ವಿಷಯದ ವಿವರಗಳಿಗೆ ದಾಟಿರಿ

Posts from the ‘ಮನೋರಂಜನೆ’ Category

28
ಆಗಸ್ಟ್

“ನೀನು” ಯಾರು? ಸತ್ಯ ಶೋಧನೆಗೆ ಸಮಿತಿ

– ಪ್ರವೀಣ್ ಕುಮಾರ್ ಮಾವಿನಕಾಡು

ಉಪ್ಪಿಟುಇತ್ತೀಚೆಗಷ್ಟೇ ವಾಲ್ಮೀಕಿ ಯಾರು ಎನ್ನುವ ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಸರ್ಕಾರ, ಹೇಗಾದರೂ ಮಾಡಿ ಮತ್ತೆ ಆ ಪುಸ್ತಕ ಜನರನ್ನು ತಲುಪಲು ಬಿಡಬಾರದು ಎನ್ನುವ ಕಾರಣಕ್ಕಾಗಿ ಆಯ್ದ ವ್ಯಕ್ತಿಗಳಿಂದ ಕೂಡಿದ ಸತ್ಯ ಶೋಧನಾ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಈಗ ಉಪೇಂದ್ರ ನಿರ್ದೇಶಿಸಿ ನಟಿಸಿದ ಉಪ್ಪಿ2 ಚಿತ್ರದಲ್ಲಿ ಬರುವ ‘ನೀನು’ ಅಂದರೆ ಯಾರು ಎನ್ನುವ ಬಗ್ಗೆ ಸತ್ಯಶೋಧನೆ ಕೈಗೊಳ್ಳಲು ಹಂಪೆನಾಗ್  ಅವರ ನೇತೃತ್ವದಲ್ಲಿ ಸರಕಾರ ಇನ್ನೊಂದು ಸತ್ಯಶೋಧನಾ ಸಮಿತಿಯನ್ನು ರಚಿಸಿದೆ! ಅಲ್ಲದೇ ಉಪೇಂದ್ರ ಅವರು ತಮ್ಮ ಚಿತ್ರಕ್ಕೆ ಉಪ್ಪಿಟ್ಟು ಎನ್ನುವ ಹೆಸರನ್ನೇ ಏಕೆ ಇಟ್ಟರು,ಬಹುಜನರು ಸೇವಿಸುವ ಇತರ ಮಾಂಸಾಹಾರದ ಹೆಸರನ್ನು ಏಕೆ ಇಡಲಿಲ್ಲ ಎನ್ನುವ ಬಗ್ಗೆಯೂ ಸಮಿತಿ ಚರ್ಚಿಸಿ ಸರ್ಕಾರಕ್ಕೆ ತನ್ನ ವರದಿ ಒಪ್ಪಿಸಲಿದೆ.

ಈ ಮೊದಲು ಕೆಲವು ಕಾರಣಗಳಿಗಾಗಿ ಉಪೇಂದ್ರ ರವರ ಈ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ಸರ್ಕಾರ ಅಂದುಕೊಂಡಿತ್ತಾದರೂ ನಂತರ,ನ್ಯಾಯಾಲಯವು ಸರ್ಕಾರ ಕೊಡಲಿದ್ದ ಕಾರಣಗಳನ್ನು ಒಪ್ಪುವ ಸಾಧ್ಯತೆಗಳು ತೀರಾ ಕಮ್ಮಿ ಎನ್ನುವ ತಜ್ಞರ ಸಲಹೆಯ ಮೇರೆಗೆ ಈ ಸತ್ಯ ಶೋಧನಾ ಸಮಿತಿಯನ್ನು ರಚಿಸಿ ಆ ಸಮಿತಿಯಿಂದ ತಮಗೆ ಬೇಕಾದ ರೀತಿಯಲ್ಲಿ ವರದಿಯನ್ನು ಪಡೆದು ನಂತರ ಚಿತ್ರ ಪ್ರದರ್ಶನ ರದ್ದು ಮಾಡಲು ತೀರ್ಮಾನಿಸಿದೆ.ಆದ್ದರಿಂದ ಶ್ರೀ ಹಂಪೆನಾಗರಾಜು ಅವರ ನೇತೃತ್ವದಲ್ಲಿ ಆರು ಜನ ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಗಿದೆ.

ಮತ್ತಷ್ಟು ಓದು »

20
ಆಗಸ್ಟ್

ಮಲ್ಟಿಪ್ಲೆಕ್ಸ್ ಗಳಲ್ಲಿನ್ನು ಕನ್ನಡ ರೀ-ಮೇಕ್ ಚಿತ್ರಗಳ ಪ್ರದರ್ಶನ ಕಡ್ಡಾಯ!

