ವಿಷಯದ ವಿವರಗಳಿಗೆ ದಾಟಿರಿ

Posts from the ‘ಸುಳ್ಸುದ್ದಿ’ Category

20
ಆಗಸ್ಟ್

ಮಲ್ಟಿಪ್ಲೆಕ್ಸ್ ಗಳಲ್ಲಿನ್ನು ಕನ್ನಡ ರೀ-ಮೇಕ್ ಚಿತ್ರಗಳ ಪ್ರದರ್ಶನ ಕಡ್ಡಾಯ!

– ಪ್ರವೀಣ್ ಕುಮಾರ್ ಮಾವಿನಕಾಡು

Nilume Sulsuddi - Kannada Film Dubbingರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ರೀ ಮೇಕ್ ಚಿತ್ರಗಳ ಪ್ರದರ್ಶನ ಮಾಡಲೇಬೇಕು ಎಂದು ಮಲ್ಟಿಪ್ಲೆಕ್ಸ್ ಮಾಲೀಕರಿಗೆ ಸಿ.ಎಂ.ತಾಕೀತು ಮಾಡಿದ್ದಾರೆ.ಅಲ್ಲದೇ ಟಿಕೆಟ್ ದರ ಕೂಡ ಕಡಿಮೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.ಅಷ್ಟೇ ಅಲ್ಲದೇ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ರೀಮೇಕ್ ಚಿತ್ರ ಪ್ರದರ್ಶನ ಮತ್ತು ಅದರ ದರ ನಿಗದಿ ಮಾಡುವ ಸಂಬಂಧ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವರವರ ನೇತೃತ್ವದಲ್ಲಿ ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳು ನಿರ್ಮಾಪಕರಿಗೆ ಭರವಸೆ ನೀಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಡಬ್ಬಿಂಗ್ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ತಮ್ಮ ಇನ್ನೂ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕನ್ನಡ ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಕಳೆದ ೧೦ ದಿನಗಳಿಂದ ಸರಣಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ನೂರಾರು ನಿರ್ಮಾಪಕರನ್ನು ಖುದ್ದು ಮುಖ್ಯಮಂತ್ರಿಗಳೇ ಭೇಟಿ ಮಾಡಿ ತುರ್ತುಸಭೆ ನಡೆಸಿದ ಸಂದರ್ಭದಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.ಇದರಿಂದ ಕನ್ನಡಿಗರೂ ಮಲ್ಟಿಪ್ಲೆಕ್ಸ್ ಗಳಿಗೆ ಹೋಗಬಹುದು” ಎಂದು ಚಲನಚಿತ್ರ ನಿರ್ಮಾಪಕರ ಸಂಘದ ಸದಸ್ಯ R.S.ಬಾಬು ಹರ್ಷ ವ್ಯಕ್ತಪಡಿಸಿದರು.

ಮತ್ತಷ್ಟು ಓದು »

6
ಆಗಸ್ಟ್

ಯಾಕೂಬ್ ಮೆಮನ್ ಗಲ್ಲಿಗೆ ಕಂಬನಿ ಮಿಡಿದ ಜೀವಪರ ಮನಸ್ಸುಗಳು

– ಪ್ರವೀಣ್ ಕುಮಾರ್,ಮಾವಿನಕಾಡು

Nilume Sulsuddi - Yakoob Menonಗಲ್ಲಿಗೇರಿ ಸತ್ತ 1993 ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ,ನತದೃಷ್ಟ ಭಯೋತ್ಪಾದಕ ಯಾಕೂಬ್ ಮೆಮನ್ ನ ಸ್ಮರಣಾರ್ಥ ಹಾಳ್ ಟೌನ್ ನಲ್ಲಿ ಇಂದು ನಡೆದ ಸಂತಾಪ ಸೂಚಕ ಸಭೆಯಲ್ಲಿ ಭಾರತದ ನ್ಯಾಯ ವ್ಯವಸ್ಥೆಯ ವಿರುದ್ಧ ರಾಜ್ಯದ ಹಲವು ಪ್ರಮುಖ ಜೀವಪರ ಮನಸ್ಸುಗಳ ಆಕ್ರೋಶ ಸ್ಫೋಟಗೊಂಡಿತು.

