಿಗೂ ಸಾಧ್ಯವಿಲ್ಲವಾದರೂ ಆತನ ದೃಷ್ಟಿಕೋನದ ಬೆಳಕಿನಲ್ಲಿ ನಮ್ಮ ತಿಳುವಳಿಕೆಯನ್ನು, ಅಭಿಪ್ರಾಯಗಳನ್ನು ಪುನರ್ವಿಮರ್ಶಿಸಿಕೊಳ್ಳುವುದು ನಮಗೆ ಉಪಯುಕ್ತವಾಗಬಹುದು. ತನ್ನ ಪ್ರವಚನವೊಂದರಲ್ಲಿ ರಜನೀಶ್ ತೆರೆಸಾರನ್ನು ಅವಲೋಕಿಸಿದ ಪರಿ ಇಂತಿದೆ:
ಮತ್ತಷ್ಟು ಓದು 
ಗುಬ್ಬಿ ಮೇಲೆ ಬ್ರಹ್ಮಾಸ್ತ್ರ…!
ಸಾಮೂಹಿಕ ಆತ್ಮಹತ್ಯೆ: ಮಲೆಕುಡಿಯರ ಬೆದರಿಕೆ, ನಿಲ್ಲದ ಮಲೆಕುಡಿಯರ ಮೇಲಿನ ದೌರ್ಜನ್ಯ,
ಬಲಾತ್ಕಾರದಿಂದ ಎಬ್ಬಿಸಿದರೆ ಪ್ರಾಣತ್ಯಾಗ, ಸತ್ತರೂ-ಬದುಕಿದರೂ ಇಲ್ಲಿಯೇ: ಮಲೆಕುಡಿಯರ ಶಪಥ
ಪ್ರಜಾವಾಣಿ ಪತ್ರಿಕೆಯಲ್ಲಿ ಜನವರಿ ತಿಂಗಳ ಕೊನೆಯ ಕೆಲವು ದಿನಗಳಲ್ಲಿ ಬಂದ ಪ್ರಮುಖ ಸುದ್ದಿಗಳು. ಇವೆಲ್ಲಾ ‘ಕಾನೂನು ಪ್ರಕಾರವಾಗಿ ಎತ್ತಂಗಡಿ ಮಾಡಿಸಿದ್ದೇವೆ’ ಎಂದು ಹೇಳುತ್ತಿರುವ ಅಧಿಕಾರಿಗಳ ವಿರುದ್ಧವಾಗಿ ಮನೆ ಕಳೆದುಕೊಂಡ ಸುಲ್ಕೇರಿಯ ಮಲೆಕುಡಿಯರು ದು:ಖಭರಿತ ಅಸಹಾಯಕತೆಯ ದನಿ. ಇಷ್ಟಾದರೂ ಅಲ್ಲಿನ ಕಾಂಗ್ರೆಸ್ ಶಾಸಕರು ‘ಸುಲ್ಕೇರಿ ನಾಯ್ದಿಗುರಿಯಲ್ಲಿ ಒಕ್ಕಲೆಬ್ಬಿಸಿರುವ ಪ್ರಕರಣ ಕಾನೂನು ಪ್ರಕಾರವೇ ನಡೆದಿದೆ. ಸಂಸದರು, ಮಾಜಿ ಶಾಸಕರು ಹಾಗೂ ಬಿಜೆಪಿ ಮುಖಂಡರಿಂದ ನಾನು ಪಾಠ ಕಲಿಯಬೇಕಾಗಿಲ್ಲ. ನಾನು ಘಟನಾ ಸ್ಥಳಕ್ಕೆ ಕಾಲಿಡುವುದಿಲ್ಲ. ತಾಕತ್ತಿದ್ದರೆ ಅವರು ನನ್ನನ್ನು ಅಲ್ಲಿಗೆ ಬರುವಂತೆ ಮಾಡಲಿ’ಎಂದು ಘೋಷಿಸಿದ್ದಾರೆ. (ಪ್ರ.ವಾ) ಮತ್ತಷ್ಟು ಓದು 
ಸಂಶೋಧನೆಯ ಸತ್ಯಕ್ಕೆ ಸಂದ ಜಯ: ಚಿಮೂ.ಗೆ ಗೌರವ ಡಾಕ್ಟರೇಟ್ ನೀಡಲು ಒಪ್ಪಿಗೆ