– ಪ್ರವೀಣ್ ಕುಮಾರ್ ಮಾವಿನಕಾಡು

Nilume Sulsuddi - Kannada Film Dubbingರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ರೀ ಮೇಕ್ ಚಿತ್ರಗಳ ಪ್ರದರ್ಶನ ಮಾಡಲೇಬೇಕು ಎಂದು ಮಲ್ಟಿಪ್ಲೆಕ್ಸ್ ಮಾಲೀಕರಿಗೆ ಸಿ.ಎಂ.ತಾಕೀತು ಮಾಡಿದ್ದಾರೆ.ಅಲ್ಲದೇ ಟಿಕೆಟ್ ದರ ಕೂಡ ಕಡಿಮೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.ಅಷ್ಟೇ ಅಲ್ಲದೇ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ರೀಮೇಕ್ ಚಿತ್ರ ಪ್ರದರ್ಶನ ಮತ್ತು ಅದರ ದರ ನಿಗದಿ ಮಾಡುವ ಸಂಬಂಧ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವರವರ ನೇತೃತ್ವದಲ್ಲಿ ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳು ನಿರ್ಮಾಪಕರಿಗೆ ಭರವಸೆ ನೀಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಡಬ್ಬಿಂಗ್ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ತಮ್ಮ ಇನ್ನೂ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕನ್ನಡ ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಕಳೆದ ೧೦ ದಿನಗಳಿಂದ ಸರಣಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ನೂರಾರು ನಿರ್ಮಾಪಕರನ್ನು ಖುದ್ದು ಮುಖ್ಯಮಂತ್ರಿಗಳೇ ಭೇಟಿ ಮಾಡಿ ತುರ್ತುಸಭೆ ನಡೆಸಿದ ಸಂದರ್ಭದಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.ಇದರಿಂದ ಕನ್ನಡಿಗರೂ ಮಲ್ಟಿಪ್ಲೆಕ್ಸ್ ಗಳಿಗೆ ಹೋಗಬಹುದು” ಎಂದು ಚಲನಚಿತ್ರ ನಿರ್ಮಾಪಕರ ಸಂಘದ ಸದಸ್ಯ R.S.ಬಾಬು ಹರ್ಷ ವ್ಯಕ್ತಪಡಿಸಿದರು.

ಮತ್ತಷ್ಟು ಓದು »

10
ಆಗಸ್ಟ್

ಬುದ್ಧಿಜೀವಿಗಳ ಭೌತಶಾಸ್ತ್ರ

– ವಿನಾಯಕ ಹಂಪಿಹೊಳಿ

ಬುದ್ಧಿಜೀವಿಗಳ ತಂಡವೊಂದು ಭೌತಿಕ ವಿಜ್ಞಾನವನ್ನು ಕಲಿಯಲು ಹೊರಟಿತು. ಸರ್ಕಾರದಿಂದ ಅನುದಾನ ಪಡೆದು ಎ.ಸಿ. ರೂಮೊಂದನ್ನು ಕಟ್ಟಿಸಿ, ಅಲ್ಲಿ ಎಲ್ಲ ಭೌತ ವಿಜ್ಞಾನದ ಪುಸ್ತಕಗಳನ್ನುಬುದ್ಧಿಜೀವಿ ತರಿಸಿ ಎಲ್ಲವನ್ನೂ ಅನೂಚಾನವಾಗಿ ಓದಿಕೊಂಡಿತು. ನ್ಯೂಟನ್ನಿನ ನಿಯಮಗಳಿಂದ ಆರಂಭಿಸಿ, ಕ್ವಾಂಟಂ ಸಿದ್ಧಾಂತದವರೆಗಿನ ಎಲ್ಲ ಸಿದ್ಧಾಂತಗಳನ್ನೂ ಅವುಗಳ ಇತಿಮಿತಿಗಳನ್ನೂ ಅಧ್ಯಯನ ಮಾಡಿತು. ೩-೪ ವರ್ಷಗಳ ನಂತರ ಆ ಬುದ್ಧಿಜೀವಿಗಳು ಈಗ ತಾವು ಎಲ್ಲವನ್ನೂ ತಿಳಿದುಕೊಂಡಿದ್ದೇವೆ ಎಂದು ಭಾವಿಸಿ ಒಂದು ಬಹುದೊಡ್ಡ ಅನ್ವೇಷಣಾ ವರದಿಯನ್ನು ಬರೆದು ಎ.ಸಿ. ರೂಮಿನಿಂದ ಹೊರಬಂದಿತು. ಅದು ತನ್ನ ಅನ್ವೇಷಣೆಯನ್ನು ಸರ್ಕಾರಕ್ಕೆ ಸಲ್ಲಿಸಿತು. ಆ ವರದಿಯ ಕೊನೆಯಲ್ಲಿ ಇಡೀ ಅಧ್ಯಯನದ ಸಾರಾಂಶ ಅಡಗಿತ್ತು.

“ಈ ಪ್ರಕೃತಿಯು ಬಹು ಗೊಂದಲದಿಂದ ಕೂಡಿದೆ. ವಸ್ತುಗಳ  ವೇಗ ಕಡಿಮೆಯಿದ್ದರೆ ನ್ಯೂಟನ್ನಿನ ನಿಯಮವನ್ನು ಪಾಲಿಸುತ್ತದೆ, ಆದರೆ ವೇಗ ತುಂಬಾ ಹೆಚ್ಚಿದಂತೆ ಆ ನಿಯಮಗಳನ್ನು ಮೀರುತ್ತವೆ ಮತ್ತು ಇದ್ದಕ್ಕಿದ್ದಂತೆ ಐನ್ಸ್ಟೈನ್ ನಿಯಮಗಳನ್ನು ಪಾಲಿಸುತ್ತವೆ. ಅಂದರೆ ಯಾವ ನಿಯಮವನ್ನು ಸರಿಯಾಗಿ ಪಾಲಿಸಬೇಕು ಎಂಬುದರ ಸ್ಪಷ್ಟವಾದ ಕಲ್ಪನೆ ಪ್ರಕೃತಿಗೆ ಇದ್ದಂತಿಲ್ಲ. ಗಾತ್ರದಲ್ಲಿ ದೊಡ್ಡದಾಗಿರುವ ವಸ್ತುಗಳು ಕ್ಲಾಸಿಕಲ್ ಮೆಕಾನಿಕಲ್ ನಿಯಮಗಳನ್ನು ಅನುಸರಿಸಿದರೆ, ಚಿಕ್ಕದಾಗಿರುವ ವಸ್ತುಗಳು ಮೆಕಾನಿಕಲ್ ನಿಯಮಗಳನ್ನು ಗಾಳಿಗೆ ತೂರಿ ಕ್ವಾಂಟಂ ಮೆಕಾನಿಕಲ್ ನಿಯಮಗಳನ್ನು ಅನುಸರಿಸುತ್ತವೆ. ಹೀಗೆ ದೊಡ್ಡವುಗಳಿಗೊಂದು ನ್ಯಾಯ, ಚಿಕ್ಕವುಗಳಿಗೊಂದು ನ್ಯಾಯವನ್ನು ನೀಡುವ ಪ್ರಕೃತಿಯು ನಿಜವಾಗಿಯೂ ಆದರ್ಶ ಪ್ರಕೃತಿಯಾಗಿರಲಾರದು.