ಆತನನ್ನು 257 ಜನರ ಸಾವಿಗೆ ಕಾರಣನೆನ್ನಲಾಗುತ್ತಿದೆ.ಒಂದು ವೇಳೆ ಅಂದು ಸ್ಥಳದಲ್ಲಿ ಆ 257 ಜನ ಇಲ್ಲದಿರುತ್ತಿದ್ದರೆ ಆತ ಕೊಲೆಗಾರನಾಗಲು ಹೇಗೆ ಸಾಧ್ಯವಾಗುತ್ತಿತ್ತು?ಆದ್ದರಿಂದ ಆ ಘಟನೆಗೆ ಆ 257 ಜನ ಮತ್ತು ಗಾಯಗೊಂಡ ವ್ಯಕ್ತಿಗಳೇ ಕಾರಣವೇ ಹೊರತೂ ಯಾಕೂಬ್ ಮೆಮನ್ ಅಲ್ಲ.257 ಜನ ಮಾಡಿದ ತಪ್ಪಿಗೆ ಅಮಾಯಕನೊಬ್ಬನನ್ನು ನಮ್ಮ ವ್ಯವಸ್ಥೆಯೇ ನೇಣು ಬಿಗಿದು ಕೊಂದು ಹಾಕಿತು ಎಂದು ಕರ್ನಾಟಕ ರಾಜ್ಯದ ಹಿರಿಯ ಬುದ್ಧಿಜೀವಿ ಬಾಯ್ಕಟ್ ಬೀಬಿ ಆಕ್ರೋಶ ವ್ಯಕ್ತಪಡಿಸಿದರು.

ಆತನಿಗೆ ಕ್ಷಮಾದಾನ ನೀಡಿದ್ದರೆ ಈ ರಾಷ್ಟ್ರ ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬ ಶಕ್ತಿಯುತ ಸಂದೇಶವನ್ನು ಜಗತ್ತಿಗೆ ಸಾರುವ ಅವಕಾಶವಿತ್ತು!ಅನ್ಯಾಯವಾಗಿ ಭಾರತ ಅಂತಹಾ ಸುವರ್ಣಾವಕಾಶವನ್ನು ಕಳೆದುಕೊಂಡಿತು ಎಂದು ಕರ್ನಾಟಕ ರಾಜ್ಯ ಕಾರ್ಯಮರೆತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಾಗೂ ಸದ್ಯದ ಪ್ರಗತಿಪರಬುದ್ಧಿಜೀವಿಪತ್ರಕರ್ತರಾಜಕಾರಣಿಯೊಬ್ಬರು ವ್ಯಾಖ್ಯಾನಿಸಿದರು.”ಮನುಷ್ಯರನ್ನು ಗಲ್ಲಿಗೇರಿಸುವುದು ಈ ದೇಶವನ್ನು ಸುರಕ್ಷಿತವಾಗಿಸುವುದಿಲ್ಲ ಬದಲಾಗಿ ನಮ್ಮನ್ನು ಕೆಳಕ್ಕೆ ನೂಕುತ್ತದೆ” ಎಂದು ಅವರು ಪ್ರತಿಪಾದಿಸಿದರು. ಕೇಂದ್ರದಲ್ಲಿ ನಾವು ಬೆಂಬಲಿಸುತ್ತಿರುವ ಸರ್ಕಾರವಿದ್ದಿದ್ದರೆ ಖಂಡಿತಾ ಇಂತಹಾ ಘಟನೆಗಳು ನಡೆಯಲು ಬಿಡುತ್ತಿರಲಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಮತ್ತಷ್ಟು ಓದು »

