ವಿಷಯದ ವಿವರಗಳಿಗೆ ದಾಟಿರಿ

Posts from the ‘ಮರೆತು ಮರೆಯಾದ ವೀರರು’ Category

27
ಫೆಬ್ರ

“ಸ್ವಾತಂತ್ರ್ಯವೀರ”ನ ವ್ಯಕ್ತಿತ್ವ ಅನಾವರಣ..!!

ಭೀಮಸೇನ್ ಪುರೋಹಿತ್

“ಭಗತ್ ಸಿಂಗ್, ರಾಜಗುರು,ಆಜಾದ್ ಮುಂತಾದ ಕ್ರಾಂತಿಕಾರಗಳ ಹೆಸರುಗಳನ್ನು ಕೇಳಿದಾಗಲೆಲ್ಲ ನಾವು ಆದರದಿಂದ ತಲೆಬಾಗುತ್ತೇವೆ.ಆದರೆ, ಇಂತಹ ನೂರಾರು ಕ್ರಾಂತಿಕಾರಗಳನ್ನ ನಿರ್ಮಿಸಿದ ‘ಸಾವರ್ಕರ’ರನ್ನು ಸ್ಮರಿಸುವಾಗ ಸಂಕೋಚಕ್ಕೆ ಒಳಗಾಗುವುದು ಬಹಳ ದೌರ್ಭಾಗ್ಯದ ಸಂಗತಿ. ವೀರ ಸಾವರ್ಕರರ ಬಗ್ಗೆ ಅನೇಕ ಭ್ರಮೆಗಳನ್ನು ಹಬ್ಬಿಸಿರುವುದೇ ಇದಕ್ಕೆ ಕಾರಣ..”

ಮಾಜಿ ಕೇಂದ್ರಮಂತ್ರಿ ಹಾಗು ಕಾಂಗ್ರೆಸ್ ನಾಯಕ  ‘ವಸಂತ ಸಾಠೆ’ ಯವರ ಈ ಮಾತು ಯಾವಾಗಲೂ ನನ್ನನ್ನು ಕಾಡಿವೆ.. ಇಲ್ಲಸಲ್ಲದ, ಮಿಥ್ಯಾ ಆರೋಪಗಳನ್ನೇ ನಿಜವೆಂದು ನಂಬಿ, ಒಬ್ಬ ರಾಷ್ಟ್ರೀಯ ಪುರುಷನನ್ನು ಹಿಂಬದಿಗೆ ಸರಿಸಿ, ಅವರ ತೇಜೋವಧೆಯನ್ನೇ ನಿರಂತರವಾಗಿ ಮುಂದುವರೆಸಿಕೊಂಡು ಬಂದಿರುವುದು ನಿಜಕ್ಕೂ ಬೇಸರದ ಸಂಗತಿಯೇ..

ಕೇವಲ ಸಾವರ್ಕರರ ಮೇಲಿನ ವೃಥಾ ಅಭಿಮಾನದಿಂದ ಈ ಲೇಖನ ಹೊರಟಿಲ್ಲ.. ಬದಲಾಗಿ ಸಾವರ್ಕರರ ನಿಜಜೀವನದ ಮೇಲೆ ಬೆಳಕು ಚೆಲ್ಲುವ ಪ್ರಯತ್ನವಷ್ಟೇ..

ಮತ್ತಷ್ಟು ಓದು »

12
ಜನ

ಭಾರತದ ಯುವವರ್ಗದ ಚೈತನ್ಯವನ್ನು ಬಡಿದೆಬ್ಬಿಸಿದ ಸಿಡಿಲ ಸಂತ ಸ್ವಾಮಿ ವಿವೇಕಾನಂದ

-ಶ್ರೀವಿದ್ಯಾ

ಜನವರಿ ೧೨, ೧೮೬೩ ರಂದು ಕೊಲ್ಕತ್ತಾದ ಸಿಮ್ಲ ಎಂಬ ಭಾಗದಲ್ಲಿ ನರೇಂದ್ರನಾಥ ದತ್ತ ಜನಿಸಿದನು. ಸ್ವಾಮಿ ವಿವೇಕಾನಂದರ ಹುಟ್ಟು ಹೆಸರು ನರೇಂದ್ರನಾಥ ದತ್ತ. ತಂದೆ ವಿಶ್ವನಾಥ ದತ್ತ, ತಾಯಿ ಭುವನೇಶ್ವರಿ.

ತಂದೆ ವಕೀಲರಾಗಿದ್ದು, ಬೇಕಾದಷ್ಟು ವಿಷಯಗಳನ್ನು ತಿಳಿದುಕೊಂಡಿದ್ದರು ಮತ್ತು ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ತಾಯಿ ನೋಡುವುದಕ್ಕೆ ಮತ್ತು ನಡೆನುಡಿಗಳಲ್ಲಿ ರಾಣಿಯಂತಿದ್ದಳು. ಎಲ್ಲರೂ ಆಕೆಯನ್ನು ಗೌರವ ಆದರಗಳಿಂದ ಕಾಣುತ್ತಿದ್ದರು.ಅವಳಿಗೆ ಭಗವಂತನಲ್ಲಿ ತುಂಬ ಭಕ್ತಿ. ಅವಳಿಗೆ ಇದ್ದ ಒಂದು ವಿಶೇಷ ಶಕ್ತಿಯೆಂದರೆ ಅಸಾಧಾರಣವಾದ ನೆನಪು. ರಾಮಾಯಣ, ಮಹಾಭಾರತದ ಅನೇಕ ಭಾಗಗಳು ಅವಳಿಗೆ ಬಾಯಲ್ಲೇ ಬರುತ್ತಿದ್ದವು.