ಕನ್ನಡದ ಹಿರಿಯ ಸಂಶೋಧಕರಾದ ಡಾ.ಎಂ. ಚಿದಾನಂದ ಮೂರ್ತಿಯವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ನೀಡಲು ನಿರಾಕರಿಸಿದ್ದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕೊನೆಗೂ ಗೌರವ ಡಾಕ್ಟರೇಟ್ ನೀಡಲು ಸಮ್ಮತಿಸಿದ್ದಾರೆ. ಕನ್ನಡಿಗರ, ಸಾಹಿತಿಗಳ, ಸಂಘಟನೆಗಳ ಒತ್ತಾಯಕ್ಕೆ ಒಪ್ಪಿಗೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಚರ್ಚ್ ಮೇಲಿನ ದಾಳಿಯ ಕುರಿತು ನ್ಯಾಯಮೂರ್ತಿ ಸೋಮಶೇಖರ್ ಆಯೋಗವು ನೀಡಿದ ವರದಿಯನ್ನು ಚಿದಾನಂದಮೂರ್ತಿಯವರು ಸಮರ್ಥಿಸಿದ್ದಾರೆ. ಅಲ್ಲದೇ ಡಾಕ್ಟರೇಟ್ ನೀಡಲು ಸಾಹಿತ್ಯಿಕ ಸಾಧನೆಗಳ ಜೊತೆಗೆ ಸಾಮಾಜಿಕ ಕಾಳಜಿಯೂ ಮಾನದಂಡ ಎಂದು ಹೇಳುವ ಮೂಲಕ ಗೌರವ ಡಾಕ್ಟರೇಟ್ ಗೆ ಹೊಸ ಮಾನದಂಡವೊಂದನ್ನು ಸೇರ್ಪಡೆಗೊಳಿಸಿದ್ದರು.
ರಾಜ್ಯಪಾಲರ ಈ ನಿರ್ಧಾರವನ್ನು ಸಾಹಿತಿಗಳು, ಹಲವು ಕನ್ನಡಪರ ಸಂಘಟನೆಗಳು, ಕನ್ನಡ ಪ್ರೇಮಿಗಳು ವಿರೋಧಿಸಿದ್ದರು. ಚಿದಾನಂದಮೂರ್ತಿಯವರನ್ನು ಕೋಮುವಾದಿಯೆಂದು ಸಹ ಹೇಳುವಲ್ಲಿ ರಾಜ್ಯಪಾಲರು ಹಿಂದೆ ಬಿದ್ದಿರಲಿಲ್ಲ. ಇದನ್ನು ತೀವ್ರವಾಗಿ ವಿರೋಧಿಸಿದ್ದ ಸಾಹಿತ್ಯ ಪ್ರೇಮಿಗಳು, ಸಂಶೋಧನಾ ಆಸಕ್ತರು ಇಂದು ರಾಜಭವನದ ಮುಂದೆ ಪ್ರತಿಭಟನೆ ನಡೆಸಿದ್ದರು.
ನಿನ್ನೆ ಮುಕ್ತಾಯಗೊಂಡ 77ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿಯೂ ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ತಮ್ಮ ನಡುವಿನ ವೈಚಾರಿಕ ಭಿನ್ನತೆಗಳನ್ನು ಮರೆತು ಕನ್ನಡ ಸಂಶೋಧಕನಿಗೆ ಸಲ್ಲಬೇಕಿದ್ದ ಸ್ಥಾನಮಾನಗಳನ್ನು ಕೊಡಿಸುವಲ್ಲಿ ಎಲ್ಲ ಕನ್ನಡ ಸಾಹಿತಿಗಳು ಒಂದಾದದ್ದು ಮತ್ತು ಒಕ್ಕೊರಲಿನಲ್ಲಿ ಆಗ್ರಹಪಡಿಸಿದ್ದು ವಿಶೇಷವಾಗಿತ್ತು. ಮತ್ತಷ್ಟು ಓದು 
ಮಾಜಿ ಸೈನಿಕರ ಅಳಲು : ಸ್ವಲ್ಪ ಕನ್ಸರ್ನ್ ತೋರಿಸಿಯಪ್ಪಾ..