5
ಆಗಸ್ಟ್

ಸುಳ್ಸುದ್ದಿ : ಎಲ್ಲಾ ಡಿ-ದರ್ಜೆಯ ಹುದ್ದೆಗಳನ್ನು ರದ್ದು ಮಾಡಲು ಸರ್ಕಾರದ ಮಹತ್ವದ ನಿರ್ಧಾರ

– ರಾಘವೇಂದ್ರ ಸುಬ್ರಹ್ಮಣ್ಯ

dantavillada_kathegalu_nilumeಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ಸಲಹೆಕಾರರು ಇತ್ತೀಚೆಗೆ ಕೊಟ್ಟ ಸಲಹೆಯೊಂದನ್ನು ಅಗತ್ಯಕ್ಕಿಂತ ಗಂಭೀರವಾಗಿ ಪರಿಗಣಿಸಿರುವ,ಘನಸರ್ಕಾರವು,ಎಲ್ಲಾ ಡಿ-ದರ್ಜೆಯ ಗುಮಾಸ್ತರ ಹುದ್ದೆಗಳನ್ನು ರದ್ದು ಮಾಡಲು ನಿರ್ಧರಿಸಿದ್ದಾರೆ.ಇತ್ತೀಚೆಗೆ ಸಮಾರಂಭವೊಂದರಲ್ಲಿ ಸಲಹೆಕಾರರು,”ಜಮೀನ್ದಾರರು ಹೆಚ್ಚಿನ ಜಮೀನಿನ ಹಿಡುವಳಿಯಿಟ್ಟುಕೊಂಡು, ಕೂಲಿ ಕಾರ್ಮಿಕರಿಲ್ಲ ಎಂದು ಗೋಳಾಡುವ ಬದಲು, ಎಷ್ಟೋ ಬೇಕೋ ಅಷ್ಟಿಟ್ಟುಕೊಂಡು, ಉಳಿದ ಹೆಚ್ಚಿನ ಜಮೀನಿದ್ದರೆ ಬಡವರಿಗೆ ಕೊಟ್ಟರೆ, ಕೂಲಿಕಾರ್ಮಿಕರ ಸಮಸ್ಯೆ ಬರುವುದಿಲ್ಲ. ಬಡವರು ಕೂಲಿ ಕೆಲಸಕ್ಕೆ ಬರಬೇಕೆಂಬ ಧೋರಣೆಯೇ ಅಮಾನುಷ ಮತ್ತು ಅಮಾನವೀಯವಾದದ್ದು” ಎಂದಿದ್ದರು.

ಈ ಸುದ್ಧಿಯನ್ನು ಕೇಳಿ, ಅದೇ ಮಟ್ಟದಲ್ಲಿ ಯೋಚಿಸುತ್ತಿದ್ದ ಮು.ಮಂಗಳಿಗೆ ಸದನದಲ್ಲಿ ತೂಕೂಡಿಸುತ್ತಿದ್ದಾಗ ಹೊಳೆದ ಆಲೋಚನೆಯ ಪ್ರಕಾರ, “ಸರ್ಕಾರ ಎಲ್ಲರನ್ನೂ ಸಮನಾಗಿ ನೋಡಬೇಕು. ಸಿ ದರ್ಜೆ, ಡಿ ದರ್ಜೆ ಎಂದು ವಿಂಗಡಿಸುವುದೇ ಅಮಾನುಷ ಹಾಗೂ ಅಮಾನವೀಯ. ಸರ್ಕಾರವೇ ಹೀಗೆ ಮಾಡಿದರೆ, ಪ್ರಜೆಗಳಿನ್ನೆಷ್ಟರ ಮಟ್ಟಿಗೆ ಅಮಾನವೀಯವಾಗಿ ವರ್ತಿಸಬಹುದು!? ಆದ್ದರಿಂದ ಎಲ್ಲಾ ಡಿ-ದರ್ಜೆಯ ನೌಕರರನ್ನೂ ತಕ್ಷಣವೇ ಸಿ-ದರ್ಜೆಗೆ, ಎಲ್ಲಾ ಸಿ-ದರ್ಜೆಯ ನೌಕರರನ್ನು ಬಿ-ದರ್ಜೆಗೆ, ಹಾಗೇ ಮುಂದುವರಿದು ಎಲ್ಲಾ ಸೂಪರಿಂಟೆಂಡೆಂಟುಗಳನ್ನು ಕೆ.ಎ.ಎಸ್ ದರ್ಜೆಗೆ ಏರಿಸುವ ಆಲೋಚನೆಯನ್ನು ಗಂಭೀರವಾಗಿ ಪರಿಗಣಿಸುತ್ತಿದೆಯೆಂದು, ಮು.ಮಂಗಳ ವಕ್ತಾರ ತಿಳಿಸಿದ್ದಾರೆ. ಇದರ ಪರಿಣಾಮವಾಗಿ, ಈ ವರ್ಷದಿಂದ ಡಿ-ದರ್ಜೆಯ ನೌಕರರೇ ಇಲ್ಲದಂತಾಗುತ್ತಾರೆ. ಸರ್ಕಾರ ಮತ್ತು ಸಮಾಜದಲ್ಲಿ ಜನರು ಒಂದು ಹೆಜ್ಜೆ ಮೇಲೇರಿದಂತಾಗುತ್ತದೆ. ಈ ಯೋಜನೆಯ ಮುಂದಿನ ಹಂತವಾಗಿ ಎಲ್ಲಾ ಸಿ-ದರ್ಜೆಯವರನ್ನು ಬಿ-ದರ್ಜೆಗೇರಿಸಿ, ಬಿ-ದರ್ಜೆಯನ್ನು ಎ-ದರ್ಜೆಗೇರಿಸಿ, ಕೊನೆಯ ಹಂತವಾದ ಕೆ.ಎ.ಎಸ್ ಅಧಿಕಾರಿಗಳನ್ನು ಐ.ಎ.ಎಸ್ ಅಧಿಕಾರಿಗಳನ್ನಾಗಿ ಮಾಡಲಾಗುವುದು. ಇದಕ್ಕೆ ಕೇಂದ್ರ ಸರ್ಕಾರ ಅಡ್ಡಿಬಂದಲ್ಲಿ ಸುಗ್ರೀವಾಜ್ಞೆಯೊಂದನ್ನು ಹೊರಡಿಸಿ, ಕೇಂದ್ರಸರ್ಕಾರವನ್ನೇ ಅಮಾನ್ಯಗೊಳಿಸುವ ಬಗ್ಗೆಯೂ, ಸರ್ಕಾರಿ ವಕೀಲರು ಅಸಂವಿಧಾನಾತ್ಮಕ ಮಾರ್ಗಗಳನ್ನು ಹುಡುತಿದ್ದಾರೆ. ಈ ರೀತಿ ಸಮಾಜದಲ್ಲಿನ ಎರಡು ಹಂತನ ಅಸಮಾನತೆಯನ್ನು ತೊಡೆದುಹಾಕಿದ ಕೀರ್ತಿ ನಮ್ಮ ಸರ್ಕಾರಕ್ಕೆ ಸೇರಲಿದೆಯೆಂದು ವಕ್ತಾರರು ತಿಳಿಸಿದ್ದಾರೆ.”
ಮತ್ತಷ್ಟು ಓದು »