ಬೆಳಕು ಮೊದಮೊದಲು ತರಂಗದಂತೆ ವರ್ತಿಸಿದರೆ, ಇದ್ದಕ್ಕಿದ್ದಂತೆ, ಕಣಗಳ ರೂಪದಲ್ಲಿ ವರ್ತಿಸಲು ಶುರು ಮಾಡುತ್ತವೆ. ಇದೇ ರೀತಿ, ಎಲೆಕ್ಟ್ರಾನ್ ಮುಂತಾದ ಸೂಕ್ಷ್ಮ ಕಣಗಳು ಒಮ್ಮೊಮ್ಮೆ ತರಂಗದಂತೆ ವರ್ತಿಸುತ್ತವೆ. ಹೀಗಾಗಿ ಈ ನಿಸರ್ಗವು ಒಂದು ಸುವ್ಯವಸ್ಥಿತವಾದ ಜಗತ್ತನ್ನು ಕಟ್ಟುವಲ್ಲಿ ವಿಫಲವಾಗಿದೆಯೆಂದು ಧಾರಾಳವಾಗಿ ಹೇಳಬಹುದು. ಅಲ್ಲದೇ ಥರ್ಮೋಡೈನಮಿಕ್ಸ್ ಪ್ರಕಾರ, ಜಗತ್ತಿನ ಎಂಥ್ರೊಪಿ (disorderness) ನಿರಂತರವಾಗಿ ಹೆಚ್ಚುತ್ತಲೇ ಇದೆ. ಪ್ರಕೃತಿಯ ಈ ಬೆಳವಣಿಗೆ ನಿಜವಾಗಿಯೂ ಆಘಾತಕಾರಿ. ಜಗತ್ತು ಸುವ್ಯವಸ್ಥತೆಯಿಂದ ಅವ್ಯವಸ್ಥತೆಯೆಡೆಗೆ ಸಾಗುತ್ತಿರುವದನ್ನು ಗುರುತಿಸುವಲ್ಲಿ ಪ್ರಕೃತಿಯು ಸಂಪೂರ್ಣವಾಗಿ ವಿಫಲವಾಗಿದೆ.
ಮತ್ತಷ್ಟು ಓದು »

6
ಆಗಸ್ಟ್

ಯಾಕೂಬ್ ಮೆಮನ್ ಗಲ್ಲಿಗೆ ಕಂಬನಿ ಮಿಡಿದ ಜೀವಪರ ಮನಸ್ಸುಗಳು

– ಪ್ರವೀಣ್ ಕುಮಾರ್,ಮಾವಿನಕಾಡು

Nilume Sulsuddi - Yakoob Menonಗಲ್ಲಿಗೇರಿ ಸತ್ತ 1993 ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ,ನತದೃಷ್ಟ ಭಯೋತ್ಪಾದಕ ಯಾಕೂಬ್ ಮೆಮನ್ ನ ಸ್ಮರಣಾರ್ಥ ಹಾಳ್ ಟೌನ್ ನಲ್ಲಿ ಇಂದು ನಡೆದ ಸಂತಾಪ ಸೂಚಕ ಸಭೆಯಲ್ಲಿ ಭಾರತದ ನ್ಯಾಯ ವ್ಯವಸ್ಥೆಯ ವಿರುದ್ಧ ರಾಜ್ಯದ ಹಲವು ಪ್ರಮುಖ ಜೀವಪರ ಮನಸ್ಸುಗಳ ಆಕ್ರೋಶ ಸ್ಫೋಟಗೊಂಡಿತು.

ಆತನನ್ನು 257 ಜನರ ಸಾವಿಗೆ ಕಾರಣನೆನ್ನಲಾಗುತ್ತಿದೆ.ಒಂದು ವೇಳೆ ಅಂದು ಸ್ಥಳದಲ್ಲಿ ಆ 257 ಜನ ಇಲ್ಲದಿರುತ್ತಿದ್ದರೆ ಆತ ಕೊಲೆಗಾರನಾಗಲು ಹೇಗೆ ಸಾಧ್ಯವಾಗುತ್ತಿತ್ತು?ಆದ್ದರಿಂದ ಆ ಘಟನೆಗೆ ಆ 257 ಜನ ಮತ್ತು ಗಾಯಗೊಂಡ ವ್ಯಕ್ತಿಗಳೇ ಕಾರಣವೇ ಹೊರತೂ ಯಾಕೂಬ್ ಮೆಮನ್ ಅಲ್ಲ.257 ಜನ ಮಾಡಿದ ತಪ್ಪಿಗೆ ಅಮಾಯಕನೊಬ್ಬನನ್ನು ನಮ್ಮ ವ್ಯವಸ್ಥೆಯೇ ನೇಣು ಬಿಗಿದು ಕೊಂದು ಹಾಕಿತು ಎಂದು ಕರ್ನಾಟಕ ರಾಜ್ಯದ ಹಿರಿಯ ಬುದ್ಧಿಜೀವಿ ಬಾಯ್ಕಟ್ ಬೀಬಿ ಆಕ್ರೋಶ ವ್ಯಕ್ತಪಡಿಸಿದರು.