ನರೇನ್ ಬೆಳೆಯುತ್ತ ಬೆಳೆಯುತ್ತ ಅಸಾಧ್ಯ ತುಂಟನಾದ. ಅವನ ಬದುಕಿನಲ್ಲಿ ಮೊದಲ ದೊಡ್ಡ ಗುರು ತಾಯಿ. ತಾಯಿಯಿಂದ ನರೇನ್ ರಾಮಾಯಣ, ಮಹಾಭಾರತಗಳನ್ನು ಕೇಳಿದ್ದಷ್ಟೇ ಅಲ್ಲದೇ ಧೈರ್ಯ, ಸತ್ಯಪ್ರಿಯತೆಗಳನ್ನೂ ಕಲಿತ. ಜೊತೆಯಲ್ಲಿ ಔದಾರ್ಯ ಗುಣ ಬೆಳೆಯಿತು. ಬಡವರು ಹಾಗೂ ಸಂನ್ಯಾಸಿಗಳು ಭಿಕ್ಷೆ ಬೇಡಿದಾಗ ಅವನ ಮನಸ್ಸು ಕರಗಿ ಕೈಯಲ್ಲಿ ಏನು ಇರುತ್ತದೆಯೋ ಅದನ್ನು ದಾನ ಮಾಡುತ್ತಿದ್ದನು. ವೈರಾಗ್ಯ ಮತ್ತು ಅಲೌಕಿಕತೆಗಳು ಬಾಲ್ಯದಿಂದಲೇ ನರೇಂದ್ರನ ಸ್ವಭಾವವಾಗಿ ಮೈಗೂಡಿದ್ದವು. ಚಿಕ್ಕಂದಿನಿಂದಲೂ ನರೇಂದ್ರನಿಗೆ ಅಸಾಧಾರಣವಾದ ಅನುಭವವಿತ್ತು. ಅವನು ಕಣ್ಣು ಮುಚ್ಚಿದಾಗ ಅವನಿಗೆ ಹುಬ್ಬುಗಳ ನಡುವೆ ಒಂದು ಬೆಳಕು ಕಾಣಿಸಿಕೊಳ್ಳುತ್ತಿತ್ತು. ಅವನಲ್ಲಿ ವಿಶಿಷ್ಟವಾದ ಏಕಾಗ್ರತೆಯ ಗುಣ ಇತ್ತು. ವಿರಾಮದ ವೇಳೆಗಳಲ್ಲಿ ಧ್ಯಾನದಲ್ಲಿ ಹೆಚ್ಚು ಸಮಯವನ್ನು ಕಳೆಯುತ್ತಿದ್ದನು.

ಮತ್ತಷ್ಟು ಓದು »

15
ನವೆಂ

ಒಂದು ಸೋಲಿನ ವೃತ್ತಾಂತ; ಪಾಠ ಕಲಿಯದ ದುರಂತ

-ರಾಕೇಶ್ ಏನ್  ಎಸ್

ಸೋಲು… ಸೋಲು… ಸೋಲು
ಸೋಲು ಅಕ್ಷ್ಯಮ್ಯ, ಅದರಲ್ಲಿಯೂ ಯುದ್ಧಭೂಮಿಯಲ್ಲಿನ ಅಪಜಯಕ್ಕೆ ಕ್ಷಮೆಯೇ ಇಲ್ಲ ಎಂದು ಕೊಂಡಿರುವ ಪರಂಪರೆ ನಮ್ಮದು. ಸೋತವ ಎಂಬ ಹಣೆಪಟ್ಟಿ ಯಾರಿಗೂ ಬೇಡ, ಸೋಲು ಎಂದಿಗೂ ತಬ್ಬಲಿ.

ಸರಿಯಾಗಿ ೫೦ ವರ್ಷಗಳ ಹಿಂದೆ, ಇದೇ ಸಮಯದಲ್ಲಿ ಹಿಮಾಲಯದ ಧವಳಗಿರಿಗಳ ಮಧ್ಯೆ ಭಾರತೀಯರನ್ನು ಅಪ್ಪಿಕೊಳ್ಳಲು ಇಂತಹದ್ದೆ ಒಂದು ಸೋಲು ಹೊಂಚು ಹಾಕಿ ಕುಳಿತಿತ್ತು. ಚೀನಾದ ಕೆಂಪು ಪಡೆ ಹೆದ್ದೆರೆಯೋಪಾದಿಯಲ್ಲಿ ನಡೆಸಿದ ದಾಳಿಗೆ ಗಣತಂತ್ರ ಸ್ವತಂತ್ರ ಭಾರತ ಬೆರಗಾಗಿತ್ತು, ಬೆನ್ನು ಬಾಗಿಸಿ ವಂದಿಸಿ ಸೋತು ಹೋಗಿತ್ತು.

ಭಾರತ ಮತ್ತು ಚೀನಾ ಪ್ರಾಚೀನ ನಾಗರಿಕತೆಗಳ ತವರೂರು. ಹಾಗೆಯೆ ಜಾಗತಿಕರಣಗೊಂಡ ಜಗತ್ತನ್ನು ಹೊತ್ತು ಸಾಗಿಸುವ ಗಾಲಿಗಳು. ಈ ಎರಡು ದೇಶಗಳಿಗೆ ಭೂತ ಮತ್ತು ಭವಿಷ್ಯದಲ್ಲಿರುವ ಪ್ರಾಮುಖ್ಯತೆ ಆಪಾರ. ಆದರೆ ಭಾರತ ಮತ್ತು ಚೀನಾದ ಮಧ್ಯೆ ಹುಟ್ಟಿಕೊಂಡ ಸಂಘರ್ಷದ ಕಾಲಘಟ್ಟ ಬಹಳ ವಿಚಿತ್ರವಾದದ್ದು.

೧೯೫೦ರ ದಶಕದಲ್ಲಿ ಚೀನಾವು ಮಾವೋ ತ್ಸೆತುಂಗ್‌ನ ತೆಕ್ಕೆಯಲ್ಲಿ ಅಪರಿಮಿತ ವೇಗದ ಅಭಿವೃದ್ಧಿಯ ಕನಸನ್ನು ಹೊಸೆಯುತ್ತಿದ್ದರೆ, ಭಾರತ ಬ್ರಿಟಿಷರಿಂದ ಮುಕ್ತವಾಗಿ ಪ್ರಜಾರಾಜ್ಯದ ಹೊಸ ವ್ಯವಸ್ಥೆಗೆ ಒಗ್ಗಿಕೊಳ್ಳುತ್ತಿದ್ದ ಸಮಯ, ಸಂದರ್ಭವದು. ಆಗ ಈ ಎರಡು ದೇಶಗಳಿಗೆ ಯುದ್ಧವೆಂಬ ಹೊರೆ ಬೇಕಾಗಿರಲಿಲ್ಲ.

ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ’ಹಿಂದಿ ಚೀನಿ ಭಾಯಿ ಭಾಯಿ’ ಎಂಬ ಉದ್ಘೋಷವನ್ನು ೧೯೫೦ರ ದಶಕದಲ್ಲಿ ಮುನ್ನೆಲೆಗೆ ತಂದಿದ್ದರು. ತೈವಾನ್ ವಿವಾದದಿಂದಾಗಿ ವಿಶ್ವ ಗುಂಪಿನಲ್ಲಿ ಚೀನಾ ಮೂಲೆಗುಂಪಾದ ಸಂದರ್ಭದಲ್ಲಿ ಅದನ್ನು ಒಂದು ದೇಶವೆಂದು ಪರಿಭಾವಿಸಿ ಅದರೊಂದಿಗೆ ಸ್ನೇಹ ಸಂಬಂಧ ಬೆಳೆಸಿದ ದೇಶಗಳಲ್ಲಿ ಭಾರತವು ಒಂದು. ಇಂತಹ ಮಧುರ ಸಂಬಂಧ ಉತ್ತುಂಗಕ್ಕೇರುತ್ತಲೇ ಪರಸ್ಪರ ಅನುಮಾನದ ಪಾತಳಕ್ಕೆ ಕುಸಿದದ್ದು ಚರಿತ್ರೆಯ ವೈಚಿತ್ರ. ಮತ್ತಷ್ಟು ಓದು »

16
ಮೇ

ನಮ್ಮ ಇತಿಹಾಸ ನಾವೇ ಬರೆದು ಓದೋದು ಬೇಡವೆ?

– ಚಕ್ರವರ್ತಿ ಸೂಲಿಬೆಲೆ

ಬ್ರಿಟಿಷ್ ಅಧಿಕಾರಿ ಮ್ಯಾಲೆಸನ್ ಈ ದೇಶದ ಜನರನ್ನು ಹುಚ್ಚರು ಅಂತ ಕರೀತಾನೆ. ಏಕೆ ಗೊತ್ತೇನು? ನೇಣು ಶಿಕ್ಷೆಗೆ ಕಳಿಸಿದರೆ ಈ ದೇಶದ ಜನ ಹೆದರೋದಿರಲಿ, ತಾವೇ ನೇಣುಗಂಬದ ಬಳಿ ಧಾವಿಸಿ ನೇಣು ಕುಣಿಕೆಯನ್ನು ಕೊರಳಿಗೆ ಹಾಕಿಕೊಂಡುಬಿಡ್ತಾ ಇದ್ದರಂತೆ. ಆದಷ್ಟು ಬೇಗ ನನ್ನ ನೇಣಿಗೇರಿಸಿ ಅಂತ ಗೋಗರಿಯುತ್ತಾ ಇದ್ದರಂತೆ. ಹೀಗೇಕೆಂದು ಪ್ರಶ್ನಿಸಿದಾಗ, ಪುನರ್ಜನ್ಮ ನಂಬೋರು ನಾವು, ಬೇಗ ಹೊರಟರೆ, ಬೇಗ ಮರಳಿ ಬರುತ್ತೇವಲ್ಲ! ಅನ್ನುವ ವಾದ ಮಂಡಿಸುತ್ತಿದ್ದರಂತೆ. ಹೆದರಿಸಬೇಕೆಂದು ನೇಣಿಗೇರಿಸಿದರೆ, ಅದೇ ಪ್ರೇರಣೆಯಾಗುವ ರೀತಿ ಅತೀ ವಿಶಿಷ್ಟವಲ್ಲವೆ? ಅದಕ್ಕೇ ಬ್ರಿಟಿಷರಿಗೆ ಅಷ್ಟೊಂದು ಕೋಪ.

ಮೇ ೧೦ಕ್ಕೆ ೧೮೫೭ರಲ್ಲಿ ಸಂಗ್ರಾಮವೊಂದಕ್ಕೆ ಮುನ್ನುಡಿ ಬರೆಯಲಾಗಿತ್ತು. ಬ್ಯಾರಕ್‌ಪುರದ ಮಂಗಲ್‌ಪಾಂಡೆ ಆಂಗ್ಲ ಪೊಲೀಸ್ ಅಧಿಕಾರಿಯತ್ತ ಗುಂಡು ಸಿಡಿಸಿ, ತಿಂಗಳ ಕೊನೆಯಲ್ಲಿ ಆರಂಭವಾಗಬೇಕಾಗಿದ್ದ ಕ್ರಾಂತಿಗೆ ಆಗಲೇ ಕಿಡಿ ಹಚ್ಚಿಬಿಟ್ಟಿದ್ದ. ಅಲ್ಲಿಂದಾಚೆಗೆ ಮೀರತ್, ದೆಹಲಿಗಳು ಕ್ರಾಂತಿಯ ಕಿಡಿಗೆ ಉರಿದು ಬಿದ್ದವು. ಕಾನ್‌ಪುರ, ಝಾನ್ಸಿಗಳು ಜಯಘೋಷ ಮೊಳಗಿಸಿದವು. ಬಿಹಾರ ಕುದಿಯಿತು. ದಕ್ಷಿಣದಲ್ಲೂ ಬ್ರಿಟಿಷರ ಬುಡಕ್ಕೆ ಬಲವಾದ ಪೆಟ್ಟು ಬಿತ್ತು. ಅಂದುಕೊಂಡಂತೆಯೇ ಎಲ್ಲವೂ ಆಗಿದ್ದರೆ, ಇತಿಹಾಸದ ಹಾದಿ ಬೇರೆಯೇ ಇರುತ್ತಿತ್ತು. ಆ ವೇಳೆಗೆ ಆಂಗ್ಲರೊಟ್ಟಿಗೆ ಕಾದಾಡಿ ಹೈರಾಣಾಗಿದ್ದ ಸಿಕ್ಖರು ಭಾರತೀಯ ಸೈನಿಕರ ಬೆಂಬಲಕ್ಕೆ ಬರಲಿಲ್ಲ. ಅಯ್ಯೋ ಪಾಪ! ಅನ್ನುವ ಕೆಲವಷ್ಟು ಜನ ಆಂಗ್ಲ ಅಧಿಕಾರಿಗಳಿಗೆ ಉಳಿದುಕೊಳ್ಳುವ ಮಾರ್ಗ ತೋರಿದರು. ಅಂತೂ ಮಹಾಯುದ್ಧವೊಂದರಲ್ಲಿ ನಾವು ಸೋತಿದ್ದೆವು.

ಮತ್ತಷ್ಟು ಓದು »

25
ಏಪ್ರಿಲ್

ಈ ಯುದ್ಧ ಭೂಮಿಯಲ್ಲಿ ಸೈನಿಕರ ಬಡಿದಾಟ ಪ್ರಕೃತಿಯೊಂದಿಗೆ!