29
ಜುಲೈ

ಬಿಸಿಯೂಟದಲ್ಲಿ ಕೇಸರೀಬಾತು: ಮುಖ್ಯ ಶಿಕ್ಷಕ ಅಮಾನತು!

– ಪ್ರವೀಣ್ ಕುಮಾರ್,ಮಾವಿನಕಾಡು

Nilume Sulsuddi - Kesari Baatuಕೋಮಿನಕೋಟೆ: ಕೋಮಿನಕೋಟೆ ತಾಲೂಕಿನ ಊಟೇನಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟದಲ್ಲಿ ಕೇಸರೀಬಾತು ಪತ್ತೆಯಾಗಿದೆ.ಅನಾಮಧೇಯ ಕರೆಯೊಂದರ ಸ್ಪಷ್ಟ ಮಾಹಿತಿಯ ಮೇರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳು ಶಾಲೆಯ ಮೇಲೆ ದಾಳಿ ನಡೆಸಿ ಸುಮಾರು 8KG ಗೂ ಹೆಚ್ಚು ಕೇಸರೀ ಬಾತನ್ನು ವಶಪಡಿಸಿಕೊಂಡಿದ್ದಾರೆ.ಘಟನೆ ಖಂಡಿಸಿ ಮಕ್ಕಳ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.ಅಲ್ಲದೆ ತಮಗೆ ನೀಡಲಾಗುತ್ತಿರುವ ಊಟ ಉತ್ತಮ ಗುಣಮಟ್ಟದ್ದೇ ಆಗಿದ್ದರೂ,ಊಟದಲ್ಲಿ ಪದೇ ಪದೇ ಕೇಸರೀಬಾತು ದೊರೆಯುತ್ತಿತ್ತು ಎಂದು ವಿದ್ಯಾರ್ಥಿಗಳು ಆರೋಪಿದ್ದಾರೆ.ಪ್ರಕರಣದ ರೂವಾರಿಗಳನ್ನು ಆದಷ್ಟೂ ಬೇಗ ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸ್ಥಳೀಯ ಆಡಳಿತ ಹಾಗೂ ಶಾಲಾ ಆಡಳಿತ ಮಂಡಳಿ ಭರವಸೆ ನೀಡಿವೆ.ರಾಜ್ಯ ಕೋಮುವೇದಿಕೆಯ ಪ್ರಮುಖರಾದ ಗಂಜಿ ಕೋಮ್ಲೇಶ್ ಮತ್ತವರ ತಂಡ ಶಾಲೆಯಲ್ಲೇ ಬೀಡುಬಿಟ್ಟಿದ್ದು ಪರಿಸ್ಥಿತಿಯ ಮೇಲೆ ತೀವ್ರ ನಿಗಾ ವಹಿಸಿದೆ.

ಮತ್ತಷ್ಟು ಓದು »

16
ಜುಲೈ

ಕ್ರಿಕೆಟ್ ನಿಂದ ಆಜೀವ ನಿಷೇಧ: ಮೇಯಪ್ಪನ್,ರಾಜ್ ಕುಂದ್ರಾಗೆ ಸಂತಸ !!