ಆತನಿಗೆ ಕ್ಷಮಾದಾನ ನೀಡಿದ್ದರೆ ಈ ರಾಷ್ಟ್ರ ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬ ಶಕ್ತಿಯುತ ಸಂದೇಶವನ್ನು ಜಗತ್ತಿಗೆ ಸಾರುವ ಅವಕಾಶವಿತ್ತು!ಅನ್ಯಾಯವಾಗಿ ಭಾರತ ಅಂತಹಾ ಸುವರ್ಣಾವಕಾಶವನ್ನು ಕಳೆದುಕೊಂಡಿತು ಎಂದು ಕರ್ನಾಟಕ ರಾಜ್ಯ ಕಾರ್ಯಮರೆತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಾಗೂ ಸದ್ಯದ ಪ್ರಗತಿಪರಬುದ್ಧಿಜೀವಿಪತ್ರಕರ್ತರಾಜಕಾರಣಿಯೊಬ್ಬರು ವ್ಯಾಖ್ಯಾನಿಸಿದರು.”ಮನುಷ್ಯರನ್ನು ಗಲ್ಲಿಗೇರಿಸುವುದು ಈ ದೇಶವನ್ನು ಸುರಕ್ಷಿತವಾಗಿಸುವುದಿಲ್ಲ ಬದಲಾಗಿ ನಮ್ಮನ್ನು ಕೆಳಕ್ಕೆ ನೂಕುತ್ತದೆ” ಎಂದು ಅವರು ಪ್ರತಿಪಾದಿಸಿದರು. ಕೇಂದ್ರದಲ್ಲಿ ನಾವು ಬೆಂಬಲಿಸುತ್ತಿರುವ ಸರ್ಕಾರವಿದ್ದಿದ್ದರೆ ಖಂಡಿತಾ ಇಂತಹಾ ಘಟನೆಗಳು ನಡೆಯಲು ಬಿಡುತ್ತಿರಲಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಮತ್ತಷ್ಟು ಓದು »

5
ಆಗಸ್ಟ್

ಸುಳ್ಸುದ್ದಿ : ಎಲ್ಲಾ ಡಿ-ದರ್ಜೆಯ ಹುದ್ದೆಗಳನ್ನು ರದ್ದು ಮಾಡಲು ಸರ್ಕಾರದ ಮಹತ್ವದ ನಿರ್ಧಾರ

– ರಾಘವೇಂದ್ರ ಸುಬ್ರಹ್ಮಣ್ಯ

dantavillada_kathegalu_nilumeಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ಸಲಹೆಕಾರರು ಇತ್ತೀಚೆಗೆ ಕೊಟ್ಟ ಸಲಹೆಯೊಂದನ್ನು ಅಗತ್ಯಕ್ಕಿಂತ ಗಂಭೀರವಾಗಿ ಪರಿಗಣಿಸಿರುವ,ಘನಸರ್ಕಾರವು,ಎಲ್ಲಾ ಡಿ-ದರ್ಜೆಯ ಗುಮಾಸ್ತರ ಹುದ್ದೆಗಳನ್ನು ರದ್ದು ಮಾಡಲು ನಿರ್ಧರಿಸಿದ್ದಾರೆ.ಇತ್ತೀಚೆಗೆ ಸಮಾರಂಭವೊಂದರಲ್ಲಿ ಸಲಹೆಕಾರರು,”ಜಮೀನ್ದಾರರು ಹೆಚ್ಚಿನ ಜಮೀನಿನ ಹಿಡುವಳಿಯಿಟ್ಟುಕೊಂಡು, ಕೂಲಿ ಕಾರ್ಮಿಕರಿಲ್ಲ ಎಂದು ಗೋಳಾಡುವ ಬದಲು, ಎಷ್ಟೋ ಬೇಕೋ ಅಷ್ಟಿಟ್ಟುಕೊಂಡು, ಉಳಿದ ಹೆಚ್ಚಿನ ಜಮೀನಿದ್ದರೆ ಬಡವರಿಗೆ ಕೊಟ್ಟರೆ, ಕೂಲಿಕಾರ್ಮಿಕರ ಸಮಸ್ಯೆ ಬರುವುದಿಲ್ಲ. ಬಡವರು ಕೂಲಿ ಕೆಲಸಕ್ಕೆ ಬರಬೇಕೆಂಬ ಧೋರಣೆಯೇ ಅಮಾನುಷ ಮತ್ತು ಅಮಾನವೀಯವಾದದ್ದು” ಎಂದಿದ್ದರು.