– ಡಾ ಅಶೋಕ್. ಕೆ. ಆರ್

          ಇದು ಪ್ರಪಂಚದ ಅತಿ ಎತ್ತರದ ಯುದ್ಧಭೂಮಿ. ಸಮುದ್ರಮಟ್ಟದಿಂದ ಅಜಮಾಸು 5,753 ಮೀ ಎತ್ತರದಲ್ಲಿರುವ ಹಿಮಚ್ಛಾದಿತ ರಣರಂಗ. ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರತಿಷ್ಠೆಯ ಸಂಕೇತ. 1984ರಿಂದ ಇಲ್ಲಿಯವರೆಗೆ ಪಾಕಿಸ್ತಾನದ ಮೂರು ಸಾವಿರ ಮತ್ತು ಭಾರತದ ಐದು ಸಾವಿರಕ್ಕೂ ಹೆಚ್ಚು ಸೈನಿಕರು ಇಲ್ಲಿ ಹತರಾಗಿದ್ದಾರೆ [ಅನಧಿಕೃತ ವರದಿ; ಅಧಿಕೃತ ವರದಿಯನ್ನು ಎರಡೂ ದೇಶದ ಸರಕಾರಗಳು ಬಹಿರಂಗಗೊಳಿಸುವುದಿಲ್ಲ]. ಬಹಳಷ್ಟು ಮಂದಿಯ ದೇಹವನ್ನು ಇನ್ನೂ ಪತ್ತೆ ಹಚ್ಚಲಾಗಿಲ್ಲ. 80%ಗಿಂತ ಹೆಚ್ಚು ಸಂಖ್ಯೆಯ ಸೈನಿಕರ ಮರಣಕ್ಕೆ ಕಾರಣವಾಗಿದ್ದು ಎದುರಾಳಿಗಳ ಬಂದೂಕಾಗಲೀ, ಆಧುನಿಕ ಕ್ಷಿಪಣಿಗಳಾಗಲೀ ಅಲ್ಲ. ದೇಶಗಡಿಗಳ ಲೆಕ್ಕಿಸದೆ ಈ ಸೈನಿಕರನ್ನು ಬಲಿ ತೆಗೆದುಕೊಂಡಿರುವುದು ಪ್ರಕೃತಿ! ಪ್ರಕೃತಿಯ ಪ್ರಮುಖಾಯುಧ ಹಿಮ!! ಇದು ಸಿಯಾಚಿನ್ ಯುದ್ಧಭೂಮಿ.

ಆಪರೇಷನ್ ಮೇಘದೂತ: –

ಬಾಂಗ್ಲಾದೇಶದ ವಿಮೋಚನಾ ಯುದ್ಧದ ನಂತರ 1972ರಲ್ಲಿ ಸಿಮ್ಲಾ ಒಪ್ಪಂದಕ್ಕೆ ಯು.ಎನ್ ನೇತೃತ್ವದಲ್ಲಿ ಭಾರತ ಮತ್ತು ಪಾಕಿಸ್ತಾನ ಸಹಿ ಹಾಕುತ್ತವೆ. ಗಡಿರೇಖೆಯನ್ನು ವಿವರಿಸುವ ಆ ಒಪ್ಪಂದದಲ್ಲಿ ಸಿಯಾಚಿನ್ ಸೇರಿರಲಿಲ್ಲ. ಹಿಮಚ್ಛಾದಿತ ಮರುಭೂಮಿಯ ಮೇಲೆ ಹಕ್ಕು ಸಾಧಿಸಲು ಇವೆರಡೂ ದೇಶಗಳು ಬಡಿದಾಡಲಾರವು ಎಂದುಕೊಂಡಿತ್ತು ಯು.ಎನ್. ಆದರೆ ನಡೆದಿದ್ದೇ ಬೇರೆ! 1967ರಿಂದಲೇ ಅಮೆರಿಕಾದ ರಕ್ಷಣಾ ಸಂಸ್ಥೆಗಳು ತಯಾರಿಸಿದ ನಕ್ಷೆಗಳಲ್ಲಿ ಸಿಯಾಚಿನ್ ಪ್ರದೇಶವನ್ನು ಯಾವುದೇ ಐತಿಹಾಸಿಕ ಆಧಾರಗಳಿಲ್ಲದಾಗ್ಯೂ ಪಾಕಿಸ್ತಾನದ ಭಾಗವಾಗಿ ತೋರಿಸಲಾರಂಭಿಸಿತು. ಪಾಕಿಸ್ತಾನ ಕೂಡ ಅಮೆರಿಕದ ಕುಮ್ಮಕ್ಕಿನಿಂದಾಗಿ ಕ್ರಮೇಣವಾಗಿ ಸಿಯಾಚಿನ್ ಪ್ರದೇಶದ ಮೇಲೆ ಹಕ್ಕು ಚಲಾಯಿಸಲಾರಂಭಿಸಿತು. ಪಾಕಿನ ಈ ವರ್ತನೆಯನ್ನು ಗಮನಿಸಿದ ಭಾರತ ಸರಕಾರ ಕೂಡ ತನ್ನ ಸೈನ್ಯವನ್ನು ‘ಎತ್ತರದ ಪ್ರದೇಶಗಳಲ್ಲಿ ಯುದ್ಧ ತರಬೇತಿಯ’ ನೆಪದಲ್ಲಿ ಸಿಯಾಚಿನ್ ಪ್ರದೇಶಕ್ಕೆ ನಿಯೋಜಿಸಲಾರಂಭಿಸಿತು.

ಕುದಿಯಲಾರಂಭಿಸಿದ ದ್ವೇಷ 1984ರಲ್ಲಿ ಯುದ್ಧ ರೂಪವನ್ನು ಪಡೆಯಿತು. ಸಿಯಾಚಿನ್ ಪ್ರದೇಶವನ್ನು ಹಿಂಪಡೆದುಕೊಳ್ಳಲು ಆಪರೇಷನ್ ಮೇಘದೂತದ ಹೆಸರಿನಲ್ಲಿ ಭಾರತದ ಸೈನಿಕರು ಸಿಯಾಚಿನ್ ಏರಲಾರಂಭಿಸಿದರು. ಸರಿಸುಮಾರು ಸಾವಿರ ಚದುರ ಮೈಲು ಪ್ರದೇಶವನ್ನು ವಶಪಡಿಸಿಕೊಳ್ಳುವುದರಲ್ಲಿ ಭಾರತ ಸಫಲವಾಗಿ ಯುದ್ಧದಲ್ಲಿ ಗೆಲುವು ಪಡೆಯಿತು.

ಮತ್ತಷ್ಟು ಓದು »

9
ಏಪ್ರಿಲ್

ಏಕಪಾತ್ರಾಭಿನಯಕ್ಕೆ ಪಾತ್ರ ಹುಡುಕುತ್ತಿದ್ದಾಗ ಸಿಕ್ಕ ಸೇನಾನಿ..!!!!!