– ಪ್ರವೀಣ್ ಕುಮಾರ್ ಮಾವಿನಕಾಡು
ಕುಂದ್ರಾ-ಮೇಯಪ್ಪನ್
ಚೆನ್ನೈ ನ ಹೊರವಲಯದ ರೆಸಾರ್ಟ್ ಒಂದರಲ್ಲಿ ಗುರುನಾಥ್ ಮೇಯಪ್ಪನ್ ಮತ್ತು ರಾಜ್ ಕುಂದ್ರಾ ರವರು ಜಂಟಿಯಾಗಿ ಆಯೋಜಿಸಿದ್ದ ಸಂತೋಷಕೂಟದಲ್ಲಿ,ತಂಡದ ಹಲವು ಆಟಗಾರರು ಹಾಗೂ ಬುಕ್ಕಿಗಳನ್ನುದ್ದೇಶಿಸಿ ಮಾತನಾಡುತ್ತಾ ಇಬ್ಬರೂ ಸಹಾ ತಮಗೆ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಆಜೀವ ನಿಷೇಧ ಹೇರಿದ ಕ್ರಮವನ್ನು ಸ್ವಾಗತಿಸಿದ್ದಾರೆ ಮತ್ತು ನಿಷೇಧ ಹೇರಿದ ಕ್ರಮಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ! ಇಷ್ಟು ವರ್ಷಗಳ ಕಾಲ ಐಪಿಎಲ್ ನ ಜವಾಬ್ಧಾರಿಯಿಂದಾಗಿ ಬೆಟ್ಟಿಂಗ್ ನಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಿರಲಿಲ್ಲ.ಇನ್ನು ಮುಂದೆ ನಾವುಗಳು ಪೂರ್ಣ ಪ್ರಮಾಣದಲ್ಲಿ ಬೆಟ್ಟಿಂಗ್ನಲ್ಲಿ ತೊಡಗಿಕೊಳ್ಳಲು ಯಾವುದೇ ತೊಂದರೆ ಇಲ್ಲ.ಇದರಿಂದ ತಮಗೆಲ್ಲರಿಗೂ ದುಪ್ಪಟ್ಟು ಲಾಭವಾಗಲಿದೆ ಎಂದು ಬುಕ್ಕಿಗಳನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರೆಂದು ನಂಬಲನರ್ಹ ಮೂಲಗಳಿಂದ ತಿಳಿದುಬಂದಿದೆ.

ಮತ್ತಷ್ಟು ಓದು »

11
ಜುಲೈ

ಇನ್ಮುಂದೆ ಕೆಡುಕಿ ಫ್ರೈಡ್ ಚಿಕನ್ ಜೊತೆಗೆ ಶಾರ್ಪಿಕ್ ಬಾಟಲ್ ಸಂಪೂರ್ಣ ಉಚಿತ!

– ಪ್ರವೀಣ್ ಕುಮಾರ್ ಮಾವಿನಕಾಡು

KHಇತ್ತೀಚಿನ ದಿನಗಳಲ್ಲಿ ಸಿದ್ಧ ಆಹಾರಗಳ ತಯಾರಿಕೆಯಲ್ಲಿ ತೀವ್ರ ನಿರ್ಲಕ್ಷ್ಯ ಕಂಡುಬರುತ್ತಿದ್ದು,ಮ್ಯಾಗಿಯಲ್ಲಿ ಸೀಸ,ಹಾಲಿನ ಪುಡಿಯಲ್ಲಿ ಡಿಟರ್ಜೆಂಟ್ ಪತ್ತೆಯಾದಂತೆ ಫ್ರೈಡ್ ಚಿಕನ್ ನಲ್ಲಿ ಸಾಮಾನ್ಯವಾಗಿ ಚರಂಡಿಯಲ್ಲಿ ಕಂಡುಬರುವ ಬ್ಯಾಕ್ಟೀರಿಯಾಗಳು ಕಂಡುಬಂದಿವೆ.