ಈ ಸುದ್ಧಿಯನ್ನು ಕೇಳಿ, ಅದೇ ಮಟ್ಟದಲ್ಲಿ ಯೋಚಿಸುತ್ತಿದ್ದ ಮು.ಮಂಗಳಿಗೆ ಸದನದಲ್ಲಿ ತೂಕೂಡಿಸುತ್ತಿದ್ದಾಗ ಹೊಳೆದ ಆಲೋಚನೆಯ ಪ್ರಕಾರ, “ಸರ್ಕಾರ ಎಲ್ಲರನ್ನೂ ಸಮನಾಗಿ ನೋಡಬೇಕು. ಸಿ ದರ್ಜೆ, ಡಿ ದರ್ಜೆ ಎಂದು ವಿಂಗಡಿಸುವುದೇ ಅಮಾನುಷ ಹಾಗೂ ಅಮಾನವೀಯ. ಸರ್ಕಾರವೇ ಹೀಗೆ ಮಾಡಿದರೆ, ಪ್ರಜೆಗಳಿನ್ನೆಷ್ಟರ ಮಟ್ಟಿಗೆ ಅಮಾನವೀಯವಾಗಿ ವರ್ತಿಸಬಹುದು!? ಆದ್ದರಿಂದ ಎಲ್ಲಾ ಡಿ-ದರ್ಜೆಯ ನೌಕರರನ್ನೂ ತಕ್ಷಣವೇ ಸಿ-ದರ್ಜೆಗೆ, ಎಲ್ಲಾ ಸಿ-ದರ್ಜೆಯ ನೌಕರರನ್ನು ಬಿ-ದರ್ಜೆಗೆ, ಹಾಗೇ ಮುಂದುವರಿದು ಎಲ್ಲಾ ಸೂಪರಿಂಟೆಂಡೆಂಟುಗಳನ್ನು ಕೆ.ಎ.ಎಸ್ ದರ್ಜೆಗೆ ಏರಿಸುವ ಆಲೋಚನೆಯನ್ನು ಗಂಭೀರವಾಗಿ ಪರಿಗಣಿಸುತ್ತಿದೆಯೆಂದು, ಮು.ಮಂಗಳ ವಕ್ತಾರ ತಿಳಿಸಿದ್ದಾರೆ. ಇದರ ಪರಿಣಾಮವಾಗಿ, ಈ ವರ್ಷದಿಂದ ಡಿ-ದರ್ಜೆಯ ನೌಕರರೇ ಇಲ್ಲದಂತಾಗುತ್ತಾರೆ. ಸರ್ಕಾರ ಮತ್ತು ಸಮಾಜದಲ್ಲಿ ಜನರು ಒಂದು ಹೆಜ್ಜೆ ಮೇಲೇರಿದಂತಾಗುತ್ತದೆ. ಈ ಯೋಜನೆಯ ಮುಂದಿನ ಹಂತವಾಗಿ ಎಲ್ಲಾ ಸಿ-ದರ್ಜೆಯವರನ್ನು ಬಿ-ದರ್ಜೆಗೇರಿಸಿ, ಬಿ-ದರ್ಜೆಯನ್ನು ಎ-ದರ್ಜೆಗೇರಿಸಿ, ಕೊನೆಯ ಹಂತವಾದ ಕೆ.ಎ.ಎಸ್ ಅಧಿಕಾರಿಗಳನ್ನು ಐ.ಎ.ಎಸ್ ಅಧಿಕಾರಿಗಳನ್ನಾಗಿ ಮಾಡಲಾಗುವುದು. ಇದಕ್ಕೆ ಕೇಂದ್ರ ಸರ್ಕಾರ ಅಡ್ಡಿಬಂದಲ್ಲಿ ಸುಗ್ರೀವಾಜ್ಞೆಯೊಂದನ್ನು ಹೊರಡಿಸಿ, ಕೇಂದ್ರಸರ್ಕಾರವನ್ನೇ ಅಮಾನ್ಯಗೊಳಿಸುವ ಬಗ್ಗೆಯೂ, ಸರ್ಕಾರಿ ವಕೀಲರು ಅಸಂವಿಧಾನಾತ್ಮಕ ಮಾರ್ಗಗಳನ್ನು ಹುಡುತಿದ್ದಾರೆ. ಈ ರೀತಿ ಸಮಾಜದಲ್ಲಿನ ಎರಡು ಹಂತನ ಅಸಮಾನತೆಯನ್ನು ತೊಡೆದುಹಾಕಿದ ಕೀರ್ತಿ ನಮ್ಮ ಸರ್ಕಾರಕ್ಕೆ ಸೇರಲಿದೆಯೆಂದು ವಕ್ತಾರರು ತಿಳಿಸಿದ್ದಾರೆ.”
ಮತ್ತಷ್ಟು ಓದು »

29
ಜುಲೈ

ಬಿಸಿಯೂಟದಲ್ಲಿ ಕೇಸರೀಬಾತು: ಮುಖ್ಯ ಶಿಕ್ಷಕ ಅಮಾನತು!