– ಭೀಮಸೇನ್ ಪುರೋಹಿತ್

ಪ್ರತಿವರ್ಷ ನಮ್ಮ ಕಾಲೇಜಿನಲ್ಲಿ ನಡೆಯುವ ಅಂತರ್ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧಾಹಬ್ಬ “ದವನ”ದಲ್ಲಿ “ಏಕಪಾತ್ರಾಭಿನಯ”ವೂ ಒಂದು ಸ್ಪರ್ಧೆ.. ಈ ವರ್ಷ ಯಾರ ಅಭಿನಯ ಮಾಡಲಿ ಎಂದು ಯೋಚಿಸುತ್ತಿದ್ದೆ.. ಅಭಿನಯವಂತೂ ಇದ್ದಿದ್ದೇ. ಆದಷ್ಟು ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರನೊಬ್ಬನ ಪಾತ್ರ ಆಯ್ದುಕೊಂಡರೆ, ಬಹಳಷ್ಟು ಜನಕ್ಕೆ ಆ ಚರಿತ್ರೆಯನ್ನು ತಲುಪಿಸಿದಂತಾಗುತ್ತದೆ, ಅದರಲ್ಲೂ ಕರ್ನಾಟಕದವನೇ ಆದರೆ, ಪಾತ್ರದ ಸಂಭಾಷಣೆ ಬರೆಯುವುದೂ ನನಗೆ ಸುಲಭವಾಗುತ್ತದೆ ಎಂದು ಭಾವಿಸಿ, ಅಂಥಾ ಚಾರಿತ್ರಿಕವ್ಯಕ್ತಿಯ ಹುಡುಕಾಟದಲ್ಲಿ ಇದ್ದಾಗ, ಥಟ್ಟನೆ ಒಬ್ಬನ ನೆನಪಾಯಿತು..
ಎಂಟನೆ ತರಗತಿಯಲ್ಲಿದ್ದಾಗ ಅವನ ಬಗೆಗಿನ ಪುಸ್ತಕ ಓದಿದ್ದಷ್ಟೇ ನೆನಪು.. ಆದರೆ, ಅವನ ಉಜ್ವಲ ದೇಶಭಕ್ತಿ ಇವತ್ತಿಗೂ ಅವನ ಚಿತ್ರಣವನ್ನು ನನ್ನ ಮನಸ್ಸಿನಲ್ಲಿ ಹಸಿರಾಗಿಸಿದೆ..

“ಸುರಪುರ”-ಗದಗ ಜಿಲ್ಲೆಯ ಊರು. “ಬೇಡ”ನಾಯಕರು ಅದನ್ನು ಆಳುತ್ತಿದ್ದರು. ವಿಜಯನಗರದ ರಾಜರುಗಳಿಂದ ಪ್ರಭಾವಿತರಾಗಿದ್ದ ನಾಯಕರು, ಸಹಜವಾಗಿಯೇ ನಾಡು-ನುಡಿಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಧೈರ್ಯ-ಸಾಹಸಗಳಿಗೆ ಹೆಸರಾದ ವಂಶ ಅದು.. ಇಂಥ ಪರಂಪರೆಯಲ್ಲಿ ಬಂದವನೇ ಈ ಲೇಖನದ ಮೂಲಸ್ರೋತ “ವೆಂಕಟಪ್ಪ ನಾಯಕ”…!!

ಮತ್ತಷ್ಟು ಓದು »

9
ಮಾರ್ಚ್

ಅಟಲ್ ಜಿ ನಮಗೆಷ್ಟು ಗೊತ್ತು?

-ನಾಗರಾಜ್ ಎಂ ಎಂ

ಸ್ನೇಹಿತರೇ ಹೇಗಿದ್ದೀರಿ? ಇವತ್ತು ಮತ್ತೆ ಸ್ವಲ್ಪ ಟೈಮ್ ಮಾಡ್ಕೊಳಿ, ಏನಾದ್ರೂ ಹಾಗೆ ಮಾತಾಡೋಣ ಅಲ್ವಾ? ನೀವೇ ನೋಡಿದ್ದೀರಲ್ಲ ಇತ್ತೀಚೆಗೆ ಟಿವಿ ಚಾನಲ್ ಗಳನ್ನ ನೋಡೋಕೆ ಆಗದೆ ಇರೋವಷ್ಟರಮಟ್ಟಿಗೆ ನಮ್ಮ ಮಾನ್ಯ ಮಂತ್ರಿಗಳು, ರಾಜಕಾರಣಿಗಳು ಹೊಲಸು ಮಾಡೋದನ್ನ, ಇನ್ನೂ ಕೆಲವರು ಅದರ ಪರ ವಿರೋಧ ಮಾತಾಡಿ ಮಜಾ ಕೊಡೋದನ್ನ!! ಅಲ್ವೇ? ಆದರೆ ನಿಷ್ಟಾವಂತರಾಗಿ ದೇಶಕ್ಕಾಗಿ ದೇಶದ ಪ್ರಗತಿಗಾಗಿ ಹೋರಾಡಿದ ಎಷ್ಟೋ ಜನರಿದ್ದಾರೆ ಅವರಲ್ಲಿ ಒಬ್ಬರು ಹಾಗೂ ಮುಖ್ಯವಾದವರು ಮಾನ್ಯ ಅಟಲ್ ಬಿಹಾರಿ ವಾಜಪೇಯಿಯವರು…….. ಅವರ ಬಗ್ಗೆ ನಮಗೆ ಎಷ್ಟು ಗೊತ್ತು? ತಿಳಿಯುವ ಸಣ್ಣ ಪ್ರಯತ್ನ ಮಾಡೋಣ ಬನ್ನಿ.