ಘಟನೆಯ ವಿವರ: ಇತ್ತೀಚಿಗೆ ಬಹುರಾಷ್ಟ್ರೀಯ ರೆಸ್ಟೋರೆಂಟ್ ಸರಪಣಿಯ ಚಿಕನ್ಪುರ್ ಜಿಲ್ಲೆಯ ಔಟ್ ಲೆಟ್ ಒಂದರಲ್ಲಿ ಫ್ರೈಡ್ ಚಿಕನ್‌ಗೆ ಆರ್ಡರ್ ಮಾಡಿ ಬಾಯಲ್ಲಿ ನೀರೂರಿಸುತ್ತಾ ಕುಳಿತಿದ್ದ ಗ್ರಾಹಕರೊಬ್ಬರು ತಮಗೆ ಸರ್ವ್ ಮಾಡಿದ ಚಿಕನ್ ಜೊತೆ ಬ್ಯಾಕ್ಟೀರಿಯಾಗಳು ಇರುವುದನ್ನು ತಿಳಿದು ಹೌಹಾರಿದ್ದಾರೆ.ಈ ಬಗ್ಗೆ ಮಳಿಗೆಯ ಸಿಬ್ಬಂದಿಗೆ ತಿಳಿಸಿದಾಗ ಅದು ಹೊರಗಿನಿಂದ ತಾವೇ ತಂದುಕೊಂಡ ಆಹಾರ ಎಂದು ವಾದ ಮಾಡಿದ್ದಾರೆ.ಆದರೆ ದೂರು ಸ್ವೀಕರಿಸಲು ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಈ ಬಗ್ಗೆ ಪುರಾವೆ ಲಭಿಸಿದ್ದು,ಬ್ಯಾಕ್ಟೀರಿಯಾಗಳಿದ್ದ ಮಾಂಸದ ತುಂಡುಗಳನ್ನು ಹೆಚ್ಚುವರಿ ಪರೀಕ್ಷೆಗೆ ಕಳುಹಿಸಲಾಗಿತ್ತು.ಪ್ರಯೋಗಾಲಯದ ವರದಿಯಲ್ಲಿ ಚಿಕನ್ ನಲ್ಲಿ ಬ್ಯಾಕ್ಟೀರಿಯಾಗಳು ಇರುವುದು ಧೃಢಪಟ್ಟಿದೆ!

ಮತ್ತಷ್ಟು ಓದು »

3
ಜುಲೈ

ಪರಿಹಾರಭಾಗ್ಯದ ಆಸೆಗೆ ಪ್ರಾಣ ಕಳೆದುಕೊಂಡ ಶಾಸಕ

– ಪ್ರವೀಣ್ ಕುಮಾರ್ ಮಾವಿನಕಾಡು

Nilume Sulsuddi - Shasakara Aatmahatyeಶಾಸಕರು ಅಥವಾ ಮಂತ್ರಿಗಳು ಆತ್ಮಹತ್ಯೆ ಮಾಡಿಕೊಂಡರೆ ರೈತ ಸಂಘಟನೆಗಳ ವತಿಯಿಂದ ಪರಿಹಾರ ನೀಡಲಾಗುವುದು ಎನ್ನುವ ಘೋಷಣೆಯನ್ನು ನಂಬಿ ಶಾಸಕನೊಬ್ಬ ಅಧಿವೇಶನದ ನಡುವೆಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ!ಶೂನ್ಯ ವೇಳೆಯಲ್ಲಿ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಶಾಸಕನನ್ನು ಕೆಳಗಿಳಿಸಿ ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಮಾರ್ಗಮದ್ಯದಲ್ಲಿಯೇ ಅಸುನೀಗಿದ್ದಾನೆ.

ಇದರಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣಗೊಂಡಿದ್ದು ಇತರ ಶಾಸಕರು ರಾಜ್ಯ ಹೆದ್ದಾರಿಯಲ್ಲಿ ಟೈರ್ ಗಳನ್ನು ಸುಟ್ಟು ಪ್ರತಿಭಟನೆ ನಡೆಸಿದರು.ರೈತ ಸಂಘಟನೆಗಳ ರಾಜ್ಯ ಮುಖಂಡರು ಬಂದು ಪರಿಹಾರ ನೀಡುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದ ಶಾಸಕರು,ಮೃತ ದೇಹವನ್ನು ಪೋಸ್ಟ್ ಮಾರ್ಟಮ್ ಗೆ ಒಯ್ಯಲೂ ಅವಕಾಶ ನೀಡದೇ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು.ನಂತರ ಸ್ಥಳಕ್ಕೆ ಬಂದ ಸ್ಥಳೀಯ ರೈತ ಮುಖಂಡನ ಬೈಕ್ ಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ನಂತರ ಸ್ಥಳದಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಬೇಕಾಯಿತು.

ಮತ್ತಷ್ಟು ಓದು »

25
ಜೂನ್

ಮೂಢನಂಬಿಕೆ ನಿಷೇಧ ಕಾಯ್ದೆ ಮಂಡನೆಗೆ ಆಷಾಢಮಾಸ ಅಡ್ಡಿ!