– ಪ್ರವೀಣ್ ಕುಮಾರ್,ಮಾವಿನಕಾಡು

Nilume Sulsuddi - Kesari Baatuಕೋಮಿನಕೋಟೆ: ಕೋಮಿನಕೋಟೆ ತಾಲೂಕಿನ ಊಟೇನಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟದಲ್ಲಿ ಕೇಸರೀಬಾತು ಪತ್ತೆಯಾಗಿದೆ.ಅನಾಮಧೇಯ ಕರೆಯೊಂದರ ಸ್ಪಷ್ಟ ಮಾಹಿತಿಯ ಮೇರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳು ಶಾಲೆಯ ಮೇಲೆ ದಾಳಿ ನಡೆಸಿ ಸುಮಾರು 8KG ಗೂ ಹೆಚ್ಚು ಕೇಸರೀ ಬಾತನ್ನು ವಶಪಡಿಸಿಕೊಂಡಿದ್ದಾರೆ.ಘಟನೆ ಖಂಡಿಸಿ ಮಕ್ಕಳ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.ಅಲ್ಲದೆ ತಮಗೆ ನೀಡಲಾಗುತ್ತಿರುವ ಊಟ ಉತ್ತಮ ಗುಣಮಟ್ಟದ್ದೇ ಆಗಿದ್ದರೂ,ಊಟದಲ್ಲಿ ಪದೇ ಪದೇ ಕೇಸರೀಬಾತು ದೊರೆಯುತ್ತಿತ್ತು ಎಂದು ವಿದ್ಯಾರ್ಥಿಗಳು ಆರೋಪಿದ್ದಾರೆ.ಪ್ರಕರಣದ ರೂವಾರಿಗಳನ್ನು ಆದಷ್ಟೂ ಬೇಗ ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸ್ಥಳೀಯ ಆಡಳಿತ ಹಾಗೂ ಶಾಲಾ ಆಡಳಿತ ಮಂಡಳಿ ಭರವಸೆ ನೀಡಿವೆ.ರಾಜ್ಯ ಕೋಮುವೇದಿಕೆಯ ಪ್ರಮುಖರಾದ ಗಂಜಿ ಕೋಮ್ಲೇಶ್ ಮತ್ತವರ ತಂಡ ಶಾಲೆಯಲ್ಲೇ ಬೀಡುಬಿಟ್ಟಿದ್ದು ಪರಿಸ್ಥಿತಿಯ ಮೇಲೆ ತೀವ್ರ ನಿಗಾ ವಹಿಸಿದೆ.

ಮತ್ತಷ್ಟು ಓದು »

16
ಜುಲೈ

ಕ್ರಿಕೆಟ್ ನಿಂದ ಆಜೀವ ನಿಷೇಧ: ಮೇಯಪ್ಪನ್,ರಾಜ್ ಕುಂದ್ರಾಗೆ ಸಂತಸ !!

– ಪ್ರವೀಣ್ ಕುಮಾರ್ ಮಾವಿನಕಾಡು
ಕುಂದ್ರಾ-ಮೇಯಪ್ಪನ್
ಚೆನ್ನೈ ನ ಹೊರವಲಯದ ರೆಸಾರ್ಟ್ ಒಂದರಲ್ಲಿ ಗುರುನಾಥ್ ಮೇಯಪ್ಪನ್ ಮತ್ತು ರಾಜ್ ಕುಂದ್ರಾ ರವರು ಜಂಟಿಯಾಗಿ ಆಯೋಜಿಸಿದ್ದ ಸಂತೋಷಕೂಟದಲ್ಲಿ,ತಂಡದ ಹಲವು ಆಟಗಾರರು ಹಾಗೂ ಬುಕ್ಕಿಗಳನ್ನುದ್ದೇಶಿಸಿ ಮಾತನಾಡುತ್ತಾ ಇಬ್ಬರೂ ಸಹಾ ತಮಗೆ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಆಜೀವ ನಿಷೇಧ ಹೇರಿದ ಕ್ರಮವನ್ನು ಸ್ವಾಗತಿಸಿದ್ದಾರೆ ಮತ್ತು ನಿಷೇಧ ಹೇರಿದ ಕ್ರಮಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ! ಇಷ್ಟು ವರ್ಷಗಳ ಕಾಲ ಐಪಿಎಲ್ ನ ಜವಾಬ್ಧಾರಿಯಿಂದಾಗಿ ಬೆಟ್ಟಿಂಗ್ ನಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಿರಲಿಲ್ಲ.ಇನ್ನು ಮುಂದೆ ನಾವುಗಳು ಪೂರ್ಣ ಪ್ರಮಾಣದಲ್ಲಿ ಬೆಟ್ಟಿಂಗ್ನಲ್ಲಿ ತೊಡಗಿಕೊಳ್ಳಲು ಯಾವುದೇ ತೊಂದರೆ ಇಲ್ಲ.ಇದರಿಂದ ತಮಗೆಲ್ಲರಿಗೂ ದುಪ್ಪಟ್ಟು ಲಾಭವಾಗಲಿದೆ ಎಂದು ಬುಕ್ಕಿಗಳನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರೆಂದು ನಂಬಲನರ್ಹ ಮೂಲಗಳಿಂದ ತಿಳಿದುಬಂದಿದೆ.

ಮತ್ತಷ್ಟು ಓದು »