ಅಟಲ್ ಅವರು ಹುಟ್ಟಿದ್ದು ಕ್ರಿಸ್ ಮಸ್ ದಿನದಂದು ಅದು 1924 ರಲ್ಲಿ ಕೃಷ್ಣ ದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ಅವರಿಗೆ,  ಮಧ್ಯ ಪ್ರದೇಶದ ಗ್ವಾಲಿಯರ್  ಹತ್ತಿರದ  ಶಿಂದೆ ಕಿ ಚವ್ವಾಣಿ ಅನ್ನೋ ಹಳ್ಳಿಯಲ್ಲಿ, ತಂದೆ ಒಬ್ಬ ಕವಿ ಹಾಗೆ ಸಾಮಾನ್ಯ ಶಾಲೆಯ ಮೇಷ್ಟ್ರು……. ಹಾಗೆ ಅಟಲ್ ಅವರ ಅಜ್ಜ ಪಂಡಿತ್ ಶ್ಯಾಮ್ ಲಾಲ್  ವಾಜಪೇಯಿಯವರು. ಅಟಲ್ ಅವರ ಪದವಿಯನ್ನ ವಿಕ್ಟೋರಿಯಾ ಕಾಲೇಜಿನಿಂದ (ಈಗ ಲಕ್ಷ್ಮಿ ಬಾಯಿ ಕಾಲೇಜು) ಪಡೆದರು. ಹಿಂದಿ, ಇಂಗ್ಲೀಷ್ ಹಾಗೂ ಸಂಸ್ಕೃತ ಭಾಷೆಯಲ್ಲಿ ಪಾಂಡಿತ್ಯ ಗಳಿಸಿದ ಅಟಲ್  ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನ ಕಾನ್ಪುರದ ಡಿ. ಎ. ವಿ ಕಾಲೇಜಿನಿಂದ ಪಡೆದರು. ನಂತರ ರಾಷ್ಟ್ರೀಯ ಸ್ವಯಂ ಸೇವಕ ಸಂಘ  (ಆರ್. ಎಸ್. ಎಸ್ )ವನ್ನು ಸೇರಿದರು. ವೀರ ಅರ್ಜುನ ಹಾಗೂ ಪಾಂಚಜನ್ಯ ಅನ್ನುವ ಎರಡು ಪತ್ರಿಕೆಗಳಿಗೆ ಪತ್ರಕರ್ತರಾಗಿ ಕವಿಯಾಗಿ ಸೇವೆ ಸಲ್ಲಿಸಿದರು….. ನಿಮಗೆ ಗೊತ್ತ? ಭಾರತದ  ಅವಿವಾಹಿತ ಪ್ರದಾನ ಮಂತ್ರಿ ಕೇವಲ ಅಟಲ್ ಜಿ ಮಾತ್ರ…..!!

ಅಟಲ್ ಅವರ ಮೊದಲ ರಾಜಕೀಯ ಜೀವನ ಶುರುವಾಗಿದ್ದು 1942 ರಲ್ಲಿ ಕ್ವಿಟ್ ಇಂಡಿಯ (ಬ್ರಿಟಿಷರೇ ಬಾರತ ಬಿಟ್ಟು ತೊಲಗಿ) ಚಳುವಳಿಯಲ್ಲೀ ಭಾಗವಹಿಸುವ ಮೂಲಕ, ನಂತರ 23 ದಿನಗಳ ಕಾಲ ಜೈಲು ವಾಸ ಅನುಭವಿಸ ಬೇಕಾಯಿತು, 1953 ರಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪರಿಚಯ ಭಾರತೀಯ ಜನ ಸಂಘದ ಮೂಲಕ ಆಯಿತು. 1957 ರಲ್ಲಿ ಮೊದಲ ಬಾರಿಗೆ ಲೋಕ ಸಭೆಯ ಸದಸ್ಯರಾಗಿ ಆಯ್ಕೆ ಆದರು. ನಂತರದ ದಿನಗಳಲ್ಲಿ ಇವರ ಚತುರತೆಯನ್ನ ಕಂಡ ನೆಹರು ಜಿ ಹೇಳಿದ್ರಂತೆ, ಈ ವ್ಯಕ್ತಿ ಮುಂದೆ ಪ್ರದಾನಿ ಆಗ್ತಾರೆ ಅಂತ. ಅವರ ಅಸಾಮಾನ್ಯ ಬುದ್ದಿವಂತಿಕೆಯಿಂದಾಗಿ ಎಷ್ಟರ ಮಟ್ಟಿಗೆ ಬೆಳೆದರು ಎಂದರೆ ಜನ ಸಾಮಾನ್ಯರಲ್ಲಿ ಭಾರತೀಯ ಜನ ಸಂಘ ಅನ್ನುವ ಹೆಸರೇ ಕೇಳದ ಪಕ್ಷವನ್ನ ಬುಡದಿಂದ ಕಟ್ಟಿ ಬೆಳಸಿದರು ಅದಕ್ಕೆ ಸಾಥ್ ಕೊಟ್ಟವರು ಲಾಲ್ ಕೃಷ್ಣ ಅಡ್ವಾಣಿ, ನಾನಾಜಿ ದೇಶಮುಖ್ ಹಾಗೂ ಬಾಲರಾಜ್ ಮಧೋಕ್ ಅವರು.

ಮತ್ತಷ್ಟು ಓದು »

8
ಮಾರ್ಚ್

ಇದು ಭರತವರ್ಷ : ಆ ಹೆಣ್ಣು ಮಗಳ ಹೋರಾಟಕ್ಕೆ ಅಂತ್ಯ ಇದೆಯಾ???

– ರಾಕೇಶ್ ಶೆಟ್ಟಿ

ಕಾಶ್ಮೀರದಲ್ಲಿ ಕಲ್ಲೊಂದು ಬಿದ್ದ ಮರುಕ್ಷಣದಲ್ಲೇ ಮಂಡಿಯೂರಿ ಕ್ಯಾಮೆರ ಹಿಡಿದು ಜಗತ್ತಿಗೆ ಸಾರುವ ಮಾಧ್ಯಮಗಳು,ತಡವಾಗಿಯಾದರೂ ಪ್ರತಿಕ್ರಿಯಿಸುವ ಕೇಂದ್ರ ಸರ್ಕಾರ,ಅಥವಾ ಇನ್ನುಳಿದ ಯಾವುದೆಂದರೆ ಯಾವುದೇ ರಾಜಕೀಯ ಪಕ್ಷಗಳು,ಕಳೆದ ವರ್ಷ ಅಲ್ಲಿನ ಪ್ರತ್ಯೇಕವಾದಿ ಹೋರಾಟಗಾರು ಇಡಿ ರಾಜ್ಯವನ್ನ ೨-೩ ತಿಂಗಳು ದಿಗ್ಭಂದನದಲ್ಲಿಟ್ಟು, ಜನ ಸಾಮಾನ್ಯರು ದಿನ ನಿತ್ಯದ ಅಗತ್ಯ ವಸ್ತುಗಳಿಗೆ ಪರದಾಡುತಿದ್ದರೂ ಸಹ, ಆ ‘ನತದೃಷ್ಟ ರಾಜ್ಯ’ಕ್ಕೂ ನಮಗೂ ಯಾವ ಸಂಬಂದವೇ ಇಲ್ಲ ಅನ್ನುವಂತೆ ಕುಳಿತಿದ್ದರು.ಭಾರತದ ಆ ನತದೃಷ್ಟ ರಾಜ್ಯದ ಹೆಸರು ‘ಮಣಿಪುರ’.ಈಶಾನ್ಯ ಭಾರತದ ಸಪ್ತ ಸಹೋದರಿ ರಾಜ್ಯಗಳಲ್ಲೊಂದಾದ ಮಣಿಪುರವನ್ನ ನೆಹರೂ ಭಾರತದ ಮುಕುಟ ಮಣಿ ಅಂದಿದ್ದರಲ್ಲ ಅದೇ ಮಣಿಪುರ…! ಆ ಮಣಿಪುರದ ರಕ್ತ ಸಿಕ್ತ ಅಧ್ಯಾಯದ ಬಗ್ಗೆ ಮುಂದೊಮ್ಮೆ ಬರೆಯುವೆ.
  