– ಪ್ರವೀಣ್ ಕುಮಾರ್ ಮಾವಿನಕಾಡು

Sulsuddi - Moudya Virodhi Kaaydeಆಷಾಢಮಾಸ ಯಾವುದೇ ಶುಭ ಕಾರ್ಯಗಳಿಗೆ ಸೂಕ್ತವಲ್ಲ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ “ಮೂಢನಂಬಿಕೆ ಆಚರಣೆ ಪ್ರತಿಬಂಧಕ ವಿಧೇಯಕ”ವನ್ನು ಬರಲಿರುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸದಿರಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಈ ವಿಧೇಯಕವನ್ನು ಬರಲಿರುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸುವ ಕುರಿತಂತೆ ಮೂಢ ನಂಬಿಕೆ ವಿರೋಧೀ ಹೋರಾಟ ಸಮಿತಿಯ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಮಾತನಾಡುತ್ತಾ ಮಾನ್ಯ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.ಇದೇ ಸಂಧರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,ತಾವು ಈಗಾಗಲೇ ನಗರದ ಲಾಡ್ಜ್ ಒಂದರಲ್ಲಿ ವಾಸ್ತವ್ಯ ಹೂಡಿರುವ ಖ್ಯಾತ ಜ್ಯೋತಿಷಿಯೊಬ್ಬರನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸಿದ್ದು ಅವರೂ ಸಹ ಈ ಬಾರಿ ಅಧಿಕ ಆಷಾಢ ಬಂದಿರುವುದರಿಂದ ವಿಧೇಯಕ ಮಂಡನೆ ಬೇಡ ಎಂದು ತಮಗೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.ಅಲ್ಲದೇ ಹಾಗೊಂದು ವೇಳೆ ಆಷಾಢದಲ್ಲೇ ವಿಧೇಯಕ ಮಂಡಿಸಿದರೆ ತಮ್ಮ ಸ್ಥಾನಕ್ಕೆ ಕುತ್ತು ಬರಲಿದೆ ಮತ್ತು ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಗಳಾಗುವ ಸಂಭವವಿದೆ.ಹಾಗೇನಾದರೂ ಆದಲ್ಲಿ ತಾವು ಮುಖ್ಯಮಂತ್ರಿ ಹುದ್ದೆಗಾಗಿ ಪಕ್ಷಾಂತರ ಮಾಡಿ,ಹಲವು ವರ್ಗಗಳನ್ನು ಸಮಾಜದ ಮುಖ್ಯ ವಾಹಿನಿಯಿಂದ ಬೇರ್ಪಡಿಸಿ,ಇದುವರೆಗೆ ಮಾಡಿದ ರಾಜಕೀಯವೆಲ್ಲವೂ ವ್ಯರ್ಥವಾಗಲಿದೆ ಎಂದು ಎಚ್ಚರಿಸಿದ್ದಾರೆ. ಹಾಗಾಗಿ ಸಧ್ಯಕ್ಕೆ ಈ ವಿಧೇಯಕವನ್ನು ಮಂಡಿಸದಿರಲು ನಿರ್ಧರಿಸಿರುವುದಾಗಿ ತಿಳಿಸಿದರು.
ಮತ್ತಷ್ಟು ಓದು »

17
ಜೂನ್

ನ್ಯಾಯಕ್ಕಾಗಿ ಶೋಷಿತ ಯುವಕನ ಜೀವಪರ ಹೋರಾಟ

– ಪ್ರವೀಣ್ ಕುಮಾರ್ ಮಾವಿನಕಾಡು

Sulsuddi - Terroristಬೆಂಗಳೂರು:  ಕೇವಲ ಭಯೋತ್ಪಾದಕ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಯುವಕನೋರ್ವನಿಗೆ ಮನೆಯನ್ನು ಬಾಡಿಗೆಗೆ ನೀಡುವುದಿಲ್ಲ ಎಂದು ನಿರಾಕರಿಸಿದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ.ಹೈದರಾಬಾದ್ ಮೂಲದ ಮನೋಜ್ ಕುಮಾರ್(ಹೆಸರು ಮತ್ತು ಧರ್ಮ ಬದಲಿಸಿದೆ) ಎನ್ನುವ ಯುವಕ ತಾನು ಗೆರೆ ನಗರದ ಮನೆಯ ಮಾಲೀಕರೊಬ್ಬರ ಬಳಿ ಬಾಡಿಗೆಗೆ ಮನೆ ಬೇಕೆಂದು ಕೇಳಿದಾಗ ಅವರು ಕೆಲವಾರು ಭಯೋತ್ಪಾದನೆ ಪ್ರಕರಣಗಳಲ್ಲಿ ಆರೋಪಿಯಾಗಿರುವ (ಕೇವಲ ಆರೋಪಿಯಾಗಿರುವ) ನನ್ನನ್ನು ಗುರುತಿಸಿದರು ಮತ್ತು ನಾವು ನಿಮ್ಮಂತವರಿಗೆ ಮನೆ ನೀಡುವುದಿಲ್ಲ ಹೇಳಿ ಬಾಗಿಲು ಮುಚ್ಚಿಕೊಂಡರು ಎಂದು ಆರೋಪಿಸಿದ್ದಾನೆ.