15
ಜುಲೈ

ಟಿಂಗ್-ಟಾಂಗ್ : 1

– ವಿಶ್ವ ಸುಂಕಸಾಳ

ಟಿಂಗ್-ಟಾಂಗ್೧. ಕೆಲವರು ಸತ್ಯವನ್ನು ಇಷ್ಟಪಡುತ್ತಾರೆ. ಯಾವತ್ತೂ ಸತ್ಯವನ್ನೇ ಹೇಳಬೇಕೆಂದೂ ಬಯಸುತ್ತಾರೆ.ಆದರೆ ಬಹಿರಂಗವಾಗಿ ಯಾವತ್ತೂ ಸತ್ಯವನ್ನೇ ಹೇಳುತ್ತಾ,ಒಪ್ಪಿಕೊಳ್ಳುತ್ತಾ ಹೋದರೆ ಮೋದಿ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗುವ ಭಯ..!!
೨. ನೀವು ತಟಸ್ಥ ಬರಹಗಾರರೆಂದು ಬಿಂಬಿಸಿಕೊಳ್ಳಬೇಕೆಂದಿದ್ದರೆ ಯಾವುದೇ ವಿಷಯದ ಮೇಲೆ ಬರೆದ ಬರಹವಾದರೂ ಸರಿ, ಕೊನೆಯಲ್ಲಿ ಮೋದಿಯನ್ನು ಟೀಕಿಸಿದರಾಯಿತು.
೩. ಸಲಹೆಯನ್ನು ಯಾರು ಬೇಕಾದರೂ ಕೊಡುತ್ತಾರೆ. ಆದರೆ ಎಲ್ಲರಿಗೂ ಸರ್ಕಾರೀ ಕಾರು, ಜನರ ದುಡ್ಡಿನಲ್ಲಿ ಮೋಜು ಮಾಡುವ ಸೌಲಭ್ಯಗಳೆಲ್ಲ ಸಿಗುವುದಿಲ್ಲ.
೪. ಕವಿಗಳಲ್ಲೂ ಕೆಲವರು ಸಜ್ಜನ ಕವಿಗಳಿರುತ್ತಾರೆ. ಎಲ್ಲರೂ ಜೀವಪರಕವಿಗಳಲ್ಲ.
೫. ಸೋಮಾರಿಗಳಿಗೆ ಮಾತ್ರ ಯೋಗದ ಅಗತ್ಯವಿದೆಯೆಂದು ನುಡಿದವರು ಕೊನೆಗೂ ಅದನ್ನು ಸ್ವತಃ ಮಾಡುವ ಮೂಲಕ ತಮ್ಮ ಮಾತನ್ನು ಸಾಬೀತುಪಡಿಸಿದರು.
೬. ಕೆಲವರು ಮುಂದಿನ ಐದು ವರ್ಷ ಟೀಕಾಕಾರರಾಗಿರಬೇಕೋ ಅಥವಾ ಹೊಗಳುಭಟರಾಗಿರಬೇಕೋ ಎಂಬುದನ್ನು ಚುನಾವಣೆ ನಿರ್ಧರಿಸುತ್ತದೆ.
ಮತ್ತಷ್ಟು ಓದು »

11
ಜುಲೈ

ಇನ್ಮುಂದೆ ಕೆಡುಕಿ ಫ್ರೈಡ್ ಚಿಕನ್ ಜೊತೆಗೆ ಶಾರ್ಪಿಕ್ ಬಾಟಲ್ ಸಂಪೂರ್ಣ ಉಚಿತ!

– ಪ್ರವೀಣ್ ಕುಮಾರ್ ಮಾವಿನಕಾಡು

KHಇತ್ತೀಚಿನ ದಿನಗಳಲ್ಲಿ ಸಿದ್ಧ ಆಹಾರಗಳ ತಯಾರಿಕೆಯಲ್ಲಿ ತೀವ್ರ ನಿರ್ಲಕ್ಷ್ಯ ಕಂಡುಬರುತ್ತಿದ್ದು,ಮ್ಯಾಗಿಯಲ್ಲಿ ಸೀಸ,ಹಾಲಿನ ಪುಡಿಯಲ್ಲಿ ಡಿಟರ್ಜೆಂಟ್ ಪತ್ತೆಯಾದಂತೆ ಫ್ರೈಡ್ ಚಿಕನ್ ನಲ್ಲಿ ಸಾಮಾನ್ಯವಾಗಿ ಚರಂಡಿಯಲ್ಲಿ ಕಂಡುಬರುವ ಬ್ಯಾಕ್ಟೀರಿಯಾಗಳು ಕಂಡುಬಂದಿವೆ.

ಘಟನೆಯ ವಿವರ: ಇತ್ತೀಚಿಗೆ ಬಹುರಾಷ್ಟ್ರೀಯ ರೆಸ್ಟೋರೆಂಟ್ ಸರಪಣಿಯ ಚಿಕನ್ಪುರ್ ಜಿಲ್ಲೆಯ ಔಟ್ ಲೆಟ್ ಒಂದರಲ್ಲಿ ಫ್ರೈಡ್ ಚಿಕನ್‌ಗೆ ಆರ್ಡರ್ ಮಾಡಿ ಬಾಯಲ್ಲಿ ನೀರೂರಿಸುತ್ತಾ ಕುಳಿತಿದ್ದ ಗ್ರಾಹಕರೊಬ್ಬರು ತಮಗೆ ಸರ್ವ್ ಮಾಡಿದ ಚಿಕನ್ ಜೊತೆ ಬ್ಯಾಕ್ಟೀರಿಯಾಗಳು ಇರುವುದನ್ನು ತಿಳಿದು ಹೌಹಾರಿದ್ದಾರೆ.ಈ ಬಗ್ಗೆ ಮಳಿಗೆಯ ಸಿಬ್ಬಂದಿಗೆ ತಿಳಿಸಿದಾಗ ಅದು ಹೊರಗಿನಿಂದ ತಾವೇ ತಂದುಕೊಂಡ ಆಹಾರ ಎಂದು ವಾದ ಮಾಡಿದ್ದಾರೆ.ಆದರೆ ದೂರು ಸ್ವೀಕರಿಸಲು ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಈ ಬಗ್ಗೆ ಪುರಾವೆ ಲಭಿಸಿದ್ದು,ಬ್ಯಾಕ್ಟೀರಿಯಾಗಳಿದ್ದ ಮಾಂಸದ ತುಂಡುಗಳನ್ನು ಹೆಚ್ಚುವರಿ ಪರೀಕ್ಷೆಗೆ ಕಳುಹಿಸಲಾಗಿತ್ತು.ಪ್ರಯೋಗಾಲಯದ ವರದಿಯಲ್ಲಿ ಚಿಕನ್ ನಲ್ಲಿ ಬ್ಯಾಕ್ಟೀರಿಯಾಗಳು ಇರುವುದು ಧೃಢಪಟ್ಟಿದೆ!