ಇಂದು ‘ವಿಶ್ವ ಮಹಿಳಾದಿನ’, ಬೇರೆ ಬೇರೆ ದೇಶದ ಮಹಿಳೆಯರನ್ನ ನೆನಪಿಸಿಕೊಳ್ಳುವ ಮಾಧ್ಯಮಗಳ ಕಣ್ಣಿಗೆ, ಮಣಿಪುರದ (ಭಾರತದ) ಉಕ್ಕಿನ ಮಹಿಳೆ ಇರೋ ಚಾನು ಶರ್ಮಿಲ ಕಾಣಿಸುವುದಿಲ್ಲ. ಇರಲಿ ಬಿಡಿ ದೊಡ್ಡವರ ಪತ್ರಿಕೆಗಳು ತಣ್ಣಗಿರಲಿ,ಆ ಮಹಿಳೆಯ ಹೋರಾಟದ ಚಿತ್ರಣವನ್ನ ದಾಖಲಿಸುವ ಪುಟ್ಟ ಪ್ರಯತ್ನ ನನ್ನದು.ಈ ಹಿಂದೆಯೇ ಈಕೆಯ ಬಗ್ಗೆ ಬರೆದಿದ್ದೆ,ಆಕೆಯ ಹೋರಾಟದ ಬದುಕು ನಮಗೆಲ್ಲ ಸ್ಪೂರ್ತಿಯಾಗಲಿ.
 
6
ಮಾರ್ಚ್

ಸಶಸ್ತ್ರಕ್ರಾಂತಿಯ ಪೀಠಿಕೆ – ಬರೆದಿತ್ತವನು ಫಡ್ಕೆ…!!!!!!

-ಭೀಮಸೇನ್ ಪುರೋಹಿತ್

ಆಗ ತಾನೆ, ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಭೀಕರತೆಯಿಂದ ಸುಧಾರಿಸಿಕೊಳ್ಳುತ್ತಿದ್ದ ಬ್ರಿಟಿಷರಿಗೆ, ಅದರಷ್ಟೇ ಪ್ರಖರ ಭಯವನ್ನು ಒಬ್ಬನೇ ವ್ಯಕ್ತಿ ಮತ್ತೊಮ್ಮೆ ಹುಟ್ಟಿಸಿದ್ದ.. ಅವನ ಹೆಸರು “ವಾಸುದೇವ ಬಲವಂತ ಫಡ್ಕೆ”. ಮಹಾರಾಷ್ಟ್ರದ ಶಿರ್ಧೋನ್ ನಲ್ಲಿ ಜನನ. 1857 ಸಂಗ್ರಾಮ ನಡೆದಾಗ, ಆತ ಹೈಸ್ಕೂಲ್ ಓದುತ್ತಿದ್ದ. ಅದರಿಂದ ಪ್ರೇರಿತಗೊಂಡ ಫಡ್ಕೆ ಅರ್ಧಕ್ಕೆ ಶಾಲೆಗೆ ನಮಸ್ಕಾರ ಹೇಳಿದ.1860 ರಲ್ಲಿಯೇ ಅವನ ಮದುವೆಯೂ ಆಯಿತು. ಇಷ್ಟ ಇಲ್ಲದಿದ್ದರೂ ಸಂಸಾರದ  ನಿರ್ವಹಣೆಗೆ  ಒಂದು ವೈದ್ಯಕೀಯ ಕಾಲೇಜಿನಲ್ಲಿ ನೌಕರಿ ಸೇರಿದ. ಅದೊಮ್ಮೆ ಅವನ ತಾಯಿ ತೀರಾ ಅಸ್ವಸ್ಥರಾದ ಸಂದೇಶ ಬಂತು. ಕೂಡಲೇ ರಜೆಗೆ ಅರ್ಜಿ ಹಾಕಿದರೂ ಅನುಮತಿ ಸಿಗಲಿಲ್ಲ. ಆದರೂ ಲೆಕ್ಕಿಸದೆ ಊರಿಗೆ ಹೋದಾಗ ಅವನ ತಾಯಿ ಅದಾಗಲೇ ಸ್ವರ್ಗಸ್ಥರಾಗಿದ್ದರು. ಇದರಿಂದ ಆಕ್ರೋಶಗೊಂಡ ಫಡ್ಕೆ ಕೆಲಸಕ್ಕೆ ರಾಜೀನಾಮೆ ನೀಡಿದ..