– ಹರ್ಷ ಕುಗ್ವೆ
ನಾವು ಭಯೋತ್ಪಾದಕ ದಾಳಿಯಾದಾಗ ಸೈನ್ಯವನ್ನು, ಸೈನಿಕರನ್ನು ಹಾಡಿ ಹೊಗಳುತ್ತೇವೆ, ಕಾರ್ಗಿಲ್ ನಂತ ಯುದ್ಧವಾದಾಗ ಸಿಯಾಚಿನ್ ಹಿಮದಲ್ಲಿ ಕುಳಿತ ಸೈನಿಕರು ನಮಗೆ ನೆನಪಾಗುತ್ತಾರೆ. ಆದರೆ ಉಳಿದ ಸಮಯದಲ್ಲಿ?. ಒಬ್ಬ ಸೈನಿಕನ ಸೇವೆಯನ್ನು ಸ್ಮರಿಸಲು ನಮಗೆ ಆತನ ಶವವೇ ಸಿಗಬೇಕೇ ಎಂಬ ಪ್ರಶ್ನೆಯನ್ನು ಹಾಕಿಕೊಳ್ಳೋಣ. ಒಂದಷ್ಟು ವರ್ಷ ಯಾವುದೂ ಯುದ್ಧವೇ ನಡೆಯದಿದ್ದಲ್ಲಿ ಅವರನ್ನು ನೆನೆಸಿಕೊಳ್ಳುವ ಮಾತು ದೂರವೇ ಸರಿ. ನಮ್ಮನ್ನು ಇಲ್ಲಿ ನಮ್ಮ ನಮ್ಮ ಬಂಗಲೆ, ಮನೆಗಳಲ್ಲಿ ಬೆಚ್ಚಗಿಡಲು ಸೈನಿಕರು ಗಡಿಗಳಲ್ಲಿ, ಪರ್ವತಗಳ ಹಿಮದಲ್ಲ್ಲಿ, ಸಮುದ್ರಗಳ ಅಲೆಗಳಲ್ಲಿ ದಿನನಿತ್ಯ ಪಡುತ್ತಿರುವ ಶ್ರಮ ನಮಗೆಂದೂ ಅರಿವಾಗುದೇ ಇಲ್ಲ.
‘ಸಮಾನ ಶ್ರೇಣಿಗೆ ಸಮಾನ ಪೆನ್ಶನ್’ ನೀತಿಯನ್ನು ನಿವೃತ್ತ ಸೈನಿಕರಿಗೆ ಅಳವಡಿಸಿ ಎಂಬ ಬೇಡಿಕೆಯನ್ನಿಟ್ಟು ಸಾವಿರಾರು ಸೈನಿಕರು ಬೀದಿಗಿಳಿಯುವವರೆಗೂ ನಮ್ಮ ಸರ್ಕಾರಗಳು ಒಪ್ಪಿಕೊಂಡಿರಲೇ ಇಲ್ಲ. ಬದಲಿಗೆ ಹಾಗೆ ಮಾಡಲು ಸಕರ್ಾರಕ್ಕೆ ಹಣದ ಕೊರತೆಯಾಗುತ್ತದೆ ಎಂಬ ಸಬೂಬು ಹೇಳುತ್ತಾ ಬಂದಿದ್ದರು. ಆದರೆ ಸಂಸತ್ತಿನ, ಅಥವಾ ವಿಧಾನಸೌಧದ ಅಧಿವೇಶನಗಳಲ್ಲಿ ಒಂದು ಸಣ್ಣ ಚರ್ಚೆಯೂ ಇಲ್ಲದೇ ತಮ್ಮ ವೇತನಗಳನ್ನು ಬರೋಬ್ಬರಿ ಏರಿಸಿಕೊಂಡು ಬಿಟ್ಟಿದ್ದರು. ಅದು ಸರ್ಕಾರಕ್ಕೆ ಯಾವ ಹೊರೆಯನ್ನೂ ಉಂಟು ಮಾಡಲಿಲ್ಲ.