ಇಂತಹಾ ಘಟನೆ ರಾಜ್ಯದಲ್ಲಿ ಜಾತ್ಯತೀತ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ನಡೆದಿದ್ದು ದೇಶದಾದ್ಯಂತ ತೀವ್ರ ಸಂಚಲನ ಉಂಟುಮಾಡಿದೆ.

ನಿಜಕ್ಕೂ ಇದೊಂದು ದುರದೃಷ್ಟಕರ ಘಟನೆ ಎಂದು ಪ್ರತಿಕ್ರಿಯಿಸಿದ ಗೃಹ ಸಚಿವರು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಮೂರು ದಿನಗಳ ಒಳಗಾಗಿ ತನಗೆ ವರದಿ ನೀಡುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು,ತಪ್ಪಿತಸ್ತರು ಎಷ್ಟೇ ದೊಡ್ದವರಾಗಿದ್ದರೂ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮತ್ತಷ್ಟು ಓದು »

11
ಜೂನ್

ಸುಳ್ಸುದ್ದಿ : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವಿವಾದಕ್ಕೆ ಅನಿರೀಕ್ಷಿತ ತಿರುವು

– ಪ್ರವೀಣ್ ಕುಮಾರ್ ಮಾವಿನಕಾಡು

Sulsuddi - Owaisi - Diggyಸೂರ್ಯ ನಮಸ್ಕಾರವನ್ನು ಮಾಡಿಯೇ ತೀರುತ್ತೇವೆ:ಅಸಾದುದ್ದೀನ್ ಒವೈಸಿ

ನವದೆಹಲಿ: ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನ ನಿಮಿತ್ತ ಭಾನುವಾರ ರಜೆ ದಿನದಂದು ಕಡ್ಡಾಯವಾಗಿ ಉರ್ದು ಶಾಲೆಗಳು ಸೇರಿದಂತೆ ಎಲ್ಲ ಶಾಲೆಗಳು ತೆರೆದಿದ್ದು, ಅಂದು ಬೆಳಗ್ಗೆ ಶಾಲೆಗಳಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲಾಗುವುದು ಎಂಬ ಸರ್ಕಾರದ ಆದೇಶಕ್ಕೆ ಹಲವಾರು ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ವಿಶ್ವಹಿಂದೂ ಪರಿಷತ್,ಅಖಿಲ ಭಾರತೀಯ ಹಿಂದೂ ಮಹಾ ಸಭಾ,ಶ್ರೀರಾಮ ಸೇನೆ ಮೊದಲಾದ ಸಂಘಟನೆಗಳ ಮುಖಂಡರು ಸರಕಾರದ ಈ ಆದೇಶವು ನಮ್ಮ ಧಾರ್ಮಿಕ ನಂಬಿಕೆಗಳನ್ನು ಇತರ ಧರ್ಮದವರು ದುರುಪಯೋಗಪಡಿಸಿಕೊಳ್ಳಲು ವೇದಿಕೆಯನ್ನು ಕಲ್ಪಿಸಿಕೊಟ್ಟಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇತರ ಧರ್ಮದವರು  ಏಕೇಶ್ವರವಾದಿಗಳಾಗಿದ್ದು, ಅವರುಗಳು ಕೇವಲ ಆ ದೇವರ ಎದುರು ಮಾತ್ರ ಬಾಗುತ್ತಾರೆ. ಆದ್ದರಿಂದ ನಾವು ದೇವರೆಂದು ಭಾವಿಸುವ ಸೂರ್ಯದೇವರಿಗೆ ಇತರ ಧರ್ಮದವರು ನಮಸ್ಕಾರ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಎದುರು ತಮ್ಮ ಅಸಮಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ರವರು, ಹಿಂದೂಗಳಲ್ಲದವರು ಸೂರ್ಯ ನಮಸ್ಕಾರ ಮಾಡುವುದನ್ನು ನಾವೆಂದಿಗೂ ಸಹಿಸಲು ಸಾಧ್ಯವಿಲ್ಲ ಎಂದರು.

ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಮಣಿದ ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಹಿಂದೂಗಳು ಮಾತ್ರ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮತ್ತಷ್ಟು ಓದು »