ಮತ್ತಷ್ಟು ಓದು »

9
ಜುಲೈ

ರಂಗಿತರಂಗ

– ಚಿರು ಭಟ್

#‎ರಂಗಿತರಂಗ‬!

ರಂಗಿತರಂಗಒಂದೇ ಮಾತಲ್ಲಿ ಹೇಳುವುದಾದರೆ, ನಾನು ಕೆಲವು ವರ್ಷಗಳ ನಂತರ ಮನಸಾರೆ ಇಷ್ಟ ಪಟ್ಟ ಚಿತ್ರ. ಈಗ ಚಿತ್ರದ ಬಗ್ಗೆ ಮಾತಾಡೋಣ. ಅಸಲಿಗೆ ಚಿತ್ರದ ಬಗ್ಗೆ ನಾವು ವಿಮರ್ಶೆ ಬರೆದರೆ ಅದು ತಪ್ಪಾಗುತ್ತದೆ. ಕಥೆ ಅರ್ಧ ಹೇಳಿದರೆ ನಿಮಗೆ ಅರ್ಥವಾಗುವುದಿಲ್ಲ, ಪೂರ್ತಿ ಹೇಳಿದರೆ ಮಜಾ ಬರಲ್ಲ. ಗುಡ್ಡದ ಭೂತ, ಅಂಗಾರನ ಭೂತ, ಸಾಲು ಸಾಲು ಬಸುರಿ ಹೆಂಗಸರ ಕೊಲೆ, ತನ್ನ ಸುತ್ತ ಏನಾಗುತ್ತಿದೆ ಎಂದೇ ತಿಳಿಯದ ನಾಯಕ, ಅವನ ಹೆಂಡತಿ ಮತ್ತು ಅದೇ ನಾಯಕನನ್ನು ಒಂದು ಉದ್ದೇಶದಿಂದ ಹುಡುಕುತ್ತಾ ಅಲೆದಾಡುತ್ತಿರುವ ಮತ್ತೊಬ್ಬ ಜರ್ನಲಿಸ್ಟ್ ಹುಡುಗಿ.

ಇವಿಷ್ಟು ಸಾಮಾನ್ಯ ಜನರ ಕೈಯಲ್ಲಿ ಕೊಟ್ಟರೆ ಪುಳಿಯೊಗರೆ ಚಿತ್ರಾನ್ನ ಸೇರಿಸಿ ಉಪ್ಪಿಟ್ಟು ಮಾಡುತ್ತಿದ್ದರೇನೋ ಆದರೆ ಅನುಪ್ ಭಂಡಾರಿಯವರಿಗೆ ಕೊಟ್ಟಿದ್ದರಿಂದ ಅದು “ರಂಗಿತರಂಗ”ವಾಗಿದೆ. ನಿಜಕ್ಕೂ ಒಂದು ಸದಭಿರುಚಿಯ ಚಿತ್ರ. ಅಪ್ಪ ಹಾಕಿದ ಆಲದ ಮರಕ್ಕೇ ಜೋತುಬಿದ್ದಿರುವ ನಾಯಕನ ಚಿತ್ರಕ್ಕೆ ಹೋಗುವುದಕ್ಕಿಂತ ಇಂಥ ಒಂದು ಚಿತ್ರ ನೋಡಿದರೆ, ಕಾಸು ಕೊಟ್ಟಿದ್ದಕ್ಕೂ ಮೈ ಉರಿಯುವುದಿಲ್ಲ. ಸಿನಿಮಾದ ಒಂದೊಂದು ಫ್ರೇಮ್ ಕೂಡ ಕಮರೊಟ್ಟುಗೇ ನಮ್ಮನ್ನು ಫ್ರೀಯಾಗಿ ಕರೆದುಕೊಂಡು ಹೋದಂತಿದೆ. ಛಾಯಾಗ್ರಹಣ ನಿರ್ದೇಶನದಲ್ಲಿ ಲ್ಯಾನ್ಸ್ ಕ್ಯಾಪ್ಲನ್ ಗೆದ್ದಿದ್ದಾರೆ. ಸಿನಿಮಾದ ಹಿನ್ನೆಲೆ ಸಂಗೀತ ಮತ್ತು ಸಂಗೀತ ಬಹಳ ಅದ್ಭುತವಾಗಿ ಮೂಡಿಬಂದಿದೆ. ರಾಧಿಕಾ ಚೇತನ್ ನಟನೆ ಚೆನ್ನಾಗಿದೆ. ಅವಂತಿಕ ಶೆಟ್ಟಿ ನಟನೆಯೂ ಚೆನ್ನಾಗಿದೆ ಆದರೆ, ಮತ್ತಷ್ಟು ಎಫರ್ಟ್ ಹಾಕಬೇಕು. ನಾಯಕ ನಟ ನಿರುಪ್ ನಟನೆಯಲ್ಲಿ ಸುಧಾರಿಸುವುದು ಬಹಳ ಇದೆ. ಆದರೆ ಈ ಚಿತ್ರಕ್ಕೆ ಅವರ ನಟನೆ ತಕ್ಕ ಮಟ್ಟಿಗಿದೆ ಅಷ್ಟೆ. ಚಿತ್ರ ನಿಂತಿರುವುದೇ ಸಾಯಿಕುಮಾರ್‍ರ ನಟನೆಯ ಮೇಲೆ, ಅವರ ಪಾತ್ರದ ಮೇಲೆ ಎಂದರೆ ತಪ್ಪಾಗುವುದಿಲ್ಲ. ಅವರ ಬಗ್ಗೆ ಹೇಳಬೇಕೆಂದರೆ “Guys, Saikumar is backkkk!!”
ಮತ್ತಷ್ಟು ಓದು »