ನಿಜವಾಗಿ ಇತಿಹಾಸ ಗಮನಿಸೋದಾದ್ರೆ, ಈ “ಸ್ವದೇಶೀ” ಚಳುವಳಿಯನ್ನು ಮನೆಮನೆಗೂ ಕೊಂಡೊಯ್ದ ಮೊದಲಿಗ ಅಂದ್ರೆ ಈ ಫಡ್ಕೇನೆ.. ಜಸ್ಟಿಸ್ ಮಹದೇವ್ ಗೋವಿಂದ್ ರಾನಡೆಯವರ ಸ್ವದೇಶೀ ವಿಚಾರಗಳಿಂದ ಸ್ಫೂರ್ತಿ ಪಡೆದ ಫಡ್ಕೆ, ಗಲ್ಲಿ ಗಲ್ಲಿಗಳಿಗೂ ಹೋಗಿ, ಸ್ವದೆಶಿತನದ ಮಹತ್ವದ ಬಗ್ಗೆ ಉಪನ್ಯಾಸ ನೀಡುತ್ತಿದ್ದ. ಆದರೆ, ಜನರಲ್ಲಿ ಅಂತಸ್ಸತ್ವ ಕಳೆದುಹೋಗಿತ್ತು. ಕೇವಲ ಭಾಷಣಗಳಿಂದ ಸ್ವಾತಂತ್ರ್ಯ ಸಾಧ್ಯವಿಲ್ಲ ಎಂದು ಬೇಗನೆ ಅರ್ಥವಾಯಿತು. ಅಲ್ಲದೆ ಯುವಕರಿಗೆ ರಾಷ್ಟ್ರೀಯ ಶಿಕ್ಷಣ ಅವಶ್ಯಕ ಎಂಬ ದೃಷ್ಟಿಯಲ್ಲಿ ಶಿಕ್ಷಣ ಸಂಸ್ಥೆಯನ್ನೂ ತೆರೆದ. ಇದರ ಮಧ್ಯೆಯೇ, ಮಹಾರಾಷ್ಟ್ರದಲ್ಲಿ ಭೀಕರ ಕ್ಷಾಮ ತಲೆದೋರಿತು.ಜನ ಒಪ್ಪತ್ತು ತುತ್ತಿಗೂ ಗತಿಯಿಲ್ಲದೆ ಪರದಾಡುವಂತಾಯಿತು. ಆದ್ರೆ ಕ್ರೂರ ಬ್ರಿಟಿಶ್ ಸರ್ಕಾರ ಮಾತ್ರ, ಎಂದಿನಂತೆ ತೆರಿಗೆಯ ವಸೂಲಿಯನ್ನು ಮುಂದುವರೆಸಿತು.ಬ್ರಿಟಿಷರ ಈ ನೀಚಕೃತ್ಯಗಳಿಂದ ಕುಪಿತನಾದ ಫಡ್ಕೆ ಮುಂದೆ ಇಟ್ಟ ಹೆಜ್ಜೆಯೇ ಇತಿಹಾಸ..

ಮತ್ತಷ್ಟು ಓದು »

2
ಮಾರ್ಚ್

ನೇತಾಜಿ ಕಣ್ಮರೆ – ಒಂದು ವಿಶ್ಲೇಷಣೆ

-ಆನಂದ್ ಪ್ರಸಾದ್

ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತ ಕಂಡ ಅಪ್ರತಿಮ, ಧೀಮಂತ ನಾಯಕ.  ನಾಯಕತ್ವದ  ಎಲ್ಲ ಗುಣಗಳೂ ಮೇಳೈಸಿದ್ದ ಅಪ್ರತಿಮ ಸೇನಾನಿ.  ಹೀಗಾಗಿ ನೇತಾಜಿಯವರ ಕಣ್ಮರೆಯನ್ನು  ಇಂದಿಗೂ ನಂಬಲು ನಮ್ಮ ದೇಶದ ಎಷ್ಟೋ ಜನ ಸಿದ್ಧರಿಲ್ಲ.  ನೇತಾಜಿಯವರು ೧೯೪೫ರ ಆಗಸ್ಟ್ ೧೮  ರಂದು ತೈಹೊಕು (ಇಂದಿನ ತೈವಾನ್ ದೇಶದಲ್ಲಿ) ಎಂಬಲ್ಲಿ ನಡೆದ ವಿಮಾನ ಅಪಘಾತದಲ್ಲಿ  ಮೃತರಾದರು ಎಂದು ಹೇಳಲಾಗುತ್ತಿದೆ.  ಇದನ್ನು ಎಷ್ಟೋ ಜನ ನಂಬುವುದಿಲ್ಲ.  ಹೀಗಾಗಿ ಈ  ರಹಸ್ಯವನ್ನು ಭೇದಿಸಲು ಎನ್.ಡಿ.ಎ. ಆಡಳಿತಾವಧಿಯಲ್ಲಿ ಸಮಿತಿ ನೇಮಕ ಮಾಡಲಾಗಿತ್ತು.  ಆ  ಸಮಿತಿ ನೇತಾಜಿ ವಿಮಾನ ಅಪಘಾತದಲ್ಲಿ ಸತ್ತಿಲ್ಲ, ಆ ದಿನ ಯಾವುದೇ ವಿಮಾನ ಅಪಘಾತ ನಡೆದ  ದಾಖಲೆ ಲಭ್ಯವಿಲ್ಲ ಎಂದು ಹೇಳಿತು.  ನೇತಾಜಿಯವರು ರಶಿಯಕ್ಕೆ ಹೋಗಿ ಅಲ್ಲಿ ಬಂಧಿಯಾಗಿ  ಸೈಬೀರಿಯಾದಲ್ಲಿ ಸೆರೆವಾಸದಲ್ಲಿ ಸತ್ತರು ಎಂದು ಇನ್ನೊಂದು ವದಂತಿಯೂ ಇದೆ.  ಹೀಗಾಗಿ  ರಶಿಯಕ್ಕೂ ಆ ಸಮಿತಿ ತನಿಖೆಗಾಗಿ ಹೋಗಿ ಅಲ್ಲಿ ಸರಿಯಾದ  ಸಹಕಾರ ಸಿಗದೇ ವಾಪಸಾಯಿತು ಎಂದು  ಹೇಳಲಾಯಿತು.  ರಷಿಯದಲ್ಲಿ ರಾಯಭಾರಿಯಾಗಿದ್ದ, ನಂತರ ಭಾರತದ ರಾಷ್ಟ್ರಪತಿಯಾಗಿದ್ದ  ರಾಧಾಕೃಷ್ಣನ್ ಅವರು ಸೆರೆವಾಸದಲ್ಲಿದ್ದ ನೇತಾಜಿಯವರನ್ನು ಭೇಟಿ ಮಾಡಿದ್ದರು, ಆದರೆ  ನೇತಾಜಿಯವರ ಬಿಡುಗಡೆಯ ಬಗ್ಗೆ ಅಂದಿನ ಸರ್ಕಾರ ಕಾಳಜಿ ವಹಿಸಲಿಲ್ಲ ಎಂಬ ವದಂತಿಯೂ ಇದೆ.   ಇದೆಲ್ಲ ನಂಬಿಕೆಗೆ ಅರ್ಹ ಎನಿಸುವುದಿಲ್ಲ ಏಕೆಂದರೆ ರಾಧಾಕೃಷ್ಣನ್ ಅವರು ಬೋಸರ ಭೇಟಿ  ಮಾಡಿದ್ದಿದ್ದರೆ ಅದನ್ನು ಮುಚ್ಚಿಡುತ್ತಿರಲಿಲ್ಲ ಏಕೆಂದರೆ ರಾಧಾಕೃಷ್ಣನ್ ಒಬ್ಬ  ತತ್ವಜ್ಞಾನಿ ಹಾಗೂ ಪ್ರಾಧ್ಯಾಪಕರಾಗಿದ್ದವರು.

ಮತ್ತಷ್ಟು ಓದು »